Tag: ರಾಯಭಾರಿ

  • ಅಮೆರಿಕ ರಾಯಭಾರಿಯಾಗಿ ಬೈಡೆನ್‌ನಿಂದ ಮತ್ತೊಬ್ಬ ಭಾರತೀಯನ ನಾಮನಿರ್ದೇಶನ

    ಅಮೆರಿಕ ರಾಯಭಾರಿಯಾಗಿ ಬೈಡೆನ್‌ನಿಂದ ಮತ್ತೊಬ್ಬ ಭಾರತೀಯನ ನಾಮನಿರ್ದೇಶನ

    ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕಳೆದ ವಾರ ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿಯಾಗಿ ಭಾರತ ಮೂಲದ ಸಾಮಾಜಿಕ ಕಾರ್ಯಕರ್ತೆ ಶೇಫಾಲಿ ರಜ್ದಾನ್ ದುಗ್ಗಾಲ್‌ರ ನಾಮನಿರ್ದೇಶನ ಮಾಡಿದ್ದರು. ಇದೀಗ ಬೈಡೆನ್ ಉತ್ತರ ಆಫ್ರಿಕಾದ ಮೊರೊಕ್ಕೊ ದೇಶಕ್ಕೂ ಅಮೆರಿಕ ರಾಯಭಾರಿಯಾಗಿ ಭಾರತೀಯ ಮೂಲದ ವ್ಯಕ್ತಿಯೊಬ್ಬರನ್ನು ನಾಮನಿರ್ದೇಶನ ಮಾಡಿದ್ದಾರೆ.

    ಜೋ ಬೈಡೆನ್ ಕೇವಲ 1 ವಾರದಲ್ಲಿ ಇಬ್ಬರು ಭಾರತೀಯ ಮೂಲದ ವ್ಯಕ್ತಿಗಳನ್ನು ರಾಯಭಾರಿಯಾಗಿ ನಾಮನಿರ್ದೇಶನ ಮಾಡಿದ್ದಾರೆ. ಪುನೀತ್ ತಲ್ವಾರ್ ಅಮೆರಿಕ ರಾಯಭಾರಿಯಾಗಿ ನಾಮನಿರ್ದೇಶನಗೊಂಡ ಭಾರತೀಯ ಮೂಲದ 2ನೇ ವ್ಯಕ್ತಿಯಾಗಿದ್ದಾರೆ. ಇದನ್ನೂ ಓದಿ: ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿಯಾಗಿ ಭಾರತ ಮೂಲದ ಮಹಿಳೆ ನಾಮನಿರ್ದೇಶನ

    ಪುನೀತ್ ತಲ್ವಾರ್ ಯಾರು?
    ಪುನೀತ್ ತಲ್ವಾರ್ ವಿದೇಶಾಂಗ ಇಲಾಖೆ, ಶ್ವೇತಭವನ ಮತ್ತು ಸೆನೆಟ್‌ನಲ್ಲಿ ಹಿರಿಯ ರಾಷ್ಟ್ರೀಯ ಭದ್ರತೆ ಹಾಗೂ ವಿದೇಶಾಂಗ ನೀತಿಯಲ್ಲಿ ಸ್ಥಾನಗಳನ್ನು ಹೊಂದಿದ್ದಾರೆ. ಸದ್ಯ ತಲ್ವಾರ್ ಸ್ಟೇಟ್ ಡಿಪಾರ್ಟ್ಮೆಂಟ್‌ನಲ್ಲಿ ಹಿರಿಯ ಸಲಹೆಗಾರರಾಗಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

    ತಲ್ವಾರ್ ಈ ಹಿಂದೆ ರಾಜಕೀಯ-ಮಿಲಿಟರಿ ವ್ಯವಹಾರಗಳ ಸಹಾಯಕ ರಾಜ್ಯ ಕಾರ್ಯದರ್ಶಿಯಾಗಿ, ಅಧ್ಯಕ್ಷರ ವಿಶೇಷ ಸಹಾಯಕ, ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಹಿರಿಯ ನಿರ್ದೇಶಕ ಹಾಗೂ ವಿಶ್ವಸಂಸ್ಥೆಯ ಸೆನೆಟ್‌ನಲ್ಲಿ ವಿದೇಶಿ ಸಂಬಂಧಗಳ ಸಮಿತಿಯಲ್ಲಿ ಹಿರಿಯ ವೃತ್ತಿಪರ ಸಿಬ್ಬಂದಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಭಾರತೀಯ ಮೂಲದ ಗೆಳತಿ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗ್ಲೆನ್ ಮ್ಯಾಕ್ಸ್‌ವೆಲ್

    ಕಾರ್ನೆಲ್ ವಿಶ್ವವಿದ್ಯಾಲಯದಲ್ಲಿ ಇಂಜಿನಿಯರಿಂಗ್ ಬಿಎಸ್ ಪದವಿಯನ್ನು ಪಡೆದು, ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ವ್ಯವಹಾರ (ಇಂಟರ್‌ನ್ಯಾಷನಲ್ ಅಫರ‍್ಸ್)ಗಳಲ್ಲಿ ಎಂಎ ವ್ಯಾಸಂಗ ಮಾಡಿದ್ದಾರೆ.

    ಮಾರ್ಚ್ 11 ರಂದು ಬೈಡೆನ್ ಭಾರತೀಯ ಮೂಲದ ರಾಜಕೀಯ ಕಾರ್ಯಕರ್ತೆ ಶೆಫಾಲಿ ರಜ್ದಾನ್ ದುಗ್ಗಾಲ್ ಅವರನ್ನು ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿಯಾಗಿ ನಾಮನಿರ್ದೇಶನ ಮಾಡಿದ್ದರು. ಶೆಫಾಲಿ ಭಾರತದ ಕಾಶ್ಮೀರದಿಂದ ಅಮೆರಿಕಗೆ ತಮ್ಮ ಸಣ್ಣ ಪ್ರಾಯದಲ್ಲಿಯೇ ವಲಸೆ ಹೋಗಿದ್ದರು. ಶೆಫಾಲಿ ಸಿನ್ಸಿನಾಟಿ, ಚಿಕಾಗೋ, ನ್ಯೂಯಾರ್ಕ್ ಹಾಗೂ ಬೋಸ್ಟನ್ ನಗರಗಳಲ್ಲಿ ಬೆಳೆದಿದ್ದರು.

  • ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿಯಾಗಿ ಭಾರತ ಮೂಲದ ಮಹಿಳೆ ನಾಮನಿರ್ದೇಶನ

    ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿಯಾಗಿ ಭಾರತ ಮೂಲದ ಮಹಿಳೆ ನಾಮನಿರ್ದೇಶನ

    ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಶುಕ್ರವಾರ ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿಯಾಗಿ ಭಾರತ ಮೂಲದ ಸಾಮಾಜಿಕ ಕಾರ್ಯಕರ್ತೆ ಶೆಫಾಲಿ ರಜ್ದಾನ್ ದುಗ್ಗಾಲ್(Shefali Razdan Duggal) ಅವರನ್ನು ನಾಮನಿರ್ದೇಶನ ಮಾಡಿದ್ದಾರೆ.

    ಭಾರತದ ಕಾಶ್ಮೀರ ಮೂಲದ ಶೆಫಾಲಿ ತಮ್ಮ ಚಿಕ್ಕ ಪ್ರಾಯದಲ್ಲೇ ಅಮೆರಿಕಗೆ ಹೋಗಿ, ಅಲ್ಲಿ ಸಿನ್ಸಿನಾಟಿ, ಚಿಕಾಗೊ, ನ್ಯೂಯಾರ್ಕ್ ಹಾಗೂ ಬೋಸ್ಟನ್ ನಗರಗಳಲ್ಲಿ ಬೆಳೆದರು.

    ಶೆಫಾಲಿ ತಮ್ಮ 50ನೇ ವಸಂತದಲ್ಲಿದ್ದು, ಇಬ್ಬರು ಮಕ್ಕಳ ತಾಯಿಯಾಗಿದ್ದಾರೆ. ಇವರು ಅನುಭವಿ ರಾಜಕೀಯ ಕಾರ್ಯಕರ್ತೆ, ಮಹಿಳಾ ಹಕ್ಕುಗಳ ವಕೀಲೆ ಹಾಗೂ ಮಾನವ ಹಕ್ಕುಗಳ ಪ್ರಚಾರಕಿ ಎಂದು ಶ್ವೇತಭವನ ಶುಕ್ರವಾರ ತಿಳಿಸಿದೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಸಿನಿಮಾ: ಕ್ಷಮೆ ಕೋರಿದ ಪ್ರಕಾಶ್ ಬೆಳವಾಡಿ

    ಸ್ಯಾನ್ ಫ್ರಾನ್ಸಿಸ್ಕೋ ಸಮಿತಿಯ ಸದಸ್ಯೆಯಾಗಿರುವ ದುಗ್ಗಾಲ್ ವಾಕ್ ಫಾರೆಸ್ಟ್ ವಿಶ್ವವಿದ್ಯಾಲಯದ ಲೀಡರ್‌ಶಿಪ್, ಕ್ಯಾರೆಕ್ಟರ್ ಕೌನ್ಸಿಲ್‌ನ ಸದಸ್ಯರೂ ಆಗಿದ್ದಾರೆ. ರಾಷ್ಟ್ರೀಯ ನಾಮನಿರ್ದೇಶಕರ ಮಂಡಳಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

    ನ್ಯೂಯಾರ್ಕ್ ವಿಶ್ವವಿದ್ಯಾಲಯದಲ್ಲಿ ಎಮ್‌ಎ ಪೊಲಿಟಿಕಲ್ ಕಮ್ಯೂನಿಕೇಶನ್ (ರಾಜಕೀಯ ಸಂವಹನ) ಪದವೀಧರರಾಗಿರುವ ಶೆಫಾಲಿ, ಮಿಯಾಮಿ ವಿಶ್ವವಿದ್ಯಾಲಯದಲ್ಲಿ ಮಾಸ್ ಕಮ್ಯುನಿಕೇಶನ್ (ಸಮೂಹ ಸಂವಹನ) ವ್ಯಾಸಂಗವನ್ನೂ ಮಾಡಿದ್ದಾರೆ.

    ಶೆಫಾಲಿ 2008ರಲ್ಲಿ ಬರಾಕ್ ಒಬಾಮಾ ಅವರ ಅಧ್ಯಕ್ಷೀಯ ಪ್ರಚಾರದಲ್ಲಿ ಸಕ್ರಿಯರಾಗಿದ್ದರು. ಹಿಲರಿ ಕ್ಲಿಂಟನ್‌ರ ಅಧ್ಯಕ್ಷೀಯ ಪ್ರಚಾರದೊಂದಿಗೂ ಸಂಬಂಧ ಹೊಂದಿದ್ದರು. ಹೀಗೆ ರಾಜಕೀಯ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿದ್ದ ಇವರನ್ನು ಉತ್ತರ ಕ್ಯಾಲಿಫೋರ್ನಿಯಾ ಸ್ಟೀರಿಂಗ್ ಸಮಿತಿ ಹಾಗೂ ವುಮೆನ್ ಫಾರ್ ಹಿಲರಿ ಸಮಿತಿಯ ಸದಸ್ಯರನ್ನಾಗಿ ಮಾಡಲಾಗಿತ್ತು.

