Tag: ರಾವಣ

  • ಪ್ರಧಾನಿ ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ: ಕಾಂಗ್ರೆಸ್‌ ನಾಯಕ

    ಪ್ರಧಾನಿ ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ: ಕಾಂಗ್ರೆಸ್‌ ನಾಯಕ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್‌ ನಾಯಕ ಉದಿತ್‌ ರಾಜ್‌ (Udit Raj ಹೇಳಿಕೆ ನೀಡಿದ್ದಾರೆ.

    ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ. ಅವರು ತಮ್ಮ ಚಿನ್ನದ ಅರಮನೆಯನ್ನು ನಿರ್ಮಿಸುತ್ತಿದ್ದಾರೆ. ಒಮ್ಮೆ ಅದನ್ನು ಪ್ರವೇಶಿಸಿದ ನಂತರ ಅದೇ ಚಿನ್ನದ ಅರಮನೆ ಉರಿದು ಹೋಗುವುದನ್ನು ನೋಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಅ.9 ರಂದು ಭಾರತಕ್ಕೆ ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ ಭೇಟಿ

    ದೆಹಲಿಯ ರಾವಣನನ್ನು ಸುಡಬೇಕು. ದೆಹಲಿಯ ರಾವಣನನ್ನು ಸುಡುವ ದಿನ ಹತ್ತಿರದಲ್ಲಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಪ್ರಧಾನಿ ಮೋದಿ ಹೆಚ್ಚು ಕಾಲ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ಶೀಘ್ರದಲ್ಲೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಹೇಳಿಕೆ ನೀಡಿದ್ದಾರೆ.

    ಕರ್ನಾಟಕದ ಉಪಮುಖ್ಯಮಂತ್ರಿ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದ ಕಾಂಗ್ರೆಸ್ ಶಾಸಕ ಹೆಚ್.ಡಿ.ರಂಗನಾಥ್‌ಗೆ ನೋಟಿಸ್‌ ಕುರಿತು ಮಾತನಾಡಿ, ಯಾವುದೇ ಸಂಘರ್ಷ ನಡೆಯುತ್ತಿಲ್ಲ. ಇದು ಎಲ್ಲಾ ಪಕ್ಷಗಳಲ್ಲೂ ನಡೆಯುತ್ತದೆ. ಕೆಲವರು ತಮ್ಮ ಆಪ್ತರನ್ನು ಹೊಗಳುತ್ತಾರೆ. ಇತರರು ಹಾಗೆಯೇ ಮಾಡುತ್ತಾರೆ. ಹಾಗಾದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಗ್ಗೆ ಕೆಲವು ಒಳ್ಳೆಯ ಮಾತುಗಳನ್ನು ಹೇಳಿದ್ದರೆ, ಅದು ನಿಜವಾಗಿಯೂ ಸಂಘರ್ಷ ಇದೆ ಎಂದರ್ಥವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪಾಕ್‌ನ ಪೇಶಾವರದಲ್ಲಿ ಬಾಂಬ್ ಸ್ಫೋಟ – 9 ಮಂದಿ ಸಾವು, ನಾಲ್ವರಿಗೆ ಗಾಯ

  • ಅಲ್ಲು ಅರ್ಜುನ್, ಪ್ರಶಾಂತ್ ನೀಲ್ ಕಾಂಬೋ ಸಿನಿಮಾದ ಟೈಟಲ್ ರಿವೀಲ್‌!

    ಅಲ್ಲು ಅರ್ಜುನ್, ಪ್ರಶಾಂತ್ ನೀಲ್ ಕಾಂಬೋ ಸಿನಿಮಾದ ಟೈಟಲ್ ರಿವೀಲ್‌!

    ಕೆಜಿಎಫ್ ಸರಣಿ ಸಿನಿಮಾಗಳ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಹಾಗೂ ಅಲ್ಲು ಅರ್ಜುನ್ (Allu Arjun) ಸಿನಿಮಾ ಮಾಡುತ್ತಾರೆ ಎನ್ನಲಾದ ಸುದ್ದಿ ಇದೀಗ ಪಕ್ಕಾ ಆಗಿದೆ. ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಒಟ್ಟಿಗೆ ಸಿನಿಮಾ ಮಾಡುವ ಸುದ್ದಿ ಹರಿದಾಡ್ತಿತ್ತು. ಇದೀಗ ಆ ಸುದ್ದಿಗೆ ಪುಷ್ಠಿ ಎಂಬಂತೆ ನಿರ್ಮಾಪಕ ದಿಲ್‌ರಾಜು (Dil Raju) ಹೇಳಿಕೆ ಕೊಟ್ಟಿದ್ದಾರೆ. ತಮ್ಮುಡು ಸಿನಿಮಾದ ಪ್ರಮೋಷನ್ ವೇಳೆ ಈ ವಿಚಾರವನ್ನ ಬಹಿರಂಗಪಡಿಸಿದ್ದಾರೆ.

    ಕೆಜಿಎಫ್ ಸಿನಿಮಾಗಳ (KGF) ಹಿಟ್‌ನ ನಂತರ ಪ್ರಶಾಂತ್ ನೀಲ್ ಟಾಲಿವುಡ್‌ನಲ್ಲಿ ಸಲಾರ್ ಸಿನಿಮಾ ಮಾಡಿದ್ದಾರೆ. ಇದಾದ ಬಳಿಕ ಟಾಲಿವುಡ್‌ನ ಯಂಗ್‌ಟೈಗರ್ ಜೂ.ಎನ್‌ಟಿಆರ್‌ಗೆ ಸಿನಿಮಾವನ್ನ ನಿರ್ದೇಶನ ಮಾಡುತ್ತಿದ್ದಾರೆ. ಬಳಿಕ ಪ್ರಭಾಸ್‌ಗೆ ಸಲಾರ್-2 ಸಿನಿಮಾ ಮಾಡುವ ಪ್ಲ್ಯಾನ್‌ ಮಾಡಿಕೊಂಡಿದ್ದಾರೆ. ಇದೆಲ್ಲ ಮುಗಿದ ನಂತರವಷ್ಟೇ ದಿಲ್‌ರಾಜು ಅವರ ನಿರ್ಮಾಣದಲ್ಲಿ ಪ್ರಶಾಂತ್ ನೀಲ್ ನಿರ್ದೇಶನ ಮಾಡಬೇಕಿದೆ.  ಇದನ್ನೂ ಓದಿ: 5 ದಿನಕ್ಕೆ 10 ಕೋಟಿ – ಇದು ಅಕ್ಷಯ್‌ ಕುಮಾರ್‌ ಕಾಲ್‌ ಶೀಟ್

    ಈ ಕಾರ್ಯಕ್ರಮದಲ್ಲಿ ಮಾತನಾಡಿದ ದಿಲ್ ರಾಜು, ನಮ್ಮ ಬ್ಯಾನರ್ ನಲ್ಲಿ ಅಲ್ಲು ಅರ್ಜುನ್ ನಾಯಕನಾಗಿ ಮತ್ತು ಪ್ರಶಾಂತ್ ನೀಲ್ ನಿರ್ದೇಶಕರಾಗಿ ರಾವಣಂ (Ravanam) ಚಿತ್ರ ತೆರೆಯ ಮೇಲೆ ಬರಲಿದೆ. ಈಗ ಇವರಿಬ್ಬರು ಬೇರೆ ಬೇರೆ ಚಿತ್ರಗಳಲ್ಲಿ ಬ್ಯುಸಿ ಇರುವ ಕಾರಣ ನಮ್ಮ ಸಿನಿಮಾ ಆರಂಭವಾಗಲು ಸಮಯ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

    ಅಲ್ಲು ಅರ್ಜುನ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್‌ನ ಸಿನಿಮಾಗೆ ತೆಲುಗಿನ ಖ್ಯಾತ ನಿರ್ಮಾಪಕ ಬಂಡವಾಳ ಹೂಡಲಿದ್ದು, ಈ ಸಿನಿಮಾ ಸೆಟ್ಟೇರಬೇಕಂದ್ರೆ ಹೆಚ್ಚು ಕಮ್ಮಿ ಅಂದ್ರೂ ಇನ್ನು ಎರಡು ವರ್ಷಗಳಾಗಬಹುದು ಎಂದಿದ್ದಾರೆ. ಇತ್ತ ಐಕಾನ್ ಸ್ಟಾರ್ ಕೂಡಾ ಅಟ್ಲಿ ಜೊತೆಗೆ ಸೂಪರ್‌ಮ್ಯಾನ್ ಕಾನ್ಸೆಪ್ಟ್‌ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಪುಷ್ಪಾ ಸಿನಿಮಾದ ಪಾರ್ಟ್-3 ಕೂಡಾ ಬ್ಯಾಲೆನ್ಸ್ ಇದೆ. ಇದನ್ನೂ ಓದಿರಾಮ್‌ಚರಣ್‌ಗೆ ಕ್ಷಮೆ ಕೇಳಿದ `ಗೇಮ್ ಚೇಂಜರ್’ ಪ್ರೊಡ್ಯೂಸರ್

    ಸದ್ಯಕ್ಕಂತೂ ಅಲ್ಲು-ಪ್ರಶಾಂತ್ ಸಿನಿಮಾ ಮಾಡೋದು 100% ಪಕ್ಕಾ ಎಂತಿದೆ ನಿರ್ಮಾಣ ಸಂಸ್ಥೆ. ಇಬ್ಬರೂ ಒಟ್ಟುಗೂಡಿ ಸಿನಿಮಾ ಮಾಡೋದ್ಯಾವಾಗ ಅಂತಾ ಕಾದು ನೋಡಬೇಕಿದೆ.

  • ಅಲ್ಲು ಅರ್ಜುನ್ ಜೊತೆ ಪ್ರಶಾಂತ್ ನೀಲ್ ʻರಾವಣಂʼ

    ಅಲ್ಲು ಅರ್ಜುನ್ ಜೊತೆ ಪ್ರಶಾಂತ್ ನೀಲ್ ʻರಾವಣಂʼ

    ಟಾಲಿವುಡ್‌ನಿಂದ ಧಮಾಕೇದಾರ್ ಸುದ್ದಿಯೊಂದು ಬಂದಿದೆ. ಅದುವೇ ಅಲ್ಲು ಅರ್ಜುನ್ (Allu Arjun) ಹಾಗೂ ಪ್ರಶಾಂತ್ ನೀಲ್ (Prashanth Neel) ಸೂಪರ್ ಕಾಂಬೋ ಸುದ್ದಿ.

    ಹೌದು. ಅಲ್ಲು ಅರ್ಜುನ್ ಮುಂದಿನ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಾರೆ ಎನ್ನಲಾದ ಸುದ್ದಿ ವೈರಲ್ ಆಗಿದೆ. ಪ್ರಸ್ತುತ ಪ್ರಶಾಂತ್ ನೀಲ್ ಜೂ.ಎನ್‌ಟಿಆರ್ (Jr ntr) ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಅಲ್ಲು ಅರ್ಜುನ್ ಅಟ್ಲಿ ಚಿತ್ರಕ್ಕೆ ಡೇಟ್ಸ್ ಕೊಟ್ಟಿದ್ದಾರೆ. ಇಬ್ಬರ ವಿಭಿನ್ನ ಚಿತ್ರಗಳು ಮುಗಿದ ಬಳಿಕ ಪ್ರಶಾಂತ್‌ ನೀಲ್‌ ಜೊತೆಗೆ ಕೈಜೋಡಿಸಲಿದ್ದಾರೆ ಎನ್ನಲಾಗುತ್ತಿದ್ದು ಈ ಚಿತ್ರಕ್ಕೆ `ರಾವಣಂ’ ಎಂಬ ಶೀರ್ಷಿಕೆ ಇಡಲಾಗುತ್ತೆ ಅನ್ನೋದು ಇಂಟ್ರೆಸ್ಟಿಂಗ್ ವಿಚಾರ. ಇದನ್ನೂ ಓದಿ: ಭದ್ರತೆಗೆ ಹೊಸ ಬುಲೆಟ್‌ ಪ್ರೂಫ್‌ ಕಾರು ಖರೀದಿಸಿದ ಸಲ್ಮಾನ್ ಖಾನ್

    ಕೆಜಿಎಫ್ ಚಿತ್ರದ ಮೂಲಕ ಸ್ಟಾರ್ ಡೈರೆಕ್ಟರ್ ಆಗಿರುವ ಪ್ರಶಾಂತ್ ನೀಲ್ ಹಾಗೂ ಪುಷ್ಪ-2 (Pushpa 2) ಮೂಲಕ ಇಂಟರ್‌ನ್ಯಾಶನಲ್ ಸ್ಟಾರ್ ಆಗಿರುವ ಅಲ್ಲು ಅರ್ಜುನ್ ಬಿಗ್ ಬಜೆಟ್ ಸಿನಿಮಾ ಮೇಕರ್ಸ್‌ ಎಂದು ಹೆಸರು ಮಾಡಿದವರು. ಇಬ್ಬರು ಒಂದೇ ಚಿತ್ರಕ್ಕಾಗಿ ಕೈಜೋಡಿಸದ್ರೆ ಆ ಸಿನಿಮಾ ಇನ್ನಿಲ್ಲದ ನಿರೀಕ್ಷೆ ಹುಟ್ಟಿಸೋದ್ರಲ್ಲಿ ಅನುಮಾನವೇ ಇಲ್ಲ. ಅಂದಹಾಗೆ ಈ ಸಿನಿಮಾವನ್ನ ಬಿಗ್ ಬಜೆಟ್‌ನಲ್ಲಿ ಟಾಲಿವುಡ್ ಖ್ಯಾತ ನಿರ್ಮಾಪಕ ದಿಲ್‌ರಾಜು ನಿರ್ಮಿಸಲಿದ್ದಾರೆ. ಸಿನಿಮಾ ಶುರುವಾಗೋದು ಇನ್ನೂ ಎರಡು ವರ್ಷದ ಬಳಿಕ ಎನ್ನಲಾಗುತ್ತಿದೆ. ಇದನ್ನೂ ಓದಿ: ವಿಜಯ್ ಜೊತೆ ಲವ್ ವದಂತಿಗೆ ತ್ರಿಷಾ ಕೆಂಡ – ಹೊಲಸು ಮನಸ್ಥಿತಿಯ ಜನ ಎಂದ ನಟಿ

    ಸಿನಿಮಾ ಆರಂಭಕ್ಕೂ ಮುನ್ನವೇ ಅಲ್ಲು ನೀಲ್ ಕಾಂಬಿನೇಶನ್ ಚಿತ್ರದ ಶೀರ್ಷಿಕೆ ರಿವೀಲ್ ಆಗಿರುವುದು ವಿಶೇಷ. ಸಾಮಾನ್ಯವಾಗಿ ಬಿಗ್‌ಸ್ಟಾರ್‌ಗಳ ಚಿತ್ರಕ್ಕೆ ಆರಂಭದಲ್ಲೇ ಟೈಟಲ್ ರಿವೀಲ್ ಮಾಡೋದಿಲ್ಲ. ಕಾನ್ಸೆಪ್ಟ್ ಪ್ರಕಾರ ಮಾಡಲಾಗುತ್ತೆ. ಹೀಗಾಗಿ ಶೀರ್ಷಿಕೆ ವಿಚಾರಕ್ಕೆ ಗೊಂದಲ ಇದೆ. ಹಿಂದೆ ಸಂದರ್ಶನವೊಂದರಲ್ಲಿ ಪ್ರಶಾಂತ್ ನೀಲ್ ತಾವು ಚಿತ್ರ ಮಾಡಬೇಕೆನ್ನುವ ಹೀರೋ ಜೊತೆ ಲವ್ ಆದ್ರೆ ಮಾತ್ರ ಅವರ ಜೊತೆ ಸಿನಿಮಾ ಮಾಡ್ತೀನಿ ಎಂದಿದ್ರು. ಇದನ್ನೂ ಓದಿ: ಸುದೀಪ್ `ಬಿಲ್ಲ ರಂಗ ಬಾಷ’ ಸೆಟ್ ರಿವೀಲ್!

    ಹೀಗಾಗಿ ನಿರ್ದೇಶಕ ನೀಲ್ ಆಯ್ಕೆ ಮಾಡಿಕೊಳ್ಳುವ ಹೀರೋ ಇಂಟ್ರೆಸ್ಟಿಂಗ್ ಆಗಿರ್ತಾರೆ. ಇದೀಗ ಅಲ್ಲು ಜೊತೆ ಪ್ರಶಾಂತ್ ನೀಲ್ ಕೈ ಜೋಡಿಸಿರುವುದು ಆರಂಭಿಕ ಮಾತುಕತೆಯಲ್ಲಿ ರಿವೀಲ್ ಆಗಿದೆ. ಇದನ್ನೂ ಓದಿ: ನನ್ನ ಹಂಸಲೇಖ ನಡುವೆ ಮನಸ್ತಾಪ ಯಾಕೆ ಗೊತ್ತಾ – ಕ್ರೇಜಿಸ್ಟಾರ್ ಮನದಾಳ

  • ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್

    ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್

    ಹುನಿರೀಕ್ಷಿತ ರಾಮಾಯಣ (Ramayana) ಸಿನಿಮಾದಲ್ಲಿ ರಾವಣ ಪಾತ್ರದ ಮೂಲಕ ಕಾಣಿಸಿಕೊಳ್ಳುತ್ತಿರುವ ರಾಕಿಂಗ್ ಸ್ಟಾರ್ ಯಶ್ (Yash) ಅವರ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್ ಆಗಿದೆ.

    ನಿತೇಶ್ ತಿವಾರಿ ನಿರ್ದೇಶನ ಹಾಗೂ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಸಿನಿಮಾದಲ್ಲಿ ಯಶ್ ನಟನಾಗಿಯೂ ಹಾಗೂ ನಿರ್ಮಾಪಕನಾಗಿಯೂ ಕಾಣಿಸಿಕೊಳ್ಳುತ್ತಿರುವುದು ಬಹು ವಿಶೇಷ. ರಾಮನ ಪಾತ್ರದಲ್ಲಿ ರಣಬೀರ್ ಕಪೂರ್, ಸೀತಾ ಪಾತ್ರದಲ್ಲಿ ಸಾಯಿ ಪಲ್ಲವಿ ಹಾಗೂ ರಾವಣನ ಪಾತ್ರದಲ್ಲಿ ಯಶ್ ಕಾಣಿಸಿಕೊಳ್ಳುತ್ತಿದ್ದಾರೆ.ಇದನ್ನೂ ಓದಿ: ಯಶ್ ನಟನೆಯ ‘ರಾಮಾಯಣ’ ಚಿತ್ರದ ಮೊದಲ ಪೋಸ್ಟರ್ ರಿಲೀಸ್

