Tag: ರೈಫಲ್

  • ‘Sher’ Will Roar | ನಿಮಿಷಕ್ಕೆ 700 ಬುಲೆಟ್‌ ಹಾರಿಸಬಲ್ಲ `AK-203′ ರೈಫಲ್‌ ಸೇನೆಗೆ!

    ‘Sher’ Will Roar | ನಿಮಿಷಕ್ಕೆ 700 ಬುಲೆಟ್‌ ಹಾರಿಸಬಲ್ಲ `AK-203′ ರೈಫಲ್‌ ಸೇನೆಗೆ!

    ಲಕ್ನೋ: ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ರಕ್ಷಣಾ ವಲಯಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಅದರ ಹಾದಿಯಾಗಿ ಒಂದಿಲ್ಲೊಂದು ಅಸ್ತ್ರಗಳು ಭಾರತೀ ಸೇನಾ (Indian Army) ಬತ್ತಳಿಕೆ ಸೇರಿಕೊಳ್ಳುತ್ತಿವೆ. ಎರಡುವಾರಗಳ ಹಿಂದೆಯಷ್ಟೇ ಮೋದಿ ಸರ್ಕಾರ 1 ಲಕ್ಷ ಕೋಟಿ ಮೊತ್ತದ ರಕ್ಷಣಾ ಯೋಜನೆಗಳಿಗೆ ಅನುಮತಿ ನೀಡಿತ್ತು. ಇದೀಗ ಸ್ವದೇಶಿ ನಿರ್ಮಿತ ಅತ್ಯಾಧುನಿಕ ಎಕೆ-203 ರೈಫಲ್‌ (AK-203 Assault Rifles) ಅನ್ನು ಭಾರತೀಯ ಸೇನೆಗೆ ಪೂರೈಸಲಾಗುತ್ತಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

    ಹೌದು, ಭಾರತ-ರಷ್ಯಾ ಸಹಯೋಗದ ‘ಇಂಡೋ-ರಷ್ಯನ್‌ ರೈಫಲ್ಸ್‌ ಪ್ರೈವೇಟ್‌ ಲಿಮಿಟೆಡ್‌’ (IRRPL) ಉತ್ತರ ಪ್ರದೇಶದ ಅಮೇಠಿ ಜಿಲ್ಲೆಯ ಕೊರ್ವಾದ ಘಟಕದಲ್ಲಿ 48,000 ಎಕೆ – 203 ರೈಫಲ್‌ಗಳನ್ನು ಉತ್ಪಾದಿಸಿ, ಸೇನೆಗೆ ಪೂರೈಸಿದೆ. ಹೊಸ ಕಂತಿನಲ್ಲಿ 7,000 ರೈಫಲ್‌ಗಳು ಪೂರೈಕೆಯಾಗಲಿವೆ. ಇದನ್ನೂ ಓದಿ: 80,000 ನಗ್ನ ಫೋಟೋಸ್‌, ಸೆಕ್ಸ್‌ ಮಾಡಿ ಬೌದ್ಧ ಬಿಕ್ಕುಗಳ ಟ್ರ್ಯಾಪ್‌ – 100 ಕೋಟಿ ಸುಲಿಗೆ ಮಾಡಿದ್ದ ಹನಿ ಲೇಡಿ ಅರೆಸ್ಟ್‌

    ಮುಂದಿನ 2-3 ವಾರಗಳಲ್ಲಿ ಶೇ. 50ರಷ್ಟು ದೇಶೀಯ ನಿರ್ಮಿತ ಸುಮಾರು 7,000 ಸಾವಿರ AK-203 ರೈಫಲ್‌ಗಳು, ಈ ವರ್ಷಾಂತ್ಯದ ವೇಳೇ 75,000 ಹಾಗೂ 2026ರ ವೇಳೆಗೆ ಸರಿಸುಮಾರು 1 ಲಕ್ಷ ರೈಫಲ್‌ಗಳು ಸೇನೆಗೆ ಪೂರೈಕೆಯಾಗಲಿವೆ. ನಂತರದಲ್ಲಿ ಅರೆಸೇನಾ ಪಡೆಗಳು ಹಾಗೂ ಪೊಲೀಸರಿಗೂ ಲಭ್ಯವಾಗಲಿದ್ದು, ಶೀಘ್ರದಲ್ಲೇ ಶೇ. 100ರಷ್ಟು ಸ್ವದೇಶಿ ನಿರ್ಮಿತ ರೈಫಲ್‌ಗಳ ಉತ್ಪಾದನೆ ಶುರುವಾಗಲಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ನನಗೂ ನನ್ನ ಪತ್ನಿಗೂ ಏನಾದ್ರು ಆದ್ರೆ ಅದಕ್ಕೆ ಪಾಕ್‌ ಸೇನಾ ಮುಖ್ಯಸ್ಥನೇ ಕಾರಣ: ಇಮ್ರಾನ್‌ ಖಾನ್‌ ಹೇಳಿಕೆ

    ಸದ್ಯ 50% ರಷ್ಟು ಸ್ವದೇಶಿ ರೈಫಲ್‌ಗಳನ್ನ ಉತ್ಪಾದಿಸಲಾಗುತ್ತಿದ್ದು, 100% ರಷ್ಟು ರೈಫಲ್‌ಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ರಕ್ಷಣಾ ಸಚಿವಾಲಯ ಮತ್ತು IRRPL ನಡುವೆ 10 ವರ್ಷಗಳಿಗೆ ಒಪ್ಪಂದವಾಗಿದ್ದು, ಈ ಅವಧಿಯೊಳಗೆ 6,01,427 ಎಕೆ-203 ಅಸಾಲ್ಟ್ ರೈಫಲ್‌ಗಳಿಗೆ ಆರ್ಡರ್‌ ನೀಡಲಾಗಿದೆ. 2025ರ ನಂತರ ವಾರ್ಷಿಕ 70 ಸಾವಿರ ರೈಫಲ್‌ ಉತ್ಪಾದಿಸುವ ನಿರೀಕ್ಷೆಯಿದ್ದು, 2030ರ ಹೊತ್ತಿಗೆ 6 ಲಕ್ಷ ರೈಫಲ್‌ ಪೂರೈಕೆ ಆಗಲಿದೆ ಎಂದು ಐಆರ್‌ಆರ್‌ಪಿಎಲ್‌ನ ಸಿಎಂಡಿ ಮೇಜರ್ ಜನರಲ್ ಎಸ್‌ಕೆ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ನ ಜೈಲಿಗಟ್ಟುತ್ತೀನಿ, ದೇಶದ ಅನೇಕ ಜೈಲುಗಳು ಗಾಂಧಿ ಕುಟುಂಬಕ್ಕೆ ಕಾಯ್ತಿವೆ: ಅಸ್ಸಾಂ ಸಿಎಂ

    ʻಶೇರ್‌ʼ ವಿಶೇಷತೆ ಏನು?
    * 3.8 ಕೆ.ಜಿ ತೂಕ ಹೊಂದಿದ್ದು, ಕಾರ್ಯಾಚರಣೆ ಸುಲಭ
    * ಹಳೆಯ ರೈಫಲ್‌ಗಳಿಗೆ ಹೋಲಿಸಿದ್ರೆ ಹೆಚ್ಚಿನ ನಿಖರತೆ
    * ಪ್ರತಿ ನಿಮಿಷಕ್ಕೆ 700 ಸುತ್ತು ಗುಂಡು ಹಾರಿಸಬಲ್ಲ ತಾಕತ್ತು
    * 800 ಮೀಟರ್‌ ರೇಂಜ್‌ ಸಾಮರ್ಥ್ಯ ಹೊಂದಿದೆ.

  • Asian Games : ಶೂಟಿಂಗ್‌ನಲ್ಲಿ ವಿಶ್ವದಾಖಲೆ – ಚಿನ್ನ ಗೆದ್ದ ಭಾರತದ ಪುರುಷರು

    Asian Games : ಶೂಟಿಂಗ್‌ನಲ್ಲಿ ವಿಶ್ವದಾಖಲೆ – ಚಿನ್ನ ಗೆದ್ದ ಭಾರತದ ಪುರುಷರು

    ಹಾಂಗ್‌ಝೋ: ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ನಲ್ಲಿ (Asian Games) ಭಾರತ (India) ಮೊದಲ ಚಿನ್ನದ ಪದಕವನ್ನು (Gold medal) ಗೆದ್ದುಕೊಂಡಿದೆ. 10 ಮೀ.  ರೈಫಲ್ ಸ್ಪರ್ಧೆಯಲ್ಲಿ ಭಾರತದ ಪುರುಷರ ತಂಡವು ಚಿನ್ನದ ಪದಕ ಗೆಲ್ಲುವುದರೊಂದಿಗೆ ವಿಶ್ವದಾಖಲೆ (World Record) ನಿರ್ಮಿಸಿದೆ.

    ವಿಶ್ವ ಚಾಂಪಿಯನ್ ರುದ್ರಂಕ್ಷ್ ಪಾಟೀಲ್, ಒಲಿಂಪಿಯನ್ ದಿವ್ಯಾಂಶ್ ಪನ್ವಾರ್ ಮತ್ತು ಐಶ್ವರಿ ಪ್ರತಾಪ್ ಸಿಂಗ್ ತೋಮರ್ ತಂಡ 1893.7 ಅಂಕ ಗಳಿಸಿ ಚಿನ್ನದ ಪದಕವನ್ನು ಗೆದ್ದುಕೊಂಡಿದೆ. ಈ ಹಿಂದೆ ಚೀನಾ 1893.3 ಅಂಕ ಸಂಪಾದಿಸಿ ದಾಖಲೆ ಬರೆದಿತ್ತು.  ಇದನ್ನೂ ಓದಿ: ಬಾಬರ್‌ ಆಜಂ ಬಳಿಕ ನವೀನ್ ಉಲ್ ಹಕ್‌ನನ್ನ ಹೊಗಳಿದ ಗಂಭೀರ್‌ – ಕಾಲೆಳೆದ ಕೊಹ್ಲಿ ಫ್ಯಾನ್ಸ್‌

    ಪುರುಷರ ರೋಯಿಂಗ್‌ನಲ್ಲಿ ಭಾರತ ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಜಸ್ವಿಂದರ್ ಸಿಂಗ್, ಭೀಮ್ ಸಿಂಗ್, ಪುನಿತ್ ಕುಮಾರ್ ಮತ್ತು ಆಶಿಶ್ ಅವರಿಂದ ತಂಡ ಮೂರನೇ ಸ್ಥಾನವನ್ನು ಪಡೆದುಕೊಂಡಿತು.

    ಸದ್ಯ 1 ಚಿನ್ನ, 3 ಬೆಳ್ಳಿ, 5 ಕಂಚಿನ ಪದಕ ಗೆದ್ದಿರುವ ಭಾರತ ಪದಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. 27 ಚಿನ್ನ, 11 ಬೆಳ್ಳಿ, 5 ಕಂಚು ಸೇರಿ ಒಟ್ಟು 43 ಪದಕ ಗೆದ್ದಿರುವ ಚೀನಾ ಮೊದಲ ಸ್ಥಾನದಲ್ಲಿ ಮುಂದುವರಿದಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ಯಾಂಕ್‍ಗೆ ರೈಫಲ್ ಹಿಡಿದು ನುಗ್ಗಿದ ಸನ್ಯಾಸಿ – ಸಾಲ ನೀಡದ್ದಕ್ಕೆ ಲೂಟಿ ಮಾಡೋದಾಗಿ ಬೆದರಿಕೆ

    ಬ್ಯಾಂಕ್‍ಗೆ ರೈಫಲ್ ಹಿಡಿದು ನುಗ್ಗಿದ ಸನ್ಯಾಸಿ – ಸಾಲ ನೀಡದ್ದಕ್ಕೆ ಲೂಟಿ ಮಾಡೋದಾಗಿ ಬೆದರಿಕೆ

    ಚೆನ್ನೈ: ಸನ್ಯಾಸಿಯೋರ್ವ ರೈಫಲ್ (Rifle)ಹಿಡಿದು ಬ್ಯಾಂಕ್‍ಗೆ ನುಗ್ಗಿ ಸಾಲ ಕೇಳಿದ್ದಾನೆ. ಈ ವೇಳೆ ಸಾಲ ನೀಡಲು ನಿರಾಕರಿಸಿದ್ದಕ್ಕೆ ಬ್ಯಾಂಕ್ ಲೂಟಿ ಮಾಡುವುದಾಗಿ ಬೆದರಿಕೆಯೊಡ್ಡಿರುವ ಘಟನೆ ತಮಿಳುನಾಡಿನ (Tamil Nadu) ತಿರುವಾರೂರಿನಲ್ಲಿ (Thiruvarur) ನಡೆದಿದೆ.

    ಸನ್ಯಾಸಿಯನ್ನು (Moke) ತಿರುಮಲೈ ಸಾಮಿ ಎಂದು ಗುರುತಿಸಲಾಗಿದ್ದು, ಈತ ಚೀನಾದಲ್ಲಿ ವೈದ್ಯಕೀಯ ಪದವಿ ಓದುತ್ತಿರುವ ತನ್ನ ಮಗಳಿಗೆ ಸಾಲ ನೀಡುವಂತೆ ಕೇಳಲು ಖಾಸಗಿ ವಲಯದ ಬ್ಯಾಂಕ್ (Bank) ಮೊರೆ ಹೋಗಿದ್ದನು. ಈ ವೇಳೆ ಬ್ಯಾಂಕ್ ಅಧಿಕಾರಿಗಳು ಆಸ್ತಿ ದಾಖಲೆ ನೀಡುವಂತೆ ಕೇಳಿದ್ದು, ಇದಕ್ಕೆ ತಿರುಮಲೈ ಸಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಅಲ್ಲದೇ ಸಾಲದ (Loan) ಮೊತ್ತವನ್ನು ಬಡ್ಡಿ ಸಮೇತ ಮರುಪಾವತಿಸುವಾಗ ಬ್ಯಾಂಕ್‍ಗೆ ಯಾಕೆ ತನ್ನ ಆಸ್ತಿ, ಜಮೀನಿನ ದಾಖಲೆಗಳನ್ನು ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಿರ್ಮಾಣ ಹಂತದ ಗೋಡೆ ಕುಸಿತ- ನಾಲ್ವರು ಸಾವು, 9 ಮಂದಿಗೆ ಗಾಯ

    ಕೊನೆಗೆ ಬ್ಯಾಂಕ್ ಅಧಿಕಾರಿಗಳು ತಿರುಮಲೈ ಸಾಮಿ (Thirumalai Samy) ಸಲ್ಲಿಸಿದ್ದ ಸಾಲದ ಅರ್ಜಿಯನ್ನು ತಿರಸ್ಕರಿಸಿದರು. ನಂತರ ಮನೆಗೆ ಹೋಗಿ ಸಾಮಿ ತನ್ನ ರೈಫಲ್ ತೆಗೆದುಕೊಂಡು ಬ್ಯಾಂಕಿಗೆ ಹಿಂತಿರುಗಿದನು. ಬಳಿಕ ಕುರ್ಚಿ ಮೇಲೆ ಕುಳಿತುಕೊಂಡು ಧೂಮಪಾನ ಮಾಡಲು ಆರಂಭಿಸಿದಲ್ಲದೇ ಬ್ಯಾಂಕ್ ಸಿಬ್ಬಂದಿಗೆ ಬೆದರಿಕೆಯೊಡ್ಡಿದ್ದಾನೆ. ಜೊತೆಗೆ ಫೇಸ್‍ಬುಕ್‍ನಲ್ಲಿ ಲೈವ್‌ (Facebook Live) ಬಂದು ಸಾಲ ನೀಡಲು ನಿರಾಕರಿಸಿದ್ದಕ್ಕೆ ಬ್ಯಾಂಕ್ ಲೂಟಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾನೆ. ಇದನ್ನೂ ಓದಿ: ಸುಮ್ಮನಹಳ್ಳಿ ಬ್ರಿಡ್ಜ್‌ ಮತ್ತೆ ಕುಸಿತದ ಭೀತಿ – ನೆಲ ಕಾಣುವ ಮಟ್ಟಕ್ಕೆ ಕಿತ್ತು ಹೋದ ಕಾಂಕ್ರಿಟ್ ಸ್ಲ್ಯಾಬ್

    ಅವರು ಕುಳಿತು ಧೂಮಪಾನ ಮಾಡಲು ಪ್ರಾರಂಭಿಸಿದರು ಮತ್ತು ಬ್ಯಾಂಕ್ ಉದ್ಯೋಗಿಗಳಿಗೆ ಬೆದರಿಕೆ ಹಾಕಿದರು. ಅವರ ಫೇಸ್‍ಬುಕ್ ಪುಟದಲ್ಲಿ ಅವರ ಕ್ರಿಯೆಗಳನ್ನು ಲೈವ್-ಸ್ಟ್ರೀಮ್ ಮಾಡುವಾಗ, ಅವರು ಸಾಲವನ್ನು ನಿರಾಕರಿಸಿದ್ದಕ್ಕಾಗಿ ಬ್ಯಾಂಕ್ ಅನ್ನು ಲೂಟಿ ಮಾಡುವುದಾಗಿ ಹೇಳುವುದನ್ನು ಕೇಳಬಹುದು. ಬಳಿಕ ಈ ಬಗ್ಗೆ ಮಾಹಿತಿ ದೊರೆತ ಪೊಲೀಸರು ಬ್ಯಾಂಕ್‍ಗೆ ಆಗಮಿಸಿ ಸನ್ಯಾಸಿಯನ್ನು ಬಂಧಿಸಿ, ತನಿಖೆ ಆರಂಭಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಾರ್ಖಂಡ್ ಸಿಎಂ ಆಪ್ತನ ಮನೆ ಮೇಲೆ ಇಡಿ ದಾಳಿ – 2 ಎಕೆ-47 ರೈಫಲ್‌ಗಳು ವಶ

    ಜಾರ್ಖಂಡ್ ಸಿಎಂ ಆಪ್ತನ ಮನೆ ಮೇಲೆ ಇಡಿ ದಾಳಿ – 2 ಎಕೆ-47 ರೈಫಲ್‌ಗಳು ವಶ

    ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತ ಎನ್ನಲಾದ ಪ್ರೇಮ್ ಪ್ರಕಾಶ್ ಅವರ ನಿವಾಸದಲ್ಲಿ ಬುಧವಾರ ಜಾರಿ ನಿರ್ದೇಶನಾಲಯ ದಾಳಿ ನಡೆಸಿ, 2 ಎಕೆ-47 ರೈಫಲ್‌ಗಳನ್ನು ವಶಪಡಿಸಿಕೊಂಡಿದೆ.

    100 ಕೋಟಿ ಗಣಿ ಹಗರಣದ ತನಿಖೆಯ ಭಾಗವಾಗಿ ನಡೆಸಿದ ದಾಳಿ ವೇಳೆ ಜಾರಿ ನಿರ್ದೇಶನಾಲಯ ಪ್ರಕಾಶ್ ಅವರ ರಾಂಚಿಯಲ್ಲಿರುವ ಮನೆಯಿಂದ 2 ಎಕೆ-47 ರೈಫಲ್‌ಗಳನ್ನು ವಶಪಡಿಸಿಕೊಂಡಿದೆ. ಆದರೆ ಹಗರಣದ ಬಗ್ಗೆ ಪ್ರಕಾಶ್ ಅಥವಾ ಸೊರೇನ್ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಬಿಹಾರ ಸ್ಪೀಕರ್‌ ಸ್ಥಾನಕ್ಕೆ ವಿಜಯ್‌ ಕುಮಾರ್‌ ಸಿನ್ಹಾ ರಾಜೀನಾಮೆ

    ದಾಳಿ ವೇಳೆ ಕಪಾಟಿನೊಳಗಡೆ ರೈಫಲ್‌ಗಳು ಕಂಡುಬಂದಿದ್ದು, ಅವು ಕಾನೂನು ಬಾಹಿರವಾಗಿ ಇಟ್ಟುಕೊಳ್ಳಲಾಗಿದೆಯೇ ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ. ಆದರೆ ಇಡಿ ಅದನ್ನು ವಶಪಡಿಸಿಕೊಂಡಿದೆ. ಜಾರ್ಖಂಡ್, ಬಿಹಾರ, ತಮಿಳುನಾಡು ಮತ್ತು ದೆಹಲಿ-ಎನ್‌ಸಿಆರ್‌ನ 20 ಸ್ಥಳಗಳಲ್ಲಿ ದಾಳಿ ನಡೆಸಿರುವುದಾಗಿ ಇಡಿ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ಕಾಂಗ್ರೆಸ್‍ನ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ

    Live Tv
    [brid partner=56869869 player=32851 video=960834 autoplay=true]

  • ಮೂಸೆ ವಾಲಾ ಹತ್ಯೆಗೆ ಬಳಸಿದ್ದು ನಿಮಿಷಕ್ಕೆ 1,800 ಬುಲೆಟ್ ಹಾರಿಸುವ ಭಯಾನಕ ರೈಫಲ್- ಇಲ್ಲಿದೆ ಡಿಟೇಲ್ಸ್

    ಮೂಸೆ ವಾಲಾ ಹತ್ಯೆಗೆ ಬಳಸಿದ್ದು ನಿಮಿಷಕ್ಕೆ 1,800 ಬುಲೆಟ್ ಹಾರಿಸುವ ಭಯಾನಕ ರೈಫಲ್- ಇಲ್ಲಿದೆ ಡಿಟೇಲ್ಸ್

    ನವದೆಹಲಿ: ಪಂಜಾಬಿ ಗಾಯಕ ಹಾಗೂ ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಅವರನ್ನು ಭಾನುವಾರ ಮಾನ್ಸಾ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಆದರೆ ಹತ್ಯೆಯಾದ ಒಂದು ದಿನದ ಬಳಿಕ ಮತ್ತೊಂದು ಸ್ಫೋಟಕ ಸತ್ಯ ಬಯಲಾಗಿದೆ.

    ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಮೂಸೆವಾಲಾ ಹತ್ಯೆಗೆ 3 ಎಎನ್-94 ರಷ್ಯಾದ ಸೈನ್ಯದಲ್ಲಿ ಬಳಸುವ ಮಾರಣಾಂತಿಕ ರೈಫಲ್ ಅನ್ನು ಬಳಸಲಾಗಿದೆ. ಕೇವಲ 2 ಸುತ್ತಿನಲ್ಲಿ 30 ಗುಂಡುಗಳನ್ನು ಹಾರಿಸಲಾಗಿದೆ. ಮುಖ್ಯವಾಗಿ ಪಂಜಾಬ್‌ನಲ್ಲಿ ನಡೆದ ಗ್ಯಾಂಗ್‌ವಾರ್‌ನಲ್ಲಿ ಇದೇ ಮೊದಲ ಬಾರಿಗೆ ಎಎನ್-94 ಭಯಾನಕ ರೈಫಲ್ ಬಳಕೆಯಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: ಭದ್ರತೆ ವಾಪಸ್: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ ಗುಂಡಿಕ್ಕಿ ಹತ್ಯೆ

    ಹಂತಕರು ಮೂಸೆ ವಾಲಾ ಅವರನ್ನು ಹತ್ಯೆ ಮಾಡಲು ಮುಂದಾಗಿದ್ದರು. ಆಗ ಅವರ ಭದ್ರತೆಯಲ್ಲಿ ನಿಯೋಜಿಸಲಾದ ಎಕೆ-47 ರೈಫಲ್‌ಗಳೊಂದಿಗೆ ಶಸ್ತ್ರ ಸಜ್ಜಿತ ಕಮಾಂಡೋಗಳನ್ನು ಕಂಡು ಹಿಂದಿರುಗಿದ್ದರು. ನಂತರ ಕೆನಡಾದ ದರೋಡೆಕೋರ ಗೋಲ್ಡಿ ಬ್ರಾರ್‌ನಿಂದ ಎಎನ್-94 ರೈಫಲ್ ಅನ್ನು ತಂದಿದ್ದಾರೆ. ಅದರಿಂದಲೇ ಗುಂಡುಹಾರಿಸಿ ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: ಜೂನ್‌ನಲ್ಲಿ ಸಿಧು ಮೂಸೆವಾಲಾ ಕೊನೆಯ ಹಾಡು ಬಿಡುಗಡೆಯಾಗುವ ನಿರೀಕ್ಷೆಯಿದೆ: ಸಲೀಮ್ ಮರ್ಚೆಂಟ್

    AK-47 ಗಿಂತಲೂ ಭಯಾನಕ ರೈಫಲ್: AN-94 ರಷ್ಯಾದ ಆಕ್ರಮಣಕಾರಿ ರೈಫಲ್ ಆಗಿದೆ. ಎಎನ್ ಎಂಬ ಸಂಕ್ಷಿಪ್ತ ರೂಪವು `ಅವ್ಟೊಮತ್ ನಿಕೊನೊವಾ’ ಮಾಡೆಲ್ 1994 ಅನ್ನು ಸೂಚಿಸುತ್ತದೆ. ಎಎನ್-94 ಅನ್ನು ಅದರ ಮುಖ್ಯ ವಿನ್ಯಾಸಕ ಗೆನ್ನಡಿ ನಿಕೊನೊವ್ ಹೆಸರಿಡಲಾಗಿದೆ. ಅವರು ಈ ಹಿಂದೆ ನಿಕೊನೊವ್ ಮೆಷಿನ್ ಗನ್ ಅನ್ನು ವಿನ್ಯಾಸಗೊಳಿಸಿದ್ದರು. 1980 ರಲ್ಲಿ ಎಎನ್-94 ತಯಾರಿಸುವ ಕಾರ್ಯ ಪ್ರಾರಂಭವಾಗಿ 1994 ರಲ್ಲಿ ಪೂರ್ಣಗೊಂಡಿತು. ನಂತರ 1997ರಲ್ಲಿ ರಷ್ಯಾ ಸೈನ್ಯಕ್ಕೆ ಎಎನ್-47 ರೈಫಲ್ ಅನ್ನು ಸೇರಿಸಲಾಯಿತು. ಈಗಲೂ ರಷ್ಯಾ ಸೈನ್ಯ ಇದನ್ನು ಬಳಸುತ್ತಿದೆ. ಕೆಲವು ಶಸ್ತ್ರಾಸ್ತ್ರಗಳ ಅವಶ್ಯಕತೆಗಳನ್ನು ಪೂರೈಸಲು ಇದನ್ನು ಬಳಸಲಾಗುತ್ತಿದೆ ಎಂದು ಸುದ್ದಿ ಮಾಧ್ಯಮಗಳು ವರದಿಮಾಡಿವೆ.

    ಎಎನ್-94 ರೈಫಲ್‌ನ ವಿಶೇಷತೆಗಳೇನು?

    • ಎಎನ್-94 ಒಂದು ಸುತ್ತಿನ ಮೋಡ್‌ನಲ್ಲಿ ನಿಮಿಷಕ್ಕೆ 600 ಗುಂಡುಗಳು ಪೂರ್ಣ ಮೋಡ್‌ನಲ್ಲಿದ್ದರೆ 1,800 ಬುಲೆಟ್‌ಗಳನ್ನು ಹಾರಿಸಬಲ್ಲದು.
    • ಎಕೆ-47 ರೈಫಲ್ 715 ಮೀಟರ್ ವೇಗದಲ್ಲಿ ಗುಂಡು ಹಾರಿದರೆ ಎಎನ್-94 900 ಮೀಟರ್ ವೇಗದಲ್ಲಿ ಅಂದರೆ ಪ್ರತಿ ಸೆಕೆಂಡಿಗೆ 3 ಸಾವಿರ ಅಡಿ ವೇಗದಲ್ಲಿ ಬುಲೆಟ್ ಹಾರುತ್ತದೆ.
    • ಮಾರಣಾಂತಿಕ ರೈಫಲ್ ಆಗಿರುವ ಎಎನ್-94 30 ರಿಂದ 45 ಕಾರ್ಟ್ರಿಡ್ಜ್ ಮ್ಯಾಗಜೀನ್ ಸಾಮರ್ಥ್ಯ ಹೊಂದಿದೆ.
    • ಎಎನ್-94 ಅಸಾಲ್ಟ್ ರೈಫಲ್ 3.85 ಕೆಜಿ ತೂಕವಿದ್ದು, 37.1 ಇಂಚಿನಷ್ಟು ಸ್ಟಾಕ್‌ಬಟ್ ಹಾಗೂ 28.7 ಇಂಚಿನಷ್ಟು ಅಗಲವಿರಲಿದೆ, 15.9 ಇಂಚು ಉದ್ದವಿದೆ.

  • 4.75 ಲಕ್ಷ ಮೌಲ್ಯದ ರೈಫಲ್ ಎಗರಿಸಿದ್ದ ಕಳ್ಳ ಅಂದರ್

    4.75 ಲಕ್ಷ ಮೌಲ್ಯದ ರೈಫಲ್ ಎಗರಿಸಿದ್ದ ಕಳ್ಳ ಅಂದರ್

    ಶಿವಮೊಗ್ಗ: ಶೂಟಿಂಗ್ ಸ್ಪರ್ಧೆಯಲ್ಲಿ ಬಳಸುವ ರೈಫಲ್ ಕಳವು ಮಾಡಿದ್ದ ಆರೋಪಿಯನ್ನು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಚನ್ನಗಿರಿ ತಾಲೂಕಿನ ಕೊರಟಿಕೆರೆ ಗ್ರಾಮದ ನಿವಾಸಿ ನಾಗರಾಜ್(35) ಬಂಧಿತ ಆರೋಪಿ. ಈತ ಭದ್ರಾವತಿ ತಾಲೂಕಿನ ಹನುಮಂತಪುರ ಗ್ರಾಮದಲ್ಲಿನ ತೋಟದ ಮನೆಯ ಬಾಗಿಲನ್ನು ಮುರಿದು ಅಂದಾಜು 4.75 ಲಕ್ಷ ಮೌಲ್ಯದ ರೈಫಲ್ ಕಳವು ಮಾಡಿದ್ದನು. ಈ ಬಗ್ಗೆ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ತನಿಖೆಗೆ ಭದ್ರಾವತಿ ಗ್ರಾಮಾಂತರ ಠಾಣೆಯ ಸಿಪಿಐ ಮಂಜುನಾಥ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಇದೀಗ ಈ ಪ್ರಕರಣವನ್ನು ಭೇಧಿಸಿ ಆರೋಪಿಯನ್ನು ರೈಫಲ್ ಸಮೇತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

  • ಅಂತ್ಯಸಂಸ್ಕಾರದ ವೇಳೆ ಒಂದೇ ಒಂದು ರೈಫಲ್‍ನಿಂದ ಸಿಡಿಯದ ಗುಂಡು – ತನಿಖೆಗೆ ಬಿಹಾರ ಸರ್ಕಾರ ಆದೇಶ

    ಅಂತ್ಯಸಂಸ್ಕಾರದ ವೇಳೆ ಒಂದೇ ಒಂದು ರೈಫಲ್‍ನಿಂದ ಸಿಡಿಯದ ಗುಂಡು – ತನಿಖೆಗೆ ಬಿಹಾರ ಸರ್ಕಾರ ಆದೇಶ

    ಪಾಟ್ನಾ: ಬಿಹಾರ ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ಅವರ ಅಂತ್ಯಸಂಸ್ಕಾರ ಬುಧವಾರದಂದು ಬಾಲುವಾ ಬಜಾರ್ ಪ್ರದೇಶದಲ್ಲಿ ನೆರವೇರಿದೆ. ಆದರೆ ಈ ವೇಳೆ ಗೌರವ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸರು 21 ಗುಂಡುಗಳನ್ನು ಹಾರಿಸುವಲ್ಲಿ ವಿಫಲವಾಗಿದ್ದಾರೆ.

    ಸಂಪ್ರದಾಯದ ಪ್ರಕಾರ, ಸರ್ಕಾರದಲ್ಲಿ ಭಾಗಿಯಾಗಿದ್ದ ರಾಜಕಾರಣಿಗಳ ಅಂತ್ಯಸಂಸ್ಕಾರದ ವೇಳೆ ಪೊಲೀಸರು 21 ಸುತ್ತಿನ ಗುಂಡನ್ನು ಹಾರಿಸಿ ಗೌರವ ಸಲ್ಲಿಸುತ್ತಾರೆ. ಹಾಗೆಯೇ ಬಿಹಾರದ ಮಾಜಿ ಸಿಎಂ ಆಗಿ ಸೇವೆ ಸಲ್ಲಿಸಿದ್ದ ಜಗನ್ನಾಥ್ ಮಿಶ್ರಾ ಅವರ ಅಂತ್ಯಸಂಸ್ಕಾರದ ವೇಳೆ ಪೊಲೀಸರು 21 ಸುತ್ತಿನ ಗುಂಡನ್ನು ಹಾರಿಸಿ ಗೌರವ ಸಲ್ಲಿಸಲು ತಯಾರಿ ಮಾಡಿಕೊಂಡಿದ್ದರು.

    ಆದರೆ ಕೊನೆ ಕ್ಷಣದಲ್ಲಿ ಗುಂಡನ್ನು ಹಾರಿಸಿದಾಗ ಯಾವ ರೈಫಲ್‍ನಿಂದ ಕೂಡ ಗುಂಡು ಹಾರಲೇ ಇಲ್ಲ. ಪೊಲೀಸ್ ಪೇದೆಗಳು, ಹಿರಿಯ ಅಧಿಕಾರಿಗಳು ಗುಂಡನ್ನು ಹಾರಿಸಲು ಪ್ರಯತ್ನಿಸಿದರೂ ರೈಫಲ್‍ನಿಂದ ಒಂದೇ ಒಂದು ಗುಂಡು ಕೂಡ ಹಾರಲಿಲ್ಲ.

    ಈ ವೇಳೆ ಸ್ಥಳದಲ್ಲಿ ಬಿಹಾರ ಸಿಎಂ ನಿತಿಶ್ ಕುಮಾರ್, ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಹಾಗೂ ಎಲ್ಲಾ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇಂತಹ ಸಂದರ್ಭದಲ್ಲಿ ರೈಫಲ್ ಕೈಕೊಟ್ಟ ಕಾರಣಕ್ಕೆ ಪೊಲೀಸ್ ಇಲಾಖೆ ತಲೆತಗ್ಗಿಸುವಂತೆ ಆಗಿದೆ. ಸರಿಯಾಗಿ ರೈಫಲ್‍ಗಳನ್ನು ನೋಡಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದಕ್ಕೆ ಈ ಅವಮಾನವಾಗಿದೆ ಎಂದು ಹಿರಿಯ ಅಧಿಕಾರಿಗಳು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಈ ಬಗ್ಗೆ ಎಸ್‍ಪಿ ಮೃತ್ಯುಂಜಯ ಚೌಧರಿ ಪ್ರತಿಕ್ರಿಯಿಸಿ, ನಾವು ಈ ಬಗ್ಗೆ ತನಿಖೆ ಆರಂಭಿಸುತ್ತೇವೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

  • ಭಾರತದಲ್ಲಿ ತಯಾರಾಗಲಿದೆ ಎಕೆ-203 ರೈಫಲ್? ವಿಶೇಷತೆ ಏನು? ಅಗತ್ಯ ಏನು? – ಇಲ್ಲಿದೆ ಪೂರ್ಣ ಮಾಹಿತಿ

    ಭಾರತದಲ್ಲಿ ತಯಾರಾಗಲಿದೆ ಎಕೆ-203 ರೈಫಲ್? ವಿಶೇಷತೆ ಏನು? ಅಗತ್ಯ ಏನು? – ಇಲ್ಲಿದೆ ಪೂರ್ಣ ಮಾಹಿತಿ

    ಪ್ರಧಾನಿ ನರೇಂದ್ರ ಮೋದಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿನಿಧಿಸುವ ಅಮೇಠಿಯಲ್ಲಿ ಎಕೆ 203 ರೈಫಲ್ ಉತ್ಪಾದನೆ ಮಾಡುವ ಫ್ಯಾಕ್ಟರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಭಾರತೀಯ ಸೇನೆಗೆ ಈ ಅತ್ಯಾಧುನಿಕ ರೈಫಲ್ ಅಗತ್ಯವಾಗಿದ್ದು, ಈ ರೈಫಲ್ ವಿಶೇಷತೆ ಏನು? ಭಾರತೀಯ ಸೇನೆ ಯಾವೆಲ್ಲ ರೈಫಲ್ ಗಳನ್ನು ಬಳಕೆ ಮಾಡುತ್ತಿದೆ ಇತ್ಯಾದಿ ವಿವರಗಳನ್ನು ಇಲ್ಲಿ ನೀಡಲಾಗಿದೆ.

    ಯಾಕೆ ಎಕೆ – 203 ಬೇಕು?
    ಭಾರತೀಯ ಸೇನೆ ವಿಶ್ವದಲ್ಲೇ 5ನೇ ಸ್ಥಾನವನ್ನು ಹೊಂದಿದ್ದು, ಪ್ರಸ್ತುತ ನಮ್ಮ ಸೈನಿಕರು ಇಂಡಿಯಾ ಸ್ಮಾಲ್ ಆರ್ಮ್ಸ್ ಸಿಸ್ಟಂ(ಐಎನ್‍ಎಎಸ್- ಇನ್ಸಾಸ್) ರೈಫಲ್ ಗಳನ್ನು ಬಳಕೆ ಮಾಡುತ್ತಿದ್ದಾರೆ. ಕೆಲ ವರ್ಷಗಳಿಂದ ಮಿಲಿಟರಿ ಮತ್ತು ಪ್ಯಾರಾಮಿಲಿಟರಿ ಸೈನಿಕರು ಇನ್ಸಾಸ್ ಬಳಕೆಯಲ್ಲಿ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

    ಜಾಮ್ ಆಗುವುದು, ಮೂರು ಸುತ್ತಿನ ಗುಂಡು ಆದ ಕೂಡಲೇ ಆಟೋಮ್ಯಾಟಿಕ್ ಮೋಡ್ ಗೆ ಹೋಗುವುದು, ದೀರ್ಘ ಕಾರ್ಯಾಚರಣೆಯ ವೇಳೆ ಇನ್ಸಾನ್ ನಲ್ಲಿ ಆಯಿಲ್ ಸೋರಿಕೆ ಆಗುತ್ತಿರುತ್ತದೆ. 1999ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಕನಿಷ್ಠ ಉಷ್ಣಾಂಶದ ವೇಳೆ ವೈರಿ ಜೊತೆ ಕಾದಾಡುತ್ತಿದ್ದಾಗ ಈ ರೈಫಲ್ ಗಳ ಮ್ಯಾಗಜಿನ್ ಗಳು ಆಗಾಗ ಜ್ಯಾಮ್ ಆಗುತಿತ್ತು. ಪದೇ ಪದೇ ಕೈಕೊಟ್ಟು ಸೈನಿಕರ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದ್ದ ಕಾರಣ ಸರ್ಕಾರ ಈಗ ಸ್ವದೇಶಿ ನಿರ್ಮಿತ ಇನ್ಸಾಸ್ ರೈಫಲ್ ಗಳಿಗೆ ತಿಲಾಂಜಲಿ ನೀಡಿ ಎಕೆ – 203 ರೈಫಲ್ ನೀಡಲು ಮುಂದಾಗಿದೆ. ಈ ಕಾರಣದ ಜೊತೆಗೆ ಉಗ್ರರು ಮತ್ತು ನಕ್ಸಲರು ಎಕೆ 47 ಗನ್ ಗಳನ್ನು ಬಳಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈಗ ರಷ್ಯಾ ಕಂಪನಿಯ ಜೊತೆಗೂಡಿ ದೇಶದಲ್ಲೇ ಎಕೆ ರೈಫಲ್ ಗಳನ್ನು ಉತ್ಪಾದಿಸಲು ಮುಂದಾಗಿದೆ.

    ಇನ್ಸಾಸ್ ವರ್ಸಸ್ ಎಕೆ 203:
    ಇನ್ಸಾಸ್ 400 ಮೀಟರ್ ವ್ಯಾಪ್ತಿಯ ಗುರಿಯನ್ನು ಹೊಡೆಯುವ ಸಾಮರ್ಥ್ಯವನ್ನು ಹೊಂದಿದೆ. ಮ್ಯಾಗಜಿನ್ ನಲ್ಲಿ 20 ಗುಂಡುಗಳನ್ನು ಹಾಕಬಹುದಾಗಿದೆ. ಇನ್ಸಾಸ್ ಉದ್ದವಾಗಿದ್ದು 4.15 ಕೆಜಿ ತೂಕವಿದ್ದು ಸುಲಭವಾಗಿ ಎತ್ತಿಕೊಂಡು ಹೋಗಲು ಸಾಧ್ಯವಿಲ್ಲ. ಎಕೆ – 203 ಎಕೆ -47 ಉನ್ನತೀಕರಿಸಿದ ಆವೃತ್ತಿಯಾಗಿದ್ದು, ಮ್ಯಾಗಜಿನ್ ನಲ್ಲಿ 30 ಗುಂಡುಗಳನ್ನು ಹಾಕಬಹುದಾಗಿದೆ. 800 ಮೀಟರ್ ದೂರದ ಗುರಿಯನ್ನು ಹೊಡೆಯುವ ಸಾಮರ್ಥ್ಯ ಹೊಂದಿದೆ. ಇದರ ಮ್ಯಾಗಜಿನ್ ನಲ್ಲಿ 30 ಬುಲೆಟ್ ಗಳನ್ನು ಹಾಕಬಹುದು. ಒಂದು ನಿಮಿಷಕ್ಕೆ 600 ಬುಲೆಟ್ ಗಳನ್ನು ಫೈರ್ ಮಾಡುವ ಸಾಮರ್ಥ್ಯ ಹೊಂದಿರುವುದು ಇದರ ವಿಶೇಷ. ಅಂದರೆ ಒಂದು ಸೆಕೆಂಡಿಗೆ 10 ಬುಲೆಟ್ ಫೈರ್ ಮಾಡಬಹುದು. ಅಟೋಮ್ಯಾಟಿಕ್ ಮೋಡ್ ಮತ್ತು ಸೆಮಿ ಅಟೋಮ್ಯಾಟಿಕ್ ಮೋಡ್ ಗೆ ಹಾಕಿ ಬುಲೆಟ್ ಫೈರ್ ಮಾಡಬಹುದು. ಅಷ್ಟೇ ಅಲ್ಲದೇ ಈ ಗನ್ ಜಾಮ್ ಆಗುವುದಿಲ್ಲ. ಎಕೆ ನಿರ್ಮಿತ ಗನ್ ಗಳು ಎಲ್ಲ ರೀತಿಯ ಹವಾಮಾನದಲ್ಲೂ ಕೆಲಸ ಮಾಡುತ್ತದೆ. ಮಣ್ಣು, ಮರುಭೂಮಿ, ನೀರಿನಲ್ಲೂ ಕೆಲಸ ಮಾಡುತ್ತದೆ.

    ಯಾವೆಲ್ಲ ದೇಶಗಳು ಎಕೆ 47 ಬಳಸುತ್ತಿವೆ?
    50ಕ್ಕೂ ಹೆಚ್ಚು ದೇಶಗಳು ಎಕೆ 47 ಗನ್ ಗಳನ್ನು ಬಳಕೆ ಮಾಡುತ್ತಿವೆ. 30ಕ್ಕೂ ಹೆಚ್ಚು ದೇಶಗಳು ರಷ್ಯಾದ ಈ ಕಲಾಶ್ನಿಕೋವ್ ರೈಫಲ್ ಉತ್ಪಾದನೆ ಮಾಡಲು ಲೈಸನ್ಸ್ ಪಡೆದುಕೊಂಡಿದೆ. ರಷ್ಯಾದ ವಿಶೇಷ ಮಿಲಿಟರಿ ಪಡೆಗಳು ಈಗ ಎಕೆ 203 ರೈಫಲ್ ಬಳಸುತ್ತಿವೆ.

    ಮೇಕ್ ಇನ್ ಇಂಡಿಯಾದ ಅಡಿಯಲ್ಲಿ ನಿರ್ಮಾಣ:
    ಕಳೆದ 10 ವರ್ಷಗಳಿಂದ ಸರ್ಕಾರ ಸೈನಿಕರಿಗೆ ಹೊಸ ರೈಫಲ್ ನೀಡಲು ಸಿದ್ಧತೆ ನಡೆಸಿತ್ತು. ಆದರೆ ಟೆಂಡರ್ ಸೇರಿದಂತೆ ಕೆಲ ಸಮಸ್ಯೆಗಳಿಂದಾಗಿ ರೈಫಲ್ ಖರೀದಿ ಪ್ರಕ್ರಿಯೆ ಅಂತಿಮವಾಗಿರಲಿಲ್ಲ. ಭಾರತ ರಷ್ಯಾದ ಜೊತೆಗೆ 5.43 ಶತಕೋಟಿ ಡಾಲರ್ ವೆಚ್ಚದ ಟ್ರಯಂಫ್ ರಕ್ಷಣಾ ವ್ಯವಸ್ಥೆ ಕ್ಷಿಪಣಿ ಖರೀದಿಸಲು ನಡೆಸಿದ ಒಪ್ಪಂದದ ನಂತರ ಭಾರತ ರಷ್ಯಾ ಜೊತೆಗೂಡಿ ಮೇಕ್ ಇನ್ ಇಂಡಿಯಾದ ಅಡಿಯಲ್ಲಿ ಎಕೆ-203 ರೈಫಲ್ ಉತ್ಪಾದನೆ ಸಂಬಂಧ ಜಂಟಿ ಉದ್ಯಮ ಸ್ಥಾಪನೆಯಾಯಿತು. ಒಟ್ಟು ಶೇ.50.5 ಶೇರನ್ನು ಭಾರತದ ಜೆವಿ ಕಂಪನಿ ಹೊಂದಿದ್ದರೆ ಶೇ.49.5 ಪಾಲನ್ನು ಕಲಾಶ್ನಿಕೋವ್ ಕನ್ಸರ್ನ್ ಹೊಂದಿದೆ. ಕಳೆದ ಅಕ್ಟೋಬರ್ ನಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ನರೇಂದ್ರ ಮೋದಿ ಭಾರತದಲ್ಲಿ ಎಕೆ ರೈಫಲ್ಸ್ ಉತ್ಪಾದನೆ ಸಂಬಂಧ ಒಪ್ಪಂದಕ್ಕೆ ಜಂಟಿಯಾಗಿ ಸಹಿ ಹಾಕಿದ್ದರು. ಇದನ್ನೂ ಓದಿ: ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

    ಭಾರತದಲ್ಲಿ ಯಾವೆಲ್ಲ ರೈಫಲ್ ಬಳಕೆಯಾಗುತ್ತಿದೆ?
    ಸೈನಿಕರು ಇನ್ಸಾಸ್ ಗನ್ ಗಳನ್ನು ಬಳಕೆ ಮಾಡುತ್ತಿದ್ದರೆ, ಉಗ್ರರ ದಾಳಿ ಹೆಚ್ಚಿರುವ ಪ್ರದೇಶದಲ್ಲಿ  ಸಿಆರ್‌ಪಿಎಫ್ ಯೋಧರು ಆಮದಾಗಿರುವ ಎಕೆ 47 ಗನ್ ಬಳಕೆ ಮಾಡುತ್ತಿದ್ದಾರೆ. ಪ್ಯಾರಾ ಕಮಾಂಡೋಗಳು, ಗರುಡಾ ಕಮಾಂಡೋ ಫೋರ್ಸ್(ಐಎಎಫ್), ಮರೀನ್ ಕಮಾಂಡೋಗಳು, ರಾಷ್ಟ್ರೀಯ ಭದ್ರತಾ ದಳ(ಎನ್‍ಎಸ್‍ಜಿ) ಜರ್ಮನ್ ಮತ್ತು ಇಸ್ರೇಲ್ ನಿರ್ಮಿತ ಅಟೋಮ್ಯಾಟಿಕ್ ರೈಫಲ್ ಹೆಕ್ಲರ್ ಕೋಚ್, ಎಂಪಿ5 ಸಬ್ ಮಶೀನ್ ಗನ್, ತಾವೂರ್ ರೈಫಲ್ ಗಳನ್ನು ಬಳಕೆ ಮಾಡುತ್ತಿದೆ. ವಿಐಪಿ, ವಿವಿಐಪಿಗಳಿಗೆ ನೀಡುವ ಎಸ್‍ಪಿಜಿ ಬೆಲ್ಜಿಯಂ ನಿರ್ಮಿತ ಎಫ್‍ಎನ್ 2000 ಬುಲ್‍ಪಪ್ ಅಸಾಲ್ಟ್ ರೈಫಲ್ ಬಳಕೆ ಮಾಡುತ್ತಿವೆ.

    ಎಷ್ಟು ರೈಫಲ್ ಉತ್ಪಾದನೆಯಾಗಲಿದೆ?
    ಸ್ವದೇಶಿ ಇನ್ಸಾಸ್ ರೈಫಲ್ ತಮಿಳುನಾಡಿನ ತಿರುಚನಾಪಳ್ಳಿ, ಉತ್ತರಪ್ರದೇಶದ ಕಾನ್ಪುರ, ಪಶ್ಚಿಮ ಬಂಗಾಳದ ಇಚಾಪುರ್‍ನಲ್ಲಿ ತಯಾರಾಗುತಿತ್ತು. ಅಮೇಠಿಯಲ್ಲಿ ಒಟ್ಟು 7.50 ಲಕ್ಷ ಎಕೆ-203 ಗನ್ ನಿರ್ಮಿಸಲು ಉದ್ದೇಶಿಸಲಾಗಿದೆ. ಆರಂಭದಲ್ಲಿ ಎಲ್ಲ ಸೈನಿಕರಿಗೆ ಈ ರೈಫಲ್ ನೀಡಿದರೆ ನಂತರ ಪ್ಯಾರಾಮಿಲಿಟರಿ ಮತ್ತು ಪೊಲೀಸರಿಗೆ ಈ ರೈಫಲ್ ನೀಡಲು ಸರ್ಕಾರ ಮುಂದಾಗಿದೆ.

    ಅಮೆರಿಕದ ಜೊತೆ ಸಹಿ:
    ಕಳೆದ ವಾರ ರಕ್ಷಣಾ ಸಚಿವಾಲಯ ಅಮೆರಿಕದ ಸಿಗ್ ಸಾಯರ್ ಜೊತೆ 73 ಸಾವಿರ ಅಸಾಲ್ಟ್ ರೈಫಲ್ ಖರೀದಿ ಸಂಬಂಧ ಒಪ್ಪಂದ ಮಾಡಿಕೊಂಡಿದೆ. ಭಾರತ ಚೀನಾ ನಡುವಿನ 3,600 ಕಿ.ಮೀ ಗಡಿಯನ್ನು ಕಾಯುವ ಯೋಧರು ಈ ರೈಫಲ್ ಹಿಡಿದು ದೇಶವನ್ನು ಕಾಯಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸೌದಿ ಯುವ ರಾಜನಿಗೆ ಚಿನ್ನ ಲೇಪಿತ ರೈಫಲ್ ಗಿಫ್ಟ್ ಕೊಟ್ಟ ಪಾಕ್

    ಸೌದಿ ಯುವ ರಾಜನಿಗೆ ಚಿನ್ನ ಲೇಪಿತ ರೈಫಲ್ ಗಿಫ್ಟ್ ಕೊಟ್ಟ ಪಾಕ್

    ಇಸ್ಲಾಮಾಬಾದ್: ಪಾಕಿಸ್ತಾನ ಭೇಟಿ ನೀಡಿದ್ದ ಸೌದಿ ಯುವರಾಜ್ ಮೊಹ್ಮದ್ ಬಿನ್ ಸುಲ್ತಾನ್ ಅವರಿಗೆ ಪಾಕಿಸ್ತಾನ ಚಿನ್ನ ಲೇಪಿತ ರೈಫಲನ್ನು ಉಡುಗೊರೆಯಾಗಿ ನೀಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನ ಮೇಲೆ ಮೊದಲ ಬಾರಿಗೆ ವಿಶ್ವದ ಬಹುತೇಕ ರಾಷ್ಟ್ರಗಳು ಭಯೋತ್ಪಾದನೆ ವಿರುದ್ಧ ಕ್ರಮಕೈಗೊಳ್ಳಲು ಆಗ್ರಹಿಸುತ್ತಿದ್ದು, ಇದೇ ವೇಳೆ ಪಾಕಿಸ್ತಾನಕ್ಕೆ ಭೇಟಿ ನೀಡಿ ಸೌದಿ ಯುವರಾಜ್ 20 ಶತಕೋಟಿ ಡಾಲರ್ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಿದ್ದರು.

    ಇದೇ ವೇಳೆ ಪಾಕಿಸ್ತಾನ ಸೆನೆಟ್ ಮೊಹ್ಮದ್ ಬಿನ್ ಸುಲ್ತಾನ್ ರನ್ನು ಭೇಟಿ ಮಾಡಿದ ವೇಳೆ ಈ ಕೊಡುಗೆಯನ್ನು ನೀಡಿದ್ದಾರೆ. ಪುಲ್ವಾಮಾ ದಾಳಿಯ ಬಳಿಕ ಭಾರತ ನೀಡಿದ್ದ ಪರಮಾಪ್ತ ರಾಷ್ಟ್ರ ಸ್ಥಾನಮಾನವನ್ನು ಹಿಂತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನ ವಸ್ತುಗಳ ಮೇಲೆ ಶೇ.200 ರಷ್ಟು ಆಮದು ಸುಂಕವನ್ನು ಹೆಚ್ಚಳ ಮಾಡಿತ್ತು. ಆ ಬಳಿಕ ವಿಶ್ವದ 40 ರಾಷ್ಟ್ರಗಳು ಭಾರತ ಪರ ಹೇಳಿಕೆ ನೀಡಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಒತ್ತಡ ಹಾಕಿದೆ.

    ಪಾಕಿಸ್ತಾನದ ಬಳಿಕ ಭಾರತಕ್ಕೆ ಭೇಟಿ ನೀಡಿದ್ದ ಸೌದಿ ಯುವರಾಜ ಭಾರತದೊಂದಿಗೆ 100 ಶತಕೋಟಿ ಡಾಲರ್ ಹೂಡಿಕೆ ಹಾಗೂ ಸೌದಿ ರಾಷ್ಟ್ರದಲ್ಲಿ ವಿವಿಧ ಕಾರಣಗಳಿಂದ ಶಿಕ್ಷೆ ಅನುಭವಿಸುತ್ತಿರುವ 2 ಸಾವಿರ ಮಂದಿಯನ್ನು ಬಿಡುಗಡೆ ಮಾಡುವ ಭರವಸೆಯನ್ನು ನೀಡಿದ್ದಾರೆ. ಇತ್ತ ಸೌದಿ ರಾಜಕುಮಾರನನ್ನು ಪ್ರಧಾನಿ ಮೋದಿ ಅವರು ಸ್ವಾಗತ ಕೋರಿರುವ ಕುರಿತು ದೇಶದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಕಾಂಗ್ರೆಸ್ ಪಕ್ಷವೂ ಕೂಡ ಮೋದಿ ಅವರು ಸೌದಿ ರಾಜಕುಮಾರರನ್ನು ಅಪ್ಪಿ ಸ್ವಾಗತಿಸಿರುವುದನ್ನು ಟೀಕಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಸ್‍ಪಿ ನಿವಾಸದ ಎದುರೇ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ

    ಎಸ್‍ಪಿ ನಿವಾಸದ ಎದುರೇ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ

    ಬಾಗಲಕೋಟೆ: ಜಿಲ್ಲೆಯ ಎಸ್‍ಪಿ ನಿವಾಸಕ್ಕೆ ಭದ್ರತಾ ಸಿಬ್ಬಂದಿ ಆಗಿದ್ದ ಪೊಲೀಸ್ ಪೇದೆಯೊಬ್ಬರು ಅವರ ಮನೆ ಎದುರೇ ತೆಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮಂಜುನಾಥ್ ಹರಿಜನ(28) ಆತ್ಮಹತ್ಯೆಗೆ ಶರಣಾದ ಪೇದೆ. ಮಂಜುನಾಥ್ ಅವರು ಮೂಲತಃ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಿಟ್ಟಲಕೋಡ ಗ್ರಾಮದ ನಿವಾಸಿ. ಕಳೆದ ಒಂದೂವರೆ ವರ್ಷದಿಂದ ಬಾಗಲಕೋಟೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬಾಗಲಕೋಟೆಯ ಎಸ್‍ಪಿ ಸಿ.ಬಿ ರಿಷ್ಯಂತ್ ನಿವಾಸಕ್ಕೆ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಎಸ್‍ಪಿ ಮನೆ ಎದುರೇ ಕರ್ತವ್ಯಕ್ಕೆಂದು ನೀಡಲಾಗಿದ್ದ ರೈಫಲ್ 303ಯಿಂದ ತೆಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮಂಜುನಾಥ್ ಹರಿಜನ ಅವರು 2012 ರಂದು ಪೊಲೀಸ್ ಇಲಾಖೆಗೆ ಪೇದೆಯಾಗಿ ನೇಮಕವಾಗಿದ್ದರು. ಮಂಜುನಾಥ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ಪೇದೆ ಆತ್ಮಹತ್ಯೆ ಹಿನ್ನೆಲೆ ಪೊಲೀಸರು ಶ್ವಾನದಳದೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶಿಲನೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv