Tag: ರೈಲ್ವೆ

  • ರೈಲ್ವೇ ಪ್ರಯಾಣಿಕರಲ್ಲಿ ‘ಆರೋಗ್ಯ ಸೇತು’ ಇರಲೇಬೇಕು

    ರೈಲ್ವೇ ಪ್ರಯಾಣಿಕರಲ್ಲಿ ‘ಆರೋಗ್ಯ ಸೇತು’ ಇರಲೇಬೇಕು

    ನವದೆಹಲಿ: ಕೋವಿಡ್ 19 ಸಮಯದಲ್ಲಿ ವಿಶೇಷ ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ಆರೋಗ್ಯ ಸೇತು ಅಪ್ಲಿಕೇಶನ್ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

    ಪ್ರಯಾಣಿಕರು ಆರೋಗ್ಯ ಸೇತು ಅಪ್ಲಿಕೇಶನ್ ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ರೈಲ್ವೇ ಸಚಿವಾಲಯ ಟ್ವೀಟ್ ಮಾಡಿದೆ. ಈಗಾಗಲೇ ಒಟ್ಟು 54 ಸಾವಿರ ಪ್ರಯಾಣಿಕರು ಟಿಕೆಟ್ ಬುಕ್ ಮಾಡಿದ್ದಾರೆ.

    ಆರೋಗ್ಯ ಸೇತು ಅಪ್ಲಿಕೇಶನ್ ಆಂಡ್ರಾಯ್ಡ್ ಮತ್ತು ಐಓಎಸ್ ಸ್ಟೋರ್ ನಲ್ಲಿ ಲಭ್ಯವಿದೆ. ಬ್ಲೂ ಟೂತ್ ಮತ್ತು ಜಿಪಿಎಸ್ ಬಳಸಿಕೊಂಡು ಈ ಆ್ಯಪ್ ಕೋವಿಡ್ ವಲಯವಾರು ಪ್ರದೇಶಗಳ ಮಾಹಿತಿಯನ್ನು ಜನರ ಕೈಗೆ ನೀಡುತ್ತದೆ.

    ಪ್ರಯಾಣಿಕರ ರೈಲುಗಳನ್ನು ಇಂದಿನಿಂದ ಹಂತ ಹಂತವಾಗಿ ಪ್ರಾರಂಭಿಸಲು ಭಾರತೀಯ ರೈಲ್ವೆ ಮುಂದಾಗಿದೆ. ಆರಂಭದಲ್ಲಿ 15 ಜೋಡಿ ರೈಲುಗಳು ಓಡಾಡಲಿವೆ. ಈ ವಿಶೇಷ ರೈಲುಗಳು ನವದೆಹಲಿ ನಿಲ್ದಾಣದಿಂದ ಬೆಂಗಳೂರು, ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್ ಗೆ ಸಂಪರ್ಕ ಕಲ್ಪಿಸಲಿವೆ.

    ವಿಶೇಷ ರೈಲುಗಳ ಟಿಕೆಟ್ ಬುಕಿಂಗ್ ಮೇ 11ರಂದು ಸಂಜೆ 4 ಗಂಟೆಗೆ ಪ್ರಾರಂಭವಾಗಿದೆ. ಐಆರ್‌ಸಿಟಿಸಿ ವೆಬ್‍ಸೈಟ್‍ನಲ್ಲಿ ಮಾತ್ರ ಟಿಕೆಟ್ ಲಭ್ಯವಿರುತ್ತದೆ. ರೈಲ್ವೆ ನಿಲ್ದಾಣಗಳ ಕೌಂಟರ್ ಗಳಲ್ಲಿ ಟಿಕೆಟ್ ಸಿಗುವುದಿಲ್ಲ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.

    ಪ್ರಯಾಣಿಕರು ಮಾಸ್ಕ್ ಹಾಕಿಕೊಳ್ಳುವುದು, ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡುವುದು ಕಡ್ಡಾಯವಾಗಿದೆ. ಕೊರೊನಾ ಸೋಂಕಿನ ಲಕ್ಷಣವಿಲ್ಲದ ಪ್ರಯಾಣಿಕರಿಗೆ ಮಾತ್ರ ರೈಲು ಹತ್ತಲು ಅವಕಾಶವಿರುತ್ತದೆ. ರೈಲು ವೇಳಾಪಟ್ಟಿ ಸೇರಿದಂತೆ ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದೆ.

    ವಿದೇಶದಿಂದ ರಾಜ್ಯಗಳಿಗೆ ಬರುತ್ತಿರುವ ವ್ಯಕ್ತಿಗಳಿಗೂ ಆರೋಗ್ಯ ಸೇತು ಅಪ್ಲಿಕೇಶನ್ ಕಡ್ಡಾಯಗೊಳಿಸಲಾಗಿದೆ. ಭಾರತದ ಸಿಮ್ ಇಲ್ಲದೇ ಇದ್ದಲ್ಲಿ ಅವರಿಗೆ ಬಿಎಸ್‍ಎನ್‍ಎಲ್ ಸಿಮ್ ನೀಡಿ  ಅಪ್ಲಿಕೇಶನ್ ಇನ್ ಸ್ಟಾಲ್ ಮಾಡುವಂತೆ ಸೂಚಿಸಲಾಗುತ್ತದೆ.

  • ರೈಲ್ವೆ ಟಿಕೆಟ್ ಬುಕ್ಕಿಂಗ್ ಶುರು

    ರೈಲ್ವೆ ಟಿಕೆಟ್ ಬುಕ್ಕಿಂಗ್ ಶುರು

    ನವದೆಹಲಿ: ಭಾರತೀಯ ರೈಲ್ವೆ ಇಲಾಖೆಯು ಮಹತ್ವ ಆದೇಶ ಹೊರಡಿಸಿದ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ.

    ಪ್ರಯಾಣಿಕರ ರೈಲುಗಳನ್ನು ಮೇ 12ರಿಂದ ಹಂತ ಹಂತವಾಗಿ ಪ್ರಾರಂಭಿಸಲು ಭಾರತೀಯ ರೈಲ್ವೆ ಯೋಜಿಸಿದೆ. ಆರಂಭದಲ್ಲಿ 15 ಜೋಡಿ ರೈಲುಗಳು ಓಡಾಡಲಿವೆ. ಈ ವಿಶೇಷ ರೈಲುಗಳು ನವದೆಹಲಿ ನಿಲ್ದಾಣದಿಂದ ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್ ಮತ್ತು ಜಮ್ಮುಮ ರಾವಿಗೆ ಸಂಪರ್ಕ ಕಲ್ಪಿಸಲಿವೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

    ವಿಶೇಷ ರೈಲುಗಳ ಟಿಕೆಟ್ ಬುಕಿಂಗ್ ಮೇ 11ರಂದು ಸಂಜೆ 4 ಗಂಟೆಗೆ ಪ್ರಾರಂಭವಾಗಲಿದ್ದು, ಐಆರ್‌ಸಿಟಿಸಿ ವೆಬ್‍ಸೈಟ್‍ನಲ್ಲಿ ಮಾತ್ರ ಟಿಕೆಟ್ ಲಭ್ಯವಿರುತ್ತದೆ. ರೈಲ್ವೆ ನಿಲ್ದಾಣಗಳ ಕೌಂಟರ್ ಗಳಲ್ಲಿ ಟಿಕೆಟ್ ಸಿಗುವುದಿಲ್ಲ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.

    ಪ್ರಯಾಣಿಕರು ಮಾಸ್ಕ್ ಹಾಕಿಕೊಳ್ಳುವುದು, ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡುವುದು ಕಡ್ಡಾಯವಾಗಿದೆ. ಕೊರೊನಾ ಸೋಂಕಿನ ಲಕ್ಷಣವಿಲ್ಲದ ಪ್ರಯಾಣಿಕರಿಗೆ ಮಾತ್ರ ರೈಲು ಹತ್ತಲು ಅವಕಾಶವಿರುತ್ತದೆ. ರೈಲು ವೇಳಾಪಟ್ಟಿ ಸೇರಿದಂತೆ ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದೆ.

  • ಕನ್ನಡಿಗರ ನೆರವಿಗೆ ನಿಂತ ಕೇಂದ್ರ- ವಿಶೇಷ ವಿಮಾನ, ರೈಲು ವ್ಯವಸ್ಥೆ

    ಕನ್ನಡಿಗರ ನೆರವಿಗೆ ನಿಂತ ಕೇಂದ್ರ- ವಿಶೇಷ ವಿಮಾನ, ರೈಲು ವ್ಯವಸ್ಥೆ

    ನವದೆಹಲಿ: ಕೊರೊನಾ ಲಾಕ್‍ಡೌನ್‍ನಿಂದಾಗಿ ಉತ್ತರ ಭಾರತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ದೆಹಲಿಯಿಂದ ಕರ್ನಾಟಕಕ್ಕೆ ಇನ್ನೆರಡು ದಿನಗಳಲ್ಲಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

    ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಉತ್ತರ ಭಾರತದಲ್ಲಿ ಸಿಲುಕಿರುವ ಕನ್ನಡಿಗರು ರಾಜ್ಯಕ್ಕೆ ಮರಳುವುದಕ್ಕಾಗಿ ವಿಶೇಷ ರೈಲೊಂದನ್ನು ಓಡಿಸಲು ರೈಲ್ವೆ ಇಲಾಖೆಯು ಒಪ್ಪಿಗೆ ನೀಡಿದೆ. ಈ ಸಂಬಂಧ ರೈಲ್ವೆ ಸಚಿವ ಪಿಯುಶ್ ಗೋಯಲ್ ಜೊತೆಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಒಂದೆರಡು ದಿನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚರಿಸಲಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅನಿವಾಸಿ ಭಾರತೀಯರನ್ನ ಕರೆ ತರಲು ಮುಂದಾದ ಕೇಂದ್ರ- ಹೊರ ರಾಜ್ಯದ ಕನ್ನಡಿಗರನ್ನ ಮರೆತ ರಾಜ್ಯ ಸರ್ಕಾರ

    ದೆಹಲಿಯ ಹೊರತಾಗಿ ಹರ್ಯಾಣ, ಪಂಜಾಬ್ ಮತ್ತಿತರ ಸಮೀಪದ ಸ್ಥಳಗಳಿಂದಲೂ ಜನರು ರಾಜ್ಯಕ್ಕೆ ವಾಪಸ್ ಆಗಬಹುದಾಗಿದೆ. ಈ ನಿಟ್ಟಿನಲ್ಲಿ ದೆಹಲಿಯ ಸುತ್ತ ಬೇರೆ ನೇರ ಪ್ರದೇಶಗಳಲ್ಲಿರುವ ಕನ್ನಡಿಗರನ್ನು ಕೂಡಲೇ ದೆಹಲಿಗೆ ಕರೆಸಿಕೊಂಡು ಅವರನ್ನೂ ಇದೇ ರೈಲಿನಲ್ಲಿ ಕರ್ನಾಟಕಕ್ಕೆ ಕಳುಹಿಸಿಕೊಡಲು ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ದೆಹಲಿ ಮತ್ತಿತರ ಸ್ಥಳಗಳಿಂದ ತಮ್ಮ ಸ್ವಂತ ವಾಹನದಲ್ಲಿ ಕರ್ನಾಟಕಕ್ಕೆ ಮರಳಲು ಇಚ್ಛಿಸಿದ ಅನೇಕ ದೆಹಲಿ ಕನ್ನಡಿಗರು ಹಾಗೂ ಯಾತ್ರಾರ್ಥಿಗಳಿಗೂ ಅಗತ್ಯ ಪರವಾನಿಗೆ ನೀಡಲಾಗುತ್ತಿದೆ.

    ದುಬೈನಿಂದ 2 ವಿಶೇಷ ವಿಮಾನ:
    ಅರಬ್ ದೇಶಗಳಲ್ಲಿರುವ ಕನ್ನಡಿಗರು ಸ್ವದೇಶಕ್ಕೆ ಮರಳಲು ಎರಡು ವಿಶೇಷ ವಿಮಾನಗಳ ವ್ಯವಸ್ಥೆ ಮಾಡಲಾಗಿದ್ದು, ಮೇ 12ರಂದು ಯುಎಇನಿಂದ ಮಂಗಳೂರಿಗೆ ವಿಮಾನ ಸಂಚರಿಸುವುದನ್ನು ವಿದೇಶಾಂಗ ಸಚಿವರು ಖಚಿತಪಡಿಸಿದ್ದಾರೆ. ಇನ್ನೊಂದು ವಿಮಾನ ಬೆಂಗಳೂರಿಗೆ ಬರಲಿದ್ದು, ಅದರ ವೇಳಾಪಟ್ಟಿ ಪ್ರಕಟವಾಗಬೇಕಿದೆ ಎಂದು ಸದಾನಂದಗೌಡ ಅವರು ತಿಳಿಸಿದ್ದಾರೆ.

  • 1,200 ವಲಸಿಗರನ್ನ ಹೊತ್ತು ಪ್ರಯಾಣ ಆರಂಭಿಸಿದ ರೈಲು

    1,200 ವಲಸಿಗರನ್ನ ಹೊತ್ತು ಪ್ರಯಾಣ ಆರಂಭಿಸಿದ ರೈಲು

    ಹೈದರಾಬಾದ್: ವಿಶೇಷ ರೈಲು 1,200 ವಲಸಿಗರನ್ನು ಹೊತ್ತು ತೆಲಂಗಾಣದಿಂದ ಪ್ರಯಾಣ ಆರಂಭಿಸಿದೆ.

    ಕೋವಿಡ್-19 ಲಾಕ್‍ಡೌನ್‍ನಿಂದಾಗಿ ದೇಶಾದ್ಯಂತ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳು ಸೇರಿದಂತೆ ಅನೇಕರು ವಿವಿಧ ನಗರಗಳಲ್ಲಿ ಸಿಲುಕಿದ್ದರು. ಅವರ ಸಂಚಾರಕ್ಕೆ ಈಗಾಗಲೇ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ. ಹೀಗಾಗಿ ತೆಲಂಗಾಣದಿಂದ ಜಾರ್ಖಂಡ್‍ಗೆ ವಲಸಿಗರನ್ನು ಹೊತ್ತು ರೈಲು ಶುಕ್ರವಾರ ಪ್ರಯಾಣ ಬೆಳೆಸಿದೆ.

    ಸುಮಾರು 1,200 ವಲಸಿಗರನ್ನು ಕರೆದೊಯ್ಯುವ ರೈಲು ತೆಲಂಗಾಣದ ಲಿಂಗಂಪಲ್ಲಿಯಿಂದ ಜಾರ್ಖಂಡ್‍ನ ಹತಿಯಾಗೆ ಹೊರಟಿದೆ. ಬೆಳಗ್ಗೆ 4:50ಕ್ಕೆ ರೈಲು ಪ್ರಯಾಣ ಆರಂಭಿಸಿದೆ. ಈ ರೈಲು 24 ಬೋಗಿಗಳನ್ನು ಹೊಂದಿದ್ದು, ಇದೂವರೆಗೆ ವಲಸಿಗರನ್ನು ಕರೆದೊಯ್ಯಲು ನಿಯೋಜಿಸಿದ ಏಕೈಕ ರೈಲು ಇದಾಗಿದೆ ಎಂದು ರೈಲ್ವೆ ಸಂರಕ್ಷಣಾ ಪಡೆ  ಮಹಾನಿರ್ದೇಶಕರು ತಿಳಿಸಿದ್ದಾರೆ.

    ತೆಲಂಗಾಣ ಸರ್ಕಾರದ ಕೋರಿಕೆ ಮತ್ತು ರೈಲ್ವೆ ಸಚಿವಾಲಯದ ನಿರ್ದೇಶನದ ಮೇರೆಗೆ ಹೈದರಾಬಾದ್‍ನ ಲಿಂಗಂಪಳ್ಳಿಯಿಂದ ಜಾರ್ಖಂಡ್‍ನ ಹತಿಯಾಗೆ ವಿಶೇಷ ರೈಲು ಓಡಿಸಲಾಗಿದೆ.

  • ಏ.30ರವರೆಗೂ ರೈಲ್ವೆ ಟಿಕೆಟ್ ಬುಕ್ಕಿಂಗ್ ಇಲ್ಲ

    ಏ.30ರವರೆಗೂ ರೈಲ್ವೆ ಟಿಕೆಟ್ ಬುಕ್ಕಿಂಗ್ ಇಲ್ಲ

    ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದಾಗಿ ಸ್ತಬ್ಧಗೊಂಡಿದ್ದ ರೈಲು ಸೇವೆ ಸದ್ಯಕ್ಕೆ ಆರಂಭಗೊಳ್ಳುವುದಿಲ್ಲ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಐಆರ್‌ಸಿಟಿಸಿ, ರೈಲುಗಳ ಬುಕಿಂಗ್ ಅನ್ನು ಏಪ್ರಿಲ್ 30 ರವರೆಗೆ ಸ್ಥಗಿತಗೊಳಿಸಲು ನಿರ್ಧರಿಸಿದೆ.

    ಈ ಮಧ್ಯೆ ಐಆರ್‌ಸಿಟಿಸಿ ಸದ್ಯ ಮೂರು ರೈಲುಗಳನ್ನು ಓಡಿಸಲಿದೆ. 2 ತೇಜಸ್ ರೈಲುಗಳು ಮತ್ತು 1 ಕಾಶಿ ಮಹಕಲ್ ಎಕ್ಸ್‌ಪ್ರೆಸ್‌ ರೈಲು ಸಂಚರಿಸಲಿದೆ.

    ತೇಜಸ್ ಎಕ್ಸ್‌ಪ್ರೆಸ್‌ ರೈಲು ಅಹಮದಾಬಾದ್ – ಮುಂಬೈ ಮಧ್ಯ ಸಂಚರಿಸಿದರೆ, ಕಾಶಿ ಮಹಕಲ್ ಎಕ್ಸ್‌ಪ್ರೆಸ್‌ ದೆಹಲಿ-ಲಕ್ನೋ ಮಧ್ಯ ಸಂಚರಿಸಲಿದೆ. ಈಗಾಗಲೇ ಟಿಕೆಟ್ ಬುಕ್ಕಿಂಗ್ ಮಾಡಿರುವ ಪ್ರಯಾಣಿಕರ ಹಣವನ್ನು ವಾಪಸ್ ಬ್ಯಾಂಕ್ ಖಾತೆಗೆ ಮರು ಪಾವತಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

    ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್, ಭಾರತೀಯ ರೈಲ್ವೆಯ 2,500 ಬೋಗಿಗಳಲ್ಲಿ 40,000 ಪ್ರತ್ಯೇಕ ಹಾಸಿಗೆಗಳನ್ನು ಸಿದ್ಧಪಡಿಸಿದೆ. ರೈಲ್ವೆ ಇಲಾಖೆ ಪ್ರತಿದಿನ 375 ಪ್ರತ್ಯೇಕ ಹಾಸಿಗೆಗಳನ್ನು ತಯಾರಿಸುತ್ತಿದೆ ಮತ್ತು ಇದು ದೇಶಾದ್ಯಂತ 133 ಸ್ಥಳಗಳಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದರು.

  • ಹುಬ್ಬಳ್ಳಿಯಲ್ಲಿ ಐಸೋಲೇಶನ್ ವಾರ್ಡ್‍ಗಳಾಗುತ್ತಿವೆ ರೈಲ್ವೇ ಬೋಗಿಗಳು

    ಹುಬ್ಬಳ್ಳಿಯಲ್ಲಿ ಐಸೋಲೇಶನ್ ವಾರ್ಡ್‍ಗಳಾಗುತ್ತಿವೆ ರೈಲ್ವೇ ಬೋಗಿಗಳು

    ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಕೇಂದ್ರದ ಸೂಚನೆಗಳಂತೆ ರೈಲ್ವೆ ಬೋಗಿಗಳನ್ನೇ ಐಸೋಲೇಶನ್ ವಾರ್ಡ್‍ಗಳನ್ನಾಗಿ ಮಾಡಲಾಗುತ್ತಿದೆ. ಇದನ್ನು ನೈಋತ್ಯ ರೈಲ್ವೇ ವಲಯ ಸಹ ಜಾರಿಗೆ ತರುತ್ತಿದ್ದು, ಹುಬ್ಬಳ್ಳಿ ಜಂಕ್ಷನ್‍ನಲ್ಲಿ ಈಗಾಗಲೇ ಈ ಕಾರ್ಯ ಆರಂಭವಾಗಿದೆ.

    ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ನೈಋತ್ಯ ರೈಲ್ವೇ ವಲಯದಲ್ಲಿನ ರೈಲು ಬೋಗಿಗಳನ್ನು ಪ್ರತ್ಯೇಕ ವಾರ್ಡ್‍ಗಳಾಗಿ ಪರಿವರ್ತಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಪ್ರತ್ಯೇಕ ಸೌಲಭ್ಯಗಳಿಗಾಗಿ ದೇಶದ ಸಾಮಥ್ರ್ಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ರೈಲ್ವೆ ಸ್ಲೀಪರ್ ಕ್ಲಾಸ್ ಬೋಗಿಗಳನ್ನು ಕೋವಿಡ್-19 ಐಸೋಲೇಷನ್ ವಾರ್ಡ್‍ಗಳಾಗಿ ಪರಿವರ್ತಿಸಲಾತ್ತಿದೆ.

    ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ರೈಲ್ವೇ ಕಾರ್ಮಿಕರು ಐಸೋಲೆಟೆಡ್ ವಾರ್ಡ್ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ಬೋಗಿಗಳು ಸ್ವಚ್ಛವಾಗಿದ್ದು, ರೋಗಿಗಳು ಚೇತರಿಸಿಕೊಳ್ಳಲು ಆರೋಗ್ಯಕರ ಪರಿಸರವನ್ನು ಹೊಂದಿವೆ. ಅಗತ್ಯಕ್ಕನುಗುಣವಾಗಿ ಕೆಲವು ಕೋವಿಡ್-19 ರೋಗಿಗಳನ್ನು ಈ ಐಸೋಲೇಶನ್ ಭೋಗಿಗಳಲ್ಲಿರಿಸಿ ಚಿಕಿತ್ಸೆ ನೀಡಲಾಗುವುದು. ಆರಂಭದಲ್ಲಿ 5,000 ಪ್ರಯಾಣಿಕರ ಬೋಗಿಗಳನ್ನು ಐಸೋಲೇಶನ್ ವಾರ್ಡ್‍ಗಳನ್ನಾಗಿ ಮಾರ್ಪಡಿಸಲು ಯೋಜಿಸಲಾಗಿದೆ.

    ಮಾರ್ಚ್ 25 ರಂದು ಪ್ರಾರಂಭವಾದ ರಾಷ್ಟ್ರವ್ಯಾಪಿ ಲಾಕ್‍ಡೌನ್ ನಂತರ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಎಲ್ಲ ಪ್ರಯಾಣಿಕ ರೈಲು ಸೇವೆಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ. ಇವುಗಳಲ್ಲಿ ಕೆಲು ರೈಲುಗಳನ್ನು ಐಸೋಲೇಶನ್ ವಾರ್ಡ್‍ಗಳನ್ನಾಗಿ ಪರಿವರ್ತಿಸಲಾಗುತ್ತಿದೆ.

    ರೈಲ್ವೆ ಬೋಗಿಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಸಿಗಲಿದೆ. ವೈದ್ಯ ಸಿಬ್ಬಂದಿ, ಸೋಂಕಿತರು, ಶಂಕಿತರು ಸೇರಿದಂತೆ ಆಹಾರ ಪೂರೈಕೆಗೂ ಅವಕಾಶ ಕಲ್ಪಿಸಲಾಗಿದೆ. ದೇಶದಲ್ಲಿ ಕೊರೊನಾ ವೈರಸ್ ಉಲ್ಬಣಗೊಂಡ ನಂತರ ತಮ್ಮನ್ನು ತಾವೇ ಪ್ರತ್ಯೇಕಿಸಿಕೊಳ್ಳುವ, ಮತ್ತೊಬ್ಬರಿಂದ ಅಂತರ ಕಾಯ್ದುಕೊಳ್ಳುವ ಸೌಲಭ್ಯಗಳ ಅವಶ್ಯಕತೆಯಿದೆ. ಈ ಬೇಡಿಕೆ ಈಡೇರಿಸಲು ಭಾರತೀಯ ರೈಲ್ವೆ ಒಂದು ಚತುರ ಪರಿಹಾರವನ್ನು ಕಂಡುಹಿಡಿದಿದೆ.

    ವಿದ್ಯುತ್:
    ಪ್ರತ್ಯೇಕ ಸೌಲಭ್ಯಗಳಿಗಾಗಿ ದೇಶದ ಸಾಮಥ್ರ್ಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ರೈಲ್ವೆ ತನ್ನ ರೈಲು ಬೋಗಿಗಳನ್ನು ಕ್ವಾರಂಟೈನ್ ಹಬ್‍ಗಳಾಗಿ ಪರಿವರ್ತಿಸುವ ಯೋಜನೆಯನ್ನು ರೂಪಿಸುತ್ತಿದೆ. ಆದರೆ ವಿದ್ಯುತ್ ಸಂಪರ್ಕವಿರುವ ಸಮೀಪದಲ್ಲಿ ಬೋಗಿಗಳನ್ನು ನಿಲ್ಲಿಸಿದರೆ ಅನುಕೂಲವಾಗಲಿದೆ.

    ವಿನ್ಯಾಸ:
    ಕ್ವಾರಂಟೈನ್‍ಗಾಗಿ ರೈಲ್ವೆ ಇಲಾಖೆ ನಾನ್ ಎಸಿ ಕೋಚ್ ಆಯ್ಕೆ ಮಾಡಿಕೊಂಡಿದೆ. ಇದರಲ್ಲಿ 10 ಕ್ಯಾಬಿನ್‍ಗಳಿರುತ್ತವೆ. ಕೇವಲ ಒಂದು ಬರ್ತ್ ಬಿಟ್ಟು ಉಳಿದ ಮೂರು ಬರ್ತ್ ತೆಗೆದು ರೂಮ್ ರೀತಿ ಸಿದ್ಧಗೊಳಿಸಲಾಗಿದೆ. ಇದೇ ರೀತಿ ಸೋಂಕಿತ ವ್ಯಕ್ತಿಯ ಚಿಕಿತ್ಸೆಗೆ ಇರುವ ರೂಮ್ ವ್ವವಸ್ಥೆ ಮಾಡಲಾಗಿದ್ದು, ಪ್ಲಾಸ್ಟಿಕ್ ಕರ್ಟನ್‍ನಿಂದ ಕ್ಯಾಬಿನ್ ಕವರ್ ಮಾಡಲಾಗಿದೆ.

    ಶೌಚಾಲಯ:
    ಒಂದು ಕ್ಯಾಬಿನ್‍ನಲ್ಲಿ 3 ಭಾರತೀಯ ಶೈಲಿ 1 ವೆಸ್ಟರ್ನ್ ಟಾಯ್ಲೆಟ್‍ಗಳಿರುತ್ತವೆ. ಈ ಪೈಕಿ ಎರಡು ಟಾಯ್ಲೆಟ್‍ಗಳನ್ನು ಸ್ನಾನದ ಕೋಣೆಯಾಗಿ ಪರಿವರ್ತಿಸಲಾಗಿದೆ. ಬಾಥ್ ರೂಮ್‍ನಲ್ಲಿ ಟ್ಯಾಪ್‍ನ ಎತ್ತರವನ್ನು ಹೆಚ್ಚಿಸಲಾಗಿದೆ. ಜೊತೆಗೆ ಹ್ಯಾಂಡ್ ಶವರ್ ಗಳನ್ನ ಹಾಕಲಾಗಿದೆ.

    ವೈದ್ಯಕೀಯ ಸಿಬ್ಬಂದಿ:
    ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಡಾಕ್ಟರ್, ನರ್ಸ್ ಸೇರಿ ವೈದ್ಯಕೀಯ ಸಿಬ್ಬಂದಿಗೂ ಪ್ರತ್ಯೇಕ ಕ್ಯಾಬಿನ್ ವ್ಯವಸ್ಥೆ ಮಾಡಲಾಗಿದೆ. ರೋಗಿ ಮತ್ತು ವೈದ್ಯರ ಕ್ಯಾಬಿನ್ ಮಧ್ಯೆ ಅಡ್ಡವಾಗಿ ಪ್ಲಾಸ್ಟಿಕ್ ಕರ್ಟನ್ ಹಾಕಲಾಗಿದೆ.

    ಆಹಾರ:
    ಬೇಸ್ ಅಡಿಗೆಮನೆಗಳಿಲ್ಲದ ನಿಲ್ದಾಣಗಳಿಗೆ ಆಹಾರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಪ್ಯಾಂಟ್ರಿ ಕಾರುಗಳನ್ನು ಮೊಬೈಲ್ ಅಡುಗೆಮನೆಯನ್ನಾಗಿ ಪರಿವರ್ತಿಸಲು ರೈಲ್ವೆ ಯೋಜಿಸಿದೆ.

  • ಕೊರೊನಾ ಸೋಂಕಿತರಿಗೆ ಸಿದ್ಧವಾಗುತ್ತಿದೆ ರೈಲ್ವೆ ಆಸ್ಪತ್ರೆ!

    ಕೊರೊನಾ ಸೋಂಕಿತರಿಗೆ ಸಿದ್ಧವಾಗುತ್ತಿದೆ ರೈಲ್ವೆ ಆಸ್ಪತ್ರೆ!

    ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ದೇಶಾದ್ಯಂತ ಏಪ್ರಿಲ್ 14ರವರೆಗೂ ಲಾಕ್‍ಡೌನ್ ಘೋಷಿಸಿದರೂ ಹೇಳಿಕೊಳ್ಳವ ಮಟ್ಟಿಗೆ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಒಂದು ವೇಳೆ ದೇಶದಲ್ಲಿರುವ ಆಸ್ಪತ್ರೆಗಳಲ್ಲಿ ವಾರ್ಡ್‍ಗಳ ಸಮಸ್ಯೆಯಾದರೆ ರೈಲಿನಲ್ಲೇ ಕ್ವಾರಂಟೈಮ್ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

    ಲಾಕ್‍ಡೌನ್ ಘೋಷಣೆಗೂ ಮುನ್ನವೇ ರೈಲ್ವೆ ಇಲಾಖೆ ರೈಲು ಸಂಚಾರವನ್ನು ಸ್ಥಗಿತಗೊಳಿಸಿದೆ. ಇತ್ತ ದೇಶಾದ್ಯಂತ ಕೊರೊನಾ ಶಂಕಿತರು ಮತ್ತು ಸೋಂಕಿತರ ಚಿಕಿತ್ಸೆಗೆ ಐಸೋಲೇಶ್ ವಾರ್ಡ್ ಗಳ ಕೊರತೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ತನ್ನಲ್ಲಿರುವ ಅಪಾರ ಪ್ರಮಾಣದ ರೈಲುಗಳನ್ನ ಐಸೋಲೇಶನ್ ವಾರ್ಡ್ ಗಳಾಗಿ ಬಳಕೆ ಮಾಡುವ ಆಫರ್ ಮುಂದಿಟ್ಟಿದೆ.

    ರೈಲ್ವೆ ಬೋಗಿಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಸಿಗಲಿದೆ. ವೈದ್ಯ ಸಿಬ್ಬಂದಿ, ಸೋಂಕಿತರು, ಶಂಕಿತರು ಸೇರಿದಂತೆ ಆಹಾರ ಪೂರೈಕೆಗೂ ಅವಕಾಶ ಕಲ್ಪಿಸಲಾಗಿದೆ. ಇದಕ್ಕೆಲ್ಲ ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿದರೆ ರೈಲ್ವೆ ಇಲಾಖೆಯು 20 ಸಾವಿರ ಬೋಗಿಗಳನ್ನು 10 ಸಾವಿರ ಐಸೋಲೇಶನ್ ವಾರ್ಡ್ ಗಳಾಗಿ ಮಾರ್ಪಾಡಾಗುವ ಸಾಧ್ಯತೆಯಿದೆ.

    ಪ್ರತ್ಯೇಕತೆ:
    ದೇಶದಲ್ಲಿ ಕೊರೊನಾ ವೈರಸ್ ಉಲ್ಬಣಗೊಂಡ ನಂತರ ತಮ್ಮನ್ನು ತಾವೇ ಪ್ರತ್ಯೇಕಿಸಿಕೊಳ್ಳುವ, ಮತ್ತೊಬ್ಬರಿಂದ ಅಂತರ ಕಾಯ್ದುಕೊಳ್ಳುವ ಸೌಲಭ್ಯಗಳ ಅವಶ್ಯಕತೆಯಿದೆ. ಈ ಬೇಡಿಕೆ ಈಡೇರಿಸಲು ಭಾರತೀಯ ರೈಲ್ವೆ ಒಂದು ಚತುರ ಪರಿಹಾರವನ್ನು ಕಂಡುಹಿಡಿದಿದೆ.

    ವಿದ್ಯುತ್:
    ಪ್ರತ್ಯೇಕ ಸೌಲಭ್ಯಗಳಿಗಾಗಿ ದೇಶದ ಸಾಮಥ್ರ್ಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ರೈಲ್ವೆ ತನ್ನ ರೈಲು ಬೋಗಿಗಳನ್ನು ಕ್ವಾರೆಂಟೈನ್ ಹಬ್‍ಗಳಾಗಿ ಪರಿವರ್ತಿಸುವ ಯೋಜನೆಯನ್ನು ರೂಪಿಸುತ್ತಿದೆ. ಆದರೆ ವಿದ್ಯುತ್ ಸಂಪರ್ಕವಿರುವ ಸಮೀಪದಲ್ಲಿ ಬೋಗಿಗಳನ್ನು ನಿಲ್ಲಿಸಿದರೆ ಅನುಕೂಲವಾಗಲಿದೆ.

    ವಿನ್ಯಾಸ:
    ಕ್ವಾರೆಂಟೈನ್‍ಗಾಗಿ ರೈಲ್ವೆ ಇಲಾಖೆ ನಾನ್ ಎಸಿ ಕೋಚ್ ಆಯ್ಕೆ ಮಾಡಿಕೊಂಡಿದೆ. ಇದರಲ್ಲಿ 10 ಕ್ಯಾಬಿನ್‍ಗಳಿರುತ್ತವೆ. ಕೇವಲ ಒಂದು ಬರ್ತ್ ಬಿಟ್ಟು ಉಳಿದ ಮೂರು ಬರ್ತ್ ತೆಗೆದು ರೂಮ್ ರೀತಿ ಸಿದ್ಧಗೊಳಿಸಲಾಗಿದೆ. ಇದೇ ರೀತಿ ಸೋಂಕಿತ ವ್ಯಕ್ತಿಯ ಚಿಕಿತ್ಸೆಗೆ ಇರುವ ರೂಮ್ ವ್ವವಸ್ಥೆ ಮಾಡಲಾಗಿದ್ದು, ಪ್ಲಾಸ್ಟಿಕ್ ಕರ್ಟನ್‍ನಿಂದ ಕ್ಯಾಬಿನ್ ಕವರ್ ಮಾಡಲಾಗಿದೆ.

    ಶೌಚಾಲಯ:
    ಒಂದು ಕ್ಯಾಬಿನ್‍ನಲ್ಲಿ 3 ಭಾರತೀಯ ಶೈಲಿ 1 ವೆಸ್ಟರ್ನ್ ಟಾಯ್ಲೆಟ್‍ಗಳಿರುತ್ತವೆ. ಈ ಪೈಕಿ ಎರಡು ಟಾಯ್ಲೆಟ್‍ಗಳನ್ನು ಸ್ನಾನದ ಕೋಣೆಯಾಗಿ ಪರಿವರ್ತಿಸಲಾಗಿದೆ. ಬಾಥ್ ರೂಮ್‍ನಲ್ಲಿ ಟ್ಯಾಪ್‍ನ ಎತ್ತರವನ್ನು ಹೆಚ್ಚಿಸಲಾಗಿದೆ. ಜೊತೆಗೆ ಹ್ಯಾಂಡ್ ಶವರ್ ಗಳನ್ನ ಹಾಕಲಾಗಿದೆ.

    ವೈದ್ಯಕೀಯ ಸಿಬ್ಬಂದಿ:
    ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಡಾಕ್ಟರ್, ನರ್ಸ್ ಸೇರಿ ವೈದ್ಯಕೀಯ ಸಿಬ್ಬಂದಿಗೂ ಪ್ರತ್ಯೇಕ ಕ್ಯಾಬಿನ್ ವ್ಯವಸ್ಥೆ ಮಾಡಲಾಗಿದೆ. ರೋಗಿ ಮತ್ತು ವೈದ್ಯರ ಕ್ಯಾಬಿನ್ ಮಧ್ಯೆ ಅಡ್ಡವಾಗಿ ಪ್ಲಾಸ್ಟಿಕ್ ಕರ್ಟನ್ ಹಾಕಲಾಗಿದೆ.

    ಆಹಾರ:
    ಬೇಸ್ ಅಡಿಗೆಮನೆಗಳಿಲ್ಲದ ನಿಲ್ದಾಣಗಳಿಗೆ ಆಹಾರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಪ್ಯಾಂಟ್ರಿ ಕಾರುಗಳನ್ನು ಮೊಬೈಲ್ ಅಡುಗೆಮನೆಯನ್ನಾಗಿ ಪರಿವರ್ತಿಸಲು ರೈಲ್ವೆ ಯೋಜಿಸಿದೆ.

  • ರೈಲ್ವೆ ಹಳಿಯ ಮೇಲೆ ಮಲಗಿಕೊಂಡು ಸೆಲ್ಫಿ ಕ್ಲಿಕ್ಕಿಸಿ ಪ್ರೇಮಿಗಳು ಆತ್ಮಹತ್ಯೆ

    ರೈಲ್ವೆ ಹಳಿಯ ಮೇಲೆ ಮಲಗಿಕೊಂಡು ಸೆಲ್ಫಿ ಕ್ಲಿಕ್ಕಿಸಿ ಪ್ರೇಮಿಗಳು ಆತ್ಮಹತ್ಯೆ

    – ಸಾಯುವ ಮುನ್ನ ದೇವಸ್ಥಾನದಲ್ಲಿ ಮದ್ವೆ
    – 18 ವರ್ಷದಲ್ಲೇ ಪ್ರೇಯಸಿಗೆ ವಿವಾಹ

    ಚೆನ್ನೈ: ಮದುವೆಗೆ ಮನೆಯಲ್ಲಿ ವಿರೋಧ ವ್ಯಕ್ತಪಡಿಸಿದ್ದರಿಂದ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ಅಂಬೂರ್ ಬಳಿ ನಡೆದಿದೆ.

    ಅಂಬೂರ್ ಬಳಿ ರೈಲ್ವೆ ಹಳಿ ಮೇಲೆ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅಂಬೂರ್ ಬಳಿಯ ಸಾಂಬಾಸಿಕುಪ್ಪಂ ಗ್ರಾಮದ ನಿವಾಸಿ ಜಿ. ರಾಮದಾಸ್ (29) ಮತ್ತು ತಿರುಪತ್ತೂರು ನಿವಾಸಿ ನಂದಿನಿ (20) ಎಂದು ಗುರುತಿಸಲಾಗಿದೆ.

    ಏನಿದು ಪ್ರಕರಣ?
    ಮೃತ ನಂದಿನಿಗೆ 18 ವರ್ಷದಲ್ಲೇ ತನ್ನ ದೂರದ ಸಂಬಂಧಿ ಜೊತೆ ಪೋಷಕರು ಮದುವೆ ಮಾಡಿಸಿದ್ದರು. ಆದರೆ ಮದುವೆಯಾದ ಮೂರು ತಿಂಗಳಲ್ಲಿ ಅವಳು ಪತಿಯನ್ನು ಬಿಟ್ಟು ಬಂದಿದ್ದಳು. ಇತ್ತ ನಂದಿನಿ ಪತಿಯಿಂದ ವಿಚ್ಛೇದನ ಕೂಡ ಪಡೆದಿರಲಿಲ್ಲ. ನಂತರ ನಂದಿನಿ ಕೊಯಮತ್ತೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು.

    ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ರಾಮದಾಸ್ ಆರು ತಿಂಗಳ ಹಿಂದೆ ಸೋಷಿಯಲ್ ಮೀಡಿಯಾದ ಮೂಲಕ ಪರಿಚಯನಾಗಿದ್ದನು. ದಿನಕಳೆದಂತೆ ಇಬ್ಬರು ಸ್ನೇಹಿತರಾಗಿದ್ದು, ಪ್ರೀತಿ ಮಾಡಲು ಶುರು ಮಾಡಿದರು. ನಂತರ ಇಬ್ಬರು ಮದುವೆಯಾಗಲು ನಿರ್ಧರಿಸಿದ್ದರು. ಆದರೆ ನಂದಿನಿಯ ಪೋಷಕರು ಆತ ಬೇರೆ ಜಾತಿಯವನು ಅಲ್ಲದೇ ಈಗಾಗಲೇ ನಂದಿನಿಗೆ ಮದುವೆಯಾಗಿದೆ ಎಂದು ಅವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

    ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತಪಡಿಸಿದ ನಂತರ ಇಬ್ಬರು ಮನೆ ಬಿಟ್ಟು ಹೋಗಿದ್ದಾರೆ. ಗುರುವಾರ ಸಂಜೆ ರಾಮದಾಸ್ ತಮ್ಮ ಮನೆಯವರಿಗೆ ಫೋನ್ ಮಾಡಿ, ಅಂಬೂರಿನ ವೀರವರ್ ದೇವಸ್ಥಾನದಲ್ಲಿ ನಂದಿನಿಯನ್ನು ಮದುವೆಯಾಗಿದ್ದೇನೆ. ಹೀಗಾಗಿ ನಾನು ಮತ್ತೆ ಮನೆಗೆ ವಾಪಸ್ ಬರುವುದಿಲ್ಲ ಎಂದು ಪೋಷಕರಿಗೆ ತಿಳಿಸಿದ್ದಾನೆ. ಆದರೆ ಶುಕ್ರವಾರ ರಾಮದಾಸ್ ಮತ್ತು ನಂದಿನಿ ಮೃತದೇಹ ಬೆಳಿಗ್ಗೆ ರೈಲ್ವೆ ಹಳಿಗಳಲ್ಲಿ ಪತ್ತೆಯಾಗಿದೆ.

    ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ರೈಲ್ವೆ ಹಳಿ ಮೇಲೆ ಮಲಗಿದ್ದಾಗ ಸೆಲ್ಫಿ ತೆಗೆದುಕೊಂಡಿದ್ದಾರೆ. ಚೆನ್ನೈನಿಂದ ಬೆಂಗಳೂರಿಗೆ ಹೋಗುವ ರೈಲು ಅವರ ಮೇಲೆ ಹರಿದಿದೆ. ಸದ್ಯಕ್ಕೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಂಬೂರ್ ಡಿಎಸ್‍ಪಿ ಹೇಳಿದ್ದಾರೆ.

  • ಕೊರೊನಾ ಎಫೆಕ್ಟ್ – ರೈಲ್ವೆ ಫ್ಲಾಟ್ ಫಾರಂ ಟಿಕೆಟ್ 50ಕ್ಕೆ ಏರಿಕೆ

    ಕೊರೊನಾ ಎಫೆಕ್ಟ್ – ರೈಲ್ವೆ ಫ್ಲಾಟ್ ಫಾರಂ ಟಿಕೆಟ್ 50ಕ್ಕೆ ಏರಿಕೆ

    ನವದೆಹಲಿ: ಭಾರತೀಯ ರೈಲ್ವೆ ಇಲಾಖೆ ಕೊರೊನಾ ವೈರಸ್ ಭೀತಿಗೆ ನಲುಗಿ ಹೋಗಿದೆ. ರೈಲು ನಿಲ್ದಾಣಗಳಲ್ಲಿ ಸೇರುವ ದೊಡ್ಡ ಜನ ಸಮೂಹವನ್ನು ನಿಯಂತ್ರಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ.

    ಮುಂಬೈನ ಆರು ರೈಲ್ವೆ ವಿಭಾಗಗಳು ವಡೋದರ, ಅಹ್ಮದಾಬಾದ್, ರಾಟ್ಲಾಮ್, ರಾಜಕೋಟ್, ಭಾವನಗರ ರೈಲು ನಿಲ್ದಾಣ ಸೇರಿ ಅತಿ ಹೆಚ್ಚು ಜನ ಸಂದಣಿ ಸೇರುವ ದೇಶದ 250 ರೈಲು ನಿಲ್ದಾಣಗಳಲ್ಲಿ ಫ್ಲಾಟ್ ಫಾರಂ ಟಿಕೆಟ್ ಬೆಲೆ ಏರಿಕೆ ಮಾಡಿದೆ.

    10 ರೂಪಾಯಿ ಇದ್ದ ರೈಲು ಫ್ಲಾಟ್ ಫಾರಂ ಟಿಕೆಟ್ ಅನ್ನು 50 ರೂಪಾಯಿಗೆ ಏರಿಕೆ ಮಾಡಿ ಜನರಿಗೆ ಬಿಗ್ ಶಾಕ್ ನೀಡಿದೆ. ಫ್ಲಾಟ್ ಫಾರಂ ಟಿಕೆಟ್ ಬೆಲೆ ಹೆಚ್ಚಿಸುವ ಮೂಲಕ ಪ್ರಯಾಣಿರನ್ನು ಹೊರತುಪಡಿಸಿ ಅನಗತ್ಯ ಜನರು ರೈಲು ನಿಲ್ದಾಣಕ್ಕೆ ಬರುವುದನ್ನು ತಡೆಯುವ ಪ್ರಯತ್ನ ಮಾಡುತ್ತಿದೆ.

    ಹೆಚ್ಚು ಜನ ಸಮೂಹ ರೈಲು ನಿಲ್ದಾಣಗಳಲ್ಲಿ ಸೇರುವುದರಿಂದ ವೈರಸ್ ಹರಡುವ ಸಾಧ್ಯತೆ ಇದೆ. ಸ್ಕ್ರೀನಿಂಗ್ ವ್ಯವಸ್ಥೆ ಇದ್ದರೂ ಕೂಡ ಅನಗತ್ಯ ಜನರ ತಪಾಸಣೆಗೆ ಸಮಯ ವ್ಯರ್ಥವಾಗದಿರಲಿ ಎನ್ನುವ ಕಾರಣದಿಂದ ರೈಲ್ವೆ ಇಲಾಖೆ ಈ ನಿರ್ಧಾರ ತೆಗೆದುಕೊಂಡಿದೆ.

    ಸೊಂಕು ಹರಡುವ ಭೀತಿ ಹಿನ್ನೆಲೆ ಎರಡು ದಿನಗಳ ಹಿಂದೆ ಎಸಿ ಬೋಗಿಗಳಲ್ಲಿ ಬೆಡ್ ಶೀಟ್, ಕರ್ಟನ್ಸ್ ನೀಡುವುದನ್ನು ತಡೆಯಲಾಗಿತ್ತು. ಪ್ರತಿ ಪ್ರಯಾಣದ ವೇಳೆ ಬೆಡ್ ಶೀಟ್ ತೊಳೆಯದ ಕಾರಣ ವೈರಸ್ ಹರಡಬಹುದು. ಹೀಗಾಗಿ ಎಸಿ ಬೋಗಿಯಲ್ಲಿ ಸಂಚರಿಸುವ ಪ್ರಯಾಣಿಕರು ಸ್ವತಃ ಬೆಡ್ ಶೀಟ್ ತರುವಂತೆ ಇಲಾಖೆ ಮನವಿ ಮಾಡಿತ್ತು.

  • ಕೊರೊನಾ ಎಫೆಕ್ಟ್ – ರೈಲು ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ

    ಕೊರೊನಾ ಎಫೆಕ್ಟ್ – ರೈಲು ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ

    ಬೆಂಗಳೂರು: ಕೊರೊನಾ ಭೀತಿ ರೈಲ್ವೆ ಇಲಾಖೆಗೂ ತಟ್ಟಿದ್ದು, ರೈಲ್ವೆ ಪ್ರಯಾಣಿಕರ ಸಂಖ್ಯೆ ಶೇ. 4ರಷ್ಟು ಕಡಿಮೆ ಆಗಿದೆ. ಅದರಲ್ಲೂ ದೂರದ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಫುಲ್ ಖಾಲಿ ಖಾಲಿ ಆಗಿದೆ. ಇತ್ತ ಓಲಾ, ಊಬರ್ ನಲ್ಲಿ ಪ್ರಯಾಣಿಸುವವರ ಸಂಖ್ಯೆ ಕೂಡ ಇಳಿಕೆಯಾಗಿದೆ.

    ಈ ಬಗ್ಗೆ ನೈರುತ್ಯ ರೈಲ್ವೆ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಕೃಷ್ಣಾ ರೆಡ್ಡಿ ಮಾತನಾಡಿ, ಕೊರೊನಾ ಭೀತಿಯಿಂದ ರೈಲು ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಶೇ. 4ರಷ್ಟು ಪ್ರಯಾಣಿಕರ ಸಂಖ್ಯೆ ಇಳಿಕೆ ಜೊತೆಗೆ ರಿಸರ್ವೆಶನ್ ಮಾಡಿದವರು ಟಿಕೆಟ್ ವಾಪಸ್ ಪಡೆಯುತ್ತಿದ್ದಾರೆ. ಕಳೆದ ವರ್ಷ ಶೇ. 20ರಷ್ಟು ಪ್ರಯಾಣಿಕರು ರಿಸರ್ವೆಶನ್ ವಾಪಸ್ ಪಡೆಯುತ್ತಿದ್ದರು. ಈಗ ಕೊರೊನಾ ಎಫೆಕ್ಟ್‍ನಿಂದ ಶೇ. 28ರಷ್ಟು ಮಂದಿ ರಿಸರ್ವೆಶನ್ ರದ್ದು ಮಾಡುತ್ತಿದ್ದಾರೆ. ಗಣನೀಯ ಅಲ್ಲ ಸ್ವಲ್ಪ ಪ್ರಮಾಣದಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆ ಆಗಿದೆ ಎಂದು ಹೇಳಿದರು.

    ಈಗಾಗಲೇ ಮುಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಶೀತ, ಜ್ವರ, ಕೆಮ್ಮು ಈ ರೀತಿ ಲಕ್ಷಣ ಇರುವ ವ್ಯಕ್ತಿ ಕಂಡು ಬಂದರೆ ಕಂಟ್ರೋಲ್ ರೂಮ್‍ಗೆ ಕರೆ ಮಾಡಿ ಅಂತ ಸಿಬ್ಬಂದಿಗೆ ತಿಳಿಸಿದ್ದೇವೆ. ಟಿಕೇಟ್ ವಿತರಿಸುವಾಗ ಸಾರ್ವಜನಿಕರಿಂದ ಹಣ ಪಡೆದ ಮೇಲೆ ಕೈ ಸ್ವಚ್ಛ ಮಾಡುಕೊಳ್ಳುವಂತೆ ಸಿಬ್ಬಂದಿಗೆ ಸೂಚಿಸಿದ್ದೇವೆ ಎಂದರು.

    ನೋಟ್‍ನಿಂದನೂ ಕೂಡ ಕೊರೊನಾ ಬರಬಹುದು ಹೀಗಾಗಿ ಎಚ್ವರಿಕೆ ಕ್ರಮ ವಹಿಸಿದ್ದೇವೆ. ಸದ್ಯ ಕೇರಳ, ದೆಹಲಿ, ಮುಂಬೈ ಕಡೆ ಹೋಗುವವರ ಸಂಖ್ಯೆ ಕಡಿಮೆ ಆಗಿದೆ. ಮುಂದಿನ ದಿನಗಳಲ್ಲಿ ಇದೇ ಪರಿಸ್ಥಿತಿ ಇರುತ್ತಾ ಎಂದು ಕಾದು ನೋಡಬೇಕು. ಇದೇ ಪರಿಸ್ಥಿತಿ ಮುಂದುವರಿದರೆ ರೈಲುಗಳ ಸಂಚಾರ ಕಡಿಮೆ ಮಾಡುವ ಬಗ್ಗೆ ಹಿರಿಯ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.