  • ಪ್ಯಾಲೆಸ್ತೀನ್‌ ಕಚೇರಿ ಒಳಗಡೆಯೇ ಭಾರತೀಯ ರಾಯಭಾರಿ ನಿಗೂಢ ಸಾವು

    ಪ್ಯಾಲೆಸ್ತೀನ್‌ ಕಚೇರಿ ಒಳಗಡೆಯೇ ಭಾರತೀಯ ರಾಯಭಾರಿ ನಿಗೂಢ ಸಾವು

    ರಾಮಲ್ಲಾ: ಪ್ಯಾಲೆಸ್ತೀನ್‌ನಲ್ಲಿದ್ದ ಭಾರತೀಯ ರಾಯಭಾರಿ ಮುಕುಲ್ ಆರ್ಯ ಅವರು ರಾಮಲ್ಲಾದಲ್ಲಿರುವ ರಾಯಭಾರ ಕಚೇರಿಯಲ್ಲಿ ಭಾನುವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

    ಆರ್ಯ ರಾಯಭಾರ ಕಚೇರಿಯೊಳಗೆ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿನ ಬಗ್ಗೆ ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ ಪ್ಯಾಲೆಸ್ಟೈನ್‌ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಉಕ್ರೇನ್‌ ದೇಶವಾಗಿ ಉಳಿಯುವುದೇ ಅನುಮಾನ: ಪುಟಿನ್‌ ನೇರ ಎಚ್ಚರಿಕೆ

    ಆರ್ಯ ಅವರ ನಿಧನಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಆಘಾತ ವ್ಯಕ್ತಪಡಿಸಿದ್ದಾರೆ. “ರಾಮಲ್ಲಾದಲ್ಲಿ ಭಾರತದ ಪ್ರತಿನಿಧಿಯಾದ ಮುಕುಲ್ ಆರ್ಯ ಅವರ ನಿಧನದ ಬಗ್ಗೆ ತಿಳಿದು ತೀವ್ರ ಆಘಾತವಾಗಿದೆ. ಅವರು ಪ್ರತಿಭಾವಂತ ಅಧಿಕಾರಿಯಾಗಿದ್ದರು” ಎಂದು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಯುದ್ಧ ಯಾರಿಗೂ ಬೇಡ ಎಂಬುದನ್ನು ಪುಟಿನ್‍ಗೆ ಅರ್ಥ ಮಾಡಿಸಿ: ಮೋದಿ ಬಳಿ ಉಕ್ರೇನ್‌ ಮನವಿ 

    ಈ ಸುದ್ದಿ ಬಂದ ತಕ್ಷಣ, ಅಧ್ಯಕ್ಷ ಮಹಮೂದ್ ಅಬ್ಬಾಸ್ ಮತ್ತು ಪ್ರಧಾನ ಮಂತ್ರಿ ಡಾ. ಮುಹಮ್ಮದ್ ಶ್ತಯ್ಯೆ ಅವರು ಆರೋಗ್ಯ ಮತ್ತು ಫೋರೆನ್ಸಿಕ್ ಮೆಡಿಸಿನ್ ಸಚಿವಾಲಯದ ಜೊತೆಗೆ ಎಲ್ಲಾ ಭದ್ರತೆ, ಪೊಲೀಸ್ ಮತ್ತು ಸಾರ್ವಜನಿಕ ಅಧಿಕಾರಿಗಳಿಗೆ ತಕ್ಷಣದ ಸೂಚನೆಗಳನ್ನು ನೀಡಿದ್ದಾರೆ. ಭಾರತೀಯ ರಾಯಭಾರಿಯ ನಿವಾಸದ ಸ್ಥಳ, ಸಾವಿನ ಪ್ರಕರಣವನ್ನು ತನಿಖೆ ನಡೆಸಲಾಗುತ್ತದೆ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುತ್ತದೆ ಪ್ಯಾಲೆಸ್ತೀನ್‌ ಸರ್ಕಾರ ತಿಳಿಸಿದೆ.

    2008ನೇ ಬ್ಯಾಚಿನ ಐಎಫ್‌ಎಸ್‌ ಅಧಿಕಾರಿಯಾಗಿದ್ದ ಆರ್ಯ ವಿದೇಶಾಂಗ ವ್ಯವಹಾರ ಸಚಿವಾಲಯದ ಅಧಿಕಾರಿಯಾಗಿ, ಯುನೆಸ್ಕೋ ಭಾರತ ನಿಯೋಗದ ಕಾಯಂ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

  • ಊರ್ವಶಿ ರೌಟೇಲಾ ಜಲ ಸಂರಕ್ಷಣೆ ಅಭಿಯಾನದ ರಾಯಭಾರಿ

    ಊರ್ವಶಿ ರೌಟೇಲಾ ಜಲ ಸಂರಕ್ಷಣೆ ಅಭಿಯಾನದ ರಾಯಭಾರಿ

    ನವದೆಹಲಿ: ನಟಿ ಊರ್ವಶಿ ರೌಟೇಲಾರನ್ನು ಮಿಷನ್ ಪಾನಿ ಜಲಶಕ್ತಿ, ಜಲ ಸಂರಕ್ಷಣೆ ಅಭಿಯಾನದ ರಾಯಭಾರಿಯಾಗಿ ಅಯ್ಕೆ ಮಾಡಲಾಗಿದೆ.

    ಊರ್ವಶಿ ರೌಟೇಲಾ ಫೌಂಡೇಶನ್ ಮೂಲಕವಾಗಿ ನೀರಿನ ಬಿಕ್ಕಟ್ಟಿನ ವಿರುದ್ಧ ಹೋರಾಡಿದ್ದಾರೆ. ತಮ್ಮ ಪೋಷಕರೊಂದಿಗೆ ಸ್ಥಾಪಿಸಿದ್ದ ಸಂಸ್ಥೆ ಉತ್ತರಾಖಂಡ್, ಪೌರಿ, ಗರ್ವಲ್ ಮತ್ತು ಹರಿದ್ವಾರದ ನೂರಾರು ಸಮುದಾಯಗಳಿಗೆ ಶುದ್ಧ ಮತ್ತು ಸುರಕ್ಷಿತ ನೀರು ಪಡೆಯಲು ಸಹಾಯ ಮಾಡಿದೆ. ಈ ಎಲ್ಲವನ್ನು ಗಮನಿಸಿದ ಕೇಂದ್ರ ಸರ್ಕಾರ ಊರ್ವಶಿಯವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿದೆ. ಇದನ್ನೂ ಓದಿ:  ಮಗಳ ವಿಚಾರದಲ್ಲಿ ನಮ್ಮ ನಿರ್ಧಾರ, ಮನವಿ ಮೊದಲಿನಂತೆಯೇ ಇರಲಿದೆ: ಅನುಷ್ಕಾ ಶರ್ಮಾ

    ನನ್ನ ಜೀವನದಲ್ಲಿ ಈ ಎಲ್ಲಾ ವಿಶ್ವ ದರ್ಜೆಯ ಅವಕಾಶಗಳನ್ನು ಸ್ವೀಕರಿಸುತ್ತಿರುವುದಕ್ಕೆ ಕೃತಜ್ಞಳಾಗಿದ್ದೇನೆ. ಕೇಂದ್ರ ಸರ್ಕಾರ ನನಗೆ ಹೊಸ ಅವಕಾಶವನ್ನು ನೀಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖವತ್ ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಸಂತೋಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಹಸೆಮಣೆ ಏರಲು ಸಿದ್ಧರಾದ ವಜ್ರಕಾಯ ಬೆಡಗಿ ಶುಭ್ರಾ ಅಯ್ಯಪ್ಪ

    ಮಿಸ್ ಯೂನಿವರ್ಸ್ 2021ರ ತೀರ್ಪುಗಾರರಿಂದ ಆರಂಭಗೊಂಡು ದಾದಾ ಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಜ್ಯೂರಿ ಆಗಿ ಕೆಲಸ ಮಾಡಿದ್ದಾರೆ. ಊರ್ವಶಿ ಅವರು  ‘ದಿ ಲೆಜೆಂಡ್’ ಮೂಲಕ ತಮಿಳಿಗೆ ಪಾದಾರ್ಪಣೆ ಮಾಡಲಿದ್ದಾರೆ. ಹಾಗೇ ಜಲಶಕ್ತಿ ಅಭಿಯಾನದ ರಾಯಭಾರಿಯಾಗಿ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಳ್ಳಲಿದ್ದಾರೆ.

  • ಜಾಗತಿಕ ಪೌರತ್ವ ರಾಯಭಾರಿಯಾದ ರವಿಶಂಕರ್ ಗುರೂಜಿ

    ಜಾಗತಿಕ ಪೌರತ್ವ ರಾಯಭಾರಿಯಾದ ರವಿಶಂಕರ್ ಗುರೂಜಿ

    ವಾಷಿಂಗ್ಟನ್: ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರನ್ನು ಅಮೆರಿಕ ನಾರ್ತ್ ಈಸ್ಟರ್ನ್ ಯುನಿವರ್ಸಿಟಿ ಸೆಂಟರ್ ಫಾರ್ ಸ್ಪಿರಿಚುವಲ್ ಡಯಲಾಗ್ ಮತ್ತು ಸರ್ವಿಸ್ ಗುರೂಜಿ ಅವರನ್ನು ತನ್ನ ಸಂಸ್ಥೆಯ ಜಾಗತಿಕ ಪೌರತ್ವ ರಾಯಭಾರಿ ಎಂದು ಗುರುತಿಸಿದೆ.

    ಅಫ್ಗಾನಿಸ್ತಾನ, ಬ್ರೆಜಿಲ್, ಕ್ಯಾಮರೂನ್, ಕೊಲಂಬಿಯಾ, ಭಾರತ, ಇಂಡೊನೇಷ್ಯಾ, ಇರಾಕ್, ಇಸ್ರೇಲ್, ಕಿನ್ಯಾ, ಕೊಸೊವೊ, ಲೆಬನಾನ್, ಮಾರಿಷಸ್, ಮೊರಾಕೊ, ನೇಪಾಳ, ಪಾಕಿಸ್ತಾನ, ರಷ್ಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ಅಮೆರಿಕದಲ್ಲಿ ಸಂಘರ್ಷ ಪರಿಹಾರಕ್ಕಾಗಿ ಅವರು ಕೆಲಸ ಮಾಡಿದ್ದಾರೆ ಎಂದು ವಿಶ್ವವಿದ್ಯಾಲಯ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಆಧ್ಯಾತ್ಮಿಕ ಸಲಹೆಗಾರ ಅಲೆಕ್ಸಾಂಡರ್ ಡೆಲಿವರಿ ಕರ್ನ್ ಹೇಳಿದ್ದಾರೆ.

    ರವಿಶಂಕರ್ ಗೂರುಜಿ ಅವರು ಶಾಂತಿ ಸ್ಥಾಪಿಸಲು ಹಾಗೂ ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ಗೌರವಿಸಲಾಗಿದೆ. ನಾವು ರವಿಶಂಕರ್ ಗುರೂಜಿ ಅವರಿಗೆ ಕೃತಜ್ಞರಾಗಿದ್ದೇವೆ. ಮಾನವೀಯ ಮೌಲ್ಯಗಳನ್ನು ಸಾಕಾರಗೊಳಿಸಿದ ಅತ್ಯುತ್ತಮ ವ್ಯಕ್ತಿಯ ಮೂಲಕ ನಾವು ಜಾಗತಿಕ ಪೌರತ್ವ ರಾಯಭಾರಿಯನ್ನು ಗುರುತಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ, ಎಂದು ಅಲೆಕ್ಸಾಂಡರ್ ಡೆಲಿವರಿ ಕರ್ನ್ ಹೇಳಿದ್ದಾರೆ.

  • ನನ್ನೂರಿನ ಅಭಿವೃದ್ಧಿಗೆ ನಾನು ಸದಾ ಸಿದ್ಧ: ಪುನೀತ್ ರಾಜ್‍ಕುಮಾರ್

    ನನ್ನೂರಿನ ಅಭಿವೃದ್ಧಿಗೆ ನಾನು ಸದಾ ಸಿದ್ಧ: ಪುನೀತ್ ರಾಜ್‍ಕುಮಾರ್

    ಚಾಮರಾಜನಗರ: ನಮ್ಮ ಚಾಮರಾಜನಗರದ ರಾಯಭಾರಿಯಾಗಲು ನಾನು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಹೇಳಿದ್ದಾರೆ.

    ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಜಿಲ್ಲಾಡಳಿತ ಸಿದ್ಧಪಡಿಸಿರುವ ನಾಲ್ಕು ನಿಮಿಷದ ವಿಡಿಯೋವನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ವಚ್ರ್ಯುವಲ್ ಮೂಲಕ ಕಾರ್ಯಕ್ರಮದಲ್ಲಿ ಮಾತನಾಡಿದ ಪುನೀತ್, ಚಾಮರಾಜನಗರದ ರಾಯಭಾರಿಯಾಗಲು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ. ನನ್ನ ತಂದೆಯ ಊರಾದ ಚಾಮರಾಜನಗರದ ಅಭಿವೃದ್ಧಿಗೆ ಸದಾ ಸಿದ್ಧ. ನಮ್ಮ ರಾಜ್ಯ-ನಮ್ಮ ದೇಶ ಚೆನ್ನಾಗಿ ಬೆಳೆಯಬೇಕು ಎಂದು ಆಶಿಸಿದರು.

    ಚಾಮರಾಜನಗರದ ಬಗ್ಗೆ ತಿಳಿದುಕೊಳ್ಳಲು ಹೆಚ್ಚು ಉತ್ಸುಕನಾಗಿದ್ದೇನೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಕೈಜೋಡಿಸುತ್ತೇನೆ. ಜಿಲ್ಲೆಯ ಸೌಂದರ್ಯವನ್ನು ಹೊರಭಾಗದ ಜನರಿಗೆ ತಲುಪಿಸಿ ಒಮ್ಮೆಯಾದರೂ ಭೇಟಿಕೊಡಬೇಕು ಎಂದನಿಸುವಂತೆ ಮಾಡಬೇಕು. ಚಿತ್ರೀಕರಣ ಇಲ್ಲದಿದ್ದರೇ ನೇರವಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೆ ಎಂದು ತಿಳಿಸಿ ಇದೇ ವೇಳೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.

  • ಗಾಯದ ನೋವಿನಲ್ಲಿ ಕರ್ತವ್ಯ ಮೆರೆದ ನಟ ದರ್ಶನ್

    ಗಾಯದ ನೋವಿನಲ್ಲಿ ಕರ್ತವ್ಯ ಮೆರೆದ ನಟ ದರ್ಶನ್

    ಬೆಂಗಳೂರು: ಚಾಲೆಂಜಿಂಗ್ ದರ್ಶನ್ ಅವರಿಗೆ ಕಾರ್ ಅಪಘಾತ ಸಂಭವಿಸಿದ್ದು ಈಗ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಗಾಯದ ನೋವಿನಲ್ಲೂ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದಾರೆ.

    ದರ್ಶನ್ ಅವರು ಅರಣ್ಯ ಇಲಾಖೆಯ ರಾಯಭಾರಿಯಾಗಿದ್ದಾರೆ. ಆದ ಕಾರಣ ಅವರು ಆಗಾಗ ಅರಣ್ಯಗಳಿಗೆ ಹೋಗಿ ಪ್ರಾಣಿ, ಪಕ್ಷಿ ಮತ್ತು ಪ್ರಕೃತಿಯನ್ನು ವೀಕ್ಷಣೆ ಮಾಡಬೇಕು. ಇದು ಅವರ ಕರ್ತವ್ಯ ಕೂಡ ಆಗಿದೆ. ಆದರೆ ಇತ್ತೀಚೆಗೆ ದರ್ಶನ್ ಅವರಿಗೆ ಕಾರ್ ಅಪಘಾತವಾಗಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದರು. ಆದ್ದರಿಂದ ಅವರು ಅರಣ್ಯವನ್ನು ವೀಕ್ಷಣೆ ಮಾಡಲು ಸಾಧ್ಯವಾಗಲಿಕ್ಕಿಲ್ಲ ಎಂದು ಹೇಳಲಾಗುತ್ತಿತ್ತು.

    ಆದರೆ ನಟ ದರ್ಶನ್ ತಮ್ಮ ಗಾಯದ ನೋವಿನಲ್ಲೂ ಕಾಡಿಗೆ ಹೋಗಿ ವೀಕ್ಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕೈಯಲ್ಲಿ ಕ್ಯಾಮೆರಾ ಹಿಡಿದು ಪ್ರಕೃತಿಯ ಸೊಬಗನ್ನು ಸೆರೆ ಹಿಡಿದಿದ್ದಾರೆ. ಸಂತಸದಿಂದ ಅರಣ್ಯದಲ್ಲಿ ಸುತ್ತಾಡಿದ್ದಾರೆ. ಅರಣ್ಯದಲ್ಲಿ ಸುತ್ತಾಡುತ್ತಿದ್ದ ಫೋಟೋಗಳನ್ನು ಅವರ ಅಭಿಮಾನಿಗಳು ತೆಗೆದು ಟ್ಟಿಟ್ಟರ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.

    ದರ್ಶನ್ ಅವರ ಫೋಟೋಗಳನ್ನು ನೋಡಿ ಅಭಿಮಾನಿಗಳು ಗಾಯದ ನಡುವೆಯೂ ಡಿ ಬಾಸ್ ಅರಣ್ಯ ರಾಯಭಾರಿಯಾಗಿ ವೀಕ್ಷಣೆ ಮಾಡಲು ಮೂಲಕ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದಾರೆ ಎಂದು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

    ದರ್ಶನ್ ಅವರಿಗೆ ಕಾಡು ಹಾಗೂ ವನ್ಯಜೀವಿಗಳ ಬಗ್ಗೆ ಸಾಕಷ್ಟು ಪ್ರೀತಿ ತೋರಿಸುತ್ತಾರೆ. ಹಾಗಾಗಿ ಅವರನ್ನು ಕರ್ನಾಟಕದಲ್ಲಿ ಅರಣ್ಯ ಇಲಾಖೆಯ ರಾಯಭಾರಿಯಾಗಿ ಆಯ್ಕೆ ಮಾಡಿದ್ದರು. ಅರಣ್ಯ ಇಲಾಖೆಯ ರಾಯಭಾರಿಯಾದ ಕಾರಣ ದರ್ಶನ್ ಅವರು ವನ್ಯಜೀವಿ ಹಾಗೂ ಅರಣ್ಯ ಸಂರಕ್ಷಣೆಯ ಸಂದೇಶ ಸಾರುವ ಕೆಲಸವನ್ನು ಮಾಡಬೇಕು. ಜೊತೆಗೆ ಅರಣ್ಯಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಬೇಕಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://twitter.com/DarshanFc171/status/1058577636111335425

  • ನೇಪಾಳ ರಾಯಭಾರಿಯಾದ ಬಾಲಿವುಡ್ ನಟಿ ಜಯಪ್ರದಾ

    ನೇಪಾಳ ರಾಯಭಾರಿಯಾದ ಬಾಲಿವುಡ್ ನಟಿ ಜಯಪ್ರದಾ

    ನವದೆಹಲಿ: ಮಾಜಿ ಸಂಸತ್ ಸದಸ್ಯೆ ಹಾಗೂ ಬಾಲಿವುಡ್‍ನ ಖ್ಯಾತ ನಟಿ ಜಯಪ್ರದಾ ಅವರನ್ನು ನೇಪಾಳ ಸರ್ಕಾರ ಸೌಹಾರ್ದ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿದೆ.

    ಸೌಹಾರ್ದ ರಾಯಭಾರಿಯನ್ನಾಗಿ ನಟಿ ಜಯಪ್ರದಾರವರನ್ನು ಆಯ್ಕೆಮಾಡುವ ಬಗ್ಗೆ ನೇಪಾಳ ಸರ್ಕಾರ ಸಂಸತ್ತಿನಲ್ಲಿ ವಿಚಾರ ಪ್ರಸ್ತಾಪಿಸಿತ್ತು. ಇದಕ್ಕೆ ಎಲ್ಲಾ ಸದಸ್ಯರು ಸರ್ವಾನುಮತದಿಂದ ಆಯ್ಕೆಮಾಡಿ ನೇಪಾಳ ಸರ್ಕಾರದ ಸೌಹಾರ್ದ ರಾಯಭಾರಿಯನ್ನಾಗಿ ನಟಿ ಜಯಪ್ರದಾರವರನ್ನು ಅಂಗೀಕರಸಿದೆ.

    ಜಯಪ್ರದಾ ಅವರು ರಾಯಭಾರಿ ಹುದ್ದೆಗೆ ನಾಮನಿರ್ದೇಶನದಿಂದಾಗಿ ನೆರೆಹೊರೆ ರಾಷ್ಟ್ರಗಳ ನಡುವಿನ ಹಳೆಯ ಸಾಂಸ್ಕೃತಿಕ ಸಂಬಂಧ ಮತ್ತಷ್ಟು ಬಲಗೊಳಿಸುವ ಹಾಗೂ ನೇಪಾಳದ ಪ್ರವಾಸೋದ್ಯಮ ಇಲಾಖೆಯನ್ನು ಭಾರತದಲ್ಲಿ ಉತ್ತೇಜಿಸಲು ನೆರವಾಗಲಿದೆ. ಒಟ್ಟು ನಾಲ್ಕು ವರ್ಷಗಳ ಕಾಲ ಜಯಪ್ರದಾ ಅವರು ನೇಪಾಳದ ರಾಯಭಾರಿಗಳಾಗಲಿದ್ದಾರೆ ಎನ್ನಲಾಗಿದೆ.

    ಆದಾಯ ಮತ್ತು ಉದ್ಯೋಗ ಸೃಷ್ಟಿಯಲ್ಲಿ ನೇಪಾಳಕ್ಕೆ ಪ್ರವಾಸೋದ್ಯಮವೇ ಮೂಲ ಆಧಾರವಾಗಿದೆ. ಅಲ್ಲದೇ ಭಾರತದ ಪ್ರವಾಸಿಗರು ನೇಪಾಳದ ಪ್ರಮುಖ ಗ್ರಾಹಕರಾಗಿದ್ದಾರೆ. ಹೀಗಾಗಿ ಪ್ರವಾಸೋದ್ಯಮವನ್ನು ಸೆಳೆಯುವ ಹಾಗೂ ಪ್ರೋತ್ಸಾಹಿಸುವ ದೃಷ್ಟಿಯಿಂದ ನೇಪಾಳ ಸರ್ಕಾರವು 2020ರ ವರ್ಷವನ್ನು ವಿಸಿಟ್ ನೇಪಾಳ ಇಯರ್ ಎಂಬ ಅಡಿಬರಹದ ಯೋಜನೆಯನ್ನು ಹಮ್ಮಿಕೊಂಡಿದೆ. ಈ ಮೂಲಕ ನೇಪಾಳಕ್ಕೆ ಭೇಟಿ ನೀಡುವ ಪ್ರವಾಸಿಗರನ್ನು ಆಕರ್ಷಿಸುವಂತೆ ಮಾಡಿದೆ. ಈ ಯೋಜನೆ ಮೂಲಕ ಸುಮಾರು 20 ಲಕ್ಷ ಪ್ರವಾಸಿಗರನ್ನು ಸೆಳೆಯುವ ಉದ್ದೇಶವನ್ನು ಪ್ರವಾಸೋದ್ಯಮ ಇಲಾಖೆ ಹೊಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚಾಲೆಂಜಿಂಗ್ ಸ್ಟಾರ್ ಹೆಗಲ ಮೇಲೆ ಮತ್ತೊಂದು ಜವಾಬ್ದಾರಿ!

    ಚಾಲೆಂಜಿಂಗ್ ಸ್ಟಾರ್ ಹೆಗಲ ಮೇಲೆ ಮತ್ತೊಂದು ಜವಾಬ್ದಾರಿ!

    ಬೆಂಗಳೂರು: ಪ್ರಾಣಿ ಪಕ್ಷಿಗಳನ್ನು ತುಂಬಾನೇ ಇಷ್ಟಪಡುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಮೈಸೂರು ಮೃಗಾಲಯದ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ.

    ದರ್ಶನ್ ಕಾಡು ಹಾಗೂ ವನ್ಯಜೀವಿಗಳ ಬಗ್ಗೆ ಸಾಕಷ್ಟು ಪ್ರೀತಿ ತೋರಿಸುತ್ತಾರೆ. ಹಾಗಾಗಿ ಅವರನ್ನು ಅರಣ್ಯ ಇಲಾಖೆಯ ರಾಯಭಾರಿಯಾಗಿ ಆಯ್ಕೆ ಮಾಡಿದ್ದು, ಇನ್ನು ಮುಂದೆ ವನ್ಯಜೀವಿ ಹಾಗೂ ಅರಣ್ಯ ಸಂರಕ್ಷಣೆಯ ಸಂದೇಶ ಸಾರುವ ಕೆಲಸವನ್ನು ಮಾಡಲಿದ್ದಾರೆ.

    ದರ್ಶನ್ ತಮ್ಮದೇ ಫಾರ್ಮ್‍ನಲ್ಲಿ ಹಲವಾರು ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಅಲ್ಲದೇ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಹುಲಿ ಮತ್ತು ಆನೆ ಪ್ರಾಣಿಗಳನ್ನು ದತ್ತು ಪಡೆದು ಆ ಪ್ರಾಣಿಗಳ ಪಾಲನೆಗೆ ಸಹಾಯ ಮಾಡುತ್ತಿದ್ದಾರೆ.

    ದರ್ಶನ್ ಅವರ ಈ ಗುಣವನ್ನು ಗಮನಿಸಿದ ಅರಣ್ಯ ಇಲಾಖೆ ಗುಜರಾತ್‍ನಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್ ರಾಯಭಾರಿರಾಗಿ ನೇಮಕ ಮಾಡಿದಂತೆ ಕರ್ನಾಟಕದಲ್ಲಿ ಚಾಲೆಂಜಿಂಗ್ ಸ್ಟಾರ್ ಅವರನ್ನು ನೇಮಕ ಮಾಡಿದ್ದಾರೆ. ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್ ಅವರಿಗೆ ರಾಯಭಾರಿಯಾಗಿ ನೇಮಕಗೊಂಡಿರುವ ಪತ್ರವನ್ನು ನೀಡಿದ್ದಾರೆ.

    ಇನ್ನೂ ಮುಂದೆ ದರ್ಶನ್ ವಿಶ್ವಭೂಮಿ ದಿನಾಚರಣೆ, ಪರಿಸರ ದಿನಾಚರಣೆ, ವನ ಮಹೋತ್ಸವ ಹಾಗೂ ಉಳಿದ ಅರಣ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.

