Tag: ರ್ಯಾಲಿ

  • ಒಂದೇ ನಿಮಿಷದಲ್ಲಿ ರ‍್ಯಾಲಿ ಮುಗಿಸಿದ್ದು ಯಾಕೆ – ಸ್ಪಷ್ಟನೆ ಕೊಟ್ಟ ಉಪೇಂದ್ರ

    ಒಂದೇ ನಿಮಿಷದಲ್ಲಿ ರ‍್ಯಾಲಿ ಮುಗಿಸಿದ್ದು ಯಾಕೆ – ಸ್ಪಷ್ಟನೆ ಕೊಟ್ಟ ಉಪೇಂದ್ರ

    ಚಿತ್ರದುರ್ಗ: ರಿಯಲ್ ಸ್ಟಾರ್ ಉಪೇಂದ್ರ ಚಿತ್ರದುರ್ಗ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಟೈಲರ್ ದೇವೇಂದ್ರಪ್ಪ ಪರ ಪ್ರಚಾರ ಮಾಡಿದ್ದಾರೆ. ಈ ವೇಳೆ ಅವರು ಒಂದೇ ನಿಮಿಷದಲ್ಲಿ ರ‍್ಯಾಲಿ ಏಕೆ ಮುಗಿಯಿತು ಎಂಬುದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

    ಒಂದು ನಿಮಿಷ ರೋಡ್ ಶೋ ಮಾಡಿದ ಬಗ್ಗೆ ಮಾತನಾಡಿದ ಉಪೇಂದ್ರ, “ಬಿಸಿಲಿನ ತಾಪಕ್ಕೆ ನಾನು ಹೆದರಿಲ್ಲ. ನನಗೆ ರೋಡ್ ಶೋ ಮಾಡುವ ಅಗತ್ಯವಿಲ್ಲ. ಜನರನ್ನು ತಲುಪಲು ನಮಗೆ ರೋಡ್ ಶೋ ಬೇಕಿಲ್ಲ. ನನ್ನ ಪ್ರಜಾಕೀಯ ಪಕ್ಷದಲ್ಲಿ ರ‍್ಯಾಲಿ ಮಾಡಿ ಜನರಿಗೆ ಕಷ್ಟ ಕೊಡುವುದಿಲ್ಲ. ನಮ್ಮ ಅಭ್ಯರ್ಥಿ ಹಾಗೂ ಜೊತೆಯಲ್ಲಿ ಇರುವವರು ಉಪೇಂದ್ರ ಬರುತ್ತಾರೆ ಎಂದು ಈ ರೀತಿ ಮಾಡಿದ್ದಾರೆ. ಇಷ್ಟು ದಿನ ರಾಜಕೀಯದಲ್ಲಿ ಹೀಗೆ ನಡೆಯುತ್ತಿತ್ತು. ಇದನ್ನು ನೋಡಿ ಇಲ್ಲಿಯೂ ರೋಡ್ ಶೋ ಮಾಡಲು ಮುಂದಾಗಿದ್ದರು” ಎಂದು ತಿಳಿಸಿದರು.

    ಇಲ್ಲಿ ಮೋದಿ ಹವಾ ಇಲ್ಲ. ಪ್ರಜಾ ಹವಾ ಇದೆ. ಇಲ್ಲಿ ಪ್ರಜಾಕೀಯನೇ ಗೆಲ್ಲುವುದು. ನೀವು ಆಟೋಗೆ ವೋಟ್ ಹಾಕಿ, ಆಟೋಮ್ಯಾಟಿಕ್ ಆಗಿ ಎಲ್ಲಾ ಸರಿಯಾಗುತ್ತದೆ. ಅಭ್ಯರ್ಥಿಗಳ ಆಯ್ಕೆ, ಪ್ರಚಾರದ ಒತ್ತಡದ ಕಾರಣಕ್ಕೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಮುಂದಿನ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ. ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದನ್ನು ಇನ್ನು ನಿರ್ಧರಿಸಿಲ್ಲ ಎಂದರು.


    ರಾಜಕೀಯವನ್ನು ಸಂಪೂರ್ಣ ಬದಲಾಯಿಸಿ ಒಳ್ಳೆಯ ಪ್ರಜಾಪ್ರಭುತ್ವ ತರಬೇಕಿದೆ. ಉತ್ತಮ ಪ್ರಜಾಕೀಯ ಪಕ್ಷ ಎನ್ನುವ ಉದ್ದೇಶಕ್ಕೆ ಅಸ್ತಿತ್ವಕ್ಕೆ ಬಂದಿದೆ. ಇನ್ನು ಪಕ್ಷದ ಪ್ರಣಾಳಿಕೆ ಕಾನೂನುಗಳ ಪ್ರಕಾರ ಆಗಬೇಕು. ನಾವು ಕೊಟ್ಟ ಭರವಸೆ ಈಡೇರಿಸದಿದ್ದರೆ ಕಾನೂನು ಕ್ರಮ ಆಗಬೇಕು. ಅಲ್ಲಿಯವರೆಗೂ ನಾವು ಪ್ರಣಾಳಿಕೆಯನ್ನು ತರಲ್ಲ ಎಂದರು.

    ಇಂದು ಉಪೇಂದ್ರ ಬರಲಿರುವ ಹಿನ್ನೆಲೆಯಲ್ಲಿ ಮೊದಲೇ ರೋಡ್ ಶೋಗೆ ಪ್ರಜಾಕೀಯ ಪಕ್ಷ ಅನುಮತಿಯನ್ನು ಪಡೆದುಕೊಂಡಿತ್ತು. ಹೊಸದುರ್ಗ ಪಟ್ಟಣದ ವೀರಭದ್ರಸ್ವಾಮಿ ದೇವಾಲಯದಲ್ಲಿ ಉಪೇಂದ್ರ ಪೂಜೆ ಸಲ್ಲಿಸಿ ರೋಡ್ ಶೋ ವಾಹನ ಏರಿ ತಕ್ಷಣ ಇಳಿದಿದ್ದಾರೆ.

    ಇಂದು ಬೆಳಗ್ಗೆ 9 ಗಂಟೆಗೆ ರೋಡ್ ಶೋ ನಿಗದಿಯಾಗಿತ್ತು. ಆದರೆ ನಟ ಉಪೇಂದ್ರ ಅರ್ಧ ಗಂಟೆ ತಡವಾಗಿ ರ‍್ಯಾಲಿಗೆ ಆಗಮಿಸಿ 1 ನಿಮಿಷ ಮಾತನಾಡಿ ರ‍್ಯಾಲಿ ಮುಗಿಸಿದರು.

  • ಬಿಸಿಲಿಗೆ ಹೆದರಿ 1 ನಿಮಿಷಕ್ಕೆ ರ‍್ಯಾಲಿ ಮುಗಿಸಿದ ನಟ ಉಪೇಂದ್ರ

    ಬಿಸಿಲಿಗೆ ಹೆದರಿ 1 ನಿಮಿಷಕ್ಕೆ ರ‍್ಯಾಲಿ ಮುಗಿಸಿದ ನಟ ಉಪೇಂದ್ರ

    ಚಿತ್ರದುರ್ಗ: ರಿಯಲ್ ಸ್ಟಾರ್ ಉಪೇಂದ್ರ ಕೋಟೆನಾಡು ಚಿತ್ರದುರ್ಗದ ಬಿಸಿಲಿನ ತಾಪಕ್ಕೆ ಹೆದರಿ ಒಂದೇ ನಿಮಿಷದಲ್ಲಿ ತಮ್ಮ ಪ್ರಜಾಕೀಯ ಪಕ್ಷದ ರ‍್ಯಾಲಿಯನ್ನು ಮುಗಿಸಿದರು.

    ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದ ವೀರಭದ್ರಸ್ವಾಮಿ ದೇವಾಲಯದಿಂದ ರೋಡ್ ಶೋ ಆರಂಭವಾಗಬೇಕಿತ್ತು. ವೀರಭದ್ರ ಸ್ವಾಮಿ ದೇವಾಲಯದಲ್ಲಿ ಉಪೇಂದ್ರ ಪೂಜೆ ಸಲ್ಲಿಸಿ ರೋಡ್ ಶೋ ವಾಹನ ಏರಿ ತಕ್ಷಣ ಇಳಿದಿದ್ದಾರೆ. ಬಿಸಿಲಿಗೆ ಹೆದರಿ ಒಂದು ನಿಮಿಷದಲ್ಲೇ ರ‍್ಯಾಲಿ ಮುಗಿಸಿ ಹಿಂದಿರುಗಿದರು.

    ಉಪೇಂದ್ರ ತಮ್ಮ ಉತ್ತಮ ಪ್ರಜಾಕೀಯ ಪಕ್ಷದ ಪ್ರಚಾರಕ್ಕಾಗಿ ಚಿತ್ರದುರ್ಗಕ್ಕೆ ಆಗಮಿಸಿದರು. ಇಂದು ಬೆಳಗ್ಗೆ 9 ಗಂಟೆಗೆ ರೋಡ್ ಶೋ ನಿಗದಿಯಾಗಿತ್ತು. ಆದರೆ ನಟ ಉಪೇಂದ್ರ ಅರ್ಧ ಗಂಟೆ ತಡವಾಗಿ ರ‍್ಯಾಲಿಗೆ ಆಗಮಿಸಿದರು. ಬಳಿಕ ಉಪೇಂದ್ರ 1 ನಿಮಿಷದಲ್ಲಿ ಮಾತನಾಡಿ ರ‍್ಯಾಲಿ ಮುಗಿಸಿದರು.

    https://www.youtube.com/watch?v=_WlVfeGH3sk

  • ದಕ್ಷಿಣ ಕರ್ನಾಟಕದ ಮತದಾನ ದಿನವೇ ರಾಜ್ಯದಲ್ಲಿ ಪ್ರಧಾನಿ ಮೋದಿ ರ‍್ಯಾಲಿ

    ದಕ್ಷಿಣ ಕರ್ನಾಟಕದ ಮತದಾನ ದಿನವೇ ರಾಜ್ಯದಲ್ಲಿ ಪ್ರಧಾನಿ ಮೋದಿ ರ‍್ಯಾಲಿ

    ಬೆಂಗಳೂರು: ದಕ್ಷಿಣ ಕರ್ನಾಟಕದ ಮತದಾನ ದಿನವೇ ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕದಲ್ಲಿ ರ‍್ಯಾಲಿ ನಡೆಸಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಿಂಬಾವಳಿ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಮತದಾನ ಏಪ್ರಿಲ್ 18ರಂದು ನಡೆಯಲಿದೆ. ಅದೇ ದಿನವೇ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಎರಡು ಕಡೆಗಳಲ್ಲಿ ರ‍್ಯಾಲಿ ನಡೆಸಲಿದ್ದಾರೆ. ಈ ಮೂಲಕ ರಾಜ್ಯದ 6 ಕಡೆಗಳಲ್ಲಿ ಮೋದಿ ವಿಜಯ ಸಂಕಲ್ಪ ಯಾತ್ರೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

    ಎಲ್ಲೆಲ್ಲಿ ಮೋದಿ ರ‍್ಯಾಲಿ?:
    ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 8ರಂದು ಮಧ್ಯಾಹ್ನ 1 ಗಂಟೆಗೆ ಚಿತ್ರದುರ್ಗ, 3ಕ್ಕೆ ಮೈಸೂರಿನ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಏಪ್ರಿಲ್ 13ರಂದು ಬೆಳಗ್ಗೆ ಮಂಗಳೂರು, ಸಂಜೆ ಬೆಂಗಳೂರಿನಲ್ಲಿ ಮೋದಿ ಸಮಾವೇಶ ನಡೆಯಲಿದೆ. ದಕ್ಷಿಣ ಕರ್ನಾಟಕದ ಮತದಾನದ ದಿನವಾದ ಏಪ್ರಿಲ್ 18ರಂದು ಬೆಳಗ್ಗೆ ಚಿಕ್ಕೋಡಿ, ಮಧ್ಯಾಹ್ನ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ.

    ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕೂಡ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಏಪ್ರಿಲ್ 10, 12, 17 ಮತ್ತು 20 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ಮೂಲಕ ದಾವಣಗೆರೆ, ಹಾಸನ, ತುಮಕೂರು, ಕೋಲಾರ, ಕಲಬುರಗಿ, ವಿಜಯಪುರ, ಧಾರವಾಡ ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಾರೆ ಎಂದು ತಿಳಿಸಿದರು.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಗರಗಳ ಬಗ್ಗೆ ಮಾತನಾಡುತ್ತಿದ್ದಾರೆ. ಮಹಾನಗರಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಹೇಗೆ ಅಕೌಂಟಿಬಿಲಿಟಿ ಇರಬೇಕು ಅಂತ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಬಿಬಿಎಂಪಿ ಡಿವೈಡ್ ಮಾಡೋದಕ್ಕೆ ನಮ್ಮ ವಿರೋಧವಿತ್ತು. ಆದರೆ ಮೇಯರ್ ಇನ್ ಕೌನ್ಸಿಲ್‍ಗೆ ನಾವು ಬೆಂಬಲ ನೀಡಿದ್ದೇವು. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದರೂ ಯಾಕೆ ಕಾರ್ಯಗತಕ್ಕೆ ತರಲಿಲ್ಲ. ಸುಳ್ಳು ಹೇಳಿಕೆಗಳನ್ನು ರಾಹುಲ್ ಗಾಂಧಿ ಅವರು ನಿಲ್ಲಿಸಬೇಕು ಎಂದು ತಿರುಗೇಟು ನೀಡಿದರು.

    ಕಾಂಗ್ರೆಸ್‍ನವರು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಡೈರಿ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ನಮ್ಮ ಪಕ್ಷ ಅಭಿವೃದ್ಧಿ ವಿಚಾರಗಳ ಮೇಲೆ ನಾವು ಪ್ರಚಾರ ಮಾಡುತ್ತಿದ್ದೇವೆ. ಆದರೆ ಕಾಂಗ್ರೆಸ್‍ನವರು ಸುಳ್ಳು ಆರೋಪಗಳಿಂದ ಮತದಾರರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ರಾಹುಲ್ ಗಾಂಧಿ ಸಲಹೆ ಪಡೆದು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ತಿದ್ದುಪಡಿ ಮಾಡುವ ಸಾಧ್ಯತೆ ಇದೆ. ಕೇಂದ್ರ ಬಿಜೆಪಿ ಸರ್ಕಾರವು ರೈತರ ಖಾತೆಗೆ ವಾರ್ಷಿಕವಾಗಿ 6 ಸಾವಿರ ರೂ. ಹಾಕುತ್ತಿದೆ. ಆದರೆ ಕಾಂಗ್ರೆಸ್‍ನವರು ಈಗ 72 ಸಾವಿರ ರೂ. ಪಾವತಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಹೇಳಿದರು.

    ನಾನು ಈಗಾಗಲೇ ಗೆದ್ದಿದ್ದೇನೆ. ಯಾರ ಪ್ರಚಾರವೂ ಅಗತ್ಯವಿಲ್ಲ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿರಲು ಸಾಧ್ಯವಿಲ್ಲ. ಆದರೂ ಯುವಕ, ಅತಿ ಉತ್ಸಾಹದಿಂದ ಹಾಗೇನಾದರೂ ಹೇಳಿದ್ದರೆ ಕರೆದು ಬುದ್ಧಿ ಹೇಳುತ್ತೇವೆ ಎಂದು ಅರವಿಂದ್ ಲಿಂಬಾವಳಿ ತಿಳಿಸಿದರು.

  • ಸಚಿವರ ಹೆಗಲಿಗೆ ಅಭ್ಯರ್ಥಿಗಳನ್ನ ಗೆಲ್ಲಿಸುವ ಹೊಣೆ

    ಸಚಿವರ ಹೆಗಲಿಗೆ ಅಭ್ಯರ್ಥಿಗಳನ್ನ ಗೆಲ್ಲಿಸುವ ಹೊಣೆ

    – ನಾಳೆ ಬೃಹತ್ ರ‍್ಯಾಲಿ
    -ಪಕ್ಷ ವಿರೋಧಿಗಳಿಗೆ ಕಾಂಗ್ರೆಸ್ ಎಚ್ಚರಿಕೆ

    ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ತಡರಾತ್ರಿವರೆಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ನೇತೃತ್ವದಲ್ಲಿ ಸಭೆ ನಡಿದಿದೆ. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಆಯಾಯ ಜಿಲ್ಲೆಯ ಸಚಿವರಿಗೆ ಅಭ್ಯರ್ಥಿಗಳನ್ನ ಗೆಲ್ಲಿಸುವ ಹೊಣೆಯವನ್ನು ನೀಡಲಾಗಿದೆ.

    ಲೋಕಸಭಾ ಚುನಾವಣೆಗೆ ಯಾವೆಲ್ಲ ರಣತಂತ್ರಗಳನ್ನು ಉಪಯೋಗಿಸಬೇಕು ಅನ್ನೋದರ ಜೊತೆಗೆ ಸಂಬಂಧಪಟ್ಟ ಜಿಲ್ಲಾ ಉಸ್ತುವಾರಿ ಸಚಿವರು, ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ಕೆಲಸ ಮಾಡಬೇಕು ಹಾಗೂ ಯಾವುದೇ ಪಕ್ಷ ವಿರೋಧಿ ಚಟುವಟಿಗಳಿಗೆ ಅವಕಾಶ ನೀಡಬಾರದು. ಒಂದು ವೇಳೆ ನೀಡಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ಎಚ್ಚರಿಯನ್ನು ನೀಡಲಾಗಿದೆ.

    ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತಾಡಿದ ವೇಣುಗೋಪಾಲ್, ಮೋದಿ ಒಬ್ಬ ಸುಳ್ಳುಗಾರ, ಪೊಳ್ಳು ಭರವಸೆಗಳನ್ನು ಕೊಟ್ಟು ಜನರನ್ನು ಯಾಮಾರಿಸಿದ್ದಾರೆ. ಐಟಿ ಇಲಾಖೆಯನ್ನು ಬಳಸಿಕೊಂಡು ರಾಜಕೀಯ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದೇ 31 ರಂದು ಬೆಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ರಾಹುಲ್ ಗಾಂಧಿ ಬರಲಿದ್ದಾರೆ. ಎಚ್.ಡಿ ದೇವೇಗೌಡ ಮತ್ತು ರಾಹುಲ್ ಗಾಂಧಿ ನಾಯಕತ್ವದಲ್ಲಿ ಅದ್ಧೂರಿ ಸಮಾವೇಶ ನಡೆಯಲಿದೆ ಎಂದರು.

  • ಕರ್ನಾಟಕದಲ್ಲಿ 7 ಮೋದಿ  ರ‍್ಯಾಲಿ – ಏ.8ಕ್ಕೆ ಮೈಸೂರು, ಚಿತ್ರದುರ್ಗದಲ್ಲಿ ಪ್ರಚಾರ

    ಕರ್ನಾಟಕದಲ್ಲಿ 7 ಮೋದಿ ರ‍್ಯಾಲಿ – ಏ.8ಕ್ಕೆ ಮೈಸೂರು, ಚಿತ್ರದುರ್ಗದಲ್ಲಿ ಪ್ರಚಾರ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ಮತ್ತು ಚಿತ್ರದುರ್ಗದಲ್ಲಿ ಏಪ್ರಿಲ್ 8 ರಂದು ಬೃಹತ್ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿಳಿಸಿದ್ದಾರೆ.

    ಡಾಲರ್ಸ್ ಕಾಲೋನಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಮೋದಿ ರ‍್ಯಾಲಿ ನಡೆಯುತ್ತದೆ. ಈ ನಿಟ್ಟಿನಲ್ಲಿ ದಿನಾಂಕ ಕೂಡ ನಿಗದಿಯಾಗಿದ್ದು, ಏಪ್ರಿಲ್ 8 ರಂದು ಬೆಳಗ್ಗೆ ಬೆಳಗ್ಗೆ ಮೈಸೂರು ಹಾಗೂ ಸಂಜೆ ಚಿತ್ರದುರ್ಗದಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 7 ರ‍್ಯಾಲಿಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

    ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ತಪ್ಪಲು ಯಾರು ಕಾರಣ ಎನ್ನುವ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಈಗಾಗಲೇ ಕಾರಣ ಯಾರು ಅಂತ ಮಾಧ್ಯಮಗಳಲ್ಲಿ ಬಂದಿದೆ ಎಂದು ಪರೋಕ್ಷವಾಗಿ ಬಿ.ಎಲ್.ಸಂತೋಷ್ ವಿರುದ್ಧ ಆರೋಪಿಸಿದರು.

    ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಆಗಿದ್ದು ನಿಜ. ಆದರೆ ಇದು ಪಕ್ಷ ತೀರ್ಮಾನವಾಗಿದೆ. ಹೀಗಾಗಿ ಅಭ್ಯರ್ಥಿ ಯಾರೇ ಆಗಲಿ ಮುಖ್ಯವಲ್ಲ, ಪಕ್ಷ ಮುಖ್ಯ. ತೇಜಸ್ವಿ ಸೂರ್ಯ ಅವರ ಪರ ಪ್ರಚಾರಕ್ಕೆ ನಾವು ಕೆಲಸ ಶುರು ಮಾಡಿದ್ದೇವೆ. ರಾಜ್ಯದ 28 ಕ್ಷೇತ್ರಗಳಲ್ಲಿಯೂ ಮೋದಿ ಅವರೇ ಅಭ್ಯರ್ಥಿ ಎಂದು ಬಿಂಬಿಸಲಾಗಿದೆ. ಪಕ್ಷ ದೊಡ್ಡದು, ಪಕ್ಷಕ್ಕೆ ನಿಷ್ಠರಾಗಿರಬೇಕು ಎಂದ ಅವರು, ತೇಜಸ್ವಿನಿ ಅನಂತ್‍ಕುಮಾರ್ ಅವರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

  • ಮಂಡ್ಯದಲ್ಲಿ ಜೆಡಿಎಸ್ ಹಬ್ಬ – ಸಾಗರದಂತೆ ಹರಿದು ಬಂದ ಜನರು

    ಮಂಡ್ಯದಲ್ಲಿ ಜೆಡಿಎಸ್ ಹಬ್ಬ – ಸಾಗರದಂತೆ ಹರಿದು ಬಂದ ಜನರು

    ಮಂಡ್ಯ: ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕಾರ್ಯಕ್ರಮವನ್ನು ಜೆಡಿಎಸ್ ಕಾರ್ಯಕರ್ತರು ಹಬ್ಬದಂತೆ ಸಂಭ್ರಮಿಸುತ್ತಿದ್ದು, ಸುಮಾರು ಎರಡು ಕಿಲೋ ಮೀಟರ್ ವರೆಗೂ ರ‍್ಯಾಲಿಯಲ್ಲಿ ಹೊರಟಿದ್ದಾರೆ.

    ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದ ಕಾಳಿಕಾಂಬ ದೇವಸ್ಥಾನದಲ್ಲಿ ನಿಖಿಲ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಸಿಎಂ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಮತ್ತು ಜೆಡಿಎಸ್ ಮುಖಂಡರ ಜೊತೆಗೆ ಕಾಳಿಕಾಂಬ ದೇವಸ್ಥಾನದ ಆವರಣದಿಂದ ರ‍್ಯಾಲಿ ಪ್ರಾರಂಭಿಸಿದ್ದು, ಡೊಳ್ಳು ಕುಣಿತ, ಪಟ ಕುಣಿತ, ಗೊಂಬೆ ಕುಣಿತಗಳ ಜೊತೆ ನಿಖಿಲ್ ಪ್ರಚಾರದ ರ‍್ಯಾಲಿ ಹೊರಟಿದೆ.

    ಸುಮಾರು ಎರಡು ಕಿಲೋ ಮೀಟರ್ ರ‍್ಯಾಲಿ ಹೋಗಲಿದ್ದು, ನಿಖಿಲ್ ಕುಮಾರಸ್ವಾಮಿ ಅವರು ತೆರೆದ ವಾಹನದಲ್ಲಿ ನಿಂತು ಕಾರ್ಯಕರ್ತರಿಗೆ ಕೈ ಬೀಸುತ್ತಿದ್ದಾರೆ. ನಿಖಿಲ್ ತೆರೆದ ವಾಹನ ಹಿಂದೆ, ಮುಂದೆ ಮತ್ತು ಅಕ್ಕ-ಪಕ್ಕದಲ್ಲಿ ಜನ ಸೇರಿದ್ದಾರೆ. ಎತ್ತ ನೋಡಿದರೂ ಬರೀ ಜನರೇ ಕಾಣಿಸುತ್ತಿದ್ದಾರೆ. ಬಿಸಿಲು ಎಂದು ನೋಡದೇ ಜನರು ನಿಖಿಲ್ ಎಂದು ಕೂಗುತ್ತಾ ಒಂದು ರೀತಿ ಮಂಡ್ಯದಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗಿದೆ.

    ರ‍್ಯಾಲಿಗಾಗಿ ಎರಡು ಲಾರಿ ಸಿದ್ಧತೆ ಮಾಡಿಕೊಂಡಿದ್ದು, ಜೆಡಿಎಸ್ ಬ್ಯಾನರ್ ನಿಂದ ಅಲಂಕಾರ ಮಾಡಲಾಗಿದೆ. ಲಾರಿ ಸುತ್ತ ಹಾಕಿರುವ ಬ್ಯಾನರ್ ನಲ್ಲಿ ನಿಖಿಲ್ ಕುಮಾರ್ ರಾರಾಜಿಸುತ್ತಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಮುಖಂಡರ ಫೋಟೋ ಕೂಡ ಇದೆ. ಉಳುವ ಯೋಗಿಯ ನೋಡಲ್ಲಿ ಹಾಡಿಗೆ ಹಸಿರು ಸೀರೆ ಉಟ್ಟು, ಹೊರೆ ಹೊತ್ತ ಮಹಿಳೆಯರಿಂದ ನೃತ್ಯದ ಮೂಲಕ ಮನರಂಜನೆ ನೀಡಲಾಗುತ್ತಿದೆ.

    ಭದ್ರತೆ:
    ಭದ್ರತೆಗಾಗಿ ಒಬ್ಬರು ಎಸ್‍ಪಿ, 10 ಡಿವೈಎಸ್‍ಪಿ, 20 ಸಿಪಿಐ, 35 ಪಿಎಸ್‍ಐ, 800 ಜನ ಸಿಬ್ಬಂದಿ, 5 ಡಿಆರ್ ಸಿಬ್ಬಂದಿ ಮತ್ತು 5 ಕೆಎಸ್‍ಆರ್ ಪಿ ನಿಯೋಜನೆ ಮಾಡಲಾಗಿದೆ. ನಿಖಿಲ್ ನಾಮಪತ್ರ ಸಲ್ಲಿಕೆ ನಂತರ ಕಾವೇರಿ ಉದ್ಯಾನವನದ ಬಳಿ ಬೃಹತ್ ಬಹಿರಂಗ ಭಾಷಣ ಮಾಡಲಿದ್ದಾರೆ. ಬಹಿರಂಗ ಭಾಷಣ ವೀಕ್ಷಿಸಲು ಬೃಹತ್ ಎಲ್‍ಇಡಿ ಪರದೆ ಅಳವಡಿಕೆ ಮಾಡಲಾಗಿದೆ. ಸುಮಾರು ಹತ್ತು ಎಲ್‍ಇಡಿ ಅಳವಡಿಕೆ ಮಾಡಲಾಗಿದ್ದು, ಪಾರ್ಕ್ ಸುತ್ತ ಬ್ಯಾರಿಕೇಡ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಎದುರಿನ ಪಾರ್ಕ್ ನಲ್ಲಿ ನಿಖಿಲ್ ಫೋಟೋ ಹಿಡಿದು ಜಯಕಾರ ಕೂಗುತ್ತಾ ಜೆಡಿಎಸ್ ಕಾರ್ಯಕರ್ತರ ಸಂಭ್ರಮಿಸುತ್ತಿದ್ದಾರೆ.

  • ಬಾಯಾರಿದ ಜೋಡೆತ್ತುಗಳಿಗೆ ರೈತನಿಂದ ಬಾಟಲಿ ನೀರು!

    ಬಾಯಾರಿದ ಜೋಡೆತ್ತುಗಳಿಗೆ ರೈತನಿಂದ ಬಾಟಲಿ ನೀರು!

    ಮಂಡ್ಯ: ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದು, ಮಂಡ್ಯದಲ್ಲಿ ಜನಸಾಗರವೇ ಹರಿದುಬಂದಿದೆ.

    ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಕಿಕ್ಕಿರಿದ ಜನರ ಮಧ್ಯೆ ಜೋಡೆತ್ತುಗಳು ಸಾಗಿದ್ದವು. ಸುಡುಬಿಸಿಲಿನಿಂದಾಗಿ ದಣಿದು ಬಾಯಾರಿದ್ದ ಜೋಡೆತ್ತುಗಳಿಗೆ ರೈತ ಬಾಟಲಿ ನೀರು ಕುಡಿಸಿರುವುದು ನೆರೆದಿದ್ದ ಜನರ ಗಮನಸೆಳೆಯಿತು.

    ನಿಖಿಲ್ ಅವರು ತಾವು ನಾಮಪತ್ರ ಸಲ್ಲಿಸುವುದಕ್ಕೂ ಮೊದಲು ನಗರದ ಕಾಳಿಕಾಂಬ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಕಾಳಿಕಾಂಬ ದೇವಸ್ಥಾನದ ಆವರಣದಿಂದ ರ‍್ಯಾಲಿ ಪ್ರಾರಂಭಿಸಿದ್ದು, ಡೊಳ್ಳು ಕುಣಿತ, ಪಟ ಕುಣಿತ, ಗೊಂಬೆ ಕುಣಿತಗಳ ಜೊತೆ ನಿಖಿಲ್ ಪ್ರಚಾರ ಕೈಗೊಳ್ಳಲಾಗಿದೆ.

    ಸುಮಾರು ಎರಡು ಕಿಲೋ ಮೀಟರ್ ರ್ಯಾಲಿ ಹೋಗಲಿದ್ದು, ನಿಖಿಲ್ ಕುಮಾರಸ್ವಾಮಿ ಅವರು ತೆರೆದ ವಾಹನದಲ್ಲಿ ನಿಂತು ಅವರನ್ನು ಹಿಂಬಾಲಿಸುತ್ತಿರುವ ಜನರಿಗಾಗಿ ಕೈ ಬೀಸುತ್ತಿದ್ದಾರೆ. ನಿಖಿಲ್ ತೆರೆದ ವಾಹನ ಹಿಂದೆ, ಮುಂದೆ ಮತ್ತು ಅಕ್ಕ-ಪಕ್ಕದಲ್ಲಿ ಕಿಕ್ಕಿರಿದ್ದಷ್ಟು ಜನರು ಸಾಗರದಂತೆ ಬಂದಿದ್ದಾರೆ. ಎತ್ತ ನೋಡಿದರೂ ಬರೀ ಜನರೆ ಕಾಣಿಸುತ್ತಿದ್ದಾರೆ. ಬಿಸಿಲು ಎಂದು ನೋಡದೆ ಜನರು ನಿಖಿಲ್ ಎಂದು ಕೂಗುತ್ತಾ ಒಂದು ರೀತಿ ಮಂಡ್ಯದಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗಿದೆ.

    ಎರಡು ಲಾರಿಯಲ್ಲಿ ರ‍್ಯಾಲಿ:
    ರ್ಯಾಲಿಗಾಗಿ ಎರಡು ಲಾರಿ ಸಿದ್ಧತೆ ಮಾಡಿಕೊಂಡಿದ್ದು, ಜೆಡಿಎಸ್ ಬ್ಯಾನರ್‍ನಿಂದ ಅಲಂಕಾರ ಮಾಡಲಾಗಿದೆ. ಲಾರಿ ಸುತ್ತ ಹಾಕಿರುವ ಬ್ಯಾನರ್‍ನಲ್ಲಿ ನಿಖಿಲ್ ಕುಮಾರ್ ರಾರಾಜಿಸುತ್ತಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಮುಖಂಡರ ಫೋಟೋ ಕೂಡ ಇದೆ. ಜೊತೆಗೆ ಉಳುವ ಯೋಗಿಯ ನೋಡಲ್ಲಿ ಹಾಡಿಗೆ ಹಸಿರು ಸೀರೆ ಉಟ್ಟು, ಹೊರೆ ಹೊತ್ತ ಮಹಿಳೆಯರಿಂದ ನೃತ್ಯದ ಮೂಲಕ ಮನರಂಜನೆ ನೀಡಲಾಗುತ್ತಿದೆ.

    ಭದ್ರತೆ:
    ಭದ್ರತೆಗಾಗಿ ಒಬ್ಬರು ಎಸ್‍ಪಿ, 10 ಡಿವೈಎಸ್‍ಪಿ, 20 ಸಿಪಿಐ, 35 ಪಿಎಸ್‍ಐ, 800 ಜನ ಸಿಬ್ಬಂದಿ, 5 ಡಿಆರ್ ಸಿಬ್ಬಂದಿ ಮತ್ತು 5 ಕೆಎಸ್‍ಆರ್‍ಪಿ ನಿಯೋಜನೆ ಮಾಡಲಾಗಿದೆ. ನಿಖಿಲ್ ನಾಮಪತ್ರ ಸಲ್ಲಿಕೆ ನಂತರ ಕಾವೇರಿ ಉದ್ಯಾನವನದ ಬಳಿ ಬೃಹತ್ ಬಹಿರಂಗ ಭಾಷಣ ಮಾಡಲಿದ್ದಾರೆ. ಬಹಿರಂಗ ಭಾಷಣ ವೀಕ್ಷಿಸಲು ಬೃಹತ್ ಎಲ್‍ಇಡಿ ಪರದೆ ಅಳವಡಿಕೆ ಮಾಡಲಾಗಿದೆ. ಸುಮಾರು ಹತ್ತು ಎಲ್‍ಇಡಿ ಅಳವಡಿಕೆ ಮಾಡಲಾಗಿದ್ದು, ಪಾರ್ಕ್ ಸುತ್ತ ಬ್ಯಾರಿಕೇಡ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.

  • ಭಾರತೀಯ ಯೋಧರ ಪರ ರ‍್ಯಾಲಿಯಲ್ಲಿ ಶಾಸಕ ಸುಧಾಕರ್‌ಗೆ ಅವಮಾನ..!

    ಭಾರತೀಯ ಯೋಧರ ಪರ ರ‍್ಯಾಲಿಯಲ್ಲಿ ಶಾಸಕ ಸುಧಾಕರ್‌ಗೆ ಅವಮಾನ..!

    ಚಿಕ್ಕಬಳ್ಳಾಪುರ: ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಧಾಕರ್ ಅವರನ್ನು ಸುತ್ತುವರಿದು ಮೋದಿ ಮೋದಿ ಎಂದು ಘೋಷಣೆ ಕೂಗುವ ಮೂಲಕ ಸುಧಾಕರ್ ಅವರಿಗೆ ಅವಮಾನ ಮಾಡಿದ್ದಾರೆ.

    ಚಿಕ್ಕಬಳ್ಳಾಪುರ ನಗರದ ಹಳೇ ಎಸ್ಪಿ ಕಚೇರಿ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಯೋಧರ ಪರ ನಾಗರೀಕರು ರ‍್ಯಾಲಿ ಕೈಗೊಂಡಿದ್ದರು. ಪಕ್ಷಾತೀತವಾಗಿ ಹಲವು ಮಂದಿ ನಾಗರೀಕರು ಭಾರತೀಯ ಯೋಧರ ಪರ ಮೆರವಣಿಗೆ ನಡೆಸಿದ್ದರು. ಮೆರವಣಿಗೆ ವೇಳೆ ಕಾರಿನಲ್ಲಿ ಶಾಸಕ ಸುಧಾಕರ್ ಅದೇ ಮಾರ್ಗವಾಗಿ ಹಾದು ಹೋಗುತ್ತಿದ್ದರು.

    ಈ ವೇಳೆ ಶಾಸಕ ಸುಧಾಕರ್ ಬಳಿ ನಾಗರಿಕರೊಬ್ಬರು ಬಂದು ರ‍್ಯಾಲಿಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅವರ ಮನವಿಗೆ ಸ್ಪಂದಿಸಿದ ಸುಧಾಕರ್ ಅವರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಶಾಸಕ ಸುಧಾಕರ್ ಅವರನ್ನು ಸುತ್ತುವರಿದು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ.

    ಬಿಜೆಪಿ ಕಾರ್ಯಕರ್ತರ ಘೋಷಣೆಯಿಂದ ಕಸಿವಿಸಿಗೊಂಡ ಸುಧಾಕರ್ ರ‍್ಯಾಲಿಯಿಂದ ವಾಪಸ್ ಹೋಗಿದ್ದು, ಬಿಜೆಪಿ ಕಾರ್ಯಕರ್ತರ ವರ್ತನೆಗೆ ಶಾಸಕ ಸುಧಾಕರ್ ಅಸಮಾಧಾನಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಮಿತ್ ಶಾ ರ‍್ಯಾಲಿಯಲ್ಲಿ ಬರೋಬ್ಬರಿ 5000 ಕೆ.ಜಿ. ಕಿಚಡಿ ತಯಾರು

    ಅಮಿತ್ ಶಾ ರ‍್ಯಾಲಿಯಲ್ಲಿ ಬರೋಬ್ಬರಿ 5000 ಕೆ.ಜಿ. ಕಿಚಡಿ ತಯಾರು

    ನವದೆಹಲಿ: ಇಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ದೆಹಲಿಯ ರಾಮಲೀಲಾ ಮೈದಾನದಲ್ಲಿ ಆಯೋಜಿಸಿದ್ದ ರ‍್ಯಾಲಿಯಲ್ಲಿ ಬರೋಬ್ಬರಿ 5,000 ಕೆಜಿ ಕಿಚಡಿ ತಯಾರು ಮಾಡುವ ಮೂಲಕ ವರ್ಲ್ಡ್ ರೆಕಾರ್ಡ್ ಮಾಡಿದೆ.

    ವಿಶ್ವ ದಾಖಲೆ ಸೃಷ್ಟಿಸುವ ಉದ್ದೇಶದಿಂದ ದಲಿತರ ಮನೆಗಳಿಂದ ಅಕ್ಕಿ ಮತ್ತು ಬೇಳೆಯನ್ನು ರಾಮಲೀಲಾ ಮೈದಾನಕ್ಕೆ ತರಿಸಿ ರ‍್ಯಾಲಿಯಲ್ಲಿ ಕಿಚಡಿಯನ್ನು ತಯಾರು ಮಾಡಲಾಗಿದೆ. ‘ಬಿಮ್ ಮಹಾಸಂಗಮ್ ವಿಜಯ್ ಸಂಕಲ್ಪ’ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಬೆಂಬಲಿಗರು ಹಾಗೂ ಕಾರ್ಯಕರ್ತರಿಗೆ ಕಿಚಡಿಯನ್ನು ವಿತರಿಸಲಾಗಿದೆ. ಈ ರ‍್ಯಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಯುತ್ತಿದೆ.

    ನವೆಂಬರ್ 2017 ರಂದು ಖ್ಯಾತ ಬಾಣಸಿಗ ಸಂಜೀವ್ ಕಪೂರ್ ಅವರು 918 ಕೆಜಿ ಕಿಚಡಿ ತಯಾರಿಸುವ ಮೂಲಕ ವಿಶ್ವದಾಖಲೆ ಸೃಷ್ಟಿಸಿದ್ದರು. ಈ ಕಿಚಡಿಯನ್ನು ಸಂಜೀವ್ ಕಪೂರ್ ಅವರು ದೆಹಲಿಯಲ್ಲಿ ಆಹಾರ ಸಂಸ್ಕರಣಾ ಸಚಿವಾಲಯ ಆಯೋಜಿಸಿದ್ದ ಆಹಾರ ಮೇಳದಲ್ಲಿ ತಯಾರು ಮಾಡಿದ್ದರು.

    ಈ ರ‍್ಯಾಲಿಯಲ್ಲಿ ಅಮಿತ್ ಶಾ ಅವರು, ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕಾಗಿ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು, ಬಿಜೆಪಿ ಸರ್ಕಾರ ಸಮಾಜದಲ್ಲಿ ದಲಿತರು ಮತ್ತು ಕೆಳಹಂತದಲ್ಲಿರುವ ಜನರ ಅಭಿವೃದ್ದಿಗಾಗಿ ಯಾವುದೇ ಯೋಜನೆ ಜಾರಿಗೆ ತಂದಿಲ್ಲ ಎಂದು ನಿರಂತರವಾಗಿ ಕಾಂಗ್ರೆಸ್ ಬಗ್ಗೆ ಆರೋಪ ಮಾಡುತ್ತಿತ್ತು.

    ಈ ಹಿನ್ನೆಲೆಯಲ್ಲಿ ಅಮಿತ್ ಶಾ ದಲಿತರಿಗೆ ತಮ್ಮ ಸರ್ಕಾರ ಅವರಿಗಾಗಿ ಯಾವ ಯಾವ ಯೋಜನೆಯನ್ನು ಜಾರಿಗೆ ಮಾಡಿದೆ ಎಂಬುದನ್ನು ತಿಳಿಸಲು ಈ ರ‍್ಯಾಲಿಯನ್ನು ಆಯೋಜನೆ ಮಾಡಿದ್ದಾರೆ. ಜೊತೆಗೆ ದಲಿತರ ಮನೆಯಲ್ಲಿಯೇ ಅಕ್ಕಿ, ಬೇಳೆ ತರಿಸಿ ಕಿಚಡಿ ತಯಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

    ಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೋದಿ ರ‍್ಯಾಲಿ ವೀಕ್ಷಿಸಲು ತೆರಳುತ್ತಿದ್ದ ಬಸ್ ಪಲ್ಟಿ- 35 ಮಕ್ಕಳಿಗೆ ಗಾಯ

    ಮೋದಿ ರ‍್ಯಾಲಿ ವೀಕ್ಷಿಸಲು ತೆರಳುತ್ತಿದ್ದ ಬಸ್ ಪಲ್ಟಿ- 35 ಮಕ್ಕಳಿಗೆ ಗಾಯ

    ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ರ‍್ಯಾಲಿ ವೀಕ್ಷಿಸಲು ತೆರಳುತ್ತಿದ್ದ ಬಸ್ಸೊಂದು ಪಲ್ಟಿಯಾದ ಪರಿಣಾಮ 35ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಕಂಗ್ರಾದಲ್ಲಿ ನಡೆದಿದೆ.

    ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಧರ್ಮಶಾಲಾದಲ್ಲಿ ಬೃಹತ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಹೀಗಾಗಿ ಸ್ಥಳೀಯ ಕಂಪ್ಯೂಟರ್ ಶಾಲೆಯ ಮಕ್ಕಳೆಲ್ಲಾ ಬಸ್ ನಲ್ಲಿ ರ‍್ಯಾಲಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳುತ್ತಿದ್ದರು.

    ಈ ವೇಳೆ ಕಾಂಗ್ರಾ ಬಳಿ ಬಸ್ ಏಕಾಏಕಿ ಪಲ್ಟಿಯಾಗಿದೆ. ಪರಿಣಾಮ 35ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದರೆ, 5 ಮಂದಿ ಸ್ಥಿತಿಯ ಗಂಭೀರವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಮಾಹಿತಿಗಳ ಪ್ರಕಾರ 32 ಆಸನಗಳುಳ್ಳ ಬಸ್‍ನಲ್ಲಿ 45 ಮಕ್ಕಳು ಪ್ರಯಾಣ ಬೆಳೆಸಿದ್ದು, ಅವಘಡಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv