Tag: ರಾಷ್ಟ್ರೀಯ ಶಿಕ್ಷಣ ನೀತಿ

  • ಇದು ಒಂದಲ್ಲ ಎರಡಲ್ಲ 6 ಲಕ್ಷ ವಿದ್ಯಾರ್ಥಿಗಳ ಸಮಸ್ಯೆ!

    ಇದು ಒಂದಲ್ಲ ಎರಡಲ್ಲ 6 ಲಕ್ಷ ವಿದ್ಯಾರ್ಥಿಗಳ ಸಮಸ್ಯೆ!

    ಬೆಂಗಳೂರು: ಇದು ಒಂದಲ್ಲ ಎರಡಲ್ಲ 6 ಲಕ್ಷ ವಿದ್ಯಾರ್ಥಿಗಳ (Students) ಸಮಸ್ಯೆ, ರಾಜ್ಯದ ಮೂಲೆ ಮೂಲೆಯ ಪೋಷಕರಿಗೂ ಗೊಂದಲದ ಪರಿಸ್ಥಿತಿ. ಹೌದು 2022ರ ರಾಷ್ಟ್ರೀಯ ಶಿಕ್ಷಣ ನೀತಿಯಿಂದ (National Education Policy 2022)  6 ಲಕ್ಷ ಮಕ್ಕಳ ದಾಖಲಾತಿಗೆ ಗೊಂದಲ ಉಂಟಾಗಿದೆ.

    2022ರ ನವೆಂಬರ್ ತಿಂಗಳಲ್ಲಿ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದ ಪ್ರಕಾರ 2025/26ನೇ ಸಾಲಿಗೆ ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ 6 ವರ್ಷ ತುಂಬಿರಬೇಕು. ಜೂ.1ನೇ ತಾರೀಖಿಗೆ ಯಾವ ಮಗುವಿಗೆ 6 ವರ್ಷ ತುಂಬಿರುತ್ತೋ ಅಂತಹ ಮಕ್ಕಳಿಗೆ ಮಾತ್ರ ಒಂದನೇ ತರಗತಿ ದಾಖಲಾತಿ ಕೊಡಬೇಕು ಅನ್ನೋ ನಿಯಮ ಜಾರಿಗೆ ತಂದಿದೆ. ಇದನ್ನೂ ಓದಿ: ಮ್ಯಾನ್ಮಾರ್‌ನಲ್ಲಿ ಮತ್ತೆ ಭೂಕಂಪ – ಆಸ್ಪತ್ರೆ ಕಟ್ಟಡಗಳೇ ನಾಮಾವಶೇಷ, ರಸ್ತೆಯಲ್ಲೇ ರೋಗಿಗಳಿಗೆ ಚಿಕಿತ್ಸೆ

    ಈಗ ಹೊಸದಾಗಿ ದಾಖಲಾಗೋ ಮಕ್ಕಳಿಗೆ ಇದರಿಂದ ಸಮಸ್ಯೆ ಆಗುವುದಿಲ್ಲ. ಅದ್ರೇ ಈಗಾಗಲೇ ಪ್ರೀಕೆಜಿ, ಎಲ್‍ಕೆಜಿಗೆ ಸೇರಿ 3 ಪೂರ್ವ ಪ್ರಾಥಮಿಕ ಶಿಕ್ಷಣ ಮುಗಿಸಿರೋ ಮಕ್ಕಳಿಗೆ ಸಮಸ್ಯೆ ಆಗ್ತಿದೆ. ಆಗಿನ ನಿಯಮದಂತೆ ಮಕ್ಕಳನ್ನ ಪ್ರೀ ಕೆಜಿಗೆ ದಾಖಲು ಮಾಡಿದ್ವಿ, ಈಗ ನಮ್ಮ ಮಕ್ಕಳು 6 ವರ್ಷಕ್ಕಿಂತ ಕಡಿಮೆ ಇದ್ದಾರೆ, ಈಗ ಮತ್ತೇ ಅದೇ ತರಗತಿಗೆ ಸೇರಿಸಿದ್ರೇ ಮಕ್ಕಳು ಮಾನಸಿಕವಾಗಿ ಕುಗ್ಗುತ್ತಾರೆ. ರಾಜ್ಯದಲ್ಲಿ ಈ ರೀತಿ 6 ಲಕ್ಷ ಮಕ್ಕಳಿದ್ದಾರೆ ಅಂತಿದ್ದಾರೆ ಪೋಷಕರು.

    ಒಂದು ವರ್ಷ ಮತ್ತೆ ಅದೇ ತರಗತಿಯಲ್ಲಿ ಓದಿಸಬೇಕಾ? ಇಲ್ಲವೇ ಮಕ್ಕಳನ್ನ ಮನೆಯಲ್ಲಿಟ್ಟು ಕೊಳ್ಳಬೇಕಾ? ಯಾವ ನಿರ್ಧಾರಕ್ಕೂ ಬರದಂತಹ ವಾತಾವರಣದಲ್ಲಿ ಪೋಷಕರಿದ್ದಾರೆ. ಇತರೆ ರಾಜ್ಯಗಳಲ್ಲಿ ನೀಡಿರುವಂತೆ ಇಲ್ಲೂ ಸಡಿಲಿಕೆ ನೀಡಿ ಅಂತಾ ಸರ್ಕಾರದ ಮುಂದೆ ಮನವಿ ಮಾಡಿ ಮಾಡಿ ಕಾಯ್ತಿದ್ದಾರೆ.

    ಒಂದನೇ ತರಗತಿಗೆ ಮಕ್ಕಳಿಗೆ ನಿಗದಿ ಮಾಡಿರುವ ವಯೋಮಿತಿ ವಿಚಾರದಲ್ಲಿಯೂ ಇದೇ ಗೊಂದಲ ಶುರು ಆಗಿದೆ. ಒಂದನೇ ತರಗತಿಗೆ ಮಗುವಿಗೆ ಅಡ್ಮಿಷನ್ ಕೊಡ್ತಿಲ್ಲ ಅನ್ನೋದು ರಾಜ್ಯದ ಲಕ್ಷಾಂತರ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕೇಂದ್ರ ನೌಕರರಿಗೆ ಯುಗಾದಿ ಗಿಫ್ಟ್ – ಶೇ.2 ರಷ್ಟು ಡಿಎ ಏರಿಕೆ

  • ಮುಂದಿನ ವರ್ಷದಿಂದಲೇ ರಾಜ್ಯ ಶಿಕ್ಷಣ ನೀತಿ ಜಾರಿ: ಸಚಿವ ಎಂ.ಸಿ ಸುಧಾಕರ್

    ಮುಂದಿನ ವರ್ಷದಿಂದಲೇ ರಾಜ್ಯ ಶಿಕ್ಷಣ ನೀತಿ ಜಾರಿ: ಸಚಿವ ಎಂ.ಸಿ ಸುಧಾಕರ್

    ಹಾಸನ: ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ರದ್ದು ಮಾಡುವುದಾಗಿ ಕಳೆದ ಬಜೆಟ್‌ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದರು. ಅದರಂತೆ ಮುಂದಿನ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ರದ್ದುಗೊಳಿಸಿ, ರಾಜ್ಯ ಶಿಕ್ಷಣ ನೀತಿಯನ್ನು (State Education Policy) ಜಾರಿಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್‌ (MC Sudhakar) ಹೇಳಿದ್ದಾರೆ.

    ಅರಸೀಕೆರೆ ನಗರದಲ್ಲಿ ನೂತನ ಎಂಜಿನಿಯರಿಂಗ್‌ ಕಾಲೇಜು ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಇಡೀ ದೇಶದಲ್ಲೇ ಕರ್ನಾಟಕದಲ್ಲಿ ಮಾತ್ರ 2021 ರಲ್ಲಿ ಎನ್‌ಇಪಿ ಜಾರಿಗೊಳಿಸಿತ್ತು. ಯಾವುದೇ ಪೂರ್ವ ತಯಾರಿ ಇಲ್ಲದೇ, ಜಾರಿ ಮಾಡಿರುವುದರಿಂದ ಅದರಲ್ಲಿ ಸಾಕಷ್ಟು ನ್ಯೂನತೆ ಕಂಡುಬಂದಿದೆ. ಆದ್ದರಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ರಾಜ್ಯವನ್ನು ತಮಿಳುನಾಡಿಗೆ ಅಡ ಇಟ್ಟಿದ್ದಾರೆ; ಸರ್ಕಾರದ ವಿರುದ್ಧ ಹೆಚ್.ಡಿ ರೇವಣ್ಣ ಕಿಡಿ

    ರಾಜ್ಯದ ಹಲವು ಕಡೆಗಳಲ್ಲಿ NEP ಜಾರಿಯಾದ ನಂತರ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಅನೇಕ ಕಡೆಗಳಲ್ಲಿ ಮೂಲ ಸೌಕರ್ಯವಿಲ್ಲದ ಕಾರಣ ರಾಜ್ಯದಲ್ಲಿ ಎನ್‌ಇಪಿ ಜಾರಿಗೆ ಪೂರಕ ವಾತಾವರಣವಿಲ್ಲ. ಎನ್‌ಇಪಿ ವಿಷಯಗಳೇ ಬೇರೆ, ರಾಜ್ಯದಲ್ಲಿ ಚಾಲ್ತಿಯಲ್ಲಿರುವ ವಿಷಯಗಳೇ ಬೇರೆ ಇರುವುದರಿಂದಲೇ ಮಕ್ಕಳಿಗೆ ತೊಂದರೆಯಾಗಿದೆ. ಅದರಲ್ಲೂ ಗ್ರಾಮೀಣ ಮಕ್ಕಳಿಗೆ ಅನೇಕ ರೀತಿಯ ಸಮಸ್ಯೆಯುಂಟಾಗಿದೆ. ಆದ್ದರಿಂದ ಎಲ್ಲ ವರ್ಗ, ಜಾತಿಗಳನ್ನು ಒಳಗೊಂಡ ಶಿಕ್ಷಣ ನೀತಿಯನ್ನ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

    ಅರಸೀಕೆರೆ ಎಂಜಿನಿಯರಿಂಗ್‌ ಕಾಲೇಜು ಕಾಮಗಾರಿ 4 ವರ್ಷಗಳಾದರೂ ಮುಗಿದಿಲ್ಲ. ಸ್ಥಳೀಯ ಶಾಸಕರು ನನ್ನ ಗಮನಕ್ಕೆ ತಂದ ನಂತರ ಕಾಮಗಾರಿ ಶೀಘ್ರ ಮುಗಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

    ಇನ್ನೂ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ವಿಳಂಬವಾಗುತ್ತಿರುವ ಸಂಬಂಧ ಮಾತನಾಡಿ, ವಿದ್ಯಾರ್ಥಿ ವೇತನ ಮೊದಲಿನಂತೆಯೇ ಪಾವತಿಯಾಗುತ್ತಿದೆ. ಕೇಂದ್ರ ಸರ್ಕಾರ ಡಿಬಿಟಿ ಪದ್ಧತಿ ಮಾಡಿದೆ. 60% ಕೇಂದ್ರ, 40% ರಾಜ್ಯದ್ದು ಎಂದು ಮಾಡಿರುವುದರಿಂದ ಕೆಲ ಕಾಲೇಜುಗಳಲ್ಲಿ ಗೊಂದಲ ಸೃಷ್ಟಿಯಾಗಿದೆ. ಇದನ್ನೇ ನೆಪವಾಗಿಟ್ಟುಕೊಂಡು ಎಸ್ಸಿ-ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ತೊಂದರೆ ಕೊಡಬಾರದು ಎಂದು ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ನಾನು ಬದುಕಿರುವವರೆಗೂ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಲು ಬಿಡಲ್ಲ – HD ರೇವಣ್ಣ ಗುಡುಗು

    ಅಲ್ಲದೇ, ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳ ಎರಡೂವರೆ ಲಕ್ಷ ಹುದ್ದೆಗಳನ್ನು ತುಂಬಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರಲ್ಲದೇ, ರಾಜ್ಯದಲ್ಲಿ ಹಲವು ವಿವಿ ಇದ್ದರೂ, ಕೊನೇ ದಿನಗಳಲ್ಲಿ ತಲಾ 2 ಕೋಟಿ ರೂ. ಅನುದಾನ ನೀಡಿ 7 ವಿವಿಗಳ ಆರಂಭಕ್ಕೆ ಹಿಂದಿನ ಬಿಜೆಪಿ ಸರ್ಕಾರ ಅನುಮೋದನೆ ನೀಡಿತ್ತು. ಈ ಬಗ್ಗೆ ಕೂಲಂಕಷ ಅಧ್ಯಯನ ಮಾಡಿದ್ದೇವೆ. ಆದರೆ ಹೊಸ ವಿವಿಗಳನ್ನು ರದ್ದು ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • NEP ನೇಮಕಾತಿ ಮಾನದಂಡ – ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು

    NEP ನೇಮಕಾತಿ ಮಾನದಂಡ – ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು

    ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಅಂಗನವಾಡಿ (Anganwadi) ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ (NEP) ಅನುಗುಣವಾಗಿ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ಮಾನದಂಡ ಬದಲಾವಣೆ ಮಾಡಿರೋದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

    ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಅಂಗನವಾಡಿ ನೇಮಕಾತಿಗೆ ಮಾನದಂಡವನ್ನು ಬದಲಾವಣೆ ಮಾಡಿ, ಆದೇಶ ಹೊರಡಿಸಿದೆ. ಈ ಹೊಸ ಆದೇಶದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಕೆಂಡ ಉಗುಳುತ್ತಿದ್ದು, ಸರ್ಕಾರದ ವಿರುದ್ಧ ಹೋರಾಡಲು ಸಜ್ಜಾಗುತ್ತಿದ್ದಾರೆ. ಅಂಗನವಾಡಿ ಟೀಚರ್ ಆಗಲು ಪಿಯುಸಿ, ಡಿಪ್ಲೋಮಾ ಆಗಿರಲೇಬೇಕು ಮತ್ತು ಸಹಾಯಕರ ಹುದ್ದೆಗಳಿಗೆ SSLC ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಇತ್ತೀಚೆಗೆಷ್ಟೇ ಆದೇಶ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಹಿಂಪಡೆಯುವಂತೆ ಅಂಗನವಾಡಿ ಕಾರ್ಯಕರ್ತೆಯರು ಒತ್ತಾಯಿಸುತ್ತಿದ್ದಾರೆ. ಇದನ್ನೂ ಓದಿ: ಟೀ, ಸಿಗರೇಟ್‍ಗೆ ಸಾಲ ಕೊಡಲಿಲ್ಲವೆಂದು ಬಡ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ

    ಟೀಚರ್ಸ್‍ಗಳಿಗೆ ಪಿಯುಸಿ ಕಡ್ಡಾಯ ಮಾಡಿರೋದು ಸರಿ, ಆದ್ರೆ ಸಹಾಯಕಿಯರಿಗೆ ಎಸ್‍ಎಸ್‍ಎಲ್‍ಸಿ ನಿಯಮ ಬೇಡ ಅಂತಾ ಅಂಗನವಾಡಿ ಕಾರ್ಯಕರ್ತೆಯರ ಸಂಘ ಒತ್ತಾಯಿಸಿದೆ. ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ SSLC ಮಾಡಿರುವ ಹೆಲ್ಪರ್‌ಗಳು ಸಿಗೋದು ಕಷ್ಟ. ಇಂತಹ ಸ್ಥಳಗಳಲ್ಲಿ ಯಾರನ್ನು ನೇಮಕ ಮಾಡೋದು? ಅನೇಕ ವರ್ಷಗಳಿಂದ ಕೆಲಸ ಮಾಡಿಕೊಂಡ ಬಂದ ಸಹಾಯಕಿಯರಿಗೆ ಪಿಯುಸಿ ಕಡ್ಡಾಯ ಅಂದ್ರೆ ಹೇಗೆ? ಪಿಯುಸಿ ಮಾಡದಿದ್ರೆ, ಅವರು ಬಡ್ತಿ ಪಡೆಯದೇ, ಹಾಗೇ ನಿವೃತ್ತಿ ಆಗ್ಬೇಕಾ? ಇದು ಯಾವ ರೀತಿಯ ನ್ಯಾಯ? ಸರ್ಕಾರದ ಈ ಆದೇಶ ಕೈಬಿಡಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ. ಇದನ್ನೂ ಓದಿ: ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ- ನಮೋ ಸ್ವಾಗತಕ್ಕೆ ಭರ್ಜರಿ ಸಿದ್ದತೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕರ್ನಾಟಕದ ಮಾಡೆಲ್ ದೇಶದ ಮಾಡೆಲ್ ಆಗಲಿದೆ : ಧರ್ಮೇಂದ್ರ ಪ್ರಧಾನ್

    ಕರ್ನಾಟಕದ ಮಾಡೆಲ್ ದೇಶದ ಮಾಡೆಲ್ ಆಗಲಿದೆ : ಧರ್ಮೇಂದ್ರ ಪ್ರಧಾನ್

    ಬೆಂಗಳೂರು : ಶಿಕ್ಷಣ ಕ್ಷೇತ್ರ ಮತ್ತು ಕೌಶಲ್ಯಾಭಿವೃದ್ದಿ ಕ್ಷೇತ್ರದಲ್ಲಿ ಕರ್ನಾಟಕದ ಮಾಡೆಲ್ ಇಡೀ ದೇಶದ ಮಾಡೆಲ್ ಆಗಲಿದೆ ಅಂತ ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

    ವಿಧಾನಸೌಧದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಪರಿಶೀಲನಾ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕರ್ನಾಟಕದ ಮಾಡೆಲ್ ಗೆ ಶಬ್ಬಾಶ್ ಗಿರಿ ಕೊಟ್ಟರು.

    ರಾಷ್ಟ್ರೀಯ ಶಿಕ್ಷಣ ನೀತಿ 2020ನ್ನು ದೇಶದಲ್ಲಿ‌‌ ಮೊದಲ ರಾಜ್ಯವಾಗಿ ಕರ್ನಾಟಕ ಅನುಷ್ಠಾನ ಮಾಡಿದೆ. ಅನುಷ್ಠಾನ ‌ಮಾಡಿ ಅತ್ಯುತ್ತಮವಾಗಿ ಜಾರಿ ಮಾಡಿದೆ. ಕರ್ನಾಟಕದ ವ್ಯವಸ್ಥೆಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಅಂತ ತಿಳಿಸಿದರು. ಕರ್ನಾಟಕದಲ್ಲಿ 1.5 ಕೋಟಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 3.5 ಲಕ್ಷ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ. ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಕೌಶಲ್ಯ ತರಬೇತಿ ನೀಡುವಂತೆ ಸಲಹೆ ನೀಡಿದ್ದೇನೆ ಅಂತ ತಿಳಿಸಿದರು.

    ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದಲ್ಲಿ ಕರ್ನಾಟಕ ಸರಿಯಾದ ಮಾರ್ಗದಲ್ಲಿ ನಡೆಯುತ್ತಿದೆ. ಕರ್ನಾಟಕ ಸಾಧನೆ ಸಂತೋಷ ಮತ್ತು ತೃಪ್ತಿ ತಂದಿದೆ ಅಂತ‌ ತಿಳಿಸಿದರು. ಕರ್ನಾಟಕ ಕೇವಲ ರಾಷ್ಟ್ರೀಯ ಶಿಕ್ಷಣ ನೀತಿ ಮಾತ್ರವಲ್ಲ ಕೌಶಲ್ಯಾಭಿವೃದ್ದಿಯಲ್ಲೂ ಅತ್ಯುತ್ತಮ ಕೆಲಸ ಮಾಡಿದೆ. ಡಿಜಿಟಲ್ ಫ್ಲಾಟ್ ಫಾರ್ಮ್ ನಲ್ಲೂ ಮುಂದಿದೆ. ಸ್ಕಿಲ್ ಡೆವಲಪ್ಮೆಂಟ್, ಉದ್ಯೋಗ ಸೃಷ್ಟಿಯಲ್ಲೂ ಉತ್ತಮ ಕೆಲಸ ಮಾಡುತ್ತಿದೆ ಅಂತ ಶ್ಲಾಘಿಸಿದರು. ಕರ್ನಾಟಕ ಸರ್ಕಾರ ಪ್ರಧಾನಿ ಮೋದಿಯವರ ಕನಸು ಸಾಕಾರ ಮಾಡುತ್ತಿದೆ. ಬೊಮ್ಮಾಯಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿಯಲ್ಲಿ ಕರ್ನಾಟಕದ ಮಾಡೆಲ್ ದೇಶದ ಮಾಡೆಲ್ ಆಗಲಿದೆ ಎಂದರು.

    ಕಲಿಕಾ ಚೇತರಿಕೆಗೂ ಶಹಬ್ಬಾಸ್‌ ಗಿರಿ
    ಕೊರೊನಾ ಬಳಿಕ ಮಕ್ಕಳ ಶೈಕ್ಷಣಿಕ ವ್ಯತ್ಯಾಸ ಸರಿ ಮಾಡಲು ರಾಜ್ಯ ಸರ್ಕಾರ ಜಾರಿಗೆ ತರುತ್ತಿರೋ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಶ್ಲಾಘಿಸಿದರು. ಕರ್ನಾಟಕದ ಮಾಡೆಲ್ ಅತ್ಯುತ್ತಮವಾಗಿದೆ. ಈ ಮಾಡೆಲ್ ಅನ್ನ ಎಲ್ಲಾ ರಾಜ್ಯಗಳು ಅನುಸರಿಬೇಕು. ದೆಹಲಿಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇನೆ ಅಂತ ತಿಳಿಸಿದರು. ರಾಜ್ಯ ಸರ್ಕಾರದ ಕಾರ್ಯವನ್ನು ಹೊಗಳಿದರು.

  • ಮುಂದಿನ ವರ್ಷ ಕೆಲ ಶಾಲೆಗಳಲ್ಲಿ NEP ಜಾರಿ: ಬಿ.ಸಿ.ನಾಗೇಶ್

    ಮುಂದಿನ ವರ್ಷ ಕೆಲ ಶಾಲೆಗಳಲ್ಲಿ NEP ಜಾರಿ: ಬಿ.ಸಿ.ನಾಗೇಶ್

    ಬೆಳಗಾವಿ: ರಾಜ್ಯದಲ್ಲಿ ಮುಂದಿನ ವರ್ಷ ಕೆಲ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೊಳಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

    ವಿಧಾನಸಭೆಯಲ್ಲಿ ಮಹಾಂತೇಶ್ ಕೌಜಲಗಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಪ್ರಕ್ರಿಯೆ ಈಗಾಗಲೇ ರಾಜ್ಯದಲ್ಲಿ ಚಾಲ್ತಿಯಲ್ಲಿದೆ. ಅನುಷ್ಠಾನ ಕಾರ್ಯಪಡೆಯ ಶಿಫಾರಸಿನಂತೆ ಹಂತ ಹಂತವಾಗಿ ಸಂಪೂರ್ಣ ಜಾರಿಗೊಳಿಸಲಾಗುವುದು. ಪ್ರಾಥಮಿಕ ಹಂತದ ಶಿಕ್ಷಣ ಮಾತ್ರ ಆರಂಭಿಸುತ್ತೇವೆ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರದ ಸಚಿವರಿಗೆ ಬಿಜೆಪಿ ಶಾಸಕರಿಂದಲೇ ಶಾಕ್..!

    NEP ಅನುಷ್ಠಾನ ಹಂತದಲ್ಲಿ ವಿವಿಧ ವಿಷಯಗಳು ಮತ್ತು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ನೇಮಕಾತಿಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.

    ಇದೇ ವೇಳೆ ಕೌಜಲಗಿ ಅವರು, ಒಮ್ಮಿಂದೊಮ್ಮೆಯೇ ಜಾರಿಯಾದರೆ ಸಮಸ್ಯೆಯಾಗುತ್ತದೆ. ಪೂರ್ವತಯಾರಿಯಿಲ್ಲದೆ ಆರಂಭ ಮಾಡುವುದು ಬೇಡ ಎಂದರು. ಇದಕ್ಕುತ್ತರಿಸಿದ ಸಚಿವರು, ಟಾಟಾ ಸಂಸ್ಥೆ ಮೂಲಕ ಈಗಾಗಲೇ ತರಬೇತಿ ಆರಂಭವಾಗಿದೆ. ತರಬೇತಿ ನೀಡದೇ NEP ಜಾರಿ ಮಾಡಲ್ಲ ಎಂದು ಭರವಸೆ ನೀಡಿದರು. 2030ರೊಳಗೆ NEP ಸಂಪೂರ್ಣವಾಗಿ ಜಾರಿಗೊಳಿಸಲು ಹೇಳಿದ್ದಾರೆ. ಆದರೆ ತುಂಬಾ ಶಿಕ್ಷಕರ ಕೊರತೆಯಾಗಲ್ಲ ಎಂದು ಹೇಳಿದರು.  ಇದನ್ನೂ ಓದಿ: ನಮ್ಮಿಂದ ಸಚಿವರಾಗಿರೋದು, ನೀವು ಮೇಲಿಂದ ಇಳಿದು ಬಂದಿಲ್ಲ- ಮಿನಿಸ್ಟರ್ಸ್ ವಿರುದ್ಧ ಶಾಸಕರ ಆಕ್ರೋಶ

    ವಿವಿಧ ಕ್ಷೇತ್ರಗಳ ಪಾಲುದಾರರಿಗೆ NEP ಪರಿಚಯಿಸಿ ಅವರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಕುರಿತು ರಾಜ್ಯದ ಪ್ರಸ್ತುತ ಸ್ಥಿತಿ ಅವಲೋಕಿಸಲು ರಾಜ್ಯ ಶಿಕ್ಷಣ ಕ್ಷೇತ್ರದ ಪೊಸಿಷನ್ ಪೇಪರ್ ಸಿದ್ಧಪಡಿಸಲು ವಿವಿಧ ಸಮಿತಿ ರಚಿಸಲಾಗಿದೆ. ಇದು ಸಿದ್ಧಗೊಂಡ ಬಳಿಕ ಪಠ್ಯಕ್ರಮ ಹಾಗೂ ಪಠ್ಯಸೂಚಿ ರಚಿಸಲಾಗುವುದು ಎಂದು ಸಚಿವರು ಉತ್ತರಿಸಿದ್ದಾರೆ.

    ಖಾಲಿ ಹುದ್ದೆಗಳ ಲೆಕ್ಕ:
    ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 41,869, ಸರ್ಕಾರಿ ಪ್ರೌಢಶಾಲೆಗಳಲ್ಲಿ 8292, ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ 3539 ಉಪನ್ಯಾಸಕರ ಹುದ್ದೆಗಳು ಖಾಲಿಯಿದೆ ಎಂದು ಸಚಿವ ನಾಗೇಶ್ ಹೇಳಿದ್ದಾರೆ. ಇದನ್ನೂ ಓದಿ:ಬದುಕಿದ್ದೀವಿ ಎಂದು ತೋರಿಸಲು ಕಾಂಗ್ರೆಸ್ ಪ್ರತಿಭಟನೆ: ಈಶ್ವರಪ್ಪ

  • ಶಿಕ್ಷಣದಲ್ಲಿ ರಾಜಕೀಯ ಯಾಕೆ? : ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ

    ಶಿಕ್ಷಣದಲ್ಲಿ ರಾಜಕೀಯ ಯಾಕೆ? : ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ

    ಬೆಂಗಳೂರು: ಶಿಕ್ಷಣದಲ್ಲಿ ರಾಜಕೀಯವನ್ನು ಯಾಕೆ ಬೆರೆಸುತ್ತಿದ್ದೀರಿ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.

    ಪದವಿ ಕೋರ್ಸ್​ಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಂಸ್ಕೃತ ಭಾರತ ಟ್ರಸ್ಟ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠದಲ್ಲಿ ನಡೆಯಿತು.

    ಅಕ್ಟೋಬರ್‌ 26 ರಂದು ಪೀಠ ಈ ಆದೇಶವನ್ನು ಮರು ಪರಿಶೀಲಿಸುವಂತೆ ಸರ್ಕಾರಕ್ಕೆ ಆದೇಶಿಸಿತ್ತು. ಇಂದಿನ ವಿಚಾರಣೆಯ ಆರಂಭದಲ್ಲಿ ಕನ್ನಡವನ್ನು ಭಾಷೆಯಾಗಿ ಕಲಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಭಾಷೆಯನ್ನು ಕಲಿಯುವುದನ್ನು ಪ್ರೋತ್ಸಾಹಿಸಲು ಅವಕಾಶವಿದೆ ಎಂದು ರಾಜ್ಯ ಸರ್ಕಾರದ ವಕೀಲರು ತಿಳಿಸಿದರು. ಇದನ್ನೂ ಓದಿ: ಐಸಿಸ್ ಉಗ್ರ ಸಂಘಟನೆಗೆ ಹಿಂದುತ್ವ ಹೋಲಿಕೆ – ವಿವಾದಕ್ಕೆ ಸಿಲುಕಿದ ಖುರ್ಷಿದ್ ಪುಸ್ತಕ

    ಈ ಉತ್ತರಕ್ಕೆ ಅಸಮಾಧಾನಗೊಂಡ ಪೀಠ, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕಡ್ಡಾಯಕ್ಕೆ ಅವಕಾಶವಿದೆಯೇ? ಹೊರರಾಜ್ಯದ ವಿದ್ಯಾರ್ಥಿಗಳ‌ ಕನ್ನಡ ಕಲಿಕೆ ಕಡ್ಡಾಯಗೊಳಿಸಬಹುದೇ? ಉನ್ನತ ಶಿಕ್ಷಣದಲ್ಲಿ ಕಡ್ಡಾಯಗೊಳಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿತು.

    ಈ ನೀತಿಯಿಂದಾಗಿ ಎಷ್ಟು ವಿದ್ಯಾರ್ಥಿಗಳು ಹೊರಹೋಗಿದ್ದಾರೆ ಗೊತ್ತೇ? ಉನ್ನತ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸಲು ಅವಕಾಶ ಎಲ್ಲಿದೆ ಎಂದು ಖಾರವಾಗಿ ಹೈಕೋರ್ಟ್ ಪ್ರಶ್ನಿಸಿತು.

    ಸರ್ಕಾರಿ ವಕೀಲರು ವಾದ ಮಂಡನೆಗೆ ಅವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ನ.15 ಕ್ಕೆ ಹೈಕೋರ್ಟ್‌ ಮುಂದೂಡಿತು.

    ಅರ್ಜಿದಾರರ ಮನವಿ ಏನು?
    ರಾಜ್ಯದಲ್ಲಿ ಎಲ್ಲ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆಗಸ್ಟ್ 7ರಂದು ಆದೇಶ ಹೊರಡಿಸಿತ್ತು. ಈ ಆದೇಶ ಸಂವಿಧಾನದ ವಿಧಿ 14, 19, 21, 29 ಹಾಗೂ 30ರ ಆಶಯಗಳಿಗೆ ವಿರುದ್ಧವಾಗಿದೆ ಎಂದು ಸಂಸ್ಕೃತಿ ಭಾರತಿ ಟ್ರಸ್ಟ್ ಸೇರಿದಂತೆ ವಿವಿಧ ಸಂಘಟನೆಗಳು ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಸಿವೆ. ಇದನ್ನೂ ಓದಿ: ಜನಧನ್ ಖಾತೆಗಳಿಂದ 2 ರೂ.ನಂತೆ 6,000 ಕೋಟಿ ರೂ. ಅಕ್ರಮ ವರ್ಗಾವಣೆಯಾಗಿದೆ: ಎಚ್‍ಡಿಕೆ

    ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಇಲ್ಲದಿದ್ದರೂ, ಸರ್ಕಾರ 12ನೇ ತರಗತಿ ಓದಿ ಶಿಕ್ಷಣಕ್ಕಾಗಿ ರಾಜ್ಯದ ಕಾಲೆಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಮಾಡಿದೆ. ಪದವಿ ಹಂತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಕಲಿಸುವುದು ಸರಿಯಲ್ಲ. ಸರ್ಕಾರದ ಆದೇಶದಿಂದ ಭಾಷೆ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುತ್ತದೆ. ಹೀಗಾಗಿ ಪದವಿ ಹಂತದಲ್ಲಿ ಕನ್ನಡ ಕಡ್ಡಾಯ ಮಾಡಿರುವ ಸರ್ಕಾರದ ಆದೇಶವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಲಾಗಿದೆ.

  • ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಬಿ.ಸಿ.ನಾಗೇಶ್

    ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಬಿ.ಸಿ.ನಾಗೇಶ್

    ಬೆಂಗಳೂರು: ಜ್ಞಾನ, ವಿಜ್ಞಾನ, ಕೌಶಲದ ಜೊತೆಗೆ ಮಾನವೀಯ ಮೌಲ್ಯಗಳು, ಸಂಸ್ಕೃತಿ, ಮತ್ತು ಸಂಸ್ಕಾರವನ್ನು ನೀಡುವ ಸಮಗ್ರ ಶಿಕ್ಷಣದ ಅಗತ್ಯವಿದೆ. ಅದನ್ನು ರಾಷ್ಟ್ರೀಯ ಶಿಕ್ಷಣ ನೀತಿ-2020 ಪೂರೈಸುತ್ತದೆ ಎನ್ನುವ ಸಂಪೂರ್ಣ ವಿಶ್ವಾಸವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಿ.ಸಿ.ನಾಗೇಶ್ ತಿಳಿಸಿದರು.

    ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಸಹಯೋಗದಲ್ಲಿ ಬೆಂಗಳೂರಿನ ಜಯನಗರದಲ್ಲಿ ಆರ್.ವಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಎಲ್ಲರಿಗೂ ಶಿಕ್ಷಣ ನೀಡುವುದರಿಂದ ದೇಶದಲ್ಲಿ ಜಾತಿ ವ್ಯವಸ್ಥೆ, ತಾರತಮ್ಯ ಹೋಗಲಾಡಿಸಬಹುದು ಎಂದು ದಶಕಗಳಿಂದ ಹೇಳಿಕೊಂಡು ಬಂದಿದ್ದೇವೆ. ಅದಕ್ಕಾಗಿ ದೇಶದ ಪ್ರತಿಯೊಬ್ಬ ಪ್ರಜೆಗೆ ಅಕ್ಷರ ಜ್ಞಾನ, ಶಿಕ್ಷಣ ನೀಡುವ ಪ್ರಯತ್ನಗಳು ನಡೆಯುತ್ತಲೇ ಇವೆ. ಸರ್ಕಾರಗಳ ಪ್ರಯತ್ನದ ಫಲವಾಗಿ ದೇಶದಲ್ಲಿ ಸಾಕ್ಷರರ ಪ್ರಮಾಣ ಏರಿಕೆಯಾಯಿತು. ಸಮ ಸಮಾಜ ನಿರ್ಮಾಣದ ಕನಸುಗಳು, ಉದ್ದೇಶಗಳು ಸಾಕಷ್ಟು ವರ್ಷಗಳ ಕಾಲ ಈಡೇರಿದವು. ಆದರೆ ಇತ್ತೀಚಿನ ವರ್ಷಗಳಲ್ಲಿ ವಿಜ್ಞಾನ, ತಂತ್ರಜ್ಞಾನದ ವೇಗದ ಬೆಳವಣಿಗೆ, ಯಂತ್ರೋಪಕರಣಗಳ ಬಳಕೆಯಿಂದ ಜನರಿಗೆ ಐಷಾರಾಮಿ ಜೀವನ ಸಿಗುತ್ತಿದೆ. ಜನರ ಶ್ರಮ ಕಡಿಮೆಯಾಗುತ್ತಿದೆ. ದುರಾದೃಷ್ಟವಷಾತ್ ಈ ಐಷಾರಾಮಿ ವ್ಯವಸ್ಥೆಯು ವ್ಯಕ್ತಿಗಳನ್ನು ಪರಸ್ಪರರಿಂದ ದೂರ ಮಾಡುತ್ತಿದೆ. ಸಮಾಜದಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ. ಸಂಸ್ಕಾರ, ಸಂಸ್ಕೃತಿ, ಮಾನವೀಯ ಮೌಲ್ಯಗಳನ್ನು ಮರೆತಿರುವ ಕಾರಣ ನಮ್ಮ ಸಮಾಜದಲ್ಲಿ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಇದರಿಂದ ಹೊರ ಬರಬೇಕಾದರೆ ಶಿಕ್ಷಣದಲ್ಲಿ ಸಂಸ್ಕೃತಿ, ಸಂಸ್ಕಾರ, ಮೌಲ್ಯಗಳು, ಪರಸ್ಪರರ ನಡುವೆ ಗೌರವ ಭಾವನೆಯ ಅಗತ್ಯತೆ ಇದೆ ಎಂದು ಆಶಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೈಸೂರಿನ ಚಿತ್ರನಗರಿಗೆ ಪುನೀತ್ ರಾಜ್‍ಕುಮಾರ್ ಹೆಸರಿಡಲು ಚಿಂತನೆ: ಎಸ್‍ಟಿಎಸ್

    ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅತ್ಯಗತ್ಯ. ಎಲ್ಲರಿಗೂ ಶಿಕ್ಷಣ ನೀಡಬೇಕು. ಜನರ ಅಗತ್ಯತೆಗಳಿಗೆ ತಕ್ಕಂತೆ ಶಿಕ್ಷಣ ನೀಡಬೇಕು. ಆರೋಗ್ಯಕರ ಸಮಾಜ ನಿರ್ಮಾಣವಾಗಬೇಕು. ಶಿಕ್ಷಣದಿಂದ ಸಾಮಾಜಿಕ ಕಳಕಳಿ ಬರಬೇಕು. ಆರೋಗ್ಯಕರ ಸಮಾಜದ ಮೂಲಕ ಸ್ವಾಭಿಮಾನಿಗಳನ್ನು ಸೃಷ್ಟಿಸುವ ಶಿಕ್ಷಣ ನೀತಿ ಭಾರತಕ್ಕೆ ಅಗತ್ಯವಿದೆ ಎಂದು ಜನಸಂಘದ ನೇತಾರ, ಶಿಕ್ಷಣ ತಜ್ಞ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರು ದಶಕಗಳ ಹಿಂದೆಯೇ ಹೇಳಿದ್ದರು ಎಂದು ಇತಿಹಾಸ ಮೆಲುಕು ಹಾಕಿದರು.

    ರಾಷ್ಟ್ರೀಯ ಭಾವನೆ, ಭಾರತದ ಬಗ್ಗೆ ಗೌರವ, ದೇಶವನ್ನು ವಿಶ್ವಗುರು ಮಾಡುವ ಶಿಕ್ಷಣವನ್ನು ರಾಷ್ಟ್ರೀಯ ಶಿಕ್ಷಣ ನೀತಿ ಒಳಗೊಂಡಿರಬೇಕು ಎಂದು ಶ್ಯಾಮ್ ಪ್ರಸಾದ್ ಮುಖರ್ಜಿ ಹೇಳಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಕೂಡ ಅದನ್ನೇ ಪ್ರತಿಪಾದಿಸಿದ್ದರು. ಸಂಸ್ಕೃತಿ ಮತ್ತು ವಿಜ್ಞಾನದ ಸಮನ್ವಯತೆಯ ಶಿಕ್ಷಣ ನೀಡುವುದು ಅತ್ಯಂತ ಜರೂರಿದೆ. ಎನ್ಇಪಿ-2020 ಈ ಎಲ್ಲ ಗುರಿ, ಉದ್ದೇಶಗಳನ್ನು ಒಳಗೊಂಡಿದೆ ಎಂದರು. ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆಯಲ್ಲಿ 6 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ: ಹೆಚ್‌ಡಿಕೆ

    ರಾಜ್ಯದಲ್ಲಿ ಮುಂದಿನ ವರ್ಷದಿಂದ ಎನ್ಇಪಿ ಅನುಷ್ಠಾನಗೊಳಿಸಲು ಯೋಚಿಸಿ ಶಿಕ್ಷಣ ತಜ್ಞರ ಕಾರ್ಯಪಡೆ ರಚಿಸಲಾಗಿದೆ. ಈ ಕುರಿತು ಇಲಾಖೆಯಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿವೆ. ಸಮಗ್ರ ಶಿಕ್ಷಣದ ದೂರದೃಷ್ಟಿಯೊಂದಿಗೆ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

  • ಬ್ರಿಟಿಷರು ಶಿಕ್ಷಣ ವ್ಯವಸ್ಥೆಗೆ ಕೈ ಹಾಕಿದ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟ ಆಯ್ತು: ಬಿ.ಸಿ ನಾಗೇಶ್

    ಬ್ರಿಟಿಷರು ಶಿಕ್ಷಣ ವ್ಯವಸ್ಥೆಗೆ ಕೈ ಹಾಕಿದ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟ ಆಯ್ತು: ಬಿ.ಸಿ ನಾಗೇಶ್

    – 75 ವರ್ಷಗಳ ಶಿಕ್ಷಣ ಸ್ವಾರ್ಥದ ಬದುಕು ಕಲಿಸಿಕೊಟ್ಟಿದೆ

    ಬೆಂಗಳೂರು: ಭಾರತದಲ್ಲಿ ಬ್ರಿಟಿಷರು ಶಿಕ್ಷಣ ವ್ಯವಸ್ಥೆಗೆ ಕೈ ಹಾಕಿದ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟ ಆಯ್ತು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.

    ರಾಷ್ಟ್ರೀಯ ಶಿಕ್ಷಣ ನೀತಿ(ಎನ್‍ಇಪಿ) ಕುರಿತು ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನಕ್ಕೆ ಬಿ.ಸಿ ನಾಗೇಶ್ ಚಾಲನೆ ನೀಡಿ, ನಂತರ ಈ ಕುರಿತು ಮಾತನಾಡಿದ್ದು, ಅನೇಕ ವರ್ಷಗಳಿಂದ ಶಿಕ್ಷಣ ನೀತಿಯಲ್ಲಿ ಬದಲಾವಣೆ ಆಗಬೇಕು ಎಂಬ ಚರ್ಚೆ ಆಗಿತ್ತು. 2020ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಸತ್ ಅಂಗೀಕಾರ ಮಾಡಿತು. ಈ ಹಿಂದೆ ಬ್ರಿಟಿಷರು ಶಿಕ್ಷಣ ವ್ಯವಸ್ಥೆಗೆ ಕೈ ಹಾಕಿದ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟ ಆಯ್ತು. ಬ್ರಿಟಿಷರು ಯಾವಾಗ ನಮ್ಮ ವ್ಯವಸ್ಥೆಗೆ ಕೈ ಹಾಕಿಲು ಮುಂದಾದ್ರೋ ಆಗ ಸ್ವಾತಂತ್ರ್ಯ ಹೋರಾಟ ಕಾವು ಹೆಚ್ಚಾಯ್ತು ಎಂದು ತಿಳಿಸಿದರು.

    ಶ್ಯಾಂ ಪ್ರಸಾದ್ ಮುಖರ್ಜಿ ಅವರು ಶಿಕ್ಷಣ ವ್ಯವಸ್ಥೆ ಬಗ್ಗೆ ಅಂದೇ ಧ್ವನಿ ಎತ್ತಿದ್ದರು. ಪಂಚಶೀಲ ಶಿಕ್ಷಣ ನೀತಿ ಬರಬೇಕು ಎಂದು ಮುಖರ್ಜಿ ಅವರು ಪ್ರತಿಪಾದನೆ ಮಾಡ್ತಾರೆ. ಅವರು ಅಂದೇ ಮೆಕ್ಯಾಲೆ ಶಿಕ್ಷಣ ವ್ಯವಸ್ಥೆಯನ್ನ ವಿರೋಧ ಮಾಡಿದ್ರು ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ಟೇಕ್ ಆಫ್ ಆಗ್ತಿದ್ದಂತೇ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

    ಈಗ ಇರುವ ಶಿಕ್ಷಣ ಪದ್ದತಿ ಕುಟುಂಬಗಳನ್ನು ವಿಭಾಗ ಮಾಡುವ ವ್ಯವಸ್ಥೆಯನ್ನ ಹುಟ್ಟು ಹಾಕುತ್ತಿದೆ. ಇಂತಹ ವ್ಯವಸ್ಥೆಯ ಶಿಕ್ಷಣ ಬದಲಾವಣೆ ಆಗಬೇಕು. 75 ವರ್ಷಗಳ ಶಿಕ್ಷಣ ಸ್ವಾರ್ಥದ ಬದುಕು ಕಲಿಸಿಕೊಟ್ಟಿದೆ. ಶಿಕ್ಷಣ ವ್ಯವಸ್ಥೆ ಮೂಲಕ ದೇಶ ಬದಲಾವಣೆ ಮಾಡಬೇಕು. ಹೊಸ ಶಿಕ್ಷಣ ನೀತಿ 2014 ರಿಂದ ಚರ್ಚೆ ಆಗಿತ್ತು. 2020ರಲ್ಲಿ ಅನುಷ್ಠಾನ ಮಾಡಲಾಗಿದೆ. ಕರ್ನಾಟಕ ಮೊದಲ ರಾಜ್ಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡಿದ್ದೇವೆ ಎಂದು ತಿಳಿಸಿದರು.

    ಮುಂದಿನ ವರ್ಷದಿಂದ ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡ್ತೀವಿ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಈಗಾಗಲೇ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ಯಾವ ತರಗತಿಯಿಂದ ಹೇಗೆ ಅನುಷ್ಠಾನ ಮಾಡಬೇಕು ಎಂದು ಟಾಸ್ಕ್ ಫೋರ್ಸ್ ವರದಿ ಕೊಡುತ್ತೆ. ವರದಿ ಬಂದ ಬಳಿಕ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡುತ್ತೇವೆ. ಅದು ಬಿಟ್ಟು ವಿರೋಧಗಳಿಗೆ ನಾವು ತಲೆ ಕೆಡಿಸಿಕೊಳ್ಳೊಲ್ಲ ಎಂದು ಸ್ಪಷ್ಟನೆ ನೀಡಿದರು.

    ಕೊರೊನಾ ಲಸಿಕೆಯನ್ನು ವಿರೋಧಿ ಮಾಡಿರೋ ಜನರು ನಮ್ಮ ಮಧ್ಯೆ ಇದ್ದಾರೆ. ಹೀಗಾಗಿ ಯಾವುದೇ ವಿರೋಧಕ್ಕೆ ನಾವು ತಲೆ ಕೆಡಿಸಿಕೊಳ್ಳೊಲ್ಲ. ರಾಷ್ಟ್ರೀಯ ಶಿಕ್ಷಣ ನೀತಿ ಓದಿದವರು ಯಾರು ವಿರೋಧ ಮಾಡ್ತಿಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಓದದೇ ಅನೇಕ ಜನರು ವಿರೋಧ ಮಾಡ್ತಿದ್ದಾರೆ. ಇದಕ್ಕೆ ನಾವು ತಲೆ ಕೆಡಿಸಿಕೊಳ್ಳಲ್ಲ. ವಿರೋಧಗಳಿಗೆ ತಲೆ ಕೆಡಿಸಿಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡ್ತೀವಿ ಎಂದು ನಿಖರವಾಗಿ ತಿಳಿಸಿದರು. ಇದನ್ನೂ ಓದಿ: ಮೃಗಾಲಯದ 4 ಸಿಂಹಗಳಿಗೆ ಕೊರೊನಾ ಪಾಸಿಟಿವ್

    ಈ ಸಮ್ಮೇಳನವನ್ನು ಆರ್.ವಿ. ಶಿಕ್ಷಕರ ಮಹಾ ವಿದ್ಯಾಲಯದ ಸಾರ್ವಜನಿಕ ಶಿಕ್ಷಣ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಸದಸ್ಯ ಎಂ.ಕೆ.ಶ್ರೀಧರ್, ಶಿಕ್ಷಣ ತಜ್ಞ ಡಾ.ಗುರುರಾಜ್ ಕರ್ಜಗಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಪಿಯುಸಿ ಬೋರ್ಡ್ ನಿರ್ದೇಶಕಿ ಸ್ನೇಹಲ್ ಸೇರಿ ಇಲಾಖೆ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗಿಯಾಗಿದ್ದರು.

  • ಬೆಂಗಳೂರು ವಿವಿಯಲ್ಲಿ ಹೊಸ 30 ಕೋರ್ಸ್ ಆರಂಭ

    ಬೆಂಗಳೂರು ವಿವಿಯಲ್ಲಿ ಹೊಸ 30 ಕೋರ್ಸ್ ಆರಂಭ

    ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನದ ಭಾಗವಾಗಿ ಬೆಂಗಳೂರು ವಿಶ್ವವಿದ್ಯಾಲಯ 30 ಹೊಸ ಕೋರ್ಸ್‍ಗಳನ್ನು ಆರಂಭಿಸಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಾಖಲಾತಿಗೂ ಅವಕಾಶ ಮಾಡಿಕೊಟ್ಟಿದೆ.

    ಬೆಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ಹೊಸ ಕೋರ್ಸ್‍ಗಳಲ್ಲಿ ನಾಲ್ಕು ವರ್ಷದ ಬಿ.ಎಸ್ಸಿ ಹಾಗೂ ಬಿ.ಎ ಆನರ್ಸ್ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‍ಗಳು, ಪ್ರೊಫೆಷನ್ ಡಿಪ್ಲೊಮಾ ಕೋರ್ಸ್‍ಗಳು, ಪ್ರಮಾಣ ಪತ್ರ ಕೋರ್ಸ್‍ಗಳು, ನಾಲ್ಕು ವರ್ಷದ ಬಿ.ಇಡಿ ಹಾಗೂ ಕೆಲವೊಂದು ತಾಂತ್ರಿಕ ಕೋರ್ಸ್‍ಗಳು ಸೇರಿಕೊಂಡಿವೆ. ಇದನ್ನೂ ಓದಿ: ದೇವಸ್ಥಾನದ ಆವರಣದಲ್ಲಿ ಚಪ್ಪಲಿ ಧರಿಸಿ ವಿಕೃತಿ ಮೆರೆದಿದ್ದ ಪುಂಡರು ಅರೆಸ್ಟ್

    ಕುಲಪತಿ ಕೆ.ಆರ್.ವೇಣುಗೋಪಾಲ್ ಈ ಕುರಿತು ಮಾತನಾಡಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಸಾರವಾಗಿ ವಿದ್ಯಾರ್ಥಿಗಳಿಗೆ ಪದವಿ ಪೂರ್ಣಗೊಂಡ ನಂತರ ಉದ್ಯೋಗಾವಕಾಶಕ್ಕೆ ಪೂರಕವಾಗುವಂತೆ ಹಾಗೂ ಪದವಿಯ ಮಧ್ಯದಲ್ಲೇ ಎಕ್ಸಿಟ್, ಎಂಟ್ರಿಗೆ ಅನುಕೂಲ ಆಗುವಂತೆ ಕೋರ್ಸ್‍ಗಳ ಪಠ್ಯಕ್ರಮ ಸಿದ್ಧಪಡಿಸಿ ವಿನ್ಯಾಸಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಹೊಸ ಕೋರ್ಸ್‍ಗಳ ವಿವರ: ನಾಲ್ಕು ವರ್ಷದ ಬಿ.ಎಸ್ಸಿ ಹಾಗೂ ಬಿ.ಎ ಆನರ್ಸ್ ಅಡಿಯಲ್ಲಿ ಬಯೋ ಇನ್ಫರ್ಮೇಷನ್ ಮತ್ತು ಬಯೋಟೆಕ್ನಾಲಜಿ, ಹ್ಯೂಮನ್ ಡಿಸೀಸ್ ಜೆನೆಟಿಕ್ಸ್, ಆಹಾರ ಮತ್ತು ಪೌಷ್ಠಿಕಾಂಶ, ಅರ್ಥಶಾಸ್ತ್ರ, ಘನತಾಜ್ಯ ನಿರ್ವಹಣೆ, ಫಿಲ್ಮ್ ಮೇಕಿಂಗ್, ಗ್ರಾಫಿಕ್ಸ್ ಮತ್ತು ಆ್ಯನಿಮೇಷನ್, ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್, ವಿಪತ್ತು ನಿರ್ವಹಣೆ ಮತ್ತು ಮೆಡಿಸಿನಲ್ ಬಾಟನಿ ಪ್ರಾರಂಭಿಸಲಾಗುವುದು.

    ಎಂ.ಎ ವಿಭಾಗದಲ್ಲಿ ಟಿಬೆಟಿಯನ್ ಲಿಟರೇಚರ್, ಟಿಬೆಟಿಯನ್ ಲ್ಯಾಂಗ್ವೇಜ್, ಬುದ್ಧಿಸ್ಟ್ ಫಿಲಾಸಫಿ, ಟಿಬೆಟಿಯನ್ ಇತಿಹಾಸ, ಇಂಟರ್‍ಡಿಸಿಪ್ಲಿನರಿ ಇಂಡಿಯನ್ ಕ್ಲಾಸಿಕಲ್ ಮ್ಯೂಸಿಕ್ ರಿಸರ್ಚ್, ಅಡ್ವರ್ಟೈಸಿಂಗ್ ಆಂಡ್ ಪಬ್ಲಿಕ್ ರಿಸರ್ಚ್, ಮೀಡಿಯಾ ಮ್ಯಾನೇಜ್ಮೆಂಟ್ ಕೋರ್ಸ್‍ಗಳು ಆರಂಭವಾಗಲಿವೆ. ಇದನ್ನೂ ಓದಿ: ಬ್ಲೂಟೂತ್ ಬಳಸಿ ಕಾನ್‍ಸ್ಟೇಬಲ್ ಪರೀಕ್ಷೆ ಬರೆಯಲು ಯತ್ನ – ಸಿಐಡಿಗೆ ತನಿಖೆ ವಹಿಸಿದ ರಾಜ್ಯ ಗೃಹ ಇಲಾಖೆ

    ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್ ಅಡಿಯಲ್ಲಿ ಮ್ಯಾನುಸ್ಕ್ರಿಪ್ಟಾಲಜಿ ಮತ್ತು ಪಾಲಿಯೋಗ್ರಫಿ, ಇಂಟರ್‍ಡಿಸಿಪ್ಲಿನರಿ ಸ್ಟಡೀಸ್ ಇನ್ ಇಂಡಿಯನ್ ಕ್ಲಾಸಿಕಲ್ ಮ್ಯೂಸಿಕ್, ಆಡಿಟರಿ ವರ್ಬಲ್ ಥೆರಪಿ ಕೋರ್ಸ್, ಫಿಲ್ಮ್ ಆಕ್ಟಿಂಗ್, ಥಿಯೇಟರ್ ಆಟ್ರ್ಸ್, ಫಿಲ್ಮ್ ಮೇಕಿಂಗ್, ಕೃಷಿ ನಿರ್ವಹಣೆ, ಪ್ರೊಫೆಷನ್ ಡಿಪ್ಲೊಮಾ ವಿಭಾಗದಲ್ಲಿ ಭರತನಾಟ್ಯಂ, ಒಡಿಸ್ಸಿ, ಪ್ರಮಾಣಪತ್ರ ಕೋರ್ಸ್‍ನಲ್ಲಿ ರಿಸರ್ಚ್ ಮೆಥಡ್ ಇನ್ ಮ್ಯಾನುಸ್ಕ್ರಿಪ್ಟಾಲಜಿ ಮತ್ತು ಪಾಲಿಯೋಗ್ರಫಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬಿ.ಟೆಕ್ ವಿಭಾಗದಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸೆಕ್ಯೂರಿಟಿ, ಸುಸ್ಥಿರ ಆರ್ಕಿಟೆಕ್ಚರ್, ಇಂಟರ್‍ನೆಟ್ ಆಫ್ ಥಿಂಗ್ಸ್ ಕೋರ್ಸ್‍ಗಳು ಶುರುವಾಗಲಿದೆ.

  • ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕನ್ನಡ ಭಾಷೆಗೆ ಆದ್ಯತೆ – ಬೆಲ್ಲದ್

    ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕನ್ನಡ ಭಾಷೆಗೆ ಆದ್ಯತೆ – ಬೆಲ್ಲದ್

    -ಹಿಂದಿನ ಸರ್ಕಾರ ಶಾಲೆಗಳನ್ನು ಇಂಗ್ಲೀಷ್ ಮಾಧ್ಯಮ ಮಾಡಿತ್ತು

    ಹುಬ್ಬಳ್ಳಿ: ಹಿಂದಿನ ಸರ್ಕಾರ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಮಾಡುವಂತೆ ನಿರ್ಣಯ ತಗೆದುಕೊಂಡಿತ್ತು, ಆದರೆ ನ್ಯಾಯಾಲಯ ಅದಕ್ಕೆ ತಡೆಹಿಡಿದಿತ್ತು. ಇದೀಗ ನೂತನವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದಿದ್ದು, ಅದರಡಿ ಪ್ರತಿಯೊಂದು ರಾಜ್ಯದಲ್ಲಿ ಆಯಾ ಪ್ರಾಥಮಿಕ ಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಅದರಂತೆ ನಮ್ಮ ರಾಜ್ಯದಲ್ಲಿ ಪ್ರಾಥಮಿಕ ಭಾಷೆಯಾಗಿ ಕನ್ನಡಕ್ಕೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ.

    ನಗರದ ಶ್ರೀಸಿದ್ಧಾರೂಢ ಮಠದ ಆವರಣದಲ್ಲಿಂದು ಕನ್ನಡ ರಾಜ್ಯೋತ್ಸವ ಅಂಗವಾಗಿ ಶ್ರೀಭುವನೇಶ್ವರಿ ಮಾತೆಗೆ ಪೂಜೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದ ಅವರು, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾಥಮಿಕ ಶಿಕ್ಷಣ ಸಂಪೂರ್ಣವಾಗಿ ಕನ್ನಡದ ಭಾಷೆ ಹಾಗೂ ಆಯಾ ರಾಜ್ಯದ ಭಾಷೆಯಲ್ಲಿಯೇ ಆಗುವುದು. ಇದರಿಂದ ನಮ್ಮ ದೇಶದ ಸಂಸ್ಕೃತಿ ಗಟ್ಟಿಯಾಗುತ್ತದೆ. ಮೂಲ ಭಾಷೆಗೆ ಗೌರವ ನೀಡಿದಂತಾಗುತ್ತದೆ. ಕರ್ನಾಟಕ ಹಾಗೂ ಕನ್ನಡ ಭಾಷೆ ಉದಯವಾಗಲು ಹುಬ್ಬಳ್ಳಿ ಧಾರವಾಡದ ಪಾತ್ರ ದೊಡ್ಡದಿದೆ ಎಂದರು.

    ಕನ್ನಡ ಏಕೀಕರಣಕ್ಕಾಗಿ ಕನ್ನಡ ಭಾಷೆಗಾಗಿ ಅದರಗುಂಚಿ ಶಂಕರರಾಯರು ಹೋರಾಟ ಮಾಡಿದ್ದರು. ಎಲ್ಲ ಹೋರಾಟಗಳಿಗೆ ಮುಂಚೂಣಿಯಲ್ಲಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘವಿತ್ತು. ಈ ಮೊದಲು ಕರ್ನಾಟಕವು ಹೈದರಾಬಾದ್ ಕರ್ನಾಟಕ, ಮಂಗಳೂರು, ಗೋವಾ ಬಾಂಬೆ ಕರ್ನಾಟಕ ಹೀಗೆ ಹರಿದು ಹಂಚಿಹೋಗಿತ್ತು. ಇವೆಲ್ಲವೂ ಅಖಂಡವಾಗಬೇಕು, ಕನ್ನಡ ಭಾಷೆ ಮಾತನಾಡುವವರು ಒಂದೇ ಕಡೆ ಇರಬೇಕು, ಕರ್ನಾಟಕ ನಿವಾಸಿಗಳಾಗಬೇಕು ಎಂದು ಹೋರಾಟ ಮಾಡಿದವರು ಅದರಗುಂಚಿ ಶಂಕರರಾಯರು ಹಾಗೂ ಕರ್ನಾಟಕ ವಿದ್ಯಾವರ್ಧಕ ಸಂಘದ  ಹೋರಾಟಗಾರರು. ಮೈಸೂರು ಭಾಗದ ನಾಯಕರು ಅಖಂಡ ಕರ್ನಾಟಕ ಒಂದಾದರೇ ಪ್ರಾತಿನಿತ್ಯ ಹೆಚ್ಚಾಗುತ್ತದೆ ಎಂದು ಮೈಸೂರು ಕರ್ನಾಟಕ ಸೇರಿ ಒಂದಾಯಿತು. ಇದೆಲ್ಲವು ಕರ್ನಾಟಕ ಉದಯಕ್ಕೆ ಕಾರಣವಾಯಿತು. ಭಾಷೆ ಉಳಿದರೆ ಆ ಭಾಷೆಯ ಸಂಸ್ಕೃತಿ  ಉಳಿಯಲು ಸಾಧ್ಯವಾಗುತ್ತದೆ ಎಂದು ನುಡಿದರು. ಇದನ್ನೂ ಓದಿ: ಮರಣೋತ್ತರ ರಾಜ್ಯೋತ್ಸವ ನೀಡಲು ಅವಕಾಶವಿಲ್ಲ: ಸುನೀಲ್ ಕುಮಾರ್

    ಮುಖ್ಯ ಅತಿಥಿಯಾಗಿ ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ್ ಮಾತನಾಡಿ, ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳ ಪಾತ್ರ ದೊಡ್ಡದು, ಅದರಲ್ಲೂ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಹಾಗೂ ಸಂಘಟಣೆಗಾರರ ಪಾತ್ರವು ಹೆಚ್ಚಿದೆ. ನಗರದಲ್ಲಿ ನಾಮಫಲಕ ಬದಲಿಸುವ ಕೆಲಸ ಕಾರ್ಯೋನ್ಮುಖವಾಗಿದ್ದು, ಈಗಾಗಲೇ 320 ನಾಮಫಲಕಗಳನ್ನು ಬದಲಾವಣೆ ಮಾಡಲಾಗಿದೆ. ಇನ್ನುಳಿದ ಫಲಕಗಳನ್ನು ಶೀಘ್ರದಲ್ಲಿ ಬದಲಾವಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

    ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ಮಾತನಾಡಿ, ಇಂದು ರಾಜ್ಯಾದ್ಯಂತ ಎಲ್ಲ ಕಡೆ ಕನ್ನಡ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲರಿಗೂ ಕನ್ನಡದ ಬಗ್ಗೆ ಅಭಿಮಾನ ಇರಬೇಕು. ಏಕೆಂದರೆ ಕನ್ನಡ ಅಳಿವು ಉಳಿವಿಗಾಗಿ ಕನ್ನಡ ಪರ ಸಂಘಟನೆಯು ದಿನನಿತ್ಯ ಹೋರಾಟ ಮಾಡುತ್ತಿದೆ. ಕನ್ನಡಕ್ಕೆ ದಕ್ಕೆಯಾದಾಗ ಹೋರಾಟ ನಡೆಸಿ ತಪ್ಪನ್ನು ತಿದ್ದುವ ಮೂಲಕ ಕನ್ನಡಪರ ಸಂಘಟನಕಾರರು ಅಭಿಮಾನವನ್ನು ತೋರುತ್ತ ಬಂದಿದ್ದಾರೆ. ಎಲ್ಲಿಯೋ ಇರು ಹೇಗೆಯೇ ಎಂದೆಂದಿಗೂ ನೀ ಕನ್ನಡವಾಗಿರು ಎಂದು ಡಾ. ರಾಜ್‍ಕುಮಾರ್, ಡಾ. ವಿಷ್ಣುವರ್ಧನ್ ಹಾಗೂ ಇನ್ನಿತರ ಕನ್ನಡ ಚಲನಚಿತ್ರ ನಟರು ಹಾಡಿನ ಮೂಲಕ ಕನ್ನಡ ಅಭಿಮಾನ ವ್ಯಕ್ತಪಡಿಸಿ, ಜನರಿಗೆ ಅರಿವು ಮೂಡಿಸುವಂತೆ ಮಾಡಿದ್ದಾರೆ. ನಮ್ಮ ನಾಡು ನುಡಿ ಉಳಿವಿಗಾಗಿ ನಾವು ಶ್ರಮಿಸಬೇಕು ಹಾಗೂ ಕನ್ನಡಕ್ಕೆ ಮೊದಲ ಆಧ್ಯತೆಯನ್ನು ನೀಡಬೇಕು. ನಮ್ಮ ಕನ್ನಡ ನಾಡು ಸಂಸ್ಕೃತಿಯನ್ನು ವಿದೇಶದವರು ಸಹ ಬೆಳೆಸುತ್ತಿದ್ದಾರೆ. ಕನ್ನಡ ಹಾಡುಗಳನ್ನು ಹಾಡಿ ಕುಣಿದು ಕುಪ್ಪಳಿಸಿ ಅಭಿಮಾನ ತೋರಿಸುತ್ತಾರೆ. ಅದಕ್ಕಾಗಿ ನಾವು ಕನ್ನಡವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದರು. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

    ಇದೆ ಸಂದರ್ಭದಲ್ಲಿ 2021 ನೇ ಸಾಲಿನ ಕನ್ನಡ ಭಾಷೆಯಲ್ಲಿ 125 ಕ್ಕೆ 125 ಅಂಕ ಪಡೆದ 36 ವಿಧ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಹಾಗೂ ಹುಬ್ಬಳ್ಳಿ ಮತ್ತು ಧಾರವಾಡ ವಿಭಾಗದಿಂದ ಪ್ರಬಂಧ ಸ್ಪರ್ಧೆಯಲ್ಲಿ ಆಯ್ಕೆಯಾದ 6 ವಿಜೇತರಿಗೆ ಸನ್ಮಾನ ಮಾಡಲಾಯಿತು. ಇದನ್ನೂ ಓದಿ: ನಮ್ಮನ್ನ ಎಂದೂ ಅವ್ರು ಕೆಲ್ಸದವರಂತೆ ನೋಡಿಲ್ಲ: ಕೇಶ ವಿನ್ಯಾಸಕಾರ ಕಾರ್ತಿಕ್ ಭಾವುಕ

    ಕಾರ್ಯಕ್ರಮದಲ್ಲಿ ಮೊಷ್ಲೋದೇವಿ ಮಂದಿರದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ದೇವಪ್ಪಜ್ಜನವರ, ಹೆಚ್ಚುವರಿ ಆಯುಕ್ತ ಎ.ಆರ್.ದೇಸಾಯಿ, ಪಾಲಿಕೆ ಪಿ.ಆರ್.ಒ ಎಸ್.ಸಿ ಬೇವೂರ ಸೇರಿದಂತೆ ಪಾಲಿಕೆ ನೂತನವಾಗಿ ಆಯ್ಕೆಯಾದ ಸರ್ವ ಸದಸ್ಯರು, ಪಾಲಿಕೆ ಅಧಿಕಾರಿಗಳು, ಕನ್ನಡಪರ ಸಂಘಟನೆಯವರು, ಪದಾಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.