Tag: ರೇಷನ್

  • ಜೂನ್ ಒಂದರೊಳಗೆ ದೇಶದ್ಯಾಂತ ಒನ್ ನೇಷನ್, ಒನ್ ರೇಷನ್ ಕಾರ್ಡ್

    ಜೂನ್ ಒಂದರೊಳಗೆ ದೇಶದ್ಯಾಂತ ಒನ್ ನೇಷನ್, ಒನ್ ರೇಷನ್ ಕಾರ್ಡ್

    ನವದೆಹಲಿ: ಜೂನ್ ಒಂದರೊಳಗೆ ದೇಶಾದ್ಯಂತ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.

    ಪಾಟ್ನಾದಲ್ಲಿ ಮಾತಾನಾಡಿದ ಅವರು, ಒಂದೇ ರೇಷನ್ ಕಾರ್ಡ್ ಮೂಲಕ ದೇಶದ ಬೇರೆ ಪ್ರದೇಶಗಳಲ್ಲಿ ಅದರ ಲಾಭ ಪಡೆಯಬಹುದು. ಹೊಸ ವರ್ಷದಿಂದ ದೇಶದ 12 ರಾಜ್ಯಗಳಲ್ಲಿ ಈ ಯೋಜನೆ ಪ್ರಾರಂಭವಾಗಿದೆ. ಈ 12 ರಾಜ್ಯಗಳಲ್ಲಿ ಒಂದೇ ರೇಷನ್ ಕಾರ್ಡ್ ಮೂಲಕ ಪಡಿತರ ಸೌಲಭ್ಯ ಪಡೆಯವ ಅವಕಾಶ ಮಾಡಿಕೊಟ್ಟಿದೆ. ಜೂನ್ ಒಂದರೊಳಗೆ ದೇಶದ್ಯಾಂತ ಇದನ್ನು ವಿಸ್ತರಿಸುತ್ತೇವೆ ಎಂದರು.

    ಈ ಸೌಲಭ್ಯದಡಿ ಸಾರ್ವಜನಿಕ ವಿತರಣಾ ಫಲಾನುಭವಿಗಳು ತಾವಿರುವ ಪ್ರದೇಶದಲ್ಲಿ ಪಡಿತರ ಪಡೆಯಬಹುದು. 2020 ಜೂನ್ 30 ರೊಳಗೆ ಒನ್ ನೇಷನ್, ಒನ್ ರೇಷನ್ ಕಾರ್ಡ್ ಕಡ್ಡಾಯವಾಗಿ ಅನುಷ್ಠಾನಕ್ಕೆ ಬರಲಿದೆ ಎಂದರು.

    ಒನ್ ನೇಷನ್ ಒನ್ ರೇಷನ್ ಕಾರ್ಡ್ ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಯೋಜನೆಯಾಗಿದ್ದು, ಒಂದೇ ರೇಷನ್ ಕಾರ್ಡ್ ಮೂಲಕ ದೇಶದ ಎಲ್ಲ ರಾಜ್ಯದಲ್ಲೂ ಪಡಿತರ ಪಡೆಯುವ ಅವಕಾಶ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

  • ನ್ಯಾಯಬೆಲೆ ಅಂಗಡಿಯಲ್ಲಿ ಅನ್ಯಾಯ – ಹೆಬ್ಬೆಟ್ಟು ಹಾಕಿಸಿಕೊಂಡು ರೇಷನ್ ನೀಡದ ವಿತರಕ

    ನ್ಯಾಯಬೆಲೆ ಅಂಗಡಿಯಲ್ಲಿ ಅನ್ಯಾಯ – ಹೆಬ್ಬೆಟ್ಟು ಹಾಕಿಸಿಕೊಂಡು ರೇಷನ್ ನೀಡದ ವಿತರಕ

    ಗದಗ: ಕಳೆದ ಮೂರು ತಿಂಗಳಿಂದ ರೇಷನ್ ನೀಡದೆ ಸತಾಯಿಸುತ್ತಿರುವ ನ್ಯಾಯಬೆಲೆ ಅಂಗಡಿ ವಿತರಕರ ವಿರುದ್ಧ ಫಲಾನುಭವಿಗಳು ಆಕ್ರೋಶಗೊಂಡಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.

    ಬೆಟಗೇರಿ ವಲಯದ ನ್ಯಾಯಬೆಲೆ ಅಂಗಡಿ ಸಂಖ್ಯೆ 24, 26 ಹಾಗೂ 27 ಈ ಮೂರು ಅಂಗಡಿಗಳು ಒಂದೇ ಗೊದಾಮಿನಲ್ಲಿವೆ. ಆದರೆ ಕಳೆದ ಮೂರು ತಿಂಗಳಿಂದ ಇಲ್ಲಿ ಯಾವೊಬ್ಬ ಫಲಾನುಭವಿಗಳಿಗೆ ರೇಷನ್ ನೀಡುತ್ತಿಲ್ಲ. ಈ ವಾರ ಮುಂದಿನ ವಾರ ಎಂದು ಮುಂದೂಡ್ತಾ ಮೂರು ತಿಂಗಳು ಮಾಡಿದ್ದಾರೆ ಎಂದು ಜನರು ವಿತರಕರ ಮೇಲೆ ಕಿಡಿಕಾರಿದ್ದಾರೆ.

    ಇದರಿಂದ ರೋಸಿಹೊದ ಸಾರ್ವಜನಿಕರು ರಾತ್ರಿಯಿಡಿ ಇಲ್ಲಿಯೇ ಉಳಿದು ವಿತರಕರು, ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಂಗಡಿ ಸಂಖ್ಯೆ 24 ರ ಗುತ್ತಿಗೆದಾರ ಎ.ಎ ದೇವರಡ್ಡಿ, 26ನೇ ಅಂಗಡಿ ಜನತಾ ಕಂಪನಿ ಸೊಸೈಟಿ ಹಾಗೂ 27ನೇ ಅಂಗಡಿ ಎಮ್.ಎಸ್ ರಕ್ಕಸಗಿ ಎಂಬ ಗುತ್ತಿಗೆದಾರರು ಅಕ್ಕಿ ವಿತರಣೆ ಮಾಡಬೇಕು. ಆದರೆ ಈ ಮೂವರ ಪಾಲಿನ ಪಡಿತರ ರೇಷನ್‍ನ್ನು ಗುರುಪಾದಯ್ಯ ಸ್ವಾಮಿ ಎಂಬುವರು ಹಂಚಿಕೆ ಮಾಡುತ್ತಾರೆ ಎಂದು ಆರೋಪ ಮಾಡಿದ್ದಾರೆ.

    ನ್ಯಾಯಬೆಲೆ ಅಂಗಡಿನಲ್ಲಿ ಅನ್ಯಾಯವೇ ಹೆಚ್ಚಾಗುತ್ತಿದೆ. ಸರಿಯಾಗಿ ಹಂಚಿಕೆ ಮಾಡದೇ ಫಲಾನುಭವಿಗಳನ್ನು ಪ್ರತಿ ತಿಂಗಳು ಯಾಮಾರಿಸ್ತಾರೆ. ಕಳೆದ ಮೂರು ತಿಂಗಳಿಂದ ಫಲಾನುಭವಿಗಳಿಂದ ಥಂಬ್ ಹಾಕಿಸಿಕೊಂಡು ರೇಷನ್ ನೀಡಿಲ್ಲ. ಜೊತೆಗೆ ಪ್ರತಿ ತಿಂಗಳು ಕೊಡಬೇಕಾದ ಅಕ್ಕಿ ಫಲಾನುಭವಿಗೆ ನೀಡದೆ, ಕಾಳಸಂತೆಯಲ್ಲಿ ಮಾರಾಟವಾಗುತ್ತೆ ಎಂಬ ಆರೋಪ ಕೇಳಿ ಬರುತ್ತಿದೆ.

  • ಇನ್ನು ಮುಂದೆ ರೇಷನ್ ಅಂಗಡಿಗಳಲ್ಲಿ ಕಾರ್ಡ್ ಉಜ್ಜಬಹುದು!

    ನವದೆಹಲಿ: ಇನ್ನು ಮುಂದೆ ನೀವು ರೇಷನ್ ಅಂಗಡಿಗಳಲ್ಲಿ ಕಾರ್ಡ್ ಉಜ್ಜಬಹುದು. ನ್ಯಾಯಬೆಲೆ ಅಂಗಡಿಗಳಲ್ಲಿ ಕ್ಯಾಶ್‍ಲೆಸ್ ವ್ಯವಹಾರ ನಡೆಸಲು ಪೂರಕ ವ್ಯವಸ್ಥೆಯನ್ನು ರೂಪಿಸುವಂತೆ ಎಲ್ಲ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗ್ರಾಹಕ ವ್ಯವಹಾರ ಸಚಿವಾಲಯ ಸೂಚಿಸಿದೆ.

    ಇಂಟರ್‍ನೆಟ್, ಟೆಲಿಕಾಂ ಸೌಲಭ್ಯಗಳನ್ನು ನೋಡಿಕೊಂಡು ಆರಂಭದಲ್ಲಿ ಮಹಾನಗರ, ನಗರ, ಜಿಲ್ಲಾ ಕೇಂದ್ರಗಳು, ಪುರಸಭೆ ಮತ್ತು ಇತರೇ ನಗರಗಳಲ್ಲಿ ಹಂತ ಹಂತವಾಗಿ ಕ್ಯಾಶ್ ಲೆಸ್ ವ್ಯವಹಾರವನ್ನು ಕಾರ್ಯರೂಪಕ್ಕೆ ತನ್ನಿ ಎಂದು ಹೇಳಿದೆ.

    ಜನವರಿ 19 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ‘ಪಿಡಿಎಸ್ ರಿಫಾರ್ಮ್ಸ್ ಮತ್ತು ಕ್ಯಾಶ್ ಲೆಸ್ ವ್ಯವಹಾರ’ ವಿಷಯದ ಮೇಲೆ ರಾಷ್ಟ್ರ ಮಟ್ಟದ ಸಮ್ಮೇಳನ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲ ರಾಜ್ಯಗಳಿಗೆ ಮಾಹಿತಿ ನೀಡಲಾಗಿದೆ. ಅಷ್ಟೇ ಅಲ್ಲದೇ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಆಹಾರ ಕಾರ್ಯದರ್ಶಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಕ್ಯಾಶ್‍ಲೆಸ್ ವ್ಯವಹಾರ ಅಳವಡಿಕೆಯ ಬಗ್ಗೆ ವಿವರಣೆ ನೀಡಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.