Tag: ರೇವತಿ

  • ನಿಖಿಲ್ ಮದ್ವೆಗೂ ಮುನ್ನ ರಾಮನಗರ, ಚನ್ನಪಟ್ಟಣ ಜನರಿಗೆ ಭರ್ಜರಿ ಗಿಫ್ಟ್

    ನಿಖಿಲ್ ಮದ್ವೆಗೂ ಮುನ್ನ ರಾಮನಗರ, ಚನ್ನಪಟ್ಟಣ ಜನರಿಗೆ ಭರ್ಜರಿ ಗಿಫ್ಟ್

    – 8 ಲಕ್ಷ ಲಗ್ನ ಪತ್ರಿಕೆ ಮುದ್ರಣ
    – 1 ಸಾವಿರ ಅಡುಗೆ ಸಹಾಯಕರು

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮದುವೆಗೆ ಭರ್ಜರಿ ತಯಾರಿ ನಡೆಯುತ್ತದೆ. ಏಪ್ರಿಲ್‍ 17ರಂದು ನಡೆಯಲಿರುವ ನಿಖಿಲ್, ರೇವತಿ ಅವರ ಮದುವೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಎರಡೂ ಕುಟುಂಬದಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

    ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ಜಾನಪದ ಲೋಕದ ಸಮೀಪ ನಿರ್ಮಿಸಲಾಗುತ್ತಿರುವ ಅದ್ಧೂರಿ ಸಪ್ತಪದಿ ಮಂಟಪದಲ್ಲಿ ನಿಖಿಲ್ ರೇವತಿ ಅವರನ್ನು ವರಿಸಲಿದ್ದಾರೆ. ಗೌಡರ ಕುಟುಂಬಕ್ಕೂ ರಾಮನಗರ ಮತ್ತು ಚನ್ನಪಟ್ಟಣದ ಜನರ ನಡುವೆ ರಾಜಕೀಯವಾಗಿ ಮಾತ್ರವಲ್ಲದೆ, ಭಾವನಾತ್ಮಕ ನಂಟು ಕೂಡ ಇದೆ. ಹೀಗಾಗಿ ತಮ್ಮ ಮಗನ ಮದುವೆ ಸಂಭ್ರಮವನ್ನು ತಮ್ಮ ಕುಟುಂಬಕ್ಕೆ ಮಾತ್ರ ಸೀಮಿತಗೊಳಿಸದೆ, ತಮ್ಮ ಪಕ್ಷದ ಬೆಂಬಲಿಗರು, ಅಭಿಮಾನಿಗಳ ಜೊತೆ ಕೂಡ ಸಂಭ್ರಮಿಸಲು ಕುಮಾರಸ್ವಾಮಿ ಅವರು ನಿರ್ಧರಿಸಿದ್ದು, ಮಗನ ಮದುವೆಗೂ ಮುನ್ನವೇ ರಾಮನಗರ ಮತ್ತು ಚನ್ನಪಟ್ಟಣದ ಜನರಿಗೆ ಭರ್ಜರಿ ಉಡುಗೊರೆ ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ:  ‘ಸಾವು ನಮ್ಮನ್ನ ಬೇರ್ಪಡಿಸೋವರೆಗೂ ನಾವಿಬ್ಬರೂ ಹೀಗೇ ಕೈ ಹಿಡಿದಿರ್ಬೇಕು’

    ಪ್ರತಿ ಮನೆಗೂ ಆಹ್ವಾನ:
    ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದ ಪ್ರತಿ ಮನೆಗೆ ಲಗ್ನಪತ್ರಿಕೆಯನ್ನು ನೀಡಿ, ಮದುವೆಗೆ ಆಮಂತ್ರಿಸಲು ಕುಮಾರಸ್ವಾಮಿ ಅವರು ನಿರ್ಧರಿಸಿದ್ದಾರೆ. ಲಗ್ನಪತ್ರಿಕೆಯ ಜೊತೆಗೆ ಸೀರೆ, ಪಂಚೆ, ಶರ್ಟ್ ಮತ್ತು ಶಲ್ಯವನ್ನು ಉಡುಗೊರೆಯಾಗಿ ನೀಡಲು ಎಚ್‍ಡಿಕೆ ಮುಂದಾಗಿದ್ದಾರೆ. ಹೀಗಾಗಿ ಈಗಾಗಲೇ ಮುಖಂಡರೊಂದಿಗೆ ಚರ್ಚಿಸಿ ಪ್ರತಿ ಹಳ್ಳಿಯಲ್ಲಿ ಎಷ್ಟು ಮನೆಗಳಿವೆ ಎಂಬ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ:  80 ಎಕ್ರೆ ವಿಸ್ತೀರ್ಣದಲ್ಲಿ ಅದ್ಧೂರಿ ಸೆಟ್ – ಏ. 17ರ ಶುಭ ಶುಕ್ರವಾರ ನಿಖಿಲ್, ರೇವತಿ ಕಲ್ಯಾಣ

    ರಾಮನಗರದಲ್ಲಿ 68 ಸಾವಿರ ಮನೆಗಳಿದ್ದು, ಚನ್ನಪಟ್ಟಣದಲ್ಲಿ 70 ಸಾವಿರ ಮನೆಗಳಿವೆ ಎಂಬ ಮಾಹಿತಿ ಇದೆ. ಕ್ಷೇತ್ರಗಳಲ್ಲಿನ ಮುಸ್ಲಿಮರು ಸೇರಿದಂತೆ ಎಲ್ಲಾ ಜಾತಿ, ಧರ್ಮದವರಿಗೂ ಭೇದ ಭಾವವಿಲ್ಲದೆ ಸೀರೆ, ಪ್ಯಾಂಟ್, ಶರ್ಟ್ ನೀಡಲು ಈಗಾಗಲೇ ಎಚ್‍ಡಿಕೆ ಸೂಚಿಸಿದ್ದಾರೆ ಎನ್ನಲಾಗಿದೆ. ಅದರಲ್ಲೂ ಮಹಿಳೆಯರಿಗೆ ಸೀರೆಯ ಜೊತೆಗೆ ಅರಿಶಿನ, ಕುಂಕುಮದ ಭರಣಿಗಳನ್ನ ನೀಡಲು ತಿರ್ಮಾನಿಸಿದ್ದು, ಜಾತಿ ಭೇದ ಮಾಡದೇ ಎಲ್ಲರೂ ನಮ್ಮವರೆ ಎಂದು ಎಚ್‍ಡಿಕೆ ಉಡುಗೊರೆ ನೀಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ದೊಡ್ಡಗೌಡ್ರ ಕುಟುಂಬವನ್ನು ಬಿಡದ ವಾಸ್ತು, ಶಾಸ್ತ್ರ- ಮಗನ ಮದ್ವೆಗೆ ಎಚ್‍ಡಿಕೆ ದಂಪತಿಯಿಂದ ಭೂಮಿಗೆ ಶಕ್ತಿ ಪೂಜೆ

    8 ಲಕ್ಷ ಲಗ್ನಪತ್ರಿಕೆ ಮುದ್ರಣ:
    ನಿಖಿಲ್ ಮದುವೆಗಾಗಿ 8 ಲಕ್ಷ ಲಗ್ನಪತ್ರಿಕೆಗಳನ್ನು ಮುದ್ರಿಸಲಾಗಿದೆ. ಉಡುಗೊರೆಯ ಜೊತೆಗೆ ಲಗ್ನಪತ್ರಿಕೆ ನೀಡಿ ಮಗನ ಮದುವೆಗೆ ಆಮಂತ್ರಿಸಲು ಎಚ್‍ಡಿಕೆ ನಿರ್ಧರಿಸಿದ್ದಾರೆ. ಸದ್ಯ ಜನರಿಗೆ ನೀಡುವ ಉಡುಗೊರೆಯ ವೆಚ್ಚ 1 ಮನೆಗೆ 3 ಸಾವಿರ ರೂಪಾಯಿಯಷ್ಟು ತಗುಲುತ್ತದೆ ಎಂದು ಅಂದಾಜಿಸಲಾಗಿದೆ.

    1 ಸಾವಿರ ಅಡುಗೆ ಸಹಾಯಕರು
    ಬಳೇಪೇಟೆಯ ಬಾಣಸಿಗ ವೆಂಕಟೇಶ್ ನಿಖಿಲ್ ಮತ್ತು ರೇವತಿ ಮದುವೆಗೆ ಅಡುಗೆಯ ಎಲ್ಲಾ ಜವಾಬ್ದಾರಿಗಳನ್ನು ನಿಭಾಯಿಸಲಿದ್ದಾರೆ. ಮದುವೆಯ ದಿನ ಲಕ್ಷಾಂತರ ಮಂದಿ ಸೇರುವ ನಿರೀಕ್ಷೆ ಇದ್ದು, ಬಂದವರಿಗೆ ಊಟ ಬಡಿಸಲೆಂದೇ 1 ಸಾವಿರ ಮಂದಿ ಅಡುಗೆ ಸಹಾಯಕರನ್ನ ನೇಮಿಸಲಾಗುತ್ತಿದೆ ಎನ್ನಲಾಗಿದೆ.

  • ನಿನ್ನ ತ್ಯಾಗ ಅಪಾರ – ಅಮ್ಮನ ಬಗ್ಗೆ ನಿಖಿಲ್ ಭಾವನಾತ್ಮಕ ಪೋಸ್ಟ್

    ನಿನ್ನ ತ್ಯಾಗ ಅಪಾರ – ಅಮ್ಮನ ಬಗ್ಗೆ ನಿಖಿಲ್ ಭಾವನಾತ್ಮಕ ಪೋಸ್ಟ್

    ಬೆಂಗಳೂರು: ಮದುವೆ ಸಂಭ್ರಮದಲ್ಲಿರುವ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ತಾಯಿ ಅನಿತಾ ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಸ್ಪೆಷಲ್ ಪೋಸ್ಟ್ ಮಾಡಿ ಶುಭಶಯ ಕೋರಿದ್ದಾರೆ. ನಿನ್ನ ತ್ಯಾಗ ಅಪಾರ, ಎಂದೆಂದಿಗೂ ಹೀಗೆ ನಗುತ್ತಿರು ಎಂದು ಪ್ರೀತಿಯಿಂದ ವಿಶ್ ಮಾಡಿದ್ದಾರೆ.

    ಅಮ್ಮನ ಹುಟ್ಟುಹಬ್ಬಕ್ಕೆ ನಿಖಿಲ್ ಸ್ಪೆಷಲ್ ವಿಶ್ ಸದ್ಯ ಎಲ್ಲರ ಮನ ಗೆದ್ದಿದೆ. ಹೌದು. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಿಖಿಲ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಅನಿತಾ ಕುಮಾರಸ್ವಾಮಿ ಅವರಿಗೆ ಪ್ರೀತಿಯಿಂದ ವಿಶ್ ಮಾಡಿ, ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

    https://www.instagram.com/p/B87wb4dJvI9/

    ಪೋಸ್ಟ್ ನಲ್ಲಿ ಏನಿದೆ?
    ಹುಟ್ಟುಹಬ್ಬದ ಶುಭಾಶಯಗಳು ಅಮ್ಮ, ನಿನ್ನ ನನಗೆ ಜನ್ಮಕೊಟ್ಟಾಗಿನಿಂದಲೂ ನನಗಾಗಿ ನೀನು ಮಾಡಿದ ತ್ಯಾಗ ಅಪಾರ. ನನ್ನ ಜೀವನ ಪೂರ್ತಿ ನಾನು ನಿನಗೆ ಋಣಿಯಾಗಿರುತ್ತೇನೆ ಅಮ್ಮ. ನೀನು ಖುಷಿಯಾಗಿರುವುದನ್ನ ನೋಡಿದಾಗಲೆಲ್ಲಾ ನನ್ನ ಮುಖದಲ್ಲಿ ದೊಡ್ಡ ನಗು ಮೂಡುತ್ತದೆ. ಈ ಫೋಟೋದಲ್ಲಿ ಹೇಗೆ ನಗುತಿದಿಯೋ ಹಾಗೆಯೇ ಎಂದೆಂದಿಗೂ ನಗುತ್ತಿರು. ಯಾಕೆಂದರೆ ನೀನು ನಕ್ಕಾಗ ಇನ್ನೂ ಸುಂದರವಾಗಿ ಕಾಣುತ್ತೀಯ ಎಂದು ಬರೆದು ಲವ್ ಫಾರ್ ಎವರ್ ಹ್ಯಾಶ್‍ಟ್ಯಾಗ್ ಹಾಕಿ ಪೋಸ್ಟ್ ಮಾಡಿದ್ದಾರೆ.

    https://www.instagram.com/p/B4g22oiJvjW/

    ಜೊತೆಗೆ ಭಾವಿ ಪತ್ನಿ ರೇವತಿ ಹಾಗೂ ತಮ್ಮ ಜೊತೆ ಅಮ್ಮ ನಿಂತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಈ ಫೋಟೋದಲ್ಲಿ ಹೇಗೆ ಮುದ್ದಾಗಿ ಖುಷಿಯಿಂದ ನಗುತಿದಿಯೋ ಹಾಗೆಯೇ ಯಾವಾಗಲೂ ನಗುತ್ತಿರು ಅಮ್ಮ ಎಂದು ನಿಖಿಲ್ ವಿಶ್ ಮಾಡಿದ್ದಾರೆ.

    https://www.instagram.com/p/B8xVcAtpno-/

    ಈ ಹಿಂದೆ ಅಪ್ಪನೊಂದಿಗೆ ಇರುವ ಫೋಟೋವನ್ನು ನಿಖಿಲ್ ಹಂಚಿಕೊಂಡಿದ್ದರು. ಆ ಫೋಟೋ ಕೂಡ ಅಭಿಮಾನಿಗಳ ಮನ ಗೆದ್ದಿತ್ತು. ಏಪ್ರಿಲ್ 17ರಂದು ನಿಖಿಲ್ ಹಾಗೂ ರೇವತಿ ಮದುವೆ ರಾಮನಗರದಲ್ಲಿ ನಡೆಯಲಿದ್ದು, ಈಗಾಗಲೇ ಇರಡೂ ಕುಟುಂಬ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ.

  • ನಿಖಿಲ್- ರೇವತಿ ವಿವಾಹಕ್ಕೆ ಭೂಮಿ ಪೂಜೆ ಮೂಲಕ ಸಿದ್ಧತಾ ಕಾರ್ಯಕ್ಕೆ ಚಾಲನೆ

    ನಿಖಿಲ್- ರೇವತಿ ವಿವಾಹಕ್ಕೆ ಭೂಮಿ ಪೂಜೆ ಮೂಲಕ ಸಿದ್ಧತಾ ಕಾರ್ಯಕ್ಕೆ ಚಾಲನೆ

    ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಟ ನಿಖಿಲ್ ವಿವಾಹದ ಸಿದ್ಧತಾ ಕಾರ್ಯಕ್ಕೆ ರಾಮನಗರ ಹೊರವಲಯದ ಜಾನಪದ ಲೋಕದ ಬಳಿಯ ಜಮೀನಿನಲ್ಲಿ ವಿಶೇಷ ಭೂಮಿ ಪೂಜೆ, ಹೋಮ- ಹವನ ನಡೆಸುವ ಮೂಲಕ ಚಾಲನೆ ನೀಡಲಾಯಿತು.

    ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ-ಅನಿತಾ ದಂಪತಿ ಮತ್ತು ರೇವತಿ ಪೋಷಕರಾದ ಮಂಜುನಾಥ್ ಮತ್ತು ಶ್ರೀದೇವಿ ವಿಶೇಷ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ಖ್ಯಾತ ಜ್ಯೋತಿಷಿ ಹರಿಶಾಸ್ತ್ರಿ ಗುರೂಜಿ ಹಾಗೂ ರಾಮನಗರದ ಬಲಮುರಿ ಗಣಪತಿ ದೇಗುಲದ ಗಣೇಶ ಭಟ್ ನೇತೃತ್ವದಲ್ಲಿ ಹೋಮ- ಹವನ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಿದವು.

    ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಏಪ್ರಿಲ್ 17ರಂದು ವಿವಾಹ ನಿಶ್ಚಯ ಆಗಿದೆ. ಅದಕ್ಕೆ ಬೇಕಾದ ಸಿದ್ಧತೆಗಳಿಗೆ ಇಂದು ಪೂಜೆ ಮೂಲಕ ಚಾಲನೆ ನೀಡುತ್ತಿದ್ದೇವೆ. ಗಣ ಹೋಮ ಜೊತೆಗೆ ಭೂಮಿಪೂಜೆ ನಡೆದಿದೆ. ಇದು ನನ್ನ ಕುಟುಂಬದ ಮೊದಲ ಹಾಗೂ ಕೊನೆಯ ಶುಭ ಸಮಾರಂಭ. ನನ್ನೆಲ್ಲ ಕಾರ್ಯಕರ್ತರು ಸೇರಿ ಪ್ರತಿ ಕುಟುಂಬಕ್ಕೆ ಆಹ್ವಾನ ನೀಡುತ್ತೇನೆ. ಮದುವೆ ಹೆಸರಿನಲ್ಲಿ ನನ್ನೆಲ್ಲ ಮತದಾರರಿಗೆ ಧನ್ಯವಾದ ಹೇಳಲಿದ್ದೇನೆ. ಸಪ್ತಪದಿ ಮಂಟಪ ಸೇರಿದಂತೆ ಹಲವು ವೇದಿಕೆ ಇಲ್ಲಿ ನಿರ್ಮಾಣ ಆಗಲಿದೆ ಎಂದು ತಿಳಿಸಿದ್ರು.

    ನನ್ನ ಹುಟ್ಟೂರಾದ ಹೊಳೆ ನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ನಿಖಿಲ್ ಮದುವೆ ಮಾಡಬೇಕು ಎಂಬ ಆಲೋಚನೆ ಮೊದಲು ಇತ್ತು. ಆದರೆ ನನಗೆ ರಾಜಕೀಯ ಜನ್ಮ ನೀಡಿದ ರಾಮನಗರವನ್ನ ಜನ ತಮ್ಮ ಮೇಲೆ ಹೊರೆಸಿರುವ ಋಣದ ಭಾರವನ್ನ ಇಳಿಸಿಕೊಳ್ಳುವುದು ಹಾಗೂ ಜಿಲ್ಲೆಯ ಜನರಿಗೆ ಅಭಿಮಾನಿಗಳಿಗೆ ಊಟ ಹಾಕಿಸುವ ಸಲುವಾಗಿ ಈ ಜಾಗ ಆಯ್ಕೆ ಮಾಡಿದ್ದೇನೆ. ನನ್ನ ಹೃದಯದಲ್ಲಿ ಇರುವುದು ಇಲ್ಲಿನ ಜನ ಎಂದರು.

    ನಿಖಿಲ್- ರೇವತಿ ಮದುವೆಗೆ ಅದ್ಧೂರಿ ಸೆಟ್ ಹಾಕುವುದಿಲ್ಲ. ಸಪ್ತಪದಿ ಮಂಟಪ ನಿರ್ಮಾಣವಾಗುತ್ತೆ. ಆದರೆ ನನ್ನೆಲ್ಲ ಲಕ್ಷಾಂತರ ಕಾರ್ಯಕರ್ತರು, ಹಿತೈಷಿಗಳು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ದೊಡ್ಡ ಮಟ್ಟದ ಕಾರ್ಯಕ್ರಮವೇ ಆಗಿರಲಿದೆ. ಮುಹೂರ್ತದ ಕಾರ್ಯಕ್ರಮ ಇಲ್ಲಿ ನಡೆಯಲಿದೆ.

    ಆರತಕ್ಷತೆ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಮಾಡಬೇಕು ಎಂಬುದು ಹಲವರ ಅಭಿಪ್ರಾಯ. ಈ ಬಗ್ಗೆ ಇನ್ನೆರಡು ದಿನದಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ. ಒಟ್ಟು 90ರಿಂದ 95 ಎಕರೆ ಪ್ರದೇಶದಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

  • ದೊಡ್ಡಗೌಡ್ರ ಕುಟುಂಬವನ್ನು ಬಿಡದ ವಾಸ್ತು, ಶಾಸ್ತ್ರ- ಮಗನ ಮದ್ವೆಗೆ ಎಚ್‍ಡಿಕೆ ದಂಪತಿಯಿಂದ ಭೂಮಿಗೆ ಶಕ್ತಿ ಪೂಜೆ

    ದೊಡ್ಡಗೌಡ್ರ ಕುಟುಂಬವನ್ನು ಬಿಡದ ವಾಸ್ತು, ಶಾಸ್ತ್ರ- ಮಗನ ಮದ್ವೆಗೆ ಎಚ್‍ಡಿಕೆ ದಂಪತಿಯಿಂದ ಭೂಮಿಗೆ ಶಕ್ತಿ ಪೂಜೆ

    ರಾಮನಗರ: ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ವಿವಾಹ ಕಾರ್ಯ ನಡೆಯಲಿರುವ ಅರ್ಚಕರಹಳ್ಳಿ ಸಮೀಪದ ಜಮೀನಿನಲ್ಲಿ ಶುಕ್ರವಾರ ಭೂಮಿಗೆ ಶಕ್ತಿ ತುಂಬುವ ವಿಶೇಷ ಪೂಜೆ-ಹವನಗಳನ್ನ ವಾಸ್ತುತಜ್ಞರು, ಅರ್ಚಕರ ಮೂಲಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ದಂಪತಿ ನಡೆಸಲಿದ್ದಾರೆ.

    ಅಂದಹಾಗೇ 54 ಎಕರೆ ಪ್ರದೇಶದಲ್ಲಿ ನಡೆಯಲಿರುವ ಮದುವೆ ಪ್ರದೇಶದಲ್ಲಿ ಸೆಂಟ್ರೆಲ್ ಮುಸ್ಲಿಂ ಅಸೋಸಿಯೇಷನ್ (ಸಿಎಂಎ) 22 ಎಕರೆ, ಉದ್ಯಮಿಗೆ ಸೇರಿದ 23 ಎಕರೆ ಹಾಗೂ ಉಳಿಕೆ ಭೂಮಿ ಸರ್ಕಾರಿ ಹಾಗೂ ಇತರರ ಒಡೆತನದಲ್ಲಿದೆ. ಹೀಗಾಗಿ ಮದುವೆ ಕಾರ್ಯಕ್ಕೆ ಯಾವುದೇ ವಿಘ್ನ ಉಂಟಾಗದಿರಲಿ ಎಂಬ ಉದ್ದೇಶದಿಂದ ಶುಭ ಶುಕ್ರವಾರ ವಿಶೇಷ ಪೂಜೆಯನ್ನ ಎಚ್‍ಡಿ ಕುಮಾರಸ್ವಾಮಿ ದಂಪತಿ ಹಮ್ಮಿಕೊಂಡಿದ್ದಾರೆ.

    ಮಹಾಶಿವರಾತ್ರಿ ದಿನವೇ ಭೂಮಿ ಪೂಜೆ ಸಲ್ಲಿಸಲು ಅನೇಕ ಕಾರಣಗಳಿವೆ ಎನ್ನಲಾಗಿದೆ. ಶಿವನಿಗೆ ಪ್ರಿಯವಾದ ದಿನ ಶುಭಲಗ್ನವಾದ ಬೆಳಗ್ಗೆ 7.30ರಿಂದ 9.35ರೊಳಗೆ ಪೂಜೆ ಸಲ್ಲಿಸಿದರೆ ಎಲ್ಲವೂ ಶುಭವಾಗಲಿದೆ ಎಂಬ ನಂಬಿಕೆ ಇದೆ. ಹೀಗಾಗಿ ಕುಟುಂಬ ಸಮೇತರಾಗಿ ಎಚ್‍ಡಿಕೆ ಪೂಜೆ ಸಲ್ಲಿಸಲಿದ್ದಾರೆ.

    ಇಷ್ಟು ಮಾತ್ರವಲ್ಲದೇ, ವಾಸ್ತು ಶಾಸ್ತ್ರದ ಪ್ರಕಾರವೇ ಮದುವೆ ಸೆಟ್ ಹಾಕಬೇಕಿರುವ ಹಿನ್ನೆಲೆಯಲ್ಲಿ ವಾಸ್ತು ತಜ್ಞರು ಈ ಪೂಜೆಯಲ್ಲಿ ಭಾಗಿಯಾಗಲಿದ್ದು, ವಾಸ್ತು ನಿವಾರಣಾ ಪೂಜೆಯನ್ನು ನಡೆಸಲಿದ್ದಾರೆ. ಜೋತಿಷಿಗಳು, ಶಾಸ್ತ್ರಿಗಳು, ವಾಸ್ತು ತಜ್ಞರು ಒಟ್ಟಿಗೆ ಪೂಜೆ ನೆರವೇರಿಸಲಿರುವುದು ಸಾಕಷ್ಟು ಕೂತುಹಲಕ್ಕೂ ಕಾರಣವಾಗಿದೆ.

    ವಿಘ್ನ ನಿವಾರಕ ಗಣಪನಿಗೆ ಮೊದಲ ಪೂಜೆ ಸಲ್ಲಿಸಿ, ಮದುವೆ ಸೆಟ್ ಹಾಕಲು ಭೂಮಿ ಪೂಜೆ ಸಹ ನಡೆಯಲಿದೆ. ಈಗಾಗಲೇ ಕುರುಚಲು ಕಾಡಿನಂತಿದ್ದ ಜಾಗವನ್ನ ಕಳೆದ ಐದು ದಿನಗಳಿಂದ ನಿರಂತರವಾಗಿ ಜೆಸಿಬಿ ಯಂತ್ರಗಳ ಮೂಲಕ ಸಮತಟ್ಟು ಮಾಡುವ ಕಾರ್ಯವನ್ನ ಮಾಡಲಾಗುತ್ತಿದೆ.

  • ‘ಸಾವು ನಮ್ಮನ್ನ ಬೇರ್ಪಡಿಸೋವರೆಗೂ ನಾವಿಬ್ಬರೂ ಹೀಗೇ ಕೈ ಹಿಡಿದಿರ್ಬೇಕು’

    ‘ಸಾವು ನಮ್ಮನ್ನ ಬೇರ್ಪಡಿಸೋವರೆಗೂ ನಾವಿಬ್ಬರೂ ಹೀಗೇ ಕೈ ಹಿಡಿದಿರ್ಬೇಕು’

    – ಲವ್ ಮೂಡಿನಲ್ಲಿ ನಿಖಿಲ್

    ಬೆಂಗಳೂರು: ಸಾವು ನಮ್ಮನ್ನು ಬೇರ್ಪಡಿಸುವವರೆಗೂ ನಾವಿಬ್ಬರೂ ಕೈಯನ್ನು ಹೀಗೆ ಹಿಡಿದಿರಬೇಕು ಎಂಬುದು ನನ್ನ ಇಚ್ಛೆ. ನನ್ನ ಮುಂದಿನ ಜನ್ಮ ಎಂಬುದು ಇದ್ದರೆ, ಆ ಜನ್ಮದಲ್ಲೂ ನೀವೇ ನನ್ನ ಬಾಳ ಸಂಗಾತಿ ಆಗಬೇಕು ಎಂದು ರೇವತಿ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಇದನ್ನೂ ಓದಿ: ನಂಗೆ ರೇವತಿ ಅವರೇ ಪರ್ಫೆಕ್ಟ್ ಪಾರ್ಟ್ನರ್: ನಿಖಿಲ್

    ನಟ ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥವಾದ ಬಳಿಕ ತನ್ನ ಭಾವಿ ಪತ್ನಿಯ ಜೊತೆ ಸಮಯ ಕಳೆಯುತ್ತಿದ್ದಾರೆ. ಇತ್ತೀಚೆಗೆಷ್ಟೆ ಪ್ರೇಮಿಗಳ ದಿನಾಚರಣೆಯಂದು ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದರು. ಇದೀಗ ಮೊದಲ ಬಾರಿಗೆ ರೇವತಿ ಮೇಲಿರುವ ಭಾವನೆಯನ್ನು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಭಾವಿ ಪತ್ನಿಗೆ ವಜ್ರದುಂಗರ ತೊಡಿಸಿದ ನಿಖಿಲ್

    “ನನ್ನ ರಾಜಕುಮಾರಿ, ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ. ಸಮಯ ಕಳೆದಂತೆ ಸೌಂದರ್ಯ ಮಾಸಬಹುದು. ಆದರೆ ಒಳ್ಳೆಯ ಗುಣ ಸದಾ ನಮ್ಮ ಜೊತೆಯಲ್ಲಿಯೇ ಉಳಿಯುತ್ತದೆ. ನಾನು ನಿಮ್ಮ ವ್ಯಕ್ತಿತ್ವವನ್ನು ಪ್ರೀತಿಸುತ್ತೇನೆ. ನಿಮ್ಮೊಂದಿಗೆ ನಾನು ಕಳೆಯುತ್ತಿರುವ ಪ್ರತಿ ಕ್ಷಣವೂ ಅಮೂಲ್ಯವಾದುದ್ದು. ನಾನು ಪ್ರತಿ ಸೆಕೆಂಡ್ ನಿಮ್ಮನ್ನು ಪ್ರೀತಿಸುತ್ತೇನೆ” ಎಂದು ಭಾವಿ ಪತ್ನಿ ಬಗ್ಗೆ ನಿಖಿಲ್ ಇನ್ಸ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

    “ನಿಮ್ಮ ಜೊತೆ ಕೊನೆಯವರೆಗೂ ಇದೇ ರೀತಿ ಇರಲು ಇಷ್ಟಪಡುತ್ತೇನೆ. ಸಾವು ನಮ್ಮನ್ನು ಬೇರ್ಪಡಿಸುವವರೆಗೂ ನಾವಿಬ್ಬರೂ ಕೈಯನ್ನು ಹೀಗೆ ಹಿಡಿದಿರಬೇಕು ಎಂಬುದು ನನ್ನ ಇಚ್ಛೆ. ನನ್ನ ಮುಂದಿನ ಜನ್ಮ ಎಂಬುದು ಇದ್ದರೆ, ಆ ಜನ್ಮದಲ್ಲೂ ನೀವೇ ನನ್ನ ಬಾಳ ಸಂಗಾತಿ ಆಗಬೇಕು” ಎಂದು ರೇವತಿ ಬಗ್ಗೆ ರೊಮ್ಯಾಂಟಿಕ್ ಮೂಡಿನಲ್ಲಿ ನಿಖಿಲ್ ಹೇಳಿದ್ದಾರೆ.

    https://www.instagram.com/p/B8nsSjep-nd/

    ಅಷ್ಟೇ ಅಲ್ಲದೆ ರೇವತಿ ಕೈಬರಹದಲ್ಲಿ ಬರೆದಿರುವ ಪತ್ರವನ್ನು ನಿಖಿಲ್ ಮತ್ತು ರೇವತಿ ಕೈ-ಕೈ ಹಿಡಿದುಕೊಂಡು ಓದುತ್ತಿರುವ ಫೋಟೋವನ್ನೂ ಇನ್ಸ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    ಫೆಬ್ರವರಿ 10ರಂದು ತಾಜ್ ವೆಸ್ಟೆಂಡ್ ಹೋಟೆಲಿನಲ್ಲಿ ನಿಖಿಲ್ ಮತ್ತು ರೇವತಿ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿದೆ. ಇವರ ವಿವಾಹ ಕಾರ್ಯಕ್ರಮ ಏಪ್ರಿಲ್ 17 ರಾಮನಗರ-ಚನ್ನಪಟ್ಟಣ ನಡುವಿನ ಜನಪದ ಲೋಕದ ಬಳಿ ನಡೆಯಲಿದೆ. ಅದ್ಧೂರಿ ಸೆಟ್‍ನಲ್ಲಿ ಶಾಸ್ತ್ರೋಕ್ತ ಮತ್ತು ವಾಸ್ತು ಪ್ರಕಾರವಾಗಿ ಇವರ ಮದುವೆ ನಡೆಯಲಿದೆ.

     

  • ‘Just I Am Happy’- ನಾಚಿಕೊಂಡ ನಿಖಿಲ್ ಭಾವಿ ಪತ್ನಿ

    ‘Just I Am Happy’- ನಾಚಿಕೊಂಡ ನಿಖಿಲ್ ಭಾವಿ ಪತ್ನಿ

    ಬೆಂಗಳೂರು: ಜಸ್ಟ್ ಐ ಆ್ಯಮ್ ಹ್ಯಾಪಿ ಎಂದು ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಭಾವಿ ಪತ್ನಿ ರೇವತಿ ನಾಚಿಕೊಂಡು ಹೇಳಿದ್ದಾರೆ.

    ನಿಶ್ಚಿತಾರ್ಥವಾದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ರೇವತಿ, ನನಗೆ ತುಂಬಾ ಖುಷಿಯಾಗಿದೆ ಅಷ್ಟೆ ಎಂದು ನಾಚಿಕೊಂಡು ಹೇಳಿದ್ದಾರೆ. ಇದೇ ವೇಳೆ ಭಾವಿ ಪತ್ನಿಗೆ ಕೇಳಿದ ಪ್ರಶ್ನೆಗಳಿಗೆ ನಿಖಿಲ್ ಕುಮಾರಸ್ವಾಮಿ ಉತ್ತರಿಸಿದ್ದಾರೆ.

    ಒಬ್ಬ ಒಳ್ಳೆಯ ವ್ಯಕ್ತಿಯಾಗಿ ನನ್ನನ್ನು ಇಷ್ಟಪಡುತ್ತಾರೆ. ರಾಜಕಾರಣ, ಸಿನಿಮಾ ಇದೆಲ್ಲಾ ಮುಖ್ಯವಲ್ಲ. ನೀವು ಕೇಳುವ ಪ್ರಶ್ನೆಯಿಂದ ತುಂಬಾ ಮುಜುಗರ ಪಡುತ್ತಿದ್ದಾರೆ ಎಂದರು. ನಂತರ ಹೋಗೋಣ ಬನ್ನಿ ಎಂದು ಹೇಳುತ್ತಿದ್ದಾರೆ ನೋಡಿ ನೀವು ಎಷ್ಟು ತೊಂದರೆ ಕೊಡುತ್ತಿದ್ದೀರ ಎಂದು ತಮಾಷೆಗೆ ನಿಖಿಲ್ ಹೇಳಿದರು.

    ತಾಜ್ ವೆಸ್ಟೆಂಡ್ ಹೋಟೆಲಿನಲ್ಲಿ ನಿಖಿಲ್ ಹಾಗೂ ರೇವತಿ ಅವರ ನಿಶ್ಚಿತಾರ್ಥ ಒಕ್ಕಲಿಗ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆಯಿತು. ಈ ನಿಶ್ಚಿತಾರ್ಥ ಅನಿತಾ ಕುಮಾರಸ್ವಾಮಿ, ಕುಮಾರಸ್ವಾಮಿ ಅವರ ಸಹೋದರಿಯರಾದ ಶೈಲಜಾ ಮತ್ತು ಅನಸೂಯ ಹಾಗೂ ಕುಮಾರಸ್ವಾಮಿ ಅವರ ತಾಯಿ ಚೆನ್ನಮ್ಮ ಅವರ ಮಾರ್ಗದರ್ಶನದಲ್ಲಿ ಎಲ್ಲಾ ತಯಾರಿಗಳು ಆಗಿದ್ದವು. ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ಶುಭಕೋರಿದ್ದಾರೆ.

    ನಿಶ್ಚಿತಾರ್ಥ ಸಂಪೂರ್ಣ ವೈಟ್ ಥೀಮ್‍ನಲ್ಲಿದ್ದು, ಕಾರ್ಪೆಟ್‍ಯಿಂದ ಹಿಡಿದು ನಿಖಿಲ್-ರೇವತಿ ಉಂಗುರ ಬದಲಾಯಿಸುವ ಮಂಟಪ ಕೂಡ ಶ್ವೇತ ವರ್ಣದಲ್ಲಿತ್ತು. ನಿಶ್ಚಿತಾರ್ಥದ ಮಂಟಪ ಹೂವಿನಿಂದ ಅಲಂಕರಿಸಲಾಗಿದ್ದು, ಅದಕ್ಕಾಗಿ ಕರ್ನಾಟಕದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಬೆಳೆಯುವ ಬಿಳಿ ಬಣ್ಣದ ಹೂವನ್ನು ತರಿಸಲಾಗಿತ್ತು. ದೆಹಲಿಯಿಂದ ಕ್ರಿಸ್ಟಲ್ಸ್ ಗಳನ್ನು ತರಿಸಿ ಅಲಂಕಾರಕ್ಕೆ ಬಳಸಿಕೊಳ್ಳಲಾಗಿತ್ತು. ಸೀಲಿಂಗ್ ಸಹ ಹೂವಿನಿಂದಲೇ ಅಲಂಕಾರ ಮಾಡಲಾಗಿತ್ತು.

  • ಭಾವಿ ಪತ್ನಿಗೆ ವಜ್ರದುಂಗರ ತೊಡಿಸಿದ ನಿಖಿಲ್

    ಭಾವಿ ಪತ್ನಿಗೆ ವಜ್ರದುಂಗರ ತೊಡಿಸಿದ ನಿಖಿಲ್

    ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರು ವಜ್ರದುಂಗರ ತೊಡಿಸುವ ಮೂಲಕ ರೇವತಿ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

    ತಾಜ್ ವೆಸ್ಟೆಂಡ್ ಹೋಟೆಲಿನಲ್ಲಿ ನಿಖಿಲ್ ಹಾಗೂ ರೇವತಿ ಅವರ ನಿಶ್ಚಿತಾರ್ಥ ಒಕ್ಕಲಿಗ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ನಡೆದಿದೆ. ಈ ನಿಶ್ಚಿತಾರ್ಥ ಅನಿತಾ ಕುಮಾರಸ್ವಾಮಿ, ಕುಮಾರಸ್ವಾಮಿ ಅವರ ಸಹೋದರಿಯರಾದ ಶೈಲಜಾ ಮತ್ತು ಅನಸೂಯ ಹಾಗೂ ಕುಮಾರಸ್ವಾಮಿ ಅವರ ತಾಯಿ ಚೆನ್ನಮ್ಮ ಅವರ ಮಾರ್ಗದರ್ಶನದಲ್ಲಿ ಎಲ್ಲಾ ತಯಾರಿಗಳು ಆಗಿವೆ. ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ಶುಭಕೋರಿದರು. ಇದನ್ನೂ ಓದಿ: ಇಲ್ಲ ಇಲ್ಲ ಎಂದು ಹೇಳಿ ನಾಚಿಕೊಂಡು ಹೋದ ರೇವತಿ

    ನಿಶ್ಚಿತಾರ್ಥ ಸಂಪೂರ್ಣ ವೈಟ್ ಥೀಮ್‍ನಲ್ಲಿದ್ದು, ಕಾರ್ಪೆಟ್‍ಯಿಂದ ಹಿಡಿದು ನಿಖಿಲ್-ರೇವತಿ ಉಂಗುರ ಬದಲಾಯಿಸುವ ಮಂಟಪ ಕೂಡ ಶ್ವೇತ ವರ್ಣದಲ್ಲಿದೆ. ನಿಶ್ಚಿತಾರ್ಥದ ಮಂಟಪ ಹೂವಿನಿಂದ ಅಲಂಕರಿಸಲಾಗಿದ್ದು, ಅದಕ್ಕಾಗಿ ಕರ್ನಾಟಕದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಬೆಳೆಯುವ ಬಿಳಿ ಬಣ್ಣದ ಹೂವನ್ನು ತರಿಸಲಾಗಿದೆ. ದೆಹಲಿಯಿಂದ ಕ್ರಿಸ್ಟಲ್ಸ್‍ಗಳನ್ನು ತರಿಸಿ ಅಲಂಕಾರಕ್ಕೆ ಬಳಸಿಕೊಳ್ಳಲಾಗಿದೆ. ಸೀಲಿಂಗ್ ಸಹ ಹೂವಿನಿಂದಲೇ ಅಲಂಕಾರ ಮಾಡಲಾಗಿದೆ. ತಾಜ್ ವೆಸ್ಟೆಂಡ್ ಗೇಟಿನಿಂದ ನಿಶ್ಚಿತಾರ್ಥ ನಡೆಯುವ ಜಾಗದ ವರೆಗೂ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಇದನ್ನೂ ಓದಿ: ದೊಡ್ಡಗೌಡರ ಮನೆಯಲ್ಲಿ ನಿಶ್ಚಿತಾರ್ಥ ಸಂಭ್ರಮ – ರೇವತಿಗೆ ಉಂಗುರ ತೊಡಿಸಲು ನಿಖಿಲ್ ಖಾತರ


    ಈ ನಿಶ್ಚಿತಾರ್ಥದಲ್ಲಿ ವಿಐಪಿ ಮತ್ತು ಸಾಮಾನ್ಯ ಜನ ಎಲ್ಲರಿಗೂ ಒಂದೇ ರೀತಿಯ ಅಡುಗೆಯನ್ನು ಮಾಡಿಸಲಾಗಿದೆ. ಸುಮಾರು 50 ರೀತಿಯ ಕರ್ನಾಟಕ ಶೈಲಿಯ ಖಾದ್ಯಗಳನ್ನು ಬಂದ ಅತಿಥಿಗಳು ಸವಿಯುತ್ತಿದ್ದಾರೆ. ವಿಶೇಷ ಎಂದರೆ ಕುಮಾರಸ್ವಾಮಿಯವರು ತಮ್ಮ ಪುತ್ರನ ನಿಶ್ಚಿತಾರ್ಥಕ್ಕೆ ಬಂದಂತವರು ಬಾಳೆ ಎಲೆಯಲ್ಲಿ ಊಟ ಮಾಡಬೇಕು ಎಂದು ಆಸೆಪಟ್ಟಿದ್ದರು. ಈ ಕಾರಣಕ್ಕೆ ಬಾಳೆ ಎಲೆಯಲ್ಲಿಯೇ ಊಟ ಬಡಿಸಲಾಗುತ್ತಿದೆ. ಇದರ ಜೊತೆ ಅನುಕೂಲವಾಗಲಿ ಎಂದು ಬಫೆ ವ್ಯವಸ್ಥೆಯನ್ನು ಸಹ ಮಾಡಲಾಗಿದೆ.

    ನಿಶ್ಚಿತಾರ್ಥಕ್ಕೆ ಬಂದ ಎಲ್ಲರೂ ಊಟ ಮಾಡಿ ಹೋಗಬೇಕು ಎನ್ನುವ ಉದ್ದೇಶದಿಂದ ಈ ರೀತಿ ವ್ಯವಸ್ಥೆ ಮಾಡಲಾಗಿದೆ. ಇನ್ನು 50 ಖ್ಯಾದ್ಯಗಳನ್ನು ದೇವೇಗೌಡರ ಕುಟುಂಬ ಮತ್ತು ಹುಡುಗಿ ಮನೆಯ ಕುಟುಂಬದವರೆಲ್ಲರೂ ರುಚಿ ನೋಡಿ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ. ಮದುವೆ ಊಟದಲ್ಲಿ ಪರೋಟ, ರೋಟಿ, ವಿವಿಧ ಪಲ್ಯ, ಹೋಳಿಗೆ, ಚಿರೋಟಿ ಸೇರಿದಂತೆ 50 ಖಾದ್ಯಗಳು, ನಾಲ್ಕು-ಐದು ಬಗೆಯ ತಾಜಾ ಜ್ಯೂಸ್ ಸೇರಿದಂತೆ ತಂಪು ಪಾನೀಯಗಳು. ಮೆಸ್ಮಲಯ್, ಜಾಮೂನು ಸೇರಿದಂತೆ ಐದರಿಂದ ಆರು ಸ್ವೀಟ್‍ಗಳನ್ನು ಮಾಡಲಾಗಿದೆ. ಒಟ್ಟು 6 ಸಾವಿರ ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗಿದೆ.

  • ಇಲ್ಲ ಇಲ್ಲ ಎಂದು ಹೇಳಿ ನಾಚಿಕೊಂಡು ಹೋದ ರೇವತಿ

    ಇಲ್ಲ ಇಲ್ಲ ಎಂದು ಹೇಳಿ ನಾಚಿಕೊಂಡು ಹೋದ ರೇವತಿ

    – ನಾವಿಬ್ಬರು ತುಂಬಾ ಖುಷಿಯಾಗಿದ್ದೀವಿ: ನಿಖಿಲ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರು ಇಂದು ರೇವತಿ ಅವರ ಜೊತೆ ಸಾಂಪ್ರದಾಯಿಕವಾಗಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ. ಈ ವೇಳೆ ಮಾತನಾಡಿದ ನಿಖಿಲ್ ಅವರು, ಕುಟುಂಬಸ್ಥರು ನಿಶ್ಚಿತಾರ್ಥ ನಿಗದಿ ಮಾಡಿದ್ದು, ನಾವಿಬ್ಬರು ತುಂಬಾ ಖುಷಿಯಾಗಿದ್ದೀವಿ ಎಂದರು. ಇತ್ತ ರೇವತಿ ಅವರು ಮಾಧ್ಯಮಗಳನ್ನು ನೋಡಿ ಇಲ್ಲ ಇಲ್ಲ ಎಂದು ಹೇಳಿ ನಾಚಿಕೊಂಡು ಕಾರಿನಲ್ಲಿ ಹೋಗಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಿಖಿಲ್ ಅವರು, ನನ್ನ ಜೀವನದ ಮೊದಲನೇ ಅಧ್ಯಾಯನವನ್ನು ನಾನು ಇಂದು ಪ್ರಾರಂಭಿಸುತ್ತಿದ್ದೇನೆ. ಎರಡು ಕುಟುಂಬಗಳು ಸೇರಿ ನನ್ನ ನಿಶ್ಚಿತಾರ್ಥವನ್ನು ನಿಗದಿ ಮಾಡಿದ್ದಾರೆ. ನಾವಿಬ್ಬರು ತುಂಬಾ ಖುಷಿಯಾಗಿದ್ದೇವೆ. ಇಬ್ಬರು ಮೊದಲನೇ ಹೆಜ್ಜೆ ಇಡುತ್ತಿದ್ದೇವೆ. ಹಾಗಾಗಿ ನಮಗೆ ರಾಜ್ಯದ ಜನತೆಯ ಆಶೀರ್ವಾದ ಕೂಡ ಬೇಕಾಗಿದೆ ಎಂದು ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ನನ್ನ ಮೇಲಿನ ನಿಮ್ಮ ಪ್ರೀತಿ, ಹಾರೈಕೆಗಳು ಇನ್ನು ಮುಂದೆ ನಮ್ಮಿಬ್ಬರ ಮೇಲಿರಲಿ: ನಿಖಿಲ್

    ಇದೇ ವೇಳೆ ರಾಜಕೀಯ ಬೇರೆ, ವೈಯಕ್ತಿಕ ಜೀವನ ಬೇರೆ. ನನ್ನ ತಂದೆ ಪಕ್ಷಾತೀತವಾಗಿ ಹಲವಾರು ಗಣ್ಯರಿಗೆ ನಿಶ್ಚಿತಾರ್ಥಕ್ಕೆ ಆಹ್ವಾನಿಸಿದ್ದಾನೆ. ನಾನು ಚಿತ್ರರಂಗದಲ್ಲಿ ಮೂರು ಸಿನಿಮಾಗಳು ಮಾಡಿದ್ದು, ನಾನೇ ಕೆಲವರಿಗೆ ಸ್ವತಃ ಆಹ್ವಾನಿಸಿದೆ. ನಮ್ಮ ಸಂಪ್ರದಾಯದ ಪ್ರಕಾರ ನಾವು ಮದುವೆ ಮಾಡಿಕೊಳ್ಳುತ್ತಿದ್ದೇವೆ. ಕಳೆದ 10 ದಿನಗಳಿಂದ ರೇವತಿ ಅವರು ಪ್ರೀ ವೆಡ್ಡಿಂಗ್ ಶೂಟ್ ಹಾಗೂ ಸಂಗೀತ ಕಾರ್ಯಕ್ರಮ ಬೇಡ ಎಂದು ಹೇಳಿದ್ದಾರೆ. ಶಾಸ್ತ್ರ ಬದ್ಧವಾಗಿ ಮದುವೆ ಆಗೋಣ ಎಂದು ಹೇಳುತ್ತಿದ್ದಾರೆ ಎಂದು ನಿಖಿಲ್ ಹೇಳಿದರು.

    ಏಪ್ರಿಲ್ 17ಕ್ಕೆ ಮದುವೆ ದಿನ ನಿಗದಿಯಾಗಿದೆ. ನಮ್ಮ ತಾತನ ಕನಸಿನಂತೆ ರಾಮನಗರ ಜಿಲ್ಲೆಯಲ್ಲಿ ಮದುವೆ ನಡೆಯಲಿದೆ. ನಮ್ಮನ್ನು ಪ್ರೀತಿಸುವ ವರ್ಗ ಎಲ್ಲರಿಗೂ ಮದುವೆ ಆಹ್ವಾನ ನೀಡಲಾಗುತ್ತೆ ಎಂದರು. ಇದೇ ವೇಳೆ, 10 ದಿನದಲ್ಲಿ ನಾನು ರೇವತಿ ಅವರ ಜೊತೆ ತುಂಬಾ ಮಾತನಾಡಿದ್ದೇನೆ. ನಮ್ಮ ಮುಂದಿನ ಜೀವನ ಹೇಗೆ ಇರಬೇಕು ಎಂಬುದು ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ ಎಂದು ನಿಖಿಲ್ ತಿಳಿಸಿದರು.

  • ದೊಡ್ಡಗೌಡರ ಮನೆಯಲ್ಲಿ ನಿಶ್ಚಿತಾರ್ಥ ಸಂಭ್ರಮ – ರೇವತಿಗೆ ಉಂಗುರ ತೊಡಿಸಲು ನಿಖಿಲ್ ಖಾತರ

    ದೊಡ್ಡಗೌಡರ ಮನೆಯಲ್ಲಿ ನಿಶ್ಚಿತಾರ್ಥ ಸಂಭ್ರಮ – ರೇವತಿಗೆ ಉಂಗುರ ತೊಡಿಸಲು ನಿಖಿಲ್ ಖಾತರ

    ಬೆಂಗಳೂರು: ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಕುಟುಂಬದಲ್ಲಿ ನಿಶ್ಚಿತಾರ್ಥದ ಸಂಭ್ರಮ ಮನೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಇಂದು ರೇವತಿ ಜೊತೆಗೆ ಅಧಿಕೃತವಾಗಿ ಎಂಗೇಜ್ ಆಗುತ್ತಿದ್ದಾರೆ.

    ಜಾಗ್ವಾರ್ ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿರುವ ನಿಖಿಲ್ ಕುಮಾರಸ್ವಾಮಿ ಮೂರೇ ಸಿನಿಮಾಗಳಲ್ಲಿ ನಟಿಸಿದ್ರೂ ತಮ್ಮದೇ ಆದ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇಂದು ಮನೆಯವರು ನೋಡಿರುವ ರೇವತಿ ಅವರ ಜೊತೆ ನಿಖಿಲ್ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ. ಕುಟುಂಬದವರು ಹಾಗೂ ಗಣ್ಯರ ಸಮ್ಮುಖದಲ್ಲಿ ನಿಖಿಲ್ ಹಾಗೂ ರೇವತಿ ತಾಜ್ ವೆಸ್ಟೆಂಡ್‍ನಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗಿರುವ ಕಲ್ಲರ್ ಫುಲ್ ವೇದಿಕೆಯಲ್ಲಿ ಉಂಗುರವನ್ನು ಬದಲಾಯಿಸಿಕೊಳ್ಳುತ್ತಿದ್ದಾರೆ.

    ಹಾಲಿ ಶಾಸಕ ಲೇಔಟ್ ಕೃಷ್ಣಪ್ಪ ಮೊಮ್ಮಗಳಾಗಿರುವ ರೇವತಿ ನಿಶ್ಚಿತಾರ್ಥವನ್ನು ಮುಂದೆ ನಿಂತು ಮಾಡುತ್ತಿದ್ದಾರೆ. ಮಂಜುನಾಥ್ ಮತ್ತು ಶ್ರೀದೇವಿ ಎರಡನೇ ಪುತ್ರಿಯಾಗಿರುವ ರೇವತಿಯನ್ನು ಇತ್ತೀಚೆಗಷ್ಟೇ ನಿಖಿಲ್ ಕುಟುಂಬಸ್ಥರು ಶಾಸ್ತ್ರೋಕ್ತವಾಗಿ ಹುಡುಗಿ ನೋಡುವ ಕಾರ್ಯಕ್ರಮವನ್ನು ಮುಗಿಸಿದ್ದರು. ಎಂಸಿಎ ಪದವೀಧರೆಯಾಗಿರುವ ರೇವತಿ ಮನೆಯವರು ಕುಮಾರಸ್ವಾಮಿಯವರ ಮನೆಗೆ ಭೇಟಿ ಕೊಟ್ಟು ಮದುವೆ ಮಾತುಕತೆಯನ್ನು ನಡೆಸಿದ್ದರು.

    ತಾಜ್ ವೆಸ್ಟೆಂಡ್‍ನಲ್ಲಿ ಹೋಟೆಲ್ ಮದುವಣಗಿತ್ತಿಯಂತೆ ಅಲಂಕಾರಿಸಲಾಗಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಗುರು-ಹಿರಿಯರ ಸಮ್ಮುಖದಲ್ಲಿ ನಿಖಿಲ್, ರೇವತಿಯ ಕೈಗೆ ಉಂಗುರವನ್ನು ತೊಡಿಸಲಿದ್ದಾರೆ. ದೊಡ್ಡ ಗೌಡ್ರ ಮನೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ರಾಜಕಾರಣಿಗಳು ಮತ್ತು ಚಿತ್ರರಂಗದವರಿಗೆ ಆಹ್ವಾನ ನೀಡಲಾಗಿದೆ. ಸಿನಿಮಾ ತಾರೆಯರು ಮತ್ತು ರಾಜಕೀಯದ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಾಗಲಿದ್ದಾರೆ. ಏಪ್ರಿಲ್‍ನಲ್ಲಿ ಮದುವೆ ದಿನಾಂಕ ನಿಗದಿಯಾಗಿದ್ದು, ಖುದ್ದು ಕುಮಾರಸ್ವಾಮಿ ಅವರೇ ಮಾಹಿತಿ ನೀಡಿದ್ದಾರೆ.

  • ನಂಗೆ ರೇವತಿ ಅವರೇ ಪರ್ಫೆಕ್ಟ್ ಪಾರ್ಟ್ನರ್: ನಿಖಿಲ್

    ನಂಗೆ ರೇವತಿ ಅವರೇ ಪರ್ಫೆಕ್ಟ್ ಪಾರ್ಟ್ನರ್: ನಿಖಿಲ್

    ಬೆಂಗಳೂರು: ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥಕ್ಕೆ ಇನ್ನೂ ಕೆಲವು ದಿನಗಳಿವೆ. ಈಗಾಗಲೇ ಮನೆಯಲ್ಲಿ ಎಂಗೇಜ್‍ಮೆಂಟ್‍ಗೆ ಸಕಲ ಸಿದ್ಧತೆ ನಡೆಯುತ್ತಿದೆ. ಇದೀಗ ಮೊದಲ ಬಾರಿಗೆ ನಿಖಿಲ್ ತಮ್ಮ ಭಾವಿ ಪತ್ನಿಯ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: ನಿಖಿಲ್‍ಗೆ ಇಂದು ಡಬಲ್ ಸಂಭ್ರಮ – ಫೆ.10ಕ್ಕೆ ಜಾಗ್ವಾರ್‌ನ ನಿಶ್ಚಿತಾರ್ಥ

    ನನಗೆ ರೇವತಿ ಅವರೇ ಪರ್ಫೆಕ್ಟ್ ಪಾರ್ಟ್ನರ್ ಎಂದು ನಿಖಿಲ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ತಮ್ಮ ಮದುವೆ ಬಗ್ಗೆ ಮಾತನಾಡಿದ ನಿಖಿಲ್, ನಮ್ಮ ಮನೆಯವರಿಗೆ ನೀವು ನೋಡಿದ ಹುಡುಗಿಯನ್ನೇ ಮದುವೆಯಾಗುತ್ತೀನಿ ಎಂದು ಹೇಳಿದ್ದೆ. ಈಗ ರೇವತಿ ಅವರನ್ನು ಮನೆಯವರು ನೋಡಿ ಆಯ್ಕೆ ಮಾಡಿದ್ದರು. ನನ್ನ ಅಭಿಪ್ರಾಯವನ್ನು ಕೇಳಿದರು. ನಾನು ಒಪ್ಪಿದ ಮೇಲೆ ಮದುವೆ ಫಿಕ್ಸ್ ಮಾಡಿದ್ದಾರೆ. ಹೀಗಾಗಿ ಕುಟುಂಬದವರ ಮಾತು ಉಳಿಸಿಕೊಂಡಿರುವುದಕ್ಕೆ ಖುಷಿಯಾಗಿದೆ ಎಂದರು.

    ಇನ್ನೂ ತಮ್ಮ ಭಾವಿ ಪತ್ನಿಯ ಬಗ್ಗೆ ಮಾತನಾಡಿ, ರೇವತಿ ಸಂಪ್ರದಾಯಸ್ಥ ಮನೆಯವರ ಮಗಳು. ಅವರು ವಿದ್ಯಾವಂತೆ ಜೊತೆಗೆ ಒಳ್ಳೆಯ ಆಚಾರವಿದೆ. ಅವರ ಜೊತೆ ನಾನು ಮಾತನಾಡಿದ್ದೇನೆ. ನನ್ನ ಎರಡು ಸಿನಿಮಾಗಳನ್ನು ಅವರು ಥಿಯೇಟರ್ ನಲ್ಲಿ ನೋಡಿರುವುದಾಗಿ ತಿಳಿಸಿದ್ದರು. ನನಗೆ ರೇವತಿ ಅವರೇ ಪರ್ಫೆಕ್ಟ್ ಪಾರ್ಟ್ನರ್ ಎಂದು ರೇವತಿ ಬಗ್ಗೆ ಹೇಳಿದ್ದಾರೆ.

    ಇದೇ ತಿಂಗಳು ಫೆಬ್ರವರಿ 10 ರಂದು ನಿಖಿಲ್ ಮತ್ತೆ ರೇವತಿ ನಿಶ್ಚಿತಾರ್ಥ ನಡೆಯಲಿದೆ. ತಾಜ್ ವೆಸ್ಟ್ ಎಂಡ್‍ ಹೋಟೆಲಿನಲ್ಲಿ ಅದ್ಧೂರಿಯಾಗಿ ಇವರಿಬ್ಬರ ನಿಶ್ಚಿತಾರ್ಥ ನಡೆಯಲಿದೆ. ಈ ಜೋಡಿಯ ಎಂಗೇಜ್‍ಮೆಂಟ್‍ನಲ್ಲಿ ನಿಖಿಲ್ ಮತ್ತು ರೇವತಿ ಕುಟುಂಬದವರು ಹಾಗೂ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ. ಸುಮಾರು 5 ಸಾವಿರ ಜನರು ನಿಶ್ಚಿತಾರ್ಥದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

    ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರ ಅಣ್ಣನ ಮೊಮ್ಮಗಳು ರೇವತಿ ಅವರನ್ನು ನಿಖಿಲ್ ವರಿಸಲಿದ್ದಾರೆ. ಹುಡುಗಿ ರೇವತಿ ಎಂಸಿಎ ಪದವೀಧರೆಯಾಗಿದ್ದಾರೆ. ಜ.26 ರಂದು ಬೆಂಗಳೂರಿನ ಮಲ್ಲತಳ್ಳಿಯಲ್ಲಿರುವ ವಧುವಿನ ಮನೆಗೆ ದೇವೇಗೌಡರ ಕುಟುಂಬದವರು ಭೇಟಿ ನೀಡಿ ಹುಡುಗಿ ನೋಡುವ ಶಾಸ್ತ್ರವನ್ನು ಮುಗಿಸಿದ್ದರು. ದೇವೇಗೌಡರು, ಪತ್ನಿ ಚೆನ್ನಮ್ಮ, ಕುಮಾರಸ್ವಾಮಿ, ಅನಿತಾಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ದೇವೇಗೌಡರ ಪುತ್ರಿಯರಾದ ಅನುಸೂಯ, ಶೈಲಜಾ ವಧುವಿನ ಮನೆಗೆ ಭೇಟಿ ನೀಡಿ ಮದುವೆ ಮಾತುಕತೆ ಮುಗಿಸಿದ್ದರು.