Tag: ಲಕ್ನೌ

  • ವರ ನೀರಿನ ಗ್ಲಾಸ್ ಎತ್ತಲಿಲ್ಲ ಎಂದು ಮದ್ವೆ ಮುರಿದ ವಧು!

    ವರ ನೀರಿನ ಗ್ಲಾಸ್ ಎತ್ತಲಿಲ್ಲ ಎಂದು ಮದ್ವೆ ಮುರಿದ ವಧು!

    ಲಕ್ನೌ: ವರ ನೀರಿನ ಗ್ಲಾಸ್ ಎತ್ತಲಿಲ್ಲ ಎಂದು ವಧು ಮದುವೆ ಮುರಿದ ಅಚ್ಚರಿಯ ಘಟನೆ ಉತ್ತರ ಪ್ರದೇಶದ ಲಕ್ಕೀಂಪುರದ ಲೇರಿಯಲ್ಲಿ ನಡೆದಿದೆ.

    ವಧುವಿನ ತಂದೆ ತನ್ನ ಮಗಳ ಮದುವೆಯನ್ನು ಮಿತೌಲಿ ಗ್ರಾಮದ ಯುವಕನೊಂದಿಗೆ ನಿಶ್ಚಯ ಮಾಡಿದ್ದರು. ಗುರುವಾರ ಈ ಜೋಡಿಯ ನಿಶ್ಚಿತಾರ್ಥ ಕೂಡ ನಡೆದಿತ್ತು. ಮದುವೆ ದಿನ ವರನ ಕುಟುಂಬದವರು ಮೆರವಣಿಗೆ ಮೂಲಕ ಮದುವೆ ನಡೆಯುವ ಸ್ಥಳಕ್ಕೆ ಆಗಮಿಸಿದ್ದರು.

    ಈ ವೇಳೆ ಪೂಜೆಯ ಸಂದರ್ಭದಲ್ಲಿ ಪುರೋಹಿತರು ಗ್ಲಾಸ್ ಎತ್ತಿಕೊಂಡು ನೀರನ್ನು ಸಿಂಪಡಿಸಲು ಹೇಳಿದ್ದಾರೆ. ಆದರೆ ವರನಿಗೆ ಗ್ಲಾಸ್ ಎತ್ತಲು ಸಾಧ್ಯವಾಗಲಿಲ್ಲ. ವರನ ಈ ವರ್ತನೆ ಕಂಡು ಅಲ್ಲಿದ್ದ ಮಹಿಳೆಯರಿಗೆ ಅನುಮಾನ ಬಂದಿದೆ. ಬಳಿಕ ವರನನ್ನು ಮನೆಯ ಒಳಗೆ ಕರೆಸಿಕೊಂಡರು.

    ಮನೆಯ ಒಳಗೆ ಹೋಗಿದ್ದ ತಕ್ಷಣ ವಧುವಿನ ಕಡೆಯವರು ಮತ್ತೆ ನೀರಿನ ಗ್ಲಾಸ್ ಎತ್ತಲು ವರನಿಗೆ ಹೇಳಿದ್ದಾರೆ. ವರ ನೀರಿನ ಗ್ಲಾಸ್ ಎತ್ತಲು ಪ್ರಯತ್ನಿಸಿದಾಗ ಆತನ ಕೈ ನಡುಗಿದೆ. ಅಲ್ಲದೆ ಆತನಿಗೆ ಗ್ಲಾಸ್ ಎತ್ತಲು ಸಾಧ್ಯವಾಗಲಿಲ್ಲ. ಇದನ್ನು ನೋಡಿದ ವಧು ಆತನನ್ನು ಮದುವೆಯಾಗಲು ನಿರಾಕರಿಸಿದ್ದಳು.

    ವಧು ಈ ಮದುವೆಯನ್ನು ನಿರಾಕರಿಸುತ್ತಿದ್ದಂತೆ ವರನ ಕುಟುಂಬದವರು ಜಗಳ ಶುರು ಮಾಡಿದ್ದಾರೆ. ಇದರಿಂದ ಭಯಗೊಂಡ ವಧುವಿನ ತಂದೆ ಉತ್ತರಪ್ರದೇಶದ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕಡೆಯವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದ್ದಾರೆ.

    ಮಾತುಕತೆಯ ಬಳಿಕ ಪೊಲೀಸರು ವಧುವನ್ನು ಠಾಣೆಗೆ ಕರೆಸಿ ಮಾತನಾಡಿದ್ದರು. ಈ ವೇಳೆ ವಧು ಮದುವೆ ಆಗುವುದಕ್ಕೆ ನಿರಾಕರಿಸಿದಳು. ಈ ವೇಳೆ ಪೊಲೀಸರು ಸಂಧಾನ ಮಾಡಲು ಯತ್ನಿಸಿದರು. ಆದರೆ ಎರಡೂ ಕುಟುಂಬದವರು ರಾಜಿಗೆ ಒಪ್ಪಲಿಲ್ಲ. ಮದುವೆಗೆ ಕೊಟ್ಟ ತಮ್ಮ ತಮ್ಮ ವಸ್ತುಗಳನ್ನು ಇಬ್ಬರೂ ಪರಸ್ಪರ ಹಿಂದಿರುಗಿಸಿಕೊಂಡರು.

    ವರನ ಒಂದು ಕೈ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಅಲ್ಲದೆ ಆತನಿಗೆ ತೂಕದ ವಸ್ತು ಎತ್ತಲು ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿ ವಧು ಆತನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ ಎಂಬುದಾಗಿ ವರದಿಯಾಗಿದೆ.

  • ಬಸ್, ಟ್ರಕ್ ಮುಖಾಮುಖಿ ಡಿಕ್ಕಿ- 7 ಸಾವು, 30 ಮಂದಿಗೆ ಗಾಯ

    ಬಸ್, ಟ್ರಕ್ ಮುಖಾಮುಖಿ ಡಿಕ್ಕಿ- 7 ಸಾವು, 30 ಮಂದಿಗೆ ಗಾಯ

    ಲಕ್ನೋ: ಬಸ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿಯಾಗಿ 7 ಜನ ಸ್ಥಳದಲ್ಲೇ ಮೃತಪಟ್ಟು, 30 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಮೈನ್‍ಪುರಿ ಜಿಲ್ಲೆಯಲ್ಲಿ ನಡೆದಿದೆ.

    ಅಪಘಾತದಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾದ ಕಾರಣ ಮೃತರ ದೇಹಗಳನ್ನು ಹೊರ ತರಲು ಕಷ್ಟವಾಗಿತ್ತು. ಹೀಗಾಗಿ ಕ್ರೇನ್ ಸಹಾಯದಿಂದ ಮೃತದೇಹಗಳನ್ನು ಹೊರ ತೆಗೆಯಲಾಯಿತು ಎಂದು ಪೊಲೀಸರು ಹೇಳಿದರು.

    ಆಗ್ರಾ- ಲಕ್ನೋ ಎಕ್ಸ್ ಪ್ರೆಸ್ ವೇಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ವಾರಾಣಾಸಿಯಿಂದ ನವದೆಹಲಿಗೆ ಹೋಗುತ್ತಿತ್ತು. ಈ ವೇಳೆ ಓವರ್ ಟೇಕ್ ಮಾಡಲು ಹೋದಾಗ ಎದುರುಗಡೆಯಿಂದ ಟ್ರಕ್ ಬಂದಿದೆ. ಈ ಸಂದರ್ಭದಲ್ಲಿ ಬಸ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿಯಾಗಿದೆ.

    ಈ ಅಪಘಾತದಲ್ಲಿ ಬಸ್ ಚಾಲಕ ಮೃತಪಟ್ಟಿದ್ದಾನೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಉತ್ತರ ಪ್ರದೇಶದ ಸಾಯಿಫೈನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

  • ಅಗ್ನಿ ಅವಘಡದಿಂದ 30 ಜನರ ಪ್ರಾಣ ಉಳಿಸಿ ಮೃತಪಟ್ಟ ಸಾಕುನಾಯಿ

    ಅಗ್ನಿ ಅವಘಡದಿಂದ 30 ಜನರ ಪ್ರಾಣ ಉಳಿಸಿ ಮೃತಪಟ್ಟ ಸಾಕುನಾಯಿ

    ಲಕ್ನೌ: ಸಾಕುನಾಯಿ ಅಗ್ನಿ ಅವಘಡದಿಂದ 30 ಜನರ ಪ್ರಾಣ ಉಳಿಸಿ ಮೃತಪಟ್ಟ ಘಟನೆಯೊಂದು ಶುಕ್ರವಾರ ರಾತ್ರಿ ಉತ್ತರ ಪ್ರದೇಶದ ಬಾಂದಾದಲ್ಲಿ ನಡೆದಿದೆ.

    ಬಾಂದಾ ಜಿಲ್ಲೆಯ ಲಖನ್ ಕಾಲೋನಿಯ ಬಹುಮಹಡಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೇಸ್‍ಮೆಂಟ್ ಹಾಗೂ ಮೊದಲನೇ ಮಹಡಿಯಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಶೋರೂಮಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಅದೇ ಕಟ್ಟಡದ ಮೂರನೇ ಹಾಗೂ ನಾಲ್ಕನೇ ಮಹಡಿಯಲ್ಲಿ ಕುಟುಂಬಗಳು ವಾಸಿಸುತ್ತಿತ್ತು.

    ಸಾಕುನಾಯಿ ಕೂಡ ಅದೇ ಕಟ್ಟಡದಲ್ಲಿ ವಾಸವಾಗಿತ್ತು. ಅಗ್ನಿ ಅವಘಡ ಸಂಭವಿಸಿದನ್ನು ನೋಡಿದ ನಾಯಿ ಜೋರಾಗಿ ಬೊಗಳಲು ಶುರು ಮಾಡಿತ್ತು. ಆಗ ಆ ಬಿಲ್ಡಿಂಗ್‍ನಲ್ಲಿದ್ದ ಜನರು ಸುರಕ್ಷಿತವಾಗಿ ಅಲ್ಲಿಂದ ಹೊರ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

    ನಾಯಿ ಮೃತಪಡುವ ಕೊನೆ ಕ್ಷಣದವರೆಗೂ ಎಲ್ಲರ ಪ್ರಾಣ ಉಳಿಸಿತ್ತು. ಆದರೆ ನಾಯಿ ಸ್ವತಃ ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅಗ್ನಿ ಅವಘಡ ಆದಾಗ ನಾಯಿಯನ್ನು ಕಟ್ಟಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿದ್ದು, ಪರಿಣಾಮ ಅದು ಮೃತಪಟ್ಟಿದೆ.

    ನಾಯಿ ಜೋರಾಗಿ ಬೊಗಳಿ ನಮ್ಮನ್ನು ಎಚ್ಚರಗೊಳಿಸಿತು. ನಾಯಿ ಜೋರಾಗಿ ಬೊಗಳಿ ಎಲ್ಲರ ಪ್ರಾಣ ಉಳಿಸಿಕೊಳ್ಳಲು ಸಹಾಯ ಮಾಡಿತ್ತು. ಈ ಕಟ್ಟಡದಲ್ಲಿದ್ದ ಜನರು ಸುರಕ್ಷಿತವಾಗಿ ಹೊರ ಬಂದರು. ಆದರೆ ಸಿಲಿಂಡರ್ ಬ್ಲಾಸ್ಟ್ ಆಗಿ ನಾಯಿ ಮೃತಪಟ್ಟಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

    ಈ ಕಟ್ಟಡದ ಬೇಸ್‍ಮೆಂಟ್‍ನಲ್ಲಿ ಶಾರ್ಟ್ ಸರ್ಕ್ಯೂಟ್‍ ಆದ ಕಾರಣ ಅಗ್ನಿ ಅವಘಡ ಸಂಭವಿಸಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ವಿನಯ್ ಕುಮಾರ್ ತಿಳಿಸಿದ್ದಾರೆ. ಅಲ್ಲದೆ ಕಟ್ಟಡದಲ್ಲಿದ್ದ ಸಿಲಿಂಡರ್‍ಗಳು ಬ್ಲಾಸ್ಟ್ ಆದ ಪರಿಣಾಮ ಹತ್ತಿರದಲ್ಲಿದ್ದ ನಾಲ್ಕು ಕಟ್ಟಡಗಳು ಧ್ವಂಸವಾಗಿದೆ.

  • ವೇದಿಕೆ ಕುಸಿದು ಬಿಜೆಪಿ ನಾಯಕರಿಗೆ ಗಾಯ: ವಿಡಿಯೋ ವೈರಲ್

    ವೇದಿಕೆ ಕುಸಿದು ಬಿಜೆಪಿ ನಾಯಕರಿಗೆ ಗಾಯ: ವಿಡಿಯೋ ವೈರಲ್

    ಲಕ್ನೋ: ಬಿಜೆಪಿ ಆಯೋಜಿಸಿದ್ದ ‘ಹೋಳಿ ಮಿಲನ್” ಕಾರ್ಯಕ್ರಮದ ವೇಳೆ ವೇದಿಕೆ ಕುಸಿದು ಬಿದ್ದ ಘಟನೆ ಶುಕ್ರವಾರ ಉತ್ತರ ಪ್ರದೇಶದ ಸಂಭಾಲ್‍ನಲ್ಲಿ ನಡೆದಿದೆ.

    ಈ ಘಟನೆಯಲ್ಲಿ ಬಿಜೆಪಿಯ ಕಿಸಾನ್ ಮೋರ್ಚಾದ ನಾಯಕ ಅವಿದೇಶ್ ಯಾದವ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ವೇದಿಕೆ ಕುಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಈ ಕಾರ್ಯಕ್ರಮ ನಡೆಯುವಾಗ ಹಲವು ಜನ ವೇದಿಕೆ ಮೇಲೆ ಹತ್ತಿದ್ದಾರೆ. ಪರಿಣಾಮ ಭಾರ ಹೆಚ್ಚಾಗಿ ವೇದಿಕೆ ಕುಸಿದು ಬಿದ್ದಿದೆ. ಈ ಘಟನೆಯಿಂದ ಹಲವರಿಗೆ ಗಾಯಗಳಾಗಿದ್ದು, ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಈ ಘಟನೆಯನ್ನು ಅಲ್ಲೇ ಇದ್ದವರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

  • ವಿಡಿಯೋ ನೋಡಿಕೊಂಡು ಮಗುವಿಗೆ ಜನ್ಮ – ಅವಿವಾಹಿತೆ, ಮಗು ಸಾವು

    ವಿಡಿಯೋ ನೋಡಿಕೊಂಡು ಮಗುವಿಗೆ ಜನ್ಮ – ಅವಿವಾಹಿತೆ, ಮಗು ಸಾವು

    ಲಕ್ನೋ: ಅವಿವಾಹಿತೆ ಗರ್ಭಿಣಿಯೊಬ್ಬಳು ಯೂಟ್ಯೂಬ್‍ನಲ್ಲಿ ವಿಡಿಯೋ ನೋಡಿ ಮಗುವಿಗೆ ಜನ್ಮ ನೀಡಲು ಮುಂದಾದಾಗ ತೀವ್ರ ರಕ್ತಸ್ರಾವದಿಂದ ತಾಯಿ ಮತ್ತು ಮಗು ಮೃತಪಟ್ಟಿರುವ ಘಟನೆ ಸೋಮವಾರ ಉತ್ತರಪ್ರದೇಶದ ಗೋರಖ್‍ಪುರದಲ್ಲಿ ನಡೆದಿದೆ.

    ಯುವತಿ ಮಗುವಿಗೆ ಜನ್ಮ ನೀಡುವಾಗ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾಳೆ. ಈ ವೇಳೆ ಮನೆಯ ಮಾಲೀಕ ಹಾಗೂ ಅಕ್ಕಪಕ್ಕದ ಮನೆಯವರು ಯುವತಿಯ ರೂಮಿನ ಹೊರಗೆ ರಕ್ತವನ್ನು ನೋಡಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸುವಾಗ ಯುವತಿಯ ಮೊಬೈಲಿನಲ್ಲಿ ವಿಡಿಯೋ ಪ್ಲೇ ಆಗುತ್ತಿತ್ತು.

    ಪೊಲೀಸರ ಪ್ರಕಾರ ಯುವತಿ ಬಹರಾಯಿಚ್‍ನಲ್ಲಿ ವಾಸಿಸುತ್ತಿದ್ದಳು. ನಾಲ್ಕು ದಿನಗಳ ಹಿಂದೆಷ್ಟೇ ಆಕೆ ಗೋರಖ್‍ಪುದ ರವಿ ಉಪಾಧ್ಯಾಯ್ ಅವರ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಕೆಲವು ದಿನಗಳಲ್ಲಿ ನನ್ನ ತಾಯಿ ನನ್ನ ಜೊತೆ ವಾಸಿಸಲು ಬರುತ್ತಾರೆ ಎಂದು ಯುವತಿ ಮನೆ ಮಾಲೀಕನಿಗೆ ಹೇಳಿದ್ದಳು.

    ಯುವತಿಯ ಕುಟುಂಬದವರು ಆಕೆಗೆ ಗರ್ಭಪಾತ ಮಾಡಿಸಬೇಕು ಎಂದುಕೊಂಡಿದ್ದರು. ಆದರೆ ಯುವತಿ ಇದಕ್ಕೆ ಒಪ್ಪಲಿಲ್ಲ. ಸಮಾಜಕ್ಕೆ ಹೆದರಿ ಯುವತಿ ಕೆಲವು ದಿನಗಳ ಹಿಂದಷ್ಟೇ ಬಚರಾಯಿಚ್‍ನಿಂದ ಗೋರಖ್‍ಪುರಕ್ಕೆ ಬಂದಿದ್ದಳು. ಗೋರಖ್‍ಪುರಕ್ಕೆ ಬಂದ ನಂತರ ಯುವತಿ ಬೇರೆ ಬೇರೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು.

    ಪೊಲೀಸರು ಯುವತಿಯ ಮೊಬೈಲ್ ಪರಿಶೀಲಿಸಿ ಆಕೆಯ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಪೋಷಕರಿಗೆ ಕರೆ ಮಾಡಿದ್ದಾಗ ಯುವತಿ ಅವಿವಾಹಿತೆ ಎಂಬುದು ತಿಳಿದುಬಂದಿದೆ. ಸಾಕ್ಷಿಗಳು ನಾಶ ಆಗಬಾರದೆಂದು ಪೊಲೀಸರು ಯುವತಿ ಇದ್ದ ಕೊಠಡಿಯನ್ನು ಸೀಲ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತವರು ಮನೆಯಲ್ಲಿ 10 ನಿಮಿಷ ತಡ ಮಾಡಿದಕ್ಕೆ ‘ತಲಾಖ್’ ನೀಡಿದ ಪತಿ

    ತವರು ಮನೆಯಲ್ಲಿ 10 ನಿಮಿಷ ತಡ ಮಾಡಿದಕ್ಕೆ ‘ತಲಾಖ್’ ನೀಡಿದ ಪತಿ

    ಲಕ್ನೌ: ಪತ್ನಿ ತನ್ನ ತವರು ಮನೆಯಲ್ಲಿ 10 ನಿಮಿಷ ತಡ ಮಾಡಿದ್ದಕ್ಕೆ ಪತಿ ಆಕೆಗೆ ಫೋನಿನಲ್ಲೇ ತ್ರಿವಳಿ ತಲಾಖ್ ನೀಡಿದ ಘಟನೆ ಉತ್ತರ ಪ್ರದೇಶದ ಈಟಾದಲ್ಲಿ ನಡೆದಿದೆ.

    ಅಫ್‍ರೋಜ್ ಪತ್ನಿ ತಲಾಖ್ ನೀಡಿದ ಪತಿ. ಅಫ್‍ರೋಜ್ ಹೈದರಾಬಾದ್‍ನಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಒಂದೂವರೆ ವರ್ಷದ ಹಿಂದೆ ಅಫ್‍ರೋಜ್, ಶಂಬುಲ್ ಬೇಗಂಳನ್ನು ಮದುವೆ ಆಗಿದ್ದನು. ಮದುವೆಯ ನಂತರ ಆತ ವರದಕ್ಷಿಣೆ ನೀಡುವಂತೆ ಪತ್ನಿಗೆ ಕಿರುಕುಳ ನೀಡಿದ್ದಾನೆ.

    ಶಂಬುಲ್ ಬೇಗಂ ಜನವರಿ 18ರಂದು ಅನಾರೋಗ್ಯದಿಂದ ಬಳುತ್ತಿದ್ದ ತನ್ನ ಅಜ್ಜಿಯನ್ನು ನೋಡಲು ತವರು ಮನೆಗೆ ಹೋಗಿದ್ದಳು. ಅಫ್‍ರೋಜ್ ತನ್ನ ಪತ್ನಿ ತವರು ಮನೆಗೆ ಹೋಗಲು ಕೇವಲ 30 ನಿಮಿಷ ಕಾಲಾವಕಾಶ ನೀಡಿದ್ದನು. ಆದರೆ ಶಂಬುಲ್ 10 ನಿಮಿಷ ತಡ ಮಾಡಿದ್ದಾಳೆ. ಆಗ ಅಫ್‍ರೋಜ್ ತನ್ನ ಸಹೋದರನನ್ನು ಪತ್ನಿಯ ತವರು ಮನೆಗೆ ಕಳುಹಿಸಿ ಅಲ್ಲಿ ಶಂಬುಲ್ ಜೊತೆ ಫೋನಿನಲ್ಲಿ ಮಾತನಾಡಿಸುವುದಾಗಿ ಹೇಳಿದ್ದಾನೆ. ಬಳಿಕ ಅಫ್‍ರೋಜ್ ಫೋನಿನಲ್ಲಿ ತನ್ನ ಪತ್ನಿಗೆ ತಲಾಖ್ ನೀಡಿದ್ದಾನೆ.

    ಒಂದೂವರೆ ವರ್ಷದ ಹಿಂದೆ ನನ್ನ ಪೋಷಕರು ಶಂಬುಲ್ ಜೊತೆ ಮದುವೆ ಮಾಡಿಸಿದ್ದರು. ಮದುವೆ ಆದ ದಿನದಿಂದ ಈವರೆಗೂ ನನ್ನ ಪತಿ ಹಾಗೂ ಆತನ ಮನೆಯವರು ನನಗೆ ತವರು ಮನೆಯಿಂದ ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದಾರೆ. ಆದರೆ ನನ್ನ ತವರು ಮನೆಯವರು ವರದಕ್ಷಿಣೆ ನೀಡಲು ನಿರಾಕರಿಸಿದ್ದರು. ಹಾಗಾಗಿ ನನ್ನ ಪತಿ ನನಗೆ ತವರು ಮನೆಗೆ ಹೋಗಲು ಅನುಮತಿ ನೀಡುತ್ತಿರಲಿಲ್ಲ ಎಂದು ಶಂಬುಲ್ ಪೊಲೀಸರ ಬಳಿ ಹೇಳಿದ್ದಾಳೆ.

    ಫೋನಿನಲ್ಲಿ ತಲಾಖ್ ಪಡೆದ ಬಳಿಕ ನಾನು ನನ್ನ ಪತಿಯ ಮನೆಗೆ ಹೋದೆ. ಅಲ್ಲಿ ನನ್ನ ಪತಿ ಹಾಗೂ ಆತನ ಕುಟುಂಬದವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಂಬುಲ್ ಹೇಳಿದ್ದಾಳೆ. ಪೊಲೀಸರು ಈ ಪ್ರಕರಣವನ್ನು ತಲಾಖ್ ಎಂದು ದಾಖಲಿಸಿಲ್ಲ. ವರದಕ್ಷಿಣೆ ಕಿರುಕುಳ ಎಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸ್ ಅಧಿಕಾರಿ ರೋಮಸಿಯಾ ಮೌರ್ಯ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಯಸಿ, ಆಕೆಯ ಸಹೋದರಿಯನ್ನೂ ಕೊಂದ ಎಂಜಿನಿಯರ್!

    ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಯಸಿ, ಆಕೆಯ ಸಹೋದರಿಯನ್ನೂ ಕೊಂದ ಎಂಜಿನಿಯರ್!

    ಲಕ್ನೌ: ಪ್ರೀತಿಯನ್ನು ನಿರಾಕರಿಸಿದಕ್ಕೆ ಎಂಜಿನಿಯರ್ ಒಬ್ಬ ತನ್ನ ಪ್ರೇಯಸಿಯನ್ನು ಕೊಂದು ನಂತರ ಆಕೆಯ ಸಹೋದರಿಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್‍ನಲ್ಲಿ ನಡೆದಿದೆ.

    ಅಂಕಿತ್ ಕೊಲೆ ಮಾಡಿದ ಆರೋಪಿಯಾಗಿದ್ದು, ಶೀಲು ಮತ್ತು ಶಿವಾನಿ ಮೃತ ದುರ್ದೈವಿಗಳು. ಅಂಕಿತ್ ದಾಕೋಲಿ ಗ್ರಾಮದವನಾಗಿದ್ದು, ಪಕ್ಕದ ಗ್ರಾಮದ ಬಾಪುರ್ ನ ಶೀಲುನನ್ನು ಬೆಂಕಿ ಹಾಕಿ ಸುಟ್ಟಿದ್ದಾನೆ. ಅದನ್ನು ನೋಡಿದ ಆಕೆಯ ಸಹೋದರಿಯನ್ನು ಕೂಡ ಬೆಂಕಿ ಹಚ್ಚಿ ಸುಟ್ಟಿದ್ದಾನೆ.

    ಅಂಕಿತ್ ಶೀಲು ಮನೆಗೆ ತೆರಳಿ ನನ್ನನ್ನು ಮದುವೆಯಾಗುವಂತೆ ಕೇಳಿ ಕೊಂಡಿದ್ದಾನೆ. ಆದರೆ ಶೀಲು ಆತನ ಪ್ರೀತಿಯನ್ನು ನಿರಾಕರಿಸಿದ್ದಾರೆ. ಪ್ರೀತಿ ನಿರಾಕರಿಸಿದ್ದಕ್ಕೆ ಅಂಕಿತ್ ಆಕೆಯನ್ನು ಕೊಲೆ ಮಾಡಿದ್ದಾನೆ. ಶೀಲು ಕೊಲೆಯನ್ನು ಪ್ರತ್ಯಕ್ಷವಾಗಿ ನೋಡಿದ ಶಿವಾನಿಯನ್ನು ಕೂಡ ಬೈಕಿನ ಕ್ಲಚ್ ವೈರ್‍ನಿಂದ ಕೊಲೆ ಮಾಡಿದ್ದಾನೆ. ನಂತರ ತನ್ನ ಬೈಕಿನಲ್ಲಿದ್ದ ಪೆಟ್ರೋಲ್ ಹೊರತೆಗೆದು ಅವರ ದೇಹವನ್ನು ಸುಟ್ಟು ಹಾಕಿದ್ದಾನೆ ಎಂದು ಎಸ್‍ಎಸ್‍ಪಿ ಮುನಿರಾಜ್. ಜಿ ಹೇಳಿದ್ದಾರೆ.

    ಘಟನೆ ನಡೆದ 24 ಗಂಟೆಯೊಳಗೆ ಆರೋಪಿ ಅಂಕಿತ್ ನನ್ನು ಪೊಲೀಸರು ಸೆರೆ ಹಿಡಿದಿದ್ದು, ಆತನ ಮೊಬೈಲ್ ವಶ ಪಡಿಸಿಕೊಂಡಿದ್ದಾರೆ. ಈ ಘಟನೆ ಸಂಬಂಧ ಪೊಲೀಸರಿಗೆ ಇನ್ನೂ ಕೆಲವರ ಮೇಲೆ ಅನುಮಾನವಿದ್ದು, ಅವರ ಮೇಲೂ ಕಣ್ಣಿಟ್ಟಿದ್ದಾರೆ. ಕೊಲೆ ನಡೆದ ದಿನ ಶೀಲು ಮನೆಯಲ್ಲೇ ಇದ್ದೆ ಹಾಗೂ ಆಕೆಯ ಸಹೋದರಿಯನ್ನು ನಾನೇ ಕೊಂದೇ ಎಂದು ಅಂಕಿತ್ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

  • ನವರಾತ್ರಿ, ಮೊಹರಂ ಆಚರಣೆಗೆ ಷರತ್ತುಗಳನ್ನು ಹಾಕಿದ ಉತ್ತರಪ್ರದೇಶ ಸಿಎಂ

    ನವರಾತ್ರಿ, ಮೊಹರಂ ಆಚರಣೆಗೆ ಷರತ್ತುಗಳನ್ನು ಹಾಕಿದ ಉತ್ತರಪ್ರದೇಶ ಸಿಎಂ

    ಲಕ್ನೌ: ಸೆಪ್ಟೆಂಬರ್ 21 ಇದೇ ಗುರುವಾರದಿಂದ ನವರಾತ್ರಿ ಹಬ್ಬ ಆರಂಭವಾಗಲಿದೆ. ಇದೇ ಹೊತ್ತಲ್ಲಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ದುರ್ಗಾ ಪೂಜೆ, ದಸರಾ ಹಾಗೂ ಮೊಹರಂ ಆಚರಣೆಗೆ ಹಲವು ಷರತ್ತುಗಳನ್ನ ವಿಧಿಸಿದೆ.

    ದುರ್ಗಾ ಪೂಜೆ ಮೆರವಣಿಗೆ ವೇಳೆ ದುರ್ಗಾ ಮಾತೆಯ ಮೂರ್ತಿ ಹಾಗೂ ಮೊಹರಂನ ಮೆರವಣಿಗೆ ವೇಳೆ ಹೊತ್ತೊಯ್ಯಲಾಗುವ ತಝಿಯಾಗಳು ಇಷ್ಟೇ ಎತ್ತರ ಇರಬೇಕೆಂದು ನಿರ್ಬಂಧ ಹೇರಲಾಗಿದೆ. ಹಾಗೂ ಡಿಜೆ(ಹಾಡು-ನೃತ್ಯಕ್ಕೂ) ನಿಷೇಧ ಹೇರಿದ್ದಾರೆ. ಧ್ವನಿವರ್ಧಕಗಳ ಬಳಕೆಗೆ ಸರ್ಕಾರದ ಅನುಮತಿ ಕಡ್ಡಾಯವಾಗಿ ಪಡೆಯಬೇಕು. ಮೊದಲೇ ನಿಗದಿಪಡಿಸಿದ ಮಾರ್ಗ ಹೊರತುಪಡಿಸಿ ಬೇರೆ ಮಾರ್ಗದಲ್ಲಿ ಮೆರವಣಿಗೆ ಸಾಗುವಂತಿಲ್ಲ ಎಂದು ಷರತ್ತು ವಿಧಿಸಲಾಗಿದೆ.

    ಸೆಪ್ಟೆಂಬರ್ 26 ರಂದು 4 ದಿನಗಳ ಕಾಲ ದುರ್ಗಾ ಪೂಜೆ ನಡೆಯಲಿದೆ. ಸೆಪ್ಟೆಂಬರ್ 30 ರಂದು ವಿಜಯದಶಮಿ ಆಚರಿಸಲಾಗುತ್ತದೆ. ಹಾಗೇ ಆಕ್ಟೋಬರ್ 1ರಂದು ಮೊಹರಂ ಇದೆ. ಧ್ವನಿ ವರ್ಧಕಗಳ ಬಳಕೆ ಹಾಗೂ ಮೆರವಣಿಗೆ ಹೋಗುವ ಮಾರ್ಗದ ವಿಚಾರವಾಗಿ ಈ ಹಿಂದೆ ಹಿಂದೂ ಹಾಗೂ ಮುಸ್ಲಿಮರ ನಡುವೆ ಗಲಾಟೆ ಆದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ದುರ್ಗಾ ಮಾತೆಯ ಮೆರವಣಿಗೆ ಹಾಗೂ ಮೊಹರಂ ಮೆರವಣಿಗೆ ಸಾಗುವ ಮಾರ್ಗವನ್ನು ರಾಜ್ಯ ಸರ್ಕಾರವೇ ನಿರ್ಧರಿಸಲಿದೆ.

    ದಸರಾ ಹಬ್ಬ ಕೊನೆಯಾದ ಮಾರನೇ ದಿನವೇ ಮೊಹರಂ ಇರೋದು ವಿಶೇಷ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡೋ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ.