Tag: ರಾಮ ಮಂದಿರ

  • ಬಾಬರ್ ಏನು ಮಾಡಿದ್ದ ನಂತರ ಏನಾಯಿತು ಎನ್ನುವುದನ್ನು ನಾವು ಪರಿಗಣಿಸಲ್ಲ: ಸುಪ್ರೀಂ

    ಬಾಬರ್ ಏನು ಮಾಡಿದ್ದ ನಂತರ ಏನಾಯಿತು ಎನ್ನುವುದನ್ನು ನಾವು ಪರಿಗಣಿಸಲ್ಲ: ಸುಪ್ರೀಂ

    ನವದೆಹಲಿ: ಸಂಧಾನದ ಮೂಲಕ ಅಯೋಧ್ಯೆಯ ರಾಮಜನ್ಮಭೂಮಿ ಪ್ರಕರಣವನ್ನು ಇತ್ಯರ್ಥ ಮಾಡಬೇಕೆಂದು ಸಲ್ಲಿಕೆಯಾದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

    ಆಯೋಧ್ಯೆ ಭೂಮಾಲೀಕತ್ವ ದಾವೆ ವಿಚಾರಣೆ ಇಂದು ಮುಖ್ಯ. ನ್ಯಾ. ರಂಜನ್ ಗೊಗೋಯ್, ನ್ಯಾಯಾಧೀಶರಾದ ಎಸ್‍ಎ ಬೊಬ್ಡೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್, ಅಬ್ದುಲ್ ನಜೀರ್ ಅವರಿದ್ದ ಪೀಠದಲ್ಲಿ ನಡೆಯಿತು.

    ಹಿಂದೂ ಸಂಘಟನೆಯ ಪರ ವಕೀಲರು ಸಂಧಾನಕ್ಕೆ ಸಿದ್ಧವಿಲ್ಲ ಎಂದು ಹೇಳಿದರೆ, ಮುಸ್ಲಿಂ ಮತ್ತು ನಿರ್ಮೋಹಿ ಅಖಾಡ ಸಂಧಾನಕ್ಕೆ ಒಪ್ಪಿಗೆ ಸೂಚಿಸಿದೆ.

    ಅರ್ಜಿ ವಿಚಾರಣೆ ವೇಳೆ ಬಾಬರ್ ಏನು ಮಾಡಿದ್ದ ನಂತರ ಏನಾಯಿತು ಎನ್ನುವುದನ್ನು ಪರಿಗಣಿಸದೇ ಈಗ ಅಲ್ಲಿ ಏನಿದೆ ಎನ್ನುವುದನ್ನು ಮಾತ್ರ ಪರಿಗಣಿಸುತ್ತೇವೆ ಎಂದು ನ್ಯಾ.ಬೊಬ್ಡೆ ಅಭಿಪ್ರಾಯಪಟ್ಟರು. ಇದು ಕೇವಲ ಆಸ್ತಿಯ ವಿಚಾರವಲ್ಲ. ಇದೊಂದು ಅತ್ಯಂತ ಸೂಕ್ಷ್ಮ ಮತ್ತು ನಂಬಿಕೆಯ ವಿಚಾರವಾಗಿದೆ ಎಂದು ಪೀಠ ಹೇಳಿತು.

    ಈ ವೇಳೆ ಪೀಠ ತನ್ನ ಕಕ್ಷಿದಾರರಿಗೆ ಭಾಷಾಂತರಗೊಂಡಿರುವ ದಾಖಲೆಗಳನ್ನು ಪರಿಶೀಲಿಸುವಂತೆ ಆದೇಶಿಸಿದೆ. ಅಷ್ಟೇ ಅಲ್ಲದೇ ಈ ದಾಖಲೆಗಳಲ್ಲಿ ಆಕ್ಷೇಪಗಳಿದ್ದರೆ 6 ವಾರದ ಒಳಗಡೆ ಗಮನಕ್ಕೆ ತರುವಂತೆ ಸೂಚಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಮನ ಹೆಸ್ರಲ್ಲಿ ದೇಶ ಒಡೆಯುವ ಕೆಲಸ ಮಾಡ್ಬೇಡಿ: ಬಾಬಾ ರಾಮ್‍ದೇವ್

    ರಾಮನ ಹೆಸ್ರಲ್ಲಿ ದೇಶ ಒಡೆಯುವ ಕೆಲಸ ಮಾಡ್ಬೇಡಿ: ಬಾಬಾ ರಾಮ್‍ದೇವ್

    ಮುಂಬೈ: ಯಾವುದೇ ರಾಜಕೀಯ ಪಕ್ಷಕ್ಕೂ ರಾಮ ಸೇರಿಲ್ಲ. ರಾಜಕೀಯಕ್ಕಾಗಿ ರಾಮನನ್ನು ಬಳಸಿಕೊಳ್ಳುವ ಹಕ್ಕು ಯಾರಿಗೂ ಇಲ್ಲ, ನಾವೆಲ್ಲ ಸನ್ಯಾಸಿಗಳು ಒಗ್ಗೂಡಿ ರಾಮ ಮಂದಿರ ನಿರ್ಮಾಣಕ್ಕೆ ಹೋರಾಡಬೇಕು ಎಂದು ಯೋಗ ಗುರು ಬಾಬಾ ರಾಮ್‍ದೇವ್ ಕರೆಕೊಟ್ಟಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮನು ಕೇವಲ ಯಾವುದೋ ಒಂದು ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ, ರಾಮ ಇಡೀ ದೇಶಕ್ಕೆ ಸೇರಿದವನು. ಆದ್ದರಿಂದ ಎಲ್ಲಾ ಸಾಧು ಸಂತರು ಕೂಡ ಜೊತೆಗೂಡಿ ರಾಮನ ಮೇಲಿರುವ ಭಕ್ತಿಯನ್ನು ಸಾರಬೇಕು. ದೇಶಕ್ಕೆ ಯಾವುದೇ ತಪ್ಪು ಪರಿಲ್ಪನೆಯನ್ನು ನೀಡುವ ರೀತಿ ನಮ್ಮ ಭಕ್ತಿ ಇರಬಾರದು ಎಂದು ಕಿಡಿಕಾರಿದ್ದಾರೆ.

    ಒಂದು ವೇಳೆ ಸಂತರು ಹಾಗೂ ಸನ್ಯಾಸಿಗಳು ಒಗ್ಗೂಡಿ ಪ್ರಾಮಾಣಿಕತೆಯಿಂದ ಇರದಿದ್ದರೆ ದೇಶದಲ್ಲಿ ಏಕತೆ ಹಾಗೂ ಸಮಗ್ರತೆಯನ್ನು ಹೇಗೆ ಕಾಯ್ದುಕೊಳ್ಳಲು ಸಾಧ್ಯ? ರಾಮನ ಹೆಸರನ್ನು ಬಳಸಿಕೊಂಡು ದೇಶವನ್ನು ಒಡೆಯುವ ಕೆಲಸ ಮಾಡಬೇಡಿ ಎಂದು ನಾನು ಎಲ್ಲಾ ಸನ್ಯಾಸಿಗಳು ಹಾಗೂ ಸಂತರ ಬಳಿ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿಕೊಂಡರು.

    ಕೆಲ ಸನ್ಯಾಸಿಗಳು ಹಾಗೂ ಪ್ರಜೆಗಳು ರಾಮ ಮಂದಿರವನ್ನು ಆದಷ್ಟು ಬೇಗ ಅಯೋಧ್ಯೆಯಲ್ಲಿ ನಿರ್ಮಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದ್ರೆ ಜನವರಿ 30ರಂದು ಸನ್ಯಾಸಿಗಳು ಹಾಗೂ ಸಂತರು ಸಂಘಟಿತಗೊಂಡಾಗ ರಾಮಮಂದಿರ ನಿರ್ಮಾಣದ ಕಾರ್ಯ ಫೆಬ್ರವರಿ 21ಕ್ಕೆ ಆರಂಭವಾಗಲಿದೆ ಎಂದು ತಿಳಿಸಿದ್ದರು.

    ಜನವರಿ 29ರಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‍ಗೆ ವಿವಾದದಲ್ಲಿರುವ ಅಯೋಧ್ಯೆಯ ಜಾಗವನ್ನು ಹೊರತುಪಡಿಸಿ ಇನ್ನುಳಿದ ಸ್ಥಳವನ್ನು ರಾಮ ಮಂದಿರ ಪುನರ್ ನಿರ್ಮಿಸಲು ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಪ್ರಧಾನಿ ಮೋದಿ ಚಹಾ ಮಾರಿಲ್ಲ: ಪ್ರವೀಣ್ ತೊಗಡಿಯಾ

    ಪ್ರಧಾನಿ ಮೋದಿ ಚಹಾ ಮಾರಿಲ್ಲ: ಪ್ರವೀಣ್ ತೊಗಡಿಯಾ

    – ಇದೊಂದು ಕೇವಲ ಪ್ರಚಾರದ ಗಿಮಿಕ್

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಚಹಾ ಮಾರಿಲ್ಲ ಎಂದು ಅಂತರಾಷ್ಟ್ರೀಯ ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಡಿಯಾ ಹೇಳಿದ್ದಾರೆ.

    ಈ ಹಿಂದೆ ಒಂದೇ ಸ್ಕೂಟರ್ ನಲ್ಲಿ ಆರ್ ಎಸ್‍ಎಸ್ ಪರೇಡ್ ಗೆ ತೆರಳುತ್ತಿದ್ದ ಮೋದಿ ಮತ್ತು ಪ್ರವೀಣ್ ತೊಗಡಿಯಾ ನಡುವೆ ಎಲ್ಲವೂ ಸರಿಯಿಲ್ಲ. ಕಳೆದೆರಡು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಟೀಕಿಸುತ್ತಾ ಬಂದಿರುವ ಪ್ರವೀಣ್ ತೊಗಡಿಯಾ ಮತ್ತೊಮ್ಮೆ ಬಿಜೆಪಿ ಹಾಗೂ ಸಂಘ ಪರಿವಾರವನ್ನು ಟೀಕಿಸಿದ್ದಾರೆ.

    ನಾನು ನರೇಂದ್ರ ಮೋದಿ ಅವರನ್ನು 43 ವರ್ಷಗಳಿಂದ ಬಲ್ಲೆ. ಇಷ್ಟು ವರ್ಷದಲ್ಲಿ ಒಮ್ಮೆಯೂ ಮೋದಿ ಅವರು ಚಹಾ ಮಾರಿರುವುದನ್ನು ನೋಡಿಲ್ಲ. ಪ್ರಚಾರಕ್ಕಾಗಿ ಪ್ರಧಾನಿಗಳು ಚಹಾ ಮಾರುತ್ತಿದ್ದರು ಎಂಬ ಅಸ್ತ್ರವನ್ನು ಬಿಜೆಪಿ ಬಳಸುತ್ತಿದೆ. ನಾನೊಬ್ಬ ವೈದ್ಯನಾಗಿದ್ದು, ಪರಿಚಯಸ್ಥರಲ್ಲಿ ಈ ಬಗ್ಗೆ ವಿಚಾರಿಸಿದ್ರೆ ಯಾರ ಬಳಿಯೂ ಸ್ಪಷ್ಟವಾದ ಉತ್ತರವಿಲ್ಲ. ಮೋದಿ ಚಹಾ ಮಾರಿರುವುದನ್ನು ಇದೂವರೆಗೂ ಯಾರು ಸಾಬೀತು ಮಾಡಿಲ್ಲ ಎಂದು ಪ್ರವೀಣ್ ತೊಗಡಿಯಾ ಹೇಳಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಹಿಂದೂ ಪರಿಷತ್ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ನಮ್ಮ ನೇತೃತ್ವದ ಸರ್ಕಾರ ರಚನೆಯಾದರೆ ಒಂದೇ ವಾರದಲ್ಲಿ ರಾಮಮಂದಿರ ನಿರ್ಮಾಣ ಮಾಡಲಾಗುವುದು. ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ರಾಮ ಮಂದಿರ ನಿರ್ಮಾಣ ಮಾಡುವ ಉದ್ದೇಶವಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದ್ರೂ ಮುಂದಿನ ಐದು ವರ್ಷ ಅವರು ರಾಮ ಮಂದಿರ ನಿರ್ಮಾಣ ಮಾಡಲಾರರು. ನರೇಂದ್ರ ಮೋದಿ ಮತ್ತು ಬೈಯಾಜಿ ಜೋಶಿ ಅವರು ದೇಶವನ್ನು ಕತ್ತಲಿನಲ್ಲಿ ಇರಿಸಿದ್ದಾರೆ. ತ್ರಿವಳಿ ತಲಾಖ್ ಗಾಗಿ ಮಧ್ಯರಾತ್ರಿ ಕಾನೂನು ರಚಿಸುವ ಇವ್ರು ರಾಮ ಮಂದಿರ ನಿರ್ಮಾಣ ಮಾಡುತ್ತಿಲ್ಲವೇಕೆ ಎಂದು ಪ್ರವೀಣ್ ತೊಗಡಿಯಾ ಪ್ರಶ್ನೆ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಮೋದಿ ವಿರುದ್ಧ ಪತ್ರ ಚಳುವಳಿ – ಪ್ರಮೋದ್ ಮುತಾಲಿಕ್ ಎಚ್ಚರಿಕೆ

    ಪ್ರಧಾನಿ ಮೋದಿ ವಿರುದ್ಧ ಪತ್ರ ಚಳುವಳಿ – ಪ್ರಮೋದ್ ಮುತಾಲಿಕ್ ಎಚ್ಚರಿಕೆ

    ಬೆಳಗಾವಿ: ರಾಮ ಮಂದಿರ ನಿರ್ಮಾಣ ಸುಗ್ರೀವಾಜ್ಞೆ ಕುರಿತು ಪ್ರಧಾನಿ ಮೋದಿ ಅವರು ನೀಡಿರುವ ಹೇಳಿಕೆಯನ್ನು ವಿರೋಧಿಸುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಚುನಾವಣೆ ದಿನಾಂಕ ಘೋಷನೆಗೂ ಮುನ್ನ ಸುಗ್ರೀವಾಜ್ಞೆ ಜಾರಿ ಮಾಡದಿದ್ದರೆ ಪತ್ರ ಚಳುವಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಹುಕ್ಕೇರಿ ಪಟ್ಟಣದಲ್ಲಿ ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಮುತಾಲಿಕ್, ಅಯೋಧ್ಯೆ ರಾಮಮಂದಿರಕ್ಕೆ ಸುಗ್ರೀವಾಜ್ಞೆ ಇಲ್ಲ ಎಂಬ ಪ್ರಧಾನಿಗಳ ಹೇಳಿಕೆಯನ್ನು ನಾನು ಒಪ್ಪೋದಿಲ್ಲ. ಶ್ರೀ ರಾಮ ಸೇನೆ ಈ ಹೇಳಿಕೆಯನ್ನ ವಿರೋಧಿಸುತ್ತದೆ. ಶ್ರೀ ರಾಮ ಜನ್ಮ ಸ್ಥಳದಲ್ಲಿ ಮೋದಿ ಮಂದಿರ ನಿರ್ಮಾಣ ಮಾಡುತ್ತಾರೆ ಎನ್ನುವುದು ಹಿಂದೂಗಳ ಇಚ್ಛೆ ಆಗಿತ್ತು. ಆದರೆ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಮಾಡುವುದಿಲ್ಲ ಎನ್ನುವ ಮೋದಿ ಅವರ ಹೇಳಿಕೆ ಸರಿಯಲ್ಲ ಎಂದರು.