    ಯಶ್ ರಾವಣನಾಗಿ ಅಬ್ಬರಿಸುವುದನ್ನು ಕಣ್ತುಂಬಿಕೊಳ್ಳಲು ಕನ್ನಡಿಗರು ಮಾತ್ರವಲ್ಲದೇ ಭಾರತೀಯ ಸಿನಿಮಾರಂಗ ಕಾತುರದಿಂದ ಕಾಯುತ್ತಿದ್ದು, ಇದೀಗ ಆಕ್ಷನ್ ಸೀಕ್ವೆನ್ಸ್ನ ಮೊದಲ ಲುಕ್ ರಿವಿಲ್ ಆಗಿದೆ. ಸಿನಿಮಾ ಶೂಟಿಂಗ್‌ನಲ್ಲಿ ಬೃಹತ್ ಸೆಟ್‌ಗಳು ತಲೆಯೆತ್ತಿ ನಿಂತಿದ್ದು, ಆಕ್ಷನ್ ಸೀಕ್ವೆನ್ಸ್‌ಗಳನ್ನು ಹಾಲಿವುಡ್‌ನ ಖ್ಯಾತ ಮ್ಯಾಡ್ ಮ್ಯಾಕ್ಸ್ ಸ್ಟಂಟ್ ನಿರ್ದೇಶಕ ಗೈ ನೋರಿಸ್ ನಿರ್ದೇಶನ ಮಾಡುತ್ತಿದ್ದಾರೆ.

    ರಾಮಾಯಣ ಭಾಗ 1ಕ್ಕಾಗಿ ಯಶ್ 60-70 ದಿನಗಳ ಕಾಲ ಚಿತ್ರೀಕರಣ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ರಾಮಾಯಣ ಸಿನಿಮಾ 2 ಭಾಗಗಳಲ್ಲಿ ಮೂಡಿ ಬರಲಿದ್ದು, ಮೊದಲ ಭಾಗ 2026ರಲ್ಲಿ ರಿಲೀಸ್ ಆಗಲಿದೆ. ಎರಡನೇ ಭಾಗ 2027ರಲ್ಲಿ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ. ಟಾಕ್ಸಿಕ್ ಸಿನಿಮಾ ಜೊತೆಗೆ ರಾವಣನ ಪಾತ್ರದಲ್ಲಿ ಯಶ್‌ರನ್ನು ನೋಡಲು ಅಭಿಮಾನಿಗಳು ಬಹುಉತ್ಸುಕರಾಗಿದ್ದಾರೆ.ಇದನ್ನೂ ಓದಿ: ಯಶ್ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ವಿವೇಕ್ ಒಬೆರಾಯ್?

  • ‘ರಾಮಾಯಣ’ ಚಿತ್ರಕ್ಕೆ ಯಶ್ ನಿಜವಾದ ಹೀರೋ: ಸತ್ಯ ಬಿಚ್ಚಿಟ್ಟ ನಟ

    ‘ರಾಮಾಯಣ’ ಚಿತ್ರಕ್ಕೆ ಯಶ್ ನಿಜವಾದ ಹೀರೋ: ಸತ್ಯ ಬಿಚ್ಚಿಟ್ಟ ನಟ

    ಅಂದುಕೊಂಡಂತೆ ಆಗಿದ್ದರೆ ರಾಮಾಯಣ ಸಿನಿಮಾದಲ್ಲಿ ಬಾಲಿವುಡ್ ನ ಹೆಸರಾಂತ ನಟ ಆದಿತ್ಯಾ ದೇಶಮುಖ ಕೂಡ ನಟಿಸಬೇಕಿತ್ತು. ಡೇಟ್ ಹೊಂದಾಣಿಕೆ ಕಾರಣದಿಂದಾಗಿ ಅವರು ನಟಿಸೋಕೆ ಸಾಧ್ಯವಾಗಿಲ್ಲ. ಆದರೆ, ರಾಮಾಯಣ ಸಿನಿಮಾದ ಸೀಕ್ರೇಟ್ ಒಂದನ್ನು ಬಿಚ್ಚಿಟ್ಟಿದ್ದಾರೆ ಆದಿತ್ಯಾ, ಈ ರಾಮಾಯಣವನ್ನು ರಾವಣನ (, Ravan) ದೃಷ್ಟಿ ಕೋನದಲ್ಲಿ ಹೆಣೆಯಲಾಗುತ್ತಿದೆಯಂತೆ. ಹಾಗಾಗಿ ನಿಜವಾಗಿಯೂ ಈ ಸಿನಿಮಾದ ಹೀರೋ (Hero) ಯಶ್ ಎಂದು ಅವರು ಹೇಳಿದ್ದಾರೆ.

    ಅಲ್ಲದೇ, ಬಹುನಿರೀಕ್ಷಿತ ಸಿನಿಮಾ ರಾಮಾಯಣ ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆಯನ್ನು ತೆರೆದಿಡುವ ರಾಮಾಯಣ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ. ರಾಮಾಯಣಕ್ಕೆ ರಾಕಿ (Yash) ಕೂಡ ನಿರ್ಮಾಪಕ ರಾಮಾಯಣ (Ramayana) ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ ಪರಿಚಯಿಸಲು ನಾನು ಉತ್ಸಕನಾಗಿದ್ದು, ನಾನು ಯಶ್ ಅವರಲ್ಲಿಯೂ ಇದನ್ನು ಕಂಡುಕೊಂಡಿದ್ದೇನೆ. ಅವರ ಪಯಣದಿಂದ ನಾನು ಸ್ಪೂರ್ತಿ ಪಡೆದಿದ್ದೇನೆ. ಯಶ್ ಅವರಲ್ಲಿರುವ ಯೋಜನೆಯನ್ನು ಅರಿತುಕೊಂಡಿದ್ದೇನೆ. ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ ತರುತ್ತಿದ್ದೇವೆ ಎಂದರು.

    ಯಶ್ ಮಾತನಾಡಿ, ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರರ್ದಶಿಸುವುದು ನನ್ನ ಬಹುದಿನಗಳ ಕನಸು. ಅದರ ಹುಡುಗಾಟದಲ್ಲಿ ನಾನು ಅತ್ಯುತ್ತಮ VFC ಸ್ಟುಡಿಯೋ ಕಂಡುಕೊಂಡಿದ್ದೇನೆ. ಅದರ ಹಿಂದಿನ ಪ್ರೇರಕ ಶಕ್ತಿ ಒಬ್ನ ಭಾರತೀಯ. ನಾವು ಸಿನಿಮಾ ರಂಗದ ಬೇರೆ ವಿಷಯಗಳ ಬಗ್ಗೆ ಚರ್ಚೆ ನಡೆಸುವಾಗ ರಾಮಾಯಣ ವಿಷಯವು ಬಂದಿತು. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪ್ರಸ್ತುತಪಡಿಸುವ ಸಿನಿಮಾ ಇದಾಗಿದ್ದು, ಈ ಮಹಾಕಾವ್ಯ ಸಿನಿಮಾ ರೂಪ ತಾಳುತ್ತಿದೆ. ಆ ಅತ್ಯುತ್ತಮ ಅನುಭವನ್ನು ಜಗತ್ತಿಗೆ ನೀಡಲು ನಾವು ಕಾತರರಾಗಿದ್ದೇವೆ ಎಂದರು.

     

    ನಮಿತ್ ಮಲ್ಹೋತ್ರಾ ಒಡೆತನದ ಪ್ರೈಮ್ ಫೋಕಸ್ ಸ್ಟುಡಿಯೋ ಜಾಗತಿಕ ಮಟ್ಟದ ಕಂಟೆಂಟ್ ಹಾಗೂ ವಿಭಿನ್ನ ಬಗೆಯ ಕ್ರಿಯೇಟ್ ಮಾಡುವ ಸ್ವತಂತ್ರ ನಿರ್ಮಾಣ ಕಂಪನಿಯಾಗಿದೆ. ಈ ಸಂಸ್ಥೆ ಸದ್ಯ ಮೂರು ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ. ಆ ಪೈಕಿ ರಾಮಾಯಣ ಕೂಡ ಒಂದು. ಯಶ್ ತಮ್ಮದೇ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಎಂಬ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಈ ಬ್ಯಾನರ್ ನಡಿ ‘ಟಾಕ್ಸಿಕ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.  ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೆ ‘ಮಾನ್ಸ್ಟರ್ ಮೈಂಡ್’ ಕ್ರಿಯೇಷನ್ಸ್ ಕೂಡ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣದಲ್ಲಿ ಪಾಲುದಾರಿಕೆಯನ್ನು ಹೊಂದಿದೆ. ಇದೇ ಬ್ಯಾನರ್ ನಡಿ ‘ರಾಮಾಯಣ’ ಸಿನಿಮಾಗೂ  ಯಶ್ ಬಂಡವಾಳ ಹೂಡುತ್ತಿದ್ದಾರೆ.

  • ಇಂದು ರಾವಣನ ಬಗ್ಗೆ ಮಾತನಾಡಬಾರದು- ರಾಹುಲ್‌ ಗಾಂಧಿ ವಿರುದ್ಧ ಅಸ್ಸಾಂ ಸಿಎಂ ವಾಗ್ದಾಳಿ

    ಇಂದು ರಾವಣನ ಬಗ್ಗೆ ಮಾತನಾಡಬಾರದು- ರಾಹುಲ್‌ ಗಾಂಧಿ ವಿರುದ್ಧ ಅಸ್ಸಾಂ ಸಿಎಂ ವಾಗ್ದಾಳಿ

    ಗುವಾಹಟಿ: ಇಂದು ರಾವಣನ (Ravana) ಬಗ್ಗೆ ಯಾಕೆ ಪ್ರಶ್ನೆಗಳನ್ನು ಕೇಳುತ್ತೀರಿ..?. ಇಂದು ನಾವು ರಾವಣನ ಬಗ್ಗೆ ಮಾತನಾಡಬಾರದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ (Himanta Biswa Sarma) ವಾಗ್ದಾಳಿ ನಡೆಸಿದರು.

    ರಾಮಮಂದಿರದಲ್ಲಿ (Ram Mandir) ರಾಮಲಲ್ಲಾನ ಪ್ರಾಣಪ್ರತಿಷ್ಠಾಪನಾ ಸಮಾರಂಭಕ್ಕೆ ರಾಹುಲ್ ಗಾಂಧಿಯನ್ನು (Rahul Gandhi) ಏಕೆ ಆಹ್ವಾನಿಸಲಿಲ್ಲ ಎಂದು ಮಾಧ್ಯಮದವರು ಪ್ರಶ್ನೆ ಮಾಡಿದರು. ಈ ವೇಳೆ ರಾಮಾಯಣ ಉಲ್ಲೇಖದೊಂದಿಗೆ ಪ್ರತಿಕ್ರಿಯಿಸಿದ ಅವರು, ನೀವು ರಾವಣನ ಬಗ್ಗೆ ಏಕೆ ಮಾತನಾಡುತ್ತಿದ್ದೀರಿ?. ಕನಿಷ್ಠ ರಾಮನ ಬಗ್ಗೆ ಇವತ್ತಾದರೂ ಮಾತನಾಡುತ್ತೀರಾ? 500 ವರ್ಷಗಳ ನಂತರ ರಾಮನ ಬಗ್ಗೆ ಮಾತನಾಡಲು ಇಂದು ಒಳ್ಳೆಯ ದಿನ. ಇಂದು ನಾವು ರಾವಣನ ಬಗ್ಗೆ ಮಾತನಾಡಬಾರದು ಎಂದರು.

    ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ರಾಹುಲ್‌ ಗಾಂಧಿಯವರನ್ನು ಆಹ್ವಾನಿಸಿರಲಿಲ್ಲ. ಆದರೆ ಪಕ್ಷದ ಮುಖ್ಯಸ್ಥರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಕಾಂಗ್ರೆಸ್ (Congress) ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ಹೋಗಿದೆ. ಆದರೆ ಇದು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕ್ರಮ ಎಂದು ಕಾಂಗ್ರೆಸ್‌ ಹೇಳಿದ್ದು, ಅಯೋಧ್ಯೆಗೆ ತೆರಳಲು ನಿರಾಕರಿಸಿದೆ.

