Tag: ರೈಲು ರೋಕೋ

  • ಕೃಷಿ ಕಾಯ್ದೆ ವಿರುದ್ಧ ದೇಶಾದ್ಯಂತ ರೈಲ್ ರೋಕೋ- ಬೆಂಗ್ಳೂರು, ಬೆಳಗಾವಿ, ರಾಯಚೂರಲ್ಲಿ ಮುತ್ತಿಗೆ ಯತ್ನ

    ಕೃಷಿ ಕಾಯ್ದೆ ವಿರುದ್ಧ ದೇಶಾದ್ಯಂತ ರೈಲ್ ರೋಕೋ- ಬೆಂಗ್ಳೂರು, ಬೆಳಗಾವಿ, ರಾಯಚೂರಲ್ಲಿ ಮುತ್ತಿಗೆ ಯತ್ನ

    ನವದೆಹಲಿ/ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ರೈತರು ರೈಲ್ ರೋಕೋ ನಡೆಸಿದ್ರು. ಈ ವೇಳೆ ರೈತರಿಗಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರೇ ಇದ್ದರು. ಪಂಜಾಬ್, ಹರಿಯಾಣ, ಉತ್ತರಪ್ರದೇಶಗಳಲ್ಲಿ ರೈಲು ಹಳಿಗಳ ಮೇಲೆ ಕೂತು ರೈತರು ಪ್ರತಿಭಟನೆ ನಡೆಸಿದ್ರು. ಹಲವು ಕಡೆಗಳಲ್ಲಿ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆಯಿತು.

    ರಾಜ್ಯದಲ್ಲಿ ಬೆಂಗಳೂರಿನ ಯಶವಂತಪುರ ರೈಲ್ವೇ ನಿಲ್ದಾಣದಲ್ಲಂತೂ ಪೊಲೀಸರು ಮತ್ತು ರೈತರ ನಡುವೆ ಹೈಡ್ರಾಮವೇ ನಡೆಯಿತು. ರೈಲ್ವೇ ನಿಲ್ದಾಣದ ಮುಂಭಾಗವೇ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರನ್ನು ಪೊಲೀಸರು ತಡೆದ್ರು. ಕೆಲ ರೈತರು ರೈಲ್ವೇ ಫ್ಲ್ಯಾಟ್ ಫಾರ್ಮ್‍ವರೆಗೂ ನುಗ್ಗಿದ್ದರು. ಕೆಲಕಾಲ ನೂಕುನುಗ್ಗಲು ಸೃಷ್ಟಿಯಾಯ್ತು. ಈ ವೇಳೆ ಗರಂ ಆದ ಕುರುಬೂರು ಶಾಂತಕುಮಾರ್, ನಿಮ್ ಕೈಯಲ್ಲಿ ರೌಡಿಗಳನ್ನು, ಗೂಂಡಾಗಳನ್ನು ಹಿಡಿಯೋದಕ್ಕೆ ಆಗಲ್ಲ. ನಮ್ಮನ್ನು ಹಿಡಿಯೋಕೆ ಬರ್ತೀರಾ..? ನಮ್ಮನ್ನು ತಳ್ತೀರಾ..? ನಾವೇನ್ ದೇಶದ್ರೋಹಿಗಳಾ ಅಂತ ಆಕ್ರೋಶ ವ್ಯಕ್ತಪಡಿಸಿದ್ರು.

    ಬೆಳಗಾವಿಯಲ್ಲಂತೂ ರೈತರು-ಪೊಲೀಸರ ನಡುವೇ ತಳ್ಳಾಟ ನೂಕಾಟ ನಡೆಯಿತು. ಕೇಂದ್ರ ಮಾಜಿ ಸಚಿವ ಬಾಬಾಗೌಡ ಪಾಟೀಲ್ ಸೇರಿ 20ಕ್ಕೂ ಅಧಿಕ ರೈತರನ್ನು ವಶಕ್ಕೆ ಪಡೆಯಲಾಯ್ತು. ಮೈಸೂರಿನಲ್ಲಿ ಬಸ್ ಮೇಲಿದ್ದ ಪ್ರಧಾನಿ ಮೋದಿ, ಸಿಎಂ ಬಿಎಸ್‍ವೈ ಭಾವಚಿತ್ರ ಕಂಡು ರೈತರು ಶೂನಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ರು.

    ಹುಬ್ಬಳ್ಳಿಯಲ್ಲಿ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ್ರೆ, ಜಯಪುರದಲ್ಲಿ ರೇಲ್ವೇ ನಿಲ್ದಾಣದ ಎದುರು ರೈತ ಗೀತೆ ಹಾಡುವುದರ ಮೂಲಕ ಪ್ರತಿಭಟನೆ ಮಾಡಿದ್ರು. ರಾಯಚೂರಿನಲ್ಲಿ ರೈಲು ನಿಲ್ದಾಣದೊಳಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದ್ರು.

  • ರೈಲು ರೋಕೋಗೆ ಪೊಲಿಸರ ತಡೆ – ವಿಜಯಪುರ ನಿಲ್ದಾಣದಲ್ಲಿ ರೈತರ ಪ್ರತಿಭಟನೆ

    ರೈಲು ರೋಕೋಗೆ ಪೊಲಿಸರ ತಡೆ – ವಿಜಯಪುರ ನಿಲ್ದಾಣದಲ್ಲಿ ರೈತರ ಪ್ರತಿಭಟನೆ

    ವಿಜಯಪುರ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲಿಸಿ ವಿಜಯಪುರದಲ್ಲಿ ಪ್ರಗತಿಪರ ಸಂಘಟನೆಗಳು ‘ರೈಲು ರೋಕೋ’ಗೆ ಇಂದು ಮುಂದಾಗಿದ್ದರು.

    ಈ ವೇಳೆ ರೈಲ್ವೆ ಪೊಲೀಸರು ‘ರೈಲು ರೋಕೋ’ ಚಳುವಳಿಗೆ ಅಡ್ಡಿಪಡಿಸಿದ್ದಾರೆ. ಇದರಿಂದ ಕೇಂದ್ರ ರೈಲ್ವೆ ನಿಲ್ದಾಣದ ಎದುರೇ ಪ್ರತಿಭಟನೆಗೆ ಸಂಘಟನೆಗಳು ಮುಂದಾದವು.

    ರೈಲ್ವೆ ನಿಲ್ದಾಣದ ಎದುರು ರೈತ ಗೀತೆ ಹಾಡುವುದರ ಮೂಲಕ ಹೋರಾಟಗಾರು ಪ್ರತಿಭಟನೆ ಮಾಡಿದರು. ಅಲ್ಲದೆ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

    ಸದ್ಯ ಸ್ಥಳದಲ್ಲಿ ಒಂದು ಡಿಎಆರ್ ತುಕಡಿ, ಓರ್ವ ಸಿಪಿಐ, ಮೂವರು ಪಿಎಸ್‍ಐ ಹಾಗೂ ಮೂವತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

  • ರೈತರಿಂದ ನಾಳೆ ದೇಶಾದ್ಯಂತ ರೈಲು ರೋಕೋ ಚಳವಳಿ – ಮಧ್ಯಾಹ್ನ 12ರಿಂದ 4ಗಂಟೆವರೆಗೆ ರೈಲು ಸ್ತಬ್ಧ

    ರೈತರಿಂದ ನಾಳೆ ದೇಶಾದ್ಯಂತ ರೈಲು ರೋಕೋ ಚಳವಳಿ – ಮಧ್ಯಾಹ್ನ 12ರಿಂದ 4ಗಂಟೆವರೆಗೆ ರೈಲು ಸ್ತಬ್ಧ

    – ದಿಶಾ ರವಿ ಬಂಧನಕ್ಕೆ ರೈತರು, ಎಚ್‍ಡಿಕೆ ಖಂಡನೆ

    ನವದೆಹಲಿ: ಕೃಷಿ ಕಾಯಿದೆ ರದ್ದತಿಗೆ ಆಗ್ರಹಿಸಿ ರೈತರು ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದ್ದಾರೆ. ಟ್ರ್ಯಾಕ್ಟರ್ ರ್ಯಾಲಿ, ಹೆದ್ದಾರಿ ತಡೆ ಬಳಿಕ ಇದೀಗ ನಾಳೆ ದೇಶಾದ್ಯಂತ `ರೈಲ್ ರೋಕೋ’ ಚಳವಳಿ ಹಮ್ಮಿಕೊಂಡಿದ್ದಾರೆ.

    ಗುರುವಾರ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೆ 4 ಗಂಟೆಗಳ ಕಾಲ ಎಲ್ಲಾ ರೈಲುಗಳನ್ನು ತಡೆಯಲಿದ್ದಾರೆ. ರಾಜ್ಯದಲ್ಲೂ ರೈಲ್ ರೋಕೋ ಚಳವಳಿ ಮಾಡ್ತೇವೆ ಅಂತ ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ರೈಲು ತಡೆ ಆಗಲಿದೆ. ‘ಟೂಲ್‍ಕಿಟ್’ ಕೇಸಲ್ಲಿ ಬಂಧನವಾಗಿರೋ ಬೆಂಗಳೂರಿನ ದಿಶಾ ರವಿ ಬಂಧನವನ್ನು ಮಾಜಿ ಸಿಎಂ ಕುಮಾರಸ್ವಾಮಿ ಖಂಡಿಸಿದ್ದಾರೆ. ಇದು ಅಘೋಷಿತ ತುರ್ತುಪರಿಸ್ಥಿತಿ ಅನ್ನಿಸ್ತಿದೆ ಅಂದಿದ್ದಾರೆ. ದಿಶಾರವಿ ವಾಟ್ಸಪ್ ಗ್ರೂಪ್‍ನಲ್ಲಿ ಖಲಿಸ್ತಾನಿ ಬೆಂಬಲಿತ ಪಿಜೆಎಫ್ (ಪೊಯೇಟಿಕ್ ಜಸ್ಟೀಸ್ ಫೌಂಡೇಷನ್) ಸದಸ್ಯರು ಇರೋದು ಕಂಡು ಬಂದಿದೆ.

    ದಿಶಾ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದೆ. ಟೂಲ್‍ಕಿಟ್ ಸಂಬಂಧ ‘ಝೂಮ್’ ಲೈವ್‍ನಲ್ಲಿ ಪ್ಲಾನ್ ಆಗಿದೆ ಅಂತ ದೆಹಲಿ ಪೊಲೀಸರು ಹೇಳಿದ್ದಾರೆ. ಮುಂಬೈನಲ್ಲಿ ಸಾಮಾಜಿಕ ಕಾರ್ಯಕರ್ತೆ, ವಕೀಲೆಯಾಗಿರುವ ನಿಖಿತಾ ಜಾಕೋಬ್ ಅನ್ನೋವ್ರು ತಾವು ಟೂಲ್‍ಕಿಟ್ ಸಿದ್ಧಪಡಿಸೋದ್ರಲ್ಲಿ ಭಾಗಿಯಾಗಿದ್ದು ನಿಜ. ಆದರೆ ದೇಶ ವಿರೋಧವಾಗಿ ಅಲ್ಲ. ನಾನು ಮಾಹಿತಿ ನೀಡಿದ್ದೇನೆ ಅಷ್ಟೇ ಅಂದಿದ್ದಾರೆ. ಈ ಮಧ್ಯೆ, ದೆಹಲಿ ಕೆಂಪುಕೋಟೆಯಲ್ಲಿ ಕತ್ತಿ ಬೀಸಿ, ಹಿಂಸಾಚಾರಕ್ಕೆ ಪ್ರಚೋದಿಸಿದ್ದ ಮನಿಂದರ್ ಸಿಂಗ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.