Tag: ರಾಷ್ಟ್ರ

  • ರಾಷ್ಟ್ರವೋ ಅಥವಾ ಧರ್ಮ ಯಾವುದು ಮುಖ್ಯ: ಹಿಜಬ್ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

    ರಾಷ್ಟ್ರವೋ ಅಥವಾ ಧರ್ಮ ಯಾವುದು ಮುಖ್ಯ: ಹಿಜಬ್ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ

    ಚೆನ್ನೈ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಬ್-ಕೇಸರಿ ಶಾಲು ವಿವಾದವು ಜಗತ್ತಿನಾದ್ಯಂತ ಸದ್ದು ಮಾಡುತ್ತಿದೆ. ಧಾರ್ಮಿಕ ಪ್ರಕರರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ರಾಷ್ಟ್ರವೋ ಅಥವಾ ಧರ್ಮವೋ, ಯಾವುದು ಮುಖ್ಯ ಎಂದು ಪ್ರಶ್ನಿಸಿದೆ.

    ದೇವಾಲಯಗಳಲ್ಲಿ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಂ.ಎನ್.ಭಂಡಾರಿ ಮತ್ತು ನ್ಯಾಯಮೂರ್ತಿ ಡಿ.ಭರತ ಚಕ್ರವರ್ತಿ ಅವರಿದ್ದ ಪೀಠವು, ಇದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಕೆಲವರು ಹಿಜಬ್‌ಗಾಗಿ ಹೋಗುತ್ತಾರೆ. ಮತ್ತೆ ಕೆಲವರು ಟೋಪಿಗಾಗಿ ಹೋರಾಡುತ್ತಾರೆ. ಇನ್ನೂ ಕೆಲವರು ತಮಗೆ ಅಗತ್ಯವಿರುವುದಕ್ಕಾಗಿ ಪ್ರತಿಭಟಿಸುತ್ತಾರೆ. ಇದು ಒಂದು ರಾಷ್ಟ್ರವೋ ಅಥವಾ ಧರ್ಮದಿಂದ ವಿಭಜನೆಯಾಗಿದೆಯೋ ಅಥವಾ ಬೇರೆ ಇನ್ಯಾವುದೋ ಎಂದು ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ಕಾಲೇಜುಗಳಿಗೆ ಯಾರೂ ಧಾರ್ಮಿಕ ಬಟ್ಟೆಗಳನ್ನು ಧರಿಸಿ ಹೋಗುವಂತಿಲ್ಲ: ಹೈಕೋರ್ಟ್‌ ಮಧ್ಯಂತರ ಆದೇಶ

    ಭಾರತ ಜಾತ್ಯತೀತ ರಾಷ್ಟ್ರ. ಪ್ರಚಲಿತ ವಿದ್ಯಾಮಾನಗಳಿಂದ ಕಂಡು ಬರುತ್ತಿರುವುದು ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆಯುವ ಪ್ರಯತ್ನವಲ್ಲದೇ ಬೇರೇನೂ ಅಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಭಂಡಾರಿ ಕಟು ಪದಗಳಿಂದ ಧರ್ಮದ ಹೆಸರಿನಲ್ಲಿ ದೇಶ ಒಡೆಯುವವರ ವಿರುದ್ಧ ಚಾಟಿ ಬೀಸಿದ್ದಾರೆ.

    ತಿರುಚಿರಪಳ್ಳಿ ಜಿಲ್ಲೆಯ ರಂಗರಾಜನ್ ನರಸಿಂಹನ್ ಎಂಬವರು ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಭಕ್ತರಿಗೆ ವಸ್ತ್ರ ಸಂಹಿತೆ ರೂಪಿಸಬೇಕು. ರಾಜ್ಯಾದ್ಯಂತ ಇರುವ ದೇವಾಲಯಗಳಿಗೆ ಹಿಂದೂಯೇತರರು ಕಾಲಿಡದಂತೆ ಮತ್ತು ದೇವಸ್ಥಾನಗಳ ಆವರಣದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಡಿಕೆಶಿ ಪಾಕಿಸ್ತಾನ ಪರ ಹೇಳಿಕೆ ಕೊಡುವವರ ಪರವೋ ಅಥವಾ ಭಾರತ ಮಾತೆಯ ಪರವೋ: ರೇಣುಕಾಚಾರ್ಯ

    ಈ ಅರ್ಜಿ ವಿಚಾರಣೆ ನಡೆಸಿದ ಪೀಠವು, ಮನವಿಗೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ನೀಡುವಂತೆ ಅರ್ಜಿದಾರನನ್ನು ಪ್ರಶ್ನಿಸಿದೆ. ಆಗಮಗಳ ಯಾವ ಭಾಗವು ಪ್ಯಾಂಟ್, ಧೋತಿ ಮತ್ತು ಶರ್ಟ್‌ಗಳ ಕುರಿತು ಉಲ್ಲೇಖ ಮಾಡಿದೆ ಎಂದು ಪೀಠ ಕೇಳಿದೆ. ಅಂತಿಮವಾಗಿ ವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ವಿವರಣೆಗಳೊಂದಿಗೆ ಅಫಿಡವಿಟ್ ಸಲ್ಲಿಸುವಂತೆ ಪೀಠ ಸೂಚಿಸಿದೆ.

  • ರಾಷ್ಟ್ರಮಟ್ಟಕ್ಕೆ ಕಾಫಿನಾಡಿನ ಎರಡು ಸರ್ಕಾರಿ ಶಾಲೆಗಳು ಆಯ್ಕೆ

    ರಾಷ್ಟ್ರಮಟ್ಟಕ್ಕೆ ಕಾಫಿನಾಡಿನ ಎರಡು ಸರ್ಕಾರಿ ಶಾಲೆಗಳು ಆಯ್ಕೆ

    ಚಿಕ್ಕಮಗಳೂರು: 2021ರ ಜನವರಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಉತ್ತಮ ಅಭ್ಯಾಸಗಳನ್ನು ಅಳವಡಿಕೆ ಮಾಡಿಕೊಂಡಿರುವ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಜಿಲ್ಲೆಗೆ ಎರಡರಂತೆ ಆಯ್ಕೆ ಮಾಡಿ ಕಳುಹಿಸಲು ಸರ್ಕಾರ ಸೂಚಿಸಿತ್ತು. ಇದರಂತೆ ಇದೀಗ ಕಾಫಿನಾಡಿನ ಎರಡು ಸರ್ಕಾರಿ ಶಾಲೆಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.

    ಉತ್ತಮ ಅಭ್ಯಾಸಗಳನ್ನು ಅಳವಡಿಕೊಂಡಿರುವ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಯಲಗುಡಿಗೆ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ತರೀಕೆರೆ ತಾಲೂಕಿನ ಸೊಕ್ಕೆ ಪ್ರೌಢ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಡಯಟ್ ಪ್ರಾಂಶುಪಾಲರಾದ ಪುಷ್ಪಲತಾ ಅವರು, ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಂಡಿರುವ ಕಾರಣ ಜಿಲ್ಲೆಯ ಎರಡು ಸರ್ಕಾರಿ ಶಾಲೆಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಜಿಲ್ಲೆಗೆ ಹೆಮ್ಮೆಯ ಸಂಗತಿ. ಸರ್ಕಾರ ಉತ್ತಮ ಅಭ್ಯಾಸಗಳನ್ನು ಅಳವಡಿಸಿಕೊಂಡಿರುವ ಶಾಲೆಗಳ 5 ಅಥವಾ 6 ನಿಮಿಷದ ವೀಡಿಯೋ ಜೊತೆ ಹೆಚ್ಚಿನ ವಿಡಿಯೋಗಳನ್ನು ಕಳುಹಿಸಲು ಅವಕಾಶ ನೀಡಿತ್ತು. ಅದರಂತೆ ಜಿಲ್ಲೆಯ ಎರಡು ಶಾಲೆಗಳ ವೀಡಿಯೋಗಳನ್ನು ಕಳುಹಿಸಿಕೊಡಲಾಗಿತ್ತು. ತರೀಕೆರೆ ತಾಲೂಕಿನ ಸೊಕ್ಕೆ ಸರಕಾರಿ ಪ್ರೌಢ ಶಾಲೆ ಹಾಗೂ ಚಿಕ್ಕಮಗಳೂರು ತಾಲೂಕಿನ ಯಲಗುಡಿಗೆ ಶಾಲೆಯ ಶಿಕ್ಷಕರು ಬಹಳ ಹಿಂದಿನಿಂದಲೂ ಸಾಕಷ್ಟು ಉತ್ತಮವಾದಂತಹ ಅಭ್ಯಾಸಗಳನ್ನು ಮಕ್ಕಳಲ್ಲಿ ಮಾಡಿಸಿಕೊಂಡು ಬಂದಿದ್ದರು. ಜೊತೆಗೆ ಬೇರೆ ಕ್ಷೇತ್ರಗಳಲ್ಲೂ ತಮ್ಮನ್ನು ಗುರುತಿಸಿಕೊಂಡಿರುವ ಶಾಲೆಗಳು ಇವಾಗಿವೆ ಎಂದರು. ಇದನ್ನೂ ಓದಿ: ದಾರಿಯಲ್ಲಿ ಸಿಕ್ಕ ಪರ್ಸ್ ಹಿಂದಿರುಗಿಸಿ ಮಾನವೀಯತೆ ಮೆರೆದ ಶಿಕ್ಷಕ

    2 ಶಾಲೆಗಳು ಸುಮಾರು ಐದರಿಂದ ಆರು ನಿಮಿಷದ ವೀಡಿಯೋಗಳನ್ನು ನಮಗೆ ಕಳುಹಿಸಿಕೊಟ್ಟಿತ್ತು. ನಾವು ಆ ವಿಡಿಯೋಗಳನ್ನು ಧಾರವಾಡಕ್ಕೆ ಕಳುಹಿಸಿದ್ದೆವು. ಈಗ ರಾಜ್ಯದ ಶಾಲೆಗಳಲ್ಲಿ ಉತ್ತಮ ಅಭ್ಯಾಸಗಳನ್ನ ಮಾಡಿಕೊಂಡಿರುವ ಶಾಲೆಗಳ ಪಟ್ಟಿಯಲ್ಲಿ ನಮ್ಮ ಜಿಲ್ಲೆಯ ಎರಡು ಶಾಲೆಗಳು ಸೇರಿರುವುದು ಸಂತಸದ ವಿಷಯ. ಬೇರೆ ಜಿಲ್ಲೆಗಳಲ್ಲಿ ಒಂದೊಂದು ಶಾಲೆ ಸೇರಿಕೊಂಡಿದ್ದರೆ ನಮ್ಮ ಜಿಲ್ಲೆಯಲ್ಲಿ ಎರಡೂ ಶಾಲೆಗಳು ಸೇರಿರುವುದು ಸಂತಸದ ಸಂಗತಿ ಎಂದು ಅಭಿಪ್ರಾಯಪಟ್ಟರು.

    ಈ ರೀತಿ ಉತ್ತಮವಾದ ಅಭ್ಯಾಸಗಳಿಂದ ಆಯ್ಕೆಯಾದ ಶಾಲೆಗಳಿಗೆ ಸರ್ಕಾರದಿಂದ 5000 ಪ್ರೋತ್ಸಾಹ ಧನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಈಗ ಆಯ್ಕೆಯಾಗಿರುವ ಶಾಲೆಗಳನ್ನು ರಾಜ್ಯ ಮಟ್ಟದಲ್ಲಿ ಆಯ್ಕೆ ಮಾಡಿರುವುದರಿಂದ ಮತ್ತೊಮ್ಮೆ ವಿಡಿಯೋಗಳನ್ನು ಮಾಡಿಕೊಡುವಂತೆ ಸೂಚನೆ ಬಂದಿದೆ. ಮುಂದಿನ ಹದಿನೈದು ದಿನಗಳ ಕಾಲಾವಕಾಶ ಇದೆ. ಆ ದಿನಗಳಲ್ಲಿ ನಾವು ಶಾಲೆಯ ಮತ್ತೊಂದು ವೀಡಿಯೋವನ್ನು ಮಾಡಿ ಕಳುಹಿಸಿಕೊಡಬೇಕಾಗಿದೆ. ಎಸ್.ಡಿ.ಎಂ.ಸಿ, ಪೋಷಕರು ಹಾಗೂ ಊರಿನ ಸಾರ್ವಜನಿಕರ ಸಹಕಾರ ಪಡೆದು ಶಿಕ್ಷಣದಲ್ಲಿ ತಂತ್ರಜ್ಞಾನ ಅಳವಡಿಕೆ ಸೇರಿದಂತೆ ಎಲ್ಲಾ ಅಂಶಗಳನ್ನು ಒಳಗೊಂಡಂತೆ ವೀಡಿಯೋ ಚಿತ್ರೀಕರಣಕ್ಕೆ ತಿಳಿಸಿದ್ದೇವೆ ಅದನ್ನು ಮುಂದೆ ರಾಷ್ಟ್ರ ಮಟ್ಟದ ಆಯ್ಕೆಗಾಗಿ ಕಳುಹಿಸಿಕೊಡುತ್ತೇವೆ. ಈ ಶಾಲೆಗಳು ರಾಷ್ಟ್ರಮಟ್ಟದಲ್ಲೂ ಪ್ರಶಸ್ತಿ ತೆಗೆದುಕೊಳ್ಳಲಿ ಎಂಬುದು ನಮ್ಮ ಆಶಯ ಎಂದಿದ್ದಾರೆ.

  • ಜಗತ್ತಿನಲ್ಲೇ ಜನರಿಗಿಂತ ಹೆಚ್ಚು ವಾಹನ ಹೊಂದಿರೋ ದೇಶವಿದು!

    ಜಗತ್ತಿನಲ್ಲೇ ಜನರಿಗಿಂತ ಹೆಚ್ಚು ವಾಹನ ಹೊಂದಿರೋ ದೇಶವಿದು!

    ಸಾನ್‍ಮರಿನೋ: ದೇಶದಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವುದನ್ನು ಕೇಳಿದ್ದೇವೆ. ಆದ್ರೆ ಜನರಿಗಿಂತ ಹೆಚ್ಚು ವಾಹನಗಳನ್ನು ಹೊಂದಿರುವುದನ್ನು ಕೇಳಿರಲ್ಲಿಕ್ಕಿಲ್ಲ. ಅಂತಹ ಪಟ್ಟಿಗೆ ಸೇರಿದೆ ಸಾನ್ ಮರಿನೋ ರಾಷ್ಟ್ರ.

    ಹೌದು. ವಿಶ್ವದ ಅತಿ ಪುಟ್ಟ ಸ್ವತಂತ್ರ ರಾಷ್ಟ್ರಗಳಲ್ಲಿ ಒಂದಾದ ಈ ದೇಶದಲ್ಲಿ ಜನರು ಕಡಿಮೆ. ವಾಹನಗಳು ಜಾಸ್ತಿ ಇವೆ. ಈ ರಾಷ್ಟ್ರದಲ್ಲಿ ಸುಮಾರು 34 ಸಾವಿರ ಜನರಿದ್ದಾರೆ. ಅಂಕಿ ಅಂಶಗಳ ಪ್ರಕಾರ ಈ ರಾಷ್ಟ್ರದ ಸರಾಸರಿ 1 ಸಾವಿರ ಜನರಿಗೆ 1,263 ವಾಹನಗಳಿವೆ. ಮಾತ್ರವಲ್ಲದೇ ಈ ದೇಶ ಒಟ್ಟು ಜಿಡಿಪಿಯಲ್ಲೂ ಶ್ರೀಮಂತವಾಗಿದೆ.

    ಸಾನ್ ಮರಿನೋ ಹಾಗೂ ವಾಟಿಕನ್ ಸಿಟಿ ಈ ಎರಡೂ ರಾಷ್ಟ್ರಗಳು ಸಂಪೂರ್ಣವಾಗಿ ಇಟಲಿಯ ಒಳಗೆ ಹುದುಗಿಕೊಂಡಿವೆ. ಇನ್ನು ಮೂರನೇ ರಾಷ್ಟ್ರವಾದ ಲೆಸ್ತೋ ಸಂಪೂರ್ಣವಾಗಿ ದಕ್ಷಿಣ ಆಫ್ರಿಕಾದಿಂದ ಸುತ್ತುವರಿದಿದೆ.