Tag: ರೋಡ್‌ ರೇಜ್‌

  • ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ ಗನ್ ಮ್ಯಾನ್ ಶ್ರೀಧರ್ ಅಮಾನತು

    ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ ಗನ್ ಮ್ಯಾನ್ ಶ್ರೀಧರ್ ಅಮಾನತು

    ಕಾರವಾರ: ನೆಲಮಂಗಲ ರೋಡ್ ರೇಜ್ (Nelamangala Road Rage) ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಗನ್‌ಮ್ಯಾನ್ ಶ್ರೀಧರ್‌ರವರನ್ನು ಮುಂದಿನ ಆದೇಶದವರೆಗೂ ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶ ಹೊರಡಿಸಿದ್ದಾರೆ.

    ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್‌ಮ್ಯಾನ್ ಆಗಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಶ್ರೀಧರ್ ಮಾಜಿ ಸಂಸದರ ಆಪ್ತ ಕೂಡ. ಇನ್ನು ನೆಲಮಂಗಲದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಇವರು ಸಹ ಆರೋಪಿಯಾಗಿದ್ದು, ಇಂದು ಜಾಮೀನು ಪಡೆದಿದ್ದರು. ಇದನ್ನೂ ಓದಿ: ಶಾಸಕರ ಅಸಮಾಧಾನ ಎಲ್ಲವನ್ನೂ ಸಿಎಂ ಹ್ಯಾಂಡಲ್ ಮಾಡ್ತಾರೆ: ಸಚಿವ ಎಂಬಿ ಪಾಟೀಲ್

    ಆದರೇ ಇದೀಗ ಡಿ.ಆರ್ ಪೊಲೀಸ್ ವಿಭಾಗದಲ್ಲಿ ಇವರ ಅಮಾನತು ಜೊತೆ ಗಣ್ಯ ವ್ಯಕ್ತಿಗಳಿಗೆ ಗನ್‌ಮ್ಯಾನ್ ಆಗಿರುವ ಜಿಲ್ಲೆಯ ಐದು ವರ್ಷಕ್ಕಿಂತ ಹೆಚ್ಚು ಸಮಯ ಸೇವೆ ಮಾಡುತ್ತಿರುವ ಗನ್ ಮ್ಯಾನ್‌ಗಳಿಗೆ ಸಹ ಇದೀಗ ಈ ಘಟನೆ ನಂತರ ವರ್ಗಾವಣೆ ಆದೇಶ ಮಾಡಲಾಗಿದ್ದು, ಹತ್ತು ಜನ ಗನ್‌ಮ್ಯಾನ್‌ಗಳಿಗೆ ಇಂದು ವರ್ಗಾವಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶಿಸಿದ್ದಾರೆ.  ಇದನ್ನೂ ಓದಿ:  ನಾಳೆ ಬಾಹ್ಯಾಕಾಶ ಯೋಜನೆಯ ಆಕ್ಸಿಯಮ್ 4 ಉಡಾವಣೆ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ಪ್ರಯಾಣ

  • ಬೆಂಗಳೂರು| ಪಾದಚಾರಿ ಜೊತೆ ಕಿರಿಕ್ – ಬಿಎಂಟಿಸಿ ಕಂಡಕ್ಟರ್ ಹೇಳಿದ್ದೇನು?

    ಬೆಂಗಳೂರು| ಪಾದಚಾರಿ ಜೊತೆ ಕಿರಿಕ್ – ಬಿಎಂಟಿಸಿ ಕಂಡಕ್ಟರ್ ಹೇಳಿದ್ದೇನು?

    – ರೋಡ್‌ರೇಜ್ ಆರೋಪ ತಳ್ಳಿಹಾಕಿದ ಕಂಡಕ್ಟರ್

    ಬೆಂಗಳೂರು: ಇಲ್ಲಿನ ಯಶವಂತಪುರ ಸಿಗ್ನಲ್ ಬಳಿ ಪಾದಚಾರಿ ಜೊತೆ ಕಿರಿಕ್‌ಗೆ ಸಂಬಂಧಿಸಿದಂತೆ ಬಿಎಂಟಿಸಿ ಕಂಡಕ್ಟರ್ ಸ್ಪಷ್ಟನೆ ನೀಡಿದ್ದಾರೆ. ರೇಡ್ ರೇಜ್ ಆರೋಪವನ್ನು ತಳ್ಳಿಹಾಕಿದ್ದಾರೆ.

    ಯಶವಂತಪುರ ಸಿಗ್ನಲ್ ಬಳಿ ನನಗೆ, ಬಿಎಂಟಿಸಿ ಕಂಡಕ್ಟರ್ ಸೈಡ್‌ಗೆ ಹೋಗಿ ಎಂದು ಬಸ್‌ನಿಂದಲೇ ಕೂಗಿ ಹೇಳಿದ್ದರು. ಜೊತೆಗೆ ಬಸ್ ನಿಲ್ಲಿಸಿ ಕಂಡಕ್ಟರ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪಾದಚಾರಿ ಆರೋಪಿಸಿದ್ದ. ಪಾದಚಾರಿ ಹಾಗೂ ಕಂಡಕ್ಟರ್ ನಡುವೆ ಮಾತಿಗೆ ಮಾತು ಬೆಳೆದು ಕತ್ತಿನ ಪಟ್ಟಿ ಹಿಡಿದು ಕಂಡಕ್ಟರ್ ರಸ್ತೆಯಲ್ಲೇ ಎಳೆದಾಡಿದ್ದಾರೆ.

    ತಮ್ಮ ಮೇಲಿನ ಆರೋಪ ನಿರಾಕರಿಸಿರುವ ಕಂಡಕ್ಟರ್, ಪಾದಚಾರಿಯೇ ಅವಾಚ್ಯ ಶಬ್ದಗಳಿಂದ ನಿಂದಿಸಿದ. ಹೀಗಾಗಿ ನಾನು ಬಸ್‌ನಿಂದ ಕೆಳಗೆ ಬಂದು ಪ್ರಶ್ನೆ ಮಾಡಿದೆ. ಬಸ್‌ಗಳು ಸಂಚರಿಸುವ ಆ ಜಾಗದಲ್ಲಿ ಪಾದಚಾರಿಗಳು ಓಡಾಡುವಂತಿಲ್ಲ ಎಂದು ಬೋರ್ಡ್ ಕೂಡ ಇದೆ. ಆದರೂ, ಅವರು ಫೋನ್‌ನಲ್ಲಿ ಮಾತನಾಡಿಕೊಂಡು ಆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು. ಸೈಡ್‌ಗೆ ಹೋಗ್ರಿ ಎಂದು ಹೇಳಿದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂದು ಕಂಡಕ್ಟರ್ ತಿಳಿಸಿದ್ದಾರೆ.

    ಬಿಎಂಟಿಸಿ ಕಂಡಕ್ಟರ್ ತಮ್ಮ ಮೇಲಿನ ರೋಡ್‌ರೇಜ್ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಪಾದಚಾರಿಗಳು ಸಂಚರಿಸುವಂತಿಲ್ಲ ಎಂದು ಬೋರ್ಡ್ ಇರುವ ಜಾಗದಲ್ಲಿ ಅವರು ಓಡಾಡಿದ್ದರು. ಅದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆಯೇ ತಿರುಗಿಬಿದ್ದರು ಎಂದು ಕಂಡಕ್ಟರ್ ಆರೋಪ ಮಾಡಿದ್ದಾರೆ.

  • ಬೈಕ್‌ಗೆ ಡಿಕ್ಕಿ ಹೊಡೆದು 10 ಮೀಟರ್‌ ಎಳೆದೊಯ್ದ ದುಷ್ಕರ್ಮಿಗಳು – ಕರ್ತವ್ಯನಿರತ ಪೊಲೀಸ್‌ ಸಾವು

    ಬೈಕ್‌ಗೆ ಡಿಕ್ಕಿ ಹೊಡೆದು 10 ಮೀಟರ್‌ ಎಳೆದೊಯ್ದ ದುಷ್ಕರ್ಮಿಗಳು – ಕರ್ತವ್ಯನಿರತ ಪೊಲೀಸ್‌ ಸಾವು

    – ನಿಧಾನಕ್ಕೆ ಹೋಗಿ ಎಂದಿದ್ದಕ್ಕೆ ಕೋಪಗೊಂಡು ಕಾರಿನಿಂದ ಡಿಕ್ಕಿ

    ನವದೆಹಲಿ: ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು 10 ಮೀಟರ್‌ ವರೆಗೂ ಎಳೆದೊಯ್ದ ಪರಿಣಾಮ ಕರ್ತವ್ಯನಿರತ ಪೊಲೀಸ್‌ ಪೇದೆ ದಾರುಣ ಸಾವಿಗೀಡಾಗಿರುವ ಘಟನೆ ದೆಹಲಿಯಲ್ಲಿ (New Delhi) ನಡೆದಿದೆ.

    ಪೊಲೀಸ್‌ ಸಂದೀಪ್ ಮೃತ ದುರ್ದೈವಿ. ಈ ಪ್ರದೇಶದಲ್ಲಿ ಕಳ್ಳತನ ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವುದರ ಹಿಂದೆ ಏನಿದೆ ಎಂದು ತನಿಖೆ ಮಾಡಲು ಕರ್ತವ್ಯದಲ್ಲಿದ್ದರು. ಅವರು ಬೈಕ್‌ನಲ್ಲಿ ಹೋಗುತ್ತಿದ್ದಾಗ ವ್ಯಾಗನಾರ್ ಕಾರು ಅವರನ್ನು ಹಿಂದಿಕ್ಕಲು ಪ್ರಯತ್ನಿಸಿತು. ನಿಧಾನವಾಗಿ ಹೋಗುವಂತೆ ಕಾರು ಚಾಲಕನಿಗೆ ಸಂದೀಪ್‌ ತಿಳಿಸಿದ್ದಾರೆ. ಏಕಾಏಕಿ ಕಾರಿನ ವೇಗ ಹೆಚ್ಚಿಸಿ ಹಿಂದಿನಿಂದ ಸಂದೀಪ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ತಮಿಳುನಾಡು ಡಿಸಿಎಂ ಆಗಿ ಉದಯನಿಧಿ ಸ್ಟಾಲಿನ್ ಇಂದು ಪ್ರಮಾಣವಚನ

    ಕೆಳಗೆ ಬಿದ್ದ ಸಂದೀಪ್‌ರನ್ನು ಬೈಕ್‌ ಸಮೇತ ಸುಮಾರು 10 ಮೀಟರ್ ವರೆಗೂ ಕಾರು ಎಳೆದೊಯ್ದಿದೆ.‌ ತೀವ್ರವಾಗಿ ಗಾಯಗೊಂಡಿದ್ದ ಪೊಲೀಸ್ ಸಂದೀಪ್ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಮತ್ತೊಂದು ಆಸ್ಪತ್ರೆಗೆ ಶಿಫಾರಸು ಮಾಡಲಾಯಿತು. ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

    ಆ ಪ್ರದೇಶದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಘಟನೆ ದೃಶ್ಯ ಸೆರೆಯಾಗಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದರು. ಕಾರು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರು ವಾಹನವನ್ನು ವಶಪಡಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗುಜರಾತ್‌ನ ಸೋಮನಾಥದಲ್ಲಿ 9 ಅಕ್ರಮ ಮಸೀದಿಗಳ ತೆರವು

    ಪೊಲೀಸ್‌ ಸಂದೀಪ್ ತಾಯಿ, ಪತ್ನಿ ಮತ್ತು ಐದು ವರ್ಷದ ಮಗನನ್ನು ಅಗಲಿದ್ದಾರೆ.‌ ಕಾರಿನಲ್ಲಿದ್ದ ಒಬ್ಬ ಅಕ್ರಮ ಮದ್ಯದ ದಂಧೆಯಲ್ಲಿ ಭಾಗಿಯಾಗಿದ್ದಾನೆ ಎಂದು ಕೆಲವು ಮೂಲಗಳು ಹೇಳಿವೆ. ಆದರೆ ಪೊಲೀಸರು ಇದನ್ನು ಖಚಿತಪಡಿಸಿಲ್ಲ. ರಾಷ್ಟ್ರ ರಾಜಧಾನಿಯಲ್ಲಿ ರೋಡ್‌ ರೇಜ್ ಪ್ರಕರಣಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ. ಈ ಕೇಸ್‌ಗಳಲ್ಲಿ ಅಪಾರ ಸಾವು-ನೋವುಗಳಾಗಿವೆ.

  • ಬೆಂಗಳೂರಿನಲ್ಲಿ ಹೆಚ್ಚಾದ ರೋಡ್ ರೇಜ್ – ಶಾಲಾ ಬಸ್ ಮೇಲೆ ಪುಂಡರ ಅಟ್ಟಹಾಸ

    ಬೆಂಗಳೂರಿನಲ್ಲಿ ಹೆಚ್ಚಾದ ರೋಡ್ ರೇಜ್ – ಶಾಲಾ ಬಸ್ ಮೇಲೆ ಪುಂಡರ ಅಟ್ಟಹಾಸ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ರೋಡ್ ರೇಜ್ ಪ್ರಕರಣಗಳು ಹೆಚ್ಚಾಗಿದ್ದು, ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

    ನಿನ್ನೆ (ಸೆ.16) ಸಂಜೆ ವೇಳೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಕೊಲೆ ಆರೋಪಿ ದರ್ಶನ್ ಸೆಲ್‌ಗೆ ಬರಲಿದೆ 32 ಇಂಚಿನ ಟಿವಿ

    KA 01 MB 5796 ವಾಹನ ನೋಂದಣಿ ಸಂಖ್ಯೆಯ ಸ್ಕಾರ್ಪಿಯೋದಲ್ಲಿದ್ದ 6-8 ಕ್ಕೂ ಹೆಚ್ಚು ದುಷ್ಕರ್ಮಿಗಳು ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಸ್ ಕಿಟಕಿಯನ್ನು ಒಡೆಯುವ ಮೂಲಕ ಬಸ್‌ನಲ್ಲಿದ್ದ ಮಕ್ಕಳಿಗೆ ತೀವ್ರ ತೊಂದರೆ ನೀಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಶಾಲಾ ಬಸ್‌ಗಳ ಮೇಲೆಯೂ ರೋಡ್ ರೇಜ್ ಮಾಡುತ್ತಾರಾ? ಶಾಲಾ ಮಕ್ಕಳಿಗೂ ಬೆಂಗಳೂರು ಸುರಕ್ಷಿತವಾಗಿಲ್ವಾ ಎಂದು ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಘಟನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ದಿವಾಳಿಯಾಗಿರುವ ಪಾಕಿಸ್ತಾನಕ್ಕೆ ಐಎಂಎಫ್‌ನಿಂದ ಸಿಗುತ್ತಾ ಬೂಸ್ಟರ್‌ ಡೋಸ್‌!