Tag: ರೋಹ್ಟಕ್

  • ತಂದೆಯಿಂದ್ಲೇ ಮಗಳ ರೇಪ್- 9 ವರ್ಷದ ಬಾಲಕಿ ದುರ್ಮರಣ

    ತಂದೆಯಿಂದ್ಲೇ ಮಗಳ ರೇಪ್- 9 ವರ್ಷದ ಬಾಲಕಿ ದುರ್ಮರಣ

    ರೊಹ್ಟಕ್: ಹೈದರಾಬಾದ್ ಪಶುವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನೇ ತಲ್ಲಣಿಸಿದ ಬಳಿಕವೂ ರೇಪ್ ಕೇಸ್ ಗಳು ಕಡಿಮೆಯಾಗಿಲ್ಲ. ಆ ದುರುಂತದ ಬಳಿಕ ದೇಶದಲ್ಲಿ ಹಲವು ಪ್ರಕರಣಗಳು ಬೆಳಕಿಗೆ ಬಂದಿದೆ.

    ಇದೇ ರೀತಿ ಹರ್ಯಾಣದಲ್ಲಿ ತನ್ನ 9 ವರ್ಷದ ಮಗಳ ಮೇಲೆಯೇ ತಂದೆಯೊಬ್ಬ ಅತ್ಯಾಚಾರವೆಸಗುವ ಮೂಲಕ ತನ್ನ ಕಾಮತೃಷೆ ತೀರಿಸಿಕೊಂಡಿದ್ದಾನೆ. ರೇಪ್ ನಂತರ ಬಾಲಕಿ ಸ್ಥಳೀಯ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಕುಟುಂಬದ ನಾಲ್ವರು ಮಕ್ಕಳಲ್ಲಿ ಬಾಲಕಿ ದೊಡ್ಡವಳಾಗಿದ್ದಾಳೆ. ಕೆಲಸ ಅರಸಿಕೊಂಡು ಇಡೀ ಕುಟುಂಬ ಹರ್ಯಾಣಕ್ಕೆ ವಲಸೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

    ಪ್ರಕರಣ ಸಂಬಂಧ ಬಾಲಕಿಯ ತಾಯಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮನೆಯಲ್ಲಿ ಪತಿ-ಪತ್ನಿ ನಡುವೆ ಪ್ರತಿ ದಿನ ಜಗಳ ನಡೆಯುತ್ತಿದೆ ಎಂದು ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ.

    ದಿನವಿಡೀ ತಾಯಿ ಜೊತೆ ಇರುವ ಬಾಲಕಿ ರಾತ್ರಿ ಹೊತ್ತು ತನ್ನ ತಂದೆಯ ಪಕ್ಕದಲ್ಲಿ ಮಲಗುತ್ತಾಳೆ. ಸೋಮವಾರ ಬಾಲಕಿಗೆ ಏಕಾಏಕಿ ಅನಾರೋಗ್ಯ ಕಾಡಿದೆ. ಹೀಗಾಗಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇತ್ತ ಮಗಳು ತೀರಿಕೊಂಡ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ. ಇತ್ತ ಬಾಲಕಿಯ ಮೃತದೇಹವನ್ನು ಮರಣೋತ್ತರ  ಪರೀಕ್ಷೆಗೆ ಕಳುಹಿಸಲಾಗಿದೆ ಎಂಬುದಾಗಿ ವರದಿಯಾಗಿದೆ.

  • ರೇಪಿಸ್ಟ್ ಬಾಬಾ ರಾಮ್ ರಹೀಂಗೆ 20 ವರ್ಷ ಜೈಲು ಶಿಕ್ಷೆ

    ರೇಪಿಸ್ಟ್ ಬಾಬಾ ರಾಮ್ ರಹೀಂಗೆ 20 ವರ್ಷ ಜೈಲು ಶಿಕ್ಷೆ

    ಪಂಚಕುಲಾ: ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ 20 ವರ್ಷ ಜೈಲು ಶಿಕ್ಷೆಯಾಗಿದೆ.

    ರೋಹ್ತಕ್ ಜೈಲಿನಿಂದಲೇ ಸಂಜೆ 3.20ರ ವೇಳೆಗೆ ಬಾಬಾ ರಾಮ್ ರಹೀಂಗೆ ಶಿಕ್ಷೆ ಪ್ರಮಾಣವನ್ನು ನ್ಯಾಯಾಧೀಶ ಜಗದೀಪ್ ಸಿಂಗ್ ಪ್ರಕಟಿಸಿದರು.

    ಬಾಬಾನಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲು ಪಂಚಕುಲಾದ ಸಿಬಿಐ ಕೋರ್ಟ್, 250 ಕಿಲೋಮೀಟರ್ ದೂರದ ರೋಹ್ಟಕ್‍ನ ಸೊನಾರಿಯಾ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಆಗಿತ್ತು. ನ್ಯಾಯಾಧೀಶ ಜಗದೀಪ್ ಸಿಂಗ್ ವಿಶೇಷ ಹೆಲಿಕಾಪ್ಟರ್ ಮೂಲಕ ಬೆಳಗ್ಗೆ ಜೈಲಿಗೆ ಆಗಮಿಸಿದ್ದರು.

    ರೋಹ್ಟಕ್ ಜೈಲಿನ ಸುತ್ತ ಏಳು ಸುತ್ತಿನ ಭದ್ರತಾ ವ್ಯವಸ್ಥೆ ನಿರ್ಮಾಣವಾಗಿತ್ತು. ಜೈಲಿನಿಂದ 10 ಕಿಲೋ ಮೀಟರ್ ದೂರದವರೆಗೂ 17 ಸಾವಿರಕ್ಕೂ ಹೆಚ್ಚು ಸೇನಾ ಹಾಗೂ ಅರೆಸೇನಾ ಭದ್ರತಾ ಸಿಬ್ಬಂದಿ, ಪೊಲೀಸರನ್ನು ನೇಮಿಸಲಾಗಿತ್ತು. ಜೈಲಿನ ಸುತ್ತಮುತ್ತಾ ನಿಷೇಧಾಜ್ಞೆ ಜಾರಿಯಾಗಿದ್ದು, ಜಿಲ್ಲಾಧಿಕಾರಿ ಅವರು ಕಂಡಲ್ಲಿ ಗುಂಡಿಗೆ ಆದೇಶ ನೀಡಿದ್ದರು.

    ಹರಿಯಾಣದಾದ್ಯಂತ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಸೋನೆಪತ್ ಬಳಿ ಬಾಬಾ ಬೆಂಬಲಿಗರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಬಡಿಗೆ, ಕಬ್ಬಿಣದ ಸರಳು, ಚೈನು ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

    ಇದೂವರೆಗೂ 150ಕ್ಕೂ ಹೆಚ್ಚು ಬಾಬಾನ ಪುಂಡ ಭಕ್ತರನ್ನು ಬಂಧಿಸಿರುವ ಪೊಲೀಸರು ಸಿರ್ಸಾ ಆಶ್ರಮದೊಳಗೆ ಇನ್ನೂ 10 ಸಾವಿರ ಬಾಬಾ ಬೆಂಬಲಿಗರಿದ್ದು, 24 ಗಂಟೆಯೊಳಗೆ ಖಾಲಿ ಮಾಡುವಂತೆ ಖಡಕ್ ಸೂಚನೆ ಕೂಡ ನೀಡಲಾಗಿದೆ.

    ಈ ಮಧ್ಯೆ ಹರಿಯಾಣ ಪಂಜಾಬ್ ಭದ್ರತೆ ಬಗ್ಗೆ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆ ಚರ್ಚೆ ನಡೆಸಿದ್ದಾರೆ.

     

  • ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

    ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

    ರೊಹ್ಟಕ್: ವಿವಾದತ್ಮಾಕ ಹೇಳಿಕೆ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್‍ದೇವ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

    ಮೇ 12ರಂದು ಕೋರ್ಟ್ ಬಾಬಾ ರಾಮ್‍ದೇವ್ ಅವರು ಜಾಮೀನು ಮಂಜೂರು ಮಾಡಿತ್ತು. ಆದರೆ ರಾಮ್‍ದೇವ್ ಇದೂವರೆಗೂ ನ್ಯಾಯಲಯ ಮುಂದೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ರೋಹ್ಟಕ್ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ನೀಡಿದೆ.

    ಕಳೆದ ವರ್ಷದ ಏಪ್ರಿಲ್‍ನಲ್ಲಿ ರಾಮ್‍ದೇವ್ `ಭಾರತ್ ಮಾತಾ ಕೀ ಜೈ’ ಹೇಳದವರ ರುಂಡ ಕಡಿಯುತ್ತೇನೆಂದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಹರಿಯಾಣ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸುಭಾಷ್ ಬಾತ್ರಾ ಅವರು ರಾಮ್’ದೇವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

    ಈ ಪ್ರಕರಣ ಸಂಬಂಧ ರಾಮ್ ದೇವ್ ಗೆ ಬಂಧನ ವಾರಂಟ್ ಆದೇಶಿಸಿದ ನ್ಯಾಯಾಧೀಶರು, ಮುಂದಿನ ವಿಚಾರಣೆಯನ್ನು ಆಗಸ್ಟ್ 3 ಕ್ಕೆ ಮುಂದೂಡಿದ್ದಾರೆ. ಹೀಗಾಗಿ ಮುಂದಿನ ವಿಚಾರಣೆಗೆ ರಾಮ್‍ದೇವ್ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.

     

  • ಮಲತಂದೆಯಿಂದ ಅತ್ಯಾಚಾರ- 10 ವರ್ಷದ ಬಾಲಕಿ ಈಗ 5 ತಿಂಗಳ ಗರ್ಭಿಣಿ

    ಮಲತಂದೆಯಿಂದ ಅತ್ಯಾಚಾರ- 10 ವರ್ಷದ ಬಾಲಕಿ ಈಗ 5 ತಿಂಗಳ ಗರ್ಭಿಣಿ

    ರೋಹ್ಟಕ್: ಮಲತಂದೆಯಿಂದ ಸತತವಾಗಿ ಅತ್ಯಾಚಾರಕ್ಕೊಗಾಗಿ 10 ವರ್ಷದ ಬಾಲಕಿ ಗರ್ಭಿಣಿಯಾಗಿರೋ ಆಘಾತಕಾರಿ ಘಟನೆ ಹರಿಯಾಣದ ರೋಹ್ಟಕ್‍ನಲ್ಲಿ ಬೆಳಕಿಗೆ ಬಂದಿದೆ.

    ಶುಕ್ರವಾರದಂದು ಇಲ್ಲಿನ ಆಸ್ಪತ್ರೆಯೊಂದಕ್ಕೆ ಬಾಲಕಿಯನ್ನ ದಾಖಲಿಸಲಾಗಿದ್ದು, ಈ ವೇಳೆ ಆಕೆ 5 ತಿಂಗಳ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿದೆ.

    ಬಿಹಾರದಿಂದ ವಲಸೆ ಬಂದು ಕಾರ್ಮಿಕರಾಗಿರುವ ಬಾಲಕಿಯ ತಾಯಿ ಮಗಳ ಸ್ಥಿತಿ ನೋಡಿ ವೈದ್ಯರ ಬಳಿ ಚೆಕ್‍ಅಪ್‍ಗಾಗಿ ಕರೆದುಕೊಂಡು ಹೋಗಿದ್ದರು. ಈ ವೇಳೆ ವೈದ್ಯರು ಅತ್ಯಾಚಾರದ ಬಗ್ಗೆ ದೃಢಪಡಿಸಿದ್ದಾರೆ. ನಂತರ ಬಾಲಕಿ ಅಮ್ಮನ ಬಳಿ ನಡೆದ ವಿಷಯವನ್ನ ಹೇಳಿಕೊಂಡಿದ್ದಾಳೆ. ದೀರ್ಘ ಕಾಲದಿಂದ ಮಲತಂದೆ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಈ ವಿಷಯವನ್ನು ಯಾರಿಗೂ ಹೇಳಬಾರದೆಂದು ಬೆದರಿಕೆ ಹಾಕಿದ್ದ ಎಂದು ಬಾಲಕಿ ಹೇಳಿಕೊಂಡಿದ್ದಾಳೆ.

    ಇದನ್ನೂ ಓದಿ: ಗೆಳೆಯರಿಂದ್ಲೇ ಮಗಳ ಮೇಲೆ ಗ್ಯಾಂಗ್‍ರೇಪ್ – ವೀಡಿಯೋ ಮಾಡಿದ ನಿಷ್ಕರುಣಿ ತಾಯಿ

    ನಂತರ ಬಾಲಕಿಯ ತಾಯಿ ಮಹಿಳಾ ಪೊಲೀಸ್ ಠಾಣೆಗೆ ಹೋಗಿ ಈ ಬಗ್ಗೆ ದೂರು ನೀಡಿದ್ದು, ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ರೋಹ್ಟಕ್‍ನ ಪಿಜಿಐಎಮ್‍ಎಸ್‍ನ ವೈದ್ಯಕೀಯ ಮಂಡಳಿ ಸೋಮವಾರದಂದು ಸಭೆ ಸೇರಲಿದ್ದು ಮಂದಿನ ನಡೆಯ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ವರದಿಯಾಗಿದೆ.

    ಇದನ್ನೂ ಓದಿ: ಮಹಿಳೆ ಮೇಲೆ ಗ್ಯಾಂಗ್ ರೇಪ್- ಮುಖವನ್ನ ಇಟ್ಟಿಗೆಯಿಂದ ಹೊಡೆದ್ರು, ಛಿದ್ರವಾದ ಸ್ಥಿತಿಯಲ್ಲಿ ಶವ ಪತ್ತೆ

  • ಮಹಿಳೆ ಮೇಲೆ ಗ್ಯಾಂಗ್ ರೇಪ್- ಮುಖವನ್ನ ಇಟ್ಟಿಗೆಯಿಂದ ಹೊಡೆದ್ರು, ಛಿದ್ರವಾದ ಸ್ಥಿತಿಯಲ್ಲಿ ಶವ ಪತ್ತೆ

    ಮಹಿಳೆ ಮೇಲೆ ಗ್ಯಾಂಗ್ ರೇಪ್- ಮುಖವನ್ನ ಇಟ್ಟಿಗೆಯಿಂದ ಹೊಡೆದ್ರು, ಛಿದ್ರವಾದ ಸ್ಥಿತಿಯಲ್ಲಿ ಶವ ಪತ್ತೆ

    ರೋಹ್ಟಕ್: 23 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ನಂತರ ಬರ್ಬರವಾಗಿ ಕೊಲೆ ಮಾಡಿರೋ ಬೆಚ್ಚಿಬೀಳಿಸೋ ಘಟನೆ ಹರಿಯಾಣದಲ್ಲಿ ಬೆಳಕಿಗೆ ಬಂದಿದೆ.

    ಮೇ 11ರಂದು ಇಲ್ಲಿನ ರೋಹ್ಟಕ್‍ನ ಅರ್ಬನ್ ಎಸ್ಟೇಟ್ ಪ್ರದೇಶದಲ್ಲಿ ತುಂಡರಿಸಿದ ಮಹಿಳೆಯ ದೇಹವನ್ನ ವ್ಯಕ್ತಿಯೊಬ್ಬರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಮುಖ ಹಾಗೂ ದೇಹದ ಕೆಳಭಾಗವನ್ನ ನಾಯಿಗಳು ತಿಂದುಹಾಕಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಿತ್ ಹಾಗೂ ವಿಕಾಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಸುಮಿತ್ ಮೃತ ಮಹಿಳೆಯ ನೆರೆಮನೆಯವನು ಎಂದು ಸೋನಿಪತ್‍ನ ಸಬ್ ಇನ್ಸ್‍ಪೆಕ್ಟರ್ ಅಜಯ್ ಮಲಿಕ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

    ಕೊಲೆಗೀಡಾದ ಮಹಿಳೆ ವಿಚ್ಛೇದಿತರಾಗಿದ್ದು, ಮೇ 9ರಂದು ಆಕೆಯನ್ನ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ರೋಹ್ಟಕ್‍ಗೆ ಕರೆದುಕೊಂಡು ಹೋಗಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಹಿಳೆಯ ಪೋಷಕರು ಸೋನಿಪತ್ ಪೊಲೀಸ್ ಠಾಣೆಯಲ್ಲಿ ಮಗಳು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು.

    ಮಹಿಳೆಯ ಮೇಲೆ ಅತ್ಯಾಚಾರವೆಸಗಿ ನಂತರ ಆರೋಪಿಗಳು ಇಟ್ಟಿಗೆಯಿಂದ ಆಕೆಗೆ ಹೊಡೆದಿದ್ದಾರೆ. ಅಲ್ಲದೆ ಮುಖವನ್ನ ಕಲ್ಲಿಗೆ ಗುದ್ದಿದ್ದಾರೆ. ಮೃತ ಮಹಿಳೆಯ ತಲೆಗೆ ತೀವ್ರವಾಗಿ ಗಾಯವಾಗಿರುವುದು ಪತ್ತೆಯಾಗಿದೆ ಎಂದು ಮಲಿಕ್ ತಿಳಿಸಿದ್ದಾರೆ.

    7 ಜನರಿಂದ ಅತ್ಯಾಚಾರ: ಟೈಮ್ಸ್ ನೌ ವರದಿಯ ಪ್ರಕಾರ ಮಹಿಳೆಯ ಮೇಲೆ ಕನಿಷ್ಠ 7 ಮಂದಿನ ಅತ್ಯಾಚಾರವೆಸಗಿದ್ದು ನಂತರ ಆಕೆಗೆ ಕಿರುಕುಳ ನೀಡಿ ಕೊಲೆ ಮಾಡಿ ದೇಹವನ್ನ ಛಿದ್ರ ಛಿದ್ರ ಮಾಡಿದ್ದಾರೆ ಎನ್ನಲಾಗಿದೆ. ಮಹಿಳೆ ಕನಿಷ್ಠ 7 ಮಂದಿಯಿಂದ ಅತ್ಯಾಚಾರಕ್ಕೊಳಗಾಗಿದ್ದಾರೆ. ಕೊಲೆಗೈದ ನಂತರ ಆಕೆಯ ಗುರುತು ಸಿಗಬಾರದು ಎಂಬ ಕಾರಣಕ್ಕೆ ವಾಹನ ಮೇಲೆ ಹರಿದಿದೆ ಎನ್ನುವಂತೆ ತಲೆಬುರುಡೆಗೆ ಹೊಡೆದಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವಿಧಿವಿಜ್ಞಾನ ತಂಡ ಹೇಳಿರುವುದಾಗಿ ವರದಿಯಾಗಿದೆ.

    ನೆರೆಮನೆಯವನೇ ಕೊಲೆ ಮಾಡಿದ್ನಾ?: ಸುದ್ದಿ ಸಂಸ್ಥೆ ಎಎನ್‍ಐ ವರದಿಯ ಪ್ರಕಾರ ಮಹಿಳೆ ತನ್ನ ತಾಯಿ ಹಾಗೂ ಸಹೋದರನೊಂದಿಗೆ ವಾಸವಿದ್ದರು. ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡ್ತಿದ್ರು. ಆಕೆ ಮದುವೆ ಪ್ರಸ್ತಾಪವನ್ನು ನಿರಾಕರಿಸಿದ್ರು. ನಂತರ ಆರೋಪಿಯು ತನ್ನ ಸ್ನೇಹಿತರೊಂದಿಗೆ ಆಕೆಯ ಮನೆಗೆ ಬಂದಿದ್ದು ಈ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದು ಮಹಿಳೆ ಆಕೆಯ ಕೆನ್ನೆಗೆ ಬಾರಿಸಿದ್ದಾರೆ. ಇದರ ಸೇಡಿಗಾಗಿ ಆರೋಪಿ ತನ್ನ ಗೆಳೆಯರ ಜೊತೆಗೂಡಿ ಮಹಿಳೆಯನ್ನ ಅಪಹರಿಸಿ, ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. ವಿಧಿ ವಿಜ್ಞಾನ ವರದಿಯ ಪ್ರಕಾರ ಮಹಿಳೆಯ ದೇಹವನ್ನ ಚೂಪಾದ ಆಯುಧದಿಂದ ತುಂಡರಿಸಲಾಗಿದೆ ಎಂದು ಎಎನ್‍ಐ ವರದಿ ಮಾಡಿದೆ.

    ಮಾಚ್ 9 ರಂದು ಸುಮಾರು 5 ರಿಂದ 6 ಯುವಕರು ಖಾಸಗಿ ಕಂಪೆನಿಯ ಬಳಿ ಮಹಿಳೆಯನ್ನ ಅಪಹರಣ ಮಾಡಿದ್ರು ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆರೋಪಿ ಕಳೆದ 1 ವರ್ಷದಿಂದ ನನ್ನ ಮಗಳನ್ನ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಎಂದು ಮೃತ ಮಹಿಳೆಯ ತಾಯಿ ಹೇಳಿದ್ದಾರೆ. ಈ ನೀಚ ಕೃತ್ಯವೆಸಗಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

    ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಕೃತ್ಯವನ್ನ ಖಂಡಿಸಿದ್ದಾರೆ.

  • ಗೆಳೆಯರಿಂದ್ಲೇ ಮಗಳ ಮೇಲೆ ಗ್ಯಾಂಗ್‍ರೇಪ್ – ವೀಡಿಯೋ ಮಾಡಿದ ನಿಷ್ಕರುಣಿ ತಾಯಿ

    ಗೆಳೆಯರಿಂದ್ಲೇ ಮಗಳ ಮೇಲೆ ಗ್ಯಾಂಗ್‍ರೇಪ್ – ವೀಡಿಯೋ ಮಾಡಿದ ನಿಷ್ಕರುಣಿ ತಾಯಿ

    ರೋಹ್ಟಕ್: ಅಪ್ರಾಪ್ತೆಯ ಮೇಲೆ ಆಕೆಯ ತಾಯಿಯ ಗೆಳೆಯರೇ ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದು, ಅಮ್ಮನೇ ಅದರ ವೀಡಿಯೋ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

    ಹರಿಯಾಣದ ರೋಹ್ಟಕ್‍ನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. 12ನೇ ತರಗತಿ ಓದುತ್ತಿರುವ 16 ವರ್ಷದ ಬಾಲಕಿಯ ಮೇಲೆ ಅದೇ ಗ್ರಾಮದ ರಾಮ್ಬಗತ್, ದಿನೇಶ್ ಮತ್ತು ಕಮಲ್ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ. ಇದನ್ನು ತಾಯಿ ವೀಡಿಯೋ ಮಾಡಿದ್ದಾಳೆ ಅಂತಾ ಬಾಲಕಿ ಪೊಲೀಸರ ಮುಂದೆ ಹೇಳಿದ್ದಾಳೆ.

    ಬಾಲಕಿಯ ತಾಯಿ ಈ ಮೂವರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಅಂತೆಯೇ ತಾಯಿ ಅವರೊಂದಿಗೆ ಕಾಲ ಕಳೆಯುತ್ತಿರುವುದನ್ನು ಬಾಲಕಿ ಗಮನಿಸಿದ್ದಾಳೆ. ಆ ಬಳಿಕ ತಾಯಿ ತನ್ನ ಮಗಳ ಮೇಲೆಯೇ ಮೂವರಿಂದ ಸಾಮೂಹಿಕ ಅತ್ಯಾಚಾರ ಮಾಡಿಸಿದ್ದಾಳೆ

    ವೀಡಿಯೋ ಕೂಡ ಮಾಡಿಕೊಂಡಿದ್ದು, ವಿಚಾರ ಬಹಿರಂಗಪಡಿಸಿದ್ರೆ ವೀಡಿಯೋವನ್ನು ವೈರಲ್ ಮಾಡುತ್ತೇನೆ ಅಷ್ಟೇ ಅಲ್ಲದೇ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾಳೆ ಎಂದು ಮಗಳು ದೂರಿನಲ್ಲಿ ಆರೋಪಿಸಿದ್ದಾಳೆ.

    ಸದ್ಯ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.