Tag: ರಿಮ್ಯಾಂಡ್ ಕಾಪಿ

  • Valmiki Scam | ಹೈದರಾಬಾದ್‌ ಚುನಾವಣೆಗೆ ಮದ್ಯ ಹಂಚಲು ಗಿಫ್ಟ್‌ ಕೂಪನ್‌: ಇಡಿ

    Valmiki Scam | ಹೈದರಾಬಾದ್‌ ಚುನಾವಣೆಗೆ ಮದ್ಯ ಹಂಚಲು ಗಿಫ್ಟ್‌ ಕೂಪನ್‌: ಇಡಿ

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಅಕ್ರಮ ಹಣ ವರ್ಗಾವಣೆ ಆರೋಪದ ಅಡಿ ಜೈಲು ಸೇರಿರುವ ಮಾಜಿ ಸಚಿವ ನಾಗೇಂದ್ರ (Nagendra) ಅವರು ಲೋಕಸಭಾ ಚುನಾವಣೆಯ (Lok Sabaha Election) ಸಂದರ್ಭದಲ್ಲಿ ಮತದಾರರಿಗೆ ಮದ್ಯ ಹಂಚಲು ಗಿಫ್ಟ್‌ ಕೂಪನ್‌ ಹಂಚಿಕೆ ಮಾಡಿದ್ದರು ಎಂದು ಜಾರಿ ನಿರ್ದೇಶನಾಲಯ (ED) ಗಂಭೀರ ಆರೋಪ ಮಾಡಿದೆ.

    ನಾಗೇಂದ್ರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಇಡಿ ರಿಮ್ಯಾಂಡ್ ಕಾಪಿ (Remand Copy) ಸಲ್ಲಿಕೆ ಮಾಡಿತ್ತು. ಅದರ ಎಕ್ಸ್‌ಕ್ಲೂಸಿವ್‌ ಕಾಪಿ ಪಬ್ಲಿಕ್‌ ಟಿವಿಗೆ ಈಗ ಲಭ್ಯವಾಗಿದೆ. ವಾಲ್ಮೀಕಿ ನಿಗಮದ ಹಣವನ್ನು ಚುನಾವಣೆಗೆ ಅಕ್ರಮವಾಗಿ ಬಳಕೆ ಮಾಡಿರುವುದರ ಬಗ್ಗೆ ಈ ಹಿಂದೆ ಇಡಿ ಉಲ್ಲೇಖ ಮಾಡಿತ್ತು. ಈಗ ಇನ್ನೊಂದಿಷ್ಟು ಮಾಹಿತಿಯನ್ನು ಕಲೆಹಾಕಿ ನ್ಯಾಯಾಲಯಕ್ಕೆ ವಿವರಣೆ ನೀಡಿದೆ. ಇದನ್ನೂ ಓದಿ: ಐಎನ್‌ಎಸ್‌ ಬ್ರಹ್ಮಪುತ್ರ ನೌಕೆಯಲ್ಲಿ ಅಗ್ನಿ ದುರಂತ; ಓರ್ವ ಸಿಬ್ಬಂದಿ ನಾಪತ್ತೆ – ಒಂದು ಕಡೆ ವಾಲಿದ ನೌಕೆ

    ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?
    ನಾಗೇಂದ್ರ ಬಳಿ ಮೂರು ಮೊಬೈಲ್‌ಗಳು ಇದ್ದವು. ಹಗರಣ ಬೆಳಕಿಗೆ ಬಂದ ಬಳಿಕ ನಾಶ ಮಾಡಿದ್ದಾರೆ. ಇದರ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.

    ಹಣದ ರಾಶಿ ಸುರಿದಿರುವುದಕ್ಕೆ ಪೂರಕವಾದ ಡಿಜಿಟಲ್ ಸಾಕ್ಷ್ಯ ಮತ್ತು ಫೋಟೋ ಸಿಕ್ಕಿವೆ. ಆದರೆ ಇದನ್ನು ನಾಗೇಂದ್ರ ಒಪ್ಪಿಕೊಂಡಿಲ್ಲ.

    ಹೈದರಾಬಾದ್‌ನಲ್ಲಿ ಲಿಕ್ಕರ್ ವ್ಯಾಪಾರಿಗಳ ಜೊತೆ ಡೀಲ್ ಮಾಡಿದ್ದಾರೆ. ಹಣವನ್ನು ವ್ಯಾಪಾರಿಗಳಿಂದ ಪಡೆದುಕೊಂಡಿದ್ದು ಇದರ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.

    ಹೈದರಾಬಾದ್‌ ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಗಿಫ್ಟ್ ಕೂಪನ್‌ ನೀಡಲಾಗಿದೆ.1.40 ಕೋಟಿ ರೂ. ಮೌಲ್ಯದ ಕೂಪನ್ ನೀಡಿರೋದಕ್ಕೆ ಪೂರಕ ಸಾಕ್ಷ್ಯ ಸಿಕ್ಕಿದೆ.

     

  • ವೆಬ್ ಆಪ್ ಬಳಸಿ ಮಾತನಾಡಿರೋ ಆರೋಪಿಗಳು- ರಿಮ್ಯಾಂಡ್ ಕಾಪಿಯಲ್ಲಿ ಸ್ಫೋಟಕ ಅಂಶ ಬಯಲು

    ವೆಬ್ ಆಪ್ ಬಳಸಿ ಮಾತನಾಡಿರೋ ಆರೋಪಿಗಳು- ರಿಮ್ಯಾಂಡ್ ಕಾಪಿಯಲ್ಲಿ ಸ್ಫೋಟಕ ಅಂಶ ಬಯಲು

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣ (Renukaswamy case) ಸಂಬಂಧ ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ. ದರ್ಶನ್ ಸೇರಿ ನಾಲ್ವರಿಗೆ 13 ದಿನ ನ್ಯಾಯಾಂಗ ಬಂಧನವನ್ನು ಕೋರ್ಟ್ ವಿಧಿಸಿದೆ. ಈ ನಡುವೆ ರಿಮ್ಯಾಂಡ್ ಕಾಪಿಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ.

    ಆನ್‍ಲೈನ್‍ನಲ್ಲಿ ಎಲೆಕ್ಟ್ರಿಕ್ ಶಾಕ್ ಟಾರ್ಚ್ ಖರೀದಿ ಮಾಡಿರುವುದು ಬಯಲಾಗಿದೆ. ಆರೋಪಿ ಧನ್ ರಾಜ್ ಆನ್ ಲೈನ್ ಬುಕ್ ಮಾಡಿಕೊಂಡು ಎಲೆಕ್ಟ್ರಿಕ್ ಟಾರ್ಚ್ ತರಿಸಿಕೊಂಡಿದ್ದಾನೆ. ಈ ಬಗ್ಗೆ ಸಾಕ್ಷಿದಾರನ ಬಳಿ 164 ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಇದನ್ನೂ ಓದಿ: ತಲೆಕೆಡಿಸಿಕೊಳ್ಳಬೇಡಿ ಸರ್- ಜೈಲುಪಾಲಾದ ದರ್ಶನ್‌ಗೆ ಧೈರ್ಯ ಹೇಳಿದ ಅಭಿಮಾನಿ

    ಪ್ರಕರಣದ ಎಲ್ಲಾ ಆರೋಪಿಗಳು ವೆಬ್ ಆ್ಯಪ್ (Web App) ಬಳಕೆ ಮಾಡಿದ್ದಾರೆ. ವೆಬ್ ಆ್ಯಪ್ ಮೂಲಕ ಆರೋಪಿತರು ಮಾತನಾಡಿದ್ದಾರೆ. ಬಳಿಕ ಎಲ್ಲಾ ಆರೋಪಿಗಳು ಸಿಮ್ ಬಿಸಾಡಿ ಹೊಸ ಸಿಮ್ ಖರೀದಿ ಮಾಡಿದ್ದಾರೆ. ಸಾಕ್ಷ್ಯ ನಾಶಪಡಿಸಲು ಕೊಲೆಯಾದ ರೇಣುಕಾಸ್ವಾಮಿಯ ಮೊಬೈಲ್ ಫೋನ್ ಸುಮ್ಮನಹಳ್ಳಿ ಮೋರಿಯಲ್ಲಿ ಎಸೆದಿದ್ದಾರೆ. ಹಾಗಾಗಿ ರೇಣುಕಾ ಸ್ವಾಮಿಯ ಮೊಬೈಲ್ ನಲ್ಲಿದ್ದ ಡಾಟಾ ನಿಷ್ಕ್ರಿಯಗೊಂಡಿದೆ. ಈ ನಿಷ್ಕ್ರಿಯಗೊಂಡಿರೋ ಡಾಟಾ ಮರಳಿ ಪಡೆಯಲು ಮೃತನ ಹೆಸರಲ್ಲಿ ಹೊಸ ಸಿಮ್ ಕಾರ್ಡ್ ಪಡೆಯಲಾಗಿದೆ. ಸಂಬಂಧಪಟ್ಟ ಕಂಪನಿಯ ಸಿಮ್ ಕಾರ್ಡ್ ಪಡೆದು ಡಾಟಾ ರಿಟ್ರೀವ್‍ಗೆ ಕಳಿಸಲಾಗಿದೆ.

    ಇಷ್ಟು ಮಾತ್ರವಲ್ಲದೇ ಆರೋಪಿಗಳು ಮೃತ ರೇಣುಕಾಸ್ವಾಮಿಯ ಬಟ್ಟೆ ಕೂಡ ಬದಲಾವಣೆ ಮಾಡಿದ್ದಾರೆ. ಈ ನಡುವೆ ಸಾಕ್ಷಿದಾರರಿಗೆ ಎ2 ದರ್ಶನ್ ಸಹಚರರು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನು ಜೈಲಿನಲ್ಲಿರೋ ದರ್ಶನ್ ಅಭಿಮಾನಿ ಕೈದಿಗಳಿಂದ ಹಲ್ಲೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಿಕೊಳ್ಳಲಾಗಿದೆ.

    ನಟ ದರ್ಶನ್ ವಿರುದ್ಧ 2011 ರಲ್ಲಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕೇಸ್‍ಗಳು ದಾಖಲಾಗಿದೆ. 498ಎ, 323, 355 506ಬಿ, 27 ಆರ್ಮ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿರೋದನ್ನ ಉಲ್ಲೇಖ ಮಾಡಲಾಗಿದೆ.