Tag: ರಾಹುಲ್

  • ಸಂಜನಾ ಪತಿ ನನಗೆ ಚಿಕಿತ್ಸೆ ನೀಡಿದ್ರು – ಡಾಕ್ಟರ್ ಜೊತೆ ಸಂಜನಾ ಮದ್ವೆ ಆಗಿದ್ದಾರಾ?

    ಸಂಜನಾ ಪತಿ ನನಗೆ ಚಿಕಿತ್ಸೆ ನೀಡಿದ್ರು – ಡಾಕ್ಟರ್ ಜೊತೆ ಸಂಜನಾ ಮದ್ವೆ ಆಗಿದ್ದಾರಾ?

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ನಟಿ ಸಂಜನಾ ಮನೆಯ ಮೇಲೆ ದಾಳಿದ್ದರು. ಇದೀಗ ಸಂಜನಾರನ್ನು ಬಂಧಿಸಿ ಸಿಸಿಬಿ ಕಚೇರಿಗೆ ಅಧಿಕಾರಿಗಳು ಕರೆದುಕೊಂಡು ಹೋಗಿದ್ದಾರೆ. ಆದರೆ ಈ ಮಧ್ಯೆ ನಟಿ ನ್ಯೂರೋ ಸರ್ಜನ್ ಕರೆಯಲು ಗಲಾಟೆ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

    ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಮನೆಯಲ್ಲಿ ಶೋಧ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ನ್ಯೂರೋ ಸರ್ಜನ್ ಕರೆಯಲು ಗಲಾಟೆ ಮಾಡಿದ್ದರು ಎನ್ನಲಾಗಿದೆ. ಅದೇ ಅಪಾರ್ಟ್ ಮೆಂಟ್ ಅಲ್ಲಿ ಡಾಕ್ಟರ್ ವಾಸಿಸುತ್ತಿದ್ದು, ಆತನ ಜೊತೆ ಸಂಜನಾ ಸ್ನೇಹ ಇಟ್ಟುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಅವರಿಬ್ಬರು ಅಮೆರಿಕಾಗೆ ಹೋಗಿ ಮದುವೆ ಆಗಿದ್ದಾರೆ ಎಂದು ಗುಮಾನಿ ಸಹ ಇದೆ. ಹೀಗಾಗಿ ಸಂಜನಾ ಡಾಕ್ಟರ್ ಕರೆಯಲು ಒತ್ತಾಯಿಸಿದ್ದರು ಎನ್ನಲಾಗಿದೆ.

    ವೈದ್ಯ ಸಂಜನಾರನ್ನು ಮದುವೆ ಆಗಿದ್ದಾರೋ ಅಥವಾ ಲಿವ್ ಇನ್ ಸಂಬಂಧ ಇಟ್ಟುಕೊಂಡಿದ್ದಾರೋ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಆದರೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ರಾಹುಲ್ ತಂದೆ ರಾಮಚಂದ್ರ ಮೂರು ದಿನಗಳ ಹಿಂದೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡುವ ವೇಳೆ ಸಂಜನಾ ಪತಿ ಚಿಕಿತ್ಸೆ ನೀಡಿದ್ದರು ಎಂದು ಹೇಳಿಕೆ ನೀಡಿದ್ದರು.

    ಮೂರು ದಿನಗಳ ಹಿಂದೆ ರಾಹುಲ್ ತಂದೆ ಪಬ್ಲಿಕ್ ಟಿವಿ ಜೊತೆ ಮಾತನಾಡುವ ವೇಳೆ, ನನ್ನ ಮಗನಿಗೆ ಸಂಜನಾ ಒಬ್ಬರೇ ಪರಿಚಯ ಇರುವುದು. ರಾಹುಲ್ ಎಂಜಿನಿಯರ್ ಮಾಡಿ ಆರ್ಕಿಟೆಕ್ಚರ್ ಕೆಲಸ ಮಾಡುತ್ತಿದ್ದಾನೆ. ಒಮ್ಮೆ ಸಂಜನಾ ಮನೆಗೆ ಹೋಗಿ ಇಂಟಿರಿಯರ್ ಡಿಸೈನರ್ ಕೆಲಸ ಮಾಡಿಕೊಟ್ಟಿದ್ದನು. ಅಂದಿನಿಂದ ಇಬ್ಬರಿಗೂ ಪರಿಚಯವಾಗಿದೆ. ಅವರ ಮನೆ ಇವನು, ನಮ್ಮ ಮನೆಗೆ ಸಂಜನಾ ಬಂದು ಹೋಗುತ್ತಿದ್ದರು ಎಂದು ಹೇಳಿದ್ದರು.

     

    ಅಲ್ಲದೇ ಅವರ ಬರ್ತ್ ಡೇ ಪಾರ್ಟಿಗೆ ಇವನು ಹೋಗುತ್ತಿದ್ದನು. ಇವನ ಹುಟ್ಟುಹಬ್ಬಕ್ಕೆ ಸಂಜನಾ ಕೂಡ ಬರುತ್ತಿದ್ದಳು. ಅವರಿಬ್ಬರದ್ದು ಅಣ್ಣ-ತಂಗಿ ಸಂಬಂಧ ಬೇರೆ ಏನು ಇಲ್ಲ. ನನಗೆ ಹೃದಯ ಸಂಬಂಧಿ ಕಾಯಿಲೆ ಇದೆ. ಒಮ್ಮೆ ಸಂಜನಾ ಪತಿಯೇ ನನಗೆ ಚಿಕಿತ್ಸೆ ನೀಡಿದ್ದರು. ಸಂಜನಾ ಪತಿ ಕೂಡ ರಾಹುಲ್‍ಗೆ ಪರಿಚಯ, ಸಂಜನಾ ಪತಿ ಡಾಕ್ಟರ್ ಆಗಿದ್ದು, ನಮಗೆ ಸಹಾಯ ಮಾಡಿದ್ದರು ಎಂದು ರಾಮಚಂದ್ರ ಪ್ರತಿಕ್ರಿಯಿಸಿದ್ದರು.

  • ಡ್ರಗ್ಸ್ ಕೇಸ್ – ಸಂಜನಾಗೆ ಉರುಳಾದ ಮೂರು ವ್ಯಕ್ತಿಗಳು

    ಡ್ರಗ್ಸ್ ಕೇಸ್ – ಸಂಜನಾಗೆ ಉರುಳಾದ ಮೂರು ವ್ಯಕ್ತಿಗಳು

    ಬೆಂಗಳೂರು: ನಟಿ ಸಂಜನಾ ಮನೆಯ ಮೇಲೆ ಸಿಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯಾಚರಣೆ ಮಾಡುತ್ತಿದ್ದಾರೆ. ಸಂಜನಾ ಮನೆ ಮೇಲಿನ ದಾಳಿಗೆ ಮೂವರು ವ್ಯಕ್ತಿಗಳ ಜೊತೆಗಿನ ಒಡನಾಟ ಕಾರಣ ಎನ್ನಲಾಗುತ್ತಿದೆ. ಇದನ್ನೂ ಓದಿ: ಏಕಾಏಕಿ ದಾಳಿ ಮಾಡಿದ್ದೀರಿ, ನಾನು ಬರೋದಿಲ್ಲ – ಸಿಸಿಬಿ ಮುಂದೆ ಸಂಜನಾ ರಂಪಾಟ

    ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿರುವ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ನೀಡಿದ ಹೇಳಿಕೆಯ ಆಧಾರದ ಮೇಲೆ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ದಾಳಿ ನಡೆಸಿದೆ ಎನ್ನಲಾಗಿದೆ. ಈ ಹಿಂದೆ ನಟಿ ಸಂಜನಾ ಆಪ್ತ ರಾಹುಲ್, ಪ್ರಶಾಂತ್ ರಾಂಕಾ ಕೊಟ್ಟ ಹೇಳಿಕೆಯ ಎಲ್ಲಾವನ್ನ ಇಟ್ಟುಕೊಂಡು ಸಿಸಿಬಿ ಸೋಮವಾರ ರಾತ್ರಿ ಸರ್ಚ್ ವಾರೆಂಟ್ ಪಡೆದಿತ್ತು. ಹೀಗಾಗಿ ಬೆಳ್ಳಂಬೆಳಗ್ಗೆ ನಟಿ ಸಂಜನಾ ಮನೆಯ ಮೇಲೆ ಸಿಸಿಬಿ ದಾಳಿ ಮಾಡಿದೆ. ಇದನ್ನೂ ಓದಿ: ಪೃಥ್ವಿ ಶೆಟ್ಟಿ ಹೇಳಿಕೆಯ ಆಧಾರದ ಮೇಲೆ ಸಂಜನಾ ನಿವಾಸದ ಮೇಲೆ ದಾಳಿ?

    ಸಂಜನಾ-ಪೃಥ್ವಿ ಶೆಟ್ಟಿ:
    ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಪೃಥ್ವಿ ಶೆಟ್ಟಿ ಕಂಪನಿಯಲ್ಲಿ ಸಂಜನಾ ಸಹ ಪಾಲುದಾರೆ ಎಂಬ ಮಾಹಿತಿ ಸಿಕ್ಕಿದೆ. ಇಬ್ಬರ ನಡುವೆ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಖಲೆಗಳನ್ನು ಕೆದಕಿದಾಗ ದೊಡ್ಡ ದೊಡ್ಡ ಹೋಟೆಲ್‍ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಿದ ಬಗ್ಗೆ ಮಾಹಿತಿ ಸಿಕ್ಕಿದೆ. ಇವರಿಬ್ಬರು ಬರೀ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದರೇ ಅಥವಾ ಬೇರೆ ಯಾವೆಲ್ಲಾ ವ್ಯವಹಾರಗಳನ್ನು ನಡೆಸುತ್ತಿದ್ದರು ಎಂಬುದರ ಬಗ್ಗೆ ಹಲವು ಪ್ರಶ್ನೆಗಳು ಎದ್ದಿದೆ. ಸದ್ಯಕ್ಕೆ ಪೃಥ್ವಿ ಶೆಟ್ಟಿ ತಿಳಿಸಿದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂಬ ಮಾಹಿತಿ ಸಿಕ್ಕಿದೆ.

    ಸಂಜನಾ-ರಾಹುಲ್ ಲಿಂಕ್:
    ರಾಹುಲ್ ನಟಿ ಸಂಜನಾ ಗಲ್ರಾನಿ ಆಪ್ತನಾಗಿದ್ದು, ರಾಹುಲ್‍ನನ್ನು ರಾಕಿ ಬ್ರದರ್ ಎನ್ನುತ್ತಾರೆ. ರಾಹುಲ್ ಶ್ರೀಲಂಕಾದಲ್ಲಿ ಕ್ಯಾಸಿನೋ ಹೊಂದಿದ್ದು, ರಾಹುಲ್ ಜೊತೆ ಶ್ರೀಲಂಕಾ ಕ್ಯಾಸಿನೋಗಳಲ್ಲಿ ಸಂಜನಾ ಕಾಣಿಸಿಕೊಂಡಿದ್ದರು. ಜೊತೆಗೆ ರಾಹುಲ್ ಡ್ರಗ್ ಪೆಡ್ಲರ್ ಆಗಿದ್ದು, ಸೆಲೆಬ್ರಿಟಿ ಪಾರ್ಟಿಗಳಿಗೆ ಡ್ರಗ್ ಪೂರೈಸುತ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ. ವಿಚಾರಣೆ ವೇಳೆ ಸಂಜನಾ ಹೆಸರು ಬಾಯಿಬಿಟ್ಟಿದ್ದನು. ಅಲ್ಲದೇ ರಾಹುಲ್ ಮೊಬೈಲ್‍ನಲ್ಲಿದ್ದ ಪಾರ್ಟಿ ಫೋಟೋ ಕೂಡ ಸೀಜ್ ಮಾಡಲಾಗಿದೆ.

     

    ಸಂಜನಾ_ಪ್ರಶಾಂತ್ ರಾಂಕಾ ಲಿಂಕ್:
    ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಪ್ರಶಾಂತ್ ರಾಂಕಾ ನಾಲ್ಕನೇಯ ಆರೋಪಿಯಾಗಿದ್ದು, ವಿದೇಶಿಯೊಂದಿಗೆ ಡ್ರಗ್ಸ್ ವ್ಯವಹಾರದಲ್ಲಿ ನೇರ ಸಂಪರ್ಕ ಹೊಂದಿದ್ದನು ಎಂದು ತಿಳಿದು ಬಂದಿದೆ. ಪ್ರಶಾಂತ್ ರಾಂಕಾ ಜೊತೆ ನಟಿ ಸಂಜನಾ ಹಲವು ಪಾರ್ಟಿಗಳಲ್ಲಿ ಕಾಣಿಸಿಕೊಂಡಿದ್ದು, ಇಬ್ಬರ ನಡುವೆ ಸಂಪರ್ಕ ಇದ್ದ ಬಗ್ಗೆ ಮೊಬೈಲ್‍ನಲ್ಲಿರುವ ಫೋಟೋ, ಕರೆ ಸಾಕ್ಷ್ಯ ಸುಳಿವು ನೀಡಿದೆ. ಈ ಸುಳಿವನ್ನು ಬೆನ್ನತ್ತಿದ ಸಿಸಿಬಿ ಅಧಿಕಾರಿಗಳು ಸಾಕಷ್ಟು ಮಾಹಿತಿ ಸಂಗ್ರಹಿಸಿದ್ದಾರೆ.

    ನಟಿ ಸಂಜನಾಗೆ ನೋಟಿಸ್ ಕೊಟ್ಟರೆ ಎಚ್ಚೆತ್ತುಕೊಳ್ಳುತ್ತಾರೆ ಎಂದು ತನಿಖೆಯ ವೇಳೆ ಸಿಕ್ಕಿರುವ ಮಾಹಿತಿಯನ್ನ ಇಟ್ಟುಕೊಂಡು ಸಿಸಿಬಿ ದಿಢೀರ್ ದಾಳಿ ಮಾಡಿದೆ.

  • ಪೃಥ್ವಿ ಶೆಟ್ಟಿ ಹೇಳಿಕೆಯ ಆಧಾರದ ಮೇಲೆ ಸಂಜನಾ ನಿವಾಸದ ಮೇಲೆ ದಾಳಿ?

    ಪೃಥ್ವಿ ಶೆಟ್ಟಿ ಹೇಳಿಕೆಯ ಆಧಾರದ ಮೇಲೆ ಸಂಜನಾ ನಿವಾಸದ ಮೇಲೆ ದಾಳಿ?

    ಬೆಂಗಳೂರು: ಇವೆಂಟ್‌ ಮ್ಯಾನೇಜ್ಮೆಂಟ್‌ ಕಂಪನಿ ನಡೆಸುತ್ತಿರುವ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ನೀಡಿದ ಹೇಳಿಕೆಯ ಆಧಾರದ ಮೇಲೆ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ದಾಳಿ ನಡೆಸಿದೆ ಎನ್ನಲಾಗಿದೆ.

    ಇಂದಿರಾನಗರದಲ್ಲಿರುವ ನಟಿ ಸಂಜನಾ ನಿವಾಸದ ಮೇಲೆ ಇಂದು ಬೆಳ್ಳಬೆಳಗ್ಗೆ ಇನ್ಸ್‌ಪೆಕ್ಟರ್‌ ಪುನೀತ್‌ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

    ಕಳೆದ ವಾರ ನಟಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ ಬಳಿಕ ಸಿಸಿಬಿ ಬಂಧಿಸಿತ್ತು. ಕಳೆದ ವಾರವೇ ಸಂಜನಾ ಹೆಸರು ಕೇಳಿ ಬಂದಿತ್ತು. ಆದರೆ ಸಿಸಿಬಿ ಎಫ್‌ಐಆರ್‌ನಲ್ಲಿ ಸಂಜನಾ ಹೆಸರು ಉಲ್ಲೇಖವಾಗಿರಲಿಲ್ಲ. ಆದರೆ ಈಗ ಆಪ್ತೆ ಪೃಥ್ವಿ ಶೆಟ್ಟಿ ಮತ್ತು ಆಪ್ತ ರಾಹುಲ್‌ ನೀಡಿದ ಹೇಳಿಕೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

    ಆರೋಪ ಏನು?
    ಡ್ರಗ್ಸ್‌ ಪ್ರಕರಣದಲ್ಲಿ ಸಂಜನಾ ವಿರುದ್ಧ ಕಳೆದ ವಾರ ಯಾವುದೇ ಸಾಕ್ಷ್ಯಗಳು ಸಿಕ್ಕಿರಲಿಲ್ಲ. ಹೀಗಾಗಿ ಸೂಕ್ತ ಸಾಕ್ಷ್ಯಕ್ಕಾಗಿ ಕಾಯುತ್ತಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಹಲವು ಮಾಹಿತಿಗಳನ್ನು ತಿಳಿಸಿದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.

    ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಪೃಥ್ವಿ ಶೆಟ್ಟಿ ಕಂಪನಿಯಲ್ಲಿ ಸಂಜನಾ ಸಹ ಪಾಲುದಾರೆ ಎಂಬ ಮಾಹಿತಿ ಸಿಕ್ಕಿದೆ. ಇಬ್ಬರ ನಡುವೆ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಖಲೆಗಳನ್ನು ಕೆದಕಿದಾಗ ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಿದ ಬಗ್ಗೆ ಮಾಹಿತಿ ಸಿಕ್ಕಿದೆ.

    ಇವರಿಬ್ಬರು ಬರೀ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದರೇ ಅಥವಾ ಬೇರೆ ಯಾವೆಲ್ಲಾ ವ್ಯವಹಾರಗಳನ್ನು ನಡೆಸುತ್ತಿದ್ದರು ಎಂಬುದರ ಬಗ್ಗೆ ಹಲವು ಪ್ರಶ್ನೆಗಳು ಎದ್ದಿದೆ. ಪಾರ್ಟಿಗಳಲ್ಲಿ ಏನು ಬಳಕೆ ಆಗುತ್ತಿತ್ತು? ಯಾರೆಲ್ಲ ಬರುತ್ತಿದ್ದರು ಎಂಬುದರ ಬಗ್ಗೆ ಪೃಥ್ವಿ ಶೆಟ್ಟಿ ತಿಳಿಸಿದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂಬ ಮಾಹಿತಿ ಸಿಕ್ಕಿದೆ.

    ಆಪ್ತನ ಮೇಲೆ ಎಫ್‌ಐಆರ್‌ :
    ಸಿಸಿಬಿಯ ನಾರ್ಕೊಟಿಕ್ಸ್ ಎಸಿಪಿ ಗೌತಮ್ ಸೆ.4 ರಂದು ನೀಡಿದ ಸ್ವಯಂಪ್ರೇರಿತ ದೂರಿನ ಆಧಾರದ ಮೇಲೆ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬಂಧಿತ ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ಸಾಕ್ಷಿ ಹಾಗೂ ಪುರಾವೆಗಳು ಸಿಕ್ಕಿರುವ ಹಿನ್ನೆಯಲ್ಲಿ ಗೌತಮ್‌ ಅವರು ದೂರು ನೀಡಿದ್ದರು. ವಾಟ್ಸಾಪ್ ಮೆಸೇಜ್‍ಗಳು ಹಾಗೂ ಪೆಡ್ಲರ್ ಗಳ ನೀಡಿರುವ ಮಾಹಿತಿ ಅನ್ವಯ ನಟಿ ರಾಗಿಣಿ ಅವರ ಕೈವಾಡದ ಬಗ್ಗೆ ಸಾಕ್ಷಿ ಲಭ್ಯವಾಗಿದ್ದು, ಡ್ರಗ್ ಡೀಲರ್ ಗಳ ಜೊತೆ ಒಡನಾಟವನ್ನು ಹೊಂದಿದ್ದಾರೆ. ಅನೇಕ ಬಾರಿ ಡ್ರಗ್ ಡೀಲ್ ಮಾಡಿರುವ ಬಗ್ಗೆ ಮಾಹಿತಿ ಖಚಿತವಾದ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

    ಈ ಎಫ್‌ಐಆರ್‌ನಲ್ಲಿ ಸಂಜನಾ ಆಪ್ತ ರಾಹುಲ್‌ ಹೆಸರು ಸಹ ಉಲ್ಲೇಖವಾಗಿತ್ತು. ಒಟ್ಟು 12 ಮಂದಿ ಆರೋಪಿಗಳ ಪೈಕಿ ರಾಹುಲ್‌ 11ನೇ ಆರೋಪಿಯಾಗಿದ್ದಾನೆ. ವಿಚಾರಣೆಯ ವೇಳೆ ಈತ ಸಂಜನಾ ಪಾಲ್ಗೊಳ್ಳುತ್ತಿದ್ದ ಹೈ ಎಂಡ್‌ ಪಾರ್ಟಿ ಬಗ್ಗೆ ಮಾಹಿತಿ ನೀಡಿದ್ದಾನೆ. ಮಹತ್ವದ ಸ್ಯಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಸಂಜನಾ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

  • ನನ್ಗೆ ಮಾತ್ರ ಅಲ್ಲ, ರಾಹುಲ್ ಸಾಕಷ್ಟು ಸಿನಿಮಾ ಸ್ಟಾರ್‌ಗಳಿಗೆ ಪರಿಚಯ: ಸಂಜನಾ ಸ್ಫೋಟಕ ಹೇಳಿಕೆ

    ನನ್ಗೆ ಮಾತ್ರ ಅಲ್ಲ, ರಾಹುಲ್ ಸಾಕಷ್ಟು ಸಿನಿಮಾ ಸ್ಟಾರ್‌ಗಳಿಗೆ ಪರಿಚಯ: ಸಂಜನಾ ಸ್ಫೋಟಕ ಹೇಳಿಕೆ

    ಬೆಂಗಳೂರು: ಸಿಸಿಬಿ ವಶದಲ್ಲಿರುವ ರಾಹುಲ್ ನನಗೆ ಮಾತ್ರವಲ್ಲ ಸಾಕಷ್ಟು ಸಿನಿಮಾ ಸ್ಟಾರ್ ಗಳಿಗೆ ಪರಿಚಯ ಇದ್ದಾರೆ ಎಂದು ನಟಿ ಸಂಜನಾ ಗಲ್ರಾನಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

    ಡ್ರಗ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ನಟಿ ಸಂಜನಾಳ ಅಪ್ತ ರಾಹುಲ್‍ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವಿಚಾರವಾಗಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಜನಾ, ಮೂರು-ನಾಲ್ಕು ವರ್ಷಗಳಿಂದ ರಾಹುಲ್ ನನಗೆ ಪರಿಚಯ. ನನಗೆ ಮಾತ್ರ ಅಲ್ಲ ಸಾಕಷ್ಟು ಸಿನಿಮಾ ಸ್ಟಾರ್‌ಗಳಿಗೆ ಪರಿಚಯ ಇದ್ದಾರೆ. ಆಲ್ ಮೋಸ್ಟ್ ಇಡೀ ಬೆಂಗಳೂರಿಗೆ ರಾಹುಲ್ ಪರಿಚಯ ಎಂದರು.

    ರಾಹುಲ್ ತುಂಬಾ ಒಳ್ಳೆಯ ಹುಡುಗ, ಅವನು ರಿಯಲ್ ಎಸ್ಟೇಟ್ ಮಾಡುತ್ತಾನೆ. ಜೇಕರ್ಬ್ ವರ್ಗಿಸ್ ನಿರ್ದೇಶನದ ಚಂಬಲ್ ಸಿನಿಮಾದಲ್ಲಿ ರಾಹುಲ್ ಸಣ್ಣ ಪಾತ್ರ ಮಾಡಿದ್ದಾನೆ. ರಾಹುಲ್‍ನನ್ನು ನಾನು ರಾಖೀ ಭಾಯ್ ಅಂತಾನೇ ಕರೆಯುತ್ತೇನೆ. ನಾವು ತುಂಬಾ ಕ್ಲೋಸ್ ಫ್ರೆಂಡ್ ಅವನು ನನ್ನ ರಾಖೀ ಅಣ್ಣ. ರಾಹುಲ್ ಆದಷ್ಟು ಬೇಗ ಈ ಎಲ್ಲಾ ಸಮಸ್ಯೆಗಳಿಂದ ಹೊರಗಡೆ ಬರುತ್ತಾನೆ ಎಂದು ಸಂಜನಾ ತಿಳಿಸಿದ್ದಾರೆ. ಇದನ್ನು ಓದಿ: ದೃಷ್ಟಿ ನಿವಾರಣೆಗೆ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೇನೆ: ಸಂಜನಾ

    ಪೊಲೀಸರ ಮೇಲೆ ನನಗೆ ನಂಬಿಕೆ ಇದೆ, ನಾನು ತನಿಖೆಗೆ ಸಹಕರಿಸುತ್ತೇನೆ. ನಾನು ಬೆಂಗಳೂರು ಬಿಟ್ಟು ಎಲ್ಲಿಯೂ ಹೋಗಿಲ್ಲ. ಕಳೆದ ಡಿಸೆಂಬರ್ ಆದಮೇಲೆ ನಾನು ಪಾರ್ಟಿಗಳಿಗೆ ಹೋಗುವುದನ್ನು ಬಿಟ್ಟಿದ್ದೇನೆ. ನಾನು ಅಟೆಂಡ್ ಆಗಿರೊ ಯಾವುದೇ ಪಾರ್ಟಿಗಳಲ್ಲೂ ಡ್ರಗ್ಸ್ ಇರಲಿಲ್ಲ. ಕ್ರಿಸ್ ಮಸ್ ಪಾರ್ಟಿ ಮಾಡಿದ್ದೆ ಲಾಸ್ಟ್ ನಾನು ಯಾವುದೇ ಪಾರ್ಟಿ ಮಾಡಿಲ್ಲ. ನನ್ನ ಗ್ರಹಚಾರ ನಾನು ಅಂದು ಆ ಜಾಗಕ್ಕೆ ಹೋಗಬೇಕಾಗಿ ಬಂತು ಎಂದು ಡ್ರಗ್ಸ್ ಆರೋಪವನ್ನು ಸಂಜನಾ ತಳ್ಳಿ ಹಾಕಿದ್ದಾರೆ.

  • ಶ್ರೀಲಂಕಾದಲ್ಲಿ ಕ್ಯಾಸಿನೋ ಹೊಂದಿರುವ ರಾಹುಲ್ ಸಂಜನಾಗೆ ಪರಿಚಯವಾಗಿದ್ದು ಹೇಗೆ?

    ಶ್ರೀಲಂಕಾದಲ್ಲಿ ಕ್ಯಾಸಿನೋ ಹೊಂದಿರುವ ರಾಹುಲ್ ಸಂಜನಾಗೆ ಪರಿಚಯವಾಗಿದ್ದು ಹೇಗೆ?

    ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ದಿನಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ರಾಗಿಣಿ ಆಪ್ತ ರವಿಶಂಕರ್ ನನ್ನು ಬಂಧಿಸಿದ್ದರೆ, ಸಂಜನಾ ಆಪ್ತ ರಾಹುಲ್ ಮತ್ತು ಶರ್ಮಿಳಾ ಮಾಂಡ್ರೆಯ ಗೆಳೆಯ ಕಾರ್ತಿಕ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ವೇಳೆ ಒಂದೊಂದೆ ಸ್ಫೋಟಕ ವಿಚಾರಗಳು ಪ್ರಕಟವಾಗುತ್ತಿದೆ.

    ಬೆಂಗಳೂರಿನಲ್ಲಿ ಹೈಟೆಕ್ ಡ್ರಗ್ ದಂಧೆ ಮಾಡುತ್ತಿದ್ದ ಮೂವರು ಡ್ರಗ್ ಡೀಲರ್ ಗಳನ್ನು ಎನ್‍ಸಿಬಿ ಪೊಲೀಸರ ಬಂಧಿಸಿದ್ದರು. ಇವರ ಕೊಟ್ಟ ಮಾಹಿತಿ ಮೇರೆಗೆ ಈಗ ನಟಿ ಸಂಜನಾಗೆ ಅಪ್ತನಾಗಿದ್ದ ರಾಹುಲ್‍ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಓರ್ವ ಡ್ರಗ್ ಡೀಲರ್ ಎಂದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ.

    ರಾಹುಲ್ ಬೆಂಗಳೂರಿನ ಬನಶಂಕರಿ ನಗರದ ನಿವಾಸಿಯಾಗಿದ್ದಾನೆ. ಈತ ಶ್ರೀಲಂಕಾದಲ್ಲಿ ಕ್ಯಾಸಿನೋ ನಡೆಸುತ್ತಿದ್ದು, ಈ ಕ್ಯಾಸಿನೋಗೆ ಗ್ರಾಹಕರನ್ನು ಪ್ಯಾಕೇಜ್‍ನಲ್ಲಿ ಕಳಿಸಿಕೊಡುತ್ತಿದ್ದ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಜೊತೆಗೆ ಈತ ಪಾರ್ಟಿಗಳನ್ನು ಆಯೋಜನೆ ಮಾಡೋದರಲ್ಲಿ ಪಂಟರ್ ಆಗಿದ್ದ, ಹೀಗೆ ಒಂದು ಪಾರ್ಟಿಯಲ್ಲೇ ಸಂಜನಾಗೆ ಪರಿಚಯವಾಗಿದ್ದ. ಅಂದಿನಿಂದ ಯಾವುದೇ ಪಾರ್ಟಿಯಿದ್ದರೂ ಸಂಜನಾಗೆ ಆಹ್ವಾನ ಕೊಡುತ್ತಿದ್ದ ಎಂದು ತಿಳಿದು ಬಂದಿದೆ.

    ಶ್ರೀಲಂಕಾದಲ್ಲಿ ನಡೆದಿದ್ದ ಕ್ಯಾಸಿನೋ ಪಾರ್ಟಿಗೆ ಸಂಜನಾ ಸೇರಿದಂತೆ ಬೇರೆ ಬೇರೆ ಚಿತ್ರರಂಗದ ನಟಿಯರನ್ನು ರಾಹುಲ್ ಕರೆಸಿದ್ದ. ಸದ್ಯ ರಾಹುಲ್ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಲಭಿಸಿದ್ದು, ಸಂಜನಾಗೂ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಸಮನ್ಸ್ ನೀಡುವ ಸಾಧ್ಯತೆಯಿದೆ.

    ಈತನ ಬಗ್ಗೆ ಇಂದು ಬೆಳಗ್ಗೆ ಪಬ್ಲಿಕ್ ಟಿವಿಯ ಜೊತೆ ಮಾತನಾಡಿದ್ದ ಸಂಜನಾ, ಆತ ನನ್ನನ್ನು ಅಕ್ಕ ಎಂದು ಕರೆಯುತ್ತಾನೆ. ತುಂಬ ಒಳ್ಳೆಯವನು ಮತ್ತು ಜ್ಯಾಲಿ ಮನುಷ್ಯ. ರಾಹುಲ್ ಆ ತರದ ಹುಡುಗ ಅಲ್ಲ. ನನಗೆ ಸಹೋದರಿಲ್ಲ, ಪ್ರತಿ ವರ್ಷ ನಾನು ಆತನಿಗೆ ರಾಖಿ ಕಟ್ಟುತ್ತೇನೆ. ಆತನನ್ನು ಪೊಲೀಸರು ಏಕೆ ಕರೆದುಕೊಂಡು ಹೋಗಿದ್ದಾರೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದರು.

    ಅಸಲಿಗೆ ಸ್ಟಾರ್ ನಟ ನಟಿಯರಲ್ಲದೆ ರಾಜಕಾರಣಿಗಳ ಮಕ್ಕಳೂ ಕೂಡ ರಾಹುಲ್‌ಗೆ ಆಪ್ತರು. ರಾಹುಲ್ ಗೆ ಶ್ರೀಲಂಕದಾ ಕ್ಯಾಸಿನೋ ಗಳ ಹಿಡಿತವಿದೆ. ಹೀಗಾಗಿಯೇ ರಾಜಕಾರಣಿಗಳ ಮಕ್ಕಳನ್ನು ಕ್ಯಾಸಿನೋಗೆ ಕಳುಹಿಸುತ್ತಿದ್ದ. ಕ್ಯಾಸಿನೋಗೆ ಕಳುಹಿಸಿಕೊಡುವ ಮೂಲಕ ರಾಜಕಾರಣಿಗಳ ಮಕ್ಕಳ ಸ್ನೇಹವನ್ನು ಸಂಪಾದಿಸುತ್ತಿದ್ದ. ಕ್ಯಾಸಿನೋಗಳಲ್ಲಿ ಪಾರ್ಟಿ ಆಯೋಜನೆ ಮಾಡಿ ಎಲ್ಲವನ್ನು ರಾಹುಲ್ ಒದಗಿಸಿಕೊಡುತ್ತಿದ್ದ.

  • ಸೀರಿಯಲ್ ಬ್ಲಾಸ್ಟ್ – ಕೂದಲೆಳೆ ಅಂತರದಲ್ಲಿ ಪಾರಾದ ಕನ್ನಡಿಗನ ಕರಾಳ ಅನುಭವ

    ಸೀರಿಯಲ್ ಬ್ಲಾಸ್ಟ್ – ಕೂದಲೆಳೆ ಅಂತರದಲ್ಲಿ ಪಾರಾದ ಕನ್ನಡಿಗನ ಕರಾಳ ಅನುಭವ

    ಕೊಲಂಬೋ: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಬ್ಲಾಸ್ಟ್ ದುರಂತದಲ್ಲಿ ಕನ್ನಡಿಗರೊಬ್ಬರು ಸಾವಿನ ದವಡೆಯಿಂದ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ.

    ನಟಿ ಸಂಜನಾ ಅವರ ಸಹೋದರ ರಾಹುಲ್ ಸ್ಫೋಟ ಸಂಭವಿಸಿದ ಕಿಂಗ್ಸ್‍ಬ್ಯುರಿ ಹೋಟೆಲ್‍ನಲ್ಲಿ ಉಳಿದುಕೊಂಡಿದ್ದರು. ಸ್ಫೋಟ ಸಂಭವಿಸಿದ ಕೂಡಲೇ ರಾಹುಲ್ ಹೊರಗೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಕುರಿತು ಸ್ವತಃ ರಾಹುಲ್ ಅವರೇ ಪಬ್ಲಿಕ್ ಟಿವಿ ಜೊತೆ ತನಗಾದ ಕರಾಳ ಅನುಭವವನ್ನು ಹಂಚಿಕೊಂಡಿದ್ದಾರೆ.

    ರಾಹುಲ್ ಹೇಳಿದ್ದೇನು?
    ಕಿಂಗ್ಸ್‍ಬ್ಯುರಿನಲ್ಲಿ ನಾನು ಮಲಗಿದ್ದ ಸಂದರ್ಭದಲ್ಲಿ ಬಾಂಬ್ ಬ್ಲಾಸ್ಟ್ ಆಗಿದೆ. ಘಟನೆಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ ಅಲ್ಲದೆ ಹಲವರು ಗಾಯಗೊಂಡಿದ್ದಾರೆ. ಬಾಂಬ್ ಬ್ಲಾಸ್ಟ್ ಆದ ಸ್ಥಳದಲ್ಲಿ ರಕ್ತದೋಕುಳಿ ನೋಡಿ ಶಾಕ್ ಆಗಿದೆ. 6- 7 ವರ್ಷಗಳಿಂದ ಕೊಲಂಬೋಗೆ ಬರುತ್ತಿದ್ದೇನೆ. ಆದ್ರೆ ಮೊದಲ ಬಾರಿಗೆ ಇಂತಹ ಒಂದು ಘಟನೆ ನಡೆದಿದೆ. ಕೆಲವರು ಇದು ಆತ್ಮಾಹುತಿ ದಾಳಿ ಎಂದು ಕೆಲವರು ಹೇಳುತ್ತಿದ್ದಾರೆ. ಆದ್ರೆ ನಿಜವಾಗಿ ಏನೂ ಎಂದು ಗೊತ್ತಿಲ್ಲ. ಇಲ್ಲಿ ತುಂಬಾ ಭಯವಾಗುತ್ತಿದೆ. ಎಲ್ಲಿ ಉಳಿದುಕೊಳ್ಳುವುದು ಎಂದು ಗೊತ್ತಾಗುತ್ತಿಲ್ಲ. ಯಾಕಂದ್ರೆ ಫೈವ್ ಸ್ಟಾರ್ ಹೋಟೆಲಿನಲ್ಲಿ ಬ್ಲಾಸ್ಟ್ ಮಾಡಿದ್ದಾರೆ ಅಂದ್ರೆ ಹೇಗೆ ಭದ್ರತೆ ಒದಗಿಸುತ್ತಾರೆ ಎಂದು ಗೊತ್ತಿಲ್ಲ. ನೋಡೋಣ ಹೇಗಾದ್ರು ಮಾಡಿ ಭಾರತಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಸ್ಫೋಟಕ್ಕೆ 160 ಬಲಿ – ಸ್ಫೋಟಕ್ಕೆ ಮೇಲ್ಚಾವಣಿ ಹಾರಿತು, ಎಲ್ಲಿ ನೋಡಿದರಲ್ಲಿ ರಕ್ತ: ವಿಡಿಯೋ

    ಆಗಿದ್ದೇನು?
    ಈಸ್ಟರ್ ಹಬ್ಬದ ದಿನವೇ ಶ್ರೀಲಂಕಾದಲ್ಲಿ ಮಾರಣಹೋಮ ನಡೆದಿದೆ. ಕೊಲಂಬೋದಲ್ಲಿ ಸೀರಿಯಲ್ ಬ್ಲಾಸ್ಟ್ ಸಂಭವಿಸಿದ್ದು, ಐದು ಚರ್ಚ್, ಮೂರು ಫೈವ್‍ಸ್ಟಾರ್ ಹೊಟೆಲ್‍ಗಳಲ್ಲಿ ಆತ್ಮಾಹುತಿ ದಾಳಿ ನಡೆದಿದೆ. ಇದುವರೆಗೂ 160ಕ್ಕೂ ಹೆಚ್ಚು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಬೆಳಗ್ಗೆ 8.45ಕ್ಕೆ ಕೊಲಂಬೋ, ನೆಗಂಬೋ ಮತ್ತು ಬಟ್ಟಿಕಲೋವಾದಲ್ಲಿ ಚರ್ಚ್‍ಗಳು ಮತ್ತು ಮೂರು ಫೈವ್‍ಸ್ಟಾರ್ ಹೊಟೇಲ್‍ಗಳಲ್ಲಿ ಆತ್ಮಾಹುತಿ ಸ್ಫೋಟಗಳು ನಡೆದಿದೆ.

    https://www.youtube.com/watch?v=S6cNQz5DtY0

    https://www.youtube.com/watch?time_continue=122&v=toEBKqvDA3c

     

  • ಕ್ರೀಡಾ ಸ್ಫೂರ್ತಿ ಮೆರೆದ ರಾಹುಲ್ – ಮೆಚ್ಚುಗೆ ಸೂಚಿಸಿದ ಅಂಪೈರ್

    ಕ್ರೀಡಾ ಸ್ಫೂರ್ತಿ ಮೆರೆದ ರಾಹುಲ್ – ಮೆಚ್ಚುಗೆ ಸೂಚಿಸಿದ ಅಂಪೈರ್

    ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಕಳಪೆ ಬ್ಯಾಟಿಂಗ್ ನಿಂದ ಕೆಎಲ್ ರಾಹುಲ್ ಟೀಕೆಗೆ ಗುರಿಯಾದರೂ ನಾಲ್ಕನೆ ಪಂದ್ಯದಲ್ಲಿ ಕ್ರೀಡಾ ಸ್ಫೂರ್ತಿ ಮೆರೆದಿದ್ದಾರೆ.

    ತೃತೀಯ ದಿನದಾಟದಲ್ಲಿ ಭಾರತದ ಕ್ಷೇತ್ರರಕ್ಷಣೆ ವೇಳೆ ರವೀಂದ್ರ ಜಡೇಜಾ ಎಸೆದ 14ನೇ ಓವರ್‍ನಲ್ಲಿ ರಾಹುಲ್ ಡೈವ್ ಮಾಡಿ ಕ್ಯಾಚ್ ಹಿಡಿದಿದ್ದರು. ಕ್ಯಾಚ್ ಪಡೆದಿದ್ದನ್ನು ಗಮನಿಸಿದ ಆಟಗಾರು ಸಂಭ್ರಮಿಸಿದ್ದಾರೆ.  ಇದನ್ನು ಓದಿ :ಸಿಕ್ಸರ್, ಕ್ಯಾಚ್ ಆಯ್ತು ಈಗ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ!

    ಈ ವೇಳೆ ಕ್ರೀಡಾ ಸ್ಫೂರ್ತಿ ಮೆರೆದ ರಾಹುಲ್ ನಾಟೌಟ್ ಎಂದು ಅಂಪೈರ್ ಗಳಿಗೆ ತಿಳಿಸಿದರು. ಇದನ್ನು ಗಮನಿಸಿದ ಫೀಲ್ಡ್ ಅಂಪೈರ್‍ಗಳು ರಾಹುಲ್ ಈ ನಿರ್ಧಾರಕ್ಕೆ ಮೆಚ್ಚುಗೆ ಸೂಚಿಸಿದರು.

    ಪ್ರಸಕ್ತ ಸರಣಿಯಲ್ಲೇ ಅನೇಕ ಬಾರಿ ಕ್ಯಾಚ್‍ಗಳು ವಿವಾದವಾಗಿತ್ತು. ವಿವಾದದ ನಡೆಯೂ ರಾಹುಲ್ ಕ್ರೀಡಾ ಸ್ಫೂರ್ತಿ ತೋರಿಸಿದ್ದು ಕ್ರಿಕೆಟ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: 15 ವರ್ಷಗಳ ಹಿಂದಿನ `ದಿ ವಾಲ್’ ದ್ರಾವಿಡ್ ದಾಖಲೆ ಮುರಿದ ಪೂಜಾರ

  • ಲೋಕಸಭಾ ಚುನಾವಣೆ- ರಾಹುಲ್ ಗೆ ಸಿದ್ದರಾಮಯ್ಯ ಮನವಿ

    ಲೋಕಸಭಾ ಚುನಾವಣೆ- ರಾಹುಲ್ ಗೆ ಸಿದ್ದರಾಮಯ್ಯ ಮನವಿ

    ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಸೀಟು ಹಂಚಿಕೆ ವಿಚಾರದಲ್ಲಿ ಮೈತ್ರಿ ಸರ್ಕಾರದಲ್ಲಿ ಗೊಂದಲ ನಿರ್ಮಾಣವಾಗಿದೆ.

    ಮಂಡ್ಯ, ಹಾಸನ ಆಯ್ತು ಈಗ ಮೈಸೂರು ಬೇಕು ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಎದುರು ಪಟ್ಟು ಹಿಡಿದಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಪಕ್ಷದ ಮೂಲಗಳಿಂದ ಮಾಹಿತಿ ಲಭಿಸಿದೆ.

    ಮೈಸೂರು ಲೋಕಸಭೆ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿದ್ದರಾಮಯ್ಯ ಅವರು ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಬೇಡಿಕೆ ಇಟ್ಟಿದ್ದಾರೆ. ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯ ಹೆಚ್ಚಿದೆ ಎಂದು ಬಿಟ್ಟು ಕೊಡುವುದು ಬೇಡ. ಮೈಸೂರಿನಲ್ಲಿ ಇದುವರೆಗೂ ಲೋಕಸಭೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿಲ್ಲ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಗೆ ಮೈಸೂರು ಕ್ಷೇತ್ರ ಬಿಟ್ಟು ಕೊಡದಂತೆ ಮನವಿ ಮಾಡಿಕೊಂಡಿದ್ದಾರೆ.

    ಒಟ್ಟಿನಲ್ಲಿ ತವರು ಕ್ಷೇತ್ರವನ್ನು ಉಳಿಸಿಕೊಳ್ಳು ಮಾಜಿ ಸಿಎಂ ಹಠಕ್ಕೆ ಬಿದ್ದಿದ್ದಾರೆ.

  • ಸೋನಿಯಾ ಗಾಂಧಿ ಜಾಲಿ ಸೈಕಲ್ ಸವಾರಿ – ಫೋಟೋ ವೈರಲ್

    ಸೋನಿಯಾ ಗಾಂಧಿ ಜಾಲಿ ಸೈಕಲ್ ಸವಾರಿ – ಫೋಟೋ ವೈರಲ್

    ಪಣಜಿ: ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಸೋನಿಯಾ ಗಾಂಧಿ ಅವರು ವಿಶಾಂತ್ರಿಗಾಗಿ ಗೋವಾಕ್ಕೆ ತೆರಳಿದ್ದು, ಈ ವೇಳೆ ಸೈಕಲ್ ಸವಾರಿ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸೋನಿಯಾ ಹಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರು ವಿಶಾಂತ್ರಿಗೆ ಸೂಚಿಸಿದ್ದರು ಎನ್ನಲಾಗಿದೆ. ಈ ಕಾರಣದಿಂದ ಅವರು ಗೋವಾಕ್ಕೆ ವಿಶ್ರಾಂತಿ ಪಡೆಯಲು ಆಗಮಿಸಿದ್ದಾರೆ. ಜನವರಿ ಮೊದಲ ವಾರ ದೆಹಲಿಗೆ ಹಿಂತಿರುಗಲಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    71 ವರ್ಷದ ಸೋನಿಯಾ ಗಾಂಧಿ ಅವರು ಸತತ 19 ವರ್ಷ ಎಐಸಿಸಿ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು. ಡಿ.16ರಂದು ತಮ್ಮ ಮಗ ರಾಹುಲ್ ಗಾಂಧಿ ಅವರಿಗೆ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಟ್ಟಿದ್ದರು. ರಾಹುಲ್ ಗಾಂಧಿ ಅವರು ಮೊದಲ ಬಾರಿಗೆ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯ ಉಸ್ತುವಾರಿ ವಹಿಸಿದ್ದರು.

  • ಗಾಂಧಿ, ನೆಹರೂ, ಅಂಬೇಡ್ಕರ್ ಎಲ್ಲರೂ ಅನಿವಾಸಿ ಭಾರತೀಯರು: ರಾಹುಲ್ ಗಾಂಧಿ

    ಗಾಂಧಿ, ನೆಹರೂ, ಅಂಬೇಡ್ಕರ್ ಎಲ್ಲರೂ ಅನಿವಾಸಿ ಭಾರತೀಯರು: ರಾಹುಲ್ ಗಾಂಧಿ

    ನವದೆಹಲಿ: ಭಾರತದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಹಲವು ನಾಯಕರು ಅನಿವಾಸಿ ಭಾರತೀಯ (ಎನ್‍ಆರ್‍ಐ) ಮೂಲದವರು. ಅಲ್ಲದೇ ನಮ್ಮ ಪಕ್ಷವು ಸ್ಥಾಪನೆಯಾಗಿದ್ದು ಎನ್‍ಆರ್‍ಐ ವ್ಯಕ್ತಿಯಿಂದ ಎಂದು ಕಾಂಗ್ರೆಸ್ ಉಪಧ್ಯಾಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

    ಭಾರತದ ನೈಜ ಸ್ವಾತಂತ್ರ್ಯ ಹೋರಾಟ ನಡೆದದ್ದು ಎನ್‍ಆರ್‍ಐಗಳಿಂದ. ಮಹಾತ್ಮ ಗಾಂಧಿ, ಜವಾಹರ್ ಲಾಲ್ ನೆಹರು, ಅಂಬೇಡ್ಕರ್, ಅಜಾದ್, ಪಾಟೀಲ್‍ರಂತಹ ಎಲ್ಲಾ ಹೋರಾಟಗಾರರು ಬ್ರಿಟನ್ ನಿಂದ ಹಿಂದಿರುಗಿ ಭಾರತಕ್ಕೆ ಆಗಮಿಸಿದವರು ಎಂದು ಹೇಳಿದರು.

    ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಸಭೆಯನ್ನು ಉದ್ದೇಶಿಸಿ ರಾಹುಲ್ ಮಾತಾನಾಡಿದರು. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಸುಮಾರು ಎರಡು ಸಾವಿರಕ್ಕೂ ಅಧಿಕ ಎನ್‍ಆರ್‍ಐಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

    ಭಾರತದಿಂದ ವಿದೇಶಕ್ಕೆ ತೆರಳಿದ ಪ್ರತಿಯೊಬ್ಬ ವ್ಯಕ್ತಿಯು ವಿದೇಶದಲ್ಲಿನ ವ್ಯವಸ್ಥೆಗಳ ಕಂಡು ತಮ್ಮ ಹೊಸ ಚಿಂತನೆಗಳೊಂದಿಗೆ ಭಾರತಕ್ಕೆ ಹಿಂದಿರುಗುತ್ತಾರೆ. ಇಂತಹ ಎನ್‍ಆರ್‍ಐಗಳನ್ನು ಗುರುತಿಸುವ ಕಾರ್ಯ ನಡೆಯಬೇಕಿದೆ. ಭಾರತದಲ್ಲಿ ಕ್ಷೀರ ಕ್ರಾಂತಿಗೆ ಕಾರಣರಾದ ವರ್ಗೀಸ್ ಕುರಿಯನ್‍ರಂತವರು ಈ ಸಾಲಿನಲ್ಲಿದ್ದಾರೆ. ಕುರಿಯನ್ ಅಮೆರಿಕದಿಂದ ಹಿಂದಿರುಗಿದ ನಂತರ ಮಾಡಿದ ಕ್ರಾಂತಿಯಿಂದ ಪ್ರತಿ ಭಾರತೀಯನಿಗೂ ಇಂದು ಹಾಲು ದೊರೆಯುವಂತಾಗಿದೆ. ಇಂತಹ ಸಾವಿರಾರು ಉದಾಹರಣೆಗಳನ್ನು ನಾವು ಕಾಣಬಹುದಾಗಿದೆ. ವಿದೇಶದಲ್ಲಿ ನೆಲೆಸಿದ್ದಾರೆ ಎಂಬ ಕಾರಣದಿಂದ ಎನ್‍ಆರ್‍ಐಗಳು ದೇಶದ ಅಭಿವೃದ್ಧಿಗೆ ಯಾವುದೇ ಕೊಡುಗೆಯನ್ನು ನೀಡುತ್ತಿಲ್ಲ ಎನ್ನುವುದು ತಪ್ಪು. ನಾವು ಅವರನ್ನು ಮತ್ತೆ ಭಾರತಕ್ಕೆ ವಾಪಸ್ ಕರೆತರಬೇಕಿದೆ ಎಂದರು.

    ಅಮೆರಿಕದ ಯಾವುದೇ ಕಂಪನಿಯನ್ನು ತೆಗೆದುಕೊಂಡರು ಅಲ್ಲಿ ಒಬ್ಬ ಭಾರತೀಯ ಕಾರ್ಯನಿರ್ವಹಿಸುತ್ತಿದ್ದಾನೆ. ಹಾಗೆಯೇ ಭಾರತದ ಅಭಿವೃದ್ಧಿಯಲ್ಲಿ ಭಾಗಿಯಾಗುತ್ತಿದ್ದಾನೆ. ಎನ್‍ಆರ್‍ಐಗಳು ದೇಶದ ಬೆನ್ನೆಲುಬು ಇದ್ದಂತೆ. ಕೆಲವರು ಭಾರತವನ್ನು ಭೌಗೋಳಿಕ ಅಂಶಗಳ ಮೂಲಕ ಮಾತ್ರ ನೋಡುತ್ತಾರೆ, ಆದರೆ ನಾನು ಹೊಸ ಕಲ್ಪನೆಗಳ ಆಗರವಾಗಿ ನೋಡುತ್ತೇನೆ ಎಂದು ವಿವರಿಸಿದರು.

    ಭಾರತದಲ್ಲಿ ಹೆಚ್ಚಾಗುತ್ತಿರುವ ಮತೀಯ ಸಮಸ್ಯೆಗಳು ಹಾಗೂ ಕೋಮುಭಾವನೆಗಳ ಹಿನ್ನಲೆಯಲ್ಲಿ ದೇಶವನ್ನು ವಿಭಜಿಸುತ್ತಿರುವುದರ ಕುರಿತು ಎನ್‍ಆರ್‍ಐಗಳ ಸಭೆಯಲ್ಲಿ ಪ್ರಸ್ತಾಪಿಸಿದರು.

    ರಾಹುಲ್ ತಮ್ಮ ಅಮೆರಿಕ ಪ್ರವಾಸದ ಅವಧಿಯಲ್ಲಿ ವಿದ್ಯಾರ್ಥಿಗಳು, ಹಲವು ಉದ್ಯಮಿಗಳು, ರಾಜಕೀಯ ನಾಯಕರು ಸೇರಿದಂತೆ ಜೀವನದ ಎಲ್ಲಾ ಹಂತದ ಜನರ ನಡುವೆ ಸಂವಹನವನ್ನು ನಡೆಸಿದರು. ಈ ಭೇಟಿಯ ವೇಳೆ ದೇಶದಲ್ಲಿ ಉಂಟಾಗುತ್ತಿರುವ ಹಿಂಸಾಚಾರ, ಕೋಮು ಘರ್ಷಣೆಗಳ ಕುರಿತು ನನ್ನೊಂದಿಗೆ ಅತಂಕವನ್ನು ವ್ಯಕ್ತಪಡಿಸಿದರು. ಅದರಲ್ಲಿಯು ದೇಶದಲ್ಲಿ ಸಹಿಷ್ಣುತೆ, ಸಾಮರಸ್ಯ ಕೊರತೆ ಉಂಟಾಗುವಂತೆ ಮಾಡುತ್ತಿರುವ ರಾಜಕೀಯ ನಾಯಕರ ಕುರಿತಾಗಿ ಹೆಚ್ಚು ಪ್ರಶ್ನಿಸಿದ್ದಾರೆ ಎಂದು ರಾಹುಲ್ ಹೇಳಿದರು.

    ದೇಶದಲ್ಲಿ ಅಧಿಕಾರದಲ್ಲಿರುವ ಪಕ್ಷವು ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ವಿಫಲವಾಗಿದೆ. ಪ್ರಸ್ತುತ ದೇಶದಲ್ಲಿ 30 ಸಾವಿರ ಯುವಕರು ಉದ್ಯೋಗಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದರೆ, ಕೇವಲ 450 ಯುವಕರು ಮಾತ್ರ ಉದ್ಯೋಗವನ್ನು ಪಡೆಯುತ್ತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿ ಭಾರತದಲ್ಲಿ ಈಗ ನಿರ್ಮಾಣವಾಗಿದೆ. ಯುವ ಜನಾಂಗಕ್ಕೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಸಾಧ್ಯವಾಗದಿದ್ದಾರೆ ಭಾರತದ ಭವಿಷ್ಯವನ್ನು ಬದಲಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.