Tag: ರೋಹಿತ್ ಶರ್ಮ

  • ಅಭಿಮಾನಿಯ ಹೃದಯ ಬಡಿತ ನಿಲ್ಲಿಸಿತ್ತು, ವಿಶ್ವಕಪ್ ಕನಸನ್ನೇ ಭಗ್ನಗೊಳಿಸಿತ್ತು ಆ ಒಂದು ರನೌಟ್..!

    ಅಭಿಮಾನಿಯ ಹೃದಯ ಬಡಿತ ನಿಲ್ಲಿಸಿತ್ತು, ವಿಶ್ವಕಪ್ ಕನಸನ್ನೇ ಭಗ್ನಗೊಳಿಸಿತ್ತು ಆ ಒಂದು ರನೌಟ್..!

    ಬೆಂಗಳೂರು: 2019ರ ಜುಲೈ 9 ರಂದು ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ವಿಶ್ವಕಪ್ (World Cup) ಸೆಮಿಫೈನಲ್ (Semi-Final) ಪಂದ್ಯದಲ್ಲಿ ಎಂ.ಎಸ್ ಧೋನಿ (MS Dhoni) ಕೊನೆಯ ಕ್ಷಣದಲ್ಲಿ ರನೌಟ್‌ಗೆ ತುತ್ತಾದರು. ಈ ರನೌಟ್ ಇಡೀ ವಿಶ್ವಕಪ್ ಗೆಲ್ಲುವ ಕನಸನ್ನೇ ನುಚ್ಚುನೂರು ಮಾಡಿತ್ತು. ಕೋಟ್ಯಂತರ ಅಭಿಮಾನಿಗಳಲ್ಲೂ ನೋವುಂಟುಮಾಡಿತ್ತು. ಮೊಬೈಲ್‌ನಲ್ಲಿ ಈ ದೃಶ್ಯ ನೋಡುತ್ತಿದ್ದಂತೆ ಕೋಲ್ಕತ್ತಾದಲ್ಲಿ (Kolkata) ಕ್ರಿಕೆಟ್ ಅಭಿಮಾನಿಯೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದರು.

    ಅಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ ತಂಡ 8 ವಿಕೆಟ್ ನಷ್ಟಕ್ಕೆ 239 ರನ್ ಗಳಿಸಿತ್ತು. ನೆರೆದಿದ್ದ ಅಭಿಮಾನಿಗಳು ಗೆಲುವು ಟೀಂ ಇಂಡಿಯಾದ್ದೇ (India) ಎಂದು ಬೀಗುತ್ತಿದ್ದರು. ಗೆಲ್ಲಲು 240 ರನ್ ಗಳ ಗುರಿಯನ್ನು ಪಡೆದ ಭಾರತ 49.3 ಓವರ್ ಗಳಲ್ಲಿ 221 ರನ್ ಗಳಿಗೆ ಆಲೌಟ್ ಆಗಿ ಸೋಲನ್ನು ಒಪ್ಪಿಕೊಂಡಿತು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92 ರನ್‌ಗಳಿಗೆ 6 ವಿಕೆಟ್ ಉರುಳಿದಾಗ ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇತ್ತು. ಆದರೆ ಜಡೇಜಾ ಮತ್ತು ಧೋನಿ 7ನೇ ವಿಕೆಟಿಗೆ 116 ರನ್ ಜೊತೆಯಾಟವಾಡಿ ಭಾರತವನ್ನು ಗೆಲುವಿನ ಸನಿಹಕ್ಕೆ ತಂದಿಟ್ಟಿದ್ದರು. ಇದನ್ನೂ ಓದಿ: ನನ್ನ ಮಗನ ಹೆಸರಿಗೂ ದ್ರಾವಿಡ್‌-ಸಚಿನ್‌ ಹೆಸರಿಗೂ ಸಂಬಂಧವಿಲ್ಲ: ಕ್ರಿಕೆಟಿಗ ರಚಿನ್‌ ತಂದೆ

    5 ಓವರ್ ಗಳಲ್ಲಿ 52 ರನ್ ಗಳಿಸುವ ಒತ್ತಡದಲ್ಲಿ ಸಿಲುಕಿದ್ದ ಸಂದರ್ಭದಲ್ಲಿ ಜಡೇಜಾ ತಂಡವನ್ನು ಗೆಲುವಿನ ಸನಿಹ ಕೊಂಡ್ಯೊಯುವ ಪ್ರಯತ್ನ ನಡೆಸಿದರು. 46ನೇ ಓವರಿನಲ್ಲಿ ಬೌಂಡರಿ ಸಮೇತ 10 ರನ್ ಗಳಿಸಿದ ಈ ಜೋಡಿ 7ನೇ ವಿಕೆಟ್‌ಗೆ ಶತಕದ ಜೊತೆಯಾಟ ನೀಡಿದರು. 122 ಎಸೆತಗಳಲ್ಲಿ ಈ ಜೋಡಿ 116 ರನ್ ಗಳಿಸಿತು. ಆದರೆ ಅಂತಿಮ ಹಂತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ ಜಡೇಜಾ 59 ಎಸೆತಗಳಲ್ಲಿ 77 ರನ್ (4 ಬೌಂಡರಿ, 4 ಸಿಕ್ಸರ್) ಗಳಿಸಿ ಟ್ರೆಂಟ್ ಬೋಲ್ಟ್ ಗೆ ವಿಕೆಟ್ ಒಪ್ಪಿಸಿದರು. ಇತ್ತ ಜಡೇಜಾ ನಿರ್ಗಮನದೊಂದಿಗೆ ತಂಡದ ಗೆಲುವಿನ ಆಸರೆಯಾಗಿದ್ದ ಧೋನಿ 50 ರನ್ (72 ಎಸೆತ, 1 ಬೌಂಡರಿ, 1ಸಿಕ್ಸರ್) ಸಿಡಿಸಿ ರನೌಟ್ ಆದರು. ಇದನ್ನೂ ಓದಿ: ಹೀನಾಯ ಸೋಲಿನ ಬೆನ್ನಲ್ಲೇ ಪಾಕ್‌ಗೆ ಮತ್ತೆ ಶಾಕ್‌ – ಗುಡ್‌ಬೈ ಹೇಳಿದ ಬೌಲಿಂಗ್‌ ಕೋಚ್‌

    ಸೆಮಿಫೈನಲ್ ಪಂದ್ಯದಲ್ಲಿ ಕೊನೆಯ 10 ಎಸೆತಗಳಲ್ಲಿ 25 ರನ್ ಬೇಕಿದ್ದಾಗ 48ನೇ ಓವರ್‌ನ 3ನೇ ಎಸೆತದಲ್ಲಿ ಧೋನಿ 2 ರನ್ ಕದಿಯಲು ಪ್ರಯತ್ನಿಸಿದರು. ಆದ್ರೆ ಫೀಲ್ಡಿಂಗ್‌ನಲ್ಲಿದ್ದ ಮಾರ್ಟಿನ್ ಗಪ್ಟಿಲ್ ಎಸೆದ ಡೈರೆಕ್ಟ್ ವಿಕೆಟ್ ಥ್ರೋ ಗೆ ಧೋನಿ ರನೌಟ್ ಆಗಿದ್ದರು. ಈ ಮೂಲಕ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿತ್ತು. ಅಲ್ಲದೇ ಅದು ಧೋನಿ ಅವರ ಕ್ರಿಕೆಟ್ ವೃತ್ತಿ ಜೀವನದ ಕೊನೆಯ ವಿಶ್ವಕಪ್ ಟೂರ್ನಿಯೂ ಆಗಿತ್ತು. ಇದನ್ನೂ ಓದಿ: World Cup: ಈ ದಾಖಲೆ ಬರೆದ ಭಾರತದ ಮೊದಲ ಕ್ಯಾಪ್ಟನ್‌ ರೋಹಿತ್‌ ಶರ್ಮಾ

    ಅಂತಿಮವಾಗಿ ಭಾರತ 49.3 ಓವರ್‌ಗಳಿಗೆ ಆಲೌಟ್ ಆಯಿತು. ಅದು ಇಡೀ ಭಾರತೀಯರಿಗೆ ಮರೆಯದ ಘಟನೆಯಾಗಿ ಉಳಿಯಿತು. ಇದೀಗ 2023ರ ವಿಶ್ವಕಪ್ ಟೂರ್ನಿಯಲ್ಲೂ ಮತ್ತೆ ಭಾರತ ನ್ಯೂಜಿಲೆಂಡ್ ತಂಡ ಮುಖಾಮುಖಿಯಾಗುತ್ತಿದ್ದು, ಈ ಎಲ್ಲ ಕ್ಷಣಗಳನ್ನ ನೆನಪಿಸಿದೆ. ಇದನ್ನೂ ಓದಿ: World Cup 2023: ಅರ್ಧಶತಕ ಸಿಡಿಸಿದ್ರೂ ಸಚಿನ್‌ ದಾಖಲೆ ಸರಿಗಟ್ಟಿದ ಚೇಸ್‌ ಮಾಸ್ಟರ್‌

    ಇದೇ ಆವೃತ್ತಿಯಲ್ಲಿ ಧರ್ಮಶಾಲಾ ಕ್ರೀಡಾಂಗಣದಲ್ಲಿ ಕಿವೀಸ್ ನೀಡಿದ್ದ 274 ರನ್‌ಗಳ ಗುರಿ ಬೆನ್ನಟ್ಟಿ ಭಾರತ ಜಯ ಸಾಧಿಸಿತ್ತು. ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ಸೋಲಿನ ಮುಖವನ್ನೇ ನೋಡದ ಟೀಂ ಇಂಡಿಯಾ ಇನ್ನೆರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ರೆ ವಿಶ್ವ ಏಕದಿನ ಕ್ರಿಕೆಟ್‌ಗೆ ಸಾಮ್ರಾಟನಾಗಲಿದೆ. ಕೋಟ್ಯಂತರ ಅಭಿಮಾನಿಗಳ ಆಶಯವೂ ಇದೇ ಆಗಿದೆ. ಇದನ್ನೂ ಓದಿ: World Cup 2023: ವಿಶ್ವದ ನಂ.1 T20 ಬ್ಯಾಟರ್‌ಗೆ ಬೆಸ್ಟ್‌ ಫೀಲ್ಡರ್‌ ಪ್ರಶಸ್ತಿ

  • ಮೈದಾನದಲ್ಲಿ ರೋಹಿತ್ ಕಾಲಿಗೆ ಬಿದ್ದ ಅಭಿಮಾನಿ – ವಿಡಿಯೋ ವೈರಲ್

    ಮೈದಾನದಲ್ಲಿ ರೋಹಿತ್ ಕಾಲಿಗೆ ಬಿದ್ದ ಅಭಿಮಾನಿ – ವಿಡಿಯೋ ವೈರಲ್

    ರಾಂಚಿ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಅಭಿಮಾನಿಯೊಬ್ಬರು ನಾಯಕ ರೋಹಿತ್ ಶರ್ಮಾ ಅವರ ಕಾಲಿಗೆ ಅಡ್ಡ ಬಿದ್ದಿದ್ದು ವಿಡಿಯೋ ವೈರಲ್ ಆಗಿದೆ.

    ಅಭಿಯಾನಿಯೊಬ್ಬರು ರೋಹಿತ್ ಶರ್ಮಾ ಅವರ ಮುಂದೆ ಬಂದು ಕಾಲುಗಳನ್ನು ಸ್ಪರ್ಶಿಸಿ ಸಾಷ್ಟಾಂಗ ನಮಸ್ಕಾರ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ಅವರಿಗೆ ರೋಹಿತ್ ಶರ್ಮಾ ಅವರ ಕಾಲುಗಳನ್ನು ಸ್ಪರ್ಶಿಸಲು ಅವಕಾಶ ದೊರೆಯಲಿಲ್ಲ. ಟೀಂ ಇಂಡಿಯಾ ನಾಯಕ ಪಾದಗಳನ್ನು ಸ್ಪರ್ಶಿಸದಂತೆ ತಿಳಿಸುತ್ತಿದ್ದ ದೃಶ್ಯ ಹಾಗೂ ಸೆಕ್ಯೂರಿಟಿ ಹಿಂಬಾಲುಸುತ್ತಿದ್ದಂತೆ ಆ ಅಭಿಮಾನಿ ಹಿಂದಿರುಗಿ ಓಡುತ್ತಿರುವ ವೀಡಿಯೋವೊಂದು ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ಕೊಹ್ಲಿ ಅಲ್ಲ ಗುಪ್ಟಿಲ್ ಈಗ ಟಿ20 ಕ್ರಿಕೆಟ್‍ನ ಕಿಂಗ್

    ಹಿಟ್‍ಮೆನ್‍ನ ಪಾದ ಸ್ಪರ್ಶಿಸಲು ಅಥವಾ ಶೆಕ್ ಹ್ಯಾಂಡ್‍ಗಾಗಿ ಬಂದಿರುವುದು ಇದೇನು ಮೊದಲ ಬಾರಿಯಲ್ಲ. ಈ ರೀತಿಯ ವರ್ತನೆಗಳು ಕ್ರಿಕೆಟ್ ಲೋಕದಲ್ಲಿ ಆಗಾಗ ಆಗುತ್ತಿರುವುದು ಸಾಮಾನ್ಯವಾಗಿದೆ. ಅಷ್ಟೇ ಅಲ್ಲದೇ ಆಟಗಾರರಿಗೂ ಸಾಮಾನ್ಯವಾಗಿದೆ. ಈ ವೀಡಿಯೋಕ್ಕೆ ನೆಟ್ಟಿಗರು ಫನ್ನಿ ಫನ್ನಿ ಕಾಮೆಂಟ್‍ಗಳನ್ನು ಮಾಡುತ್ತಿದ್ದಾರೆ, ಅಷ್ಟೇ ಅಲ್ಲದೇ ಹೆಚ್ಚು ಟ್ರೋಲ್‍ನಲ್ಲಿರುವ ವೀಡಿಯೋಗಳಲ್ಲಿ ಇದು ಒಂದಾಗಿದೆ.

    ರಾಂಚಿಯಲ್ಲಿ ನಡೆದ 2ನೇ ಟೀ-20 ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧ 7 ವಿಕೆಟ್‍ಗಳ ಅಂತರದಿಂದ ಗೆಲುವು ಸಾಧಿಸಿದೆ. ಟೀಮ್ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆ ಸರಣಿ ಕೈವಶ ಮಾಡಿಕೊಂಡಿದೆ. ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್ ಜೊತೆ ಆರ್‌ಸಿಬಿಗೂ ವಿದಾಯ ಹೇಳಿದ ಎಬಿಡಿ

  • 1 ಎಸೆತ ಎಸೆದು ಓವರ್ ಕೊನೆಗೊಳಿಸಿದ ರೋಹಿತ್ ಶರ್ಮಾ

    1 ಎಸೆತ ಎಸೆದು ಓವರ್ ಕೊನೆಗೊಳಿಸಿದ ರೋಹಿತ್ ಶರ್ಮಾ

    ಬ್ರಿಸ್ಬೇನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಗಾಬ್ಬಾ ಅಂಗಳದಲ್ಲಿ ಪ್ರಾರಂಭಗೊಂಡಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮಧ್ಯಮ ವೇಗದಲ್ಲಿ ಒಂದು ಎಸೆತವನ್ನು ಎಸೆದು ಎಲ್ಲರ ಗಮನಸೆಳೆದಿದ್ದಾರೆ.

    ಗಾಯದ ಸಮಸ್ಯೆಯ ನಡುವೆ ನಾಲ್ಕು ಬದಲಾವಣೆಯೊಂದಿಗೆ ಕಣಕ್ಕೆ ಇಳಿದ ಭಾರತ ಮತ್ತೆ ನಾಲ್ಕನೇ ಟೆಸ್ಟ್‍ನಲ್ಲೂ ಗಾಯದ ಹೊರೆ ಹೊರುವಂತಾಗಿದೆ. ಈಗಾಗಲೇ ಮೂರನೇ ಟೆಸ್ಟ್‍ನ ವೇಳೆ ಗಾಯಕ್ಕೆ ತುತ್ತಾಗಿದ್ದ ಆರ್ ಆಶ್ವಿನ್, ಜಡೇಜಾ, ವಿಹಾರಿ ಮತ್ತು ಬುಮ್ರಾ ಹೊರಗುಳಿದಿದ್ದು ಇವರ ಬದಲು ಮಯಾಂಕ್ ಅಗರ್ವಾಲ್ ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್ ಮತ್ತು ಟಿ. ನಟರಾಜನ್ ಅವಕಾಶ ಪಡೆದಿದ್ದಾರೆ.

    ಭಾರತ ಕೊನೆಯ ಟೆಸ್ಟ್ ಪಂದ್ಯಾಟವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿ ಕಣಕ್ಕೆ ಇಳಿದು ಹೊರಾಟ ನಡೆಸುತ್ತಿರುವಾಗಲೇ ಇನ್ನೊಬ್ಬ ವೇಗದ ಬೌಲರ್‍ಗೆ ಗಾಯದ ಸಮಸ್ಯೆ ಕಾಡಿದೆ. ಇದರಿಂದ ಮೊದಲ ದಿನದ ಆಟದಲ್ಲೇ ಭಾರತ ಸ್ವಲ್ಪ ಮಂಕಾಗಿದೆ. ಇದನ್ನೂ ಓದಿ: ಭಾರತದ ಪರ ವಿಶೇಷ ದಾಖಲೆ ನಿರ್ಮಿಸಿದ ನಟರಾಜನ್‌

    ತನ್ನ 8ನೇ ಓವರ್ ಬೌಲಿಂಗ್ ಮಾಡುತ್ತಿದ್ದ ನವ್‍ದೀಪ್ ಸೈನಿ ತನ್ನ ಓವರಿನ ಕೋಟಾ ಮುಗಿಸಲು ಒಂದು ಬೌಲ್ ಬಾಕಿ ಇರುವಾಗಲೇ ತೊಡೆ ನೋವಿಗೆ ತುತ್ತಾಗಿ ಮೈದಾನ ತೊರೆದರು. ಈ ವೇಳೆ ಒಂದು ಬೌಲ್ ಹಾಕಲು ತಂಡದ ನಾಯಕ ಅಜಿಂಕ್ಯ ರಹಾನೆ ಬೌಲನ್ನು ರೋಹಿತ್ ಶರ್ಮಾ ಕೈಗೆ ನೀಡಿದರು.

    ಈ ಹಿಂದೆ ಆಫ್ ಸ್ಪಿನ್ ಬೌಲಿಂಗ್ ಮಾಡುತ್ತಿದ್ದ ಆರಂಭಿಕ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ ಇಂದು ಮಧ್ಯಮ ವೇಗದ ಬೌಲಿಂಗ್ ಮಾಡಿ ಪ್ರೇಕ್ಷಕರಲ್ಲಿ ಅಚ್ಚರಿ ಮೂಡಿಸಿದರು. ಒಂದು ಬಾಲ್ ಬೌಲಿಂಗ್ ಮಾಡಿದ ರೋಹಿತ್‍ನ ಆಫ್ ಟ್ರ್ಯಾಕರ್ ಎಸೆತವನ್ನು ಮಾರ್ನಸ್ ಲಬುಶೇನ್ ಆಫ್ ಸೈಡ್‍ಗೆ ತಳ್ಳಿ ಒಂದು ರನ್ ಪಡೆದರು ಇದರೊಂದಿಗೆ ಸೈನಿ ಓವರ್ ಮುಕ್ತಾಯವಾಯಿತು.

    ಈ ಹಿಂದೆ ನಡೆದ ಐಪಿಎಲ್ ಪಂದ್ಯಾಟದಲ್ಲಿ ರೋಹಿತ್ ಶರ್ಮಾ ಬೌಲಿಂಗ್ ಮಾಡುತ್ತಿದ್ದರು. 2009ರಲ್ಲಿ ನಡೆದ ಐಪಿಎಲ್ ಪಂದ್ಯಾಟ ಒಂದರಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು. ರೋಹಿತ್ ಡೆಕ್ಕನ್ ಚಾರ್ಜ್‍ರ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರ ಹಲವು ಬಾರಿ ಬೌಲಿಂಗ್ ಮಾಡಿದ್ದಾರೆ. ಆದರೆ ಅಂತರಾಷ್ಟ್ರೀಯ ಪಂದ್ಯಾಟಗಳಲ್ಲಿ ಹೆಚ್ಚು ಬೌಲಿಂಗ್ ಮಾಡದೆ ಇರುವ ರೋಹಿತ್‍ಗೆ ಆಸ್ಟ್ರೇಲಿಯಾದಲ್ಲಿ ಒಂದು ಎಸೆತ ಎಸೆಯುವ ಭಾಗ್ಯ ಸಿಕ್ಕಿತು.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 87 ಓವರ್‍ಗಳಲ್ಲಿ 5 ವಿಕೆಟ್ ನಷ್ಟಕ್ಕೆ 274 ರನ್ ಗಳಿಸಿದೆ. ಮಾರ್ನಸ್ ಲಬುಶೇನ್ 108 ರನ್(204 ಎಸೆತ, 9 ಬೌಂಡರಿ), ಮ್ಯಾಥ್ಯು ವೇಡ್ 45 ರನ್(87 ಎಸೆತ, 6 ಬೌಂಡರಿ) ಹೊಡೆದು ಔಟಾಗಿದ್ದಾರೆ. ಕ್ಯಾಮರೂನ್ ಗ್ರೀನ್ 28 ರನ್, ನಾಯಕ ಟೀಮ್ ಪೈನೆ 38 ರನ್ ಗಳಿಸಿದ್ದು ನಾಳೆ ಬ್ಯಾಟಿಂಗ್ ಮುಂದುವರಿಸಲಿದ್ದಾರೆ ಭಾರತದ ಪರ ಸಿರಾಜ್, ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್ ತಲಾ ಒಂದೊಂದು ವಿಕೆಟ್ ಕಿತ್ತಿದ್ದಾರೆ.