Tag: ರಿಂಕು

  • ಸತ್ಯೇಂದ್ರ ಜೈನ್ ವೈರಲ್ ವೀಡಿಯೋದಲ್ಲಿರೋದು ಫಿಸಿಯೋಥೆರಪಿಸ್ಟ್ ಅಲ್ಲ, ರೇಪಿಸ್ಟ್: ಬಿಜೆಪಿ

    ಸತ್ಯೇಂದ್ರ ಜೈನ್ ವೈರಲ್ ವೀಡಿಯೋದಲ್ಲಿರೋದು ಫಿಸಿಯೋಥೆರಪಿಸ್ಟ್ ಅಲ್ಲ, ರೇಪಿಸ್ಟ್: ಬಿಜೆಪಿ

    ನವದೆಹಲಿ: ಆಮ್ ಆದ್ಮಿ (AAP) ಪಕ್ಷದ ಸಚಿವ ಸತ್ಯೇಂದ್ರ ಜೈನ್ (Sathyendra Jain) ಅವರ ವೈರಲ್ ಆಗಿರುವ ವೀಡಿಯೋದಲ್ಲಿ ಇರುವುದು ಫಿಸಿಯೋಥೆರಪಿಸ್ಟ್ (Physiotherapist) ಅಲ್ಲ, ಅದು ರೇಪಿಸ್ಟ್ ಎಂದು ಇದೀಗ ಬಿಜೆಪಿ (BJP) ಗಂಭೀರ ಆರೋಪ ಮಾಡಿದೆ.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ವಿಐಪಿ ಟ್ರೀಟ್‍ಮೆಂಟ್ ನೀಡಲಾಗುತ್ತಿದೆ ಎಂದು ಇತ್ತೀಚೆಗಷ್ಟೇ ಬಿಜೆಪಿ ಆರೋಪಿಸಿತ್ತು. ಈ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಅವರು, ಸತ್ಯೇಂದ್ರ ಜೈನ್‍ಗೆ ತಿಹಾರ್ ಜೈಲಿನಲ್ಲಿ ಫಿಸಿಯೋಥೆರಪಿ ಮಾಡಲಾಗುತ್ತಿದೆ ಹೊರತು ಮಸಾಜ್ ಅಲ್ಲ ಎಂದು ಆರೋಪ ತಳ್ಳಿ ಹಾಕಿದ್ದರು.

    ಈ ಬೆನ್ನಲ್ಲೇ ಬಿಜೆಪಿ ಮತ್ತೊಂದು ಆರೋಪ ಮಾಡಿದೆ. ಈ ಸಂಬಂಧ ಬಿಜೆಪಿ ವಕ್ತಾರ ಶೆಹ್‍ಜಾದ್ ಪೂನಾವಾಲಾ ಫೋಟೋ ಸಮೇತ ಟ್ವೀಟ್ ಮಾಡಿದ್ದು, ಅದರಲ್ಲಿ ಸತ್ಯೇಂದ್ರ ಜೈನ್‍ಗೆ ಮಸಾಜ್ (Massage Vide) ಮಡುತ್ತಿರುವ ವ್ಯಕ್ತಿಯ ಹೆಸರು ರಿಂಕು (Rinku). ಈತ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಇದನ್ನೂ ಓದಿ: ಜೈಲಿನಲ್ಲಿ ಸತ್ಯೇಂದ್ರ ಜೈನ್‍ಗೆ ಮಾಡಿದ್ದು ಮಸಾಜ್ ಅಲ್ಲ, ಫಿಸಿಯೋಥೆರಪಿ – ಬಿಜೆಪಿಗೆ ಕೇಜ್ರಿವಾಲ್ ತಿರುಗೇಟು

    ಅತ್ಯಾಚಾರ ಆರೋಪಿ ರಿಂಕು ಸತ್ಯೇಂದ್ರ ಜೈನ್‍ಗೆ ಮಸಾಜ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಈತ ಐಪಿಸಿ ಸೆಕ್ಷನ್ 376 ಹಾಗೂ ಪೋಕ್ಸೋ ಅಡಿಯಲ್ಲಿ ಬಂಧಿತನಾಗಿರುವ ಆರೋಪಿ. ಹೀಗಾಗಿ ಈತ ಫಿಸಿಯೋಥೆರಪಿಸ್ಟ್ ಅಲ್ಲ, ಬದಲಾಗಿ ರೇಪಿಸ್ಟ್ ಆಗಿದ್ದು, ಈತನಿಂದ ಅತ್ಯೇಂದ್ರ ಜೈನ್ ಮಸಾಜ್ ಮಾಡಿಕೊಳ್ಳುತ್ತಿರುವುದು ನಿಜಕ್ಕೂ ಅಚ್ಚರಿ ಹುಟ್ಟಿಸುತ್ತೆ. ಆದೆ ಇದನ್ನು ಸಮರ್ಥಿಸಿಕೊಳ್ಳುವ ಮೂಲಕ ಕೇಜ್ರಿವಾಲ್ ಅವರು ಫಿಸಿಯೋಥೆರಪಿಸ್ಟ್ ಗಳಿಗೆ ಯಾಕೆ ಅವಮಾನ ಮಾಡುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪೂನಾವಾಲಾ ಆಗ್ರಹಿಸಿದ್ದಾರೆ.

    ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ರಿಂಕು ಅವರ ಅಪ್ರಾಪ್ತ ಮಗಳು ಮಾಡಿದ ಅತ್ಯಾಚಾರದ ಆರೋಪದ ನಂತರ 2021 ರಲ್ಲಿ ಅವರನ್ನು ಬಂಧಿಸಲಾಯಿತು. ಬಳಿಕ ತಿಹಾರ್ ಜೈಲಿಗೆ ಅಟ್ಟಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮಾಜಿ ‘ಬಿಗ್ ಬಾಸ್’ ಸ್ಪರ್ಧಿ ಸೊನಾಲಿ ಕೊಲೆಯಾಗಿದ್ದಾಳೆ: ಸಹೋದರ ರಿಂಕು ಆರೋಪ

    ಮಾಜಿ ‘ಬಿಗ್ ಬಾಸ್’ ಸ್ಪರ್ಧಿ ಸೊನಾಲಿ ಕೊಲೆಯಾಗಿದ್ದಾಳೆ: ಸಹೋದರ ರಿಂಕು ಆರೋಪ

    ಟಿ, ಮಾಜಿ ಬಿಗ್ ಬಾಸ್ ಸ್ಪರ್ಧಿ ಹಾಗೂ ರಾಜಕಾರಣಿಯೂ ಆಗಿರುವ ಸೊನಾಲಿ ಪೋಗಟ್ ಇದೇ ಸೋಮವಾರ ಗೋವಾದಲ್ಲಿ ನಿಧನರಾಗಿದ್ದರು. ಅವರ ಸಾವಿಗೆ ಹೃದಯಾಘಾತ ಕಾರಣ ಎನ್ನಲಾಗಿತ್ತು. ಆದರೆ, ಈ ಕಾರಣವನ್ನು ಸೊನಾಲಿ ಸಹೋದರ ರಿಂಕು ಢಾಕಾ ಅಲ್ಲಗಳೆದಿದ್ದಾರೆ. ನನ್ನ ಸಹೋದರಿಯನ್ನು ಗೋವಾಗೆ ಕರೆದುಕೊಂಡು ಹೋಗಿ ಕೊಲೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

    ಮೂಲತಃ ಹರ್ಯಾಣದವರಾದ ಸೊನಾಲಿ, ತಮ್ಮ ಸಿಬ್ಬಂದಿಗಳ ಜೊತೆ ಗೋವಾ ಪ್ರವಾಸದಲ್ಲಿ ಇದ್ದರು. ಈ ವೇಳೆಯಲ್ಲೇ ಅವರಿಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸೊನಾಲಿ ಕುಟುಂಬ ಕೂಡ ಹೃದಯಾಘಾತದಿಂದ ಆಕೆ ನಿಧನರಾಗಿಲ್ಲ ಎಂದು ಹೇಳುತ್ತಿದ್ದಾರೆ. ಈ ಸಾವಿನಲ್ಲಿ ಸಾಕಷ್ಟು ಅನುಮಾನಗಳನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಸೊನಾಲಿ ಸಾವಿನ ಒಂದು ಗಂಟೆ ಮುಂಚೆ ತನ್ನ ತಾಯಿಯೊಂದಿಗೆ ಫೋನ್ ನಲ್ಲಿ ಮಾತನಾಡಿರುವುದಾಗಿ ಸಹೋದರ ತಿಳಿಸಿದ್ದಾರೆ. ಇದನ್ನೂ ಓದಿ:ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಯಜುವೇಂದ್ರ ಚಾಹಲ್ ದಂಪತಿ

    ಸೊನಾಲಿ ಸಾವಿನ ಮುಂಚೆ ನನ್ನ ತಾಯಿಯ ಜೊತೆ ಮಾತನಾಡಿದ್ದಾರೆ. ಅಲ್ಲದೇ, ಸೊನಾಲಿ ಇದ್ದ ಜಾಗದ ಸಿಸಿಟಿವಿ ದೃಶ್ಯಗಳಿಲ್ಲ. ಮತ್ತೆ ಹರ್ಯಾಣದಲ್ಲಿ ಆಕೆ ಇದ್ದ ಫಾರ್ಮ್ ಹೌಸ್ ನಲ್ಲಿ ಲ್ಯಾಪ್ ಟಾಪ್ ಸೇರಿದಂತೆ ಹಲವು ವಸ್ತುಗಳು ಕಣ್ಮರೆಯಾಗಿವೆ. ಹೀಗಾಗಿ ವ್ಯವಸ್ಥಿತವಾಗಿ ಸೊನಾಲಿಯಲ್ಲಿ ಕೊಲೆ ಮಾಡಿ, ಹೃದಯಾಘಾತ ಎಂದು ನಂಬಿಸಲಾಗುತ್ತಿದೆ. ಸೂಕ್ತ ತನಿಖೆ ಮಾಡಿ, ಸತ್ಯಾಸತ್ಯತೆಯನ್ನು ತಿಳಿಸಬೇಕು ಎಂದು ಗೋವಾ ಸರಕಾರಕ್ಕೆ ರಿಂಕು ಢಾಕಾ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]