Tag: ರೋಹಿತ್ ಶರ್ಮಾ

  • ಟಿ20 ವಿಶ್ವಕಪ್‌ ಪ್ರಶಸ್ತಿಯನ್ನು ದೇಶಕ್ಕೆ ಅರ್ಪಿಸಿದ ರೋಹಿತ್‌ – ವೇದಿಕೆಯಲ್ಲಿ ಕೊಹ್ಲಿ ಭಾವುಕ!

    ಟಿ20 ವಿಶ್ವಕಪ್‌ ಪ್ರಶಸ್ತಿಯನ್ನು ದೇಶಕ್ಕೆ ಅರ್ಪಿಸಿದ ರೋಹಿತ್‌ – ವೇದಿಕೆಯಲ್ಲಿ ಕೊಹ್ಲಿ ಭಾವುಕ!

    ಬೆಂಗಳೂರು: 2024ರ ಟಿ20 ವಿಶ್ವಕಪ್‌ (T20 World Cup 2024) ವಿಜೇತ ಭಾರತ ತಂಡಕ್ಕೆ ಗೌರವಿಸುವ ಸಲುವಾಗಿ ವಾಂಖೆಡೆ ಮೈದಾನದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮವು ಅನೇಕ ಭಾವುಕ ಕ್ಷಣಗಳಿಗೆ ಸಾಕ್ಷಿಯಾಯಿತು. ಟೀಂ ಇಂಡಿಯಾದ ಪ್ರತಿಯೊಬ್ಬ ಆಟಗಾರರು ಮಾತನಾಡಿ ಹಂಚಿಕೊಂಡರು. ಈ ವೇಳೆ ಟಿ20 ವಿಶ್ವಕಪ್‌ ಪ್ರಶಸ್ತಿಯನ್ನು ರೋಹಿತ್‌ ಶರ್ಮಾ ಇಡೀ ದೇಶಕ್ಕೆ ಸಮರ್ಪಿಸಿದರು.

    ನಾಯಕ ರೋಹಿತ್‌ ಶರ್ಮಾ ಮಾತನಾಡಿ ಮುಂಬೈ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದರು. ಜೊತೆಗೆ ತಂಡದ ಪ್ರತಿಯೊಬ್ಬ ಆಟಗಾರನ ಶ್ರಮವನ್ನು ಗುಣಗಾನ ಮಾಡಿದರು. ಅಷ್ಟೇ ಅಲ್ಲದೇ ಈ ಗೆಲುವಿನಲ್ಲಿ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಅವರ ಕೊಡುಗೆಯನ್ನು ಸ್ಮರಿಸಿದರು. ಇದನ್ನು ಕೇಳಿದ ಪಾಂಡ್ಯ ಮೈದಾನದಲ್ಲೇ ಕಣ್ಣೀರಿಟ್ಟರು. ಕೊನೇ ಓವರ್‌ನ ಮೊದಲ ಎಸೆತದಲ್ಲಿ ಡೇವಿಡ್‌ ಮಿಲ್ಲರ್‌ ಅವರನ್ನು ಔಟ್‌ ಮಾಡಿದ್ದೇ ಗೆಲುವಿಗೆ ದೊಡ್ಡ ತಿರುವು ಕೊಟ್ಟಿತು ಎಂದು ರೋಹಿತ್‌ ಗುಣಗಾನ ಮಾಡಿದರು.

    ಅಷ್ಟೇ ಅಲ್ಲ, ಭಾರತೀಯ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದು, ಅವರು ಈ ಟಿ20 ವಿಶ್ವಕಪ್ ಪ್ರಶಸ್ತಿಗಾಗಿ ಆಟಗಾರರಂತೆ ಹಪಹಪಿಸುತ್ತಿದ್ದರು. ಇಂದು ಎಲ್ಲರ ಕನಸು ನನಸಾಗಿದೆ. ಈ ವಿಶ್ವಕಪ್‌ ನಮ್ಮ ಗೆಲುವಲ್ಲ, ದೇಶದ ಗೆಲುವು, ದೇಶದ ಪ್ರತಿಯೊಬ್ಬರಿಗೂ ಸೇರಿದ್ದು ಎಂದು ಭಾವುಕರಾದರು.

    ಇದೇ ವೇಳೆ ಮಾತನಾಡಿದ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್, ನಾನು ಈ ಪ್ರೀತಿಯನ್ನು ಕಳೆದುಕೊಳ್ಳಲಿದ್ದೇನೆ, ರಾತ್ರಿ ಬೀದಿಗಳಲ್ಲಿ ನಾನು ಕಂಡದ್ದನ್ನು ನಾನು ಮರೆಯುವುದಿಲ್ಲ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

    ಕೊಹ್ಲಿಯೂ ಭಾವುಕ:
    ರೋಹಿತ್‌ ಬಳಿಕ ಮಾತನಾಡಿದ ಕಿಂಗ್‌ ಕೊಹ್ಲಿ, ನನ್ನ 15 ವರ್ಷಗಳ ವೃತ್ತಿಜೀವನದಲ್ಲಿ ರೋಹಿತ್ ಇಷ್ಟೊಂದು ಭಾವುಕರಾಗಿರುವುದನ್ನು ನಾನು ನೋಡಿಲ್ಲ. ನಾನು ಡ್ರೆಸ್ಸಿಂಗ್ ರೂಮ್‌ಗೆ ಹೋಗುತ್ತಿದ್ದೆ ಮತ್ತು ರೋಹಿತ್ ಹೊರಗೆ ಬರುತ್ತಿದ್ದರು. ಇಬ್ಬರೂ ಭಾವುಕರಾಗಿ ಪರಸ್ಪರ ಅಪ್ಪಿಕೊಂಡೆವು. ಆ ಕ್ಷಣ ನನಗೆ ವಿಶೇಷವಾಗಿತ್ತು ಎಂದು ಹೇಳಿದರು.

    2007 ಅಥವಾ 2011ರಲ್ಲಿ ನಾವು ವಿಶ್ವಕಪ್ ಗೆದ್ದಾಗ ಹಿರಿಯ ಆಟಗಾರರು ತುಂಬಾ ಅಳುತ್ತಿದ್ದರು. ಆದರೆ ನಾನು ಅವರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಲಿಲ್ಲ. ಖುಷಿಯ ಸಂದರ್ಭದಲ್ಲಿ ಅವರೆಲ್ಲಾ ಯಾಕೆ ಇಷ್ಟೊಂದು ಭಾವುಕರಾಗುತ್ತಿದ್ದಾರೆ ಎಂದು ಆಶ್ಚರ್ಯ ಪಡುತ್ತಿದ್ದೆ. ಆದರೆ ಈಗ ನನಗೆ ಅರ್ಥವಾಯಿತು. ನಾನಿರಲಿ ಅಥವಾ ರೋಹಿತ್ ಆಗಿರಲಿ, ಇಬ್ಬರೂ ಬಹುಕಾಲ ಟ್ರೋಫಿ ಗೆಲ್ಲುವುದರಲ್ಲಿ ನಿರತರಾಗಿದ್ದರು. ಮೊದಲು ನನ್ನ ನಾಯಕತ್ವದಲ್ಲಿ ಮತ್ತು ನಂತರ ರೋಹಿತ್ ನಾಯಕತ್ವದಲ್ಲಿ. ನಾವಿಬ್ಬರೂ ಈ ಟ್ರೋಫಿ ಗೆಲ್ಲಲು ಹತಾಶರಾಗಿದ್ದೆವು. ಈಗ ನಾವು ಗೆದ್ದಿರುವುದು ನಮಗೆ ವಿಶೇಷ. ಗೆದ್ದು ಮತ್ತೆ ವಾಂಖೆಡೆಗೆ ಬರುವುದು ನಮ್ಮ ಪಾಲಿಗೆ ವಿಶೇಷವಾಗಿದೆ ಎಂದು ಹಳೆಯ ನೆನಪುಗಳನ್ನು ಮೆಲುಕುಹಾಕಿದರು.

  • ತ್ರಿವರ್ಣ ಧ್ವಜ ಹಿಡಿದು ‘ವಂದೇ ಮಾತರಂ’ ಹಾಡಿದ ಟೀಂ ಇಂಡಿಯಾ ಆಟಗಾರರು, ಫ್ಯಾನ್ಸ್‌ – ಮೈನವಿರೇಳಿಸುವ ವೀಡಿಯೋ ಹಂಚಿಕೊಂಡ RCB

    ತ್ರಿವರ್ಣ ಧ್ವಜ ಹಿಡಿದು ‘ವಂದೇ ಮಾತರಂ’ ಹಾಡಿದ ಟೀಂ ಇಂಡಿಯಾ ಆಟಗಾರರು, ಫ್ಯಾನ್ಸ್‌ – ಮೈನವಿರೇಳಿಸುವ ವೀಡಿಯೋ ಹಂಚಿಕೊಂಡ RCB

    ಮುಂಬೈ: ಟಿ20 ವಿಶ್ವಕಪ್‌ (T20 World Cup 2024) ಗೆದ್ದ ಟೀಂ ಇಂಡಿಯಾ ಆಟಗಾರರನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭವ್ಯ ಸಮಾರಂಭ ಆಯೋಜಿಸಿ ಅಭಿನಂದಿಸಲಾಯಿತು. ಈ ವೇಳೆ ‘ವಂದೇ ಮಾತರಂ’ ಹಾಡನ್ನು ಹಾಡುವ ಮೂಲಕ ಟೀಂ ಇಂಡಿಯಾ (Team India) ಆಟಗಾರರು ಮತ್ತು ಅಭಿಮಾನಿಗಳು ದೇಶಪ್ರೇಮ ಮೆರೆದರು.

    ಕ್ರೀಡಾಂಗಣದಲ್ಲಿ ರೋಹಿತ್‌ ಪಡೆ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸಿತು. ಈ ವೇಳೆ ಅಭಿಮಾನಿಗಳು ಸಹ ಕ್ರಿಕೆಟಿಗರ ಜೊತೆ ಸಂಭ್ರಮಾಚರಿಸಿದರು. ಕ್ರೀಡಾಂಗಣದಲ್ಲಿ ‘ವಂದೇ ಮಾತರಂ’ ಹಾಡು ಕೇಳಿಬಂತು. ಇದಕ್ಕೆ ಆಟಗಾರರು, ಫ್ಯಾನ್ಸ್‌ ಎಲ್ಲರೂ ದನಿಗೂಡಿದರು. ಇದನ್ನೂ ಓದಿ: ಅಂದು ಅವಮಾನ, ಇಂದು ಸನ್ಮಾನ – ಟೀಕಿಸಿದ್ದ ಜನರೇ ಜೈಕಾರ ಕೂಗಿದ್ರು; ಭಾವುಕನಾದ ಪಾಂಡ್ಯ

    ಎಲ್ಲರೂ ಹಾಡನ್ನು ಹಾಡುವ ಮೂಲಕ ದೇಶಪ್ರೇಮ ಮೆರೆದರು. ಈ ಸಂದರ್ಭ ನಿಜಕ್ಕೂ ಮೈನವರೇಳಿಸುವಂತಿತ್ತು. ದೃಶ್ಯದ ವೀಡಿಯೋವನ್ನು ಐಪಿಎಲ್‌ ತಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

    ವಿಜಯೋತ್ಸವಕ್ಕೆ ಆಹ್ವಾನಿಸಿದ್ದ ರೋಹಿತ್‌:
    ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ವಾಂಖೆಡೆ ಮೈದಾನಕ್ಕೆ ಉಚಿತ ಪ್ರವೇಶ ಕಲ್ಪಿಸಿದ್ದರಿಂದ ಮೈದಾನದ ತುಂಬಾ ಅಭಿಮಾನಿಗಳು ಕಿಕ್ಕಿರಿದಿದ್ದರು. ಇದನ್ನೂ ಓದಿ: Champions: ವಿಶ್ವ ಚಾಂಪಿಯನ್ಸ್‌ಗೆ ಬಂಪರ್‌ ಗಿಫ್ಟ್‌ – 125 ಕೋಟಿ ರೂ. ಬಹುಮಾನ ಚೆಕ್‌ ವಿತರಣೆ

    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

  • ಅಂದು ಅವಮಾನ, ಇಂದು ಸನ್ಮಾನ – ಟೀಕಿಸಿದ್ದ ಜನರೇ ಜೈಕಾರ ಕೂಗಿದ್ರು; ಭಾವುಕನಾದ ಪಾಂಡ್ಯ

    ಅಂದು ಅವಮಾನ, ಇಂದು ಸನ್ಮಾನ – ಟೀಕಿಸಿದ್ದ ಜನರೇ ಜೈಕಾರ ಕೂಗಿದ್ರು; ಭಾವುಕನಾದ ಪಾಂಡ್ಯ

    ಮುಂಬೈ: ಇಲ್ಲಿನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ನಡೆದ ವಿಶೇಷ ಸನ್ಮಾನ ಕಾರ್ಯಕ್ರಮದಲ್ಲಿ ಭಾರತೀಯ ಆಟಗಾರರ ಪರ ಅಭಿಮಾನಿಗಳು ಜೈಕಾರ ಕೂಗಿದರು. ಇದರಲ್ಲಿ ವಿಶೇಷ ಅನಿಸಿದ್ದು ಹಾರ್ದಿಕ್‌ ಪಾಂಡ್ಯ. ಏಕೆಂದರೆ 2024ರ ಐಪಿಎಲ್‌ ಟೂರ್ನಿ ವೇಳೆ ಇದೇ ಮೈದಾನದಲ್ಲಿ ಪಾಂಡ್ಯ ಪ್ರೇಕ್ಷಕರು ಹಾಗೂ ರೋಹಿತ್‌ ಅಭಿಮಾನಿಗಳಿಂದ ಭಾರೀ ಟೀಕೆಗೆ ಗುರಿಯಾಗಿದ್ದರು. ಅಂದು ಅವಮಾನಿಸಿದ್ದ ಜಾಗದಲ್ಲೇ ಇಂದು ಸನ್ಮಾನ ದೊರೆಯಿತು. ಟೀಕಿಸಿದ್ದ ಅಭಿಮಾನಿಗಳೇ ಜೈಕಾರ ಕೂಗಿದ್ದನ್ನು ಕಂಡು ಹಾರ್ದಿಕ್‌ ಭಾವುಕರಾದರು.

    ಹೌದು. 2024ರ ಐಪಿಎಲ್‌ ಆವೃತ್ತಿಯಲ್ಲಿ ಮುಂಬೈ ಫ್ರಾಂಚೈಸಿ ಹೊಸ ನಾಯಕತ್ವ ತರಲು ಬಯಸಿತ್ತು. ಅದಕ್ಕಾಯೇ ಗುಜರಾತ್‌ ಟೈಟಾನ್ಸ್‌ ತಂಡದಿಂದ ಹಾರ್ದಿಕ್‌ ಪಾಂಡ್ಯ ಅವರನ್ನು ಮತ್ತೆ ತವರು ತಂಡಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು. ಟಿ20 ವಿಶ್ವಕಪ್‌ ಒತ್ತಡವನ್ನೂ ನಿಭಾಯಿಸಬೇಕಿದ್ದ ಕಾರಣ,‌ 5 ಬಾರಿ ಚಾಂಪಿಯನ್‌ ಪಟ್ಟ ಗೆದ್ದುಕೊಟ್ಟ ರೋಹಿತ್‌ ಶರ್ಮಾರನ್ನು ಬಿಟ್ಟು ಹಾರ್ದಿಕ್‌ ಪಾಂಡ್ಯಗೆ ನಾಯಕತ್ವ ನೀಡಲಾಯಿತು. ಆದ್ರೆ ನಾಯಕತ್ವದ ಹೊಣೆ ಹೊತ್ತ ಭರದಲ್ಲಿ ಹಾರ್ದಿಕ್‌ ಪಾಂಡ್ಯ ಅವರು ಫೀಲ್ಡ್‌ನಲ್ಲಿ ರೋಹಿತ್‌ರನ್ನು ನಡೆಸಿಕೊಂಡ ರೀತಿ ಭಾರೀ ಟೀಕೆಗೆ ಗುರಿಯಾಗುವಂತೆ ಮಾಡಿತ್ತು.

    ಒಂದೊಮ್ಮೆ ಪಂದ್ಯದ ಮಧ್ಯದಲ್ಲೇ ನಾಯಿಯೊಂದು ಮೈದಾನ ಪ್ರವೇಶಿಸಿತ್ತು, ಈ ವೇಳೆ ಪ್ರೇಕ್ಷಕರು ಅದನ್ನು ಹಾರ್ದಿಕ್‌, ಹಾರ್ದಿಕ್‌ ಎಂದು ಕೂಗಿ ಅವಮಾನಿಸಿದ್ದರು. ಇದ್ಯಾ‌ವುದಕ್ಕೂ ಕುಗ್ಗದ ಪಾಂಡ್ಯ ತಮ್ಮ ಪ್ರದರ್ಶನ ಮುಂದುವರಿಸಿದರು. ಆದ್ರೆ ಸತತ ಸೋಲುಗಳಿಂದಾಗಿ ಮುಂಬೈ ತಂಡ ಲೀಗ್‌ ಸುತ್ತಿನಲ್ಲಿ ಹೊರಬಿದ್ದಿತು. ಇದರಿಂದ ಪಾಂಡ್ಯ ನಾಯಕತ್ವದ ಬಗ್ಗೆಯೂ ಭಾರೀ ಟೀಕೆ ವ್ಯಕ್ತವಾಗಿತ್ತು. ಇಂದು ಅದೇ ಮೈದಾನದಲ್ಲಿ ಪಾಂಡ್ಯ ಸನ್ಮಾನ ಸ್ವೀಕರಿಸಿದ್ದಾರೆ.

    ಟಿ20 ವಿಶ್ವಕಪ್‌ ಟೂರ್ನಿಯ ಅಂತಿಮ ಓವರ್‌ನಲ್ಲಿ ಪಾಂಡ್ಯ ಅವರ ಚಾಣಾಕ್ಷ ಬೌಲಿಂಗ್‌ ಭಾರತಕ್ಕೆ ಗೆಲುವು ತಂದುಕೊಟ್ಟಿತು. ನಿರ್ಣಾಯಕ ಸಮಯದಲ್ಲಿ ಹೆನ್ರಿಕ್‌ ಕ್ಲಾಸೆನ್‌, ಡೇವಿಡ್‌ ಮಿಲ್ಲರ್‌ ಅವರ ವಿಕೆಟ್‌ಗಳನ್ನು ಪಡೆಯುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು. ಹೀಗಾಗಿ ಭಾರತದ ಟಿ 20 ವಿಶ್ವಕಪ್ ಗೆಲುವಿನ ನಂತರ ಪಾಂಡ್ಯ ಅವರ ಜೀವನವು ಅನೇಕ ರೀತಿಯಲ್ಲಿ ಬದಲಾವಣೆ ಕಂಡಿತು.

    ಕಠಿಣ ದಿನಗಳನ್ನು ನೆನಪಿಸಿಕೊಂಡ ಪಾಂಡ್ಯ
    ಪಂದ್ಯದ ಬಳಿಕ ಮಾತನಾಡಿದ್ದ ಪಾಂಡ್ಯ ಕಠಿಣ ದಿನಗಳನ್ನು ನೆನಪಿಸಿಕೊಂಡಿದ್ದರು. ಇದು ತುಂಬಾ ಭಾವನಾತ್ಮಕ ಕ್ಷಣ. ನಾವು ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಇಂದು ಇಡೀ ರಾಷ್ಟ್ರವು ಬಯಸಿದ್ದನ್ನ ನಾವು ಪೂರೈಸಿದ್ದೇವೆ. ಇದು ನನಗೆ ಹೆಚ್ಚು ವಿಶೇಷವಾಗಿದೆ. ಏಕೆಂದರೆ ನನ್ನ ಕೊನೆಯ 6 ತಿಂಗಳು ಕಷ್ಟಕರವಾಗಿದ್ದವು ಎಂದು ನೆನಪಿಸಿಕೊಂಡು ಕಣ್ಣೀರಿಟ್ಟಿದ್ದರು.

  • Champions: ವಿಶ್ವ ಚಾಂಪಿಯನ್ಸ್‌ಗೆ ಬಂಪರ್‌ ಗಿಫ್ಟ್‌ – 125 ಕೋಟಿ ರೂ. ಬಹುಮಾನ ಚೆಕ್‌ ವಿತರಣೆ

    Champions: ವಿಶ್ವ ಚಾಂಪಿಯನ್ಸ್‌ಗೆ ಬಂಪರ್‌ ಗಿಫ್ಟ್‌ – 125 ಕೋಟಿ ರೂ. ಬಹುಮಾನ ಚೆಕ್‌ ವಿತರಣೆ

    ಮುಂಬೈ: 2024ರ ಟಿ20 ವಿಶ್ವಕಪ್‌ (T20 World Cup 2024) ವಿಜೇತ ಭಾರತ ತಂಡ ಅದ್ಧೂರಿ ವಿಜಯಯಾತ್ರೆ ಮುಗಿಸಿದ ಬೆನ್ನಲ್ಲೇ ಬಿಸಿಸಿಐ ಭರ್ಜರಿ ಉಡುಗೊರೆ ನೀಡಿ ಸನ್ಮಾನಿಸಿದೆ.

    ತಾಯ್ನಾಡಿಗೆ ಮರಳಿದ್ದ ಟೀಂ ಇಂಡಿಯಾ ಆಟಗಾರರಿಗೆ ಮುಂಬೈನಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಮುಂಬೈ ಕಡಲತೀರ ನಾರೀಮನ್ ಪಾಯಿಂಟ್‌ನಿಂದ ಆರಂಭಗೊಂಡ ಅದ್ಧೂರಿ ಯಾತ್ರೆ ವಾಂಖೆಡೆ ಕ್ರೀಡಾಂಗಣ ತಲುಪಿತು. ಬಳಿಕ ಟೀಂ ಇಂಡಿಯಾ ಆಟಗಾರರು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿದ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತದ (BCCI Prizemoney) ಚೆಕ್‌ ವಿತರಣೆ ಮಾಡಿತು. ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್‌ ಶಾ, ಆಟಗಾರರಿಗೆ ಚೆಕ್‌ ವಿತರಣೆ ಮಾಡಿದರು. ಇದಕ್ಕೂ ಮುನ್ನ ಟೀಂ ಇಂಡಿಯಾ (Team India) ಆಟಗಾರರು ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದರು. ಇದನ್ನೂ ಓದಿ: ಅಂದು ಅವಮಾನವಾಗಿದ್ದ ಜಾಗದಲ್ಲೇ ಸನ್ಮಾನ – ನೆನಪಿದೆಯಾ 2007ರ ರೋಮಾಂಚನಕಾರಿ ಕ್ಷಣ!

    ರೋ-ಕೊ ಜೋಡಿ ಕಮಾಲ್:‌
    ಮುಂಬೈನಲ್ಲಿ ನಡೆದ ಅದ್ಧೂರಿ ವಿಜಯಯಾತ್ರೆಯಲ್ಲಿ ನಾಯಕ ರೋಹಿತ್‌ ಶರ್ಮಾ (Rohit Sharma), ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಭರ್ಜರಿ ಕಮಾಲ್‌ ಮಾಡಿದರು. ವಿಜಯೋತ್ಸವ ಪರೇಡ್‌ ವೇಳೆ ಆಟಗಾರರ ಮಧ್ಯೆ ನಿಂತು ಸಂಭ್ರಮದ ಕಡಲಲ್ಲಿ ತೇಲುತ್ತಿದ್ದ ರೋಹಿತ್‌ ಶರ್ಮಾರ ಹೆಗಲ ಮೇಲೆ ಕೈಹಾಕಿಕೊಂಡು ಕೊಹ್ಲಿ ಬಸ್‌ ಮುಂಭಾಗಕ್ಕೆ ಕರೆತಂದರು. ಬಳಿಕ ಇಬ್ಬರೂ ಟ್ರೋಫಿ ಎತ್ತಿ ಹಿಡಿದು ಜೋರಾಗಿ ಘರ್ಜಿಸಿದರು. ಈ ದೃಶ್ಯದ ವೀಡಿಯೋ ತುಣುಕು ಕೆಲವೇ ಕ್ಷಣಗಳಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿತು. ಇದನ್ನೂ ಓದಿ: ವಿಜಯಯಾತ್ರೆ ಶುರು – ʻವಿಶ್ವʼಗೆದ್ದ ವೀರರನ್ನು ಕಣ್ತುಂಬಿಕೊಂಡ ಅಭಿಮಾನಿಗಳು!

    ನಂಬಿಕೆ ಉಳಿಸಿಕೊಂಡ ಕೊಹ್ಲಿ:
    ವಿಶ್ವಕಪ್‌ ಟೂರ್ನಿಯ ಆರಂಭದಿಂದಲೂ ʻರೋ-ಕೊʼ ಆರಂಭಿಕ ಜೋಡಿ ಭರ್ಜರಿ ಕಮಾಲ್‌ ಮಾಡಿತ್ತು. ಆದ್ರೆ ಆರಂಭಿಕ ಪಂದ್ಯದಿಂದಲೂ ಫಾರ್ಮ್‌ ಕಳೆದುಕೊಂಡಿದ್ದ ಕಿಂಗ್‌ ಕೊಹ್ಲಿ ಬಗ್ಗೆ ಅನೇಕರಿಂದ ಟೀಕೆಗಳು ವ್ಯಕ್ತವಾಗುತ್ತಿತ್ತು. ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ನಾಯಕ ರೋಹಿತ್‌, ವಿರಾಟ್‌ ಪರವಾಗಿಯೇ ಮಾತನಾಡುತ್ತಾ ಬಂದಿದ್ದರು. ಬಹುಶಃ ವಿರಾಟ್‌ ತಮ್ಮ ಆಟವನ್ನು ಫೈನಲ್‌ಗೆ ಉಳಿಸಿಕೊಂಡಿದ್ದಾರೆ ಎಂದು ವಿಶ್ವಾಸದ ನುಡಿಗಳನ್ನಾಡಿದ್ದರು. ಅದರಂತೆ ರೋಹಿತ್‌ ಶರ್ಮಾ ಅವರ ನಂಬಿಕೆಯನ್ನು ಕೊಹ್ಲಿ ಸುಳ್ಳಾಗಿಸಲಿಲ್ಲ. ಸ್ಫೋಟಕ ಪ್ರದರ್ಶನದೊಂದಿಗೆ ತಾಳ್ಮೆಯ ಆಟವಾಡಿದ ಕೊಹ್ಲಿ 59 ಎಸೆತಗಳಲ್ಲಿ 76 ರನ್‌ ಗಳಿಸಿದ್ದರು. ಇದು ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ 170 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಅಲ್ಲದೇ ವಿಶ್ವಕಪ್‌ ಇತಿಹಾಸದಲ್ಲೇ ತಂಡದವೊಂದರ ಗರಿಷ್ಠ ರನ್‌ ಮೊತ್ತವೂ (176) ಆಯಿತು.

    ʻವಿಶ್ವʼ ವಿಜೇತರಿಗೆ ನಮೋ ಅಭಿನಂದನೆ:
    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು. ಇದನ್ನೂ ಓದಿ: T20 ವಿಶ್ವಕಪ್‌ ಗೆಲುವಿನ ಸಂಭ್ರಮ – ಬಿಸಿಸಿಐನಿಂದ ಮೋದಿಗೆ ʻನಮೋ ನಂ.1ʼ ಟೀ ಶರ್ಟ್‌ ಗಿಫ್ಟ್‌!

  • ವಿಶ್ವಕಪ್‌ ಟ್ರೋಫಿ ಹಿಡಿದು ಘರ್ಜಿಸಿದ ʻರೋ-ಕೊʼ – ವಾಂಖೆಡೆ ಮೈದಾನ ತಲುಪಿದ ವಿಜಯಯಾತ್ರೆ!

    ವಿಶ್ವಕಪ್‌ ಟ್ರೋಫಿ ಹಿಡಿದು ಘರ್ಜಿಸಿದ ʻರೋ-ಕೊʼ – ವಾಂಖೆಡೆ ಮೈದಾನ ತಲುಪಿದ ವಿಜಯಯಾತ್ರೆ!

    ಮುಂಬೈ: 17 ವರ್ಷಗಳ ಬಳಿಕ ಟಿ20 ವಿಶ್ವಕಪ್‌ (T20 World Cup) ಗೆದ್ದು ತಂದ ಟೀಂ ಇಂಡಿಯಾ ಕ್ರಿಕೆಟ್‌ ಆಟಗಾರರನ್ನು ಗೌರವಿಸುವ ಸಲುವಾಗಿ ಮುಂಬೈನಲ್ಲಿಂದು ಅದ್ಧೂರಿ ವಿಜಯಯಾತ್ರೆ ನಡೆಯಿತು. ಮುಂಬೈ (Mumbai) ಕಡಲತೀರ ನಾರೀಮನ್ ಪಾಯಿಂಟ್‌ನಿಂದ ಆರಂಭಗೊಂಡ ಅದ್ಧೂರಿ ಯಾತ್ರೆ ಸುಮಾರು 2 ಕಿಮೀ ತಲುಪಿತು. ವಿಜಯಯಾತ್ರೆಯಲ್ಲಿ ನಾಯಕ ರೋಹಿತ್‌ ಶರ್ಮಾ, ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ (Virat Kohli) ಇಬ್ಬರು ನೆರೆದಿದ್ದ ಅಭಿಮಾನಿಗಳ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸುವ ಕೆಲಸ ಮಾಡಿದರು.

    ವಿಜಯೋತ್ಸವ ಪರೇಡ್‌ ವೇಳೆ ಆಟಗಾರರ ಮಧ್ಯೆ ನಿಂತು ಸಂಭ್ರಮದ ಕಡಲಲ್ಲಿ ತೇಲುತ್ತಿದ್ದ ರೋಹಿತ್‌ ಶರ್ಮಾರ (Rohit Sharma) ಹೆಗಲ ಮೇಲೆ ಕೈಹಾಕಿಕೊಂಡು ಕೊಹ್ಲಿ ಬಸ್‌ ಮುಂಭಾಗಕ್ಕೆ ಕರೆತಂದರು. ಬಳಿಕ ಇಬ್ಬರೂ ಟ್ರೋಫಿಯನ್ನು ಎತ್ತಿ ಹಿಡಿದು ಜೋರಾಗಿ ಕೇಕೆ ಹಾಕಿದರು. ಈ ದೃಶ್ಯದ ವೀಡಿಯೋ ತುಣುಕು ಕೆಲವೇ ಕ್ಷಣಗಳಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಅಂದು ಅವಮಾನವಾಗಿದ್ದ ಜಾಗದಲ್ಲೇ ಸನ್ಮಾನ – ನೆನಪಿದೆಯಾ 2007ರ ರೋಮಾಂಚನಕಾರಿ ಕ್ಷಣ!

    ನಾಯಕನ ನಂಬಿಕೆ ಎತ್ತಿ ಹಿಡಿದ ಕಿಂಗ್‌ ಕೊಹ್ಲಿ:
    ವಿಶ್ವಕಪ್‌ ಟೂರ್ನಿಯ ಆರಂಭದಿಂದಲೂ ʻರೋ-ಕೊʼ ಆರಂಭಿಕ ಜೋಡಿ ಭರ್ಜರಿ ಕಮಾಲ್‌ ಮಾಡಿತ್ತು. ಆದ್ರೆ ಆರಂಭಿಕ ಪಂದ್ಯದಿಂದಲೂ ಫಾರ್ಮ್‌ ಕಳೆದುಕೊಂಡಿದ್ದ ಕಿಂಗ್‌ ಕೊಹ್ಲಿ ಬಗ್ಗೆ ಅನೇಕರಿಂದ ಟೀಕೆಗಳು ವ್ಯಕ್ತವಾಗುತ್ತಿತ್ತು. ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ನಾಯಕ ರೋಹಿತ್‌, ವಿರಾಟ್‌ ಪರವಾಗಿಯೇ ಮಾತನಾಡುತ್ತಾ ಬಂದಿದ್ದರು. ಬಹುಶಃ ವಿರಾಟ್‌ ತಮ್ಮ ಆಟವನ್ನು ಫೈನಲ್‌ಗೆ ಉಳಿಸಿಕೊಂಡಿದ್ದಾರೆ ಎಂದು ವಿಶ್ವಾಸದ ನುಡಿಗಳನ್ನಾಡಿದ್ದರು. ಅದರಂತೆ ರೋಹಿತ್‌ ಶರ್ಮಾ ಅವರ ನಂಬಿಕೆಯನ್ನು ಕೊಹ್ಲಿ ಸುಳ್ಳಾಗಿಸಲಿಲ್ಲ. ಸ್ಫೋಟಕ ಪ್ರದರ್ಶನದೊಂದಿಗೆ ತಾಳ್ಮೆಯ ಆಟವಾಡಿದ ಕೊಹ್ಲಿ 59 ಎಸೆತಗಳಲ್ಲಿ 76 ರನ್‌ ಗಳಿಸಿದ್ದರು. ಇದು ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ 170 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಅಲ್ಲದೇ ವಿಶ್ವಕಪ್‌ ಇತಿಹಾಸದಲ್ಲೇ ತಂಡದವೊಂದರ ಗರಿಷ್ಠ ರನ್‌ ಮೊತ್ತವೂ (176) ಆಯಿತು.

    ವಿಜಯಯಾತ್ರೆ ಮುಕ್ತಾಯ:
    ಟಿ-20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಜಕ ಜಯ ಸಾಧಿಸಿ, 17 ವರ್ಷಗಳ ಬಳಿಕ ಚಾಂಪಿಯನ್ ಆದ ಟೀಂ ಇಂಡಿಯಾಗೆ ಸ್ವದೇಶದಲ್ಲಿ ಅದ್ಧೂರಿ, ವೈಭವೋಪೇತ ಸ್ವಾಗತ ಸಿಕ್ಕಿದೆ. ಮುಂಬೈನ ಕಡಲ ಕಿನಾರೆಯಲ್ಲಿ 2 ಕಿಮೀ ರೋಡ್ ಶೋನಲ್ಲಿ ಅಬ್ಬಬ್ಬಾ… ಎನಿಸುವಷ್ಟು ಜನಸಾಗರ ಜಮಾಯಿಸಿ ಬರಮಾಡಿಕೊಂಡಿದೆ. ಸದ್ಯ ರೋಡ್‌ ಶೋ ಮುಕ್ತಾಯಗೊಂಡು ಮುಂಬೈನ ವಾಂಖೆಡೆ ಕ್ರೀಡಾಂಗಣ ತಲುಪಿದೆ. ಕೆಲವೇ ಕ್ಷಣದಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರು ಹಾಗೂ ಬಿಸಿಸಿಐ ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನು ಆಟಗಾರರಿಗೆ ಪ್ರದಾನ ಮಾಡಲಾಗುತ್ತದೆ. ಇದನ್ನೂ ಓದಿ: ವಿಜಯಯಾತ್ರೆ ಶುರು – ʻವಿಶ್ವʼಗೆದ್ದ ವೀರರನ್ನು ಕಣ್ತುಂಬಿಕೊಂಡ ಅಭಿಮಾನಿಗಳು!

    ವಿಜಯೋತ್ಸವಕ್ಕೆ ಆಹ್ವಾನಿಸಿದ್ದ ರೋಹಿತ್‌:
    ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ವಾಂಖೆಡೆ ಮೈದಾನಕ್ಕೆ ಉಚಿತ ಪ್ರವೇಶ ಕಲ್ಪಿಸಿದ್ದರಿಂದ ಮೈದಾನದ ತುಂಬಾ ಅಭಿಮಾನಿಗಳು ಕಿಕ್ಕಿರಿದಿದ್ದರು. ಇದನ್ನೂ ಓದಿ: ʻವಿಶ್ವʼ ವಿಜಯಯಾತ್ರೆಗೆ ಕ್ಷಣಗಣನೆ – ಕ್ರಿಕೆಟ್‌ ಅಭಿಮಾನಿಗಳಿಂದ ʻಮೋದಿ ಮೋದಿʼ ಘೋಷಣೆ!

    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

  • ವಿಜಯಯಾತ್ರೆ ಶುರು – ʻವಿಶ್ವʼಗೆದ್ದ ವೀರರನ್ನು ಕಣ್ತುಂಬಿಕೊಂಡ ಅಭಿಮಾನಿಗಳು!

    ವಿಜಯಯಾತ್ರೆ ಶುರು – ʻವಿಶ್ವʼಗೆದ್ದ ವೀರರನ್ನು ಕಣ್ತುಂಬಿಕೊಂಡ ಅಭಿಮಾನಿಗಳು!

    – ವಿಶ್ವವಿಜೇತರನ್ನು ನೋಡಲು ಇರುವೆಗಳಂತೆ ಮುತ್ತಿಕೊಂಡ ಫ್ಯಾನ್ಸ್‌
    – ಸಮುದ್ರವನ್ನೂ ಮೀರಿಸಿದ ಅಭಿಮಾನಿಗಳ ಸಾಗರ!

    ಮುಂಬೈ: 17 ವರ್ಷಗಳ ಬಳಿಕ ಟಿ20 ವಿಶ್ವಕಪ್‌ ಗೆದ್ದು ಐಸಿಸಿ ಪ್ರಶಸ್ತಿಯ ಬರ ನೀಗಿಸಿದ ʻವಿಶ್ವʼ ವಿಜೇತ ಟೀಂ ಇಂಡಿಯಾದ (Team India) ವಿಜಯಯಾತ್ರೆ ಶುರುವಾಗಿದೆ. ಮುಂಬೈ ಕಡಲತೀರ ನಾರೀಮನ್ ಪಾಯಿಂಟ್‌ನಿಂದ ಅದ್ಧೂರಿ ಯಾತ್ರೆ ಆರಂಭವಾಗಿದೆ. ಇಲ್ಲಿಂದ ಸುಮಾರು 2 ಕಿಮೀ ವಿಜಯೋತ್ಸವ ಯಾತ್ರೆ ನಡೆಯಲಿದ್ದು, ನಂತರ ವಾಂಖೆಡೆ ಮೈದಾನ ತಲುಪಲಿದೆ.

    ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಹಾರ್ದಿಕ್‌ ಪಾಂಡ್ಯ, ಜಸ್ಪ್ರೀತ್‌ ಬುಮ್ರಾ ಸೇರಿದಂತೆ ವಿಶ್ವಕಪ್‌ ವಿಜೇತ ತಂಡ ತೆರೆದ ಬಸ್‌ನಲ್ಲಿ ಹೊರಟಿದೆ. ಪಕ್ಕದಲ್ಲೇ ಇದ್ದ ಸಮುದ್ರವನ್ನೂ ನಾಚಿಸುವಂತೆ ನೆರೆದಿದ್ದ ಅಭಿಮಾನಿಗಳ ಸಾಗರ ಕಂಡು ಆಟಗಾರರು ಹರ್ಷಗೊಂಡಿದ್ದಾರೆ. ಮೈಮೇಲೆ ರಾಷ್ಟ್ರಧ್ವಜ ಹೊದ್ದು, ಕೈಯಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ಅಭಿಮಾನಿಗಳೊಂದಿಗೆ ಸಂಭ್ರಮಿಸುತ್ತಾ ಕೈಬೀಸಿ ಮುಂದೆ ಸಾಗುತ್ತಿದ್ದಾರೆ.

    ವಿಜಯಯಾತ್ರೆಯಲ್ಲಿ ʻರೋಹಿತ್‌ ಭಾಯ್‌, ಕೊಹ್ಲಿ ಭಾಯ್‌ʼ ಘೋಷಣೆಗಳು ಮೊಳಗಿವೆ. ಬೆಳಗ್ಗೆಯಿಂದಲೇ ಕಾದು ನಿಂತಿದ್ದ ಅಭಿಮಾನಿಗಳು ಮಳೆಯಲ್ಲೂ ಉತ್ಸಾಹ ಕಳೆದಕೊಳ್ಳದೇ ವಿಶ್ವವೀರರನ್ನ ಸ್ವಾಗತಿಸಿದ್ದಾರೆ. ಸುಮಾರು 2 ಕಿಮೀ ವಿಜಯಯಾತ್ರೆ ತೆರಳಲಿದ್ದು, ನಂತರ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರು ಹಾಗೂ ಬಿಸಿಸಿಐ ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನು ಆಟಗಾರರಿಗೆ ಪ್ರದಾನ ಮಾಡಲಾಗುತ್ತದೆ.

    ವೀ

    ಅವಮಾನವಾದ ಜಾಗದಲ್ಲೇ ಸನ್ಮಾನ:
    ಮಾಜಿ ನಾಯಕ ಎಂ.ಎಸ್‌ ಧೋನಿ ಅವರ ನಾಯಕತ್ವದಲ್ಲಿ ಭಾರತ ತಂಡ ಚೊಚ್ಚಲ ಟಿ20 ವಿಶ್ವಕಪ್ ಗೆಲುವನ್ನು ಕ್ರಿಕೆಟ್‌ ಜಗತ್ತು ಮರೆಯುವಂತಿಲ್ಲ. ಹೌದು… 2007ರಲ್ಲಿ ಟೀಂ ಇಂಡಿಯಾಕ್ಕೆ ಅತ್ಯಂತ ಪ್ರತಿಷ್ಠೆಯ ಟೂರ್ನಿ ಅದಾಗಿತ್ತು. 2007ರ ಅದೇ ವರ್ಷ ವೆಸ್ಟ್ ಇಂಡೀಸ್ ಆತಿಥ್ಯದಲ್ಲಿ ಏಕದಿನ ವಿಶ್ವಕಪ್ (2007 ODI World Cup) ಟೂರ್ನಿಯೂ ನಡೆದಿತ್ತು. ಆ ಆವೃತ್ತಿಯಲ್ಲಿ ಟೀಂ ಇಂಡಿಯಾ (Team India) ಲೀಗ್‌ ಹಂತದಲ್ಲೇ ಹೀನಾಯ ಸೋಲು ಕಂಡು ಹೊರಬಿದ್ದಿತ್ತು. ಇದಾದ ಬಳಿಕ ದೇಶಾದ್ಯಂತ ಪ್ರತಿಭಟನೆ ನಡೆದು, ಪ್ರಮುಖ ಆಟಗಾರರ ಮೆನಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಇದಾದ ಕೆಲವೇ ದಿನಗಳಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಟೂರ್ನಿಯೂ ನಿಗದಿಯಾಗಿತ್ತು. ಏಕದಿನ ಕ್ರಿಕೆಟ್‌ನಲ್ಲಿ ಆಡಿದ್ದ ಖ್ಯಾತನಾಮರು ಟಿ20 ಆಡಲು ಹಿಂದೇಟು ಹಾಕಿದ್ದ ಕಾರಣ ವಿಕೆಟ್ ಕೀಪರ್ ಮತ್ತು ಬ್ಯಾಟರ್ ಎಂ.ಎಸ್ ಧೋನಿ ಅವರಿಗೆ ನಾಯಕತ್ವದ ಹೊಣೆ ನೀಡಲಾಯಿತು. ಟೂರ್ನಿಯುದ್ದಕ್ಕೂ ಸಂಘಟಿತ ಪ್ರದರ್ಶನದೊಂದಿಗೆ ಟೀಂ ಇಂಡಿಯಾ ಚೊಚ್ಚಲ ಆವೃತ್ತಿಯಲ್ಲೇ ಟ್ರೋಫಿ ಎತ್ತಿ ಹಿಡಿಯಿತು. ಅಂದು ಸಹ ಕೋಟ್ಯಂತರ ಕ್ರಿಕೆಟ್‌ ಪ್ರೇಮಿಗಳು ಟೀಂ ಇಂಡಿಯಾವನ್ನು ತವರಿಗೆ ಅದ್ಧೂರಿಯಾಗಿ ಸ್ವಾಗತಿಸಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಕಲ್ಲುತೂರಾಟ ನಡೆಸಿದ್ದ ಅಭಿಮಾನಿಗಳು ಧೋನಿ ಬಳಗ ಕಪ್‌ ಎತ್ತಿ ಹಿಡಿಯುತ್ತಿದ್ದಂತೆ ಹೂವಿನ ಮಳೆ ಸುರಿಸಿದ್ದರು. ಇದೀಗ ರೋಹಿತ್‌ ಬಳಗವನ್ನು ಸ್ವಾಗತಿಸಿರುವುದು ಅದೇ ದೃಶ್ಯವನ್ನು ನೆನಪಿಸಿದೆ.

    ವಿಜಯೋತ್ಸವಕ್ಕೆ ಆಹ್ವಾನಿಸಿದ್ದ ರೋಹಿತ್‌:
    ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅಲ್ಲದೇ ವಾಂಖೆಡೆ ಮೈದಾನಕ್ಕೆ ಉಚಿತ ಪ್ರವೇಶ ಕಲ್ಪಿಸಿದ್ದರಿಂದ ಮೈದಾನದ ತುಂಬಾ ಅಭಿಮಾನಿಗಳು ಕಿಕ್ಕಿರಿದಿದ್ದರು.

    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

  • ʻವಿಶ್ವʼ ವಿಜಯಯಾತ್ರೆಗೆ ಕ್ಷಣಗಣನೆ – ಕ್ರಿಕೆಟ್‌ ಅಭಿಮಾನಿಗಳಿಂದ ʻಮೋದಿ ಮೋದಿʼ ಘೋಷಣೆ!

    ʻವಿಶ್ವʼ ವಿಜಯಯಾತ್ರೆಗೆ ಕ್ಷಣಗಣನೆ – ಕ್ರಿಕೆಟ್‌ ಅಭಿಮಾನಿಗಳಿಂದ ʻಮೋದಿ ಮೋದಿʼ ಘೋಷಣೆ!

    ಮುಂಬೈ: ಟಿ20 ವಿಶ್ವಕಪ್ (T20 World Cup) ವಿಜೇತ ಟೀಂ ಇಂಡಿಯಾದ (Team India) ವಿಕ್ಟರಿ ಪರೇಡ್‌ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು (Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ. ಈ ನಡುವೆ ಕ್ರಿಕೆಟ್‌ ಆಟಗಾರರನ್ನು ಸ್ವಾಗತಿಸಲು ನಿಂತಿದ್ದ ಕೆಲ ಅಭಿಮಾನಿಗಳು ʻಮೋದಿ ಮೋದಿʼ ಘೋಷಣೆ ಕೂಗಿದ್ದಾರೆ.

    ಮುಂಬೈನ ನಾರೀಮನ್ ಪಾಯಿಂಟ್‌ನಿಂದ ಪರೇಡ್‌ ಆರಂಭವಾಗಲಿದ್ದು, ಸುಮಾರು 2 ಕಿಮೀ ವಿಜಯಯಾತ್ರೆ ನಡೆಯಲಿದೆ. ಬಳಿಕ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನೂ ಪ್ರದಾನ ಮಾಡಲಾಗುತ್ತದೆ. ಈ ಅದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್‌ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಈ ನಡುವೆ ಮೆರವಣಿಗೆಯಲ್ಲಿ ಕಾದು ನಿಂತಿರುವ ಕೆಲ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: T20 ವಿಶ್ವಕಪ್‌ ಗೆಲುವಿನ ಸಂಭ್ರಮ – ಬಿಸಿಸಿಐನಿಂದ ಮೋದಿಗೆ ʻನಮೋ ನಂ.1ʼ ಟೀ ಶರ್ಟ್‌ ಗಿಫ್ಟ್‌!

    ತೆರೆದ ಬಸ್​ನಲ್ಲಿ ರೋಡ್ ಶೋ:
    ಈಗಾಗಲೇ ಟೀಂ ಇಂಡಿಯಾದ ಆಟಗಾರರು ವಿಶೇಷ ವಿಮಾನದಲ್ಲಿ ಮುಂಬೈ ತಲುಪಿಸಿದ್ದಾರೆ. ಏರ್‌ ಇಂಡಿಯಾದ ವಿಮಾನ ಮುಂಬೈ ತಲುಪುತ್ತಿದ್ದಂತೆ ವಿಶೇಷ ರೀತಿಯಲ್ಲಿ ವಾಟರ್‌ ಜೆಟ್‌ಗಳ ಮೂಲಕ ಸ್ವಾಗತ ಕೋರಲಾಗಿದೆ. ವಿಜಯಯಾತ್ರೆಗೆ ಸಿದ್ಧತೆ ಮಾಡಿಕೊಂಡಿದ್ದು, ‘ಮುಂಬೈನ ನಾರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಇದನ್ನೂ ಓದಿ: ʻವಿಶ್ವʼವಿಜಯಯಾತ್ರೆಗೆ ವರುಣ ಅಡ್ಡಿ – ಮಳೆಯಲ್ಲೂ ಕುಗ್ಗದ ಟೀಂ ಇಂಡಿಯಾ ಅಭಿಮಾನಿಗಳ ಉತ್ಸಾಹ

    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು. ಇದನ್ನೂ ಓದಿ: ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌! – ಇಂದು ಸಂಜೆ ಮುಂಬೈನಲ್ಲಿ ರೋಡ್‌ ಶೋ

  • T20 ವಿಶ್ವಕಪ್‌ ಗೆಲುವಿನ ಸಂಭ್ರಮ – ಬಿಸಿಸಿಐನಿಂದ ಮೋದಿಗೆ ʻನಮೋ ನಂ.1ʼ ಟೀ ಶರ್ಟ್‌ ಗಿಫ್ಟ್‌!

    T20 ವಿಶ್ವಕಪ್‌ ಗೆಲುವಿನ ಸಂಭ್ರಮ – ಬಿಸಿಸಿಐನಿಂದ ಮೋದಿಗೆ ʻನಮೋ ನಂ.1ʼ ಟೀ ಶರ್ಟ್‌ ಗಿಫ್ಟ್‌!

    ಮುಂಬೈ: 2024ರ ಟಿ20 ವಿಶ್ವಕಪ್‌ ಗೆಲುವಿನ ನೆನಪಿನಾರ್ಥವಾಗಿ ಬಿಸಿಸಿಐನಿಂದ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ʻನಮೋ ನಂ.1ʼ ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

    ಟಿ20 ವಿಶ್ವಕಪ್‌ ಕ್ರಿಕೆಟ್‌ (T20 World Cup) ಚಾಂಪಿಯನ್‌ ಟೀಂ ಇಂಡಿಯಾ (Team India) ಗುರುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಭಾರತಕ್ಕೆ ಆಗಮಿಸಿತು. ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ನಿಂದ ಹೊರಟಿದ್ದ ವಿಶೇಷ ವಿಮಾನ ದೆಹಲಿಯಲ್ಲಿರುವ (Delhi) ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಯಿತು. ಜೂ. 1ರಂದು ಬಾರ್ಬಡೋಸ್‌ಗೆ ಭೀಕರ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಭಾರತಕ್ಕೆ ಬರುವುದು ತಡವಾಯಿತು. ಬುಧವಾರ ರಾತ್ರಿ ಏರ್‌ ಇಂಡಿಯಾ ವಿಶೇಷ ವಿಮಾನದಿಂದ ಹೊರಟ ಟೀಂ ಇಂಡಿಯಾ ಗುರುವಾರ ಬೆಳಗ್ಗೆ 6:00 ಗಂಟೆ ಹೊತ್ತಿಗೆ ಭಾರತ ತಲುಪಿತು.

    ತಾಯ್ನಾಡಿಗೆ ಮರಳಿದ ಟೀಂ ಇಂಡಿಯಾ ಆಟಗಾರರು ಮುಂಬೈಗೆ ತೆರಳುವ ಮುನ್ನ ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿದ್ದರು. ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜೊತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ವಿಶ್ವಕಪ್‌ ಟ್ರೋಫಿ ಹಿಡಿದು ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

    ವಿಜಯಯಾತ್ರೆಗೆ ರೋಹಿತ್‌ ಆಹ್ವಾನ:
    ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈಗಾಗಲೇ ಅಭಿಮಾನಿಗಳು ಟೀಂ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸಿದ್ದಾರೆ.

  • ʻವಿಶ್ವʼವಿಜಯಯಾತ್ರೆಗೆ ವರುಣ ಅಡ್ಡಿ – ಮಳೆಯಲ್ಲೂ ಕುಗ್ಗದ ಟೀಂ ಇಂಡಿಯಾ ಅಭಿಮಾನಿಗಳ ಉತ್ಸಾಹ

    ʻವಿಶ್ವʼವಿಜಯಯಾತ್ರೆಗೆ ವರುಣ ಅಡ್ಡಿ – ಮಳೆಯಲ್ಲೂ ಕುಗ್ಗದ ಟೀಂ ಇಂಡಿಯಾ ಅಭಿಮಾನಿಗಳ ಉತ್ಸಾಹ

    ಮುಂಬೈ: ಟಿ20 ವಿಶ್ವಕಪ್ (T20 World Cup) ವಿಜೇತ ಟೀಂ ಇಂಡಿಯಾದ (Team India) ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು (Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ. ಆದ್ರೆ ಅಭಿಮಾನಿಗಳ ಸಂಭ್ರಮಕ್ಕೆ ವರುಣ ತಡೆಯೊಡ್ಡಿದೆ.

    ಸದ್ಯ ಮುಂಬೈನಲ್ಲಿ ವರುಣ ಸಿಂಚನವಾಗುತ್ತಿದ್ದು, ವಾಂಖೆಡೆ ಕ್ರೀಡಾಂಗಣದಲ್ಲಿ ಭಾರೀ ಮಳೆಯಾಗುತ್ತಿದೆ. ಆದ್ರೆ ಅಭಿಮಾನಿಗಳು ಮಳೆಗೂ ಜಗ್ಗದೇ ಮೈದಾನದಲ್ಲೇ ನಿಂತಿದ್ದಾರೆ. ಕೆಲವರಂತೂ ಮಳೆಯಲ್ಲೇ ನೆನೆದುಕೊಂಡು ಟೀಂ ಇಂಡಿಯಾ ಪರ ಘೋಷಣೆ ಕೂಗುತ್ತಿದ್ದಾರೆ. ಆಟಗಾರರು ಈಗಾಗಲೇ ಮುಂಬೈನಲ್ಲಿ ಬೀಡುಬಿಟ್ಟಿದ್ದಾರೆ. ಈ ವಿಜಯಯಾತ್ರೆಯನ್ನು ಸ್ಟಾರ್ ಸ್ಪೋರ್ಟ್ಸ್ ನೇರ ಪ್ರಸಾರ ಮಾಡುವುದಾಗಿ ಘೋಷಿಸಿದೆ.

    ವಿಜಯಯಾತ್ರೆಗೆ ಹಿಟ್‌ಮ್ಯಾನ್‌ ಆಹ್ವಾನ:
    ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮಾ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಈಗಾಗಲೇ ಅಭಿಮಾನಿಗಳು ಟೀಂ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸಿದ್ದಾರೆ.

    ತೆರೆದ ಬಸ್​ನಲ್ಲಿ ರೋಡ್ ಶೋ:
    ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನಾರಿಮನ್‌ ಪಾಯಿಂಟ್‌ನಿಂದ ಸರಿಯಾಗಿ 5 ಗಂಟೆಗೆ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತ ಕೂಡ ಪ್ರದಾನ ಮಾಡಲಾಗುತ್ತದೆ.

    ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ (Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜೊತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟ ಸಹ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ (PM Modi) ನಮೋ ನಂ.1 ಎಂದು ಬರೆದ ಟೀಂ​ ಇಂಡಿಯಾ ಜೆರ್ಸಿಯನ್ನು (Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

  • ಭೀಕರ ಚಂಡಮಾರುತ – ಬಾರ್ಬಡೋಸ್‌ನಲ್ಲೇ ಬೀಡುಬಿಟ್ಟ ಟೀಂ ಇಂಡಿಯಾ!

    ಭೀಕರ ಚಂಡಮಾರುತ – ಬಾರ್ಬಡೋಸ್‌ನಲ್ಲೇ ಬೀಡುಬಿಟ್ಟ ಟೀಂ ಇಂಡಿಯಾ!

    – ತವರಿನಲ್ಲಿ ವಿಜಯೋತ್ಸವಕ್ಕೆ ಕೊಂಚ ತಡೆ

    ಬಾರ್ಬಡೋಸ್‌: 17 ವರ್ಷಗಳ ಬಳಿಕ ಟಿ20 ವಿಶ್ವಕಪ್ (T20 World Cup) ಗೆದ್ದ ಟೀಂ ಇಂಡಿಯಾಗೆ ತವರಿನಲ್ಲಿ ಭರ್ಜರಿ ಸ್ವಾಗತ ನೀಡಲು ತಯಾರಿಗಳು ನಡೆದಿವೆ. ಆದ್ರೆ, ಅಭಿಮಾನಿಗಳ ಆಸೆಗೆ ಬಾರ್ಬಡೋಸ್‌ಗೆ ಅಪ್ಪಳಿಸಿದ ಭೀಕರ ಚಂಡಮಾರುತ ತಣ್ಣೀರು ಎರಚಿದೆ. ಹಾಗಾಗಿ ಟೀಂ ಇಂಡಿಯಾ (Team India) ತವರಿನಲ್ಲಿ ವಿಜಯೋತ್ಸವ ಆಚರಿಸಲು ಇನ್ನೂ ಮೂರ್ನಾಲ್ಕು ದಿನ ಕಾಯಬೇಕಿದೆ.

    ಕೆರೀಬಿಯನ್ ದ್ವೀಪಗಳಲ್ಲಿ ಸೋಮವಾರ (ಜು.1) ಬೆಳಗ್ಗಿನ ಜಾವದಲ್ಲಿ ಕೆಟಗಿರಿ-4 ಚಂಡಮಾರುತ ಬೀಸುತ್ತಿರುವುದರಿಂದ ವಿಮಾನಯಾನವೂ ಸೇರಿದಂತೆ ಎಲ್ಲ ನಾಗರಿಕ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮುಖ್ಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸದ್ಯಕ್ಕೆ ಸೇವೆ ಸ್ಥಗಿತಗೊಳಿಸಲಾಗಿದೆ.

    ಬಾರ್ಬಡೋಸ್ (Barbados) ಮತ್ತು ಸುತ್ತಮುತ್ತಲಿನ ದ್ವೀಪಗಳಲ್ಲಿ ಬಿರುಗಾಳಿಯ ತೀವ್ರತೆಯೂ ಹೆಚ್ಚಾಗಿದ್ದು, ಅಪಾಯಮಟ್ಟದಲ್ಲಿದೆ. 3 ಲಕ್ಷ ಜನಸಂಖ್ಯೆ ಹೊಂದಿರುವ ದ್ವೀಪದಲ್ಲಿ ಭಾನುವಾರ ಸಂಜೆಯಿಂದಲೇ ಲಾಕ್‌ಡೌನ್ ವಿಧಿಸಲಾಗಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಬಾರ್ಬಡೋಸ್‌ನ ಹೋಟೆಲ್‌ಗೆ ಸೀಮಿತ ಆಗಿದ್ದಾರೆ. ಅವರು ಸ್ವದೇಶಕ್ಕೆ ವಾಪಸ್ ಆಗೋದು ಇನ್ನೂ ಮೂರು ದಿನ ತಡವಾಗಬಹುದು ಎಂದು ಹೇಳಲಾಗಿದೆ.

    ಇನ್ನೂ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಜಯ್ ಶಾ (Jay Shah), ನಾವಿಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ. ಮೊದಲಿಗೆ ಆಟಗಾರರು ಮತ್ತಿತರರನ್ನು ಸುರಕ್ಷಿತವಾಗಿರುವಂತೆ ನೋಡಿಕೊಳ್ಳುವುದು ಆದ್ಯತೆಯಾಗಿದೆ. ಸ್ವದೇಶಕ್ಕೆ ಹೋದ ನಂತರ ಸನ್ಮಾನದ ಬಗ್ಗೆ ಯೋಚಿಸಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಮೇರಿಕ ಅಧ್ಯಕ್ಷೀಯ ಚುನಾವಣೆ: ಬೈಡನ್, ಟ್ರಂಪ್ ಮುಖಾಮುಖಿ ಚರ್ಚೆ

    ಸ್ವದೇಶಕ್ಕೆ ಆಗಮಿಸಿದ ನಂತರ ಮುಂಬೈ ಏರ್‌ಪೋರ್ಟ್‌ನಿಂದ ಬಿಸಿಸಿಐ ಕಚೇರಿವರೆಗೆ ಮೆರವಣಿಗೆ ನಡೆಸಲು ಬಿಸಿಸಿಐ ಆಲೋಚಿಸಿದೆ. ಇತ್ತ, ಸಂಸತ್‌ನ ಉಭಯ ಸದನಗಳಲ್ಲಿ ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಆಟಗಾರರನ್ನು ಅಭಿನಂದಿಸಲಾಗಿದೆ. ಇದನ್ನೂ ಓದಿ: ಲಂಕಾ ನೌಕಾಪಡೆಯ ನಾವಿಕ ಸಾವು – ಭಾರತೀಯ ಮೀನುಗಾರರ ಮೇಲೆ ಹತ್ಯೆ ಆರೋಪ