Tag: ರೈಲ್ವೆ ರಕ್ಷಣಾ ಪಡೆ

  • ಟಿಕೆಟ್ ಸಿಕ್ಕಿಲ್ಲ ಎಂದು ಬೋಗಿಯ ಕೆಳಗೆ ಅವಿತು 290 ಕಿಮೀ ಪಯಣಿಸಿದ ಭೂಪ

    ಟಿಕೆಟ್ ಸಿಕ್ಕಿಲ್ಲ ಎಂದು ಬೋಗಿಯ ಕೆಳಗೆ ಅವಿತು 290 ಕಿಮೀ ಪಯಣಿಸಿದ ಭೂಪ

    – ಜಬಲ್ಪುರದಲ್ಲಿ ಗಾಲಿಗಳನ್ನು ಪರಿಶೀಲಿಸುವಾಗ ಯುವಕನನ್ನು ವಶಕ್ಕೆ ರೈಲ್ವೇ ಪೊಲೀಸರು

    ಭೋಪಾಲ್: ಟಿಕೆಟ್ ಸಿಕ್ಕಿಲ್ಲ ಎಂದು ಬೋಗಿಯ ಕೆಳಗೆ ಅವಿತುಕೊಂಡು ಕುಳಿತು ಯುವಕನೊಬ್ಬ 290 ಕಿ.ಮೀ ಪ್ರಯಾಣಿಸಿದ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

    ಇಟಾರ್ಸಿಯಿಂದ (Itarsi) ಪ್ರಯಾಣಿಸಲು ಟಿಕೆಟ್ ಸಿಗದಿರುವ ಕಾರಣ ತನ್ನ ಪ್ರಾಣವನ್ನೇ ಪಣಕ್ಕಿಟ್ಟು 290 ಕಿ.ಮೀ ಪ್ರಯಾಣಿಸಿದ್ದಾನೆ.ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ – ಮೃತರ ಸಂಖ್ಯೆ 4ಕ್ಕೆ ಏರಿಕೆ

    ದಾನಪುರ್ ಎಕ್ಸಪ್ರೆಸ್‌ (Danapur Express) ರೈಲಿನಲ್ಲಿ ಇಟಾರ್ಸಿಯಿಂದ ಪ್ರಯಾಣಿಸಲು ಟಿಕೆಟ್ ಸಿಗದ ಕಾರಣ ಬೋಗಿಯ ಕೆಳಗೆ ಅವಿತುಕೊಂಡು ಕುಳಿತಿದ್ದಾನೆ. ಜಬಲ್ಪುರ (Jabalapur) ರೈಲು ನಿಲ್ದಾಣದ ಬಳಿ ಕ್ಯಾರೇಜ್ ಮತ್ತು ವ್ಯಾಗನ್ ಇಲಾಖೆ ಸಿಬ್ಬಂದಿ ನಡೆಸಿದ ರೋಲಿಂಗ್ ಪರೀಕ್ಷೆ ವೇಳೆ ವ್ಯಕ್ತಿಯೊಬ್ಬ ಅಡಗಿಕೊಂಡಿರುವುದು ಪತ್ತೆಯಾಗಿದೆ.

    ಬಳಿಕ ಆತನನ್ನು ವಿಚಾರಣೆಗೊಳಪಡಿಸಿದಾಗ ಇಟಾರ್ಸಿಯಲ್ಲಿ ತಾನು ರೈಲು ಹತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಟಿಕೆಟ್ ಖರೀದಿಸಲು ಹಣವಿಲ್ಲದ ಕಾರಣ, ರೈಲಿನ ಚಕ್ರಗಳ ನಡುವೆ ಪ್ರಯಾಣಿಸುವುದು ಸೂಕ್ತವೆನಿಸಿತು ಎಂದು ತಿಳಿಸಿದ್ದಾನೆ. ತಕ್ಷಣವೇ ಸ್ಥಳಕ್ಕೆ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿಯನ್ನು ಕರೆಸಲಾಯಿತು. ಆದರೆ ಆ ವ್ಯಕ್ತಿ ರೈಲಿನ ಕೆಳಗೆ ಹೇಗೆ ಅಡಗಿ ಕುಳಿತನು ಎನ್ನುವ ಕುರಿತು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸದ್ಯ ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿ ಬೋಗಿಯಿಂದ ಕೆಳಗಿನಿಂದ ಹೊರಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಮೆಟ್ರೋ ರೈಲು ಸೇವೆ ವಿಸ್ತರಣೆ – ರಾತ್ರಿ 11 ಗಂಟೆ ಬಳಿಕ ಎಂ.ಜಿ ರಸ್ತೆಯಿಂದ ಸಂಚಾರ ಬಂದ್‌

  • ಕರ್ನಾಟಕಕ್ಕೆ ಯೋಧರನ್ನು ಹೊತ್ತುಕೊಂಡು ಬರುತ್ತಿದ್ದ ರೈಲು ಸ್ಫೋಟಕ್ಕೆ ಸಂಚು, ಸಿಬ್ಬಂದಿ ವಶ

    ಕರ್ನಾಟಕಕ್ಕೆ ಯೋಧರನ್ನು ಹೊತ್ತುಕೊಂಡು ಬರುತ್ತಿದ್ದ ರೈಲು ಸ್ಫೋಟಕ್ಕೆ ಸಂಚು, ಸಿಬ್ಬಂದಿ ವಶ

    ಭೋಪಾಲ್: ಜಮ್ಮು ಮತ್ತು ಕಾಶ್ಮೀರದಿಂದ (Jammu And Kashmir) ಕರ್ನಾಟಕಕ್ಕೆ (Karnataka) ಯೋಧರನ್ನು ಕರೆದೊಯ್ಯುತ್ತಿದ್ದ ರೈಲನ್ನು ಸ್ಫೋಟಿಸಲು ಯತ್ನಿಸಲಾಗಿತ್ತು. ಇದೀಗ ಡಿಟೋನೇಟರ್‌ಗಳು ಕದ್ದಿದ್ದಕ್ಕಾಗಿ ಓರ್ವ ರೈಲ್ವೆ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ.

    ರೈಲ್ವೆ ಸಿಬ್ಬಂದಿ ಶಬೀರ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

    ಮಧ್ಯಪ್ರದೇಶದ (Madhyapradesh) ಬುರ್ಹಾನ್‌ಪುರ (Burhanpur) ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿತ್ತು. ಡಿಟೋನೇಟರ್‌ಗಳು ಕದ್ದಿದ್ದಕ್ಕಾಗಿ ಓರ್ವ ರೈಲ್ವೆ ಸಿಬ್ಬಂದಿಯನ್ನು ರೈಲ್ವೆ ರಕ್ಷಣಾ ಪಡೆ (Railway Protection Force) ವಶಕ್ಕೆ ಪಡೆದುಕೊಂಡಿದ್ದಾರೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ರಾತ್ರಿ ಭಾರೀ ಮಳೆ

    ಮಧ್ಯಪ್ರದೇಶದ ರೈಲ್ವೆ ಹಳಿಯಲ್ಲಿ ಕನಿಷ್ಠ 10 ಡಿಟೋನೇಟರ್‌ಗಳು ಹಾಗೂ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದ್ದವು. ವಶಕ್ಕೆ ಪಡೆದ ಶಬೀರ್ ವಿರುದ್ಧ ರೈಲಿನ ಡಿಟೋನೇಟರ್‌ಗಳು ಹಾಗೂ ಗ್ಯಾಸ್ ಸಿಲಿಂಡರ್ ಕದ್ದಿದ್ದಕ್ಕಾಗಿ ಕೇಸ್ ದಾಖಲಿಸಲಾಗಿದೆ.

    ಏನಿದು ಘಟನೆ?
    ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿತ್ತು. ಸೇನೆಯ ವಿಶೇಷ ರೈಲು ಜಮ್ಮು-ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ ಯತ್ನ ನಡೆದಿತ್ತು.

    ಮಧ್ಯಪ್ರದೇಶದ ರೈಲ್ವೆ ಹಳಿಯಲ್ಲಿ ಕನಿಷ್ಠ 10 ಡಿಟೋನೇಟರ್‌ಗಳು ಹಾಗೂ ಗ್ಯಾಸ್ ಸಿಲಿಂಡರ್ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದರು.

    ರೈಲು ಡಿಟೋನೇಟರ್‌ಗಳ ಮೇಲೆ ಹಾದು ಹೋಗುತ್ತಿದ್ದಂತೆ ಸ್ಫೋಟದಿಂದ ಲೋಕೋ ಪೈಲಟ್ ರೈಲನ್ನು ತಕ್ಷಣವೇ ನಿಲ್ಲಿಸಿದ್ದರು. ನಂತರ ಠಾಣಾಧಿಕಾರಿಗೆ ಮಾಹಿತಿ ನೀಡಿದರು. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ. ಭಯೋತ್ಪಾದನಾ ನಿಗ್ರಹ ದಳ (ATS), ರಾಷ್ಟ್ರೀಯ ತನಿಖಾ ಸಂಸ್ಥೆ (NIA), ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಬದ್ಲಾಪುರ ಶಾಲೆಯಲ್ಲಿ ದೌರ್ಜನ್ಯ – ಕಾಮುಕನನ್ನು ಗುಂಡಿಕ್ಕಿ ಹತ್ಯೆಗೈದ ಪೊಲೀಸರು

  • ಬ್ಯಾಗ್‍ಗಾಗಿ ಪ್ರಾಣ ಕಳ್ಕೊಂಡ ತಾಯಿ-ಮಗಳು

    ಬ್ಯಾಗ್‍ಗಾಗಿ ಪ್ರಾಣ ಕಳ್ಕೊಂಡ ತಾಯಿ-ಮಗಳು

    ಲಕ್ನೋ: ದರೋಡೆಯನ್ನು ವಿರೋಧಿಸಿದ್ದಕ್ಕೆ ತಾಯಿ ಮತ್ತು ಮಗಳನ್ನು ರೈಲಿನಿಂದ ಕೆಳಗೆ ತಳ್ಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಾಥುರಾದಲ್ಲಿ ನಡೆದಿದೆ.

    ದೆಹಲಿಯ ಶಹದಾರಾ ನಿವಾಸಿ ಮೀನಾ (55) ಮತ್ತು ಮಗಳು ಮನೀಶಾ (21) ಮೃತರು. ಇವರು ದೆಹಲಿಯಿಂದ ಕೋಟಾಗೆ ಪ್ರಯಾಣಿಸುತ್ತಿದ್ದರು. ಮೀನಾ ಮತ್ತು ಮನೀಶಾ ಜೊತೆ ಮಗ ಆಕಾಶ್ (23) ಕೂಡ ನಿಜಾಮುದ್ದೀನ್-ತಿರುವನಂತಪುರಂ ಸೆಂಟ್ರಲ್ ಎಸ್‍ಎಫ್ ಎಕ್ಸ್ ಪ್ರೆಸ್ (22634) ನಲ್ಲಿ ಪ್ರಯಾಣಿಸುತ್ತಿದ್ದರು. ಈ ಘಟನೆ ಅಜೈ ರೈಲ್ವೆ ನಿಲ್ದಾಣದ ಬಳಿ ನಡೆದಿದೆ ಎಂದು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ತಿಳಿಸಿದೆ.

    ಮನೀಶಾ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಾಗಿ ಕೋಚಿಂಗ್ ಇನ್ಸ್ಟಿಟ್ಯೂಟ್‍ನಲ್ಲಿ ಪ್ರವೇಶ ಪಡೆಯಬೇಕೆಂದು ಕೋಟಾಗೆ ತೆರಳುತ್ತಿದ್ದಳು. ಮುಂಜಾನೆ ಮೀನಾ ದರೋಡೆಕೋರರು ತನ್ನ ಬ್ಯಾಗನ್ನು ತೆಗೆದುಕೊಂಡು ಹೋಗುವುದನ್ನು ನೋಡಿದ್ದಾರೆ. ಅದನ್ನು ಮಗಳಿಗೆ ತಿಳಿಸಿದ್ದು, ಇಬ್ಬರು ದರೋಡೆಕೋರರಿಂದ ಬ್ಯಾಗನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ದರೋಡೆಕೋರಲ್ಲಿ ಓರ್ವ ತಾಯಿ-ಮಗಳನ್ನು ರೈಲಿನಿಂದ ತಳ್ಳಿದ್ದಾನೆ ಎಂದು ಆರ್‌ಪಿಎಫ್ ತಿಳಿಸಿದೆ.

    ಬ್ಯಾಗ್‍ನಲ್ಲಿ ಮೊಬೈಲ್ ಫೋನ್, ಹಣ, ಕೋಚಿಂಗ್ ಮತ್ತು ಹಾಸ್ಟೆಲ್ ಶುಲ್ಕ ಜೊತೆಗೆ ಇತರ ಬೆಲೆಬಾಳುವ ವಸ್ತುಗಳು ಇದ್ದವು. ಆಕಾಶ್ ಎಚ್ಚರಕೊಂಡು ರೈಲನ್ನು ನಿಲ್ಲಿಸಲು ಚೈನ್ ಎಳೆದಿದ್ದಾನೆ. ಅದು ವೃಂದಾಬನ್ ರಸ್ತೆ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿದೆ. ತಕ್ಷಣ ಈ ಬಗ್ಗೆ ಆರ್‌ಪಿಎಫ್‌ಗೆ ವಿಷಯ ತಿಳಿಸಿದ್ದಾನೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಅಂಬುಲೆನ್ಸ್ ಹೋಗಿದೆ. ಆದರೆ ಅಷ್ಟರಲ್ಲಿಯೇ ತಾಯಿ-ಮಗಳು ಮೃತಪಟ್ಟಿದ್ದರು ಎಂದು ಆರ್‌ಪಿಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸದ್ಯಕ್ಕೆ ಆರೋಪಿಗಳ ವಿರುದ್ಧ ದರೋಡೆ ಮತ್ತು ಹತ್ಯೆ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸಲು ಶೋಧಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.