Tag: ರಾಯನ್

  • ಧನುಷ್ ನಟನೆಯ ‘ರಾಯನ್’ ರಿಲೀಸ್‌ಗೆ ಮುಹೂರ್ತ ಫಿಕ್ಸ್

    ಧನುಷ್ ನಟನೆಯ ‘ರಾಯನ್’ ರಿಲೀಸ್‌ಗೆ ಮುಹೂರ್ತ ಫಿಕ್ಸ್

    ಕಾಲಿವುಡ್ ನಟ ಧನುಷ್ (Dhanush) ನಟಿಸಿ, ನಿರ್ದೇಶನ ಮಾಡುತ್ತಿರುವ ‘ರಾಯನ್’ (Raayan) ಸಿನಿಮಾದ ರಿಲೀಸ್ ಡೇಟ್ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಈಗ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ‘ರಾಯನ್’ ಅಬ್ಬರಕ್ಕೆ ದಿನಾಂಕ ಕೂಡ ನಿಗದಿಯಾಗಿದೆ. ಇದನ್ನೂ ಓದಿ:ಕಲ್ಕಿ ಪ್ರಭಾಸ್‌ಗೆ ಜೊತೆಯಾದ ವಿಜಯ್ ದೇವರಕೊಂಡ

    ‘ರಾಯನ್’ ಸಿನಿಮಾ ಇದೇ ಜುಲೈ 26ರಂದು ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ ಅನೌನ್ಸ್ ಮಾಡಿದೆ. ಎರಡನೇ ಬಾರಿ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಧನುಷ್ ನಿರ್ದೇಶನದ (Direction) ರಾಯನ್ ಸಿನಿಮಾ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ರಾಯನ್‌ ರಿಲೀಸ್‌ ಬಗ್ಗೆ ಅಪ್‌ಡೇಟ್‌ ಕೊಟ್ಟಿರೋದ್ರಿಂದ ಅಭಿಮಾನಿಗಳಿಗೆ ಖುಷಿಯಾಗಿದೆ. ಇದನ್ನೂ ಓದಿ:ಚಿತ್ರರಂಗದ ದಿಗ್ಗಜರಿಗೆ ಮದುವೆ ಆಮಂತ್ರಣ ನೀಡಿದ ಕನ್ನಡದ ‘ಮಾಣಿಕ್ಯ’ ನಟಿ

    ಈಗ ರಿಲೀಸ್ ಆಗಿರುವ ‘ರಾಯನ್’ ಸಿನಿಮಾದ ಪೋಸ್ಟರ್‌ನಲ್ಲಿ ಧನುಷ್ ರಗಡ್ ಆಗಿ ಲುಕ್ ಕೊಟ್ಟಿದ್ದಾರೆ. ಇನ್ನೂ ಈ ಚಿತ್ರದಲ್ಲಿ ಎಸ್ ಜೆ ಸೂರ್ಯ, ಸಂದೀಪ್ ಕಿಶನ್, ಅಪರ್ಣಾ ಬಾಲಮುರಳಿ, ವರಲಕ್ಷ್ಮಿ ಶರತ್‌ಕುಮಾರ್, ಪ್ರಕಾಶ್ ರಾಜ್ ನಟಿಸಿದ್ದಾರೆ. ನಿತ್ಯಾ ಮೆನನ್ ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

    2017ರಲ್ಲಿ ‘ಪಾ ಪಾಂಡಿ’ ಚಿತ್ರವನ್ನು ಧನುಷ್ ನಿರ್ದೇಶನ ಮಾಡಿದ್ದರು. ಧನುಷ್‌ಗೆ ಬೆಸ್ಟ್ ಡೈರೆಕ್ಟರ್ ಅವಾರ್ಡ್ ಕೂಡ ಒಲಿದು ಬಂದಿತ್ತು. ಇನ್ನೂ ನಟನೆ, ನಿರ್ದೇಶನದ ಜೊತೆ ಗಾಯಕರಾಗಿಯೂ ಧನುಷ್‌ ಗುರುತಿಸಿಕೊಂಡಿದ್ದಾರೆ.

  • ಧನುಷ್‌ ನಟನೆಯ ‌’ರಾಯನ್‌’ ಚಿತ್ರದ ಬಗ್ಗೆ ಹೊರಬಿತ್ತು ಬಿಗ್‌ ಅಪ್‌ಡೇಟ್

    ಧನುಷ್‌ ನಟನೆಯ ‌’ರಾಯನ್‌’ ಚಿತ್ರದ ಬಗ್ಗೆ ಹೊರಬಿತ್ತು ಬಿಗ್‌ ಅಪ್‌ಡೇಟ್

    ಕಾಲಿವುಡ್‌ನಲ್ಲಿ ನಟ, ಗಾಯಕ, ನಿರ್ದೇಶಕನಾಗಿ ಗಮನ ಸೆಳೆದಿರುವ ಧನುಷ್ ಅವರು ‘ರಾಯನ್’ (Raayan) ಚಿತ್ರದ ಮೂಲಕ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಈ ಸಿನಿಮಾ ರಿಲೀಸ್ ಆಗೋದು ಯಾವಾಗ ಎಂಬ ಅಭಿಮಾನಿಗಳ ಪ್ರಶ್ನೆ ಇದೀಗ ಉತ್ತರ ಸಿಕ್ಕಿದೆ.

    ಈ ಬಾರಿ ಥ್ರಿಲರ್ ಕಥೆಯನ್ನು ಧನುಷ್ (Dhanush) ಹೊತ್ತಿದ್ದಾರೆ. ಎಂದೂ ನಟಿಸಿರದ ವಿಭಿನ್ನ ಪಾತ್ರದಲ್ಲಿ ಅವರು ಕಾಣಿಸಿಕೊಳ್ತಿದ್ದಾರೆ. ಸದ್ಯ ಮೇ 9ರಂದು ಚಿತ್ರದ ಮೊದಲ ಸಾಂಗ್ ಬಿಡುಗಡೆ ಮಾಡುವುದಾಗಿ ಧನುಷ್ ಅನೌನ್ಸ್ ಮಾಡಿದ್ದಾರೆ. ಅಂದಹಾಗೆ, ‘ರಾಯನ್’ ಚಿತ್ರ ಜೂನ್‌ನಲ್ಲಿ ರಿಲೀಸ್ ಆಗಲಿದೆ. ಇದನ್ನೂ ಓದಿ:‘ಜಟ್ಟ’ ಖ್ಯಾತಿಯ ನಿರ್ದೇಶಕನ ಹೊಸ ಚಿತ್ರಕ್ಕೆ ರಾಗಿಣಿ ನಾಯಕಿ

     

    View this post on Instagram

     

    A post shared by SJ Suryah (@iam__sjsuryah)

    ಈಗ ರಿಲೀಸ್‌ ಆಗಿರುವ ‘ರಾಯನ್ ‘ಸಿನಿಮಾದ ಪೋಸ್ಟರ್‌ನಲ್ಲಿ ಧನುಷ್‌ ರಗಡ್‌ ಲುಕ್‌ ಕೊಟ್ಟಿದ್ದಾರೆ. ಧನುಷ್‌ ಬೆನ್ನ ಹಿಂದೆ ರಾವಣನ ಅವತಾರ ಕಾಣುತ್ತಿದೆ. ಇನ್ನೂ ಈ ಚಿತ್ರದಲ್ಲಿ ಎಸ್ ಜೆ ಸೂರ್ಯ, ಸಂದೀಪ್ ಕಿಶನ್, ಅಪರ್ಣಾ ಬಾಲಮುರಳಿ, ವರಲಕ್ಷ್ಮಿ ಶರತ್‌ಕುಮಾರ್, ಪ್ರಕಾಶ್ ರಾಜ್ ನಟಿಸಿದ್ದಾರೆ. ನಿತ್ಯಾ ಮೆನನ್ (Nithya Menon) ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

    2017ರಲ್ಲಿ ‘ಪಾ ಪಾಂಡಿ’ ಚಿತ್ರವನ್ನು ಧನುಷ್ ನಿರ್ದೇಶನ ಮಾಡಿದ್ದರು. ಧನುಷ್‌ಗೆ ಬೆಸ್ಟ್ ಡೈರೆಕ್ಟರ್ ಅವಾರ್ಡ್ ಕೂಡ ಒಲಿದು ಬಂದಿತ್ತು.

  • D50: ಧನುಷ್ ನಿರ್ದೇಶನದ ‘ರಾಯನ್’ ಸಿನಿಮಾದಲ್ಲಿ ಮಾಣಿಕ್ಯ ಚಿತ್ರದ ನಟಿ

    D50: ಧನುಷ್ ನಿರ್ದೇಶನದ ‘ರಾಯನ್’ ಸಿನಿಮಾದಲ್ಲಿ ಮಾಣಿಕ್ಯ ಚಿತ್ರದ ನಟಿ

    ಮಿಳಿನ ಖ್ಯಾತ ನಟ ಧನುಷ್ ನಿರ್ದೇಶಿಸಿ, ನಟಿಸುತ್ತಿರುವ ಸಿನಿಮಾದಲ್ಲಿ ಖ್ಯಾತ ನಟ ಎಸ್.ಜೆ ಸೂರ್ಯ ವಿಲನ್ ಪಾತ್ರ ನಿರ್ವಹಿಸುವ ಬಗ್ಗೆ ಮಾಹಿತಿಯನ್ನು ಸ್ವತಃ ಧನುಷ್ (Dhanush) ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಬೆನ್ನಲ್ಲೇ ಚಿತ್ರದ ಮತ್ತೊಂದು ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಕನ್ನಡದ ಮಾಣಿಕ್ಯ ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ಚಿತ್ರದಲ್ಲಿ ನಟಿಸಿದ್ದಾರೆ.

    ಮಾಣಿಕ್ಯ (Maanikya) ಸಿನಿಮಾದಲ್ಲಿ ಸುದೀಪ್‌ಗೆ (Sudeep) ನಾಯಕಿ ನಟಿಸಿದ್ದ ವರಲಕ್ಷ್ಮಿ ಸದ್ಯ ಧನುಷ್ ಜೊತೆ ಹೊಸ ಸಿನಿಮಾ ಮಾಡ್ತಿದ್ದಾರೆ. ಈ ಚಿತ್ರದ ಲುಕ್ ಕೂಡ ರಿವೀಲ್ ಆಗಿದ್ದು, ಹಳ್ಳಿ ಹುಡುಗಿಯ ಲುಕ್‌ನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಬ್ಲ್ಯಾಕ್ & ವೈಟ್ ಶೇಡ್‌ನಲ್ಲಿ ವರಲಕ್ಷ್ಮಿ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

    ಧನುಷ್ ಅವರ ಮಹತ್ವಾಕಾಂಕ್ಷಿ ಈ ಸಿನಿಮಾದ ಟೈಟಲ್ ಫಿಕ್ಸ್ ಆಗಿದೆ. ಈ ಸಿನಿಮಾಗೆ ಧನುಷ್ ಅವರೇ ನಿರ್ದೇಶಿಸಿ, ನಟಿಸುತ್ತಿದ್ದು, ಚಿತ್ರಕ್ಕೆ ‘ರಾಯನ್’ ಎಂದು ಹೆಸರಿಡಲಾಗಿದೆ. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ಇತ್ತೀಚೆಗೆ ರಿಲೀಸ್ ಮಾಡಿತ್ತು ಚಿತ್ರತಂಡ. ನಾನಾ ಕಾರಣಗಳಿಂದಾಗಿ ಫಸ್ಟ್ ಲುಕ್ ಕುತೂಹಲ ಮೂಡಿಸಿತ್ತು. ಇದನ್ನೂ ಓದಿ:100 ಕೋಟಿ ಕೊಟ್ರು ನಟಿಸಲ್ಲ ಎಂದು ಆ ಹೀರೋಗೆ ನಯನತಾರಾ ಹೇಳಿದ್ದೇಕೆ?

    2017ರಲ್ಲಿ ತೆರೆಕಂಡ ‘ಪಾ ಪಂಡಿ’ ಸಿನಿಮಾದ ಮೂಲಕ ನಿರ್ದೇಶಕರಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡವರು ಧನುಷ್. ಅದಾದ ನಂತರ ಇದೀಗ ತಮ್ಮ ಚಿತ್ರಕ್ಕೆ ತಾವೇ ನಿರ್ದೇಶನ ಮಾಡಿಕೊಂಡಿದ್ದಾರೆ. ಇದು ಧನುಷ್ ಅವರ 50ನೇ ಸಿನಿಮಾ ಎನ್ನುವುದು ಮತ್ತೊಂದು ವಿಶೇಷ. ಸನ್ ಪಿಕ್ಚರ್ಸ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ತಮಿಳು, ತೆಲುಗು, ಹಿಂದಿ ಭಾಷೆಯಲ್ಲಿ ಮೂಡಿ ಬರಲಿದೆ.

    ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಶೂಟಿಂಗ್ ಶುರುವಾಗಿತ್ತು. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರಂತೆ ಧನುಷ್. ಶೂಟಿಂಗ್ ಪೂರ್ಣಗೊಳಿಸಿಯೇ ಅವರು ಡಿ.51ರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೂಡ ಈಗ ನಡೆಯುತ್ತಿದೆ.

  • ಮತ್ತೆ ಒಂದಾಯಿತು ಧನುಷ್ ಮತ್ತು ಪ್ರಕಾಶ್ ರೈ ಜೋಡಿ

    ಮತ್ತೆ ಒಂದಾಯಿತು ಧನುಷ್ ಮತ್ತು ಪ್ರಕಾಶ್ ರೈ ಜೋಡಿ

    ನ್ನಡದ ನಟ, ಪರಭಾಷೆಗಳಲ್ಲಿಯೂ ಕರುನಾಡನ್ನು ಪ್ರತಿನಿಧಿಸುವ ಪ್ರಕಾಶ್ ರಾಜ್ (Prakash Raj) ಅಲಿಯಾಸ್ ಪ್ರಕಾಶ್ ರೈ, ತಮ್ಮ ಅಭಿನಯದ ಮೂಲಕವೇ ಎಲ್ಲರನ್ನು ಸೆಳೆದವರು. ಯಾವುದೇ ಪಾತ್ರ ಕೊಟ್ಟರು ಅವರು ಲೀಲಾಜಾಲವಾಗಿ ನಟಿಸುತ್ತಾರೆ. ಕೆಲವೊಮ್ಮೆ ಭಾರವಾದ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಮತ್ತೆ ಕೆಲವೊಮ್ಮೆ ಪಕ್ಕಾ ಕಮರ್ಷಿಯಲ್ ಸಿನಿಮಾಗಳಲ್ಲಿ ನಟಿಸಿದ್ದೂ ಇದೆ. ಪಾತ್ರ ಚಿಕ್ಕದೇ ಇರಲಿ, ದೊಡ್ಡದ್ದೇ ಇರಲಿ ಅದಕ್ಕೆ ಪ್ರಕಾಶ್ ರಾಜ್ ನ್ಯಾಯ  ಒದಗಿಸುತ್ತಾರೆ. ಹೀಗಾಗಿ ಕಾಲಿವುಡ್ ನಟ ಧನುಷ್ (Dhanush) ತಮ್ಮ ನಿರ್ದೇಶನದಲ್ಲಿ ಪ್ರಕಾಶ್ ರಾಜ್ ಅವರಿಗೊಂದು ತೂಕದ ಪಾತ್ರ ನೀಡಿದ್ದಾರೆ.

    2017ರಲ್ಲಿ ತೆರೆಕಂಡ ‘ಪಾ ಪಂಡಿ’ ಸಿನಿಮಾದ ಮೂಲಕ ಧನುಷ್ ನಿರ್ದೇಶಕರಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡವರು. ಒಂದಷ್ಟು ಗ್ಯಾಪ್ ಬಳಿಕ ನಿಲವುಕ್ಕು ಎನ್ ಮೆಲ್ ಎನ್ನಡಿ ಕೋಬಮ್ ಎಂಬ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು. ಇದೀಗ ರಾಯನ್ (Rayan) ಚಿತ್ರದ ಮೂಲಕ ಧನುಷ್ ಮತ್ತೊಮ್ಮ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಇದು ಅವರ 50ನೇ ಚಿತ್ರ ಅನ್ನೋದು ವಿಶೇಷ. ಸನ್ ಪಿಕ್ಚರ್ಸ್ ನಡಿ ಮೂಡಿ ಬರ್ತಿರುವ ರಾಯನ್ ಬಳಗಕ್ಕೀಗ ಕನ್ನಡದ ಪ್ರಕಾಶ್ ರಾಜ್ ಎಂಟ್ರಿ ಕೊಟ್ಟಿದ್ದಾರೆ.

    ಪ್ರಕಾಶ್ ರಾಜ್ ಹಾಗೂ ಧನುಷ್ ‘ತಿರುಚಿತ್ರಂಬಲಂ’ ಸಿನಿಮಾದಲ್ಲಿ ಕಮಾಲ್ ಮಾಡಿದ್ದರು. ಅಪ್ಪ ಮಗನಾಗಿ ಪ್ರೇಕ್ಷಕರನ್ನು ರಂಜಿಸಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಈಗ ರಾಯನ್ ಚಿತ್ರದ ಮೂಲಕ ಮತ್ತೊಂದು ಸುಂದರ ಪಯಣಕ್ಕೆ ಧನುಷ್, ಪ್ರಕಾಶ್ ರಾಜ್ ಸಜ್ಜಾಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಕಾಶ್ ರಾಜ್ ಅವರ ಆನ್ ಬೋರ್ಡ್ ಲುಕ್ ಹಂಚಿಕೊಂಡು ಧನುಷ್ ತಮ್ಮ ತಂಡಕ್ಕೆ ಸ್ವಾಗತಿಸಿದ್ದಾರೆ.

    ಕುರ್ಚಿ ಮೇಲೆ ಕುಳಿತಿರುವ ಪ್ರಕಾಶ್ ರಾಜ್ ಯಾವುದೋ ಗಾಢ ಯೋಚನೆಯಲ್ಲಿ ಮಗ್ನರಾಗಿದ್ದಾರೆ. ಪೋಸ್ಟರ್ ನಲ್ಲಿ ಕಪ್ಪು ಬೆಳಕಿನ ಆಟವಿದೆ. ಎಆರ್ ರೆಹಮಾನ್ ಸಂಗೀತ ಸಂಯೋಜನೆಯಲ್ಲಿ ತಯಾರಾಗುತ್ತಿರುವ ರಾಯನ್ ಚಿತ್ರದಲ್ಲಿ ದೊಡ್ಡ ತಾರಾಬಗಳವಿದೆ.

  • ಧನುಷ್ ನಿರ್ದೇಶನದ ಚಿತ್ರದಲ್ಲಿ ಸೂರ್ಯ ವಿಲನ್

    ಧನುಷ್ ನಿರ್ದೇಶನದ ಚಿತ್ರದಲ್ಲಿ ಸೂರ್ಯ ವಿಲನ್

    ಮಿಳಿನ ಖ್ಯಾತ ನಟ ಧನುಷ್ (Dhanush) ನಿರ್ದೇಶಿಸಿ, ನಟಿಸುತ್ತಿರುವ ಸಿನಿಮಾದಲ್ಲಿ ಖ್ಯಾತ ನಟ ಎಸ್.ಜೆ ಸೂರ್ಯ (SJ Surya) ವಿಲನ್ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಮಾಹಿತಿಯನ್ನು ಸ್ವತಃ ಧನುಷ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸೂರ್ಯ ಧನ್ಯವಾದಗಳನ್ನೂ ಅರ್ಪಿಸಿದ್ದಾರೆ.

    ಧನುಷ್  ಅವರ ಮಹತ್ವಾಕಾಂಕ್ಷಿ ಈ ಸಿನಿಮಾದ ಟೈಟಲ್ ಫಿಕ್ಸ್ ಆಗಿದೆ. ಈ ಸಿನಿಮಾಗೆ ಧನುಷ್ ಅವರೇ ನಿರ್ದೇಶಿಸಿ, ನಟಿಸುತ್ತಿದ್ದು ಚಿತ್ರಕ್ಕೆ ರಾಯನ್ (Rayan) ಎಂದು ಹೆಸರಿಡಲಾಗಿದೆ. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದೆ ಚಿತ್ರತಂಡ. ನಾನಾ ಕಾರಣಗಳಿಂದಾಗಿ ಫಸ್ಟ್ ಲುಕ್ ಕುತೂಹಲ ಮೂಡಿಸಿದೆ.

    2017ರಲ್ಲಿ ತೆರೆಕಂಡ ‘ಪಾ ಪಂಡಿ’ ಸಿನಿಮಾದ ಮೂಲಕ ನಿರ್ದೇಶಕರಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡವರು ಧನುಷ್. ಅದಾದ ನಂತರ ಇದೀಗ ತಮ್ಮ ಚಿತ್ರಕ್ಕೆ ತಾವೇ ನಿರ್ದೇಶನ ಮಾಡಿಕೊಂಡಿದ್ದಾರೆ. ಇದು ಧನುಷ್ ಅವರ 50ನೇ ಸಿನಿಮಾ ಎನ್ನುವುದು ಮತ್ತೊಂದು ವಿಶೇಷ.   ಸನ್ ಪಿಕ್ಚರ್ಸ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ತಮಿಳು, ತೆಲುಗು, ಹಿಂದಿ ಭಾಷೆಯಲ್ಲಿ ಮೂಡಿ ಬರಲಿದೆ.

     

    ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಶೂಟಿಂಗ್ ಶುರುವಾಗಿತ್ತು. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರಂತೆ ಧನುಷ್. ಶೂಟಿಂಗ್ ಪೂರ್ಣಗೊಳಿಸಿಯೇ ಅವರು ಡಿ.51ರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೂಡ ಈಗ ನಡೆಯುತ್ತಿದೆ.

  • ಧನುಷ್ ನಿರ್ದೇಶಿಸಿ, ನಟಿಸುತ್ತಿರುವ ಚಿತ್ರದ ಟೈಟಲ್ ಫಿಕ್ಸ್

    ಧನುಷ್ ನಿರ್ದೇಶಿಸಿ, ನಟಿಸುತ್ತಿರುವ ಚಿತ್ರದ ಟೈಟಲ್ ಫಿಕ್ಸ್

    ಮಿಳಿನ ಹೆಸರಾಂತ ನಟ ಧನುಷ್  ಅವರ ಮಹತ್ವಾಕಾಂಕ್ಷಿ ಸಿನಿಮಾದ ಟೈಟಲ್ ಫಿಕ್ಸ್ ಆಗಿದೆ. ಈ ಸಿನಿಮಾಗೆ ಧನುಷ್ ಅವರೇ ನಿರ್ದೇಶಿಸಿ, ನಟಿಸುತ್ತಿದ್ದು ಚಿತ್ರಕ್ಕೆ ರಾಯನ್ ಎಂದು ಹೆಸರಿಡಲಾಗಿದೆ. ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದೆ ಚಿತ್ರತಂಡ. ನಾನಾ ಕಾರಣಗಳಿಂದಾಗಿ ಫಸ್ಟ್ ಲುಕ್ ಕುತೂಹಲ ಮೂಡಿಸಿದೆ.

    2017ರಲ್ಲಿ ತೆರೆಕಂಡ ‘ಪಾ ಪಂಡಿ’ ಸಿನಿಮಾದ ಮೂಲಕ ನಿರ್ದೇಶಕರಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡವರು ಧನುಷ್. ಅದಾದ ನಂತರ ಇದೀಗ ತಮ್ಮ ಚಿತ್ರಕ್ಕೆ ತಾವೇ ನಿರ್ದೇಶನ ಮಾಡಿಕೊಂಡಿದ್ದಾರೆ. ಇದು ಧನುಷ್ ಅವರ 50ನೇ ಸಿನಿಮಾ ಎನ್ನುವುದು ಮತ್ತೊಂದು ವಿಶೇಷ.   ಸನ್ ಪಿಕ್ಚರ್ಸ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ತಮಿಳು, ತೆಲುಗು, ಹಿಂದಿ ಭಾಷೆಯಲ್ಲಿ ಮೂಡಿ ಬರಲಿದೆ.

     

    ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಶೂಟಿಂಗ್ ಶುರುವಾಗಿತ್ತು. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರಂತೆ ಧನುಷ್. ಶೂಟಿಂಗ್ ಪೂರ್ಣಗೊಳಿಸಿಯೇ ಅವರು ಡಿ.51ರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೂಡ ಈಗ ನಡೆಯುತ್ತಿದೆ.

  • ಅಣ್ಣನ ಮಗನಿಗೆ ಡಾನ್ಸ್ ಹೇಳಿಕೊಟ್ಟ ಧ್ರುವ ಸರ್ಜಾ

    ಅಣ್ಣನ ಮಗನಿಗೆ ಡಾನ್ಸ್ ಹೇಳಿಕೊಟ್ಟ ಧ್ರುವ ಸರ್ಜಾ

    ಟ ಧ್ರುವ ಸರ್ಜಾ (Dhruva Sarja) ಸಮಯ ಸಿಕ್ಕಾಗೆಲ್ಲ ಸಹೋದರ ಚಿರಂಜೀವಿ ಸರ್ಜಾ (Chiranjeevi Sarja) ಅವರ ಪುತ್ರ ರಾಯನ್ ಜೊತೆ ಕಾಲ ಕಳೆಯುತ್ತಾರೆ. ರಾಯನ್ (Rayan) ಕೂಡ ಚಿಕ್ಕಪ್ಪನ ಕಂಡರೆ ಎಲ್ಲಿಲ್ಲದ ಪ್ರೀತಿ. ಈ ಬಾರಿ ಚಿಕ್ಕಪ್ಪನ ಹುಟ್ಟು ಹಬಕ್ಕೆ ವಿಶೇಷ ವಿಡಿಯೋವೊಂದನ್ನು ತಾಯಿ ಮೇಘನಾ ಮೂಲಕ ಶೇರ್ ಮಾಡಿದ್ದಾನೆ ಪುಟಾಣಿ. ಈ ವಿಡಿಯೋದಲ್ಲಿ ರಾಯನ್ ಗೆ ಧ್ರುವ ಸರ್ಜಾ ಡಾನ್ಸ್ ಕಲಿಸುತ್ತಿದ್ದಾರೆ. ಅಲ್ಲದೇ ಎತ್ತಿ ಮಗುವನ್ನು ಧ್ರುವ ಮುದ್ದಾಡುತ್ತಾರೆ. ಈ ವಿಡಿಯೋವನ್ನು ಮೇಘನಾ ರಾಜ್ (Meghana Raj) ತಮ್ಮ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ತಮ್ಮದೇ ಸಿನಿಮಾದ ಹಾಡಿನ ಹುಕ್ ಸ್ಟೇಪ್ ಅನ್ನು ರಾಯನ್ ಗೆ ಹೇಳಿಕೊಟ್ಟಿದ್ದಾರೆ ಧ್ರುವ ಸರ್ಜಾ. ಥೇಟ್ ಮಗುವಿನಂತೆಯೇ ಅವರು ಕುಣಿಸಿದ್ದಾರೆ. ಈ ವಿಡಿಯೋದಲ್ಲಿ ರಾಯನ್ ತಾತ, ನಟ ಸುಂದರ್ ರಾಜ್ ಕೂಡ ಇದ್ದಾರೆ. ಮೊಮ್ಮಗ ಡಾನ್ಸ್ ಕಂಡು ಅವರೂ ಸಂಭ್ರಮಿಸಿದ್ದಾರೆ. ಈ ವಿಡಿಯೋವನ್ನು ಧ್ರುವ ಅವರ ಹುಟ್ಟು ಹಬ್ಬಕ್ಕಾಗಿ ಹಂಚಿಕೊಂಡಿದ್ದಾರೆ ಮೇಘನಾ. ಈ ಮೂಲಕ ಚಿಕ್ಕಪ್ಪನಿಗೆ ಶುಭಾಶಯ ಹೇಳಿದ್ದಾನೆ ರಾಯನ್.

    ಅಗಲಿದ ನಟ ಚಿರಂಜೀವಿ ಸರ್ಜಾ ಅವರ ಕೊನೆಯ ಸಿನಿಮಾ ರಾಜಮಾರ್ತಾಂಡ ನಿನ್ನೆಯಷ್ಟೇ ಬಿಡುಗಡೆ ಆಗಿದೆ. ಇದು ಚಿರು ಅವರ ಕೊನೆಯ ಸಿನಿಮಾವಾಗಿದ್ದರಿಂದ ದೊಡ್ಡ ಮಟ್ಟದಲ್ಲಿಯೇ ಸಿನಿಮಾ ಬಿಡುಗಡೆ ಮಾಡಲಾಗಿದೆ. ರಿಲೀಸ್ ಹಿನ್ನೆಲೆಯಲ್ಲಿ ಚಿತ್ರತಂಡವು ವಿಶೇಷ ಪೂಜೆಯನ್ನೂ ಸಲ್ಲಿಸಿದೆ. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ರಾಮ್ ನಾರಾಯಣ್, ವಿಶೇಷ ಸುದ್ದಿಯೊಂದನ್ನು ನೀಡಿದ್ದರು. ಚಿರು ಅವರ ಕೊನೆಯ ಸಿನಿಮಾದಲ್ಲಿ ಚಿರು ಪುತ್ರ ರಾಯನ್ ರಾಜ್ ಕೂಡ ಕಾಣಿಸಿಕೊಂಡಿದ್ದಾರೆ. ಸಿನಿಮಾ ರೆಡಿಯಾಗಿ ಒಂದು ವರ್ಷವೇ ಆಗಿದೆ. ರಾಯನ್ ರಾಜ್ ಹುಟ್ಟುವ ಮೊದಲೇ ಈ ಚಿತ್ರದ ಬಹುತೇಕ ಕೆಲಸಗಳು ಮುಗಿದಿದ್ದವು. ಹಾಗಾಗಿ ರಾಯನ್ ಯಾವ ರೀತಿಯಲ್ಲಿ ಎಂಟ್ರಿ ಕೊಡಲಿದ್ದಾರೆ ಎನ್ನುವುದು ಕುತೂಹಲ ಸಂಗತಿಯಾಗಿತ್ತು. ಅದಕ್ಕೀಗ ಸಿನಿಮಾದಲ್ಲಿ ಉತ್ತರ ಸಿಕ್ಕಿದೆ.

     

    ಚಿರಂಜೀವಿ ಸರ್ಜಾ ಅವರ ಪುತ್ರ ರಾಯನ್ ರಾಜ್ ಅವರ ಅನೇಕ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪ್ರತಿ ಫೋಟೋ ಬಂದಾಗಲೂ ಚಿರು ಅಭಿಮಾನಿಗಳು ಮತ್ತು ಮೇಘನಾ ರಾಜ್ ಅಭಿಮಾನಿಗಳು ಪ್ರೀತಿಯಿಂದ ಅವುಗಳನ್ನು ಬರಮಾಡಿಕೊಳ್ಳುತ್ತಾರೆ. ಈ ಬಾರಿ ಬಿಗ್ ಸ್ಕ್ರೀನ್ ನಲ್ಲೇ ರಾಯನ್ ರಾಜ್ ಅವರನ್ನು ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ

    ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ

    ಸ್ಯಾಂಡಲ್ ವುಡ್ ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ (Chiranjeevi Sarja) ಅವರ ಮೂರನೇ ವರ್ಷದ ಪುಣ್ಯತಿಥಿ (Punyatithi) ಇಂದು ಕಾರ್ಯಕ್ರಮ ನಡೆಯಿತು. ಬೆಂಗಳೂರು ಹೊರವಲಯದ ನೆಲಗುಳಿ ಬಳಿಯ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿರುವ ಚಿರು ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಕುಟುಂಬಸ್ಥರು ಅಗಲಿದ ಚಿರುವನ್ನು ನೆನಪಿಸಿಕೊಂಡರು.

      

    ಚಿರು ಪತ್ನಿ ಮೇಘನಾ ರಾಜ್ (Meghana Raj), ಮೇಘನಾ ತಂದೆ-ತಾಯಿ, ಚಿರು ಪುತ್ರ ರಾಯನ್ (Rayan), ಚಿರು ಸಹೋದರ ಧ್ರುವ ಸರ್ಜಾ (Dhruva Sarja), ಹಾಗೂ ಚಿರು ತಂದೆ-ತಾಯಿ ಇಂದು ನಡೆದ ಪುಣ್ಯಸ್ಮರಣೆಯಲ್ಲಿ ಭಾಗಿಯಾಗಿದ್ದರು. ಚಿರು ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಕುಟುಂಬಸ್ಥರು, ಕೆಲ ಕ್ಷಣ ಭಾವುಕರಾದರು. ಈ ಸಂದರ್ಭದಲ್ಲಿ ನಟ ದುನಿಯಾ ವಿಜಯ್ ಕೂಡ ಆಗಮಿಸಿ ಅಗಲಿದ ಮಿತ್ರನ ಸಮಾಧಿಗೆ  ಪೂಜೆ ಸಲ್ಲಿಸಿದರು. ಇದನ್ನೂ ಓದಿ:ಮತ್ತೆ ಕಿರುತೆರೆಗೆ ಮರಳಿದ ‘ಬಿಗ್‌ ಬಾಸ್‌’ ಚೈತ್ರಾ ಹಳ್ಳಿಕೇರಿ

     

    ಚಿರು ಸಮಾಧಿಗೆ ಗುಡಿ ಕಟ್ಟಿಸಲಾಗಿದ್ದು ಸುತ್ತಲೂ ಕಾರಂಜಿಯ ಸಿಂಗಾರ ಮಾಡಲಾಗಿದೆ. ಅಭಿಮಾನಿಗಳು ಬಂದು ಹೋಗುವುದಕ್ಕೂ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಕೂಡ ಆಗಮಿಸಿ, ಪೂಜೆ ಸಲ್ಲಿಸಿದರು.

  • ಶಾಲೆಗೆ ಕಾಲಿಟ್ಟ ಮೇಘನಾ ರಾಜ್‌ ಪುತ್ರ ರಾಯನ್‌

    ಶಾಲೆಗೆ ಕಾಲಿಟ್ಟ ಮೇಘನಾ ರಾಜ್‌ ಪುತ್ರ ರಾಯನ್‌

    ಸ್ಯಾಂಡಲ್‌ವುಡ್ (Sandalwood) ನಟ ಚಿರಂಜೀವಿ ಸರ್ಜಾ, ಮೇಘನಾ ರಾಜ್ (Meghana Raj) ಪುತ್ರ ರಾಯನ್ ರಾಜ್ ಸರ್ಜಾ (Rayaan Raj Sarja) ಶಾಲೆಗೆ ಕಾಲಿಟ್ಟಿದ್ದಾರೆ. ಈ ಬಗ್ಗೆ ಮೇಘನಾ ರಾಜ್, ಪೋಸ್ಟ್ ಹಂಚಿಕೊಂಡು ಭಾವುಕರಾಗಿದ್ದಾರೆ. ಸದ್ಯ ನಟಿಯ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಸರ್ಜಾ ಕುಟುಂಬದ ಖುಷಿ ರಾಯನ್, ಚಿರಂಜೀವಿ ಸರ್ಜಾ ಅಗಲಿಕೆಯ ನಂತರ ಮಗನ ಆರೈಕೆಯಲ್ಲಿ ತನ್ನ ನೋವನೆಲ್ಲಾ ಮರೆಯಲು ನಟಿ ಮೇಘನಾ ಪ್ರಯತ್ನಿಸುತ್ತಿದ್ದಾರೆ. ಮಗನ ಖುಷಿಯಲ್ಲಿ ತನ್ನ ಖುಷಿಯನ್ನ ಕಾಣುತ್ತಿದ್ದಾರೆ. ಹೀಗಿರುವಾಗ ಪುತ್ರ ರಾಯನ್ ಶಾಲೆಗೆ ಕಾಲಿಟ್ಟಿರುವ ಬಗ್ಗೆ ನಟಿ ಪೋಸ್ಟ್ ಶೇರ್ ಮಾಡಿದ್ದಾರೆ.

    ನಾವು ಪೋಷಕರಾದ ಮೇಲೆ ಮಕ್ಕಳು ಮಾತ್ರವಲ್ಲ ನಾವು ಕೂಡ ಜೀವನ ಪ್ರತಿಯೊಂದು ಮೈಲಿಗಲ್ಲು ದಾಟುತ್ತೀವಿ ಎಂದು ಮೇಘನಾ ಬರೆದುಕೊಂಡಿದ್ದಾರೆ. ಇಂದು ನಮ್ಮ ಜೀವನದ ತುಂಬಾ ಸ್ಪೆಷಲ್ ದಿನವಾಗಿದೆ. ರಾಯನ್ ರಾಜ್ ಸರ್ಜಾ ಸ್ಕೂಲ್‌ನ ಮೊದಲ ದಿನ ಇಂದು. ನನ್ನ ಭಾವನೆಗಳನ್ನು ಪದಗಳಲ್ಲಿ ವರ್ಣಿಸಲು ಆಗುವುದಿಲ್ಲ. ವಿದ್ಯಾಭ್ಯಾಸ, ಜ್ಞಾನ ಹಾಗೂ ಜೀವನದ ಅತಿ ಅಮೂಲ್ಯವಾದ ಪಾಠಗಳನ್ನು ಕಲಿಯುವುದ್ದಕ್ಕೆ ರಾಯನ್ ಮೊದಲ ಹೆಜ್ಜೆ ಇಡುತ್ತಿದ್ದಾನೆ. ನಿಮ್ಮ ಹಾರೈಕೆ ಮತ್ತು ಪ್ರೀತಿ ಅವನ ಮೇಲಿರಲಿ ಎಂದು ಮೇಘನಾ ರಾಜ್ ಹೇಳಿದ್ದಾರೆ. ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಕಮಲಿ’ ನಟಿ ಯಶಸ್ವಿನಿ

     

    View this post on Instagram

     

    A post shared by Meghana Raj Sarja (@megsraj)

    ಇನ್ನೂ ಮೇಘನಾ ರಾಜ್ ಅವರು ‘ತತ್ಸಮ ತದ್ಭವ’ (Tatsama Tadbhava) ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಂಬ್ಯಾಕ್ ಆಗಿದ್ದಾರೆ. ಫೀಮೇಲ್ ಓರಿಯೆಂಟೆಡ್ ಚಿತ್ರದಲ್ಲಿ ಮೇಘನಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

  • ನನ್ನ ಮೊಮ್ಮಗ ಸೂಪರ್ ಸ್ಟಾರ್ ಆಗ್ತಾನೆ ಎಂದು ಭವಿಷ್ಯ ನುಡಿದ ಸುಂದರ್ ರಾಜ್

    ನನ್ನ ಮೊಮ್ಮಗ ಸೂಪರ್ ಸ್ಟಾರ್ ಆಗ್ತಾನೆ ಎಂದು ಭವಿಷ್ಯ ನುಡಿದ ಸುಂದರ್ ರಾಜ್

    ಸ್ಯಾಂಡಲ್‌ವುಡ್‌ನ(Sandalwood) ಹಿರಿಯ ನಟ ಸುಂದರ್ ರಾಜ್(Sundar Raj) ಅವರದ್ದು ಕಲಾವಿದರ ಕುಟುಂಬ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇತ್ತೀಚೆಗೆ ಚಿತ್ರದ ಈವೆಂಟ್‌ವೊಂದಕ್ಕೆ ಸಾಥ್ ನೀಡಿದ್ದ ಸುಂದರ್ ರಾಜ್ ಮೊಮ್ಮಗ ರಾಯನ್ ಬಗ್ಗೆ ಭವಿಷ್ಯ ನುಡಿದಿದ್ದಾರೆ. ನನ್ನ ಮೊಮ್ಮಗ ಸೂಪರ್ ಸ್ಟಾರ್ ಆಗ್ತಾನೆ ಎಂದು ಭವಿಷ್ಯ ನುಡಿದಿದ್ದಾರೆ.

    ನಟಿ ಮೇಘನಾ ರಾಜ್ ಬಹುಭಾಷಾ ನಟಿ, ತಾವು ಬೆಳೆದು, ಇದೀಗ ಸೊಸೆಯಾಗಿ ಸೇರಿರುವ ಕುಟುಂಬ ಕೂಡ ಕಲಾವಿದರ ಕುಟುಂಬವಾಗಿದ್ದು, ನಟನೆ ಎಂಬುದು ರಕ್ತಗತವಾಗಿ ಬಂದಿದೆ. ಹಾಗಾಗಿ ಸಮಾರಂಭವೊಂದರಲ್ಲಿ ಹಿರಿಯ ನಟ ಸುಂದರ್ ರಾಜ್ ನನ್ನ ಮೊಮ್ಮಗ ಸೂಪರ್ ಸ್ಟಾರ್ ಆಗ್ತಾನೆ ಎಂದು ಭವಿಷ್ಯ ನುಡಿದಿದ್ದಾರೆ.

    ಸುನಾಮಿ ಕಿಟ್ಟಿ ನಟನೆಯ ಹೊಸ ಚಿತ್ರದ ಟ್ರೈಲರ್ ಲಾಂಚ್ ಸಮಾರಂಭಕ್ಕೆ ಬಂದ ಸಂದರ್ಭದಲ್ಲಿ ಸುಂದರ್ ರಾಜ್, ಚಿತ್ರತಂಡಕ್ಕೆ ಶುಭ ಹಾರೈಸಿ ಮಾತನಾಡಿದ್ದಾರೆ. ನಮ್ಮ ಕುಟುಂಬದಲ್ಲಿ ಎಲ್ಲರೂ ಕಲಾವಿದರೇ ಇದ್ದೀವಿ. ನಾಯಕಿ ಮೇಘನಾ ಇದ್ದಾರೆ, ತಾಯಿ ಪಾತ್ರ ಮಾಡಿರುವ ಪ್ರಮಿಳಾ, ಶಕ್ತಿ ಪ್ರಸಾದ್, ಅರ್ಜುನ್ ಸರ್ಜಾ, ಚಿರು, ಧ್ರುವಾ ಸರ್ಜಾ ಹೀಗೆ ಎಲ್ಲರೂ ಕಲಾವಿದರೇ ಇದ್ದೀವಿ. ಈಗ ನನ್ನ ಮೊಮ್ಮಗ ಬಂದಿದ್ದಾನೆ. ಮುಂದೆ ಅವನು ಕೂಡ ಸೂಪರ್ ಸ್ಟಾರ್ ಆಗ್ತಾನೆ ಎಂದು ಭವಿಷ್ಯ ನುಡಿದಿದ್ದಾರೆ.

    Live Tv
    [brid partner=56869869 player=32851 video=960834 autoplay=true]