Tag: ರಿಷಭ್ ಪಂತ್

  • ಕಾರು ಅಪಘಾತದಲ್ಲಿ ರಿಷಭ್‌ ಪಂತ್‌ ಉಳಿಸಿದ್ದ ವ್ಯಕ್ತಿ ಪ್ರೇಯಸಿ ಜೊತೆ ಆತ್ಮಹತ್ಯೆಗೆ ಯತ್ನ – ಪ್ರಿಯತಮೆ ಸಾವು

    ಕಾರು ಅಪಘಾತದಲ್ಲಿ ರಿಷಭ್‌ ಪಂತ್‌ ಉಳಿಸಿದ್ದ ವ್ಯಕ್ತಿ ಪ್ರೇಯಸಿ ಜೊತೆ ಆತ್ಮಹತ್ಯೆಗೆ ಯತ್ನ – ಪ್ರಿಯತಮೆ ಸಾವು

    – ಪ್ರೀತಿಸಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಲಕ್ನೋ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಷಭ್‌ ಪಂತ್‌ (Rishabh Pant) ಉಳಿಸಿದ್ದ ವ್ಯಕ್ತಿ ಮತ್ತು ಆತನ ಪ್ರೇಯಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿತ್ತು. ಈ ವೇಳೆ ಪ್ರಿಯತಮೆ ಮೃತಪಟ್ಟಿದ್ದಾಳೆ.

    2022 ರಲ್ಲಿ ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ ಅವರ ಕಾರು ಅಪಘಾತವಾಗಿತ್ತು. ಅವರ ಜೀವವನ್ನು ಉಳಿಸಿದ್ದ 25 ವರ್ಷದ ಯುವಕ ರಜತ್ ಕುಮಾರ್, ಫೆ.9 ರಂದು ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಬುಚ್ಚಾ ಬಸ್ತಿ ಎಂಬ ಹಳ್ಳಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.

    ಕುಮಾರ್ ಮತ್ತು 21 ವರ್ಷದ ಗೆಳತಿ ಮನು ಕಶ್ಯಪ್ ಇವರಿಬ್ಬರ ಪ್ರೀತಿಗೆ ಕುಟುಂಬಗಳು ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ, ಇಬ್ಬರೂ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ಕಶ್ಯಪ್ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾಳೆ. ಕುಮಾರ್ ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾನೆ.

    ಬೇರೆ ಬೇರೆ ಜಾತಿಯವರಾದ ಕಾರಣ ಮನೆಯವರು ಒಪ್ಪಿರಲಿಲ್ಲ. ಎರಡೂ ಕುಟುಂಬಗಳು ಬೇರೆಡೆ ವಿವಾಹಗಳನ್ನು ನಿಶ್ಚಯ ಮಾಡಿಕೊಂಡಿದ್ದವು. ಇದು ಅವರನ್ನು ಆತ್ಮಹತ್ಯೆಗೆ ಪ್ರೇರೇಪಿಸಿದೆ. ಕುಮಾರ್‌ ವಿರುದ್ಧ ಕಶ್ಯಪ್‌ ತಾಯಿ ಗಂಭೀರ ಆರೋಪ ಮಡಿದ್ದಾರೆ.

    2022ರ ಡಿಸೆಂಬರ್‌ನಲ್ಲಿ ರಿಷಭ್‌ ಪಂತ್‌ ದೆಹಲಿಯಿಂದ ಉತ್ತರಾಖಂಡಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿತ್ತು. ಆಗ ಕ್ರಿಕೆಟಿಗನನ್ನು ರಕ್ಷಿಸುವಲ್ಲಿ ಕುಮಾರ್‌ ಪ್ರಮುಖ ಪಾತ್ರ ವಹಿಸಿದ್ದ.

  • IPL Mega Auction | 14 ಕೋಟಿಗೆ ಡೆಲ್ಲಿ ಪಾಲಾದ ರಾಹುಲ್‌ – ಆರ್‌ಸಿಬಿ ಫ್ಯಾನ್ಸ್‌ಗೆ ಭಾರಿ ನಿರಾಸೆ

    IPL Mega Auction | 14 ಕೋಟಿಗೆ ಡೆಲ್ಲಿ ಪಾಲಾದ ರಾಹುಲ್‌ – ಆರ್‌ಸಿಬಿ ಫ್ಯಾನ್ಸ್‌ಗೆ ಭಾರಿ ನಿರಾಸೆ

    2025ರ ಐಪಿಎಲ್‌ ಭಾಗವಾಗಿ ನಡೆದ ಮಗಾ ಹರಾಜಿನಲ್ಲಿ (IPL Mega Auction) ಟೀಂ ಇಂಡಿಯಾದ ಸ್ಟಾರ್‌ ಆಟಗಾರ ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಮಾಜಿ ನಾಯಕ ಕೆ.ಎಲ್‌ ರಾಹುಲ್‌ (KL Rahul) 14 ಕೋಟಿ ರೂ.ಗಳಿಗೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪಾಲಾಗಿದ್ದಾರೆ.

    ಇದರಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಆದ್ರೆ ರಾಹುಲ್‌ ಅವರನ್ನು ಹೊರದಬ್ಬಿದ ಲಕ್ನೋ (LSG) 27 ಕೋಟಿ ರೂ. ದಾಖಲೆ ಬೆಲೆ ರಿಷಬ್‌ ಪಂತ್‌ (Rishabh Pant) ಅವರನ್ನು ಆರ್‌ಟಿಎಂ ಕಾರ್ಡ್‌ ಅಡಿ ಖರೀದಿಸಿದೆ.

    2025ರ ಮೆಗಾ ಹರಾಜಿಗೆ ಪ್ರಕ್ರಿಯೆ ಶುರುವಾದಾಗಿನಿಂದಲೂ ರಾಹುಲ್‌, ಆರ್‌ಸಿಬಿ ತಂಡದ ಪಾಲಾಗುತ್ತಾರೆ ಎಂಬ ಹೈಪ್‌ ಕ್ರಿಯೇಟ್‌ ಆಗಿತ್ತು. ಇದರಿಂದ ಅಭಿಮಾನಿಗಳು ಹರ್ಷಗೊಂಡಿದ್ದರು. ಆದ್ರೆ ಹರಾಜಿನಲ್ಲಿ 8.75 ಕೋಟಿ ರೂ.ಗಳಿಗೆ ಇಂಗ್ಲೆಂಡ್‌ನ ಲಿಯಾಮ್‌ ಲಿವಿಂಗ್‌ಸ್ಟೋನ್‌ ಖರೀದಿಸಿದ ಆರ್‌ಸಿಬಿ, ರಾಹುಲ್‌ ಅವರಿಗಾಗಿ ಬಿಡ್‌ ಮಾಡಲು ಹಿಂದೇಟು ಹಾಕಿತು.

    ಆರ್‌ಸಿಬಿಯಿಂದಲೇ ವೃತ್ತಿ ಆರಂಭಿಸಿದ್ದ ಕನ್ನಡಿಗ:
    2013ರಿಂದ ಐಪಿಎಲ್‌ ವೃತ್ತಿ ಬದುಕು ಆರಂಭಿಸಿದ ಕೆ.ಎಲ್‌ ರಾಹುಲ್‌ ಮೊದಲು ಸೇರಿದ್ದು ಆರ್‌ಸಿಬಿ ತಂಡವನ್ನೇ. 2013ರಲ್ಲಿ ಆರ್‌ಸಿಬಿ ತಂಡದಲ್ಲಿ ಆಡಿದ್ದ ರಾಹುಲ್‌ 2014 ಮತ್ತು 2015ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಪಾಲಾಗಿದ್ದರು. ಪುನಃ 2016ರಲ್ಲಿ ಆರ್‌ಸಿಬಿ ತಂಡವನ್ನೇ ಸೇರಿಕೊಂಡಿದ್ದರು. 2017ರಲ್ಲಿ ಆರ್‌ಸಿಬಿಯಲ್ಲೇ ಆಡುವ ಅವಕಾಶವಿದ್ದರೂ ಗಾಯದ ಸಮಸ್ಯೆಯಿಂದ ಹೊರಗುಳಿದ್ದರು.

    ಬಳಿಕ 2018 ರಿಂದ 2021ರ ವರೆಗೆ ಪಂಜಾಬ್‌ ಕಿಂಗ್ಸ್‌ ತಂಡದಲ್ಲಿದ್ದ ಕೆ.ಎಲ್‌ ರಾಹುಲ್‌ 2022ರಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಸೇರಿಕೊಂಡರು. ಆಗಷ್ಟೇ ಪದಾರ್ಪಣೆ ಮಾಡಿದ್ದ ಲಕ್ನೋ ತಂಡವನ್ನು ತನ್ನ ನಾಯಕತ್ವದಲ್ಲಿ ಸತತ 2 ಬಾರಿ ಪ್ಲೇ ಆಫ್‌ ಪ್ರವೇಶಿಸುವಂತೆ ಮಾಡಿದ್ದರು.

    ಈ ವರೆಗೆ ಐಪಿಎಲ್‌ನಲ್ಲಿ 132 ಪಂದ್ಯಗಳನ್ನಾಡಿರುವ ಕೆ.ಎಲ್‌ ರಾಹುಲ್‌ 134.61 ಸ್ಟ್ರೈಕ್ ರೇಟ್‌ನಲ್ಲಿ 4,683 ರನ್ ಗಳಿಸಿದ್ದಾರೆ. ಇದರಲ್ಲಿ 4 ಶತಕ, 37 ಅರ್ಧಶತಕ ಸೇರಿವೆ.

    ಇಂದು ಬಿಡ್‌ ಆದ ಪ್ರಮುಖರು:
    * ಹರ್ಷ್‌ದೀಪ್‌ ಸಿಂಗ್‌ – 18 ಕೋಟಿ ರೂ.‌ – ಪಂಜಾಬ್‌ ಕಿಂಗ್ಸ್‌
    * ಕಾಗಿಸೋ ರಬಾಡ – 10.75 ಕೋಟಿ ರೂ. – ಗುಜರಾತ್‌ ಟೈಟಾನ್ಸ್‌
    * ಜೋಸ್‌ ಬಟ್ಲರ್‌ – 15.75 ಕೋಟಿ ರೂ. – ಗುಜರಾತ್‌ ಟೈಟಾನ್ಸ್‌
    * ಮಿಚೆಲ್‌ ಸ್ಟಾರ್ಕ್‌ – 11 ಕೋಟಿ ರೂ. – ಡೆಲ್ಲಿ ಕ್ಯಾಪಿಟಲ್ಸ್‌
    * ಡೇವಿಡ್‌ ಮಿಲ್ಲರ್‌ – 7.50 ಕೋಟಿ ರೂ. – ಲಕ್ನೋ ಸೂಪರ್‌ ಜೈಂಟ್ಸ್‌
    * ಮೊಹಮ್ಮದ್‌ ಸಿರಾಜ್‌ – 12.25 ಕೋಟಿ ರೂ. – ಗುಜರಾಜ್‌ ಟೈಟಾನ್ಸ್‌
    * ಯಜುವೇಂದ್ರ ಚಾಹಲ್‌ – 18 ಕೋಟಿ ರೂ. – ಪಂಜಾಬ್‌ ಕಿಂಗ್ಸ್‌
    * ಲಿಯಾಮ್‌ ಲಿವಿಂಗ್‌ಸ್ಟೋನ್‌ – 8.75 ಕೋಟಿ ರೂ. – ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

  • IPL ಇತಿಹಾಸದಲ್ಲೇ ದಾಖಲೆ – 26.75 ಕೋಟಿ ರೂ.ಗೆ ಬಿಕರಿಯಾದ ಶ್ರೇಯಸ್‌ ಅಯ್ಯರ್‌

    IPL ಇತಿಹಾಸದಲ್ಲೇ ದಾಖಲೆ – 26.75 ಕೋಟಿ ರೂ.ಗೆ ಬಿಕರಿಯಾದ ಶ್ರೇಯಸ್‌ ಅಯ್ಯರ್‌

    2025ರ ಐಪಿಎಲ್‌ ಭಾಗವಾಗಿ ನಡೆದ ಮಗಾ ಹರಾಜಿನಲ್ಲಿ (IPL Mega Auction) ಟೀಂ ಇಂಡಿಯಾದ ಸ್ಟಾರ್‌ ಆಟಗಾರ ಶ್ರೇಯಸ್‌ ಅಯ್ಯರ್‌ ಬರೋಬ್ಬರಿ 26.75 ಕೋಟಿ ರೂ.ಗಳಿಗೆ ಬಿಕರಿಯಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಮೊದಲ ಭಾರತೀಯ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

    ತೀವ್ರ ಪೈಪೋಟಿಯಿಂದ ಕೂಡಿದ್ದ ಬಿಡ್ಡಿಂಗ್‌ನಲ್ಲಿ ಅಯ್ಯರ್‌ ಅವರನ್ನ ಖರೀದಿಸಲು ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್‌ ನಡುವೆ ಜಿದ್ದಾ ಜಿದ್ದಿ ನಡೆದಿತ್ತು. ಅಲ್ಲದೇ ಪ್ರೇಕ್ಷರಕ ಎದೆ ಬಡಿತವೂ ಹೆಚ್ಚಾಗಿತ್ತು, ಹರಾಜು ನಡೆಸಿಕೊಡುತ್ತಿದ್ದ ಮಹಿಳೆ ಮಲ್ಲಿಕಾ ಸಾಗರ್‌ ಬಿಡ್‌ ಕೂಗಿ ಕೂಗಿ ಸುಸ್ತಾಗಿದ್ದರು. ಆದ್ರೆ ಪಟ್ಟು ಬಿಡದ ಪಂಜಾಬ್‌ 26.75 ಕೋಟಿ ರೂ.ಗೆ ಅಯ್ಯರ್‌ ಅವರನ್ನ ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: IPL ಇತಿಹಾಸದಲ್ಲೇ ದಾಖಲೆ – 26.75 ಕೋಟಿ ರೂ.ಗೆ ಬಿಕರಿಯಾದ ಶ್ರೇಯಸ್‌ ಅಯ್ಯರ್‌

    2024ರ ಐಪಿಎಲ್‌ಗೆ ನಡೆದ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್‌ ಸ್ಟಾರ್ಕ್‌ 24.75 ಕೋಟಿ ರೂ.ಗಳಿಗೆ ಬಿಕರಿಯಾಗಿದ್ದರು. ಇದು ಈವರೆಗಿನ ದಾಖಲೆಯಾಗಿತ್ತು. ಇದನ್ನೂ ಓದಿ: 16 ತಿಂಗಳ ಬಳಿಕ ಟೆಸ್ಟ್‌ ಶತಕ ಸಿಡಿಸಿ ಮಿಂಚಿದ ಕೊಹ್ಲಿ – ಡೊನಾಲ್ಡ್‌ ಬ್ರಾಡ್ಮನ್‌ ದಾಖಲೆ ಉಡೀಸ್‌

    ಈವರೆಗೆ ಐಪಿಎಲ್‌ನಲ್ಲಿ 115 ಪಂದ್ಯಗಳನ್ನಾಡಿರುವ ಶ್ರೇಯಸ್‌ ಅಯ್ಯರ್‌ 3,127 ರನ್‌ ಗಳಿಸಿದ್ದಾರೆ. ಇದರಲ್ಲಿ 21 ಅರ್ಧಶತಕಗಳು ಸೇರಿವೆ. 2024ರ ಐಪಿಎಲ್‌ನಲ್ಲಿ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲೇ ಕೋಲ್ಕತ್ತಾ ನೈಟ್‌ರೈಡರ್ಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

    ಇಂದು ಬಿಡ್‌ ಆದ ಪ್ರಮುಖರು:
    * ಹರ್ಷ್‌ದೀಪ್‌ ಸಿಂಗ್‌ – 18 ಕೋಟಿ ರೂ.‌ – ಪಂಜಾಬ್‌ ಕಿಂಗ್ಸ್‌
    * ಕಾಗಿಸೋ ರಬಾಡ – 10.75 ಕೋಟಿ ರೂ. – ಗುಜರಾತ್‌ ಟೈಟಾನ್ಸ್‌
    * ಜೋಸ್‌ ಬಟ್ಲರ್‌ – 15.75 ಕೋಟಿ ರೂ. – ಗುಜರಾತ್‌ ಟೈಟಾನ್ಸ್‌
    * ಮಿಚೆಲ್‌ ಸ್ಟಾರ್ಕ್‌ – 11 ಕೋಟಿ ರೂ. – ಡೆಲ್ಲಿ ಕ್ಯಾಪಿಟಲ್ಸ್‌
    * ಡೇವಿಡ್‌ ಮಿಲ್ಲರ್‌ – 7.50 ಕೋಟಿ ರೂ. – ಲಕ್ನೋ ಸೂಪರ್‌ ಜೈಂಟ್ಸ್‌

  • ಇಂದು ಐಪಿಎಲ್‌ ಮೆಗಾ ಹರಾಜು – ಪಂತ್‌, ರಾಹುಲ್‌, ಅಯ್ಯರ್‌ಗೆ ಜಾಕ್‌ಪಾಟ್‌?

    ಇಂದು ಐಪಿಎಲ್‌ ಮೆಗಾ ಹರಾಜು – ಪಂತ್‌, ರಾಹುಲ್‌, ಅಯ್ಯರ್‌ಗೆ ಜಾಕ್‌ಪಾಟ್‌?

    ಜೆಡ್ಡಾ: 2025ರ ಐಪಿಎಲ್‌ ಆವೃತ್ತಿಯ ಆಟಗಾರರ ಮೆಗಾ ಹರಾಜು (IPL Mega Auction) ಪ್ರಕ್ರಿಯೆ ಭಾನುವಾರ ಪ್ರಾರಂಭಗೊಳ್ಳಲಿದೆ. ಸೌದಿ ಅರೇಬಿಯಾದ ಜೆಡ್ಡಾ ಮತ್ತು ಅಬಾಡಿ ಅಲ್-ಜೋಹರ್ ಅರೆನಾದಲ್ಲಿ ಇಂದು (ನ.24) ಮತ್ತು ನಾಳೆ (ನ.25) ಹರಾಜು ಪ್ರಕ್ರಿಯೆ ನಡೆಯಲಿದೆ.

    ಒಂದು ಫ್ರಾಂಚೈಸಿ ಕನಿಷ್ಠ 18 ರಿಂದ 25 ಆಟಗಾರರನ್ನು ಒಳಗೊಳ್ಳಬಹುದಾಗಿದ್ದು, ಒಟ್ಟು 577 ಆಟಗಾರರು ಕಣದಲ್ಲಿದ್ದಾರೆ. 10 ಐಪಿಎಲ್‌ ತಂಡಗಳು ಒಟ್ಟು 641.5 ಕೋಟಿ ರೂ. ಹಣವನ್ನು ಹರಾಜಿನಲ್ಲಿ ವಿನಿಯೋಗಿಸಲಿದೆ. ಸುಮಾರು 204 ಮಂದಿ ಆಟಗಾರರು ಆರಿಸಲ್ಪಡುವ ಸಾಧ್ಯತೆ ಇದೆ. ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ಗಳಾದ ರಿಷಬ್‌ ಪಂತ್‌ (Rishabh Pant), ಕೆ.ಎಲ್‌ ರಾಹುಲ್‌ (KL Rahul) ಮತ್ತು ಶ್ರೇಯಸ್‌ ಅಯ್ಯರ್‌ ಹೆಚ್ಚಿನ ಮೊತ್ತಕ್ಕೆ ಖರೀದಿಸಲ್ಪಡುವ ಆಟಗಾರರ ಪೈಕಿ ಮುಂಚೂಣಿಯಲ್ಲಿ ಇದ್ದಾರೆ. ಇದನ್ನೂ ಓದಿ: IND vs Aus Test| ವಿವಾದಾತ್ಮಕ ತೀರ್ಪಿಗೆ ರಾಹುಲ್‌ ಔಟ್‌

    ಅದರಲ್ಲಿಯೂ ಮುಖ್ಯವಾಗಿ ರಿಷಬ್‌ ಪಂತ್‌ ಅತ್ಯಧಿಕ ಮೊತ್ತವನ್ನು ಬುಟ್ಟಿಗೆ ಹಾಕಿಕೊಳ್ಳುವ ಸಾಧ್ಯತೆಯನ್ನು ಐಪಿಎಲ್‌ ಪರಿಣಿತರು ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಪಂತ್‌ ಪ್ರದರ್ಶನವೂ ಈ ಜನಪ್ರಿಯತೆಗೆ ಕಾರಣವಾಗಿದೆ. ಶತಾಯ ಗತಾಯ ಪಂತ್‌ ಅವರನ್ನ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಹಾಗೂ ಕೆ.ಎಲ್‌ ರಾಹುಲ್‌ರನ್ನ ಆರ್‌ಸಿಬಿ (RCB) ಖರೀದಿಸುವ ಪ್ರಯತ್ನ ನಡೆದಿದೆ. ಇದನ್ನೂ ಓದಿ: ರಾಹುಲ್‌-ಯಶಸ್ವಿ ದಾಖಲೆಯ ಶತಕದ ಜೊತೆಯಾಟ – ಭಾರತಕ್ಕೆ 218 ರನ್‌ಗಳ ಮುನ್ನಡೆ

    ಅದೃಷ್ಟ ಪರೀಕ್ಷೆಗಿಳಿದ ಕನ್ನಡಿಗರು:
    ಐಪಿಎಲ್‌ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕೆ.ಎಲ್ ರಾಹುಲ್, ದೇವದತ್ ಪಡಿಕ್ಕಲ್, ಮನೀಶ್ ಪಾಂಡೆ, ಮಯಾಂಕ್ ಅಗರ್‌ವಾಲ್, ಪ್ರಸಿದ್ಧ ಕೃಷ್ಣ, ಲುತ್ ಸಿಸೋಡಿಯಾ, ಆರ್.ಸ್ಮರಣ್, ಎಲ್.ಆರ್ ಚೇತನ್, ಮನೋಜ್ ಭಾಂಡಗೆ, ಅಭಿಲಾಶ್‌ ಶೆಟ್ಟಿ, ವೈಶಾಖ್ ವಿಜಯ್‌ ಕುಮಾರ್, ಪ್ರವೀಣ್ ದುಬೆ, ಮನ್ವಂತ್‌ ಕುಮಾರ್, ಕೆ.ಗೌತಮ್, ಶ್ರೇಯಸ್ ಗೋಪಾಲ್, ಹಾರ್ದಿಕ್ ರಾಜ್, ಅಭಿನವ್ ಮಹೋಹರ್, ಬಿ.ಆರ್ ಶರತ್, ಕೃಷ್ಣನ್ ಶ್ರೀಜಿತ್, ವಿದ್ವತ್‌ ಕಾವೇರಪ್ಪ, ದೀಪಕ್ ದೇವಾಡಿಗ, ವಿದ್ಯಾಧರ್ ಪಾಟೀಲ್, ಶುಭಾಂಗ್‌ ಹೆಗಡೆ, ಸಮರ್ಥ್ ನಾಗರಾಜ್‌ ಹರಾಜು ಪಟ್ಟಿಯಲ್ಲಿದ್ದಾರೆ. ಇದನ್ನೂ ಓದಿ: ICC Champions Trophy 2025 | ಈ ವಾರವೇ ವೇಳಾಪಟ್ಟಿ ಬಿಡುಗಡೆ ಸಾಧ್ಯತೆ

    25 ಕೋಟಿ ರೂ. ಮೈಲಿಗಲ್ಲು
    ಎಲ್ಲಕ್ಕಿಂತ ಹೆಚ್ಚಾಗಿ ಕ್ರೀಡಾಪ್ರೇಮಿಗಳ ಕುತೂಹಲಕ್ಕೆ ಕಾರಣವಾಗಿರುವುದು ಪಂತ್‌, ಕೆ.ಎಲ್‌ ರಾಹುಲ್‌ 25 ಕೋಟಿ ರೂ. ಮೈಲಿಗಲ್ಲನ್ನು ದಾಟುವರೇ ಎಂಬುದು. ಈವರೆಗೆ ಯಾಬೊಬ್ಬ ಭಾರತೀಯ ಆಟಗಾರನೂ ಈ ಸಾಧನೆಗೆ ಪಾತ್ರವಾಗಿಲ್ಲ. ಈ ಬಾರಿಯ ಐಪಿಎಲ್‌ ಹರಾಜಿನಲ್ಲಿ ಪಂತ್‌ 25 ಕೋಟಿ ರೂ. ಪಡೆದ ಮೊದಲ ಭಾರತೀಯ ಆಟಗಾರ ಖ್ಯಾತಿಗೆ ಯಾರು ಪಾತ್ರರಾಗುತ್ತಾರೆ ಪಾತ್ರರಾಗುವರೇ ಎಂಬುದು ಕುತೂಹಲ ಮೂಡಿಸಿದೆ. ಕಳೆದ ಆವೃತ್ತಿಯಲ್ಲಿ ಆಸ್ಟ್ರೇಲಿಯಾದ ಮಿಚೆಲ್‌ ಸ್ಟಾರ್ಕ್‌ 24.75 ಕೋಟಿ ರೂ.ಗೆ ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಕರಿಯಾಗಿದ್ದರು, ಇದು ಈವರೆಗಿನ ದಾಖಲೆ ಬೆಲೆಯಾಗಿದೆ.

  • 24 ವರ್ಷಗಳ ಬಳಿಕ ತವರಿನಲ್ಲಿ ಭಾರತ ವೈಟ್‌ವಾಶ್‌ – ಸರಣಿ ಗೆದ್ದು ಇತಿಹಾಸ ಸೃಷ್ಟಿಸಿದ ಕಿವೀಸ್‌

    24 ವರ್ಷಗಳ ಬಳಿಕ ತವರಿನಲ್ಲಿ ಭಾರತ ವೈಟ್‌ವಾಶ್‌ – ಸರಣಿ ಗೆದ್ದು ಇತಿಹಾಸ ಸೃಷ್ಟಿಸಿದ ಕಿವೀಸ್‌

    ಮುಂಬೈ: ನ್ಯೂಜಿಲೆಂಡ್‌ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. ಈ ಸೋಲಿನೊಂದಿಗೆ 24 ವರ್ಷಗಳ ಬಳಿಕ ತವರಿನಲ್ಲಿ ಸರಣಿ ಸೋತ ಅಪಖ್ಯಾತಿಯನ್ನು ಹೆಗಲಿಗೇರಿಸಿಕೊಂಡಿದೆ. ಕೊನೆಯದ್ದಾಗಿ ಭಾರತ 2000 ಇಸವಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ವೈಟ್‌ವಾಶ್‌ ಆಗಿತ್ತು.

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 3ನೇ ಟೆಸ್ಟ್‌ ಪಂದ್ಯದಲ್ಲಿ ಕಿವೀಸ್‌ ಭಾರತದ ವಿರುದ್ಧ 26 ರನ್‌ಗಳ ಅಮೋಘ ಜಯ ಸಾಧಿಸಿ, ಮೂರು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದೆ. ಈ ಮೂಲಕ ಭಾರತದಲ್ಲಿ 3 ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡವನ್ನು ವೈಟ್‌ವಾಶ್‌ ಮಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    147 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ಹಿನ್ನಡೆ ಅನುಭವಿಸಿತು. ನಾಯಕ ರೋಹಿತ್‌ ಶರ್ಮಾ, ಯಶಸ್ವಿ ಜೈಸ್ವಾಲ್‌, ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ ಅಲ್ಪಮೊತ್ತಕ್ಕೆ ಔಟಾಗಿ ಪೆವಿಲಿಯನ್‌ ಪರೇಡ್‌ ನಡೆಸಿದರು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಅಲ್ಪಮೊತ್ತಕ್ಕೆ ಔಟಾಗಿದ್ದು ತಂಡಕ್ಕೆ ಭಾರಿ ಆಘಾತ ನೀಡಿತು.

    ಪಂತ್‌ ಬಳಿಕ ಟೀಂ ಇಂಡಿಯಾ ಪಥನ:
    ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ರಿಷಭ್‌ ಪಂತ್‌ ಆಸರೆಯಾದರು. ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಪಂತ್‌ 57 ಎಸೆತಗಳಲ್ಲಿ 64 ರನ್‌ (9 ಬೌಂಡರಿ, 1 ಸಿಕ್ಸರ್‌) ಗಳಿಸಿದ್ದರು. ಈ ವೇಳೆ ಸುಲಭವಾಗಿ ಕೀಪರ್‌ ಕ್ಯಾಚ್‌ಗೆ ತುತ್ತಾದರು. ಪಂತ್‌ ಔಟಾದ ಬೆನ್ನಲ್ಲೇ ಅಶ್ವಿನ್‌, ಆಕಾಶ್‌ ದೀಪ್‌, ವಾಷಿಂಗ್ಟನ್‌ ಸುಂದರ್‌ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಒಪ್ಪಿಸಿದರು. ಇದರೊಂದಿಗೆ ಟೀಂ ಇಂಡಿಯಾ 121 ರನ್‌ಗಳಿಗೆ ಸರ್ವಪತನ ಕಂಡಿತು.

    ಆಜಾಜ್ ಪಟೇಲ್ ಸ್ಪಿನ್‌ ದಾಳಿಗೆ ತತ್ತರ:
    ಭಾರತೀಯ ಬ್ಯಾಟರ್‌ಗಳ ಎದುರು ಬಿಗಿ ಹಿಡಿತ ಸಾಧಿಸಿದ ಎಡಗೈ ಸ್ಪಿನ್ನರ್‌ ಆಜಾಜ್‌ ಪಟೇಲ್‌ 14.1 ಓವರ್‌ಗಳಲ್ಲಿ 57 ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಪಡೆದು ಮಿಂಚಿದರು. ಇದರೊಂದಿಗೆ ಗ್ಲೆನ್‌ ಫಿಲಿಪ್ಸ್‌ 3 ವಿಕೆಟ್‌ ಹಾಗೂ ಮ್ಯಾಟ್‌ ಹೆನ್ರಿ 1 ವಿಕೆಟ್‌ ಕಿತ್ತರು.

    147 ರನ್‌ ಗುರಿ ನೀಡಿದ್ದ ಕಿವೀಸ್‌:
    2ನೇ ದಿನದ ಅಂತ್ಯಕ್ಕೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕಿವೀಸ್‌ 9 ವಿಕೆಟ್‌ಗೆ 171 ರನ್‌ಗಳಿಸಿತ್ತು. 3ನೇ ದಿನ 143 ರನ್‌ಗಳ ಮುನ್ನಡೆಯೊಂದಿಗೆ ಕ್ರೀಸ್‌ ಆರಂಭಿಸಿದ್ದ ನ್ಯೂಜಿಲೆಂಡ್‌ 2ನೇ ಇನ್ನಿಂಗ್ಸ್‌ನಲ್ಲಿ 174 ರನ್‌ಗಳಿಗೆ ಆಲೌಟ್‌ ಆಯಿತು. ಈ ಮೂಲಕ ಭಾರತಕ್ಕೆ 147 ರನ್‌ಗಳ ಗುರಿ ನೀಡಿತ್ತು.

    2ನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ 5 ವಿಕೆಟ್‌, ಅಶ್ವಿನ್‌ 3 ವಿಕೆಟ್‌, ಆಕಾಶ್‌ ದೀಪ್‌ ಮತ್ತು ವಾಷಿಂಗ್ಟನ್‌ ಸುಂದರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಸಂಕ್ಷಿಪ್ತ ಸ್ಕೋರ್‌:
    ಮೊದಲ ಇನ್ನಿಂಗ್ಸ್‌
    ನ್ಯೂಜಿಲೆಂಡ್‌ – 235/10, ಭಾರತ – 236/10

    2ನೇ ಇನ್ನಿಂಗ್ಸ್‌
    ನ್ಯೂಜಿಲೆಂಡ್‌ – 174/10, ಭಾರತ – 121/10 

  • ಟ್ರೋಫಿ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌ – ನೂತನ ಮುಖ್ಯಕೋಚ್‌ ಆಗಿ ಹೇಮಂಗ್‌ ಬದಾನಿ ನೇಮಕ

    ಟ್ರೋಫಿ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್‌ – ನೂತನ ಮುಖ್ಯಕೋಚ್‌ ಆಗಿ ಹೇಮಂಗ್‌ ಬದಾನಿ ನೇಮಕ

    ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್‌ ತಂಡ ನೂತನ ಮುಖ್ಯಕೋಚ್‌ (Delhi Capitals Head Coach) ಆಗಿ ಹೇಮಂಗ್ ಬದಾನಿ (Hemang Badani) ಹಾಗೂ ಕ್ರಿಕೆಟ್‌ ನಿರ್ದೇಶಕರಾಗಿ ವೇಣುಗೋಪಾಲ್ ರಾವ್ ನೇಮಕಗೊಂಡಿದ್ದಾರೆ. ಈ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಅಧಿಕೃತ ಘೋಷಣೆ ಮಾಡಿದೆ.

    7 ಆವೃತ್ತಿ ಕಳೆದರೂ ಐಪಿಎಲ್‌ ಟ್ರೋಫಿ (IPL Trophy) ತಂದುಕೊಡುವಲ್ಲಿ ವಿಫಲರಾದ ರಿಕಿ ಪಾಟಿಂಗ್‌ (Ricky Ponting) ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ಮುಖ್ಯ ಕೋಚ್‌ ಹುದ್ದೆಯಿಂದ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಮುಖ್ಯಕೋಚ್‌ ಹುದ್ದೆಗೆ ಸೌರವ್‌ ಗಂಗೂಲಿ ಅವರ ಹೆಸರು ಕೇಳಿಬಂದಿತ್ತು. ಆದ್ರೆ ಡೆಲ್ಲಿ ಕ್ಯಾಪಿಲಟ್ಸ್‌ ಫ್ರಾಂಚೈಸಿ ಅಚ್ಚರಿ ಎನ್ನುವಂತೆ ಹೇಮಂಗ್‌ ಬದಾನಿ ಅವರನ್ನು ಮುಖ್ಯಕೋಚ್‌ ಆಗಿ ನೇಮಕ ಮಾಡಿಕೊಂಡಿದೆ. ಅಲ್ಲದೇ ಸೌರವ್‌ ಗಂಗೂಲಿ ಅವರ ಬದಲಿಗೆ ಕ್ರಿಕೆಟ್‌ ನಿರ್ದೇಶಕರನ್ನಾಗಿ ವೇಣುಗೋಪಾಲ್ ರಾವ್ ಅವರನ್ನ ನೇಮಿಸಿಕೊಂಡಿದೆ. ಇದನ್ನೂ ಓದಿ: IPL ಟ್ರೋಫಿ ತಂದುಕೊಡದಿದ್ದಕ್ಕೆ ತಲೆದಂಡ – ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್​ಗೆ ಕೊಕ್​!

    47 ವರ್ಷವಯಸ್ಸಿನ ಹೇಮಂಗ್‌ ಬದಾನಿ ಟೀಂ ಇಂಡಿಯಾದಲ್ಲಿ 4 ಟೆಸ್ಟ್‌ ಹಾಗೂ 40 ಏಕದಿನ ಪಂದ್ಯಗಳನ್ನಾಡಿದ ಅನುಭವ ಹೊಂದಿದ್ದಾರೆ. ಅಲ್ಲದೇ 2021-23 ರವರೆಗೆ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಫೀಲ್ಡಿಂಗ್‌ ಕೋಚ್‌ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಲಂಕಾ ಪ್ರೀಮಿಯರ್‌ ಲೀಗ್‌ನಲ್ಲಿ ಜಾಫ್ನಾ ಕಿಂಗ್ಸ್ ಫ್ರಾಂಚೈಸಿ ಕೋಚ್‌ ಆಗಿ ಬ್ಯಾಕ್‌ ಟು ಬ್ಯಾಕ್‌ 2 ಪ್ರಶಸ್ತಿಗಳನ್ನ ತಂದುಕೊಟ್ಟಿದ್ದಾರೆ. ಇದನ್ನೂ ಓದಿ: ಕಿವೀಸ್‌ ವೇಗಿಗಳ ಆರ್ಭಟ; 46ಕ್ಕೆ ಭಾರತ ಆಲೌಟ್‌ – ಕೆಟ್ಟ ದಾಖಲೆ ಹೆಗಲಿಗೇರಿಸಿಕೊಂಡ ಟೀಂ ಇಂಡಿಯಾ

    SA20 ಲೀಗ್‌ನ ಉದ್ಘಾಟನಾ ಆವೃತ್ತಿಯಲ್ಲೇ ಸನ್‌ರೈಸರ್ಸ್ ಈಸ್ಟರ್ನ್ ಕೇಪ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಪ್ರಶಸ್ತಿ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದರು. ಜೊತೆಗೆ ಈ ವರ್ಷದ ILT20 ನಲ್ಲಿ ದುಬೈ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿದ್ದರು. ಇವರ ನೇತೃತ್ವದಲ್ಲೇ ದುಬೈ ಕ್ಯಾಪಿಟಲ್ಸ್‌ ತಂಡ ಫೈನಲ್‌ ತಲುಪಿತ್ತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್‌ ಮುಖ್ಯಕೋಚ್‌ ಆಗಿ ನೇಮಕಗೊಂಡಿದ್ದಾರೆ.

    ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಬದಾನಿ, ದೆಹಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿ ಸೇರುತ್ತಿರುವುದು ನನಗೆ ಹೆಮ್ಮೆ ಎನಿಸಿದೆ. ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಮ್ಮ ಮಾಲೀಕರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 8 ಕ್ಯಾಚ್‌ ಬಿಟ್ಟ ಪಾಕ್‌ – ಚರ್ಚೆ ಹುಟ್ಟುಹಾಕಿದ ಕಳಪೆ ಫೀಲ್ಡಿಂಗ್‌

    ಇದಕ್ಕೂ ಮುನ್ನ ರಿಕಿ ಪಾಂಟಿಂಗ್‌ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಮುಖ್ಯಕೋಚ್‌ ಆಗಿದ್ದರು. ಆಸ್ಟ್ರೇಲಿಯಾ ತಂಡದ ಮಾಜಿ ನಾಯಕರೂ ಆಗಿರುವ ರಿಕಿ ಪಾಂಟಿಂಗ್‌ ಕಳೆದ 7 ಆವೃತ್ತಿಗಳಿಂದ ಡೆಲ್ಲಿ ಕ್ಯಾಪಿಟಲ್ಸ್‌ ಮುಖ್ಯಕೋಚ್‌ ಆಗಿ ಸೇವೆ ಸಲ್ಲಿಸುತ್ತಿದ್ದರು. ಡೆಲ್ಲಿ ಕ್ಯಾಪಿಟಲ್ಸ್‌ ಸೇರುವ ಮುನ್ನ ಪಾಂಟಿಂಗ್‌ ಮುಂಬೈ ಇಂಡಿಯನ್ಸ್‌ ತಂಡವನ್ನು ಮುನ್ನಡೆಸಿದ್ದರು. 2020ರಲ್ಲಿ ಪಾಂಟಿಂಗ್‌ ಅವರ ಸಾರಥ್ಯದಲ್ಲೇ ಡೆಲ್ಲಿ ತಂಡ ಫೈನಲ್‌ ಪ್ರವೇಶಿಸಿತ್ತು. ಆದ್ರೆ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ಸೋತು ಪ್ರಶಸ್ತಿ ಗೆಲ್ಲಲು ವಿಫಲವಾಯಿತು.

  • Duleep Trophy | ಕನ್ನಡಿಗ ರಾಹುಲ್‌ ಹೋರಾಟ ವ್ಯರ್ಥ – ಭಾರತ-ಬಿ ತಂಡಕ್ಕೆ 76 ರನ್‌ಗಳ ಭರ್ಜರಿ ಜಯ

    Duleep Trophy | ಕನ್ನಡಿಗ ರಾಹುಲ್‌ ಹೋರಾಟ ವ್ಯರ್ಥ – ಭಾರತ-ಬಿ ತಂಡಕ್ಕೆ 76 ರನ್‌ಗಳ ಭರ್ಜರಿ ಜಯ

    – ಶುಭಮನ್‌ ಗಿಲ್‌ ಪಡೆಗೆ ಹೀನಾಯ ಸೋಲು

    ಬೆಂಗಳೂರು: ಸಂಘಟಿತ ಬೌಲಿಂಗ್‌, ಬ್ಯಾಟಿಂಗ್‌ ಪ್ರದರ್ಶನದೊಂದಿಗೆ ಭಾರತ-ಬಿ ತಂಡವು (India B), ಭಾರತ-ಎ ತಂಡದ ವಿರುದ್ಧ 76 ರನ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ದುಲೀಪ್‌ ಟ್ರೋಫಿಯಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.

    ಬೆಂಗಳೂರಿನ (Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುಲೀಪ್‌ ಟ್ರೋಫಿ (Duleep Trophy) ಮೊದಲ ಪಂದ್ಯದಲ್ಲಿ ಅಭಿಮನ್ಯು ಈಶ್ವರನ್ ನಾಯಕತ್ವದ ʻಬಿʼ ತಂಡ ಅಮೋಘ ಜಯ ಸಾಧಿಸಿದೆ. ಆದ್ರೆ ಎರಡೂ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಶುಭಮನ್‌ ಗಿಲ್‌ ಪಡೆ ಆರಂಭಿಕ ಪಂದ್ಯದಲ್ಲಿ ಹೀನಾಯ ಸೋಲಿಗೆ ತುತ್ತಾಗಿದೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್‌ ಆಲ್‌ರೌಂಡರ್‌ ಮೊಯಿಲ್‌ ಅಲಿ ಗುಡ್‌ಬೈ

    90 ರನ್‌ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಬಿ ತಂಡ, ರಿಷಭ್‌ ಪಂತ್‌ ಅವರ ಅಮೋಘ ಅರ್ಧಶತಕ ಹಾಗೂ ಸರ್ಫರಾಜ್‌ ಖಾನ್‌ ಬ್ಯಾಟಿಂಗ್‌ ನೆರವಿನೊಂದಿಗೆ 42 ಓವರ್‌ಗಳಲ್ಲಿ 184 ರನ್‌ ಗಳಿಸಿತ್ತು. ಈ ಮೂಲಕ ಒಟ್ಟು 274 ರನ್‌ ಗಳಿಸಿ, ಎದುರಾಳಿ ತಂಡಕ್ಕೆ 275 ರನ್‌ ಗುರಿ ನೀಡಿತ್ತು. ಸ್ಪರ್ಧಾತ್ಮಕ ರನ್‌ಗಳ ಗುರಿ ಬೆನ್ನಟ್ಟಿದ ಎ ತಂಡ 2ನೇ ಇನ್ನಿಂಗ್ಸ್‌ನಲ್ಲಿ 198 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಸೋಲು ಕಂಡಿತು.

    ಸ್ಪರ್ಧಾತ್ಮಕ ಗುರಿ ಪಡೆದಿದ್ದ ಎ ತಂಡ ಆರಂಭದಲ್ಲೇ ವಿಕೆಟ್‌ ಕಳೆದುಕೊಳ್ಳಲು ಶುರು ಮಾಡಿತು. ಆರಂಭಿಕ ಮಯಾಂಕ್‌ ಅಗರ್ವಾಲ್‌ 3 ರನ್‌ಗಳಿಗೆ ಪೆವಿಲಿಯನ್‌ಗೆ ಮರಳಿದರು. ಬಳಿಕ ಉತ್ತಮ ಪ್ರದರ್ಶನದ ಭರವಸೆ ಮೂಡಿಸಿದ್ದ ಶುಭಮನ್‌ ಗಿಲ್‌ ಕೇವಲ 21 ರನ್‌ಗಳಿಗೆ ಔಟಾದರು. ಈ ಬೆನ್ನಲೇ ಟಿ20 ಕ್ರಿಕೆಟ್‌ನಂತೆ ಸ್ಫೋಟಕ ಪ್ರದರ್ಶನಕ್ಕೆ ಮುಂದಾದ ರಿಯಾನ್‌ ಪರಾಗ್‌ 18 ಎಸೆತಗಳಲ್ಲಿ 31 ರನ್‌ ಬಾರಿಸಿ ಔಟಾದರು. ನಂತರದಲ್ಲಿ ಕೆ.ಎಲ್‌ ರಾಹುಲ್‌, ಆಕಾಶ್‌ ದೀಪ್‌ ಹೊರತುಪಡಿಸಿದ್ರೆ ಉಳಿದ ಆಟಗಾರರು ಅಲ್ಪಮೊತ್ತಕ್ಕೆ ನಿರ್ಗಮಿಸಿದ ಕಾರಣ ಭಾರತ ಎ ತಂಡ ಸೋಲಬೇಕಾಯಿತು.

    ಭಾರತ-ಎ ತಂಡದ ಪರ ಕೆ.ಎಲ್‌ ರಾಹುಲ್‌ 57 ರನ್‌ (121 ಎಸೆತ, 7 ಬೌಂಡರಿ), ಆಕಾಶ್‌ ದೀಪ್‌ 43 ರಮ್‌, ಶಿವಂ ದುಬೆ, ಕುಲ್ದೀಪ್‌ ಯಾದವ್‌ ತಲಾ 14 ರನ್‌ಗಳ ಕೊಡುಗೆ ನೀಡಿದರು. ಇದನ್ನೂ ಓದಿ: U-20 World Wrestling Championships – ಭಾರತಕ್ಕೆ 2 ಪದಕ; ನಿಕಿತಾಗೆ ಬೆಳ್ಳಿ, ನೇಹಾಗೆ ಕಂಚು!

    ಇದಕ್ಕೂ ಮುನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತ – ಬಿ ತಂಡದ ಪರ ರಿಷಭ್‌ ಪಂತ್‌ ಹಾಗೂ ಸರ್ಫರಾಜ್‌ ಖಾನ್‌ ಅವರ ಅಮೋಘ ಪ್ರದರ್ಶನ ತಂಡಕ್ಕೆ ನೆರವಾಯಿತು. ಪಂತ್‌ 47 ಎಸೆತಗಳಲ್ಲಿ 61 ರನ್‌ (9 ಬೌಂಡರಿ, 2 ಸಿಕ್ಸರ್)‌, ಸರ್ಫರಾಜ್‌ 46 ರನ್‌ (36 ಎಸೆತ, 7 ಬೌಂಡರಿ, 1 ಸಿಕ್ಸರ್)‌ ಗಳಿಸಿದ್ರೆ, ನಿತಿಶ್‌ ಕುಮಾರ್‌ ರೆಡ್ಡಿ 19 ರನ್‌, ನವದೀಪ್‌ ಸೈನಿ 13 ರನ್‌, ಯಶ್‌ ದಯಾಳ್‌ 16 ರನ್‌ಗಳ ಕೊಡುಗೆ ನೀಡಿದರು.

    ಸಂಕ್ಷಿಪ್ತ ಸ್ಕೋರ್‌
    ಮೊದಲ ಇನ್ನಿಂಗ್ಸ್‌
    ಭಾರತ ಬಿ ತಂಡ – 321/10
    ಭಾರತ ಎ ತಂಡ – 231/10

    ದ್ವಿತೀಯ ಇನ್ನಿಂಗ್ಸ್‌
    ಭಾರತ ಬಿ ತಂಡ – 184/10
    ಭಾರತ ಎ ತಂಡ – 198/10

    ಇನ್ನೂ ಭಾರತ ಸಿ ಮತ್ತು ಭಾರತ ಡಿ ತಂಡಗಳ ನಡುವಿನ ಹಣಾಹಣಿಯಲ್ಲಿ ರುತುರಾಜ್‌ ಗಾಯಕ್ವಾಡ್‌ ನಾಯಕತ್ವದ ʻಸಿʼ ತಂಡ ಶ್ರೇಯಸ್‌ ಅಯ್ಯರ್‌ ನಾಯಕತ್ವದ ʻಡಿʼ ತಂಡದ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸಿದೆ. ಇದನ್ನೂ ಓದಿ: Duleep Trophy | ಮುಶೀರ್ ಕೈತಪ್ಪಿದ ದ್ವಿಶತಕ – ಕೊನೇ 3 ವಿಕೆಟ್‌ಗೆ 227 ರನ್‌ ಪೇರಿಸಿದ ಭಾರತ-ಬಿ ತಂಡ!

  • IPL 2025: ಮರಳಿ ಆರ್‌ಸಿಬಿಗೆ ರಾಹುಲ್‌? – ಡೆಲ್ಲಿ ತೊರೆದು ಸಿಎಸ್‌ಕೆ ಸೇರಲಿದ್ದಾರೆ ರಿಷಭ್‌ ಪಂತ್‌?

    IPL 2025: ಮರಳಿ ಆರ್‌ಸಿಬಿಗೆ ರಾಹುಲ್‌? – ಡೆಲ್ಲಿ ತೊರೆದು ಸಿಎಸ್‌ಕೆ ಸೇರಲಿದ್ದಾರೆ ರಿಷಭ್‌ ಪಂತ್‌?

    ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೆ ಸದ್ಯದಲ್ಲೇ ಬಿಸಿಸಿಐ ದಿನಾಂಕ ನಿಗದಿ ಪಡಿಸಲಿದೆ. ಇದೇ ಜುಲೈ ತಿಂಗಳಾಂತ್ಯದ ವೇಳೆಗೆ ಬಿಸಿಸಿಐ (BCCI) ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ನಡುವೆ ಫ್ರಾಂಚೈಸಿಗಳಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ.

    3 ವರ್ಷಗಳಿಗೊಮ್ಮೆ ನಡೆಯುವ ಮೆಗಾ ಹರಾಜಿನಲ್ಲಿ ಯಾವ ಯಾವ ದಿಗ್ಗಜ ಆಟಗಾರರು ಯಾವ ತಂಡವನ್ನು ಸೇರಲಿದ್ದಾರೆ ಅನ್ನೋ ಬಗ್ಗೆ ಕ್ರಿಕೆಟ್‌ ಪ್ರಿಯರ ಚಿತ್ತ ಹರಿದಿದೆ. ಸಿಎಸ್‌ಕೆ ತಂಡದ ಲೆಜೆಂಡ್‌ ಎಂ.ಎಸ್‌ ಧೋನಿ (MS Dhoni) ಅವರು ಐಪಿಎಲ್‌ಗೆ ನಿವೃತ್ತಿ ಹೇಳುವ ಸಾಧ್ಯತೆಗಳಿವೆ ಎಂಬ ಸುದ್ದಿಗಳ ನಡುವೆ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals0 ತಂಡದ ನಾಯಕ ರಿಷಭ್‌ ಪಂತ್‌, ಮುಂದಿನ ಆವೃತ್ತಿಗೆ ಸಿಎಸ್‌ಕೆ (CSK) ತಂಡ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: IPL 2025: ಮೆಗಾ ಹರಾಜು ಪ್ರಕ್ರಿಯೆ ಶುರು; ರಿಟೇನ್‌ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ!

    2016ರಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಪ್ರತಿನಿಧಿಸುತ್ತಿರುವ ವಿಕೆಟ್‌ ಕೀಪರ್‌ ಬ್ಯಾಟರ್‌ ರಿಷಭ್‌ ಪಂತ್‌ ಮುಂದಿನ ವರ್ಷದ ಐಪಿಎಲ್‌ಗೆ ನಡೆಯಲಿರುವ ಮೆಗಾ ಹರಾಜಿಗೂ ಮುನ್ನವೇ ಡೆಲ್ಲಿ ಫ್ರಾಂಚೈಸಿ ತೊರೆದು 5 ಬಾರಿ ಚಾಂಪಿಯನ್‌ ಆಗಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಸೇರಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿವೆ. ಇದನ್ನೂ ಓದಿ: Women’s Asia Cup 2024: ಸಿಂಹಿಣಿಯರ ಅಬ್ಬರಕ್ಕೆ ಪಾಕ್ ಧೂಳಿಪಟ – ಭಾರತಕ್ಕೆ ಗೆಲುವಿನ ಶುಭಾರಂಭ!

    2024ರ ಐಪಿಎಲ್‌ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 14 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿ ಪ್ಲೇ ಆಫ್‌ ಪ್ರವೇಶಿಸುವಲ್ಲಿ ವಿಫಲವಾಯಿತು. ಟ್ರೋಫಿ ತಂದುಕೊಡುವಲ್ಲಿ ವಿಫಲರಾದ ಡೆಲ್ಲಿ ತಂಡದ ಮುಖ್ಯಕೋಚ್‌ ಆಗಿದ್ದ ರಿಕಿ ಪಾಂಟಿಂಗ್‌ಗೆ ಫ್ರಾಂಚೈಸಿ ಈಗಾಗಲೇ ಕೊಕ್‌ ನೀಡಿದೆ. ರಿಷಭ್‌ ಪಂತ್‌ ಅವರನ್ನೂ ಉಳಿಸಿಕೊಳ್ಳುವ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಮುಂದಿನ ಕೋಚ್‌ ಎನ್ನಲಾಗುತ್ತಿರುವ ಗಂಗೂಲಿ ಅವರು ರಿಷಭ್‌ ಪರವಾಗಿದ್ದಾರೆ ಎನ್ನಲಾದರೂ ಫ್ರಾಂಚೈಸಿ ತೀರ್ಮಾನ ಅಂತಿಮವಾಗಲಿದೆ. ಹೀಗಾಗಿ ಪಂತ್‌ ಮೆಗಾ ಹರಾಜಿಗೂ ಮುನ್ನವೇ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಸೇರಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ತಿಳಿಸಿವೆ.

    ಕನ್ನಡಿಗನಿಗೆ ಮಣೆಹಾಕಲಿದೆಯೇ ಆರ್‌ಸಿಬಿ?
    2022ರಲ್ಲಿ ಆರಂಭವಾದ ಲಕ್ನೋ ಸೂಪರ್‌ ಜೈಂಟ್ಸ್‌ (LSG) ತಂಡದ ನಾಯಕನಾಗಿರುವ ಕನ್ನಡಿಗ ಕೆ.ಎಲ್‌ ರಾಹುಲ್‌ (KL Rahul) ಈ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ. 2024ರ ಐಪಿಎಲ್‌ ಆವೃತ್ತಿಯಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಲಕ್ನೋ ಹೀನಾಯವಾಗಿ ಸೋತಿತ್ತು. ಈ ವೇಳೆ ಲಕ್ನೋ ಫ್ರಾಂಚೈಸಿ ಮಾಲೀಕರಾದ ಸಂಜೀವ್‌ ಗೋಯೆಂಕಾ ರಾಹುಲ್‌ ವಿರುದ್ಧ ಮೈದಾನದಲ್ಲೇ ರೇಗಾಡಿದ್ದರು. ಈ ವೀಡಿಯೋ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆಯಿಂದ ರಾಹುಲ್‌, ಲಕ್ನೋ ತಂಡದಲ್ಲಿ ಮುಂದುವರಿಯುವ ಆಸಕ್ತಿ ಕಳೆದುಕೊಂಡಿದ್ದಾರೆ. ಮುಂಬರುವ ಮೆಗಾ ಹರಾಜಿಗೂ ಮುನ್ನ ಅವರು ಆರ್‌ಸಿಬಿ (RCB) ಪಾಲಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್‌ ಪಟ್ಟು!

    ಐಪಿಎಲ್‌ ವೃತ್ತಿ ಆರಂಭಿಸಿದ್ದು ಆರ್‌ಸಿಬಿಯಿಂದಲೇ:
    2013ರಿಂದ ಐಪಿಎಲ್‌ ವೃತ್ತಿ ಬದುಕು ಆರಂಭಿಸಿದ ಕೆ.ಎಲ್‌ ರಾಹುಲ್‌ ಮೊದಲು ಸೇರಿದ್ದು ಆರ್‌ಸಿಬಿ ತಂಡವನ್ನೇ. 2013 ರಿಂದ 2016ರ ಆವೃತ್ತಿಗಳಲ್ಲಿ ರಾಹುಲ್‌ ಆರ್‌ಸಿಬಿ ತಂಡದಲ್ಲಿಯೇ ಇದ್ದರು. ಆ ನಂತರ 2014 ಮತ್ತು 2015ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಪಾಲಾದರು. 2018 ರಿಂದ 2021ರ ವರೆಗೆ ಪಂಜಾಬ್‌ ಕಿಂಗ್ಸ್‌ ತಂಡದಲ್ಲಿದ್ದ ಕೆ.ಎಲ್‌ ರಾಹುಲ್‌ 2022ರಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಸೇರಿಕೊಂಡರು. ಇದನ್ನೂ ಓದಿ: Wimbledon Champion: ಸತತ 2ನೇ ಬಾರಿಗೆ ಅಲ್ಕರಾಜ್‌ಗೆ ವಿಂಬಲ್ಡನ್‌ ಕಿರೀಟ – ಜೊಕೊವಿಕ್‌ಗೆ ಮತ್ತೆ ಸೋಲು!

  • ನಾವಿಕನಿಲ್ಲದ ದೋಣಿಯಲ್ಲಿ ಮುಳುಗಿದ ಡೆಲ್ಲಿ – ಆರ್‌ಸಿಬಿಗೆ 47 ರನ್‌ಗಳ ಜಯ; ಪ್ಲೇ ಆಫ್‌ ಕನಸು ಜೀವಂತ!

    ನಾವಿಕನಿಲ್ಲದ ದೋಣಿಯಲ್ಲಿ ಮುಳುಗಿದ ಡೆಲ್ಲಿ – ಆರ್‌ಸಿಬಿಗೆ 47 ರನ್‌ಗಳ ಜಯ; ಪ್ಲೇ ಆಫ್‌ ಕನಸು ಜೀವಂತ!

    ಬೆಂಗಳೂರು: ರಿಷಭ್‌ ಪಂತ್‌ ಅವರ ಅನುಪಸ್ಥಿತಿಯಲ್ಲಿ ಆರ್‌ಸಿಬಿ ವಿರುದ್ಧ ಅಖಾಡಕ್ಕಿಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಹೀನಾಯ ಸೋಲಿಗೆ ತುತ್ತಾಗಿದೆ. ಆದ್ರೆ ತವರಿನಲ್ಲೇ 47 ರನ್‌ಗಳ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

    ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 9 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತ್ತು. ಹೊಸ ನಾಯಕನ ನೇತೃತ್ವದಲ್ಲಿ ಸ್ಪರ್ಧಾತ್ಮಕ ರನ್‌ಗಳ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 19.1 ಓವರ್‌ಗಳಲ್ಲಿ 140 ರನ್‌ಗಳಿಗೆ ಸರ್ವಪತನ ಕಂಡಿತು.

    188 ರನ್‌ಗಳ ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಆರಂಭದಲ್ಲೇ ಆಘಾತ ಎದುರಿಸಿತು. ಸ್ಫೋಟಕ ಪ್ರದರ್ಶನ ನೀಡಲು ಮುಂದಾದ ಆರಂಭಿಕ ಆಟಗಾರ ಡೇವಿಡ್‌ ವಾರ್ನರ್‌ 1 ರನ್‌ಗಳಿಗೆ ಔಟಾದರು. ಈ ಬೆನ್ನಲ್ಲೇ ಅಭಿಷೇಕ್‌ ಪೋರೆಲ್‌ 2 ರನ್‌ಗಳಿಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಇನ್ನೂ 8 ಎಸೆತಗಳಲ್ಲಿ 21 ರನ್‌ (2 ಸಿಕ್ಸರ್‌, 2 ಬೌಂಡರಿ) ಬಾರಿಸಿದ್ದ ಫ್ರೆಸರ್‌ ಮೆಕ್‌ಗಾರ್ಕ್‌ ಸಹ ವಿಕೆಟ್‌ ಒಪ್ಪಿಸಿದರು. ಮೊದಲ 6 ಓವರ್‌ಗಳಲ್ಲಿ 54 ರನ್‌ ಗಳಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

    ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಡೆಲ್ಲಿ ತಂಡಕ್ಕೆ ಟ್ರಿಸ್ಟಾನ್ಸ್‌ ಸ್ಟಬ್ಸ್‌ ಬೂಸ್ಟ್‌ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿ ತಂಡ ಇತ್ತು. ಆದ್ರೆ ಅನಗತ್ಯವಾಗಿ ಒಂದು ರನ್‌ ಕದಿಯಲು ಯತ್ನಿಸಿ ರನೌಟ್‌ಗೆ ತುತ್ತಾದರು. ಇದು ಡೆಲ್ಲಿ ತಂಡಕ್ಕೆ ತುಂಬಲಾರದ ನಷ್ಟವಾಯಿತು. ಅಲ್ಲದೇ ಮಧ್ಯಮ ಕ್ರಮಾಂಕದಲ್ಲಿ ನಾಯಕ ರಿಷಭ್‌ ಪಂತ್‌ ಅವರ ಅನುಪಸ್ಥಿತಿ ಸಹ ಡೆಲ್ಲಿ ತಂಡವನ್ನು ಕಾಡಿತು.

    ಇನ್ನೂ ಏಕಾಂಗಿ ಹೋರಾಟ ನಡೆಸಿದ ನಾಯಕ ಅಕ್ಷರ್‌ ಪಟೇಲ್‌ 39 ಎಸೆತಗಳಲ್ಲಿ 57 ರನ್‌ (3 ಸಿಕ್ಸರ್‌, 5 ಬೌಂಡರಿ) ಗಳಿಸಿದ್ದು ಬಿಟ್ಟರೆ ಉಳಿದ ಯಾರೊಬ್ಬರು ಕ್ರೀಸ್‌ನಲ್ಲಿ ಉಳಿಯದ ಕಾರಣ ಆರ್‌ಸಿಬಿ ಸುಲಭ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಇನ್ನುಳಿದಂತೆ ಶಾಯ್‌ ಹೋಪ್‌ 29 ರನ್‌, ಕುಮಾರ್‌ ಕುಮಾರ್‌ ಕುಶಾರ್ಗ 2 ರನ್‌, ಸ್ಟಬ್ಸ್‌ 3 ರನ್‌, ರಸಿಕ್‌ ಸಲಾಮ್‌ 10 ರನ್‌, ಮುಕೇಶ್‌ ಕುಮಾರ್‌ 3 ರನ್‌, ಕುಲ್ದೀಪ್‌ ಯಾದವ್‌ 3 ರನ್‌ ಗಳಿಸಿ ಔಟಾದರು.

    ಇದಕ್ಕೂ ಮುನ್ನ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಆರ್‌ಸಿಬಿ ಆಟಗಾರರು 200 ರನ್‌ಗಳನ್ನು ತಲುಪುವಲ್ಲಿ ವಿಫಲರಾದರು. ರಜತ್ ಪಾಟೀದಾರ್ ಸ್ಫೋಟಕ ಅರ್ಧಶತಕ, ವಿಲ್ ಜ್ಯಾಕ್ಸ್, ವಿರಾಟ್ ಕೊಹ್ಲಿ ಸ್ಫೋಟಲ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 9 ವಿಕೆಟ್ ಕಳೆದುಕೊಂಡು 187 ರನ್ ಬಾರಿಸಿತ್ತು. ಈ ಮೂಲಕ ಡೆಲ್ಲಿ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿತ್ತು.

    ಮೊದಲಿಗೆ ಆರ್‌ಸಿಬಿ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ನಾಯಕ ಫಾಫ್ ಡು ಪ್ಲೆಸಿಸ್ ಕೇವಲ 6 ರನ್ ಗಳಿಸಿ ಮುಕೇಶ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಕೇವಲ 13 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 27 ರನ್ ಸಿಡಿಸಿದ ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು.

    ಅಬ್ಬರಿಸಿದ ಪಾಟೀದಾರ್-ಜ್ಯಾಕ್ಸ್:
    ಕೇವಲ 36 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಆರ್‌ಸಿಬಿ ತಂಡಕ್ಕೆ 3ನೇ ವಿಕೆಟ್‌ಗೆ ರಜತ್ ಪಾಟೀದಾರ್ ಹಾಗೂ ವಿಲ್ ಜ್ಯಾಕ್ಸ್ ಕೇವಲ 53 ಎಸೆತಗಳಲ್ಲಿ 88 ರನ್‌ಗಳ ಜೊತೆಯಾಟ ನೀಡುವ ಮೂಲಕ ಬಲ ತುಂಬಿದರು. ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಪಾಟೀದಾರ್ ಕೇವಲ 29 ಎಸೆತಗಳಲ್ಲೇ 5ನೇ ಅರ್ಧಶತಕ ಸಿಡಿಸಿದರು. ಅಂತಿಮವಾಗಿ ಪಾಟೀದಾರ್ 32 ಎಸೆತಗಳಲ್ಲಿ 52 ರನ್ (3 ಸಿಕ್ಸರ್‌, 3 ಬೌಂಡರಿ) ಚಚ್ಚಿ ಔಟಾದರು. ಈ ಬೆನ್ನಲ್ಲೇ ವಿಲ್ ಜ್ಯಾಕ್ಸ್‌ 41 ರನ್ (29 ಎಸೆತ, 3 ಬೌಂಡರಿ, 2 ಸಿಕ್ಸರ್) ಬಾರಿಸಿ ಪೆವಿಲಿಯನ್‌ ಹಾದಿ ಹಿಡಿದರು. ಬಳಿಕ ಕ್ರೀಸ್‌ಗಿಳಿದ ಕ್ಯಾಮರೂನ್‌ ಗ್ರೀನ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. 24 ಎಸೆತ ಎದುರಿಸಿದ ಗ್ರೀನ್‌ ಅಜೇಯ 32 ರನ್ (1 ಬೌಂಡರಿ, 2 ಸಿಕ್ಸರ್) ಬಾರಿಸಿದರು.

    ಇನ್ನು ಮಧ್ಯಮ ಕ್ರಮಾಂಕದಲ್ಲಿ ಆರ್‌ಸಿಬಿ ಭರ್ಜರಿಯಾಗಿ ರನ್ ಗಳಿಸಿತಾದರೂ ಉತ್ತಮವಾಗಿ ಫಿನೀಶ್ ಮಾಡಲು ಸಾಧ್ಯವಾಗಲಿಲ್ಲ. ಮಹಿಪಾಲ್ ಲೋಮ್ರಾರ್ ಕೇವಲ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಿರ್ಣಾಯಕ ಘಟ್ಟದಲ್ಲಿ ದಿನೇಶ್ ಕಾರ್ತಿಕ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. ಇದು ಆರ್‌ಸಿಬಿ ರನ್ ವೇಗಕ್ಕೆ ಕಡಿವಾಣ ಬೀಳುವಂತೆ ಮಾಡಿತು.

    ಡೆಲ್ಲಿ ಕ್ಯಾಪಿಟಲ್ಸ್‌ ಪರ ಖಲೀಲ್‌ ಅಹ್ಮದ್‌, ರಸಿಕ್‌ ಸಲಾಮ್‌ ತಲಾ 2 ವಿಕೆಟ್‌ ಕಿತ್ತರೆ, ಇಶಾಂತ್‌ ಶರ್ಮಾ, ಮುಕೇಶ್‌ ಕುಮಾರ್‌, ಕುಲ್ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್‌ ಔಟ್‌; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಲಕ್‌?

    ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್‌ ಔಟ್‌; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಲಕ್‌?

    ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಐಪಿಎಲ್‌ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ (Rishabh Pant) ಸೇವೆ ಅಲಭ್ಯವಾಗುವ ಹಿನ್ನೆಲೆಯಲ್ಲಿ ಬದಲಿ ನಾಯಕನನ್ನು ಫ್ರಾಂಚೈಸಿ ಘೋಷಿಸಿದೆ.

    ಮೂರುಬಾರಿ ನಿಧಾನಗತಿಯ ಓವರ್ ರೇಟ್ ನಿಂದ ಐಪಿಎಲ್‌ ನಿಯಮ (Slow Over Rate) ಉಲ್ಲಂಘಿಸಿದ್ದಕ್ಕಾಗಿ ರಿಷಭ್‌ ಪಂತ್‌ಗೆ ಬಿಸಿಸಿಐ 30 ಲಕ್ಷ ರೂ. ದಂಡ ವಿಧಿಸಿದೆ. ಇದರೊಂದಿಗೆ ಒಂದು ಪಂದ್ಯದಿಂದ ಅಮಾನತುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಭಾನುವಾರದ ಪಂದ್ಯಕ್ಕೆ ಬದಲಿ ನಾಯಕನನ್ನು ಘೋಷಿಸಲಾಗಿದೆ.

    ಸೂಪರ್‌ ಸಂಡೇ (ಮೇ 12) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಿಂದ ರಿಷಭ್ ಪಂತ್ ಹೊರಗುಳಿಯಲಿದ್ದಾರೆ. ಹಾಗಾಗಿ ಅಕ್ಷರ್ ಪಟೇಲ್ (Axar Patel) ಅವರಿಗೆ ತಂಡವನ್ನು ಮುನ್ನಡೆಸುವ ಜವಾಬ್ದಾರಿ ನೀಡಲಾಗುವುದು ಎಂದು ಕೋಚ್‌ ರಿಕಿ ಪಾಂಟಿಂಗ್ ಖಚಿತಪಡಿಸಿದ್ದಾರೆ. ಭಾನುವಾರ ಸಂಜೆ 7:30ರ ವೇಳೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತಂಡಗಳು ಸೆಣಸಲಿವೆ.

    ಬ್ಯಾಟಿಂಗ್‌ ಬಲದ ಚಿಂತೆ:
    ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಅಗ್ರ ಕ್ರಮಾಂಕದಲ್ಲಿ ಫ್ರೆಸರ್‌ ಮೆಕ್‌ಗಾರ್ಕ್‌, ಪೃಥ್ವಿ ಶಾ, ಅಭಿಷೇಕ್‌ ಪೋರೆಲ್‌ ಬ್ಯಾಟಿಂಗ್‌ ಬಲ ನೀಡುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಶಾಯ್‌ ಹೋಪ್‌, ರಿಷಭ್‌ ಪಂತ್‌, ಅಕ್ಷರ್‌ ಪಟೇಲ್‌ ಫಾರ್ಮ್‌ನಲ್ಲಿದ್ದರು. ಆದ್ರೆ ರಿಷಭ್‌ ಪಂತ್‌ ಅವರ ಅಲಭ್ಯತೆಯು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಬಲದ ಚಿಂತೆ ತಂದೊಡ್ಡಿದೆ. ಅಲ್ಲದೇ ಪ್ಲೇ ಆಫ್‌ ರೇಸ್‌ನಲ್ಲಿರುವ ಡೆಲ್ಲಿ ತಂಡಕ್ಕೆ ಗೆಲುವು ಕೈ ಹಿಡಿಯುತ್ತಾ ಎಂಬುದನ್ನ ಕಾದು ನೋಡಬೇಕಿದೆ.

    ದಂಡ ವಿಧಿಸಿದ್ದು ಏಕೆ?
    ಮೇ 7 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ (Arun Jaitley Stadium) ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ನಿಧಾನಗತಿಯ ಬೌಲಿಂಗ್‌ ನಡೆಸಿತ್ತು. ಇದಕ್ಕಾಗಿ ಪಂತ್‌ ಅವರಿಗೆ 30 ಲಕ್ಷ ರೂ. ದಂಡದೊಂದಿಗೆ ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಉಳಿದ 11 ಸದಸ್ಯರಿಗೆ ತಲಾ 12 ಲಕ್ಷ ರೂ. ಅಥವಾ ಆಯಾ ಪಂದ್ಯ ಶುಲ್ಕದ 50 ಪ್ರತಿಶತದಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್‌ ಮಂಡಳಿ ತಿಳಿಸಿದೆ.

    30 ಲಕ್ಷ ದಂಡ ಯಾಕೆ?
    ಐಪಿಎಲ್‌ನಲ್ಲಿ ಮೊದಲ ಬಾರಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕನಿಗೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. 2ನೇ ಬಾರಿ ಈ ತಪ್ಪನ್ನು ಮಾಡಿದರೆ ನಾಯಕನಿಗೆ 24 ಲಕ್ಷ ರೂ. ದಂಡದ ಜೊತೆ ಆಟಗಾರರಿಗೂ ದಂಡ ವಿಧಿಸಲಾಗುತ್ತದೆ. 3ನೇ ಬಾರಿಗೆ ದಂಡ ವಿಧಿಸಿದರೆ 30 ಲಕ್ಷ ದಂಡದೊಂದಿಗೆ ಒಂದು ಪಂದ್ಯದಿಂದ ನಾಯಕನನ್ನು ಅಮಾನತುಗೊಳಿಸಲಾಗುತ್ತದೆ.

    ಪಂದ್ಯಕ್ಕೆ ಮೀಸಲಾದ ಸಮಯ ಎಷ್ಟು?
    ಐಪಿಎಲ್‌ ನಿಯಮದ ಪ್ರಕಾರ ಒಂದು ತಂಡ 20 ಓವರ್‌ಗಳನ್ನು 90 ನಿಮಿಷದ ಒಳಗಡೆ ಮುಗಿಸಬೇಕು. ಈ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣ ಮಾಡದೇ ಇದ್ದರೂ 20ನೇ ಓವರ್‌ ಅನ್ನು 90ನೇ ನಿಮಿಷದಲ್ಲೇ ಆರಂಭಿಸಬೇಕು. ಈ ನಿಯಮವನ್ನು ಮೊದಲ ಬಾರಿ ಉಲ್ಲಂಘಿಸಿದರೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. ಪ್ರತಿ ಪಂದ್ಯದಲ್ಲಿ 2 ನಿಮಿಷ 30 ಸೆಕೆಂಡಿನ 4 ಸ್ಟ್ರಟೆಜಿಕ್‌ ಟೈಮ್‌ ಔಟ್‌ ಬ್ರೇಕ್‌ಗಳು ಇರುತ್ತದೆ. ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ ತಂಡ 6-9 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು. 2ನೇ ಸ್ಟ್ರಟೆಜಿಕ್‌ ಟೈಮ್‌ ಔಟ್‌ ಅನ್ನು ಬ್ಯಾಟಿಂಗ್ ತಂಡ 13-16 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು.