Tag: ರೌಡಿಶೀಟ್

  • ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಎಸ್ಪಿ ಸ್ಪಷ್ಟನೆ

    ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಎಸ್ಪಿ ಸ್ಪಷ್ಟನೆ

    ಹಾವೇರಿ: ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ (Yasir Khan Pathan) ಮೇಲೆ ಯಾವುದೇ ರೀತಿಯ ರೌಡಿಶೀಟ್ ಇರುವುದಿಲ್ಲ ಎಂದು ಹಾವೇರಿ (Haveri) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

    ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದವರಾದ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ (Rowdy Sheet) ಇದೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗಿರುತ್ತದೆ. ಶಿಗ್ಗಾಂವಿಯ (Shiggaon) ಡಿಎಸ್‌ಪಿ ಮತ್ತು ಪೊಲೀಸ್ ಇನ್ಸಪೆಕ್ಟರ್ (ಪಿಐ) ಅವರ ಕಚೇರಿಯ ದಾಖಲಾತಿಗಳನ್ನು ಪರಿಶೀಲಿಸಲಾಗಿದ್ದು, ಪ್ರಸ್ತುತ ಯಾಸೀರ್ ಪಠಾಣ್ ಅವರ ಮೇಲೆ ಯಾವುದೇ ರೌಡಿ ಶೀಟ್ ಇರುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಜಮೀರ್‌ಗೆ ಮತ್ತೊಂದು ಸಂಕಷ್ಟ; ಸಚಿವರ ವಿರುದ್ಧ ಚುನಾವಣಾಧಿಕಾರಿಗಳಿಂದ ದೂರು

    ಈ ಮೊದಲು ಎಸ್ಪಿ ಅಂಶುಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದ ವೇಳೆ, ಪಠಾಣ್ ನಾಮಪತ್ರ ಸಲ್ಲಿಸುವ ವೇಳೆ ಅಫಿಡವಿಟ್‌ನಲ್ಲಿ ಯಾವುದೇ ಪ್ರಕರಣ ಇಲ್ಲ ಎಂದು ಹೇಳಿದ್ದರು. ಆದರೆ ಅವರ ಮೇಲೆ ರೌಡಿಶೀಟರ್ ಪ್ರಕರಣ ಇದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಪ್ರೇಮಿ ಮದುವೆಗೆ ನಿರಾಕರಿಸಿದ ಆರೋಪ- ಯುವತಿ ಆತ್ಮಹತ್ಯೆಗೆ ಶರಣು

  • ಲಾಕ್‍ಡೌನ್ ಉಲ್ಲಂಘನೆ – 118 ಮಂದಿ ವಿರುದ್ಧ ರೌಡಿಶೀಟ್ ಓಪನ್

    ಲಾಕ್‍ಡೌನ್ ಉಲ್ಲಂಘನೆ – 118 ಮಂದಿ ವಿರುದ್ಧ ರೌಡಿಶೀಟ್ ಓಪನ್

    ಕಲಬುರಗಿ: ಮಹಾಮಾರಿ ಕೊರೊನಾ ವೈರಸ್ ಸೋಂಕು ಹರಡದಂತೆ ಮುಂಜಾಗ್ರತ ಕ್ರಮವಾಗಿ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಆರಂಭದಿಂದ ಇಲ್ಲಿಯವರೆಗೆ ಲಾಕ್‍ಡೌನ್ ಉಲ್ಲಂಘಿಸಿದ ಜಿಲ್ಲೆಯ 118 ಮಂದಿ ವಿರುದ್ಧ ರೌಡಿಶೀಟ್ ತೆರೆಯಲಾಗಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.

    ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯ ಆಳಂದ, ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಶಹಾಬಾದ, ಸೇಡಂ, ಮತ್ತು ಚಿಂಚೋಳಿ ತಾಲೂಕುಗಳ ವ್ಯಾಪ್ತಿಯಲ್ಲಿ ಲಾಕ್‍ಡೌನ್ ಉಲ್ಲಂಘಿಸಿದವರ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಲ್ಲಿಯವರೆಗೆ ಒಟ್ಟು 38 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

    ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 122 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರಸ್ತೆಯಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದ 659 ವಾಹನಗಳನ್ನು ವಶಕ್ಕೆ ಪಡೆದು 92,700 ರೂ. ದಂಡವನ್ನು ಸಹ ವಿಧಿಸಲಾಗಿದೆ ಎಂದು ಎಸ್.ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಇಂದು ತಿಳಿಸಿದ್ದಾರೆ.

  • ನಾಗನ ಮೇಲೆ ಮತ್ತೆ ರೌಡಿಶೀಟ್ ಓಪನ್- ಪತ್ನಿಯ ವಿರುದ್ಧ ದಾಖಲಾಗಿವೆ 4 ಕೇಸ್

    ನಾಗನ ಮೇಲೆ ಮತ್ತೆ ರೌಡಿಶೀಟ್ ಓಪನ್- ಪತ್ನಿಯ ವಿರುದ್ಧ ದಾಖಲಾಗಿವೆ 4 ಕೇಸ್

    ಬೆಂಗಳೂರು: ಕೋಟ್ಯಾಂತರ ರೂಪಾಯಿ ಹಳೇ ನೋಟು ಬದಲಾವಣೆ ದಂಧೆ ಪ್ರಕರಣದ ಹಿನ್ನೆಲೆಯಲ್ಲಿ ಪರಾರಿಯಾಗಿರೋ ನಾಗರಾಜ್ ಅಲಿಯಾಸ್ ನಾಗನ ಮೇಲೆ ಮತ್ತೆ ರೌಡಿಶೀಟ್ ಓಪನ್ ಆಗಿದೆ.

    ಕೊಲೆ ಯತ್ನ, ದರೋಡೆ ಪ್ರಕರಣದಲ್ಲಿ ಮಾರ್ಚ್‍ನಲ್ಲೇ ರೌಡಿಶೀಟರ್ ಪಟ್ಟಿಗೆ ನಾಗನ ಹೆಸರನ್ನು ಮತ್ತೆ ಸೇರಿಸಲಾಗಿದೆ. ಡಿಸೆಂಬರ್‍ನಲ್ಲಿ ನಾಗನ ವಿರುದ್ಧ ಕಿಡ್ನ್ಯಾಪ್, ರಾಬರಿ ಪ್ರಕರಣ ದಾಖಲಾಗಿತ್ತು. ಪೆಟ್ರೋಲ್ ಬಂಕ್ ಆರಂಭಕ್ಕೆ ಜಾಗ ಕೊಡಿಸುವುದಾಗಿ ವೃದ್ಧರೊಬ್ಬರ ಅಪಹರಣ ಮಾಡಿ 6.5 ಲಕ್ಷ ರಾಬರಿ ಮಾಡಿದ್ದ. ಡಿಸೆಂಬರ್‍ನಲ್ಲೇ ದಾಬಸ್‍ಪೇಟೆಯಲ್ಲಿ ಮತ್ತೊಂದು ಕಿಡ್ನ್ಯಾಪ್ ಪ್ರಕರಣ ಕೂಡ ದಾಖಲಾಗಿತ್ತು. ಫೆಬ್ರವರಿ ಅಂತ್ಯದಲ್ಲಿ ನಾಗನ ಇಬ್ಬರು ಮಕ್ಕಳಾದ ಗಾಂಧಿ ಹಾಗೂ ಶಾಸ್ತ್ರಿಯನ್ನೂ ಪೊಲೀಸರು ರೌಡಿಶೀಟರ್ ಪಟ್ಟಿಗೆ ಸೇರಿಸಿದ್ದರು. ಕೊಲೆ ಯತ್ನ, ರಾಬರಿ, ಕಿಡ್ನ್ಯಾಪ್ ಸೇರಿದಂತೆ ಮಕ್ಕಳ ಮೇಲೆ 7 ಪ್ರಕರಣ ದಾಖಲಾಗಿತ್ತು. ನಾಗನ ಪತ್ನಿ ಲಕ್ಷ್ಮಿ ವಿರುದ್ಧವೂ 4 ಪ್ರಕರಣ ದಾಖಲಾಗಿದೆ.

    ನಾಗನ ಮನೆಯಲ್ಲಿ ಪತ್ತೆಯಾದ 14.80 ಕೋಟಿ ಹಳೆ ನೋಟುಗಳನ್ನ ಆರ್‍ಬಿಐ ವಶಕ್ಕೆ ಒಪ್ಪಿಸಲಾಗಿದೆ. ಪ್ರಕರಣವನ್ನ ಇಡಿಗೆ ನೀಡಲು ಹಿರಿಯ ಪೊಲೀಸ್ ಅಧಿಕಾರಿಗಳು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.

    ನಾಪತ್ತೆಯಾಗಿರುವ ನಾಗನಿಗಾಗಿ ಬೆಂಗಳೂರು ಪೊಲೀಸರು ಹುಡುಕಾಟ ತೀವ್ರಗೊಳಿಸಿದ್ದಾರೆ. ತಮಿಳುನಾಡಿನ ಜೋಲಾರ್ ಪೇಟೆ ಬಳಿ ಇರುವ ಕಾಟ್‍ಪಾಡಿಯಲ್ಲಿ ಕರ್ನಾಟಕ ಪೊಲೀಸರ ತಂಡ ಬೀಡು ಬಿಟ್ಟಿದೆ. ಶುಕ್ರವಾರದಂದು ಎಸ್ಕೇಪ್ ಆಗಿರುವ ನಾಗ ದಾಬಸ್‍ಪೇಟೆಯ ರೆಸಾರ್ಟ್‍ವೊಂದಕ್ಕೆ ತೆರಳಿ ಅಲ್ಲಿ ಹಣ ವಸೂಲಿ ಮಾಡಿ ಅಲ್ಲಿಂದ ಧರ್ಮಪುರಿಗೆ ಹೋಗಿ ಸಂಬಂಧಿಕರ ಮನೆಯಲ್ಲಿರುವ ಶಂಕೆ ಇದೆ. ನಾಗನ ಹುಡುಕಾಟಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನ ರಚಿಸಲಾಗಿದೆ. ಹೆಣ್ಣೂರು, ಶ್ರೀರಾಮಪುರ ಹಾಗೂ ಸಿಸಿಬಿ ಸೇರಿದಂತೆ ನಾಲ್ಕು ತಂಡಗಳಿಂದ ನಾಗನಿಗಾಗಿ ಶೋಧ ನಡೆಯುತ್ತಿದೆ. ನಾಗ ಮೊಬೈಲ್ ಬಳಕೆ ಮಾಡದ್ದರಿಂದ ಪೊಲೀಸರ ಶೋಧಕ್ಕೆ ತೊಂದರೆಯಾಗಿದೆ. ತಾಂತ್ರಿಕವಾಗಿ ಯಾವುದೇ ವಸ್ತುಗಳನ್ನ ನಾಗ ಬಳಕೆ ಮಾಡಿಲ್ಲ.

    https://www.youtube.com/watch?v=ehMXPLXNDUc