Tag: ರೋಹಿತ್‌ ಪವಾರ್‌

  • ಅಜಿತ್‌ ಪವಾರ್‌ ಬಣದ 19 ಶಾಸಕರು ಶರದ್‌ ಪವಾರ್‌ ಬಣ ಸೇರ್ತಾರೆ: ಮಹಾ ಶಾಸಕ ರೋಹಿತ್ ಪವಾರ್ ಬಾಂಬ್‌

    ಅಜಿತ್‌ ಪವಾರ್‌ ಬಣದ 19 ಶಾಸಕರು ಶರದ್‌ ಪವಾರ್‌ ಬಣ ಸೇರ್ತಾರೆ: ಮಹಾ ಶಾಸಕ ರೋಹಿತ್ ಪವಾರ್ ಬಾಂಬ್‌

    ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ನೇತೃತ್ವದ ಆಡಳಿತಾರೂಢ ಎನ್‌ಸಿಪಿಯ (NCP) 18 ​​ರಿಂದ 19 ಶಾಸಕರು ಮುಂಬರುವ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ನಂತರ ತಮ್ಮ ಪಕ್ಷವನ್ನು ಸೇರಲಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್‌ ಪವಾರ್‌ ಬಣ) ನಾಯಕ ರೋಹಿತ್ ಪವಾರ್ (Rohit Pawar) ಸೋಮವಾರ ಬಾಂಬ್‌ ಸಿಡಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅಹ್ಮದ್‌ನಗರ ಜಿಲ್ಲೆಯ ಕರ್ಜತ್-ಜಮಖೇಡ್‌ನ ಶಾಸಕ ರೋಹಿತ್ ಪವಾರ್, ಜುಲೈ 2023 ರಲ್ಲಿ ವಿಭಜನೆಯಾದ ನಂತರ ಪಕ್ಷದ ಸಂಸ್ಥಾಪಕ ಶರದ್ ಪವಾರ್ ಮತ್ತು ಇತರ ಹಿರಿಯ ನಾಯಕರ ವಿರುದ್ಧ ಎಂದಿಗೂ ಕೆಟ್ಟದಾಗಿ ಮಾತನಾಡದ ಹಲವಾರು ಎನ್‌ಸಿಪಿ ಶಾಸಕರು  ನಮ್ಮ ಜೊತೆ ಇದ್ದಾರೆ ಎಂದು ಹೇಳಿದರು.

    ಶಾಸಕರು ಶಾಸಕಾಂಗ ಅಧಿವೇಶನಕ್ಕೆ ಹಾಜರಾಗಬೇಕು ಮತ್ತು ತಮ್ಮ ಕ್ಷೇತ್ರಗಳಿಗೆ ಅಭಿವೃದ್ಧಿ ಹಣವನ್ನು ಪಡೆಯಬೇಕು. ಆದ್ದರಿಂದ ಶಾಸಕರು ಅಧಿವೇಶನ ಮುಗಿಯುವವರೆಗೆ ಕಾಯುತ್ತಾರೆ ಶರದ್ ಪವಾರ್ (Sharad Pawar) ಅವರ ಮೊಮ್ಮಗ ತಿಳಿಸಿದರು.

    ಎನ್‌ಸಿಪಿಯ 18 ರಿಂದ 19 ಶಾಸಕರು ನಮ್ಮೊಂದಿಗೆ ಮತ್ತು ಪವಾರ್ ಸಾಹೇಬ್ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ. ಮುಂಗಾರು ಅಧಿವೇಶನದ ನಂತರ ಅವರು ಶರದ್‌ ಪವಾರ್‌ ಬಣ ಸೇರುತ್ತಾರೆ ಎಂದರು.

    ಶರದ್ ಪವಾರ್ ಮತ್ತು ಇತರ ನಾಯಕರು ಯಾರನ್ನು ಮರಳಿ ಪಕ್ಷಕ್ಕೆ ತೆಗೆದುಕೊಳ್ಳಬೇಕು ಎಂಬುದರ ಕುರಿತು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು – ಮೈಸೂರು, ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು

    2019 ರ ಚುನಾವಣೆಯಲ್ಲಿ ಎನ್‌ಸಿಪಿ 54 ವಿಧಾನಸಭಾ ಸ್ಥಾನಗಳನ್ನು ಗೆದ್ದಿತ್ತು. ಜುಲೈ 2023 ರಲ್ಲಿ ಪಕ್ಷವು ವಿಭಜನೆಯಾದಾಗ, ಅಜಿತ್ ಪವಾರ್ ನೇತೃತ್ವದ ಬಣವು ಸುಮಾರು 40 ಶಾಸಕರ ಬೆಂಬಲವನ್ನು ಹೊಂದಿತ್ತು.

    ವಿಧಾನಮಂಡಲದ ಮುಂಗಾರು ಅಧಿವೇಶನ ಜೂನ್ 27 ರಂದು ಆರಂಭವಾಗಿ ಜುಲೈ 12 ರಂದು ಕೊನೆಗೊಳ್ಳಲಿದ್ದು ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

     

  • ಗಡಿ ವಿವಾದದ ನಡುವೆಯೂ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಭೇಟಿ

    ಗಡಿ ವಿವಾದದ ನಡುವೆಯೂ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಭೇಟಿ

    ಬೆಳಗಾವಿಗೆ: ಮಹಾರಾಷ್ಟ್ರ (Maharashtra) ಮತ್ತು ಬೆಳಗಾವಿ (Belagavi) ಗಡಿ ವಿವಾದದ ನಡುವೆಯೂ‌ ಮಹಾ ವಿಕಾಸ ಅಘಾಡಿ ನಾಯಕರ ಸೂಚನೆ ಮೇರೆಗೆ ಮಹಾರಾಷ್ಟ್ರದ ಎನ್‌ಸಿಪಿ (NCP) ಶಾಸಕ ರೋಹಿತ್ ಪವಾರ್ (Rohit Pawar) ಬೆಳಗಾವಿಗೆ ಗಪ್‌ಚುಪ್ ಆಗಿ ಭೇಟಿ ಕೊಟ್ಟು ವಾಪಸ್ ಆಗಿದ್ದಾರೆ.

    ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕರ್ಜತ್-ಜಮ್ಕೆಡ್ ವಿಧಾನಸಭೆ ಕ್ಷೇತ್ರದ ಎನ್‌ಸಿಪಿ ರೋಹಿತ್ ಪವಾರ್ ಬೆಳಗಾವಿಗೆ ಭೇಟಿ ನೀಡಿ ವಾಪಸ್ ತೆರಳಿದ್ದಾರೆ. ನಿನ್ನೆ ರಾತ್ರಿ ಕೊಲ್ಲಾಪುರ- ಕುಗನೊಳ್ಳಿ ಮಾರ್ಗವಾಗಿ ರೋಹಿತ್ ಪವಾರ್ ಬೆಳಗಾವಿಗೆ ಆಗಮಿಸಿದ್ದರು. ಅನಾರೋಗ್ಯಕ್ಕೆ ತುತ್ತಾಗಿರುವ ಎಂಇಎಸ್ ಬೆಳಗಾವಿ ನಗರ ಅಧ್ಯಕ್ಷ ದೀಪಕ್ ದಳವಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

    ಇಂದು ಬೆಳಗ್ಗೆ ಬೆಳಗಾವಿ ತಾಲೂಕಿನ ವಿವಿಧ ಭಾಗಗಳಿಗೆ ರೋಹಿತ್ ಪವಾರ್ ಭೇಟಿ ನೀಡಿದ್ದು, ಅದರಲ್ಲಿ ಪ್ರಮುಖವಾಗಿ ಗಡಿ ಹೋರಾಟದಲ್ಲಿ ಗಲಭೆ ಸೃಷ್ಟಿಸಿ ಗೋಲಿಬಾರ್‌ಗೆ ತುತ್ತಾದ 11 ಎಂಇಎಸ್ ಕಾರ್ಯಕರ್ತರು, ಗೋಲಿಬಾರ್‌ನಲ್ಲಿ ಮೃತರಾದವರ ಹೆಸರಿನಲ್ಲಿ ಹಿಂಡಲಗಾ ಗ್ರಾಮದಲ್ಲಿರುವ ಹುತಾತ್ಮ ಸ್ಮಾರಕ ನಿರ್ಮಾಣಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿ ಅಲ್ಲಿಂದ ಯಳ್ಳೂರ ಗ್ರಾಮದಲ್ಲಿರುವ ಮಹಾರಾಷ್ಟ್ರ ಹೈಸ್ಕೂಲ್‌ಗೆ ರೋಹಿತ್ ಪವಾರ್ ಭೇಟಿ ನೀಡಿದ್ದಾರೆ. ಎನ್‌ಸಿಪಿ ಶಾಸಕ ರೋಹಿತ್ ಪವಾರ್‌ಗೆ ಸ್ಥಳೀಯ ಎಂಇಎಸ್ ಕಾರ್ಯಕರ್ತರು ಸಾಥ್‌ ನೀಡಿದ್ದರು. ಇದನ್ನೂ ಓದಿ: ಚೀನಾ ಸೈನಿಕರು ಗಡಿ ನುಸುಳುವುದನ್ನು ಭಾರತ ತಡೆದಿದೆ; ನಮ್ಮ ಯೋಧರ ಧೈರ್ಯಕ್ಕೆ ಸಲಾಂ – ರಾಜನಾಥ್‌ ಸಿಂಗ್‌

    ಗಡಿಗಾಗಿ ಹೋರಾಡಿದ ತ್ಯಾಗ ವ್ಯರ್ಥ ಆಗಬಾರದು: ಇದೇ ವೇಳೆ ಮಾತನಾಡಿದ ಎನ್‌ಸಿಪಿ ಶಾಸಕ ರೋಹಿತ್ ಪವಾರ್, ಕಳೆದ 60 – 70 ವರ್ಷಗಳಿಂದ ಇಲ್ಲಿಯ ಮರಾಠಿ ಭಾಷಿಕರು ಹೋರಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿಯೂ ಅಸ್ಮಿತೆಯ ಹೋರಾಟ ಶುರುವಾಗಿದೆ. ನಮ್ಮ ಧ್ವನಿ ಹತ್ತಿಕ್ಕುವ ಯತ್ನ ನಡೆಯುತ್ತಿದೆ. ನಮ್ಮ ಅಸ್ಮಿತೆಗೆ ಧಕ್ಕೆ ತರುವ ಯತ್ನ ನಡೆಯುತ್ತಿದೆ. ಸಾಮಾಜಿಕ ಕಾರ್ಯಕರ್ತ ಮಹಾರಾಷ್ಟ್ರ ನಾಗರಿಕನಾಗಿ ಇಷ್ಟೇ ಹೇಳುತ್ತೇನೆ. ಗಡಿಗಾಗಿ ಹೋರಾಟ ಹಾಗೂ ತ್ಯಾಗ ಮಾಡಿದ್ದು, ವ್ಯರ್ಥ ಆಗಬಾರದು. ಮಹಾರಾಷ್ಟ್ರ ಸಹ ಇದು ನಮ್ಮ ಒಂದು ಭಾಗ ಅಂತಾ ಯೋಚಿಸಬೇಕು ಎಂದು‌ ಹೇಳಿದರು. ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ – ಅರುಣಾಚಲ ಪ್ರದೇಶದಲ್ಲಿ ವಾಯು ಗಸ್ತು ಆರಂಭಿಸಿದ ಭಾರತೀಯ ಸೇನೆ

    Live Tv
    [brid partner=56869869 player=32851 video=960834 autoplay=true]