Tag: ರೌಡಿಗಳು

  • ರೌಡಿಗಳಾಗಿ ಜೈಲು ಸೇರಿದ್ದವರಿಗೆ ಸಿಕ್ಕಿತು ಉಗ್ರರ ಪಾಠ!

    ರೌಡಿಗಳಾಗಿ ಜೈಲು ಸೇರಿದ್ದವರಿಗೆ ಸಿಕ್ಕಿತು ಉಗ್ರರ ಪಾಠ!

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ಐವರು ಶಂಕಿತ ಉಗ್ರರ (Suspected Terrorists) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಷ್ಟು ರೋಚಕ ಅಪ್ಡೇಟ್‍ಗಳು ಸಿಗುತ್ತಿದೆ. ಸುಹೇಲ್, ಉಮರ್, ತಬ್ರೇಜ್, ಮುದಾಸಿರ್, ಪೈಜಲ್ ರಬ್ಬಾನಿ ಬಂಧಿತ ಶಂಕಿತ ಉಗ್ರರಾಗಿದ್ದು, ಪ್ರಮುಖ ಲೀಡರ್ ಜುನೈದ್ ತಲೆಮರೆಸಿಕೊಂಡಿದ್ದಾನೆ.

    ರೌಡಿಗಳಾಗಿದ್ದ ಶಂಕಿತರು: ಬೆಂಗಳೂರಿನಲ್ಲಿ ಸದ್ದಿಲ್ಲದೆ ವಿಧ್ವಂಸಕ ಕೃತ್ಯಕ್ಕೆ ಪ್ಲಾನ್ ಮಾಡಿದ್ದ ಶಂಕಿತರು ಅಸಲಿಗೆ ರೌಡಿಗಳಾಗಿದ್ದರು. ಇವರೆಲ್ಲ 2017ರಲ್ಲಿ ಆರ್ ಟಿ ನಗರದಲ್ಲಿ ನೂರ್ ಅಹ್ಮದ್‍ನ ಕಿಡ್ನಾಪ್ ಕಮ್ ಮರ್ಡರ್ ಕೇಸ್ ನ ಆರೋಪಿಗಳು. ಈ ಕೇಸಲ್ಲಿ 21 ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಕೊಲೆ ಮಾಡಿ ಜೈಲು ಸೇರಿದ ರೌಡಿಗಳಿಂದ ಇದೀಗ ಬ್ಲ್ಯಾಸ್ಟ್ ಗೆ ಸಂಚು ರೂಪಿಸಲಾಗುತ್ತಿತ್ತು.

    ಜೈಲು ಸೇರಿದವರಿಗೆ ಟೆರರಿಸ್ಟ್ ಗಳ ಲಿಂಕ್: ಕೊಲೆ ಮಾಡಿ ಪರಪ್ಪನ ಅಗ್ರಹಾರ (Parappana Agrahara) ಸೇರಿದವರಿಗೆ ಜೈಲು ಸಿಬ್ಬಂದಿ ಟೆರರಿಸ್ಟ್ ಸೆಲ್ ನೀಡಿದ್ದರು. ಈ ವೇಳೆ ಶಂಕಿತರು ಜೈಲಿನಲ್ಲಿ ಟೆರರಿಸ್ಟ್ (Terrorist) ಗಳ ವಿಶ್ವಾಸ ಗಳಿಸಿದ್ದರು. ಜೈಲಿನಲ್ಲೇ ಶಂಕಿತರಿಗೆ ಮೈಂಡ್ ವಾಶ್, ಟ್ರೈನಿಂಗ್ ನಡೆದಿತ್ತು. ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗುವಂತೆ ಮೈಂಡ್ ವಾಶ್ ಮಾಡಲಾಗಿತ್ತು. ಅಂತೆಯೇ ಜೈಲಿನಿಂದ ರಿಲೀಸ್ ಆದ ಬಳಿಕ ಬೆಂಗಳೂರಲ್ಲಿ ದೊಡ್ಡ ಸ್ಫೋಟ ನಡೆಸಲು ಪ್ಲಾನ್ ಮಾಡಿದ್ದರು.

    ಜಮತ್ ಇ ಇಸ್ಲಾಮಿ ಸಂಘಟನೆಯ ಹ್ಯಾಂಡ್ಲರ್ಸ್ ಮೂಲಕ ತರಬೇತಿ ಪಡೆಯಲು ಶಂಕಿತರು ಸುಲ್ತಾನ್ ಪಾಳ್ಯದಲ್ಲಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳುತ್ತಿದ್ದರು. ಸುಲ್ತಾನ್ ಪಾಳ್ಯದ ಮಸೀದಿಯೊಂದರ ಪಕ್ಕದಲ್ಲಿಯೇ ವಾಸವಿದ್ದು ವಿಧ್ವಂಸಕ ಕೃತ್ಯಕ್ಕೆ ನಡೆಸಬೇಕಾದ ಬಗ್ಗೆ ಪ್ಲಾನಿಂಗ್ ನಡೆಯುತ್ತಿತ್ತು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಶಂಕಿತರು ಜಮಾತ್ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದ್ದ ಬಗ್ಗೆ ಪೊಲೀಸರಿಗೆ ಒಂದಷ್ಟು ಸಾಕ್ಷ್ಯಗಳು ಲಭ್ಯವಾಗಿದೆ. ಆರೋಪಿಗಳ ಬಂಧನದ ವೇಳೆ 4 ಪಿಸ್ತೂಲ್, ಸ್ಫೋಟಕ ವಸ್ತುಗಳು ವಾಕಿಟಾಕಿ, ಮೊಬೈಲ್‍ಗಳು ಪತ್ತೆ ಆಗಿದೆ. ಈ ಸಂಬಂಧ ಎನ್‍ಐಎ (NIA) ಅಧಿಕಾರಿಗಳು ಹಾಗೂ ಸಿಸಿಬಿ ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜುನೈದ್ ಸದ್ಯ ವಿದೇಶದಲ್ಲಿರೋ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಶಂಕಿತರ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಐಪಿಸಿ 120, 121 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ರಾಷ್ಟ್ರದ್ರೋಹ ಆರೋಪದ ಮೇಲೆ ಎಫ್‍ಐಆರ್ ದಾಖಲಾಗಿದೆ. ವಶಕ್ಕೆ ಪಡೆದ ಶಂಕಿತರನ್ನ ಆಡುಗೋಡಿಯ ಟೆಕ್ನಿಕಲ್ ಸೆಲ್ ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

    ಸ್ಫೋಟಕ ವಸ್ತುಗಳು ಪತ್ತೆ: ಶಂಕಿತ ಉಗ್ರರ ಬಳಿ 4 ವಾಕಿಟಾಕಿ, 7 ಕಂಟ್ರಿ ಮೇಡ್ ಪಿಸ್ತೂಲ್, 42 ಸಜೀವ ಗುಂಡುಗಳು, ಮದ್ದುಗುಂಡುಗಳು, 2 ಡ್ರ್ಯಾಗರ್, 2 ಸೆಟಲೈಟ್ ಫೋನ್ ಗಳು ಹಾಗೂ 4 ಗ್ರೆನೈಡ್ ಗಳು ಪತ್ತೆಯಾಗಿವೆ.

    ಟಾರ್ಗೆಟ್ ಬೆಂಗಳೂರು: ಶಂಕಿತ ಉಗ್ರರು ಬೆಂಗಳೂರು ಸಿಟಿಯನ್ನೇ ಟಾರ್ಗೆಟ್ ಮಾಡಿದ್ದರು. ಪೊಲೀಸರ ಮಾಹಿತಿ ಪ್ರಕಾರ ಅರೆಸ್ಟ್ ಆದ ಎಲ್ಲಾ ಶಂಕಿತರು ಬೆಂಗಳೂರು ಸ್ಥಳೀಯ ನಿವಾಸಿಗಳೇ ಆಗಿದ್ದಾರೆ. ಉಗ್ರರ ಜೊತೆ ಕಾಂಟ್ಯಾಕ್ಟ್ ಆಗಿ ವಿಧ್ವಂಸಕ ಕೃತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದರು. ಬೆಂಗಳೂರಿನಲ್ಲಿ ಎಲ್ಲೆಲ್ಲಿ ಬ್ಲಾಸ್ಟ್ ಮಾಡಬೇಕು? ಏನು ಅನ್ನೋದರ ಬಗ್ಗೆಯೂ ಟ್ರೈನಿಂಗ್ ಪಡೆದಿದ್ದರು. ಶಂಕಿತರ ಟೀಂ ಎಲ್ಲಾ ಕಡೆಯೂ ಆಕ್ಟೀವ್ ಆಗಿತ್ತು. ಬೆಂಗಳೂರಿನ ಸುಮಾರು ಹತ್ತು ಕಡೆ ಬ್ಲಾಸ್ಟಿಂಗ್ ಗೆ ಪ್ಲಾನ್ ಮಾಡಿದ್ದ ಮಾಹಿತಿ ಸಿಕ್ಕಿದೆ. ಎಲ್ಲಾ ಪ್ಲಾನ್ ಮಾಡಿಕೊಂಡು ಎಕ್ಸಿಕ್ಯೂಟ್‍ಗೆ ಕಾಯುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿಗೆ ಗಲಭೆ ಎಬ್ಬಿಸಲು ರೌಡಿಗಳು ಬೇಕು: ಸಿದ್ದರಾಮಯ್ಯ

    ಬಿಜೆಪಿಗೆ ಗಲಭೆ ಎಬ್ಬಿಸಲು ರೌಡಿಗಳು ಬೇಕು: ಸಿದ್ದರಾಮಯ್ಯ

    ಮಂಡ್ಯ: ಬಿಜೆಪಿ ಅವರಿಗೆ ಗಲಭೆ ಎಬ್ಬಿಸಲು ರೌಡಿಗಳು ಬೇಕು. ಅದೇ ಕಾರಣಕ್ಕೆ ರೌಡಿ ಶೀಟರ್‍ಗಳನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಮಂಡ್ಯ ಜಿಲ್ಲೆಯ ಕೆಆರ್ ಪೇಟೆ (KR Pete) ಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇಬ್ಬರು ಎಂಪಿಗಳು ಬಿಜೆಪಿಯವರು ಸೈಲೆಂಟ್ ಸುನೀಲ( (Silent Sunila) ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವನು ಸರ್ಚ್ ವಾರೆಂಟ್‍ನಲ್ಲಿದ್ದಾನೆ. ಇಂಥವರ ಜೊತೆ ಓಡಾಡಿ ಸಮರ್ಥನೆ ಮಾಡಿಕೊಳ್ಳುತ್ತಾರೆ. ಬಿಜೆಪಿಯವರಿಗೆ ಇದು ಅಂಟು ರೋಗ ಆಗಿದೆ. ಅದರಲ್ಲೂ ಬಸವರಾಜ ಬೊಮ್ಮಾಯಿಗೆ ಜಾಸ್ತಿಯಾಗಿದೆ. ಏನೇ ಹೇಳಿದರು ಹಿಂದಿನ ಸರ್ಕಾರದಲ್ಲಿ ಆಗಿಲ್ವಾ ಅಂತಾರೆ. ನಿಮ್ಮ ತಪ್ಪುಗಳನ್ನು ಹೇಳಿ ಜನ ನಿಮಗೆ ಅಧಿಕಾರ ಕೊಟ್ಟಿಲ್ಲ. ನೀವು ಅನೈತಿಕವಾಗಿ ಬಂದಿದ್ದೀರಾ ಎಂದು ಕಿಡಿಕಾರಿದ್ರು.

    ನಮ್ಮನ್ನು ಬಿಡಿ ನೀವು ಏನು ಮಾಡಿದ್ದೀರಾ ಅಂತಾ ಹೇಳಿ ರೌಡಿ ಜೊತೆ ವೇದಿಕೆ ಹಂಚಿಕೊಂಡಿದ್ದು ಸರಿನಾ? ಫೈಟರ್ ರವಿ ಆಹಾ ಹೆಸರು ನೋಡು ಫೈಟರ್ ರವಿ (Fighter Ravi) ಅಂತೆ ಆರ್‍ಎಸ್‍ಎಸ್ (RSS) ಬಿಜೆಪಿ ಇಂತಹದ್ದೇ ಕೆಲಸ ಮಾಡುತ್ತದೆ. ಅಶಾಂತಿ ನಿರ್ಮಾಣ ಮಾಡಲು ಇಂತವರು ಅವರಿಗೆ ಬೇಕು ಸಮಾಜದಲ್ಲಿ ಅಶಾಂತಿ ಮೂಡಿಸಲು ಇಂತವರನ್ನು ಸೇರಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‍ (Congress) ನವರು ಜೈಲಿಗೆ ಹೋಗಿ ಬಂದಿದ್ದಾರೆ ಅಂತಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್‌ನಲ್ಲಿ ತಮಿಳು ನಟ ವಿಜಯ್ ಸೇತುಪತಿ

    ಅಮಿತ್ ಶಾ (AmitShah) ಎಲ್ಲಿ ಹೋಗಿದ್ದರು? ಏನು ಮಾವನ ಮನೆಗೆ ಹೋಗಿದ್ರಾ? ಅವರನ್ನು ಗಡಿಪಾರು ಮಾಡಿದ್ರು. ಈ ದೇಶದ ಹೋಮ್ ಮಿನಿಸ್ಟರ್‍ಗೆ ಮೂರು ವರ್ಷಕ್ಕೂ ಹೆಚ್ಚು ಜೈಲಾಗಿತ್ತು. ಅಂತವರೇ ಅಧ್ಯಕ್ಷರು ಹೋಮ್ ಮಿನಿಸ್ಟರ್ ಆಗಿದ್ದಾರೆ. ನಲಪಾಡ್ (Nalpad) ರೌಡಿ ಅಲ್ಲ ಅವನೇನು ರೌಡಿ ಶೀಟರ್ ಇದ್ದಾನಾ? ಅವನ ಮೇಲೆ ಕ್ರಿಮಿನಲ್ ಕೇಸ್ ಇದೆ ಅಷ್ಟೇ. ಅದು ಸಾಬೀತಾಗಿ ಠಾಣೆಯಲ್ಲಿ ಫೋಟೋ ಇದ್ದು ಶಿಕ್ಷೆ ಆದರೆ ಸರಿ. ಮೊಂಡುತನ ಮಾನ ಮರ್ಯಾದೆ ಇಲ್ಲದವು ಬರೀ ಭಂಢತನ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    Live Tv
    [brid partner=56869869 player=32851 video=960834 autoplay=true]

  • ರೌಡಿಗಳ ಚಳಿ ಬಿಡಿಸಿದ ರವಿ ಚೆನ್ನಣ್ಣನವರ್

    ರೌಡಿಗಳ ಚಳಿ ಬಿಡಿಸಿದ ರವಿ ಚೆನ್ನಣ್ಣನವರ್

    ಬೆಂಗಳೂರು: ಹವಾ ಮಾಡ್ತೀವಿ, ರೌಡಿಸಂ ಮಾಡ್ತೀವಿ, ಹೆಸರು ಮಾಡ್ತೀವಿ, ನಂದೆ ಹವಾ ಇರ್ಬೇಕು ಎಂದು ಓಡಾಡುತ್ತಿದ್ದವರಿಗೆ ಆನೇಕಲ್ ಉಪ ವಿಭಾಗದ ಪೊಲೀಸರು ಚಳಿ ಬಿಡಿಸಿದ್ದು, ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಆನೇಕಲ್ ಉಪವಿಭಾಗದ ಏಳು ಠಾಣೆಯ ಪೋಲಿಸರು ಭಾನುವಾರ ಸ್ಪೆಷಲ್ ಡ್ರೈವ್ ಮಾಡಿ ರೌಡಿ ಶೀಟರ್ಸ್ ಗಳ ಮನೆಗಳಿಗೆ ತೆರಳಿ ರೈಡ್ ಮಾಡಿ ಸುಮಾರು ನೂರಕ್ಕು ಹೆಚ್ಚು ರೌಡಿ ಶೀಟರ್ ಗಳನ್ನು ಠಾಣೆಗೆ ಕರೆಸಿದ್ದಾರೆ. ಇಂದು ಎಸ್‍ಪಿ ರವಿ.ಡಿ.ಚೆನ್ನಣ್ಣನವರ್ ನೇತೃತ್ವದಲ್ಲಿ ಎಲ್ಲ ಠಾಣೆಯ ರೌಡಿಗಳನ್ನು ಒಂದೆಡೆ ಕರೆಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಇನ್ನೇನು ಹಬ್ಬ, ಬಿಬಿಎಂಪಿ ಚುನಾವಣೆ ಮತ್ತು ಪಂಚಾಯಿತಿ ಎಲೆಕ್ಷನ್ ಬರುತ್ತಿವೆ. ಈ ವೇಳೆ ಯಾರೂ ಬಾಲ ಬಿಚ್ಚಬಾರದು, ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗದಂತೆ ನಡೆದುಕೊಳ್ಳಬೇಕು ಎಂದು ಆನೇಕಲ್ ಠಾಣೆಯ ಮುಂಭಾಗದಲ್ಲಿ ಎಲ್ಲ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಕೆಲವರು ನಾನು ಅಲ್ಲಿ ಹವಾ ಇಟ್ಟಿದ್ದೇನೆ ಎಂದು ಪೊಲೀಸರಿಗೆ ಬೆದರಿಕೆ ಒಡ್ಡಿರುವ ಘಟನೆಗಳು ನಡೆದಿದ್ದು, ಇದೆಲ್ಲ ಇನ್ನು ಮುಂದೆ ನಡೆದರೆ ನಿಮ್ಮ ಬಾಲ ಕಟ್ ಮಾಡಬೇಕಾಗುತ್ತದೆ ರವಿ ಚೆನ್ನಣ್ಣನವರ್ ವಾರ್ನ್ ಮಾಡಿದ್ದಾರೆ.

    ಇತ್ತೀಚೆಗೆ ಹೆಚ್ಚು ಸಕ್ರಿಯರಾಗಿದ್ದ ಕೆಲ ರೌಡಿ ಶೀಟರ್ ಗಳು ಇದೆಲ್ಲ ಬಿಟ್ಟು, ತಮ್ಮ ಪಾಡಿಗೆ ತಾವಿದ್ದರೆ ಒಳ್ಳೆಯದು. ರೌಡಿಸಂ ಅಂತ ಹೋದ್ರೆ ಅವರಿಗೆ ದೊಡ್ಡ ಶಾಸ್ತಿಯಾಗುತ್ತದೆ. ಸುಮ್ಮನಿದ್ದರೆ ಸರಿ ಇಲ್ಲವಾದಲ್ಲಿ ಊರು ಬಿಡಿಸಬೇಕಾಗುತ್ತದೆ, ಗೂಂಡಾ ಕಾಯ್ದೆ ಹಾಕಬೇಕಾಗುತ್ತದೆ ಎಂದಿದ್ದಾರೆ.

  • ರೌಡಿಗಳು ಲಾಂಗ್ ಹಿಡಿದು ಓಡಾಡ್ತಿದ್ದಾರೆ: ಮತ್ತೆ ಪೊಲೀಸರ ಮೇಲೆ ಈಶ್ವರಪ್ಪ ಗರಂ

    ರೌಡಿಗಳು ಲಾಂಗ್ ಹಿಡಿದು ಓಡಾಡ್ತಿದ್ದಾರೆ: ಮತ್ತೆ ಪೊಲೀಸರ ಮೇಲೆ ಈಶ್ವರಪ್ಪ ಗರಂ

    ಶಿವಮೊಗ್ಗ: ಶಾಂತವಾಗಿದ್ದ ಮಲೆನಾಡಿನ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸರನ್ನು ಕಂಡರೆ ಕಳ್ಳ-ಕಾಕರಿಗೆ, ಕೊಲೆಗಾರರಿಗೆ ಭಯವೇ ಇಲ್ಲದಂತಾಗಿದೆ. ಅಪರಾಧ ತಡೆಗಟ್ಟುವಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿರುವ ಸಚಿವ ಈಶ್ವರಪ್ಪ ಪೊಲೀಸರ ವಿರುದ್ಧ ಇಂದು ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ.

    ಶಿವಮೊಗ್ಗ ನಗರದ ಕುವೆಂಪುನಗರ ಬಡಾವಣೆಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ನಂತರ ಮಾತನಾಡಿದ ಸಚಿವರು, ಈ ಹಿಂದೆ ಆನಂದರಾಯರು ಶಿವಮೊಗ್ಗ ಕ್ಷೇತ್ರದ ಶಾಸಕರಾಗಿದ್ದ ವೇಳೆ ಅಪರಾಧ ಪ್ರಕರಣಗಳು ಹೆಚ್ಚಾಗಿದ್ದವು. ನಂತರದ ದಿನಗಳಲ್ಲಿ ಅಪರಾಧ ಪ್ರಕರಣಗಳ ಕಡಿಮೆ ಆಗಿದ್ದವು. ಆದರೆ ಇದೀಗ ಮತ್ತೆ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ಶಿವಮೊಗ್ಗ ನಗರದಲ್ಲಿ ರೌಡಿಗಳು ಮಚ್ಚು, ಲಾಂಗ್ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿವೆ. ಗಾಂಜಾ, ಹುಕ್ಕಾ ಸೇವನೆ ಹೆಚ್ಚಾಗಿರುವ ಜೊತೆಗೆ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುತ್ತಿದ್ದಾರೆ. ಹೀಗಿದ್ದರೂ ಪೊಲೀಸರು ಅಪರಾಧ ತಡೆಗಟ್ಟಲು, ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ. ಇರದಿಂದಾಗಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಪೊಲೀಸರು ಕೆಲಸ ಮಾಡುತ್ತಿದ್ದಾರಾ, ಮಲಗಿದ್ದೀರಾ ಎಂಬುದು ಗೊತ್ತಾಗುತ್ತಿಲ್ಲ. ನಿಮ್ಮ ಧೋರಣೆ ಹೀಗೆ ಮುಂದುವರಿದರೆ ಜನರೇ ಕ್ರಮ ಕೈಗೊಳ್ಳಲು ಮುಂದಾಗುತ್ತಾರೆ ಎಂದು ಗುಡುಗಿದರು.

    ನಾಗರಿಕರು ದೂರು ನೀಡಲು ಠಾಣೆಗೆ ಹೋದರೆ ವಿನಾಃ ಕಾರಣ ಕಾಯಿಸುತ್ತಾರೆ ಎಂಬ ಆರೋಪ ಸಹ ಪೊಲೀಸರ ಮೇಲಿದೆ. ಪೊಲೀಸರು ಇನ್ನಾದರೂ ಎಚ್ಚೆತ್ತುಕೊಂಡು ಕೆಲಸ ಮಾಡಬೇಕಿದೆ. ನಿಮ್ಮ ಇಲಾಖೆ ಬಗ್ಗೆ ಪ್ರತ್ಯೇಕ ಸಭೆ ನಡೆಸುತ್ತೇನೆ. ನಿಮ್ಮಿಂದ ಹೇಗೆ ಕೆಲಸ ಮಾಡಿಸಬೇಕು ಎಂಬುದು ನನಗೆ ಗೊತ್ತಿದೆ ಎಂದು ಸಚಿವ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.

  • ಬೆಂಗ್ಳೂರಿನಲ್ಲಿ ಹಾಡಹಗಲೇ ಮಚ್ಚು ಹಿಡಿದು ಪುಂಡರಿಂದ ಆರ್ಭಟ

    ಬೆಂಗ್ಳೂರಿನಲ್ಲಿ ಹಾಡಹಗಲೇ ಮಚ್ಚು ಹಿಡಿದು ಪುಂಡರಿಂದ ಆರ್ಭಟ

    – ಮಚ್ಚಿನಿಂದ ಸಿಕ್ಕ ಸಿಕ್ಕ ವಾಹನಗಳ ಗ್ಲಾಸ್ ಪುಡಿ ಪುಡಿ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಡಿ ರೌಡಿಗಳು ಪುಂಡಾಟ ಮುಂದುವರಿಸಿದ್ದಾರೆ. ಇಂತಹದ್ದೇ ಘಟನೆಯೊಂದು ಚೋಳರ ಪಾಳ್ಯದಲ್ಲಿ ನಡೆದಿದ್ದು, ಪುಂಡರು ಹಾಡಹಗಲೇ ಮಚ್ಚು ಹಿಡಿದು ಆರ್ಭಟ ನಡೆಸಿದ್ದಾರೆ.

    ಚೋಳರ ಪಾಳ್ಯದ 13ನೇ ಕ್ರಾಸ್‍ನಲ್ಲಿ ನಾಲ್ವರು ರೌಡಿಗಳು ರಾಜಾರೋಷವಾಗಿ ಮಚ್ಚಿನಿಂದ ರಸ್ತೆ ಬದಿಗೆ ಸಿಲ್ಲಿಸಿದ್ದ ವಾಹನಗಳ ಗಾಜು ಪುಡಿ ಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಬೇಕರಿಯನ್ನ ಲಾಂಗ್ ಮಚ್ಚಿನಿಂದ ಧ್ವಂಸಗೊಳಿಸಿ ಪರಾರಿಯಾಗಿದ್ದಾರೆ.

    ರೌಡಿಗಳು ಗಾಂಜಾ ಇಲ್ಲವೇ ಮದ್ಯದ ಮತ್ತಿನಲ್ಲಿ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಆರೋಪಿಗಳ ಪುಂಡಾಟವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಕೆಪಿ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

  • ಕಲಾಸಿಪಾಳ್ಯ ಠಾಣೆಯ ಕೂಗಳತೆ ದೂರದಲ್ಲೇ ಸೆಕ್ಯುರಿಟಿ ಗಾರ್ಡ್ ಕೊಲೆ

    ಕಲಾಸಿಪಾಳ್ಯ ಠಾಣೆಯ ಕೂಗಳತೆ ದೂರದಲ್ಲೇ ಸೆಕ್ಯುರಿಟಿ ಗಾರ್ಡ್ ಕೊಲೆ

    – ಎಚ್‍ಎಎಲ್‍ನಲ್ಲೂ ಓರ್ವನ ಬರ್ಬರ ಹತ್ಯೆ
    – ಇತ್ತೀಚೆಗೆ ಜೈಲಿನಿಂದ ರಿಲೀಜ್ ಆಗಿದ್ದ ವ್ಯಕ್ತಿ

    ಬೆಂಗಳೂರು: ಕೊರೊನಾ ವೈರಸ್, ಲಾಕ್‍ಡೌನ್‍ನಿಂದಾಗಿ ಸೈಲೆಂಟ್ ಆಗಿದ್ದ ಬೆಂಗಳೂರಿನ ರೌಡಿಗಳು, ಪುಡಿ ರೌಡಿಗಳು ಮತ್ತೆ ತಮ್ಮ ಕೃತ್ಯ ಆರಂಭಿಸಿದ್ದಾರೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಸೆಕ್ಯುರಿಟಿ ಗಾರ್ಡ್‍ನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ.

    ಶಿವಣ್ಣ (65) ಕೊಲೆಯಾದ ವ್ಯಕ್ತಿ. ವೃದ್ಧ ಶಿವಣ್ಣ ಅವರು ಕಲಾಸಿಪಾಳ್ಯದಲ್ಲಿರುವ ಮುತ್ತೂಟ್ ಫೈನಾನ್ಸ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದರು. ದುಷ್ಕರ್ಮಿಗಳು ನಿನ್ನೆ ರಾತ್ರಿ ಕೊಲೆಗೈದು ಪರಾರಿಯಾಗಿದ್ದಾರೆ. ಘಟನೆಯು ಕಲಾಸಿಪಾಳ್ಯ ಪೊಲೀಸ್ ಠಾಣೆ ಸಮೀಪದಲ್ಲೇ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ ಕಲಾಸಿಪಾಳ್ಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಎಚ್‍ಎಎಲ್: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಹತ್ಯೆಗೈದ ಘಟನೆ ಎಚ್‍ಎಎಲ್ ಸಮೀಪದಲ್ಲಿ ನಡೆದಿದೆ. ಅರವಿಂದ್ (27) ಕೊಲೆಯಾದ ವ್ಯಕ್ತಿ.

    ದುಷ್ಕರ್ಮಿಗಳು ನಿನ್ನೆ ತಡರಾತ್ರಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ಅರವಿಂದ್ ಇತ್ತೀಚೆಗಷ್ಟೇ ಜೈಲಿನಿಂದ ರಿಲೀಜ್ ಆಗಿ ಬಂದಿದ್ದ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಎಚ್‍ಎಎಲ್ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

  • ಕಳ್ಳಕಾಕರು, ರೌಡಿಗಳ ಜೊತೆ ಪೊಲೀಸ್ರು ಒಡನಾಟ ಹೊಂದಿರೋದು ಗೊತ್ತಾದ್ರೆ ಕ್ರಮ: ಭಾಸ್ಕರ್ ರಾವ್

    ಕಳ್ಳಕಾಕರು, ರೌಡಿಗಳ ಜೊತೆ ಪೊಲೀಸ್ರು ಒಡನಾಟ ಹೊಂದಿರೋದು ಗೊತ್ತಾದ್ರೆ ಕ್ರಮ: ಭಾಸ್ಕರ್ ರಾವ್

    ಬೆಂಗಳೂರು: ರವಿ ಪೂಜಾರಿಯನ್ನು ಕರೆತಂದ ನಂತರ ಸಾಕಷ್ಟು ವಿಚಾರಗಳು ಹೊರ ಬರುತ್ತಿದೆ. ಆತ ಈ ಹಿಂದೆ ಮಾಡಿದ ಅಕ್ರಮಗಳು ಒಂದೊಂದಾಗಿ ಬಯಲಿಗೆ ಬರುತ್ತಿದ್ದರೆ, ಅಧಿಕಾರಿಯೊಬ್ಬರು ರವಿ ಪೂಜಾರಿ ಜೊತೆ ಒಡನಾಟ ಹೊಂದಿರುವ ಬಗ್ಗೆ ಆಘಾತಕಾರಿ ವಿಚಾರ ಹೊರಬಂದಿದೆ.

    ಅಧಿಕಾರಿಯೊಬ್ಬರು ಸಿಸಿಬಿಯಲ್ಲಿ ಕಾರ್ಯ ನಿರ್ವಹಿಸುವುದು ಸೂಕ್ತ ಅಲ್ಲ. ತನಿಖೆಯಲ್ಲಿ ಪಾರದರ್ಶಕತೆ ಇರಬೇಕು. ಹೀಗಾಗಿ ಎಸಿಪಿ ವೆಂಕಟೇಶ್ ಪ್ರಸನ್ನ ಅವರಿಗೆ ಬೇರೆ ಪೋಸ್ಟ್ ತೋರಿಸಲಾಗಿದೆ. ಸರ್ಕಾರದ ವಿರುದ್ಧ, ದೇಶದ ವಿರುದ್ಧ ಕೆಲಸ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದು ಗ್ಯಾರಂಟಿ. ಜನರಿಗೆ ಮೋಸ ಮಾಡಿ ದೇಶಕ್ಕೆ ಮೋಸ ಮಾಡಿರುವ ಒಬ್ಬ ಕ್ರಿಮಿನಲ್ ಜೊತೆ ಸಂಪರ್ಕ ಇರುವ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು. ಶಿಸ್ತಿನ ಕ್ರಮಕೈಗೊಳ್ಳುವ ಬಗ್ಗೆ ನಾವು ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದೇವೆ ಎಂದು ಭಾಸ್ಕರ್ ರಾವ್ ರೌಡಿಗಳ ಜೊತೆ ಸಂಪರ್ಕ ಹೊಂದಿರುವ ಪೊಲೀಸರಿಗೆ ಎಚ್ಚರಿಕೆ ನೀಡಿದರು.

    ರೌಡಿಗಳ ಜೊತೆ ಸಂಪರ್ಕ ಇರುವ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ತೆಗೆದುಕೊಳ್ಳುತ್ತೇವೆ. ಸ್ಲಂ ದೊರೆಗಳೇ ಇರಲಿ, ಯಾರೇ ಇರಲಿ ಅವರ ಜೊತೆ ಪೊಲೀಸರ ಸಂಪರ್ಕ ಹೊಂದಿದ್ದರೆ ಅವರ ವಿರುದ್ಧ ಕ್ರಮ ಗ್ಯಾರಂಟಿ. ಇಂತಹ ಕ್ರಿಮಿನಲ್‍ಗಳ ಜೊತೆ ಬರ್ತ್ ಡೇ ಪಾರ್ಟಿ ಮಾಡಿಕೊಳ್ಳುವುದು, ಅವರ ಜೊತೆ ವ್ಯವಹಾರಗಳನ್ನು ನಡೆಸುವುದು ಕಂಡು ಬಂದರೆ ಅವರ ಮೇಲೆ ಕ್ರಮ ಕಟ್ಟಿಟ್ಟ ಬುತ್ತಿ. ರಿಯಲ್ ಎಸ್ಟೆಟ್ ಮಾಡಿಸುವುದು, ಡೀಲಿಂಗ್ ಮಾಡಿಸುವುದು ಮಾಡಿದ್ದು ಗೊತ್ತಾದರೆ ಕ್ರಮ ನಿಶ್ಚಿತ ಎಂದು ಭಾಸ್ಕರ್ ರಾವ್ ಹೇಳಿದ್ದಾರೆ.

  • ಸಿಲಿಕಾನ್ ಸಿಟಿಯಲ್ಲಿ ಇನ್ನೂರಕ್ಕೂ ಹೆಚ್ಚು ರೌಡಿಗಳಿಂದ ದಾಂಧಲೆ

    ಸಿಲಿಕಾನ್ ಸಿಟಿಯಲ್ಲಿ ಇನ್ನೂರಕ್ಕೂ ಹೆಚ್ಚು ರೌಡಿಗಳಿಂದ ದಾಂಧಲೆ

    – ಮನೆ ಮೇಲೆ ಕಲ್ಲು ತೂರಾಟ
    – ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಗಳು ಮತ್ತೆ ಬಾಲ ಬಿಚ್ಚುತ್ತಿದ್ದು, ದಾಂಧಲೆ ಎಬ್ಬಿಸುತ್ತಿದ್ದಾರೆ. ಸುಮಾರು ಇನ್ನೂರಕ್ಕೂ ಹೆಚ್ಚು ರೌಡಿಗಳು ಮನೆ ಮೇಲೆ ಕಲ್ಲು ಎಸೆದು, ಸುತ್ತಿಗೆಯಿಂದ ಡೋರ್ ಒಡೆದು ದರ್ಪ ಮೆರೆದಿದ್ದಾರೆ.

    ನಗರದ ಬೆಳ್ಳಂದೂರಿನ ಎಕೊ ಸ್ಪೇಸ್ ಬಳಿ ಘಟನೆ ನಡೆದಿದ್ದು, ಜಮೀನಿನ ವಿವಾದಕ್ಕಾಗಿ ಗಲಾಟೆ ನಡೆದಿದೆ. 2004ರಲ್ಲಿ ಲಕ್ಷ್ಮಪ್ಪ ಅವರ ಜಮೀನನ್ನು ಕೆಐಎಡಿಬಿ ವಶಕ್ಕೆ ಪಡೆದಿತ್ತು. ಅಂದಿನಿಂದ ಲಕ್ಷ್ಮಪ್ಪ ಕುಟುಂಬ ಕೋರ್ಟ್ ಮೂಲಕ ಸ್ಟೇ ತಂದಿದ್ದಾರೆ. ಹೈಕೋರ್ಟ್ ನಲ್ಲಿ ಅರ್ಜಿ ಹಾಕಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಎರಡು ತಿಂಗಳ ಸಮಯ ನೀಡಿದೆ. ಆದರೆ ಶನಿವಾರ ಮಧ್ಯಾಹ್ನ ಏಕಾಏಕಿ 200ಕ್ಕೂ ಹೆಚ್ಚು ಬಾಡಿಗೆ ರೌಡಿಗಳು ಮನೆಯ ಬಳಿ ಬಂದು ಗಲಾಟೆ ಮಾಡಿದ್ದು, ಮನೆಯ ಮೇಲೆ ಕಲ್ಲು ತೂರಿ, ಕುಟುಂಬದ ಸದಸ್ಯರ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾರೆ.

    ಲಕ್ಷ್ಮಯ್ಯರ ಸಹೋದರ ಮುನಿರಾಜು ಹಾಗೂ ಪ್ರಜ್ವಲ್ ಅವರ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ಯುವತಿಯನ್ನು ಎಳೆದಾಡಿ ಡ್ರೈನೇಜ್‍ಗೆ ಎಸೆದು ಬಾಡಿಗೆ ರೌಡಿಗಳು ಪುಂಡಾಟ ಮೆರೆದಿದ್ದಾರೆ. ಶ್ರೀ ಸತ್ಯ ಸಾಯಿ ನಾರಾಯಣ ಪ್ರೈವೇಟ್ ಲಿಮಿಟೆಡ್ ನವರೇ ಈ ಕೆಲಸ ಮಾಡಿದ್ದಾರೆ ಎಂದು ಮಾಲೀಕರು ಆರೋಪಿಸಿದ್ದಾರೆ.

    ಘಟನೆ ಕುರಿತು ಬೆಳ್ಳಂದೂರು ಪೊಲೀಸರಿಗೆ ದೂರು ನೀಡಲು ಹೋದರೆ ದೂರು ತೆಗೆದುಕೊಳ್ಳದೆ ನಿರಾಕರಿಸಿದ್ದಾರೆ. ಇತ್ತ ಪುಡಿ ರೌಡಿಗಳು ಮನೆ ಬಳಿ ನೈಟ್ ಬೀಟ್ ಹಾಕುತ್ತಿದ್ದಾರೆ. ಹೀಗಾಗಿ ಕುಟುಂಬಸ್ಥರು ಜೀವ ಭಯದಲ್ಲೇ ಕಾಲ ಕಳೆಯುವಂತಾಗಿದೆ ಎಂದು ಮನೆಯವರು ಅಳಲು ತೋಡಿಕೊಂಡಿದ್ದಾರೆ.

  • ಬೆಳ್ಳಂಬೆಳಗ್ಗೆ ಲಾಂಗು ಮಚ್ಚು ಝಳಪಿಸಿದ್ದ ರೌಡಿಗಳು ಅಂದರ್

    ಬೆಳ್ಳಂಬೆಳಗ್ಗೆ ಲಾಂಗು ಮಚ್ಚು ಝಳಪಿಸಿದ್ದ ರೌಡಿಗಳು ಅಂದರ್

    ತುಮಕೂರು: ತುಮಕೂರು ಹೊರವಲಯದ ಊರುಕೆರೆಯಲ್ಲಿ ಸೋವಮಾರ ಬೆಳ್ಳಂಬೆಳಗ್ಗೆ ಲಾಂಗು ಮಚ್ಚು ಝಳಪಿಸಿದ್ದ ಆರೋಪಿಗಳು ಕೊನೆಗೂ ಅಂದರ್ ಆಗಿದ್ದಾರೆ.

    ಊರುಕೆರೆ ನಿವಾಸಿಗಳಾದ ಓ.ಸಿ.ಕೃಷ್ಣಪ್ಪ, ಜಗದೀಶ್ ಹಾಗೂ ಪುರುಷೋತ್ತಮ ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ಸೋಮವಾರ ಊರುಕೆರೆ ನಿವಾಸಿ ರಾಜಣ್ಣ ನಡೆದು ಹೋಗುತ್ತಿದ್ದಾಗ ಕ್ಯಾತೆ ತೆಗೆಯಲೆಂದೇ ಕಾರು ಮುಟ್ಟಿದ್ದರು. ಬಳಿಕ ರಾಜಣ್ಣ ಪ್ರಶ್ನಿಸಿದ್ದಾಗ ಲಾಂಗು, ಮಚ್ಚು ಹಾಗೂ ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಮಾಡಲು ಪ್ರಯತ್ನಿಸಿದ್ದರು.

    ಘಟನೆ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ತುಮಕೂರು ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

    ರಾಜಣ್ಣ ಅವರ ಪತ್ನಿ ಪುಟ್ಟನರಸಮ್ಮ ಈ ಹಿಂದೆ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದರು. ಈ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳು ರಾಜಣ್ಣ ಅವರ ಕಾರು ಮುಟ್ಟಿ ಜಗಳ ತೆಗೆದು ಹಲ್ಲೆಗೆ ಯತ್ನಿಸಿದ್ದರು ಎನ್ನಲಾಗಿದೆ.

  • ಶಾಂತಿ ಸುವ್ಯವಸ್ಥೆ ಕಾಪಾಡಲು ಮಂಡ್ಯ ಪೊಲೀಸ್ ಇಲಾಖೆ ಮಾಸ್ಟರ್ ಪ್ಲಾನ್

    ಶಾಂತಿ ಸುವ್ಯವಸ್ಥೆ ಕಾಪಾಡಲು ಮಂಡ್ಯ ಪೊಲೀಸ್ ಇಲಾಖೆ ಮಾಸ್ಟರ್ ಪ್ಲಾನ್

    – ಮಂಡ್ಯದಲ್ಲಿ 38 ರೌಡಿಗಳನ್ನ ಗಡಿಪಾರು ಮಾಡಲು ನಿರ್ಧಾರ

    ಮಂಡ್ಯ: ಇತ್ತೀಚಿನ ದಿನಗಳಲ್ಲಿ ಸಕ್ಕರೆ ನಾಡು ಮಂಡ್ಯ ಪುಡಿ ರೌಡಿಗಳ ಅಟ್ಟಹಾಸಕ್ಕೆ ನಲುಗಿದ್ದು, ಕಳೆದೆರಡು ತಿಂಗಳಿಂದ ಒಂದಲ್ಲಾ ಒಂದು ಅಪರಾಧ ಪ್ರಕರಣಗಳು ನಡೆಯುತ್ತಲೇ ಇದೆ. ಇದೀಗ ಇಂತಹ ಅಪರಾಧ ಪ್ರಕರಣಗಳು ತಡೆಗಟ್ಟಲು ಪೊಲೀಸ್ ಇಲಾಖೆ ಮಾಸ್ಟರ್ ಪ್ಲಾನ್ ರೆಡಿ ಮಾಡಿದೆ. ಜಿಲ್ಲಾಡಳಿತ ಜೊತೆ ಸೇರಿ ಜಿಲ್ಲೆಯ ರೌಡಿಶೀಟರ್‌ಗಳನ್ನ ಗಡಿಪಾರು ಮಾಡುವ ಮೂಲಕ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಮುಂದಾಗಿದೆ.

    ಕಳೆದೆರಡು ತಿಂಗಳಿನಿಂದ ಅಪರಾಧ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗಿವೆ. ಕಳೆದ ಡಿಸೆಂಬರ್ ನಿಂದ ಮಂಡ್ಯದಲ್ಲಿ ಕ್ಷುಲ್ಲಕ ಕಾರಣಕ್ಕೆ 5ಕ್ಕೂ ಹೆಚ್ಚು ಕೊಲೆ, 10ಕ್ಕೂ ಹೆಚ್ಚು ದರೋಡೆ ಪ್ರಕರಣಗಳು ಮತ್ತು ಹಲವು ಸರಗಳ್ಳತನ ಪ್ರಕರಣಗಳು ವರದಿಯಾಗಿವೆ. ಇದರಿಂದ ಸಾರ್ವಜನಿಕರ ನೆಮ್ಮದಿ ಕೆಟ್ಟಿದೆ. ಅಪರಾಧ ಪ್ರಕರಣಗಳು ಜಿಲ್ಲೆಯಲ್ಲಿ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ಹೀಗಾಗಿ ಜಿಲ್ಲಾ ವ್ಯಾಪ್ತಿಯ 38 ರೌಡಿಶೀಟರ್‌ಗಳನ್ನು ಗಡಿಪಾರು ಮಾಡುವಂತೆ ಮಂಡ್ಯ ಎಸ್‍ಪಿ ಪರಶುರಾಮ್ ಜಿಲ್ಲಾಧಿಕಾರಿ ವೆಂಕಟೇಶ್‍ರವರಿಗೆ ಮನವಿ ಮಾಡಿದ್ದಾರೆ.

    ಈ ಬಗ್ಗೆ ಮಾತನಾಡಿರುವ ಜಿಲ್ಲಾಧಿಕಾರಿ ವೆಂಕಟೇಶ್, ಇತ್ತೀಚೆಗೆ ಜಿಲ್ಲೆಯಲ್ಲಿ ಅಪರಾಧ ಜಾಸ್ತಿಯಾಗಿದೆ. ಸಾರ್ವಜನಿಕರ ಶಾಂತಿ ಕಾಪಾಡುವ ಸಲುವಾಗಿ ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ವಿಚಾರಣೆ ಆರಂಭಿಸಲಾಗಿದ್ದು, ಗಡಿಪಾರಿನ ಅವಧಿ ಹಾಗೂ ಗಡಿಪಾರು ವಾಪಸ್ ಪಡೆಯುವ ಬಗ್ಗೆ ತೀರ್ಮಾನಿಸಲಾಗುವುದು ಎಂದಿದ್ದಾರೆ.

    ಜಿಲ್ಲಾಧಿಕಾರಿ ಗಡಿಪಾರು ಆದೇಶ ಮಾಡುವ ಮುನ್ನವೇ ರೌಡಿಶೀಟರ್ ಓರ್ವನಿಗೆ ಕೆ.ಆರ್ ಪೇಟೆ ಪಿಎಸ್‍ಐ ಬೆವರಿಳಿಸಿದ್ದಾರೆ. ಶ್ರೀಮಂತರನ್ನು ಬೆದರಿಸಿ ಹಣವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಿದ್ದ ಆರೋಪಿಗೆ ಇನ್ಸ್‌ಪೆಕ್ಟರ್ ಬ್ಯಾಟರಾಯಗೌಡ ವಾರ್ನಿಂಗ್ ಕೊಟ್ಟಿದ್ದಾರೆ. ಬದಲಾಗದಿದ್ದರೆ ಎನ್‍ಕೌಂಟರ್ ಲಿಸ್ಟ್‌ಗೆ ಸೇರಿಸಿ ಮುಗಿಸಿಬಿಡುತ್ತೀನಿ. ಇದು ಓಲ್ಡ್ ಪೊಲೀಸಿಂಗ್ ಅಲ್ಲ ಅಂತ ವಾರ್ನ್ ಮಾಡಿದ್ದಾರೆ. ವಾರ್ನ್ ಮಾಡುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪಿಎಸ್‍ಐ ಬ್ಯಾಟರಾಯಗೌಡಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.