Tag: ರಾಷ್ಟ್ರೀಯ ಕಾಂಗ್ರೆಸ್

  • ಲೋಕಸಭಾ ಚುನಾವಣೆಗೂ ಮುನ್ನವೇ ಭಾರತ್ ಜೋಡೊ-2.0ಗೆ ಕಾಂಗ್ರೆಸ್‌ ಚಿಂತನೆ

    ಲೋಕಸಭಾ ಚುನಾವಣೆಗೂ ಮುನ್ನವೇ ಭಾರತ್ ಜೋಡೊ-2.0ಗೆ ಕಾಂಗ್ರೆಸ್‌ ಚಿಂತನೆ

    ನವದೆಹಲಿ: ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ಬಳಿಕ, ಲೋಕಸಭಾ ಚುನಾವಣೆಗೂ (Lok Sabha Elections) ಮುನ್ನವೇ ಕಾಂಗ್ರೆಸ್‌ 2ನೇ ಹಂತದ ಭಾರತ್‌ ಜೋಡೋ ಯಾತ್ರೆ (Bharat Jodo Yatra) ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ. ಡಿಸೆಂಬರ್‌ ತಿಂಗಳಿಂದ ಫೆಬ್ರವರಿ ನಡುವೆ ಯಾವುದೇ ಸಮಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

    ಸಂಸದ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲೇ 2ನೇ ಹಂತದ ಭಾರತ್ ಜೋಡೊ ಮುಂದುವರಿಯಲಿದ್ದು, ಹೈಬ್ರಿಡ್ ಮೋಡ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಕಾರ್ಯಕ್ರದಲ್ಲಿ ಭಾಗವಹಿಸುವವರು ಕಾಲ್ನಡಿಗೆಯಲ್ಲಿ ಮೆರವಣಿಗೆ ಅಥವಾ ವಾಹನಗಳನ್ನು ಬಳಸಬಹುದಾಗಿದೆ. ಆದ್ರೆ ರಾಹುಲ್‌ ಗಾಂಧಿ ಈ ಮೊದಲಿನಂತೆ ಕಾಲ್ನಡಿಗೆಯಲ್ಲೇ ಯಾತ್ರೆ ಮಾಡಲಿದ್ದಾರೆ. ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ ಘೋಷಣೆ – ರಾಜ್ಯ ಬಿಜೆಪಿ ಶಾಸಕರಿಗೆ ಹೈಕಮಾಂಡ್ ಜವಾಬ್ದಾರಿ ಹಂಚಿಕೆ

    ಭಾರತ್‌ ಜೋಡೋ ಯಾತ್ರೆಯ ಮೊದಲ ಹಂತವು ಸೆಪ್ಟೆಂಬರ್ 7, 2022 ರಿಂದ ಜನವರಿ 2023ರವರೆಗೂ ನಡೆಯಿತು. ತಮಿಳುನಾಡಿನ (TamilNadu) ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಸರಿಸುಮಾರು 4,080 ಕಿಮೀ ಗಳಷ್ಟು ದೂರ ಕ್ರಮಿಸಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಯಾತ್ರೆಯನ್ನ ಮುಕ್ತಾಯಗೊಳಿಸಲಾಗಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ

    ಯಾತ್ರೆಯು 12 ರಾಜ್ಯಗಳ 75 ಜಿಲ್ಲೆಗಳ ಮೂಲಕ 126 ದಿನಗಳಲ್ಲಿ ಸಾಗಿತು, ಇದು ಭಾರತದ ಸುದೀರ್ಘ ಪಾದಯಾತ್ರೆಯಾಗಿದೆ. ಕಾಂಗ್ರೆಸ್ ನಾಯಕರು ಮತ್ತು ಯಾತ್ರೆಯಲ್ಲಿ ಭಾಗವಹಿಸುವ ಇತರರು ಆಯಾ ರಾಜ್ಯಗಳಲ್ಲಿ ತಳಮಟ್ಟದ ಜನಸಂಖ್ಯೆಯೊಂದಿಗೆ ಸಂವಾದದಲ್ಲಿ ಭಾಗಿಯಾಗಿದ್ದರು. ಈ ಜನಾಂದೋಲನದ ಪ್ರಾಥಮಿಕ ಉದ್ದೇಶವು ಕಾಂಗ್ರೆಸ್‌ನಿಂದ ಪ್ರಚಾರ ಮಾಡಲ್ಪಟ್ಟಿದೆ. ಜನರ ಜೊತೆಗೆ ರಾಹುಲ್ ಗಾಂಧಿ ಅವರೂ ಸಹ ಸಂವಾದ ನಡೆಸಿ, ಸಮಸ್ಯೆಗಳನ್ನು ಆಲಿಸಿದ್ದರು. ಕೇಂದ್ರ ಸರ್ಕಾರದ ಆಡಳಿತ, ಬಿಜೆಪಿ ವಿಭಜಕ ರಾಜಕೀಯದ ವಿರುದ್ಧ ಭಾರತವನ್ನು ಒಂದುಗೂಡಿಸುವುದು. ನಿರುದ್ಯೋಗ ಮತ್ತು ಅಸಮಾನತೆಯಂತಹ ಇತರ ಸಾಮಾಜಿಕ-ಆರ್ಥಿಕ ಸಮಸ್ಯೆಗಳನ್ನು ಬಗ್ಗೆ ರಾಹುಲ್ ಗಾಂಧಿ ಚರ್ಚಿಸಿದ್ದರು.

    ಕಳೆದ ಸೆಪ್ಟೆಂಬರ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಪಕ್ಷವು 2ನೇ ಹಂತದ ಭಾರತ್‌ ಜೋಡೋ ಯಾತ್ರೆ ಯೋಜಿಸುತ್ತಿದೆ. ಯೋಜನೆಯು ನಿರ್ಮಾಣ ಹಂತದಲ್ಲಿದೆ ಎಂದು ಹೇಳಿದ್ದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ರಾಹುಲ್ ಗಾಂಧಿ ಅವರನ್ನು ಪೂರ್ವದಿಂದ ಪಶ್ಚಿಮಕ್ಕೆ ಮತ್ತೊಂದು ಭಾರತ್ ಜೋಡೋ ಯಾತ್ರೆ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದನ್ನೂ ಓದಿ: ಕೇಜ್ರಿವಾಲ್ ಜೈಲಿಗೆ ಹೋದರೂ ಅವರೇ ಸಿಎಂ ಆಗಿ ಮುಂದುವರಿಯಬೇಕು: ದೆಹಲಿ ಸಚಿವೆ

  • ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್ – ನಾನು ಸಿಎಂ ಆಗ್ಬೋದು ಅಂದ ಪ್ರತಿಭಾ ಸಿಂಗ್

    ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್ – ನಾನು ಸಿಎಂ ಆಗ್ಬೋದು ಅಂದ ಪ್ರತಿಭಾ ಸಿಂಗ್

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಒಟ್ಟು 68 ಸ್ಥಾನಗಳ ಪೈಕಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಈ ಬಾರಿ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್‌ ಸಿದ್ಧವಾಗಿದೆ.

    ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯನ್ನ ನಿರ್ಧರಿಸಲು ಇಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ವರಿಷ್ಠರ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಮುಖ್ಯಮಂತ್ರಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ಹೇಗೆ?

    ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ (Sonia Gandhi) ಹಾಗೂ ಹೈಕಮಾಂಡ್ ಚುನಾವಣೆಗೂ (Election) ಮುನ್ನ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನನಗೆ ನೀಡಿದ್ದರು. ಆದ್ದರಿಂದ ನಾನು ಸಿಎಂ ಆಗಿ ಮುಂದುವರಿಯಬಹುದೆಂದು ಭಾವಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: `ನಮೋ’ಗೆ ಜೈ ಎಂದ ಗುಜರಾತ್ ಜನ – ನೋಟಾ ಮತ ಶೇ.9ರಷ್ಟು ಇಳಿಕೆ

    ಜನರು ದಿ. ವೀರಭದ್ರ ಸಿಂಗ್ ಅವರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದರಿಂದಲೇ ಕಾಂಗ್ರೆಸ್ 40 ಸ್ಥಾನಗಳನ್ನು ಗೆದ್ದಿದೆ. ಅಂತಹವರ ಕುಟುಂಬವನ್ನು ಕಡೆಗಣಿಸುವುದಿಲ್ಲ ಎಂದು ಹೇಳಿದ್ದಾರೆ.

    ಮಾಜಿ ಸಚಿವರೂ ಆದ ದಿ. ವೀರಭದ್ರ ಸಿಂಗ್ ಅವರು ದೀರ್ಘಕಾಲದ ವರೆಗೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕರಾಗಿ ಉತ್ತಮ ಆಡಳಿತ ನಡೆಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ಮಾಜಿ ನಾಯಕ ಜೈವೀರ್ ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ನೇಮಕ

    ಕಾಂಗ್ರೆಸ್ ಮಾಜಿ ನಾಯಕ ಜೈವೀರ್ ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ನೇಮಕ

    ನವದೆಹಲಿ: ಕಾಂಗ್ರೆಸ್ (Congress) ನಿಂದ ಬಿಜೆಪಿಗೆ (BJP) ಪಕ್ಷಾಂತರ ಮಾಡಿರುವ ನಾಯಕರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆಗಳನ್ನ ನೀಡಲಾಗಿದೆ.

    3 ತಿಂಗಳ ಹಿಂದೆಯಷ್ಟೇ ರಾಷ್ಟ್ರೀಯ ಕಾಂಗ್ರೆಸ್‌ಗೆ (National Congress) ಗುಡ್‌ಬೈ ಹೇಳಿದ್ದ ಜೈವೀರ್ ಶೆರ್ಗಿಲ್ (Jaiveer Shergill) ಅವರನ್ನ ಬಿಜೆಪಿ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಿದೆ. ಇದರೊಂದಿಗೆ ಪಂಜಾಬ್ (Punjab) ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ (Captain Amarinder Singh) ಹಾಗೂ ಮಾಜಿ ಕಾಂಗ್ರೆಸ್ ನಾಯಕ ಸುನೀಲ್ ಜಾಖರ್ ಅವರಿಗೆ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸದಸ್ಯತ್ವ ನೀಡಲಾಗಿದೆ.

    ಜೊತೆಗೆ ಪಕ್ಷವು ಸ್ವತಂತ್ರ ದೇವ್ ಸಿಂಗ್, ಮದನ್ ಕೌಶಿಕ್, ರಾಣಾ ಗುರ್ಮಿತ್ ಸಿಂಗ್ ಸೋಧಿ, ಮನೋರಂಜನ್ ಕಾಲಿಯಾ ಅವರನ್ನ ಗುಂಪಿನಲ್ಲಿ ಸೇರಿಸಿದೆ. ಇದನ್ನೂ ಓದಿ: ಕಾಂಗ್ರೆಸ್‍ನ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ

    ಕಳೆದ ಆಗಸ್ಟ್ 24 ರಂದು ಜೈವೀರ್ ಶೆರ್ಗಿಲ್ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಕುರಿತು ಸೋನಿಯಾಗಾಂಧಿ ಅವರಿಗೆ ಪತ್ರ ಬರೆದಿದ್ದರು. ಇದನ್ನೂ ಓದಿ: ಕಾಂಗ್ರೆಸ್ ರೌಡಿಗಳನ್ನ ತಯಾರು ಮಾಡೋ ಫ್ಯಾಕ್ಟರಿ – ಆರ್.ಅಶೋಕ್

    ಪತ್ರದಲ್ಲಿ, ಉನ್ನತ ನಾಯಕರು ತಮ್ಮ ಸಿದ್ಧಾಂತಕ್ಕಾಗಿ ಹೋರಾಡುವುದಕ್ಕಿಂತ ವಿದೇಶ ಪ್ರವಾಸದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಪಕ್ಷಕ್ಕಾಗಿ ನಾವು ಕೆಲಸ ಮಾಡಲು ಸಾಧ್ಯವಿಲ್ಲ. ಅಲ್ಲದೆ ಪಕ್ಷದ ನಿರ್ಧಾರವು ಸ್ವಯಂ ಸೇವಾ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ. ಇದು ನನಗೆ ತುಂಬಾ ನೋವುಂಟು ಮಾಡಿದೆ ಎಂದು ಹೇಳಿಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಗಾಂಧಿ ಕುಟುಂಬದ ಯಾರೊಬ್ಬರೂ AICC ಅಧ್ಯಕ್ಷರಾಗಬಾರದೆಂದು ರಾಹುಲ್ ನಿರ್ಧರಿಸಿದ್ದಾರೆ – ಅಶೋಕ್ ಗೆಹ್ಲೋಟ್

    ಗಾಂಧಿ ಕುಟುಂಬದ ಯಾರೊಬ್ಬರೂ AICC ಅಧ್ಯಕ್ಷರಾಗಬಾರದೆಂದು ರಾಹುಲ್ ನಿರ್ಧರಿಸಿದ್ದಾರೆ – ಅಶೋಕ್ ಗೆಹ್ಲೋಟ್

    ನವದೆಹಲಿ/ತಿರುವನಂತಪುರಂ: ಗಾಂಧಿ ಕುಟುಂಬದ (Gandhi Family) ಯಾರೊಬ್ಬರೋ ಕಾಂಗ್ರೆಸ್ (Congress) ಮುಖ್ಯಸ್ಥರಾಗಬಾರದೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸ್ಪಷ್ಟಪಡಿರುವುದಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ತಿಳಿಸಿದ್ದಾರೆ.

    ಭಾರತ್ ಜೋಡೋ ಯಾತ್ರೆ (Bharat Jodo Yatra) ಯಲ್ಲಿ ಪಾಲ್ಗೊಂಡಿರುವ ಸಿಎಂ (Rajasthan Chief Minister), ಕೇರಳದಲ್ಲಿ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಎಲ್ಲರ ಆಶಯದಂತೆ ಕಾಂಗ್ರೆಸ್ (Congress) ಅಧ್ಯಕ್ಷರಾಗಿ ಮರಳಲು ಸಾಕಷ್ಟು ಬಾರಿ ಅವರಲ್ಲಿ ವಿನಂತಿಸಿದೆ. ಆದರೆ ರಾಹುಲ್ ಜೀ ಅವರು, ನಾನು ಎಲ್ಲರ ಆಶಯವನ್ನು ಗೌರವಿಸುತ್ತೇನೆ. ಆದರೆ ಒಂದೇ ಒಂದು ಕಾರಣಕ್ಕಾಗಿ ಗಾಂಧಿ ಕುಟುಂಬೇತರರು ಕಾಂಗ್ರೆಸ್ ಅಧ್ಯಕ್ಷರಾಗಬೇಕೆಂದು ನಿರ್ಧರಿಸಿದ್ದೇನೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

    ಬಿಜೆಪಿಯ (BJP) ಸ್ವಜನ ಪಕ್ಷಪಾತದ ಆರೋಪವೇ ರಾಹುಲ್ ಗಾಂಧಿ ಈ ನಿರ್ಧಾರಕ್ಕೆ ಕಾರಣ ಎಂದು ಪ್ರಶ್ನಿಸಿದ ಮಾಧ್ಯಮಗಳಿಗೆ ಉತ್ತರಿಸಿದ ಅವರು, 2019 ರಲ್ಲಿ ಯಾವುದೇ ಹುದ್ದೆಗಳಿಲ್ಲದೇ ಕೆಲಸ ಮಾಡುವುದಾಗಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ತಿಳಿಸಿದ್ದರು. ಅದರಂತೆ ಅವರು ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪತ್ರಕರ್ತೆ ಹಿಜಬ್ ಧರಿಸದ್ದಕ್ಕೆ ಸಂದರ್ಶನವನ್ನೇ ರದ್ದುಗೊಳಿಸಿದ ಇರಾನ್ ಅಧ್ಯಕ್ಷ

    ಈ ಹಿಂದೆ ಉದಯಪುರದಲ್ಲಿ ನಡೆದಿದ್ದ ಕಾಂಗ್ರೆಸ್‌ನ ಚಿಂತನಾ ಶಿಬಿರದಲ್ಲಿ `ಒಬ್ಬ ವ್ಯಕ್ತಿ – ಒಂದು ಹುದ್ದೆ’ ನಿಯಮವನ್ನೂ ಅಳವಡಿಸಿಕೊಂಡಿದೆ. ಇದನ್ನೂ ಓದಿ: ಬೆಂಗಳೂರು ಬಳಿಕ ಈಗ ಜಿಲ್ಲೆಗಳಿಗೂ ನುಗ್ಗಿದ ಬುಲ್ಡೋಜರ್‌ – ವಿಜಯನಗರದಲ್ಲಿ 40ಕ್ಕೂ ಹೆಚ್ಚು ಮನೆಗಳಿಗೆ ನೋಟಿಸ್‌

    ಅಶೋಕ್ ಗೆಹ್ಲೋಟ್ ಸಹ ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಸೋಮವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.

    ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ (Congress Presidential Election) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಸೆಪ್ಟೆಂಬರ್ 24 ರಿಂದ 30 ರವರೆಗೆ ನಡೆಯಲಿದೆ. ಅಕ್ಟೋಬರ್ 1 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನಾಂಕವಾಗಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಲ್ಲಿ, ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 19 ರಂದು ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ರಾಹುಲ್ ಗಾಂಧಿಯೇ ಮುಂದಿನ ಕಾಂಗ್ರೆಸ್ ಅಧ್ಯಕ್ಷ – TNCC ಸಭೆ ನಿರ್ಣಯ

    ರಾಹುಲ್ ಗಾಂಧಿಯೇ ಮುಂದಿನ ಕಾಂಗ್ರೆಸ್ ಅಧ್ಯಕ್ಷ – TNCC ಸಭೆ ನಿರ್ಣಯ

    ಚೆನ್ನೈ: ರಾಜಸ್ಥಾನ, (Rajasthana) ಛತ್ತಿಸ್‌ಗಢದ ನಂತರ ತಮಿಳುನಾಡು (Tamilnadu) ಮತ್ತು ಬಿಹಾರದ ಕಾಂಗ್ರೆಸ್ ಘಟಕಗಳು ರಾಹುಲ್ ಗಾಂಧಿ (Rahul Gandhi) ಅವರೇ ರಾಷ್ಟ್ರೀಯ ಕಾಂಗ್ರೆಸ್ (National Congress) ಅಧ್ಯಕ್ಷರಾಗಬೇಕು ಎಂದು ನಿರ್ಣಯ ತೆಗೆದುಕೊಂಡಿವೆ.

    ಸೆಪ್ಟೆಂಬರ್ 22ರಂದು ಕಾಂಗ್ರೆಸ್ ಅಧ್ಯಕ್ಷರ (Congress President) ಚುನಾವಣೆಗೆ (Election) ಅಧಿಸೂಚನೆ ಹೊರಬೀಳಲಿದ್ದು, ಇಂದು ನಡೆದ ಟಿಎನ್‌ಸಿಸಿ (ತಮಿಳುನಾಡು ರಾಜ್ಯ ಕಾಂಗ್ರೆಸ್ ಸಮಿತಿ) ನಡೆದ ಸಾಮಾನ್ಯ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಆರ್ಥಿಕ ಇಲಾಖೆಯೇ ಎಲ್ಲಾ ಮಾಡಬೇಕಾದ್ರೆ ಸಚಿವರು ಯಾಕೆ ಬೇಕು? ಆಯನೂರು ಮಂಜುನಾಥ್ ಆಕ್ರೋಶ

    ಕಾಂಗ್ರೆಸ್ ಅಧ್ಯಕ್ಷ (AICC President) ಸ್ಥಾನಕ್ಕೆ ಸೆಪ್ಟೆಂಬರ್ 24 ರಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಸೆ.30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 8ರ ವರೆಗೂ ನಾಮಪತ್ರ ಹಿಂಪಡೆಯಲು ಅವಕಾಶವಿರಲಿದೆ. ಅ.17 ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಧರಿಸಿದ್ದು ಅ.19 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಸ್ನಾನದ ವೀಡಿಯೋ ಲೀಕ್ – ವಾಶ್ ರೂಂ ಅಂದ್ರೆನೇ ಬೆಚ್ಚಿ ಬೀಳ್ತಿದ್ದಾರೆ ವಿದ್ಯಾರ್ಥಿನಿಯರು

    ಇಂದು ನಡೆದ ರಾಜ್ಯ ಕಾಂಗ್ರೆಸ್ ಪ್ರತಿನಿಧಿಗಳ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಹಾಗೂ ಎಐಸಿಸಿ ಅಧ್ಯಕ್ಷರು ಎಐಸಿಸಿ ಪ್ರತಿನಿಧಿ, ಪಿಸಿಸಿ ಅಧ್ಯಕ್ಷರು, ಖಜಾಂಚಿ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ರಚಿಸಲು ಅಧಿಕಾರ ಹೊಂದಿರುತ್ತಾರೆ ಎಂದು ಛತ್ತಿಸ್‌ಗಢ ಘಟಕ ನಿರ್ಣಯ ತೆಗೆದುಕೊಂಡ ಬಳಿಕ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ನಾನು ಕಾಂಗ್ರೆಸ್ ಅಧ್ಯಕ್ಷನಾಗಬೇಕೇ – ಇಲ್ಲವೇ ಎಂಬುದು ಅಧ್ಯಕ್ಷ ಸ್ಥಾನದ ಚುನಾವಣೆ ನಡೆದಾಗ ಸ್ಪಷ್ಟವಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಾನು ಸುಸ್ತಾಗಿದ್ದೇನೆ, ಜ್ವರ 100 ಡಿಗ್ರಿಗೆ ಬಂದಿದೆ – 11 ದಿನದಿಂದ ಮನೆಗೇ ಹೋಗಿಲ್ಲ ಅಂದ ಡಿಕೆಶಿ

    ನಾನು ಸುಸ್ತಾಗಿದ್ದೇನೆ, ಜ್ವರ 100 ಡಿಗ್ರಿಗೆ ಬಂದಿದೆ – 11 ದಿನದಿಂದ ಮನೆಗೇ ಹೋಗಿಲ್ಲ ಅಂದ ಡಿಕೆಶಿ

    ಮೈಸೂರು: ನಾನು ಮನೆ ಬಿಟ್ಟು 11 ದಿನ ಆಯ್ತು. ಈಗ ಸ್ವಲ್ಪ ಸುಸ್ತಾಗಿದ್ದೇನೆ. ಜ್ವರ (Fever) 100 ಡಿಗ್ರಿಗೆ ಬಂದಿದೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ಮೈಸೂರಿನಲ್ಲಿಂದು (Mysuru) ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್, ನಾನು ಸ್ವಲ್ಪ ಸುಸ್ತಾಗಿದ್ದೇನೆ. ಡಾಕ್ಟರ್ (Doctor) ಬಂದು ಚೆಕ್ ಮಾಡಿದ್ರು. ಜ್ವರ 100 ಡಿಗ್ರಿಗೆ ಬಂದಿದೆ. 11 ದಿನವಾಯ್ತು ನಾನು ಮನೆ ಬಿಟ್ಟು. ಸಿದ್ದರಾಮಯ್ಯ (Siddaramaiah) ಅವರು ಸದನದಲ್ಲಿ ಇದ್ದ ಕಾರಣ ನಾನೇ ಎಲ್ಲಾ ಕಡೆ ಓಡಾಡುತ್ತಿದ್ದೆನೆ ಎಂದು ತಿಳಿಸಿದ್ದಾರೆ.

    ಕರ್ನಾಟಕ (Karnataka) ಭ್ರಷ್ಟಾಚಾರ ರಾಜಧಾನಿಯಾಗಿದೆ. ಗಾಂಧಿ (Gandhi Family) ಕುಟುಂಬಕ್ಕೆ ಕೇಂದ್ರ ಸರ್ಕಾರ (Central Government) ಬಹಳ ಕಿರುಕುಳ ನೀಡುತ್ತಿದೆ. ಕಿರುಕುಳ ಕೊಟ್ಟರೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ (Rahul Gandhi) ಅದಕ್ಕೆ ಹೆದರಲ್ಲ. `ಡಿಕೆ ನಾನು ಜೈಲಿಗೆ ಹೋಗಲು ರೆಡಿಯಾಗಿದ್ದೇನೆ? ಹೇಗಿತ್ತು ನಿನಗೆ ಜೈಲಿನ ಅನುಭವ ಹೇಳು? ನನ್ನ ಇಡೀ ಕುಟುಂಬ ತ್ಯಾಗದ ಕುಟುಂಬ ನನ್ನದೇನಿದೆ? ಇವರಿಗೆ ಹೆದರಲ್ಲ ನಾನು ಅಂತಾ ರಾಹುಲ್ ಗಾಂಧಿ ನನಗೆ ಹೇಳಿದರು. ಎಂದು ರಾಹುಲ್‌ಗಾಂಧಿ ಅವರೊಂದಿಗಿನ ಸಂಭಾಷಣೆಯನ್ನು ಬಿಚ್ಚಿಟ್ಟಿದ್ದಾರೆ.

    ಮೈಸೂರಿಗೆ ಬರ್ತಾರೆ ಮಹಾ ನಾಯಕಿ: ಮೈಸೂರು ಭಾಗಕ್ಕೆ ಯಾವತ್ತೂ ಬಾರದ ದೊಡ್ಡ ಮಹಿಳಾ ನಾಯಕಿ ಬರುತ್ತಾರೆ. ಆವತ್ತು ಕಾಂಗ್ರೆಸ್ ಮಹಿಳೆಯರ ಶಕ್ತಿ ಪ್ರದರ್ಶನ ಮಾಡಬೇಕು. ಈ ಭಾಗಕ್ಕೆ ಬರ್ತಿರೋ ನಾಯಕಿ ಯಾರು ಅಂತಾ ನಾನು ಈಗ ಹೇಳಲ್ಲ. ಆ ನಾಯಕಿ ಬಂದ ದಿನ ದೊಡ್ಡ ಶಕ್ತಿ ಪ್ರದರ್ಶನ ಮಾಡಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ಟಿಕೆಟ್ ಫೈನಲ್ ಮಾಡುತ್ತೆ- ಡಿಕೆ ವಿರುದ್ಧ ಮುಗಿಬಿದ್ದ ಸಿದ್ದು ಬಣ

    ಎಲ್ಲದಕ್ಕೂ ಲೆಕ್ಕ ಇಡುತ್ತೇನೆ: ಮೈಸೂರು ಜಿಲ್ಲೆಯ ಶಾಸಕರು, ಮಾಜಿ ಶಾಸಕರು ತಲಾ 15 ಸಾವಿರ ಜನರನ್ನ ಕರೆದುಕೊಂಡು ಬರಬೇಕು. ಸಿದ್ದರಾಮಯ್ಯ ಅವರು 5 ಸಾವಿರ ಜನ ಹೇಳಿದ್ದು ದೂರದ ಪ್ರದೇಶದ ಶಾಸಕರಿಗೆ ಮಾತ್ರ. ಮೈಸೂರು ಭಾಗದ ಶಾಸಕರು, ಮಾಜಿ ಶಾಸಕರು 15 ಸಾವಿರ ಜನ ಕರೆದುಕೊಂಡು ಬರಲೇಬೇಕು. ನೀವೇ ಟೀ ಶರ್ಟ್ ಮಾಡಿಸಿ. ಅದರಲ್ಲಿ ನನ್ನ ಫೋಟೋ, ಸಿದ್ದರಾಮಯ್ಯ ಅವರ ಫೋಟೋ ಬೇಡ. ನಿಮ್ಮ ಫೋಟೋ, ರಾಹುಲ್ ಗಾಂಧಿ ಫೋಟೋ ಹಾಕಿಸಿಕೊಳ್ಳಿ ಸಾಕು. ಕೆಲಸ ಮಾಡದೇ ಇದ್ದರೆ ಅಂಥವರ ಜಾಗಕ್ಕೆ ಬೇರೆಯವರನ್ನ ಸಿದ್ದ ಮಾಡಿ. ಯಾರು ಎಷ್ಟು ಜನ ಕರೆದು ಕೊಂಡು ಬಂದರು ಅನ್ನೋ ಲೆಕ್ಕವನ್ನು ಸರಿಯಾಗಿ ಮಾಡಿಸುತ್ತೇನೆ, ಎಲ್ಲದಕ್ಕೂ ಲೆಕ್ಕ ಇಡುತ್ತೇನೆ ಎಂದು ಡಿಕೆಶಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 8 ವರ್ಷದಲ್ಲಿ ಭಾರತ ದುರ್ಬಲವಾಗಿದೆ, ವಸ್ತುಗಳ ಬೆಲೆ ಭಾರೀ ಏರಿಕೆಯಾಗಿದೆ: ರಾಹುಲ್ ಕಿಡಿ

    8 ವರ್ಷದಲ್ಲಿ ಭಾರತ ದುರ್ಬಲವಾಗಿದೆ, ವಸ್ತುಗಳ ಬೆಲೆ ಭಾರೀ ಏರಿಕೆಯಾಗಿದೆ: ರಾಹುಲ್ ಕಿಡಿ

    ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದಲ್ಲಿ ದ್ವೇಷ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದ್ವೇಷವನ್ನು ಹರಡುತ್ತಾ ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದೆ. 8 ವರ್ಷಗಳಲ್ಲಿ ಭಾರತವನ್ನು ದುರ್ಬಲಗೊಳಿಸಿದ್ದು, ಪಾಕಿಸ್ತಾನ ಮತ್ತು ಚೀನಾ ಇದರ ಲಾಭ ಪಡೆದುಕೊಳ್ಳುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

    ರಾಹುಲ್ ಗಾಂಧಿ ಅವರು ಬೆಲೆ ಏರಿಕೆ ವಿರೋಧಿಸಿ ದೇಶದಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ರ‍್ಯಾಲಿಯನ್ನುದ್ದೇಶಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಮಾತನಾಡಿದರು. ಇದನ್ನೂ ಓದಿ: ಸುಳಿವು ಕೊಟ್ಟು ಆ ಪದ ನಾನು ಹೇಳಲ್ಲ – ನಾಚಿ ನೀರಾದ ದ್ರಾವಿಡ್, ಬಿದ್ದುಬಿದ್ದು ನಕ್ಕ ಪತ್ರಕರ್ತರು

    ದೇಶದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿಂದಲೂ ದ್ವೇಷ ಬೆಳೆಯುತ್ತಿದೆ. ಹಣದುಬ್ಬರ, ನಿರುದ್ಯೋಗ ಸಮಸ್ಯೆ ಬೆಲೆ ಏರಿಕೆ ಮೊದಲಾದ ಸಮಸ್ಯೆಗಳು ಜನರನ್ನು ದ್ವೇಷದ ಕಡೆ ತಿರುಗುವಂತೆ ಮಾಡುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಎರಡೂ ಸೇರಿ ದೇಶವನ್ನು ವಿಭಜನೆ ಮಾಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    ದೇಶದಲ್ಲಿ ಭಯ ಮತ್ತು ದ್ವೇಷದಿಂದ ಇಬ್ಬರು ಕೈಗಾರಿಕೋದ್ಯಮಿಗಳಿಗೆ ಲಾಭವಾಗುತ್ತಿದೆ. ವಿಮಾನ ನಿಲ್ದಾಣ, ಬಂದರು ಇದೆಲ್ಲದರ ಪ್ರಯೋಜನವನ್ನೂ ಅವರೇ ಪಡೆಯುತ್ತಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲು ಬಿಜೆಪಿ ಕೆಲಸ ಮಾಡುತ್ತಿದೆ. ನಮ್ಮ ಸಿದ್ಧಾಂತ ದೇಶದ ಪ್ರಗತಿಯಿಂದ ಪ್ರತಿಯೊಬ್ಬರು ಪ್ರಯೋಜನ ಪಡೆಯಬೇಕು ಎಂದು ಹೇಳಿದರೆ, ಪ್ರಧಾನಿ ಅವರ ವಿಚಾರ ಧಾರೆ ಉದ್ಯಮಿಗಳು ಮಾತ್ರ ಪ್ರಯೋಜನ ಪಡೆಯಬೇಕು ಎಂದು ಹೇಳುತ್ತದೆ. ಇದರಿಂದಾಗಿಯೇ ಮೋದಿ ಸರ್ಕಾರ ಜನರಿಗೆ ಉದ್ಯೋಗ ನೀಡಲು ಸಾಧ್ಯವಾಗುತ್ತಿಲ್ಲ. ದಿನದ 24 ಗಂಟೆಯು ಉದ್ಯಮಿಗಳಿಗಾಗಿಯೇ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಮಾಧ್ಯಮ, ನ್ಯಾಯಾಂಗ, ಚುನಾವಣಾ ಆಯೋಗದಂತಹ ಸಂಸ್ಥೆಗಳ ಮೇಲೆ ಈಗಲೂ ಒತ್ತಡವಿದೆ. ಅಲ್ಲದೇ ದೇಶದಲ್ಲಿ ಈಗ ಕಾಣುತ್ತಿರುವ ಬೆಲೆ ಏರಿಕೆ ಹಿಂದೆಂದೂ ನೋಡಿರಲಿಲ್ಲ. ಜನರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಧ್ವನಿ ಎತ್ತಲು ಮುಂದಾದರೆ, ಮೋದಿ ಸರ್ಕಾರ ಅದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: BPL ಕಾರ್ಡ್‌ ಹೊಂದಿರುವ ಎಸ್‌ಸಿ, ಎಸ್‌ಟಿಗಳಿಗೆ ಗೃಹ ಬಳಕೆಗೆ 75 ಯುನಿಟ್‌ ಉಚಿತ ವಿದ್ಯುತ್ – ಆದೇಶ ಹಿಂಪಡೆದ ಸರ್ಕಾರ

    ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಕೇಂದ್ರೀಯ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು ಇತ್ತೀಚೆಗೆ ನಡೆಸಿದ ಶೋಧ ಕಾರ್ಯಾಚರಣೆಗಳ ಬಗ್ಗೆಯೂ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾರು ಮಾತನಾಡುತ್ತಾರೋ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ. ಇತ್ತೀಚೆಗೆ ನನ್ನನ್ನು 55 ಗಂಟೆ ಕಾಲ ಇ.ಡಿ ಕಚೇರಿಯಲ್ಲಿ ಕುಳಿತುಕೊಳ್ಳುವಂತೆ ಮಾಡಲಾಗಿತ್ತು. ಆದರೆ ನಾನು ನಿಮ್ಮ ಇಡಿಗೆ ಹೆದರುವುದಿಲ್ಲ ಎಂದು ಪ್ರಧಾನಿ ಅವರಿಗೆ ಹೇಳಲು ಬಯಸುತ್ತೇನೆ. ಬೇಕಿದ್ದರೆ ನೂರು ವರ್ಷಗಳವರೆಗೂ ಪ್ರಶ್ನೆಗಳನ್ನು ಕೇಳಲಿ ನಾನು ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೇಶ ವಿಭಜನೆ ಒಪ್ಪಿಕೊಳ್ಳದಿದ್ರೆ ಭಾರತ ಛಿದ್ರವಾಗ್ತಿತ್ತು- ಪಟೇಲ್ ಹೇಳಿಕೆ ಪುನರುಚ್ಚರಿಸಿದ ಸೋನಿಯಾ

    ದೇಶ ವಿಭಜನೆ ಒಪ್ಪಿಕೊಳ್ಳದಿದ್ರೆ ಭಾರತ ಛಿದ್ರವಾಗ್ತಿತ್ತು- ಪಟೇಲ್ ಹೇಳಿಕೆ ಪುನರುಚ್ಚರಿಸಿದ ಸೋನಿಯಾ

    ನವದೆಹಲಿ: ಇಂದು ದೆಹಲಿಯ ಕೆಂಪುಕೋಟೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಪ್ರಧಾನಿ ನರೇಂದ್ರ ಮೋದಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸ್ವಾತಂತ್ರ್ಯೋತ್ಸವವನ್ನುದ್ದೇಶಿಸಿ ಮಾತನಾಡಿದರು.

    ಇದೇ ವೇಳೆ ಕೇಂದ್ರ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರು, ಕೇಂದ್ರ ಸರ್ಕಾರ ತನ್ನ ರಾಜಕೀಯ ಪ್ರಚಾರವನ್ನು ಹೆಚ್ಚಿಸಲು ಕಾಂಗ್ರೆಸ್ ನಾಯಕರನ್ನ ಗುರಿಯಾಗಿಸಿದೆ. ನೆಹರು ಅವರನ್ನ ಕಡೆಗಣಿಸಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಪೊಲೀಸರ ವಶಕ್ಕೆ

    ಇಲ್ಲಿ ಸತ್ಯವೆಂದರೆ ಸಾವರ್ಕರ್ ಎರಡು ರಾಷ್ಟ್ರದ ಸಿದ್ಧಾಂತಗಳನ್ನು ಹುಟ್ಟುಹಾಕಿದರು. ಮೊಹಮದ್ ಅಲಿ ಜಿನ್ನಾ ಅದನ್ನು ಪೂರ್ಣಗೊಳಿಸಿದರು. ಅಂದು ನಾವು ದೇಶ ವಿಭಜನೆಯನ್ನು ಒಪ್ಪಿಕೊಳ್ಳದೇ ಇದ್ದಿದ್ದರೆ ಭಾರತವು ಹಲವಾರು ಭಾಗಗಳಾಗಿ ಛಿದ್ರವಾಗುತ್ತಿತ್ತು ಎಂದು ಸರ್ದಾರ್ ಪಟೇಲ್ ಅವರ ಹೇಳಿಕೆಯನ್ನು ಸೋನಿಯಾ ಗಾಂಧಿ ಪುನರುಚ್ಚರಿಸಿದ್ದಾರೆ.

    ಸ್ವಾತಂತ್ರ‍್ಯ ಹೋರಾಟದ ಸಂದರ್ಭದಲ್ಲಿ ಭಾರತೀಯ ಸೇನೆಗಳು ಮಾಡಿದ ತ್ಯಾಗವನ್ನು ಸಂಕುಚಿತಗೊಳಿಸಲಾಗಿದೆ. ಐತಿಹಾಸಿಕ ಸತ್ಯಗಳನ್ನು ಸುಳ್ಳು ಮಾಡಲು ಗಾಂಧಿ, ನೆಹರು, ಆಜಾದ್ ಚಂದ್ರಶೇಖರ್, ಸರ್ದಾರ್ ವಲ್ಲಬಾಯ್ ಪಟೇಲ್ ಅವರಂತಹ ದಕ್ಷ ನಾಯಕರನ್ನು ಕಡೆಗಣಿಸಿದೆ. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Bigg Boss-ಕಿಚ್ಚ ಸುದೀಪ್ ಅವರನ್ನು ಕ್ಷಮೆ ಕೇಳಿದ ಸೋನು ಶ್ರೀನಿವಾಸ್ ಗೌಡ

    Sonia and Modi

    76ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕೆ ಶುಭ ಹಾರೈಸಿದ ಸೋನಿಯಾ ಗಾಂಧಿ, ಕಳೆದ 75 ವರ್ಷಗಳಲ್ಲಿ, ಹೆಚ್ಚು ಪ್ರತಿಭಾವಂತ ಭಾರತೀಯರು ವಿಜ್ಞಾನ, ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ದೇಶವನ್ನು ಪ್ರಗತಿಯ ಹಾದಿಯತ್ತ ಮುನ್ನಡೆಸಿದ್ದಾರೆ. ಭಾರತವೂ ಸಹ ತನ್ನ ವೈವಿಧ್ಯತೆ, ಸಂಸ್ಕೃತಿ ಹಾಗೂ ಭಾಷೆಯ ಗತವೈಭವದ ರಾಷ್ಟ್ರವಾಗಿ ತನ್ನ ತನವನ್ನು ಉಳಿಸಿಕೊಂಡಿದೆ ಎಂದು ಶ್ಲಾಘಿಸಿದರು.

    ಇಂದು ದೆಹಲಿಯ ಕೆಂಪುಕೋಟೆಯಲ್ಲಿ ಭ್ರಷ್ಟಾಚಾರ ಸ್ವಜನಪಕ್ಷಪಾತ, ಕುಟುಂಬ ರಾಜಕಾರಣದ ವಿರುದ್ಧ ಸಮರ ಸಾರಿದ ಪ್ರಧಾನಿ ಮೋದಿ ಭಾರತದ ಪ್ರತಿಭೆಗಳನ್ನು ಮರೆಮಾಚಿದ್ದಾರೆ ಎಂದು ಟೀಕಿಸಿದ್ದಾರೆ.

    Live Tv

  • BJP ಸಂಸದರ ಪತ್ನಿಯರು ಅಡುಗೆ ಮನೆ ಹೇಗೆ ನಿಭಾಯಿಸ್ತಾರೆ: AIUDF ಮುಖ್ಯಸ್ಥ ಪ್ರಶ್ನೆ

    BJP ಸಂಸದರ ಪತ್ನಿಯರು ಅಡುಗೆ ಮನೆ ಹೇಗೆ ನಿಭಾಯಿಸ್ತಾರೆ: AIUDF ಮುಖ್ಯಸ್ಥ ಪ್ರಶ್ನೆ

    ನವದೆಹಲಿ: ಆಹಾರ ಪದಾರ್ಥ, ಇಂಧನ ಹಾಗೂ ಅಗತ್ಯ ವಸ್ತುಗಳ ಮೇಲಿನ ಬೆಲೆ ಏರಿಕೆಯಿಂದಾಗಿ ಪ್ರತಿ ಪಕ್ಷಗಳು ಬಿಜೆಪಿ ವಿರುದ್ಧ ಕಿಡಿಕಾರಿವೆ. ಈ ನಡುವೆ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಸಹ ವಾಗ್ದಾಳಿ ನಡೆಸಿದ್ದಾರೆ.

    ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕಿಡಿ ಕಾರಿದ್ದಾರೆ. ಭಾರತದ ಹಣ, ಹಣಕಾಸು ಸಚಿವರ ಬಳಿಯಿದೆ. ಒಬ್ಬ ವ್ಯಕ್ತಿಯು ಖರಿದಿಸಲು ಎಷ್ಟು ಖರ್ಚು ಮಾಡಬೇಕು ಎಂದು ಅವರು ಹೇಗೆ ತಿಳಿಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚೀನಾದೊಂದಿಗಿನ ಉದ್ವಿಗ್ನದ ಮಧ್ಯೆ ತೈವಾನ್ ರಕ್ಷಣಾ ಅಧಿಕಾರಿ ಶವವಾಗಿ ಪತ್ತೆ

    ಬೆಲೆ ಏರಿಕೆ ಜನಸಂಖ್ಯೆಯ ಮೇಲೆ ಪರಿಣಾಮ ಬೀರುತ್ತಿದೆ. ಯಾವ ಸಚಿವರಿಗೂ ಹಣದುಬ್ಬರವಿಲ್ಲ. ಬಿಜೆಪಿ ಸಂಸದರು ತಮ್ಮ ಪತ್ನಿಯರಿಗೆ ಅಡುಗೆ ಮನೆ ಹೇಗೆ ನಡೆಸುತ್ತಿದ್ದಾರೆ ಎಂದು ಕೇಳಬೇಕು. 2024 ರಲ್ಲಿ ಹಣದುಬ್ಬರವು ಅವರ ಸರ್ಕಾರವನ್ನೇ ತಿನ್ನುತ್ತದೆ. ಈಗಾಗಲೇ ಇದರ ಬೆಳವಣಿಗೆಯನ್ನು ಗಮನಿಸುತ್ತಿರಬೇಕು ಎಂದು ಎಐಯುಡಿಎಫ್ ಮುಖ್ಯಸ್ಥರು ಹೇಳಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ವಾಸುಕಿ ವೈಭವ್ ಎಂಟ್ರಿ: ದೊಡ್ಮನೆಯಲ್ಲಿ ‘ಏನ್ ಕಿತ್ತು ದಬ್ಬಾಕ್ತಿಯೋ’ ಎಂದ ಗಾಯಕ

    ರಾಷ್ಟ್ರೀಯ ಕಾಂಗ್ರೆಸ್ ಬೆಲೆ ಏರಿಕೆ, ಜಿಎಸ್‌ಟಿ ನೀತಿಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರಧಾನಿ ನಿವಾಸಕ್ಕೆ ಘೆರಾವ್? – ಬೆಲೆ ಏರಿಕೆ ವಿರುದ್ಧ ಹೆಚ್ಚಿದ ಕಿಚ್ಚು

    ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರಧಾನಿ ನಿವಾಸಕ್ಕೆ ಘೆರಾವ್? – ಬೆಲೆ ಏರಿಕೆ ವಿರುದ್ಧ ಹೆಚ್ಚಿದ ಕಿಚ್ಚು

    ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್‌ಟಿ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಗಳಿಂದಾಗಿ ಆಕ್ರೋಶಗೊಂಡಿರುವ ರಾಷ್ಟ್ರೀಯ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

    ಪ್ರತಿಭಟನೆಯ ಭಾಗವಾಗಿ `ಪ್ರಧಾನಿ ಮನೆಗೆ ಘೆರಾವ್’ ಹಾಕಲು ಮುಂದಾಗಿದೆ. ಈಗಾಗಲೇ ಸಂಸತ್ ಭವನದಿಂದ `ಚಲೋ ರಾಷ್ಟ್ರಪತಿ ಭವನ್’ ಮೆರವಣಿಗೆ ಆರಂಭಿಸಿದ್ದು, ಧಿಕ್ಕಾರ ಕೂಗುತ್ತಾ ಕಾಲ್ನಡಿಗೆಯಲ್ಲಿ ಹೊರಟಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರು ಮತ್ತು ಹಿರಿಯ ನಾಯಕರು ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗುತ್ತಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆ ಸಂಸದರು ರಾಷ್ಟ್ರಪತಿ ಭವನದವರೆಗೆ ಮೆರವಣಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. ಇದನ್ನೂ ಓದಿ: ನಾಲ್ಕೈದು ಉದ್ಯಮಿಗಳಿಗಾಗಿ ರಾಜಕಾರಣಿಗಳಿಬ್ಬರು ಕೆಲಸ ಮಾಡ್ತಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ

    ಕಾಂಗ್ರೆಸ್ ಬೃಹತ್ ಪ್ರತಿಭಟನೆಗೂ ಮುನ್ನವೇ ದೆಹಲಿಯ ಕೆಲ ಭಾಗಗಳಲ್ಲಿ ದೊಡ್ಡ-ದೊಡ್ಡ ಸಭೆ, ಸಮಾರಂಭಗಳನ್ನ ನಿಷೇಧಿಸಿ ನಿಷೇಧಾಜ್ಞೆ ಹೊರಡಿಸಲಾಗಿದೆ. ಲ್ಯೂಟೆನ್ಸ್ ದೆಹಲಿಯ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಲಿದೆ ಎಂದು ದಿಲ್ಲಿ ಸಂಚಾರ ಪೊಲೀಸರು ಈಗಾಗಲೇ ಸೂಚನೆ ಹೊರಡಿಸಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಎಲ್ಲೆಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆಯೋ, ಆ ಭಾಗಗಳಲ್ಲಿ ಮಾರ್ಗ ಬದಲಾವಣೆ ಹಾಗೂ ಸಂಚಾರ ನಿಯಂತ್ರಣಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ive Tv
    [brid partner=56869869 player=32851 video=960834 autoplay=true]