Tag: ರೈಲ್ ರೋಕೋ

  • ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಆಂಧ್ರದ YSRCPಯಿಂದ ವಿಶೇಷ ಪ್ರತಿಭಟನೆ

    ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಆಂಧ್ರದ YSRCPಯಿಂದ ವಿಶೇಷ ಪ್ರತಿಭಟನೆ

    ಹೈದರಾಬಾದ್: ಆಂಧ್ರ ಪ್ರದೇಶಕ್ಕೆ ಕೇಂದ್ರ ಸರ್ಕಾರ ವಿಶೇಷ ಸ್ಥಾನಮಾನ ಕಲ್ಪಿಸಬೇಕೆಂದು YSRCP ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ತಿರುಪತಿಯ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅರೆಬೆತ್ತಲೆಯಾಗಿ ಪೋಸ್ಟರ್ ಗಳಿಂದ ದೇಹವನ್ನು ಮುಚ್ಚಿಕೊಂಡು ತಮ್ಮ ಆಕ್ರೋಶವನ್ನು ಹೊರಹಾಕಿದ್ರು.

    YSRCP ಪಕ್ಷದ ನಾಯಕರು ರೈಲ್ ರೋಕೋ ಪ್ರತಿಭಟನೆಗೆ ಚಾಲನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಆಂಧ್ರ ಪ್ರದೇಶದ ಎಲ್ಲ ಸಂಸದರೆಲ್ಲ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ತಮ್ಮ ಉಪವಾಸ ಸತ್ಯಾಗ್ರಹದ ಮೂಲಕ ಕೇಂದ್ರ ಸರ್ಕಾರ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ಸಂದೇಶವನ್ನು ರವಾನೆ ಮಾಡಲಿದ್ದಾರೆ.

    ಶ್ರೀಕಾಕುಳಂ, ವಿಶಾಖಪಟ್ಟಣ, ಸಮರ್ಲಾಕೋಟ, ರಾಜಮಂಡ್ರಿ, ಎಲ್ಲೂರು, ಭೀಮಾವರಂ, ವಿಜಯವಾಡ, ಗುಂಟೂರು, ತೆನಾಲಿ ಸೇರಿದಂತೆ ರಾಜ್ಯಾದ್ಯಂತೆ ರೈಲ್ ರೋಕೋ ಪ್ರತಿಭಟನೆ ಮಾಡಲಾಯಿತು. ಕೆಲವಡೆ ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದುಕೊಂಡು ನಂತರ ಬಿಡುಗಡೆಗೊಳಿಸಿದರು.