    ಇತ್ತ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್‌ ನಾಯಕರ ನಡೆಯನ್ನು ಬಿಜೆಪಿ ಖಂಡಿಸಿದೆ. ನಾಯಕರನ್ನು ಹಿಂದೂ ವಿರೋಧಿಗಳು ಎಂದು ಕರೆದಿರುವ ಬಿಜೆಪಿ, ಅವರಿಗೆ ಜನತೆಯಿಂದಲೇ ಶಿಕ್ಷೆಯಾಗಲಿದೆ ಎಂದುಕಿಡಿಕಾರಿದೆ. ಇದನ್ನೂ ಓದಿ: ಮೋದಿಯಂತಹ ಒಳ್ಳೆಯ ಭಕ್ತ ಸಿಕ್ಕ ಮೇಲೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಾಗಿದೆ: ಜೋಶಿ

  • ರಾವಣನ ಪ್ರತಿಕೃತಿ ದಹಿಸಿದ ನಟಿ ಕಂಗನಾ ರಣಾವತ್

    ರಾವಣನ ಪ್ರತಿಕೃತಿ ದಹಿಸಿದ ನಟಿ ಕಂಗನಾ ರಣಾವತ್

    ನಿನ್ನೆ ದೆಹಲಿಯಲ್ಲಿ ನಡೆದ ರಾವಣನ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಭಾಗಿಯಾಗಿ ರಾವಣನ ಪ್ರತಿಕೃತಿ ದಹಿಸಿದರು. ಈ ಮೂಲಕ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ ಕಂಗನಾ. ಇದೇ ಮೊದಲ ಬಾರಿಗೆ ಐವತ್ತು ವರ್ಷಗಳಿಂದ ಆಗದೇ ಇರುವಂತಹ ಕೆಲಸವೊಂದು ಕಂಗನಾ ಮೂಲಕ ಆಗಿದೆ.

    ದೆಹಲಿಯ (Delhi) ಕೆಂಪು ಕೋಟೆಯಲ್ಲಿ ಸತತವಾಗಿ 50 ವರ್ಷಗಳಿಂದಲೇ ನಡೆದುಕೊಂಡು ಬಂಧಿರುವಂತಹ ರಾವಣನ (Raavan) ಪ್ರತಿಕೃತಿ ದಹನವನ್ನು ಈ ಬಾರಿ ಕಂಗನಾ ರಣಾವತ್ ನಡೆಸಿಕೊಟ್ಟಿದ್ದಾರೆ. ಈವರೆಗೂ ಮಹಿಳೆಯೊಬ್ಬರು ಈ ಕೆಲಸವನ್ನು ಮಾಡಿರಲಿಲ್ಲ ಎನ್ನುವುದು ವಿಶೇಷ. ಲವ್ ಕುಶ ರಾಮಲೀಲಾ ಸಮತಿಯ ಅಧ್ಯಕ್ಷ ಅರ್ಜುನ್ ಸಿಂಗ್ ಈ ಮಾಹಿತಿಯನ್ನು ತಿಳಿಸಿದ್ದರು. ನಿನ್ನೆ ದಿನ ಐತಿಹಾಸಿಕ ದಾಖಲೆಯಾಗಿದೆ.

    ಇದೇ ವಾರದಲ್ಲಿ ಕಂಗನಾ ಸಿನಿಮಾ ರಿಲೀಸ್

    ಚಂದ್ರಮುಖಿ 2 ಸಿನಿಮಾ ರಿಲೀಸ್ ಬೆನ್ನಲ್ಲೇ ಮತ್ತೊಂದು ಸಿನಿಮಾದ ಹೊಸ ಅಪ್ ಡೇಟ್ ನೀಡಿದ್ದಾರೆ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut). ತುಂಬಾ ನಿರೀಕ್ಷೆ ಮೂಡಿಸಿದ್ದ ಚಂದ್ರಮುಖಿ 2 ಸಿನಿಮಾ ಬಗ್ಗೆ ಅಷ್ಟೇನೂ ಹೇಳಿಕೊಳ್ಳುವಂತಹ ರೆಸ್ಪಾನ್ಸ್ ಸಿಕ್ಕಿಲ್ಲ. ಹಾಗಾಗಿ ಅವರ ಹೊಸ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.

    ಈಗಾಗಲೇ ತೇಜಸ್ (Tejas) ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ ಕಂಗನಾ ರಣಾವತ್. ಈ ಸಿನಿಮಾದ ರಿಲೀಸ್ ಡೇಟ್ ಬಹಿರಂಗವಾಗಿದ್ದು, ಇದೇ ಅಕ್ಟೋಬರ್ 27ರಂದು ವಿಶ್ವದಾದ್ಯಂತ ಈ ಚಿತ್ರವನ್ನು ಬಿಡುಗಡೆ (Release) ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಒಂದು ಪೋಸ್ಟ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ.

     

    ಈ ಸಿನಿಮಾದಲ್ಲಿ ತೇಜಸ್ ಗಿಲ್ ಎಂಬ ಏರ್ ಪೋರ್ಸ್ ಪೈಲಟ್ ಆಗಿ ಕಂಗನಾ ರಣಾವತ್ ಕಾಣಿಸಿಕೊಂಡಿದ್ದಾರೆ. ಸರ್ವೇಶ್ ಮೇವಾರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಏರ್ ಪೋರ್ಸ್ ದಿನವಾದ ಅಕ್ಟೋಬರ್ 8 ರಂದು ಸಿನಿಮಾದ ಟ್ರೈಲರ್ ಕೂಡ ರಿಲೀಸ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ ಕಂಗನಾ ರಣಾವತ್

    ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ ಕಂಗನಾ ರಣಾವತ್

    ಬಾಲಿವುಡ್ ನಟಿ ಕಂಗನಾ ರಣಾವತ್ ದಾಖಲೆಯೊಂದನ್ನು ಬರೆಯಲಿದ್ದಾರೆ. ಅವರು ಆ ಐತಿಹಾಸಿಕ ಕ್ಷಣಕ್ಕೂ ಸಾಕ್ಷಿಯಾಗಲಿದ್ದಾರೆ. ಐವತ್ತು ವರ್ಷಗಳಿಂದ ಆಗದೇ ಇರುವಂತಹ ಕೆಲಸವೊಂದು ಕಂಗನಾ ಮೂಲಕ ಆಗುತ್ತಿರುವುದು ಸಹಜವಾಗಿಯೇ ಅಭಿಮಾನಿಗಳಿಗೆ ಸಂಭ್ರಮ ತಂದಿದೆ.

    ದೆಹಲಿಯ (Delhi) ಕೆಂಪು ಕೋಟೆಯಲ್ಲಿ ಸತತವಾಗಿ 50 ವರ್ಷಗಳಿಂದಲೇ ನಡೆದುಕೊಂಡು ಬಂಧಿರುವಂತಹ ರಾವಣನ (Raavan) ಪ್ರತಿಕೃತಿ ದಹನವನ್ನು ಈ ಬಾರಿ ಕಂಗನಾ ರಣಾವತ್ ನಡೆಸಿಕೊಡಲಿದ್ದಾರೆ. ಈವರೆಗೂ ಮಹಿಳೆಯೊಬ್ಬರು ಈ ಕೆಲಸವನ್ನು ಮಾಡಿರಲಿಲ್ಲ ಎನ್ನುವುದು ವಿಶೇಷ. ಲವ್ ಕುಶ ರಾಮಲೀಲಾ ಸಮತಿಯ ಅಧ್ಯಕ್ಷ ಅರ್ಜುನ್ ಸಿಂಗ್ ಈ ಮಾಹಿತಿಯನ್ನು ತಿಳಿಸಿದ್ದಾರೆ.

    ಇದೇ ವಾರದಲ್ಲಿ ಕಂಗನಾ ಸಿನಿಮಾ ರಿಲೀಸ್

    ಚಂದ್ರಮುಖಿ 2 ಸಿನಿಮಾ ರಿಲೀಸ್ ಬೆನ್ನಲ್ಲೇ ಮತ್ತೊಂದು ಸಿನಿಮಾದ ಹೊಸ ಅಪ್ ಡೇಟ್ ನೀಡಿದ್ದಾರೆ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut). ತುಂಬಾ ನಿರೀಕ್ಷೆ ಮೂಡಿಸಿದ್ದ ಚಂದ್ರಮುಖಿ 2 ಸಿನಿಮಾ ಬಗ್ಗೆ ಅಷ್ಟೇನೂ ಹೇಳಿಕೊಳ್ಳುವಂತಹ ರೆಸ್ಪಾನ್ಸ್ ಸಿಕ್ಕಿಲ್ಲ. ಹಾಗಾಗಿ ಅವರ ಹೊಸ ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.

    ಈಗಾಗಲೇ ತೇಜಸ್ (Tejas) ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ ಕಂಗನಾ ರಣಾವತ್. ಈ ಸಿನಿಮಾದ ರಿಲೀಸ್ ಡೇಟ್ ಬಹಿರಂಗವಾಗಿದ್ದು, ಇದೇ ಅಕ್ಟೋಬರ್ 27ರಂದು ವಿಶ್ವದಾದ್ಯಂತ ಈ ಚಿತ್ರವನ್ನು ಬಿಡುಗಡೆ (Release) ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಒಂದು ಪೋಸ್ಟ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ.

     

    ಈ ಸಿನಿಮಾದಲ್ಲಿ ತೇಜಸ್ ಗಿಲ್ ಎಂಬ ಏರ್ ಪೋರ್ಸ್ ಪೈಲಟ್ ಆಗಿ ಕಂಗನಾ ರಣಾವತ್ ಕಾಣಿಸಿಕೊಂಡಿದ್ದಾರೆ. ಸರ್ವೇಶ್ ಮೇವಾರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ಏರ್ ಪೋರ್ಸ್ ದಿನವಾದ ಅಕ್ಟೋಬರ್ 8 ರಂದು ಸಿನಿಮಾದ ಟ್ರೈಲರ್ ಕೂಡ ರಿಲೀಸ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಲಿವುಡ್ ಗೆ ಹಾರಲು ಯಶ್ ಸರ್ವ ಸಿದ್ಧತೆ: ಭರ್ಜರಿ ತಯಾರಿಯಲ್ಲಿ ರಾಕಿಭಾಯ್

    ಬಾಲಿವುಡ್ ಗೆ ಹಾರಲು ಯಶ್ ಸರ್ವ ಸಿದ್ಧತೆ: ಭರ್ಜರಿ ತಯಾರಿಯಲ್ಲಿ ರಾಕಿಭಾಯ್

    ಶ್ ಬಾಲಿವುಡ್ ಗೆ ಹಾರಲು ಸರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ರಾವಣ ಪಾತ್ರಕ್ಕಾಗಿ ಅವರು ಸಾಕಷ್ಟು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರಂತೆ. ತಮ್ಮ ಹೊಸ ಸಿನಿಮಾದ ಜೊತೆ ಜೊತೆಗೆ ಈ ಸಿನಿಮಾದಲ್ಲೂ ಅವರು ಭಾಗಿಯಾಗಲಿದ್ದಾರೆ ಎನ್ನುತ್ತಿವೆ ಮೂಲಗಳು.

    ರಾಮಾಯಣ (Ramayana) ಸಿನಿಮಾ ಆಗುತ್ತಿರುವ ವಿಚಾರ ಹಲವಾರು ತಿಂಗಳಿಂದ ಹರಿದಾಡುತ್ತಲೇ ಇದೆ. ಅದರಲ್ಲೂ ಈ ಸಿನಿಮಾದಲ್ಲಿ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ, ಈ ಸುದ್ದಿ ಹರಿದಾಡುವುದು ತಪ್ಪಿಲ್ಲ.

    ಯಶ್ ಏನೂ ಹೇಳದೇ ಇದ್ದರೂ, ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದೂ ಮಾತನಾಡಿದ್ದರು. ಅದು ಈಗ ನಿಜವಾದಂತೆ ಕಾಣುತ್ತಿದೆ. ಈಗಾಗಲೇ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಸಿನಿಮಾಗಾಗಿ ಅವರು 15 ದಿನಗಳ ಕಾಲ ಕಾಲ್ ಶೀಟ್ ಕೂಡ ನೀಡಿದ್ದಾರೆ ಎನ್ನುವುದು ತಾಜಾ ಮಾಹಿತಿ.

    ನಿತಿಶ್ ತಿವಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಸತತ ಮೂರ್ನಾಲ್ಕು ವರ್ಷಗಳಿಂದ ಈ ಚಿತ್ರಕ್ಕಾಗಿ ತಿವಾರಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 2024ರಲ್ಲಿ ಈ ಸಿನಿಮಾ ಸೆಟ್ಟೇರಬಹುದು ಎಂದು ಅಂದಾಜಿಸಲಾಗಿದೆ. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್  (Ranbir Kapoor) ನಿರ್ವಹಿಸಲಿದ್ದಾರೆ. ಸೀತೆ ಪಾತ್ರವು ಸಾಯಿ ಪಲ್ಲವಿ (Sai Pallavi)ಅವರ ಪಾಲಾಗಿದೆ.

     

    ಸದ್ಯ ಯಶ್ ಹೊಸ ಸಿನಿಮಾದ ಕೆಲಸದಲ್ಲಿ ಬ್ಯೂಸಿಯಾಗಿದ್ದಾರೆ. ಅಲ್ಲದೇ ದೇಶ ವಿದೇಶ ಸುತ್ತುತ್ತಿದ್ದಾರೆ. ಸದ್ಯದಲ್ಲೇ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ರಾಮಾಯಣ ಸಿನಿಮಾ ಶುರುವಾಗುವ ಹೊತ್ತಿಗೆ ಹೊಸ ಸಿನಿಮಾದ ಬಹುತೇಕ ಕೆಲಸ ಮುಗಿಯುವ ಸಾಧ್ಯತೆ ಇದ್ದು, ಅದಕ್ಕಾಗಿ ಈ ಸಿನಿಮಾವನ್ನು ಯಶ್ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್‌-ಬಿಜೆಪಿ ನಡುವೆ ಶುರುವಾಯ್ತು ಪೋಸ್ಟರ್ ವಾರ್

    ಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್‌-ಬಿಜೆಪಿ ನಡುವೆ ಶುರುವಾಯ್ತು ಪೋಸ್ಟರ್ ವಾರ್

    ನವದೆಹಲಿ: ಪಂಚರಾಜ್ಯಗಳ ಚುನಾವಣೆ ಘೋಷಣೆಗೆ ಇನ್ನೂ ಕೆಲವೇ ದಿನ ಬಾಕಿ ಇದ್ದು, ಚುನಾವಣೆ ಘೋಷಣೆಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೋಸ್ಟರ್ ವಾರ್ ಶುರುವಾಗಿದೆ. ಬಿಜೆಪಿ ಸಂಸದ ರಾಹುಲ್‌ ಗಾಂಧಿಯನ್ನು (Rahul Gandhi) ಹೊಸ ಕಾಲದ ರಾವಣ ಎಂದರೆ, ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನ ಸುಳ್ಳುಗಾರ ಎಂದು ಕರೆದಿದೆ.

    ಶುಕ್ರವಾರ ಎಕ್ಸ್‌ ಪೋಸ್ಟ್‌ನಲ್ಲಿ ಎರಡು ಪಕ್ಷಗಳ ನಡುವೆ ಪೋಸ್ಟರ್ ಸಮರ ಏರ್ಪಟ್ಟಿದೆ. ಹತ್ತು ತಲೆಗಳಿರುವ ರಾಹುಲ್ ಗಾಂಧಿ ಫೋಟೋ ಶೇರ್ ಮಾಡಿರುವ ಬಿಜೆಪಿ ಹೊಸ ಕಾಲದ ರಾವಣ ಎಂದು ಸಂಭೋಧಿಸಿದೆ. ಅವನು ದುಷ್ಟ, ಧರ್ಮ ವಿರೋಧಿ, ರಾಮನ ವಿರೋಧಿ. ಅವನ ಗುರಿ ಭಾರತವನ್ನು ನಾಶ ಮಾಡುವುದು ಎಂದು ಬಿಜೆಪಿ ಪೋಸ್ಟರ್‌ನಲ್ಲಿ ಹೇಳಿದೆ‌. ಇದನ್ನೂ ಓದಿ: ರಾಹುಲ್ ಗಾಂಧಿ ಆಧುನಿಕ ಕಾಲದ ರಾವಣ – ಪೋಸ್ಟರ್ ರಿಲೀಸ್ ಮಾಡಿದ ಬಿಜೆಪಿ

    ಇದಕ್ಕೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವ ಕಾಂಗ್ರೆಸ್ (Congress) ದೊಡ್ಡ ಸುಳ್ಳುಗಾರ ಎಂದು ಟೀಕಿಸಿದೆ. ಮುಂದುವರಿದು ಇನ್ನೂ ಹಲವು ಪೋಸ್ಟರ್ ಪೋಸ್ಟ್ ಮಾಡಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಅದಾನಿ’, ‘ಜುಮ್ಲಾ ಬಾಯ್’ ಎಂದು ಶೀರ್ಷಿಕೆ ನೀಡಿ ಫೋಟೋ ಅಪ್ಲೋಡ್ ಮಾಡಿದೆ.

    ಬಳಿಕ ಈ ಬಗ್ಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಇದೊಂದು ಅಸಹ್ಯಕರ ಪೋಸ್ಟ್, ರಾವಣ ಪೋಸ್ಟರ್ ಮೂಲಕ ರಾಹುಲ್ ಗಾಂಧಿ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶ ಹೊಂದಿದೆ ಎಂದು ಹೇಳಿದೆ. ರಾಹುಲ್‌ ಗಾಂಧಿ ತಂದೆ ಮತ್ತು ಅಜ್ಜಿಯನ್ನು ದುಷ್ಟ ಶಕ್ತಿಗಳಿಂದ ಹತ್ಯೆ ಮಾಡಲಾಗಿದೆ. ಈಗ ಬಿಜೆಪಿ (BJP) ಭಾರತವನ್ನು ವಿಭಜಿಸಲು ಬಯಸುತ್ತದೆ ಎಂದು ಕಾಂಗ್ರೆಸ್‌ನ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್ – ದಿನಾಂಕ ಘೋಷಣೆ ಯಾವಾಗ?

    ಪೋಸ್ಟರ್‌ಗೆ ಪ್ರತಿಕ್ರಿಯಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ, ಗೌರವಾನ್ವಿತ ನರೇಂದ್ರ ಮೋದಿ ಅವರೇ ಮತ್ತು ಜೆ.ಪಿ. ನಡ್ಡಾ ಅವರೇ ನೀವು ರಾಜಕೀಯ ಮತ್ತು ಚರ್ಚೆಯನ್ನು ಯಾವ ಮಟ್ಟಕ್ಕೆ ಕೊಂಡೊಯ್ಯಲು ಬಯಸುತ್ತೀರಿ? ಹಿಂಸಾತ್ಮಕ ಮತ್ತು ಪ್ರಚೋದನಕಾರಿ ಟ್ವೀಟ್‌ಗಳನ್ನು ನೀವು ಒಪ್ಪುತ್ತೀರಾ? ನಿಮ್ಮ ಪಕ್ಷದ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಲಾಗಿದೆಯೇ? ನೀವು ಮಾಡಿದ ಭರವಸೆಗಳಂತೆಯೇ ನೀವು ಮಾಡಿದ ಪ್ರಮಾಣಗಳನ್ನು ಮರೆತುಬಿಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]