Tag: ಲಕ್ಷದೀಪೋತ್ಸವ

  • Ramanagara| ಗೌಡಗೆರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ ಸಂಭ್ರಮ – ಭಕ್ತರ ದಂಡು

    Ramanagara| ಗೌಡಗೆರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ ಸಂಭ್ರಮ – ಭಕ್ತರ ದಂಡು

    ರಾಮನಗರ: ಚನ್ನಪಟ್ಟಣ (Channapatna) ತಾಲೂಕಿನ ಗೌಡಗೆರೆಯ (Gowdagere) ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಇಂದು ಲಕ್ಷದೀಪೋತ್ಸವ (Lakshadeepotsava) ಕಾರ್ಯಕ್ರಮ ಹಿನ್ನೆಲೆ ಕ್ಷೇತ್ರಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಹರಿದುಬರುತ್ತಿದ್ದಾರೆ.

    ಸುಮಾರು 60 ಅಡಿ ಎತ್ತರದ ಚಾಮುಂಡೇಶ್ವರಿ ಪಂಚಲೋಹ ವಿಗ್ರಹ ಜನರನ್ನು ಕ್ಷೇತ್ರದತ್ತ ಆಕರ್ಷಿಸುತ್ತಿದೆ. ಇಂದು ಸಂಜೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ ಹಾಗೂ ಸಿಡಿಮದ್ದುಗಳ ಪ್ರದರ್ಶನ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಬೆಳಗ್ಗೆಯಿಂದಲೂ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗಿದೆ. ಇದನ್ನೂ ಓದಿ: ಶಿರಸಿ, ಕುಮಟಾದ ಪಶ್ಚಿಮ ಘಟ್ಟ ಭಾಗದಲ್ಲಿ ಭೂಕಂಪನ – ಭಯಭೀತರಾದ ಜನ

    ಸರತಿ ಸಾಲಿನಲ್ಲಿ ನಿಂತು ಭಕ್ತಾದಿಗಳು ಚಾಮುಂಡೇಶ್ವರಿ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಿದ್ದಾರೆ. ಕ್ಷೇತ್ರದ ಧರ್ಮಾಧಿಕಾರಿ ಮಲ್ಲೇಶ್ ಗುರೂಜಿ ನೇತೃತ್ವದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮ ಜರುಗಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಕೋಲಾರಕ್ಕೆ ಈ ಬಾರಿ ಮಂತ್ರಿ ಸ್ಥಾನ ನೀಡಲೇಬೇಕು, ನಾನು ಅರ್ಹನಿದ್ದೇನೆ: ಕೆವೈ ನಂಜೇಗೌಡ

  • ಧರ್ಮಸ್ಥಳ ಲಕ್ಷದೀಪೋತ್ಸವ – ಭಕ್ತರನ್ನು ಕೈಬೀಸಿ ಕರೀತಿದೆ ಶ್ರೀಕ್ಷೇತ್ರ

    ಧರ್ಮಸ್ಥಳ ಲಕ್ಷದೀಪೋತ್ಸವ – ಭಕ್ತರನ್ನು ಕೈಬೀಸಿ ಕರೀತಿದೆ ಶ್ರೀಕ್ಷೇತ್ರ

    ಮಂಗಳೂರು: ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಧರ್ಮಸ್ಥಳ ಶ್ರೀಮಂಜುನಾಥ ದೇವರ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಆರಂಭಗೊಂಡಿದ್ದು ಶ್ರೀಕ್ಷೇತ್ರ ಆಕರ್ಷಕವಾಗಿ ಕಂಗೊಳಿಸುತ್ತಿದೆ.

    ದೀಪೋತ್ಸವದ ಅಂಗವಾಗಿ ಇಡೀ ಧರ್ಮಸ್ಥಳವೇ ವಿದ್ಯುದೀಪಗಳಿಂದ ಶೃಂಗಾರಗೊಂಡಿದ್ದು, ಭಕ್ತರನ್ನು ಕೈಬೀಸಿ ಕರೆಯುತ್ತಿದೆ. ದೇವಸ್ಥಾನ, ಹೆಗ್ಗಡೆಯವರ ಬೀಡಿನ ಮನೆ, ಪ್ರವೇಶ ದ್ವಾರ, ಉದ್ಯಾನ, ವಸತಿ ಛತ್ರಗಳು,ಬಾಹುಬಲಿ ಬೆಟ್ಟ ಸೇರಿದಂತೆ ಎಲ್ಲೆಡೆ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.

