Tag: ರೋಣ

  • ಉರಿ ಸೆಕ್ಟರ್‌ನಲ್ಲಿ ಉಗ್ರರ ದಾಳಿಗೆ ಮಡಿದ ವೀರ ಯೋಧನ ಅಂತ್ಯಕ್ರಿಯೆ

    ಉರಿ ಸೆಕ್ಟರ್‌ನಲ್ಲಿ ಉಗ್ರರ ದಾಳಿಗೆ ಮಡಿದ ವೀರ ಯೋಧನ ಅಂತ್ಯಕ್ರಿಯೆ

    – ವೀರಯೋಧ ವಿರೇಶ್ ಅಮರ್ ರಹೆ: ಮೊಳಗಿದ ಘೋಷಣೆ
    – ಮಗನನ್ನು ನೆನೆದು ಕಣ್ಣೀರಿಟ್ಟ ತಾಯಿ

    ಗದಗ: ಜಮ್ಮು-ಕಾಶ್ಮಿರದ ಉರಿನಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದ ಯೋಧ ವೀರೇಶ್ ಕುರಹಟ್ಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಇಂದು ರೋಣ ತಾಲೂಕಿನ ಕರುಮುಡಿ ಗ್ರಾಮದಲ್ಲಿ ನೆರವೇರಿತು.

    ಕರುಮುಡಿ ಗ್ರಾಮದ ಯೋಧ ವೀರೇಶ್ ಕುರಹಟ್ಟಿ (50) ಅವರು ಕಳೆದ 30 ವರ್ಷಗಳಿಂದ ಭಾರತೀಯ ಸೇನೆಯ 18ನೇ ಮರಾಠ ಬಟಾಲಿಯನ್‍ನಲ್ಲಿ ಸೇವೆಸಲ್ಲಿಸುತ್ತಿದ್ದರು. ಇತ್ತೀಚೆಗೆ ಸುಬೇದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಡಿಸೆಂಬರ್ 25ರಂದು ಶ್ರೀನಗರದ ರಾಮಾಪೂರ ಹಾಗೂ ಉರಿ ಸೆಕ್ಟರ್‍ನಲ್ಲಿ ಭಾರತೀಯ ಸೈನಿಕರು ಹಾಗೂ ಪಾಕಿಸ್ತಾನದ ನುಸುಳುಕೊರ ಉಗ್ರರ ಮಧ್ಯೆ ಗುಂಡಿನ ದಾಳಿ ನಡೆದಿತ್ತು. ಈ ವೇಳೆ ಗುಂಡು ತಗುಲಿ ಯೋಧ ವೀರೇಶ್ ವೀರಮರಣ ಹೊಂದಿದ್ದಾರೆ.

    ವೀರೇಶ್ ಅವರು ಕಳೆದ ದೀಪಾವಳಿ ಹಬ್ಬಕ್ಕೆ ಊರಿಗೆ ಬಂದು ಕುಟುಂಬದವರೊಂದಿಗೆ ಖುಷಿ ಖುಷಿಯಾಗಿ ಬೆಳಕಿನ ಹಬ್ಬ ಆಚರಿಸಿಹೊಗಿದ್ದರು. ಈಗ ಅವರ ಮನೆ ಬೆಳಕು ನಂದಿಹೋಗಿದ್ದು, ಕುಟುಂಬಕ್ಕೆ ಕತ್ತಲು ಆವರಿಸಿದಂತಾಗಿದೆ. ಸೇನೆಯಲ್ಲಿ ಸುಬೆದಾರ್ ಆಗಿ ಕೆಲಸ ಮಾಡುತ್ತಿದ್ದ ವೀರೇಶ್ ಕುರಹಟ್ಟಿ ನಿವೃತ್ತಿಯಾಗಲು ಕೇವಲ ಮೂರು ತಿಂಗಳು ಮಾತ್ರ ಬಾಕಿ ಇತ್ತು. ನಿವೃತ್ತಿಯಾಗಿ ಊರಿಗೆ ಬರುವ ಮುನ್ನ ಶವವಾಗಿ ತಾಯಿನಾಡಿಗೆ ತೆರಳುತ್ತಿರುವುದು ನಿಜಕ್ಕೂ ದುಃಖದ ಸಂಗತಿ. ವೀರೇಶ್ ಅವರ ಅಗಲಿಕೆಯಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

    ಬಡತನ ಕುಟುಂಬವಾದ್ದರಿಂದ ಹೊಟ್ಟೆಬಟ್ಟೆ ಕಟ್ಟಿ ನೌಕರಿ ಮಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂಬ ಕನಸು, ಛಲ, ಯೊಧ ವೀರೇಶ್ ಅವದ್ದಾಗಿತ್ತು. ವೀರೇಶ್ ಅವರು ಹುತಾತ್ಮರಾಗುವ ಒಂದು ವಾರದ ಮೊದಲು ತಾಯಿ ಕಾಶಮ್ಮ ಅವರಿಗೆ ಫೋನ್ ಮಾಡಿದ್ದರು. ಆದರೆ ಮನೆಯ ಬಳಿಯ ನಾಯಿ ಕೂಗುವ ಶಬ್ಧಕ್ಕೆ ಮಗನ ಧ್ವನಿ ತಾಯಿಗೆ ಕೇಳಿಸಲಿಲ್ಲ. ಅಮ್ಮಾ ಮತ್ತೊಮ್ಮೆ ಫೋನ್ ಮಾಡುತತೇನೆ ಚೆನ್ನಾಗಿರು ಅಂತ ವೀರೇಶ್ ಫೋನ್ ಕಟ್ ಮಾಡಿದ್ದರು. ಅಂದಿನ ಆ ಧ್ವನಿ ತಾಯಿಯ ಕಿವಿನಲ್ಲಿ ಇಂದಿಗೂ ಗುಣಗುಡುತ್ತಿದೆ ಎಂದು ಸಂಬಂಧಿಕರು ಕಣ್ಣೀರಿಟ್ಟಿದ್ದಾರೆ.

    ದೇಶ ಸೇವೆ ಸಾಕು ಬಾ ಮಗ ಅಂತ ತಾಯಿ ಹೇಳಿದಾಗಲೆಲ್ಲಾ, ಆಯಿತು ಅಮ್ಮ ಬೇಗ ಬರುತ್ತೇನೆ ಎಂದು ವಿರೇಶ್ ಹೇಳುತ್ತಿದ್ದರು. ಈಗ ಶವವಾಗಿ ಮನೆಗೆ ಬಂದಿದ್ದಾರೆ. ಮನೆಯ ಒಡೆಯನೇ ಹೋದಮೇಲೆ ನಮಗ್ಯಾರು ಗತಿ ಎಂದು ವೀರೇಶ್ ಅವರ ಕುಟುಂಬ ಕಣ್ಣೀರಿಡುತ್ತಿದೆ. ಪತ್ನಿ ಲಲಿತಾ ಅವರು ಕೂಡ ಎರಡು ಚಿಕ್ಕ ಮಕ್ಕಳನ್ನು ಕಟ್ಟಿಕೊಂಡು ರೋಧಿಸುತ್ತಿದ್ದಾರೆ. ದೇಶಕ್ಕೆ ಅರ್ಪಣೆಯಾದ ಎನ್ನುವ ಗಟ್ಟಿ ಮನಸ್ಸಿನ ಮಾತು ಮನೆಯವರಿಂದ ಕೇಳಿ ಬರುತ್ತಿದ್ದರೂ, ಒಡಲಾಳದಲ್ಲಿ ಹೇಳಲಾಗದಷ್ಟು ನೋವು ತುಂಬಿದೆ.

    ವೀರಯೋಧ ವೀರೇಶ್ ಅವರ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಬರುತ್ತಿದ್ದಂತೆ, ಗ್ರಾಮದ ಯುವಕರು ನೂರಾರು ಬೈಕ್‍ಗಳ ಮೂಲಕ ಬೈಕ್ ರ್ಯಾಲಿ ನಡೆಸಿದರು. ಗ್ರಾಮದ ತುಂಬೆಲ್ಲಾ ಮೆರವಣಿಗೆ ಮಾಡಿದರು. ಅಮರ್ ರಹೆ.. ಅಮರ್ ರಹೆ.. ವೀರಯೋಧ ವಿರೇಶ್ ಅಮರ್ ರಹೆ… ಭಾರತ ಮಾತಾಕಿ ಜೈ ಎಂಬ ಘೋಷಣೆ ಕೂಗುತ್ತ ಊರ ತುಂಬೆಲ್ಲಾ ಪಾರ್ಥಿವ ಶರೀರ ಮೆರವಣಿಗೆ ಮಾಡಿದರು. ಯೋಧ ವೀರೇಶ್ ಅವರು ಹುತಾತ್ಮರಾದ ಸುದ್ದಿಯಿಂದ ಕರಮುಡಿ ಗ್ರಾಮದ ಊರಿಗೆ ಊರೆ ದುಃಖ ಮಡುಗಟ್ಟಿದೆ.

    ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿಪಾಟೀಲ್ ಅವರು ಯೋಧ ವೀರೇಶ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮಕ್ಕಳ ಶಿಕ್ಷಣಕ್ಕೆ ಎರಡು ಲಕ್ಷ ರೂಪಾಯಿ ಪರಿಹಾರ ಘೊಷಣೆ ಮಾಡಿದ್ದಾರೆ. ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಆದಷ್ಟು ಬೇಗ ಕುಟುಂಬಕ್ಕೆ ತಲುಪಿಸುವ ಭರವಸೆ ನೀಡಿದರು. ಜೊತೆಗೆ ಗ್ರಾಮದಲ್ಲಿ ವೀರೇಶ್ ಅವರ ಸ್ಮಾರಕ ನಿರ್ಮಿಸುವುದಾಗಿ ಭರವಸೆ ನೀಡಿದರು.

    ಯೋಧ ವೀರೇಶ್ ಅವರ ಅಂತ್ಯಸಂಸ್ಕಾರ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ನೆರವೇರಿತು. ಹಿಂದೂ ಪಂಚಮಸಾಲಿ ಲಿಂಗಾಯತ ಧರ್ಮದ ವಿಧಿವಿಧಾನ ಹಾಗೂ ಸರ್ಕಾರಿ ಸಕಲ ಗೌರವಗೊಂದಿಗೆ ಅಂತ್ಯಕ್ರಿಯೆ ನಡೆಯಿತು. ಸೈನಿಕರು ಮೂರು ಸುತ್ತಿನ ಗುಂಡು ಹಾರಿಸಿ ಗೌರವ ಅರ್ಪಿಸಿದರು. ಅಂತ್ಯಕ್ರಿಯೆಯಲ್ಲಿ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ್, ಸಚಿವ ಸಿ.ಸಿ ಪಾಟೀಲ್, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಾಜಿ ಶಾಸಕರುಗಳಾದ ಬಿ.ಆರ್ ಯಾವಗಲ್, ಜಿ.ಎಸ್.ಪಾಟೀಲ್ ಸೇರಿದಂತೆ ಅನೇಕ ಅಧಿಕಾರಿಗಳು ಭಾಗವಹಿಸಿ ಗೌರವ ವಂದನೆ ಸಲ್ಲಿಸಿದರು.

  • ಪುರಸಭೆ ಮುಖ್ಯಾಧಿಕಾರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನಿಸಿದ ಮುಖಂಡ

    ಪುರಸಭೆ ಮುಖ್ಯಾಧಿಕಾರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನಿಸಿದ ಮುಖಂಡ

    ಗದಗ: ಮುಖಂಡನೊಬ್ಬ ರೋಣ ಪುರಸಭೆ ಮುಖ್ಯಾಧಿಕಾರಿಯನ್ನು ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾನೆ.

    ಶರಣಪ್ಪ ಪೂಜಾರ್ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ ಪ.ಜಾತಿ-ಪ.ಪಂಗಡ ಮುಖಂಡ. ಪೌರಕಾರ್ಮಿಕ ವೇತನ ಪಾವತಿ ವಿಳಂಬ ಪ್ರಶ್ನಿಸಿ, ಪುರಭೆಯ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರ ಕಚೇರಿಯಲ್ಲಿ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಅಲ್ಲಿಗೆ ಬಂದ ಅಧಿಕಾರಿಯೊಬ್ಬರು ಹಲ್ಲೆ ತಡೆದಿದ್ದಾರೆ.

    ಘಟನೆಯ ವಿವರ:
    ಬಾಕಿ ಇರುವ ವೇತನ ನೀಡುವಂತೆ ಒತ್ತಾಯಿಸಿ ರೋಣ ಪುರಸಭೆಯ ಪೌರಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಲ್ಲಿಗೆ ಬಂದ ಕೆಲವು ಮುಖಂಡರು ಲಕ್ಷ್ಮಣ ಕಟ್ಟಿಮನಿ ಅವರ ಕಚೇರಿಗೆ ಹೋಗಿದ್ದಾರೆ. ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರ ಜೊತೆಗೆ ಶರಣಪ್ಪ ಪೂಜಾರ್ ವಾಗ್ದಾಳಿಗೆ ಇಳಿದಿದ್ದಾರೆ. ಅವಾಚ್ಯ ಪದಗಳಿಂದ ನಿಂದಿಸಿ, ವೇತನವಿಲ್ಲದೆ ಅನೇಕ ಸಮಸ್ಯೆಗಳನ್ನು ಪೌರಕಾರ್ಮಿಕರು ಎದುರಿಸಿದ್ದಾರೆ. ಇದೇ ಪರಿಸ್ಥಿತಿ ನಿಮ್ಮ ಮನೆಯಲ್ಲಿ ನಿರ್ಮಾಣವಾಗಿ ಯಾರಾದರೂ ಮೃತಪಟ್ಟರೆ ನಡೆಯುತ್ತಾ? ವೇತನ ವಿಳಂಭವಾಗಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.

    ಸ್ವಲ್ಪ ವಿಳಂಬವಾಗಿದ್ದು, ಕೆಲವೇ ದಿನಗಳಲ್ಲಿ ವೇತನ ಪಾವತಿ ಮಾಡಲಾಗುತ್ತದೆ ಎಂದು ಲಕ್ಷ್ಮಣ ಕಟ್ಟಿಮನಿ ಸ್ಪಷ್ಟನೆ ನೀಡಿದ್ದಾರೆ. ಇದಕ್ಕೆ ಅಸಮಾಧಾನ ಹೊರಹಾಕಿದ ಶರಣಪ್ಪ, ಟೇಬಲ್ ಮೇಲಿದ್ದ ಗ್ಲೋಬ್ ಎತ್ತಿಕೊಂಡು ಹಲ್ಲೆಗೆ ಯತ್ನಿಸಿದ್ದಾನೆ. ಆತನ ಹಿಂದೆ ನಿಂತಿದ್ದ ವ್ಯಕ್ತಿಯೊಬ್ಬರು ತಕ್ಷಣವೇ ಹಲ್ಲೆಯನ್ನು ತಪ್ಪಿಸಿದ್ದಾರೆ. ಬಳಿಕ ಪುರಸಭೆ ಅಧಿಕಾರಿಯೊಬ್ಬರು ಮಧ್ಯ ಪ್ರವೇಶಿಸಿ, ಮುಖಂಡರನ್ನು ಹಾಗೂ ಪೌರಕಾರ್ಮಿಕರನ್ನು ಮುಖ್ಯಾಧಿಕಾರಿಗಳ ಕಚೇರಿಯಿಂದ ಹೊರಗೆ ಕಳುಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಗದಗ ಜಿಲ್ಲೆಯ ವ್ಯಕ್ತಿಗೆ ನಿಪಾ ವೈರಸ್‍ನ ಲಕ್ಷಣಗಳಿಲ್ಲ

    ಗದಗ ಜಿಲ್ಲೆಯ ವ್ಯಕ್ತಿಗೆ ನಿಪಾ ವೈರಸ್‍ನ ಲಕ್ಷಣಗಳಿಲ್ಲ

    ಗದಗ: ಜಿಲ್ಲೆ ರೋಣ ತಾಲೂಕಿನ ಮುಶಿಗೇರಿ ಗ್ರಾಮದ ವ್ಯಕ್ತಿಯೊಬ್ಬರಿಗೆ ನಿಪಾ ವೈರಸ್ ಕಾಣಿಸಿಕೊಂಡಿಲ್ಲ ಎಂದು ಜಿಮ್ಸ್ ನಿರ್ದೇಶಕ ಪಿ.ಎಸ್.ಭೂಸರೆಡ್ಡಿ ಸ್ಪಷ್ಟಪಡಿಸಿದ್ದಾರೆ.

    ಗಂಗಾಧರ್ ಎಂಬವರಿಗೆ ನಿಪಾ ವೈರಸ್ ಕಾಣಿಸಿಕೊಂಡಿದೆ ಎಂಬ ಶಂಕೆಯಿಂದ ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೀಗಾಗಿ ಅವರ ರಕ್ತದ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್ಸ್‍ಟ್ಯೂಟ್ ಆಫ್ ವೈರಲಾಜಿ ಲ್ಯಾಬ್‍ಗೆ ಕಳುಹಿಸಲಾಗಿತ್ತು. ಫಲಿತಾಂಶ ಬಂದಿದ್ದು, ಗಂಗಾಧರ್ ಅವರಿಗೆ ನಿಪಾ ವೈರಸ್ ಕಾಣಿಸಿಕೊಂಡಿಲ್ಲ, ಜಿಲ್ಲೆಯ ಜನರು ಆತಂಕ ಪಡಬೇಕಾಗಿಲ್ಲ ಎಂದು ವೈದ್ಯ ಭೂಸರೆಡ್ಡಿ ಹೇಳಿದ್ದಾರೆ. ಇದನ್ನು ಓದಿ: ನಿಪಾ ವೈರಸ್ ಬಾವಲಿಗಳಿಂದ ಬರಲ್ಲ -ವರದಿಯಲ್ಲಿ ಸಾಬೀತು

    ಗಂಗಾಧರ್ ಅವರು ಕಳೆದ 6 ತಿಂಗಳಿನಿಂದ ಕೇರಳದಲ್ಲಿ ಕೆಲಸ ಮಾಡುತ್ತಿದ್ದರು. ನಿಪಾ ವೈರಸ್ ಹಾವಳಿ ಹೆಚ್ಚಾಗಿದ್ದರಿಂದ ಅವರು ತಮ್ಮ ಗ್ರಾಮಕ್ಕೆ ಬಂದಿದ್ದರು. ಒಂದು ವಾರದಿಂದ ಜ್ವರ, ಕೆಮ್ಮು, ತಲೆಸುತ್ತು ಕಾಣಿಸಿಕೊಂಡಿದ್ದರಿಂದ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ನಿಪಾ ಶಂಕೆ ವ್ಯಕ್ತವಾಗಿದ್ದರಿಂದ ರಕ್ತದ ಮಾದರಿಯನ್ನು ಪುಣೆಗೆ ಕಳುಹಿಸಲಾಗಿತ್ತು. ಸದ್ಯ ಗಂಗಾಧರ್ ರಕ್ತದಲ್ಲಿ ನಿಪಾ ವೈರಸ್ ಇಲ್ಲವೆಂದು ಎಂದು ರಿಪೋರ್ಟ್ ಮೂಲಕ ಸ್ಪಷ್ಟವಾಗಿದೆ.

  • ಹರಕು ಮುರುಕು ಗುಡಿಸಲಿನಲ್ಲೇ ವಾಸ- ಕೇಳೋರಿಲ್ಲ ಅಜ್ಜನ ಗೋಳು

    ಹರಕು ಮುರುಕು ಗುಡಿಸಲಿನಲ್ಲೇ ವಾಸ- ಕೇಳೋರಿಲ್ಲ ಅಜ್ಜನ ಗೋಳು

    ಗದಗ: ಜಿಲ್ಲೆಯ ರೋಣ ಪಟ್ಟಣದಲ್ಲಿ 80ರ ಆಸುಪಾಸಿನ ವೃದ್ಧರೊಬ್ಬರು ವಾಸಿಸಲು ನೆಲೆಯಿಲ್ಲದೇ ಹರಕು ಮುರುಕು ಗುಡಿಸಲಿನಲ್ಲಿ ನಾಯಿ-ಹಂದಿಗಳ ನಡುವೆ ವಾಸವಾಗಿದ್ದಾರೆ.

    ಸೋಮಪ್ಪ ಟಪಾಲಿ ಎಂಬವರೇ ಸೂರಿಲ್ಲದೇ ಬೀದಿಗೆ ಬಂದಿರೋ ವೃದ್ಧ. ಸೋಮಪ್ಪರಿಗೆ ಬಂಧು-ಬಳಗ ಎಂದು ಯಾರೂ ಇಲ್ಲ. ಸ್ಥಳೀಯರು ಯಾರಾದ್ರೂ ಊಟ ಕೊಟ್ಟರೆ ಮಾಡುತ್ತಾರೆ. ಒಂದು ವೇಳೆ ಯಾರೂ ಊಟ ಕೊಡದೇ ಇದ್ದಲ್ಲಿ ಅಲ್ಲೇ ಒದ್ದಾಡುತ್ತಾರೆ. ಸೋಮಪ್ಪ 15 ವರ್ಷಗಳಿಂದ ಸಣ್ಣದೊಂದು ಸೂರಿಗಾಗಿ ಪುರಸಭೆ ಕಚೇರಿಗೆ ಅಲೆದಾಡಿದರೂ ಅಧಿಕಾರಿಗಳ ಮನಸ್ಸು ಮಾತ್ರ ಕರಗಿಲ್ಲ.

    ಸೋಮಪ್ಪ ಅವರ ಪತ್ನಿ ಸುಮಾರು 20 ವರ್ಷಗಳ ಹಿಂದೆಯೇ ಸಾವನ್ನಪ್ಪಿದ್ದಾರೆ. ಇರುವ ಮೂವರು ಮಕ್ಕಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಒಬ್ಬ ಮಾನಸಿಕ ಅಸ್ವಸ್ಥನಾಗಿದ್ದಾನೆ. ಚಳಿ, ಮಳೆ, ಬಿಸಿಲು ಎನ್ನದೇ ಸೋಮಪ್ಪ ಅಲ್ಲಿಯೇ ವಾಸವಾಗಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸೋಮಪ್ಪರಿಗೆ ಮನೆ ವ್ಯವಸ್ಥೆಯನ್ನು ಮಾಡಬೇಕಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.

  • ರಿ ಬೋರ್ ತೆಗೆಯುವ ವೇಳೆ ದುರಂತ: ಕೊಳವೆ ಬಾವಿಗೆ ಬಿದ್ದು ಇಬ್ಬರು ಬಲಿ

    ರಿ ಬೋರ್ ತೆಗೆಯುವ ವೇಳೆ ದುರಂತ: ಕೊಳವೆ ಬಾವಿಗೆ ಬಿದ್ದು ಇಬ್ಬರು ಬಲಿ

     

    ಗದಗ: ರಿ ಬೋರ್ ತೆಗೆಯುವ ವೇಳೆ ಕೊಳವೆ ಬಾವಿಗೆ ಇಬ್ಬರು ವ್ಯಕ್ತಿಗಳು ಬಿದ್ದು ಮೃತ ಪಟ್ಟಿರುವ ಧಾರುಣ ಘಟನೆ ರೋಣ ತಾಲೂಕಿನ ಸವಡಿ ಗ್ರಾಮದ ಜಮೀನಿನಲ್ಲಿ ಸಂಭವಿಸಿದೆ.

    ಬಸವರಾಜ್ (32) ಶಂಕ್ರಪ್ಪ (30) ಕೊಳವೆ ಬಾವಿಗೆ ಬಿದ್ದ ದುರ್ದೈವಿಗಳು. ಬತ್ತಿದ ಕೊಳವೆ ಬಾವಿಯಿಂದ ಕೇಸಿಂಗ್ ಪೈಪ್ ತೆಗೆಯುವಾಗ ಮಣ್ಣು ಕುಸಿದು ಅವಘಡ ಸಂಭವಿಸಿದೆ.

    ಘಟನೆ ಹೇಗಾಯ್ತು?
    ಮಲ್ಲಪ್ಪ ಬಾಣದ ಎಂಬುವರು ಜಮೀನಿನಲ್ಲಿ ಈ ಹಿಂದೆ ಬೋರ್‍ವೆಲ್ ಕೊರೆಸಿದ್ದರು. ಈ ಬೋರ್‍ವೆಲ್‍ನಲ್ಲಿ ನೀರು ಸಿಗದ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಕೇಸಿಂಗ್ ಪೈಪ್ ತೆಗೆಯುವ ಕೆಲಸ ಮಾಡುತ್ತಿದ್ದರು. ಇಂದು 25 ಅಡಿ ಉದ್ದದ ಕೇಸಿಂಗ್ ಪೈಪನ್ನು ತೆಗೆದಿದ್ದಾರೆ. ತೆಗೆದ ಬಳಿಕ ಅವರು ಕೇಸಿಂಗ್ ಪೈಪ್ ತೆಗೆದ ಜಾಗದ ಬಳಿ ಬಸವರಾಜ್, ಶಂಕ್ರಪ್ಪ ನಿಂತಿದ್ದಾರೆ. ಈ ವೇಳೆ ಮಣ್ಣು ಕುಸಿದು ಇಬ್ಬರು ಕೆಳಕ್ಕೆ ಜಾರಿದ್ದಾರೆ. ಕೊಳವೆ ಬಾವಿಗೆ ಬಿದ್ದ ಬಳಿಕ ಇವರ ಮೇಲೆ ಮಣ್ಣು ಬಿದ್ದಿದೆ.

    ಈಗಾಗಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿದ್ದಾರೆ. ಸ್ಥಳದಲ್ಲಿ ನೂರಕ್ಕೂ ಅಧಿಕ ಜನ ಸೇರಿದ್ದಾರೆ. ದೇಹದ ಮಣ್ಣು ಬಿದ್ದ ಹಿನ್ನೆಲೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.

    https://www.youtube.com/watch?v=TESplnWdMrU

  • ಸಾಹಿತಿ, ಮಾಜಿ ಶಾಸಕ ಜ್ಞಾನದೇವ ದೊಡ್ಡಮೇಟಿ ನಿಧನ

    ಸಾಹಿತಿ, ಮಾಜಿ ಶಾಸಕ ಜ್ಞಾನದೇವ ದೊಡ್ಡಮೇಟಿ ನಿಧನ

    ಗದಗ: ಜಿಲ್ಲೆಯ ರೋಣ ತಾಲೂಕಿನ ಜಕ್ಜಲಿ ಗ್ರಾಮದ ಸರಳ, ಸಜ್ಜನಿ, ಮೌಲ್ಯಾಧಾರಿತ ರಾಜಕಾರಣಿ ಹಾಗೂ ಸಾಹಿತಿಯಾಗಿದ್ದ ಜ್ಞಾನದೇವ ದೊಡ್ಡಮೇಟಿ ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಕರ್ನಾಟಕ ಏಕೀಕರಣ ಚಳವಳಿಯ ಪ್ರಮುಖರಾದ ದಿವಂಗತ ಅಂದಾನಪ್ಪ ದೊಡ್ಡಮೇಟಿ ಅವರ ಪುತ್ರರಿವರು. ಇವರು ಕೂಡಾ ಸ್ವಾತಂತ್ರ್ಯ ಹೋರಾಟ ಕಂಡಂತವರು. 1983 ಹಾಗೂ 85 ರಲ್ಲಿ ಎರಡು ಬಾರಿ ರೋಣ ಕ್ಷೇತ್ರದಿಂದ ಜನತಾಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು. ಜ್ಞಾನದೇವ ದೊಡ್ಡಮೇಟಿಯವರು ಸಾಹಿತಿ ಸಹ ಆಗಿದ್ರು. ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿ ಮತ್ತು ತಾಲೂಕು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

    ದೊಡ್ಡಮೇಟಿ ಅವರು ನಾಲ್ವರು ಪುತ್ರರು, ಓರ್ವ ಪುತ್ರಿ ಸೇರದಂತೆ ಅಪಾರ ಬಂಧು-ಬಳಗವನ್ನ ಅಗಲಿದ್ದಾರೆ. ಇಂದು ಸಂಜೆ ಗದಗ ಜಿಲ್ಲೆಯ ಜಕ್ಕಲ್ಲಿ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ದೊಡ್ಡಮೇಟಿ ಅವರ ಅಗಲಿಕೆಯಿಂದ ರಾಜಕೀಯ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಜ್ಞಾನದೇವ ದೊಡ್ಡಮೇಟಿ ಅವರಿಗೆ 86 ವರ್ಷ ವಯಸ್ಸಾಗಿತ್ತು.