Tag: ರೂಪಾಯಿ

  • ಅಂತಾರಾಷ್ಟ್ರೀಯ ಮಾನ್ಯತೆ ಪಡೆಯಲಿದ್ಯಾ ರೂಪಾಯಿ?

    ಅಂತಾರಾಷ್ಟ್ರೀಯ ಮಾನ್ಯತೆ ಪಡೆಯಲಿದ್ಯಾ ರೂಪಾಯಿ?

    ನವದೆಹಲಿ: ಪ್ರಂಪಚದ ಪ್ರಭಾವಶಾಲಿ ಕರೆನ್ಸಿ ಅಮೆರಿಕದ ಡಾಲರ್‌ಗೆ (Dollar) ಭಾರತದ ರೂಪಾಯಿ (Indian Rupee) ಪ್ರತಿಸ್ಪರ್ಧೆಯೊಡ್ಡುವ ಪ್ರಯತ್ನ ಆರಂಭಿಸಿದೆ. ಹಲವು ದೇಶಗಳ ಜೊತೆಗೆ ಮಾತುಕತೆ ನಡೆಸುತ್ತಿರುವ ಭಾರತ ಸರ್ಕಾರ ಎರಡು ದೇಶಗಳ ನಡುವೆ ನಡೆಯುವ ವ್ಯಾಪಾರ ವಹಿವಾಟುಗಳನ್ನು ರೂಪಾಯಿಯಲ್ಲೇ ನಡೆಸಲು ಪ್ರೋತ್ಸಾಹಿಸುತ್ತಿದೆ.

    ಸರ್ಕಾರದ ಈ ಹೊಸ ಪ್ರಯತ್ನದ ಭಾಗವಾಗಿ ಶ್ರೀಲಂಕಾ (Sri Lanka) ಸರ್ಕಾರವು ಭಾರತೀಯ ರೂಪಾಯಿಯನ್ನು ಅಂತಾರಾಷ್ಟ್ರೀಯ ಕರೆನ್ಸಿಯಾಗಿ ಅನುಮೋದಿಸಿದೆ. ಇನ್ಮುಂದೆ ಭಾರತ ಮತ್ತು ಶ್ರೀಲಂಕಾ ನಡುವೆ ಭಾರತೀಯ ಕರೆನ್ಸಿಯಲ್ಲಿ ವ್ಯಾಪಾರ ಸಾಧ್ಯವಾಗಲಿದೆ. ಅಷ್ಟೇ ಅಲ್ಲ, ಭಾರತೀಯ ನಾಗರಿಕರು ಶ್ರೀಲಂಕಾದಲ್ಲಿ ಪ್ರವಾಸೋದ್ಯಮ ಉದ್ದೇಶಗಳಿಗಾಗಿ ಭಾರತೀಯ ಕರೆನ್ಸಿಯನ್ನು ಬಳಸಲು ಸಾಧ್ಯವಾಗುತ್ತದೆ.

    ಇನ್ನು ಹಲವು ದೇಶಗಳು ಭಾರತೀಯ ರೂಪಾಯಿಯಲ್ಲಿ ವಹಿವಾಟು ನಡೆಸಲು, ಅಂತಾರಾಷ್ಟ್ರೀಯ ಮನ್ನಣೆ ನೀಡಲು ಆಸಕ್ತಿ ತೋರಿವೆ. ಭಾರತೀಯ ರಿಸರ್ವ್ ಬ್ಯಾಂಕ್‌ನ ಪ್ರಕಾರ, ವಿಶ್ವದ 64 ದೇಶಗಳು ರೂಪಾಯಿಯಲ್ಲಿ ವ್ಯಾಪಾರ ಮಾಡಲು ಭಾರತದೊಂದಿಗೆ ಮಾತುಕತೆ ನಡೆಸುತ್ತಿವೆ. ಇದರಲ್ಲಿ ಜರ್ಮನಿ, ಇಸ್ರೇಲ್‌ನಂತಹ ದೊಡ್ಡ ದೇಶಗಳೂ ಸೇರಿವೆ. ಮೊದಲ ಬಾರಿಗೆ ಯುರೋಪಿಯನ್ ಒಕ್ಕೂಟದಲ್ಲಿರುವ ಜರ್ಮನಿಯು ಏಷ್ಯಾದ ಯಾವುದೇ ಕರೆನ್ಸಿಯೊಂದಿಗೆ ವ್ಯಾಪಾರ ಮಾಡಲು ಮುಂದೆ ಬಂದಿದೆ. ಇದು ಭಾರತಕ್ಕೆ ಆದ್ಯತೆಯನ್ನೂ ನೀಡಿದೆ. ಇದನ್ನೂ ಓದಿ: ಡಾಲರ್‌ಗೆ ರೂಪಾಯಿ ಸೆಡ್ಡು – ಇಂಟರ್‌ನ್ಯಾಷನಲ್‌ ಕರೆನ್ಸಿ ಆಗುತ್ತಾ?

    30 ದೇಶಗಳೊಂದಿಗೆ ಭಾರತದ ವ್ಯವಹಾರವು ರೂಪಾಯಿಯಲ್ಲಿ ಪ್ರಾರಂಭವಾದರೆ ರೂಪಾಯಿ ಅಂತಾರಾಷ್ಟ್ರೀಯ ಕರೆನ್ಸಿಯಾಗುತ್ತದೆ. ರಷ್ಯಾ ಮತ್ತು ಶ್ರೀಲಂಕಾ ಜೊತೆಗೆ ಇತರ 4 ಆಫ್ರಿಕನ್ ದೇಶಗಳು ಇದಕ್ಕೆ ಅನುಮೋದನೆ ನೀಡಿವೆ. ಇದಲ್ಲದೇ 17 ದೇಶಗಳಲ್ಲಿ ಭಾರತದ ಬ್ಯಾಂಕ್‌ಗಳು ವೋಸ್ಟ್ರೋ ಖಾತೆಗಳನ್ನು ತೆರೆದಿದೆ. ಇತರ ದೇಶಗಳೊಂದಿಗೆ ರೂಪಾಯಿಗಳಲ್ಲಿ ವ್ಯಾಪಾರ ಮಾಡಲು ಇದು ಕಡ್ಡಾಯವಾಗಿದೆ.

    ಈ 17 ದೇಶಗಳಲ್ಲಿ 12 ಭಾರತೀಯ ಬ್ಯಾಂಕ್‌ಗಳಿಗೆ ಅನುಮೋದನೆ ನೀಡಲಾಗಿದೆ. ಪಟ್ಟಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಯುಕೊ ಬ್ಯಾಂಕ್, ಹೆಚ್‌ಡಿಎಫ್‌ಸಿ ಬ್ಯಾಂಕ್, ಇಂಡಸ್‌ಇಂಡ್ ಬ್ಯಾಂಕ್, ಯೆಸ್ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್ ಸೇರಿವೆ. ಭಾರತೀಯ ಖರೀದಿದಾರರು ವಿದೇಶಿ ವ್ಯಾಪಾರಿಯೊಂದಿಗೆ ರೂಪಾಯಿಗಳಲ್ಲಿ ವಹಿವಾಟು ನಡೆಸಲು ಬಯಸಿದರೆ, ಸಂಪೂರ್ಣ ಮೊತ್ತವನ್ನು ವೋಸ್ಟ್ರೋ ಖಾತೆಯಲ್ಲಿ ಠೇವಣಿ ಮಾಡಲಾಗುತ್ತದೆ. ಭಾರತೀಯ ರಫ್ತುದಾರರು ಸರಬರಾಜು ಮಾಡಿದ ಸರಕುಗಳಿಗೆ ಪಾವತಿ ಮಾಡಬೇಕಾದಾಗ, ಈ ವೋಸ್ಟ್ರೋ ಖಾತೆಯಿಂದ ಕಡಿತಗೊಳಿಸಲಾಗುತ್ತದೆ ಮತ್ತು ಹಣವನ್ನು ರಫ್ತುದಾರರ ಖಾತೆಗೆ ಜಮಾ ಮಾಡಲಾಗುತ್ತದೆ.

    ಭಾರತ ಮತ್ತು ಭಾರತೀಯರಿಗೆ ಏನು ಪ್ರಯೋಜನ?
    ಆರ್ಥಿಕ ತಜ್ಞ ಪ್ರೊ. ಪ್ರಹ್ಲಾದ್ ಪ್ರಕಾರ, ಇಲ್ಲಿಯವರೆಗೆ ಇತರ ದೇಶಗಳೊಂದಿಗೆ ವ್ಯಾಪಾರ ಮಾಡುವಾಗ ಡಾಲರ್‌ಗಳನ್ನು ಖರ್ಚು ಮಾಡಬೇಕಾಗಿತ್ತು. ವಿದೇಶಿ ವಿನಿಮಯ ಸಂಗ್ರಹದಲ್ಲಿ ಡಾಲರ್‌ಗಳ ಕೊರತೆಯೂ ಇದ್ದು, ಇದರಿಂದ ದೇಶದ ಆರ್ಥಿಕ ಬೆಳವಣಿಗೆ ದರದಲ್ಲಿ ಕುಸಿತ ಉಂಟಾಗಿ ಸಾಲವೂ ಹೆಚ್ಚುತ್ತಿದೆ. ಆದರೆ ಇತರ ದೇಶಗಳಿಂದ ರೂಪಾಯಿ ವಹಿವಾಟುಗಳು ಭಾರತೀಯ ವ್ಯಾಪಾರಕ್ಕೆ ಕಡಿಮೆ ಅಪಾಯವನ್ನುಂಟುಮಾಡುತ್ತವೆ. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

     

    ಕಚ್ಚಾ ತೈಲ ಸೇರಿದಂತೆ ಯಾವುದೇ ಉತ್ಪನ್ನವನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಂಡರೂ ಅದನ್ನು ರೂಪಾಯಿ ಮೂಲಕ ಪಾವತಿಸಲಾಗುತ್ತದೆ. ಇದರಿಂದ ಪ್ರತಿ ವರ್ಷ ಶತಕೋಟಿ ಡಾಲರ್ ಉಳಿತಾಯವಾಗಲಿದೆ. ಕರೆನ್ಸಿ ಚಂಚಲತೆಯಿಂದ ರಕ್ಷಣೆ ಸಿಗುತ್ತದೆ. ಇದು ವ್ಯಾಪಾರ ಮಾಡುವ ವೆಚ್ಚವನ್ನು ಕಡಿಮೆ ಮಾಡುತ್ತದೆ ಮತ್ತು ವ್ಯಾಪಾರವನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸುತ್ತದೆ. ಅಷ್ಟೇ ಅಲ್ಲ, ಡಾಲರ್ ಸೇರಿದಂತೆ ವಿದೇಶಿ ವಿನಿಮಯ ಮೀಸಲು ಇಡುವ ಅಗತ್ಯವೂ ಕಡಿಮೆಯಾಗುತ್ತದೆ. ವಿದೇಶಿ ಕರೆನ್ಸಿ ವಿಶೇಷವಾಗಿ ಡಾಲರ್ ಮೇಲಿನ ಅವಲಂಬನೆ ಕಡಿಮೆಯಾಗುವುದರಿಂದ ಬಾಹ್ಯ ಪ್ರಭಾವಗಳಿಂದ ಭಾರತಕ್ಕೆ ರಕ್ಷಣೆ ಸಿಗಲಿದೆ.

    ಅಂತಾರಾಷ್ಟ್ರೀಯ ವಹಿವಾಟುಗಳಲ್ಲಿ ರೂಪಾಯಿ ಬಳಕೆಯಿಂದ ಜನಸಾಮಾನ್ಯರಿಗೂ ಹಲವು ಅನುಕೂಲಗಳು ಸಿಗಲಿವೆ. ಇದರಲ್ಲಿ ದೊಡ್ಡ ಲಾಭ ಹಣದುಬ್ಬರದಿಂದ ಆಗಲಿದೆ. ಅನೇಕ ಉತ್ಪನ್ನಗಳು ಅಗ್ಗವಾಗಬಹುದು. ಅಡುಗೆ ಎಣ್ಣೆ, ಡ್ರೈಫ್ರೂಟ್ಸ್, ಅನಿಲ, ಕಲ್ಲಿದ್ದಲು, ಔಷಧಗಳು ಸೇರಿದಂತೆ ಹಲವು ವಸ್ತುಗಳು ಭಾರತ ಮತ್ತು ಇತರ ದೇಶಗಳ ನಡುವೆ ವ್ಯಾಪಾರವಾಗುತ್ತವೆ. ರೂಪಾಯಿಗಳಲ್ಲಿ ವ್ಯಾಪಾರ ಮಾಡುವುದರಿಂದ ವಿನಿಮಯ ದರದ ಅಪಾಯವಿರುವುದಿಲ್ಲ ಮತ್ತು ವ್ಯಾಪಾರಸ್ಥರು ಉತ್ತಮ ಚೌಕಾಶಿ ಮಾಡುವ ಮೂಲಕ ಅಗ್ಗವಾಗಿ ವ್ಯವಹಾರಗಳನ್ನು ಅಂತಿಮಗೊಳಿಸಬಹುದು. ಇದರಿಂದ ಆ ಸರಕುಗಳು ಜನಸಾಮಾನ್ಯರಿಗೆ ಅಗ್ಗವಾಗಿ ತಲುಪುತ್ತವೆ.

    ಭಾರತೀಯ ಕರೆನ್ಸಿಯ ಪ್ರಚಾರ ಯಾಕೆ?
    ಸದ್ಯ ಯುಎಸ್ ಡಾಲರ್ ವಿಶ್ವದ ಅತ್ಯಂತ ಶಕ್ತಿಶಾಲಿ ಕರೆನ್ಸಿಯಾಗಿದೆ. ಒಟ್ಟು ಜಾಗತಿಕ ವ್ಯಾಪಾರದಲ್ಲಿ ಇದರ ಪಾಲು 80% ಸಮೀಪದಲ್ಲಿದೆ. ಅಂದರೆ ವಿಶ್ವದ ವ್ಯವಹಾರದಲ್ಲಿ 80% ಕ್ಕಿಂತ ಹೆಚ್ಚು ವಹಿವಾಟುಗಳು ಡಾಲರ್‌ಗಳಲ್ಲಿ ನಡೆಯುತ್ತವೆ. ಭಾರತವೂ ಸೇರಿದಂತೆ ವಿಶ್ವದ ಹಲವು ದೇಶಗಳು ವಿದೇಶಿ ಆಮದು-ರಫ್ತಿಗೆ ಡಾಲರ್ ಮೇಲೆ ಅವಲಂಬಿತವಾಗಿವೆ. ಬೇರೆ ದೇಶದಿಂದ ಏನನ್ನಾದರೂ ಖರೀದಿಸಬೇಕಾದರೆ ಅಥವಾ ಮಾರಾಟ ಮಾಡಬೇಕಾದರೆ ಡಾಲರ್‌ಗಳಲ್ಲಿ ವಹಿವಾಟು ನಡೆಸಿ ಪಾವತಿಸಬೇಕಿದೆ. ಅದಕ್ಕಾಗಿಯೇ ಇದನ್ನು ವಿಶ್ವದ ಅತ್ಯಂತ ಶಕ್ತಿಶಾಲಿ ಕರೆನ್ಸಿ ಎಂದು ಪರಿಗಣಿಸಲಾಗಿದೆ.

    ಬಹಳಷ್ಟು ದೇಶಗಳು ತಮ್ಮ ವಿದೇಶಿ ವಿನಿಮಯ ಸಂಗ್ರಹದಲ್ಲಿ ಡಾಲರ್ ಕೊರತೆಯನ್ನು ಎದುರಿಸುತ್ತಿವೆ. ಈ ಹಿನ್ನೆಲೆ ಭಾರತದೊಂದಿಗೆ ವಹಿವಾಟು ನಡೆಸುವ ದೇಶಗಳಿಗೆ ರೂಪಾಯಿಯಲ್ಲಿ ವ್ಯಪಾರ ಮಾಡಲು ಸರ್ಕಾರ ಪ್ರೋತ್ಸಾಹಿಸುತ್ತಿದೆ. ಇದು ಡಾಲರ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿಯನ್ನು ಬಲಪಡಿಸುತ್ತದೆ. ಇದನ್ನೂ ಓದಿ: ಉತ್ತರದಲ್ಲಿ ಅವಾಂತರದ ಬಳಿಕ ಮುಂಗಾರು ದಕ್ಷಿಣ ಭಾರತಕ್ಕೆ – ಕರ್ನಾಟಕ ಸೇರಿ 3 ರಾಜ್ಯಗಳಲ್ಲಿ ರೆಡ್ ಅಲರ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾಲರ್‌ಗೆ ರೂಪಾಯಿ ಸೆಡ್ಡು – ಇಂಟರ್‌ನ್ಯಾಷನಲ್‌ ಕರೆನ್ಸಿ ಆಗುತ್ತಾ?

    ಡಾಲರ್‌ಗೆ ರೂಪಾಯಿ ಸೆಡ್ಡು – ಇಂಟರ್‌ನ್ಯಾಷನಲ್‌ ಕರೆನ್ಸಿ ಆಗುತ್ತಾ?

    ಡಾಲರ್‌ನಲ್ಲಿ ನಾವು ಹೇಗೆ ವ್ಯವಹಾರ ಮಾಡುತ್ತೇವೆಯೋ ಅದೇ ರೀತಿ ರೂಪಾಯಿನಲ್ಲಿ (Rupee) ಯಾಕೆ ವ್ಯವಹಾರ ಮಾಡಲು ಸಾಧ್ಯವಿಲ್ಲ? ಈ ಪ್ರಶ್ನೆಗೆ ಈಗ ಉತ್ತರ ಸಿಗುವ ಕಾಲ ಹತ್ತಿರ ಬಂದಿದೆ. ಡಾಲರ್‌ (Dollar) ಬದಲು ರೂಪಾಯಿನಲ್ಲೇ ವ್ಯವಹಾರ ನಡೆಸಲು ಭಾರತ (India) ಈಗ ಮುಂದಾಗುತ್ತಿದೆ. ಆರ್‌ಬಿಐ (RBI) ಪ್ರಯತ್ನಗಳು ಫಲ ನೀಡಿದರೆ ಮುಂದೊಂದು ದಿನ ಭಾರತದ ಕರೆನ್ಸಿ ಇಂಟರ್‌ನ್ಯಾಷನಲ್‌ ಕರೆನ್ಸಿಯಾಗುವ (Global Currency) ಸಾಧ್ಯತೆಯಿದೆ. ಹೀಗಾಗಿ ಡಾಲರ್‌ನಲ್ಲೇ ಯಾಕೆ ದೇಶಗಳು ವ್ಯವಹಾರ ನಡೆಸುತ್ತಿವೆ? ಈಗ ಯಾಕೆ ರೂಪಾಯಿನಲ್ಲೇ ವ್ಯವಹಾರ ನಡೆಸಲು ಭಾರತ ಮುಂದಾಗುತ್ತಿದೆ? ರೂಪಾಯಿನಲ್ಲಿ ವ್ಯವಹಾರ ಹೇಗೆ ನಡೆಯುತ್ತದೆ? ಮತ್ತು ಆರ್‌ಬಿಐ ಮುಂದಿರುವ ಸವಾಲುಗಳು ಏನು ಎನ್ನುವುದರ ಕಿರು ಮಾಹಿತಿ ಇಲ್ಲಿದೆ.

    ಡಾಲರ್‌ ವಿಶ್ವದ ಕರೆನ್ಸಿಯಾಗಿದ್ದು ಹೇಗೆ?
    ಡಾಲರ್‌ ವಿಶ್ವದ ಕರೆನ್ಸಿಯಾಗಿ ಹೊರ ಹೊಮ್ಮಿದ್ದು ಹೇಗೆ ಎಂಬುದಕ್ಕೆ ಮೂರು ಪ್ರಮುಖ ಕಾರಣ ನೀಡಬಹುದು. ಎರಡನೇ ಮಹಾಯುದ್ಧದ ಸಮಯದಲ್ಲಿ ಒಂದೊಂದು ದೇಶದಲ್ಲಿ ಒಂದೊಂದು ಕರೆನ್ಸಿ ಇದ್ದ ಕಾರಣ ವ್ಯವಹಾರ ನಡಸಲು ಕಷ್ಟವಾಗಿತ್ತು. ಈ ಸಂದರ್ಭದಲ್ಲಿ ವಿಶ್ವದಲ್ಲೇ ಚಿನ್ನ ಸಂಗ್ರಹ ಅಮೆರಿಕದ ಬಳಿ ಜಾಸ್ತಿ ಇತ್ತು. ಅಷ್ಟೇ ಅಲ್ಲದೇ ಆರ್ಥಿಕವಾಗಿಯೂ, ಮಿಲಿಟರಿ ಎಲ್ಲಾ ಕ್ಷೇತ್ರದಲ್ಲಿ ಅಮೆರಿಕ ಪವರ್‌ಫುಲ್‌ ದೇಶವಾಗಿ ಹೊರಹೊಮ್ಮಿತ್ತು. ಈ ಕಾರಣಕ್ಕೆ 1944 ರಲ್ಲಿ ಬ್ರೆಟ್ಟನ್‌ ವುಡ್ಸ್‌ (Bretton Woods) ಒಪ್ಪಂದಕ್ಕೆ ಸಹಿ ಹಾಕಿದ ಪರಿಣಾಮ ಡಾಲರ್‌ನಲ್ಲೇ ವ್ಯವಹಾರ ನಡೆಸಲು ಅಮೆರಿಕದ ಮಿತ್ರ ಪಡೆಗಳು ಒಪ್ಪಿಕೊಂಡಿದ್ದವು. ಈ ಒಪ್ಪಂದದ ಪ್ರಕಾರ ವ್ಯವಹಾರಕ್ಕೆ ಅಮೆರಿಕ ಡಾಲರ್‌ ಅನ್ನು ಎಲ್ಲಾ ದೇಶಗಳು ಬಳಸಲು ಅಧಿಕೃತ ಒಪ್ಪಿಗೆ ಸಿಕ್ಕಿತು. ಒಂದು ಔನ್ಸ್‌ ಅಥವಾ 28.35 ಗ್ರಾಂ ಚಿನ್ನಕ್ಕೆ 35 ಡಾಲರ್‌ ದರವನ್ನು ನಿಗದಿ ಮಾಡಲಾಗಿತ್ತು.

     

    ಎರಡನೇಯದಾಗಿ ಸೌದಿ ಜೊತೆ ಅಮರಿಕ ಕಚ್ಚಾ ತೈಲಕ್ಕೆ ಸಂಬಂಧಿಸಿದ ಒಪ್ಪಂದದಿಂದಾಗಿ ಡಾಲರ್‌ ಶಕ್ತಿ ಹೆಚ್ಚಾಯಿತು. ನಿಮ್ಮ ಎಲ್ಲಾ ಕಚ್ಚಾ ತೈಲ ಘಟಕಗಳಿಗೆ ನಾವು ರಕ್ಷಣೆ ನೀಡುತ್ತೇವೆ, ಆದರೆ ವ್ಯವಹಾರವನ್ನು ಡಾಲರ್‌ನಲ್ಲಿ ಮಾಡಬೇಕು ಎಂದು ಷರತ್ತು ವಿಧಿಸಿತು. ಈ ಷರತ್ತಿಗೆ ಸೌದಿ ಅರೆಬಿಯಾ ಒಪ್ಪಿತು. ಪರಿಣಾಮ ಈಗಲೂ ಕಚ್ಚಾ ತೈಲದ ವ್ಯವಹಾರ ಡಾಲರ್‌ನಲ್ಲೇ ನಡೆಯುತ್ತಿದೆ.

    ಮೂರನೇಯದ್ದು ಬಹಳ ಮುಖ್ಯ ಸ್ವಿಫ್ಟ್‌ ಬ್ಯಾಂಕ್‌ ನೆಟ್‌ವರ್ಕ್‌. ಬ್ರೆಟ್ಟನ್‌ ವುಡ್ಸ್‌ ಒಪ್ಪಂದವನ್ನು ಅಮೆರಿಕ ರದ್ದುಗೊಳಿಸಿದ ನಂತರ 1973ರಲ್ಲಿ ಬೆಲ್ಜಿಯಂನಲ್ಲಿ Society for Worldwide Interbank Financial Telecommunications ಅಥವಾ SWIFT ಜನ್ಮ ತಾಳಿತು. ಇದು ಅಂತರಾಷ್ಟ್ರೀಯ ನಗದು ವ್ಯವಹಾರಗಳ ಸಂಸ್ಥೆಯಾಗಿದ್ದು, ವಿವಿಧ ದೇಶಗಳ ನಡುವೆ ವೇಗವಾಗಿ ನಗದು ವ್ಯವಹಾರ ನಡೆಯಲು ನೆರವಾಗುವಂತಹ ವ್ಯವಸ್ಥೆ ಸ್ವಿಫ್ಟ್‌ನಲ್ಲಿದೆ.

    ಇಲ್ಲೂ ಡಾಲರನ್ನೇ ಯಾಕೆ ಪರಿಗಣಿಸಿಲಾಯಿತು ಎನ್ನುವುದಕ್ಕೂ ಕಾರಣವಿದೆ. ಈ ಸಂದರ್ಭದಲ್ಲಿ ಅಮೆರಿಕ ಮತ್ತು ರಷ್ಯಾ ಮಧ್ಯೆ ಶೀತಲ ಸಮರ ನಡೆಯುತ್ತಿತ್ತು. ಭವಿಷ್ಯದಲ್ಲಿ ಯುರೋಪ್‌ ದೇಶಗಳ ಮೇಲೆ ಯಾರೇ ಆಕ್ರಮಣ ಮಾಡಿದರೂ ನಾನು ರಕ್ಷಣೆ ನೀಡುತ್ತೇನೆ ಎಂದು ಅಮೆರಿಕ ಭರವಸೆ ನೀಡಿತ್ತು. ಈ ಕಾರಣಕ್ಕೆ ಯುರೋಪ್‌ ರಾಷ್ಟ್ರಗಳು ಸ್ವಿಫ್ಟ್‌ ನೀತಿಯನ್ನು ಒಪ್ಪಿಕೊಂಡವು. ಈ ಎಲ್ಲಾ ಕಾರಣದಿಂದ ಏನು ಮಾಡದೇ ರಾಜತಾಂತ್ರಿಕ ಪ್ರಭಾವ ಬಳಸಿ ಮೀಸಲು ನಿಧಿಯಿಂದಾಗಿ ಅಮೆರಿಕ ವಿಶ್ವದಲ್ಲೇ ಅತಿ ದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರಹೊಮ್ಮಿತ್ತು.

    ರೂಪಾಯಿಯಲ್ಲಿ ವ್ಯವಹಾರಕ್ಕೆ ಮುಂದಾಗಿದ್ದು ಯಾಕೆ?
    ಈಗ ಭಾರತ ರೂಪಾಯಿಯಲ್ಲಿ ವ್ಯವಹಾರಕ್ಕೆ ಮುಂದಾಗಿದ್ದು ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ರಷ್ಯಾ-ಉಕ್ರೇನ್‌ (Russia- Ukraine) ಯುದ್ಧ. ರಷ್ಯಾ ಉಕ್ರೇನ್‌ ಯುದ್ಧಕ್ಕೆ ಮೊದಲೇ ಭಾರತ ಸ್ಥಳೀಯ ದೇಶಗಳ ಜೊತೆ ರೂಪಾಯಿಯಲ್ಲೇ ವ್ಯವಹಾರ ನಡೆಸಲು ಆಸಕ್ತಿ ತೋರಿಸಿತ್ತು. ಡಾಲರ್‌ ಮೌಲ್ಯ ಜಾಸ್ತಿಯಾದಷ್ಟು ಆಮದು ಮಾಡುವ ವೇಳೆ ವಸ್ತುಗಳ ಬೆಲೆ ಜಾಸ್ತಿ ಆಗುತ್ತಿತ್ತು. ಆದರೆ ರಷ್ಯಾ -ಉಕ್ರೇನ್‌ ಯುದ್ಧದ ಬಳಿಕ ಈ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಉಕ್ರೇನ್‌ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಅಮೆರಿಕ ಮತ್ತು ಯುರೋಪ್‌ ರಷ್ಯಾವನ್ನು ಸ್ವಿಫ್ಟ್‌ ಬ್ಯಾಂಕ್‌ ನೆಟ್‌ವರ್ಕ್‌ನಿಂದ ಹೊರಗಿಟ್ಟಿತು. ಅಮೆರಿಕ ರಷ್ಯಾದ ಡಾಲರ್‌ ಖಾತೆಯನ್ನು ಫ್ರೀಜ್‌ ಮಾಡಿತು. ಪರಿಣಾಮ ರಷ್ಯಾಗೆ ಡಾಲರ್‌ನಲ್ಲಿ ಆಮದು ಮತ್ತು ರಫ್ತು ಮಾಡಲು ಸಾಧ್ಯವಾಗಲಿಲ್ಲ. ದಿಢೀರ್‌ ನೀಡಿದ ಶಾಕ್‌ನಿಂದ ರಷ್ಯಾಗೆ ಬಹಳ ಸಮಸ್ಯೆಯಾಯಿತು. ಯಾವಾಗ ರಷ್ಯಾವನ್ನು ಸ್ವಿಫ್ಟ್‌ ಬ್ಯಾಂಕ್‌ನಿಂದ ಹೊರಗಡೆ ಇಡಲಾಯಿತೋ ಆವಾಗ ಅಭಿವೃದ್ಧಿ ಹೊಂದುತ್ತಿರುವ ದೇಶಗಳು ತಮ್ಮದೇ ಕರೆನ್ಸಿಯಲ್ಲಿ ವ್ಯವಹಾರ ನಡೆಸಲು ಆಸಕ್ತಿ ತೋರಿಸಿದವು. ಯಾಕೆಂದರೆ ಮುಂದೊಮ್ಮೆ ಅಮೆರಿಕ ಮತ್ತು ಯುರೋಪ್‌ ರಾಷ್ಟ್ರಗಳ ವಿರೋಧ ಕಟ್ಟಿಕೊಂಡರೆ ನಮ್ಮ ರಾಷ್ಟ್ರವನ್ನು ಸ್ವಿಫ್ಟ್‌ ಬ್ಯಾಂಕ್ ನೆಟ್‌ವರ್ಕ್‌ನಿಂದ ಹೊರಗಡೆ ಇಡುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿ ಏನು? ಈ ಕಾರಣಕ್ಕೆ ಈಗ ಭಾರತ ರೂಪಾಯಿಯಲ್ಲೇ ವ್ಯವಹಾರ ನಡೆಸಲು ಈಗ ವಿಶೇಷ ಆಸಕ್ತಿ ತೋರಿಸುತ್ತಿದೆ.

    ರೂಪಾಯಿಯಲ್ಲೇ ವ್ಯವಹಾರ ಹೇಗೆ ನಡೆಯುತ್ತದೆ?
    ಬಹಳ ಸರಳವಾಗಿ ಹೇಳುವುದಾದರೆ ಈಗ ಹೇಗೆ ನಡೆಯುತ್ತಿದೆಯೋ ಅದೇ ರೀತಿ ವ್ಯವಹಾರ ನಡೆಯುತ್ತದೆ. ಆದರೆ ಅಮೆರಿಕದ ಬ್ಯಾಂಕ್‌ನಲ್ಲಿ ಅಲ್ಲ. ರೂಪಾಯಿಯಲ್ಲಿ ವ್ಯವಹಾರ ನಡೆಸಲು ವೊಸ್ಟ್ರೋ ಮತ್ತು ನೋಸ್ಟ್ರೋ ಖಾತೆಯನ್ನು ತೆರೆಯಬೇಕಾಗುತ್ತದೆ. ವಿದೇಶದ ಬ್ಯಾಂಕು ಭಾರತದಲ್ಲಿ ಬ್ರ್ಯಾಂಚ್‌ ಓಪನ್‌ ಮಾಡಿ ರೂಪಾಯಿ ಖಾತೆಯನ್ನು ತೆರೆದರೆ ಅದನ್ನು ʼವೊಸ್ಟ್ರೋʼ ಖಾತೆ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಬ್ರ್ಯಾಂಚ್‌ ಓಪನ್‌ ಮಾಡದ ವಿದೇಶಿ ಬ್ಯಾಂಕ್‌ ಭಾರತೀಯ ಬ್ಯಾಂಕ್‌ನಲ್ಲಿ ರೂಪಾಯಿ ಖಾತೆ ತೆರೆದರೆ ಅದನ್ನು ನೋಸ್ಟ್ರೋ ಎಂದು ಕರೆಯಲಾಗುತ್ತದೆ.

    ಇಲ್ಲಿಯವರೆಗೆ ಹೆಚ್‌ಡಿಎಫ್‌ಸಿ ಬ್ಯಾಂಕ್‌ ಮತ್ತು ಯುಕೋ ಬ್ಯಾಂಕ್‌ನಲ್ಲಿ 30 ವೊಸ್ಟ್ರೋ ಖಾತೆ ತೆರೆಯಲಾಗಿದೆ. ಆರ್‌ಬಿಐ ಇಲ್ಲಿಯವರೆಗೆ ಬೋಟ್ಸ್ವಾನಾ, ಫಿಜಿ, ಜರ್ಮನಿ, ಗಯಾನಾ, ಇಸ್ರೇಲ್, ಕೀನ್ಯಾ, ಮಲೇಷ್ಯಾ, ಮಾರಿಷಸ್, ಮ್ಯಾನ್ಮಾರ್, ನ್ಯೂಜಿಲ್ಯಾಂಡ್, ಓಮನ್, ರಷ್ಯಾ, ಸೀಶೆಲ್ಸ್, ಸಿಂಗಾಪುರ, ಶ್ರೀಲಂಕಾ, ತಾಂಜಾನಿಯಾ, ಯುನೈಟೆಡ್ ಕಿಂಗ್‌ಡಮ್, ಉಗಾಂಡ ದೇಶಗಳ ಬ್ಯಾಂಕುಗಳಿಗೆ ವೊಸ್ಟ್ರೋ ಖಾತೆ ತೆರೆಯಲು ಅನುಮತಿ ನೀಡಿದೆ.

    ಇಂಟರ್‌ನ್ಯಾಷನಲ್‌ ಕರೆನ್ಸಿ ಎಂದರೇನು?
    ಭಾರತದ ಕರೆನ್ಸಿ ಇಂಟರ್‌ನ್ಯಾಷನಲ್‌ ಕರೆನ್ಸಿ ಆಗುತ್ತಾ ಎಂಬುದನ್ನು ತಿಳಿದುಕೊಳ್ಳುವ ಮೊದಲು ಇಂಟರ್‌ನ್ಯಾಷನಲ್‌ ಕರೆನ್ಸಿ ಎಂದರೇನು ಎಂಬುದನ್ನು ತಿಳಿದುಕೊಳ್ಳೋಣ. ವಿಶ್ವದೆಲ್ಲೆಡೆ ಒಂದು ದೇಶದ ಕರೆನ್ಸಿಗೆ ಬೇಡಿಕೆ ಜಾಸ್ತಿಯಾದರೆ ಅದನ್ನು ಇಂಟರ್‌ನ್ಯಾಷನಲ್‌ ಕರೆನ್ಸಿ ಎಂದು ಕರೆಯಲಾಗುತ್ತದೆ. ಒಂದು ದೇಶದ ಕರೆನ್ಸಿಗೆ ʼಇಂಟರ್‌ನ್ಯಾಷನಲ್‌ ಕರೆನ್ಸಿʼಯ ಪಟ್ಟವನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ನೀಡುತ್ತದೆ. ಯುಎಸ್ ಡಾಲರ್, ಯುರೋಪಿಯನ್‌ ಯೂನಿಯನ್‌ನ ಯೂರೋ, ಚೈನಾ ಯುವಾನ್‌, ಜಪಾನಿನ ಯೆನ್ ಮತ್ತು ಬ್ರಿಟಿಷ್ ಪೌಂಡ್ ಇಂಟರ್‌ನ್ಯಾಷನಲ್‌ ಕರೆನ್ಸಿಯಾಗಿದೆ. ಒಂದು ದೇಶದ ಆಮದು, ರಫ್ತು, ಆರ್ಥಿಕತೆ ಸೇರಿದಂತೆ ಹಲವು ಮಾನದಂಡಗಳನ್ನು ಪರಿಗಣಿಸಿ ಐಎಂಫ್‌ ಒಂದು ದೇಶದ ಕರೆನ್ಸಿಗೆ ಈ ಸ್ಥಾನಮಾನ ನೀಡುತ್ತದೆ. ಇತ್ತೀಚಿಗೆ ಆರ್‌ಬಿಐ ಸಮಿತಿಯು ರೂಪಾಯಿಯ ಅಂತರಷ್ಟ್ರೀಯ ಕರೆನ್ಸಿಯನ್ನಾಗಿ ಮಾಡಲು ಶಿಫಾರಸು ಮಾಡಿದೆ.

    ರೂಪಾಯಿ ಇಂಟರ್‌ನ್ಯಾಷನಲ್‌ ಕರೆನ್ಸಿ ಆಗುತ್ತಾ?
    ರೂಪಾಯಿ ಇಂಟರ್‌ನ್ಯಾಷನಲ್‌ ಕರೆನ್ಸಿ ಆಗಬೇಕಾದರೆ ಆರ್‌ಬಿಐ ಸಮಿತಿ ಅಲ್ಪಾವಧಿ ಮತ್ತು ದೀರ್ಘಾವಧಿಯಲ್ಲಿ ಏನು ಮಾಡಬೇಕು ಎಂಬುದರ ಬಗ್ಗೆ ಸಲಹೆ ನೀಡಿದೆ. ಅಲ್ಪಾವಧಿಯಲ್ಲಿ ಭಾರತ ತನ್ನ ಹತ್ತಿರದ ದೇಶಗಳ ಜೊತೆ ರೂಪಾಯಿಯಲ್ಲೇ ವ್ಯವಹಾರ ನಡೆಸುವುದು. ಈಗಾಗಲೇ ನೇಪಾಳ, ಭೂತಾನ್‌, ಶ್ರೀಲಂಕಾದ ಜೊತೆ ರೂಪಾಯಿಯಲ್ಲೇ ವ್ಯವಹಾರ ನಡೆಸುತ್ತಿದೆ. ದೀರ್ಘಾವಧಿಯಲ್ಲಿ ನಡೆಯಬೇಕಾದ ಕೆಲಸ ಬಹಳಷ್ಟಿದೆ. ಬಹಳ ಮುಖ್ಯವಾಗಿ ಆಮದು ಕಡಿಮೆ ಆಗಬೇಕು. ರಫ್ತು ಹೆಚ್ಚಾಗಬೇಕು. 2022- 23ನೇ ಹಣಕಾಸು ವರ್ಷದಲ್ಲಿ ಭಾರತ 447 ಬಿಲಿಯನ್‌ ಡಾಲರ್‌ ರಫ್ತು, 714 ಬಿಲಿಯನ್‌ ಡಾಲರ್‌ ಮೌಲ್ಯದ ವಸ್ತುಗಳನ್ನು ಆಮದು ಮಾಡಿಕೊಂಡಿದೆ. ಈ ನಿಟ್ಟಿನಲ್ಲಿ ಭಾರತ ಮೇಕ್‌ ಇನ್‌ ಇಂಡಿಯಾ ಹೆಚ್ಚು ಒತ್ತು ನೀಡಲು ಆರಂಭಿದ್ದು ಇದರ ಫಲ ಈಗಲೇ ಸಿಗದೇ ಇದ್ದರೂ ಕೆಲ ವರ್ಷಗಳಲ್ಲಿ ಸಿಗುವ ಸಾಧ್ಯತೆಯಿದೆ.

    ವಿಶ್ವದಲ್ಲೇ ಯುಪಿಐ (UPI) ಪಾವತಿಯಲ್ಲಿ ಭಾರತ ನಂಬರ್‌ ಒನ್‌ ಸ್ಥಾನ ಪಡೆದಿದೆ. ಈಗ ಹಲವು ದೇಶಗಳ ಜೊತೆ ಭಾರತದ ಆರ್‌ಬಿಐ ಯುಪಿಐ ಪಾವತಿ ಸಂಬಂಧ ಸಹಿ ಹಾಕಿದೆ. ಸಿಂಗಾಪುರದ ಜೊತೆ ಈಗಾಗಲೇ ಆರಂಭಗೊಂಡಿದ್ದು, ಕಳೆದ ವಾರ ಪ್ರಧಾನಿ ಮೋದಿ ಅವರು ಫ್ರಾನ್ಸ್‌ ಮತ್ತು ಯುಎಇ ಪ್ರವಾಸದ ಸಮಯದಲ್ಲಿ ಆರ್‌ಬಿಐ ಆ ಎರಡು ದೇಶಗಳ ಜೊತೆ ಯುಪಿಐ ವ್ಯವಹಾರಕ್ಕೆ ಸಹಿ ಹಾಕಿತ್ತು. ಇದರಿಂದಾಗಿ ರಿಯಲ್‌ ಟೈಮ್‌ನಲ್ಲಿ ಹಣವನ್ನು ಕಳುಹಿಸಬಹುದಾಗಿದೆ.   ಇದನ್ನೂ ಓದಿ: ಅಮೆರಿಕದ 1 ನಿರ್ಧಾರ – ಬಾಹ್ಯಾಕಾಶ ಕ್ಷೇತ್ರದಲ್ಲಿ ಸ್ವಾವಲಂಬಿಯಾದ ಭಾರತ

    ಎರಡು ದೇಶಗಳ ನಡುವಿನ ಚಿಲ್ಲರೆ ಪಾವತಿಗಳು ಸಾಮಾನ್ಯವಾಗಿ ಕಡಿಮೆ ಪಾರದರ್ಶಕವಾಗಿರುತ್ತವೆ ಮತ್ತು ಇದು ದೇಶೀಯ ವಹಿವಾಟುಗಳಿಗಿಂತ ಹೆಚ್ಚು ದುಬಾರಿ. ಗಡಿಯಾಚೆಗಿನ ಹಣ ವ್ಯವಹಾರ ಪಾರದರ್ಶಕವಾಗಿರುತ್ತದೆ. ಅಷ್ಟೇ ಅಲ್ಲದೇ ಅಗ್ಗ ಮತ್ತು ವೇಗವಾಗಿ ಹಣವನ್ನು ಕಳುಹಿಸಬಹುದಾಗಿದೆ. ಭಾರತೀಯ ವಲಸಿಗರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ, ಪ್ರವಾಸಿಗರಿಗೆ ಲಾಭವಾಗಲಿದೆ. ಯುಪಿಐ ಮೂಲಕ ಚಿಲ್ಲರೆ ಪಾವತಿಗಳನ್ನು ಭಾರತೀಯ ರೂಪಾಯಿಗಳಲ್ಲಿ ಮಾಡಲಾಗುವುದರಿಂದ ಇದು ವಿದೇಶೀ ವಿನಿಮಯ ಮೀಸಲುಗಳನ್ನು ಉಳಿಸಲು ಸಹಾಯ ಮಾಡುತ್ತದೆ.

    ಸವಾಲುಗಳು ಏನು?
    ಇಂಟರ್‌ನ್ಯಾಷನಲ್‌ ಕರೆನ್ಸಿಯಿಂದ ಲಾಭ ಆದರೂ ಬಹಳಷ್ಟು ಸವಾಲುಗಳಿವೆ. ರೂಪಾಯಿ ಸಂಪೂರ್ಣ ನಿಯಂತ್ರಣ ಆರ್‌ಬಿಐ ಕೈಯಲ್ಲಿ ಇರುವುದಿಲ್ಲ. ಸುಲಭವಾಗಿ ಹಣದ ವರ್ಗಾವಣೆ ಆಗುವ ಕಾರಣ ವಿದೇಶಿ ಹೂಡಿಕೆದಾರರು ಷೇರು ಮಾರುಕಟ್ಟೆಯಲ್ಲಿ ದಿನ ಬೆಳಗಾಗುವುದರ ಒಳಗಡೆ ಹೂಡಿಕೆಯನ್ನು ಹಿಂದಕ್ಕೆ ಪಡೆಯಬಹುದು. ಅದೇ ರೀತಿಯಾಗಿ ಸುಲಭವಾಗಿ ಹಣ ವರ್ಗಾವಣೆಯಾಗುವ ಕಾರಣ ದೇಶ ವಿರೋಧಿ ಕೃತ್ಯಗಳಿಗೆ ಹಣ ಬಳಕೆಯಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಬಹಳ ಎಚ್ಚರಿಕೆಯಿಂದ ಭಾರತ ಹೆಜ್ಜೆ ಇಡಬೇಕೆಂಬ ಸಲಹೆ ಆರ್ಥಿಕ ಕ್ಷೇತ್ರದ ತಜ್ಞರಿಂದ ವ್ಯಕ್ತವಾಗಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Marriage Album: ನಟ ಆಶಿಶ್ ವಿದ್ಯಾರ್ಥಿ ಹಾಗೂ ರೂಪಾಲಿ ಮದುವೆ ಆಲ್ಬಂ

    Marriage Album: ನಟ ಆಶಿಶ್ ವಿದ್ಯಾರ್ಥಿ ಹಾಗೂ ರೂಪಾಲಿ ಮದುವೆ ಆಲ್ಬಂ

    ನ್ನಡವೂ ಸೇರಿದಂತೆ ಭಾರತೀಯ ಸಿನಿಮಾ ರಂಗದ ನಾನಾ ಭಾಷೆಗಳಲ್ಲಿ ನಟಿಸಿರುವ ಹಿರಿಯ ನಟ ಆಶಿಶ್ ವಿದ್ಯಾರ್ಥಿಯು ತಮ್ಮ 60ನೇ ವಯಸ್ಸಿಗೆ 2ನೇ ಮದುವೆ ಆಗಿರುವ ವಿಚಾರ ಚಿತ್ರೋದ್ಯಮದಲ್ಲಿ ಸಾಕಷ್ಟು ಕುತೂಹಲ ಮೂಡಿಸಿತ್ತು. ಜೊತೆಗೆ ಅಚ್ಚರಿಯನ್ನು ತಂದಿತ್ತು.

    ಆಶಿಶ್ ವಿದ್ಯಾರ್ಥಿ (Ashish Vidyarthi) ತಮ್ಮ 60ನೇ ವಯಸ್ಸಿಗೆ 2ನೇ ಮದುವೆಯಾಗಿರೋದು ಚಿತ್ರೋದ್ಯಮಕ್ಕೆ ಮಾತ್ರವಲ್ಲ ಅವರ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಫ್ಯಾಷನ್ ಇಂಡಸ್ಟ್ರಿಯ ಉದ್ಯಮಿ ರೂಪಾಲಿ (Roopali) ಜೊತೆ ದಾಂಪತ್ಯ (Wedding) ಜೀವನಕ್ಕೆ ನಟ ಕಾಲಿಟ್ಟಿದ್ದಾರೆ.

    ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅವರು ಈ ಹಿಂದೆ ರಾಜೋಶಿ ಎಂಬುವವರನ್ನು ಮದುವೆಯಾಗಿದ್ದರು. ಆದರೆ ಈಗ ಆ ದಾಂಪತ್ಯಕ್ಕೆ ಸಾಕಷ್ಟು ವರ್ಷಗಳ ಹಿಂದೆಯೇ ಬ್ರೇಕ್ ಬಿದ್ದಿದೆ. ಹಾಗಾಗಿ ಒಂಟಿಯಾಗಿಯೇ ಆಶಿಶ್ ಜೀವನ ನಡೆಸುತ್ತಿದ್ದರು.

    ಮದುವೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ‘ಒಂಟಿ ಜೀವನ ಸಾಕೆನಿಸಿತು. ಅದೊಂದು ರೀತಿಯ ಜೀವನವೇ ಅಲ್ಲ ಅನಿಸಿತು. ಹಾಗಾಗಿ 2ನೇ ಮದುವೆ ಬಗ್ಗೆ ಯೋಚನೆ ಮಾಡಿದೆ. ಜೀವನ ಸಣ್ಣದು ಪ್ರೀತಿ ಹಂಚಿಕೊಂಡು ಬದುಕೋನ ಅನಿಸಿದ್ದರಿಂದ ಮತ್ತೊಂದು ಮದುವೆಯಾದೆ ಅಂದಿದ್ದರು.

    ಉದ್ಯಮಿ ರೂಪಾಲಿ ಅವರನ್ನ ಆಶಿಶ್ ಕೊಲ್ಕತ್ತಾದ ಕ್ಲಬ್‌ನಲ್ಲಿ ಮೇ 25ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ. ಆಪ್ತರು, ಗುರುಹಿರಿಯರ ಸಮ್ಮುಖದಲ್ಲಿ ಸರಳವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೇ 25 ರಂದು ಕ್ಲಬ್ ನಲ್ಲಿ ನಾನಾ ರೀತಿಯ ಮನರಂಜನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

    ನಮ್ಮ ಮದುವೆ ಸಿಂಪಲ್ ಆಗಿ ನಡೆಯಬೇಕೆಂದು ಆಸೆ ಇತ್ತು ಅದೇ ರೀತಿ ಆಯಿತು. ಖುಷಿಯಿದೆ. ಸದ್ಯದಲ್ಲೇ ನಮ್ಮಿಬ್ಬರ ಭೇಟಿ ಬಗ್ಗೆ ಎಲ್ಲವನ್ನೂ ಹೇಳುವೆ ಎಂದು ಆಶಿಶ್ ಮಾತನಾಡಿದ್ದಾರೆ. ಅಲ್ಲದೇ, ಹೊಸ ಜೀವನಕ್ಕೆ ಕಾಲಿಟ್ಟ ಖುಷಿಯಲ್ಲಿ ಹೆಂಡತಿಯ ಜೊತೆ ಕುಣಿದು ಕುಪ್ಪಳಿಸಿದ್ದಾರೆ.

    ಇವರಿಬ್ಬರ ಮೊದಲ ಭೇಟಿ ಕೋಲ್ಕೊತ್ತಾದಲ್ಲಿ ಆಗಿದೆ ಎಂದು ವರದಿಯಾಗಿದೆ. ಪರಿಚಯ ನಂತರದ ದಿನಗಳಲ್ಲಿ ಸ್ನೇಹವಾಗಿ. ಆ ನಂತರ ಪ್ರೇಮಿಗಳಾಗಿ ಇದೀಗ ಸತಿ ಪತಿಗಳಾಗಿದ್ದಾರೆ. ಈ ವಿಷಯವನ್ನು ಸ್ವತಃ ಆಶಿಶ್ ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.

    ಮದುವೆಯಲ್ಲಿ ಈ ದಂಪತಿ ಧರಿಸಿದ್ದ ವಸ್ತ್ರ ಮತ್ತು ಆಭರಣಗಳು ಕೂಡ ಗಮನ ಸೆಳೆದಿವೆ. ರೂಪಾಯಿ ಅಸ್ಸಾಂನ ಬಿಳಿ ಮತ್ತು ಗೋಲ್ಡನ್ ಮೆಖೇಲಾ ಚಾದರ್ ಧರಿಸಿದ್ದರು. ಜೊತೆಗೆ ದಕ್ಷಿಣ ಭಾರತದ ದೇವಾಲಯ ಕಲೆಯಿಂದ ಪ್ರೇರಿತವಾದ ಚಿನ್ನದ ಆಭರಣಗಳನ್ನು ಅಂದು ಧರಿಸಿದ್ದರು.

  • ದಿವಾಳಿ ಪಾಕಿಸ್ತಾನ ರೂಪಾಯಿ ಮೌಲ್ಯ ಪಾತಾಳಕ್ಕೆ- ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!

    ದಿವಾಳಿ ಪಾಕಿಸ್ತಾನ ರೂಪಾಯಿ ಮೌಲ್ಯ ಪಾತಾಳಕ್ಕೆ- ಆಹಾರ ಪದಾರ್ಥಗಳ ಬೆಲೆ ಮತ್ತಷ್ಟೂ ದುಬಾರಿ.!

    ಇಸ್ಲಾಮಾಬಾದ್: ದಿವಾಳಿ ಪಾಕಿಸ್ತಾನದ (Pakistan) ರೂಪಾಯಿ ಮೌಲ್ಯ ಈಗ ಡಾಲರ್ (US Dollar) ಎದುರು ಸಾರ್ವಕಾಲಿಕ 255 ರೂ.ಗೆ ಕುಸಿತ ಕಂಡಿದೆ.

    ಗುರುವಾರ ಮಧ್ಯಾಹ್ನ 1 ಗಂಟೆ ವೇಳೆಗೆ ಒಂದೇ ದಿನ ಡಾಲರ್ ಎದುರು 24 ರೂ. ಕುಸಿತ ಕಂಡಿದ್ದು 255 ರೂ.ಗೆ ತಲುಪಿದೆ. ಕಳೆದ ಜನವರಿಯಲ್ಲಿ ಡಾಲರ್ ಎದುರು 175 ರೂ.ನಷ್ಟಿತ್ತು. ಇದೀಗ 255 ರೂ.ಗೆ ತಲುಪಿದೆ. ಈ ನಡುವೆ ಮಾರುಕಟ್ಟೆ ಶಕ್ತಿಗಳಿಗೆ ತಮ್ಮ ಕರೆನ್ಸಿ ದರವನ್ನು ನಿರ್ಧರಿಸಲು ಅವಕಾಶ ನೀಡುವಂತೆ ಪಾಕ್ ಸರ್ಕಾರಕ್ಕೆ ಷರತ್ತು ವಿಧಿಸಿದೆ. ಈ ಷರತ್ತನ್ನು ಪಾಕ್ ಸರ್ಕಾರ ಸಹ ಒಪ್ಪಿಕೊಂಡಿದೆ.

    PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ - ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

    ಏಕೆಂದರೆ ಪಾಕಿಸ್ತಾನ (Pakistan) ತನ್ನ ಸ್ಥಿರತೆ ಕಾಯ್ದುಕೊಳ್ಳಲು 6.5 ಬಿಲಿಯನ್ ಡಾಲರ್ ನೆರವು ಪಡೆಯಲು ಹವಣಿಸುತ್ತಿದೆ. ಅದಕ್ಕಾಗಿ ಜಾಗತಿಕ ಸಂಸ್ಥೆಯ ಅನುಮೋದನೆ ಪಡೆಯಲು ಎದುರು ನೋಡುತ್ತಿದೆ. ಇದನ್ನೂ ಓದಿ: PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ – ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

    PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ - ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

    ಈಗಾಗಲೇ ಪಾಕಿಸ್ತಾನದಲ್ಲಿ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದ್ದು, ಒಂದು ಪ್ಯಾಕೆಟ್ ಗೋಧಿ ಹಿಟ್ಟಿನ ಬೆಲೆ 3 ಸಾವಿರಕ್ಕೆ ಮಾರಾಟವಾಗುತ್ತಿದೆ. ವಿದ್ಯುತ್ ನಿರಂತರವಾಗಿ ಕೈಕೊಡುತ್ತಿರುವುದರಿಂದ ಇಡೀ ಪಾಕ್ ಕಗ್ಗತ್ತಲಲ್ಲಿ ಮುಳುಗಿದೆ. ಇದನ್ನೂ ಓದಿ: ಕಾರು ಗ್ಯಾರೇಜ್‍ನಲ್ಲಿ ನೋಡನೋಡ್ತಿದ್ದಂತೆ 3ಕ್ಕೂ ಹೆಚ್ಚು ವಾಹನಗಳು ಧಗಧಗ

    PublicTV Explainer: ಆಹಾರಕ್ಕಾಗಿ ಹೊಡೆದಾಟ.. ಟ್ರಕ್‌ ಹಿಂದೆ ಓಟ - ಪಾಕ್‌ನಲ್ಲಿ ತುತ್ತು ಕೂಳಿಗೂ ತತ್ವಾರ

    ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು (Pakistan Economic Crisis), ಹಣದುಬ್ಬರ ಉಂಟಾಗಿದೆ. ಪರಿಣಾಮವಾಗಿ ಆಹಾರ ಪದಾರ್ಥಗಳ ಬೆಲೆಯೂ ಗಗನಕ್ಕೇರಿದೆ. ಶ್ರೀಲಂಕಾ ಅನುಭವಿಸಿದ ಸಂಕಷ್ಟದ ಪರಿಸ್ಥಿತಿಯೇ ಪಾಕಿಸ್ತಾನಕ್ಕೂ ಎದುರಾಗಿದೆ. ವಿದೇಶಗಳಿಂದ ವಸ್ತು, ಪದಾರ್ಥಗಳನ್ನು ಆಮದು ಮಾಡಿಕೊಳ್ಳಲು ಡಾಲರ್ ಕೊರತೆಯೂ ದೇಶದಲ್ಲಿ ಅನೇಕ ಸಮಸ್ಯೆಗಳನ್ನು ಉಂಟು ಮಾಡಿದೆ. ಆಹಾರ ಬಿಕ್ಕಟ್ಟು ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಸರ್ಕಾರದ ವಿರುದ್ಧ ಜನ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭಾರತೀಯ ರೂಪಾಯಿ, ಏಮ್ಸ್ ಯೋಜನೆ ಬಗ್ಗೆ ಟೀಕೆ – ಬಿಜೆಪಿ ವಿರುದ್ಧ ಉದಯನಿಧಿ ಸ್ಟಾಲಿನ್ ವಾಗ್ದಾಳಿ

    ಭಾರತೀಯ ರೂಪಾಯಿ, ಏಮ್ಸ್ ಯೋಜನೆ ಬಗ್ಗೆ ಟೀಕೆ – ಬಿಜೆಪಿ ವಿರುದ್ಧ ಉದಯನಿಧಿ ಸ್ಟಾಲಿನ್ ವಾಗ್ದಾಳಿ

    ಚೆನ್ನೈ: ಅಮೆರಿಕ ಡಾಲರ್ ವಿರುದ್ಧ ಭಾರತೀಯ ರೂಪಾಯಿ ಕುಸಿತಗೊಂಡಿರುವ ಮತ್ತು ಮಧುರೈನ AIIMS ಯೋಜನೆ (AIIMS Project) ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ(Dravida Munnetra Kazhagam) (ಡಿಎಂಕೆ) ಶಾಸಕ ಉದಯನಿಧಿ ಸ್ಟಾಲಿನ್ (Udhayanidhi Stalin) ವಾಗ್ದಾಳಿ ನಡೆಸಿದ್ದಾರೆ.

    ಅಕ್ಟೋಬರ್ 27 ರಂದು ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಿರ್ಮಲಾ ಸೀತಾರಾಮನ್‍ಗೆ (Nirmala Sitharaman) ಪ್ರಶ್ನೆ ಕೇಳಿದರೆ ಅವರು ನೀಡುವ ಉತ್ತರ ಕೇಳದರೆ ಯಾರನ್ನಾದರೂ ಬೆಚ್ಚಿ ಬೀಳಿಸುತ್ತದೆ. ಇತ್ತೀಚೆಗೆ ಅಮೆರಿಕಾ ಡಾಲರ್ (US Dollar) ಎದುರು ಭಾರತೀಯ ರೂಪಾಯಿ (Indian rupee) ಹೇಗೆ ಕುಸಿಯುತ್ತಿದೆ ಎಂದು ಅವರನ್ನು ಕೇಳಿದರೆ, ನೀವು ಅದನ್ನು ಏಕೆ ನೆಗೆಟಿವ್ ಆಗಿ ನೋಡುತ್ತಿದ್ದೀರಾ, ಅಮೆರಿಕಾ ಡಾಲರ್ ಬಲಗೊಳ್ಳುತ್ತಿರುವುದನ್ನು ಪಾಸಿಟಿವ್ ಆಗಿ ನೋಡಿ ಎಂದಿದ್ದರು. ನಮಗೆ ಎಂತಹ ಹಣಕಾಸು ಮಂತ್ರಿ ಸಿಕ್ಕಿದ್ದಾರೆ ನೋಡಿ. ಮೋದಿ ಹೇಗೆ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೋ, ಅದೇ ರೀತಿ ಬಿಜೆಪಿಯ ಬಹುತೇಕ ನಾಯಕರು ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

    ಇದೇ ವೇಳೆ ಮಧುರೈನಲ್ಲಿ (Madurai) ಸ್ಥಾಪಿಸಲಾಗುತ್ತಿರುವ ಏಮ್ಸ್ ಯೋಜನೆಯ ಬಗ್ಗೆ ಮಾತನಾಡಿದ ಅವರು, ಯೋಜನೆಯ ಫಲಿತಾಂಶವನ್ನು ಬಿಜೆಪಿ ನಾಯಕರು ತೋರಿಸಬೇಕು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು, ಶೇ 95 ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳಿದರು. ಆದರೆ ಅವರು ಒಂದೇ ಒಂದು ಕಲ್ಲು ಕೂಡ ಹಾಕಿಲ್ಲ. ಬಿಜೆಪಿಯವರು ಕೇವಲ ಸುಳ್ಳುಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪತ್ನಿಯ ಶವ ತರಲು ಹಣವಿಲ್ಲದೇ ಪರದಾಟ – ಸಹಾಯ ಮಾಡಿ ಮಾನವೀಯತೆ ಮೆರೆದ ಅಪ್ಪು ಅಭಿಮಾನಿಗಳು

    Live Tv
    [brid partner=56869869 player=32851 video=960834 autoplay=true]

  • ಡಾಲರ್ ಎದುರು ರೂಪಾಯಿ ಮೌಲ್ಯ 81.90ಕ್ಕೆ ಕುಸಿತ

    ಡಾಲರ್ ಎದುರು ರೂಪಾಯಿ ಮೌಲ್ಯ 81.90ಕ್ಕೆ ಕುಸಿತ

    ನವದೆಹಲಿ: ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದಾಗಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಅಮೆರಿಕ ಡಾಲರ್ ಎದುರು 81.90 ರೂ.ಗೆ ಇಳಿದಿದ್ದು, ಸಾರ್ವಕಾಲಿನ ಕುಸಿತ ದಾಖಲಿಸಿದೆ.

    ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಮೊದಲ ಬಾರಿಗೆ 82ಕ್ಕಿಂತ ಕೆಳಗಿಳಿದಿದೆ. ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕಿನ ಕಠಿಣ ಹೇಳಿಕೆಗಳು ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಡಾಲರ್ ಮೌಲ್ಯವರ್ಧನೆಗೊಂಡ ಪರಿಣಾಮ ರೂಪಾಯಿ ಸೇರಿದಂತೆ ಇತರ ರಾಷ್ಟ್ರಗಳ ಕರೆನ್ಸಿಗಳು ತೀವ್ರ ಹೊಡೆತ ಅನುಭವಿಸಿವೆ. ಅಮೆರಿಕದ ಟ್ರೆಷರ್ ಯೀಲ್ಡ್ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿರುವ ಜೊತೆಗೆ ಆಮದುದಾರರಿಂದ ಡಾಲರ್‌ಗೆ ಬೇಡಿಕೆ ಹೆಚ್ಚಳವಾಗಿರುವುದು ಕೂಡ ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ.

    ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ಡಾಲರ್ ಎದುರು ಸತತ ಮೂರನೇ ಬಾರಿ ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಇದೇ ರೀತಿ 2024ರವರೆಗೂ ಯುಎಸ್ ಡಾಲರ್ ಏರಿಕೆ ಕಾಣಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನೇಮಕ

    RBI

    ಈ ಹಿನ್ನೆಲೆಯಲ್ಲಿ ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆ ಆರಂಭವಾಗಿದ್ದು, ಈ ಬಾರಿ ಕೂಡ ರೆಪೋ ದರ ಹೆಚ್ಚಳ ಮಾಡುವ ಸಾಧ್ಯತೆ ನಿಚ್ಚಳವಾಗಿದೆ. ಮೇನಿಂದ ಈ ತನಕ ಆರ್‌ಬಿಐ ರೆಪೋ ದರವನ್ನು 140 ಮೂಲಾಂಕಗಳಷ್ಟು ಏರಿಕೆ ಮಾಡಿದ್ದು, ಪ್ರಸ್ತುತ ಶೇ.5.4ಕ್ಕೆ ತಲುಪಿದೆ. ರೆಪೋ ದರ ಏರಿಕೆಯಿಂದ ಗೃಹ ಸಾಲ ಹಾಗೂ ವಾಹನ ಸಾಲ ಸೇರಿದಂತೆ ವಿವಿಧ ಸಾಲಗಳ ಮೇಲಿನ ಬಡ್ಡಿದರ ಇನ್ನೊಮ್ಮೆ ಹೆಚ್ಚಳವಾಗಲಿದೆ. ಈಗಾಗಲೇ ಬಡ್ಡಿದರ ಹೆಚ್ಚಳದಿಂದ ಶಾಕ್ ಆಗಿರುವ ಜನಸಾಮಾನ್ಯರಿಗೆ ಅದರ ಬಿಸಿ ಇನ್ನಷ್ಟು ತಟ್ಟಲಿದೆ. ಇದನ್ನೂ ಓದಿ: ತಾಕತ್ ಇದ್ರೆ ಕಾಂಗ್ರೆಸ್‌ನಿಂದ ಬರುವ ಶಾಸಕರನ್ನ ತಡೆಯಿರಿ: ಸವದಿ ಸವಾಲು

    Live Tv
    [brid partner=56869869 player=32851 video=960834 autoplay=true]

  • ಕೇಂದ್ರದಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ – ಕರ್ನಾಟಕದ ಪಾಲು ಎಷ್ಟು?

    ಕೇಂದ್ರದಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ – ಕರ್ನಾಟಕದ ಪಾಲು ಎಷ್ಟು?

    ನವದೆಹಲಿ: ಕೇಂದ್ರದ ತೆರಿಗೆಗಳು ಮತ್ತು ಸುಂಕಗಳ ನಿವ್ವಳ ಆದಾಯದಲ್ಲಿ ಆಗಸ್ಟ್​ ತಿಂಗಳ ಬಾಬತ್ತಿನಲ್ಲಿ ರಾಜ್ಯಗಳ ಪಾಲಿನ ಹಣ ಬಿಡುಗಡೆ ಮಾಡಲಾಗಿದೆ.

    15 ನೇ ಹಣಕಾಸು ಆಯೋಗದ ಶಿಫಾರಸಿನಂತೆ ಈ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ‌ಎರಡು ಕಂತುಗಳಲ್ಲಿ 4,254 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಎಲ್ಲ ರಾಜ್ಯಗಳಿಗೂ ಇಂದು ಒಟ್ಟಾರೆ 1,16,665 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಆಗಸ್ಟ್ 12 ರಿಂದ ಕೋವಿಡ್ ಬೂಸ್ಟರ್ ಆಗಿ ವಯಸ್ಕರಿಗೆ ಸಿಗಲಿದೆ ಕಾರ್ಬೆವಾಕ್ಸ್

    ಬಿಹಾರ ರಾಜ್ಯಕ್ಕೆ 11,734 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದ್ದರೆ ಉತ್ತರ ಪ್ರದೇಶಕ್ಕೆ 20,928 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಇದು ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸುವ ನಿಟ್ಟಿನಲ್ಲಿ ರಾಜ್ಯಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಆಶಯ, ಬದ್ಧತೆಗೆ ಅನುಗುಣವಾಗಿದೆ. ಇದನ್ನೂ ಓದಿ: ಸಿ.ಟಿ.ರವಿ ಸ್ವಗ್ರಾಮದ ಯುವಕರಿಂದ ಸಿದ್ದರಾಮಯ್ಯ ವಿರುದ್ಧ ದೂರು

    58,332.86 ಕೋಟಿ ಸಾಮಾನ್ಯ ಮಾಸಿಕ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿ 1,16,665.75 ಕೋಟಿ ರೂಪಾಯಿ ಮೊತ್ತದ ತೆರಿಗೆ ಹಂಚಿಕೆಯ ಎರಡು ಕಂತುಗಳನ್ನು ಕೇಂದ್ರವು ರಾಜ್ಯ ಸರ್ಕಾರಗಳಿಗೆ ಬಿಡುಗಡೆ ಮಾಡಿದೆ. ಇದು ರಾಜ್ಯಗಳ ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸಲು ರಾಜ್ಯಗಳ ಕೈಗಳನ್ನು ಬಲಪಡಿಸುವ ಭಾರತ ಸರ್ಕಾರದ ಬದ್ಧತೆಗೆ ಅನುಗುಣವಾಗಿದೆ ಎಂದು ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿಲ್ಲ, ಅದು ಸ್ವಾಭಾವಿಕ: ನಿರ್ಮಲಾ ಸೀತಾರಾಮನ್

    ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿಲ್ಲ, ಅದು ಸ್ವಾಭಾವಿಕ: ನಿರ್ಮಲಾ ಸೀತಾರಾಮನ್

    ನವದೆಹಲಿ: ಅಮೆರಿಕನ್ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಕುಸಿತ ಕಾಣುತ್ತಿರುವ ಕಳವಳದ ನಡುವೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರೂ. ಮೌಲ್ಯ ಕುಸಿಯುತ್ತಿಲ್ಲ. ಅದು ತನ್ನ ಸ್ವಾಭಾವಿಕ ಹಾದಿಯನ್ನು ಕಂಡುಕೊಳ್ಳುತ್ತಿದೆ ಎಂದು ಹೇಳಿಕೆ ನೀಡಿದರು.

    ರಾಜ್ಯಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ರೂ. ಮೌಲ್ಯ ಕುಸಿತದ ಬಗ್ಗೆ ಮಾತನಾಡಿದ ಸೀತಾರಾಮನ್, ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಸ್ಥಳೀಯ ಕರೆನ್ಸಿ ಬಗ್ಗೆ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಒಂದು ವೇಳೆ ಅಸ್ಥಿರತೆ ಕಂಡುಬಂದಲ್ಲಿ ಮಾತ್ರವೇ ಮಧ್ಯಪ್ರವೇಶಿಸುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ದೇಶದಲ್ಲಿ ʻಪ.ಬಂಗಾಳ ಪಡಿತರ ಮಾದರಿʼ ಜಾರಿಗೊಳಿಸಿ – ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಧಾನಿ ಮೋದಿ ಸಹೋದರ ಪ್ರತಿಭಟನೆ

    ಆರ್‌ಬಿಐ ಮಧ್ಯಸ್ಥಿಕೆಯಿಂದ ರೂ. ಮೌಲ್ಯದ ಏರಿಕೆ ಅಥವಾ ಇಳಿಕೆಯನ್ನು ನಿರ್ಧರಿಸಲು ಸಾಧ್ಯವಿಲ್ಲ. ಅದು ಕೇವಲ ಅಸ್ಥಿರತೆಯನ್ನು ತಪ್ಪಿಸಲು ಹಾಗೂ ಅದರ ಹಾದಿಯನ್ನು ಕಂಡುಕೊಳ್ಳಲು ಅವಕಾಶ ನೀಡುತ್ತದೆ ಎಂದು ಹೇಳಿದರು.

    ಭಾರತವೂ ಕೂಡಾ ಇತರ ಹಲವು ದೇಶಗಳಂತೆ. ಅದು ತನ್ನ ಕರೆನ್ಸಿಯ ಮೌಲ್ಯವನ್ನು ಇತರ ದೇಶಗಳೊಂದಿಗೆ ತನಗೆ ಬೇಕಿದ್ದಂತೆ ಏರಿಕೆ ಅಥವಾ ಇಳಿಕೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ನಾವು ರೂ. ಮೌಲ್ಯವನ್ನು ಬಲಪಡಿಸಲು ಸಾಧ್ಯವಿರುವ ಮಾರ್ಗಗಳನ್ನು ಕಂಡುಕೊಂಡು ಆರ್‌ಬಿಐ ಹಾಗೂ ಸಚಿವಾಲಯಗಳೊಂದಿಗೆ ತಕ್ಕಮಟ್ಟಿನ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: NIA ಕಚೇರಿ ವ್ಯಾಪ್ತಿ ಬೆಂಗಳೂರಿಗೆ ವಿಸ್ತರಿಸಲು ಶೋಭಾ ಕರಂದ್ಲಾಜೆ ಮನವಿ

    ಭಾರತೀಯ ರೂ. ತನ್ನ ಇತರ ದೇಶಗಳಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ವಾಸ್ತವವಾಗಿ ಭಾರತೀಯ ರೂಪಯಿಯನ್ನು ಇತರ ಕರೆನ್ಸಿಗಳಿಗೆ ಹೋಲಿಸಿದರೆ ಅದರ ಮೌಲ್ಯ ಹೆಚ್ಚಾಗಿರುವುದು ಕಂಡುಬರುತ್ತದೆ ಎಂದು ಸ್ಪಷ್ಟಪಡಿಸಿದರು.

    Live Tv
    [brid partner=56869869 player=32851 video=960834 autoplay=true]

  • ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿತ: ಬಾಲಿವುಡ್ ಸಿಲಿಬ್ರಿಟಿಗಳನ್ನು ಎಚ್ಚರಿಸಿದ ಪ್ರಕಾಶ್ ರೈ

    ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿತ: ಬಾಲಿವುಡ್ ಸಿಲಿಬ್ರಿಟಿಗಳನ್ನು ಎಚ್ಚರಿಸಿದ ಪ್ರಕಾಶ್ ರೈ

    ರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಧೋರಣೆಗಳ ಬಗ್ಗೆ ಈವರೆಗೂ ಪ್ರಶ್ನೆ ಮಾಡುತ್ತಲೇ ಬಂದಿರುವ ಬಹುಭಾಷಾ ನಟ ಪ್ರಕಾಶ್ ರೈ, ಈ ಬಾರಿ ಬಾಲಿವುಡ್ ನಟ ನಟಿಯರಿಗೆ ಪ್ರಶ್ನೆ ಮಾಡಿದ್ದಾರೆ. ಅವರ ದೇಶಭಕ್ತಿಯ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಡಾಲರ್ ಮುಂದೆ ನಿರಂತರವಾಗಿ ಕುಸಿಯುತ್ತಿರುವ ರೂಪಾಯಿ ಮೌಲ್ಯದ ಬಗ್ಗೆ ಟ್ವಿಟ್ ಮಾಡಿರುವ ಪ್ರಕಾಶ್ ರೈ, ಈ ಹಿಂದಿನ ಕೇಂದ್ರ ಸರಕಾರವಿದ್ದಾಗ ರೂಪಾಯಿ ಮೌಲ್ಯ ಕುಸಿದ ಸಂದರ್ಭದಲ್ಲಿ ಟ್ವಿಟ್ ಮಾಡಿದ್ದ ಬಾಲಿವುಡ್ ಸಿಲಿಬ್ರಿಟಿಗಳ ನಡೆಯನ್ನು ನೆನಪಿಸಿದ್ದಾರೆ.

    ಕಾಂಗ್ರೆಸ್ ಸರಕಾರ ಇದ್ದಾಗಲೂ ರೂಪಾಯಿ ಮೌಲ್ಯ ಕುಸಿದಿದೆ. ಆ ಸಂದರ್ಭದಲ್ಲಿ ಬಾಲಿವುಟ್ ಸಿಲೆಬ್ರಿಟಿಗಳಾದ ಅಮಿತಾಭ್ ಬಚ್ಚನ್, ಜೂಹಿ ಚಾವ್ಲಾ, ಅನುಪಮ್ ಖೇರ್, ಶಿಲ್ಪಾ ಶೆಟ್ಟಿ, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿದಂತೆ ಹಲವರು ಟ್ವಿಟ್ ಮಾಡಿದ್ದರು. ಅದರಲ್ಲೂ ಜೂಹಿ ಚಾವ್ಲಾ ರೂಪಾಯಿ ಮೌಲ್ಯದ ಕುಸಿತವನ್ನು ಒಳ ಉಡುಪಿಗೆ ಹೋಲಿಸಿದ್ದರು. ಈಗ ಅದೆಲ್ಲ ಟ್ವಿಟ್ ಅನ್ನು ಒಟ್ಟುಗೂಡಿಸಿ ಮತ್ತೆ ಅವರಿಗೆ ನೆನಪಿಸಿದ್ದಾರೆ. ಇದನ್ನೂ ಓದಿ: ಈ ಪ್ರಕರಣದಿಂದ ಮುಕ್ತನಾಗಿ ಬರುತ್ತೇನೆ ಎಂದು ಮೊದಲೇ ಗೊತ್ತಿತ್ತು: ಪತ್ನಿ, ಪುತ್ರನಿಗೆ ಸಿಹಿ ತಿನಿಸಿ ಈಶ್ವರಪ್ಪ ಸಂಭ್ರಮಾಚರಣೆ

    ಈ ಸಿಲಿಬ್ರಿಟಿಗಳೆಲ್ಲ ಹಿಂದೆ ಮಾಡಿದ್ದ ಟ್ವಿಟ್ ಸ್ಕ್ರಿನ್ ಶಾಟ್ ಗಳನ್ನು ಶೇರ್ ಮಾಡಿರುವ ಪ್ರಕಾಶ್ ರಾಜ್ ‘ಆ ಒಂದು ಕಾಲದಲ್ಲಿ ನನ್ನ ದೇಶದಲ್ಲಿ ಎಂದು ಬರೆದು, ಜಸ್ಟ್ ಆಸ್ಕಿಂಗ್ ಹ್ಯಾಶ್ ಅಡಿಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಪ್ರಕಾಶ್ ರೈ ಈ ಟ್ವಿಟ್ ಗೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಅಲ್ಲದೇ, ಅಷ್ಟೇ ಜನರು ಕೂಡ ಅವರಿಗೂ ಪ್ರಶ್ನೆ ಮಾಡಿದ್ದಾರೆ. ಒಂದು ರೀತಿಯಲ್ಲಿ ಈ ಟ್ವಿಟ್ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದಂತೂ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ರೂಪಾಯಿ ಮೌಲ್ಯ ಪಾತಾಳಕ್ಕೆ – 1 ಡಾಲರ್ = 80.13 ರೂ.

    ರೂಪಾಯಿ ಮೌಲ್ಯ ಪಾತಾಳಕ್ಕೆ – 1 ಡಾಲರ್ = 80.13 ರೂ.

    ನವದೆಹಲಿ: ಇದೇ ಮೊದಲ ಬಾರಿಗೆ ಅಮೆರಿಕದ ಡಾಲರ್ ಎದುರು ರೂಪಾಯಿಯ ಮೌಲ್ಯ ದಾಖಲೆಯ ಕುಸಿತ ಕಂಡಿದೆ. ಮಧ್ಯದಲ್ಲಿ ತುಸು ಚೇತರಿಕೆ ಕಂಡಿದ್ದ ರೂಪಾಯಿ ಮತ್ತೆ 80 ರೂ. ಗಡಿ ದಾಟಿದೆ. ನಿನ್ನೆ ದಿನದ ಕೊನೆಗೆ 79.98 ರೂಪಾಯಿ ಇದ್ದ ಮೌಲ್ಯ ಇಂದು 80.13 ರೂ.ಗಳಿಗೆ ಕುಸಿದಿದೆ.

    ಕಚ್ಚಾ ತೈಲದ ಬೆಲೆ ಏರಿಕೆ, ವಿದೇಶಿ ಬಂಡವಾಳ ಹೂಡಿಕೆದಾರರ ಹೊರ ಹರಿವು ಮೊದಲಾದ ಕಾರಣಗಳು ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ. ಇದು ಈ ವರ್ಷ ಯುಎಸ್ ಡಾಲರ್ ವಿರುದ್ಧ ಸುಮಾರು ಶೇ.7 ರಷ್ಟು ಕುಸಿದಿದೆ ಎಂದು ರಿಲಯನ್ಸ್ ಸೆಕ್ಯುರಿಟೀಸ್‌ನ ಹಿರಿಯ ಸಂಶೋಧನಾ ವಿಶ್ಲೇಷಕ ಶ್ರೀರಾಮ್ ಅಯ್ಯರ್ ಹೇಳಿದ್ದಾರೆ. ಇದನ್ನೂ ಓದಿ: ಜೀವ ಬೆದರಿಕೆ, ಮಾನಸಿಕ ಚಿತ್ರಹಿಂಸೆ ಆರೋಪ – ಕಾಂಗ್ರೆಸ್ ನಾಯಕಿ ವಿರುದ್ಧ FIR

    ವಿದೇಶಿ ಹೂಡಿಕೆದಾರರು 2022-23 ರಲ್ಲಿ ಇದುವರೆಗೆ ಭಾರತೀಯ ಈಕ್ವಿಟಿ ಮಾರುಕಟ್ಟೆಗಳಿಂದ ಸುಮಾರು 14 ಬಿಲಿಯನ್ ಡಾಲರ್ ಹಣವನ್ನು ಹಿಂತೆಗೆದುಕೊಂಡಿದ್ದಾರೆ. ವಿದೇಶಿ ಬಂಡವಾಳದ ಹೊರಹರಿವಿನಿಂದ ರೂಪಾಯಿ ಮೌಲ್ಯ ಕುಸಿತವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 11ರಂದು ಹೇಳಿದ್ದರು. ಇದನ್ನೂ ಓದಿ: NEET ಪರೀಕ್ಷಾರ್ಥಿಗಳಿಗೆ ಒಳಉಡುಪು ತೆಗೆಯಲು ಒತ್ತಾಯ- ತನಿಖೆ ಆರಂಭಿಸಿದ ಪೊಲೀಸರು

    2014ರ ಡಿಸೆಂಬರ್ 31 ರಂದು ಡಾಲರ್ ಮುಂದೆ ರೂಪಾಯಿಯ ಬೆಲೆ 79.41 ರೂ.ಗೆ ಏರಿಕೆಯಾಗಿತ್ತು.

    Live Tv
    [brid partner=56869869 player=32851 video=960834 autoplay=true]