    ಸದ್ಯ ದರ್ಶನ್ ಮೈಸೂರು ಮೃಗಾಲಯದ ರಾಯಭಾರಿ ಆಗೋಕ್ಕೆ ಒಪ್ಪಿಕೊಂಡಿದ್ದಾರೆ. ಈಗಾಗಲೇ ದರ್ಶನ್ ಕಾಡ್ಗಿಚ್ಚು ಹಾಗೂ ಅರಣ್ಯ ಸಂರಕ್ಷಣೆ ಬಗ್ಗೆ 90 ನಿಮಿಷಗಳ ಸಾಕ್ಷ್ಯ ಚಿತ್ರದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ: ಬಹಿರಂಗವಾಗಿ ಪತ್ನಿ ಮೇಲೆ ಪ್ರೀತಿ ತೋರಿಸಿದ ಸಿದ್ದರಾಮಯ್ಯ!

  • ಪಾಕ್‍ನಲ್ಲಿ ಅಡುಗೆ ಕೆಲಸ ಮಾಡಿ ಭಾರತದ ರಹಸ್ಯವನ್ನು ಐಎಸ್‍ಐಗೆ ತಿಳಿಸಿದ!

    ಪಾಕ್‍ನಲ್ಲಿ ಅಡುಗೆ ಕೆಲಸ ಮಾಡಿ ಭಾರತದ ರಹಸ್ಯವನ್ನು ಐಎಸ್‍ಐಗೆ ತಿಳಿಸಿದ!

    ಡೆಹ್ರಾಡೂನ್: ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಉತ್ತರಪ್ರದೇಶದ ಭಯೋತ್ಪಾದನ ನಿಗ್ರಹ ದಳ(ಎಟಿಎಸ್) ಬಂಧಿಸಿದೆ.

    ಆರೋಪಿಯನ್ನು ಉತ್ತರಾಖಂಡದ ಪಿತ್ತೋರ್‍ಗಢ ಜಿಲ್ಲೆಯ ಕಿರೊಲಾ ಗ್ರಾಮದ ರಮೇಶ್ ಸಿಂಗ್ ಕನ್ಯಾಲ್ (43) ಎಂದು ಗುರುತಿಸಲಾಗಿದೆ. ಅವನು ಪಾಕಿಸ್ತಾನದ ಇಂಟರ್ ಸರ್ವೀಸ್ ಇಂಟೆಲಿಜೆನ್ಸ್‍ಗೆ (ಐಎಸ್‍ಐ)ಗೆ ರಾಷ್ಟ್ರೀಯ ಭದ್ರತಾ ಮಾಹಿತಿಯನ್ನು ನೀಡುತ್ತಿದ್ದ ಎಂದು ವರದಿಯಾಗಿದೆ.

    ಉತ್ತರ ಪ್ರದೇಶದ ಎಟಿಎಸ್‍ನ ಐದು ಜನರ ತಂಡವು ಆರೋಪಿಯನ್ನು ಆತನ ಮನೆಗೆ ತೆರಳಿ ಬಂಧಿಸಿದೆ. ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ ಹೆಚ್ಚಿನ ವಿಚಾರಣೆಗೆ ಎಟಿಎಸ್ ಕಸ್ಟಡಿಗೆ ನೀಡಿದೆ.

    ಬೇಹುಗಾರಿಕೆ ನಡೆಸುತ್ತಿದ್ದ ಅನುಮಾನದ ಮೇಲೆ ಆತನನ್ನು ಬಂಧಿಸಲಾಗಿದೆ ಎಂದು ಎಟಿಎಸ್‍ನ ಜನರಲ್ ಇನ್ಸ್ ಪೆಕ್ಟರ್ ಆಸೀಂ ಅರುಣ್ ತಿಳಿಸಿದ್ದಾರೆ. ಈ ಹಿಂದೆ ಪಾಕಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದ ಭಾರತದ ರಾಯಭಾರಿಯ ನಿವಾಸದಲ್ಲಿ ಅಡುಗೆ ಕೆಲಸಕ್ಕಾಗಿ ಆರೋಪಿಯನ್ನು ನಿಯೋಜಿಸಲಾಗಿತ್ತು. 2015 ರಿಂದ 2017ರ ವರೆಗೆ ಅಲ್ಲಿ ಕೆಲಸ ಮಾಡುತ್ತಿದ್ದಾಗ ಐಎಸ್‍ಐ ಈತನನ್ನು ಸಂಪರ್ಕಿಸಿ ಹಣದ ಆಸೆ ತೋರಿಸಿದೆ. ಈ ಆಸೆಗೆ ಬಲಿಯಾದ ಈತ ಭಾರತದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ಐಎಸ್‍ಐಗೆ ನೀಡುತ್ತಿದ್ದಾನೆ ಎನ್ನುವ ಖಚಿತ ಮಾಹಿತಿ ಪಿತ್ತೋರ್‍ಗಢ ಜಿಲ್ಲಾ ಪೊಲೀಸರಿಗೆ ಸಿಕ್ಕಿತ್ತು.

    ಸೇನೆಯ ಗುಪ್ತಚರ ಇಲಾಖೆ ಈತನ ಚಟುವಟಿಕೆಯ ಮೇಲೆ ಕಣ್ಣಿಟ್ಟ ಬಳಿಕ ಎಟಿಎಸ್‍ಗೆ ತಿಳಿಸಿತ್ತು. ಈಗ ಎಟಿಎಸ್ ರಮೇಶ್ ಸಿಂಗ್ ಕನ್ಯಾಲ್ ಬಳಿಯಿದ್ದ ಪಾಕಿಸ್ತಾನದ ಸಿಮ್ ಕಾರ್ಡ್ ಹಾಗೂ ಮೊಬೈಲ್‍ನ್ನು ವಶಪಡಿಸಿಕೊಂಡಿದೆ.

    ಆರೋಪಿ ಸಹೋದರ ಕೂಡ ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಕನ್ಯಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.