Tag: ರಾಷ್ಟ್ರೀಯ ಪ್ರಶಸ್ತಿ

  • ಇನ್ಮುಂದೆ ಖಾಸಗಿ ಶಾಲಾ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ಕೇಂದ್ರ ನಿರ್ಧಾರ

    ಇನ್ಮುಂದೆ ಖಾಸಗಿ ಶಾಲಾ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ಕೇಂದ್ರ ನಿರ್ಧಾರ

    ನವದೆಹಲಿ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಖಾಸಗಿ ಶಾಲೆಗಳ ಶಿಕ್ಷಕರಿಗೂ (Private School Teacher) ರಾಷ್ಟ್ರೀಯ ಪ್ರಶಸ್ತಿ (National Awards to Teachers 2023) ನೀಡಲು ಕೇಂದ್ರ ನಿರ್ಧರಿಸಿದೆ.

    ಇಷ್ಟು ದಿನ ಸರ್ಕಾರಿ ಶಾಲಾ ಶಿಕ್ಷಕರಿಗಷ್ಟೇ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತಿತ್ತು. ಇದೀಗ ಕೇಂದ್ರ ಹೊಸ ನಿಯಮವನ್ನು ಜಾರಿಗೆ ತಂದಿದ್ದು, ಈ ವರ್ಷದಿಂದ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತ್ಯತ್ತಮ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ತೀರ್ಮಾನಿಸಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಚಿತ್ರೋದ್ಯಮದ ಗಣ್ಯರು

    ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023ಕ್ಕೆ ಕೇಂದ್ರ ಸರ್ಕಾರ ಅರ್ಜಿ ಆಹ್ವಾನ ಮಾಡಿದೆ. ಜುಲೈ 15 ರವರೆಗೆ ಆನ್‌ಲೈನ್ ಮೂಲಕ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ನೀಡಲಾಗಿದೆ. ಅತ್ಯುತ್ತಮ ಶಿಕ್ಷಕರಿಗೆ ಹಾಗೂ 10 ವರ್ಷ ಸತತವಾಗಿ ಸೇವೆ ಸಲ್ಲಿಸಿರುವ ಖಾಸಗಿ ಶಿಕ್ಷಕರಿಗೂ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಕೃಷಿ ಇಲಾಖೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್ – 2 ಆಮೆಗಳು ಪತ್ತೆ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ : ರಾಷ್ಟ್ರ ಪ್ರಶಸ್ತಿ ಪಡೆದ 4 ಚಿತ್ರಗಳಲ್ಲಿ ವಿಜಯ್ ನಟನೆ

    ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ : ರಾಷ್ಟ್ರ ಪ್ರಶಸ್ತಿ ಪಡೆದ 4 ಚಿತ್ರಗಳಲ್ಲಿ ವಿಜಯ್ ನಟನೆ

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಸಂಚಾರಿ ವಿಜಯ್ ನಟನೆಯ ಕೊನೆಯ ಸಿನಿಮಾ ತಲೆದಂಡ ಚಿತ್ರಕ್ಕೆ ಅತ್ಯುತ್ತಮ ಪರಿಸರ ಕಾಳಜಿ ಸಿನಿಮಾ ರಾಷ್ಟ್ರೀಯ ಗರಿ ದೊರೆತಿದೆ. ಕೃಪಾಕರ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾದಲ್ಲಿ ವಿಜಯ್ ವಿಶೇಷ ಚೇತನ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾದ ನಟನೆಗಾಗಿ ಮತ್ತೊಮ್ಮೆ ವಿಜಯ್ ನ್ಯಾಷಿನಲ್ ಅವಾರ್ಡ್ ಪಡೆಯುತ್ತಾರೆ ಎಂದೇ ಅಭಿಮಾನಿಗಳು ಭಾವಿಸಿದ್ದರು. ಆದರೆ, ಸಿನಿಮಾಗೆ ಈ ಬಾರಿ ಪ್ರಶಸ್ತಿ ಸಂದಿದೆ.

    ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದಿರುವ ವಿಜಯ್, ಹಲವು ವರ್ಷಗಳ ನಂತರ ಕನ್ನಡಕ್ಕೆ ಇಂಥದ್ದೊಂದು ಗೌರವ ಸಿಗಲು ಕಾರಣರಾಗಿದ್ದರು. ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದ ‘ನಾನು ಅವನಲ್ಲ ಅವಳು’ ಸಿನಿಮಾಗಾಗಿ ವಿಜಯ್ ಅವರಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಬಂದಿತ್ತು. ಅಲ್ಲದೇ, ವಿಜಯ್ ನಟನೆಯ ನಾಲ್ಕು ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಬಂದಿದ್ದು, ಮೂರು ಸಿನಿಮಾಗಳಿಗೆ ಮತ್ತು ಒಂದು ಚಿತ್ರಕ್ಕಾಗಿ ವಿಜಯ್ ವೈಯಕ್ತಿಕ ಪ್ರಶಸ್ತಿ ಪಡೆದಿದ್ದಾರೆ. ಓದಿ: Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದ ವರ್ಷವೇ, ವಿಜಯ್ ನಟನೆಯ ಮಂಸೋರೆ ನಿರ್ದೇಶನದ ‘ಹರಿವು’ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿ ಸಿನಿಮಾ ರಾಷ್ಟ್ರ ಪ್ರಶಸ್ತಿ ಸಂದಿತ್ತು. ಅಲ್ಲದೇ, 2018ರಲ್ಲಿ ಮಂಸೋರೆ ನಿರ್ದೇಶನದ ‘ನಾತಿಚರಾಮಿ’ ಸಿನಿಮಾಗೂ ಅತ್ಯುತ್ತಮ ಪ್ರಾದೇಶಿ ಸಿನಿಮಾ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಈ ಸಿನಿಮಾದಲ್ಲೂ ವಿಜಯ್ ನಟಿಸಿದ್ದಾರೆ. ಈ ಬಾರಿ ಕೃಪಾಕರ ನಿರ್ದೇಶನದಲ್ಲಿ ಮೂಡಿ ಬಂದಿರುವ ತಲೆದಂಡ ಸಿನಿಮಾಗೆ ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿಯಾಗಿದೆ. ಈ ಸಂದರ್ಭದಲ್ಲಿ ವಿಜಯ್ ಇರಬೇಕಿತ್ತು ಎನ್ನುವ ಬೇಡಿಕೆ ಹೆ‍ಚ್ಚಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರವಾಸೋದ್ಯಮ ಕ್ಷೇತ್ರದ 3 ವಿಭಾಗಳಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಉತ್ತರಾಖಂಡ್

    ಪ್ರವಾಸೋದ್ಯಮ ಕ್ಷೇತ್ರದ 3 ವಿಭಾಗಳಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಉತ್ತರಾಖಂಡ್

    ಡೆಹ್ರಾಡೂನ್: ಪ್ರವಾಸೋದ್ಯಮ ಕ್ಷೇತ್ರದ ಮೂರು ವಿಭಾಗಗಳಲ್ಲಿ ಉತ್ತರಾಖಂಡ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಗೆದ್ದಿದೆ.

    ಶುಕ್ರವಾರ ಪ್ರವಾಸೋದ್ಯಮ ಸಮೀಕ್ಷೆ ಮತ್ತು ಪ್ರಶಸ್ತಿಗಳನ್ನು ವಿತರಿಸುವ ಕಾರ್ಯಕ್ರಮವನ್ನು ನವದೆಹಲಿಯಲ್ಲಿ ಆಯೋಜಿಸಲಾಯಿತು. ಈ ವೇಳೆ 9 ವಿಭಾಗಗಳಲ್ಲಿ ಭಾರತದ ಅತ್ಯುತ್ತಮ ಪ್ರವಾಸಿ ತಾಣಗಳಿಗೆ ವಿವಿಧ ಪ್ರಶಸ್ತಿಗಳನ್ನು ನೀಡಲಾಯಿತು. ಈ ಪೈಕಿ ಉತ್ತರಾಖಂಡಕ್ಕೆ ಅತ್ಯುತ್ತಮ ವನ್ಯಜೀವಿ ತಾಣ, ಅತ್ಯುತ್ತಮ ಸಾಹಸ ತಾಣ ಮತ್ತು ಅತ್ಯುತ್ತಮ ಆಧ್ಯಾತ್ಮಿಕ ತಾಣಕ್ಕೆ ಅತ್ಯುತ್ತಮ ರಾಷ್ಟ್ರೀಯ ಪ್ರಶಸ್ತಿಯನ್ನು ಲಭಿಸಿದೆ. ಇದನ್ನೂ ಓದಿ: ಬಾಗಿದ ಯೋಗಾನರಸಿಂಹ ಸ್ವಾಮಿ ಗೋಪುರದ ಕಳಶ – ಆತಂಕದಲ್ಲಿ ಭಕ್ತರು

    ಈ ಪ್ರಶಸ್ತಿಯನ್ನು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಅವರು ಉತ್ತರಾಖಂಡದ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್ ಅವರಿಗೆ ನೀಡಿದರು. ಈ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದ ರೆಡ್ಡಿ ಅವರು, ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಗುರುತಿಸಿಕೊಳ್ಳಲು ಹಲವು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

    ಈ ವೇಳೆ ಪ್ರಶಸ್ತಿ ಸ್ವೀಕರಿಸಿದ ನಂತರ ಉತ್ತರಾಖಂಡದ ಪ್ರವಾಸೋದ್ಯಮ ಸಚಿವ ಮಹಾರಾಜ್ ಮಾತನಾಡಿದ್ದು, ಕೊರೊನಾದಿಂದ ಉತ್ತರಾಖಂಡ ಪ್ರವಾಸೋದ್ಯಮವು ಕ್ಷೇಮ ಪ್ರವಾಸೋದ್ಯಮ ಮತ್ತು ಆಯುಷ್ ಕ್ಷೇತ್ರದಲ್ಲಿ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಿದೆ ಎಂದು ಖುಷಿಯನ್ನು ವ್ಯಕ್ತಪಡಿಸಿದರು.

    ಉತ್ತರಾಖಂಡವು ತನ್ನ ನೈಸರ್ಗಿಕ ಸೌಂದರ್ಯದಿಂದ ಶತಮಾನಗಳಿಂದಲೂ ಭಾರತ ಮತ್ತು ವಿದೇಶಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನಮ್ಮ ಉತ್ತರಾಖಂಡವು ಸಾಹಸ ಪ್ರವಾಸೋದ್ಯಮಕ್ಕೆ ಅಪಾರ ಸಾಮಥ್ರ್ಯವನ್ನು ಹೊಂದಿದೆ. ಈ ಪರಿಣಾಮ ಉತ್ತರಾಖಂಡ ಸಾಹಸ ಪ್ರಿಯರಿಗೆ ನೆಚ್ಚಿನ ಸ್ಥಳಗಳಲ್ಲಿ ಒಂದಾಗುತ್ತಿದೆ. ಸಾಹಸ ಕ್ರೀಡೆಗಳನ್ನು ಉತ್ತೇಜಿಸಲು ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ

    ನಾವು ಹೆಚ್ಚು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತೇವೆ. ನೌಕರರು ಮತ್ತು ಸ್ಥಳೀಯ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಯಾವಾಗಲೂ ಬದ್ಧವಾಗಿದೆ. ಅದರಲ್ಲಿಯೂ ಕೇದಾರನಾಥಕ್ಕೆ ಭೇಟಿ ನೀಡುವ ಭಕ್ತರಿಗೆ ಭವಿಷ್ಯದಲ್ಲಿ ಸೌಲಭ್ಯಗಳು ಸಿಗುವಂತೆ ಪ್ರಧಾನಿಗಳ ಮಾರ್ಗಸೂಚಿ ನೀಡಿದ್ದು, ಈ ಹಿನ್ನೆಲೆ ಕೇದಾರನಾಥದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದರು.

  • ವಿಜಯಪುರದ ಕುವರಿಗೆ ರಾಷ್ಟ್ರೀಯ ಪ್ರಶಸ್ತಿ

    ವಿಜಯಪುರದ ಕುವರಿಗೆ ರಾಷ್ಟ್ರೀಯ ಪ್ರಶಸ್ತಿ

    ವಿಜಯಪುರ: ಏಮ್ಸ್, ಅಖಿಲ ಭಾರತ ಮಟ್ಟದ ಪರೀಕ್ಷೆಯಲ್ಲಿ ವಿಜಯಪುರದ ಕುವರಿ ಉತ್ತಮ ಸಾಧನೆ ಮಾಡಿದ್ದು, ರಾಷ್ಟ್ರೀಯ ಪ್ರಶಸ್ತಿ ಪಡೆದು ದೇಶವೇ ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದಾರೆ.

    ವಿಜಯಪುರ ನಗರದ ನಿವಾಸಿ ದಿವ್ಯಾ ಹಿರೊಳ್ಳಿ ಆಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಏಮ್ಸ್) ಸಂಸ್ಥೆಯ ಅಖಿಲ ಭಾರತಮಟ್ಟದ ಪರೀಕ್ಷೆಯಲ್ಲಿ ರಾಷ್ಟ್ರಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಈ ಮೂಲಕ ಕುಟುಂಬದವರು ಮಾತ್ರವಲ್ಲ, ಜಿಲ್ಲೆಯೇ ಖುಷಿ ಪಡುವಂತಹ ಕೆಲಸ ಮಾಡಿದ್ದಾರೆ. ಇದನ್ನೂ ಓದಿ:  ರೈತರು, ನೆರೆ ಸಂತ್ರಸ್ತರಿಗೆ ಪರಿಹಾರಕ್ಕೆ ಅಧಿವೇಶನದಲ್ಲಿ ಒತ್ತಾಯ: ಸತೀಶ್ ಜಾರಕಿಹೊಳಿ

    ನವದೆಹಲಿಯ ಏಮ್ಸ್, ಅಖಿಲ ಭಾರತ ಮಟ್ಟದಲ್ಲಿ ಆಯೋಜಿಸಿದ್ದ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ನವೆಂಬರ್ 20 ರಂದು ಪರೀಕ್ಷೆ ನಡೆದಿತ್ತು. ದಿವ್ಯ ಹಿರೊಳ್ಳಿ ಅವರು ಏಮ್ಸ್ ಪರೀಕ್ಷೆಯಲ್ಲಿ ಶೇ.67.08 ಅಂಕಗಳೊಂದಿಗೆ ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ:  ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಕೊಚ್ಚಿಹೋದ ಸೇತುವೆಗೆ ಡಿಸಿ, ಎಸ್ಪಿ ಭೇಟಿ, ಶೀಘ್ರ ದುರಸ್ತಿಗೆ ಆದೇಶ

    ದಿವ್ಯಾ ತಂದೆ ಅರವಿಂದ ಹಿರೊಳ್ಳಿ ಅವರು ನಗರದ ಸೆಷನ್ ಕೋರ್ಟ್‍ನಲ್ಲಿ ಹಿರಿಯ ವಕೀಲರಾಗಿದ್ದಾರೆ. ದಿವ್ಯಾ ಅವರು ನಗರದ ಬಿಎಲ್‍ಡಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಎಂಡಿ, ಪಾಂಡಿಚೆರಿಯ ಜಿಪ್ ಮೆರ್ ನಲ್ಲಿ ಫೆಲೋಶಿಪ್ ಇನ್ ಕ್ರಿಟಿಕಲ್ ಕೇರ್ ಹಾಗೂ ಬೆಂಗಳೂರಿನ ನಿಮ್ಹಾನ್ಸನಲ್ಲಿ ಫೆಲೋಶಿಪ್ ಇನ್ ನ್ಯೂರೋ ಕ್ರಿಟಿಕಲ್ ಕೇರ್ ವ್ಯಾಸಾಂಗ ಮಾಡಿದ್ದಾರೆ.

  • ಹಾಸನ ಜಿಲ್ಲೆಗೆ ರಾಷ್ಟ್ರೀಯ ಪುರಸ್ಕಾರ ಹಸ್ತಾಂತರ

    ಹಾಸನ ಜಿಲ್ಲೆಗೆ ರಾಷ್ಟ್ರೀಯ ಪುರಸ್ಕಾರ ಹಸ್ತಾಂತರ

    ಹಾಸನ: ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಪುರಸ್ಕಾರಕ್ಕೆ ಹಾಸನ ಜಿಲ್ಲೆ ಆಯ್ಕೆಯಾಗಿತ್ತು. ಇಂದು ರಾಜ್ಯದಲ್ಲೇ ಉತ್ತಮ ಸಾಧನೆಗಾಗಿ ಜಿಲ್ಲೆಗೆ ಅಧಿಕೃತವಾಗಿ ರಾಷ್ಟ್ರೀಯ ಪ್ರಶಸ್ತಿ ಹಸ್ತಾಂತರಗೊಂಡಿದೆ.

    ರಾಷ್ಟ್ರೀಯ ಪಂಚಾಯತ್ ರಾಜ್ ದಿವಸದ ಅಂಗವಾಗಿ ನವದೆಹಲಿಯಲ್ಲಿ ನಡೆಯಬೇಕಿದ್ದ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕೋವಿಡ್ -19 ಹಿನ್ನೆಲೆಯಲ್ಲಿ ವರ್ಚುವಲ್ ವೇದಿಕೆ ಮುಖಾಂತರ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ನರೇಂದ್ರ ಸಿಂಗ್ ತೋಮರ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿವಿಧ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಗ್ರಾಮೀಣ ಸಶಕ್ತೀಕರಣ ಪ್ರಶಸ್ತಿಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

    ದೆಹಲಿಯಲ್ಲಿ ನಡೆದ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿ ಮಾತನಾಡಿದರು, ಪ್ರಶಸ್ತಿ ವಿಜೇತ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಅದರ ಅಧಿಕಾರಿಗಳಿಗೆ ಶುಭ ಕೋರಿದರು. ದೇಶದ ಶಕ್ತಿ ಗ್ರಾಮಗಳಲ್ಲಿದ್ದು ಹಳ್ಳಿಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಸಂಪೂರ್ಣ ಪ್ರಗತಿ ಸಾಧ್ಯ. ಹಳ್ಳಿಗಳು ಮತ್ತು ಬಡವರ ಉದ್ಧಾರ ಸರ್ಕಾರದ ಆದ್ಯತೆ. ಆ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ ಅವುಗಳನ್ನು ಸಕಾಲದಲ್ಲಿ ಅರ್ಹರಿಗೆ ತಲಿಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಇದಕ್ಕೆ ರಾಜ್ಯ ಸರ್ಕಾರಗಳು ಹಾಗೂ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿಗಳ ಸಂಪೂರ್ಣ ಪಾಲ್ಗೊಳ್ಳುವಿಕೆ ಅತ್ಯಗತ್ಯ. ಹಾಗಾಗಿ ಈ ಕಾರ್ಯದಲ್ಲಿ ಸಮರ್ಪಣಾ ಭಾವದಿಂದ ಕೆಲಸ ಮಾಡುವ, ಸಮರ್ಪಕ ಸಾಧನೆ ಮಾಡುವ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಅಧಿಕಾರಿಗಳನ್ನು ಪ್ರೋತ್ಸಾಹಿಸಲು ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಇನ್ನಷ್ಟು ಮಾದರಿಯಾಗಿ ಕೆಲಸ ಮಾಡಿ ಎಂದು ಪ್ರಧಾನಿ ಕರೆ ನೀಡಿದರು.

    ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಪಂಚಾಯಿತಿ ಸಶಕ್ತೀಕರಣ ಯೋಜನೆಯ ಉದ್ದೇಶ, ಆಶಯ ಆಯ್ಕೆ ಸ್ವರೂಪ ಪ್ರಶಸ್ತಿ ಪಡೆವ ಸಂಸ್ಥೆಗಳ ಜವಾಬ್ದಾರಿಗಳನ್ನು ವಿವರಿಸಿ ಎಲ್ಲಾ ಪ್ರಶಸ್ತಿ ಪುರಸ್ಕೃತ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳನ್ನು, ಜನಪ್ರತಿನಿಧಿಗಳನ್ನು ಮತ್ತು ಅಧಿಕಾರಿಗಳನ್ನು ಅಭಿನಂದಿಸಿದರು.

    ದೆಹಲಿಯಲ್ಲಿ ಸಾಂಕೇತಿಕವಾಗಿ ಪ್ರಶಸ್ತಿ ವಿತರಣೆ ಹಾಗೂ ಪ್ರಶಸ್ತಿ ಮೊತ್ತವನ್ನು ಆಯಾಯ ಜಿಲ್ಲಾ ಪಂಚಾಯತಿಗಳಿಗೆ ಆನ್ ಲೈನ್ ಮೂಲಕ ವರ್ಗಾವಣೆ ಮಾಡಿದ ನಂತರ ಇತ್ತ ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಅವರಿಗೆ ಪ್ರಶಸ್ತಿ ಫಲಕವನ್ನು ಹಸ್ತಾಂತರ ಮಾಡಿ ಅಭಿನಂದನೆ ಸಲ್ಲಿಸಿದರು.

    ಇದೊಂದು ಹೆಮ್ಮೆಯ ಸಾಧನೆ. ಜಿಲ್ಲೆಗೆ ಸಂದ ಗೌರವ ಇದಕ್ಕೆ ಕಾರಣರಾದ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಪಂಚಾಯತಿ ಸಿ.ಇ.ಒ ಇತರ ಜಿಲ್ಲಾ ಹಾಗೂ ತಾಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳನ್ನು ತಾವು ಅಭಿನಂದಿಸುವುದಾಗಿ ಆರ್.ಗಿರೀಶ್ ಹೇಳಿದರು.

    ಜಿಲ್ಲಾ ಪಂಚಾಯಿತಿ ಸಿ.ಇ.ಒ ಪರಮೇಶ್ ಅವರು ಸಹ ಪ್ರಶಸ್ತಿ ಬಂದ ಬಗ್ಗೆ ಸಂತಸ ವ್ಯಕ್ತಪಡಿಸಿ ಈ ಸಾಧನೆಗೆ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು, ಶಾಸಕರು, ಜಿಲ್ಲಾ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಇತರ ಎಲ್ಲಾ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದರು

    ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಚಂದ್ರಶೇಖರ್, ಮಹೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಾಗರಾಜ್, ಯೋಜನಾ ನಿರ್ದೇಶಕರಾದ ವಿಠಲ ಕಾವಳೆ, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ ಮತ್ತಿತರರು ಹಾಜರಿದ್ದರು.

  • ಕನ್ನಡ ಸಿನಿಮಾಗಳಿಗೆ ಬರೋಬ್ಬರಿ 10 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    ಕನ್ನಡ ಸಿನಿಮಾಗಳಿಗೆ ಬರೋಬ್ಬರಿ 10 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    ಬೆಂಗಳೂರು: 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ಈ ಬಾರಿ ಕನ್ನಡಕ್ಕೆ ಬರೋಬ್ಬರಿ 10 ಪ್ರಶಸ್ತಿಗಳು ಲಭಿಸಿದೆ. ಆ ಮೂಲಕ ಭಾರತೀಯ ಭಾಷೆಗಳ ಪೈಕಿ ಅತೀ ಹೆಚ್ಚು ಪ್ರಶಸ್ತಿ ಕನ್ನಡಕ್ಕೆ ಒಲಿದಿದೆ.

    ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹತ್ತು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಲಭಿಸಿದೆ. ಅಲ್ಲದೇ ಒಂದು ಸಿನಿಮಾ ನ್ಯಾಷನಲ್ ಫಿಲ್ಮ್ ಆರ್ಕೈವ್‍ಗೆ ಆಯ್ಕೆಯಾಗಿದೆ.

    ‘ರಾಮ ರಾಮ ರೇ’ ಸಿನಿಮಾ ನಿರ್ದೇಶನ ಮಾಡಿದ್ದ ಸತ್ಯ ಪ್ರಕಾಶ್ ಅವರ ಒಂದಲ್ಲ ಎರಡಲ್ಲ ಸಿನಿಮಾ ರಾಷ್ಟ್ರೀಯ ಏಕೀಕರಣ ಮತ್ತು ಅತ್ಯುತ್ತಮ ಬಾಲ ನಟ ಪ್ರಶಸ್ತಿ ವಿಭಾಗದಲ್ಲಿ ಆಯ್ಕೆ ಆಗಿದೆ. ಅಲ್ಲದೇ ರಿಷಬ್ ಶೆಟ್ಟಿ ನಿರ್ದೇಶನದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಾಸರಗೋಡು ಸಿನಿಮಾ ಅತ್ಯುತ್ತಮ ಮಕ್ಕಳ ಚಿತ್ರ ವಿಭಾಗದಲ್ಲಿ ಪ್ರಶಸ್ತಿಯನ್ನು ಪಡೆದಿದೆ.

    ನಿರ್ದೇಶಕ ಮಂಸೋರೆ ನಿರ್ದೇಶನದಲ್ಲಿ ಮೂಡಿ ಬಂದಿದ್ದ ನಾತಿಚರಾಮಿ ಸಿನಿಮಾ ಬರೋಬ್ಬರಿ 5 ವಿಭಾಗದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಲನಚಿತ್ರ, ಅತ್ಯುತ್ತಮ ಹಿನ್ನೆಲೆ ಗಾಯಕಿ, ಅತ್ಯುತ್ತಮ ಸಾಹಿತ್ಯ, ಅತ್ಯುತ್ತಮ ಎಡಿಟಿಂಗ್ ಹಾಗೂ ಸಿನಿಮಾ ನಟಿ ಶೃತಿ ಹರಿಹರನ್ ಅವರಿಗೆ ವಿಶೇಷ ಅಭಿನಯದ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.

    ಇಡೀ ಭಾರತ ಚಿತ್ರರಂಗವನ್ನೇ ಕನ್ನಡ ಸಿನಿಮಾದತ್ತ ತಿರುಗಿ ನೋಡುವಂತೆ ಮಾಡಿದ್ದ ಕೆಜಿಎಫ್ ಸಿನಿಮಾಗೆ ಅತ್ಯುತ್ತಮ ವಿಎಫ್‍ಎಕ್ಸ್ ಹಾಗೂ ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಮುಕಜ್ಜಿಯ ಕನಸುಗಳು ಸಿನಿಮಾ ನ್ಯಾಷನಲ್ ಫಿಲ್ಮ್ ಆರ್ಕೈವ್‍ಗೆ ಆಯ್ಕೆ ಆಗಿದೆ. ಈ ಬಾರಿಯ ಪ್ರಶಸ್ತಿಯ ರೇಸ್‍ನಲ್ಲಿ 40ಕ್ಕೂ ಹೆಚ್ಚು ಕನ್ನಡ ಸಿನಿಮಾಗಳು ಆಯ್ಕೆಯಾಗಿದ್ದವು.

  • ಸಕ್ಕರೆ ನಾಡಿನ ಯುವ ವಿಜ್ಞಾನಿಗೆ ರಾಷ್ಟ್ರೀಯ ಪ್ರಶಸ್ತಿ

    ಸಕ್ಕರೆ ನಾಡಿನ ಯುವ ವಿಜ್ಞಾನಿಗೆ ರಾಷ್ಟ್ರೀಯ ಪ್ರಶಸ್ತಿ

    ಮಂಡ್ಯ: 2019 ನೇ ಸಾಲಿನ ಅನ್ವೇಷಣಾ ವಿಭಾಗದಲ್ಲಿ ಪ್ರಧಾನ ಮಂತ್ರಿ ಬಾಲ ಶಕ್ತಿ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿ ಜಿಲ್ಲೆಯ ಶ್ರೀರಂಗಪಟ್ಟಣದ ಯುವ ವಿಜ್ಞಾನಿಗೆ ಲಭಿಸಿದೆ.

    ಸಾಹಿತ್ಯ ದಂಪತಿಯಾದ ಆರೋಗ್ಯ ಇಲಾಖೆಯ ಅನಾರ್ಕಲಿ ಸಲೀಂ ಚಿಣ್ಯ ಮತ್ತು ಶಿಕ್ಷಣ ಇಲಾಖೆಯ ಡಾ. ಪರ್ವೀನ್ ಸಲೀಂ ಅವರ ಪುತ್ರ ಸಿ.ಎಸ್. ಮೊಹಮ್ಮದ್ ಸುಹೇಲ್ ಅವರಿಗೆ 2019 ನೇ ಸಾಲಿನ ಅನ್ವೇಷಣಾ ವಿಭಾಗದಲ್ಲಿ ಪ್ರಧಾನ ಮಂತ್ರಿ ಬಾಲ ಶಕ್ತಿ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಅಷ್ಟೇ ಅಲ್ಲದೇ ಅಮೆರಿಕದ ಅಂತಾರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ಎರಡನೇ ಬಾರಿಗೆ ಭಾರತ ಪ್ರತಿನಿಧಿಸುತ್ತಿರುವ ಯುವ ವಿಜ್ಞಾನಿ ಕೂಡ ಆಗಿದ್ದಾರೆ.

    ನವದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಇದೇ ಜನವರಿ 22 ರಂದು ಮಾನ್ಯ ರಾಷ್ಟ್ರಪತಿಗಳು ಮೊಹಮ್ಮದ್ ಸುಹೇಲ್ ಗೆ ಪ್ರಶಸ್ತಿ ಪ್ರಧಾನ ಮಾಡಿದರು. ಮೊದಲಿಗನಾಗಿ ಪ್ರಶಸ್ತಿ ಸ್ವೀಕರಿಸಿ ರಾಷ್ಟ್ರಪತಿಗಳ ಪ್ರಶಂಸೆಗೆ ಪಾತ್ರವಾದ ಸುಹೇಲ್‍ಗೆ ಒಂದು ಲಕ್ಷ ನಗದು, ಹತ್ತು ಸಾವಿರ ರೂ.ನ ಪುಸ್ತಕಗಳು, ಚಿನ್ನದ ಪದಕ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿದೆ.

    ಎರಡು ಬಾರಿ ರಾಜ್ಯ ಯುವ ವಿಜ್ಞಾನಿ ಪ್ರಶಸ್ತಿ ಪಡೆದಿರುವ ಸುಹೇಲ್, ಕ.ರಾ.ವಿ.ಪ ಮೂಲಕ ಎರಡು ಬಾರಿ ಇಂಡಿಯನ್ ಸೈನ್ಸ್ ಕಾಂಗ್ರೆಸ್ ವಿಜ್ಞಾನ ಸಮಾವೇಶದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಬಳಿಕ 25ಕ್ಕೂ ಹೆಚ್ಚು ರಾಷ್ಟ್ರೀಯ ವಿಜ್ಞಾನ ಸ್ಪರ್ಧೆಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ.

    2018ರ ಮೇ ಮಾಹೆಯಲ್ಲಿ ಅಮೆರಿಕಾದ ಅಂತಾರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ಭಾರತವನ್ನು ಪ್ರತಿನಿಧಿಸಿ “ಅಪೌಷ್ಟಿಕತೆ”ಗೆ ಸಂಬಂಧಿಸಿದ ವೈಜ್ಞಾನಿಕ ಸಂಶೋಧನಾ ಪ್ರಬಂಧ ಮಂಡಿಸಿ ಎರಡನೇ ಗ್ರಾಂಡ್ ವಾರ್ಡ್ ಪಡೆದು ದೇಶಕ್ಕೆ ಕೀರ್ತಿ ತಂದಿದ್ದರು. ಸುಹೇಲ್ ಅವರ ಸಾಧನೆಗೆ ಅಮೆರಿಕದ ಪ್ರತಿಷ್ಠಿತ ಸಾಮ್ ವಿದ್ ಶಿಕ್ಷಣ ಸಂಸ್ಥೆಯು ಜಗದ್ವಿಖ್ಯಾತ ವಿಜ್ಞಾನಿ ದಿ. ಎ.ಪಿ.ಜೆ ಅಬ್ದುಲ್ ಕಲಾಂ ಹೆಸರಿನ ಪ್ರಶಸ್ತಿ ನೀಡಿ ಗೌರವಿಸಿದೆ

    ಸಿ.ಎಸ್ ಸುಹೇಲ್ ಹೆಸರನ್ನು ಮೈನರ್ ಪ್ಲಾನೆಟ್ ಗೆ ಇಡುವುದರ ಮೂಲಕ ದೇಶದ ಕೀರ್ತಿಯನ್ನು ಮುಗಿಲೆತ್ತರ ಏರಿಸಿರುವುದನ್ನು ಸ್ಮರಿಸಬಹುದಾಗಿದೆ. ರಾಜ್ಯ ಅಸಾಧಾರಣ ಪ್ರತಿಭಾ ಪ್ರಶಸ್ತಿ, ರಾಜ್ಯ ಬಾಲ ವಿಕಾಸ ಅಕಾಡೆಮಿಯ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳನ್ನು 18 ವರ್ಷ ತುಂಬುವ ಮೊದಲೇ ಮೊಹಮ್ನದ್ ಸುಹೇಲ್ ಪಡೆದಿದ್ದಾರೆ. ಈಗ 2019 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆಯುವುದರ ಮೂಲಕ ಸಕ್ಕರೆ ನಾಡು ಮಂಡ್ಯದ ಕೀರ್ತಿಯನ್ನು ಮತ್ತಷ್ಟು ಏರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv