Tag: ರೋಹಿತ್ ಶರ್ಮಾ

  • ರೋಹಿತ್‌ ಪಂದ್ಯಶ್ರೇಷ್ಠ – ಧೋನಿ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಕ್ಯಾಪ್ಟನ್‌

    ರೋಹಿತ್‌ ಪಂದ್ಯಶ್ರೇಷ್ಠ – ಧೋನಿ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಕ್ಯಾಪ್ಟನ್‌

    ದುಬೈ: ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಗರಿಷ್ಠ ರನ್‌ ಬಾರಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಂಡ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಚಾಂಪಿಯನ್ಸ್‌ ಟ್ರೋಫಿಯಲ್ಲಿ ವಿಶೇಷ ಸಾಧನೆಗೆ ಪಾತ್ರರಾದರು.

    ಹೌದು.. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ 83 ಎಸೆತಗಳಲ್ಲಿ 76 ರನ್‌ (3 ಸಿಕ್ಸರ್‌, 7 ಬೌಂಡರಿ) ಬಾರಿಸಿದ ಹಿಟ್‌ಮ್ಯಾನ್‌ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಈ ಮೂಲಕ ಐಸಿಸಿ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಂದ್ಯಶ್ರೇಷ್ಠಕ್ಕೆ ಪಾತ್ರರಾದ ಟೀಂ ಇಂಡಿಯಾದ 2ನೇ‌ ನಾಯಕ ಹಾಗೂ ವಿಶ್ವದ ನಾಲ್ಕನೇ ಕ್ಯಾಪ್ಟನ್‌ ಎಂಬ ಸಾಧನೆಗೆ ಪಾತ್ರರಾದರು. 2011ರ ಏಕದಿನ ವಿಶ್ವಕಪ್‌ ಟೂರ್ನಿಯನ್ನಿ ಎಂ.ಎಸ್‌ ಧೋನಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

    ಐಸಿಸಿ ಫೈನಲ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಕ್ಯಾಪ್ಟನ್ಸ್‌
    * ಕ್ಲೈವ್ ಲಾಯ್ಡ್ (ವೆಸ್ಟ್ ಇಂಡೀಸ್) – 1975 ಏಕದಿನ ವಿಶ್ವಕಪ್
    * ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) – 2003 ಏಕದಿನ ವಿಶ್ವಕಪ್
    * ಎಂ.ಎಸ್. ಧೋನಿ (ಭಾರತ) – 2011 ಏಕದಿನ ವಿಶ್ವಕಪ್
    * ರೋಹಿತ್ ಶರ್ಮಾ (ಭಾರತ) – 2025 ಚಾಂಪಿಯನ್ಸ್ ಟ್ರೋಫಿ

    ಯಾವ ವರ್ಷ – ಯಾರು ಚಾಂಪಿಯನ್ಸ್‌?
    1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

  • ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ರೋಹಿತ್‌ – 2027ರ ಏಕದಿನ ವಿಶ್ವಕಪ್‌ ಮುಂದಿನ ಟಾರ್ಗೆಟ್‌?

    ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ರೋಹಿತ್‌ – 2027ರ ಏಕದಿನ ವಿಶ್ವಕಪ್‌ ಮುಂದಿನ ಟಾರ್ಗೆಟ್‌?

    ದುಬೈ: ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ (Champions Trophy) ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ. ಇದು ರೋಹಿತ್‌ ಶರ್ಮಾ (Rohit Sharma) ನಾಯಕತ್ವದಲ್ಲಿ ಗೆದ್ದ 2ನೇ ಐಸಿಸಿ ಟ್ರೋಫಿ ಎಂಬುದೂ ಸಹ ವಿಶೇಷ.

    ಇನ್ನೂ 2024ರ ಟಿ20 ವಿಶ್ವಕಪ್‌ ಟ್ರೋಫಿ ಗೆದ್ದ ಬಳಿಕ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದ ರೋಹಿತ್‌ ಶರ್ಮಾ, ಫೈನಲ್‌ ಪಂದ್ಯದ ಬಳಿಕ ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ವದಂತಿ ಹಬ್ಬಿತ್ತು. ಈ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಪೋಸ್ಟ್‌ ಪ್ರಸೆಂಟೇಷನ್‌ನಲ್ಲಿ ಭವಿಷ್ಯದ ಯೋಜನೆಗಳೇನಾದ್ರೂ ಇದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ರೋಹಿತ್‌ 2027ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಸುಳಿವು ಕೊಟ್ಟಿದ್ದಾರೆ. ಭವಿಷ್ಯದ ಯೋಜನೆಗಳು ಭವಿಷ್ಯದಲ್ಲಿ ಬರುತ್ತವೆ. ಸದ್ಯಕ್ಕೆ, ಎಲ್ಲವೂ ಹಾಗೆಯೇ ಮುಂದುವರಿಯುತ್ತದೆ ಎಂದು ರೋಹಿತ್‌ ಹೇಳಿದ್ದಾರೆ.

    ಸೆಮಿ ಫೈನಲ್‌ ವರೆಗೂ ಬ್ಯಾಟಿಂಗ್‌ನಲ್ಲಿ ಫಾರ್ಮ್‌ ಕಳೆದುಕೊಂಡಿದ್ದ ರೋಹಿತ್‌ ಶರ್ಮಾ ಫೈನಲ್‌ನಲ್ಲಿ ಕೀವೀಸ್‌ ಬೌಲರ್‌ಗಳನ್ನು ಚೆಂಡಾಡಿದರು. 83 ಎಸೆತಗಳಲ್ಲಿ 75 ರನ್‌ ಚಚ್ಚಿ ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು.

    ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು.

    ಮುಂದುವರಿದು.. ಈ ಟ್ರೋಫಿಯನ್ನು ನನ್ನ ದೇಶಕ್ಕೆ ಅರ್ಪಿಸುತ್ತೇನೆ. ಏಕೆಂದರೆ ನಾವು ಗೆಲ್ಲಬೇಕೆಂದು ಪ್ರತಿಯೊಬ್ಬರು ಬಯಸಿದ್ದರು ಶರ್ಮಾ ಭಾವುಕರಾಗಿದ್ದಾರೆ.

    2 ಬಾರಿ ಫೈನಲ್‌ನಲ್ಲಿ ಸೋಲು:
    1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

  • ಚಾಂಪಿಯನ್ಸ್‌ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ ಮೋದಿ ವಿಶ್‌

    ಚಾಂಪಿಯನ್ಸ್‌ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ ಮೋದಿ ವಿಶ್‌

    ನವದೆಹಲಿ: 12 ವರ್ಷಗಳ ಬಳಿಕ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (ICC Champions Trophy) ಕಿರೀಟ ಮುಡಿಗೇರಿಸಿಕೊಂಡ ಭಾರತ ಕ್ರಿಕೆಟ್‌ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶುಭ ಹಾರೈಸಿದ್ದಾರೆ.

    ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ, ಅಸಾಧಾರಣ ಆಟ ಮತ್ತು ಅಸಾಧಾರಣ ಫಲಿತಾಂಶ… ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಟೂರ್ನಿಯುದ್ಧಕ್ಕೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸಂಘಟಿತ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು ಎಂದು ಶುಭಕೋರಿದ್ದಾರೆ.

    ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ (Champions Trophy) ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.

    ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು.

    2 ಬಾರಿ ಫೈನಲ್‌ನಲ್ಲಿ ಸೋಲು:
    1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

  • ಬಿದ್ದು ಎದ್ದು ಗೆದ್ದ ರಾಹುಲ್‌ – ಟೀಕೆಗಳಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟ ಕನ್ನಡಿಗ

    ಬಿದ್ದು ಎದ್ದು ಗೆದ್ದ ರಾಹುಲ್‌ – ಟೀಕೆಗಳಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟ ಕನ್ನಡಿಗ

    ದುಬೈ: ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ 12 ವರ್ಷಗಳ ಬಳಿಕ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಈ ಟೂರ್ನಿಯ ಸೆಮಿಸ್‌ ಹಾಗೂ ಫೈನಲ್‌ ಪಂದ್ಯದಲ್ಲಿ ಎಚ್ಚರಿಕೆಯ ಆಟವಾಡಿದ ಕೆ.ಎಲ್‌ ರಾಹುಲ್‌ ತಮ್ಮ ವಿರುದ್ಧದ ಟೀಕೆಗಳಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟಿದ್ದಾರೆ.

    ಭಾರತದ ಆತಿಥ್ಯದಲ್ಲಿ ನಡೆದ 2023ರ ಏಕದಿನ ವಿಶ್ವಕಪ್‌ ಟೂರ್ನಿ ಬಳಿಕ ಕೆ.ಎಲ್‌ ರಾಹುಲ್‌ ಫಾರ್ಮ್‌ ಕಳೆದುಕೊಂಡು ಮೂಲೆಗುಂಪಾಗಿದ್ದರು. ಗಾಯದ ಸಮಸ್ಯೆ, ಫಾರ್ಮ್‌ ಕಂಡುಕೊಳ್ಳದೇ ಇದ್ದ ಕಾರಣ 2024ರ ಟಿ20 ವಿಶ್ವಕಪ್‌ ತಂಡಕ್ಕೂ ಆಯ್ಕೆಯಾಗದೇ ಉಳಿದಿದ್ದರು. ಇದನ್ನೂ ಓದಿ: ಬ್ಯೂಟಿ ಜೊತೆ ಚಹಲ್‌ ಫೈನಲ್‌ ಪಂದ್ಯ ವೀಕ್ಷಣೆ – ಯಾರಿದು ಯುವತಿ?

    ಆ ಬಳಿಕ ರಣಜಿ ಟ್ರೋಫಿಯಲ್ಲಿ ಹಾಗೂ ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಇಂಗ್ಲೆಂಡ್‌ ವಿರುದ್ಧ ನಡೆದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಫಾರ್ಮ್‌ ಸಾಬೀತು ಮಾಡುವಲ್ಲಿ ರಾಹುಲ್‌ ವಿಫಲವಾಗಿದ್ದರು. ಇದರಿಂದ ಭಾರೀ ಟೀಕೆಗಳು ಕೇಳಿ ಬಂದಿದ್ದವು. ಇದನ್ನೂ ಓದಿ: ಐಸಿಸಿಯ 24 ಟೂರ್ನಿಗಳಲ್ಲಿ 23 ರಲ್ಲಿ ಗೆಲುವು – ಇದು ರೋ’ಹಿಟ್‌’ ಕ್ಯಾಪ್ಟನ್ಸಿ ಟ್ರ್ಯಾಕ್‌ ರೆಕಾರ್ಡ್‌

    ಲೀಗ್‌ ಸುತ್ತಿನ ಪಂದ್ಯಗಳಲ್ಲಿ ಬಾಂಗ್ಲಾ ವಿರುದ್ಧ 41 ರನ್‌, ನ್ಯೂಜಿಲೆಂಡ್‌ ವಿರುದ್ಧ 23 ರನ್‌ ಗಳಿಸಿದ್ದರು. ಆದ್ರೆ ಆಸೀಸ್‌ ವಿರುದ್ಧ ನಡೆದ ಸೆಮಿ ಫೈನಲ್‌ನಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆ.ಎಲ್‌ ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. 34 ಎಸೆತಗಳಲ್ಲಿ 42 ರನ್‌ ಗಳಿದ್ರೂ ಟೀಂ ಇಂಡಿಯಾ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಇದೀಗ ಫೈನಲ್‌ ಪಂದ್ಯದಲ್ಲೂ 34 ರನ್‌ ಗಳಿಸುವ ಮೂಲಕ ಭಾರತ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಕಾರಣರಾಗಿದ್ದಾರೆ.

    ಭಾರತ ಕೊನೆಯ ಬಾರಿಗೆ 2013ರಲ್ಲಿ ಎಂ.ಎಸ್‌ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್‌ ಟ್ರೋಫಿ ತನ್ನದಾಗಿಸಿಕೊಂಡಿತ್ತು. ಇದನ್ನೂ ಓದಿ:  140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ! 

  • ಐಸಿಸಿಯ ಟೂರ್ನಿಯ 24 ಪಂದ್ಯಗಳ ಪೈಕಿ 23 ರಲ್ಲಿ ಗೆಲುವು – ಇದು ರೋ’ಹಿಟ್‌’ ಕ್ಯಾಪ್ಟನ್ಸಿ ಟ್ರ್ಯಾಕ್‌ ರೆಕಾರ್ಡ್‌

    ಐಸಿಸಿಯ ಟೂರ್ನಿಯ 24 ಪಂದ್ಯಗಳ ಪೈಕಿ 23 ರಲ್ಲಿ ಗೆಲುವು – ಇದು ರೋ’ಹಿಟ್‌’ ಕ್ಯಾಪ್ಟನ್ಸಿ ಟ್ರ್ಯಾಕ್‌ ರೆಕಾರ್ಡ್‌

    ದುಬೈ: ತನ್ನ ಬ್ಯಾಟಿಂಗ್‌ ಬಗ್ಗೆ ಟೀಕೆ ಮಾಡಿದವರಿಗೆ ರೋಹಿತ್‌ ಶರ್ಮಾ (Rohit Sharma) ಇಂದು ಭರ್ಜರಿ ಬ್ಯಾಟಿಂಗ್‌ ಮೂಲಕ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೇ ಐಸಿಸಿ ಟೂರ್ನಿಗಳಲ್ಲೂ (ICC Tournament) ತಾನೊಬ್ಬ ಸಮರ್ಥ ನಾಯಕ ಎಂದು ತೋರಿಸಿಕೊಟ್ಟಿದ್ದಾರೆ.

    ರೋಹಿತ್‌ ಶರ್ಮಾ ನೇತೃತ್ವದಲ್ಲಿ 2023 ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ (ICC World Cup) ಭಾರತ ಲೀಗ್‌ ಹಂತ 9 ಪಂದ್ಯಗಳನ್ನು ಗೆದ್ದಿತ್ತು. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್‌ ವಿರುದ್ಧ 70 ರನ್‌ಗಳಿಂದ ಗೆದ್ದಿದ್ದ ಭಾರತ ಅಹಮಾದಾಬಾದ್‌ನಲ್ಲಿ ನಡೆದ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮಾತ್ರ ಸೋತಿತ್ತು.

     

    2024 ರಲ್ಲಿ ವೆಸ್ಟ್‌ ಇಂಡಿಸ್‌ ಮತ್ತು ಅಮೆರಿಕದಲ್ಲಿ ಟಿ20 (T20) ಟೂರ್ನಿ ನಡೆದಿತ್ತು. ಈ ಟೂರ್ನಿಯ ಎಲ್ಲಾ 9 ಪಂದ್ಯಗಳನ್ನು ಗೆದ್ದು ಭಾರತ ಚಾಂಪಿಯನ್‌ ಆಗಿ ಹೊರ ಹೊಮ್ಮಿತ್ತು. ಇದನ್ನೂ ಓದಿ: 140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ!

    ಈಗ ಪಾಕಿಸ್ತಾನ ಆಯೋಜಿಸಿದ ಚಾಂಪಿಯನ್ಸ್‌ ಟ್ರೋಫಿಯಲ್ಲೂ (Champions Trophy 2025) ಭಾರತ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಲೀಗ್‌ನ ಎಲ್ಲಾ 3 ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ನಲ್ಲಿ ಬಲಿಷ್ಠ ಆಸ್ಟ್ರೇಲಿಯಾವನ್ನು ಸೋಲಿಸಿತ್ತು. ಫೈನಲ್‌ನಲ್ಲಿ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿ ಮೂರನೇ ಬಾರಿ ಚಾಂಪಿಯನ್ಸ್‌ ಟ್ರೋಫಿಯನ್ನು ಎತ್ತಿಕೊಂಡಿದೆ.

    ಐಸಿಸಿ ಏಕದಿನ ವಿಶ್ವಕಪ್‌ನ 10 ಪಂದ್ಯ, ಟಿ20 ವಿಶ್ವಕಪ್‌ನ 9 ಪಂದ್ಯ, ಚಾಂಪಿಯನ್ಸ್‌ ಟ್ರೋಫಿಯ ಎಲ್ಲಾ 5 ಪಂದ್ಯಗಳನ್ನು ರೋಹಿತ್‌ ನೇತೃತ್ವದಲ್ಲೇ ಭಾರತ ಜಯಗಳಿಸಿದೆ. ಈ ಮೂಲಕ ಐಸಿಸಿ ಟೂರ್ನಿಯ ಒಟ್ಟು 24 ಪಂದ್ಯಗಳ ಪೈಕಿ 23 ಪಂದ್ಯಗಳನ್ನು ರೋಹಿತ್‌ ಜಯಗಳಿಸಿದ್ದಾರೆ.

    2022 ರಲ್ಲಿ ರೋಹಿತ್‌ ನೇತೃತ್ವದಲ್ಲೇ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಭಾರತ ಸೆಮಿಫೈನಲ್‌ ವರೆಗೆ ಬಂದಿತ್ತು. ಲೀಗ್‌ನ 5 ಪಂದ್ಯಗಳ ಪೈಕಿ 4 ರಲ್ಲಿ ಜಯಗಳಿಸಿದ್ದ ಭಾರತ ಸೆಮಿಯಲ್ಲಿ ಇಂಗ್ಲೆಂಡ್‌ ವಿರುದ್ಧ ಸೋತು ಟೂರ್ನಿಯಿಂದ ನಿರ್ಗಮಿಸಿತ್ತು.

    ಇಂದಿನ ಪಂದ್ಯದಲ್ಲಿ 76 ರನ್‌(83 ಎಸೆತ, 7 ಬೌಂಡರಿ, 3 ಸಿಕ್ಸ್‌) ಹೊಡೆದು ಭಾರತಕ್ಕೆ ಕಪ್‌ ತಂದುಕೊಡುವಲ್ಲಿ ಪ್ರಧಾನ ಪಾತ್ರ ವಹಿಸಿದ್ದ ರೋಹಿತ್‌ ಶರ್ಮಾ ಅವರಿಗೆ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.

  • 140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ!

    140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ!

    – 25 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಭಾರತ

    ದುಬೈ: ಕೊನೆಗೂ 140 ಕೋಟಿ ಭಾರತೀಯರ ಕನಸು ನನಸಾಗಿದೆ. ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ (Champions Trophy) ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.

    ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು.

    1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

    ದಾಖಲೆಯ ಶತಕದ ಜೊತೆಯಾಟ:
    ಚೇಸಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (Rohit Sharma), ಶುಭಮನ್ ಗಿಲ್ ಸ್ಫೋಟಕ ಇನ್ನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. 112 ಎಸೆತಗಳಲ್ಲಿ ಈ ಜೋಡಿ 105 ರನ್‌ಗಳ ಜೊತೆಯಾಟ ನೀಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಫೈನಲ್ ಪಂದ್ಯದಲ್ಲಿ ಶತಕದ ಜೊತೆಯಾಟ ಎಂಬ ದಾಖಲೆಗೂ ರೋಹಿತ್ ಗಿಲ್ ಪಾತ್ರರಾದರು. ಗಿಲ್ 50 ಎಸೆತಗಳಲ್ಲಿ 31 ರನ್ ಗಳಿಸಿ ಔಟಾದರು. ಈ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಎಲ್‌ಬಿಡಬ್ಲ್ಯೂಗೆ ತುತ್ತಾದರು. ಆ ಬಳಿಕವೂ ಕಿವೀಸ್ ಬೌಲರ್‌ಗಳನ್ನು ಬೆಂಡೆತ್ತಿದ ರೋಹಿತ್ 76 ರನ್ (83 ಎಸೆತ, 3 ಸಿಕ್ಸರ್, 7 ಬೌಂಡರಿ) ಗಳಿಸಿ ಪೆವಿಲಿಯನ್‌ಗೆ ಮರಳಿದರು.

    ಇನ್ನಿಂಗ್ಸ್‌ ಕಟ್ಟಿದ ಶ್ರೇಯಸ್‌:
    26.1 ಓವರ್‌ಗಳಲ್ಲಿ 122 ರನ್‌ಗಳಿಗೆ ಭಾರತ 3 ವಿಕೆಟ್‌ ಕಳೆದುಕೊಂಡಿದ್ದಾಗ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಶ್ರೇಯಸ್‌ ಅಯ್ಯರ್‌ ಯಶಸ್ವಿಯಾದರು. 62 ಎಸೆತಗಳಲ್ಲಿ 48 ರನ್‌ (2 ಸಿಕ್ಸರ್‌, 2 ಬೌಂಡರಿ) ಬಾರಿಸಿದ್ರು. ಇದೇ ವೇಳೆ ಶ್ರೇಯಸ್‌ಗೆ ಜೊತೆಯಾಗಿ ಎಚ್ಚರಿಕೆಯ ಆಟವಾಡಿದ ಅಕ್ಷರ್‌ ಪಟೇಲ್‌ 40 ಎಸೆತಗಳಲ್ಲಿ 29 ರನ್‌ (1 ಸಿಕ್ಸರ್‌, 1 ಬೌಂಡರಿ) ಕೊಡುಗೆ ನೀಡಿದರು.

    ರಾಹುಲ್‌ ಎಚ್ಚರಿಕೆಯ ಆಟ:
    ಇನ್ನೂ ಲೀಗ್‌ ಸುತ್ತಿನ ಪಂದ್ಯಗಳಲ್ಲಿ ಕಳಪೆ ಪ್ರದರ್ಶನದಿಂದ ಭಾರೀ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆ.ಎಲ್‌ ರಾಹುಲ್‌ ಸೆಮಿಫೈನಲ್‌ನಂತೆ ಫೈನಲ್‌ ಪಂದ್ಯದಲ್ಲೂ ಎಚ್ಚರಿಕೆಯ ಆಟವಾಡಿದರು. 33 ಎಸೆತಗಳಲ್ಲಿ 1 ಸಿಕ್ಸರ್‌, 1 ಬೌಂಡರಿ ಸಹಿತ 34 ರನ್‌ ಗಳಿಸಿ ಟೀಂ ಇಂಡಿಯಾ ಗೆಲುವಿಗೆ ನೆರವಾದರು. ಇದರೊಂದಿಗೆ ಪಾಂಡ್ಯ ಜವಾಬ್ದಾರಿಯುತ 18 ರನ್‌, ರವೀಂದ್ರ ಜಡೇಜಾ 3 ರನ್‌ಗಳ ಕೊಡುಗೆ ನೀಡಿದರು. ಹೆಚ್ಚುವರಿಯಾಗಿ 8 ರನ್‌ ತಂಡಕ್ಕೆ ಸೇರ್ಪಡೆಯಾಯ್ತು.

    ನ್ಯೂಜಿಲೆಂಡ್‌ ಪರ ಮಿಚೆಲ್‌ ಸ್ಯಾಂಟ್ನರ್‌, ಮೈಕಲ್‌ ಬ್ರೇಸ್‌ವೆಲ್‌ ತಲಾ 2 ವಿಕೆಟ್‌ ಕಿತ್ತರೆ, ಕೈಲ್‌ ಜೇಮಿಸನ್‌, ರಚಿನ್‌ ರವೀಂದ್ರ ತಲಾ ಒಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಮಿಚೆಲ್ ಸ್ಯಾಂಟ್ನರ್ ನಾಯಕತ್ವದ ಕಿವೀಸ್, ಫೀಲ್ಡಿಂಗ್ ಮಾಡುವ ಅವಕಾಶವನ್ನು ಭಾರತಕ್ಕೆ ಬಿಟ್ಟುಕೊಟ್ಟಿತು. ಆರಂಭಿಕರಾಗಿ ಕಣಕ್ಕಿಳಿದ ರಚಿನ್ ರವೀಂದ್ರ ಹಾಗೂ ವಿಲ್ ಯಂಗ್ ಜೋಡಿ ಸ್ಪೋಟಕ ಇನ್ನಿಂಗ್ಸ್ ಕಟ್ಟುವ ಪ್ರಯತ್ನಕ್ಕೆ ಮುಂದಾದರು. ಅಂತೆಯೇ ಮೊದಲ ವಿಕೆಟ್‌ಗೆ 47 ಎಸೆತಗಳಲ್ಲಿ 57 ರನ್‌ಗಳ ಜೊತೆಯಾಟ ನೀಡಿತ್ತು. ಆದ್ರೆ ವಿಲ್ ಯಂಗ್ ವಿಕೆಟ್ ಬೀಳುತ್ತಿದ್ದಂತೆ ಅಗ್ರ ಕ್ರಮಾಂಕದ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದರು. ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದ್ರು.

    ಜೀವ ತುಂಬಿದ ಮಿಚೆಲ್, ಫಿಲಿಪ್ಸ್ ಜೊತೆಯಾಟ:
    ಇನ್ನೂ 23.2 ಓವರ್‌ಗಳಲ್ಲಿ 108 ರನ್‌ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಕಿವೀಸ್‌ಗೆ ಗ್ಲೇನ್ ಫಿಲಿಪ್ಸ್ ಹಾಗೂ ಡೇರಿಲ್ ಮಿಚೆಲ್ ಅವರ ಜೊತೆಯಾಟ ಜೀವ ತುಂಬಿತು. ಟೀಂ ಇಂಡಿಯಾ ಸ್ಪಿನ್ನರ್‌ಗಳ ಎದುರು ರನ್ ಕದಿಯಲು ತಿಣುಕಾಡಿದ ಈ ಜೋಡಿ 87 ಎಸೆತಗಳಲ್ಲಿ 57 ರನ್ ಗಳಿಸಿತು. ಇದರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಟಾಮ್ ಲಾಥಮ್, ಮಿಚೆಲ್ ಜೋಡಿಯಿಂದ 33 ರನ್ ಹಾಗೂ ಮೈಕಲ್ ಬ್ರೇಸ್‌ವೆಲ್ ಜೊಡಿಯಿಂದ 46 ರನ್‌ಗಳ ಸಣ್ಣ ಪ್ರಮಾಣದ ಜೊತೆಯಾಟ ಕಿವೀಸ್ ತಂಡ 200 ರನ್‌ಗಳ ಗಡಿದಾಟಲು ನೆರವಾಯಿತು.

    ಕಿವೀಸ್ ಪರ ಡೇರಿಲ್ ಮಿಚೆಲ್ 63 ರನ್ (101 ಎಸೆತ, 3 ಬೌಂಡರಿ), ಮೈಕಲ್ ಬ್ರೇಸ್‌ವೆಲ್ ಅಜೇಯ 53 ರನ್ (40 ಎಸೆತ, 2 ಸಿಕ್ಸರ್, 3 ಬೌಂಡರಿ), ರಚಿನ್ ರವೀಂದ್ರ 37 ರನ್, ಗ್ಲೆನ್ ಫಿಲಿಪ್ಸ್ 34 ರನ್, ವಿಲ್ ಯಂಗ್ 15 ರನ್, ಕೇನ್ ವಿಲಿಯಮ್ಸನ್ 11 ರನ್, ಟಾಮ್ ಲಾಥಮ್ 14 ರನ್, ಮಿಚೆಲ್ ಸ್ಯಾಂಟ್ನರ್ 8 ರನ್, ಕೊಡುಗೆ ನೀಡಿದರು.

    ಟೀಂ ಇಂಡಿಯಾ ಪರ ವರುಣ್ ಚಕ್ರವರ್ತಿ, ಕುಲ್‌ದೀಪ್ ಯಾದವ್ ತಲಾ 2 ವಿಕೆಟ್ ಕಿತ್ತರೆ, ಮೊಹಮ್ಮದ್ ಶಮಿ, ರವೀಂದ್ರ ಜಡೇಜಾ ತಲಾ ಒಂದೊAದು ವಿಕೆಟ್ ಪಡೆದು ಮಿಂಚಿದರು.

  • Champions Trophy | ಕೊನೆಯಲ್ಲಿ ಬ್ರೇಸ್‌ವೆಲ್‌ ಸ್ಫೋಟಕ ಫಿಫ್ಟಿ – ಭಾರತದ ಗೆಲುವಿಗೆ 252 ರನ್‌ ಗುರಿ

    Champions Trophy | ಕೊನೆಯಲ್ಲಿ ಬ್ರೇಸ್‌ವೆಲ್‌ ಸ್ಫೋಟಕ ಫಿಫ್ಟಿ – ಭಾರತದ ಗೆಲುವಿಗೆ 252 ರನ್‌ ಗುರಿ

    ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ (Champions Trophy Final) ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ ತಂಡ 7 ವಿಕೆಟ್‌ ನಷ್ಟಕ್ಕೆ 251 ರನ್‌ ಗಳಿಸಿದೆ. ಈ ಮೂಲಕ ಭಾರತಕ್ಕೆ (Team India) 252 ರನ್‌ಗಳ ಗುರಿ ನೀಡಿದೆ.

    ಟೀಂ ಇಂಡಿಯಾ ಸ್ಪಿನ್‌ ಬೌಲರ್‌ಗಳ ಘಾತುಕ ದಾಳಿಯ ಹೊರತಾಗಿಯೂ ಮೈಕಲ್‌ ಬ್ರೇಸ್‌ವೆಲ್‌ (Michael Bracewell) ಹಾಗೂ ಡೇರಿಲ್‌ ಮಿಚೆಲ್‌ (Daryl Mitchell) ಅವರ ಅಮೋಘ ಅರ್ಧಶತಕಗಳ ನೆರವಿನಿಂದ 250 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಗಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಮಿಚೆಲ್‌ ಸ್ಯಾಂಟ್ನರ್‌ ನಾಯಕತ್ವದ ಕಿವೀಸ್‌, ಫೀಲ್ಡಿಂಗ್‌ ಮಾಡುವ ಅವಕಾಶವನ್ನು ಭಾರತಕ್ಕೆ ಬಿಟ್ಟುಕೊಟ್ಟಿತು. ಆರಂಭಿಕರಾಗಿ ಕಣಕ್ಕಿಳಿದ ರಚಿನ್‌ ರವೀಂದ್ರ (Rachin Ravindra) ಹಾಗೂ ವಿಲ್‌ ಯಂಗ್‌ ಜೋಡಿ ಸ್ಪೋಟಕ ಇನ್ನಿಂಗ್ಸ್‌ ಕಟ್ಟುವ ಪ್ರಯತ್ನಕ್ಕೆ ಮುಂದಾದರು. ಅಂತೆಯೇ ಮೊದಲ ವಿಕೆಟ್‌ಗೆ 47 ಎಸೆತಗಳಲ್ಲಿ 57 ರನ್‌ಗಳ ಜೊತೆಯಾಟ ನೀಡಿತ್ತು. ಆದ್ರೆ ವಿಲ್‌ ಯಂಗ್‌ ವಿಕೆಟ್‌ ಬೀಳುತ್ತಿದ್ದಂತೆ ಅಗ್ರ ಕ್ರಮಾಂಕದ ಆಟಗಾರರು ಪೆವಿಲಿಯನ್‌ ಪರೇಡ್‌ ನಡೆಸಿದರು. ರಚಿನ್‌ ರವೀಂದ್ರ, ಕೇನ್‌ ವಿಲಿಯಮ್ಸನ್‌ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಒಪ್ಪಿಸಿದ್ರು.

    ಜೀವ ತುಂಬಿದ ಮಿಚೆಲ್‌, ಫಿಲಿಪ್ಸ್‌ ಜೊತೆಯಾಟ:
    ಇನ್ನೂ 23.2 ಓವರ್‌ಗಳಲ್ಲಿ 108 ರನ್‌ಗಳಿಗೆ ಪ್ರಮುಖ ನಾಲ್ಕು ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಕಿವೀಸ್‌ಗೆ ಗ್ಲೇನ್‌ ಫಿಲಿಪ್ಸ್‌ ಹಾಗೂ ಡೇರಿಲ್‌ ಮಿಚೆಲ್‌ ಅವರ ಜೊತೆಯಾಟ ಜೀವ ತುಂಬಿತು. ಟೀಂ ಇಂಡಿಯಾ ಸ್ಪಿನ್ನರ್‌ಗಳ ಎದುರು ರನ್‌ ಕದಿಯಲು ತಿಣುಕಾಡಿದ ಈ ಜೋಡಿ 87 ಎಸೆತಗಳಲ್ಲಿ 57 ರನ್‌ ಗಳಿಸಿತು. ಇದರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಟಾಮ್‌ ಲಾಥಮ್‌, ಮಿಚೆಲ್‌ ಜೋಡಿಯಿಂದ 33 ರನ್‌ ಹಾಗೂ ಮೈಕಲ್‌ ಬ್ರೇಸ್‌ವೆಲ್‌ ಜೊಡಿಯಿಂದ 46 ರನ್‌ಗಳ ಸಣ್ಣ ಪ್ರಮಾಣದ ಜೊತೆಯಾಟ ಕಿವೀಸ್‌ ತಂಡ 200 ರನ್‌ಗಳ ಗಡಿದಾಟಲು ನೆರವಾಯಿತು.

    ಕಿವೀಸ್‌ ಪರ ಡೇರಿಲ್‌ ಮಿಚೆಲ್‌ 63 ರನ್‌ (101 ಎಸೆತ, 3 ಬೌಂಡರಿ), ಮೈಕಲ್‌ ಬ್ರೇಸ್‌ವೆಲ್‌ ಅಜೇಯ 53 ರನ್‌ (40 ಎಸೆತ, 2 ಸಿಕ್ಸರ್‌, 3 ಬೌಂಡರಿ), ರಚಿನ್‌ ರವೀಂದ್ರ 37 ರನ್‌, ಗ್ಲೆನ್‌ ಫಿಲಿಪ್ಸ್‌ 34 ರನ್‌, ವಿಲ್‌ ಯಂಗ್‌ 15 ರನ್‌, ಕೇನ್‌ ವಿಲಿಯಮ್ಸನ್‌ 11 ರನ್‌, ಟಾಮ್‌ ಲಾಥಮ್‌ 14 ರನ್‌, ಮಿಚೆಲ್‌ ಸ್ಯಾಂಟ್ನರ್‌ 8 ರನ್‌, ಕೊಡುಗೆ ನೀಡಿದರು.

    ಟೀಂ ಇಂಡಿಯಾ ಪರ ವರುಣ್‌ ಚಕ್ರವರ್ತಿ, ಕುಲ್‌ದೀಪ್‌ ಯಾದವ್‌ ತಲಾ 2 ವಿಕೆಟ್‌ ಕಿತ್ತರೆ, ಮೊಹಮ್ಮದ್‌ ಶಮಿ, ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • IND vs NZ | ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಬಳಿಕ ರೋಹಿತ್‌ ಶರ್ಮಾ ನಿವೃತ್ತಿ…?

    IND vs NZ | ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಬಳಿಕ ರೋಹಿತ್‌ ಶರ್ಮಾ ನಿವೃತ್ತಿ…?

    ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್‌ (Champions Trophy Final) ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

    ಹೌದು. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್‌ ಗವಾಸ್ಕರ್‌ ಟ್ರೋಫಿಯಲ್ಲಿ ಭಾರತ ತಂಡ ಹೀನಾಯವಾಗಿ ಸೋತ ಬಳಿಕವೇ ರೋಹಿತ್‌ ಭವಿಷ್ಯದ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಅಲ್ಲದೇ ರೋಹಿತ್‌ ಶರ್ಮಾ ನಿವೃತ್ತಿ ಘೋಷಿಸಲಿದ್ದಾರೆ ಎಂದು ಕೆಲ ವರದಿಗಳೂ ಹೇಳಿದ್ದವು. ಇದೀಗ ಚಾಂಪಿಯನ್ಸ್‌ ಟ್ರೋಫಿ ಬಳಿಕ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳುವುದು ಖಚಿತವಾಗಿದೆ ಎನ್ನಲಾಗುತ್ತಿದೆ. ಕಳೆದ ವರ್ಷ ಟಿ20 ವಿಶ್ವಕಪ್‌ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ರೋಹಿತ್‌ ಗುಡ್‌ಬೈ ಹೇಳಿದ್ದರು.

    ಏತನ್ಮಧ್ಯೆ ಭಾರತದ ಮುಂದಿನ ಟೆಸ್ಟ್ ಸರಣಿ ಜೂನ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿದ್ದು, ಭಾರತದ ಮುಂದಿನ ಪ್ರಮುಖ ಏಕದಿನ ಟೂರ್ನಿ 2027ರ ಏಕದಿನ ವಿಶ್ವಕಪ್ ಆಗಿದೆ. ಅದಕ್ಕಿನ್ನೂ ಬಹಳ ಸಮಯವಿರುವ ಕಾರಣ ಭಾರತ ತಂಡದಲ್ಲಿ ಪರಿವರ್ತನೆಯ ಸಮಯ ಬಂದಿದೆ ಎಂಬ ಚಿಂತನೆ ನಡೆದಿದೆ. ಇದನ್ನೂ ಓದಿ: ಭಾರತ-ಕಿವೀಸ್‌ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯಕ್ಕೆ 5,000 ಕೋಟಿ ಬೆಟ್ಟಿಂಗ್‌ – ಅಂಡರ್‌ವರ್ಲ್ಡ್‌ ನಂಟು

    ರೋಹಿತ್ ನಿರ್ಲಕ್ಷಿಸಲು ಸಾಧ್ಯವೇ ಇಲ್ಲ..
    ರೋಹಿತ್ ಶರ್ಮಾ ವಯಸ್ಸಿನ ಹೊರತಾಗಿಯೂ ಅವರ ಸಾಮರ್ಥ್ಯ ನಿರ್ಲಕ್ಷಿಸಲು ಸಾಧ್ಯವೇ ಇಲ್ಲ. ಏಕದಿನ ಕ್ರಿಕೆಟ್ ನಲ್ಲಿ 3 ದ್ವಿಶತಕ ಸಿಡಿಸಿದ ಏಕೈಕ ಆಟಗಾರ ರೋಹಿತ್ ಶರ್ಮಾ. ಆರಂಭಿಕ ಆಟಗಾರನಾಗಿ ರೋಹಿತ್ ಶರ್ಮಾ ನೀಡುವ ಸ್ಫೋಟಕ ಆರಂಭವನ್ನು ನಿರ್ಲಕ್ಷಿಸುವುದು ಕಷ್ಟಕರ ಎನ್ನಲಾಗುತ್ತಿದೆ.

    ಸೋತರೆ ನಿವೃತ್ತಿ ಸಾಧ್ಯತೆ:
    ಇನ್ನೂ ಟೀಂ ಇಂಡಿಯಾದಲ್ಲಿ ಇದೀಗ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದೆ. 2027ರ ಏಕದಿನ ವಿಶ್ವಕಪ್ ಟೂರ್ನಿಯನ್ನು ಗುರಿಯಾಗಿಸಿಕೊಂಡು ಟೂರ್ನಿಗೆ ಬಲಿಷ್ಠ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಭಾರತ ತಂಡದಲ್ಲಿ ಬದಲಾವಣೆಯ ಪರ್ವ ಏಳುವ ಸಾಧ್ಯತೆ ಇದೆ. ಇದಕ್ಕೆ ದುಬೈನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್‌ ಪಂದ್ಯ ಪ್ರಮುಖ ವೇದಿಕೆಯಾಗಿ ಮಾರ್ಪಟ್ಟಿದೆ.

    ಈ ಫೈನಲ್‌ನಲ್ಲಿ ಭಾರತ-ನ್ಯೂಜಿಲೆಂಡ್ ವಿರುದ್ಧ ಸೋತರೆ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಿಂದಲೂ ನಿವೃತ್ತಿ ಹೊಂದಬಹುದು. ಆದ್ರೆ ಗೆದ್ದರೆ ರೋಹಿತ್‌ ಮುಂದಿನ ನಿರ್ಧಾರದ ಬಗ್ಗೆ ಸ್ಪಷ್ಟತೆಯಿಲ್ಲ. ಎರಡೂ ಸಂದರ್ಭಗಳಲ್ಲಿ, ನಿರ್ಧಾರವು ಸಂಪೂರ್ಣವಾಗಿ ರೋಹಿತ್ ಅವರ ಮೇಲಿರುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹರ್ಲೀನ್ ಡಿಯೋಲ್‍ ಅಬ್ಬರದ ಬ್ಯಾಟಿಂಗ್‌ಗೆ ಡೆಲ್ಲಿ ಬರ್ನ್‌ – ಗುಜರಾತ್‌ಗೆ 5 ವಿಕೆಟ್‌ಗಳ ರೋಚಕ ಜಯ

  • ಚಾಂಪಿಯನ್ಸ್‌ ಟ್ರೋಫಿ ಫೈನಲಿಗೆ ಭಾರತ – ದಾಖಲೆ ಬರೆದ ರೋಹಿತ್‌ ಶರ್ಮಾ

    ಚಾಂಪಿಯನ್ಸ್‌ ಟ್ರೋಫಿ ಫೈನಲಿಗೆ ಭಾರತ – ದಾಖಲೆ ಬರೆದ ರೋಹಿತ್‌ ಶರ್ಮಾ

    ದುಬೈ: ಚಾಂಪಿಯನ್ಸ್‌ ಫೈನಲ್‌ಗೆ ಟೀಂ ಇಂಡಿಯಾ (Team India) ಪ್ರವೇಶಿಸಿದ್ದು ಭಾರತದ ಪರ ರೋಹಿತ್‌ ಶರ್ಮಾ (Rohit Sharma) ದಾಖಲೆ ಬರೆದಿದ್ದಾರೆ.

    ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌, ವಿಶ್ವಕಪ್‌, ಟಿ20, ಚಾಂಪಿಯನ್ಸ್‌ ಟ್ರೋಫಿ (ICC Champions Trophy) ಫೈನಲ್‌ವರೆಗೆ ಟೀಂ ಇಂಡಿಯಾವನ್ನು ಮುನ್ನಡೆಸಿದ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್‌ ಶರ್ಮಾ ಪಾತ್ರವಾಗಿದ್ದಾರೆ.

    ಇಂದು ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ (Australia) 264 ರನ್‌ಗಳಿಗೆ ಆಲೌಟ್‌ ಆಗಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ 48.1 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 267 ರನ್‌ ಹೊಡೆಯುವ ಮೂಲಕ ಫೈನಲ್‌ ಪ್ರವೇಶಿಸಿತು.  ಇದನ್ನೂ ಓದಿ: ಬಲಿಷ್ಠ ಆಸ್ಟ್ರೇಲಿಯಾ ಬಗ್ಗು ಬಡಿದು ಫೈನಲ್‌ ಪ್ರವೇಶಿಸಿದ ಭಾರತ

     

    ಲಾಹೋರ್‌ನಲ್ಲಿ ಬುಧವಾರ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್‌ ಮಧ್ಯೆ ಎರಡನೇ ಸೆಮಿಫೈನಲ್‌ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ವಿಜೇತರಾದವರು ಭಾನುವಾರ ದುಬೈ ಮೈದಾನದಲ್ಲೇ ಭಾರತವನ್ನು ಎದುರಿಸಲಿದೆ.

    4 ಫೈನಲ್‌ ಪಂದ್ಯಗಳು:

    2023 – ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ನಲ್ಲಿ ಭಾರತವನ್ನು ಆಸ್ಟ್ರೇಲಿಯಾ 209 ರನ್‌ಗಳಿಂದ ಮಣಿಸಿತ್ತು. ಇದನ್ನೂ ಓದಿ: ಮೈದಾನದಲ್ಲೇ ಕುಲದೀಪ್‌ಗೆ ಕೊಹ್ಲಿ, ರೋಹಿತ್‌ ಕ್ಲಾಸ್‌!

    2023 – ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಭಾರತವನ್ನು 6 ವಿಕೆಟ್‌ಗಳಿಂದ ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಸೋತಿತ್ತು.

     

    2024 – ವೆಸ್ಟ್‌ ಇಂಡಿಸ್‌ನಲ್ಲಿ ನಡೆದ ಟಿ20 ಫೈನಲ್‌ನಲ್ಲಿ ಭಾರತ ದಕ್ಷಿಣ ಆಫ್ರಿಕಾದ ವಿರುದ್ಧ 7 ರನ್‌ಗಳ ರೋಚಕ ಜಯ ಸಾಧಿಸಿತ್ತು. ಈ ಮೂಲಕ ಎರಡನೇ ಬಾರಿ ಟಿ20 ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿತ್ತು.

    2025 – ದುಬೈನಲ್ಲಿ ನಡೆದ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾದ ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿ ಫೈನಲ್‌ ಪ್ರವೇಶಿಸಿದೆ.

     

  • ಮೈದಾನದಲ್ಲೇ ಕುಲದೀಪ್‌ಗೆ ಕೊಹ್ಲಿ, ರೋಹಿತ್‌ ಕ್ಲಾಸ್‌!

    ಮೈದಾನದಲ್ಲೇ ಕುಲದೀಪ್‌ಗೆ ಕೊಹ್ಲಿ, ರೋಹಿತ್‌ ಕ್ಲಾಸ್‌!

    ದುಬೈ: ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಸೆಮಿಫೈನಲ್‌ ಪಂದ್ಯದ ವೇಳೆ ಸ್ಪಿನ್ನರ್‌ ಕುಲದೀಪ್‌ ಯಾದವ್‌ಗೆ (Kuldeep Yadav) ವಿರಾಟ್‌ ಕೊಹ್ಲಿ (Virat Kohli) ಮತ್ತು ರೋಹಿತ್‌ ಶರ್ಮಾ (Rohit Sharma) ಮೈದಾನದಲ್ಲೇ ಕ್ಲಾಸ್‌ ಮಾಡಿದ ವಿಡಿಯೋ ಈಗ ವೈರಲ್‌ ಆಗಿದೆ.

    ಕುಲದೀಪ್‌ ಯಾದವ್‌ ಇನ್ನಿಂಗ್ಸ್‌ 32 ಓವರ್‌ ಎಸೆಯುತ್ತಿದ್ದರು. 5ನೇ ಎಸೆತವನ್ನು ಸ್ಟ್ರೈಕ್‌ನಲ್ಲಿದ್ದ ಸ್ಮಿತ್‌ ಡೀಪ್‌ ಸ್ಕ್ಯಾರ್‌ ಲೆಗ್‌ ಕಡೆ ಹೊಡೆದು ಓಡಿದರು.


    ಬಾಲ್‌ ಕೊಹ್ಲಿ ಕೈ ಸೇರಿತು. ಕೂಡಲೇ ಕೊಹ್ಲಿ ಬೌಲರ್‌ ಎಂಡ್‌ನಲ್ಲಿದ್ದ ಕುಲದೀಪ್‌ ಯಾದವ್‌ಗೆ ಚೆಂಡು ಎಸೆದರು. ಆದರೆ ಕುಲದೀಪ್‌ ಯಾದವ್‌ ಚೆಂಡು ಹಿಡಿಯಲು ಪ್ರಯತ್ನಿಸದೇ ಬಿಟ್ಟರು.  ಕೂಡಲೇ ಮಿಡ್‌ ಆಫ್‌ನಲ್ಲಿದ್ದ ರೋಹಿತ್‌ ಶರ್ಮಾ ಚೆಂಡನ್ನು ಹಿಡಿದರು.

    ಒಂದು ವೇಳೆ ರೋಹಿತ್‌ ಶರ್ಮಾ ಕವರ್‌ ಮಾಡದೇ ಇದ್ದರೆ ಸ್ಮಿತ್‌ ಇನ್ನೊಂದು ರನ್‌ ಓಡುವ ಸಾಧ್ಯತೆ ಇತ್ತು. ಸುಲಭವಾಗಿ ಹಿಡಿಯುವ ಚೆಂಡನ್ನು ಹಿಡಿಯದ್ದಕ್ಕೆ ವಿರಾಟ್‌ ಕೊಹ್ಲಿ ಗರಂ ಆದರು. ನಂತರ ರೋಹಿತ್‌ ಶರ್ಮಾ ಸಹ ಕ್ಲಾಸ್‌ ತೆಗೆದುಕೊಂಡರು.

    ಇಂದಿನ ಪಂದ್ಯದಲ್ಲಿ 8 ಓವರ್‌ ಎಸೆದ ಕುಲದೀಪ್‌ ಯಾದವ್‌ 44 ರನ್‌ ನೀಡಿದರು. ಆದರೆ ವಿಕೆಟ್‌ ಪಡೆಯಲು ವಿಫಲರಾದರು.