ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶ್ವದ 13 ದೇಶಗಳ ನಾಯಕರ ಪೈಕಿ ಶೇ.66 ಅಂಕಗಳೊಂದಿಗೆ ನಂ 1 ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್ ನಂತಹ ಹಲವು ದೇಶಗಳ ನಾಯಕರನ್ನು ಹಿಂದಿಕ್ಕಿದ್ದಾರೆ.
ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್ ಎಂಬ ಡೇಟಾ ಇಂಟೆಲಿಜೆನ್ಸ್ ಸಂಸ್ಥೆ ಈ ರೇಟಿಂಗ್ನ್ನು ಮೋದಿಗೆ ನೀಡಿದೆ. ಈ ಸಂಸ್ಥೆ ಪ್ರತಿ ವರ್ಷ ವಿಶ್ವದ ಅಗ್ರಗಣ್ಯ ನಾಯಕರ ಬಗ್ಗೆ ರೇಟಿಂಗ್ ಕಲೆಹಾಕುತ್ತದೆ. ಈ ಪೈಕಿ ಮೋದಿ ಅವರಿಗೆ ಶೇ.66 ರೇಟಿಂಗ್ ಪಡೆದುಕೊಂಡು ಮೊದಲ ಸ್ಥಾನ ಪಡೆದಿದ್ದಾರೆ. ಮೋದಿ ಅವರು ಭಾರತದಲ್ಲಿ ಕೊರೊನಾ ಎರಡನೇ ಅಲೆಯನ್ನು ದಿಟ್ಟವಾಗಿ ಎದುರಿಸಲು ತೆಗೆದುಕೊಂಡ ನಿರ್ಧಾರ ಮತ್ತು ದೇಶವನ್ನು ಮುನ್ನಡೆಸುತ್ತಿರುವ ರೀತಿಗೆ ಈ ರೇಟಿಂಗ್ ಬಂದಿದೆ ಎಂದು ವರದಿಯಾಗಿದೆ. ಈ ನಡುವೆ ಶೇ.28 ರೇಟಿಂಗ್ ಮೋದಿಯವರ ವಿರುದ್ಧ ಬಂದಿದೆ. ಇದನ್ನೂ ಓದಿ: ಕೃಷಿ ಕಾನೂನು ವಾಪಸ್ ಪಡೆಯಲ್ಲ: ಕೇಂದ್ರ ಕೃಷಿ ಸಚಿವ ತೋಮರ್
ಮೋದಿ ಬಳಿಕ ಅಧಿಕ ರೇಟಿಂಗ್ ಪಡೆದವರ ಪೈಕಿ ಶೇ. 65 ರೇಟಿಂಗ್ ನೊಂದಿಗೆ ಇಟಲಿಯ ಪ್ರಧಾನಿ ಮಾರಿಯೋ ದಾರ್ಗಿ ಎರಡನೇ ಸ್ಥಾನದಲ್ಲಿದ್ದಾರೆ. ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಶೇ 63 ರೇಟಿಂಗ್ ಪಡೆದರೆ, ಶೇ 54 ರೇಟಿಂಗ್ ಪಡೆದ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ 4ನೇ ಸ್ಥಾನದಲ್ಲಿದ್ದಾರೆ. ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಶೇ.53 ರೇಟಿಂಗ್ ಪಡೆದು ಐದನೇ ಸ್ಥಾನದಲ್ಲಿದ್ದಾರೆ. ಯುಎಸ್ ನ ಅಧ್ಯಕ್ಷ ಜೋ ಬಿಡೆನ್ ಶೇ. 53 ರೇಟಿಂಗ್ ಪಡೆದು ಆರನೇ ಸ್ಥಾನ ಪಡೆದುಕೊಂಡಿದ್ದಾರೆ.
ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಾರುಕಟ್ಟೆ ವಲಯದಲ್ಲಿ ಸಾರ್ವಜನಿಕರಿಗೆ ಸುವರ್ಣಾವಕಾಶವೆಂಬ ಸ್ಲೋಗನ್ನು ಚಿರಪರಿಚಿತ. ಹೀಗೆ ಸಾರ್ವಜನಿಕರಿಗೆ ಸುವರ್ಣಾವಕಾಶದ ಆಮಿಷವೊಡ್ಡುತ್ತಲೇ ಆಸೆಯ ಬಲೂನಿನ ಮೈಗೆ ಬ್ಲೇಡು ಗೀರುವಂಥಾ ಘಟನಾವಳಿಗಳೂ ಯಥೇಚ್ಛವಾಗಿಯೇ ನಡೆಯುತ್ತಿರುತ್ತವೆ. ಹಾಗಾದರೆ ಸಾರ್ವಜನಿಕರಿಗೆ ಸುವರ್ಣಾವಕಾಶ ಎಂದೇ ಶೀರ್ಷಿಕೆ ಇಟ್ಟುಕೊಂಡಿರುವ ಈ ಚಿತ್ರದಲ್ಲಿ ಯಾವ ಥರದ ಕಥೆಯಿದೆ ಎಂಬಂಥ ಕುತೂಹಲ ಹುಟ್ಟಲು ಕಾರಣವಾಗಿದ್ದದ್ದು ಸಹ ಅಂಥಾ ವಾತಾವರಣವೇ. ಇದೀಗ ಈ ಸಿನಿಮಾ ತೆರೆ ಕಂಡಿದೆ. ಬದುಕಿಗೆ ಹತ್ತಿರಾದ ಕಥೆಯನ್ನು ನಗೆಬುಗ್ಗೆಗಳೊಂದಿಗೆ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಪ್ರೇಕ್ಷಕರಿಗೆಲ್ಲ ಲಭಿಸಿದೆ.
ಒಂದು ಸಾದಾ ಸೀದಾ ಕಥಾ ಎಳೆಯನ್ನು ಸಾಧ್ಯಂತವಾಗಿ ಪ್ರೇಕ್ಷಕರನ್ನು ಖುಷಿಗೊಳಿಸುವಂತೆ ರೂಪಿಸಿರುವುದೇ ಈ ಚಿತ್ರದ ಪ್ಲಸ್ ಪಾಯಿಂಟ್. ಪ್ರೇಕ್ಷಕರು ಎಂತೆಂಥಾ ನಿರೀಕ್ಷೆಗಳನ್ನಿಟ್ಟುಕೊಂಡು ಸಿನಿಮಾ ನೋಡಲು ಹೋಗುತ್ತಾರೆಣಂಬ ಸೂಕ್ಷ್ಮವನ್ನು ಅರಿತುಕೊಂಡೇ ನಿರ್ದೇಶಕ ಅನೂಪ್ ರಾಮಸ್ವಾಮಿ ದೃಷ್ಯ ಕಟ್ಟಿದ್ದಾರೆ. ಇಡೀ ಸಿನಿಮಾ ಪ್ರೇಕ್ಷಕರನ್ನು ತೃಪ್ತಗೊಳಿಸುವಂಥಾ ಅಂಶಗಳೊಂದಿಗೆ ನಳನಲೀಸುವಂತೆ ಮೂಡಿ ಬಂದಿರೋದೇ ಆ ಕಾರಣಗಳಿಂದ. ನಾಯಕನಾಗಿ ನಟಿಸಿರುವ ರಿಷಿ ತಾನೊಬ್ಬ ಸಮರ್ಥ ನಟ ಅನ್ನೋದನ್ನು ಪ್ರತೀ ಫ್ರೇಮಿನಲ್ಲಿಯೂ ಸಾಬೀತುಗೊಳಿಸುವಂತೆ ಕಾಣಿಸಿಕೊಂಡಿದ್ದಾರೆ. ಒಂದಕ್ಕೊಂದು ಪೂರಕವಾದ ಪಾತ್ರಗಳು ಮತ್ತು ಕ್ಷಣ ಕ್ಷಣವೂ ಟ್ವಸ್ಟುಗಳೊಂದಿಗೆ ನಗುವಿನ ಜೊತೆ ಜೊತೆಗೇ ಸಾಗುವ ದೃಷ್ಯಾವಳಿಗಳಿಂದ ಈ ಸಿನಿಮಾ ಸಮೃದ್ಧವಾಗಿದೆ.
ರಿಷಿ ಎಲ್ಲರಿಂದಲೂ ವೇದ್ ಅಂತ ಕರೆಸಿಕೊಳ್ಳೋ ವೇದಾಂತ್ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಅದು ಮಧ್ಯಮ ವರ್ಗದ ಬದುಕಿನ ಖುಷಿ, ಕಸಿವಿಸಿಗಳನ್ನು ಆವಾಹಿಸಿಕೊಂಡಂತಿರುವ ಪಾತ್ರ. ವೇದ ಇಲ್ಲಿ ಯಾವುದೋ ಒಂದು ಸಮಸ್ಯೆಯ ಬೆನ್ನತ್ತಿ ಹೊರಡುತ್ತಾನೆ. ಒಂದು ಕನಸಿಟ್ಟುಕೊಂಡು ಆ ಹಾದಿಯಲ್ಲಿದುರಾಗೋ ಸವಾಲುಗಳನ್ನು ಎದುರಿಸುತ್ತಾ ಸಾಗುತ್ತಾನೆ. ಹೀಗೆ ಆತ ತನ್ನ ಕನಸನ್ನು ನನಸು ಮಾಡಿಕೊಳ್ಳೋದಕ್ಕಾಗಿ ಸಾರ್ವಜನಿಕರಿಗೊಂದು ಸುವರ್ಣಾವಕಾಶವನ್ನು ಕಲ್ಪಿಸುತ್ತಾನೆ. ಅದೇನೆಂಬುದು ಸಿನಿಮಾದ ಪ್ರಧಾನ ಅಂಶ. ಅದನ್ನು ಚಿತ್ರ ಮಂದಿರಗಳಲ್ಲಿಯೇ ಕಣ್ತುಂಬಿಕೊಳ್ಳೋದು ಉತ್ತಮ.
ಹೀಗೆ ಯಾವುದೋ ಸಮಸ್ಯೆಯ ಬೆಂಬಿದ್ದು ಮತ್ಯಾವುದೋ ಕನಸು ಕಟ್ಟಿಕೊಂಡು ಮುಂದುವರೆಯೋ ವೇದಾಂತನ ಯಾನದ ತುಂಬಾ ನಗುವಿದೆ. ಭಾವುಕಗೊಳಿಸುವಂಥಾ ಸನ್ನಿವೇಷಗಳಿವೆ. ಸಂಬಂಧಗಳ ಮಹತ್ವ ಸಾರುವಂಥಾ ಅಂಶಗಳೊಂದಿಗೆ ಮುದ್ದಾದೊಂದು ಪ್ರೇಮ ಕಥಾನಕವೂ ಇದೆ. ಇದೆಲ್ಲ ಯಾವ್ಯಾವ ತಿರುವು ಪಡೆದುಕೊಂಡರೂ ಕೂಡಾ ಇಲ್ಲಿ ನಗೆಬುಗ್ಗೆಗಳು ಸದಾ ನಳನಳಿಸುತ್ತಿರುತ್ತವೆ. ನಾಯಕನಾಗಿ ರಿಷಿ ಭರ್ಜರಿಯಾಗಿ ನಟಿಸುತ್ತಾ ಆಕ್ಷನ್ ಸನ್ನಿವೇಷಗಳಲ್ಲಿಯೂ ಮಿಂಚಿದ್ದಾರೆ. ಪ್ರೇಮಿಯಾಗಿಯೂ ಆಪ್ತಚವಾಗುತ್ತಾರೆ. ಧನ್ಯಾ ಬಾಲಕೃಷ್ಣ ಜಾನು ಎಂಬ ಮಹತ್ವಪೂಣವಾದ ಪಾತ್ರದೊಂದಿಗೆ ರಿಷಿಗೆ ಜೋಡಿಯಾಗಿದ್ದಾರೆ.
ಇಲ್ಲಿ ಪಾತ್ರ ಪೋಷಣೆಯೇ ಇಡೀ ಸಿನಿಮಾದ ಜೀವಾಳವಾಗಿ ಕಾಣಿಸುತ್ತದೆ. ರಿಷಿ ಮತ್ತು ಧನ್ಯಾ ರಾಮಕೃಷ್ಣ ಮುದ್ದಾಗಿ ನಟಿಸಿದ್ದಾರೆ. ದತ್ತಣ್ಣನ ಪಾತ್ರ ಆಹ್ಲಾದ ತುಂಬಿಸುತ್ತಲೇ ಭಾವುಕರನ್ನಾಗಿಸುತ್ತದೆ. ರಂಗಾಯಣ ರಘು, ಮಿತ್ರಾ ಪಾತ್ರಗಳೂ ಕೂಡಾ ಕಾಡುವಂತೆ ಮೂಡಿ ಬಂದಿದೆ. ದೇವರಾಜ್, ಪ್ರಶಾಂತ್ ರೆಡ್ಡಿ ಮತ್ತು ಜನಾರ್ದನ್ ಚಿಕ್ಕಣ್ಣ ಸಾರ್ವಜನಿಕರಿಗೆ ಭರ್ಜರಿ ಸುವರ್ಣಾವಕಾಶವನ್ನೇ ನಿರ್ಮಾಣ ಮಾಡಿದ್ದಾರೆ. ಅನೂಪ್ ರಾಮಸ್ವಾಮಿ ಮೊದಲ ಹೆಜ್ಜೆಯಲ್ಲಿಯೇ ನಿರ್ದೇಶಕರಾಗಿ ಭರವಸೆ ಹುಟ್ಟಿಸಿದ್ದಾರೆ.
ಅಶು ಬೆದ್ರ ನಿರ್ಮಾಣ ಮಾಡಿ ನಾಯಕನಾಗಿಯೂ ನಟಿಸಿರುವ ಅಳಿದು ಉಳಿದವರು ಚಿತ್ರ ತನ್ನ ಶೀರ್ಷಿಕೆಯ ಮೂಲಕವೇ ಹೊಸತನದ ಕಂಪು ಹೊಮ್ಮಿಸುತ್ತಾ ಪ್ರೇಕ್ಷಕರನ್ನು ಆವರಿಸಿಕೊಂಡಿತ್ತು. ಪೋಸ್ಟರ್ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆ ಪಡೆದ ಟ್ರೇಲರ್ಗಳ ಹೊರತಾಗಿ ಚಿತ್ರತಂಡ ಯಾವ ಅಬ್ಬರದ ಪ್ರಚಾರದತ್ತಲೂ ಗಮನ ಹರಿಸಿರಲಿಲ್ಲ. ಅಷ್ಟಕ್ಕೂ ಅದು ತಣ್ಣಗೆ ಹೊತ್ತಿಸಿದ್ದ ನಿರೀಕ್ಷೆಗಳ ಕಾವಿನ ಮುಂದೆ ಅದೆಲ್ಲದರ ಅವಶ್ಯಕತೆಯೂ ಬಿದ್ದಿರಲಿಲ್ಲ. ಇದೆಲ್ಲದಕ್ಕೆ ತಕ್ಕುದಾದ ರೀತಿಯಲ್ಲಿಯೇ ನಿರ್ದೇಶಕ ಅರವಿಂದ್ ಶಾಸ್ತ್ರಿ ಈ ಚಿತ್ರವನ್ನು ಕಟ್ಟಿ ಕೊಡುತ್ತದೆ. ಯಾವ ಥರದಲ್ಲಿ ಈ ಸಿನಿಮಾ ಸದ್ದು ಮಾಡಿತ್ತೋ ಅದೇ ತಣ್ಣಗಿನ ಆವೇಗವನ್ನು ಆತ್ಮವಾಗಿಸಿಕೊಂಡಂತಿರುವ ಈ ಚಿತ್ರ ಎಲ್ಲರಿಗೂ ಹಿಡಿಸುವಂತೆ ಮೂಡಿ ಬಂದು ಪ್ರೇಕ್ಷಕರನ್ನು ಮುದಗೊಳಿಸಿದೆ.
ಇಲ್ಲಿ ನಂಬಿಕೆ ಮತ್ತು ಮೂಢ ನಂಬಿಕೆಗಳನ್ನು ಮುಖಾಮುಖಿಯಾಗಿ ಡಿಕ್ಕಿ ಹೊಡೆಸಿ ಅದರ ಘರ್ಷಣೆಯಿಂದ ರೂಪುಗೊಂಡಂತಿರೋ ಕುತೂಹಲಕರವಾದ ಕಥೆಯನ್ನು ಹೇಳಲಾಗಿದೆ. ಒಂದು ಸಿನಿಮಾವನ್ನು ಮಾಮೂಲಿ ಜಾಡಿಗಿಂತ ಭಿನ್ನವಾಗಿ ರೂಪಿಸಬೇಕೆಂಬ ತುಡಿತ ಇದ್ದರೆ ಅಂಥಾ ಚಿತ್ರಗಳು ಎಲ್ಲ ರೀತಿಯಿಂದಲೂ ಡಿಫರೆಂಟೆಂಬಂತೆ ಮೂಡಿ ಬರುತ್ತವೆ. ಇಲ್ಲಿ ಪ್ರೀತಿ ಸೇರಿದಂತೆ ನಾನಾ ಛಾಯೆಯ ಕಥೆಯಿದೆ. ಆದರೆ ಎಲ್ಲಿಯೂ ಕೂಡಾ ಥ್ರಿಲ್ಲರ್ ಅಂಶಗಳನ್ನು ಬಿಟ್ಟುಕೊಡದಂಥಾ ಕಲೆಗಾರಿಕೆಯನ್ನು ನಿರ್ದೇಶಕ ಅರವಿಂದ ಶಾಸ್ತ್ರಿ ಪ್ರದರ್ಶಿಸಿದ್ದಾರೆ. ಹಾಗಂತ ಇಲ್ಲಿ ಬಿಲ್ಡಪ್ಪುಗಳಿಲ್ಲ. ಅದಿಲ್ಲದೆಯೂ ಒಂದು ದೃಷ್ಯವನ್ನು ಕಳೆಗಟ್ಟಿಸೋದು, ನೋಡುಗರನ್ನು ಕುತೂಹಲದ ಶಿಖರವೇರಿಕೊಳ್ಳುವಂತೆ ಮಾಡುವುದೆಲ್ಲ ಒಂದು ಕಲೆ. ನಿರ್ದೇಶಕರಿಲ್ಲಿ ಅದನ್ನು ಧಾರಾಳವಾಗಿಯೇ ಪ್ರದರ್ಶಿಸಿದ್ದಾರೆ. ಅಳಿದು ಉಳಿದವರ ಅಸಲಿ ಹೆಚ್ಚುಗಾರಿಕೆಯೇ ಅದು!
ಈ ಚಿತ್ರದ ನಾಯಕನಾಗಿ ಅಶು ಬೆದ್ರ ಶೀಲಂ ಎಂಬ ನಿರೂಪಕನ ಪಾತ್ರದಲ್ಲಿ ನಟಿಸಿದ್ದಾರೆ. ಈತ ಎಲ್ಲರಿಗಿಂತಲೂ ತುಸು ಭಿನ್ನವಾದ ನಿರೂಪಕ. ಶೀಲಂ ನಂಬಿಕೆ ಮತ್ತು ಮೂಢನಂಬಿಕೆಗಳನ್ನೇ ಬೇಸ್ ಆಗಿಸಿಕೊಂಡಿರೋ ಕಾರಣ..? ಎಂಬೊಂದು ಕಾರ್ಯಕ್ರಮವನ್ನು ನಡೆಸುತ್ತಿರುತ್ತಾನೆ. ಪ್ರತೀ ಎಪಿಸೋಡಿನಲ್ಲಿಯೂ ವಿಷಯವೊಂದರ ಪಾತಾಳಗರಡಿಯಂಥಾ ವಿವರಗಳನ್ನು ಕಲೆ ಹಾಕುತ್ತಾ ಪ್ರತೀ ಎಪಿಸೋಡುಗಳಲ್ಲಿಯೂ ಆತ ದೆವ್ವ ಎಂಬುದಿಲ್ಲ ಎಂಬುದನ್ನೇ ಸಾಬೀತುಪಡಿಸುತ್ತಾ ಸಾಗುತ್ತಾನೆ. ಇದೇ ಥರದಲ್ಲಿ ತೊಬತ್ತೊಂಬತ್ತು ಎಪಿಸೋಡುಗಳನ್ನು ಪೈರೈಸಿಕೊಳ್ಳುವ ಆತನ ಮುಂದೆ ನೂರನೇ ಎಪಿಸೋಡನ್ನು ಎಲ್ಲಕ್ಕಿಂತ ವಿಶೇಷವಾಗಿ ರೂಪಿಸಬೇಕೆಂಬ ಸವಾಲು ಮೂಡಿಕೊಳ್ಳುತ್ತದೆ.
ಹಾಗೆ ಹುಡುಕಿ ಹೊರಡೋ ಶೀಲಂಗೆ ಪವನ್ ಕುಮಾರ್ ನಿರ್ವಹಿಸಿರುವ ಪಾತ್ರ ಎದುರಾಗುತ್ತೆ. ಆ ಪಾತ್ರ ತನ್ನ ಸೇಲಾಗದೇ ಉಳಿದ ಮನೆಯಲ್ಲಿ ದೆವ್ವವಿಲ್ಲ ಅಂತ ನಿರೂಪಿಸುವಂತೆ ಶೀಲಂಗೆ ಸವಾಲೊಡ್ಡುತ್ತೆ. ಅದನ್ನು ಸ್ವೀಕರಿಸಿ ಆ ಮನೆಗೆ ಶೀಲಂ ಕಾಲಿಡುತ್ತಲೇ ಕಥೆ ಮತ್ತಷ್ಟು ರೋಚಕ ಆಯಾಮ ಪಡೆದುಕೊಳ್ಳುತ್ತದೆ. ಅಲ್ಲಿ ಶೀಲಂಗೆ ನಿಜವಾಗಿಯೂ ದೆವ್ವದ ದರ್ಶನವಾಗುತ್ತದಾ ಎಂಬುದರಿಂದ ಹಿಡಿದು ಎಲ್ಲರನ್ನು ಕಾಡ ಬಹುದಾದ ಪ್ರತೀ ಪ್ರಶ್ನೆಇಗಳಿಗೂ ಇಲ್ಲಿ ರೋಚಕ ಉತ್ತರವಿದೆ. ವಿಶೇಷವೆಂದರೆ ಇಲ್ಲಿ ಮೂಢ ನಂಬಿಕೆಯ ವಿರುದ್ಧದ ಅಂಶಗಳನ್ನೇ ನಿರ್ದೇಶಕರು ಪ್ರಧಾನವಾಗಿಸಿಕೊಂಡಿದ್ದಾರೆ. ಇದರೊಂದಿಗೆ ನಾನಾ ಛಾಯೆಗಳಿರೋ ಗಟ್ಟಿ ಕಥೆಯನ್ನೇ ಕಟ್ಟಿ ಕೊಟ್ಟಿದ್ದಾರೆ.
ಸಾಮಾನ್ಯವಾಗಿ ಮನುಷ್ಯನಿಗೆ ಕಾಣಿಸೋದರ ಮೇಲಿರೋ ಕುತೂಹಲಕ್ಕಿಂತ ಕಾಣಿಸದಿರುವುದರ ಬಗ್ಗೆಯೇ ಆಸಕ್ತಿ ಹೆಚ್ಚು. ಅದುವೇ ಭ್ರಮೆಯ ರೂಪ ಧರಿಸಿ ಅದರ ಚಿಪ್ಪೊಳಗೆ ದೆವ್ವ ಭೂತಗಳಂಥವುಗಳು ನರ್ತನ ಶುರುವಿಟ್ಟುಕೊಳ್ಳುತ್ತವೆ. ಈ ಭೂಮಿಕೆಯಲ್ಲಿ ಸಿದ್ಧಗೊಂಡಿರೋ ಅಳಿದು ಉಳಿದವರು ಭರ್ಜರಿ ಎಂಟರ್ಟೈನ್ಮೆಂಟ್ ಪ್ಯಾಕೇಜಿನಂತೆ ಮೂಡಿ ಬಂದಿದೆ. ಇಲ್ಲಿ ಹಾಡುಗಳ ಆಡಂಬರವಿಲ್ಲ, ಸಂತದ ಅಬ್ಬರವೂ ಇಲ್ಲ. ಆದರೆ ಕಥೆಯೇ ಅದೆಲ್ಲದರ ಸ್ಥಾನವನ್ನು ಆಕ್ರಮಿಸಿಕೊಂಡು ತಣ್ಣಗೆ ವಿಜೃಂಭಿಸುತ್ತದೆ. ಅಶು ಬೆದ್ರ ನಾಯಕನಾಗಿ ಮೊದಲ ಪ್ರಯತ್ನದಲ್ಲಿಯೇ ಮೆಚ್ಚಿಕೊಳ್ಳುವಂತೆ ನಟಿಸಿದ್ದಾರೆ. ಸಂಗೀತಾ ಭಟ್ ಕೂಡಾ ಅದಕ್ಕೆ ಸರಿಯಾಗಿಯೇ ಸಾಥ್ ನೀಡಿದ್ದಾರೆ. ಅತುಲ್ ಕುಲಕರ್ಣಿ, ಪವನ್ ಕುಮಾರ್, ಬಿ ಸುರೇಶ್ ಅವರ ಪಾತ್ರಗಳೂ ಕಾಡುವಂತಿವೆ. ಅಂತೂ ಅತ್ಯಂತ ವಿಶಿಷ್ಟವಾದ ಚಿತ್ರವಾಗಿ ದಾಖಲಾಗುವಂತೆ ಅಳಿದು ಉಳಿದವರು ಚಿತ್ರ ಮೂಡಿ ಬಂದಿದೆ.