Tag: ರಾಷ್ಟ್ರೀಯ ಪ್ರಾಣಿ

  • ‘ಗೋವನ್ನು’ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಮನವಿ – ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

    ‘ಗೋವನ್ನು’ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಮನವಿ – ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

    ನವದೆಹಲಿ: ಗೋವನ್ನು (Cow) ರಾಷ್ಟ್ರೀಯ ಪ್ರಾಣಿ (National Animal) ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ.

    ಇದು ನ್ಯಾಯಲಯದ ಕೆಲಸವಲ್ಲ ಎಂದು ನ್ಯಾ. ಸಂಜಯ್ ಕಿಶನ್ ಕೌಲ್ ಮತ್ತು ನ್ಯಾ. ಅಭಯ್ ಎಸ್.ಓಕಾ ಪೀಠ ಖಾರವಾಗಿ ಪ್ರತಿಕ್ರಿಯಿಸಿದೆ. ಗೋವಂಶ್ ಸೇವಾ ಸದನ್ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ಪೀಠ, ಇದು ನ್ಯಾಯಾಲಯದ ಕೆಲಸವೇ? ನೀವು ಇಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ? ಇಂತಹ ವಿಷಯಗಳನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ ಮತ್ತು ಅರ್ಜಿದಾರರ ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ ಹೇಳಿ ಎಂದು ಅರ್ಜಿದಾರರಿಗೆ ಕೇಳಿತು. ಇದನ್ನೂ ಓದಿ: ಮಗಳ ಹೆರಿಗೆಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ

    ಇದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲರು, ಗೋಸಂರಕ್ಷಣೆ ಬಹಳ ಮುಖ್ಯವಾದ ವಿಷಯ. ಸರ್ಕಾರವು ಇದನ್ನು ಪರಿಗಣಿಸಲಿ. ನಾನು ಒತ್ತಾಯಿಸುವುದಿಲ್ಲ, ನಾವು ಗೋವುಗಳಿಂದ ಎಲ್ಲವನ್ನೂ ಪಡೆಯುತ್ತೇವೆ ಎಂದು ಹೇಳಿದರು. ಆದಾಗ್ಯೂ, ನ್ಯಾಯಾಲಯವು ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ನಿರಾಕರಿಸಿತು. ಈ ಹಿನ್ನೆಲೆ ಅರ್ಜಿದಾರರು ಅದನ್ನು ಹಿಂಪಡೆಯಲು ನಿರ್ಧರಿಸಿದರು. ಇದನ್ನೂ ಓದಿ:  ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ – ಪೊಲೀಸ್ ಮಹಾಸಂಘ ಸೇರಿ ಎಲ್ಲ ಅರ್ಜಿಗಳು ವಜಾ

    Live Tv
    [brid partner=56869869 player=32851 video=960834 autoplay=true]

  • ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಬಾಬಾ ರಾಮದೇವ್‌

    ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಬಾಬಾ ರಾಮದೇವ್‌

    ತಿರುಪತಿ: ಗೋವನ್ನು ಭಾರತದ ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಲು ಯೋಗ ಗುರು ಬಾಬಾ ರಾಮದೇವ್‌ ಒತ್ತಾಯಿಸಿದ್ದಾರೆ.

    GOVU POOJA

    ಟಿಟಿಡಿ ವತಿಯಿಂದ ಆಂಧ್ರ ಪ್ರದೇಶದ ತಿರುಪತಿಯಲ್ಲಿ ಆಯೋಜಿಸಿದ್ದ “ಗೋ ಮಹಾ ಸಮ್ಮೇಳನ”ದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಮಸೂದೆಯನ್ನು ತರಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ: ಮೋದಿ ಶುಭಾಶಯ

    ಈ ಸಂಬಂಧ ಟಿಟಿಡಿ ಟ್ರಸ್ಟ್‌ ಬೋರ್ಡ್‌ ಪ್ರಸ್ತಾಪ ಹೊರಡಿಸಿದೆ ಎಂದು ಹೇಳಿದರು.

    ಪತಂಜಲಿ ಪೀಠವು ಈಗಾಗಲೇ ಗೋ ಸಂರಕ್ಷಣಾ ಅಭಿಯಾನವನ್ನು ಆರಂಭಿಸಿದೆ. ಗೋವು ಮಹಾ ಸಮ್ಮೇಳನದ ನಿರ್ಣಯಗಳು ಎಲ್ಲ ಗೋ ಪ್ರೇಮಿಗಳಲ್ಲಿ ಪ್ರತಿಧ್ವನಿಸುತ್ತಿದೆ ಎಂದರು. ಇದನ್ನೂ ಓದಿ: ಕೋಟೆನಾಡಲ್ಲಿ ಅಸ್ಪೃಶ್ಯತೆ, ಕೋಮುವಾದ ವಿರೋಧಿಸಿ 101 ಜನ ಬೌದ್ಧ ಧರ್ಮಕ್ಕೆ ಮತಾಂತರ

    ಗೋವು ಮಹಾ ಸಮ್ಮೇಳನ ಕಾರ್ಯಕ್ರಮ ಕುರಿತು ಟಿಟಿಡಿ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರಿಗೆ ಮಾಹಿತಿ ನೀಡಿತ್ತು. ಈ ವೇಳೆ ಹಿಂದೂ ಧಾರ್ಮಿಕ ಪ್ರಚಾರಕ್ಕಾಗಿ ಇತರ ಟಿಟಿಡಿ ಕಾರ್ಯಕ್ರಮಗಳನ್ನು ಸಿಎಂ ಶ್ಲಾಘಿಸಿದರು. ವಿಶೇಷವಾಗಿ ಟಿಟಿಡಿ ಅಧ್ಯಕ್ಷ ವೈ.ಬಿ.ಸುಬ್ಬಾ ರೆಡ್ಡಿ ಅವರ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಬಾಬಾ ರಾಮದೇವ್‌ ತಿಳಿಸಿದರು.

  • ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ರಾಜಸ್ಥಾನ ಹೈಕೋರ್ಟ್

    ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ರಾಜಸ್ಥಾನ ಹೈಕೋರ್ಟ್

    ಜೈಪುರ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್ ಶಿಫಾರಸು ಮಾಡಿದೆ.

    ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಮೊನ್ನೆಯಷ್ಟೇ ಮದ್ರಾಸ್ ಹೈಕೋರ್ಟ್ ಕೇಂದ್ರದ ನಿರ್ಧಾರಕ್ಕೆ ಒಂದು ತಿಂಗಳ ತಡೆಯಾಜ್ಞೆ ನೀಡಿತ್ತು.

    ಈ ನಡುವೆ ರಾಜಸ್ಥಾನ ಹೈಕೋರ್ಟ್ ಕೇಂದ್ರ ಸರ್ಕಾರದ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇದೇ ವೇಳೆ ಗೋ ಹತ್ಯೆ ಮಾಡಿದವರಿಗೆ ಈಗ ಇರುವ ಮೂರು ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಯಾಗಿ ಬದಲಾಯಿಸಬೇಕು ಎಂದು ಹೇಳಿದೆ.

    ಕೇಂದ್ರ ಸರ್ಕಾರದ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ, ಗೋಹತ್ಯೆ ನಿಷೇಧ ಆದೇಶಕ್ಕೆ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ವಿಧಿಸಿತ್ತು. ಅಲ್ಲದೆ ಈ ಕುರಿತು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಆಹಾರ ಮನುಷ್ಯರ ಮೂಲ ಹಕ್ಕಾಗಿದ್ದು, ಇದರಲ್ಲಿ ಮಧ್ಯಪ್ರವೇಶ ಬೇಡ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

    https://twitter.com/mayhempsingh/status/869827993618665472