Tag: ರೇವತಿ

  • ನಿನ್ನ ಪ್ರೀತಿ, ತ್ಯಾಗ ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ: ಪತ್ನಿಗೆ ನಿಖಿಲ್ ಲವ್ಲಿ ವಿಶ್

    ನಿನ್ನ ಪ್ರೀತಿ, ತ್ಯಾಗ ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ: ಪತ್ನಿಗೆ ನಿಖಿಲ್ ಲವ್ಲಿ ವಿಶ್

    ‘ಸೀತಾರಾಮ ಕಲ್ಯಾಣ’, ‘ಜಾಗ್ವಾರ್’ ಸಿನಿಮಾಗಳು ಹಾಗೂ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ನಿಖಿಲ್ ಕುಮಾರಸ್ವಾಮಿ (Nikhil Kumarswamy) ಮದುವೆಯಾಗಿ ಇಂದಿಗೆ 5 ವರ್ಷಗಳು ಕಳೆದಿವೆ. ಹಾಗಾಗಿ ಸೋಷಿಯಲ್‌ ಮೀಡಿಯಾದಲ್ಲಿ ನನ್ನ ಜೀವನದಲ್ಲಿ ಸಿಕ್ಕಿರುವ ಅತ್ಯಮೂಲ್ಯ ಉಡುಗೊರೆ ಎಂದು ಪತ್ನಿಗೆ ಪ್ರೀತಿಯಿಂದ ನಿಖಿಲ್ ವಿಶ್ ಮಾಡಿದ್ದಾರೆ. ಇದನ್ನೂ ಓದಿ:ರೀಲ್ಸ್ ಕೇಸ್: ನಿನ್ನೆ ಜೈಲು ಪಾಲು – ಇಂದು ರಜತ್‌ಗೆ ಜಾಮೀನು

    ನೀನು ನನ್ನ ಜೀವನದಲ್ಲಿ ಸಿಕ್ಕಿರುವ ಅತ್ಯಮೂಲ್ಯ ಉಡುಗೊರೆ, ನಿನ್ನ ಪ್ರೀತಿ, ಶಕ್ತಿ, ತ್ಯಾಗ ಮತ್ತು ಕೃಪೆ ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಾಗದಷ್ಟು ನೀನು ನನಗೆ ಸ್ಫೂರ್ತಿಯಾಗಿರುವೆ. ನೀನು ನನ್ನ ಜೀವನಕ್ಕೆ ಬೆಳಕು ತಂದಿರುವುದಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ನಿಮ್ಮೊಂದಿಗೆ ಜೀವನದ ಈ ಪ್ರಯಾಣದಲ್ಲಿ ಜೊತೆಯಾಗಿ ನಡೆಯಲು ನಾನು ತುಂಬಾ ಧನ್ಯನಾಗಿದ್ದೇನೆ. ಪ್ರತಿದಿನವೂ ನಾನು ನಿನ್ನನ್ನು ಹೆಚ್ಚು ಹೆಚ್ಚು ಪ್ರೀತಿಸುತ್ತೇನೆ, ನಮಗೆ ವಾರ್ಷಿಕೋತ್ಸವದ (Wedding Anniversary) ಶುಭಾಶಯಗಳು ಎಂದು ನಿಖಿಲ್ ಶುಭಕೋರಿದ್ದಾರೆ.

    2020ರಂದು ರೇವತಿ (Revathi) ಜೊತೆ ನಿಖಿಲ್ ಅದ್ಧೂರಿಯಾಗಿ ಮದುವೆಯಾದರು. ಗುರುಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದೆ. ಇವರ ದಾಂಪತ್ಯಕ್ಕೆ ಮುದ್ದಾದ ಗಂಡು ಮಗು ಸಾಕ್ಷಿಯಾಗಿದ್ದಾನೆ. ಇದನ್ನೂ ಓದಿ:ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಮಾಡಿ: ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹ

    ನಿನ್ನೆಯಷ್ಟೇ (ಏ.16) ಬನಶಂಕರಿ ದೇವಸ್ಥಾನಕ್ಕೆ ತೆರಳಿ ನಿಖಿಲ್ ದಂಪತಿ ವಿಶೇಷ ಪೂಜೆ ಸಲ್ಲಿಸಿದ್ದರು.

  • ಪತ್ನಿಯ ಕೈ ಹಿಡಿದು ಜಾಲಿ ಮೂಡ್‌ಗೆ ಜಾರಿದ ‘ಜಾಗ್ವರ್’ ಹೀರೋ

    ಪತ್ನಿಯ ಕೈ ಹಿಡಿದು ಜಾಲಿ ಮೂಡ್‌ಗೆ ಜಾರಿದ ‘ಜಾಗ್ವರ್’ ಹೀರೋ

    ಸ್ಯಾಂಡಲ್‌ವುಡ್ (Sandalwood) ನಟ ನಿಖಿಲ್ ಕುಮಾರಸ್ವಾಮಿ (Nikhil Kumarswamy)  ಅವರು ಸದ್ಯ ಜಾಲಿ ಮೂಡ್‌ಗೆ ಜಾರಿದ್ದಾರೆ. ಕೆಲದಿನಗಳಿಂದ ಫಾರಿನ್‌ನಲ್ಲಿ ನಿಖಿಲ್ ಫ್ಯಾಮಿಲಿ ಬೀಡು ಬಿಟ್ಟಿದ್ದಾರೆ. ಸದ್ಯ ಪತ್ನಿ ರೇವತಿ (Revathi)  ಕೈ ಹಿಡಿದು ನಿಖಿಲ್ ಕುಮಾರಸ್ವಾಮಿ ಹೆಜ್ಜೆ ಹಾಕ್ತಿರೋದು ವೀಡಿಯೋವೊಂದನ್ನ ಜಾಗ್ವರ್ ಹೀರೋ ನಿಖಿಲ್ ಶೇರ್ ಮಾಡಿದ್ದಾರೆ.

    ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬದ ಫ್ಯೂಚರ್ ನಿಖಿಲ್ ಕುಮಾರಸ್ವಾಮಿ ಅವರು ಸಿನಿಮಾ- ರಾಜಕೀಯ ಎರಡು ಕ್ಷೇತ್ರದಲ್ಲೂ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಯುರೋಪ್‌ನಲ್ಲಿ ಹೊಸ ಹೊಸ ಜಾಗಗಳಿಗೆ ಭೇಟಿ ನೀಡುತ್ತಾ, ಚೆಂದದ ಫೋಟೋಗಳನ್ನ ಶೇರ್ ಮಾಡುತ್ತಾ ತಮ್ಮ ಬೆಂಬಲಿಗರಿಗೆ ಅಪ್‌ಡೇಟ್ ಕೊಡ್ತಿದ್ದಾರೆ. ಇದೀಗ ಹೊಸ ವೀಡಿಯೋ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

    ವಿದೇಶದ ರಸ್ತೆ ಮೇಲೆ ಹೆಂಡತಿ ಕೈ ಹಿಡಿದು ನಿಖಿಲ್ (Nikhil) ವಾಕಿಂಗ್ ಮಾಡ್ತಿರೋ ವಿಡಿಯೋವನ್ನ ನಿಖಿಲ್ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಓ ಮೈ ಗಾಡ್: ಅಕ್ಷಯ್ ಕುಮಾರ್ ಶಿವನಾಗೋದು ಬೇಡ ಅಂದಿತಾ ಸೆನ್ಸಾರ್ ಮಂಡಳಿ?

    ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಅವರ ಇಡೀ ಫ್ಯಾಮಿಲಿ ವಿದೇಶಿ ಪ್ರವಾಸ ಕೈಗೊಂಡಿದೆ. ಕುಮಾರಸ್ವಾಮಿ ವಿದೇಶಿ ಪ್ರವಾಸ ಬೆನ್ನಲ್ಲೇ ರಾಜಕಾರಣದಲ್ಲಿ ಭಾರೀ ಸುದ್ದಿಯಾಗಿತ್ತು. ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಿಂಗಾಪುರದಿಂದ ಕೆಲವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದರು. ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾದ ಬೆನ್ನಲ್ಲೇ, ಕುಮಾರಸ್ವಾಮಿ ಕುಟುಂಬದ ವಿದೇಶಿ ಪ್ರವಾಸದ ಫೋಟೋಗಳು ಗಮನ ಸೆಳೆಯುತ್ತಿದೆ.

    ವಿದೇಶದಿಂದ ಬಂದ ಮೇಲೆ ಮತ್ತೆ ನಿಖಿಲ್ ಮತ್ತೆ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗುತ್ತಾರೆ. ‘ಯುದುವೀರ್’ (Yaduveer) ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳು ಅವರ ಕೈಯಲ್ಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುರುಗದಾಸ್ ನಿರ್ದೇಶನದ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ

    ಮುರುಗದಾಸ್ ನಿರ್ದೇಶನದ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ

    ‘ಘಜನಿ’, ‘7 ಆಮ್ ಅರಿವು’, ‘ತುಪಾಕಿ’, ‘ಕತ್ತಿ’, ‘ದರ್ಬಾರ್’ ಮುಂತಾದ ಸೂಪರ್ ಹಿಟ್ ತಮಿಳು ಚಿತ್ರಗಳ ನಿರ್ದೇಶಕರಾದ ಎ.ಆರ್. ಮುರುಗದಾಸ್ (Murugadoss), ಈಗ ಸದ್ದಿಲ್ಲದೆ ಒಂದು ಚಿತ್ರವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಆ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಘೋಷಿಸಿದ್ದಾರೆ.

    ಮುರುಗದಾಸ್ ನಿರ್ಮಾಣದ ಚಿತ್ರದ ಹೆಸರು ‘ಆಗಸ್ಟ್ 16, 1947’. ಹೆಸರು ಕೇಳಿದರೆ, ಇದು ಸ್ವಾತಂತ್ರ್ಯ ಸಂಗ್ರಾಮ ಕಥೆ ಇದ್ದಿರಬಹುದು ಎಂದನಿಸಬಹುದು. ಹೌದು, ಇದು ಸ್ವಾತಂತ್ರ್ಯ ಸಂಗ್ರಾಮದ ಕಥೆಯೇ. ಆದರೆ, ಇದುವರೆಗೂ ಯಾರೂ ಹೇಳದ ಮತ್ತು ತೋರಿಸದ ಒಂದು ವಿಭಿನ್ನ ಮತ್ತು ವಿಶೇಷ ಕಥೆಯನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತಿದೆ.. ಬ್ರಿಟಿಷ್ ಸಾಮ್ರಾಜ್ಯದ ಎದುರು ಒಂದು ಸಣ್ಣ ಹಳ್ಳಿಯ ಜನ ತೊಡೆ ತಟ್ಟಿ ನಿಲ್ಲುವುದರ ಜೊತೆಗೆ, ಹೇಗೆ ನಿದ್ದೆ ಕೆಡಿಸಿದರು ಎಂಬುದನ್ನು ಈ ಚಿತ್ರದ ಮೂಲಕ ಹೇಳಲಾಗಿದೆ.

    ಅಂದಹಾಗೆ, ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ ನವನಿರ್ದೇಶಕ ಎನ್.ಎಸ್. ಪೊನ್ ಕುಮಾರನ್. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ತಮಿಳು, ತೆಲುಗು, ಕನ್ನಡ, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ: ವರುಣ್ ತೇಜ್ ಜೊತೆ ಲಾವಣ್ಯ ಮದುವೆ? ಸ್ಪಷ್ಟನೆ ನೀಡಿದ ನಟಿ

    ಪರ್ಪಲ್ ಬುಲ್ ಎಂಟರ್ಟೈನ್ಮೆಂಟ್ ಅರ್ಪಿಸಿ, ಎ.ಆರ್. ಮುರುಗದಾಸ್, ಓಂಪ್ರಕಾಶ್ ಭಟ್ ಮತ್ತು ನರಸೀರಾಮ್ ಚೌಧರಿ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಗೌತಮ್ ಕಾರ್ತಿಕ್ (Gautham Karthik), ನವನಟಿ ರೇವತಿ (Revathi), ಪುಗಳ್ ಸೇರಿದಂತೆ ಹಲವು ಪ್ರತಿಭಾವಂತ ನಟ-ನಟಿಯರು ಅಭಿನಯಿಸಿದ್ದಾರೆ.  ಅಂದಹಾಗೆ, ‘ಆಗಸ್ಟ್ 16, 1947’ ಚಿತ್ರವು ಏಪ್ರಿಲ್ 07ರಂದು ಚಿತ್ರ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

  • ಮಗನ ಮುದ್ದಾದ ಫೋಟೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

    ಮಗನ ಮುದ್ದಾದ ಫೋಟೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

    ಸ್ಯಾಂಡಲ್‌ವುಡ್‌ನ (Sandalwood) `ಜಾಗ್ವಾರ್’ ಹೀರೋ ನಿಖಿಲ್ ಕುಮಾರಸ್ವಾಮಿ, ಮಕ್ಕಳ ದಿನಾಚರಣೆಯಂದು ಮಗನ ಮುದ್ದಾದ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಗನ ಜೊತೆ ನಿಖಿಲ್(Nikhil Kumarswamy) ದಂಪತಿ ಕೂಡ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟಿರುವುದು ನೆಟ್ಟಿಗರ ಗಮನ ಸೆಳೆಯುತ್ತಿದೆ.

    ಜಾಗ್ವಾರ್, ಸೀತಾರಾಮ ಕಲ್ಯಾಣ, ರೈಡರ್, ಚಿತ್ರಗಳ ಮೂಲಕ ಗಮನ ಸೆಳೆದಿರುವ ನಿಖಿಲ್ ಕುಮಾರಸ್ವಾಮಿ ರಾಜಕೀಯ(Politics) ರಂಗದಲ್ಲೂ ಸಕ್ರಿಯರಾಗಿದ್ದಾರೆ. ಇತ್ತೀಚೆಗಷ್ಟೇ ನಿಖಿಲ್ ಅವರ ಮುದ್ದು ಮಗನ ನಾಮಕರಣವಾಗಿತ್ತು. ಅವ್ಯಾನ್ ದೇವ್ ಎಂದು ಹೆಸರಿಟ್ಟಿದ್ದರು. ಈಗ ಮಕ್ಕಳ ದಿನಾಚರಣೆ ಪ್ರಯುಕ್ತ ಮಗನ ಚೆಂದದ ಫೋಟೋಶೂಟ್ ಮಾಡಿಸಿದ್ದಾರೆ. ಮಗ ಅವ್ಯಾನ್ ದೇವ್ ಜೊತೆ ನಿಖಿಲ್ ದಂಪತಿ ಕೂಡ ಮಿಂಚಿದ್ದಾರೆ.

    ಬಿಳಿ ಬಣ್ಣದ ಶರ್ಟ್ ಜೊತೆ ಡೆನಿಮ್‌ನಲ್ಲಿ ನಿಖಿಲ್ ಮತ್ತು ರೇವತಿ ಪುತ್ರ ಕಂಗೊಳಿಸಿದ್ದಾರೆ. ಇದೀಗ ಈ ಫೋಟೋಶೂಟ್ ಅಭಿಮಾನಿಗಳ ಮೆಚ್ಚುಗೆ ಪಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ನಿಖಿಲ್ ಕುಮಾರಸ್ವಾಮಿ ಮಗನ ಪೂರ್ತಿ ಹೆಸರು ಅವ್ಯನ್ ದೇವ್ ಎನ್.ಕೆ : ಈ ಹೆಸರು ಸೂಚಿಸಿದ್ದು ಯಾರು?

    ನಿಖಿಲ್ ಕುಮಾರಸ್ವಾಮಿ ಮಗನ ಪೂರ್ತಿ ಹೆಸರು ಅವ್ಯನ್ ದೇವ್ ಎನ್.ಕೆ : ಈ ಹೆಸರು ಸೂಚಿಸಿದ್ದು ಯಾರು?

    ನಿನ್ನೆಯಷ್ಟೇ ನಟ, ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪುತ್ರನಿಗೆ ನಾಮಕರಣ ಶಾಸ್ತ್ರ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಇವರ ಪತ್ನಿ ಚೆನ್ನಮ್ಮ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇವರ ಪತ್ನಿ ಅನಿತಾ ಕುಮಾರಸ್ವಾಮಿ ಸೇರಿದಂತೆ ನಿಖಿಲ್ ಅವರ ಕುಟುಂಬದ ಬಹುತೇಕ ಸದಸ್ಯರು ಹಾಜರಿದ್ದರು.

    ಮಧ್ಯಾಹ್ನ ಶುಭ ಮುಹೂರ್ತದ ವೇಳೆ ನಿಖಿಲ್ ಮತ್ತು ರೇವತಿ ದಂಪತಿಯ ಪುತ್ರನಿಗೆ ಅವ್ಯನ್ ದೇವ್ ಎಂದು ಹೆಸರಿಟ್ಟರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್, ತಮ್ಮ ಮಗನ ಪೂರ್ತಿ ಹೆಸರನ್ನು ಅವ್ಯನ್ ದೇವ್ ಎನ್‍.ಕೆ ಎಂದು ಹೇಳಿದರು. ಅಂದರೆ, ಅವ್ಯನ್ ದೇವ್ ನಿಖಿಲ್ ಕುಮಾರಸ್ವಾಮಿ. ಇದನ್ನೂ ಓದಿ: ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದ ಮೊದಲ ವಿಮರ್ಶೆ ಮಾಡಿದ ನಟ ರಮೇಶ್ ಅರವಿಂದ್

     

    ಅವ್ಯನ್ ದೇವ್ ಎಂದು ಹೆಸರು ಕೇಳುತ್ತಿದ್ದಂತೆಯೇ ಇದರ ಅರ್ಥವೇನು ಅನ್ನುವುದರ ಹುಡುಕಾಟ ಕೂಡ ನಡೆಯಿತು. ಇಂತಹ ಹೆಸರನ್ನು ಆಯ್ಕೆ ಮಾಡಿದ್ದು ಯಾರು? ಎನ್ನುವ ಕುತೂಹಲ ಕೂಡ ಮೂಡಿತ್ತು. ಅದಕ್ಕೂ ನಿಖಿಲ್ ತೆರೆ ಎಳೆದಿದ್ದಾರೆ. ಅವ್ಯನ್ ಅಂದರೆ ಗಣೇಶ ಮತ್ತು ವಿಷ್ಣುದೇವನಿಗೆ ಕರೆಯುವ ಮತ್ತೊಂದು ಹೆಸರಂತೆ. ಈ ಹೆಸರನ್ನು ಆಯ್ಕೆ ಮಾಡಿದ್ದು ತಮ್ಮ ಪತ್ನಿ ರೇವತಿ ಎಂದು ಹೇಳಿದ್ದಾರೆ ನಿಖಿಲ್. 

  • ನಿಖಿಲ್ ಕುಮಾರ್ ಸ್ವಾಮಿ ಪುತ್ರನಿಗೆ ಇಟ್ಟ ಹೆಸರೇನು? ಆ ಹೆಸರಿನ ಅರ್ಥ ಏನು?

    ನಿಖಿಲ್ ಕುಮಾರ್ ಸ್ವಾಮಿ ಪುತ್ರನಿಗೆ ಇಟ್ಟ ಹೆಸರೇನು? ಆ ಹೆಸರಿನ ಅರ್ಥ ಏನು?

    ಇಂದು ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಪುತ್ರನಿಗೆ ಶಾಸ್ತ್ರೋಕ್ತವಾಗಿ ನಾಮಕರಣ ಶಾಸ್ತ್ರ ನಡೆಯುತ್ತಿದೆ. ಬೆಳಗ್ಗೆ 10.30 ರಿಂದ 12.20ರವರೆಗೂ ನಡೆಯುವ ಶುಭ ಲಗ್ನದಲ್ಲಿ ಮಗುವಿಗೆ ನಾಮಕರಣ ಮಾಡುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಹೇಗಿದ್ದೀರಾ, ಚೆನ್ನಾಗಿದ್ದೀರಾ? ಎಂದು ಕೇಳುವುದನ್ನೇ ನಿಲ್ಲಿಸಿ ಬಿಟ್ಟಿದ್ದೆ : ಧ್ರುವ ಸರ್ಜಾ

    ಪ್ರಪೌತ್ರ ಜನನ ಶಾಂತಿ, ನಾಮಕರಣ ಹಾಗೂ ಕನಕಾಭಿಷೇಕ ಕಾರ್ಯಕ್ರಮವನ್ನು ಇದೇ ಸಂದರ್ಭದಲ್ಲಿ ನಡೆಯುತ್ತಿದ್ದು, ದೊಡ್ಡ ಗೌಡರ ಕುಟುಂಬವು ಮೊಮ್ಮಗನಿಗೆ ಆವ್ಯನ್ ದೇವ್ ಎಂದು ಹೆಸರಿಡಲು ನಿರ್ಧರಿಸಿದ್ದಾರಂತೆ.  ನಿಖಿಲ್ ಮತ್ತು ರೇವತಿ ದಂಪತಿಯ ಈ ಮಗುವಿಗೆ ಈಗ ಒಂಬತ್ತು ತಿಂಗಳು. ಇದನ್ನೂ ಓದಿ: ಚಿರು ಮಗನನ್ನು ನಾನೇ ಲಾಂಚ್ ಮಾಡುತ್ತೇನೆ : ಅರ್ಜುನ್ ಸರ್ಜಾ

    ಈ ಕಾರ್ಯಕ್ರಮಕ್ಕೆ ಕೇವಲ ಕುಟುಂಬಸ್ಥರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ದೇವೇಗೌಡರ ಕುಟುಂಬ ಮತ್ತು ಅವರ ಆಪ್ತರು ಮಾತ್ರ ಭಾಗಿಯಾಗಿದ್ದಾರೆ.  ಮಗು ನಾಮಕರಣಕ್ಕೆ ವಿವಿಧ ಹೂಗಳಿಂದ ಸಿಂಗಾರ ಗೊಂಡಿದ್ದು, ಬೆಳ್ಳಿ ತೊಟ್ಟಿಲಲ್ಲಿ ಮಗುವಿನ ನಾಮಕರಣ ಶಾಸ್ತ್ರ ನಡೆಯಲಿದೆ.

  • ಪತ್ನಿ ಜೊತೆಗೆ ರೋಮ್ಯಾಂಟಿಕ್ ಆಗಿ ಸ್ಟೆಪ್ಸ್ ಹಾಕಿದ ನಿಖಿಲ್

    ಪತ್ನಿ ಜೊತೆಗೆ ರೋಮ್ಯಾಂಟಿಕ್ ಆಗಿ ಸ್ಟೆಪ್ಸ್ ಹಾಕಿದ ನಿಖಿಲ್

    ಬೆಂಗಳೂರು: ಸ್ಯಾಂಡಲ್‍ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ತಮ್ಮ ಪ್ರೀತಿಯ ಪತ್ನಿ ರೇವತಿ ಜೊತೆಗೆ ರೋಮ್ಯಾಂಟಿಕ್ ಆಗಿ ನೃತ್ಯ ಮಾಡಿರುವ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

    ಜಾಗ್ವಾರ್ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟ ನಿಖಿಲ್ ಸದ್ಯ ಕನ್ನಡದಲ್ಲಿ ಬಹುಬೇಡಿಕೆಯ ನಟರಾಗಿದ್ದಾರೆ. ತಮ್ಮ ಅಭಿನಯ, ಡ್ಯಾನ್ಸ್, ಸ್ಟೈಲ್ ಮೂಲಕ ಮೊದಲ ಸಿನಿಮಾದಲ್ಲಿಯೇ ಅಭಿಮಾನಿಗಳ ಮನ ಕದ್ದಿದ್ದ ನಿಖಿಲ್ ರಾಜಕೀಯದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಮೊದಲ ಪದಗಳನ್ನು ಕಲಿಯುತ್ತಿರುವ ರಾಯನ್ – ಫುಲ್ ಖುಷ್ ಆದ ಮೇಘನಾ

    ಸಿನಿಮಾ ಹಾಗೂ ರಾಜಕೀಯ ಎರಡು ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದರೂ ನಿಖಿಲ್ ಈ ಮಧ್ಯೆ ಪತ್ನಿಗೂ ಸಹ ಅಷ್ಟೇ ಟೈಮ್ ನೀಡುತ್ತಾರೆ. ಆಗಾಗ ಪತ್ನಿ ಜೊತೆಗೆ ಕಾಲ ಕಳೆಯುತ್ತಿರುವ ಫೋಟೋ ಹಾಗೂ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ನಿಖಿಲ್ ಇದೀಗ ಪತ್ನಿ ಜೊತೆಗೆ ತಾವು ಅಭಿನಯಿಸಿರುವ ಬಹುನಿರೀಕ್ಷಿತ ರೈಡರ್ ಸಿನಿಮಾದ ಮೆಲೊಂಡಿ ಹಾಡೊಂದಕ್ಕೆ ಸೂಪರ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಇನ್ನೂ ಈ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಚಿಕೊಂಡಿದ್ದಾರೆ. ಇದನ್ನೂ ಓದಿ: ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಅಲ್ಲು ಅರ್ಜುನ್

    ವೀಡಿಯೋದಲ್ಲಿ ನಿಖಿಲ್ ಹಾಗೂ ರೇವತಿ ಬ್ಲ್ಯಾಕ್ ಆ್ಯಂಡ್ ಬ್ಲ್ಯಾಕ್ ಸ್ಟೈಲಿಶ್ ಡ್ರೆಸ್ ತೊಟ್ಟು ರೈಡರ್ ಸಿನಿಮಾದ ನಿನ್ನಲ್ಲೇ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಸದ್ಯ ಈ ವೀಡಿಯೋ ನೋಡಿ ನಿಖಿಲ್ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.

    ಕೆಲವು ತಿಂಗಳ ಹಿಂದೆಯಷ್ಟೇ ನಿಖಿಲ್ ಹಾಗೂ ರೇವತಿಗೆ ಗಂಡು ಮಗು ಜನಿಸಿದ್ದು, ಮಗನ ಫೋಟೋವನ್ನು ಅಭಿಮಾನಿಗಳೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ನಿಖಿಲ್ ಸಂತಸ ವ್ಯಕ್ತಪಡಿಸಿದ್ದರು.  ಇದನ್ನೂ ಓದಿ: ಕನ್ನಡದಲ್ಲಿ ನನಗೆ ಡಬ್ಬಿಂಗ್ ಮಾಡಲು ಆಗಲಿಲ್ಲ: ರಶ್ಮಿಕಾ ಮಂದಣ್ಣ

    ಜಾಗ್ವರ್ ಹಾಗೂ ಸೀತಾರಾಮ ಕಲ್ಯಾಣ ಸಿನಿಮಾದ ನಂತರ ನಿಖಿಲ್ ರೈಡರ್ ಸಿನಿಮಾಕ್ಕೆ ಬಣ್ಣಹಚ್ಚಿದ್ದು, ಈಗಾಗಲೇ ಈ ಸಿನಿಮಾದ ಹಾಡುಗಳು ಭಾರೀ ಸದ್ದು ಮಾಡುತ್ತಿದೆ. ಇದೇ ಡಿಸೆಂಬರ್ 24ರಂದು ರೈಡರ್ ಸಿನಿಮಾ ಬಿಡುಗಡೆಯಾಗುತ್ತಿದ್ದು, ಬಿಗ್ ಸ್ಕ್ರೀನ್ ಮೇಲೆ ನಿಖಿಲ್ ರನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

  • LOVE YOU MY SON: ನಿಖಿಲ್ ಕುಮಾರಸ್ವಾಮಿ

    LOVE YOU MY SON: ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ತಂದೆಯಾಗಿರುವ ಸಂತೋಷನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ಇಡೀ ಜಗತ್ತಿಗೆ ಹಂಚಿಕೊಳ್ಳಲು ಸಂತೋಷವಾಗಿದೆ. LOVE YOU MY SON ಎಂದು ಬರೆದುಕೊಂಡು ಮಗುವನ್ನು ಎತ್ತಿಕೊಂಡಿರುವ ಮುದ್ದಾದ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಸಂತೋಷ ವಿಚಾರವನ್ನು ಕೇಳುತ್ತಿದ್ದಂತೆ ಅಭಿಮಾನಿಗಳು ಕಾಮೆಂಟ್ ಮಾಡಿ ಶುಭ ಕೋರುತ್ತಿದ್ದಾರೆ.

    nikhil kumaraswamy

    ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಇಂದು ಗಂಡು ಮಗು ಜನಿಸಿದೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನಿಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಇದನ್ನೂ ಓದಿ: ಗೌಡ್ರ ಕುಟುಂಬದಲ್ಲಿ ಸಂಭ್ರಮ – ನಿಖಿಲ್, ರೇವತಿ ದಂಪತಿಗೆ ಗಂಡು ಮಗು

    ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿಯವರು ಟ್ವೀಟ್ ತಾವು ತಾತನಾಗಿರುವ ಸಂತೋಷವನ್ನು ವ್ಯಕ್ತ ಪಡಿಸಿದ್ದಾರೆ.

    ರೇವತಿ ಪ್ರೆಗ್ನೆಂಟ್ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್‍ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್ ಪ್ರತಿಕ್ರಿಯೆ ನೀಡಿದ್ದರು. ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ ಎಂದು ನಿಖಿಲ್ ಹೇಳಿದ್ದರು. ಕೆಲವು ದಿಬಗಳ ಹಿಂದೆ ಸೀಮಂತ ಕಾರ್ಯಕ್ರಮವನ್ನು ಮಾಡಲಾಗಿತ್ತು. ಈಗ ರೇವತಿ ಅವರಿಗೆ ಗಂಡು ಮಗು ಜನನವಾಗಿದೆ.

     

    2020ರ ಏಪ್ರಿಲ್ 17ರಂದು ಲಾಕ್‍ಡೌನ್ ಸಮಯದಲ್ಲಿ ನಿಖಿಲ್ ಹಾಗೂ ರೇವತಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿರುವ ಫಾರ್ಮ್ ಹೌಸ್‍ನಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲವು ತಿಂಗಳ ಹಿಂದಷ್ಟೇ ಮಾಜಿ ಸಿಎಂ. ಹೆಚ್.ಡಿ ಕುಮಾರಸ್ವಾಮಿಯವರು ತಾವು ತಾತಾ ಆಗುತ್ತಿರುವ ಖುಷಿ ವಿಚಾರವನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದರು. ಇದೀಗ ಮುದ್ದಿನ ಸೊಸೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗೌಡರ ಕುಟುಂಬದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಹೊಸ ಅತಿಥಿ ಆಗಮನವಾಗಿರುವ ಸಂತೋಷವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.

  • ಗೌಡ್ರ ಕುಟುಂಬದಲ್ಲಿ ಸಂಭ್ರಮ – ನಿಖಿಲ್, ರೇವತಿ ದಂಪತಿಗೆ ಗಂಡು ಮಗು

    ಗೌಡ್ರ ಕುಟುಂಬದಲ್ಲಿ ಸಂಭ್ರಮ – ನಿಖಿಲ್, ರೇವತಿ ದಂಪತಿಗೆ ಗಂಡು ಮಗು

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ದಂಪತಿಗೆ ಗಂಡು ಮಗು ಜನನವಾಗಿದೆ.

    Nikhil revathi

    ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಇಂದು ಗಂಡು ಮಗು ಜನಿಸಿದೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನಿಡಿದ್ದಾರೆ.

    ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಮಾಜಿ ಸಿಎಂ ಹೆಚ್‍ಡಿಕೆ ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯ ವಿಚಾರಿಸಲಿದ್ದಾರೆ. ಇದನ್ನೂ ಓದಿ:  ವಿಧಾನಸಭೆಯಲ್ಲಿ ನಾಗ್ಪುರ vs ಇಟಲಿ ಫೈಟ್

     

    ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಕೆಲವು ದಿನಗಳ ಹಿಂದೆ ನಗರದ ಹೆಚ್‍ಎಸ್‍ಆರ್ ಲೇಔಟ್‍ನ ಮಾನ್ವಿ ಕನ್ವೆನ್ಷನ್ ಹಾಲ್‍ನಲ್ಲಿ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೊರೊನಾ ಕಾರಣದಿಂದಾಗಿ ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರು, ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

  • ಗೌಡ್ರ ಕುಟುಂಬದಲ್ಲಿ ಹಬ್ಬದ ಸಂಭ್ರಮ – ನಿಖಿಲ್ ಪತ್ನಿಗೆ ಸೀಮಂತ

    ಗೌಡ್ರ ಕುಟುಂಬದಲ್ಲಿ ಹಬ್ಬದ ಸಂಭ್ರಮ – ನಿಖಿಲ್ ಪತ್ನಿಗೆ ಸೀಮಂತ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಸೀಮಂತ ಕಾರ್ಯಕ್ರಮ ಇಂದು ನಡೆಯುತ್ತಿದೆ.

    ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಇದೀಗ ಎಂಟು ತಿಂಗಳು ತುಂಬಿದ್ದು, ನಗರದ ಹೆಚ್‍ಎಸ್‍ಆರ್ ಲೇಔಟ್‍ನ ಮಾನ್ವಿ ಕನ್ವೆನ್ಷನ್ ಹಾಲ್‍ನಲ್ಲಿ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಅಲ್ಲದೇ ಕೊರೊನಾ ಕಾರಣದಿಂದಾಗಿ ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರು, ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

    nikil

    ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ನಿಖಿಲ್ ಆಗಾಗ ಪತ್ನಿ ಜೊತೆಗಿರುವ ಕೆಲವೊಂದು ಮುದ್ದಾದ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಸದ್ಯ ಕಳೆದ ವಾರವಷ್ಟೇ ಗಣೇಶ ಹಬ್ಬದಂದು ಪತ್ನಿ ಜೊತೆ ಹಬ್ಬ ಆಚರಿಸಿದ ನಿಖಿಲ್ ಸಂಪ್ರದಾಯಿಕ ಉಡುಗೆಯಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದರು. ಇದನ್ನೂ ಓದಿ: ನಿಖಿಲ್‍ಗೆ ಗಂಡು ಮಗುವಾಗಲಿದೆ: ವಿನಯ್ ಗುರೂಜಿ

    2020ರ ಏಪ್ರಿಲ್ 17ರಂದು ಲಾಕ್‍ಡೌನ್ ಸಮಯದಲ್ಲಿ ನಿಖಿಲ್ ಹಾಗೂ ರೇವತಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿರುವ ಫಾರ್ಮ್ ಹೌಸ್‍ನಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲವು ತಿಂಗಳ ಹಿಂದಷ್ಟೇ ಮಾಜಿ ಸಿಎಂ. ಹೆಚ್.ಡಿ ಕುಮಾರಸ್ವಾಮಿಯವರು ತಾವು ತಾತಾ ಆಗುತ್ತಿರುವ ಖುಷಿ ವಿಚಾರವನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದರು. ಇದೀಗ ಮುದ್ದಿನ ಸೊಸೆ ಸೀಮಂತವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಗೌಡರ ಕುಟುಂಬದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದನ್ನೂ ಓದಿ: ಎಂದಿಗೂ ಮರೆಯಲಾಗದ ದಿನದ ಫೋಟೋ ಹಂಚಿಕೊಂಡ ನಿಖಿಲ್