Tag: ರೈತ ಸಂಘಟನೆ

  • ರೈತರನ್ನು ಹಿಮ್ಮೆಟ್ಟಿಸಲು ʻಶಬ್ದಾಸ್ತ್ರʼ ಪ್ರಯೋಗ – ಇದು ಹೇಗೆ ಕೆಲಸ ಮಾಡುತ್ತೆ?

    ರೈತರನ್ನು ಹಿಮ್ಮೆಟ್ಟಿಸಲು ʻಶಬ್ದಾಸ್ತ್ರʼ ಪ್ರಯೋಗ – ಇದು ಹೇಗೆ ಕೆಲಸ ಮಾಡುತ್ತೆ?

    – ಇಂದು ರೈತರೊಂದಿಗೆ ಕೇಂದ್ರ ಸರ್ಕಾರ ಸಭೆ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಪ್ರವೇಶಿಸಲು ಪಟ್ಟುಹಿಡಿದು ಪ್ರತಿಭಟಿಸುತ್ತಿರುವ ರೈತರನ್ನು (Farmers) ಹಿಮ್ಮೆಟ್ಟಿಸಲು, ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ. ಬ್ಯಾರಿಕೇಡ್, ಮುಳ್ಳಿನ ತಂತಿ, ಜಲಫಿರಂಗಿ, ಅಶ್ರುವಾಯು, ಕಾಂಕ್ರೀಟ್‌ ಬ್ಯಾರಿಕೇಡ್‌ ಎಲ್ಲಾ ರೀತಿಯ ಅಸ್ತ್ರವನ್ನೂ ಪ್ರಯೋಗಿಸಿದ್ದಾರೆ. ಆದ್ರೆ ಇದ್ಯಾವುದಕ್ಕೂ ಜಗ್ಗದ ಪ್ರತಿಭಟನಾಕಾರರನ್ನ ಹಿಮ್ಮೆಟ್ಟಿಸಲು ʻಶಬ್ದಾಸ್ತ್ರʼ (Sonic Weapons) ಬಳಕೆಗೆ ಪೊಲೀಸರು ಮುಂದಾಗಿದ್ದಾರೆ.

    ಹರಿಯಾಣದ ಶಂಭು ಗಡಿಯಲ್ಲೇ ರೈತರನ್ನು ತಡೆದು ನಿಲ್ಲಿಸಲು, ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಆದ್ರೆ ಭದ್ರತೆಯನ್ನು ಭೇದಿಸಲು ರೈತರು ಮುಂದಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಲಾಂಗ್‌ ರೇಂಜ್‌ ಅಕೌಸ್ಟಿಕ್‌ ಡಿವೈಸ್‌ (LRADS) ಶಬ್ಧಸ್ತ್ರ ಬಳಸಿ ರೈತರನ್ನು ಹಿಮ್ಮೆಟ್ಟಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ದೆಹಲಿ ಚಲೋ ಪ್ರತಿಭಟನೆ ನಿಗ್ರಹಕ್ಕೆ ಯತ್ನ – ಪೊಲೀಸರ ವರ್ತನೆ ಖಂಡಿಸಿ ಶುಕ್ರವಾರ ದೇಶಾದ್ಯಂತ ರಸ್ತೆ ತಡೆ

    ಏನಿದು ಶಬ್ದಾಸ್ತ್ರ?
    ಅಮೆರಿಕದ ಮಿಲಿಟರಿ ಪಡೆಗಳು 2000ನೇ ವರ್ಷದ ಆರಂಭದಲ್ಲೇ ಈ ಸಾಧನಗಳನ್ನು ಅಭಿವೃದ್ಧಿ ಪಡಿಸಿವೆ. ವಿವಿಧ ಸಂದರ್ಭಗಳಲ್ಲಿ ಜನಸಮೂಹವನ್ನು ನಿಯಂತ್ರಿಸುವುದು ಮಾತ್ರವಲ್ಲದೇ, ಮೈಕ್ರೋಫೋನ್ ರೀತಿಯಲ್ಲಿ, ರಕ್ಷಣಾ ಸಂದರ್ಭಗಳಲ್ಲೂ ವಿವಿಧೋದ್ದೇಶಗಳಿಗಾಗಿ ಇವುಗಳನ್ನು ಬಳಕೆ ಮಾಡಲಾಗುತ್ತಿದೆ. ಇವುಗಳ ಬೆಲೆ 30 ಲಕ್ಷ ರೂ.ಗಳಷ್ಟಿದೆ. 2013ರಲ್ಲಿ ಇಂಥ 5 LRADS ಗಳನ್ನು ದೆಹಲಿ ಪೊಲೀಸ್ ಇಲಾಖೆ ಖರೀದಿಸಿದೆ. ಈಗ ಪ್ರತಿಭಟನಾಕಾರರನ್ನ ಚದುರಿಸಲು ಅವುಗಳನ್ನು ಬಳಕೆ ಮಾಡುತ್ತಿದೆ. 130 ಡೆಸಿಬಲ್‌ನಷ್ಟು ಜೋರಾಗಿ ಶಬ್ದವನ್ನು ಇದರಿಂದ ಹೊರಡಿಸಲಾಗುತ್ತದೆ. ಇದು ಅತ್ಯಂತ ಕರ್ಕಶವೆನಿಸುತ್ತದೆ. ಇದನ್ನು ಸಾನಿಕ್‌ ಅಸ್ತ್ರವೆಂದೂ ಕರೆಯುತ್ತಾರೆ.

    ಸಾನಿಕ್‌ ಅಸ್ತ್ರವಷ್ಟೇ ಅಲ್ಲದೇ, ಗುಂಪು ಚದುರಿಸುವುದಕ್ಕಾಗಿ ಪೊಲೀಸರು ಗುಂಡು ಹಾರಿಸುವುದನ್ನೂ ಅಭ್ಯಾಸ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ – ನಾಮಪತ್ರ ಪ್ರಕ್ರಿಯೆ ಪೂರ್ಣಗೊಳಿಸಿದ ಕಾಂಗ್ರೆಸ್ ವರಿಷ್ಠೆ

    ಇಂದು ಕೇಂದ್ರ ಸರ್ಕಾರ ಸಭೆ:
    ಕೇಂದ್ರ ಸರ್ಕಾರವು ಗುರುವಾರ ಚಂಡೀಗಢದಲ್ಲಿ ರೈತರೊಂದಿಗೆ ಸಭೆ ನಡೆಸಲಿದೆ. ಅಲ್ಲಿಯವರೆಗೂ ರೈತರು ಶಾಂತ ರೀತಿಯಲ್ಲಿ ಇರಲಿದ್ದಾರೆ ಎಂದು ರೈತಮುಖಂಡರೊಬ್ಬರು ತಿಳಿಸಿದ್ದಾರೆ.

  • ಇಂದು ರೈತರಿಂದ ʻದೆಹಲಿ ಚಲೋʼ – ಗಡಿಯಲ್ಲಿ 5,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

    ಇಂದು ರೈತರಿಂದ ʻದೆಹಲಿ ಚಲೋʼ – ಗಡಿಯಲ್ಲಿ 5,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

    – ಬ್ಯಾರಿಕೇಡ್‌, ತಂತಿಗಳಿಂದ ಗಡಿಭಾಗಗಳು ಬಂದ್‌, ಸೆಕ್ಷನ್‌ 144 ಜಾರಿ

    ನವದೆಹಲಿ: ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿಯಾಗಬೇಕು, ಸ್ವಾಮಿನಾಥನ್ ವರದಿ ಜಾರಿಯಾಗಬೇಕು, ರೈತರಿಗೆ ಪಿಂಚಣಿ ಸೌಲಭ್ಯ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ರೈತರು (Farmers) ದೆಹಲಿಯಲ್ಲಿ ಮತ್ತೊಮ್ಮೆ ಐತಿಹಾಸಿಕ ಪ್ರತಿಭಟನೆ ನಡೆಸಲು ತಿರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ.13 (ಇಂದು) ʻದೆಹಲಿ ಚಲೋʼಗೆ (Delhi Chalo) ಪಂಜಾಬ್‌ ಮತ್ತು ಹರಿಯಾಣ ರೈತರು ʻದೆಹಲಿ ಚಲೋʼಗೆ ಕರೆ ನೀಡಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

    ಪಂಜಾಬ್, ಹರಿಯಾಣ, ಉತ್ತರಪ್ರದೇಶದಿಂದಲೂ ರೈತರು ದೆಹಲಿಗೆ ಪ್ರವೇಶಿಸಲಿದ್ದಾರೆ. ಕರ್ನಾಟಕದಿಂದಲೂ ರೈತ ಮುಖಂಡ ಕುರುಬೂರು ಶಾಂತಕುಮಾರ್ ಭಾಗಿಯಾಗಲಿದ್ದಾರೆ. ಈ ರೈತ ಹೋರಾಟದಲ್ಲಿ ಸುಮಾರು 200 ಸಂಘಟನೆಗಳಿಂದ 25,000 ರೈತರು ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಇದನ್ನೂ ಓದಿ: 1,078 ತಂಡಗಳು, 16,100 ಆಟಗಾರರು – ಮೋದಿ ತವರಲ್ಲಿ ʻಲೋಕಸಭಾ ಪ್ರೀಮಿಯರ್‌ ಲೀಗ್‌ʼಗೆ ಚಾಲನೆ

    ಅಧಿಕ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳುವುದರಿಂದ ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಪೊಲೀಸರು (Delhi Police) ಸೆಕ್ಷನ್‌ 144 ಜಾರಿಗೊಳಿಸಿದ್ದಾರೆ. ಜೊತೆಗೆ ರಾಜಧಾನಿಯಲ್ಲಿ ಎಲ್ಲಾ ರೀತಿಯ ರ‍್ಯಾಲಿ, ಮೆರವಣಿಗೆ, ರಸ್ತೆ ಮಾರ್ಗಗಳನ್ನ ನಿರ್ಬಂಧಿಸಲಾಗಿದೆ. ಟ್ಯಾಕ್ಟರ್‌ಗಳಲ್ಲಿ ಜನರನ್ನು ತುಂಬಿಕೊಂಡು ಹೋಗುವುದಕ್ಕೂ ನಿಷೇಧ ಹೇರಲಾಗಿದೆ. ಮಾರ್ಚ್‌ 12ರ ವರೆಗೂ ಈ ಕ್ರಮ ಇದೇ ರೀತಿ ಮುಂದುವರಿಯಲಿದೆ. ಸಿಂಘು, ಘಾಜಿಪುರ, ಟಿಕ್ರಿ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಭಾರೀ ಭದ್ರತೆ:
    ಪ್ರತಿಭಟನೆ ತಡೆಯಲು ಭದ್ರತೆಗೆ 11 ಪ್ಯಾರಾ ಮಿಲಿಟರಿ ತುಕಡಿಗಳನ್ನ ನಿಯೋಜನೆ ಮಾಡಲಾಗಿದೆ. 5,000ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿದೆ. ಇದರೊಂದಿಗೆ ತಂತಿಗಳಿಂದ ಹಾಗೂ ಬ್ಯಾರಿಕೇಡ್‌ಗಳಿಂದ ಗಡಿ ರಸ್ತೆಗಳನ್ನ ಬಂದ್‌ ಮಾಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಮಾಜಿ ಸಿಎಂ ಅಶೋಕ್ ಚವಾಣ್ ಗುಡ್ ಬೈ- ಲೋಕಸಭೆ ಹೊಸ್ತಿಲಲ್ಲಿ ಮಹಾರಾಷ್ಟ್ರದಲ್ಲಿ ಕೈಗೆ ಹಿನ್ನಡೆ

    ರೈತರೊಂದಿಗೆ ಅಮಾನವೀಯ ವರ್ತನೆ ಆರೋಪ:
    ಇನ್ನೂ ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ಆಗಮಿಸುತ್ತಿದ್ದ ರೈತರು, ರೈತ ಮಹಿಳೆಯರ ಮೇಲೆ ಮಧ್ಯಪ್ರದೇಶದ ಪೊಲೀಸರು ಬಲವಂತವಾಗಿ ಬೆದರಿಸಿ ದಬ್ಬಾಳಿಕೆ ನಡೆಸಿದ್ದಾರೆ. ಮಹಿಳೆಯರನ್ನು ಎಳೆದಾಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ರೈತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನೂ ಕೊಡಿಸದೇ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ. ಇದನ್ನೂ ಓದಿ: ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – ಐದು ಮಂದಿ ಸಜೀವ ದಹನ

    ಅಲ್ಲದೇ ಪ್ರತಿಭಟನೆಗೆ ತೆರಳುತ್ತಿದ್ದ ಬೆಳಗಾವಿ ಜಿಲ್ಲೆಯ ಗುರುಸಿದ್ದಪ್ಪ, ಧಾರವಾಡ ಜಿಲ್ಲೆಯ ಪರಶುರಾಮ್, ಚಾಮರಾಜನಗರ ಜಿಲ್ಲೆಯ ಪಟೇಲ್ ಶಿವಮೂರ್ತಿ, ಮೂಕಳ್ಳಿ ಮಾದೇವಸ್ವಾಮಿ, ಹಾಸನ ಜಿಲ್ಲೆಯ ಧರ್ಮರಾಜ್, ಮೈಸೂರು ಜಿಲ್ಲೆಯ ಬರಡನಪುರ ನಾಗರಾಜ್, ಮಹೇಶ್, ಉಡಿಗಾಲ ರೇವಣ್ಣ, ಕುರುಬೂರು ಸಿದ್ದೇಶ್, ಗುರುಸ್ವಾಮಿ, ಗೌರಿಶಂಕರ್,ಕಮಲಮ್ಮ, ಪ್ರೇಮ, ಮಮತಾ, ಶ್ವೇತಾ, ನಾಗವೇಣಿ, ಪ್ರದೀಪ್ ಕುರುಬೂರು,. ಮಂಜೇಶ್ ಸೇರಿ ನೂರಕ್ಕೂ ಅಧಿಕ ರೈತರನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಶಾಂತಕುಮಾರ್‌ ದೂರಿದ್ದಾರೆ.

  • ʻದೆಹಲಿ ಚಲೋʼ ಪ್ರತಿಭಟಗೆ ತೆರಳುತ್ತಿದ್ದ ರಾಜ್ಯದ 100ಕ್ಕೂ ಹೆಚ್ಚು ರೈತರು ಪೊಲೀಸ್‌ ವಶಕ್ಕೆ

    ʻದೆಹಲಿ ಚಲೋʼ ಪ್ರತಿಭಟಗೆ ತೆರಳುತ್ತಿದ್ದ ರಾಜ್ಯದ 100ಕ್ಕೂ ಹೆಚ್ಚು ರೈತರು ಪೊಲೀಸ್‌ ವಶಕ್ಕೆ

    ನವದೆಹಲಿ: ಬೆಂಬಲ ಬೆಲೆ ಖಾತ್ರಿಪಡಿಸುವ ಕಾನೂನು ಜಾರಿಯಾಗಬೇಕು, ಸ್ವಾಮಿನಾಥನ್ ವರದಿ ಜಾರಿಯಾಗಬೇಕು, ರೈತರಿಗೆ ಪಿಂಚಣಿ ಸೌಲಭ್ಯ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ರೈತರು ದೆಹಲಿಯಲ್ಲಿ ಮತ್ತೊಮ್ಮೆ ಐತಿಹಾಸಿಕ ಪ್ರತಿಭಟನೆ (Delhi Protest) ನಡೆಸಲು ತಿರ್ಮಾನಿಸಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಲು ಕರ್ನಾಟಕದಿಂದ ಆಗಮಿಸುತ್ತಿದ್ದ ರೈತರನ್ನು ಮಧ್ಯಪ್ರದೇಶದ ಭೂಪಾಲ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ‌.

    ರೈತರೊಂದಿಗೆ ಅಮಾನವೀಯ ವರ್ತನೆ:
    ದೆಹಲಿಗೆ ಆಗಮಿಸುವ ವೇಳೆ ಭೂಪಾಲ್ ರೈಲ್ವೆ ನಿಲ್ದಾಣದಲ್ಲಿ ಮಧ್ಯರಾತ್ರಿ ಎರಡು ಗಂಟೆ ಸಮಯದಲ್ಲಿ ರೈಲಿನ ಒಳಗೆ ನುಗ್ಗಿದ ಪೊಲೀಸರು ಬಲವಂತವಾಗಿ ಬೆದರಿಸಿ ದಬ್ಬಾಳಿಕೆ ನಡೆಸಿ, ಮಹಿಳೆಯರನ್ನೂ ಸೇರಿ ರೈತರನ್ನು (Farmers) ರೈಲಿನ ಒಳಗೆ ಎಳೆದಾಡಲಾಗಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನೂ ಕೊಡಿಸದೇ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ‌. ಇದನ್ನೂ ಓದಿ: 200 ಸಂಘಟನೆಗಳು, 20,000 ರೈತರಿಂದ ನಾಳೆ `ದೆಹಲಿ ಚಲೋ’ – ದೆಹಲಿ ಗಡಿ ಬಂದ್!

    ಬೆಳಗಾವಿ (Belagavi) ಜಿಲ್ಲೆಯ ಗುರುಸಿದ್ದಪ್ಪ, ಧಾರವಾಡ ಜಿಲ್ಲೆಯ ಪರಶುರಾಮ್, ಚಾಮರಾಜನಗರ ಜಿಲ್ಲೆಯ ಪಟೇಲ್ ಶಿವಮೂರ್ತಿ, ಮೂಕಳ್ಳಿ ಮಾದೇವಸ್ವಾಮಿ, ಹಾಸನ ಜಿಲ್ಲೆಯ ಧರ್ಮರಾಜ್, ಮೈಸೂರು ಜಿಲ್ಲೆಯ ಬರಡನಪುರ ನಾಗರಾಜ್, ಮಹೇಶ್, ಉಡಿಗಾಲ ರೇವಣ್ಣ, ಕುರುಬೂರು ಸಿದ್ದೇಶ್, ಗುರುಸ್ವಾಮಿ, ಗೌರಿಶಂಕರ್,ಕಮಲಮ್ಮ, ಪ್ರೇಮ, ಮಮತಾ, ಶ್ವೇತಾ, ನಾಗವೇಣಿ, ಪ್ರದೀಪ್ ಕುರುಬೂರು,. ಮಂಜೇಶ್ ಸೇರಿ ನೂರಕ್ಕೂ ಅಧಿಕ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌.

    ಘಟನೆಯ ಬಗ್ಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುರುಬೂರು ಶಾಂತಕುಮಾರ್ (Kurubur Shantakumar), ನಾಳೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆಗೆ ತಿರ್ಮಾನಿಸಿದೆ. ಭರವಸೆಗಳನ್ನು ನೀಡಿ ಒಂದು ವರ್ಷವಾದರೂ ಸರ್ಕಾರ ಬೇಡಿಕೆ ಈಡೇರಿಸಿಲ್ಲ. ರೈತರ ಸಾಲ ಮನ್ನಾ, ರೈತರಿಗೆ ಪಿಂಚಣಿ, ಬೆಂಬಲ ಬೆಲೆ ಕಾನೂನು, ಸ್ವಾಮಿನಾಥನ್ ವರದಿ ಅನಿಷ್ಠಾನಕ್ಕೆ ಮನವಿ ಮಾಡಿದೆ ಕೇಂದ್ರ ಸರ್ಕಾರ ಈವರೆಗೂ ಬೇಡಿಕೆ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನೆಗೆ ಕರೆ ನೀಡಿದೆ. ಇದನ್ನೂ ಓದಿ: ಆಂಧ್ರ ಸಿಎಂ ಜಗನ್‌ ತಮ್ಮ ಚಿಕ್ಕಪ್ಪನನ್ನೇ ಹತ್ಯೆಗೈದಿದ್ದಾರೆ – ಎನ್.ಚಂದ್ರಬಾಬು ನಾಯ್ಡು ಪುತ್ರ ಗಂಭೀರ ಆರೋಪ

    ಫೆ.13ರಂದು ನಡೆಯಲಿರುವ ಪ್ರತಿಭಟನೆಗೂ ಮುನ್ನ ರೈತರನ್ನು ತಡೆಯುವ ಪ್ರಯತ್ನ ನಡೆಯುತ್ತಿದೆ. ದೆಹಲಿಗೆ ಆಗಮಿಸುವ ರೈತರನ್ನು ತಡೆಯಲಾಗುತ್ತಿದೆ. ಕರ್ನಾಟಕದಿಂದ ಆಗಮಿಸುತ್ತಿದ್ದ ನೂರಕ್ಕೂ ಅಧಿಕ ರೈತರನ್ನು ಭೂಪಾಲ್ ನಲ್ಲಿ ವಶಕ್ಕೆ ಪಡೆದು, ರೈತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ನನ್ನ ಪತ್ನಿಯೂ ಸೇರಿ ಹಲವು ಮಹಿಳೆಯರು ಗಾಯಗೊಂಡಿದ್ದಾರೆ ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ದೊಡ್ಡ ಗೆಲುವು – ಕತಾರ್‌ನಲ್ಲಿ ಅರೆಸ್ಟ್‌ ಆಗಿದ್ದ ನೌಕಾ ಅಧಿಕಾರಿಗಳು ಬಿಡುಗಡೆ, ಸ್ವದೇಶಕ್ಕೆ ವಾಪಸ್‌

  • 200 ಸಂಘಟನೆಗಳು, 20,000 ರೈತರಿಂದ ನಾಳೆ `ದೆಹಲಿ ಚಲೋ’ – ದೆಹಲಿ ಗಡಿ ಬಂದ್!

    200 ಸಂಘಟನೆಗಳು, 20,000 ರೈತರಿಂದ ನಾಳೆ `ದೆಹಲಿ ಚಲೋ’ – ದೆಹಲಿ ಗಡಿ ಬಂದ್!

    ನವದೆಹಲಿ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಸುಮಾರು 200 ರೈತ ಸಂಘಟನೆಗಳು ಮಂಗಳವಾರ (ಫೆ.13) ದೆಹಲಿ ಚಲೋಗೆ (Delhi Chalo) ಕರೆ ನೀಡಿವೆ.

    `ದೆಹಲಿ ಚಲೋ’ ನಲ್ಲಿ ಸುಮಾರು 20,000 ರೈತರು (Farmers) ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಹಲವು ಕಡೆ ಗಡಿಗಳನ್ನು ಬ್ಯಾರಿಕೇಡ್‌ಗಳಿಂದ ಬಂದ್ ಮಾಡಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಈ ಪ್ರತಿಭಟನೆಗೆ 200 ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಸುಮಾರು 20,000 ರೈತರು ಪಾಲ್ಗೊಳ್ಳಲಿದ್ದಾರೆ ಎಂದು ಗುಪ್ತಚರ ಇಲಾಖೆ ಅಂದಾಜಿಸಿದೆ. ಇದನ್ನೂ ಓದಿ: ಪಾಕ್ ಚುನಾವಣೆ ಮತ ಎಣಿಕೆ ಅಂತ್ಯ; ಇಮ್ರಾನ್ ಖಾನ್ ಮುನ್ನಡೆ, ನವಾಜ್ ಷರೀಫ್‌ಗೆ ಸೇನೆ ಬೆಂಬಲ

    ಈ ಹಿನ್ನೆಲೆಯಲ್ಲಿ ರೈತರು ಅಂಬಾಲ-ಸಿಂಘು, ಕನೌರಿ-ಜಿಂದ್, ಮತ್ತು ದಬಾವಲಿ ಗಡಿಗಳ ಮೂಲಕ ರಾಜಧಾನಿ ಪ್ರವೇಶಕ್ಕೆ ರೈತರು ಯೋಜಿಸಿದ್ದಾರೆ. ಈಗಾಗಲೇ ಪಂಜಾಬ್ ಹಾಗೂ ಹರಿಯಾಣದ ಟ್ರ್ಯಾಕ್ಟರ್‌ಗಳಲ್ಲಿ ಹೊರಟಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿಯ ಗಡಿ ಭಾಗಗಳನ್ನ ಬ್ಯಾರಿಕೇಡ್‌ಗಳಿಂದ (Barricading) ಬಂದ್ ಮಾಡಲಾಗಿದೆ. ಇದನ್ನೂ ಓದಿ: ಮುಸ್ಲಿಮರು ನಮ್ಮ ಹಿಂದುತ್ವ ಬೆಂಬಲಿಸುತ್ತಾರೆ.. ಬಿಜೆಪಿ ಹಿಂದುತ್ವ ತಿರಸ್ಕರಿಸುತ್ತಾರೆ: ಉದ್ಧವ್‌ ಠಾಕ್ರೆ

    ಗಡಿಗಳಲ್ಲಿ ಕ್ರೇನ್ ಮತ್ತು ಕಂಟೇನರ್‌ಗಳನ್ನು ತಂದಿಡಲಾಗಿದ್ದು, ರೈತರು ದೆಗಲಿ ಪ್ರವೇಶ ಮಾಡಲು ಯತ್ನಿಸಿದ್ರೆ ಹೆದ್ದಾರಿಯನ್ನೇ ಬಂದ್ ಮಾಡಲು ಪೊಲೀಸರು ಯೋಜಿಸಿದ್ದಾರೆ. ಇದರೊಂದಿಗೆ ಯಾವುದೇ ಅನಾಹುತಕಾರಿ ಘಟನೆಗಳನ್ನು ತಡೆಯಲು ಹೆಚ್ಚುವರಿ ಪೊಲೀಸ್ ಭದ್ರತೆಯನ್ನ ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆ. ಆದ್ರೆ ಬ್ಯಾರಿಕೇಡ್‌ಗಳ ಅಸ್ತ್ರವನ್ನು ಭೇದಿಸಲು ರೈತರು ತಮ್ಮ ಟ್ರ್ಯಾಕ್ಟರ್‌ಗಳನ್ನೇ ಹಿಟಾಚಿ ರೂಪಕ್ಕೆ ಪರಿವರ್ತಿಸಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಪತಿ-ಪತ್ನಿಯ ವೈಮನಸ್ಸಿನಿಂದ ನಡೆದೇಹೋಯ್ತು ಘೋರ ದುರಂತ – ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ 

  • ದಕ್ಷಿಣ ಕೊಡಗಿನಲ್ಲಿ ನಿಲ್ಲದ ಹುಲಿ ಹಾವಳಿ – ಅರಣ್ಯ ಇಲಾಖೆಯ ವಿರುದ್ಧ ಸಿಡಿದ ರೈತರು

    ದಕ್ಷಿಣ ಕೊಡಗಿನಲ್ಲಿ ನಿಲ್ಲದ ಹುಲಿ ಹಾವಳಿ – ಅರಣ್ಯ ಇಲಾಖೆಯ ವಿರುದ್ಧ ಸಿಡಿದ ರೈತರು

    ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಜಾನುವಾರುಗಳ ಮೇಲೆ ನಿರಂತರವಾಗಿ ಹುಲಿ ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅರಣ್ಯ ಇಲಾಖೆಯ ವಿರುದ್ಧ ರೈತರು ಸಿಡಿದೆದ್ದಿದ್ದಾರೆ.

    ಇತ್ತೀಚಿಗಷ್ಟೆ ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ಕುಂದ ಹಾಗೂ ಈಚೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದ ಗ್ರಾಮದಲ್ಲಿ ರೈತರಿಗೆ ಸೇರಿದ ಹಸುಗಳ ಮೇಲೆ ಹುಲಿ ದಾಳಿ ನಡೆಸಿ, ಜಾನುವಾರುಗಳನ್ನು ಕೊಂದು ಹಾಕುತ್ತಿದೆ. ಗ್ರಾಮದ ಮನೆಯ ಸಮೀಪದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುಗಳು ಹುಲಿ ದಾಳಿಗೆ ಬಲಿಯಾಗುತ್ತಿವೆ. ಇದನ್ನೂ ಓದಿ: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಕೊರೊನಾ

    ಈ ವಿಷಯ ತಿಳಿದು ಗಾಮಸ್ಥರು ಭಯಭೀತರಾಗಿದ್ದಾರೆ. ಅಲ್ಲದೆ ಇದೀಗ ಕಾಫಿ ತೋಟದಲ್ಲಿ ಕಾಫಿ ಗಿಡಗಳಿಗೆ ಕೃತಕ ನೀರು ಹಾಯಿಸುವ ಸಮಯ ಇದಾಗಿದೆ. ಹುಲಿ ಕಾಣಿಸಿಕೊಂಡ ಬಳಿಕ ತೋಟಗಳಲ್ಲಿ ಹುಲಿ ಅಡಗಿಕೊಂಡಿರಬಹುದೇನೋ ಎಂಬ ಭಯದಿಂದ ತೋಟಕ್ಕೆ ತೆರಳಲು ಕಾರ್ಮಿಕರು ಭಯಪಡುತ್ತಿದ್ದಾರೆ. ಇದನ್ನೂ ಓದಿ: ತಾಜ್ ವೆಸ್ಟೆಂಡ್ ಹೋಟೆಲ್‍ನಲ್ಲಿ ನಾನು ರಾಸಲೀಲೆ ಮಾಡಲು ಹೋಗ್ತಿರಲಿಲ್ಲ: ಹೆಚ್‍ಡಿಕೆ ಕಿಡಿ

    ಹುಲಿ ದಾಳಿಗೆ ತುತ್ತಾಗಿ ಬಲಿಯಾಗಿರುವ ಹಸುವಿನ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ರಾಜ್ಯ ರೈತ ಸಂಘಟನೆಯಿಂದ ಪೋನ್ನಂಪೇಟೆ ಅರಣ್ಯ ಇಲಾಖೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು

    ದಕ್ಷಿಣ ಕೊಡಗಿನಲ್ಲಿ ಹುಲಿ ಹಾವಳಿ ನಿಯಂತ್ರಿಸುವ ಸಲುವಾಗಿ ಹೋರಾಟ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಆದಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಸ್ಥಳಕ್ಕೆ ಡಿಎಫ್‍ಒ ಚಕ್ರಪಾಣಿ ಡಿವೈಎಸ್‍ಪಿ ಜಯಕುಮಾರ್ ಆಗಮಿಸಿ ಇನ್ನೂ ಏಳು ದಿನಗಳಲ್ಲಿ ಹುಲಿ ಸೆರೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

  • ದೆಹಲಿ ರೈತರಲ್ಲಿ ಬಿರುಕು – ಪ್ರತಿಭಟನೆಯಿಂದ ಹಿಂದಕ್ಕೆ ಸರಿದ 2 ಪ್ರಮುಖ ಸಂಘಟನೆಗಳು

    ದೆಹಲಿ ರೈತರಲ್ಲಿ ಬಿರುಕು – ಪ್ರತಿಭಟನೆಯಿಂದ ಹಿಂದಕ್ಕೆ ಸರಿದ 2 ಪ್ರಮುಖ ಸಂಘಟನೆಗಳು

    ನವದೆಹಲಿ: ಗಣರಾಜ್ಯೋತ್ಸವ ದಿನದಂದು ನಡೆದ ದಾಂಧಲೆ ಪ್ರಕರಣಕ್ಕೆ ರೈತ ಸಂಘಟನೆಗಳನ್ನೇ ನೇರ ಹೊಣೆ ಮಾಡಲು ಕೇಂದ್ರ ಗೃಹ ಸಚಿವಾಲಯ ಮುಂದಾಗುತ್ತಿದ್ದಂತೆ ಎರಡು ಪ್ರಮುಖ ರೈತ ಸಂಘಟನೆಗಳು ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿವೆ.

    ನಾನು ಈ ಪ್ರತಿಭಟನೆಯ ನೇತೃತ್ವವನ್ನು ವಹಿಸುವುದಿಲ್ಲ. ಈ ಪ್ರತಿಭಟನೆಯನ್ನು ನಾವು ಹಿಂದಕ್ಕೆ ಸರಿಯುತ್ತೇವೆ ಎಂದು ರಾಷ್ಟ್ರೀಯ ಕಿಸಾನ್‌ ಮಜ್ದೂರ್‌ ಸಂಘಟನೆ ಮುಖ್ಯಸ್ಥ ವಿಎಂ ಸಿಂಗ್‌ ಹೇಳಿದ್ದಾರೆ. ಬೇರೆಯವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ನನಗೆ ಏನು ಪಾತ್ರವಿಲ್ಲ ಎಂದು ಅವರು ತಿಳಿಸಿದ್ದಾರೆ.

    ಭಾರತೀಯ ಕಿಸಾನ್‌ ಸಂಘದ ಅಧ್ಯಕ್ಷ ಬಾನು ಪ್ರತಾಪ್‌ ಸಿಂಗ್‌ ಮಾತನಾಡಿ, ನಿನ್ನೆಯ ಘಟನೆಯಿಂದ ನನಗೆ ಬಹಳ ನೋವಾಗಿದೆ. ಹೀಗಾಗಿ 58 ದಿನಗಳ ಪ್ರತಿಭಟನೆಯನ್ನು ನಾವು ಕೊನೆಗೊಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

    ಎರಡು ಪ್ರಮುಖ ಸಂಘಟನೆಗಳು ಪ್ರತಿಭಟನೆಯಿಂದ ಹಿಂದಕ್ಕೆ ಸರಿಯುವ ಮೂಲಕ ರೈತರ ಸಂಘಟನೆಯಲ್ಲಿ ಬಿರುಕು ಮೂಡಿದೆ. ಹೀಗಿದ್ದರೂ ಈಗಾಗಲೇ ಬೆಂಬಲ ನೀಡಿರುವ ಸಂಘಟನೆಗಳು ನಾವು ಯಾವುದೇ ಕಾರಣಕ್ಕೂ ಪ್ರತಿಭಟನೆಯಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದು ಹೇಳಿವೆ.

  • ಟಿಬಿ ಡ್ಯಾಂ ಕಾಲುವೆ ದುರಸ್ತಿಯೆಂದು ಕೋಟಿ ಕೋಟಿ ಹಣ ಗುಳುಂ!

    ಟಿಬಿ ಡ್ಯಾಂ ಕಾಲುವೆ ದುರಸ್ತಿಯೆಂದು ಕೋಟಿ ಕೋಟಿ ಹಣ ಗುಳುಂ!

    ಬಳ್ಳಾರಿ: ತುಂಗಭದ್ರಾ ಜಲಾಶಯದ ಕಾಲುವೆಗಳ ದುರಸ್ತಿ ಕಾರ್ಯದ ಹೆಸರಲ್ಲಿ ರಾಜಕಾರಣಿಗಳು ಕೋಟಿ ಕೋಟಿ ಹಣವನ್ನು ಗುಳುಂ ಮಾಡುತ್ತಿದ್ದಾರೆ.

    ಸದ್ಯ ಜಲಾಶಯ ಭರ್ತಿಯಾಗಿದ್ದು, ನದಿಗೆ ಈಗಾಗಲೇ 20 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ. ಜೊತೆಗೆ ರೈತರ ಹಿತಾಸಕ್ತಿಗೆ ಪೂರಕವಾಗಿ ತುಂಗಭದ್ರಾ ಬಲದಂಡೆಯ ಮೇಲ್ಮಟ್ಟದ ಮತ್ತು ಕೆಳಮಟ್ಟದ ಕಾಲುವೆಗಳಿಗೆ ನೀರು ಬಿಡಲು ಟಿಬಿ ಬೋರ್ಡ್ ಸಜ್ಜಾಗಿದೆ. ಅಚ್ಚರಿ ವಿಷಯವೆಂದರೆ ಅದೇ ಕಾಲುವೆಗಳ ದುರಸ್ತಿ ಕಾರ್ಯ ಈಗ ನಡೆಯುತ್ತಿದೆ.

    ತುಂಗಭದ್ರಾ ಬಲದಂಡೆ ಕಾಲುವೆಗಳ ದುರಸ್ತಿ ಕಾರ್ಯ ಪ್ರತಿ ವರ್ಷ ನೀರು ಬಿಡುವ ಸಮಯದಲ್ಲೇ ನಡೆಯುತ್ತಿರುತ್ತವೆ. ಹೆಚ್.ಎಲ್.ಸಿ ಕಾಲುವೆಯಲ್ಲಿ ಕಳೆದ ಆರು ತಿಂಗಳಿನಿಂದ ಹಾಗೂ ಎಲ್.ಎಲ್‍ಸಿ ಕಾಲುವೆಯಲ್ಲಿ ಕಳೆದ ಮೂರು ತಿಂಗಳಿನಿಂದ ನೀರು ಹರಿಯುವುದು ನಿಂತರೂ ದುರಸ್ತಿ ಕಾರ್ಯ ಕೈಗೊಳ್ಳದ ಅಧಿಕಾರಿಗಳು, ಗುತ್ತಿಗೆದಾರರು ಕಾಲುವೆಗಳಿಗೆ ನೀರು ಬಿಡುವ ಸಮಯದಲ್ಲೇ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಹೀಗಾಗಿ ಈ ದುರಸ್ತಿ ಕಾಮಗಾರಿ ಗುತ್ತಿಗೆದಾರರಿಗೆ ಹಣದ ಮೂಲವಾಗಿದೆ ಎಂದು ರೈತ ಸಂಘಟನೆ ಆರೋಪಿಸುತ್ತಿದೆ.

    ಕಾಮಗಾರಿ ಏಕಿಷ್ಟು ತಡ ಎಂದು ತುಂಗಭದ್ರಾ ಮಂಡಳಿ ಅಧಿಕಾರಿಗಳನ್ನು ಸ್ಥಳೀಯ ರೈತ ಪ್ರಶ್ನಿಸಿದ್ರೆ, ದುರಸ್ತಿಯ ವರದಿಯ ಅನುಮೋದನೆಗೆ ಹಣಕಾಸಿನ ಮಂಜೂರಾತಿ ಪಡೆದು ಕಾಮಗಾರಿ ಪ್ರಾರಂಭಿಸಿಲು ತಡವಾಗುತ್ತದೆ ಎಂದು ಸಬೂಬು ನೀಡುತ್ತಾರೆ. ಆದ್ರೆ ಇದಕ್ಕೆ ಯಾವುದೇ ಸ್ಪಷ್ಟವಾದ ಉತ್ತರವನ್ನು ನೀಡುತ್ತಿಲ್ಲ. ಇತ್ತ ನದಿ ಮೂಲಕ ಸಾವಿರಾರು ಕ್ಯೂಸೆಕ್ ನೀರು ಹರಿದು ಆಂಧ್ರದ ಪಾಲಾಗುತ್ತಿದೆ ಅಂತ ರೈತ ಹೇಳಿದ್ದಾರೆ

    ಕೇಂದ್ರ ಸರ್ಕಾರದ ನಿರ್ದೇಶನದಂತೆ ತುಂಗಭದ್ರಾ ಮಂಡಳಿ ಈ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು, ಬಹುಕೋಟಿ ರೂಪಾಯಿಗಳ ಕಾಮಗಾರಿಯನ್ನು ನೀರು ಬಿಡುವ ಸಮಯದಲ್ಲಿ ನಡೆಸುತ್ತಿರುವುರಿಂದ ಸರ್ಕಾರದ ಹಣ ಪೋಲಾಗುತ್ತದೆ. ಹಾಗೆ ಬಹುತೇಕ ಗುತ್ತಿಗೆದಾರರು, ಅಧಿಕಾರಿಗಳೊಂದಿಗೆ ಸೇರಿಕೊಂಡು ಕಾಮಗಾರಿ ಮುಗಿಸಿದಂತೆ ಬಿಲ್ ಪಡೆಯುತ್ತಾರೆ ಎಂಬ ಗಂಭೀರ ಆರೋಪವು ಕೇಳಿಬರುತ್ತಿದೆ.