    ಸುಪ್ರೀಂ ಕೋರ್ಟ್ ಈ ಬಗ್ಗೆ ಹೇಳುವುದಾದರೆ ಆಂದೋಲನ ಏಕೆ ಮಾಡಬೇಕಿತ್ತು. ರಾಮಮಂದಿರ ಆಂದೋಲನದಿಂದ ಬಿಜೆಪಿ ಪಕ್ಷ ಹಾಗೂ ಮೋದಿ ಅವರು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂಬುವುದನ್ನು ಮರೆತಂತೆ ಇದೆ. ಅಧಿಕಾರಕ್ಕೆ ಬಂದ ಬಳಿಕ ರಾಮ ಮಂದಿರ ನಿರ್ಮಾಣ ಮಾಡುವ ವಿಶ್ವಾಸ ಇತ್ತು. ಆದರೆ ಅವರ ಈ ನಿರ್ಧಾರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ ಎಂದು ತಿಳಿಸಿದರು.

    2019ರ ಲೋಕಸಭಾ ಚುನಾವಣೆಯಲ್ಲಿ ಈ ಹೇಳಿಕೆ ಬಿಜೆಪಿ ಪಕ್ಷಕ್ಕೆ ಬಹಳ ಹೊಡೆತ ಬೀಳಲಿದೆ ಎಂದು ಭವಿಷ್ಯ ನುಡಿದ ಮುತಾಲಿಕ್, ರಾಮ ಮಂದಿರ ನಿರ್ಮಾಣ ವಿಳಂಬಕ್ಕೆ ಕಾಂಗ್ರೆಸ್ ಪಕ್ಷದ ವಕೀಲರು ಕಾರಣ ಎಂಬ ಸಬೂಬು ಹೇಳುವುದು ಬೇಡ. ಬೇರೆ ಅವರ ಮೇಲೆ ಆಪಾದನೆ ಮಾಡಿ ಮೋದಿ ಅವರು ತಪ್ಪಿಸಿಕೊಳ್ಳಬಾರದು. ಲೋಕಸಭಾ ಚುನಾವಣೆಗೆ ದಿನಾಂಕ ಸೂಚಿಸಿವ ಮುನ್ನ ಕೇಂದ್ರ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ತಂದು ಮಂದಿರ ನಿರ್ಮಾಣ ಮಾಡುವಂತೆ ಆಗ್ರಹ ಮಾಡುತ್ತೇವೆ. ಇಲ್ಲವಾದಲ್ಲಿ ಮೋದಿ ಅವರ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ಪತ್ರ ಚಳುವಳಿ ಆರಂಭಿಸುತ್ತೇವೆ. ಒಂದು ಲಕ್ಷಕ್ಕೂ ಹೆಚ್ಚು ಪತ್ರಗಳನ್ನು ಪ್ರಧಾನಿ ಮೋದಿ ಅವರ ಮನೆ ಬಾಗಿಲಿಗೆ ಬೀಳುವಂತೆ ಚಳುವಳಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಯೋಧ್ಯೆ: ನಮಾಜ್‍ಗೆ ಮನವಿ ಸಲ್ಲಿಸಿ 5 ಲಕ್ಷ ರೂ. ದಂಡಕ್ಕೆ ಗುರಿಯಾದ್ರು

    ಲಕ್ನೋ: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿವಾದಿತ ಜಾಗದಲ್ಲಿ ನಮಾಜ್‍ಗೆ ಅವಕಾಶ ಕೋರಿದ್ದ ಅರ್ಜಿದಾರರಿಗೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ 5 ಲಕ್ಷ ರೂ.ಗಳ ದಂಡ ವಿಧಿಸಿದೆ.

    ಅಲ್ ರಹಮಾನ್ ಟ್ರಸ್ಟ್ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿವಾದಿತ ಜಾಗದಲ್ಲಿ ನಮಾಜ್‍ಗೆ ಅವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಕುರಿತು ನ್ಯಾಯಮೂರ್ತಿ ಡಿ.ಕೆ ಅರೋರಾ ಮತ್ತು ಅಲೋಕ್ ಮಾಥುರ್ ದ್ವಿಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿ ಅರ್ಜಿ ವಜಾಗೊಳಿಸಿದೆ.

    ಅರ್ಜಿದಾರರು ಪ್ರಚಾರಕ್ಕಾಗಿ ಕೆಟ್ಟ ದಾರಿ ಹಿಡಿದಿದ್ದಾರೆ. ಇನ್ನು ಮುಂದೆ ಪ್ರಚಾರಕ್ಕೆ ಯಾರೂ ಈ ರೀತಿ ಅರ್ಜಿ ಸಲ್ಲಿಸಿ ಕೋರ್ಟ್ ಕಲಾಪದ ಸಮಯವನ್ನು ಹಾಳು ಮಾಡಬಾರದು ಎಂದು ಕಿಡಿಕಾರಿದ ಕೋರ್ಟ್, 5 ಲಕ್ಷ ರೂ.ಗಳ ದಂಡ ವಿಧಿಸಿ ಆದೇಶ ಹೊರಡಿಸಿತು.

    ಒಂದು ವೇಳೆ ಅಲ್ ರಹಮಾನ್ ಟ್ರಸ್ಟ್ ದಂಡ ಪಾವತಿಸಲು ವಿಫಲವಾದರೆ, ಅದರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಫೈಜಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್‍ಗೆ ಸೂಚನೆ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಾಬ್ರಿ ಮಸೀದಿ ಗುಂಬಜ್ ಉರುಳಿಸಿದವನ ಕಪಾಳಕ್ಕೆ ಬಾರಿಸಿದ್ದೆ: ಪೇಜಾವರ ಶ್ರೀ

    ಬಾಬ್ರಿ ಮಸೀದಿ ಗುಂಬಜ್ ಉರುಳಿಸಿದವನ ಕಪಾಳಕ್ಕೆ ಬಾರಿಸಿದ್ದೆ: ಪೇಜಾವರ ಶ್ರೀ

    – ರಾಮಮಂದಿರಕ್ಕೆ ದೇಶದಲ್ಲಿ ಸಾರ್ವತ್ರಿಕ ಮತಗಣನೆಯಾಗಲಿ

    ಉಡುಪಿ: ಬಾಬ್ರಿ ಮಸೀದಿಯ ಮೊದಲ ಗುಂಬಜ್ ಕೆಡವಿದವನ ಕಪಾಳಕ್ಕೆ ನಾನು ಬಾರಿಸಿದ್ದೆ. ಮಸೀದಿ ಕೆಡವುದರ ಬಗ್ಗೆ ಯಾವುದೇ ಪೂರ್ವ ಸೂಚನೆ ಅಂದು ಇರಲಿಲ್ಲ ಎಂದು ಉಡುಪಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹಳೆ ನೆನಪನ್ನು ಕೆದಕಿದ್ದಾರೆ.

    ಪಬ್ಲಿಕ್ ಟಿವಿ ಜಿತೆ ಮಾತನಾಡಿದ ಪೇಜಾವರ ಶ್ರೀಗಳು, ಮಸೀದಿ ಧ್ವಂಸದಲ್ಲಿ ನನ್ನ ಪಾತ್ರ ಇಲ್ಲ. ಹೋಮದ ಮುಂದೆ ನಾನು ಜಪಮಾಡುತ್ತಾ ಕುಳಿತ್ತಿದ್ದಾಗ ಗುಂಬಜ್ ಮೇಲೆ ಏಕಾಏಕಿ ಕಲ್ಲುಗಳು ಬಿದ್ದವು. ಪೂಜೆ ಬಿಟ್ಟು ಮಸೀದಿಯೊಳಗೆ ನಾನು ಓಡಿಹೋದಾಗ ಯುವಕರ ಗುಂಪು ಕೇಕೆ ಹಾಕುತ್ತಾ ಸಂಭ್ರಮದಲ್ಲಿತ್ತು. ಕಟ್ಟಡ ಕೆಡವಿದ ಕರಸೇವಕನ ಕಪಾಳಕ್ಕೆ ನಾನು ಬಾರಿಸಿದ್ದೆ. ಕೆನ್ನೆಗೆ ಬಾರಿಸಿ ಅಲ್ಲೇ ಬೈದಿದ್ದೇನೆ. ನಾನು ಮಸೀದಿ ಧ್ವಂಸ ಮಾಡಿಲ್ಲ, ಕೆಡವಲು ಪ್ರಚೋದನೆ ಕೊಟ್ಟಿಲ್ಲ. ನನ್ನ ಮೇಲೆ ಸುಮ್ಮನೆ ಆರೋಪ ಮಾಡಬೇಡಿ. ಎಲ್ಲರೂ ಈ ಬಗ್ಗೆ ತಿಳಿಯದೆ ಮಾತನಾಡುತ್ತಿದ್ದಾರೆ. ಸಂತರು, ಆ ಕಾಲದ ರಾಜಕಾರಣಿಗಳು, ಮಾಧ್ಯಮಗಳನ್ನು ಕೇಳಿ ಸತ್ಯ ತಿಳಿದುಕೊಳ್ಳಿ ಎಂದು ಹೇಳಿದರು.

    ಕಾನೂನು ಸುವ್ಯವಸ್ಥೆ ಕಾಪಾಡುವ ಸವಾಲು ಇಟ್ಟುಕೊಂಡೇ ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಾಣ ಕುರಿತಾಗಿ ಸಾರ್ವತ್ರಿಕ ಮತಗಣನೆ ಮಾಡಲಿ. ಚುನಾವಣೆ ಬಂದಾಗಲೇ ರಾಮಮಂದಿರ ಹೋರಾಟ ಮಾಡಬೇಕು. ಬಿಜೆಪಿಯವರು ಮಂದಿರ ಘೋಷಣೆ ಮಾಡುತ್ತಾ ಅಧಿಕಾರಕ್ಕೆ ಬಂದರು. ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷ ಆದರೂ ರಾಮಮಂದಿರ ನಿರ್ಮಾಣವಾಗಿಲ್ಲ ಎಂದು ಪೇಜಾವರ ಶ್ರೀಗಳು ಟೀಕಿಸಿದರು.

    ದೇಶದ ಜನಾಪೇಕ್ಷೆಗೆ ಸರ್ಕಾರದಲ್ಲಿ ಬೆಲೆ ಇಲ್ಲವೇ ಎಂದ ಶ್ರೀಗಳು ಕೇಂದ್ರ ಸರ್ಕಾರ ಒಂದೋ ಸುಗ್ರೀವಾಜ್ಞೆ ಹೊರಡಿಸಲಿ. ಇಲ್ಲವೇ ದೇಶಾದ್ಯಂತ ಸಾರ್ವತ್ರಿಕ ಮತಗಣನೆ ನಡೆಸಲಿ. ರೆಫರೆಂಡಮ್ ಮಾಡಲು ಬಹಳ ಖರ್ಚು ತಗಲಬಹುದು, ಶಾಂತಿ ಸುವ್ಯವಸ್ಥೆ ಕಾಪಾಡುವುದು ಸವಾಲಿನ ವಿಚಾರವಾಗಬಹುದು. ಆದ್ರೆ ಮಂದಿರ ನಿರ್ಮಾಣ ಆಗಲೇಬೇಕು ಎಂದು ಒತ್ತಾಯಿಸಿದರು.

    ಜನಾಗ್ರಹ ಸಭೆಯಲ್ಲಿ ಮುಸಲ್ಮಾನ ಸಮುದಾಯವನ್ನು ಬೈಯ್ಯಬಾರದು. ನಾನು ಭಾಗಿಯಾದ ವೇದಿಕೆಯಲ್ಲಿ ಮುಸಲ್ಮಾನರನ್ನು ಟೀಕಿಸದಂತೆ ನೋಡಿಕೊಂಡಿದ್ದೇನೆ. ವಿಶ್ವಹಿಂದೂ ಪರಿಷದ್, ಬಜರಂಗದಳ ಕಾರ್ಯಕರ್ತರು, ನಾಯಕರು ವಿವಾದ ಶುರುಮಾಡುವ, ಇನ್ನೊಬ್ಬರ ಮನಸ್ಸಿಗೆ ನೋಯಿಸುವಂತಹ ಮಾತುಗಳನ್ನು ಆಡಬಾರದು ಎಂದು ವಿನಂತಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • `ಮುಸಲ್ಮಾನರು ಕಲಿಯುಗದ ರಾಕ್ಷಸರು’: ರಾಘವಲು ಪ್ರಚೋದನಕಾರಿ ಭಾಷಣ

    `ಮುಸಲ್ಮಾನರು ಕಲಿಯುಗದ ರಾಕ್ಷಸರು’: ರಾಘವಲು ಪ್ರಚೋದನಕಾರಿ ಭಾಷಣ

    `ಕುರಾನ್ ಒಂದು ಧರ್ಮ ಗ್ರಂಥವೇ ಅಲ್ಲ, ಅದು ಇಸ್ಲಾಮಿಕ್ ಮ್ಯಾನಿಫೆಸ್ಟೋ’: ಮಂಜುನಾಥ ಸ್ವಾಮಿ

    ಉಡುಪಿ: ಮುಸಲ್ಮಾನರು, ಜಾತ್ಯಾತೀತರು ಕಲಿಯುಗದ ರಾಕ್ಷಸರು ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವಲು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.

    ನಗರದಲ್ಲಿ ನಡೆದ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಮುಸಲ್ಮಾನರು ಹಿಂದೂಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತಿ ಯುಗದಲ್ಲಿಯೂ ರಾಕ್ಷಸರ ವಧೆಗೆ ದೇವರು ಅವತಾರವೆತ್ತಿ ಬಂದರು. ಕಲಿಯುಗದ ರಾಕ್ಷಸರು ಸಂಸತ್ ಹಾಗೂ ಕೋರ್ಟ್ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಮುಸಲ್ಮಾನರಿಗೆ ಪ್ರಗತಿಪರರು ಬೆಂಬಲ ನೀಡುತ್ತಿದ್ದಾರೆ. ರಾಮಮಂದಿರ ನಿರ್ಮಾಣವಾದರೆ ಸಮಾಜ ಒಗ್ಗೂಡುತ್ತದೆ ಎಂಬ ಭಯ ಅವರಿಗೆ ಇದೆ. ಈವರೆಗೆ ದೇಶದಲ್ಲಿ 33 ಸಾವಿರ ಮಂದಿರ ನಾಶವಾಗಿದೆ ಎಂದು ಹೇಳಿದರು.

    ಸಂಸತ್ತಿನಲ್ಲಿ ಜನಾಗ್ರಹ ಸಭೆಯ ಮನವಿ ಕೊಟ್ಟು ನಮ್ಮ ಅಭಿಪ್ರಾಯ ಸಲ್ಲಿಸದಿದ್ದರೆ ನಿಮ್ಮ ಸ್ಥಾನಕ್ಕೆ ಕುತ್ತು ಬರಬಹುದು ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ರಾಘವಲು ಎಚ್ಚರಿಕೆ ನೀಡಿದರು. ಅಲಹಾಬಾದ್ ಕುಂಭಮೇಳದಲ್ಲಿ ಸಂತರು ಹಲವು ಘೋಷಣೆಗಳನ್ನು ಮಾಡಲಿದ್ದಾರೆ. ಜನವರಿಯ ಸಂತರ ಘೋಷಣೆ ಕಾರ್ಯರೂಪಕ್ಕೆ ಬರಲಿದೆ ಎಂದರು.

    ಇದೇ ವೇಳೆ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ ಮಂಜುನಾಥ ಸ್ವಾಮಿ, ಮಸೀದಿಗಳು ಉಗ್ರ ಚಟುವಟಿಕಾ ಕೇಂದ್ರವಾಗಿದೆ. ಮುಸಲ್ಮಾನರು ಸಾತ್ವಿಕರು ಎಂಬ ಭ್ರಮೆಯಿಂದ ಹೊರಗಡೆ ಬನ್ನಿ. ಈ ದೇಶದಲ್ಲಿ ಇಸ್ಲಾಮಿಕ್ ಟೆರರಿಸಂ ನಡೆಯುತ್ತಿದೆ. ಮುಸಲ್ಮಾನರು ಇಸ್ಲಾಮಿಕ್ ಉಗ್ರಗಾಮಿಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.

    ಜಗತ್ತಿನ ಅನೇಕ ದೇಶಗಳನ್ನು ಅವರು ಕೊಳ್ಳೆ ಹೊಡೆದರು. ಈಗ ಭಾರತವೇ ಅವರ ಟಾರ್ಗೆಟ್ ಆಗಿದೆ. ಇಸ್ಲಾಂ ಒಂದು ಧರ್ಮವೇ ಅಲ್ಲ. ಅದೊಂದು ಸಾಮ್ರಾಜ್ಯಶಾಹಿ ವಿಚಾರಧಾರೆ. ಕುರಾನ್ ಒಂದು ಧರ್ಮ ಗ್ರಂಥವೇ ಅಲ್ಲ- ಅದು ಇಸ್ಲಾಮಿಕ್ ಮ್ಯಾನಿಫೆಸ್ಟೋ ಎಂದು ಕಿಡಿಕಾರಿದರು.

    ನಮಾಜ್‍ಗೆ ಮಸೀದಿಗಳ ಅವಶ್ಯಕತೆಯಿಲ್ಲ ಅಂತ ಕೋರ್ಟ್ ಮುಂದೆ ನೀವು ಒಪ್ಪಿದ್ದೀರಿ. ಮತ್ಯಾಕೆ ನೀವು ಮಸೀದಿ ಕಟ್ಟುತ್ತೀರಾ? ರೈಲ್ವೇ ಸ್ಟೇಷನ್, ಶೌಚಾಲಯ, ಬಸ್ ಸ್ಟಾಂಡ್, ವಿಮಾನ ನಿಲ್ದಾಣ ಎಲ್ಲಾದರೂ ನಮಾಜ್ ಮಾಡುತ್ತೀರಿ. ಮುಸ್ಲಿಮರಿಗೆ ಮಸೀದಿ ಯಾಕೆ ಬೇಕು ಎಂದು ಉಗ್ರ ಭಾಷಣ ಮಾಡಿದರು.

    ರಾಮ ಮಂದಿರದ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಕೂಡ ನಮಗೆ ಬೇಕು. ಮಂದಿರ್ ಭೀ ಚಾಹಿಯೇ- ಮೋದೀ ಬೀ ಚಾಹಿಯೇ. ಅವರನ್ನು ಕೆಳಗಿಳಿಸುವ ದುಷ್ಟಶಕ್ತಿಗಳನ್ನು ಗಮನಿಸಿಕೊಳ್ಳಬೇಕು ಎಂದು ಮಂಜುನಾಥ್ ಸ್ವಾಮೀಜಿ ಜನಾಗ್ರಹ ಸಮಾವೇಶದಲ್ಲಿ ಕರೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ರಾಮನ ಕಾರ್ಯ ಆಗದೇ ನಮಗೆ ವಿರಾಮ ಇಲ್ಲ, ಆರಾಮವಿಲ್ಲ- ಪೇಜಾವರ ಶ್ರೀ

    ರಾಮನ ಕಾರ್ಯ ಆಗದೇ ನಮಗೆ ವಿರಾಮ ಇಲ್ಲ, ಆರಾಮವಿಲ್ಲ- ಪೇಜಾವರ ಶ್ರೀ

    – ನಾನು ಬದುಕಿರುವಾಗಲೇ ರಾಮ ಮಂದಿರ ನಿರ್ಮಾಣವಾಗಬೇಕು

    ಬೆಂಗಳೂರು: ಅಯೋಧ್ಯೆಯಲ್ಲಿ ರಾಮನ ಕಾರ್ಯ ಆಗದೇ ನಮಗೆ ವಿರಾಮ ಇಲ್ಲ, ಆರಾಮವಿಲ್ಲ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳು ಹೇಳಿದ್ದಾರೆ.

    ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, ನನಗೆ 80 ವರ್ಷವಾಗಿದೆ. ಇನ್ನು ಎಷ್ಟುದಿನ ಬದುಕಿರುತ್ತೇನೆ ಎನ್ನುವುದು ಗೊತ್ತಿಲ್ಲ. ನಾನು ಬದುಕಿರುವಾಗಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗತ್ತೋ ಇಲ್ಲವೋ ಎನ್ನುವ ಆತಂಕ ಕಾಡುತ್ತಿದೆ ಎಂದು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿ ಅವರು ಸಂತರ ಸಮಿತಿಯನ್ನು ಭೇಟಿ ಮಾಡಬೇಕು. ಇದಕ್ಕೆ ಒಪ್ಪದಿದ್ದರೆ ಸಂತರು ಉಪವಾಸ ಧರಣಿಗೂ ಸಿದ್ಧರಾಗಬೇಕು ಎಂದು ಕರೆಕೊಟ್ಟ ಶ್ರೀಗಳು, ನಾವು ಕೋಮುವಾದಿಗಳು ಎಂದು ಕೆಲವರು ದೂರುತ್ತಿದ್ದಾರೆ. ರಾಮ ಮಂದಿರ ಕೇಳುವವರು ಕೋಮುವಾದಿಗಳಲ್ಲ ಪ್ರೇಮವಾದಿಗಳು ಎಂದರು.

    ರಾಮನ ಹೆಸರಲ್ಲಿ ಸ್ಫೂರ್ತಿ, ಚೈತನ್ಯ ಅಡಗಿದೆ. ಅಹಲ್ಯೆ ಕಲ್ಲಾಗಿದ್ದಂತೆ ನಮ್ಮ ಭಾರತೀಯರೂ ಜಡವಾಗಿದ್ದರು. ಈಗ ರಾಮ ಮಂದಿರ ನಿರ್ಮಾಣ ವಿಚಾರ ಭಾರತೀಯರಲ್ಲಿ ಚೈತನ್ಯ ತುಂಬಿದೆ. ರಾಮ ಮಂದಿರಕ್ಕೆ ವಿವಾದ ಇತ್ಯರ್ಥಕ್ಕೆ ಆದ್ಯತೆಯಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದ್ದು ನನಗೆ ನೋವು ತಂದಿತ್ತು. ಇದು ಹಿಂದೂಗಳಿಗೆ ಮಾಡಿದ ಅವಮಾನ. ನಮ್ಮ ನ್ಯಾಯಾಲಯಗಳಲ್ಲಿ ಪರಿವರ್ತನೆ ಆಗುವ ಅಗತ್ಯ ಇದೆ. ನ್ಯಾಯದಾನದಲ್ಲಿ ವಿಳಂಬವಾಗಬಾರದು ಎಂದು ಗುಡುಗಿದರು.

    ರಾಮಮಂದಿರ ಸ್ವಾಭಿಮಾನ, ಗೌರವದ ಸಂಕೇತ. ನಾನು ಯಾವುದೇ ರಾಜಕೀಯ ಪಕ್ಷದ ಪರವಾಗಿಲ್ಲ. ನನಗೆ ರಾಜಕೀಯ ದೂರದ ವಿಚಾರ. ಸಂತರು ರಾಜಕೀಯದಿಂದ ಹೊರಗೆ ಇರುತ್ತಾರೆ. ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಮರು, ಕ್ರೈಸ್ತರು ಎಲ್ಲರೂ ಬೆಂಬಲ ಕೊಡಬೇಕು. ಮುಸ್ಲಿಮರಿಗೆ ಇದು ದೊಡ್ಡ ಅವಕಾಶ. ನಮಾಜಿಗೆ ಮಸೀದಿಯೇ ಬೇಕು ಅಂತ ಇಲ್ಲ. ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಮರು ಬೆಂಬಲಿಸಿದರೆ ದೇಶದಲ್ಲಿ ಸಾಮರಸ್ಯ ಬೆಳೆಯುತ್ತದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv