Tag: ರಿಷಬ್ ಪಂತ್

  • ಧೋನಿ ಅನುಪಸ್ಥಿತಿ ರಿಷಬ್ ಪಂತ್‍ಗೆ ಉತ್ತಮ ಅವಕಾಶ: ವಿರಾಟ್ ಕೊಹ್ಲಿ

    ಧೋನಿ ಅನುಪಸ್ಥಿತಿ ರಿಷಬ್ ಪಂತ್‍ಗೆ ಉತ್ತಮ ಅವಕಾಶ: ವಿರಾಟ್ ಕೊಹ್ಲಿ

    ಜಮೈಕಾ: ವೆಸ್ಟ್ ಇಂಡೀಸ್ ಟೂರ್ನಿಗೆ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಎಂ.ಎಸ್ ಧೋನಿ ಅವರ ಅನುಪಸ್ಥಿತಿ ಯುವ ಆಟಗಾರ ರಿಷಬ್ ಪಂತ್‍ಗೆ ಉತ್ತಮ ಅವಕಾಶ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

    ಫ್ಲೋರಿಡಾದಲ್ಲಿ ವೆಸ್ಟ್ ಇಂಡೀಸ್ ಮತ್ತು ಭಾರತ ನಡುವಿನ ಮೊದಲ ಟಿ-20 ಪಂದ್ಯದ ಮುನ್ನಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ರಿಷಬ್ ಪಂತ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿ ಸ್ಥಿರ ಪ್ರದರ್ಶನ ನೀಡಬೇಕು. ಧೋನಿ ಅವರ ಅನುಪಸ್ಥಿತಿಯಲ್ಲಿ ಅವರು ಚೆನ್ನಾಗಿ ಆಡಬೇಕು ಎಂದು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.

    ಎಂ.ಎಸ್ ಧೋನಿ ಅವರು ಅನುಭವ ಯಾವಾಗಲೂ ನಮ್ಮ ತಂಡಕ್ಕೆ ಬೇಕು. ಆದರೆ ಅವರ ಅನುಪಸ್ಥಿತಿ ರಿಷಬ್ ಪಂತ್ ರೀತಿಯ ಯುವ ಆಟಗಾರರಿಗೆ ಒಳ್ಳೆಯ ಅವಕಾಶ. ಇದನ್ನು ಅವರ ಬಳಸಿಕೊಂಡು ಅವರ ಸಾಮರ್ಥ್ಯವನ್ನು ಸಾಬೀತು ಮಾಡಬೇಕು. ನಮಗೆ ಗೊತ್ತು ರಿಷಬ್ ಪಂತ್ ತುಂಬಾ ಒಳ್ಳೆಯ ಆಟಗಾರ. ರಿಷಬ್ ಪಂತ್ ಕೆಳ ಕ್ರಮಾಂಕದಲ್ಲಿ ಸ್ಥಿರ ಪ್ರದರ್ಶನ ನೀಡಬೇಕು ಎಂದು ನಾವು ಬಯಸುತ್ತೇವೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

    ಎಂ.ಎಸ್.ಧೋನಿ ಮತ್ತು ಹಾರ್ದಿಕ್ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ, ರವೀಂದ್ರ ಜಡೇಜಾ, ಕ್ರುನಾಲ್ ಪಾಂಡ್ಯ, ರಿಷಬ್ ಪಂತ್ ಮುಂತಾದವರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯಲ್ಲಿ ಯಾರು ಫಿನಿಶರ್ ಪಾತ್ರವನ್ನು ನಿರ್ವಹಿಸುವ ಅವಕಾಶವನ್ನು ಬಳಸಿಕೊಳ್ಳುತ್ತಾರೆ ನೋಡಬೇಕು ಎಂದು ಕೊಹ್ಲಿ ಹೇಳಿದ್ದಾರೆ.

    ಈ ಪ್ರವಾಸದಲ್ಲಿ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ ಮತ್ತು ಧೋನಿ ವಿಶ್ವಕಪ್ ನಂತರ 2 ತಿಂಗಳ ವಿಶ್ರಾಂತಿ ತೆಗೆದುಕೊಂಡಿದ್ದು, ಕಾಶ್ಮೀರ ಕಣಿವೆಯಲ್ಲಿ ಭಾರತೀಯ ಸೇನೆಯೊಂದಿಗೆ ತರಬೇತಿ ಪಡೆಯುತ್ತಿದ್ದಾರೆ. ಈ ಇಬ್ಬರು ಕೆಳ ಕ್ರಮಾಂಕದ ಬ್ಯಾಟ್ಸ್‍ಮನ್‍ಗಳ ಅನುಪಸ್ಥಿತಿಯಲ್ಲಿ, ಈ ಟೂರ್ನಿಯಲ್ಲಿ ಯಾರು ಚೆನ್ನಾಗಿ ಆಡುತ್ತಾರೆ ನೋಡಬೇಕಿದೆ.

    ಈ ನಿಟ್ಟಿನಲ್ಲಿ ಮುಂದಿನ ವರ್ಷ ನಡೆಯಲಿರುವ ಟಿ-20 ವಿಶ್ವಕಪ್‍ಗಾಗಿ ಭಾರತ ತಂಡವನ್ನು ಸಿದ್ಧ ಮಾಡಲು ನಾವು ಮುಂದಾಗಿದ್ದೇವೆ. ಮುಂದಿನ ದಿನಗಳಲ್ಲಿ ರಿಷಭ್ ಪಂತ್‍ಗೆ ಎಲ್ಲಾ ಮೂರು ಸ್ವರೂಪಗಳಲ್ಲಿ ಹೆಚ್ಚಿನ ಅವಕಾಶಗಳನ್ನು ನೀಡುತ್ತಿದ್ದೇವೆ ಎಂದು ಭಾರತೀಯ ಆಯ್ಕೆ ಅಮಿತಿ ಮುಖ್ಯಸ್ಥ ಎಂಎಸ್‍ಕೆ ಪ್ರಸಾದ್ ಸುಳಿವು ನೀಡಿದ್ದರು.

    ವೆಸ್ಟ್ ಇಂಡೀಸ್ ಪ್ರವಾಸದ ವೇಳಾಪಟ್ಟಿ ಇಂತಿದೆ.

    1. ಟಿ-20 ಸರಣಿ
    * ಆಗಸ್ಟ್ 3 (ಶನಿವಾರ) ಮೊದಲ ಟಿ-20 ಫ್ಲೋರಿಡಾದ ಫೋರ್ಟ್ ಲಾಡರ್ಹಿಲ್ ಮೈದಾನ- ಸಮಯ-ರಾತ್ರಿ 8 ಗಂಟೆ (ಭಾರತೀಯ ಕಾಲಮಾನ)
    * ಆಗಸ್ಟ್ 4 (ಭಾನುವಾರ) ಫ್ಲೋರಿಡಾದ ಫೋರ್ಟ್ ಲಾಡರ್ಹಿಲ್ ಮೈದಾನ- ಸಮಯ, ರಾತ್ರಿ 8 ಗಂಟೆ (ಭಾರತೀಯ ಕಾಲಮಾನ)
    * ಆಗಸ್ಟ್ 6 (ಮಂಗಳವಾರ) ಗಯಾನಾದ ಪ್ರಾವಿಡೆನ್ಸ್ ಮೈದಾನ- ಸಮಯ-ರಾತ್ರಿ 8 ಗಂಟೆ (ಭಾರತೀಯ ಕಾಲಮಾನ)

    ಟಿ-20 ತಂಡ:
    ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಹಾಗೂ ನವದೀಪ್ ಸೈನಿ.

    2. ಏಕದಿನ ಸರಣಿ
    * ಆಗಸ್ಟ್ 8 (ಗುರುವಾರ) ಮೊದಲನೇ ಏಕದಿನ- ಗಯಾನಾದ ಪ್ರಾವಿಡೆನ್ಸ್ ಮೈದಾನ- ರಾತ್ರಿ 7 ಗಂಟೆ (ಭಾರತೀಯ ಕಾಲಮಾನ)
    * ಆಗಸ್ಟ್ 11 (ಭಾನುವಾರ) ಎರಡನೇ ಏಕದಿನ- ಟ್ರಿನಿಡಾಡ್‍ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನ- ರಾತ್ರಿ 7 ಗಂಟೆ (ಭಾರತೀಯ ಕಾಲಮಾನ)
    * ಆಗಸ್ಟ್ 14 (ಬುಧವಾರ) ಮೂರನೇ ಏಕದಿನ- ಟ್ರಿನಿಡಾಡ್‍ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನ- ರಾತ್ರಿ 7 ಗಂಟೆ (ಭಾರತೀಯ ಕಾಲಮಾನ)

    ಏಕದಿನ ತಂಡ:
    ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಕೇದಾರ್ ಜಾಧವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ ಹಾಗೂ ನವದೀಪ್ ಸೈನಿ.

    3. ಟೆಸ್ಟ್ ಸರಣಿ
    * ಆಗಸ್ಟ್ 22 ಗುರುವಾರ ದಿಂದ ಆಗಸ್ಟ್ 26 ಸೋಮವಾರದ ವರಗೆ 1 ನೇ ಟೆಸ್ಟ್ ಆಂಟಿಗುವಾದ ಸರ್ ವಿವಿಯನ್ ರಿಚಡ್ರ್ಸ್ ಮೈದಾನದಲ್ಲಿ
    * ಆಗಸ್ಟ್ 30 ಶುಕ್ರವಾರದಿಂದ ಸೆಪ್ಟೆಂಬರ್ 03 ಮಂಗಳವಾರದ ವರೆಗೆ 2 ನೇ ಟೆಸ್ಟ್ ಜಮೈಕಾದ ಸಬಿನಾ ಪಾರ್ಕ್ ಮೈದಾನದಲ್ಲಿ

    ಟೆಸ್ಟ್ ತಂಡ:
    ವಿರಾಟ್ ಕೊಹ್ಲಿ (ನಾಯಕ) ರೋಹಿತ್ ಶರ್ಮಾ (ಉಪನಾಯಕ), ಅಜಿಂಕ್ಯ ರಹಾನೆ, ಮಯಾಂಕ್ ಅಗರ್ವಾಲ್, ಕೆ. ಎಲ್.ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಹಾಗೂ ಉಮೇಶ್ ಯಾದವ್.

  • ಧೋನಿಯಂತಹ ಪ್ರಸಿದ್ಧ ಆಟಗಾರನಿಗೆ ಯಾವಾಗ ನಿವೃತ್ತಿ ಹೊಂದಬೇಕು ಗೊತ್ತು – ಎಂಎಸ್‍ಕೆ ಪ್ರಸಾದ್

    ಧೋನಿಯಂತಹ ಪ್ರಸಿದ್ಧ ಆಟಗಾರನಿಗೆ ಯಾವಾಗ ನಿವೃತ್ತಿ ಹೊಂದಬೇಕು ಗೊತ್ತು – ಎಂಎಸ್‍ಕೆ ಪ್ರಸಾದ್

    ನವದೆಹಲಿ: ಎಂ.ಎಸ್ ಧೋನಿಯಂತಹ ಪ್ರಸಿದ್ಧ ಆಟಗಾರನಿಗೆ ಯಾವಾಗ ನಿವೃತ್ತಿ ಹೊಂದಬೇಕು ಎಂಬುದು ಗೊತ್ತು ಎಂದು ಭಾರತದ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಹೇಳಿದ್ದಾರೆ.

    ಎಂಎಸ್‍ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಇಂದು ಮುಂಬೈನಲ್ಲಿ ಸಭೆ ಸೇರಿ ಆಗಸ್ಟ್ 2ರಿಂದ ಭಾರತದ ಮತ್ತು ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಏಕದಿನ, ಟಿ-20 ಮತ್ತು ಟೆಸ್ಟ್ ಸರಣಿಯ ತಂಡಗಳನ್ನು ಆಯ್ಕೆ ಮಾಡಿದರು.

    ಈ ವೇಳೆ ಧೋನಿ ವಿಚಾರದ ಬಗ್ಗೆ ಮಾತನಾಡಿರುವ ಎಂ.ಎಸ್.ಕೆ ಪ್ರಸಾದ್, ನಿವೃತ್ತಿ ಎಂಬುದು ಆಟಗಾರ ವೈಯಕ್ತಿಕ ವಿಷಯವಾಗಿದ್ದು, ಅವರೇ ಆ ಬಗ್ಗೆ ನಿರ್ಧಾರ ಮಾಡಬೇಕು. ಅದ್ದರಿಂದ ಧೋನಿಯಂತಹ ಅನುಭವಿ ಆಟಗಾರರಿಗೆ ಯಾವಾಗ ನಿವೃತ್ತಿ ಹೊಂದಬೇಕು ಎಂಬುದು ಗೊತ್ತು ಎಂದು ಹೇಳಿದ್ದಾರೆ.

    ಎಂಎಸ್ ಧೋನಿ ಅವರು ಈ ಸರಣಿಗೆ ಲಭ್ಯವಿಲ್ಲ. ಅವರು ಈ ಸರಣಿಗೆ ತಮ್ಮ ಅಲಭ್ಯತೆಯನ್ನು ವ್ಯಕ್ತಪಡಿಸಿದ್ದಾರೆ. ಈ ವೇಳೆ ಧೋನಿ ಅವರ ಬದಲು ಮೂರು ಮಾದರಿಯ ಕ್ರಿಕೆಟ್‍ಗೂ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಿಕೊಂಡಿರುವ ಬಗ್ಗೆ ಸ್ಪಷ್ಟನೆ ನೀಡಿ ಈ ಬಾರಿಯ ವಿಶ್ವಕಪ್ ನಂತರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಅದ್ದರಿಂದ ರಿಷಬ್ ಪಂತ್ ಅವರಿಗೆ ಹೆಚ್ಚಿನ ಅವಕಾಶ ನೀಡಿ ಅವರನ್ನು ಮುಂದಿನ ಯೋಜನೆಗಳಿಗೆ ತಯಾರಿ ಮಾಡುತ್ತಿದ್ದೇವೆ ಎಂದು ಹೇಳಿದರು.

    ವಿಶ್ವಕಪ್‍ನಲ್ಲಿ ಎಂ ಎಸ್ ಧೋನಿ ಅವರ ಸ್ಟ್ರೈಕ್ ರೇಟ್ ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಆದರ ಬಗ್ಗೆ ಈಗ ಮಾತನಾಡುವುದು ಸೂಕ್ತವಲ್ಲ. ಆದರೆ ಭಾರತ ತಂಡದಲ್ಲಿ ಯುವ ಆಟಗಾರರನ್ನು ಸಿದ್ಧ ಮಾಡಲು ಹೊರಟಿದ್ದೇವೆ. ಅದ್ದರಿಂದ ರಿಷಬ್ ಪಂತ್‍ಗೆ ಮೂರು ಮಾದರಿಯ ಪಂದ್ಯಗಳಲ್ಲೂ ವಿಕೆಟ್ ಕೀಪರ್ ಆಗಿ ಅವಕಾಶ ನೀಡಿದ್ದೇವೆ ಎಂದರು.

    ಧೋನಿ ಟೆರಿಟೋರಿಯಲ್ ಆರ್ಮಿಯ ಪ್ಯಾರಾಶೂಟ್ ರೆಜಿಮೆಂಟ್‍ನ ಕರ್ನಲ್ ಆಗಿದ್ದಾರೆ. ಹಾಗಾಗಿ ತಮ್ಮ ಎರಡು ತಿಂಗಳ ರಜೆಯನ್ನು ರೆಜಿಮೆಂಟ್ ನಲ್ಲಿ ಕಳೆಯಲಿದ್ದಾರೆ. ಧೋನಿ ಅವರೇ ಸ್ವಇಚ್ಛೆಯಿಂದ ವೆಸ್ಟ್ ಇಂಡೀಸ್ ಜೊತೆಗಿನ ಪಂದ್ಯಕ್ಕೆ ಅಲಭ್ಯರಾಗುತ್ತಿದ್ದಾರೆ. ತಮ್ಮ ಎರಡು ತಿಂಗಳ ರಜಾವಧಿಯನ್ನು ಪ್ಯಾರಾಮಿಲಿಟ್ರಿ ರೆಜಿಮೆಂಟ್ ಜೊತೆ ವ್ಯಯಿಸಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದರು.

    ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಮೂರು ಮಾದರಿಯ ಪಂದ್ಯಗಳಿಗೂ ಆಟಗಾರನ್ನು ಆಯ್ಕೆ ಮಾಡಿದ್ದು, ಆಟಗಾರರ ಪಟ್ಟಿ ಇಂತಿದೆ.

    ಟೆಸ್ಟ್ ತಂಡ:
    ವಿರಾಟ್ ಕೊಹ್ಲಿ (ನಾಯಕ) ರೋಹಿತ್ ಶರ್ಮಾ (ಉಪನಾಯಕ), ಅಜಿಂಕ್ಯ ರಹಾನೆ, ಮಯಾಂಕ್ ಅಗರ್ವಾಲ್, ಕೆ. ಎಲ್.ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ ಹಾಗೂ ಉಮೇಶ್ ಯಾದವ್.

    ಏಕದಿನ ತಂಡ:
    ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಕೇದಾರ್ ಜಾಧವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ ಹಾಗೂ ನವದೀಪ್ ಸೈನಿ.

    ಟಿ-20 ತಂಡ:
    ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಹಾಗೂ ನವದೀಪ್ ಸೈನಿ.

  • ಧೋನಿಯನ್ನು ಯಾವ ಕ್ರಮಾಂಕದಲ್ಲಿ ಕಳುಹಿಸಬೇಕು – ಕೊಹ್ಲಿ, ರವಿಶಾಸ್ತ್ರಿ ಚರ್ಚೆ ವಿಡಿಯೋ ವೈರಲ್

    ಧೋನಿಯನ್ನು ಯಾವ ಕ್ರಮಾಂಕದಲ್ಲಿ ಕಳುಹಿಸಬೇಕು – ಕೊಹ್ಲಿ, ರವಿಶಾಸ್ತ್ರಿ ಚರ್ಚೆ ವಿಡಿಯೋ ವೈರಲ್

    ಲಂಡನ್: ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತು ಟೂರ್ನಿಯಿಂದ ಹೊರ ನಡೆದಿದ್ದು ಎಲ್ಲರಿಗೂ ತಿಳಿದ ಸಂಗತಿ. ಆದರೆ ಟೀಂ ಇಂಡಿಯಾ ಪಂದ್ಯದಲ್ಲಿ ಎಡವಿದ್ದು ಎಲ್ಲಿ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆದಿದೆ. ಇದೇ ಸಂದರ್ಭದಲ್ಲಿ ಕೊಹ್ಲಿ ಹಾಗೂ ಕೋಚ್ ರವಿಶಾಸ್ತ್ರಿ ನಡುವಿನ ಚರ್ಚೆಯ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗುತ್ತಿದೆ.

    ಪಂದ್ಯದಲ್ಲಿ ಕೊಹ್ಲಿ ಹಾಗೂ ರವಿಶಾಸ್ತ್ರಿ ನಡುವೆ ನಿರ್ಧಾರ ಕೈಗೊಳ್ಳುವಲ್ಲಿ ಭಿನ್ನಭಿಪ್ರಾಯ ವ್ಯಕ್ತಪಡಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಪ್ರಮುಖವಾಗಿ ಧೋನಿ ಅವರ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಇಬ್ಬರ ನಡುವೆ ಚರ್ಚೆ ನಡೆದಿದೆ.

    ಪಂದ್ಯದಲ್ಲಿ ಧೋನಿ ಅವರನ್ನು ನಂ.7 ಕ್ರಮಾಂಕದಲ್ಲಿ ಕಳುಹಿಸಿಕೊಡಲಾಗಿತ್ತು. ಇದಕ್ಕೂ ಮುನ್ನ ದಿನೇಶ್ ಕಾರ್ತಿಕ್ ಔಟಾಗುತ್ತಿದಂತೆ 5ನೇ ಸ್ಥಾನದಲ್ಲಿ ರಿಷಬ್ ಪಂತ್ ಬ್ಯಾಟಿಂಗ್ ನಡೆಸಿದ್ದರು. ಆದರೆ 33 ರನ್ ಗಳಿಸಿ ರಿಷಬ್ ಔಟಾಗುತ್ತಿದಂತೆ ಕೋಚ್ ಬಳಿ ಬಂದ ಕೊಹ್ಲಿ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ, ಪಂತ್, ಜಡೇಜಾ ಮತ್ತು ಧೋನಿ ಮಾತ್ರ ಎರಡಂಕ್ಕಿ ತಲುಪಿದ್ದರು.

    ಇತ್ತ ರೋಚಕ ಹಂತದಲ್ಲಿ ಧೋನಿ ಔಟಾಗುತ್ತಿದಂತೆ ತಂಡ ಸೋಲುಂಡಿತ್ತು. ಇದರೊಂದಿಗೆ ಮೊದಲ ಬಾರಿಗೆ ವಿಶ್ವಕಪ್ ಗೆಲ್ಲುವ ಅವಕಾಶ ಪಡೆದುಕೊಂಡಿತು. ನಿನ್ನೆ ನಡೆದ ಆಸ್ಟ್ರೇಲಿಯಾ, ಇಂಗ್ಲೆಂಡ್ ನಡುವಿನ ಪಂದ್ಯದಲ್ಲಿ ಇಂಗ್ಲೆಂಡ್ ಫೈನಲ್ ಪ್ರವೇಶಿಸಿದೆ.

    ಈ ಬಾರಿ ಇತ್ತಂಡಗಳಲ್ಲಿ ಯಾವುದೇ ತಂಡ ವಿಶ್ವಕಪ್ ಗೆದ್ದರೂ ಕೂಡ ಇತಿಹಾಸ ಸೃಷ್ಟಿಯಾಗಲಿದೆ. 27 ವರ್ಷ ಅಂದರೆ 27 ವರ್ಷದ ಬಳಿಕ ಇಂಗ್ಲೆಂಡ್ ಫೈನಲ್ ಪ್ರವೇಶ ಮಾಡಿದೆ. ಇತ್ತ 2015 ರಲ್ಲಿ ಕಿವೀಸ್ ಫೈನಲ್ ತಲುಪಿತ್ತು. ಇದುವರೆಗೂ ವಿಶ್ವಕಪ್‍ನಲ್ಲಿ ಆಸ್ಟ್ರೇಲಿಯಾ 5 ಬಾರಿ ವಿಶ್ವಕಪ್ ಗೆಲುವು ಪಡೆದಿದ್ದು, ವೆಸ್ಟ್ ಇಂಡೀಸ್ ಮತ್ತು ಭಾರತ ತಲಾ 2 ಬಾರಿ, ಶ್ರೀಲಂಕಾ, ಪಾಕಿಸ್ತಾನ 1 ಬಾರಿ ವಿಶ್ವಕಪ್ ಗೆಲುವು ಪಡೆದಿದೆ. ಜುಲೈ 14 ರಂದು ವಿಶ್ವಕಪ್ ಫೈನಲ್ ನಡೆಯಲಿದ್ದು, ಇತ್ತಂಡಗಳು ಕಪ್ ಗೆಲ್ಲುವ ಆತ್ಮವಿಶ್ವಾಸದಲ್ಲಿ ಇದೆ.

  • ರಿಷಬ್ ಪಂತ್ ಮೇಲಿರುವ ಕೈ ಯಾರದ್ದು?

    ರಿಷಬ್ ಪಂತ್ ಮೇಲಿರುವ ಕೈ ಯಾರದ್ದು?

    ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಜಯದ ಪತಾಕೆಯನ್ನು ಹಾರಿಸಿ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಬಾಂಗ್ಲಾದೇಶದ ವಿರುದ್ಧ ಗೆಲುವು ದಾಖಲಿಸಿರುವ ಟೀಂ ಇಂಡಿಯಾ ಶನಿವಾರ ರಿಲ್ಯಾಕ್ಸ್ ಮೂಡ್‍ಗೆ ಜಾರಿತ್ತು. ಲಂಡನ್ ನಗರದಲ್ಲಿ ಸುತ್ತಾಡಿದ ಟೀಂ ಇಂಡಿಯಾ ಆಟಗಾರರು ಫುಲ್ ಎಂಜಾಯ್ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ತಮ್ಮ ಟ್ವಿಟ್ಟರ್ ನಲ್ಲಿ ಫೋಟೋ ಅಪ್ಲೋಡ್ ಮಾಡಿಕೊಂಡಿದ್ದು, ರಿಷಬ್ ಪಂತ್ ಎಡ ಭುಜದ ಮೇಲಿರುವ ಕೈ ಯಾರದ್ದು ಎಂದು ನೆಟ್ಟಿಗರು ಫುಲ್ ಕನ್‍ಫ್ಯೂಸ್ ಆಗಿದ್ದಾರೆ.

    ಹಾರ್ದಿಕ್ ಪಾಂಡ್ಯ ತೆಗೆದುಕೊಂಡಿರುವ ಸೆಲ್ಫಿಯಲ್ಲಿ ಮಹೇಂದ್ರ ಸಿಂಗ್ ಧೋನಿ, ಮಯಂಕ್ ಅಗರ್‍ವಾಲ್, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರನ್ನು ಕಾಣಬಹುದು. ‘ಬಾಯ್ಸ್ ಡೇ ಔಟ್’ ಕ್ಯಾಪ್ಷನ್ ನೀಡಿ ಪಾಂಡ್ಯವನ್ನು ಫೋಟೋ ಅಪ್ಲೋಡ್ ಮಾಡಿಕೊಂಡಿದ್ದಾರೆ.

    ಫೋಟೋ ನೋಡಿದ ಅಭಿಮಾನಿಗಳು ರಿಷಬ್ ಮೇಲಿರುವ ಕೈ ಬಗ್ಗೆ ತಮ್ಮದೇ ಆದ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕೆಲವರು ಅದೊಂದು ಎಡಿಟೆಡ್ ಅಂದ್ರೆ, ಹಲವರು ಮ್ಯಾಜಿಕ್, ಭೂತ ಎಂದು ಫನ್ನಿಯಾಗಿ ಕಮೆಂಟ್ ಮಾಡಿದ್ದಾರೆ.

    ವಿಶ್ವಕಪ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ಭಾರತ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಜುಲೈ 09 ರಂದು ನ್ಯೂಜಿಲೆಂಡ್ ತಂಡವನ್ನು ಎದುರಿಸುತ್ತಿದೆ. ವಿಶೇಷ ಎಂದರೆ ಈ ಪಂದ್ಯ ನಾಯಕ ವಿರಾಟ್ ಕೊಹ್ಲಿ ಹಾಗೂ ಕೇನ್ ವಿಲಿಯಮ್ಸನ್ ಅವರಿಗೆ ಬಹು ಮುಖ್ಯವಾಗಿದ್ದು, 2008 ಅಂಡರ್ 19 ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ಇಬ್ಬರು ಮುಖಾಮುಖಿಯಾಗಿದ್ದರು. ಬರೋಬ್ಬರಿ 11 ವರ್ಷಗಳ ಬಳಿಕ ಮತ್ತೆ ತಂಡದ ಜವಾಬ್ದಾರಿಯೊಂದಿಗೆ ಹೋರಾಟಕ್ಕೆ ಸಿದ್ಧವಾಗಿದ್ದಾರೆ.

  • ವಿಶ್ವಕಪ್ ಟೂರ್ನಿಗೆ ರಿಷಬ್ ಪಂತ್ ಪಾದಾರ್ಪಣೆ – ಹೀಗಿದೆ ಅಭಿಮಾನಿಗಳ ರಿಯಾಕ್ಷನ್

    ವಿಶ್ವಕಪ್ ಟೂರ್ನಿಗೆ ರಿಷಬ್ ಪಂತ್ ಪಾದಾರ್ಪಣೆ – ಹೀಗಿದೆ ಅಭಿಮಾನಿಗಳ ರಿಯಾಕ್ಷನ್

    ಲಂಡನ್: ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡುವ ಮೂಲಕ ವಿಶ್ವಕಪ್ ಟೂರ್ನಿಗೆ ಪಾದಾರ್ಪಣೆ ಮಾಡಿದ್ದಾರೆ.

    ಟೂರ್ನಿಯ ಕಳೆದ 2 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲರಾದ ವಿಜಯ್ ಶಂಕರ್ ಅವರಿಗೆ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೆ ಕೊಕ್ ನೀಡಲಾಗಿದ್ದು, 21 ವರ್ಷದ ರಿಷಬ್ ಪಂತ್ ಅವರಿಗೆ ಸ್ಥಾನ ನೀಡಲಾಗಿದೆ. ಶಂಕರ್ ಕಳೆದ ಎರಡು ಪಂದ್ಯಗಳಲ್ಲಿ 58 ರನ್ ಗಳಿಸಿ, 2 ವಿಕೆಟ್ ಪಡೆದಿದ್ದಾರೆ. ಟೀಂ ಇಂಡಿಯಾ ಪರ ಕೇವಲ 5 ಏಕದಿನ ಪಂದ್ಯಗಳನ್ನು ಆಡಿರುವ ರಿಷಬ್ 93 ರನ್ ಗಳಿಸಿದ್ದಾರೆ.

    ಶಿಖರ್ ಧವನ್ ಗಾಯಗೊಂಡ ಬಳಿಕ ತಂಡಕ್ಕೆ ಸೇರ್ಪಡೆಯಾಗಿದ್ದ ರಿಷಬ್ ಪಂತ್ ಅವರಿಗೆ ವಿಶ್ವಕಪ್ ನಲ್ಲಿ ದೊರೆತ ಮೊದಲ ಅವಕಾಶ ಇದಾಗಿದ್ದು, ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ. ಕಳೆದ ಬಾರಿ ಇಂಗ್ಲೆಂಡ್ ಟೂರ್ನಿಯಲ್ಲಿ ಭಾಗವಹಿಸಿದ್ದ ರಿಷಬ್, ಉತ್ತಮ ಪ್ರದರ್ಶನ ನೀಡಿ ಆಯ್ಕೆ ಸಮಿತಿ ಗಮನ ಸೆಳೆದಿದ್ದರು. ಸದ್ಯ ರಿಷಬ್ ಪಂತ್ ಅವರಿಗೆ ಸ್ಥಾನ ನೀಡಿರುವುದರಿಂದ ದಿನೇಶ್ ಕಾರ್ತಿಕ್ ಅವಕಾಶ ವಂಚಿತರಾಗಿದ್ದಾರೆ.

    ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನವೇ ರಿಷಬ್ ಪಂತ್ ಅವಕಾಶ ನೀಡಲು ಹಲವು ಹಿರಿಯ ಆಟಗಾರರು ಸಲಹೆ ನೀಡಿದ್ದರು. ಆ ಮೂಲಕ ರಿಷಬ್ ಪಂತ್ ಪರ ಬ್ಯಾಟ್ ಬೀಸಿದ್ದರು. ಇಂಗ್ಲೆಂಡ್ ವಾತಾವರಣದಲ್ಲಿ ಆಡಲು ರಿಷಬ್ ಪಂತ್ ಸೂಕ್ತ ಎಂಬ ಅಭಿಪ್ರಾಯ ಕೇಳಿ ಬಂದಿತ್ತು. ಇತ್ತ ಆಯ್ಕೆ ಸಮಿತಿ ರಿಷಬ್ ಪಂತ್ ಅವರಿಗೆ ಸ್ಥಾನ ನೀಡಿರುವುದಕ್ಕೆ ಹಲವು ಮಂದಿ ವಿವಿಧ ರೀತಿಯ ಮಿಮ್ಸ್‍ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಕೆಲವರು ದಿನೇಶ್ ಕಾರ್ತಿಕ್ ಪರ ಬ್ಯಾಟ್ ಬೀಸಿದ್ದರೆ, ಮತ್ತೆ ಕೆಲವರು ಆಯ್ಕೆ ಸಮಿತಿಯ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

    https://twitter.com/PantArmy/status/1145259190971035649

    https://twitter.com/Uthaleredeva92/status/1145261606026137600

  • ವಿಶ್ವಕಪ್ ಟೂರ್ನಿಯಿಂದಲೇ ಧವನ್ ಔಟ್

    ವಿಶ್ವಕಪ್ ಟೂರ್ನಿಯಿಂದಲೇ ಧವನ್ ಔಟ್

    ಲಂಡನ್: ವಿಶ್ವಕಪ್ ಟೂರ್ನಿಯ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಟೀಂ ಇಂಡಿಯಾ ಸ್ಫೋಟಕ ಆರಂಭಿಕ ಆಟಗಾರ ಶಿಖರ್ ಧವನ್ ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ.

    ಬಿಸಿಸಿಐ ಈ ಕುರಿತು ಖಚಿತ ಪಡಿಸಿದ್ದು, ಐಸಿಸಿಗೆ ಧವನ್ ಸ್ಥಾನದಲ್ಲಿ ರಿಷಬ್ ಪಂತ್ ರನ್ನ ಪಡೆಯಲು ಅನುಮತಿ ಕೋರಿದೆ. ಕೆಲ ಸಮಯದಿಂದ ಇಂಗ್ಲೆಂಡ್‍ನಲ್ಲೇ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆದಿದ್ದ ಧವನ್ ಟೂರ್ನಿಗೆ ಸಂರ್ಪೂಣರಾಗಿ ಅಲಭ್ಯರಾಗಿದ್ದಾರೆ.

    ಜೂನ್ 09 ರಂದು ನಡೆದ ಪಂದ್ಯದಲ್ಲಿ ಧವನ್ ತಮ್ಮ ಕೈ ಬೆರಳಿಗೆ ಗಾಯ ಮಾಡಿಕೊಂಡಿದ್ರು. ಆ ಬಳಿಕ ರಿಷಬ್ ಪಂತ್, ಧವನ್ ಸ್ಥಾನದಲ್ಲಿ ಇಂಗ್ಲೆಂಡ್‍ಗೆ ತೆರಳಿದರು. ಆದರೆ ಧವನ್ ಚೇತರಿಕೆ ಆಗುವ ವಿಶ್ವಾಸ ಹೊಂದಿದ್ದರಿಂದ ಅವರನ್ನು ಅಲ್ಲೇ ಉಳಿಸಿಕೊಳ್ಳಲಾಗಿತ್ತು. ಸದ್ಯ ಅವರಿಗೆ ಆಗಿರುವ ಗಾಯದಿಂದ ಚೇತರಿಕೆ ಕಾಣುವುದು ಕಷ್ಟಸಾಧ್ಯವಾಗಿರುವ ಪರಿಣಾಮ ಟೂರ್ನಿಯಿಂದ ಹೊರಗುಳಿಯಲಿದ್ದಾರೆ. ಐಸಿಸಿ ಟೂರ್ನಿಗಳಲ್ಲಿ ಧವನ್ ಉತ್ತಮ ಪ್ರದರ್ಶನ ನೀಡಿದ್ದು, ಇದುವರೆಗೂ ಆಡಿರುವ 20 ಇನ್ನಿಂಗ್ಸ್ ಗಳಲ್ಲಿ 65.16ರ ಸರಾಸರಿಯಲ್ಲಿ 1,238 ರನ್ ಗಳಿಸಿದ್ದಾರೆ. ಇದರಲ್ಲಿ 6 ಶತಕ ಹಾಗೂ 4 ಅರ್ಧ ಶತಕಗಳು ದಾಖಲಾಗಿದೆ.

    ಜೂನ್ 16 ರಂದು ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಧವನ್ ಅವರ ಸ್ಥಾನದಲ್ಲಿ ಬಡ್ತಿ ಪಡೆದ ಕೆಎಲ್ ರಾಹುಲ್ ಸ್ಥಾನ ಬ್ಯಾಟಿಂಗ್ ನಡೆಸಿದ್ದರು. ರೋಹಿತ್, ರಾಹುಲ್ ಜೋಡಿ ಉತ್ತಮ ಆರಂಭ ನೀಡಿ ಆಯ್ಕೆ ಸಮಿತಿಯ ಗಮನ ಸೆಳೆದಿತ್ತು. ಅಲ್ಲದೇ ಪಂದ್ಯದಲ್ಲಿ ಅರ್ಧ ಶತಕ ಗಳಿಸಿದ್ದ ರಾಹುಲ್, ತಾವು ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸಲು ಸಿದ್ಧ ಎಂದು ಸಾಬೀತು ಪಡಿಸಿದ್ದರು.

    ವಿಶ್ವಕಪ್ ಟೂರ್ನಿಯ ಮುಂದಿನ ಹಂತದಲ್ಲಿ ಟೀಂ ಇಂಡಿಯಾ ಆಫ್ಘಾನಿಸ್ತಾನ, ಇಂಗ್ಲೆಂಡ್, ಬಾಂಗ್ಲಾದೇಶ ಹಾಗೂ ಶ್ರೀಲಂಕಾ ತಂಡಗಳನ್ನು ಎದುರಿಸಲಿದೆ. ಐಸಿಸಿ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಧವನ್ ಅವರು ಟೂರ್ನಿಯಿಂದ ಹೊರ ಬಿದ್ದಿರುವುದು ತಂಡಕ್ಕೆ ಬಹುದೊಡ್ಡ ನಷ್ಟವಾಗಿದೆ. ಆದರೆ ಆಯ್ಕೆ ಸಮಿತಿ ಯಾವುದೇ ಅಡೆ ತಡೆ ಎದುರಿಸಲು ಸಿದ್ಧತೆ ನಡೆಸಿದ್ದ ಪರಿಣಾಮ ರಾಹುಲ್‍ಗೆ ಬಡ್ತಿ ನೀಡಿ ಆ ಸ್ಥಾನದಲ್ಲಿ ಅಲೌಂಡರ್ ವಿಜಯ್ ಶಂಕರ್ ಅವರಿಗೆ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಸ್ಥಾನ ನೀಡಿತ್ತು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಬೇಬಿ ಜೀವಾಳ ಜೊತೆ ರಿಷಬ್ ಪಂತ್- ಕ್ಯೂಟ್ ವಿಡಿಯೋ ನೋಡಿ

    ಬೇಬಿ ಜೀವಾಳ ಜೊತೆ ರಿಷಬ್ ಪಂತ್- ಕ್ಯೂಟ್ ವಿಡಿಯೋ ನೋಡಿ

    ನವದೆಹಲಿ: ಭಾನುವಾರ ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್‍ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ವಿರುದ್ಧ ಪಂದ್ಯದಲ್ಲಿ ಭಾತರ ಡಕ್ವರ್ಥ್ ಲೂಯಿಸ್ ನಿಯಮದನ್ವಯ 89 ರನ್‍ಗಳ ಭರ್ಜರಿ ಗೆಲುವು ಸಾಧಿಸಿತ್ತು. ಈ ಪಂದ್ಯದ ವೇಳೆ ಎಂ.ಎಸ್ ಧೋನಿ ಅವರ ಪುತ್ರಿ ಜೀವಾ ಮತ್ತು ಭಾತರದ ಆಟಗಾರ ರಿಷಬ್ ಪಂತ್ ಅವರ ಕ್ಯೂಟ್ ವಿಡಿಯೋ ಒಂದು ವೈರಲ್ ಆಗಿದೆ.

    ಪಂದ್ಯದ ಆರಂಭಕ್ಕೂ ಮುನ್ನಾ ಜೀವಾ ಧೋನಿ ಹಾಗೂ ರಿಷಬ್ ಪಂತ್ ಸೇರಿಕೊಂಡು ಮಸ್ತಿ ಮಾಡುತ್ತಿರುವ ವಿಡಿಯೋವನ್ನು ರಿಷಬ್ ಪಂತ್ ಅವರು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿಕೊಂಡಿದ್ದು, ಅಭಿಮಾನಿಗಳು ಈ ವಿಡಿಯೋವನ್ನು ಇಷ್ಟಪಟ್ಟಿದ್ದಾರೆ. ರಿಷಬ್ ಮತ್ತು ಜೀವಾ ಕಿರುಚುತ್ತಿರುವ ವಿಡಿಯೋ ಹಾಕಿರುವ ಪಂತ್ ಕ್ರೈಮ್ ಪಾಟ್ನನರ್ ಎಂದು ಬರೆದುಕೊಂಡಿದ್ದಾರೆ.

    https://www.instagram.com/p/Byx_NZDnu9A/?utm_source=ig_embed&utm_campaign=embed_video_watch_again

    ಭಾರತ ತಂಡದ ಆರಂಭಿಕ ಶಿಖರ್ ಧವನ್ ಅವರು ಗಾಯದ ಸಮಸ್ಯೆಗೆ ತುತ್ತಾದ ಕಾರಣ ರಿಷಬ್ ಪಂತ್ ಅವರನ್ನು ಬದಲಿ ಆಟಗಾರನಾಗಿ ಜೂನ್ 14 ಕ್ಕೆ ಇಂಗ್ಲೆಂಡ್‍ಗೆ ಕರಸಿಕೊಳ್ಳಲಾಗಿದೆ. ಇನ್ನೂ ಅವರು ಭಾರತ ತಂಡದಲ್ಲಿ ಅಧಿಕೃತವಾಗಿ ಸ್ಥಾನ ಪಡೆದಿಲ್ಲ. ಆದರೆ ಭಾನುವಾರದ ಪಂದ್ಯದಲ್ಲಿ ತಮ್ಮ ತಂಡದ ಆಟಗಾರರಿಗೆ ಡ್ರಿಂಕ್ಸ್ ಸಪ್ಲೇಯರ್ ಆಗಿ ಕಾಣಿಸಿಕೊಂಡಿದ್ದಾರೆ.

    ಪಂತ್ ಮಕ್ಕಳ ಜೊತೆ ಆಟವಾಡ್ತಿರೋದು ಇದೇ ಮೊದಲಲ್ಲ. ಈ ಹಿಂದೆ ಪಂತ್ ಬೇಬಿ ಸಿಟ್ಟರ್ ಆಗಿದ್ದರು. ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ವೇಳೆ ಭರ್ಜರಿ ಆಟವಾಡಿದ್ದ ರಿಷಬ್ ಪಂತ್, ಬೇಬಿ ಸಿಟ್ಟರ್ ಎಂಬ ಹೆಸರು ಪಡೆದಿದ್ದರು.

    ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ವೇಳೆ ಕ್ಯಾಪ್ಟನ್ ಟಿಮ್ ಪೈನ್, ಪಂತ್ ರನ್ನು ಬೇಬಿ ಸಿಟ್ಟರ್ ಎಂದು ಕರೆದಿದ್ದರು. ಮನೆಗೆ ಬಂದು ಮಕ್ಕಳನ್ನು ನೋಡಿಕೋ, ನಾನು ನನ್ನ ಪತ್ನಿ ಸಿನಿಮಾಕ್ಕೆ ಹೋಗ್ತೇವೆ ಎಂದಿದ್ದರು. ಮೆಲ್ಬೋರ್ನ್ ಪಂದ್ಯ ಮುಗಿದ ಬಳಿಕ ಟಿಮ್ ಪೈನ್ ಮನೆಗೆ ಹೋಗಿ ಅವರ ಮಕ್ಕಳನ್ನು ಎತ್ತಿಕೊಂಡು ಫೋಟೋಕ್ಕೆ ಫೋಸ್ ನೀಡಿದ್ದರು. ಅಲ್ಲಿಂದ ಅವರಿಗೆ ಬೇಬಿ ಸಿಟ್ಟರ್ ಎಂಬ ಹೆಸರು ಬಂದಿದೆ.

  • ಪಾಕ್ ಪಂದ್ಯಕ್ಕೂ ಮುನ್ನ ಅಭಿಮಾನಿಗಳಿಗೆ ಕೊಹ್ಲಿ ಸಂದೇಶ

    ಪಾಕ್ ಪಂದ್ಯಕ್ಕೂ ಮುನ್ನ ಅಭಿಮಾನಿಗಳಿಗೆ ಕೊಹ್ಲಿ ಸಂದೇಶ

    ಲಂಡನ್: ಪಾಕಿಸ್ತಾನ ವಿರುದ್ಧ ನಾಳೆ ನಡೆಯಲಿರುವ ಕ್ರಿಕೆಟ್ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಪಾಕ್ ವಿರುದ್ಧ ಪಂದ್ಯದ ಬಗ್ಗೆ ಅಭಿಮಾನಿಗಳು ಭಾವುಕರಾಗಬೇಕಿಲ್ಲ. ಎಲ್ಲಾ ವಿಶ್ವಕಪ್ ಪಂದ್ಯಗಳಂತೆ ಇದು ಒಂದು ಪಂದ್ಯ ಅಷ್ಟೇ. ಆಟವನ್ನು ಎಂಜಾಯ್ ಮಾಡಿ ತಂಡಕ್ಕೆ ಜಯ ಸಿಗಲಿದೆ ಎಂದು ಹೇಳಿದ್ದಾರೆ.

    ಪಾಕಿಸ್ತಾನ ತಂಡ ಬಲಿಷ್ಠವಾಗಿದ್ದು, ಸಾಕಷ್ಟು ಅನುಭವಿ ಆಟಗಾರನನ್ನು ಹೊಂದಿದೆ. ಯಾರು ಚೆನ್ನಾಗಿ ಆಡುತ್ತಾರೆ ಅವರಿಗೆ ಗೆಲುವು ಖಚಿತ. ಇಂಗ್ಲೆಂಡ್‍ಗೆ ಆಗಮಿಸಿದ ಬಳಿಕ ಪಾಕ್ ವಿರುದ್ಧ ಪಂದ್ಯದ ಬಗ್ಗೆ ಭಿನ್ನವಾಗಿ ಏನು ಚರ್ಚೆ ನಡೆಸಿಲ್ಲ. ಅಲ್ಲದೇ ಪಂದ್ಯಕ್ಕಾಗಿ ತಂಡದ ಡ್ರೇಸಿಂಗ್ ರೂಮ್ ವಾತಾವರಣವೂ ಬದಲಾಗಿಲ್ಲ. ಎಲ್ಲಾ ಪಂದ್ಯಗಳನ್ನು ಸಮನಾಗಿ ಪರಿಗಣಿಸಿ ದೇಶದ ಪರ ಆಡುತ್ತೇವೆ. ನಮ್ಮ ಸಾಮಥ್ರ್ಯವನ್ನು ಅರಿತು ಆಡುತ್ತೇವೆ ಎಂದರು.

    ಧವನ್ ಅಲಭ್ಯವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೊಹ್ಲಿ, ತಂಡ ಯಾವುದೇ ಒತ್ತಡ ಸಂದರ್ಭಗಳನ್ನು ಎದುರಿಸುವ ಸಾಮಥ್ರ್ಯವನ್ನು ಹೊಂದಿದೆ ಎಂದಿದ್ದಾರೆ. ಇತ್ತ ಪಾಕಿಸ್ತಾನದ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್ ತಂಡವನ್ನು ಸೇರಿಸಿಕೊಂಡಿದ್ದು, ಬಿಸಿಸಿಐ ರಿಷಬ್‍ರ ಫೋಟೋವನ್ನು ಟ್ವೀಟ್ ಮಾಡಿದೆ.

    ತಂಡದಲ್ಲಿ ಬದಲಾವಣೆ: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಆಡುವ 11ರ ಬಳಗದಲ್ಲಿ ಬದಲಾಗುವ ಸಾಧ್ಯತೆ ಇದ್ದು, ಕೆಎಲ್ ರಾಹುಲ್ ಆರಂಭಿಕರಾಗಿ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ.

    ಧವನ್ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿರುವ ಕಾರಣ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಅಥವಾ ವಿಜಯ್ ಶಂಕರ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಬಿಸಿಸಿಐ ಕಾರ್ತಿಕ್‍ರ ಅನುಭಕ್ಕೆ ಮಣೆ ಹಾಕಿ ಅವಕಾಶ ನೀಡಲಿದೆ ಎನ್ನಲಾಗಿದೆ. ಉಳಿದಂತೆ ಪಂದ್ಯದಲ್ಲಿ ಕುಲ್ದೀಪ್ ಯಾದವ್ ಬದಲಾಗಿ ಆಲೌಂಡರ್ ರವೀಂದ್ರ ಜಡೇಜಾ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

  • ಮತ್ತೆ ವಾಪಸ್ ಆಗ್ತೇನೆ ಎಂದು ಕವಿತೆ ಹಂಚಿಕೊಂಡ ಧವನ್

    ಮತ್ತೆ ವಾಪಸ್ ಆಗ್ತೇನೆ ಎಂದು ಕವಿತೆ ಹಂಚಿಕೊಂಡ ಧವನ್

    ಲಂಡನ್: ವಿಶ್ವಕಪ್ ಟೂರ್ನಿಯ ಆಸೀಸ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ತಂಡದಿಂದ ಹೊರ ನಡೆದಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಮತ್ತೆ ವಾಪಸ್ ಬರುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

    ಗಾಯಗೊಂಡ ಬಳಿಕ ಮೊದಲ ಬಾರಿಗೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಧವನ್, ಟ್ವಿಟ್ಟರ್ ನಲ್ಲಿ ಡಾ. ರಾಹತ್ ಇಂದೋರಿ ಅವರ ಕವಿತೆಯನ್ನು ಹಂಚಿಕೊಂಡಿದ್ದು, ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

    ಧವನ್ ಸದ್ಯ ತಂಡದಿಂದ ಹೊರಗುಳಿದಿದ್ದರು ಕೂಡ ಬಿಸಿಸಿಐ ಅವರನ್ನು ಇಂಗ್ಲೆಂಡ್‍ನಲ್ಲಿಯೇ ಉಳಿಸಿಕೊಂಡಿದೆ. ಆ ಮೂಲಕ ಬಹುಬೇಗ ಚೇತರಿಕೆಗೆ ಸಹಕಾರ ಆಗುವಂತೆ ತಜ್ಞ ವೈದ್ಯರಿಂದ ಸಲಹೆ ಪಡೆಯುತ್ತಿದ್ದಾರೆ. ಇತ್ತ ಧವನ್ ಸ್ಥಾನದಲ್ಲಿ ರಿಷಬ್ ಪಂತ್ ಟೀಂ ಇಂಡಿಯಾವನ್ನು ಕೂಡಿಕೊಳ್ಳಲಿದ್ದು, ಪಾಕಿಸ್ಥಾನದ ವಿರುದ್ಧದ ಪಂದ್ಯದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ. ಆದರೆ ಪಂತ್ ಅವಗಿಂತ ಹೆಚ್ಚಿನ ಅನುಭವ ಹೊಂದಿರುವ ದಿನೇಶ್ ಕಾರ್ತಿಕ್ ಆಡುವ 11 ಬಳಗದಲ್ಲಿ ಇದ್ದರು ಅಚ್ಚರಿ ಸಂಗತಿ ಏನು ಅಲ್ಲ.

    ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಪಂದ್ಯಕ್ಕೆ ಇಂದು ಟೀಂ ಇಂಡಿಯಾ ಆಟಗಾರರು ಅಭ್ಯಾಸ ನಡೆಸಿದ್ದು, ಈ ವೇಳೆ ಧವನ್ ಆಟಗಾರರೊಂದಿಗೆ ಕಾಣಿಸಿಕೊಂಡಿದ್ದರು. ಇತ್ತ ವಿಶ್ವಕಪ್ ಟೂರ್ನಿಗಳಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಆಡಿರುವ ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಗೆಲುವು ಪಡೆದಿದ್ದರೆ 4 ರಲ್ಲಿ ಸೋತಿದೆ.

    ವಿಶ್ವಕಪ್ ನಲ್ಲಿ 16 ವರ್ಷಗಳ ಹಿಂದೆ ಅಂದರೆ 2003 ರಲ್ಲಿ ಇತ್ತಂಡಗಳು ಮುಖಾಮುಖಿ ಆಗಿದ್ದವು. ದಕ್ಷಿಣ ಆಫ್ರಿಕಾದ ಸೆಂಚೂರಿಯನ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ 4 ವಿಕೆಟ್ ಕಿತ್ತಿದ್ದ ಜಹೀರ್ ಖಾನ್ ಪಂದ್ಯಶ್ರೇಷ್ಠ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದರು.

  • ಧವನ್ ಬದಲು ಡೆಲ್ಲಿ ಬಾಯ್ ರಿಷಬ್‍ಗೆ ಇಂಗ್ಲೆಂಡ್ ಟಿಕೆಟ್

    ಧವನ್ ಬದಲು ಡೆಲ್ಲಿ ಬಾಯ್ ರಿಷಬ್‍ಗೆ ಇಂಗ್ಲೆಂಡ್ ಟಿಕೆಟ್

    ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ವಿಶ್ವಕಪ್ ಟೂರ್ನಿಯಿಂದ ಮೂರು ವಾರಗಳ ವಿಶ್ರಾಂತಿ ಪಡೆದಿರುವ ಶಿಖರ್ ಧವನ್ ಅವರ ಸ್ಥಾನದಲ್ಲಿ ರಿಷಬ್ ಪಂತ್‍ಗೆ ಸ್ಥಾನ ಸಿಗುವ ಸಾಧ್ಯತೆ ಇದೆ.

    ಬಿಸಿಸಿಐ ಮೂಲಗಳ ಪ್ರಕಾರ ರಿಷಬ್ ಪಂತ್‍ಗೆ ಸ್ಥಾನ ಖಚಿತವಾಗಿದ್ದು, ಈಗಾಗಲೇ ಪಂತ್ ಇಂಗ್ಲೆಂಡ್ ಪ್ರಯಾಣಕ್ಕೆ ಸಿದ್ಧತೆ ನಡೆಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಉತ್ತಮ ಫಾರ್ಮ್ ನಲ್ಲಿದ್ದ ಧವನ್ ಗಾಯಗೊಂಡಿರುವುದು ಟೀಂ ಇಂಡಿಯಾ ಹಿನ್ನೆಡೆಯನ್ನು ಉಂಟಾಗುವಂತೆ ಮಾಡಿದೆ. ವಿಶ್ವಕಪ್ ಆಯ್ಕೆ ವೇಳೆ ದಿನೇಶ್ ಕಾರ್ತಿಕ್ ಆಯ್ಕೆಯಿಂದ ತಂಡದಲ್ಲಿ ರಿಷಬ್ ಸ್ಥಾನ ಕಳೆದುಕೊಂಡಿದ್ದರು. 21 ವರ್ಷದ ರಿಷಬ್‍ಗೆ ಸದ್ಯ 48 ಗಂಟೆಗಳ ಒಳಗೆ ಇಂಗ್ಲೆಂಡ್‍ಗೆ ಪ್ರಯಾಣ ಆರಂಭಿಸಲಿದ್ದಾರೆ ಎನ್ನಲಾಗಿದೆ.

    ಧವನ್ ಗಾಯಗೊಂಡಿರುವ ಅವರ ಸ್ಥಾನದಲ್ಲಿ ರಿಷಬ್ ಆಯ್ಕೆ ಮಾಡುವುದು ಖಚಿತವಾಗಿದ್ದರು ಕೂಡ ಆಡುವ 11 ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಇದೆ. ಸದ್ಯ ನಂ.04 ಸ್ಥಾನದಲ್ಲಿ ಕಣಕ್ಕೆ ಇಳಿಯುತ್ತಿರುವ ಕೆಎಲ್ ರಾಹುಲ್ ಅವರಿಗೆ ಬಡ್ತಿ ನೀಡಿ ರೋಹಿತ್ ಅವರೊಂದಿಗೆ ಆರಂಭಿಕರಾಗಿ ಕಣಕ್ಕೆ ಇಳಿಸುವ ಸಾಧ್ಯತೆ ಇದೆ. ಈ ವಿಚಾರದಲ್ಲಿ ಆಯ್ಕೆ ಸಮಿತಿ ಸಾಕಷ್ಟು ಚಿಂತನೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ.

    ಟೀಂ ಇಂಡಿಯಾ ಮ್ಯಾನೇಜ್‍ಮೆಂಟ್ ಸದಸ್ಯರೊಬ್ಬರು ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ರಿಷಬ್ ಅವರಿಗೆ ಆರಂಭಿಕ ಅಥವಾ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಪ್ರಮುಖವಾಗಿ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯರೊಂದಿಗೆ ಪಂತ್ ಜವಾಬ್ದಾರಿಯನ್ನ ನಿರ್ವಹಿಸುವ ಸಾಮಥ್ರ್ಯ ಹೊಂದಿದ್ದಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಅಲ್ಲದೇ ಸದ್ಯದ ಪರಿಸ್ಥಿತಿಯಲ್ಲಿ ಕೆಎಲ್ ರಾಹುಲ್ ಆರಂಭಿಕರಾಗಿ ಸಾಕಷ್ಟು ಅನುಭವವನ್ನು ಹೊಂದಿದ್ದು, ಮಧ್ಯಮ ಕ್ರಮಾಂಕದಲ್ಲಿ ರಾಹುಲ್ ಅವರ ಸ್ಥಾನವನ್ನು ಪಂತ್ ತುಂಬಲಿದ್ದಾರೆ ಎಂದಿದ್ದಾರೆ. ಅಲ್ಲದೇ ಧವನ್ ರಂತೆ ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಬಲ್ಲ ಆಟಗಾರರ ಅಗತ್ಯ ತಂಡಕ್ಕಿದೆ ಎಂದಿದ್ದಾರೆ.