Tag: ರೌಡಿಗಳು

  • ಪುಡಾರಿಗಳಿಗೆ ಡಿಸಿಪಿ ಶರಣಪ್ಪ ಖಡಕ್ ಎಚ್ಚರಿಕೆ

    ಪುಡಾರಿಗಳಿಗೆ ಡಿಸಿಪಿ ಶರಣಪ್ಪ ಖಡಕ್ ಎಚ್ಚರಿಕೆ

    ಬೆಂಗಳೂರು: ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಆ ವಿಭಾಗದ ಪುಡಾರಿಗಳನ್ನು ಕರೆಸಿ ಪರೇಡ್ ಮಾಡಿ ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಪೂರ್ವ ವಿಭಾಗದ ಬಾಣಸವಾಡಿ, ಹಲಸೂರು, ರಾಮೂರ್ತಿ ನಗರ, ಬೈಯ್ಯಪ್ಪನ ಹಳ್ಳಿ, ಇಂದಿರಾ ನಗರ, ಜೀವನ್ ಭೀಮಾನಗರ ಸೇರಿದಂತೆ ಪೂರ್ವ ವಿಭಾಗದ ಎಲ್ಲಾ ಪೊಲೀಸ್ ರೌಡಿ ಶೀಟರ್ ಗಳನ್ನು ಕರೆದು ಪರೇಡ್ ಮಾಡಲಾಯ್ತು. ಪರೇಡ್‍ನಲ್ಲಿ ಸುಮಾರು 150 ಕ್ಕೂ ಹೆಚ್ಚು ಪುಡಿ ರೌಡಿಗಳಿಗೆ ಲೆಫ್ಟ್ ರೈಟ್ ಮಾಡಿ ಖಡಕ್ ವಾರ್ನ್ ಮಾಡಿದ್ರು. ಅಷ್ಟೇ ಅಲ್ಲದೇ ನಿರಂತರವಾಗಿ ಅಪರಾಧ ಚಟುವಟಿಕೆಯಲ್ಲಿ ನಿರತರಾದರೆ ಗೂಂಡ ಆಕ್ಟ್ ಆಗಿ ಜೈಲಿಗೆ ಕಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ನಗರದಲ್ಲಿ ಅದರಲ್ಲೂ ಕೆಲ ದಿನಗಳಿಂದ ಪೂರ್ವ ವಿಭಾಗದ ರಾಮಮೂರ್ತಿ ನಗರ, ಬೈಯ್ಯಪ್ಪನಹಳ್ಳಿ ಅಸುಪಾಸಿನಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೌಡಿ ಪರೇಡ್ ಮಾಡಿ ಡಿಸಿಪಿ ವಾರ್ನ್ ಮಾಡಿದ್ದಾರೆ. ಪರೇಡ್ ವೇಳೆ ಆಕ್ಟಿವ್ ಆಗಿರುವ ಅಪಾಯಕಾರಿ ಕ್ರಿಮಿನಲ್‍ಗಳ ಮೇಲೆ ಹದ್ದಿನ ಕಣ್ಣಿಡುವಂತೆ ಆಯಾ ಠಾಣಾ ಇನ್ಸ್ ಪೆಕ್ಟರ್ ಹಾಗೂ ಕ್ರೈಂ ಸಿಬ್ಬಂದಿಗೆ ಡಿಸಿಪಿ ಶರಣಪ್ಪ ತಾಕೀತು ಮಾಡಿದರು. ಅಪರಾಧ ಚಟುವಟಿಕೆಯಲ್ಲಿ ಭಾಗಿರುತ್ತಿರುವುದು ಗಮನಕ್ಕೆ ಬಂದರೆ ಮುಲಾಜಿಲ್ಲದೇ ಬಂಧಿಸಿ ಜೈಲಿಗೆ ಕಳಿಸುವಂತೆ ಸೂಚಿಸಿದರು.

  • ಪೊಲೀಸ್ ಸ್ಟೇಷನ್ ಮೇಲೆ ರೌಡಿಗಳ ಅಟ್ಯಾಕ್ – ಠಾಣೆಗೆ ಬೇಕಿದೆ ರಕ್ಷಣೆ

    ಪೊಲೀಸ್ ಸ್ಟೇಷನ್ ಮೇಲೆ ರೌಡಿಗಳ ಅಟ್ಯಾಕ್ – ಠಾಣೆಗೆ ಬೇಕಿದೆ ರಕ್ಷಣೆ

    ಬೆಂಗಳೂರು: ಪೊಲೀಸ್ ಸ್ಟೇಷನ್ ಮೇಲೆ ರೌಡಿಗಳ ಅಟ್ಯಾಕ್ ಮಾಡಿದ್ದು, ಪೊಲೀಸ್ ಠಾಣೆಗೆ ರಕ್ಷಣೆ ನೀಡಬೇಕಾದ ಪರಿಸ್ಥಿತಿ ಸಿಲಿಕಾನ್ ಸಿಟಿಯಲ್ಲಿ ನಿರ್ಮಾಣವಾಗಿದೆ.

    ಬೆಂಗಳೂರಿನ ಮಾರ್ಕೆಟ್ ನಲ್ಲಿರುವ ಪೊಲೀಸ್ ಠಾಣೆಗೆ ಏಕಾಏಕಿ ನುಗ್ಗಿರುವ ಸುಮಾರು 100 ರಿಂದ 200 ಮಂದಿ ಕಲ್ಲು ತೂರಾಟ ಮಾಡಿದ್ದಾರೆ. ಇದರ ಜೊತೆಗೆ ಪೊಲೀಸರು ಅರೆಸ್ಟ್ ಮಾಡಿ ಇಟ್ಟುಕೊಂಡಿದ್ದ ಮೂವರನ್ನು ಠಾಣೆಯಿಂದ ಕರೆದುಕೊಂಡು ಹೋಗಿದ್ದಾರೆ.

    ಮಾರ್ಕೆಟ್ ಪೊಲೀಸರು ಮಾರುಕಟ್ಟೆಯಲ್ಲಿ ಮಾರಕಾಸ್ತ್ರಗಳನ್ನ ಹಿಡಿದು ಓಡಾಡುತ್ತಿದ್ದ ಮೂವರನ್ನು ಬಂಧಿಸಿ ಠಾಣೆಗೆ ಕರೆತಂದಿದ್ದರು. ಇದಕ್ಕೆ ರೊಚ್ಚಿಗೆದ್ದ ಕೆಲ ಕಿಡಿಗೇಡಿಗಳು ಠಾಣೆಗೆ ನುಗ್ಗಿ ಪೊಲೀಸರನ್ನು ಬೆದರಿಸಿ ಬಂಧಿಸಿದ್ದ ಮೂವರನ್ನು ಕರೆದುಕೊಂಡು ಹೋಗಿದ್ದಾರೆ. ಇದರ ಜೊತೆಗೆ ಠಾಣೆಯ ಮುಂದೆ ನಿಲ್ಲಿಸಿದ್ದ ಪೊಲೀಸರ ಬೈಕುಗಳನ್ನು  ಪುಡಿ ಪುಡಿ ಮಾಡಿದ್ದಾರೆ. ಈ ಪ್ರಕರಣವನ್ನು ಮುಚ್ಚಿ ಹಾಕಲು ಪೊಲೀಸರೇ ಪ್ರಯತ್ನ ಪಟ್ಟಿದ್ದರು ಎನ್ನಲಾಗಿದೆ.

  • ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ರವಿ ಚನ್ನಣ್ಣನವರ್

    ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ರವಿ ಚನ್ನಣ್ಣನವರ್

    ಬೆಂಗಳೂರು: ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರದ ನೂತನ ಎಸ್.ಪಿ ರವಿ.ಡಿ.ಚನ್ನಣ್ಣನವರ್ ದಿಟ್ಟ ಕ್ರಮಕ್ಕೆ ಮುಂದಾಗಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಖಾಸಗಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ರವಿ ಚನ್ನಣ್ಣನವರ್ ಭಾಗಿಯಾಗಿದ್ದರು. ಈ ವೇಳೆ, ಬೆಂಗಳೂರು ರಾಜಧಾನಿ ಜೊತೆಯಲ್ಲೇ ಬೆಳೆಯುತ್ತಿರುವ ನೆಲಮಂಗಲ ಪೊಲೀಸ್ ಉಪವಿಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳುವ ಬಗ್ಗೆ ತಿಳಿಸಿದರು. ಅಲ್ಲದೆ ಅಕ್ರಮ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಸಾರ್ವಜನಿಕರು ಪೊಲೀಸ್ ವ್ಯವಸ್ಥೆಯೊಂದಿಗೆ ಸ್ಪಂದಿಸಿದಾಗ ಸಮಾಜಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣ ಮಾಡಲು ಅನುಕೂಲವಾಗುತ್ತದೆ ಎಂದು ರವಿ ಚನ್ನಣ್ಣನವರ್ ಹೇಳಿದರು. ಹಾಗೆಯೇ ನೆಲಮಂಗಲ ಉಪವಿಭಾಗದ ಆರು ಠಾಣೆಗಳ ವ್ಯಾಪ್ತಿಗೆ ಬರುವ ಹಲವಾರು ನಾಗರಿಕರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಕುಂದು ಕೊರತೆಗಳನ್ನು ವಿವರಿಸಿದರು. ಅದನ್ನು ಆಲಿಸಿದ ಎಸ್.ಪಿ, ಪೊಲೀಸರಿಗೆ ಸವಾಲಗಿರುವ ಗಾಂಜಾ, ಟ್ರಾಫಿಕ್, ಅಕ್ರಮ ಮದ್ಯ, ರೌಡಿ ಚಟುವಟಿಕೆಗಳಿಗೆ ಕಾನೂನು ಪ್ರಕಾರ ಪಾಠ ಹೇಳಲಿದ್ದೇವೆ ಎಂದು ಜನರಿಗೆ ಭರವಸೆ ಕೊಟ್ಟರು.

    ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೌಡಿಗಳು ಅಪರಾಧ ಚಟುವಟಿಕೆಗಳಿಗೆ ಉತ್ತೇಜನ ನೀಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಜೊತೆಗೆ ಗ್ರಾಮಾಂತರ ಪ್ರದೇಶದ ವಾಹನ ಸವಾರರಿಗೆ ಕೂಡ ಎಚ್ಚರಿಕೆ ನೀಡಿದರು. ಡ್ರಿಂಕ್ ಆಂಡ್ ಡ್ರೈವ್, ರ್‍ಯಾಷ್ ಆಂಡ್ ನೆಗ್ಲಿಜಿಯಂಟ್ ಮತ್ತು ವ್ಹೀಲಿಂಗ್ ಮಾಡಿಕೊಂಡು ವಾಹನ ಓಡಿಸಿದರೆ ವಾಹನ ಮುಟ್ಟುಗೋಲು ಜೊತೆಗೆ ವಾಹನ ಪರವಾನಿಗೆ ರದ್ದು ಮಾಡಲಾಗುತ್ತೆ ಎಂದು ಜನಸಂಪರ್ಕ ಸಭೆಯಲ್ಲಿ ರವಿ ಚೆನ್ನಣ್ಣನವರ್ ವಾರ್ನಿಂಗ್ ನೀಡಿದರು.

  • ರಾತ್ರಿ ರೋಮಿಯೋಗಳಿಗೆ ಪೊಲೀಸರಿಂದ ಶಾಕ್

    ರಾತ್ರಿ ರೋಮಿಯೋಗಳಿಗೆ ಪೊಲೀಸರಿಂದ ಶಾಕ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ರೋಮಿಯೋಗಳಿಗೆ ಬೆಂಗಳೂರಿನ ಪೊಲೀಸರು ಶಾಕ್ ನೀಡಿದ್ದಾರೆ.

    ದಾರಿಯಲ್ಲಿ ನಿಂತು ಹುಡುಗಿಯರನ್ನ ಚುಡಾಯಿಸೋರ ಮೇಲೆ ಮತ್ತು ಅಕ್ಕ ಪಕ್ಕದವರಿಗೆ ತೊಂದರೆ ಕೊಡುವವರ ಮೇಲೆ ಖಾಕಿ ಕಣ್ಣು ಹಾಕಿದೆ. ಬೆಂಗಳೂರಿಗರ ರಕ್ಷಣೆಗೆ ಪೊಲೀಸರು ಹೊಸ ಕಾರ್ಯಾಚರಣೆಯನ್ನು ಶುರು ಮಾಡಿದ್ದು, ಡಿಸಿಪಿ ಎನ್ ಶಶಿಕುಮಾರ್ ನೇತೃತ್ವದಲ್ಲಿ ಈ ಸ್ಪೆಷಲ್ ಕಾರ್ಯಾಚರಣೆ ಮಾಡಲಾಗಿದೆ.

    ಹೆಬ್ಬಾಳ ಠಾಣಾ ಪೊಲೀಸರು ಕಾರ್ಯಾಚರಣೆ ಮಾಡಿದ್ದು, ರಾತ್ರಿ ಹೊತ್ತು ಆಟೋ ಸ್ಟ್ಯಾಂಡ್, ಬಸ್‍ಸ್ಟ್ಯಾಂಡ್ ಮತ್ತು ರೈಲ್ವೆ ಸ್ಟೇಷನ್ ಬಳಿ ಯುವತಿ ಮತ್ತು ಮಹಿಳೆಯರನ್ನು ಚುಡಾಯಿಸುತ್ತಿದ್ದ 210 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ.

    ವಶಕ್ಕೆ ಪಡೆದವರಲ್ಲಿ ಹಲವರು ರೌಡಿಶೀಟರ್ ಗಳೂ ಇದ್ದಾರೆ. ಸ್ಟೇಷನ್‍ಗೆ ಕರೆದುಕೊಂಡು ಹೋಗಿ ಹೆತ್ತವರನ್ನ ಕರೆಸಿ ಅವರ ಎದುರಲ್ಲೇ ಬುದ್ಧಿ ಹೇಳಿ ಮನೆಗೆ ಕಳುಹಿಸಿದ್ದಾರೆ. ಡಿಸಿಪಿ ಎನ್ ಶಶಿಕುಮಾರ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

  • 300ಕ್ಕೂ ಹೆಚ್ಚು ರೌಡಿಗಳಿಗೆ ಡಿಸಿಪಿ ಇಷಾ ಪಂಥ್ ಖಡಕ್ ವಾರ್ನಿಂಗ್

    300ಕ್ಕೂ ಹೆಚ್ಚು ರೌಡಿಗಳಿಗೆ ಡಿಸಿಪಿ ಇಷಾ ಪಂಥ್ ಖಡಕ್ ವಾರ್ನಿಂಗ್

    ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೌಡಿಗಳಿಗೆ ಆಗ್ನೇಯ ವಿಭಾಗ ಡಿಸಿಪಿ ಇಷಾ ಪಂಥ್ ಖಡಕ್ ವಾರ್ನಿಂಗ್ ಮಾಡಿದ್ದಾರೆ.

    ಬೆಂಗಳೂರಿನ ಸಿಎಆರ್ ಸೌತ್ ಗ್ರೌಂಡ್‍ನಲ್ಲಿ ಆಗ್ನೇಯ ವಿಭಾಗದ ರೌಡಿಗಳಿಗೆ ಪರೇಡ್ ನಡೆಸಿ ಪೊಲೀಸರು ವಾರ್ನ್ ಮಾಡಿದ್ದಾರೆ. ಮೂರು ಉಪವಿಭಾಗ ಮತ್ತು 13 ಪೊಲೀಸ್ ಠಾಣಾ ವ್ಯಾಪ್ತಿಯ ಸುಮಾರು 300ಕ್ಕೂ ಹೆಚ್ಚು ರೌಡಿಗಳನ್ನು ಪೊಲೀಸರು ಗ್ರೌಂಡ್‍ಗೆ ಕರೆಸಿ ಯಾವುದೇ ಅಹಿತರ ಘಟನೆಯಲ್ಲಿ ಭಾಗಿಯಾಗಬಾರದು ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

    ರೌಡಿ ಚಟುವಟಿಕೆಯಲ್ಲಿ ಭಾಗಿಯಾದರೆ ಪರಿಣಾಮ ನೆಟ್ಟಗಿರಲ್ಲ. ಯಾವುದೇ ಕೇಸ್ ಯಾರ ಮೇಲೆಯೂ ದಾಖಲಾಗಬಾದರು. ಒಂದು ವೇಳೆ ಸಣ್ಣ-ಪುಟ್ಟ ಗಲಾಟೆ ಮಾಡಿಕೊಂಡು ಕೇಸ್ ದಾಖಲಾದರೆ ಸೀದಾ ಜೈಲಿಗೆ ಹೋಗುತ್ತೀರಿ. ನಿಮ್ಮ ಪಾಡಿಗೆ ಕೆಲಸ ಮಾಡಿಕೊಂಡು ಇರಬೇಕು. ಏನಾದರೂ ಬಾಲ ಬಿಚ್ಚಿದರೆ ಗೂಂಡಾ ಆಕ್ಟ್ ಹಾಕುತ್ತೀನಿ ಎಂದು ಡಿಸಿಪಿ ಇಷಾ ಪಂಥ್ ರೌಡಿಗಳಿಗೆ ಚಳಿ ಬಿಡಿಸಿದ್ದಾರೆ.

  • ಬೆಳಗಿನ ಜಾವ ಕನಸು ಕಾಣ್ತಿದ್ದ ರೌಡಿಗಳಿಗೆ ಶಾಕ್ ಕೊಟ್ಟ ಡಿಸಿಪಿ ರವಿಚನ್ನಣ್ಣನವರ್

    ಬೆಳಗಿನ ಜಾವ ಕನಸು ಕಾಣ್ತಿದ್ದ ರೌಡಿಗಳಿಗೆ ಶಾಕ್ ಕೊಟ್ಟ ಡಿಸಿಪಿ ರವಿಚನ್ನಣ್ಣನವರ್

    ಬೆಂಗಳೂರು: ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಗಳ ಮನೆಗಳ ಮೇಲೆ ದಾಳಿ ಮಾಡುವ ಮೂಲಕ ಚಳಿ ಬಿಡಿಸಿದ್ದಾರೆ.

    ಪಶ್ಚಿಮ ವಿಭಾಗದ ಪೊಲೀಸರು ತಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಪೊಲೀಸ್ ಠಾಣಾ ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಡಿಸಿಪಿ ರವಿ ಚನ್ನಣ್ಣನವರ್ ಅವರ ನೇತೃದಲ್ಲಿ ಮುಂಜಾನೆ ನಾಲ್ಕು ಗಂಟೆಗೆ ಪೊಲೀಸರು ದಾಳಿ ಮಾಡಿದ್ದಾರೆ.

    ಇನ್ನೂ ಕೆಲವು ದಿನಗಳಲ್ಲಿ ಲೋಕಸಭಾ ಚುನಾವಣಾ ದಿನಾಂಕ ಫೋಷಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಡಿಸಿಪಿ ರವಿ ಚನ್ನಣ್ಣನವರ್ ಅವರು ರೌಡಿಶೀಟರ್ ಗಳಿಗೆ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾಗಬಾರದೆಂದು ಎಚ್ಚರಿಸಲು ಸೂಚಿಸಿದ್ದರು. ಅವರ ಸೂಚನೆ ಮೇರೆಗೆ ಪೊಲೀಸರು ರೌಡಿಗಳು ಮಲಗಿದ್ದಾಗಲೇ ಅವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

    ದಾಳಿಯ ವೇಳೆ ಕೆಲ ರೌಡಿಗಳ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದ್ದವು. ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಮಾರು 150 ಮಂದಿ ರೌಡಿಶೀಟರ್ ಗಳ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪಾರ್ಟಿ ಬಳಿಕ ಸ್ನೇಹಿತರ ಮೇಲೆ ಲಾಂಗು, ಮಚ್ಚಿನಿಂದ ಹಲ್ಲೆ

    ಪಾರ್ಟಿ ಬಳಿಕ ಸ್ನೇಹಿತರ ಮೇಲೆ ಲಾಂಗು, ಮಚ್ಚಿನಿಂದ ಹಲ್ಲೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹದ್ದೇ ಪ್ರಕರಣವೊಂದು ಯಶವಂತಪುರ ರೈಲ್ವೇ ನಿಲ್ದಾಣ ಬಳಿ ಗುರುವಾರ ಸಂಜೆ 6.30 ಗಂಟೆಗೆ ಸುಮಾರು ನಡೆದಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ.

    ಗೌತಮ್, ರಘು ಹಾಗೂ ಸಲ್ಲು ಹಲ್ಲೆ ಮಾಡಿದ ಆರೋಪಿಗಳು. ಈ ಮೂವರು ಸೇರಿ ತಮ್ಮ ಸ್ನೇಹಿತರಾದ ವಿನೋದ್ ಕುಮಾರ್ ಹಾಗೂ ಮಾರುತಿ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಆಗಿದ್ದೇನು?:
    ಹಲ್ಲೆ ಮಾಡಿದ ಹಾಗೂ ಹಲ್ಲೆಗೆ ಒಳಗಾದ ಐವರು ಸ್ನೇಹಿತರಾಗಿದ್ದು, ಒಟ್ಟಾಗಿ ಗುರುವಾರ ಪಾರ್ಟಿ ಮಾಡಿದ್ದಾರೆ. ಬಳಿಕ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಪರಸ್ಪರ ಜಗಳವಾಡಿದ್ದಾರೆ. ಈ ವೇಳೆ ಗೌತಮ್, ರಘು ಹಾಗೂ ಸಲ್ಲು ಲಾಂಗ್, ಮಚ್ಚು ಹಿಡಿದು ವಿನೋದ್ ಕುಮಾರ್ ಮತ್ತು ಮಾರುತಿ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ಸ್ಥಳೀಯರು ನೋಡುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದಾರೆ.

    ಈ ಕುರಿತು ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೊಲೀಸ್ ಕ್ವಾಟರ್ಸ್ ನಲ್ಲಿ ಪೇದೆ, ರೌಡಿಗಳಿಂದ ಎಣ್ಣೆ ಪಾರ್ಟಿ?

    ಪೊಲೀಸ್ ಕ್ವಾಟರ್ಸ್ ನಲ್ಲಿ ಪೇದೆ, ರೌಡಿಗಳಿಂದ ಎಣ್ಣೆ ಪಾರ್ಟಿ?

    ಶಿವಮೊಗ್ಗ: ಪೊಲೀಸ್ ಕ್ವಾಟರ್ಸ್ ನಲ್ಲಿ ಓರ್ವ ಪೇದೆ ಹಾಗೂ ರೌಡಿಗಳು ಸ್ನೇಹಿತರಂತೆ ಒಟ್ಟಿಗೆ ಎಣ್ಣೆ ಪಾರ್ಟಿ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ.

    ಇಲ್ಲಿನ ವಿನೋಬಾ ನಗರದ ಮೊದಲನೇ ತಿರುವಿನಲ್ಲಿರುವ ಸಿವಿಲ್ ಪೊಲೀಸ್ ಕ್ವಾಟರ್ಸ್ ನ 101ನೇ ಮನೆಯಲ್ಲಿ ಸಂಚಾರ ಪೊಲೀಸ್ ಠಾಣೆಯ ಪೇದೆ ಪುನೀತ್ ವಾಸವಾಗಿದ್ದಾರೆ. ಪುನೀತ್ ಅವರು ಕೆಲ ದಿನಗಳ ಹಿಂದೆ ಕೋಕಾ ಕಾಯ್ದೆಯಡಿ ಬಂಧಿತನಾಗಿದ್ದ ಕುಖ್ಯಾತ ರೌಡಿ ನವುಲೆ ಆನಂದ್, ಕೊಕ್ಕರೆ ಶಾಮ ಸೇರಿದಂತೆ ಕೆಲವು ರೌಡಿಗಳ ಜೊತೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

    ಈ ಸಂಬಂಧ ಪ್ರತಿಕ್ರಿಯೆ ನೀಡಿದ ಎಸ್‍ಪಿ ಅಭಿನವ್ ಖರೆ ಅವರು, ರೌಡಿಗಳು ಕಳೆದ ನಾಲ್ಕೈದು ದಿನಗಳಿಂದ ಪುನೀತ್ ಅವರ ಮನೆಗೆ ಬಂದು ನಡುರಾತ್ರಿವರೆಗೂ ಪಾರ್ಟಿ ಮಾಡಿದ್ದಾರೆ ಅಂತ ಸ್ಥಳೀಯರು ದೂರು ನೀಡಿದ್ದರು. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ನಾನು ಪರಿಶೀಲನೆ ನಡೆಸಿದ್ದೇನೆ. ಆಗ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಸರ್ಕಲ್ ಇನ್‍ಸ್ಪೆಕ್ಟರ್ ನೇತೃತ್ವದಲ್ಲಿ ತಂಡ ರಚಿಸಿ, ತಪ್ಪಿತಸ್ಥರನ್ನು ಪತ್ತೆ ಹಚ್ಚುವಂತೆ ಸೂಚನೆ ನೀಡುವೆ ಎಂದು ಮಾಹಿತಿ ನೀಡಿದರು.

    ರೌಡಿಗಳು ಯಾಕೆ ಬಂದಿದ್ದರು ಎನ್ನುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಕೆಲವೊಮ್ಮೆ ಕ್ರೈಂ ಪೊಲೀಸರನ್ನು ರೌಡಿಗಳು ಭೇಟಿ ಆಗುತ್ತಾರೆ. ಒಂದು ವೇಳೆ ಸರ್ಕಾರಿ ಕ್ವಾಟರ್ಸ್ ನಲ್ಲಿ ಹಾಗೂ ಸ್ವಂತ ಮನೆಯಲ್ಲಿ ರೌಡಿಗಳ ಜೊತೆಗೆ ಪಾರ್ಟಿ ಮಾಡಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರಲ್ಲಿ ಐವರು ಪೊಲೀಸರ ವಿರುದ್ಧ ಎಫ್‍ಐಆರ್..!

    ಬೆಂಗ್ಳೂರಲ್ಲಿ ಐವರು ಪೊಲೀಸರ ವಿರುದ್ಧ ಎಫ್‍ಐಆರ್..!

    ಬೆಂಗಳೂರು: ಭೂ ಕಬಳಿಕೆಗೆ ಯತ್ನದ ಆರೋಪದ ಮೇಲೆ ಸಿಲಿಕಾನ್ ಸಿಟಿಯಲ್ಲಿ ಐವರು ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಕೆ.ಆರ್.ಪುರಂ ಪೊಲೀಸ್ ಠಾಣೆ ಇಬ್ಬರು ಸಬ್ ಇನ್ಸ್ ಪೆಕ್ಟರ್, ಎಎಸ್‍ಐ, ಮುಖ್ಯ ಪೇದೆ ಮತ್ತು ಮಹಿಳಾ ಮುಖ್ಯ ಪೇದೆ ವಿರುದ್ಧ ಕೋರ್ಟ್ ಸೂಚನೆ ಮೇರೆಗೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಸೆಪ್ಟೆಂಬರ್ ತಿಂಗಳಿನಲ್ಲಿ ರೌಡಿಗಳ ಜೊತೆ ಕೆ.ಆರ್ ಪುರ ಪೊಲೀಸರು ಭೂ ಕಬಳಿಕೆ ಮಾಡಲು ಯತ್ನಿಸಿದ್ದಾರೆ ಎಂದು ಐವರ ವಿರುದ್ಧ ಆರೋಪಿಸಲಾಗಿತ್ತು.

    ಏನಿದು ಪ್ರಕರಣ?:
    ಪ್ರಭಾವತಿ ಎಂಬವರ ಮನೆಗೆ ರೌಡಿಗಳು ಅತಿಕ್ರಮಣ ಪ್ರವೇಶ ಮಾಡಿ ಮನೆ ಬಾಗಿಲು, ಗೃಹಪಯೋಗಿ ವಸ್ತುಗಳು ಧ್ವಂಸ ಮಾಡಲಾಗಿತ್ತು. ಈ ವೇಳೆ ರೌಡಿಗಳ ವಿರುದ್ಧ ದೂರು ನೀಡಲು ಪ್ರಭಾವತಿ ಕೆ.ಆರ್ ಪುರ ಪೊಲೀಸ್ ಠಾಣೆಗೆ ತೆರಳಿದ್ದರು. ಆದ್ರೆ ಪೊಲೀಸರು ದೂರು ಪಡೆಯಲು ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದರಂತೆ. ಹಣ ನೀಡಲು ನಿರಾಕರಿಸಿದಾಗ ಪೊಲೀಸರು ಕೂಡ ದೂರು ಪಡೆಯಲು ನಿರಾಕರಿಸಿದ್ದರು. ಅಲ್ಲದೇ ರೌಡಿಗಳಿಗೆ ಸಾಥ್ ನೀಡಿ ದೂರುದಾರರಿಗೆನೇ ಪೊಲೀಸರು ಜೀವಬೆದರಿಕೆ ಹಾಕಿದ್ದರು. ಪೊಲೀಸರು ದೂರು ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ದೂರುದಾರೆ ಪ್ರಭಾವತಿ ಕೋರ್ಟ್ ಮೊರೆ ಹೋಗಿದ್ದರು.

    ಆಸ್ತಿ ವಿಚಾರದಲ್ಲಿ ಪೊಲೀಸರು ಮಧ್ಯ ಪ್ರವೇಶ ಮಾಡಬಾರದು ಎಂದು ನ್ಯಾಯಾಲಯದ ಆದೇಶವಿದ್ದರೂ ಪೊಲೀಸರು ಆ ಆದೇಶವನ್ನು ನಿರ್ಲಕ್ಷ್ಯ ಮಾಡಿದ್ದರು. ಹೀಗಾಗಿ ಇದೀಗ ಎಫ್‍ಐಆರ್ ದಾಖಲಿಸಿ ಐವರ ವಿರುದ್ಧ ತನಿಖೆ ನಡೆಸುವಂತೆ ಕೋರ್ಟ್ ಸೂಚನೆ ನೀಡಿದೆ. ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಅಬ್ದುಲ್ ಅಹ್ಮದ್ ಗೆ 10 ಎಸಿಎಂಎಂ ನ್ಯಾಯಾಲಯ ಈ ಆದೇಶ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಂಗಳೂರು ಪೊಲೀಸರ ವಿರುದ್ಧ ರೌಡಿಗಳ ಸ್ಕೆಚ್!

    ಬೆಂಗಳೂರು: ರೌಡಿಗಳ ಸಭೆ ಕೇಳಿದ್ರಾ? ಇಲ್ಲದ್ರೆ ಕೇಳಿ. ರೌಡಿಗಳ ಮೇಲೆ ಪೊಲೀಸ್ ದಾಳಿ ನಡೆಸಿದ್ದಕ್ಕೆ ಈಗ ಬೆಂಗಳೂರಿನ ರೌಡಿಗಳು ಪೊಲೀಸರ ವಿರುದ್ಧ ತಿರುಗಿ ಬಿದ್ದಿದ್ದು ಭಯಂಕರ ಅಪರಾಧಗಳನ್ನು ನಡೆಸಲು ಮುಂದಾಗಿದ್ದಾರೆ.

    ಹೌದು. ಸೈಲೆಂಟ್ ಸುನಿಲ್, ಒಂಟೆ ರೋಹಿತನ ಬಂಧನ ಹಿನ್ನೆಲೆಯಲ್ಲಿ ಪೊಲೀಸರ ಮೇಲೆ ದಾಳಿ ನಡೆಸಲು ನಗರದ ಅಪಾರ್ಟ್ ಮೆಂಟ್‍ನಲ್ಲಿ ರೌಡಿಗಳು ಸಭೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಸಿಕ್ಕಿದೆ.

    ನಿರ್ದಾಕ್ಷಿಣ್ಯವಾಗಿ ರೌಡಿಗಳನ್ನು ಬಂಧನ ಮಾಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರ ಮೇಲೆ ದಾಳಿ ನಡೆಸಲಲು ರೌಡಿಗಳು ಪ್ಲಾನ್ ಮಾಡಿದ್ದಾರೆ. ಭಯಂಕರವಾಗಿ ಅಪರಾಧ ನಡೆಸಿ ಪೊಲೀಸರಿಗೆ ರೌಡಿ ಚಟುವಟಿಕೆ ಬಿಸಿ ಮುಟ್ಟಿಸೋಕೆ ಸಭೆ ನಡೆಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

    ಬುಧವಾರ ಸುದ್ದಿಗೋಷ್ಠಿ ನಡೆಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಬಾಳ್ಕರ್, ಇಲ್ಲಿಯವರೆಗೆ ರೌಡಿ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೆವು. ಇನ್ನು ಮುಂದೆ ರೌಡಿಗಳ ಅಕ್ರಮ ಆಸ್ತಿಗಳನ್ನು ಕಲೆ ಹಾಕಲಾಗುವುದು ಎಂದು ಹೇಳಿದ್ದರು.

    ಸಾರ್ವಜನಿಕರ ಹಿತಾಸಕ್ತಿ ಕಾಪಾಡುವುದು ನಮ್ಮ ಹೊಣೆ. ಕಾನೂನು ಸುವ್ಯವಸ್ಥೆ ವಿರುದ್ಧವಾಗಿದ್ದವರನ್ನು ಸುಮ್ಮನೇ ಬಿಡುವುದಿಲ್ಲ. ಸಾರ್ವಜನಿಕರು ಧೈರ್ಯವಾಗಿ ಮುಂದೆ ಬಂದು ದೂರು ನೀಡಿ. ಸ್ಥಳೀಯ ಠಾಣೆಗಳಿಗೆ ದೂರು ನೀಡಿ, ಇಲ್ಲವಾದಲ್ಲಿ ನಮ್ಮ ಬಳಿ ಬನ್ನಿ ಎಂದು ಅವರು ತಿಳಿಸಿದ್ದರು.

    ಬೆಂಗಳೂರಿನಲ್ಲಿ ಅಂಡರ್ ವಲ್ರ್ಡ್ ಮಾಫಿಯಾ, ರಿಯಲ್ ಎಸ್ಟೇಟ್, ಪುಡಿ ರೌಡಿಗಳ ಉಪಟಳ ಹೆಚ್ಚಾಗಿದೆ. ಗುಂಪಿನಲ್ಲಿದ್ದರೆ ಮಾತ್ರ ಅವರು ರೌಡಿಗಳು, ಒಬ್ಬರೆ ಇದ್ದರೆ ಇವರು ಪುಕ್ಕಲರು. ಭೂಮಾಫಿಯಾ, ಗಾರ್ಬೆಜ್ ಮಾಫಿಯಾ, ಸಂಬಂಧ ವಿಲ್ಲದ ವಿಚಾರಗಳಿಗೆ ತಲೆಹಾಕುವವರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಮಂತ್ ನಿಂಬಾಳ್ಕರ್ ಎಚ್ಚರಿಕೆ ನೀಡಿದ್ದರು.