Tag: ರೂಪಾ

  • ರೋಹಿಣಿ ವಿರುದ್ಧ ನಿಲ್ಲದ ಸಮರ – ಮತ್ತೆ ಪೋಸ್ಟ್‌ ಹಂಚಿಕೊಂಡ ರೂಪಾ

    ರೋಹಿಣಿ ವಿರುದ್ಧ ನಿಲ್ಲದ ಸಮರ – ಮತ್ತೆ ಪೋಸ್ಟ್‌ ಹಂಚಿಕೊಂಡ ರೂಪಾ

    ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಮಾತನಾಡಬಾರದು, ಸಾಮಾಜಿಕ ಜಾಲತಾಣದಲ್ಲಿ (Social Media) ವೈಯಕ್ತಿಕ ಮಾನಹಾನಿ ಮಾಡಬಾರದು ಎಂದು ಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಸಾಮಾಜಿಕ ಜಾಲತಾಣದಲ್ಲಿ ರೂಪಾ (IPS Roopa) ಮತ್ತೆ ಪೋಸ್ಟ್‌ ಹಾಕುವುದನ್ನು ಮುಂದುವರಿಸಿದ್ದಾರೆ.

    ರೋಹಿಣಿ ಸಿಂಧೂರಿ ವಿರುದ್ದ ಸರ್ಕಾರದ ಕೆಲವು ಕ್ರಮಗಳ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು.  ಈ ಮಾಧ್ಯಮ ವರದಿಯ ಕೆಲವು ಪೋಸ್ಟ್‌ಗಳನ್ನು ತಮ್ಮ ಫೇಸ್ ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ದಯವಿಟ್ಟು ನನ್ನನ್ನು ಜೈಲಿಂದ ಹೊರಗೆ ಕಳಿಸ್ಬೇಡಿ – ಎನ್‌ಕೌಂಟರ್ ಭೀತಿಗೆ ನ್ಯಾಯಾಲಯ ಮೊರೆ ಹೋದ UP ಗ್ಯಾಂಗ್‌ಸ್ಟರ್

    ರೋಹಿಣಿ ಸಿಂಧೂರಿ ಅವರು ಡಿ. ರೂಪಾ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಮಂಗಳವಾರ ಪತಿ ಸುಧೀರ್ ರೆಡ್ಡಿ (Sudhir Reddy) ಜೊತೆ ಖುದ್ದು 24ನೇ ಎಸಿಎಂಎಂ ಕೋರ್ಟ್‌ಗೆ (ACMM Court) ಹಾಜರಾಗಿದ್ದ ರೋಹಿಣಿ ಸಿಂಧೂರಿ, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು.

    ತಡೆಯಾಜ್ಞೆ ಇದ್ದರೂ, ರೂಪಾ ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್ ಹಾಕುತ್ತಲೇ ಇದ್ದಾರೆ. ಅವಹೇಳನ ಬರವಣಿಗೆ ಪೋಸ್ಟ್ ಮಾಡುತ್ತಿದ್ದಾರೆ. ಕೆಲವೊಮ್ಮೆ ಮಾತನಾಡಿದರೆ ಪರವಾಗಿಲ್ಲ, ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದರು.

    ರೋಹಿಣಿ ಹೇಳಿಕೆ ಆಧರಿಸಿ ಡಿ.ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಕೋರ್ಟ್ ಮಾರ್ಚ್ 3ಕ್ಕೆ ವಿಚಾರಣೆ ಮುಂದೂಡಿದೆ.

  • ಕ್ಷಮೆ ಕೇಳದಿದ್ದರೆ 1 ಕೋಟಿ ರೂ. ಮಾನನಷ್ಟ ಕೇಸ್ – ರೂಪಾಗೆ ರೋಹಿಣಿ ಎಚ್ಚರಿಕೆ

    ಕ್ಷಮೆ ಕೇಳದಿದ್ದರೆ 1 ಕೋಟಿ ರೂ. ಮಾನನಷ್ಟ ಕೇಸ್ – ರೂಪಾಗೆ ರೋಹಿಣಿ ಎಚ್ಚರಿಕೆ

    ಬೆಂಗಳೂರು: ರೂಪಾ, ರೋಹಿಣಿ ಜಟಾಪಟಿ ನಿಂತು ನಿಲ್ಲದಂತೆ ಮುಂದುವರಿಯುತ್ತಲೇ ಇದೆ. ಅಸ್ತ್ರ – ಪ್ರತ್ಯಾಸ್ತ್ರದ ಯುದ್ಧಕ್ಕೆ ಕಾನೂನಿನ ಕಲೆ ಬಂದಿದೆ. ಕಾನೂನು ಹೋರಾಟ ಮಾಡಲು ಸಿದ್ಧವಾಗಿರುವ ರೋಹಿಣಿ ಮಾನನಷ್ಟ ಮೊಕದ್ದಮೆಯನ್ನು ಹಾಕಿದ್ದಾರೆ.

    ರೋಹಿಣಿ ಸಿಂಧೂರಿ (Rohini Sindhuri), ರೂಪಾ (D Roopa) ಕಥೆ ಶುರುವಾದಾಗಿನಿಂದ ದಿನಕ್ಕೊಂದು ಸ್ಫೋಟಕ ಟ್ವಿಸ್ಟ್ ಸಿಗುತ್ತಲೆ ಇದೆ. ಒಬ್ಬರ ಮೇಲೋಬ್ಬರು ಯುದ್ಧ ಸಾರುತ್ತಲೇ ಇದ್ದಾರೆ. ಈಗ ಅದಕ್ಕೆ ಕಾನೂನಿನ ಬಣ್ಣ ಬಂದಿದೆ. ರೂಪಾ ಐಪಿಎಸ್ ಅಧಿಕಾರಿ ಆಗಿದ್ರೂ ಮಹಿಳೆಯ ಗೌರವಕ್ಕೆ ಧಕ್ಕೆಯಾಗುವಂತೆ ವೈಯಕ್ತಿಕ ಫೋಟೋಗಳನ್ನು ಫೇಸ್‍ಬುಕ್ ಅಲ್ಲಿ ಹಾಕಿದ್ದಾರೆ. ಅವರ ವಿರುದ್ಧ ನಿರ್ಬಂಧಾಜ್ಞೆಯನ್ನು ಹೇರಬೇಕು ಎಂದು ರೋಹಿಣಿ ಸಿಂಧೂರಿ ಕೋರ್ಟ್ (Court) ಮೆಟ್ಟಿಲೇರಿದ್ದಾರೆ.

    ರೂಪಾ ತನ್ನ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಈ ಹಿಂದೆ ಸೈಬರ್ ಸೆಲ್‍ನ ಮುಖ್ಯಸ್ಥರು ಆಗಿದ್ದರು. ಆ ಸಂದರ್ಭದಲ್ಲಿ ರೋಹಿಣಿಯವರ ಫೋಟೋ ಕಳವು ಮಾಡಿರಬಹುದು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೋಹಿಣಿ ಪರ ವಕೀಲರು ವಾದ ಮಂಡಿಸಿದ್ದಾರೆ.

    ರೂಪಾ ವಿರುದ್ಧ ಪೊಲೀಸ್ ಠಾಣೆಗೂ ದೂರು ನೀಡಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೂಡ ದೂರು ನೀಡಿದ್ದರೂ, ಚೌಕಟ್ಟು ಮೀರಿ ನಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು. ವಾದವನ್ನು ಆಲಿಸಿದ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ ಭದ್ರಕೋಟೆ ಸಂಡೂರಿಗೆ ಬರುತ್ತಿದ್ದಾರೆ ಅಮಿತ್‌ ಶಾ : ಬಿಜೆಪಿ ಪ್ಲ್ಯಾನ್‌ ಏನು?

    ಒಂದು ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ರೂಪಾಗೆ ಹಿರಿಯ ವಕೀಲರ ಮೂಲಕ ನೋಟಿಸ್ ನೀಡಲಾಗಿದೆ. 24 ಗಂಟೆಯ ಒಳಗಡೆ ಲಿಖಿತ ರೂಪದಲ್ಲಿ ಕ್ಷಮೆ ಕೇಳಬೇಕು. ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಮಾಡಿರುವ ಮಾನಹಾನಿ ಆರೋಪಗಳನ್ನು ಡಿಲೀಟ್ ಮಾಡಬೇಕು. ಇಲ್ಲದಿದ್ದರೆ ಕೋರ್ಟ್‍ನಲ್ಲಿ 1 ಕೋಟಿ ರೂ. ಮಾನನಷ್ಟ ಕೇಸ್ ಹೂಡುವುದಾಗಿ ರೋಹಿಣಿ ಸಿಂಧೂರಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಡಿ.ರೂಪಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರೋಹಿಣಿ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರೋಹಿಣಿ ಸಿಂಧೂರಿ ವಿರುದ್ಧ ಅಕ್ರಮ ಆಸ್ತಿ ಆರೋಪ- IAS ಅಧಿಕಾರಿ ಆಸ್ತಿಯ Exclusive  ಡೀಟೆಲ್ಸ್ ಇಲ್ಲಿದೆ

    ರೋಹಿಣಿ ಸಿಂಧೂರಿ ವಿರುದ್ಧ ಅಕ್ರಮ ಆಸ್ತಿ ಆರೋಪ- IAS ಅಧಿಕಾರಿ ಆಸ್ತಿಯ Exclusive ಡೀಟೆಲ್ಸ್ ಇಲ್ಲಿದೆ

    ಬೆಂಗಳೂರು: ಐಎಎಸ್ (IAS) ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಹಾಗೂ ಐಪಿಎಸ್ (IPS) ಅಧಿಕಾರಿ ರೂಪಾ (Roopa) ಕಿತ್ತಾಟದ ಇನ್ನಷ್ಟು ಸ್ಫೋಟಕ ಮಾಹಿತಿ ಲಭ್ಯವಾಗಿದೆ. ರೋಹಿಣಿ ಸಿಂಧೂರಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ. ತಾವು ಮಾಡಿರೋ ಆಸ್ತಿಯನ್ನು ಮುಚ್ಚಿಡೋ ಪ್ರಯತ್ನ ಮಾಡ್ತಾ ಇದ್ದಾರೆ ಅಂತ ರೂಪಾ ಆರೋಪ ಮಾಡಿದ್ರು.

    ಅಲ್ಲದೇ ಜಾಲಹಳ್ಳಿ ಮನೆಯ ಬಗ್ಗೆ ಪ್ರಶ್ನೆ ಮಾಡಿರೋ ರೂಪಾ, ಅಕ್ರಮವಾಗಿ ಫರ್ನಿಚರ್ ಗಳನ್ನು ತರಿಸ್ತಾ ಇದ್ದಾರೆ. ಐಎಎಸ್ ಅಧಿಕಾರಿಯ ಲಾಭ ಪಡೆಯುತ್ತಾ ಇದ್ದಾರೆ ಅಂತ ಆರೋಪಿಸಿದ್ರು. ಇದಕ್ಕೆ ಉತ್ತರ ನೀಡಿರೋ ರೋಹಿಣಿ ನನ್ನ ಆಸ್ತಿಯನ್ನು ಘೋಷಣೆ ಮಾಡಿಕೊಂಡಿದ್ದೇನೆ ಅಂದಿದ್ದಾರೆ.

    ಇದರ ಬೆನ್ನಲ್ಲೇ, ಪಬ್ಲಿಕ್ ಟಿವಿ ರೋಹಿಣಿ ಆಸ್ತಿ ಬಗ್ಗೆ ಮಾಹಿತಿ ಕಲೆ ಹಾಕಿದೆ. ಇದರ ಪ್ರಕಾರ, ರೋಹಿಣಿ ಘೋಷಿಸಿಕೊಂಡಿರೋ ಪ್ರಕಾರ, ಅವರ ಆಸ್ತಿಯೆಲ್ಲಾ ಪಿತ್ರಾರ್ಜಿತವಾಗಿದೆ (Property Details). ಇದನ್ನೂ ಓದಿ: ರೋಹಿಣಿ, ರೂಪಾರನ್ನು ಅಮಾನತು ಮಾಡಿ ತನಿಖೆ ನಡೆಸಿ: ಹೆಚ್.ವಿಶ್ವನಾಥ್ ಆಗ್ರಹ

    ಎಲ್ಲೆಲ್ಲಿ ರೋಹಿಣಿ ಸಿಂಧೂರಿ ಆಸ್ತಿ ಇದೆ..?
    * ಕಲ್ಲೂರು, ತೆಲಂಗಾಣ (Telangana):
    > ಆಸ್ತಿ ಮೌಲ್ಯ: 1 ಕೋಟಿ
    > ವಿಸ್ತೀರ್ಣ: 1122 ಚದರ ಅಡಿ
    > ಪೆಟ್ರೋಲ್ ಬಂಕ್ ಲೀಸ್
    > ವಾರ್ಷಿಕ ಆದಾಯ: 2 ಲಕ್ಷ
    > ಯಾರ ಆಸ್ತಿ: ತಾಯಿ ಆಸ್ತಿ
    > ಅವಿಭಜಿತ ಆಸ್ತಿ

    * ರುದ್ರಾಕ್ಷಪಲ್ಲಿ, ಕಮ್ಮಂ ಜಿಲ್ಲೆ
    > ಆಸ್ತಿ ಮೌಲ್ಯ: 2.5 ಕೋಟಿ
    > ಕೃಷಿ ಭೂಮಿ: 55 ಎಕರೆ
    > ವಾರ್ಷಿಕ ಆದಾಯ: 7.00 ಲಕ್ಷ
    > ಯಾರ ಆಸ್ತಿ: ಪಿತ್ರಾರ್ಜಿತ ಆಸ್ತಿ
    > ಅವಿಭಜಿತ ಆಸ್ತಿ (ಪಿರ್ತಾಜಿತ ಆಸ್ತಿ, ಇನ್ನೂ ಪಾಲಾಗಿಲ್ಲ)

    * ಕಮ್ಮಂ ಜಿಲ್ಲೆ, ತೆಲಂಗಾಣ
    > ಆಸ್ತಿ ಮೌಲ್ಯ: 1.5 ಕೋಟಿ
    > ವಿಸ್ತೀರ್ಣ: 2300 ಚದರ ಅಡಿ
    > ವಾರ್ಷಿಕ ಆದಾಯ: 1 ಲಕ್ಷ
    > ಹೋಟೆಲ್‍ವೊಂದಕ್ಕೆ ಲೀಸ್
    > ಯಾರ ಆಸ್ತಿ: ತಾಯಿ ಆಸ್ತಿ
    > ಅವಿಭಜಿತ ಆಸ್ತಿ

    * ಕಮ್ಮಂ ಜಿಲ್ಲೆ, ತೆಲಂಗಾಣ
    > ಆಸ್ತಿ ಮೌಲ್ಯ: 1 ಕೋಟಿ
    > ಜಮೀನು: 1 ಎಕರೆ
    > ಯಾರ ಆಸ್ತಿ: ತಂದೆ ಹೆಸರಿನಲ್ಲಿದೆ
    > ವಾರ್ಷಿಕ ಆದಾಯ; 2 ಲಕ್ಷ

    * ಹೈದ್ರಾಬಾದ್, ನಿವೇಶನ: 3
    > ಆಸ್ತಿ ಮೌಲ್ಯ: 1 ಕೋಟಿ
    > ವಾರ್ಷಿಕ ಆದಾಯ: 2.5 ಲಕ್ಷ
    > ಯಾರ ಆಸ್ತಿ; ತಾಯಿ ಹೆಸರಿನಲ್ಲಿದೆ
    > ಅವಿಭಜಿತ ಆಸ್ತಿ

    * ತಲ್ಲಾಪುರ, ಮೇಧಕ್ ಜಿಲ್ಲೆ
    > ಆಸ್ತಿ ಮೌಲ್ಯ: 40 ಲಕ್ಷ
    > ವಿಸ್ತೀರ್ಣ: 500 ಚದರ ಗಜ
    > ಯಾರ ಆಸ್ತಿ: ತಂದೆ ಹೆಸರಿನಲ್ಲಿದೆ
    > ವಾರ್ಷಿಕ ಆದಾಯ ಇಲ್ಲ
    > ಅವಿಭಜಿತ ಆಸ್ತಿ

    * ಶಂಷಾಬಾದ್, ರಂಗಾರೆಡ್ಡಿ ಜಿಲ್ಲೆ
    > ವಿಸ್ತೀರ್ಣ: 600 ಚದರ ಗಜ
    > ಯಾರ ಆಸ್ತಿ: ತಂದೆ ಹೆಸರಿನಲ್ಲಿದೆ
    > ವಾರ್ಷಿಕ ಆದಾಯ ಇಲ್ಲ
    > ಅವಿಭಜಿತ ಆಸ್ತಿ

    * ಸೀಗೆಹಳ್ಳಿ, ಯಲಹಂಕ, ಬೆಂಗಳೂರು
    > ವಿಸ್ತೀರ್ಣ: 4123 ಚದರಡಿ
    > ಆಸ್ತಿ ಮೌಲ್ಯ: 60 ಲಕ್ಷ
    > ಮಂಜೂರು: ಐಎಎಸ್ ಸಹಕಾರ ಸಂಘ
    > ರೋಹಿಣಿ ಹೆಸರಿಗೆ ರಿಜಿಸ್ಟರ್ ಆಗಿಲ್ಲ

    ಒಟ್ಟಿನಲ್ಲಿ ರೋಹಿಣಿ ಸಿಂಧೂರಿ ಸ್ವಯಂ ಘೋಷಣೆ ಮಾಡಿಕೊಂಡಿರೋ ಪ್ರಕಾರ, ಈಗಿರೋ ಆಸ್ತಿಯೆಲ್ಲಾ ಪಿತ್ರಾರ್ಜಿತವಾಗಿದೆ. ಹೀಗಾಗಿ ರೂಪಾ ಮಾಡಿರೋ ಆರೋಪ ಎಷ್ಟು ಸತ್ಯ…? ಎಷ್ಟು ಸುಳ್ಳು ಅನ್ನೋ ಚರ್ಚೆ ಆಗುತ್ತಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಮ್ಮ ಕುಟುಂಬ ಚೆನ್ನಾಗಿ ಇರಬೇಕು ಅಂತಾ ಹೋರಾಟ ಮಾಡುತ್ತಿದ್ದೇವೆ: ರೂಪಾ

    ನಮ್ಮ ಕುಟುಂಬ ಚೆನ್ನಾಗಿ ಇರಬೇಕು ಅಂತಾ ಹೋರಾಟ ಮಾಡುತ್ತಿದ್ದೇವೆ: ರೂಪಾ

    ಬೆಂಗಳೂರು: ನಾನು, ನನ್ನ ಗಂಡ ಇನ್ನೂ ಒಟ್ಟಾಗಿದ್ದೇವೆ. ನಮ್ಮ ಕುಟುಂಬ ಚೆನ್ನಾಗಿ ಇರಬೇಕು ಅಂತಾ ಹೋರಾಟ ಮಾಡುತ್ತಿದ್ದೇವೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ತಿಳಿಸಿದರು.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಆರ್‍ಟಿಐ ಕಾರ್ಯಕರ್ತ ಗಂಗರಾಜು ಜೊತೆಗಿನ ಆಡಿಯೋ ಸಂಭಾಷಣೆ ವಿಚಾರವಾಗಿ ಸ್ಪಷ್ಟನೆ ನೀಡಿದರು. ಒಬ್ಬ ಐಎಎಸ್ ಅಧಿಕಾರಿ ಕರ್ನಾಟಕದಲ್ಲಿ ಮೃತಪಟ್ಟಿದ್ದರು, ಐಪಿಎಸ್ ಅಧಿಕಾರಿಯೊಬ್ಬರು ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಬ್ಬ ಐಎಎಸ್ ದಂಪತಿ ಬೇರೆ ಆಗಿದ್ದಾರೆ ಎಂದರು.

    ಸುಖ-ಸಂಸಾರಗಳಿಗೆ ಅಡ್ಡಿ ಆಗುತ್ತಿರುವವರನ್ನು ಪ್ರಶ್ನೆ ಮಾಡಿ. ಇಲ್ಲವಾದರೆ, ಹಲವು ಕುಟುಂಬಗಳು ನಾಶವಾಗುತ್ತವೆ. ನಾನು ಧೈರ್ಯವಾದ ಮಹಿಳೆ, ನಾನು ಹೋರಾಡುತ್ತೇನೆ. ಎಲ್ಲ ಮಹಿಳೆಯರಿಗೂ ಆ ಶಕ್ತಿ ಇರುವುದಿಲ್ಲ. ಅಂತಹ ಮಹಿಳೆಯರಿಗೆ ಧ್ವನಿಯಾಗೋಣ. ಕೌಟುಂಬಿಕ ಮೌಲ್ಯಗಳಿಗೆ ಭಾರತ ಹೆಸರುವಾಸಿಯಾಗಿದೆ ಅದನ್ನು ಮುಂದುವರಿಸೋಣ ಎಂದು ಹೇಳಿದರು. ಇದನ್ನೂ ಓದಿ: ಗಂಗರಾಜು ಜೊತೆ ರೂಪಾ ಮಾತಾಡಿರೋ ಆಡಿಯೋ ಲೀಕ್

    ನಾನು ಯಾವತ್ತೂ ಭ್ರಷ್ಟಾಚಾರ ಪರವಾಗಿ ಕೆಲಸ ಮಾಡಿಲ್ಲ. ನಾನು ಯಾವತ್ತಿಗೂ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುತ್ತೇನೆ. ಅವತ್ತು, ಇವತ್ತಿಗೂ ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡೋಳು. ಗಂಗರಾಜುಗೆ ಭ್ರಷ್ಟಾಚಾರ ವಿರುದ್ಧ ಹೋರಾಟ ನಿಲ್ಲಿಸಲು ನಾನು ಹೇಳಿಲ್ಲ. ನಿಲ್ಲಿಸಿ ಅಂತಾ ಹೇಳಿದ್ರೆ ಅದನ್ನು ಪ್ರೂವ್ ಮಾಡಲಿ. ಅನಾವಶ್ಯಕವಾಗಿ ಆಡಿಯೋ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ರೋಹಿಣಿ ಸಿಂಧೂರಿ ಭ್ರಷ್ಟಾಚಾರದ ಬಗ್ಗೆ ಮಾತ್ರ ಚರ್ಚೆ ಆಗಲಿ. ಇಲ್ಲಿ ಕೌಟುಂಬಿಕ ಮತ್ತು ವೈಯಕ್ತಿಕ ವಿಚಾರಗಳ ಚರ್ಚೆ ಬೇಡ ಎಂದರು.

    ಗಂಗರಾಜು ಮೇಲೆ ಕೂಡ ಹಲವು ಕ್ರಿಮಿನಲ್ ಕೇಸ್‍ಗಳಿವೆ. ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚೆ ಮಾಡುವುದಾರೆ, ಯಾವ್ಯಾವ ಐಎಎಸ್ ದಂಪತಿ ಬೇರ್ಪಟ್ಟಿದ್ದಾರೆ. ತಮಿಳುನಾಡಿನ ಯಾವ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಯಾಕೆ ಮಾಡಿಕೊಂಡರು. ಯಾರಿಂದ ಯಾರು, ಯಾಕೆ ಆತ್ಮಹತ್ಯೆ ಮಾಡಿಕೊಂಡರು, ಇದು ಚರ್ಚೆ ಆಗಲಿ ಎಂದು ಹೇಳಿದರು. ಇದನ್ನೂ ಓದಿ: ಡಿ.ರೂಪಾ ವಿರುದ್ಧ ದೂರು, ದಾಖಲಾಗದ ಎಫ್‍ಐಆರ್- ಕೋರ್ಟ್ ಮೋರೆ ಹೋಗಿ FIRಗೆ ಸಿದ್ಧತೆ?

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗಂಗರಾಜು ಜೊತೆ ರೂಪಾ ಮಾತಾಡಿರೋ ಆಡಿಯೋ ಲೀಕ್

    ಗಂಗರಾಜು ಜೊತೆ ರೂಪಾ ಮಾತಾಡಿರೋ ಆಡಿಯೋ ಲೀಕ್

    ಮೈಸೂರು: ಐಪಿಎಸ್ ಅಧಿಕಾರಿ ರೂಪಾ (Roopa) ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗುತ್ತಿದೆ. ಈ ಆಡಿಯೋದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ರೂಪಾ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನೆ ಮಾಡಿದ್ದಾರೆ.

    ಈಗಾಗಲೇ ಐಎಎಸ್ ಅಧಿಕಾರಿ ರೋಹಿಣಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪ ನಡುವಿನ ಜಗಳಕ್ಕೆ ಸರ್ಕಾರ ಅಂತ್ಯ ಹಾಡಿದೆ. ರೋಹಿಣಿ ಸಿಂಧೂರಿ, ರೂಪಾ, ಹಾಗೂ ರೂಪಾ ಪತಿ ಮುನೀಷ್ ಮೌದ್ಗಿಲ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇದರ ಬೆನ್ನಲ್ಲೇ ಆರ್‌ಟಿಐ ಕಾರ್ಯಕರ್ತ ಗಂಗರಾಜು (Gangaraju) ಜೊತೆಗೆ ರೂಪಾ ಮಾತನಾಡಿರುವ ಆಡಿಯೋವೊಂದು ಲೀಕ್ ಆಗಿದ್ದು, ಚರ್ಚೆಗೆ ಕಾರಣವಾಗುತ್ತದೆ. ಇದನ್ನೂ ಓದಿ: ಹಣವಿಲ್ಲದೇ ಸ್ಥಳೀಯ ಚುನಾವಣೆಯನ್ನು ಮುಂದೂಡಿದ ಶ್ರೀಲಂಕಾ

    ಆಡಿಯೋದಲ್ಲಿ ಏನಿದೆ?: ನಮ್ಮವರನ್ನ ಬಳಸಿಕೊಂಡು ಲ್ಯಾಂಡ್ ಡೀಲ್ ಮಾಡುತ್ತಿದ್ದಾಳೆ. ಅವಳಿಂದ ಎಷ್ಟೋ ಮನೆ ಹಾಳಾಗಿದೆ. ಗಂಡನ ರಿಯಲ್ ಎಸ್ಟೇಟ್ ಪ್ರಮೋಟ್ ಮಾಡಲು ಅಧಿಕಾರಿಗಳಿಂದ ಸಾಕಷ್ಟು ಮಾಹಿತಿ ಪಡೆದಿದ್ದಾಳೆ. ಇದನ್ನು ಬೇಕಾದ್ರೆ ರೆಕಾರ್ಡ್ ಮಾಡ್ಕೊಳ್ಳಿ. ನೀವು ಅಕ್ರಮವಾಗಿ ಕೆಲಸ ಮಾಡಿಸಿಕೊಳ್ಳಲು ಬಂದಿದ್ದೀಯಾ ಇಲ್ಲಿಂದ ಎದ್ದು ಹೋಗು ಎಂದು ವ್ಯಕ್ತಿಗೆ ಬೈದು ರೂಪಾ ಕಳುಹಿಸಿದ್ದಾರೆ. ಇದನ್ನೂ ಓದಿ: ಬೇಸಿಗೆ ಆರಂಭದಲ್ಲೇ ಹಣ್ಣು, ತರಕಾರಿ ಏರಿಕೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರೋಹಿಣಿ ಸಿಂಧೂರಿ VS ರೂಪಾ – ಸರ್ಕಾರಕ್ಕೆ ಎಲ್ಲರ ಮೇಲೂ ಕ್ರಮ ಕೈಗೊಳ್ಳುವ ಶಕ್ತಿಯಿದೆ: ಗೋಪಾಲಯ್ಯ

    ರೋಹಿಣಿ ಸಿಂಧೂರಿ VS ರೂಪಾ – ಸರ್ಕಾರಕ್ಕೆ ಎಲ್ಲರ ಮೇಲೂ ಕ್ರಮ ಕೈಗೊಳ್ಳುವ ಶಕ್ತಿಯಿದೆ: ಗೋಪಾಲಯ್ಯ

    ಹಾಸನ: ನಮ್ಮ ಸರ್ಕಾರಕ್ಕೆ ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳುವ ಶಕ್ತಿಯಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಏನು ನಿರ್ದೇಶನ ಕೊಡಬೇಕು ಅದನ್ನು ಕೊಡ್ತಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ (K Gopalaiah) ಎಂದು ತಿಳಿಸಿದರು.

    ಅಧಿಕಾರಿಗಳಾದ ರೋಹಿಣಿ ಸಿಂಧೂರಿ (Rohini Sindhuri) ಹಾಗೂ ರೂಪಾ (D Roopa) ಕಿತ್ತಾಟ ವಿಚಾರ ಕುರಿತು ಹಾಸನ (Hassan) ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಮಾತನಾಡಿದ ಅವರು, ಇಬ್ಬರು ಹೆಣ್ಣುಮಕ್ಕಳು ಆ ರೀತಿ ಮಾಡಬಾರದಿತ್ತು. ಮುಖ್ಯಮಂತ್ರಿಗಳ ಹಂತದಲ್ಲೇ ಏನು ಕ್ರಮ ತೆಗೆದುಕೊಳ್ಳಬೇಕೋ,‌ ಆ ಕ್ರಮ ತೆಗೆದುಕೊಳ್ಳುವ ಕೆಲಸವನ್ನು ಮಾಡುತ್ತಾರೆ. ನಾನು ಅದರ ಬಗ್ಗೆ ಬೇರೆ ಏನು ಹೇಳಲ್ಲ. ಮುಖ್ಯಮಂತ್ರಿಗಳು ಅದರ ಬಗ್ಗೆ ಕ್ರಮ ವಹಿಸುತ್ತಾರೆ ಎಂದು ಹೇಳಿದರು.

    ಇದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಘಟನೆಯಲ್ಲ. ಯಾರೋ ಇಬ್ಬರು ವ್ಯಕ್ತಿಗಳ ಕಿತ್ತಾಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರಲ್ಲ. ಅವರು ತಪ್ಪು ಎಸಗಿದ್ದರೆ ಇಬ್ಬರ ಮೇಲೂ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂದರು. ಇದನ್ನೂ ಓದಿ: ಹಳೆಯ ಪೀಠೋಪಕರಣ ನೀಡಿದ್ದಕ್ಕೆ ಮದುವೆಯನ್ನು ರದ್ದುಪಡಿಸಿದ ವರ

    ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿ ಸೇರ್ಪಡೆ ಬಗ್ಗೆ ಸುಳಿವು ನೀಡಿದ ಅವರು, ಯಾರೇ ಒಬ್ಬರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಸಂದರ್ಭದಲ್ಲಿ ಗೌರವಯುತವಾಗಿ ಅವರನ್ನು ಕರೆದುಕೊಳ್ಳುವ ಕೆಲಸ ಮಾಡುತ್ತಾರೆ. ಯಾರೇ ಪಕ್ಷ ಸೇರ್ಪಡೆ ಬಗ್ಗೆ ವರಿಷ್ಠರ ಮಟ್ಟದಲ್ಲಿ ನಡೆಯುತ್ತಿದೆ. ಸೂಕ್ತ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ ಕಾರ್ಯಕ್ರಮ ಇರುತ್ತದೆ. 1999ರಲ್ಲಿ ಹಾಸನ ಜಿಲ್ಲೆಯ ಪುಣ್ಯಾತ್ಮರು ಬಿಜೆಪಿಗೆ 4 ಸ್ಥಾನ ಗೆಲ್ಲಿಸಿಕೊಟ್ಟಿದ್ದಾರೆ. ನಮಗೆ ವಿಶ್ವಾಸವಿದೆ ಮತ್ತೆ ಅದು ಪುನರಾವರ್ತನೆ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕಡಬದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ಆರಂಭ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಬ್ಬರು ಮಹಿಳಾ ಅಧಿಕಾರಿಗಳಿಗೆ ಸರ್ಕಾರದಿಂದ ಖಡಕ್ ಸೂಚನೆ

    ಇಬ್ಬರು ಮಹಿಳಾ ಅಧಿಕಾರಿಗಳಿಗೆ ಸರ್ಕಾರದಿಂದ ಖಡಕ್ ಸೂಚನೆ

    ಬೆಂಗಳೂರು: ಇನ್ನೊಬ್ಬ ಸರ್ಕಾರಿ ಅಧಿಕಾರಿಯ ವಿರುದ್ಧದ ಆರೋಪಕ್ಕೆ ಮಾಧ್ಯಮ ಬಳಕೆ ಮಾಡಬೇಡಿ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆಯಿದೆ ಎಂದು ಮಹಿಳಾ ಅಧಿಕಾರಿಗಳಿಗಿಬ್ಬರಿಗೂ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.

    ರೋಹಿಣಿ ಸಿಂಧೂರಿ (Rohini Sindhuri), ಡಿ. ರೂಪಾ (D Roopa) ಬೀದಿ ರಂಪಾಟ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ರಾಜ್ಯ ಸರ್ಕಾರ ಇಬ್ಬರಿಗೂ ನೋಟಿಸ್ ಜಾರಿ ಮಾಡಿದೆ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆ ಇದೆ. ಆದರೆ ಅದನ್ನು ಬಿಟ್ಟು ನೀವು ಮಾಧ್ಯಮ ಮುಂದೆ ಹೋಗಿದ್ದೀರಿ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಆಗಿದೆ. ಇದು ಅಖಿಲ ಭಾರತೀಯ ಸೇವಾ ನಿಯಮಗಳ ಉಲ್ಲಂಘನೆ ಎಂದು ತಿಳಿಸಿದೆ.

    ನಿಮ್ಮ ಆರೋಪಗಳನ್ನು ಸಕ್ಷಮ ಪ್ರಾಧಿಕಾರದ ಮುಂದೆ ಮಾಡಬಹುದು. ಮಾಧ್ಯಮಗಳ ಮುಂದೆ ಆರೋಪ ಮಾಡಿದ್ದೀರಾ. ಹೀಗಾಗಿ ನೀವು ಇನ್ನು ಮುಂದೆ ಮಾಧ್ಯಮಗಳ ಮುಂದೆ ಹೋಗಬಾರದು ಎಂದು ತಾಕೀತು ಮಾಡಿದೆ. ಇದನ್ನೂ ಓದಿ: ಮಹಿಳೆ, ಮಕ್ಕಳು ಸೇರಿ ನಾಲ್ವರ ಮೇಲೆ ಆ್ಯಸಿಡ್ ದಾಳಿ

    ರಾಜ್ಯ ಸರ್ಕಾರದಿಂದ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು, ಸಿಬ್ಬಂದಿ ಮತ್ತು ಆಡಳಿತ ಇಲಾಖೆಯಿಂದ ನೋಟಿಸ್ ಜಾರಿ ಮಾಡಿದೆ. ಸಿಎಂ ಸೂಚನೆ ಬಳಿಕ ಮಹಿಳಾ ಅಧಿಕಾರಿಗಳಿಗೆ ನೊಟೀಸ್ ಜಾರಿಯಾಗಿದ್ದು ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಟರ್ಕಿ, ಸಿರಿಯಾದಲ್ಲಿ ಮತ್ತೆ ಭಾರೀ ಭೂಕಂಪ – ಭೂಮಿಯೇ ಹೋಳಾಗೋ ಭೀತಿಯಲ್ಲಿದ್ದಾರೆ ಜನ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರೂಪಾ ಮೌದ್ಗಿಲ್ ವಿರುದ್ಧ ಡಿ.ಕೆ.ರವಿ ತಾಯಿ ಗೌರಮ್ಮ ಕಿಡಿ

    ರೂಪಾ ಮೌದ್ಗಿಲ್ ವಿರುದ್ಧ ಡಿ.ಕೆ.ರವಿ ತಾಯಿ ಗೌರಮ್ಮ ಕಿಡಿ

    ರಾಮನಗರ: ನನ್ನ ಮಗ ಸತ್ತು 8 ವರ್ಷಗಳು ಕಳೆದಿವೆ. ಆದರೆ ಈಗ ಯಾಕೆ ನನ್ನ ಮಗನನ್ನು ಬೀದಿಗೆ ತರುತ್ತಿದ್ದಾರೆ ಎಂದು ಡಿ.ಕೆ.ರವಿ (DK Ravi) ತಾಯಿ ಗೌರಮ್ಮ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ (Roopa Maudgil) ವಿರುದ್ಧ ಹರಿಹಾಯ್ದಿದ್ದಾರೆ.

    ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಹಾಗೂ ರೋಹಿಣಿ ಸಿಂಧೂರಿ (Rohini Sindhuri) ನಡುವೆ ಜಟಾಪಟಿ ನಡೆಯುತ್ತಿದೆ. ಇದರ ಮಧ್ಯೆ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಸಾವಿನ ವಿಚಾರವನ್ನು ತೆಗೆದುಕೊಂಡಿರುವ ವಿಚಾರವಾಗಿ ಡಿ.ಕೆ.ರವಿ ತಾಯಿ ಗೌರಮ್ಮ ಗರಂ ಆಗಿದ್ದಾರೆ.

    ಈ ಕುರಿತು ಚನ್ನಪಟ್ಟಣ ತಾಲೂಕಿನ ಕದರಮಂಗಲ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಹಿಣಿಯಮ್ಮ ನನ್ನ ಮಗ ಸ್ನೇಹಿತರಾಗಿದ್ದರು. ಒಂದೆರಡು ಬಾರಿ ರೋಹಿಣಿಯವರು ನಮ್ಮ ಮನೆಗೆ ಬಂದಿದ್ದರು. ಆದರೆ ರೂಪಾ ಈಗ ಯಾಕೆ ನನ್ನ ಮಗನ ಸುದ್ದಿ ತರುತ್ತಿದ್ದಾರೆ. ಇದು ಸರಿಯಲ್ಲ ಎಂದು ಕಿಡಿ ಕಾರಿದರು.

    ನಿಮ್ಮ ವ್ಯವಹಾರ ಮಾಡಿಕೊಳ್ಳಿ, ಆದರೆ ಇದರಲ್ಲಿ ನನ್ನ ಮಗನ ವಿಚಾರ ತರಬೇಡಿ. ಈ ತಾಯಿಗೆ ನೋವು ಕೊಡಬೇಡಿ ಎಂದು ವಿನಂತಿಸಿಕೊಂಡರು. ಇದನ್ನೂ ಓದಿ: ನನ್ನ ಧರ್ಮಪತ್ನಿಯ ತೇಜೋವಧೆ ಮಾಡಿದ್ದಾರೆ – ರೂಪಾ ವಿರುದ್ಧ ದೂರು ಕೊಟ್ಟ ಸಿಂಧೂರಿ ಪತಿ

    ಡಿ.ಕೆ.ರವಿ ಐಎಎಸ್ ಸಂಭಾವಿತ ವ್ಯಕ್ತಿ. ಸಿಬಿಐ ರಿಪೋರ್ಟ್‌ನಲ್ಲಿ ಅವರ ಚಾಟ್ಸ್‌ಗಳ ಬಗ್ಗೆ ಉಲ್ಲೇಖವಿದ್ದು ರವಿ ಅವರು ಎಂದಾದರೂ ಲಿಮಿಟ್ ಕ್ರಾಸ್ ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಅವರನ್ನು ಈಕೆ ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ. ಬ್ಲಾಕ್ ಮಾಡದೇ ಇದ್ದದ್ದು ಉತ್ತೇಜನ ಕೊಡುವ ಹಾಗೆ ಕಾಣುತ್ತದೆ ಎಂಬುವುದು ಅನೇಕರ ಅಭಿಪ್ರಾಯ ಎಂದು ರೂಪಾ ಆರೋಪ ಹೊರಿಸಿದ್ದರು. ಇದನ್ನೂ ಓದಿ: ರೋಹಿಣಿ-ರೂಪಾ ವಿರುದ್ಧ ಕಾನೂನು ‌ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 9 ಪ್ರಶ್ನೆಗಳಿಗೆ ಉತ್ತರ ಕೊಡಿ: ರೂಪಾಗೆ ರೋಹಿಣಿ ಅಭಿಮಾನಿಗಳ ಪ್ರಶ್ನೆ

    9 ಪ್ರಶ್ನೆಗಳಿಗೆ ಉತ್ತರ ಕೊಡಿ: ರೂಪಾಗೆ ರೋಹಿಣಿ ಅಭಿಮಾನಿಗಳ ಪ್ರಶ್ನೆ

    ಬೆಂಗಳೂರು: ರೋಹಿಣಿ ಸಿಂಧೂರಿಯ (Rohin Sindhuri) ವೈಯಕ್ತಿಕ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿ, ಅವರ ವಿರುದ್ಧ ಅನೇಕ ಆರೋಪಗಳನ್ನು ಮಾಡಿದ್ದ ಐಪಿಎಸ್ ಅಧಿಕಾರಿ ರೂಪಾ  (Roopa IPS) ವಿರುದ್ಧ ರೋಹಿಣಿ ಸಿಂಧೂರಿಯ ಅಭಿಮಾನಿಗಳು ತರಾಟೆ ತೆಗೆದುಕೊಂಡಿದ್ದಾರೆ.

    ಈ ಬಗ್ಗೆ ಟ್ವಿಟ್ಟರ್‌ನಲ್ಲಿರುವ ರೋಹಿಣಿ ಸಿಂಧೂರಿ ಆರ್ಗನೈಜೆಷನ್ ಎಂಬ ಖಾತೆಯಿಂದ ಟ್ವೀಟ್ ಮಾಡಲಾಗಿದೆ. ರೋಹಿಣಿ ಅಭಿಮಾನಿಗಳ ಪ್ರಶ್ನೆ ಎಂದು ರೂಪಾ ಅವರಿಗೆ “ಉತ್ತರಕೊಡಿರೂಪಾಅವ್ರೆ” ಎಂಬ ಹ್ಯಾಶ್‍ಟ್ಯಾಗ್ ಬಳಸಿ 9 ಪ್ರಶ್ನೆಗಳನ್ನು ಕೇಳಲಾಗಿದೆ.

    ಟ್ವೀಟ್‍ನಲ್ಲಿ ಏನಿದೆ?:
    ಪ್ರಶ್ನೆ- 1
    ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ರೋಹಿಣಿ ಸಿಂಧೂರಿ ಅವರದ್ದು ಏನೂ ತಪ್ಪಿಲ್ಲ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದ್ದು, ಮತ್ತೆ ಮತ್ತೆ ನೀವು ಅವರ ಮೇಲೆ ಆರೋಪ ಹೊರಿಸುತ್ತಿರುವುದು ಏಕೆ ಡಿ. ರೂಪಾರವರೇ?

    ಪ್ರಶ್ನೆ -2
    ಹಿರಿಯ ಐಪಿಎಸ್ ಅಧಿಕಾರಿಯಾದ ತಮ್ಮ ಗಮನಕ್ಕೆ ಈ ಆದೇಶ ಬಂದಿಲ್ಲವೇ ಡಿ. ರೂಪಾರವರೇ?

    ಪ್ರಶ್ನೆ-3
    ತಮ್ಮ ಟ್ವೀಟ್‍ನಲ್ಲಿ ಶಿಲ್ಪಾನಾಗ್ ಅವರನ್ನು ‘ಕನ್ನಡತಿ’ ಎಂದು ಹೈಲೈಟ್ ಮಾಡಿರುವ ತಾವು, ಸಿಂಧೂರಿಯವರು ಎಂದಾದರೂ ಕನ್ನಡಿಗರನ್ನು ದ್ವೇಷಿಸಿದ್ದನ್ನು ನೋಡಿದ್ದೀರಾ? ಅವರು ಯಾವುದೇ ವೇದಿಕೆ ಮೇಲೆ ತೆಲುಗಿನಲ್ಲಿ ಭಾಷಣ ಮಾಡಿದ್ದನ್ನು ನೋಡಿದ್ದೀರಾ?

    ಪ್ರಶ್ನೆ -4
    ತಾವು ನಿನ್ನೆ ಪಬ್ಲಿಕ್‍ಟಿವಿಯೊಂದಿಗೆ ಮಾತನಾಡುವಾಗ ‘ರೋಹಿಣಿಗೂ ನನಗೂ ಹೋಲಿಸಬೇಡಿ ಎಂದಿದ್ರಿ, ಇಷ್ಟೆಲ್ಲಾ ನಡೆದರೂ ‘ಎಂದಿನಂತೆ ಶ್ರದ್ಧೆಯಿಂದ ಕೆಲಸ ಮಾಡ್ತೀನಿ’ ಎನ್ನುವ ಅವರೆಲ್ಲಿ.? ಮಾಧ್ಯಮಗಳ ಗಮನ ತಮ್ಮೆಡೆಗೆ ಪ್ರಯತ್ನಿಸುತ್ತಿರುವ ನೀವೆಲ್ಲಿ?

    ಪ್ರಶ್ನೆ -5
    ಮೈಸೂರಿನ ಡಿಸಿ ನಿವಾಸದ ಈಜುಕೊಳ ನಿರ್ಮಾಣದ ಯೋಜನೆ ಮತ್ತು ಯೋಚನೆ ಎರಡು ನನ್ನದಲ್ಲ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದು ತಮ್ಮ ಗಮನಕ್ಕೆ ಬಂದಿಲ್ಲವೇ ಮೇಡಂ?

    ಪ್ರಶ್ನೆ -6
    ಗಾಯಕ ಲಕ್ಕಿ ಅಲಿ ಜಮೀನಿಗೂ ಮತ್ತು ನನಗೂ ಯಾವುದು ಸಂಬಂಧ ಇಲ್ಲ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದಾರೆ, ಅವರ ಕುಟುಂಬದ ಯಾರ ಮೇಲೆ ಆರೋಪ ಬಂದರೂ, ಸಿಂಧೂರಿಯವರ ಮೇಲೆ ನೇರ ಆರೋಪ ಹೊರಿಸುವುದು ಏಕೆ?

    ಪ್ರಶ್ನೆ -7
    ಎಲ್ಲಾ ಕನ್ನಡಿಗರಿಗೆ ತಮ್ಮ ಮೇಲೆ ಅಪಾರ ಗೌರವವಿದೆ, ಕನ್ನಡದ ಎಲ್ಲಾ ಹೆಣ್ಣು ಮಕ್ಕಳಿಗೆ ತಾವೇ ದೊಡ್ಡ ಸ್ಪೂರ್ತಿ, ಇದರ ನಡುವೆ ಕರ್ನಾಟಕ ಸರ್ಕಾರದ ಹಿರಿಯ, ಮಹಿಳಾ ಅಧಿಕಾರಿಯನ್ನು ಬೇರೆ ರಾಜ್ಯದವರು ಎಂದು ಹೇಳಿ ನೋವುಂಟು ಮಾಡುವುದು ಸರಿಯೇ? ಬೇರೆ ರಾಜ್ಯಗಳಲ್ಲಿ ಕನ್ನಡಿಗರು ಯಾರು ಸೇವೆ ಸಲ್ಲಿಸುತ್ತಿಲ್ಲವೇ?

    ಪ್ರಶ್ನೆ -8
    ಸಿಂಧೂರಿಯವರು ಕರ್ನಾಟಕಕ್ಕೆ ಬಂದ ಆರೇ ತಿಂಗಳಲ್ಲಿ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದನ್ನು ಕಲಿತಿದ್ದಾರೆ, ಅವರು ತಮ್ಮ ಕಚೇರಿ ವೇಳೆಯಲ್ಲಿ ಎಂದಾದರೂ ಕನ್ನಡಿಗರನ್ನು ಕಡೆಗಣಿಸಿರುವುದು ತಮ್ಮ ಗಮನಕ್ಕೆ ಬಂದಿದೆಯೇ? ಇದನ್ನೂ ಓದಿ: ಬಿಜೆಪಿ ಸೋಲಿಸಲು ಮತ್ತೊಮ್ಮೆ ಮಹಾಮೈತ್ರಿಗೆ ಮುಂದಾದ ಕಾಂಗ್ರೆಸ್‌

    ಪ್ರಶ್ನೆ-9
    ರೋಹಿಣಿ ಅವರ ಮೇಲೆ ಯಾವುದೇ ಆರೋಪ ಇದ್ದರೂ, ಅದನ್ನು ನೇರವಾಗಿ ಚೀಫ್ ಸೆಕ್ಯೂರೆಟರಿ ಆಫ್ ಕರ್ನಾಟಕ ಹಾಗೂ ಡಿಜಿಪಿ ರವರ ಗಮನಕ್ಕೆ ತರದೆ, ವಾಟ್ಸಪ್ ಸ್ಕ್ರೀನ್‍ಶಾಟ್‍ಗಳಲ್ಲಿ ತೆಗೆದ ಅವರ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು ಸರಿಯೇ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ನಾಪತ್ತೆ – ಹುಡುಕಿಕೊಟ್ಟವರಿಗೆ ನಗದು ಬಹುಮಾನ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕರ್ಮ ಯಾರನ್ನೂ ಬಿಡಲ್ಲ, ನಾನು ದೇವರನ್ನು ನಂಬ್ತೀನಿ: ಕುಸುಮಾ

    ಕರ್ಮ ಯಾರನ್ನೂ ಬಿಡಲ್ಲ, ನಾನು ದೇವರನ್ನು ನಂಬ್ತೀನಿ: ಕುಸುಮಾ

    ಬೆಂಗಳೂರು: ಐಎಎಸ್ ಮತ್ತು ಐಪಿಎಸ್ ಬೆಳವಣಿಗೆ ಬಗ್ಗೆ ನಾನು ಮಾತಾಡಲ್ಲ. ಆದರೆ ನಾನು ದೇವರನ್ನು ನಂಬುತ್ತೇನೆ ಎಂದು ಡಿ.ಕೆ ರವಿ (DK Ravi) ಪತ್ನಿ ಕುಸುಮಾ (Kusuma) ತಿಳಿಸಿದ್ದಾರೆ.

    ಐಪಿಎಸ್‌ ಅಧಿಕಾರಿ ರೂಪಾ (Roopa IPS) ಹಾಗೂ ರೋಹಿಣಿ ಸಿಂಧೂರಿಯ (Rohin Sindhuri) ಜಟಾಪಟಿಗೆ ಸಂಬಂಧಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ಮ ಯಾರನ್ನು ಬಿಡುವುದಿಲ್ಲ. ಇದೇ ಜನ್ಮದಲ್ಲಿ ಇಲ್ಲೇ ಅನುಭವಿಸುತ್ತೇವೆ ಎಂಬ ನಂಬಿಕೆ ಇಟ್ಟಿಕೊಂಡಿದ್ದೇನೆ. ನಾನು ಯಾರ ಪರನೂ ನಿಲ್ಲಲ್ಲ. ಆದರೆ ನನಗೆ ಆದ ನೋವು ಬೇರೆ ಯಾರಿಗೂ ಆಗಬಾರದು ಅನ್ನೋದಷ್ಟೇ ನನ್ನ ಉದ್ದೇಶವಾಗಿದೆ ಎಂದು ಹೇಳಿದರು.

    ನನಗೆ ಆದ ನೋವು, ನನ್ನ ಕುಟುಂಬಕ್ಕೆ ಆದ ನೋವು ಬೇರೆ ಯಾರಿಗೂ ಆಗಬಾರದು. ಸಿಬಿಐ ರಿಪೋರ್ಟ್ ಬಂದ ಮೇಲೆ, ಅದರಲ್ಲಿ ಏನಿತ್ತು ಎನ್ನುವುದನ್ನು ಯಾರು ತಿಳಿದುಕೊಳ್ಳಲಿಲ್ಲ. ಇನ್ನೂ ಹಲವು ಸತ್ಯಗಳಿವೆ. ಅದನ್ನು ಯಾರು ಯೋಚನೆ ಮಾಡಿಲ್ಲ. ರಿಪೋರ್ಟ್‍ನಲ್ಲಿ ಎಲ್ಲವೂ ವಿಸ್ತಾರವಾಗಿ ವಿವರಣೆ ಇದೆ. ಅದು ಎಲ್ಲರಿಗೂ ಗೊತ್ತಾಗಲಿ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಣಕ್ಕಾಗಿ ಪೀಡಿಸುತ್ತಿದ್ದ ಪ್ರಾಣ ಸ್ನೇಹಿತನನ್ನೇ ಹತ್ಯೆಗೈದ

    ಯಾವ ಕಾರಣಕ್ಕೆ ರವಿ ಸಾವನ್ನಪ್ಪಿದ್ರು ಅನ್ನೋದು ಸಿಬಿಐ ವರದಿಯಲ್ಲಿದೆ. ಡಿ.ಕೆ ರವಿಗೆ ಯಾವುದೇ ರೀತಿಯ ಮಾನಸಿಕ ಅಸ್ವಸ್ಥತೆ ಇರಲಿಲ್ಲ. ಆ ರೀತಿಯ ಹೇಳಿಕೆ ನೀಡುತ್ತಿರುವುದು ಡಿ.ಕೆ ರವಿಗೆ ನೀಡಿರುವ ಅವಮಾನವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಿಲ್ಲು-ಬಾಣಕ್ಕೆ 2000 ಕೋಟಿ ಡೀಲ್ – ಸಂಜಯ್ ರಾವತ್ ಬಾಂಬ್

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k