Tag: ರೈತ ಆತ್ಮಹತ್ಯೆ

  • ವಕ್ಫ್ ವಿವಾದಕ್ಕೆ ಬೇಸತ್ತು ಯುವ ರೈತ ಆತ್ಮಹತ್ಯೆ!

    ವಕ್ಫ್ ವಿವಾದಕ್ಕೆ ಬೇಸತ್ತು ಯುವ ರೈತ ಆತ್ಮಹತ್ಯೆ!

    – ಜೆಪಿಸಿ ಮುಂದೆ ನ್ಯಾಯಕ್ಕಾಗಿ ಮನವಿ

    ಹಾವೇರಿ: ವಕ್ಫ್ ಬೋರ್ಡ್ (Waqf Board) ಆಸ್ತಿ ಕಿರಿಕಿರಿಗೆ ಬೇಸತ್ತು ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆಯ ಹರನಗಿ ಗ್ರಾಮದಲ್ಲಿ ನಡೆದಿದೆ.

    ಹರನಗಿ ಗ್ರಾಮದ ನಿವಾಸಿ ರುದ್ರಪ್ಪ 2022ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು (ನ.7) ಕೇಂದ್ರ ಸಂಸದೀಯ ಜಂಟಿ ಕಮಿಟಿಯ (Joint Parliamentary Committee) ಮುಂದೆ ಹಾವೇರಿ ರೈತರು ಪ್ರಸ್ತಾಪಿಸಿದ ಬಳಿಕ ಈ ವಿಚಾರ ಈಗ ಮುನ್ನೆಲೆಗೆ ಬಂದಿದೆ. ಇದನ್ನೂ ಓದಿ: ಜೆಪಿಸಿ ಸಮಿತಿಯಿಂದ ಭರವಸೆ – ಯತ್ನಾಳ್, ಕರಂದ್ಲಾಜೆ ಅಹೋರಾತ್ರಿ ಪ್ರತಿಭಟನೆ ಅಂತ್ಯ

    ರುದ್ರಪ್ಪ ಅವರ ತಂದೆ ಚೆನ್ನಪ್ಪ ಹಾನಗಲ್ ತಾಲ್ಲೂಕಿನ ಅಲ್ಲಾಪುರ ಗ್ರಾಮದಲ್ಲಿ 1964ರಲ್ಲಿ 4 ಎಕರೆ 36 ಗುಂಟೆ ಜಮೀನು ಖರೀದಿ ಮಾಡಿದ್ದರು. 2015 ರವರೆಗೆ ಚೆನ್ನಪ್ಪ ಮತ್ತು ಮಗ ರುದ್ರಪ್ಪ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಆದರೆ 2015ರಲ್ಲಿ ಏಕಾಏಕಿ ಜಮೀನು ವಕ್ಫ್ ಬೋರ್ಡ್ಗೆ ಸೇರ್ಪಡೆಯಾಗಿದೆ.

    ಯಾವುದೇ ನೋಟಿಸ್ ನೀಡದೇ ರೈತರಿಂದ ಜಮೀನನ್ನು ವಕ್ಫ್ ಬೋರ್ಡ್ ವಶಪಡಿಸಿಕೊಂಡಿದೆ. ಈ ಬಗ್ಗೆ ಸಾಕಷ್ಟು ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಚೆನ್ನಪ್ಪ , ಮಗ ರುದ್ರಪ್ಪ ಕಂಗಾಲಾಗಿದ್ದರು. ಇರುವ ಜಮೀನು ಕಳೆದುಕೊಂಡು ಮಾನಸಿಕ ನೋವಿನಿಂದ ಚೆನ್ನಪ್ಪನ ಮಗ ರುದ್ರಪ್ಪ 2022ರ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

    ಜೆಪಿಸಿ ಸಮಿತಿಯ ಅಧ್ಯಕ್ಷ ಜಗದಾಂಬಿಕ ಪಾಲ್ (Jagdambika Pal) ಭೇಟಿ ನೀಡಿದ ಸಂದರ್ಭದಲ್ಲಿ ಮೃತ ರುದ್ರಪ್ಪನ ಕುಟುಂಬಸ್ಥರು ಹಾಗೂ ಸ್ನೇಹಿತರು ಎಲ್ಲ ವಿಚಾರವನ್ನು ವಿವರವಾಗಿ ತಿಳಿಸಿದ್ದಾರೆ.ಇದನ್ನೂ ಓದಿ: ಮಾಸ್ ಆಗಿ ಎಂಟ್ರಿ ಕೊಟ್ಟ ಕಮಲ್ ಹಾಸನ್- ‘ಥಗ್ ಲೈಫ್’ ಚಿತ್ರದ ಟೀಸರ್ ಔಟ್

  • ಸಾಲ ಬಾಧೆ ತಾಳಲಾರದೇ ವಿಷಸೇವಿಸಿ ರೈತ ಆತ್ಮಹತ್ಯೆ

    ಸಾಲ ಬಾಧೆ ತಾಳಲಾರದೇ ವಿಷಸೇವಿಸಿ ರೈತ ಆತ್ಮಹತ್ಯೆ

    ಹಾವೇರಿ: ಸಾಲ ಬಾಧೆ ತಾಳಲಾರದೆ ರೈತರೊಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ರಾಣೆಬೆನ್ನೂರು ತಾಲೂಕಿನ ಚೆನ್ನಾಪುರ ತಾಂಡಾದಲ್ಲಿ ನಡೆದಿದೆ.

    ಲೋಕಪ್ಪ ಲಮಾಣಿ (52) ಮೃತ ರೈತ. ಲೋಕಪ್ಪ 6 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್ ಮತ್ತು ಕೈಸಾಲ ಅಂತಾ ಏಳೂವರೆ ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದರು. ಈರುಳ್ಳಿ, ಮೆಕ್ಕೆಜೋಳ, ಮತ್ತು ಶೇಂಗಾ ಬೆಳೆಗಳು ಪದೆ ಪದೆ ಮಳೆಯಿಂದ ಹಾನಿಯಾಗಿದ್ದಕ್ಕೆ ಬೇಸತ್ತು ಮನೆಯಲ್ಲೇ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂವರು ಗಂಡು ಮತ್ತು ಒಂದು ಹೆಣ್ಣು ಸೇರಿದಂತೆ ನಾಲ್ಕು ಮಕ್ಕಳನ್ನ ಹೊಂದಿದ್ದ ಅವರು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಈ ಕುರಿತು ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

  • ಕೇಂದ್ರ ಸರ್ಕಾರಕ್ಕೆ ಬಹುಮತ ಇದ್ರೆ ಸಾಲದು, ಜನರ ಸಹಮತವೂ ಬೇಕು: ಟಿ.ಎ.ಶರವಣ

    ಕೇಂದ್ರ ಸರ್ಕಾರಕ್ಕೆ ಬಹುಮತ ಇದ್ರೆ ಸಾಲದು, ಜನರ ಸಹಮತವೂ ಬೇಕು: ಟಿ.ಎ.ಶರವಣ

    – ಜೆಡಿಎಸ್‍ನಿಂದ 1 ಲಕ್ಷ ರೂ. ಪರಿಹಾರ ನೀಡಿದ್ದೇವೆ

    ರಾಯಚೂರು: ಅಕಾಲಿಕ ಮಳೆಯಿಂದಾಗಿ ರೈತರು ಕಂಗಾಲಾಗಿ ಹೋಗಿದ್ದಾರೆ. ರೈತರು ಮನವಿ ಮಾಡಿದ್ರೂ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಸರಿಯಲ್ಲ. ಸರ್ಕಾರಕ್ಕೆ ಬಹುಮತ ಇದ್ರೆ ಸಾಲದು, ಜನರ ಸಹಮತವೂ ಇರಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಹೇಳಿದರು.

    ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಎಲ್ಲ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷಗಳು ಬಲಿಷ್ಠವಾಗಿವೆ. ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ ಜೆಡಿಎಸ್ ಬಲಿಷ್ಠವಾಗುತ್ತಿದೆ. ಜನತಾ ಸರ್ಕಾರ ಜಾರಿಗೆ ತರಲು ಜೆಡಿಎಸ್ ಮಿಷನ್ 123 ನಡೆಸಿದ್ದೇವೆ. ಯಾವ ಸರ್ಕಾರವೂ ನೀಡದೇ ಇರುವ ಜನಪ್ರಿಯ ಕಾರ್ಯಕ್ರಮವನ್ನು ಕೊಡಲು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ. 26 ಸಾವಿರ ಕೋಟಿ ಸಾಲ ಮನ್ನಾ ಮಾಡಿದ ಕೀರ್ತಿ ಕುಮಾರಸ್ವಾಮಿ ಅವರಿಗೆ ದಕ್ಕುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ:  ಬಕಾಸುರರ ರೀತಿ ನುಂಗೋದು ಅಭಿವೃದ್ಧಿಯಾ?: ಹೆಚ್‍ಡಿಕೆ ತಿರುಗೇಟು

    ಜಿಲ್ಲೆಯ ಲಿಂಗಸುಗೂರಿನ ಬೋಗಪುರ ಗ್ರಾಮದಲ್ಲಿ ರೈತ ಆತ್ಮಹತ್ಯೆ ಪ್ರಕರಣ ಕುರಿತು ಮಾತನಾಡಿದ ಅವರು, ಜಿಲ್ಲಾಡಳಿತ ರೈತರ ವಿಚಾರದಲ್ಲಿ ವಿಫಲವಾಗಿದೆ. ಮೊದಲೇ ಕೊರೊನಾ ಮತ್ತು ಮಳೆಯಿಂದಾಗಿ ರೈತರು ಕಂಗಾಲಾಗಿದ್ದಾರೆ. ಅಧಿಕಾರಿಗಳ ಹಾಗೂ ಸಚಿವರ ತಂಡ ರಚನೆ ಆಗಬೇಕು. ಬೆಳೆಹಾನಿಯಾದ ರೈತರಿಗೆ ಸ್ಥಳದಲ್ಲೇ ಪರಿಹಾರ ನೀಡಬೇಕು. ಆದರೆ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.

    ಕೂಡಲೇ ಸರ್ಕಾರ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು. ಮೃತ ರೈತನ ಕುಟುಂಬದ ಓರ್ವ ಸದಸ್ಯನಿಗೆ ಸರ್ಕಾರಿ ಕೆಲಸ ಕೊಡಿಸಬೇಕು. ಜೆಡಿಎಸ್ ವತಿಯಿಂದ ಮೃತ ರೈತ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಅಭಿನವ ಶ್ರೀ ನಮಗೆ ಧೈರ್ಯ ತುಂಬಿ ಸನ್ಮಾರ್ಗದಲ್ಲಿ ಮುನ್ನಡೆಸುವ ಮಾರ್ಗದರ್ಶಕರಾಗಿದ್ದರು: ಸಿಸಿ ಪಾಟೀಲ್

  • ಕತ್ತೆ ಕಾಯಲು ಹೋಗಿದ್ರಾ..?- ಅಧಿಕಾರಿಗಳಿಗೆ ಬಿಎಸ್‍ವೈ ತರಾಟೆ

    ಕತ್ತೆ ಕಾಯಲು ಹೋಗಿದ್ರಾ..?- ಅಧಿಕಾರಿಗಳಿಗೆ ಬಿಎಸ್‍ವೈ ತರಾಟೆ

    ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

    ಚಳ್ಳಕೆರೆ ತಾಲೂಕಿನ ದೊಡ್ಡಚೆಲ್ಲೂರು ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡು 20 ದಿನ ಕಳೆದರೂ ಅಧಿಕಾರಿಗಳು ಭೇಟಿ ನೀಡಿಲ್ಲ. ಅಲ್ಲಿನ ತಹಶೀಲ್ದಾರ್ ಕತ್ತೆ ಕಾಯಲು ಹೋಗಿದ್ದಾರಾ? ನಿಮ್ಮ ಮನೆಯಲ್ಲಿ ಇಂತಹ ಘಟನೆ ನಡೆದಿದ್ದರೆ ಸುಮ್ಮನೆ ಇರುತ್ತಿದ್ರಾ..? ಏನ್ ನಿಮ್ಮ ತಲೆ ಮಾಹಿತಿ ಸಂಗ್ರಹ ಮಾಡುವುದು. ರೈತ ಆತ್ಮಹತ್ಯೆ ಮಾಡಿಕೊಂಡ 24 ಗಂಟೆಯ ಒಳಗಾಗಿ ನೀವು ಭೇಟಿ ನೀಡಬೇಕಿತ್ತು. ಕುಟುಂಬಸ್ಥರಿಗೆ ಧೈರ್ಯ ಹೇಳಬೇಕಿತ್ತು. ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರೆ ನೀವು ತಮಾಷೆ ನೋಡುತ್ತಾ ಕುಳಿತುಕೊಳ್ಳುತ್ತೀರಾ ಎಂದು ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡರು.

    ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಏನು ಕ್ರಮ ಕೈಗೊಂಡಿದ್ದಾರೆ. ನೀವು ಹೇಗೆ ಮಾಹಿತಿ ಪಡೆದಿದ್ದೀರಿ ಅಂತ ನನಗೆ ಗೊತ್ತಿಲ್ಲ. ಆದಷ್ಟು ಬೇಗ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಸ್ಥರಿಗೆ ಪರಿಹಾರ ಸಿಗುವ ವ್ಯವಸ್ಥೆ ಮಾಡಿ ಎಂದ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಶೇ 100 ರಷ್ಟು ಬೆಳೆನಾಶವಾಗಿದೆ. ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡುವಲ್ಲಿ ವಿಫಲವಾಗಿರುವಿರಿ. ನರೇಗಾ ಯೋಜನೆ ಅವ್ಯವಹಾರದ ಬಗ್ಗೆ ಎಚ್ಚರ ವಹಿಸಿ ಎಂದು ಇದೇ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೇಷ್ಮೆಗೆ ಬೆಂಬಲ ಬೆಲೆ ಬಗ್ಗೆ ಎಚ್‍ಡಿಕೆ ಚರ್ಚೆಯ ಬೆನ್ನಲ್ಲೇ ರೈತ ಆತ್ಮಹತ್ಯೆ!

    ರೇಷ್ಮೆಗೆ ಬೆಂಬಲ ಬೆಲೆ ಬಗ್ಗೆ ಎಚ್‍ಡಿಕೆ ಚರ್ಚೆಯ ಬೆನ್ನಲ್ಲೇ ರೈತ ಆತ್ಮಹತ್ಯೆ!

    ರಾಮನಗರ: ರೇಷ್ಮೆ ಬೆಳೆ ಬೆಲೆ ಕುಸಿತ ಹಿನ್ನೆಲೆಯಲ್ಲಿ ರೈತನೋರ್ವ ಕ್ರಿಮಿನಾಶಕ ಸೇವಿಸಿ, ನೇಣುಬಿಗಿದುಕೊಂಡು ಸಾವನ್ನಪ್ಪಿದ ಘಟನೆ ರಾಮನಗರ ತಾಲೂಕಿನ ಕಟಮಾನದೊಡ್ಡಿ ಗ್ರಾಮದಲ್ಲಿ ನಡೆದಿದೆ.

    ಕಟುಮಾನದೊಡ್ಡಿಯ ನಿವಾಸಿ ರೇಷ್ಮೆ ಬೆಳೆಗಾರ ಕೆಂಪಯ್ಯ ಮೃತ ದುರ್ದೈವಿ. ವಿವಿಧ ಬ್ಯಾಂಕ್ ಗಳಲ್ಲಿ 5 ಲಕ್ಷ ಸಾಲ ಮಾಡಿಕೊಂಡಿದ್ದ ಕೆಂಪಯ್ಯ ರೇಷ್ಮೆ ಬೆಳೆ ಬೆಳೆಯುತ್ತಿದ್ದರು. ಸೋಮವಾರ ರೇಷ್ಮೆ ಬೆಳೆಯ ಬೆಂಬಲ ಬೆಲೆಯ ಬಗ್ಗೆ ರಾಮನಗರದಲ್ಲಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸಭೆ ನಡೆಸಿ ಚರ್ಚೆ ನಡೆಸಲಾಗಿತ್ತು. ಇಂದು ಮತ್ತೆ ಬೆಂಗಳೂರಿನಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಹಾಗೂ ರೈತರ ಜೊತೆ ಚರ್ಚೆ ನಡೆಸಲು ಮುಂದಾಗಿರುವ ಬೆನ್ನಲ್ಲೇ ರೈತ ಸಾವನ್ನಪ್ಪಿದ್ದಾರೆ.

    ಮೃತ ರೈತ ಕೆಂಪಯ್ಯ ನಿನ್ನೆ ತನ್ನ ಪತ್ನಿಯ ಬಳಿ ರೇಷ್ಮೆಗೂಡಿನ ಬೆಲೆ ಹೆಚ್ಚಳವಾಗುತ್ತೆ ಎಂದು ಹೇಳಿದ್ದರು. ಆದ್ರೆ ಬೆಲೆ ಹೆಚ್ಚಳ, ಬೆಂಬಲ ಬೆಲೆ ಯಾವುದು ಆಗಿರಲಿಲ್ಲ. 125 ಮೊಟ್ಟೆಯ ರೇಷ್ಮೆ ಬೆಳೆ ಬೆಳೆದಿರುವ ಮೃತ ಕೆಂಪಯ್ಯ ಇಂದು ರೇಷ್ಮೆಹುಳುಗಳನ್ನು ಚಂದ್ರಿಕೆಗೆ ಬಿಟ್ಟು ಗೂಡು ಮಾಡಿ ಮಾರಾಟಕ್ಕೆ ಮುಂದಾಗಬೇಕಿತ್ತು. ಆದ್ರೆ ರೇಷ್ಮೆ ಬೆಳೆಗೆ ಬೆಲೆ ನಿಗದಿ, ಬೆಂಬಲ ಬೆಲೆ ಘೋಷಣೆಯಾಗದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.