Tag: ರೋಹಿತ್‌ ಚಕ್ರತೀರ್ಥ

  • ಚಿಂತಕ, ಬರಹಗಾರ ರೋಹಿತ್ ಚಕ್ರತೀರ್ಥ ಕಂಡಂತೆ ಕಾಂತಾರ

    ಚಿಂತಕ, ಬರಹಗಾರ ರೋಹಿತ್ ಚಕ್ರತೀರ್ಥ ಕಂಡಂತೆ ಕಾಂತಾರ

    ಕಾಂತಾರ ಸಿನಿಮಾದ ಬಗ್ಗೆ ಬರಹಗಾರ, ಚಿಂತಕ ರೋಹಿತ್ ಚಕ್ರತೀರ್ಥ ವಿಭಿನ್ನ ರೀತಿಯ ಒಳನೋಟವನ್ನು ಕಟ್ಟಿಕೊಟ್ಟಿದ್ದಾರೆ. ಅದನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ. ಆ ಬರಹವನ್ನು ಇಲ್ಲಿ ಯಥಾವತ್ತಾಗಿ ಹಾಕಲಾಗಿದೆ.

    ಒಂದೇ ಸಿನೆಮಾವನ್ನು ಒಂದು ದಿನದಲ್ಲಿ ಎರಡು ಸಲ ನಾನು ನೋಡಿದ್ದು ಇದೇ ಮೊದಲು. ಅರ್ಥವಾಗಲಿಲ್ಲ ಎಂದಲ್ಲ; ಆ ಸಿನೆಮಾವನ್ನು ಮತ್ತೊಮ್ಮೆ ಫೀಲ್ ಮಾಡಬೇಕು ಎಂದೇ ಎರಡನೇ ಸಲ ಹೋಗಿದ್ದು’ ಎಂದಿದ್ದಾನೆ ಒಬ್ಬ ಸಿನಿಮಾ ವಿಮರ್ಶಕ. ಆತ ಉತ್ತರ ಭಾರತದವನು. ಭೂತಕೋಲದ ಪರಿಕಲ್ಪನೆಯೇ ಅವನಿಗೆ ಹೊಚ್ಚಹೊಸದು. ಭೂತವಾಡುವ ಅಷ್ಟೂ ಮಾತುಗಳು ಹಿಂದಿ ಸಿನೆಮಾದಲ್ಲಿ ತುಳುವಿನಲ್ಲೇ ಬಂದಿವೆ. ‘ಅದನ್ನು ಖಂಡಿತ ಡಬ್ ಮಾಡಬಾರದು, ಅದು ತುಳುವಿನಲ್ಲೇ ಇರಬೇಕು’ ಎಂದು ಬೇರೆ ಆತ ಸಮರ್ಥನೆ ಕೊಟ್ಟ.

    ಯೂಟ್ಯೂಬ್ ನೋಡಿ. ಕಾಂತಾರದ ಬಗ್ಗೆ ಹಿಂದಿ ವಿಮರ್ಶೆಗಳು ರಾಶಿರಾಶಿ ಬಂದು ಬಿದ್ದಿವೆ. ಹಾಗೆಯೇ ತೆಲುಗು, ತಮಿಳು ವಿಮರ್ಶೆಗಳೂ ದಂಡಿಯಾಗಿವೆ. ಭಾರತದ ಉದ್ದಗಲದ ಎಲ್ಲ ಪ್ರದೇಶಗಳ ಮಂದಿಯೂ ಈ ಸಿನೆಮಾವನ್ನು ಅಕ್ಷರಶಃ ಸಂಭ್ರಮಿಸುತ್ತಿದ್ದಾರೆ. ಭೂತ ಎಂದರೇನು ಕೋಲ ಎಂದರೇನು ಕಂಬಳ ಎಂದರೇನು ಎಂದು ಗೊತ್ತಿಲ್ಲದ ಯಾವುದೋ ಶಿಮ್ಲ, ಕಾನ್ಪುರಗಳ ಮಂದಿಯೂ ಇದನ್ನು ಎಂಜಾಯ್ ಮಾಡುತ್ತಿದ್ದಾರೆ, ಮತ್ತೆ ಮತ್ತೆ ಥಿಯೇಟರಿಗೆ ನುಗ್ಗುತ್ತಿದ್ದಾರೆ ಎಂದರೆ ಅವರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿರುವ ಸಂಗತಿ ಯಾವುದು? ಬಿಜಿಎಮ್ ಅದ್ಭುತವಾಗಿದೆ, ದೃಶ್ಯಗಳು ಕಾವ್ಯಾತ್ಮಕವಾಗಿವೆ, ಡೈಲಾಗುಗಳು ಲವಲವಿಕೆಯಿಂದ ಕೂಡಿವೆ, ನಟನೆ ಚೆನ್ನಾಗಿದೆ ಎಲ್ಲವೂ ನಿಜ. ಆದರೆ ಈ ಒಂದೊಂದು ಅಂಶಗಳನ್ನು ಮೆಚ್ಚಿಕೊಂಡು ಎರಡನೇ ಶೋ ಟಿಕೇಟ್ ತೆಗೆದುಕೊಳ್ಳುವವರು ಹೆಚ್ಚಿಲ್ಲ. ಎರಡು, ಮೂರು, ನಾಲ್ಕು ಸಲ ನೋಡಬೇಕು ಎಂದು ಬಯಸುತ್ತಿರುವವರೆಲ್ಲರನ್ನೂ ಸೆಳೆಯುತ್ತಿರುವುದು ಕಾಂತಾರದ (Kantara) ಕಥೆಯೇ. ಮೇಲ್ನೋಟಕ್ಕೇನೋ ಇದು ಬಂಡಾಯದ, ಸಂಘರ್ಷದ ಕತೆ. ಆದರೆ ಆಳದಲ್ಲಿ ಅದು ಭಾರತದ ಮಣ್ಣಿನ ವಾಸನೆಯನ್ನು ಮೂಗಿಗೆ ಹಿಡಿಯುವ ಕತೆ. ಸನಾತನ ಧರ್ಮದ ಬೇರುಗಳನ್ನು ಕಾಲಿಗೆ ತೊಡರಿಸುವ ಕತೆ. ಇದನ್ನೂ ಓದಿ:ರೂಪೇಶ್-ಸಾನ್ಯ ಲವ್‌ಸ್ಟೋರಿಯಲ್ಲಿ ಹೊಸ ಟ್ವಿಸ್ಟ್: ಗುರೂಜಿ ಸೊಸೆಯಂತೆ ಸಾನ್ಯ

    ಭಾರತದ ನೂರಾನಲವತ್ತು ಕೋಟಿ ಜನಸಂಖ್ಯೆಯಲ್ಲಿ 80 ಕೋಟಿಯಷ್ಟೇ ಹಿಂದುಗಳಿದ್ದಾರೆಂದಾದರೂ ಭಾವಿಸೋಣ. ಈ ಹಿಂದುಗಳಲ್ಲಿ ತಮ್ಮ ಮನೆಯ ಆಚಾರ ವಿಚಾರಗಳನ್ನೇ ಪ್ರಶ್ನಿಸುವ ಎಬಡ ಎಡಬಿಡಂಗಿಗಳ ಸಂಖ್ಯೆ ಒಂದು ಲಕ್ಷವೂ ದಾಟಲಿಕ್ಕಿಲ್ಲ. ಮಿಕ್ಕವರೆಲ್ಲ ಅದೆಷ್ಟೇ ಆಧುನಿಕರಾದರೂ, ನಗರವಾಸಿಗಳಾದರೂ, ಕುಟುಂಬಗಳಿಂದ ದೂರವಿದ್ದರೂ ಅವರೊಳಗೊಂದು ಸನಾತನರಕ್ತ ಹರಿಯುತ್ತಿದೆ. ಜನ್ಮಜನ್ಮಾಂತರಗಳಲ್ಲಿ ಸೇರಿಕೊಂಡ ಸಂಸ್ಕಾರದ ಅಷ್ಟಿಷ್ಟಾದರೂ ಅಂಶ ಅವರೆಲ್ಲರೊಳಗೂ ಇದೆ. ಕಾಶ್ಮೀರದ ಹಿಂದು ಬೇರೆಯಲ್ಲ, ಕನ್ಯಾಕುಮಾರಿಯ ಹಿಂದು ಬೇರೆಯಲ್ಲ. ಭಾರತದ ನಾಲ್ದೆಸೆಗಳಲ್ಲಿರುವ ಎಲ್ಲ ಹಿಂದು ಸಮುದಾಯಗಳಲ್ಲೂ ಸಮಾನಾಂಶಗಳಿವೆ. ಮೇಲ್ನೋಟಕ್ಕೆ ಅವು ಭಿನ್ನವಾಗಿ, ಕೆಲವೊಮ್ಮೆ ತದ್ವಿರುದ್ಧವಾಗಿ ಕಾಣಬಹುದು. ಆದರೆ ಆ ಎಲ್ಲ ಆಚರಣೆ, ಸಂಸ್ಕಾರ, ಪೂಜೆಪುನಸ್ಕಾರಗಳ ಮೂಲ ಒಂದೇ. ಭಾರತವನ್ನು ಪಠ್ಯಪುಸ್ತಕಗಳಲ್ಲಿ “ವಿವಿಧತೆಯಲ್ಲಿ ಏಕತೆ” ಎನ್ನುವುದು ರೂಢಿ. ಅದು ಶುದ್ಧಾಂಗ ತಪ್ಪು. ಭಾರತದಲ್ಲಿರುವುದು “ಏಕತೆಯಲ್ಲಿ ವಿವಿಧತೆ”. ಆ ಏಕವೇ ಸನಾತನಧರ್ಮ. ಒಂದೇ ಕಾಂಡ ಇಲ್ಲಿ ಹಲವು ರೆಂಬೆಕೊಂಬೆಗಳನ್ನು ದೇಶಾದ್ಯಂತ ಪಸರಿಸಿದೆ. ದೈವದೇವರುಗಳಲ್ಲಿ ನಂಬಿಕೆ ಇಡುವುದು ಎಂಬ ಮೂಲಾಂಶವೇ ದೇಶದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯಲ್ಲಿ ಪ್ರಕಟವಾಗಬಹುದು. ಆದರೆ “ನಂಬಿಕೆ” ಎಂಬ ಮೂಲದ್ರವ್ಯ ಒಂದೇ. ಮತ್ತು ಈ ನಂಬಿಕೆ, ರಿಲಿಜನ್ನುಗಳು ಹೇರುವ “ಬಿಲೀಫ್”ಗಿಂತ ಸಂಪೂರ್ಣ ಭಿನ್ನವಾದದ್ದು. ಹಾಗಾಗಿಯೇ ಹಿಂದುಗಳು ದೇಶದ ವಿವಿಧ ಭಾಗಗಳಲ್ಲಿದ್ದರೂ ಕನೆಕ್ಟ್ ಆಗುತ್ತಾರೆ. ಕಾಮಾಕ್ಯಕ್ಕೆ ಹೋದರೂ ಶೃಂಗೇರಿಗೆ ಹೋದರೂ ಹಿಂದುವಿಗೆ ಕಾಣುವುದು ಶಕ್ತಿಯೇ – ಹೊರಗಿನ ರೂಪ ಭಿನ್ನವಾದ ಮಾತ್ರಕ್ಕೆ ಎರಡೂ ಬೇರೆ ಬೇರೆ ದೇವತೆಗಳೆಂಬ ನಿರ್ಣಯವನ್ನು ಹಿಂದು ಎಳೆಯಲಾರ.

    ಹಿಂದು ಮೌನವಾಗಿರುತ್ತಾನೆ ನಿಜ, ಆದರೆ ಮೌನವಾಗಿಯೇ ಇನ್ನೊಬ್ಬ ಹಿಂದುವಿನ ನೋವು, ಸಂಕಟ, ಖುಷಿ, ಸಂಭ್ರಮಗಳಿಗೆ ಸ್ಪಂದಿಸುತ್ತಾನೆ ಕೂಡ. ಹಾಗಾಗಿಯೇ ಕಾಶ್ಮೀರದ ಸೀಮಿತ ಪ್ರಾಂತ್ಯದ ಸಮಸ್ಯೆಯನ್ನು ತೋರಿಸಿದ “ಕಾಶ್ಮೀರ್ ಫೈಲ್ಸ್” ದೇಶಾದ್ಯಂತ ಜಯಭೇರಿ ಬಾರಿಸಿತು. ನೋಡಿದ ಪ್ರತಿಯೊಬ್ಬ ಹಿಂದುವಿಗೆ ಇದು ನನ್ನ ಕಥೆ, ನನ್ನದೇ ಕಥೆ… ಅನ್ನಿಸಿತು. ಕರಾವಳಿಯ ಸಣ್ಣ ಊರೊಂದರಲ್ಲಿ ನಡೆಯುವ ಕಥೆಯನ್ನಿಟ್ಟುಕೊಂಡರೂ ಕಾಂತಾರ ದೇಶದುದ್ದಕ್ಕೆ ಧೂಳೆಬ್ಬಿಸುತ್ತಿರುವುದೂ ಇದೇ ಕಾರಣಕ್ಕೆ. ಉತ್ತರದ, ಈಶಾನ್ಯದ, ವಾಯವ್ಯದ ಹಿಂದುಗಳಿಗೆ ಆ ಭೂತ – ನಮ್ಮದಲ್ಲ ಎಂದೇನೂ ಅನ್ನಿಸಿಲ್ಲ. ತಮ್ಮ ಊರುಗಳಲ್ಲಿ ನಡೆಯುವ ಯಾವುದೋ ಆಚರಣೆಗೆ, ಸಂಪ್ರದಾಯಗಳಿಗೆ ಭೂತಕೋಲವನ್ನು ಸಮೀಕರಿಸಿಕೊಂಡು ಆ ಎಲ್ಲ ಹಿಂದುಗಳೂ ಕಾಂತಾರದ ಕಥೆಯನ್ನು ಲೋಕಲೈಸ್ ಮಾಡಿಕೊಂಡಿದ್ದಾರೆ. ಹೇಗೆ ಕಾಶ್ಮೀರದ ಪಂಡಿತನ ಕಥೆ ನಮ್ಮೆಲ್ಲರ ಕಥೆಯೂ ಆಗುತ್ತದೋ ಹಾಗೆಯೇ ನಲ್ಕೆಯವನ ಕಥೆ ಕೂಡ ನಮ್ಮೆಲ್ಲರದೂ ಆಗುತ್ತದೆ.

    ಗಮನಿಸಿ: ಕಾಶ್ಮೀರ್ ಫೈಲ್ಸ್ ಆಗಲಿ ಕಾಂತಾರವಾಗಲಿ, ಒಂದು ಚಿತ್ರವನ್ನು ಅದು ಇದ್ದಂತೆಯೇ ಪ್ರೇಕ್ಷಕನ ಮುಂದಿಡುತ್ತವೆಯೇ ಹೊರತು ಉಪದೇಶಕ್ಕೆ ಹೊರಡುವುದಿಲ್ಲ. ಇರುವ ಸಂಗತಿಯನ್ನು ಸೀಳಿ ಸೀಳಿ ಸಂಶೋಧನೆಗಿಳಿಯುವುದಿಲ್ಲ. ಎಡಬಿಡಂಗಿ ವಾದಗಳನ್ನು ಸುಖಾಸುಮ್ಮನೆ ತುರುಕುವುದಿಲ್ಲ. ಈ ದೇಶದ ಮಕ್ಕಳು, ನೆಲಮೂಲ ಸಂಸ್ಕೃತಿಯ ಜನ ತಮ್ಮ ನೆಲವನ್ನು ಉಳಿಸಿಕೊಳ್ಳಬೇಕಾದರೆ ದೈವದ ಆಶೀರ್ವಾದವೊಂದು ಇರಬೇಕಾಗುತ್ತದೆ ಎಂಬ – ಹಿಂದುವನ್ನು ಬಹಳ ಸುಲಭವಾಗಿ ಕನ್ವಿನ್ಸ್ ಮಾಡುವ ಒಂದು ಎಳೆಯ ಮೇಲೆ ‘ಕಾಂತಾರ’ದ ಇಡೀ ಕತೆ ನಿಂತಿದೆ. ಕಾಶ್ಮೀರ್ ಫೈಲ್ಸ್ ಕೂಡ ನೆಲಕ್ಕೆ ಸಂಬಂಧಪಟ್ಟ ಕತೆಯೇ. ಆದರೆ ಅಲ್ಲಿಯ (ಕಾಶ್ಮೀರದ) ಹಿಂದು, ದೈವವನ್ನು ಮರೆತಿದ್ದಾನೆ. ಒಂದಾನೊಂದು ಕಾಲದಲ್ಲಿ ಪ್ರಸಿದ್ಧವಾಗಿದ್ದ ಮಾರ್ತಾಂಡನ ದೇವಸ್ಥಾನವಾಗಲೀ ಶಾರದಾಪೀಠವಾಗಲೀ ಕಾಶ್ಮೀರದಲ್ಲಿ ೧೯೯೦ರ ಸಮಯದಲ್ಲಿ ಶಕ್ತಿಪೀಠಗಳಾಗಿ ಉಳಿದಿರಲಿಲ್ಲ. ರಾಕ್ಷಸರು ನುಗ್ಗಿಬಂದಾಗ ದೈವದ ಮೊರೆಹೋಗಬೇಕೆಂದು ಕಾಶ್ಮೀರದ ಹಿಂದುವಿಗೆ ಅನ್ನಿಸಲೇ ಇಲ್ಲ. ರಾತ್ರೋರಾತ್ರಿ ಅವರೆಲ್ಲರೂ ತಮ್ಮ ಮನೆಮಠಗಳನ್ನೆಲ್ಲ ತೊರೆದು ದಿಕ್ಕಾಪಾಲಾಗಿ ಚದುರಬೇಕಾಯಿತು. ‘ಕಾಶ್ಮೀರ್ ಫೈಲ್ಸ್’ ಸಮಸ್ಯೆಯ ಬಗ್ಗೆ ಮಾತಾಡಿತು; ‘ಕಾಂತಾರ’ ಆ ಸಮಸ್ಯೆಗೆ ಉತ್ತರ ಪಡೆಯುವ ದಾರಿಯನ್ನು ತೋರಿಸುತ್ತಿದೆ. ಈ ಎರಡೂ ಚಿತ್ರಗಳು ಹಿಂದುವಿನ ಭಾವಕೋಶದ ತಂತಿಯನ್ನು ಮೀಟಲು ಸಾಧ್ಯವಾದದ್ದಕ್ಕೇ ಜಯಭೇರಿ ಹೊಡೆದಿವೆ.

    ವೈದಿಕ, ಅವೈದಿಕ, ಆರ್ಯ, ದ್ರಾವಿಡ, ಬ್ರಾಹ್ಮಣ, (Brahmin) ಶೂದ್ರ, ಮಾರ್ಗ, ದೇಸಿ ಎಂಬ ತಲೆಬುಡವಿಲ್ಲದ ಚರ್ಚೆಗಳನ್ನು ಎಡಬಿಡಂಗಿಗಳು ಬೆಳೆಸುತ್ತ ಹೋದಷ್ಟೂ ಹಿಂದೂಧರ್ಮದ ಅತ್ಯಂತ ಮೂಲಭೂತ ತತ್ತ್ವಗಳನ್ನು ಶೋಧಿಸುವ ‘ಕಾಂತಾರ’ದಂಥ ಸಿನೆಮಗಳು ಯಶಸ್ಸಿನ ಓಟದಲ್ಲಿ ಹೊಸ ಹೊಸ ದಾಖಲೆ ಬರೆಯುತ್ತವೆ. ಏಕೆಂದರೆ ‘ಕಾಂತಾರ’ವನ್ನು ಮರಳಿ ಮರಳಿ ನೋಡಲು ನುಗ್ಗುತ್ತಿರುವ ಪ್ರೇಕ್ಷಕನ ಉತ್ಸಾಹವೆಂಬುದು – ಹಿಂದುತ್ವವನ್ನು ಒಡೆಯಲು ಹವಣಿಸುತ್ತಿರುವ ಭಂಜಕಶಕ್ತಿಗಳಿಗೆ ಕೊಡುತ್ತಿರುವ ಪರೋಕ್ಷ ಬೆತ್ತದೇಟು ಕೂಡ.

    Live Tv
    [brid partner=56869869 player=32851 video=960834 autoplay=true]

  • 8ನೇ ತರಗತಿ ಪಠ್ಯದಲ್ಲಿ ಸಾವರ್ಕರ್‌ ಪಾಠ

    8ನೇ ತರಗತಿ ಪಠ್ಯದಲ್ಲಿ ಸಾವರ್ಕರ್‌ ಪಾಠ

    ಬೆಂಗಳೂರು: ಸಾವರ್ಕರ್ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಾಗಲೇ ರಾಜ್ಯ ಸರ್ಕಾರ ಪಠ್ಯಪುಸ್ತಕದಲ್ಲಿ ವೀರ ಸಾವರ್ಕರ್ ಕುರಿತಾದ ಪಠ್ಯವನ್ನು ಸೇರ್ಪಡೆ ಮಾಡಿದೆ.

    2022 ರಲ್ಲಿ ರೋಹಿತ್ ಚಕ್ರತೀರ್ಥ ಸಮಿತಿ ಮಾಡಿರುವ ಪರಿಷ್ಕರಣೆ ಪಠ್ಯದಲ್ಲಿ ಸಾವರ್ಕರ್ ಅವರ ಕುರಿತಾದ ಪಠ್ಯ ಸೇರ್ಪಡೆ ಮಾಡಲಾಗಿದೆ. 8ನೇ ತರಗತಿ ಕನ್ನಡ ವಿಷಯದಲ್ಲಿ ಕೆ.ಟಿ. ಗಟ್ಟಿ ರಚನೆಯ ʼಕಾಲವನ್ನು ಗೆದ್ದವರುʼ ಎಂಬ ಪಠ್ಯವನ್ನು ಸೇರಿಸಲಾಗಿದೆ. ಇದನ್ನೂ ಓದಿ: ಸ್ವಾತಂತ್ರ ಹೋರಾಟಗಾರರಲ್ಲ, ಸಾವರ್ಕರ್‌ ಒಬ್ಬ ಮೂಲಭೂತವಾದಿ: ಯತೀಂದ್ರ ಸಿದ್ದರಾಮಯ್ಯ

    ಈ ಪಠ್ಯದಲ್ಲಿ ಸಾವರ್ಕರ್ ಅವರು ಅಂಡಮಾನ್ ಜೈಲಿ‌ನಲ್ಲಿ ಇದ್ದ ವಿವರ, ಅವರಿಗೆ ನೀಡಿದ ಶಿಕ್ಷೆ, ಅವರ ಹೋರಾಟಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ. 2017-18 ರಲ್ಲಿ ಬರಗೂರು ರಾಮಚಂದ್ರಪ್ಪ ಸಮಿತಿ ಪಠ್ಯದಲ್ಲಿದ್ದ ವಿಜಯಮಾಲಾ ರಂಗನಾಥ್ ರಚಿತ ಬ್ಲಡ್ ಗ್ರೂಪ್ ಪಠ್ಯವನ್ನು ಕೈ ಬಿಟ್ಟು ಹೊಸದಾಗಿ ಕಾಲವನ್ನು ಗೆದ್ದವರು ಎಂಬ ಸಾವರ್ಕರ್ ಪಠ್ಯ ಸೇರ್ಪಡೆ ಮಾಡಲಾಗಿದೆ. ಇದನ್ನೂ ಓದಿ: ಸಾವರ್ಕರ್‌ರನ್ನು ಭಾರತದಲ್ಲಿ ಬಿಟ್ಟರೆ ನಾವು ದೇಶ ಬಿಡಬೇಕಾಗುತ್ತೆ ಅನ್ನೋದು ಬ್ರಿಟಿಷರಿಗೆ ಗೊತ್ತಿತ್ತು: ಬೊಮ್ಮಾಯಿ

    ಸ್ವಾತಂತ್ರ್ಯ ದಿನಾಚರಣೆಯಿಂದ ಪ್ರಾರಂಭ ಆಗಿರುವ ಸಾವರ್ಕರ್ ಕುರಿತ ವಾರ್‌ಗೆ ಈಗ ಪಠ್ಯ ಸೇರ್ಪಡೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪರ/ ವಿರೋಧ ಚರ್ಚೆಗೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ವಿವಾದಿತ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ ಸರ್ಕಾರ

    ವಿವಾದಿತ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ ಸರ್ಕಾರ

    ಬೆಂಗಳೂರು: ಭಾರೀ ವಿವಾದಕ್ಕೆ ಕಾರಣವಾಗಿದ್ದ, 2022ರ ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯಪುಸ್ತಕ ಪರಿಷ್ಕರಣೆಯ ವಿವಾದಿತ ಪಠ್ಯಗಳನ್ನು ಸರ್ಕಾರ ಹೊಸದಾಗಿ ಪರಿಷ್ಕರಣೆ ಮಾಡಿದೆ. ಸರ್ಕಾರ ಆದೇಶದಂತೆ ಎಂಟು ಪಠ್ಯಗಳನ್ನು ಹೊಸದಾಗಿ ಪರಿಷ್ಕರಣೆ ಮಾಡಿ ಇಲಾಖೆ ವೆಬ್‍ಸೈಟ್‍ಗೆ ಅಪ್‍ಲೋಡ್ ಮಾಡಿದೆ.

    text book bjp

    ಕನ್ನಡ ಮತ್ತು ಇಂಗ್ಲೀಷ್ ಆವೃತ್ತಿಯ 59 ಪುಟಗಳ ಪರಿಷ್ಕೃತ ಪಠ್ಯ ಬಿಡುಗಡೆ ಮಾಡಲಾಗಿದೆ. 6,7,9ನೇ ತರಗತಿಯ ಸಮಾಜ ವಿಜ್ಞಾನದ ಪಠ್ಯಗಳು, 7ನೇ ತರಗತಿಯ ಕನ್ನಡ ಭಾಷೆಯ ಪದ್ಯ ಮತ್ತು 4ನೇ ತರಗತಿಯ ಪರಿಸರ ಅಧ್ಯಯನ ಒಂದು ಪಠ್ಯ ಪರಿಷ್ಕರಣೆ ಮಾಡಲಾಗಿದೆ.

    ನಮ್ಮ ಸಂವಿಧಾನ, ಭಕ್ತಿ ಪಂಥ ಹಾಗೂ ಸೂಫಿ ಪರಂಪರೆ, ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ, ಮೈಸೂರು ಮತ್ತು ಇತರ ಸಂಸ್ಥಾನಗಳು, ಭಾರತದ ಮತ ಪ್ರವರ್ತಕರು, ಕರ್ನಾಟಕ ರಾಜ್ಯ ಏಕೀಕರಣ ಮತ್ತು ಗಡಿ ವಿವಾದಗಳು, ಪ್ರತಿಯೊಬ್ಬರ ವಿಶಿಷ್ಟ, ಗೊಂಬೆ ಕಲಿಸುವ ನೀತಿ ಪಠ್ಯಗಳನ್ನು ಪರಿಷ್ಕರಣೆ ಮಾಡಲಾಗಿದೆ. ಶೀಘ್ರವೇ ಶಾಲೆಗಳಿಗೆ ಹೊಸ ಪರಿಷ್ಕರಣೆ ಪಠ್ಯ ರವಾನೆ ಮಾಡಲಾಗುತ್ತದೆ. ಹೊಸ ಪರಿಷ್ಕೃತ ಪಠ್ಯವನ್ನೇ ಬೋಧನೆ ಮಾಡುವಂತೆ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಲಾಗಿದೆ.

    ಏನೇನು ಪರಿಷ್ಕರಣೆ ಆಗಿದೆ?
    ನಮ್ಮ ಸಂವಿಧಾನ (9ನೇ ತರಗತಿ ಸಮಾಜ ವಿಜ್ಞಾನ)
    * 2022ರ ಪರಿಷ್ಕರಣೆಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಎಂಬ ವಾಕ್ಯ ಬಿಟ್ಟು ಹೋಗಿತ್ತು. ಹೊಸ ಪರಿಷ್ಕರಣೆಯಲ್ಲಿ ಸಂವಿಧಾನ ಶಿಲ್ಪಿ ಅನ್ನೋ ವಾಕ್ಯ ಮರು ಸೇರ್ಪಡೆ ಮಾಡಲಾಗಿದೆ.

    ಭಕ್ತಿ ಪಂಥ ಹಾಗೂ ಸೂಫಿ ಪರಂಪರೆ (7ನೇ ತರಗತಿ ಸಮಾಜ ವಿಜ್ಞಾನ)
    * 2022ರ ಪರಿಷ್ಕರಣೆಯಲ್ಲಿ ಈ ಪಠ್ಯ ಇರಲಿಲ್ಲ. ಹೊಸದಾಗಿ ಪರಿಷ್ಕರಣೆ ಮಾಡಿರುವ ಪಠ್ಯದಲ್ಲಿ ಹೊಸ ಪಠ್ಯ ಸೇರ್ಪಡೆ ಮಾಡಲಾಗಿದೆ.
    * ಅಕ್ಕಮಹಾದೇವಿ, ಕನಕದಾಸ, ಪುರಂದರದಾಸರು ಶರೀಫರು ಸೇರಿದಂತೆ ಅನೇಕ ದಾರ್ಶನಿಕರು ವಿಚಾರಧಾರೆಗಳು ಇರುವ ಪಠ್ಯ ಸೇರ್ಪಡೆ.

    ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ (6ನೇ ತರಗತಿ ಸಮಾಜ ವಿಜ್ಞಾನ)
    * 2022ರ ಪರಿಷ್ಕರಣೆಯಲ್ಲಿ ಸಿದ್ದಗಂಗಾ ಮಠವೂ ಸಾವಿರಾರು ಮಕ್ಕಳಿಗೆ ಅಕ್ಷರ, ಅನ್ನ ದಾಸೋಹ ಮಾಡುತ್ತಿದೆ ಎಂಬ ವಾಕ್ಯ ಬಿಟ್ಟು ಹೋಗಿತ್ತು. ಹೊಸ ಪರಿಷ್ಕರಣೆಯಲ್ಲಿ ಆ ವಾಕ್ಯವನ್ನು ಸೇರ್ಪಡೆ ಮಾಡಲಾಗಿದೆ.

    ಮೈಸೂರು ಮತ್ತು ಇತರ ಸಂಸ್ಥಾನಗಳು (7ನೇ ತರಗತಿ ಸಮಾಜ ವಿಜ್ಞಾನ)
    * 2022ರ ಪರಿಷ್ಕರಣೆಯಲ್ಲಿ ಸುರಪುರದ ನಾಯಕರ ಇತಿಹಾಸ ಕೈ ಬಿಡಲಾಗಿತ್ತು. ಹೊಸ ಪರಿಷ್ಕರಣೆಯಲ್ಲಿ ಸುರಪುರ ನಾಯಕರ ಇತಿಹಾಸ ಪಠ್ಯ ಸೇರ್ಪಡೆ ಮಾಡಲಾಗಿದೆ.

    ಭಾರತದ ಮತ ಪ್ರವರ್ತಕರು (9ನೇ ತರಗತಿ ಸಮಾಜ ವಿಜ್ಞಾನ)
    * 2022ರ ಪರಷ್ಕರಣೆಯಲ್ಲಿ ಬಸವಣ್ಣರ ಕುರಿತಾದ ಪಠ್ಯ ಭಾರೀ ವಿರೋಧಕ್ಕೆ ಕಾರಣವಾಗಿತ್ತು.
    * ಹೊಸ ಪರಿಷ್ಕರಣೆಯಲ್ಲಿ ಬಸವಣ್ಣನವರ ವಿವಾದಿತ ಪಠ್ಯ ತೆಗೆದು ಹೊಸ ಪಠ್ಯವನ್ನ ಸೇರ್ಪಡೆ ಮಾಡಲಾಗಿದೆ.

    ಕರ್ನಾಟಕ ರಾಜ್ಯ ಏಕೀಕರಣ ಮತ್ತು ಗಡಿವಿವಾದಗಳು (7ನೇ ತರಗತಿ ಸಮಾಜ ವಿಜ್ಞಾನ)
    * 2022 ರ ಪರಿಷ್ಕರಣೆಯಲ್ಲಿ ಆಲೂರು ವೆಂಕಟರಾಯರು, ರಾಷ್ಟ್ರಕವಿ ಗೋವಿಂದ ಪೈ ಭಾವ ಚಿತ್ರ ಮಾತ್ರ ನೀಡಲಾಗಿತ್ತು. ಕುವೆಂಪು ಭಾವ ಚಿತ್ರ ಕೈ ಬಿಡಲಾಗಿದೆ ಅಂತ ಆರೋಪ ಇತ್ತು.
    * ಹೊಸ ಪರಿಷ್ಕರಣೆಯಲ್ಲಿ ಕುವೆಂಪು, ಹುಯಿಲಗೋಳ ನಾರಾಯಣರಾವ್‍ರ ಭಾವಚಿತ್ರ ಸೇರ್ಪಡೆ ಮಾಡಲಾಗಿದೆ.

    ಪ್ರತಿಯೊಬ್ಬರು ವಿಶಿಷ್ಟ (4ನೇ ತರಗತಿ ಪರಿಸರ ಅಧ್ಯಯನ)
    * ಕಾಂಗ್ರೆಸ್ ಸರ್ಕಾರದ ಪರಿಷ್ಕರಣೆಯಲ್ಲಿ ಅನೇಕರ ಪ್ರೋತ್ಸಾಹದಿಂದ ಕುವೆಂಪು ಪ್ರಖ್ಯಾತ ಕವಿ ಎನಿಸಿಕೊಂಡಿದ್ದರು ಎಂಬ ವಿವಾದಿತ ಅಂಶ ಸೇರ್ಪಡೆ ಮಾಡಲಾಗಿತ್ತು.
    * ಹೊಸ ಪರಿಷ್ಕರಣೆಯಲ್ಲಿ ಈ ವಿವಾದಿತ ಅಂಶವನ್ನು ಕೈ ಬಿಡಲಾಗಿದೆ.

    ಗೊಂಬೆ ಕಲಿಸುವ ನೀತಿ (7ನೇ ತರಗತಿ ಕನ್ನಡ ಭಾಷೆ)
    * 2022ರ ಪರಿಷ್ಕರಣೆಯಲ್ಲಿ ಆಡಿಸಿ ನೋಡಿ ಬೀಳಿಸಿ ನೋಡು ಪದ್ಯದ ಸಾಹಿತ್ಯ ಬರೆದವರು ಆರ್.ಎನ್. ಜಯಗೋಪಾಲ್ ಅಂತ ತಪ್ಪಾಗಿ ಮುದ್ರಣ ಮಾಡಲಾಗಿತ್ತು.
    * ಹೊಸ ಪರಿಷ್ಕರಣೆಯಲ್ಲಿ ಅದನ್ನು ಸರಿ ಮಾಡಿ ಸಾಹಿತಿ ಚಿ.ಉದಯ್ ಶಂಕರ್ ಅವರ ಪರಿಚಯ ಸೇರ್ಪಡೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬರಗೂರು ಸಮಿತಿಯ ಪರಿಷ್ಕೃತ ಪಠ್ಯಪುಸ್ತಕದ ಗುಣಮಟ್ಟ ಸರಿಯಿಲ್ಲ: NCERT

    ಬರಗೂರು ಸಮಿತಿಯ ಪರಿಷ್ಕೃತ ಪಠ್ಯಪುಸ್ತಕದ ಗುಣಮಟ್ಟ ಸರಿಯಿಲ್ಲ: NCERT

    ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ಪರ-ವಿರೋಧಗಳು ನಡೆಯುತ್ತಿರುವ ಹೊತ್ತಿನಲ್ಲೇ ಈಗ ಮತ್ತೊಂದು ಮಹತ್ವದ ಅಂಶ ಬೆಳಕಿಗೆ ಬಂದಿದೆ. ಸಿದ್ದರಾಮಯ್ಯ ಕಾಲದಲ್ಲಿ ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿದ್ದ ಪರಿಷ್ಕೃತ ಪಠ್ಯ ಪುಸ್ತಕ ಗುಣಮಟ್ಟದ ಸರಿಯಿಲ್ಲ ಎಂದು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್(ಎನ್‍ಸಿಇಆರ್‌ಟಿ) ಸಂಸ್ಥೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

    2005ರ ರಾಷ್ಟ್ರೀಯ ಶಿಕ್ಷಣ ನೀತಿ ಅಂಶಗಳು ಬರಗೂರು ಸಮಿತಿ ರಚನೆ ಮಾಡಿದ್ದ ಪರಿಷ್ಕರಣೆ ಪಠ್ಯದಲ್ಲಿ ಹೆಚ್ಚಾಗಿ ಇರಲಿಲ್ಲ. ಮೌಲ್ಯಗಳನ್ನು ಬೆಳೆಸಲು ಪೂರಕವಾದ ಪಠ್ಯಗಳು ಬರಗೂರು ರಾಮಚಂದ್ರಪ್ಪರ ಪರಿಷ್ಕರಣೆ ಪಠ್ಯ ಪುಸ್ತಕದಲ್ಲಿ ಇಲ್ಲ ಎಂಬ ಮಹತ್ವದ ಅಂಶವನ್ನು ತಿಳಿಸಿದೆ. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರಾದವರು ಸಿಎಂ ಆಗುವುದು ಸಂಪ್ರದಾಯ: ಡಿ.ಕೆ ಶಿವಕುಮಾರ್

    2017-18ರಲ್ಲಿ ಕರ್ನಾಟಕದ ಶಾಲೆಗಳಲ್ಲಿ ಜಾರಿಗೆ ತರಲಾದ ಬರಗೂರು ಸಮಿತಿ ನೂತನ ಪರಿಷ್ಕತ ಪಠ್ಯಪುಸ್ತಕಗಳ ಬಗ್ಗೆ ಎನ್‍ಸಿಇಆರ್‌ಟಿ ಸಂಸ್ಥೆ ಅಧ್ಯಯನ ಕೈಗೊಂಡು ವರದಿ ಸಲ್ಲಿಸಿತ್ತು. 78 ಪುಟಗಳ ವರದಿಯಲ್ಲಿ ಭಾಷೆ ಮತ್ತು ಸಮಾಜ ವಿಜ್ಞಾನ, ಗಣಿತ ಪಠ್ಯ ಪುಸ್ತಕಗಳಲ್ಲಿ ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕವಾಗುವ ಪಠ್ಯಗಳು ಇರಲಿಲ್ಲ ಎಂದು ಸ್ಪಷ್ಟಪಡಿಸಿದೆ.

    ಇಷ್ಟೆಲ್ಲ ಲೋಪಗಳಿದ್ದರೂ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ ಪಠ್ಯ ಪರಿಷ್ಕರಣೆಯನ್ನು ಬರಗೂರು ಟೀಂ ವಿರೋಧ ಮಾಡಿದ್ದು ಯಾಕೆ ಎನ್ನುವುದು ಈಗ ಚರ್ಚೆಗೆ ಕಾರಣವಾಗಿದೆ.

    ಎನ್‌ಸಿಆರ್‌ಟಿಇ ವರದಿಯಲ್ಲಿ ಏನಿದೆ?
    ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಅಡಕಗೊಳಿಸಲಾದ ವಿಷಯಗಳು ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ ಬೆಳೆಸಲು ಪೂರಕವಾದ ಚಟುವಟಿಕೆಗಳನ್ನು ಹೊಂದಿರಬೇಕು.ಆದರೆ ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಇಂತಹ ಚಟುವಟಿಕೆಗಳು ಸಾಕಷ್ಟು ಪ್ರಮಾಣದಲ್ಲಿ ಇಲ್ಲ.

    ಪಠ್ಯಪುಸ್ತಕಗಳಲ್ಲಿ ಲಿಂಗತ್ವ, ಒಳಗೊಳ್ಳುವಿಕೆ ಮತ್ತು ಪರಿಸರಕ್ಕೆ ಸಂಬಂಧಿಸಿದಂತೆ ಯಾವುದೇ ಪೂರ್ವಗ್ರಹಗಳು ಇಲ್ಲ. ಆದಾಗ್ಯೂ ಈ ಅಂಶಗಳಿಗೆ ಸಂಬಂಧಿಸಿದ ಕಾಳಜಿಗಳಿಗೆ ಅಗತ್ಯವಾದ ಸೂಕ್ಷ್ಮತೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ಪೂರಕವಾದ ವಿಷಯ, ಚಟುವಟಿಕೆ,ನಿಯೋಜಿತ ಕಾರ್ಯಗಳು ಸಾಕಷ್ಟು ಪ್ರಮಾಣದಲ್ಲಿ ಇಲ್ಲ.

    ರಾಷ್ಟ್ರೀಯ ಶಿಕ್ಷಣ ನೀತಿ 2005 ರಂತೆ ಪಠ್ಯಪುಸ್ತಕಗಳು ಜ್ಞಾನ ಕಟ್ಟುವ ವಿಧಾನವನ್ನು (constructivist approach) ಒಳಗೊಂಡಿರಬೇಕು.ಆದರೆ ಸಿದ್ದಪಡಿಸಲಾದ ಪಠ್ಯಪುಸ್ತಕಗಳಲ್ಲಿ ಈ ಅಂಶಕ್ಕೆ ಹೆಚ್ಚಿನ ಒತ್ತು ನೀಡಿಲ್ಲ.

    ಭಾಷೆ ಮತ್ತು ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಮೌಲ್ಯಗಳು ಅಂತರ್ಗತವಾಗಿದ್ದರೂ ಮೌಲ್ಯಗಳನ್ನು ಬೆಳೆಸಲು ಪೂರಕವಾದ, ಚಟುವಟಿಕೆಗಳು, ಉದಾಹರಣೆಗಳು, ಕಾರ್ಯಗಳು ಸಾಕಷ್ಟು ಪ್ರಮಾಣದಲ್ಲಿ ಇಲ್ಲ.

    ವಿದ್ಯಾರ್ಥಿಗಳ ದೈನಂದಿನ ಅನುಭವಗಳಿಗೆ ಪಠ್ಯಪುಸ್ತಕಗಳನ್ನು ಜೋಡಿಸುವ ಕಾರ್ಯ ಆಗಿದ್ದರೂ ಇದು ಹೆಚ್ಚಿನ ಪ್ರಮಾಣದಲ್ಲಿ ಆಗಿಲ್ಲ. ಜೊತೆಗೆ ಪಠ್ಯಪುಸ್ತಕಗಳಲ್ಲಿ ನೀಡಲಾದ ಉದಾಹರಣೆಗಳು ವಿದ್ಯಾರ್ಥಿಗಳ ಸನ್ನಿವೇಶಗಳಿಗೆ ಹೆಚ್ಚು ಪೂರಕವಾಗಿಲ್ಲ ಹಾಗೂ ಅರ್ಥಪೂರ್ಣವಾಗಿಲ್ಲ.

    ಪಠ್ಯ ಪುಸ್ತಕಗಳಲ್ಲಿ ಹೆಚ್ಚಿನ ಅಭ್ಯಾಸ ಕಾರ್ಯ ಮತ್ತು ಚಟುವಟಿಕೆಗಳನ್ನು ನೀಡಲಾಗಿದೆ. ಆದರೆ ಗಣಿತ ವಿಷಯದ ಪಠ್ಯಪುಸ್ತಕದಲ್ಲಿ ಪುನುರಾವರ್ತಿತ ಚಟುವಟಿಕೆಗಳನ್ನು ಇದ್ದು, ವಿದ್ಯಾರ್ಥಿಗಳಿಗೆ ಹೊರೆ ಎನಿಸುವಂತೆ ಇವೆ. ಇದರಿಂದ ವಿದ್ಯಾರ್ಥಿಗಳು ಕಂಠ ಪಾಠ ಮತ್ತು ನೆನಪಿನ ಶಕ್ತಿಗೆ ಹೆಚ್ಚು ಒತ್ತು ನೀಡುವಂತಿದ್ದು, ವಿಷಯದ ಪರಿಕಲ್ಪನಾತ್ಮಕ ಜ್ಞಾನದ ಬೆಳವಣಿಗೆಗೆ ಸಹಾಯ ಆಗುವಂತಿಲ್ಲ.

    ಗಣಿತ ವಿಷಯದಲ್ಲಿ ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ವಿಷಯಗಳನ್ನು ಅಳವಡಿಸಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಮೋದಿ ಈ ದೇಶದ ಪ್ರಧಾನಿ, ಮೈಸೂರಿಗೆ ಬರೋದ್ರಲ್ಲಿ ತಪ್ಪೇನಿಲ್ಲ: ಸಿದ್ದರಾಮಯ್ಯ

    ಮೋದಿ ಈ ದೇಶದ ಪ್ರಧಾನಿ, ಮೈಸೂರಿಗೆ ಬರೋದ್ರಲ್ಲಿ ತಪ್ಪೇನಿಲ್ಲ: ಸಿದ್ದರಾಮಯ್ಯ

    ವಿಜಯಪುರ: ಮೋದಿ ಈ ದೇಶದ ಪ್ರಧಾನಿ ಅವರು ಮೈಸೂರಿಗೆ ಬರೋದ್ರಲ್ಲಿ ತಪ್ಪೇನಿಲ್ಲ. ಆದರೆ ಪ್ರಧಾನಿ ಬರುತ್ತಿರುವುದು ಅಂತಾರಾಷ್ಟ್ರೀಯ ಯೋಗದಿನಕ್ಕೆ ಮಾತ್ರವಲ್ಲ, ರಾಜಕೀಯ ಮಾಡುವುದಕ್ಕೂ ಬರುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

    ವಿಜಯಪುರದ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಅಂತಾರಾಷ್ಟ್ರೀಯ ಯೋಗದಿನಾಚರಣೆ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡುವುದರ ಕುರಿತು ಅವರು ಮಾತನಾಡಿದ್ದಾರೆ. ಮೋದಿ ದೇಶದ ಪ್ರಧಾನಿ, ಮೈಸೂರಿಗೆ ಬರೋದರಲ್ಲಿ ತಪ್ಪಿಲ್ಲ. ಬರಬೇಡ ಅಂತ ಹೇಳೋಕೆ ಆಗುತ್ತಾ. ಲೆಟ್ ಹಿಮ್ ಕಂ, ಅಟೆಂಡ್ ದಿ ಫಂಕ್ಷನ್. ದೇಶದ ಪ್ರಧಾನಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸುತ್ತಾರೆ. ರಾಜಕೀಯ ಕೂಡಾ ಮಾಡಲಿಕ್ಕೆ ಬರ್ತಿದ್ದಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬಾಲ್ಯ ಸ್ನೇಹಿತ ಅಬ್ಬಾಸ್ ನೆನಪಿಸಿಕೊಂಡ ಮೋದಿ – ನೆಟ್ಟಿಗರಿಗೆ ಕುತೂಹಲ

    text book bjp

    ಬಿ.ಸಿ.ನಾಗೇಶ್ ರಾಜೀನಾಮೆ ಕೊಡಲಿ: ಪಠ್ಯಪುಸ್ತಕ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ಬಿ.ಸಿ.ನಾಗೇಶ್ ವಿರುದ್ಧ ಹರಿಹಾಯ್ದಿದ್ದಾರೆ. ಪುಸ್ತಕ ಪರಿಷ್ಕರಣೆ ಹಿಂದೆ ಇರೋದು ಬಿ.ಸಿ.ನಾಗೇಶ್, ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಏಕೆಂದರೆ ಮಹಾನ್ ವ್ಯಕ್ತಿಗಳಿಗೆ ಅಪಮಾನ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಹಕ್ಕಿ ಡಿಕ್ಕಿಯಾಗಿ 185 ಮಂದಿ ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ!

    ಚಕ್ರತೀರ್ಥನನ್ನು ಅರೆಸ್ಟ್ ಮಾಡಿ: ರೋಹಿತ್ ಚಕ್ರತೀರ್ಥ ಅರೆಸ್ಟ್ ಆಗಬೇಕು. ಈ ಪಠ್ಯ ವಾಪಾಸ್ ತೆಗೆದುಕೊಳ್ಳಬೇಕು. ಚಕ್ರತೀರ್ಥ ಕೇಸರೀಕರಣಕ್ಕಾಗಿ ಹೀಗೆ ಮಾಡಿದ್ದಾರೆ. ತಿರುಚಿದ ಪಠ್ಯವನ್ನ ಮಕ್ಕಳಿಗೆ ಬೋಧಿಸಬಾರದು. ಮಕ್ಕಳಿಗೆ ವೈಚಾರಿಕ, ವೈಜ್ಞಾನಿಕ ಜ್ಞಾನ ಕೊಡಬೇಕು. ಕುವೆಂಪು, ಅಂಬೇಡ್ಕರ್, ಬಸವಣ್ಣ, ನಾರಾಯಣಗುರು, ಬಾಲಗಂಗಾಧರ ಸ್ವಾಮೀಜಿ, ಸಿದ್ದಗಂಗಾಶ್ರೀಗಳಿಗೆ ಪಠ್ಯದಲ್ಲಿ ಅಪಮಾನವಾಗಿದೆ ಅದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

    Live Tv

  • ಗೌರವಾನ್ವಿತ ಮುಠ್ಠಾಳರನ್ನು ಪಠ್ಯ ಸಮಿತಿಗೆ ನೇಮಕ ಮಾಡಿದ್ದೇ ತಪ್ಪು: ಕುಂ.ವೀರಭದ್ರಪ್ಪ ಆಕ್ರೋಶ

    ಗೌರವಾನ್ವಿತ ಮುಠ್ಠಾಳರನ್ನು ಪಠ್ಯ ಸಮಿತಿಗೆ ನೇಮಕ ಮಾಡಿದ್ದೇ ತಪ್ಪು: ಕುಂ.ವೀರಭದ್ರಪ್ಪ ಆಕ್ರೋಶ

    ರಾಯಚೂರು: ಪರಿಷ್ಕೃತ ಪಠ್ಯದ ಬಗ್ಗೆ ಲೇಖಕ, ಚಿಂತಕ ಕುಂ.ವೀರಭದ್ರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥರನ್ನ ಕೂಡಲೇ ಬಂಧಿಸಬೇಕು, ಶಿಕ್ಷಣ ಸಚಿವ ನಾಗೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    ಗೌರವಾನ್ವಿತ ಮುಠ್ಠಾಳರನ್ನ ಪಠ್ಯ ಸಮಿತಿಗೆ ನೇಮಕ ಮಾಡಿರುವುದೇ ತಪ್ಪು. ಸರ್ಕಾರದ ಅಧಿಕೃತ ಆದೇಶವಿಲ್ಲದೆ ಟ್ಯೂಟೋರಿಯಲ್ ನಡೆಸುವಂತವರಿಗೆ ಪಠ್ಯ ರಚನೆ‌ ನೀಡಿರುವುದು ಸರಿಯಲ್ಲ. ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯನ್ನೇ ತಿರುಚುವಂತ ಹೀನ ವ್ಯಕ್ತಿ ಪಠ್ಯ ರಚನೆ ಮಾಡುವುದು ಸರಿಯೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಬಗ್ಗೆ ಆಸಕ್ತಿ ಇದ್ದವರು ದೇಶ ಸೇವೆ ಮಾಡಿ ಅಂದ್ರೆ ಇವರಿಗ್ಯಾಕೆ ಇಷ್ಟೊಂದು ಉರಿತಿದೆ:  ಬಿ.ಶ್ರೀರಾಮುಲು

    ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಹಾಗೂ ಸಂವಿಧಾನಕ್ಕೆ ರೋಹಿತ್ ಚಕ್ರತೀರ್ಥ ಅಪಮಾನ ಮಾಡಿದ್ದಾರೆ. ಬಸವಣ್ಣ ಸೇರಿ ಅನೇಕ ದಾರ್ಶನಿಕರಿಗೆ ಅವಹೇಳನ ಮಾಡಿದ್ದಾರೆ. ಕೂಡಲೇ ರೋಹಿತ್ ಚಕ್ರತೀರ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

    ಸಿಎಂ ಬಸವರಾಜ ಬೊಮ್ಮಾಯಿ ʼ777 ಚಾರ್ಲಿʼ ಸಿನಿಮಾದ ನಾಯಿಯ ನಟನೆ ಮೆಚ್ಚಿ ಕಣ್ಣೀರಿಟ್ಟು, ತೆರಿಗೆ ವಿನಾಯಿತಿ ನೀಡಿದ್ದಾರೆ. ಇಷ್ಟೊಂದು ಹೃದಯ ವೈಶಾಲ್ಯತೆ ಮೆರೆಯುವ ಸಿಎಂ ಅವರಿಗೆ ಪರಿಷ್ಕೃತ ಪಠ್ಯ ಪುಸ್ತಕದ ಅವಾಂತರಗಳು‌ ಕಾಣಿಸುತ್ತಿಲ್ಲವೆ? ಕೂಡಲೇ ಶಿಕ್ಷಣ ಸಚಿವ ನಾಗೇಶರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕೆಂದು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇಲ್ಲಿ ಕೈದಿಗಳನ್ನ ನೋಡಬೇಕಂದ್ರೂ ಜೈಲರ್‌ಗಳಿಗೆ ಲಂಚ ಕೊಡಬೇಕು – ವೀಡಿಯೋ ವೈರಲ್

    Live Tv

  • ರೋಹಿತ್ ಚಕ್ರತೀರ್ಥ ಬಂಧನಕ್ಕೆ ಆಗ್ರಹ ಅಸಾಂವಿಧಾನಿಕ : ಅಚ್ಚರಿಯ ಹೇಳಿಕೆ ನೀಡಿದ ನಟ ಚೇತನ್

    ರೋಹಿತ್ ಚಕ್ರತೀರ್ಥ ಬಂಧನಕ್ಕೆ ಆಗ್ರಹ ಅಸಾಂವಿಧಾನಿಕ : ಅಚ್ಚರಿಯ ಹೇಳಿಕೆ ನೀಡಿದ ನಟ ಚೇತನ್

    ಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ನಿನ್ನೆಯಿಂದ ಕಾಂಗ್ರೆಸ್ ಮತ್ತು ಇತರರ ಮೇಲೆ ಮುಗಿಬಿದ್ದಿದ್ದಾರೆ. ಒಂದು ರೀತಿಯಲ್ಲಿ ಬಿಜೆಪಿ ಅಥವಾ ರೋಹಿತ್ ಚಕ್ರತೀರ್ಥ ಕುರಿತಂತೆ ಮೆದು ಧೋರಣೆ ತೋರುತ್ತಿದ್ದಾರೆ ಎನ್ನುವಂತೆ ಪೋಸ್ಟ್ ಮಾಡಿದ್ದಾರೆ. ಚೇತನ್ ಈ ನಡೆ ಭಾರೀ ಕುತೂಹಲ ಮತ್ತು ಚರ್ಚೆಯನ್ನುಂಟು ಮಾಡಿದೆ. ಚೇತನ್ ಕಾಂಗ್ರೆಸ್ ಪರ ಎಂದು ಹೇಳುತ್ತಿದ್ದವರಿಗೂ ಈ ಅಚ್ಚರಿಯ ನಡೆ ಗೊಂದಲವನ್ನುಂಟು ಮಾಡಿದೆ.

    ಇಂದು ಕನ್ನಡಪರ ಸಂಘಟನೆಗಳು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಹಿಂಬಾಲಕರು ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧಿಸಿದಂತೆ ಹೋರಾಟ ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಪ್ರಗತಿಪರ ಮನಸ್ಸುಗಳು ಕೂಡ ಈ ಹೋರಾಟಕ್ಕೆ ಕೈ ಜೋಡಿಸಿವೆ. ಈ ಬೆನ್ನಲ್ಲೇ ಚೇತನ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡ ಬರಹಗಳು ಮಹತ್ವ ಪಡೆದುಕೊಂಡಿವೆ. ಚೇತನ್ ಯಾರ ಪರ ಎನ್ನುವ ಪ್ರಶ್ನೆಯನ್ನೂ ಹುಟ್ಟುಹಾಕಿವೆ. ಇದನ್ನೂ ಓದಿ:ಬುದ್ದಿಜೀವಿ ವಲಯಕ್ಕೆ ನಟ ಚೇತನ್ ‘ಚಮಚ’ ಅಂದಿದ್ದು ಯಾಕೆ ಮತ್ತು ಯಾರಿಗೆ?

    ಮೂರು ಗಂಟೆಯ ಹಿಂದೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಚೇತನ್“ ಸಿದ್ಧರಾಮಯ್ಯನವರು ಚಕ್ರತೀರ್ಥನ ಬಂಧನಕ್ಕೆ ಆಗ್ರಹ ನೀಡಿದ್ದಾರೆ. ಇದು ವಾಕ್ ಸ್ವಾತಂತ್ರ್ಯದ ವಿರೋಧಿಯಾಗಿದ್ದು, ಅಸಾಂವಿಧಾನಿಕವಾಗಿದೆ. ಸಿದ್ದರಾಮಯ್ಯನವರು ರಾಜಕೀಯ ಲಾಭಕ್ಕಾಗಿ ಪ್ರಜಾಪ್ರಭುತ್ವವನ್ನು ನಾಶಮಾಡುವ ಮೂಲಕ ಕಾಂಗ್ರೆಸ್ ಪಕ್ಷವು ಎಂದಿನಂತೆ ಅಪಮಾನಿಸುವುದನ್ನು ಮುಂದುವರೆಸಿದೆ” ಎಂದು ಬರೆದುಕೊಂಡಿದ್ದಾರೆ.

    ಮತ್ತೆ ಎರಡು ಗಂಟೆಯ ಹಿಂದೆ ಮತ್ತೊಂದು ಪೋಸ್ಟ್ ಮಾಡಿದ್ದು, “ಇವತ್ತಿನ ಪಠ್ಯಪುಸ್ತಕ ಪ್ರತಿಭಟನೆ ಸಮಾನತೆ ಮತ್ತು ನ್ಯಾಯಪರ ಹೋರಾಟ ಅಲ್ಲ. ಇದು ಕಾಂಗ್ರೆಸ್ ಮತ್ತು ಬ್ರಾಹ್ಮಣ್ಯದ ಸವಲತ್ತುಗಳನ್ನು ಉಳಿಸಿಕೊಳ್ಳುವ ಹೋರಾಟ. ಕಾಂಗ್ರೆಸ್ ಬೆಂಬಲಿತ ಪಠ್ಯಪುಸ್ತಕಗಳು, ಬಿಜೆಪಿ ಬೆಂಬಲಿತ ಪ್ರಸ್ತುತ ಪಠ್ಯಪುಸ್ತಗಳು ಎರಡರಲ್ಲೂ ನಿಜವಾದ ಸಮಾನತಾವಾದಕ್ಕೆ ನ್ಯಾಯ ಒದಗಿಸಿಲ್ಲ’ ಎಂದು ಚಾಟಿ ಬೀಸಿದ್ದಾರೆ.

    Live Tv

  • ಪಠ್ಯಪುಸ್ತಕ ವಿವಾದ – ಬರಗೂರು, ಚಕ್ರತೀರ್ಥ ಸಮಿತಿಯ ಪಠ್ಯಗಳನ್ನು ʼಪಬ್ಲಿಕ್‌ʼ ಮುಂದಿಟ್ಟ ಸರ್ಕಾರ

    ಪಠ್ಯಪುಸ್ತಕ ವಿವಾದ – ಬರಗೂರು, ಚಕ್ರತೀರ್ಥ ಸಮಿತಿಯ ಪಠ್ಯಗಳನ್ನು ʼಪಬ್ಲಿಕ್‌ʼ ಮುಂದಿಟ್ಟ ಸರ್ಕಾರ

    ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಹಿನ್ನೆಲೆ ಬರಗೂರು ರಾಮಚಂದ್ರಪ್ಪ ಹಾಗೂ ರೋಹಿತ್‌ ಚಕ್ರತೀರ್ಥ ಸಮಿತಿಯ ಪಠ್ಯಗಳನ್ನು ಪಬ್ಲಿಕ್‌ ಡೊಮೈನ್‌ಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

    2015-16 ನೇ ಸಾಲಿ‌ನ ಡಾ‌. ಮುಡಂಬಡಿತ್ತಾಯ ಸಮಿತಿ ಪಠ್ಯ ಮತ್ತು 2017- 18ನೇ ಸಾಲಿನ ಬರಗೂರು ರಾಮಚಂದ್ರಪ್ಪ ಸಮಿತಿ ಪರಿಷ್ಕರಣೆ ಪಠ್ಯಗಳನ್ನು ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ವೆಬ್‌ಸೈಟ್‌ ktbs.kar.nic.in  ಬಿಡುಗಡೆ ಮಾಡಲಾಗಿದೆ. ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯಪುಸ್ತಕಗಳನ್ನು ಸಹ ವೆಬ್‌ಸೈಟ್‌ಗೆ ಸರ್ಕಾರ ರಿಲೀಸ್‌ ಮಾಡಿದೆ.    

    ಯಾರ ಕಾಲದಲ್ಲಿ ಯಾರ‍್ಯಾರ ಪಠ್ಯ ಕೈ ಬಿಡಲಾಗಿತ್ತು ಅನ್ನೋ ಬಗ್ಗೆ ಸಾರ್ವಜನಿಕರೇ ಮಾಹಿತಿ ಪಡೆಯಬಹುದು. ಬರಗೂರು ರಾಮಚಂದ್ರಪ್ಪ ಸಮಿತಿ ಯಾವ ಯಾವ ಮಹನೀಯರ ಪಠ್ಯ ಕೈ ಬಿಟ್ಟಿತ್ತು ಅನ್ನೋ ಬಗ್ಗೆಯೂ ಮಾಹಿತಿ ಇದೆ.

    ಪಠ್ಯದಲ್ಲಿ ಏನೇ ಲೋಪ ಇದ್ದರೂ ಸಾರ್ವಜನಿಕರು ಸಲಹೆಗಳನ್ನು ನೀಡಬಹುದು. ಸಾರ್ವಜನಿಕ ಸಲಹೆ ಮೇರೆಗೆ ಸರ್ಕಾರ ಪಠ್ಯ ಪರಿಷ್ಕರಣೆ ಮಾಡಲಿದೆ. ಇದನ್ನೂ ಓದಿ: ಸ್ಟಾಲಿನ್‌ ರಾಜಕೀಯ ಸ್ಟಂಟ್‌ ಮಾಡುತ್ತಿದ್ದಾರೆ: ತಮಿಳುನಾಡು ಸಿಎಂ ವಿರುದ್ಧ ಬೊಮ್ಮಾಯಿ ಕಿಡಿ

    ಪಠ್ಯಪುಸ್ತಕ ಪರಿಷ್ಕರಣೆಗೆ ರೋಹಿತ್‌ ಚಕ್ರತೀರ್ಥ ನೇತೃತ್ವದಲ್ಲಿ ಸಮಿತಿ ರಚಿಸಿದ್ದಕ್ಕೆ ರಾಜ್ಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಯಿತು. ಪಠ್ಯದಲ್ಲಿ ಕುವೆಂಪು, ಡಾ.ಬಿ.ಆರ್.ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಲಾಗಿದೆ. ಹಿಂದೂಪರ ಧೋರಣೆಗಳನ್ನು ಉದ್ದೇಶಪೂರ್ವಕವಾಗಿ ಪಠ್ಯದಲ್ಲಿ ಅಳವಡಿಸಲಾಗಿದೆ ಎಂದು ಗಂಭೀರ ಆರೋಪಗಳು ಕೇಳಿಬಂದಿದ್ದವು. ಅನೇಕ ಹಿರಿಯ ಸಾಹಿತಿಗಳು ಪಠ್ಯದಿಂದ ತಮ್ಮ ಪಾಠ, ಪದ್ಯಗಳನ್ನು ಕೈಬಿಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು.

  • ಪಠ್ಯ ಪರಿಷ್ಕರಣೆ ನೆಪದಲ್ಲಿ ಬಿಜೆಪಿ ಸರ್ಕಾರದಿಂದ ಸಾಂಸ್ಕೃತಿಕ ಅತ್ಯಾಚಾರ: ಡಿಕೆಶಿ

    ಪಠ್ಯ ಪರಿಷ್ಕರಣೆ ನೆಪದಲ್ಲಿ ಬಿಜೆಪಿ ಸರ್ಕಾರದಿಂದ ಸಾಂಸ್ಕೃತಿಕ ಅತ್ಯಾಚಾರ: ಡಿಕೆಶಿ

    ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರವು ಸಾಂಸ್ಕೃತಿಕ ಅತ್ಯಾಚಾರ ನಡೆಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರದ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾತನಾಡಿದ ಅವರು, ಕುವೆಂಪು ಅವರು ಜಗತ್ತಿಗೆ ವಿಶ್ವಮಾನವ ಸಂದೇಶ ಸಾರಿದ್ದಾರೆ. ಆದರೆ ಬಿಜೆಪಿ ಸರ್ಕಾರ ಮಕ್ಕಳ ಪಠ್ಯಪುಸ್ತಕದಲ್ಲಿ ಕುವೆಂಪು ಸೇರಿದಂತೆ ಮಹಾನ್ ದಾರ್ಶನಿಕರ ವಿಚಾರಗಳನ್ನು ತಿರುಚಿ ಸಾಂಸ್ಕೃತಿಕ ಅತ್ಯಾಚಾರ ನಡೆಸುತ್ತಿದೆ. ಇತಿಹಾಸ ಬದಲಾವಣೆ ಮಾಡಿ ತಮ್ಮ ಅಜೆಂಡಾವನ್ನು ಚಿಕ್ಕ ಮಕ್ಕಳ ತಲೆಗೆ ತುಂಬುವ ಪ್ರಯತ್ನ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರೋಹಿತ್ ಚಕ್ರತೀರ್ಥಗೆ ಸಂಘಟನೆಗಳಿಂದ ಧಮ್ಕಿ – ಪೊಲೀಸರಿಂದ ಬಿಗಿ ಭದ್ರತೆ

    ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜಕೀಯ ನಾಯಕರನ್ನು ಹೊರತುಪಡಿಸಿ ಎಲ್ಲ ಮಠಗಳ ಪೀಠಾಧ್ಯಕ್ಷರು, ಸಾಹಿತಿಗಳು, ಸಂಘಟನೆಗಳು ಒಟ್ಟಾಗಿ ಪಠ್ಯ ಪರಿಷ್ಕರಣೆಯಲ್ಲಿ ಸರ್ಕಾರದ ಮನಸ್ಥಿತಿ ಹಾಗೂ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ನಡೆ ವಿರುದ್ಧ ದನಿ ಎತ್ತಿರುವ ಮಠಾಧೀಶರು, ಸಾಹಿತಿಗಳು, ಚಿಂತಕರು ಹಾಗೂ ಇತರ ಸಂಘಟನೆಗಳು ಇದೇ ತಿಂಗಳು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

    ಬಸವಣ್ಣನವರ ವಚನಗಳನ್ನು ತಿರುಚಲಾಗಿದೆ, ಅಂಬೇಡ್ಕರ್ ಅವರ ವಿಚಾರಗಳನ್ನು ಪಠ್ಯಕ್ರಮದಿಂದ ತೆಗೆದು ಅಪಮಾನ ಮಾಡಲಾಗಿದೆ. ಇದು ಇಡೀ ಭಾರತ ದೇಶಕ್ಕೆ ಮಾಡಿರುವ ದೊಡ್ಡ ಅಪಮಾನವಾಗಿದೆ. ಮುಖ್ಯವಾಗಿ 9ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ಬಸವಣ್ಣನವರ ಜನಿವಾರ ವಿಚಾರವನ್ನು ಪ್ರಸ್ತಾಪಿಸಿ ಮಕ್ಕಳಲ್ಲಿ ವಿಷಬೀಜ ಬಿತ್ತಲು ಪ್ರಯತ್ನಿಸುತ್ತಿದೆ ಎಂದು ಖಂಡಿಸಿದ್ದಾರೆ. ಇದನ್ನೂ ಓದಿ: PUC ಪಠ್ಯ ಪರಿಷ್ಕರಣೆ – ಚಕ್ರತೀರ್ಥ ಸಮಿತಿಯಿಂದ ವರದಿ ಪಡೆಯದಿರಲು ಶಿಕ್ಷಣ ಇಲಾಖೆ ತೀರ್ಮಾನ

    TEXTBOOK

    ಮುಖ್ಯಮಂತ್ರಿಗಳು ಕಷ್ಟಪಟ್ಟು ಬಸವಣ್ಣನವರ ವಿಚಾರವನ್ನು ಮಾತ್ರ ಪರಿಶೀಲನೆ ಮಾಡುವುದಾಗಿ ತಿಳಿಸಿದ್ದಾರೆ. ಅವರು ಕೇವಲ ಒಂದು ಪಕ್ಷದ ಮುಖ್ಯಮಂತ್ರಿಯಾಗಿಲ್ಲ. ಇಡೀ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ಹಾಗೆಯೇ ಶಿಕ್ಷಣ ನೀತಿ ಎಂಬುದು ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ಆರ್‌ಎಸ್‌ಎಸ್ ಚಿಂತನೆಗಳನ್ನು ನೀವೇ ಇಟ್ಟುಕೊಳ್ಳಿ, ನಾವು ಬೇಡ ಎನ್ನುವುದಿಲ್ಲ. ಆದರೆ ಅದು ರಾಷ್ಟ್ರೀಯ ಶಿಕ್ಷಣ ನೀತಿ ಆಗಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್ ಮರೆತಿದ್ದು ಕಾಂಗ್ರೆಸ್ ಹೊರತು ನಾವಲ್ಲ: ಬಿಜೆಪಿ ತಿರುಗೇಟು

    TEXT BOOK

    ಪಠ್ಯಪುಸ್ತಕ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ಶಿಕ್ಷಣ ಸಚಿವ ನಾಗೇಶ್ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಬಸವಣ್ಣ, ಅಂಬೇಡ್ಕರ್, ಕುವೆಂಪು ಅವರ ವಿಚಾರಧಾರೆ ರಾಜಕೀಯ ವಿಚಾರಗಳೇ? ಸಿದ್ದಗಂಗಾ ಶ್ರೀಗಳು ರಾಜಕಾರಣಿಗಳೇ? ನಿರ್ಮಲಾನಂದ ಸ್ವಾಮೀಜಿ ರಾಜಕಾರಣಿಗಳೇ? ಮುರುಘಾ ಶರಣರು ರಾಜಕಾರಣಿಗಳೇ? ಅವರೇ ಉತ್ತರ ಹೇಳಲಿ. ಇಲ್ಲಿ ನಾವು ಬಿಜೆಪಿಯ ನಿಜವಾದ ಮುಖ ಹಾಗೂ ಮನಸ್ಥಿತಿ ವಿರುದ್ಧ ಹೋರಾಡುತ್ತೇವೆ. ಸಚಿವರು ರಾಜೀನಾಮೆ ನೀಡುತ್ತಾರೋ, ಬಿಡುತ್ತಾರೋ ನಮಗೆ ಬೇಡ. ಅವರು ಪರಿಷ್ಕರಣೆ ಮಾಡಿರುವ ಪಠ್ಯಪುಸ್ತಕವನ್ನು ಕಸದ ಬುಟ್ಟಿಗೆ ಎಸೆದು ಹಳೆ ಪಠ್ಯವನ್ನು ಮಕ್ಕಳಿಗೆ ನೀಡಿ ಬೋಧಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಸರ್ಕಾರದ ಮನಸ್ಥಿತಿ ವಿರುದ್ಧ ನಮ್ಮ ಹೋರಾಟ: ರೋಹಿತ್ ಚಕ್ರತೀರ್ಥ ಅವರಿಗೆ ಪೊಲೀಸ್ ಭದ್ರತೆ ನೀಡಿರುವ ಬಗ್ಗೆ ಉತ್ತರಿಸಿದ ಅವರು, ಅವರಿಗೆ ಪೊಲೀಸ್ ಭದ್ರತೆಯಾದ್ರು ನೀಡಲಿ, ಪ್ಯಾರಾ ಮಿಲಿಟರಿ ಭದ್ರತೆಯಾದ್ರೂ ನೀಡಲಿ. ನಾವು ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ಹೋರಾಟ ಸರ್ಕಾರದ ಮನಸ್ಥಿತಿಯ ಬಗ್ಗೆ. ಅವರು ಮಾಡಿದ್ದೆಲ್ಲ ಸರಿ ಎಂದು ಮುಖ್ಯಮಂತ್ರಿ ಬೊಮ್ಮಾಯಿಯವರು ಅಧಿಕೃತ ಮುದ್ರೆ ಒತ್ತಿದ್ದಾರೆ ಎಂದು ಕುಟುಕಿದ್ದಾರೆ.

  • PUC ಪಠ್ಯ ಪರಿಷ್ಕರಣೆ – ಚಕ್ರತೀರ್ಥ ಸಮಿತಿಯಿಂದ ವರದಿ ಪಡೆಯದಿರಲು ಶಿಕ್ಷಣ ಇಲಾಖೆ ತೀರ್ಮಾನ

    PUC ಪಠ್ಯ ಪರಿಷ್ಕರಣೆ – ಚಕ್ರತೀರ್ಥ ಸಮಿತಿಯಿಂದ ವರದಿ ಪಡೆಯದಿರಲು ಶಿಕ್ಷಣ ಇಲಾಖೆ ತೀರ್ಮಾನ

    ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದ ತಣ್ಣಗಾಗುವ ಮುನ್ನವೇ ಪಿಯುಸಿ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ರಚನೆಯ ಆದೇಶವನ್ನು ಶಿಕ್ಷಣ ಇಲಾಖೆ ಹಿಂಪಡೆದು ಸಮಿತಿಯನ್ನು ವಿಸರ್ಜಿಸಿದೆ.

    TEXT BOOK

    ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚನೆ ಮಾಡಿದ್ದ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿಯ `ಹೊಸ ಧರ್ಮಗಳ ಉದಯ’ ಪಠ್ಯ ಮಾತ್ರ ಪರಿಷ್ಕರಣೆಗೆ ವಹಿಸಿತ್ತು. ಶಾಲಾ ಪಠ್ಯ ಪುಸ್ತಕ ಗೊಂದಲ ಆದ ಹಿನ್ನಲೆಯಲ್ಲಿ ಪಿಯುಸಿ ಪಠ್ಯ ಪರಿಷ್ಕರಣೆ ಕೈ ಬಿಡಲು ತೀರ್ಮಾನಿಸಿ, ರೋಹಿತ್ ಚಕ್ರತೀರ್ಥ ಸಮಿತಿಯಿಂದ ವರದಿ ಪಡೆಯದೇ ಇರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದನ್ನೂ ಓದಿ: ರೋಹಿತ್ ಚಕ್ರತೀರ್ಥಗೆ ಸಂಘಟನೆಗಳಿಂದ ಧಮ್ಕಿ – ಪೊಲೀಸರಿಂದ ಬಿಗಿ ಭದ್ರತೆ

    TEXTBOOK

    ಈ ಕುರಿತು ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ದ್ವಿತೀಯ ಪಿಯುಸಿಯ ಇತಿಹಾಸದ ಒಂದು ಪಠ್ಯವನ್ನು ಪರಿಷ್ಕರಣೆಗಾಗಿ ಸಮಿತಿಗೆ ನೀಡಲಾಗಿತ್ತು. ಈಗಾಗಲೇ ಮುಖ್ಯಮಂತ್ರಿಗಳು ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಿದ್ದಾರೆ. ಹೀಗಾಗಿ ಪಿಯುಸಿ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯೂ ವಿಸರ್ಜನೆ ಆಗಿದೆ. ರೋಹಿತ್ ಚಕ್ರತೀರ್ಥ ಸಮಿತಿಯಿಂದ ವರದಿ ಸ್ವೀಕಾರ ಮಾಡುವುದಿಲ್ಲ. ದ್ವಿತೀಯ ಪಿಯುಸಿಯ ಒಂದು ಪಠ್ಯವನ್ನೂ ಸಹ ಪರಿಷ್ಕರಣೆ ಮಾಡುವುದಿಲ್ಲ. ಈಗ ಇರುವ ಪಠ್ಯವನ್ನು ಯಥಾವತ್ತಾಗಿ ಉಳಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್ ಮರೆತಿದ್ದು ಕಾಂಗ್ರೆಸ್ ಹೊರತು ನಾವಲ್ಲ: ಬಿಜೆಪಿ ತಿರುಗೇಟು

    ಪಠ್ಯ ಪರಿಷ್ಕರಣೆ ಜನಾಭಿಪ್ರಾಯಕ್ಕೆ: ಪಠ್ಯಪುಸ್ತಕ ಪರಿಷ್ಕರಣೆಯನ್ನ ಜನಾಭಿಪ್ರಾಯಕ್ಕೆ ಬಿಡುತ್ತೇವೆ. ಯಾವ ಪಠ್ಯದಲ್ಲಿ ತಪ್ಪಾಗಿದೆ? ಎಲ್ಲಿ ಲೋಪ ಉಂಟಾಗಿದೆ? ಅದನ್ನ ಸರಿ ಮಾಡಿಕೊಳ್ಳುತ್ತೇವೆ. ಬಸವಣ್ಣನವರ ಸಾಲು ಸೇರಿಸುತ್ತೇವೆ. ಸಂವಿಧಾನ ಶಿಲ್ಪಿ ಬಿರುದನ್ನೂ ಸೇರ್ಪಡೆ ಮಾಡುತ್ತೇವೆ. ಜನಾಭಿಪ್ರಾಯದಲ್ಲಿ ಏನಾದರೂ ಆಕ್ಷೇಪಗಳು ಬಂದರೆ ಅದನ್ನ ಸ್ವೀಕಾರ ಮಾಡಿ, ಸರಿ ಇದ್ದರೆ ಅದನ್ನ ಪರಿಷ್ಕರಣೆ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ

    ಬರಗೂರು ಸಮಿತಿಯ ಬಹುತೇಕ ಪಠ್ಯವನ್ನು ಉಳಿಸಿಕೊಂಡಿದ್ದೇವೆ. ಅದರ ಬಗ್ಗೆ ಯಾರೂ ವಿವಾದ ಮಾಡಿಲ್ಲ. ಬೇರೆಲ್ಲ ಪಠ್ಯದ ಬಗ್ಗೆ ಮಾತ್ರ ವಿವಾದ ಮಾಡ್ತಿದ್ದಾರೆ. ಬಸವಣ್ಣನವರ ಪಠ್ಯದಲ್ಲಿ ಬರಗೂರು ರಾಮಚಂದ್ರಪ್ಪ ಸಮಿತಿ ಏನು ಪರಿಷ್ಕರಣೆ ಮಾಡಿತ್ತೋ ಅದನ್ನು ಹಾಗೇ ಉಳಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.