Tag: ರಿಲೀಫ್

  • ಗಡಿಪಾರು ಭೀತಿಯಿಂದ ಮತ್ತೆ ನಟ ಚೇತನ್ ಗೆ ರಿಲೀಫ್

    ಗಡಿಪಾರು ಭೀತಿಯಿಂದ ಮತ್ತೆ ನಟ ಚೇತನ್ ಗೆ ರಿಲೀಫ್

    ಸಿಐ ಮಾನ್ಯತೆ ರದ್ದು ಹಿನ್ನೆಲೆಯಲ್ಲಿ ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್‍ಗೆ (Chetan) ಹೈಕೋರ್ಟ್‍ನಿಂದ (High Court) ಈ ಹಿಂದೆ ಷರತ್ತುಬದ್ಧ ರಿಲೀಫ್ (Relief) ದೊರೆತಿತ್ತು. ಸಾಗರೋತ್ತರ ಭಾರತೀಯ ಪ್ರಜೆ ಕಾರ್ಡ್ ರದ್ದುಗೊಳಿಸಿದ್ದ ಆದೇಶದ ತಡೆಯಾಜ್ಞೆಯನ್ನು ಹೈಕೋರ್ಟ್ ಮತ್ತೆ ಶುಕ್ರವಾರ ವಿಸ್ತರಿಸಿದೆ. ಹಾಗಾಗಿ ಗಡಿಪಾರು ಭೀತಿಯಲ್ಲಿದ್ದ ಚೇತನ್ ಗೆ ಹೈಕೋರ್ಟ್ ನಿಂದ ಮತ್ತೆ ರಿಲೀಫ್ ಸಿಕ್ಕಂತಾಗಿದೆ.

    ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಚೇತನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂದಿತ್ತು. ವಾದ ಆಲಿಸಿದ ನ್ಯಾಯಪೀಠ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ವಿಸ್ತರಿಸಿದ್ದಲ್ಲದೇ, ಚೇತನ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿದೆ.  ಇದನ್ನೂ ಓದಿ:‘ಘೋಸ್ಟ್’ ಚಿತ್ರದ ಸೆಟ್ ಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ

    ಚೇತನ್‍ಗೆ 2018ರಲ್ಲಿ ಓವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಆದರೆ ಚೇತನ್ ಮೇಲೆ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನ ಹಾಗೂ ಭಾರತ ವಿರೋಧಿ ಚಟುವಟಿಕೆ ಆರೋಪಗಳಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ (Central Government) ನೋಟಿಸ್ ನೀಡಿ ಉತ್ತರ ಪಡೆದಿತ್ತು. ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಸಿಐ ಕಾರ್ಡ್ ರದ್ದುಪಡಿಸಿತ್ತು.

     

    ಆದರೆ ಚೇತನ್ ಪರ ವಕೀಲರು, ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿರುವುದು ಸರಿಯಲ್ಲವೆಂದು ವಾದಿಸಿದ್ದರು. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಚೇತನ್ ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ತಡೆ ನೀಡದಂತೆ ಕೇಂದ್ರ, ರಾಜ್ಯ ಸರ್ಕಾರದ ವಕೀಲರಾದ ಎಜಿ ಅರುಣ್ ಶ್ಯಾಮ್, ಎಎಸ್ ಜಿ ಶಾಂತಿಭೂಷಣ್ ವಾದಿಸಿದ್ದರು.

  • ಇಂದಿನಿಂದ ರಾಜ್ಯದಲ್ಲಿ ಲಾಕ್‍ಡೌನ್ ರಿಲೀಫ್- ಒಂದೂವರೆ ತಿಂಗ್ಳ ಬಳಿಕ ಮುಕ್ಕಾಲು ಕರ್ನಾಟಕ ಓಪನ್

    ಇಂದಿನಿಂದ ರಾಜ್ಯದಲ್ಲಿ ಲಾಕ್‍ಡೌನ್ ರಿಲೀಫ್- ಒಂದೂವರೆ ತಿಂಗ್ಳ ಬಳಿಕ ಮುಕ್ಕಾಲು ಕರ್ನಾಟಕ ಓಪನ್

    – ಕಂಟೈನ್‍ಮೆಂಟ್ ಝೋನ್‍ನಲ್ಲಿ ಎಲ್ಲವೂ ಬಂದ್

    ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ಸಡಿಲಿಕೆಗೊಂಡಿದ್ದು, ಇಂದಿನಿಂದ ಕರ್ನಾಟಕದಲ್ಲಿ ಲಾಕ್‍ಡೌನ್ ರಿಲೀಫ್ ಸಿಗಲಿದೆ.

    ಕರ್ನಾಟಕದಲ್ಲಿ ಲಾಕ್‍ಡೌನ್ ಭಾಗಶಃ ಸಡಿಲವಾಗಿದ್ದು, ಒಂದೂವರೆ ತಿಂಗಳ ಬಳಿಕ ಮುಕ್ಕಾಲು ಕರ್ನಾಟಕ ಓಪನ್ ಆಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಹೊರತು ಪಡಿಸಿ ಉಳಿದ ಕಡೆ ರಿಲೀಫ್ ಸಿಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಬಿಟ್ಟು ಉಳಿದೆಡೆ ಅಗತ್ಯ ಸೇವೆಗಳು ಲಭ್ಯ ವಾಗಲಿದೆ. ಕಂಟೈನ್‍ಮೆಂಟ್ ಝೋನ್‍ಗಳಲ್ಲಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.

    ಮೂರು ವಲಯಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಹಾಗಾದ್ರೆ ಇಂದಿನಿಂದ ಏನಿರುತ್ತೆ..? ಏನಿರಲ್ಲ..? ಎಂಬುದರ ಕುರಿತು ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.

    ಇಂದಿನಿಂದ ಏನಿರುತ್ತೆ..?
    ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಉಳಿದ ಕಡೆ ಮದ್ಯದಂಗಡಿ ಓಪನ್ ಆಗಲಿದೆ. ಪಾನ್, ಗುಟ್ಕಾ, ಸಿಗರೇಟ್, ಬೀಡಿ ಮಾರಾಟಕ್ಕೆ ಹಾಗೂ ಮದುವೆ, ಶುಭ ಸಮಾರಂಭಗಳಿಗೆ ಅವಕಾಶ (ಗರಿಷ್ಠ 50 ಮಂದಿ) ಅವಕಾಶ ಮಾಡಿಕೊಡಲಾಗಿದೆ.

    ಅಂತ್ಯಕ್ರಿಯೆಯಲ್ಲಿ 20 ಜನ ಪಾಲ್ಗೊಳ್ಳಬಹುದು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಮಾಡಲಾಗಿದೆ. ಅಲ್ಲದೆ ಕೆಲಸದ ಸ್ಥಳಗಳಲ್ಲಿ ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯವಾಗಿದೆ.

    ಏನಿರಲ್ಲ..?
    ರೈಲು, ಮೆಟ್ರೋ, ವಿಮಾನ ಸಂಚಾರ ಇರಲ್ಲ. ಅಂತರ್ ರಾಜ್ಯಗಳ ನಡುವೆ ಬಸ್ ಸಂಚಾರ ಇರಲ್ಲ. ಶಾಲೆ ಕಾಲೇಜು, ದೇಗುಲ, ಆತಿಥ್ಯ ಸೇವೆ ಇರಲ್ಲ. ಥಿಯೇಟರ್, ಶಾಪಿಂಗ್ ಮಾಲ್, ಜಿಮ್, ಈಜುಕೊಳ ಇರಲ್ಲ. ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆ ನಿಷೇಧ ಮಾಡಲಾಗಿದೆ. ಸಾರ್ವಜನಿಕ ಶೌಚಾಲಯ ಬಳಕೆಗೆ ಅವಕಾಶವಿಲ್ಲ.

  • ಶಾಸಕ ಮುನಿರತ್ನಗೆ ಬಿಗ್ ರಿಲೀಫ್

    ಶಾಸಕ ಮುನಿರತ್ನಗೆ ಬಿಗ್ ರಿಲೀಫ್

    ಬೆಂಗಳೂರು: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮವೆಸಗಿದ್ದ ಪ್ರಕರಣದಿಂದ ಮುನಿರತ್ನ ಖುಲಾಸೆಗೊಂಡಿದ್ದಾರೆ.

    ಈ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೇಸ್ ಖುಲಾಸೆಗೊಳಿಸಿ ಆದೇಶ ಪ್ರಕಟಿಸಿದೆ.

    2013ರಲ್ಲಿ ಚುನಾವಣಾ ಅಕ್ರಮ ಎಸಗಿ ಅಧಿಕಾರಿ ರವಿಕುಮಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಮುನಿರತ್ನ ಅವರ ಮೇಲೆ ಕೇಳಿ ಬಂದಿತ್ತು. ಆರೋಪ ಸಾಬೀತು ಪಡಿಸಲು ಸಾಕ್ಷ್ಯಾಧಾರಗಳು ಸಿಗದ ಹಿನ್ನೆಲೆಯಲ್ಲಿ ಪ್ರಕರಣದಿಂದ ಮುನಿರತ್ನ ಅವರು ಖುಲಾಸೆಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಅರ್ಕಾವತಿ ಡಿನೋಟಿಫಿಕೇಷನ್: ಸಿಎಂ ಕುಮಾರಸ್ವಾಮಿಗೆ ಬಿಗ್ ರಿಲೀಫ್

    ಅರ್ಕಾವತಿ ಡಿನೋಟಿಫಿಕೇಷನ್: ಸಿಎಂ ಕುಮಾರಸ್ವಾಮಿಗೆ ಬಿಗ್ ರಿಲೀಫ್

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರಿಗೆ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಯಿಂದ ಹೆಸರು ಕೈಬಿಡುವಂತೆ ಕೋರಿದ್ದ ಅರ್ಜಿಯನ್ನು ಸಂಸದರು, ಶಾಸಕರ ವಿರುದ್ಧ ಪ್ರಕರಣಗಳ ವಿಶೇಷ ನ್ಯಾಯಾಲಯ ಮಾನ್ಯ ಮಾಡಿದೆ.

    ಸಿಎಂ ಕುಮಾರಸ್ವಾಮಿ, ಭೂಮಾಲೀಕರಾದ ಶ್ರೀರಾಮ್, ರವಿ ಪ್ರಕಾಶ್ ಹಾಗೂ ರಾಮಲಿಂಗಂ ಅವರನ್ನು ನ್ಯಾಯಾಧೀಶ ಬಿ.ವಿ.ಪಾಟೀಲ್ ತನಿಖೆಯಿಂದ ಮುಕ್ತ ಮಾಡಿದ್ದಾರೆ. ಮಾಜಿ ಸಚಿವ ಚೆನ್ನಿಗಪ್ಪ ತನಿಖೆಯಿಂದ ಕೈಬಿಡುವಂತೆ ಅರ್ಜಿ ಸಲ್ಲಿಸಿರಲಿಲ್ಲ, ಹೀಗಾಗಿ ಚೆನ್ನಿಗಪ್ಪ ವಿರುದ್ಧ ಮಾತ್ರ ಇದೀಗ ಪ್ರಕರಣ ಉಳಿದುಕೊಂಡಿದೆ.

    ಡಿನೋಟಿಫಿಕೇಷನ್ ಆದ 4 ವರ್ಷದ ಬಳಿಕ ದೂರು ದಾಖಲಾಗಿದೆ. ಉದ್ದೇಶ ಪೂರ್ವಕವಾಗಿ ಅಥವಾ ಲಾಭದಾಯಕವಾಗಿ ಡಿನೋಟಿಫಿಕೇಷನ್ ಮಾಡಿರೋದಕ್ಕೆ ಪೂರಕ ಸಾಕ್ಷ್ಯಾಧಾರಗಳು ಇಲ್ಲ. ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ದೂರು ದಾಖಲು ಮಾಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

    ವಿಶೇಷ ನ್ಯಾಯಾಲಯ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ವಿಚಾರಣೆ ಮುಂದುವರಿಸಬೇಕೆ ಅಥವಾ ಬೇಡವೇ ಎಂಬ ಪ್ರಕರಣದ ತೀರ್ಪನ್ನು ಆಗಸ್ಟ್ 27ಕ್ಕೆ ಕಾಯ್ದಿರಿಸಿತ್ತು.

    ಏನಿದು ಪ್ರಕರಣ?
    ಅರ್ಕಾವತಿ ಬಡಾವಣೆ ಅಭಿವೃದ್ಧಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ವಶಪಡಿಸಿಕೊಂಡಿದ್ದ ಜಮೀನಿನಲ್ಲಿ 3.8ಎಕರೆಯನ್ನು 2007ರಲ್ಲಿ ಡಿನೋಟಿಫೈ ಮಾಡಿದ ಆರೋಪ ಕುಮಾರಸ್ವಾಮಿ ಅವರ ಮೇಲಿತ್ತು. ಅಂದಿನ ಜೆಡಿಎಸ್, ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಸಿ.ಚೆನ್ನಿಗಪ್ಪ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದರು. ಜಮೀನಿನ ಮಾಲೀಕ ಎವಿ ರವಿಪ್ರಕಾಶ್ ಹಾಗೂ ಎವಿ ಶ್ರೀರಾಮ್ ಅವರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಅಕ್ರಮವಾಗಿ ಡಿನೋಟಿಫೈ ಮಾಡಿಕೊಡಲಾಗಿದೆ ಎಂದು ಚಾಮರಾಜನಗರದ ಮಹದೇವಸ್ವಾಮಿ ಎಂಬವರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಪ್ರಕರಣದಲ್ಲಿ ತಮ್ಮ ಹೆಸರನ್ನು ಕೈಬಿಡುವಂತೆ ಕೋರಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಅವರ ಮನವಿ ವಜಾ ಆಗಿತ್ತು. ತನಿಖೆ ನಡೆಯುತ್ತಿರುವಾಗಲೇ ಪ್ರಕರಣವನ್ನು ಸಂಸದರು ಹಾಗೂ ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು.

    ಈ ಪ್ರಕರಣದ ತನಿಖೆಯಿಂದ ತನ್ನನ್ನು ಕೈಬಿಡುವಂತೆ ಕೋರ್ಟ್ ಗೆ ಕುಮಾರಸ್ವಾಮಿ ಜೊತೆ ರವಿಪ್ರಕಾಶ್, ಜ್ಯೋತಿ ರಾಮಲಿಂಗಂ ಮತ್ತು ಶ್ರೀರಾಮ್ ಕೂಡ ಅರ್ಜಿ ಸಲ್ಲಿದ್ದರು. ಆದರೆ ಮಾಜಿ ಸಚಿವ ಚೆನ್ನಿಗಪ್ಪ ಆರೋಪದಿಂದ ಕೈಬಿಡುವಂತೆ ಅರ್ಜಿ ಸಲ್ಲಿಸಿರಲಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv