Tag: ರೋಹಿತ್ ಶರ್ಮಾ

  • T20 ವಿಶ್ವಕಪ್‌ಗೂ ಮುನ್ನ ರೋಹಿತ್ – ಪಾಂಡ್ಯ ಐಪಿಎಲ್ ಮುನಿಸು ಕೊನೆಗೊಂಡಿದ್ದು ಹೇಗೆ..?

    T20 ವಿಶ್ವಕಪ್‌ಗೂ ಮುನ್ನ ರೋಹಿತ್ – ಪಾಂಡ್ಯ ಐಪಿಎಲ್ ಮುನಿಸು ಕೊನೆಗೊಂಡಿದ್ದು ಹೇಗೆ..?

    – ಮೊದಲ ದಿನ ಇಬ್ಬರೂ ಮಾತನಾಡಿರಲಿಲ್ಲ!

    ಮುಂಬೈ: 2024ರ ಐಪಿಎಲ್‌ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ತಂಡದ ಕ್ಯಾಪ್ಟನ್ಸಿ ವಿಚಾರವಾಗಿ ರೋಹಿತ್‌-ಹಾರ್ದಿಕ್‌ ಪಾಂಡ್ಯ ನಡುವಿನ ಕಿತ್ತಾಟ ಚರ್ಚೆಗೆ ಗ್ರಾಸವಾಗಿತ್ತು. ಇವರಿಬ್ಬರ ಕಿತ್ತಾಟ ಟಿ20 ವಿಶ್ವಕಪ್‌ನಲ್ಲೂ (T20 World Cup 2024) ಮುಂದುವರಿಯಲಿದೆ ಎಂದೇ ಅಭಿಮಾನಿಗಳು ಭಾವಿಸಿದ್ದರು. ಆದ್ರೆ ಅದಕ್ಕೆ ವಿರುದ್ಧವಾಗಿ ನಡೆದುಕೊಂಡ ಪಾಂಡ್ಯ-ರೋಹಿತ್‌ ಟ್ರೋಫಿ ಗೆದ್ದು ತರುವಲ್ಲಿ ಯಶಸ್ವಿಯಾದರು. ಅಷ್ಟಕ್ಕೂ ಇವರಿಬ್ಬರ ಮುನಿಸು ಕೊನೆಗೊಂಡಿದ್ದು ಹೇಗೆ? ಅನ್ನೋ ಆಸಕ್ತಿದಾಯಕ ವಿಚಾರವನ್ನ ಹಿರಿಯ ಪತ್ರಕರ್ತ ವಿಮಲ್ ಕುಮಾರ್ ರಿವೀಲ್‌ ಮಾಡಿದ್ದಾರೆ.

    ಹೌದು. 2024ರ ಐಪಿಎಲ್‌ ಆವೃತ್ತಿಯಲ್ಲಿ ಗುಜರಾತ್‌ ಟೈಟಾನ್ಸ್‌ನಲ್ಲಿದ್ದ ಪಾಂಡ್ಯ (Hardik Pandya) ಅವರನ್ನು ಕರೆ ತಂದು ಮುಂಬೈ ತಂಡದ ನಾಯಕತ್ವದ ಹೊಣೆ ನೀಡಲಾಯಿತು. ಆದ್ರೆ‌ 13 ವರ್ಷಗಳಿಂದ ತಂಡಕ್ಕೆ 5 ಬಾರಿ ಟ್ರೋಫಿ ತಂದುಕೊಟ್ಟ ರೋಹಿತ್‌ (Rohit Sharma) ಅವರನ್ನ ನಾಯಕ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಅಭಿಮಾನಿಗಳು ಆಕ್ರೋಶಗೊಂಡಿದ್ದರು. ಪಾಂಡ್ಯ ವಿರುದ್ಧ ಮುಗಿಬಿದ್ದಿದ್ದರು, ಮೈದಾನದಲ್ಲಿ ನಾಯಿಯೊಂದು ಪ್ರವೇಶಿಸಿದಾಗ ಹಾರ್ದಿಕ್‌ ಹಾರ್ದಿಕ್‌ ಅಂತ ಕೂಗಿ ಅವಮಾನಿಸಿದ್ದರು. ಇದನ್ನೂ ಓದಿ: IPL 2025 | ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ?

    ಇಷ್ಟೆಲ್ಲಾ ಆಗಿದ್ದರೂ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಪಾಂಡ್ಯ ನಿರ್ಣಾಯಕ ಪಾತ್ರ ವಹಿಸಿದರು. ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಭಾರತ ಟಿ20 ವಿಶ್ವಕಪ್‌ ಗೆಲ್ಲಲು ಸಹಕಾರಿಯಾದರು. ಆದರೀಗ ರೋಹಿತ್‌-ಪಾಂಡ್ಯ ಅವರ ಮುನಿಸು ಕೊನೆಗೊಂಡಿದ್ದು ಹೇಗೆ ಅನ್ನುವ ಆಸಕ್ತಿದಾಯಕ ವಿಚಾರವನ್ನು ಹಿರಿಯ ಪತ್ರಕರ್ತ ವಿಮಲ್‌ ಕುಮಾರ್‌ (Vimal Kumar) ಹಂಚಿಕೊಂಡಿದ್ದಾರೆ.

    ಸಂವಾದವೊಂದರಲ್ಲಿ ಮಾತನಾಡಿದ ವಿಮಲ್‌ ಕುಮಾರ್‌, ಟಿ20 ವಿಶ್ವಕಪ್‌ ಅಭ್ಯಾಸ ಪಂದ್ಯದ ವೇಳೆ ನೆಟ್ಸ್‌ಗೆ ಹೋದಾಗ ಹಾರ್ದಿಕ್‌ ಮತ್ತು ರೋಹಿತ್‌ ಮಧ್ಯೆ ಏನು ನಡೆಯುತ್ತಿದೆ ಎಂಬುದನ್ನು ಗಮನಿಸಿದೆ. ಮೊದಲ ದಿನ ಅವರಿಬ್ಬರೂ ಮಾತನಾಡಿದ್ದು ಕಂಡುಬರಲಿಲ್ಲ. ಆದ್ರೆ 2ನೇ ದಿನ ಅವರಿಬ್ಬರು ಸಂಭಾಷಣೆ ನಡೆಸುತ್ತಿದ್ದ ರೀತಿ ನೋಡಿ ನನಗೆ ತುಂಬಾ ಖುಷಿ ಆಯ್ತು. ಹಾರ್ದಿಕ್‌ ಪಾಂಡ್ಯ, ರೋಹಿತ್‌ ಜೊತೆಗೆ ಮಾತನಾಡುತ್ತಿದ್ದ ರೀತಿ ನೋಡಿ ನನ್ನ ಕಣ್ಣನ್ನು ನಾನೇ ನಂಬಲು ಸಾಧ್ಯವಾಗಲಿಲ್ಲ. ಇಬ್ಬರೂ ಒಬ್ಬರಿಗೊಬ್ಬರು ಸಲಹೆ ನೀಡುತ್ತಿದ್ದರು. ಆಗ ತಂಡದ ಪ್ರದರ್ಶನದ ಬಗ್ಗೆ ಸಂಪೂರ್ಣ ವಿಶ್ವಾಸ ಮೂಡಿತು ಅಂತ ಭಾವುಕರಾಗಿದ್ದಾರೆ.

    ಒಬ್ಬರಿಗೊಬ್ಬರು ಸಲಹೆ ನೀಡುತ್ತಾ ಇಬ್ಬರೂ ತಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುತ್ತಿದ್ದರು. ಅಲ್ಲದೇ ಡ್ರೆಸ್ಸಿಂಗ್ ರೂಮ್‌ನ ವಾತಾವರಣವೂ ಸಹ ಇದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಒಟ್ಟಿನಲ್ಲಿ ಭಾರತ ತಂಡದ ಸಲುವಾಗಿ ಇವರಿಬ್ಬರು ಒಂದಾದರು. ಇದರ ಕ್ರೆಡಿಟ್‌ ಏನಿದ್ದರೂ ಅಂದಿನ ಕೋಚ್‌ ರಾಹುಲ್‌ ದ್ರಾವಿಡ್‌ ಅವರಿಗೆ ಸೇರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: IPL 2025 | ಲಕ್ನೋ ಸೂಪರ್‌ ಜೈಂಟ್ಸ್‌ ತಂಡಕ್ಕೆ ನೂತನ ಮೆಂಟರ್‌ ಆಗಿ ಜಹೀರ್‌ ಖಾನ್‌ ನೇಮಕ

    ಮ್ಯಾಚ್‌ಗೆ ಇನ್ನೂ ಮೂರು ದಿನ ಬಾಕಿಯಿರುವಂತೆಯೇ ಅವರಿಬ್ಬರ ಮುನಿಸು ಕೊನೆಗೊಂಡಿತು. ಬಳಿಕ ಸಮಾನಾಂತರವಾಗಿ ಇಬ್ಬರು ಬ್ಯಾಟ್‌ ಬೀಸಲು ಶುರು ಮಾಡಿದರು. ರೋಹಿತ್‌ ಬ್ಯಾಟಿಂಗ್‌ನಲ್ಲಿ, ಪಾಂಡ್ಯ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಗಮನ ಸೆಳೆದರು. ಆ ವಾತಾವರಣವನ್ನು ನಾನು ನೋಡಿ ಬಹಳ ಖುಷಿಪಟ್ಟೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಶಕೀಬ್‌ ಬ್ಯಾನ್‌ ಮಾಡಿ – ಬಾಂಗ್ಲಾ ಕ್ರಿಕೆಟ್ ‌ಮಂಡಳಿಗೆ ನೋಟಿಸ್‌

    2025ರ ಐಪಿಎಲ್‌ ಮೊದಲ ಪಂದ್ಯಕ್ಕೆ ಪಾಂಡ್ಯ ಬ್ಯಾನ್‌:
    2024ರ ಐಪಿಎಲ್‌ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧದ ಲೀಗ್‌ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್‌ ಕಾರಣ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್‌ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ 1 ಪಂದ್ಯದಿಂದ ನಿಷೇಧ ಶಿಕ್ಷೆಗೆ ಗುರಿಯಾಗಿದ್ದಾರೆ. ಇದರ ಜೊತೆಗೆ ಮುಂಬೈ ಇಂಡಿಯನ್ಸ್ ತಂಡದ ಆಟಗಾರರಿಗೆ 12 ಲಕ್ಷ ರೂ. ದಂಡ ಅಥವಾ ಪಂದ್ಯದ ಸಂಭಾವನೆಯಲ್ಲಿ ಶೇ.50 ರಷ್ಟು ದಂಡವನ್ನು ವಿಧಿಸಲಾಗಿದೆ. ಆದ್ದರಿಂದ 2025ರ ಐಪಿಎಲ್‌ ಆವೃತ್ತಿಯ ಮೊದಲ ಪಂದ್ಯದಿಂದ ಪಾಂಡ್ಯ ಹೊರಗುಳಿಯಲಿದ್ದಾರೆ.

  • IPL 2025 | ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ?

    IPL 2025 | ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ?

    ಮುಂಬೈ: ಐಪಿಎಲ್‌ ಟೂರ್ನಿಯಲ್ಲಿ ಬಳಕೆಯಾಗುತ್ತಿರುವ ಇಂಪ್ಯಾಕ್ಟ್‌ ಪ್ಲೇಯರ್‌ ನಿಮಯ (Impact Player Rule) ಮತ್ತೆ ಬಿಸಿಬಿಸಿ ಚರ್ಚೆಯಲ್ಲಿದೆ.

    2024ರ ಐಪಿಎಲ್‌ ಟೂರ್ನಿ ಬಳಿಕ ರೋಹಿತ್‌ ಶರ್ಮಾ (Rohit Sharma) ಸೇರಿದಂತೆ ಅನೇಕರು ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮದ ಬಗ್ಗೆ ಆಕ್ಷೇಪ ಹೊರಹಾಕಿದ್ದರು. ಮುಂದಿನ ಐಪಿಎಲ್‌ನಲ್ಲಿ ಇಂಪ್ಯಾಕ್ಟ್‌ ನಿಯಮ ಕೈಬಿಡುವಂತೆ ಒತ್ತಾಯಗಳೂ ಕೇಳಿಬಂದಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಧ್ಯಕ್ಷ ಅರುಣ್ ಧುಮಾಲ್, ರೋಹಿತ್‌ ಶರ್ಮಾ ಈ ಹಿಂದೆಯೂ ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮದ ನ್ಯೂನತೆ ತೋರಿಸಿದ್ದಾರೆ. ಪ್ರತಿಯೊಂದು ನಿಯಮಕ್ಕೂ ಅದರದ್ದೇ ಆದ ಸಾಧಕ ಬಾಧಕಗಳಿವೆ. ಪ್ರಸ್ತುತ ಐಪಿಎಲ್‌ ಸೀಸನ್‌ ಮುಗಿದ ಬಳಿಕ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಈ ನಿಯಮದ ಕುರಿತು ಪರಿಶೀಲಿಸಲಿದೆ ಎಂದು ಹೇಳಿದ್ದರು.

    ಈ ನಡುವೆ ಟೀಂ ಇಂಡಿಯಾದ ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌ (Ravichandran Ashwin), ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮದ ಬಗ್ಗೆ ಬ್ಯಾಟ್‌ ಬೀಸಿದ್ದಾರೆ. ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮವು ತುಂಬಾ ಕೆಟ್ಟದ್ದಲ್ಲ ಅಂತ ನಾನು ಭಾವಿಸುತ್ತೇನೆ. ಈ ನಿಯಮದಿಂದ ಆಲ್‌ರೌಂಡರ್‌ಗಳನ್ನ ನಿರುತ್ಸಾಹಗೊಳಿಸುವುದಿಲ್ಲ. ಹೊಸ ತನಕ್ಕೆ ಅವಕಾಶ ನೀಡುವ ಜೊತೆಗೆ, ಆಟವನ್ನು ಇನ್ನಷ್ಟು ಉತ್ತಮಗೊಳಿಸುತ್ತದೆ ಅಂತ ಹೇಳಿದ್ದಾರೆ. ಅದಕ್ಕೆ ಉದಾಹರಣೆಯನ್ನೂ ನೀಡಿದ್ದಾರೆ.

    2024ರ ಕ್ವಾಲಿಫೈಯರ್‌-2ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ (Rajasthan Royals) ತಂಡವನ್ನು ಎದುರಿಸಿತ್ತು. ಪ್ಯಾಟ್‌ ಕಮ್ಮಿನ್ಸ್‌ ನಾಯಕತ್ವದ ಸನ್‌ ರೈಸರ್ಸ್‌ (Sunrisers Hyderabad) ತಂಡವು 9 ವಿಕೆಟ್‌ಗೆ 175 ರನ್‌ ಗಳಿಸಿತ್ತು. ರಾಜಸ್ಥಾನ್‌ ತಂಡ 36 ರನ್‌ಗಳಿಂದ ಸೋಲು ಕಂಡಿತು. ಈ ಪಂದ್ಯದಲ್ಲಿ ಶಹಬಾಜ್‌ ಅಹ್ಮದ್‌ ಇಂಪ್ಯಾಕ್ಟ್‌ ಆಟಗಾರನಾಗಿ ಕಣಕ್ಕಿಳಿದಿದ್ದರು. ಬ್ಯಾಟಿಂಗ್‌ನಲ್ಲಿ 18 ರನ್‌ ಗಳಿಸಿ ಬೌಲಿಂಗ್‌ನಲ್ಲಿ 3 ಪ್ರಮುಖ ವಿಕೆಟ್‌ ಕಿತ್ತು, ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದರು. ಈ ನಿಯಮ ಇರುವುದರಿಂದಲೇ ಬಹಳ ಆಟಗಾರರು ತಮ್ಮ ಪ್ರತಿಭೆ ತೋರಿಸಲು ಸಾಧ್ಯವಾಗಿದೆ. ಮುಖ್ಯವಾಗಿ ಇಂಪ್ಯಾಕ್ಟ್‌ ನಿಯಮ ಇಲ್ಲದೇ ಇದ್ದಿದ್ದರೇ, ಧ್ರುವ್‌ ಜುರೆಲ್‌, ಶಿವಂ ದುಬೆ, ಶಬಹಾಜ್‌ ಅಹ್ಮದ್‌ ಅಂತಹ ಆಟಗಾರರು ಎಂದಿಗೂ ಅವಕಾಶ ಪಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಅಶ್ವಿನ್‌ ಹೇಳಿದ್ದಾರೆ.

    ಅಲ್ಲದೇ ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಅಭಿಷೇಕ್‌ ಪೋರೆಲ್‌ ಇಂಪ್ಯಾಕ್ಟ್‌ ಆಟಗಾರನಾದಮೇಲೆ ಆರಂಭಿಕನಾಗಿ ಕಣಕ್ಕಿಳಿದು ಅಬ್ಬರಿಸಿದ್ದರು.

    ಏನಿದು ಇಂಪ್ಯಾಕ್ಟ್ ಪ್ಲೇಯರ್ ನಿಯಮ?
    ಇಂಪ್ಯಾಕ್ಟ್ ಪ್ಲೇಯರ್ ಎಂದರೆ ಪಂದ್ಯದ ಪರಿಸ್ಥಿತಿಗೆ ಅನುಗುಣವಾಗಿ ಉಭಯ ತಂಡಗಳು ತಮ್ಮ ತಂಡದಲ್ಲಿನ ಒಬ್ಬ ಆಟಗಾರನನ್ನು ಬದಲಿಸುವ ಅವಕಾಶ ಪಡೆಯುವುದಾಗಿದೆ. ನಿಯಮದ ಪ್ರಕಾರ ತಂಡಗಳು ತಾವು ಘೋಷಿಸಿರುವ ತಂಡದಲ್ಲಿ ಒಬ್ಬ ಬೌಲರ್ ಬದಲಿಗೆ ಒಬ್ಬ ಬ್ಯಾಟ್ಸ್‌ಮನ್ ಅಥವಾ ಒಬ್ಬ ಬ್ಯಾಟ್ಸ್​ಮನ್ ಬದಲಿಗೆ ಬೌಲರ್‌ಅನ್ನು ತಂಡಕ್ಕೆ ಸೇರಿಸಿಕೊಳ್ಳಬಹುದಾಗಿದೆ. ಇದರಿಂದ ಉಭಯ ತಂಡಗಳಿಗೆ ಒಬ್ಬ ಬ್ಯಾಟ್ಸ್‌ಮನ್‌ ಮತ್ತು ಬೌಲರ್‌ ಹೆಚ್ಚುವರಿ ಸಿಕ್ಕಂತೆ ಆಗುತ್ತದೆ. ಅಲ್ಲದೇ ಒಟ್ಟು ನಾಲ್ಕು ಜನ ಮೀಸಲು ಆಟಗಾರರು ಇರುವುದರಿಂದ ಪ್ಲೇಯಿಂಗ್‌-11 ನಲ್ಲಿರುವ ಆಟಗಾರರು ಗಾಯಕ್ಕೆ ತುತ್ತಾದಲ್ಲಿ ಮತ್ತೊಬ್ಬರನ್ನು ಫೀಲ್ಡಿಂಗ್‌ಗೆ ಬಳಸಿಕೊಳ್ಳುವ ಅವಕಾಶವೂ ಇದೆ.

    ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮ ಬಂದಿದ್ದು ಯಾವಾಗ?
    ಆಸ್ಟ್ರೇಲಿಯಾದಲ್ಲಿ ಬಿಗ್‌ಬ್ಯಾಷ್‌ ಲೀಗ್‌ನಲ್ಲಿ ಮೊದಲು ಇಂಪ್ಯಾಕ್ಟ್ ಪ್ಲೇಯರ್‌ ನಿಯಮವನ್ನು ಪರಿಚಯಿಸಲಾಗಿತ್ತು. ಇದರಿಂದ ಸ್ಫೂರ್ತಿ ಪಡೆದ ಬಿಸಿಸಿಐ, ಐಪಿಎಲ್‌ ಟೂರ್ನಿಯಲ್ಲಿ ಅಳವಡಿಸಲು ನಿರ್ಧರಿಸಿತು. ಆದ್ರೆ ಐಪಿಎಲ್‌ಗೂ ಮುನ್ನ 2022-23ರ ಸೈಯದ್‌ ಮುಷ್ತಾಕ್ ಅಲಿ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಮೊದಲ ಬಾರಿ ಈ ನಿಯಮವನ್ನು ಅಳವಡಿಸಿಕೊಂಡು ಪ್ರಯೋಗ ನಡೆಸಿತ್ತು. ಅದು ಸಕ್ಸಸ್‌ ಆದ ನಂತರ ಕಳೆದ ಎರಡು ಆವೃತ್ತಿಗಳಿಂದ ಐಪಿಎಲ್‌ನಲ್ಲಿ ಅನುಷ್ಠಾನಕ್ಕೆ ತರಲಾಯಿತು.

    ಈ ಹಿಂದೆ ರೋಹಿತ್‌ ಶರ್ಮಾ ಹೇಳಿದ್ದೇನು?
    ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ನಾನು ಅಭಿಮಾನಿಯಲ್ಲ. ಜನರಿಗೆ ಸ್ವಲ್ಪ ಮನರಂಜನೆ ನೀಡುವ ಸಲುವಾಗಿ ಪಂದ್ಯದ ದೊಡ್ಡ ಭಾಗವನ್ನು ನೀವು ತೆಗೆದುಕೊಳ್ಳುತ್ತಿದ್ದೀರಿ. ಆದರೆ, ನೀವು ಕ್ರಿಕೆಟ್‌ನ ನಿಜವಾದ ಅಂಶವನ್ನು ನೋಡುವುದಾದರೆ, ನಾನು ಕೆಲವೊಂದು ಉದಾಹರಣೆ ನೀಡುತ್ತೇನೆ. ಭಾರತ ತಂಡಕ್ಕೆ ವಾಷಿಂಗ್ಟನ್‌ ಸುಂದರ್‌, ಶಿವಂ ದುಬೆ ಅವರಂಥ ಆಟಗಾರರು ಬೌಲ್‌ ಮಾಡುವುದೇ ಇಲ್ಲ. ಹಾಗಾಗಿ ಇದು ಒಳ್ಳೆಯ ಸಂಗತಿಯಲ್ಲ. ಈ ನಿಯಮದಿಂದ ನೀವು ಏನು ಸಾಧಿಸುತ್ತೀರೋ ನನಗೆ ಗೊತ್ತಿಲ್ಲ ಎಂದು ರೋಹಿತ್‌ ಶರ್ಮಾ ತಿಳಿಸಿದ್ದರು.

  • Ind vs Eng Test | 2025ರ ಭಾರತ – ಇಂಗ್ಲೆಂಡ್ ವೇಳಾಪಟ್ಟಿ ಬಿಡುಗಡೆಗೊಳಿಸಿದ ಬಿಸಿಸಿಐ

    Ind vs Eng Test | 2025ರ ಭಾರತ – ಇಂಗ್ಲೆಂಡ್ ವೇಳಾಪಟ್ಟಿ ಬಿಡುಗಡೆಗೊಳಿಸಿದ ಬಿಸಿಸಿಐ

    ಮುಂಬೈ: ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತೀಯ ಪುರುಷರ ಕ್ರಿಕೆಟ್ ತಂಡವು (Team India) 5 ಪಂದ್ಯಗಳ ಟೆಸ್ಟ್ ಸರಣಿಗಾಗಿ ಮುಂದಿನ ವರ್ಷ ಇಂಗ್ಲೆಂಡ್‌ಗೆ ಪ್ರಯಾಣಿಸಲಿದೆ. ಸರಣಿಯ ಮೊದಲ ಪಂದ್ಯ ಜೂನ್ 20 ರಂದು ಲೀಡ್ಸ್‌ನ ಹೆಡಿಂಗ್ಲಿ ಅಂಗಳದಲ್ಲಿ ಆಂಭವಾಗಲಿದೆ.

    2023-25ನೇ ಸಾಲಿನ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್‌ (WTC) ಫೈನಲ್​ ಪಂದ್ಯವು ಮುಂದಿನ ಜೂನ್​ನಲ್ಲಿ ನಡೆಯಲಿದ್ದು, ಬಳಿಕ ಭಾರತ-ಇಂಗ್ಲೆಂಡ್‌ ಸರಣಿ (Ind vs Eng Test series) ಆರಂಭವಾಗಲಿದೆ. ಉಣಯ ತಂಡಗಳಿಗೂ ಇದು 4ನೇ ಆವೃತ್ತಿಯ ವಿಶ್ವ ಟೆಸ್ಟ್​ ಚಾಂಪಿನ್​ಶಿಪ್​ ಋತುವಿನ (2025-27) ಮೊದಲ ಸರಣಿಯಾಗಲಿದೆ.

    5 ಪಂದ್ಯಗಳ ಟೆಸ್ಟ್​ ಸರಣಿಗೆ ಲೀಡ್ಸ್‌, ಬರ್ಮಿಂಗ್ಹ್ಯಾಮ್‌, ಲಾರ್ಡ್ಸ್, ಮ್ಯಾಂಚೆಸ್ಟರ್ ಮತ್ತು ಓವಲ್ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ತನ್ನ ಅಧಿಕೃತ ಎಕ್ಸ್​ನಲ್ಲಿ ಪ್ರಕಟಿಸಿದೆ. ಬರೋಬ್ಬರಿ 1 ತಿಂಗಳ ಕಾಲ ಈ ಸರಣಿ ನಡೆಯಲಿದೆ.

    2007 ರಲ್ಲಿ ಪಟೌಡಿ ಟ್ರೋಫಿಯಲ್ಲಿ ಮೈಕೆಲ್ ವಾನ್ ನೇತೃತ್ವದ ತಂಡವನ್ನು ಭಾರತ ಸೋಲಿಸಿದ ಬಳಿಕ ಇಂಗ್ಲೆಂಡ್‌ನಲ್ಲಿ ಇದುವರೆಗೂ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಆ ಪ್ರವಾಸದ ಸಮಯದಲ್ಲಿ, ರಾಹುಲ್ ದ್ರಾವಿಡ್ ನೇತೃತ್ವದ ಭಾರತವು ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆದ 2ನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿ ಸರಣಿ ಗೆದ್ದುಕೊಂಡಿತ್ತು. ಒಟ್ಟು ಮೂರು ಪಂದ್ಯಗಳ ಸರಣಿ ಇದಾಗಿತ್ತು. 2 ಪಂದ್ಯಗಳು ಡ್ರಾ ಆಗಿದ್ದವು.

    ಇನ್ನೂ ಪ್ರಸಕ್ತ ವರ್ಷದಲ್ಲಿ ತವರಿನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಸರಣಿಯನ್ನು ಭಾರತ 4-1 ಅಂತರದಲ್ಲಿ ಗೆದ್ದುಕೊಂಡಿತ್ತು.

  • ಸ್ವಾತಂತ್ರ್ಯ ದಿನದ ಸಂಭ್ರಮ – ದೇಶಭಕ್ತಿ ಮೆರೆದ ಟೀಂ ಇಂಡಿಯಾ ಸ್ಟಾರ್ಸ್‌!

    ಸ್ವಾತಂತ್ರ್ಯ ದಿನದ ಸಂಭ್ರಮ – ದೇಶಭಕ್ತಿ ಮೆರೆದ ಟೀಂ ಇಂಡಿಯಾ ಸ್ಟಾರ್ಸ್‌!

    ಮುಂಬೈ: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ (78th Independence Day) ಸಂಭ್ರಮ ಮನೆಮಾಡಿದೆ. ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಅಸಂಖ್ಯಾತ ಹೋರಾಟಗಾರರ ತ್ಯಾಗಬಲಿದಾನಗಳನ್ನ ಸ್ಮರಿಸುತ್ತಿದ್ದಾರೆ. ಹಾಗೆಯೇ ಟೀಂ ಇಂಡಿಯಾದ (Team India) ಸ್ಟಾರ್‌ ಆಟಗಾರರೂ ಸಹ ಸ್ವಾತಂತ್ರ್ಯ ದಿನವನ್ನು ವಿಭಿನ್ನವಾಗಿ ಆಚರಿಸಿದ್ದಾರೆ.

    ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ (Rohit Sharma), ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ, ಟೀಂ ಇಂಡಿಯಾದ ಮುಖ್ಯಕೋಚ್‌ ಗೌತಮ್‌ ಗಂಭೀರ್‌ (Gautam Gambhir), ಸ್ಟಾರ್‌ ವೇಗಿ ಮೊಹಮ್ಮದ್‌ ಶಮಿ, ಒಲಿಂಪಿಕ್ಸ್‌ ಪದಕ ವಿಜೇತ ನೀರಜ್‌ ಚೋಪ್ರಾ ಸೇರಿದಂತೆ ಅನೇಕ ಕ್ರೀಡಾಪಟುಗಳು ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಶುಭ ಸಂದೇಶ ಹಂಚಿಕೊಳ್ಳುವ ಮೂಲಕ ಸ್ವಾತಂತ್ರ್ಯ ದಿನವನ್ನು ಆಚರಿಸಿದ್ದಾರೆ. ಇದನ್ನೂ ಓದಿ: Independence Day | ರಾಜಸ್ಥಾನಿ ಲೆಹರಿಯಾ ಪೇಟ ಧರಿಸಿ ಗಮನ ಸೆಳೆದ ಮೋದಿ

    ಟೀಂ ಇಂಡಿಯಾ ಕ್ಯಾಪ್ಟನ್‌ ರೋಹಿತ್‌ ಶರ್ಮಾ 2024ರ ಟಿ20 ವಿಶ್ವಕಪ್‌ ಗೆದ್ದ ಸಂದರ್ಭದಲ್ಲಿ ಬಾರ್ಬಡೋಸ್‌ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜವನ್ನು ನೆಟ್ಟು ಗಮನ ಸೆಳೆದಿದ್ದರು. ಗುರುವಾರ (ಇಂದು) ಅದೇ ಚಿತ್ರವನ್ನು ಎಕ್ಸ್‌ ಖಾತೆಯ ಡಿಪಿ ಹಾಕಿಕೊಳ್ಳುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಹಾರ್ದಿಕ್‌ ಪಾಂಡ್ಯ ಸಹ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ರಾಷ್ಟ್ರಧ್ವಜ ಹೊತ್ತು ಮೆರೆದಾಡಿದ ಫೋಟೋವನ್ನ ಹಂಚಿಕೊಂಡಿದ್ದು, ಸ್ವಾತಂತ್ರ್ಯ ದಿನಾಚರಣೆಗೆ ಶುಭ ಕೋರಿದ್ದಾರೆ.

    ಕುಟುಂಬದೊಂದಿಗೆ ಸ್ವಾತಂತ್ರ್ಯ ದಿನಾಚರಣೆ:
    ಟೀಂ ಇಂಡಿಯಾದ ಮುಖ್ಯಕೋಚ್‌ ಗೌತಮ್‌ ಗಂಭೀರ್‌ ತಮ್ಮ ಕುಟುಂಬದೊಂದಿಗೆ ಸ್ವಾತಂತ್ರ್ಯ ದಿನವನ್ನ ಸರಳವಾಗಿ ಆಚರಿಸಿದ್ದಾರೆ. ಮನೆಯ ಆವರಣದಲ್ಲೇ ಧ್ಚಜಾರೋಹಣ ನೆರವೇರಿಸಿ ದೇಶದ ಜನತೆಗೆ ಶುಭ ಕೋರಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ – 2,500 ಅಡಿ ಉದ್ದದ ರಾಷ್ಟ್ರಧ್ವಜ ಪ್ರದರ್ಶನ

  • 138ಕ್ಕೆ ಆಲೌಟ್‌ – 27 ವರ್ಷಗಳಲ್ಲಿ ಭಾರತಕ್ಕೆ ಮೊದಲ ಸರಣಿ ಸೋಲು; 110 ರನ್‌ ಗೆಲುವಿನೊಂದಿಗೆ ಸರಣಿ ಗೆದ್ದ ಲಂಕಾ

    138ಕ್ಕೆ ಆಲೌಟ್‌ – 27 ವರ್ಷಗಳಲ್ಲಿ ಭಾರತಕ್ಕೆ ಮೊದಲ ಸರಣಿ ಸೋಲು; 110 ರನ್‌ ಗೆಲುವಿನೊಂದಿಗೆ ಸರಣಿ ಗೆದ್ದ ಲಂಕಾ

    ಕೊಲಂಬೊ: ಅವಿಷ್ಕಾ ಫರ್ನಾಂಡೋ, ಕುಸಲ್‌ ಮೆಂಡಿಸ್‌ ಅಮೋಘ ಬ್ಯಾಟಿಂಗ್‌ ಹಾಗೂ ದುನಿತ್ ವೆಲ್ಲಲಾಗೆ ಮ್ಯಾಜಿಕ್‌ ಬೌಲಿಂಗ್‌ ನೆರವಿನೊಂದಿಗೆ ಶ್ರೀಲಂಕಾ ತಂಡವು ಭಾರತದ ವಿರುದ್ಧ 110 ರನ್‌ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲೇ ಭಾರತದ ವಿರುದ್ಧ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಅಲ್ಲದೇ ಕಳೆದ 27 ವರ್ಷಗಳಲ್ಲಿ ಲಂಕಾ ವಿರುದ್ಧ ಭಾರತಕ್ಕೆ ಮೊದಲ ಸರಣಿ ಸೋಲು ಇದಾಗಿದೆ.

    2023ರ ವರ್ಷಾರಂಭದಲ್ಲೇ ಭಾರತ, ಶ್ರೀಲಂಕಾ ವಿರುದ್ಧ ಹಾರ್ದಿಕ್‌ ಪಾಂಡ್ಯ ನಾಯಕತ್ವದಲ್ಲಿ ಟಿ20 ಸರಣಿ ಹಾಗೂ ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಏಕದಿನ ಸರಣಿಯನ್ನು ತವರಿನಲ್ಲೇ ಗೆದ್ದುಕೊಂಡಿತ್ತು. ಆದ್ರೆ ಈ ಬಾರಿ ತನ್ನ ತವರಿನಲ್ಲಿ ಬಲಿಷ್ಠ ಭಾರತದ ವಿರುದ್ಧ ಸರಣಿ ಗೆದ್ದು ಸೇಡು ಲಂಕಾ ತೀರಿಸಿಕೊಂಡಿತು. ಕೊಲೊಂಬೊದ ಆರ್‌. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್‌ ಶರ್ಮಾ ಬಳಗವನ್ನು 110 ರನ್‌ಗಳಿಂದ ಮಣಿಸುವ ಮೂಲಕ ಶ್ರೀಲಂಕಾ 27 ವರ್ಷಗಳ ಬಳಿಕ ಭಾರತದ ವಿರುದ್ಧ ಏಕದಿನ ಸರಣಿ ಗೆದ್ದ ದಾಖಲೆ ಬರೆಯಿತು.

    ಶ್ರೀಲಂಕಾ ನೀಡಿದ 249 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಭಾರತ ತಂಡವು 26.1 ಓವರ್‌ಗಳಲ್ಲಿ 138 ರನ್‌ಗಳಿಸಿ ಆಲೌಟ್‌ ಆಗುವ ಮೂಲಕ 110 ರನ್‌ಗಳಿಂದ ಸೋಲು ಕಂಡಿತು. ಚೇಸಿಂಗ್‌ ಆರಂಭಿಸಿದ ಭಾರತ ಆರಂಭದಿಂದಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಳ್ಳಲು ಆರಂಭಿಸಿತು. ಭಾರತದ ಪರ ರೋಹಿತ್‌ ಶರ್ಮಾ 35 ರನ್‌ (20 ಎಸೆತ, 6 ಬೌಂಡರಿ, 1 ಸಿಕ್ಸರ್)‌, ವಾಷಿಂಗ್ಟನ್‌ ಸುಂದರ್‌ ಕೊನೆಯಲ್ಲಿ 30 ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಯಾರೊಬ್ಬರೂ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರದ ಕಾರಣ ಭಾರತ ತಂಡ ಹೀನಾಯ ಸೋಲಿಗೆ ತುತ್ತಾಯಿತು. ಇದನ್ನೂ ಓದಿ: ತಲೆಗೂದಲು ಕಟ್‌, ರಕ್ತ ಹೊರತೆಗೆತ, ಕಠಿಣ ವ್ಯಾಯಾಮ, ಆಹಾರದಿಂದ ದೂರ – ತೂಕ ಇಳಿಸಲು ಏನೆಲ್ಲಾ ಮಾಡಿದ್ರು ವಿನೇಶ್‌?

    ವಿರಾಟ್‌ ಕೊಹ್ಲಿ ಸಹ ಕೇವಲ 20 ರನ್‌ ಗಳಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು. ಶುಭಮನ್‌ ಗಿಲ್‌, ರಿಷಭ್‌ ಪಂತ್‌, ಶ್ರೇಯಸ್‌ ಅಯ್ಯರ್‌, ಶಿವಂ ದುಬೆ, ರಿಯಾನ್‌ ಪರಾಗ್‌ ಸಹ ಭಾರತ ತಂಡವನ್ನು ಗೆಲುವಿನ ದಡಕ್ಕೆ ಸೇರಿಸುವಲ್ಲಿ ವಿಫಲರಾದರು. ಇದರಿಂದಾಗಿ ಭಾರತ 3ನೇ ಪಂದ್ಯವನ್ನು ಸೋತು, ಸರಣಿ ಬಿಟ್ಟುಕೊಡಬೇಕಾಯಿತು. ಇದನ್ನೂ ಓದಿ: ಪದಕ ಗೆದ್ದು ತಾಯ್ನಾಡಿಗೆ ಮರಳಿದ ಮನು ಭಾಕರ್‌ಗೆ ಹೂಮಳೆಯ ಸ್ವಾಗತ

    ಫರ್ನಾಂಡೋ ಭರ್ಜರಿ ಬ್ಯಾಟಿಂಗ್:
    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಶ್ರೀಲಂಕಾ, ಉತ್ತಮ ಆರಂಭ ಪಡೆಯಿತು. ಪಥುಮ್‌ ನಿಸ್ಸಾಂಕ, ಆವಿಷ್ಕ ಫರ್ನಾಂಡೋ ಹಾಗೂ ಕುಶಾಲ್‌ ಮೆಂಡಿಸ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ನೆರವಿನಿಂದ ಲಂಕಾ 3 ವಿಕೆಟ್‌ಗೆ 183 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು. ಬೃಹತ್‌ ಮೊತ್ತ ಪೇರಿಸುವ ಸಾಧ್ಯತೆಯೂ ಇತ್ತು. ಆದರೆ, ನಂತರ ಬಂದ ಬ್ಯಾಟರ್‌ಗಳು ಭಾರತೀಯ ಬೌಲರ್‌ಗಳ ದಾಳಿಗೆ ಸಿಲುಕಿ ವಿಕೆಟ್‌ ಒಪ್ಪಿಸಿದ ಕಾರಣ ಶ್ರೀಲಂಕಾ 50 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 248 ರನ್‌ ಗಳಿಸಲಷ್ಟೇ ಶಕ್ತವಾಯಿತು.

    ಲಂಕಾ ಪರ ಪಾತುಂ ನಿಸ್ಸಾಂಕ 45 ರನ್‌, ಅವಿಷ್ಕಾ ಫರ್ನಾಂಡೋ 96 ರನ್‌ (102, 9 ಬೌಂಡರಿ, 2 ಸಿಕ್ಸರ್), ಕುಸಲ್ ಮೆಂಡಿಸ್ 59 ರನ್‌, ಚರಿತ್ ಅಸಲಂಕಾ 10 ರನ್‌, ಜನಿತ್ ಲಿಯಾನಗೆ 8 ರನ್‌, ದುನಿತ್ ವೆಲ್ಲಲಾಗೆ 2 ರನ್‌, ಕಮಿಂಡು ಮೆಂಡಿಸ್ 23 ರನ್‌, ಮಹೀಶ್‌ ತೀಕ್ಷಣ 3 ರನ್‌ ಗಳಿಸಿ ಅಜೇಯರಾಗುಳಿದರು. ಇದನ್ನೂ ಓದಿ: Paris Olympics 2024 | ಅನರ್ಹಗೊಂಡ ಕೆಲವೇ ನಿಮಿಷಗಳಲ್ಲಿ ವಿನೇಶ್‌ ಆಸ್ಪತ್ರೆಗೆ ದಾಖಲು

    ಭಾರತದ ಪರ ರಿಯಾನ್‌ ಪರಾಗ್‌ 3 ವಿಕೆಟ್‌ ಕಬಳಿಸಿದರೆ, ಅಕ್ಷರ್‌ ಪಟೇಲ್‌, ಮೊಹಮ್ಮದ್‌ ಸಿರಾಜ್‌, ವಾಷಿಂಗ್ಟನ್‌ ಸುಂದರ್‌ ಹಾಗೂ ಕುಲ್ದೀಪ್‌ ಯಾದವ್‌ ಅವರು ತಲಾ ಒಂದು ವಿಕೆಟ್‌ ಪಡೆದರು. ಮೊದಲ ಪಂದ್ಯ ರೋಚಕ ಟೈ ಆದರೆ, 2ನೇ ಪಂದ್ಯದಲ್ಲಿ ಭಾರತವು 32 ರನ್‌ಗಳಿಂದ ಸೋಲನುಭವಿಸಿತ್ತು.  ಇದನ್ನೂ ಓದಿ: ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್: ವಿನೇಶ್‌ಗೆ ಸಮಾಧಾನ ಹೇಳಿದ ಮೋದಿ

  • ಮುಂಬೈಗೆ ಗುಡ್‌ಬೈ ಹೇಳ್ತಾರಾ ರೋಹಿತ್‌, ಬುಮ್ರಾ, ಸೂರ್ಯ? – 2025ರ ಐಪಿಎಲ್‌ನ ಮಹತ್ವದ 5 ಬೆಳವಣಿಗೆಗಳು ಹೀಗಿವೆ

    ಮುಂಬೈಗೆ ಗುಡ್‌ಬೈ ಹೇಳ್ತಾರಾ ರೋಹಿತ್‌, ಬುಮ್ರಾ, ಸೂರ್ಯ? – 2025ರ ಐಪಿಎಲ್‌ನ ಮಹತ್ವದ 5 ಬೆಳವಣಿಗೆಗಳು ಹೀಗಿವೆ

    ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೆ ಸದ್ಯದಲ್ಲೇ ಬಿಸಿಸಿಐ ದಿನಾಂಕ ನಿಗದಿ ಪಡಿಸಲಿದೆ. ಶೀಘ್ರದಲ್ಲೇ ನಡೆಯಲಿರುವ ಬಿಸಿಸಿಐ (BCCI) ಮಹತ್ವದ ಸಭೆಯಲ್ಲಿ ಮೆಗಾ ಹರಾಜಿನ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ನಡುವೆ ಫ್ರಾಂಚೈಸಿಗಳಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ.

    ಹೌದು. 3 ವರ್ಷಗಳಿಗೊಮ್ಮೆ ನಡೆಯುವ ಮೆಗಾ ಹರಾಜಿನಲ್ಲಿ ಯಾವ ಯಾವ ದಿಗ್ಗಜ ಆಟಗಾರರು ಯಾವ ತಂಡ ಸೇರಲಿದ್ದಾರೆ ಅನ್ನೋ ಬಗ್ಗೆ ಕ್ರಿಕೆಟ್‌ ಪ್ರಿಯರ ಚಿತ್ತ ಹರಿದಿದೆ. ಇದನ್ನೂ ಓದಿ: Paris Olympic 2024: ಭಾರತೀಯ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ ಬಿಸಿಸಿಐ

    ಮಹತ್ವದ 5 ಬೆಳವಣಿಗೆ ಏನು?
    ಸದ್ಯದ ಮಾಹಿತಿ ಪ್ರಕಾರ, ಮೆಗಾ ಹರಾಜು ವೇಳೆ ಫ್ರಾಂಚೈಸಿಗಳು ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿದ್ದು, ಉಳಿದ ಎಲ್ಲ ಆಟಗಾರರನ್ನು ಬಿಡುಗಡೆಗೊಳಿಸಬೇಕಾಗುತ್ತದೆ. ಹೀಗಾಗಿ ಐದು ಬಾರಿ ಮುಂಬೈ ಇಂಡಿಯನ್ಸ್‌ಗೆ ಟ್ರೋಫಿ ತಂದುಕೊಟ್ಟ ನಾಯಕ ರೋಹಿತ್‌ ಶರ್ಮಾ (Rohit Sharma) ಈ ಬಾರಿ ಫ್ರಾಂಚೈಸಿಗೆ ಗುಡ್‌ಬೈ ಹೇಳಲಿದ್ದಾರೆ ಎನ್ನಲಾಗುತ್ತಿದೆ. 2025ರ ಐಪಿಎಲ್‌ನಲ್ಲಿ ಹಿಟ್‌ಮ್ಯಾನ್‌ ಮುಂಬೈ ಇಂಡಿಯನ್ಸ್‌ ಬಿಟ್ಟು ಗುಜರಾತ್‌ ಟೈಟಾನ್ಸ್‌ ಅಥವಾ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಸೇರಲಿದ್ದಾರೆ ಎಂದು ವರದಿಯಾಗಿದೆ.

    ಇದರೊಂದಿಗೆ ಸ್ಟಾರ್‌ ವೇಗಿ ಜಸ್ಪ್ರೀತ್‌ ಬುಮ್ರಾ (Jasprit Bumrah), ಸ್ಫೋಟಕ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ (Suryakumar Yadav) ಸಹ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಗುಡ್‌ಬೈ ಹೇಳಲಿದ್ದಾರೆ. ಉದ್ಯಮಿ ಗೌತಮ್‌ ಅದಾನಿ ಗುಜರಾತ್‌ ಟೈಟಾನ್ಸ್‌ ಫ್ರಾಂಚೈಸಿಯನ್ನು ಖರೀದಿಸಲಿದ್ದಾರೆ. 4 ಫ್ರಾಂಚೈಸಿಗಳು ತಮ್ಮ ತಂಡದ ನಾಯಕರನ್ನು ಬದಲಾವಣೆ ಮಾಡಲಿವೆ. ಇನ್ನೂ 2024ರ ಐಪಿಎಲ್‌ನಲ್ಲಿ ಮಿಂಚಿದ್ದ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡದ ನಾಯಕ ರಿಷಭ್‌ ಪಂತ್‌ ಸಿಎಸ್‌ಕೆ ಸೇರಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Women’s Asia Cup: ರಿಚಾ ಸ್ಫೋಟಕ ಅರ್ಧಶಕ – ಭಾರತಕ್ಕೆ 78 ರನ್‌ಗಳ ಭರ್ಜರಿ ಜಯ; ಸೆಮಿಸ್‌ಗೆ ಇನ್ನೊಂದೇ ಹೆಜ್ಜೆ!

    ಮರಳಿ ತವರಿಗೆ ಕನ್ನಡಿಗ ಕೆ.ಎಲ್‌ ರಾಹುಲ್‌?:
    2022ರಲ್ಲಿ ಆರಂಭವಾದಾಗಿನಿಂದಲೂ ಲಕ್ನೋ ಸೂಪರ್‌ ಜೈಂಟ್ಸ್‌ (LSG) ತಂಡದ ನಾಯಕನಾಗಿರುವ ಕನ್ನಡಿಗ ಕೆ.ಎಲ್‌ ರಾಹುಲ್‌ (KL Rahul) ಈ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಸೇರಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. 2024ರ ಐಪಿಎಲ್‌ ಆವೃತ್ತಿಯಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಲಕ್ನೋ ಹೀನಾಯವಾಗಿ ಸೋತಿತ್ತು. ಈ ವೇಳೆ ಲಕ್ನೋ ಫ್ರಾಂಚೈಸಿ ಮಾಲೀಕರಾದ ಸಂಜೀವ್‌ ಗೋಯೆಂಕಾ ರಾಹುಲ್‌ ವಿರುದ್ಧ ಮೈದಾನದಲ್ಲೇ ರೇಗಾಡಿದ್ದರು. ಈ ವೀಡಿಯೋ ಭಾರೀ ಆಕ್ಷೇಪಕ್ಕೆ ಕಾರಣವಾಗಿತ್ತು. ಈ ಘಟನೆಯ ನಂತರ ರಾಹುಲ್‌, ಲಕ್ನೋ ತಂಡದಲ್ಲಿ ಮುಂದುವರಿಯುವ ಆಸಕ್ತಿ ಕಳೆದುಕೊಂಡಿದ್ದಾರೆ. ಮುಂಬರುವ ಮೆಗಾ ಹರಾಜಿಗೂ ಮುನ್ನ ಅವರು ಆರ್‌ಸಿಬಿ (RCB) ಪಾಲಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಐಪಿಎಲ್‌ ವೃತ್ತಿ ಆರಂಭಿಸಿದ್ದು ಆರ್‌ಸಿಬಿಯಿಂದಲೇ:
    2013ರಿಂದ ಐಪಿಎಲ್‌ ವೃತ್ತಿ ಬದುಕು ಆರಂಭಿಸಿದ ಕೆ.ಎಲ್‌ ರಾಹುಲ್‌ ಮೊದಲು ಸೇರಿದ್ದು ಆರ್‌ಸಿಬಿ ತಂಡವನ್ನೇ. 2013 ರಿಂದ 2016ರ ಆವೃತ್ತಿಗಳಲ್ಲಿ ರಾಹುಲ್‌ ಆರ್‌ಸಿಬಿ ತಂಡದಲ್ಲಿಯೇ ಇದ್ದರು. ಆ ನಂತರ 2014 ಮತ್ತು 2015ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವನ್ನ ಪ್ರತಿನಿಧಿಸಿದ್ದರು. 2018 ರಿಂದ 2021ರ ವರೆಗೆ ಪಂಜಾಬ್‌ ಕಿಂಗ್ಸ್‌ ತಂಡದಲ್ಲಿದ್ದ ಕೆ.ಎಲ್‌ ರಾಹುಲ್‌ 2022ರಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಸೇರಿಕೊಂಡರು. ಇದನ್ನೂ ಓದಿ: IPL 2025: ಮರಳಿ ಆರ್‌ಸಿಬಿಗೆ ರಾಹುಲ್‌? – ಡೆಲ್ಲಿ ತೊರೆದು ಸಿಎಸ್‌ಕೆ ಸೇರಲಿದ್ದಾರೆ ರಿಷಭ್‌ ಪಂತ್‌?

  • 2.5 ಕೋಟಿ ನಗದು ಬಹುಮಾನ ನಿರಾಕರಿಸಿದ ದ್ರಾವಿಡ್‌ – ಕನ್ನಡಿಗನ ನಡೆಗೆ ವ್ಯಾಪಕ ಮೆಚ್ಚುಗೆ!

    2.5 ಕೋಟಿ ನಗದು ಬಹುಮಾನ ನಿರಾಕರಿಸಿದ ದ್ರಾವಿಡ್‌ – ಕನ್ನಡಿಗನ ನಡೆಗೆ ವ್ಯಾಪಕ ಮೆಚ್ಚುಗೆ!

    ಬೆಂಗಳೂರು: ಟೀಂ ಇಂಡಿಯಾದ ನಿರ್ಗಮಿತ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ (Rahul Dravid) ಮತ್ತೆ ಕ್ರೀಡಾ ಸಾರ್ಥಕತೆ ಮೆರೆದಿದ್ದಾರೆ. 2024ರ ಟಿ20 ವಿಶ್ವಕಪ್‌ ಟೂರ್ನಿ ಗೆದ್ದ ಹಿನ್ನೆಲೆಯಲ್ಲಿ ಬಿಸಿಸಿಐ ನೀಡಿದ ಬಹುಮಾನ (BCCI PrizeMoney) ಮೊತ್ತದಲ್ಲಿ 2.5 ಕೋಟಿ ರೂ. ಹಿಂದಿರುಗಿಸಿ, ಮಾದರಿಯಾಗಿದ್ದಾರೆ. ಸಹಾಯ ಕೋಚ್‌ ಸಿಬ್ಬಂದಿಯಂತೆ (Coachig Staff) ತಾವೂ 2.5 ಕೋಟಿ ರೂ.ಗಳನ್ನು ಮಾತ್ರ ಪಡೆಯಲಿದ್ದು, ಉಳಿದ ಹಣವನ್ನು ಹಿಂತಿರುಗಿಸಿ ಸಮಾನತೆ ಸಾರಿದ್ದಾರೆ. ಕನ್ನಡಿಗ ರಾಹುಲ್‌ ದ್ರಾವಿಡ್‌ ಅವರ ಈ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

    ಟಿ20 ವಿಶ್ವಕಪ್‌ ಕಪ್‌ ಗೆದ್ದಬೆನ್ನಲೇ ಬಿಸಿಸಿಐ (BCCI) ಘೋಷಿಸಿದ್ದ 125 ಕೋಟಿ ರೂ. ನಗದು ಬಹುಮಾನದಲ್ಲಿ ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋಡ್‌, ಫೀಲ್ಡಿಂಗ್‌ ಕೋಚ್‌ ಟಿ.ದಿಲೀಪ್‌ ಕುಮಾರ್‌ ಹಾಗೂ ಬೌಲಿಂಗ್‌ ಕೋಚ್‌ ಪಾರಸ್‌ ಮಾಂಬ್ರೆ ಸೇರಿದಂತೆ ಕೋಚಿಂಗ್‌ ಸಿಬ್ಬಂದಿಗೆ ತಲಾ 2.5 ಕೋಟಿ ರೂ. ಬಹುಮಾನ ಸಿಗಲಿದೆ. ಆದ್ರೆ ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌ ಅವರಿಗೆ 5 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಆದ್ರೆ ರಾಹುಲ್‌ ದ್ರಾವಿಡ್‌ 2.5 ಕೋಟಿ ರೂ. ಹೆಚ್ಚುವರಿ ಹಣವನ್ನು ಹಿಂದಿರುಗಿಸಿ, ಎಲ್ಲ ಕೋಚಿಂಗ್‌ ಸಿಬ್ಬಂದಿ ಪಡೆದಷ್ಟೇ ಹಣವನ್ನು ಪಡೆದುಕೊಂಡಿದ್ದಾರೆ, ಹೀಗಾಗಿ ಅವರ ಭಾವನೆಯನ್ನು ಬಿಸಿಸಿಐ ಗೌರವಿಸುವುದಾಗಿ ಮೂಲಗಳು ತಿಳಿಸಿವೆ.

    ಬಿಸಿಸಿಐ ಘೋಷಿಸಿದ್ದೆಷ್ಟು – ಆಟಗಾರರಿಗೆ ಸಿಕ್ಕಿದ್ದೆಷ್ಟು?
    ಬಿಸಿಸಿಐ ಘೋಷಿಸಿದ್ದ 125 ಕೋಟಿ ರೂ. ನಗದು ಬಹುಮಾನ ಮೊತ್ತದಲ್ಲಿ ವಿಶ್ವಕಪ್‌  (T20 World Cup) ತಂಡಕ್ಕೆ ಆಯ್ಕೆಯಾದ 15 ಆಟಗಾರರು ತಲಾ 5 ಕೋಟಿ ರೂ. ಬಹುಮಾನ ಸ್ವೀಕರಿಸಲಿದ್ದಾರೆ. ಈ ಪೈಕಿ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಸಹ ಸೇರಿದ್ದಾರೆ. ಅಲ್ಲದೇ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದ ರಿಂಕು ಸಿಂಗ್‌, ಶುಭಮನ್‌ ಗಿಲ್‌, ಅವೇಶ್‌ ಖಾನ್‌ ಹಾಗೂ ಖಲೀಲ್‌ ಅಹ್ಮದ್‌ ಅವರಿಗೂ ತಲಾ 1 ಕೋಟಿ ರೂ. ಬಹುಮಾನ ಸಿಗಲಿದೆ.

    ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋಡ್‌, ಫೀಲ್ಡಿಂಗ್‌ ಕೋಚ್‌ ಟಿ.ದಿಲೀಪ್‌ ಕುಮಾರ್‌ ಹಾಗೂ ಬೌಲಿಂಗ್‌ ಕೋಚ್‌ ಪಾರಸ್‌ ಮಾಂಬ್ರೆ ಸೇರಿದಂತೆ ಕೋಚಿಂಗ್‌ ಸಿಂಬ್ಬಂದಿಗೆ ತಲಾ 2.5 ಕೋಟಿ ರೂ. ಬಹುಮಾನ ಸಿಗಲಿದೆ. ಇನ್ನೂ ಮುಖ್ಯಸ್ಥ ಅಜಿತ್ ಅಗರ್ಕರ್ ಸೇರಿದಂತೆ ಆಯ್ಕೆ ಸಮಿತಿಯ ಸದಸ್ಯರಿಗೆ ತಲಾ 1 ಕೋಟಿ ರೂ. ವಿತರಿಸಲಾಗುತ್ತದೆ.

    ಟೀಂ ಇಂಡಿಯಾ ಫಿಸಿಯೋಥೆರಪಿಸ್ಟ್‌ಗಳಾದ ಕಮಲೇಶ್ ಜೈನ್, ಯೋಗೇಶ್ ಪರ್ಮಾರ್ ಮತ್ತು ತುಳಸಿ ರಾಮ್ ಯುವರಾಜ್​ಗೆ ತಲಾ 2 ಕೋಟಿ ರೂ., ಭಾರತ ತಂಡ ಥ್ರೋಡೌನ್ ಸ್ಪೆಷಲಿಸ್ಟ್​ಗಳಾದ ರಾಘವಿಂದ್ರ ದಿವಿಗಿ, ನುವಾನ್ ಉದೆನೆಕೆ ಮತ್ತು ದಯಾನಂದ್ ಗರಾನಿಗೆ ತಲಾ 2 ಕೋಟಿ ರೂ., ಟೀಂ ಇಂಡಿಯಾ ಮಸಾಜ್ ಥೆರಪಿಸ್ಟ್‌ಗಳಾದ ರಾಜೀವ್ ಕುಮಾರ್ ಮತ್ತು ಅರುಣ್ ಕಾನಡೆಗೆ ತಲಾ 2 ಕೋಟಿ ರೂ., ಭಾರತ ತಂಡದ ಸ್ಟ್ರೆಂಗ್ತ್ ಅ್ಯಂಡ್ ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿಗೆ 2 ಕೋಟಿ ರೂ. ನೀಡಲಾಗುತ್ತದೆ ಎಂದು ವರದಿಗಳು ಹೇಳಿವೆ.

    ಭಾರತ ವಿಶ್ವ ಚಾಂಪಿಯನ್‌:
    ಕಳೆದ ಜೂನ್‌ 29ರಂದು ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಗೆಲುವು ಸಾಧಿಸಿ ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿಯಿತು. 17 ವರ್ಷಗಳ ಬಳಿಕ ಟಿ20 ವಿಶ್ವಕಪ್‌ ಎತ್ತಿ ಹಿಡಿದ ಭಾರತ ತಂಡ 20 ಕೋಟಿ ರೂ. ಬಹುಮಾನವನ್ನೂ ಬಾಚಿಕೊಂಡಿತು. ಈ ಬೆನ್ನಲ್ಲೇ ಬಿಸಿಸಿಐ 125 ಕೋಟಿ ರೂ. ಬಹುಮಾನ ಘೋಷಣೆ ಮಾಡಿತ್ತು. ಜೊತೆಗೆ ತವರಿಗೆ ಮರಳಿದ ಬಳಿಕ ಟೀಂ ಇಂಡಿಯಾಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರದ ವತಿಯಿಂದ 11 ಕೋಟಿ ರೂ. ಬಹುಮಾನ ಘೋಷಿಸಿದರು.

  • ವಿಶ್ವ ಚಾಂಪಿಯನ್ಸ್‌ಗೆ 125 ಕೋಟಿ ರೂ. ಬಹುಮಾನ – ರೋಹಿತ್‌, ಕೊಹ್ಲಿ, ದ್ರಾವಿಡ್‌ಗೆ ಸಿಕ್ಕಿದ್ದೆಷ್ಟು?

    ವಿಶ್ವ ಚಾಂಪಿಯನ್ಸ್‌ಗೆ 125 ಕೋಟಿ ರೂ. ಬಹುಮಾನ – ರೋಹಿತ್‌, ಕೊಹ್ಲಿ, ದ್ರಾವಿಡ್‌ಗೆ ಸಿಕ್ಕಿದ್ದೆಷ್ಟು?

    ಮುಂಬೈ: 2024ರ ಟಿ20 ವಿಶ್ವಕಪ್‌ (T20 World Cup 2024) ವಿಜೇತ ಭಾರತ ತಂಡಕ್ಕೆ ಬಿಸಿಸಿಐ ನೀಡಿದ್ದ 125 ಕೋಟಿ ರೂ. ನಗದು ಬಹುಮಾನ (BCCI Prize Money) ಹಂಚಿಕೆ ಮಾಡಲಾಗಿದೆ.

    ಟಿ20 ವಿಶ್ವಕಪ್‌ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದ 15 ಆಟಗಾರರು, ಮೀಸಲು ಆಟಗಾರರು, ಕೋಚ್‌ ಹಾಗೂ ಸಹಾಯಕ ಸಿಬ್ಬಂದಿ ಸೇರಿದಂತೆ ಒಟ್ಟು 42 ಸದಸ್ಯರಿಗೆ ಬಿಸಿಸಿಐ ನಗದು ಬಹುಮಾನ ಪಡೆಯಲಿದ್ದಾರೆ. ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌ (Rahul Dravid) ಸೇರಿದಂತೆ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯ ಆಟದ ಆಟಗಾರರಿಗೂ ನಗದು ಬಹುಮಾನ ವಿತರಿಸಲಾಗುವುದು ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇದನ್ನೂ ಓದಿ: ಹ್ಯಾಟ್ರಿಕ್‌ ಸಿಕ್ಸರ್‌ – ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ!

    ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌, ವಿಶ್ವಕಪ್‌ ತಂಡಕ್ಕೆ ಆಯ್ಕೆಯಾದ 15 ಆಟಗಾರರು ತಲಾ 5 ಕೋಟಿ ರೂ. ಬಹುಮಾನ ಸ್ವೀಕರಿಸಿದ್ದಾರೆ. ಈ ಪೈಕಿ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಸಹ ಸೇರಿದ್ದಾರೆ. ಅಲ್ಲದೇ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದ ರಿಂಕು ಸಿಂಗ್‌, ಶುಭಮನ್‌ ಗಿಲ್‌, ಅವೇಶ್‌ ಖಾನ್‌ ಹಾಗೂ ಖಲೀಲ್‌ ಅಹ್ಮದ್‌ ಅವರಿಗೂ ತಲಾ 1 ಕೋಟಿ ರೂ. ಬಹುಮಾನ ಸಿಗಲಿದೆ.

    ಬ್ಯಾಟಿಂಗ್‌ ಕೋಚ್‌ ವಿಕ್ರಮ್‌ ರಾಥೋಡ್‌, ಫೀಲ್ಡಿಂಗ್‌ ಕೋಚ್‌ ಟಿ.ದಿಲೀಪ್‌ ಕುಮಾರ್‌ ಹಾಗೂ ಬೌಲಿಂಗ್‌ ಕೋಚ್‌ ಪಾರಸ್‌ ಮಾಂಬ್ರೆ ಸೇರಿದಂತೆ ಕೋಚಿಂಗ್‌ ಸಿಂಬ್ಬಂದಿಗೆ ತಲಾ 2.5 ಕೋಟಿ ರೂ. ಬಹುಮಾನ ಸಿಗಲಿದೆ. ಇನ್ನೂ ಮುಖ್ಯಸ್ಥ ಅಜಿತ್ ಅಗರ್ಕರ್ ಸೇರಿದಂತೆ ಆಯ್ಕೆ ಸಮಿತಿಯ ಸದಸ್ಯರಿಗೆ ತಲಾ 1 ಕೋಟಿ ರೂ. ವಿತರಿಸಲಾಗುತ್ತದೆ. ಇದನ್ನೂ ಓದಿ: T20 ಏಷ್ಯಾಕಪ್‌ ಟೂರ್ನಿಗೆ ಭಾರತ ಮಹಿಳಾ ತಂಡ ಪ್ರಕಟ – ಕನ್ನಡತಿ ಶ್ರೇಯಾಂಕಾಗೆ ಸ್ಥಾನ!

    ಟೀಂ ಇಂಡಿಯಾ ಫಿಸಿಯೋಥೆರಪಿಸ್ಟ್‌ಗಳಾದ ಕಮಲೇಶ್ ಜೈನ್, ಯೋಗೇಶ್ ಪರ್ಮಾರ್ ಮತ್ತು ತುಳಸಿ ರಾಮ್ ಯುವರಾಜ್​ಗೆ ತಲಾ 2 ಕೋಟಿ ರೂ., ಭಾರತ ತಂಡ ಥ್ರೋಡೌನ್ ಸ್ಪೆಷಲಿಸ್ಟ್​ಗಳಾದ ರಾಘವಿಂದ್ರ ದಿವಿಗಿ, ನುವಾನ್ ಉದೆನೆಕೆ ಮತ್ತು ದಯಾನಂದ್ ಗರಾನಿಗೆ ತಲಾ 2 ಕೋಟಿ ರೂ., ಟೀಂ ಇಂಡಿಯಾ ಮಸಾಜ್ ಥೆರಪಿಸ್ಟ್‌ಗಳಾದ ರಾಜೀವ್ ಕುಮಾರ್ ಮತ್ತು ಅರುಣ್ ಕಾನಡೆಗೆ ತಲಾ 2 ಕೋಟಿ ರೂ., ಭಾರತ ತಂಡದ ಸ್ಟ್ರೆಂಗ್ತ್ ಅ್ಯಂಡ್ ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿಗೆ 2 ಕೋಟಿ ರೂ. ನೀಡಲಾಗುತ್ತದೆ ಎಂದು ವರದಿಗಳು ಹೇಳಿವೆ.

    ಭಾರತ ವಿಶ್ವ ಚಾಂಪಿಯನ್‌:
    ಕಳೆದ ಜೂನ್‌ 29ರಂದು ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಗೆಲುವು ಸಾಧಿಸಿ ವಿಶ್ವಕಪ್‌ ಟ್ರೋಫಿ ಎತ್ತಿ ಹಿಡಿಯಿತು. 17 ವರ್ಷಗಳ ಬಳಿಕ ಟಿ20 ವಿಶ್ವಕಪ್‌ ಎತ್ತಿ ಹಿಡಿದ ಭಾರತ ತಂಡ 20 ಕೋಟಿ ರೂ. ಬಹುಮಾನವನ್ನೂ ಬಾಚಿಕೊಂಡಿತು. ಈ ಬೆನ್ನಲ್ಲೇ ಬಿಸಿಸಿಐ 125 ಕೋಟಿ ರೂ. ಬಹುಮಾನ ಘೋಷಣೆ ಮಾಡಿತ್ತು. ಜೊತೆಗೆ ತವರಿಗೆ ಮರಳಿದ ಬಳಿಕ ಟೀಂ ಇಂಡಿಯಾಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರದ ವತಿಯಿಂದ 11 ಕೋಟಿ ರೂ. ಬಹುಮಾನ ಘೋಷಿಸಿದರು. ಇದನ್ನೂ ಓದಿ: ಅಂದು ಅವಮಾನ, ಇಂದು ಸನ್ಮಾನ – ಟೀಕಿಸಿದ್ದ ಜನರೇ ಜೈಕಾರ ಕೂಗಿದ್ರು; ಭಾವುಕನಾದ ಪಾಂಡ್ಯ

  • ರೋಹಿತ್‌ ನಾಯಕತ್ವದಲ್ಲಿ WTC ಫೈನಲ್‌, ಚಾಂಪಿಯನ್ಸ್‌ ಟ್ರೋಫಿ ಗೆಲ್ಲುತ್ತೇವೆ: ಜಯ್‌ ಶಾ ವಿಶ್ವಾಸ

    ರೋಹಿತ್‌ ನಾಯಕತ್ವದಲ್ಲಿ WTC ಫೈನಲ್‌, ಚಾಂಪಿಯನ್ಸ್‌ ಟ್ರೋಫಿ ಗೆಲ್ಲುತ್ತೇವೆ: ಜಯ್‌ ಶಾ ವಿಶ್ವಾಸ

    ಮುಂಬೈ: ರೋಹಿತ್ ಶರ್ಮಾ (Rohit Sharma) ನಾಯಕತ್ವದಲ್ಲಿ ನಾವು ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ (WTC) ಫೈನಲ್ ಮತ್ತು ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ಗೆಲ್ಲುತ್ತೇವೆ ಎಂಬ ವಿಶ್ವಾಸ ನನಗಿದೆ ಎಂದು ಬಿಸಿಸಿಐ (BCCI) ಕಾರ್ಯದರ್ಶಿ ಜಯ್‌ ಶಾ (Jay Shah) ಹೇಳಿದ್ದಾರೆ.

    ಈ ಮೂಲಕ ಏಕದಿನ ಮತ್ತು ಟೆಸ್ಟ್ ಮಾದರಿಗಳಲ್ಲಿ ರೋಹಿತ್ ಶರ್ಮಾ ನಾಯಕರಾಗಿ ಮುಂದುವರಿಯುವುದನ್ನು ಬಿಸಿಸಿಐ ಖಚಿತ ಪಡಿಸಿದಂತಾಗಿದೆ. ವಿಡಿಯೋ ಮೂಲಕ ಜಯ್‌ ಶಾ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು.

     

    ಟಿ20 ವಿಶ್ವಕಪ್‌ (T20 World Cup) ಗೆಲುವನ್ನು ಮುಖ್ಯ ಕೋಚ್‌ ರಾಹುಲ್ ದ್ರಾವಿಡ್, ಟಿ20 ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಅವರಿಗೆ ಜಯ್‌ ಶಾ ಅರ್ಪಿಸಿದ್ದಾರೆ.

    ಒಂದು ವರ್ಷದೊಳಗೆ ನಾವು ಮೂರು ಫೈನಲ್‌ ಪಂದ್ಯ ಆಡಿದ್ದೇವೆ. ಕಳೆದ ವರ್ಷ ಜೂನ್ 11 ರಂದು ನಾವು WTC ಫೈನಲ್‌ನಲ್ಲಿ ಸೋತಿದ್ದೇವೆ. ನವೆಂಬರ್ 19 ರಂದು 10 ಪಂದ್ಯಗಳನ್ನು ಗೆದ್ದು ನಾವು ಹೃದಯಗಳನ್ನು ಗೆದ್ದರೂ ಏಕದಿನ ವಿಶ್ವಕಪ್‌ ಗೆಲ್ಲಲು ವಿಫಲವಾಗಿದ್ದೇವೆ. ಆದರೆ ಈ ವರ್ಷದ ಆರಂಭದಲ್ಲಿ ರಾಜ್‌ಕೋಟ್‌ನಲ್ಲಿ ನಾನು ಹೇಳಿದಂತೆ ರೋಹಿತ್ ನಾಯಕತ್ವದಲ್ಲಿ ಟೀಂ ಇಂಡಿಯಾ ಹೃದಯಗಳನ್ನು ಮತ್ತು ವಿಶ್ವಕಪ್ ಗೆದ್ದಿದೆ ಎಂದು ತಿಳಿಸಿದರು.

    ಫೈನಲ್‌ನ ಕೊನೆಯ ಐದು ಓವರ್‌ಗಳಲ್ಲಿ ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ಜೊತೆಗೆ ಬೌಂಡರಿ ಲೈನ್‌ ಬಳಿ ಅತ್ಯುತ್ತಮ ಕ್ಯಾಚ್‌ ಹಿಡಿದ ಸೂರ್ಯಕುಮಾರ್‌ ಯಾದವ್‌ ಅವರನ್ನು ಜಯ್‌ ಶಾ ಶ್ಲಾಘಿಸಿದರು.

    2025 ರ ಫೆಬ್ರವರಿ-ಮಾರ್ಚ್‌ನಲ್ಲಿ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲಿದೆ. ಶಾ ಅವರ ಹೇಳಿಕೆಯಿಂದ ಭಾರತ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸುವುದು ಖಚಿತವಾಗಿದೆ. ಆದರೆ ಪಾಕಿಸ್ತಾನಕ್ಕೆ ತೆರಳುತ್ತಾ ಇಲ್ಲವೋ ಎನ್ನುವುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

    ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ನಲ್ಲಿ ಎರಡು ಬಾರಿ ರೋಹಿತ್‌ ಶರ್ಮಾ ನಾಯಕತ್ವದ ಅಡಿಯಲ್ಲಿ ಫೈನಲ್‌ ಆಡಿ ರನ್ನರ್‌ ಅಪ್‌ ಸ್ಥಾನವನ್ನು ಪಡೆದುಕೊಂಡಿದೆ.

    202-25ರ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಆಡಿದ 9 ಟೆಸ್ಟ್‌ ಪಂದ್ಯಗಳಲ್ಲಿ 6 ಪಂದ್ಯ ಗೆದ್ದು74 ಅಂಕ ಸಂಪಾದಿಸಿ 68.52 ಪಿಸಿಟಿಯೊಂದಿಗೆ (ಪರ್ಸಂಟೇಜ್‌ ಆಫ್‌ ಪಾಯಿಂಟ್‌) ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 12 ಪಂದ್ಯವಾಡಿದ್ದು 8 ಪಂದ್ಯ ಗೆದ್ದು90 ಅಂಕ ಸಂಪಾದಿಸಿ 62.50 ಪಿಸಿಟಿಯೊಂದಿಗೆ ಎರಡನೇ ಸ್ಥಾನದಲ್ಲಿದೆ. ಬಾಂಗ್ಲಾದೇಶ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಮೂರು ಟೆಸ್ಟ್ ಸರಣಿ ಆಡಲಿದೆ.

  • ಬಿಸಿಸಿಐ ಬಳಿಕ ಮಹಾರಾಷ್ಟ್ರ ಸರ್ಕಾರದಿಂದಲೂ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ ಗಿ‌ಫ್ಟ್‌!

    ಬಿಸಿಸಿಐ ಬಳಿಕ ಮಹಾರಾಷ್ಟ್ರ ಸರ್ಕಾರದಿಂದಲೂ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ ಗಿ‌ಫ್ಟ್‌!

    ಮುಂಬೈ: 2024ರ ಟಿ20 ವಿಶ್ವಕಪ್‌ ವಿಜೇತ ಭಾರತ ತಂಡಕ್ಕೆ (Team India) ಬಿಸಿಸಿಐ 125 ಕೋಟಿ ರೂ. ನಗದು ಬಹುಮಾನ ನೀಡಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರವೂ (Maharashtra Government) ಭರ್ಜರಿ ಉಡುಗೊರೆ ಘೋಷಿಸಿದೆ.

    ಶುಕ್ರವಾರ ಇಲ್ಲಿನ ವಿಧಾನ ಭವನದ ಸೆಂಟ್ರಲ್ ಹಾಲ್‌ನಲ್ಲಿ (ರಾಜ್ಯ ಶಾಸಕಾಂಗ ಸಂಕೀರ್ಣ) ನಡೆದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ (Eknath Shinde), ಸರ್ಕಾರದ ವತಿಯಿಂದ 11 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ.

    ಇದಕ್ಕೂ ಮುನ್ನ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತಿತರರ ಆಟಗಾರರನ್ನು ಏಕನಾಥ್ ಶಿಂಧೆ ಸನ್ಮಾನಿಸಿದರು. ದಕ್ಷಿಣ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸ ವರ್ಷಾ ಬಂಗಲೆಯಲ್ಲಿ ರೋಹಿತ್ ಶರ್ಮಾ (Rohit Sharma) ಸೇರಿದಂತೆ ಸಹ ಆಟಗಾರರಾದ ಯಶಸ್ವಿ ಜೈಸ್ವಾಲ್, ಶಿವಂ ದುಬೆ ಮತ್ತು ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನ ಸನ್ಮಾನಿಸಿದರು. ಜೊತೆಗೆ ವಿಘ್ನೇಶ್ವರ ಮೂರ್ತಿ ನೀಡಿ ಗೌರವಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಶಿಂಧೆ, ಅದ್ಭುತ ಮ್ಯಾಚ್, ಡಿಫೈನಿಂಗ್ ಕ್ಯಾಚ್‌ಗಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಶ್ಲಾಘಿಸಿದರು.

    ನಂತರ ಮುಂಬೈನ ಮಹಾರಾಷ್ಟ್ರ ವಿಧಾನ ಭವನದ ಸಂಕೀರ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ಆಟಗಾರರನ್ನು ಸನ್ಮಾನಿಸಲಾಯಿತು. ಈ ವೇಳೆ ಶಿಂಧೆ ಅವರು ರೋಹಿತ್‌ ಶರ್ಮಾಗೆ ಶಿವಾಜಿ ಮಹರಾಜ್‌ ಮೂರ್ತಿ ನೀಡಿ ಗೌರವಿಸಲಾಯಿತು.

    ಈ ಬಾರಿ ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್‌ ಟೂರ್ನಿ ನಡೆಯಿತು. ಆರಂಭದಿಂದಲೂ ಒಂದೇ ಒಂದು ಪಂದ್ಯವನ್ನೂ ಸೋಲದ ಭಾರತ ಫೈನಲ್‌ನಲ್ಲಿಯೂ ದಕ್ಷಿಣ ಆಫ್ರಿಕಾ ವಿರುದ್ಧ ಬಾರ್ಬಡೋಸ್‌ನಲ್ಲಿ ರೋಚಕ ಗೆಲುವು ಸಾಧಿಸಿತು.