    ಡಿ.14ರ ಸೋಮವಾರ ರಾತ್ರಿ ಶ್ರೀಮಂಜುನಾಥ ಸ್ವಾಮಿಗೆ ಲಕ್ಷ ದೀಪೋತ್ಸವದ ವಿಶೇಷ ಪೂಜೆ ನಡೆಯಲಿದೆ. ದೀಪೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳವೂ ಪ್ರತೀ ವರ್ಷದಂತೆ ನಡೆಯಲಿದ್ದು, ಈ ಬಾರಿ ವಸ್ತು ಪ್ರದರ್ಶನವನ್ನು ರದ್ದು ಪಡಿಸಲಾಗಿದೆ. ಉಳಿದಂತೆ ಎಲ್ಲಾ ಕಾರ್ಯಕ್ರಮಗಳೂ ಕೋವಿಡ್ ನಿಯಮದಂತೆ ನಡೆಯಲಿದೆ.

  • ಇಂದಿನಿಂದ ಡಿ.14ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

    ಇಂದಿನಿಂದ ಡಿ.14ರ ವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

    – ವಿದ್ಯುದ್ದೀಪಗಳಿಂದ ಭಕ್ತರನ್ನು ಸೆಳೀತಿದೆ ಶ್ರೀಕ್ಷೇತ್ರ

    ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಇಂದಿನಿಂದ ಆರಂಭಗೊಳ್ಳಲಿದೆ.

    ಹೌದು. ಇಂದಿನಿಂದ 5 ದಿನ ಅಂದರೆ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿಛತ್ರಗಳು, ಉದ್ಯಾನ, ಪ್ರವೇಶದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದ್ದು, ಶ್ರೀಕ್ಷೇತ್ರ ಮದುಮಗಳಂತೆ ಅಲಂಕಾರಗೊಂಡಿದೆ. ಈ ಮೂಲಕ ಭಕ್ತರನ್ನು ಸೆಳೆಯುತ್ತಿದೆ.

    ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಯುಟ್ಯೂಬ್ ಮತ್ತು ಫೇಸ್‍ಬುಕ್‍ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರ ನಡೆಯಲಿದೆ. ಈ ಬಾರಿ ವಸ್ತು ಪ್ರದರ್ಶನ ರದ್ದುಗೊಳಿಸಲಾಗಿದೆ. ಕಾರ್ಯಕ್ರಮಗಳನ್ನು ಮನೆಯಲ್ಲೇ ಕುಳಿತು ನೋಡಬೇಕು ಎಂದು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಈ ಹಿಂದೆಯೇ ಭಕ್ತರಲ್ಲಿ ವಿನಂತಿಸಿಕೊಂಡಿದ್ದಾರೆ.

    ಡಿ.13 ರಂದು ಸರ್ವಧರ್ಮ ಸಮ್ಮೇಳನದ 88ನೇ ಅಧಿವೇಶನವನ್ನು ವಸತಿ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ. ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. 14ರಂದು ನಡೆಯುವ ಸಾಹಿತ್ಯ ಸಮ್ಮೇಳನವನ್ನು ಹಿರಿಯ ವಿದ್ವಾಂಸ ಡಾ.ಎಸ್ ರಂಗನಾಥ್ ಉದ್ಘಾಟಿಸಲಿದ್ದು, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ರಾತ್ರಿ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ.

    ಲಕ್ಷ ದೀಪೋತ್ಸವಕ್ಕೆ ನಾಡಿನ ಭಕ್ತರು ಪಾದೆಯಾತ್ರೆಯ ಮೂಲಕ ಬಂದು ಸೇವೆ ಮಾಡುತ್ತಾರೆ. ಅಲ್ಲದೆ ರೈತರು ತಾವು ಬೆಳೆದ ತರಕಾರಿ, ಹಣ್ಣುಹಂಪಲು, ಧಾನ್ಯಗಳನ್ನು ಕಾಣಿಕೆಯಾಗಿ ತಂದು ಒಪ್ಪಿಸುತ್ತಾರೆ. ಬೆಂಗಳೂರಿನ ವ್ಯಾಪಾರಿಗಳು ವಿವಿಧ ಹೂಗಳಿಂದ ಕ್ಷೇತ್ರವನ್ನು ಅಲಂಕರಿಸು ಮೂಲಕ ಸೇವೆ ಸಲ್ಲಿಸುತ್ತಿದ್ದಾರೆ.

  • ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ : ಇಂದು ಸರ್ವಧರ್ಮ, ನಾಳೆ ಸಾಹಿತ್ಯ ಸಮ್ಮೇಳನ

    ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ : ಇಂದು ಸರ್ವಧರ್ಮ, ನಾಳೆ ಸಾಹಿತ್ಯ ಸಮ್ಮೇಳನ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷ ನಡೆಯುವ ಲಕ್ಷ ದೀಪೋತ್ಸವವು ಈ ಬಾರಿಯೂ ಅದ್ಧೂರಿಯಾಗಿ ನಡೆಯುತ್ತಿದೆ.

