Tag: ರಿಯಲ್ ಎಸ್ಟೇಟ್

  • ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಹೇಗೆ ಮಾಡಬೇಕು ಅನ್ನೋದು ನನಗೆ ಗೊತ್ತಿದೆ: ಡಿಕೆಶಿ

    ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಹೇಗೆ ಮಾಡಬೇಕು ಅನ್ನೋದು ನನಗೆ ಗೊತ್ತಿದೆ: ಡಿಕೆಶಿ

    ಬೆಂಗಳೂರು: ರಾಮನಗರವನ್ನು (Ramanagara) ಬೆಂಗಳೂರು ದಕ್ಷಿಣ ಜಿಲ್ಲೆ (Bengaluru South District) ಎಂದು ಹೇಗೆ ಬದಲಾಯಿಸಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

    ರಿಯಲ್ ಎಸ್ಟೇಟ್‌ಗಾಗಿ (Real Estate) ರಾಮನಗರ ಹೆಸರನ್ನು ಬದಲಾಯಿಸಲಾಗಿದೆ ಎಂದು ಅಶ್ವತ್ಥನಾರಾಯಣ (Ashwath Narayana) ಹೇಳಿಕೆಗೆ ತಿರುಗೇಟು ನೀಡಿದ ಅವರು, ಇವರು ಬೆಂಗಳೂರಿಗೆ ಬಂದಿದ್ದು ಯಾಕೆ? ಕನಕಪುರದವರಿಗೆ, ರಾಮನಗರದವರಿಗೆ ಏನೂ ಬೇಡ್ವಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬೆಟ್ಟಿಂಗ್‌ ಆಪ್‌ ಪ್ರಚಾರ – ದೇವರಕೊಂಡ, ಪ್ರಕಾಶ್‌ ರಾಜ್‌, ರಾಣಾ ಸೇರಿದಂತೆ 25 ಮಂದಿ ಮೇಲೆ ಕೇಸ್‌

    ಬೆಂಗಳೂರು ದಕ್ಷಿಣ ಜಿಲ್ಲೆ ಹೇಗೆ ಮಾಡ್ಬೇಕು ನಮಗೆ ಗೊತ್ತು, ರಾಮನಗರ ಹೆಸರು ಬರಬಾರದು ಎಂದು ಯಾರನ್ನು ಭೇಟಿ ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಸಂವಿಧಾನದಲ್ಲಿ ಯಾರನ್ನ ಕೇಳ್ಬೇಕು ಅಂತೇನಿಲ್ಲ. ರಾಮನಗರ ಜಿಲ್ಲೆಯ ಹೆಸರನ್ನು ನಾವು ಬದಲಾವಣೆ ಮಾಡುತ್ತೇವೆ ಎಂದರು.

  • ರಿಯಲ್‌ ಎಸ್ಟೇಟ್‌ ಮಾಫಿಯಾದಿಂದ ಮನನೊಂದು ದಂಪತಿ ಆತ್ಮಹತ್ಯೆ; 12 ಮಂದಿ ವಿರುದ್ಧ FIR

    ರಿಯಲ್‌ ಎಸ್ಟೇಟ್‌ ಮಾಫಿಯಾದಿಂದ ಮನನೊಂದು ದಂಪತಿ ಆತ್ಮಹತ್ಯೆ; 12 ಮಂದಿ ವಿರುದ್ಧ FIR

    – ಡೆತ್‌ನೋಟ್‌ನಲ್ಲಿದ್ದ ರಹಸ್ಯವೇನು?

    ಮಡಿಕೇರಿ: ರಿಯಲ್ ಎಸ್ಟೇಟ್ ಮಾಫಿಯಾದಿಂದ‌ (Real Estate Mafia) ಮನನೊಂದು ಉದ್ಯಮಿಯೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೈಲಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರ್ ಕಾವಲ್ ನಲ್ಲಿ ಬುಧವಾರ ಸಂಜೆ ನಡೆದಿದೆ. ಪ್ರಕರಣ ಸಂಬಂಧ 12 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಕೊಡಗಿನ‌ ಕುಶಾಲನಗರದಲ್ಲಿ (Kushalnagar) ಉದ್ಯಮ ನಡೆಸುತ್ತಿದ್ದ ಮೂಲತಃ ಕೊಪ್ಪ ನಿವಾಸಿ ‌ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಆತ್ಮಹತ್ಯೆಗೆ ಶರಣಾದವರು. ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ ತನ್ನ ಪತ್ನಿಯನ್ನು ದೇವಸ್ಥಾನಕ್ಕೆಂದು ಹೇಳಿ ದೊಡ್ಡಹೊನ್ನೂರು ಕಾವಲ್‌ನ ಜಮೀನಿನ ಹಳೆಯ ಖಾಲಿ ಮನೆಗೆ ಕರೆತಂದಿದ್ದು ಅಲ್ಲಿ ಇಬ್ಬರೂ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: 39 ಸಾವಿರ ಕೋಟಿ ಅನುದಾನದಲ್ಲಿ ಕರ್ನಾಟಕದಲ್ಲಿ ರೈಲ್ವೆ ಕೆಲಸ ಆರಂಭ: ಸೋಮಣ್ಣ

    ರಿಯಲ್ ಎಸ್ಟೇಟ್ ಮಾಫಿಯಾ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಮೃತ ಸುರೇಶ್ ಆತ್ಮಹತ್ಯೆಗೆ ಕಾರಣರಾದವರ ಹೆಸರನ್ನ ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಈ ಸಂಬಂಧ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ‌12 ಮಂದಿ ವಿರುದ್ಧ ಕರಣ ದಾಖಲಾಗಿದೆ. ಮೃತ ದಂಪತಿ ಮರಣೋತ್ತರ ಪರೀಕ್ಷೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಇದನ್ನೂ ಓದಿ: ಕಬ್ಬು ಬೆಲೆ ನಿಗದಿಗಾಗಿ ಹೋರಾಟ- ಸಿಎಂಗೆ ಘೇರಾವ್ ಹಾಕಲು ನಿರ್ಧರಿಸಿದ ಮುಧೋಳ ರೈತರು

    ಈ‌ ನಡುವೆ ಗುರುವಾರ (ಇಂದು) ಮಧ್ಯಾಹ್ನ ಮೃತದೇಹಗಳನ್ನು ಮುಂದಿಟ್ಟು ಮೃತನ ಸಂಬಂಧಿಕರು, ಸ್ನೇಹಿತರು ಹಾಗೂ ಕುಶಾಲನಗರ, ಕೊಪ್ಪ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಶವಾಗಾರದ ಮುಂಭಾಗ ದಂಪತಿಗಳ ಸಾವಿಗೆ ಕಾರಣರಾದ ರಿಯಲ್ ಎಸ್ಟೇಟ್ ಮಾಫಿಯಾಗೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ ಆಗ್ರಹಿಸಿದರು. ಆರೋಪಿಗಳು ಪ್ರಭಾವ ಶಾಲಿಗಳಾಗಿದ್ದು ಹಲವರಿಗೆ ವಂಚನೆ ಎಸಗಿದ್ದಾರೆ. ಇದರಿಂದ ಅಮಾಯಕ ದಂಪತಿ ಪ್ರಾಣ ಕಳೆದುಕೊಳ್ಳುವಂತಾಗಿದೆ.‌ ಇಂತಹ ಪ್ರಕರಣಗಳು ಮರುಕಳಿಸದಂತೆ ಆರೋಪಿಗಳನ್ನು ಕೂಡಲೆ ಬಂಧಿಸಿ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಪೊಲೀಸರನ್ನು ಒತ್ತಾಯಿಸಿದರು. ಇದನ್ನೂ ಓದಿ: ಕೊಡಗಿನಲ್ಲಿ ಹೆಚ್ಚಾದ ಕಾಡು ಪ್ರಾಣಿಗಳ ಹಾವಳಿ – ಜೀವ ಭಯದಲ್ಲಿ ದಿನ ಕಳೆಯುತ್ತಿರುವ ಜನ

    ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಮೃತ ಸುರೇಶ್ ಅವರ ಸ್ನೇಹಿತ ಕೆ.ಜಿ ಮನು, ಸುರೇಶ್ ನಡೆಸುತ್ತಿದ್ದ ವ್ಯವಹಾರದಲ್ಲಿ‌ ಕೆಲವರು ಮೂಗು ತೂರಿಸಿ ದ್ರೋಹ ಮಾಡಿದ್ದಾರೆ. ಕುಶಾಲನಗರ ಸರ್ಕಾರಿ ಡಿಗ್ರಿ‌ ಕಾಲೇಜು ಬಳಿ ಬಡಾವಣೆ ನಿರ್ಮಾಣಕ್ಕೆ ಜಾಗವೊಂದನ್ನು ಅಭಿವೃದ್ದಿಪಡಿಸುತ್ತಿದ್ದರು. ಸುರೇಶ್ ವ್ಯವಹಾರಕ್ಕೆ ಅಡ್ಡಗಾಲು ಹಾಕಿದ ರಿಯಲ್ ಎಸ್ಟೇಟ್ ಮಾಫಿಯಾದ ಕೆಲವರು ಮಾಲೀಕರಿಗೆ ಹೆಚ್ಚಿನ ಲಾಭದ ಆಮೀಷವೊಡ್ಡಿ ಆತನಿಂದ ವ್ಯವಹಾರ ಕಸಿದುಕೊಂಡಿದ್ದಾರೆ. ಇದರಿಂದ ಹೂಡಿಕೆ ಮಾಡಿದ್ದ ಹಣ ಕಳೆದುಕೊಂಡು ಇತ್ತ ಜಾಗವೂ‌ ಇಲ್ಲದೇ ಮನನೊಂದು ಕೊನೆಗೇ ಯಾವುದೇ ದಾರಿ ಕಾಣದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ಕಾರಣರಾದ ಜಾಗ ಮಾಲೀಕರು ಹಾಗೂ ಸಂಬಂಧಿಸಿದವರಿಗೆ ಸೂಕ್ತ ಕಾನೂನು ಕ್ರಮ ಆಗಬೇಕಿದೆ ಎಂದು ಆಗ್ರಹಿಸಿದರು.

  • ಕೊಡಗು| ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ನೇಣಿಗೆ ಶರಣು

    ಕೊಡಗು| ಪತ್ನಿ ಜೊತೆ ರಿಯಲ್‌ ಎಸ್ಟೇಟ್‌ ಉದ್ಯಮಿ ನೇಣಿಗೆ ಶರಣು

    ಮಡಿಕೇರಿ: ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು (Real Estate Businessman) ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.

    ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಮೃತ ದಂಪತಿ.  ಇದನ್ನೂ ಓದಿ: ಪತ್ನಿ, ಮಗುವನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಕಾರ್ತಿಕ್ ಸಾಲದ ಸುಳಿಗೆ ಇಡೀ ಸಂಸಾರ ಬಲಿ?

    ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್‌ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ (Suicide) ಶರಣಾಗಿದ್ದಾರೆ.

    ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ‌ ನಷ್ಟ, ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸುರೇಶ್‌ ಅವರು ಡೆತ್‌ನೋಟ್‌ ಬರೆದಿದ್ದು ಸಾವಿಗೆ ಕೆಲವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ವಿಶ್ವನಾಥ್‌, ಪುತ್ರ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದ ಫೋಟೋ ಇದೆ: ಬೈರತಿ ಸುರೇಶ್‌ ಬಾಂಬ್‌!

    ವಿಶ್ವನಾಥ್‌, ಪುತ್ರ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದ ಫೋಟೋ ಇದೆ: ಬೈರತಿ ಸುರೇಶ್‌ ಬಾಂಬ್‌!

    – ವಿಶ್ವನಾಥ್‌ ರೋಲ್‌ಕಾಲ್‌ ಗಿರಾಕಿ – ಏಕವಚನದಲ್ಲೇ ಸಚಿವ ವಾಗ್ದಾಳಿ

    ಚಾಮರಾಜನಗರ:‌ ಯಾರ್ರಿ ಅವನು ವಿಶ್ವನಾಥ್‌ (H Vishwanath), ರಿಯಲ್‌ ಎಸ್ಟೇಟ್‌ ಒಂದು ಉದ್ಯಮ ಅಲ್ವಾ? ಅವ್ನು, ಅವನ ಮಗ ನನ್ನ ಮನೆಗೆ ಸೈಟು ಕೇಳಿಕೊಂಡು ಬಂದಿದ್ದ ಫೋಟೋ ಇದೆ. ಅವನು ಏಕವಚನ ಬಳಸಿದ್ರೆ, ನನಗೂ ಅದರಪ್ಪನಂಗೆ ಮಾತಾಡೋಕೆ ಬರುತ್ತೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ (Byrathi Suresh), ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: MUDA Scam| ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರೀ ಬೊಗಳೆ ಬಿಡ್ತಾನೆ: ಹೆಚ್‌ವಿಶ್ವನಾಥ್‌

    ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ (Real Estate Agent) ಎಂಬ ವಿಶ್ವನಾಥ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಯಾರ್ರಿ ಅವನು ವಿಶ್ವನಾಥ್, ರಿಯಲ್ ಎಸ್ಟೇಟ್ ಒಂದು ಉದ್ಯಮ ಅಲ್ವಾ? ಅವನು ಮತ್ತು ಅವನ ಮಗ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದ ಫೋಟೊ ಇದೆ. ಅವನು ಏಕವಚನ ಬಳಸಿದ್ರೆ ನಾನೂ ಅದಕ್ಕಿಂತ ಹೆಚ್ಚಿಗೆ ಮಾತನಾಡೋಕೆ ಬರುತ್ತೆ. ನಾನು ಹಳ್ಳಿಯಲ್ಲೇ ಹುಟ್ಟಿ ಬೆಳೆದಿರೋದು, ಅದರಪ್ಪನಂಗೆ ಮಾತಾಡ್ತಾನಿ. ಮೊದಲು ಮರ್ಯಾದೆ ಕೊಟ್ಟು, ಮರ್ಯಾದೆ ತೆಗೆದುಕೊಳ್ಳಲಿ. ವಿಶ್ವನಾಥ್ ತರ ನಾನು ರೋಲ್ ಕಾಲ್ ಗಿರಾಕಿ ಅಲ್ಲ. ವಯಸ್ಸಾಗಿದೆ ಅಂತ ಅಷ್ಟೇ ಬೆಲೆ ಕೊಡ್ತೀವಿ ಅದನ್ನ ಉಳಿಸಿ ಕೊಳ್ಳಲಿ ಎಂದು ಎಚ್ಚರಿಕೆ ನೀಡಿದ್ದಾರೆ.

    ಮೈಸೂರು ಮುಡಾ ಹಗರಣ (MUDA Site Allotment Scam) ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಗರಣ ಇದ್ದರೆ ತಾನೇ ಆಚೆಗೆ ಬರೋದು. ಯಾವ ಹಗರಣವೂ ನಡೆದಿಲ್ಲ. ಇನ್ನೂ ಹಗರಣ ಅಂತ ಸಾಬೀತಾಗಿಲ್ಲ. ಸೈಟ್‌ಗಳನ್ನು ಏಜೆಂಟ್, ರೈತರು, ಮಧ್ಯವರ್ತಿಗಳಿಗೆ ಕೊಟ್ಟಿದ್ದಾರಾ ಅಂತ ಗೊತ್ತಾಗಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಸರ್ಕಾರಕ್ಕೆ ಸೈಟ್ ವಾಪಸ್ ಕೊಡದಿದ್ದರೆ‌ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ: ಹೆಚ್. ವಿಶ್ವನಾಥ್

    ಇನ್ನೂ ಮುಡಾ ಹಗರಣ ಸಿಬಿಐ ತನಿಖೆಗೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ರಾಜ್ಯದಲ್ಲಿ ಪೊಲೀಸ್ ಇಲ್ವಾ? ನಮ್ಮಲ್ಲಿ ಅಧಿಕಾರಿಗಳಿಲ್ವಾ? ಹಗರಣ ನಡೆದಿದ್ರೆ ತಾನೇ ಸಿಬಿಐಗೆ ಕೊಡೋದು. ಬಿಜೆಪಿಯವರು ಏನ್ ಮಹಾ, ಎಷ್ಟು ತನಿಖೆಯನ್ನ ಸಿಬಿಐಗೆ ಕೊಟ್ಟಿದ್ದಾರೆ? ನಮ್ಮಲ್ಲೇ ಅಧಿಕಾರಿಗಳಿಲ್ವಾ? ಇಬ್ಬರು ಐಎಎಸ್ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ. ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ. ಬಿಜೆಪಿ, ಜೆಡಿಎಸ್ ನವರು ಹೇಳ್ತಾರೆ ಅಂತ ಎಲ್ಲವನ್ನೂ ಸಿಬಿಐ ತನಿಖೆಗೆ ಕೊಡೋಕಾಗುತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆಯ ಬಳಿಕ ಜಮ್ಮು ಕಾಶ್ಮೀರದಲ್ಲಿ ಚುನಾವಣೆ – ತಯಾರಿ ಆರಂಭಿಸಿದ ಬಿಜೆಪಿ 

  • MUDA Scam| ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರೀ ಬೊಗಳೆ ಬಿಡ್ತಾನೆ: ಹೆಚ್‌ವಿಶ್ವನಾಥ್‌

    MUDA Scam| ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರೀ ಬೊಗಳೆ ಬಿಡ್ತಾನೆ: ಹೆಚ್‌ವಿಶ್ವನಾಥ್‌

    ಮೈಸೂರು: ಭೈರತಿ ಸುರೇಶ್ (Byrathi Suresh) ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ (Real Estate Agent) ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್‌ ವಿಶ್ವನಾಥ್‌ (MLC H Vishwanth) ಗಂಭೀರ ಆರೋಪ ಮಾಡಿದ್ದಾರೆ.

    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್‌ ಹಗರಣಕ್ಕೆ (MUDA Site Allotment Scam) ಸಂಬಂಧಿಸಿದಂತೆ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಲಿಕಾಪ್ಟರ್‌ನಲ್ಲಿ ಬಂದು ಪೊಲೀಸ್ ಭದ್ರತೆಯಲ್ಲಿ ಸಭೆ ಮಾಡಿ ಹೋಗ್ತಾನೆ. ಸಭೆಯ ಬಳಿಕ ಅದು ಕ್ಯಾನ್ಸಲ್‌ ಮಾಡಿದ್ದೀನಿ. ಅದು ಮಾಡಿದ್ದೀನಿ, ಇದು ಮಾಡಿದ್ದೀನಿ ಎಂದು ಹೇಳ್ತಾನೆ. ಒಂದಕ್ಕಾದ್ರೂ ಆದೇಶ ಬಂದಿದ್ಯಾ? ಬರಿ ಬೊಗಳೆ ಬಿಡ್ತಾನೆ ಎಂದು ಏಕವಚನದಲ್ಲೇ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ವಿರುದ್ಧ ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ಸಿಎಂ ಸರ್ಕಾರಕ್ಕೆ ಸೈಟ್ ವಾಪಸ್ ಕೊಡದಿದ್ದರೆ‌ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ: ಹೆಚ್. ವಿಶ್ವನಾಥ್

    ಹೇ ನೀನು ಯಾವನಲೇ? ನೀನು ದಡ್ಡನೋ ಬುದ್ದಿವಂತನಾ? ನಾನು ಏಳು ಸೈಟ್ ಕೇಳಿದ್ದೇನೆ ಅಂತೀಯಲ್ಲ. ಇವ್ನುಯಾವನ್ರೀ  ಭೈರತಿ ಎಂದು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಹೆಚ್‌ಡಿಕೆ

    ನಾನು ಪ್ರಾಮಾಣಿಕ ಅಂತಾ ವಿಧಾನಸೌಧದ ಒಳಗೆ ಹೇಳಿದ್ದಿನಿ. ಚೇಂಜ್ ಆಫ್ ಲ್ಯಾಂಡ್‌ಗೆ ಐದು ಲಕ್ಷ ಫಿಕ್ಸ್ ಮಾಡಿದ್ದಾನೆ ಈ ಭೈರತಿ ಸುರೇಶ್ ಎಂದು ಕಿಡಿಕಾರಿದರು.

     

    ಹೆಚ್‌ ವಿಶ್ವನಾಥ್‌ ಮೈಸೂರಿನ ಪ್ರಜೆಯಾಗಿದ್ದಾರೆ ಜೊತೆ ಪರಿಷತ್‌ ಸದಸ್ಯರೂ ಆಗಿದ್ದಾರೆ. ಹೀಗಾಗಿ ಅವರು ಮುಡಾದಲ್ಲಿ ಸದಸ್ಯರಾಗಿದ್ದಾರೆ. ಈ ಮುಡಾದ ಸದಸ್ಯರೇ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಸಚಿವ ಭೈರತಿ ವಿರುದ್ಧ ಆರೋಪ ಮಾಡಿರುವುದು ಸಂಚಲನ ಮೂಡಿಸಿದೆ.

  • ಎರಡು ಎಕರೆ ಜಮೀನು ಖರೀದಿಸಿದ ಶಾರುಖ್ ಪುತ್ರಿ  ಸುಹಾನಾ ಖಾನ್

    ಎರಡು ಎಕರೆ ಜಮೀನು ಖರೀದಿಸಿದ ಶಾರುಖ್ ಪುತ್ರಿ ಸುಹಾನಾ ಖಾನ್

    ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shah Rukh Khan)  ಪುತ್ರಿ ಸುಹಾನಾ (Suhana Khan) ರಿಯಲ್ ಎಸ್ಟೇಟ್ (Real Estate) ಉದ್ಯಮಕ್ಕೆ ಕಾಲಿಟ್ಟಿದ್ದೀರಾ? ಹಾಗಂತ ಮಾತನಾಡುತ್ತಿದೆ ಬಿಟೌನ್. ಮುಂಬೈ ಸಮೀಪದ ಅಲಿಭಾಗ್ ನಲ್ಲಿ ಸುಹಾನಾ ಬರೋಬ್ಬರಿ ಎರಡು ಎಕರೆ ಜಮೀನು ಖರೀದಿಸಿದ್ದಾರಂತೆ. ಹಾಗಾಗಿ ಸುಹಾನಾ ರಿಯಲ್ ಎಸ್ಟೇಟ್ ಉದ್ಯಮ ಆರಂಭಿಸಲಿದ್ದಾರೆ ಎನ್ನುವ ಅನುಮಾನ ಮೂಡಿದೆ.

    ಈ ಜಮೀನಿಗಾಗಿ ಅವರು 12.91 ಕೋಟಿ ರೂಪಾಯಿ ನೀಡಿದ್ದು, ಈ ಪ್ರಮಾಣದ ಹಣ ತೊಡಗಿಸಿದ್ದು ಅವರ ಹೊಸ ಯೋಜನೆಗಾಗಿ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸುಹಾನಾ ಸಿನಿಮಾ ರಂಗದಲ್ಲೇ ಸಕ್ರೀಯರಾಗುತ್ತಾರೆ ಎಂದು ಹೇಳಲಾಗಿತ್ತು. ಅದರಂತೆ ಚಿತ್ರವೊಂದರಲ್ಲಿ ನಟಿಸಿದ್ದರು. ಈಗ ರಿಯಲ್ ಎಸ್ಟೇಟ್ ನಲ್ಲಿ ಭಾರೀ ಹೂಡಿಕೆ ಮಾಡಿದ್ದಾರೆ.

    ಸುಹಾನಾ ಖಾನ್ ದುಬಾರಿ ಹುಡುಗಿ ಎಂದೇ ಫೇಮಸ್. ಸಾರ್ವಜನಿಕ ಸಮಾರಂಭಗಳಲ್ಲಿ ಅವರು ಕಾಣಿಸಿಕೊಂಡಾಗ ಅವರ ಧರಿಸುವ ಬಟ್ಟೆಗಳ ಬೆಲೆ ಬಗ್ಗೆ ಯಾವತ್ತಿಗೂ ಚರ್ಚೆ ಆಗುತ್ತದೆ.  ಇತ್ತೀಚೆಗೆ ಗೆಳತಿಯರೊಂದಿಗೆ ಕಾಣಿಸಿಕೊಂಡಿದ್ದ ಸುಹಾನಾ ಬರೋಬ್ಬರಿ 69,574 ರೂ. ಬೆಲೆಯ ಶೂ ಧರಿಸಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿತ್ತು. ಕೇವಲ ಸಿನಿಮಾ ನಟ-ನಟಿಯರು ಹೆಚ್ಚು ಬೆಲೆ ಬಾಳುವ ಶೂ ಮತ್ತು ಬಟ್ಟೆಗಳನ್ನು ಧರಿಸುತ್ತಾರೆ ಎಂಬ ಮಾತನ್ನು ಸುಹಾನ ಸುಳ್ಳು ಮಾಡಿದ್ದರು.

     

    ಸುಹನಾ ತನ್ನ ಗೆಳತಿಯರಾದ ಶನಯಾ ಕಪೂರ್ ಮತ್ತು ಅಹನಾ ಪಾಂಡ್ಯೆ ರೊಂದಿಗೆ ಕಾಣಿಸಿಕೊಳ್ಳುವ ಮೂಲಕ ಎಲ್ಲರನ್ನು ಆಕರ್ಷಿಸಿದ್ದರು. ನೀಲಿ ಬಣ್ಣದ ಟೋನ್ ಜೀನ್ಸ್ ಜೊತೆಗೆ ಬಿಳಿ ಬಣ್ಣದ ಕ್ರಾಪ್ ಟಾಪ್ ಧರಿಸಿದ್ದ ಸುಹನಾ ಕ್ಲಾಸಿ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಅವೆಲ್ಲವೂ ದುಬಾರಿ ಬೆಲೆಯದ್ದು ಆಗಿದ್ದವು.

  • ರಿಯಲ್ ಎಸ್ಟೇಟ್ ಬ್ರೋಕರ್ ಮೇಲೆ ‘ಕೈ’ ಕಾರ್ಪೋರೇಟರ್ ಸಹೋದರನಿಂದ ಮಾರಣಾಂತಿಕ ಹಲ್ಲೆ

    ರಿಯಲ್ ಎಸ್ಟೇಟ್ ಬ್ರೋಕರ್ ಮೇಲೆ ‘ಕೈ’ ಕಾರ್ಪೋರೇಟರ್ ಸಹೋದರನಿಂದ ಮಾರಣಾಂತಿಕ ಹಲ್ಲೆ

    ಹುಬ್ಬಳ್ಳಿ: ರಿಯಲ್ ಎಸ್ಟೇಟ್ ಬ್ರೋಕರ್ ಮೇಲೆ ಕಾಂಗ್ರೆಸ್ ಕಾರ್ಪೋರೇಟರ್ ಸಹೋದರ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹೆಣ್ಣು ಮಕ್ಕಳು ಅಂತ ನೋಡದೆ ನಾಲ್ಕೈದು ರೌಡಿಗಳ ಜೊತೆ ಸೇರಿಕೊಂಡು ಮನಬಂದಂತೆ ಥಳಿಸಿರುವ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ. ಈ ಮೂಲಕ ಗೃಹ ಸಚಿವ ಜಿ. ಪರಮೇಶ್ವರ್ ಅವರೇ ನಿಮ್ಮ ಸರ್ಕಾರದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ವಾ. ಕಾಂಗ್ರೆಸ್ (Congres) ಅಧಿಕಾರದಲ್ಲಿದೆ ಅಂದರೆ ನಿಮ್ಮ ಸ್ಥಳೀಯ ಮುಖಂಡರು ಏನು ಮಾಡಿದ್ರು ನಡೆಯುತ್ತಾ ಅಂತ ಹುಬ್ಬಳ್ಳಿ ಜನ ಪ್ರಶ್ನೆ ಮಾಡುವಂತಾಗಿದೆ.

    ಹುಬ್ಬಳ್ಳಿ ಬಿಡ್ನಾಳದಲ್ಲಿ ಈ ಪ್ರಕರಣ ನಡೆದಿದ್ದು, ರಿಯಲ್ ಎಸ್ಟೇಟ್ ಬ್ರೋಕರ್ ಗುರುಸಿದ್ದಪ್ಪ ಮತ್ತು ಕುಟುಂಬಸ್ಥರ ಮೇಲೆ ರೌಡಿ ಶೀಟರ್ ಶಿವರಾಜ್ ಗೌರಿ ಮತ್ತು ಸಹಚರರಿಂದ ಕೃತ್ಯ ನಡೆದಿದೆ. ಆರೋಪಿ ಶಿವರಾಜ್ ಗೌರಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಾಗರಾಜ್ ಗೌರಿ ಸಹೋದರನಾಗಿದ್ದಾನೆ.  ಇದನ್ನೂ ಓದಿ: ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಕೇಳಲು ಕಷ್ಟ: ಸಿದ್ದರಾಮಯ್ಯ

    ಹಣಕಾಸಿನ ಮಾತುಕತೆಗೆಂದು ಗುರುಸಿದ್ದಪ್ಪನನ್ನು ತುಷಾರ್ ಎಂಬವರ ಆಫೀಸ್‍ಗೆ ಆರೋಪಿ ಶಿವರಾಜ್ ಕರೆಸಿದ್ದರು. ಈ ವೇಳೆ ಏಕಾಏಕಿ ಗುರುಸಿದ್ದಪ್ಪ ಮೇಲೆ ಹಲ್ಲೆ ನಡೆಸಿದ ಶಿವರಾಜ್ ಗೌರಿ, ನಾನು ಕಾಂಗ್ರೆಸ್ ಲೀಡರ್, ಕಾಂಗ್ರೆಸ್ ಕಾರ್ಪೊರೇಟರ್ ತಮ್ಮ ಅಂತ ದರ್ಪ ತೋರಿದ್ದಾರೆ ಎನ್ನಲಾಗಿದೆ.

    ಗುರುಸಿದ್ದಪ್ಪರನ್ನು ಬಿಡಸಲು ಬಂದ ಪತ್ನಿ ಮತ್ತು ಮಕ್ಕಳ ಮೇಲೂ ಹಲ್ಲೆ ನಡೆಸಿ, ಅವರ ಮಗಳು ಅನ್ನಪೂರ್ಣ ಬಟ್ಟೆ ಹರಿದು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ರೌಡಿ ಶೀಟರ್ ಶಿವರಾಜ್, ತುಷಾರ್, ಅಜರುದ್ದೀನ್ ಎಂಬವರ ಮೇಲೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

  • ಧಾರವಾಡವನ್ನು ಬೆಚ್ಚಿ ಬೀಳಿಸಿದ್ದ ಮರ್ಡರ್ ಪ್ರಕರಣ: ಪಿಸ್ತೂಲ್ ಕೊಟ್ಟವ ಅರೆಸ್ಟ್

    ಧಾರವಾಡವನ್ನು ಬೆಚ್ಚಿ ಬೀಳಿಸಿದ್ದ ಮರ್ಡರ್ ಪ್ರಕರಣ: ಪಿಸ್ತೂಲ್ ಕೊಟ್ಟವ ಅರೆಸ್ಟ್

    ಧಾರವಾಡ: ಹುಬ್ಬಳ್ಳಿ (Hubballi) ಹಾಗೂ ಧಾರವಾಡದ (Dharwad) ಜನತೆಯನ್ನು ಬೆಚ್ಚಿ ಬೀಳಿಸಿದ್ದ ಕಮಲಾಪುರದ (Kamalapur) ಜೋಡಿ ಕೊಲೆಗೆ (Murder) ಪಿಸ್ತೂಲ್ ಕೊಟ್ಟ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ರೌಡಿಶೀಟರ್ ಮಂಜು ಸಾವಂತ ಎಂದು ಗುರುತಿಸಲಾಗಿದೆ. ಇದುವರೆಗೂ ಪ್ರಕರಣದಲ್ಲಿ ಒಟ್ಟು 7 ಅರೋಪಿಗಳನ್ನು ಬಂಧಿಸಲಾಗಿತ್ತು. ಈತನ ಬಂಧನದಿಂದಾಗಿ ಆರೋಪಿಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ಡಬಲ್ ಮರ್ಡರ್ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

    ಕಳೆದ ಮೇ 25 ರಂದು ಹಣದ ವಿಚಾರಕ್ಕೆ ರಿಯಲ್ ಎಸ್ಟೇಟ್ ಉದ್ಯಮಿ (Real Estate) ಮಹ್ಮದ್ ಕುಡಚಿ ಎಂಬುವವರನ್ನು ಕೊಲೆ ಮಾಡಲಾಗಿತ್ತು. ಈ ವೇಳೆ ಇನ್ನೋರ್ವ ಗಣೇಶ ಎಂಬಾತ ಕೂಡ ಸಾವಿಗೀಡಾಗಿದ್ದ. ನಂತರ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಮಂಜು ಸಾವಂತ ಬಳಿ ಪಿಸ್ತೂಲ್ ಪಡೆದಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದರು. ಇದನ್ನೂ ಓದಿ: ಉದ್ದೇಶಪೂರ್ವಕವಾಗಿಯೇ ಉರುಳಿಸಲಾಗಿದೆ: 1700 ಕೋಟಿಯ ಸೇತುವೆ ಕುಸಿತಕ್ಕೆ ಬಿಹಾರ ಡಿಸಿಎಂ ಸಮರ್ಥನೆ

  • ಧಾರವಾಡದಲ್ಲಿ ಡಬಲ್ ಮರ್ಡರ್ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

    ಧಾರವಾಡದಲ್ಲಿ ಡಬಲ್ ಮರ್ಡರ್ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

    ಧಾರವಾಡ: ರಿಯಲ್ ಎಸ್ಟೇಟ್ (Real Estate) ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ (Murder) ಮಾಡಿರುವ ಘಟನೆ ಧಾರವಾಡದಲ್ಲಿ (Dharwad) ತಡರಾತ್ರಿ ನಡೆದಿದೆ.

    ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಹಾಗೂ ಮತ್ತೊರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ನಗರದ ಕಮಲಾಪುರ (Kamalapur) ಹೊರವಲಯದ ಮನೆ ಎದುರು ಮಹಮ್ಮದ್ ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪು ಅವರ ಮೇಲೆ ದಾಳಿ ನಡೆಸಿದೆ. ಈ ವೇಳೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ವಿಜಯ್ ಮಲ್ಯಗೆ ಮುಳುವಾಗಿದ್ದ ಟಿಪ್ಪು ಖಡ್ಗ 145 ಕೋಟಿಗೆ ಹರಾಜು

    ಮಹಮ್ಮದ್ ಅವರ ಅವರ ಮನೆಯಲ್ಲಿದ್ದ ಮತ್ತೋರ್ವನ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಆತ ಓಡಿ ಹೋಗಿದ್ದು, ಮನೆಯಿಂದ ರಸ್ತೆಯುದ್ದಕ್ಕೂ ರಕ್ತ ಚೆಲ್ಲಾಡಿದೆ. ಆತ ಕೂಡ ಸ್ವಲ್ಪ ದೂರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತನ ಹೆಸರು ತಿಳಿದು ಬಂದಿಲ್ಲ.

    ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿದಂತೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೋಡಿ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಈ ಹತ್ಯೆ ಹಿಂದಿನ ಕಾರಣ ಏನು ಎಂಬುದನ್ನು ಬಹಿರಂಗಪಡಿಸಲಾಗುವುದು ಎಂದು ಗುಪ್ತಾ ಅವರು ತಿಳಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಾರಕಾಸ್ತ್ರಗಳು ಪತ್ತೆಯಾಗಿವೆ. ಆರೋಪಿಗಳ ಪತ್ತೆಗೆ ತನಿಖಾ ತಂಡ ರಚನೆ ಮಾಡಲಾಗಿದೆ. ಡಾಗ್ ಸ್ಕ್ವಾಡ್ ಹಾಗೂ ಬೆರಳಚ್ಚು ತಜ್ಞರು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಪ್ರಯಾಣ – ಮಾರ್ಗಸೂಚಿಯಲ್ಲಿ ಏನಿರಬಹುದು?

  • ಪಶ್ವಿಮ ಘಟ್ಟದಲ್ಲಿ ರಿಯಲ್ ಎಸ್ಟೇಟ್‍ಗಾಗಿ ಕಾಡಿಗೆ ಬೆಂಕಿ

    ಪಶ್ವಿಮ ಘಟ್ಟದಲ್ಲಿ ರಿಯಲ್ ಎಸ್ಟೇಟ್‍ಗಾಗಿ ಕಾಡಿಗೆ ಬೆಂಕಿ

    – ಸರ್ಕಾರ ನಿರ್ಲಕ್ಸ್ಯ ತೋರ್ತಿದೆ ಎಂದ ಪರಿಸರವಾದಿ
    – ಕ್ರಮ ಕೈಗೊಳ್ತೇವೆ ಎಂದು ಸಿಎಂ ಸ್ಪಷ್ಟನೆ

    ಶಿವಮೊಗ್ಗ: ರಿಯಲ್ ಎಸ್ಟೇಟ್ ಉದ್ಯಮ (Real Estate Business) ದ ವ್ಯಾಮೋಹಕ್ಕೆ ಅರಣ್ಯ ಪ್ರದೇಶ (Forest Area) ಒತ್ತುವರಿ ಆಗುವುದರ ಜೊತೆಗೆ ಕೆಲವು ಕಿಡಿಗೇಡಿಗಳು ಅರಣ್ಯಕ್ಕೂ ಬೆಂಕಿ ಇಡುತ್ತಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಅರಣ್ಯ ಪ್ರದೇಶ, ವನ್ಯಜೀವಿಗಳು ಭಸ್ಮವಾಗುತ್ತಿವೆ. ಆದರೂ ಸರ್ಕಾರ ಮಾತ್ರ ಇದರ ವಿರುದ್ಧ ಯಾವ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ.

    ಹೌದು. 2016ರಲ್ಲಿ ಆಸ್ಟ್ರೇಲಿಯಾ ಸಿಡ್ನಿ ಕಾಡಿಗೆ ಬೆಂಕಿ ಬಿದ್ದಾಗ ನಮ್ಮೆಲ್ಲರ ಮನ ಮಿಡಿದಿತ್ತು. ಆದರೆ ಈಗ ಅದೇ ಪರಿಸ್ಥಿತಿ ಕರ್ನಾಟಕದ ಪಶ್ಚಿಮ ಘಟ್ಟದ ಮಡಿಲಿನ, ಮಲೆನಾಡು ಜಿಲ್ಲೆ ಶಿವಮೊಗ್ಗದ ಶೆಟ್ಟಿಹಳ್ಳಿ ಅಭಯಾರಣ್ಯಕ್ಕೆ ಬಂದೊದಗಿದೆ. ಅರಣ್ಯ ಪ್ರದೇಶದ ಮೇಲೆ ರಿಯಲ್ ಎಸ್ಟೇಟ್ ದಂಧೆಕೋರರ ಕಣ್ಣು ಬಿದ್ದಿದ್ದು, ಮಾನವ ನಿರ್ಮಿತ ಬೆಂಕಿಗೆ ಕಾಡು ಪ್ರಾಣಿಗಳು ಬೆಂದು ಹೋಗ್ತಿವೆ. ಆದರೂ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ. ವನ್ಯ ಜೀವಿಗಳ ಕಣ್ಣೀರು ಭೂಮಿಗೂ ಬೀಳದೇ ಬೆಂಕಿಯಲ್ಲಿ ಆವಿಯಾಗುತ್ತಿದೆ. ಇದನ್ನೂ ಓದಿ: ಆಜಾನ್ ಹೇಳಿಕೆ ವಿರುದ್ಧ ಎಷ್ಟೇ ಪ್ರತಿರೋಧ ಬಂದ್ರೂ ನಾನು ಜನ ಸಾಮಾನ್ಯನ ನೋವು ಹೇಳೋನೆ: ಈಶ್ವರಪ್ಪ

    ಕಳೆದ ಹತ್ತು ದಿನಗಳಲ್ಲಿ ಶಿವಮೊಗ್ಗದ ಶೆಟ್ಟಿಹಳ್ಳಿ (ShettyHalli Shivamogga) ಅಭಯಾರಣ್ಯದಲ್ಲಿ 50ಕ್ಕೂ ಅಧಿಕ ಜಾಗಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದರಿಂದ ಪಶ್ಚಿಮ ಘಟ್ಟಗಳಲ್ಲಿ ಅಸಂಖ್ಯ ವನ್ಯಜೀವಿಗಳ ನೆಲೆ ನಾಶವಾಗಿದೆ. ಕೆಲ ವನ್ಯ ಜೀವಿಗಳು ದಿಕ್ಕು ತೋಚದೆ ನಾಡಿಗೆ ಲಗ್ಗೆ ಇಟ್ಟಿವೆ. ಅರಣ್ಯ ಇಲಾಖೆಯ ನಿಯಂತ್ರಣಕ್ಕೆ ಸಿಗದ ಮಾನವ ನಿರ್ಮಿತ ಕಾಡಿನ ಬೆಂಕಿ, ಬೇಸಿಗೆಯ ಬಿಸಿಲಿಗೆ ಇನ್ನಷು ಅಬ್ಬರಿಸಿ ಉರಿಯುತ್ತಿದೆ. ಸಿಬ್ಬಂದಿಗೆ ಸರಿಯಾದ ಉಪಕರಣಗಳನ್ನು ನೀಡದೇ, ಮಾನವ ನಿರ್ಮಿತ ಕಾಡಿನ ಬೆಂಕಿ ಕುರಿತು ಸರ್ಕಾರ ನಿಗಾ ವಹಿಸದೇ ಚುನಾವಣೆ ವಿಚಾರದಲ್ಲಿ ಮಗ್ನವಾಗಿದೆ. ಈ ಕೃತ್ಯದ ಇದರ ಹಿಂದೆ ರಿಯಲ್ ಎಸ್ಟೇಟ್‍ನ ದಂಧೆ ಅಡಗಿದೆ ಎಂದು ಪರಿಸರವಾದಿ ಅಖಿಲೇಶ್ ಚಿಪ್ಲಿ ಆರೋಪಿಸಿದ್ದಾರೆ.

    ಇನ್ನು ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಕಾಡ್ಗಿಚ್ಚು ವಿಚಾರ ಸಿಎಂ ಪ್ರತಿಕ್ರಿಯಿಸಿ ಈಗಾಗಲೇ ಡಿಸಿ ಜೊತೆ ಸಭೆ ಮಾಡಿದ್ದು, ಬೆಂಕಿ ಬೀಳದಂತೆ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಸಾಂಪ್ರದಾಯಿಕ ಕಾರಣದಿಂದ ಅಲ್ಲಲ್ಲಿ ಬೆಂಕಿ ಬೀಳ್ತಿದೆ. ಬೆಂಕಿ ನಂದಿಸುವ ಬದಲು ಬೆಂಕಿ ಬೀಳದಂತೆ ಕ್ರಮ ಕೈಗೊಳ್ಳುತ್ತೇವೆ. ಅರಣ್ಯ ಇಲಾಖೆಗೆ ಬೆಂಕಿ ನಂದಿಸಲು ಹೆಲಿಕಾಪ್ಟರ್ ಬಳಕೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದಿದ್ದಾರೆ.

    ಒಟ್ಟಾರೆ ಒಂದೆಡೆ ಕಾಡು ಬೆಳೆಸಿ ನಾಡು ಉಳಿಸಿ ಅಂತಾ ಬೊಬ್ಬೆ ಹೊಡೆಯುವ ಸರ್ಕಾರ ತನ್ನ ದಿವ್ಯ ನಿರ್ಲಕ್ಷ್ಯವನ್ನು ಪಕ್ಕಕ್ಕಿಟ್ಟು ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕಿದೆ. ಇದನ್ನೂ ಓದಿ: 2024ಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ದೀಪ‌ ಹಚ್ಚುವುದಕ್ಕೂ ಯಾರೂ ಸಿಗುವುದಿಲ್ಲ: ಕಾರಜೋಳ