Tag: ರೆಮಿಡಿಸಿವರ್

  • ಔಷಧ ಕಂಪನಿಗಳ ವಿರುದ್ಧ ಗುಡುಗಿದ ಡಿಸಿಎಂ: ರೆಮ್‍ಡಿಸಿವರ್ ಕಂಪನಿಗಳಿಗೆ ನೋಟಿಸ್

    ಔಷಧ ಕಂಪನಿಗಳ ವಿರುದ್ಧ ಗುಡುಗಿದ ಡಿಸಿಎಂ: ರೆಮ್‍ಡಿಸಿವರ್ ಕಂಪನಿಗಳಿಗೆ ನೋಟಿಸ್

    ಬೆಂಗಳೂರು: ರಾಜ್ಯಕ್ಕೆ ನಿಗದಿಪಡಿಸಿದ ರೆಮ್‍ಡಿಸಿವರ್ ಕೋಟಾವನ್ನು ಸಕಾಲಕ್ಕೆ ಸರಿಯಾಗಿ ಪೂರೈಕೆ ಮಾಡದಿರುವ ಔಷಧ ಕಂಪನಿಗಳಿಗೆ ನೊಟೀಸ್ ನೀಡಲಾಗಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥನಾರಾಯಣ ತಿಳಿಸಿದರು.

    ಮಲ್ಲೇಶ್ವರದಲ್ಲಿ ಭಾನುವಾರ ಸಂಜೆ ಮನೆ ಬಾಗಿಲಿಗೇ ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಮ್ಮ ನಿಗದಿತ ಕೋಟಾ ಕೊಡಲು ಕಂಪನಿಗಳಿಗೆ ಏನು ಸಮಸ್ಯೆ? ಕೊಡಬೇಕು ಎಂದರೆ ಕೊಡಬೇಕಷ್ಟೇ. ಅನಕ್ಷರಸ್ಥರಿಗೂ ಕಾನೂನಿನ ಅರಿವು ಇರುತ್ತದೆ. ದೊಡ್ಡ ದೊಡ್ಡ ಔಷಧ ಕಂಪನಿಗಳಿಗೆ ಇರುವುದಿಲ್ಲವೆ? ಒಂದು ದಿನ ಸಪ್ಲೈ ಮಾಡಿ ಇನ್ನೊಂದು ದಿನ ಮಾಡದಿದ್ದರೆ ಹೇಗೆ? ಎಂದು ಹರಿಹಾಯ್ದರು.

    ಮಹಾರಾಷ್ಟ್ರದ ನಂತರ ಇಡೀ ದೇಶದಲ್ಲಿಯೇ ಅತಿಹೆಚ್ಚು ರೆಮ್‍ಡಿಸಿವರ್ ಹಂಚಿಕೆ ಆಗಿರುವುದು ಕರ್ನಾಟಕಕ್ಕೆ ಮಾತ್ರ. ಆದರೆ, ಪೂರೈಕೆ ನಿರಂತರತೆ ಇಲ್ಲದಿರುವುದೇ ಸಮಸ್ಯೆಯಾಗಿದೆ. ಇದನ್ನು ಸರಿ ಮಾಡುತ್ತೇವೆ. ಅದಕ್ಕೆ ಬೇಕಾದ ಎಲ್ಲ ಕ್ರಮ ಕೈಗೊಂಡಿದ್ದೇವೆ. ಸರಿಯಾಗಿ ಪೂರೈಕೆ ಮಾಡದಿದ್ದರೆ ಆ ಕಂಪನಿಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಗುಡುಗಿದರು.

    ಸರಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ನೇರವಾಗಿ ಸರಕಾರವೇ ರೆಮ್‍ಡಿಸಿವರ್ ನೀಡುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಪೋರ್ಟಲ್ ಮೂಲಕ ಪಡೆಯಬೇಕು. ಯಾರಿಗೂ ನಾವು ಕೈಗೆ ಈ ಔಷಧ ಕೊಡುವುದಿಲ್ಲ. ಯಾರಿಗೆ ಕೊಡುತ್ತೆವೆಯೋ ಆ ಸೋಂಕಿತರ ಮೊಬೈಲ್‍ಗೂ ಸಂದೇಶ ಹೋಗುತ್ತದೆ. ಎಲ್ಲವೂ ಪಾರದರ್ಶಕವಾಗಿರುತ್ತದೆ ಎಂದರು.

  • ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವರ್ ಇಂಜೆಕ್ಷನ್ ಮಾರಾಟ- ಇಬ್ಬರು ಆರೋಪಿಗಳ ಬಂಧನ

    ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವರ್ ಇಂಜೆಕ್ಷನ್ ಮಾರಾಟ- ಇಬ್ಬರು ಆರೋಪಿಗಳ ಬಂಧನ

    ಬೀದರ್: ರೆಮಿಡಿಸಿವರ್ ಇಂಜೆಕ್ಷನ್ ದುಪ್ಪಟ್ಟು ಹಣಕ್ಕೆ ಅಕ್ರಮವಾಗಿ ಮಾರಾಟ ಮಾಡುತ್ತಿರುವ ದಂಧೆ ಗಡಿ ಜಿಲ್ಲೆ ಬೀದರ್ ನಲ್ಲಿ ದಿನೇ ದಿನೇ ಜೋರಾಗುತ್ತಿದೆ.

    ಅಭಿಷೇಕ್ ಹಾಗೂ ಆಸಿಫ್ ಅಹ್ಮದ್ ಬಂಧಿತ ಆರೋಪಿಗಳಾಗಿದ್ದಾರೆ. ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವರ್ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಇವರನ್ನು ಇಂದು ಬಂಧಿಸಲಾಗಿದೆ.

    ಬೀದರ್ ಬ್ರೀಮ್ಸ್ ಆಸ್ಪತ್ರೆಯ ಬಳಿ ಅಕ್ರಮವಾಗಿ ರೆಮಿಡಿಸಿವರ್ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಬೀದರ್ ಬ್ರೀಮ್ಸ್ ಆಸ್ಪತ್ರೆ ಬಳಿ ನ್ಯೂಟೌನ್ ಪೊಲೀಸರು ದಾಳಿ ಮಾಡಿ ಇಬ್ಬರು ಬಂಧಿಸಿದ್ದಾರೆ. ಆರೋಪಿಗಳು ರೆಮಿಡಿಸಿವರ್ ಇಂಜೆಕ್ಷನ್ 20 ರಿಂದ 25 ಸಾವಿರಕ್ಕೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು.

    ನಿನ್ನೆ ಕೂಡಾ ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವರ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದರು. ಇಂದು ಕೂಡಾ ನ್ಯೂ ಟೌನ್ ಪೊಲೀಸರು ಅಕ್ರಮವಾಗಿ ಕಾಳಸಂತೆಯಲ್ಲಿ ರೆಮಿಡಿಸಿವರ್ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ನ್ಯೂ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗೆ ಕೈಗೊಂಡಿದ್ದಾರೆ.

  • ರೆಮಿಡಿಸಿವರ್ ಅಕ್ರಮವಾಗಿ ಮಾರಾಟ – ಬೀದರ್‌ನಲ್ಲಿ ಇಬ್ಬರ ಬಂಧನ

    ರೆಮಿಡಿಸಿವರ್ ಅಕ್ರಮವಾಗಿ ಮಾರಾಟ – ಬೀದರ್‌ನಲ್ಲಿ ಇಬ್ಬರ ಬಂಧನ

    ಬೀದರ್: ಕಾಳಸಂತೆಯಲ್ಲಿ ರೆಮಿಡಿಸಿವರ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ.

    ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಸುತ್ತಿದ್ದ ಶೇಖ್ ಅಬ್ದುಲ್ಲಾ ಹಾಗೂ ಆರೋಗ್ಯ ಇಲಾಖೆಯ ಜೊತೆ ಸಂಪರ್ಕದಲ್ಲಿರುವ ಮಹಮ್ಮದ್ ವಾಸಿಂ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ನಗರ ಠಾಣೆಯ ಪೊಲೀಸರು ಬೀದರ್ ನ ಓಲ್ಡ್ ಸಿಟಿಯ ಗವಾನ್ ಚೌಕ್ ಬಳಿ ದಾಳಿ ಮಾಡಿ ಇಬ್ಬರು ಆರೋಪಿಯನ್ನು ಬಂಧಿಸಿದ್ದಾರೆ.

    ಕಾಳಸಂತೆಯಲ್ಲಿ ರೆಮಿಡಿಸಿವರ್ ಅಕ್ರಮವಾಗಿ ಮಾರಾಟವಾಗುತ್ತಿದೆ ಎಂಬ ಮಾಹಿತಿ ಪಡೆದ ಪೊಲೀಸರು ಕೊನೆಗೂ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊರೊನಾ ಪೀಡಿತರಿಗೆ 20 ರಿಂದ 25 ಸಾವಿರಕ್ಕೆ ರೆಮಿಡಿಸಿವರ್ ಮಾರಾಟ ಮಾಡುತ್ತಿದ್ದ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

    ಈ ಕುರಿತು ಬೀದರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

  • ನೀವಾದ್ರೂ ರೆಮ್‍ಡಿಸಿವರ್ ಇಂಜೆಕ್ಷನ್ ಕೊಡಿಸಿ- ಸಚಿವರ ಮುಂದೆ ರೋಗಿ ಸಂಬಂಧಿಯ ಅಳಲು

    ನೀವಾದ್ರೂ ರೆಮ್‍ಡಿಸಿವರ್ ಇಂಜೆಕ್ಷನ್ ಕೊಡಿಸಿ- ಸಚಿವರ ಮುಂದೆ ರೋಗಿ ಸಂಬಂಧಿಯ ಅಳಲು

    – 30 ಸಾವಿರ ಹಣ ಕೊಡ್ತೀನಿ, ಇಂಜೆಕ್ಷನ್ ನೀಡಿ

    ಬೀದರ್: ಜಿಲ್ಲೆಯಲ್ಲಿ ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿದ್ದ ವ್ಯಕ್ತಿಯೊಬ್ಬರಿಗೆ ರೆಮ್‍ಡಿಸಿವರ್ ಇಂಜೆಕ್ಷನ್ ಸಿಗದೆ ಕಷ್ಟಪಡುತ್ತಿರುವುದರ ಕುರಿತು ರೋಗಿಯ ಸಂಬಂಧಿಯೊಬ್ಬರು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಮುಂದೆ ಕೈಮುಗಿದು ಅಳಲು ತೋಡಿಕೊಂಡಿದ್ದಾರೆ.

    ತೀವ್ರವಾಗಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಬೀದರ್ ಜಿಲ್ಲೆಯ ಚಿಟ್ಟಗುಪ್ಪ ತಾಲೂಕಿನ ಕಾರಕಾರಪಳ್ಳಿಯ ಪ್ರದೀಪ್ ಎಂಬ ವ್ಯಕ್ತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರದೀಪ್ ಅವರ ಕೊರೊನಾ ವರದಿ ನೆಗೆಟಿವ್ ಇದ್ದರು ಉಸಿರಾಟದ ಸಮಸ್ಯೆ ದಿನೇ ದಿನೇ ತೀವ್ರವಾಗುತ್ತಿದೆ. ಹೀಗಾಗಿ ಇಂದು ರೆಮ್‍ಡಿಸಿವರ್ ಇಂಜೆಕ್ಷನ್ ಸಿಗುತ್ತಿಲ್ಲಾ. ನಾನು ರೆಮ್‍ಡಿಸಿವರ್ ಇಂಜೆಕ್ಷನ್ ಗಾಗಿ 30 ಸಾವಿರ ಹಣ ಇಟ್ಟುಕೊಂಡು ಓಡಾಡುತ್ತಿದ್ದೇನೆ ಆದರೂ ಸಿಗುತ್ತಿಲ್ಲಾ. ನೀವಾದ್ರೂ ಇಂಜೆಕ್ಷನ್ ಕೊಡಿಸಿ ಎಂದು ಪ್ರಭು ಚವ್ಹಾಣ್ ಗೆ ಕೈಮುಗಿದು 30 ಸಾವಿರ ರೂಪಾಯಿಯ ಹಣದ ಕಂತೆಯನ್ನು ರೋಗಿಯ ಸಂಬಂಧಿ ತೋರಿಸಿದ್ದಾರೆ.

    ಕೂಡಲೇ ಪ್ರಭು ಚವ್ಹಾಣ್ ಅವರು ಜಿಲ್ಲಾಡಳಿತಕ್ಕೆ ತಿಳಿಸಿ ಇಂಜೆಕ್ಷನ್ ಕೊಡಿಸುತ್ತೇನೆ ಎಂದು ಸಮಾಧಾನ ಪಡಿಸಿದರು. ಎಲ್ಲರೂ ಕೂಡ ಹೀಗೆ ಹೇಳುತ್ತಿದ್ದಾರೆ. ನೀವಾದರೂ ಸಮಸ್ಯೆ ಬಗೆಹರಿಸಿ ಎಂದು ಸಚಿವರೊಂದಿಗೆ ರೋಗಿಯ ಸಂಬಂಧಿ ಮನವಿ ಮಾಡಿಕೊಂಡಿದ್ದಾರೆ.

    ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರತೀಶ್ ಕುಮಾರ್, ಇದನ್ನೆಲ್ಲಾ ಗಮನಿಸುತ್ತಿದ್ದಂತೆ ಗಡಿ ಜಿಲ್ಲೆ ಬೀದರ್ ನಲ್ಲಿ ರೆಮಿಡಿಸಿವರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆಯಾ? ಎಂಬ ಅನುಮಾನ ಕೂಡ ಕಾಡತೊಡಗುತ್ತಿದೆ. 25 ರಿಂದ 30 ಸಾವಿರಕ್ಕೆ ರೆಮಿಡಿಸಿವರ್ ಇಂಜೆಕ್ಷನ್ ಮಾರಾಟವಾಗುತ್ತಿದ್ದು, ಇದೊಂದು ದೊಡ್ಡ ಮೆಡಿಕಲ್ ಮಾಫಿಯಾ ಆಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಪ್ರತಿಯೊಂದು ರೋಗಿಗಳು ಹಣ ಹಿಡಿದು ಕೊಂಡು ಇಂಜೆಕ್ಷನ್ ಗಾಗಿ ಓಡಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.