Tag: ರೌಡಿ ನಲಪಾಡ್

  • ಕರ್ನಾಟಕ ರಣಜಿ ಆಟಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರೌಡಿ ನಲಪಾಡ್!

    ಕರ್ನಾಟಕ ರಣಜಿ ಆಟಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರೌಡಿ ನಲಪಾಡ್!

    ಬೆಂಗಳೂರು: ರಣಜಿ ಕ್ರಿಕೆಟ್ ಆಟಗಾರನಿಗೂ ಶಾಂತಿ ನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ರೌಡಿ ನಲಪಾಡ್ ಹಲ್ಲೆ ಮಾಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ.  ಇದನ್ನೂ ಓದಿ: ರಾಜಿ ಸಂಧಾನಕ್ಕೆ ಮಲ್ಯ ಆಸ್ಪತ್ರೆಗೆ ಬಂದ ಶಾಸಕ ಹ್ಯಾರಿಸ್

    ಸ್ಟಾರ್ ಹೋಟೆಲ್ ಒಂದರಲ್ಲಿ ಪಾರ್ಟಿ ನಡೆಯುತ್ತಿದ್ದಾಗ ಯರ್ ಬಾಟಲ್ ನಲ್ಲಿ ರಣಜಿ ಆಟಗಾರನೊಬ್ಬನಿಗೆ ನಲಪಾಡ್ ಮಾರಣಾಂತಿಕ ಹಲ್ಲೆ ನಡೆಸಿದ್ದ. ಆರು ತಿಂಗಳ ಹಿಂದೆ ಈ ಘಟನೆ ನಡೆದಿದ್ದು ಆಟಗಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರನ್ನು ನೀಡಿರಲಿಲ್ಲ. ಇದನ್ನೂ ಓದಿ:  ವಿಪಕ್ಷಗಳು, ಮಾಧ್ಯಮದ ಮೇಲೆ ಗೂಬೆ ಕೂರಿಸಿದ ರೌಡಿ ನಲಪಾಡ್

    ಈಗ ಸ್ಟಾರ್ ಹೋಟೆಲ್ ಒಂದರ ಮ್ಯಾನೇಜರ್ ಈ ವಿಚಾರವನ್ನು ಬಹಿರಂಗ ಪಡಿಸಿದ ಕಾರಣ ಸುದ್ದಿಯಾಗಿದೆ. ಈ ಸುದ್ದಿ ಪ್ರಕಟವಾದ ಬಳಿಕ ಕರ್ನಾಟಕ ರಣಜಿ ತಂಡ ಸಿದ್ದರಾಮಯ್ಯನವರಿಗೆ ಟ್ವೀಟ್ ಮಾಡಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲು ಕೇಳಿಕೊಂಡಿದೆ. ನಮ್ಮ ರಾಜ್ಯದ ಆಟಗಾರರು ನಮ್ಮ ಕನ್ನಡನಾಡಿನ ಹೆಮ್ಮೆಯ ಪ್ರತಿನಿಧಿಗಳು. ಭಾರತದ ಮಟ್ಟದ್ದಲ್ಲಿ ನಮ್ಮ ನಾಡ ಕೀರ್ತಿಯನ್ನು ಬೆಳಗಿರುವವರು. ದಯವಿಟ್ಟು ಈ ಹಿಂಸೆಗೆ ಅಂತ್ಯ ಹಾಡಿ ಎಂದು ಟ್ವೀಟ್ ಮಾಡಿ ಮಾನವಿ ಮಾಡಿಕೊಂಡಿದೆ. ಇದನ್ನೂ ಓದಿ:ಜೈಲಿಗೆ ಹೋದ ಎರಡೇ ದಿನಕ್ಕೆ ನಲಪಾಡ್ ಕೈಗೆ ಸಿಕ್ತು ಮೊಬೈಲ್ ಫೋನ್!

    https://www.youtube.com/watch?v=rByoOC1wzSk

    https://www.youtube.com/watch?v=RtMFKdQtfME

     

  • ನಲಪಾಡ್ ಗ್ಯಾಂಗಿನಿಂದ ಜೀವಬೆದರಿಕೆ – ವಕೀಲರಿಂದ ಪೊಲೀಸರಿಗೆ ದೂರು

    ನಲಪಾಡ್ ಗ್ಯಾಂಗಿನಿಂದ ಜೀವಬೆದರಿಕೆ – ವಕೀಲರಿಂದ ಪೊಲೀಸರಿಗೆ ದೂರು

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಅವರ ಗೂಂಡಾ ಮಗ ನಲಪಾಡ್ ವಿರುದ್ಧ ವಾದ ಮಾಡಿದ್ದಕ್ಕೆ ಆತನ ಬೆಂಬಲಿಗರಿಂದ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ವಕೀಲ ಶ್ಯಾಮ್ ಸುಂದರ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

    ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶ್ಯಾಮ್ ಸುಂದರ್, ಈ ಪ್ರಕರಣದಲ್ಲಿ ನಾನು ವಕೀಲನಾಗಿರುವ ಕಾರಣ ನಿನ್ನೆ ಕೋರ್ಟ್ ಕಲಾಪ ಮುಗಿಸಿದ ಬಳಿಕ ನನ್ನನ್ನು ದುರುಗುಟ್ಟಿ ನೋಡುತ್ತಿದ್ದರು. ಈ ವಿಚಾರ ತಿಳಿದು ಪೊಲೀಸರು ನನಗೆ ರಕ್ಷಣೆ ನೀಡಿದರು. ಸಂಜೆ ನಾನು ಆರ್ ಟಿ  ನಗರ ಪೊಲೀಸ್ ಠಾಣೆಗೆ ಬಂದು ಈ ವಿಚಾರ ತಿಳಿಸಿದ್ದು, ಇಂದು ನಾನು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಿದ್ದೇನೆ. ಆಯುಕ್ತರ ಈ ಪ್ರಕರಣ ಮುಗಿಯುವರೆಗೆ ಭದ್ರತೆ ನೀಡುತ್ತೇವೆ, ಕೋರ್ಟ್ ನಲ್ಲಿ ಯಾವುದೇ ಲೋಪ ಆಗದಂತೆ ನೋಡಿಕೊಳ್ಳುತ್ತೇವೆ ಎಂಬುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    ನೇರವಾಗಿ ನನಗೆ ಯಾರು ಬೆದರಿಕೆ ಹಾಕಿಲ್ಲ. ಆದರೆ ಬಲ್ಲ ಮೂಲಗಳು, ಮಾಧ್ಯಮಗಳಲ್ಲಿ ಬಂದಿರುವ ಮಾಹಿತಿಯ ಹಿನ್ನೆಲೆಯಲ್ಲಿ ದೂರು ನೀಡಿದ್ದೇನೆ. ದೆಹಲಿಯ ನಿರ್ಭಯಾ ಕೇಸ್ ನಂತೆ ಇದೊಂದು ಗಂಭೀರ ಪ್ರಕರಣವಾಗಿರುವ ಕಾರಣ ನಾನು ನಿನ್ನೆ ಪ್ರಬಲವಾಗಿ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದೆ. ಹೀಗಾಗಿ ಆರೋಪಿಗಳಿಂದ ಯಾವುದೇ ತೊಂದರೆ ಆಗದೇ ಇದ್ದರೂ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಇರುವ ಕಾರಣ ದೂರು ನೀಡಿದ್ದೇನೆ ಎಂದು ಶ್ಯಾಮ್ ಸುಂದರ್ ಹೇಳಿದರು. ಇದನ್ನೂ ಓದಿ: ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್

    ನಿನ್ನೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ವಾದ ಮಂಡಿಸುತ್ತಿದ್ದ ವಕೀಲ ಶ್ಯಾಮ್ ಸುಂದರ್ ಅವರನ್ನು ಆರೋಪಿ ನಲಪಾಡ್ ಹಾಗೂ ಅವರ ಬೆಂಬಲಿಗರು ದುರುಗುಟ್ಟಿಕೊಂಡು ನೋಡುತ್ತಿದ್ದರು. ಅಷ್ಟೇ ಅಲ್ಲದೇ ಕೋರ್ಟ್ ನಿಂದ ಹೊರ ಬರುತ್ತಿದ್ದಾಗ ನಲಪಾಡ್ ಬೆಂಬಲಿಗರು, ನಮ್ಮ ಲಿಸ್ಟ್ ನಲ್ಲಿ ಇವನು ಇದ್ದು, ಇವನಿಗೂ ಗತಿ ಕಾಣಿಸುತ್ತೇವೆ ಎಂದು ಮಾತನಾಡುತ್ತಿದ್ದರು. ಇದನ್ನೂ ಓದಿ: ಜೈಲಿನಲ್ಲೂ ಮುಂದುವರಿದ ನಲಪಾಡ್ ಪುಂಡಾಟ- ನಿನ್ನಿಂದ ನಾವು ಜೈಲು ಸೇರುವಂತಾಯ್ತು ಎಂದ ಸ್ನೇಹಿತ ಅಬ್ರಾಸ್ ಮೇಲೆ ಹಲ್ಲೆ

     

    https://youtu.be/-BMml-Cw79E