    ಶ್ರೀ ಮಂಜುನಾಥ ಸ್ವಾಮಿಗೆ ದೀಪೋತ್ಸವ ಅತ್ಯಂತ ಪ್ರಿಯವಾದದ್ದು. ಆದರಿಂದ ಹಿಂದಿನ ಕಾಲದಿಂದಲೂ ಮಂಜುನಾಥನ ಸನ್ನಿಧಿಯ ಸುತ್ತಲೂ ಒಂದು ಲಕ್ಷ ದೀಪಗಳನ್ನು (ಹಣತೆಗಳನ್ನು) ಬೆಳಗುವ ಮೂಲಕ ಲಕ್ಷದೀಪೋತ್ಸವವನ್ನು ಆಚರಿಸುವುದು ಇಲ್ಲಿನ ಸಂಪ್ರದಾಯ. ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ದೀಪಗಳಿಂದಲೇ ದೇವಾಲಯವನ್ನು ಶೃಂಗರಿಸಲಾಗುತ್ತದೆ. ಹೀಗಾಗಿ ಧರ್ಮಸ್ಥಳ ಮಂಜುನಾಥನ ಸನ್ನಿಧಿ ವಿದ್ಯುತ್ ದೀಪಾಲಂಕಾರದಿಂದ ವೈಭವದಿಂದ ಕಂಗೊಳಿಸುತ್ತಿತ್ತು.

    ಕ್ಷೇತ್ರದಲ್ಲಿ ಎಲ್ಲಾ ಧಾರ್ಮಿಕ ವಿಧಿವಿಧಾನಗಳೂ ಶಾಸ್ತ್ರಬದ್ದವಾಗಿ ನೆರೆವೇರಿದ್ದು ಹಿಂದಿನ ಕಾಲದಲ್ಲಿ ಲಕ್ಷದೀಪೋತ್ಸವವಾಗುತ್ತಿದ್ದರೆ ಇದೀಗ ಲಕ್ಷಾಂತರ ದೀಪೋತ್ಸವ ನಡೆಯುತ್ತಿದೆ.

    ಪ್ರತಿವರ್ಷ ಕಾರ್ತಿಕ ಮಾಸದಂದು ಈ ಲಕ್ಷ ದೀಪೋತ್ಸವ ನಡೆಯುತ್ತಿದ್ದು, ಕ್ಷೇತ್ರದ ದೇವರಾದ ಮಂಜುನಾಥ ಸ್ವಾಮಿಯ ಮೂರ್ತಿಯನ್ನು ಮೆರವಣಿಗೆ ಮಾಡಿ, ಪ್ರಮುಖ ಐದು ಕಟ್ಟೆಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಹಿಂದಿನ ಕಾಲದಲ್ಲಿ ದೇವರನ್ನು ನೋಡಲು ಕ್ಷೇತ್ರಕ್ಕೆ ಹೋಗಲಾಗದವರಿಗೆ ದೇವರೇ ಅವರ ಊರಿಗೆ ಬರುತ್ತಾನೆ ಎನ್ನುವ ನಂಬಿಕೆ ಇದ್ದು ಅದು ಇಂದಿಗೂ ಮುಂದುವರಿದಿದೆ.

    ದೀಪೋತ್ಸವದ ಪ್ರಯುಕ್ತ ಬೆಳ್ಳಿಯ ಬ್ರಹ್ಮರಥೋತ್ಸವವೂ ಅದ್ದೂರಿಯಾಗಿ ನಡೆಯಿತು. ದೇಶ ವಿದೇಶದಿಂದ ಆಗಮಿಸಿದ ಲಕ್ಷಾಂತರ ಮಂದಿ ಭಕ್ತರು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು. ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನೆರವೇರಿತು.

    ಲಕ್ಷದೀಪೋತ್ಸವದ ಅಂಗವಾಗಿ ಬುಧವಾರ ಸರ್ವಧರ್ಮ ಸಮ್ಮೇಳನ ನಡೆಯಲಿದ್ದರೆ, ಗುರುವಾರ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನವೂ ನಡೆಯಲಿದೆ. ಇಂದು ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನದ 86ನೇ ಅಧಿವೇಶನವನ್ನು ಗುಜರಾತ್‍ನ ದ್ವಾರಕದ ಜಗದ್ಗುರು ಸೂರಾರಯಚಾರ್ಯ ಶ್ರೀಕೃಷ್ಣ ದೇವನಂದಗಿರಿ ಮಹಾರಾಜ್ ಉದ್ಘಾಟಿಸಲಿದ್ದಾರೆ. ಶಿಕ್ಷ ಣ ತಜ್ಞ, ಸಮಾಜ ಸುಧಾರಕ ಬೆಂಗಳೂರಿನ ಎಂ.ಮಮ್ತಾಜ್ ಆಲಿ ಅಧ್ಯಕ್ಷ ತೆ ವಹಿಸಲಿದ್ದಾರೆ. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.

    ಗುರುವಾರ ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ 86ನೇ ಅಧಿವೇಶನವನ್ನು ಉದ್ಯಮಿ ವಿಜಯ ಸಂಕೇಶ್ವರ ಉದ್ಘಾಟಿಸಲಿದ್ದಾರೆ. ಖ್ಯಾತ ವಿಮರ್ಶಕ ಸಾಗರದ ಪ್ರೊ. ಟಿ.ಪಿ. ಅಶೋಕ್ ಅಧ್ಯಕ್ಷತೆ ವಹಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಧರ್ಮಸ್ಥಳದ ಲಕ್ಷದೀಪೋತ್ಸವಕ್ಕೆ ತೆರೆ – ಕೋಟಿ ಕೋಟಿ ದೀಪಗಳ ನಡುವೆ ಮಂಜುನಾಥ ದರ್ಶನ

    ಧರ್ಮಸ್ಥಳದ ಲಕ್ಷದೀಪೋತ್ಸವಕ್ಕೆ ತೆರೆ – ಕೋಟಿ ಕೋಟಿ ದೀಪಗಳ ನಡುವೆ ಮಂಜುನಾಥ ದರ್ಶನ

    ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮಕ್ಕೆ ತೆರೆಬಿದ್ದಿದ್ದು, ಲಕ್ಷದೀಪೋತ್ಸವದ ಕೊನೆ ದಿನದ ಅಂಗವಾಗಿ ಮಂಜುನಾಥನ ಸಾನಿಧ್ಯದಲ್ಲಿ ವಿಶೇಷ ಪೂಜೆ ನಡೆದಿದೆ.

    ದೇವರ ಪೂಜೆ ಬಳಿಕ ಕೋಟಿ ಕೋಟಿ ದೀಪಗಳ ನಡುವೆ ಮಂಜುನಾಥನ ವೈಭವದ ಬೆಳ್ಳಿ ರಥೋತ್ಸವ ನಡೆದಿದ್ದು, ಮಕ್ಕಳು, ಹಿರಿಯರು, ವೃದ್ಧರೆನ್ನದೇ ಲಕ್ಷಾಂತರ ಜನರು ಈ ಪುಣ್ಯ ಕ್ಷಣವನ್ನು ಕಣ್ತುಂಬಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಎಲ್ಲೆಲ್ಲೂ ಫಲ ಪುಷ್ಪಗಳ ಶೃಂಗಾರ, ತಾಳ-ಮೇಳ ವಾದ್ಯಗಳ ಝೇಂಕಾರ, ಕಣ್ಮನ ಸೆಳೆಯುವ ಸಾಲು-ಸಾಲು ವಿದ್ಯುತ್ ದೀಪಗಳ ಅಲಂಕಾರ. ಬಗೆ ಬಗೆಯ ಬಣ್ಣದ ಕೊಡೆಗಳ ಚಿತ್ತಾರ ಇದೆಲ್ಲವನ್ನು ಲಕ್ಷಾಂತರ ಭಕ್ತರು ಮಂಜುನಾಥನ ದರ್ಶನ ಪಡೆದು ಪುನೀತರಾದರು.

    ಲಕ್ಷದೀಪೋತ್ಸವದ ಕೊನೆ ದಿನದ ಅಂಗವಾಗಿ ಮಂಜುನಾಥನ ಸಾನಿಧ್ಯದಲ್ಲಿ ವಿಶೇಷ ಪೂಜೆ ನಡೆಯಿತು. ದೇವರ ಬಲಿಪೂಜೆ ಬಳಿಕ ಬೆಳ್ಳಿಯ ರಥದಲ್ಲಿ ಮಂಜುನಾಥನ ಉತ್ಸವ ಮೂರ್ತಿಯನ್ನು ವಿರಾಜಮಾನಗೊಳಿಸಲಾಯಿತು. ಎಲ್ಲರೂ ಈ ಕ್ಷಣವನ್ನು ನೋಡಿ ಕಣ್ತುಂಬಿಸಿಕೊಂಡಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದರು.

    ದಕ್ಷಿಣ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರ, ಕೋಟ್ಯಾಂತರ ಭಕ್ತರ ಪಾಲಿನ ಶಿವ ಸಾನಿಧ್ಯ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸಂಭ್ರಮದ ದೀಪೋತ್ಸವಕ್ಕೆ ತೆರೆ ಬಿದ್ದಿದೆ. 5 ದಿನದ ಲಕ್ಷದೀಪೋತ್ಸವ ಸಂಭ್ರಮ ಮಂಜುನಾಥೇಶ್ವರನ ಬೆಳ್ಳಿ ರಥೋತ್ಸವದ ಮೂಲಕ ತೆರೆಕಂಡಿದ್ದು, ಜನರು ಮಂಜುನಾಥನ ದರ್ಶನ ಪಡೆದು ಕೃತಾರ್ಥರಾದರು.

     

     

  • ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಸಡಗರ – ಬಣ್ಣ ಬಣ್ಣದ ಬೆಳಕಿನ ಚಿತ್ತಾರ

    ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ ಸಡಗರ – ಬಣ್ಣ ಬಣ್ಣದ ಬೆಳಕಿನ ಚಿತ್ತಾರ

    ಮಂಗಳೂರು: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ ಜೋರಾಗಿದೆ. ಐದು ದಿನಗಳ ದೀಪಗಳ ಉತ್ಸವಕ್ಕೆ ಧರ್ಮಸ್ಥಳದಲ್ಲಿ ಚಾಲನೆ ದೊರತಿದ್ದು, ಕ್ಷೇತ್ರದ ಪರಿಸರ ಝಗಮಗಿಸುತ್ತಿದೆ. ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.

    ದೀಪೋತ್ಸವದ ವೇಳೆ ಕ್ಷೇತ್ರದ ಮುಖ್ಯ ದೇವರು ಮಂಜುನಾಥ, ಕ್ಷೇತ್ರದ ಹೊರಗೆ ಬಂದು ಭಕ್ತರಿಂದ ಪೂಜೆ ಪಡೆಯುತ್ತಾನೆ. ಕ್ಷೇತ್ರದ ಪರಿಸರದಲ್ಲಿ ದೇವರನ್ನು ಒಂದೊಂದು ಕಟ್ಟೆಯಲ್ಲಿಟ್ಟು ಪೂಜಿಸುತ್ತಾರೆ. ದೇವರ ಪೂಜಾ ಕಾರ್ಯಗಳು ಪ್ರತಿದಿನ ಬೆಳಗ್ಗೆ 5.30ಕ್ಕೆ ಆರಂಭವಾಗಲಿದೆ.

    ನವೆಂಬರ್ 16 ಮತ್ತು 17ರಂದು ನಡೆಯುವ 85ನೇ ವರ್ಷದ ಸರ್ವ ಧರ್ಮ ಸಮ್ಮೇಳನವನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಉದ್ಘಾಟನೆ ಮಾಡಲಿದ್ದಾರೆ.

    ನವೆಂಬರ್ 17 ರಂದು ಸಾಹಿತ್ಯ ಸಮ್ಮೇಳ ಆರಂಭವಾಗಲಿದ್ದು ಬರಹಗಾರ್ತಿ ಸುಧಾ ಮೂರ್ತಿ ಅವರು ಸಮ್ಮೇಳನದ ಉದ್ಘಾಟನೆ ಮಾಡಲಿದ್ದಾರೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ನಡೆಯುವ ಈ ಅದ್ಭುತ ಕ್ಷಣಗಳಿಗೆ ಧರ್ಮಸ್ಥಳ ಸಾಕ್ಷಿಯಾಗುತ್ತಿದೆ.

     

  • ನ.13-18 ರವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ- ಸಮಾಲೋಚನಾ ಸಭೆಯ ಸಂಪೂರ್ಣ ವಿವರ ಇಲ್ಲಿದೆ..

    ನ.13-18 ರವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ- ಸಮಾಲೋಚನಾ ಸಭೆಯ ಸಂಪೂರ್ಣ ವಿವರ ಇಲ್ಲಿದೆ..

    ಮಂಗಳೂರು: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ನವೆಂಬರ್ 13ರಿಂದ 18ರ ವರೆಗೆ ನಡೆಯಲಿದ್ದು, ಸಮಾಲೋಚನಾ ಸಭೆ ಮಂಗಳವಾರ ಶ್ರೀ ಸನ್ನಿಧಿಯ ಅತಿಥಿಗೃಹದಲ್ಲಿ ನಡೆಯಿತು.

    ಇದೇ 16ರಂದು ಗುರುವಾರ ಸರ್ವಧರ್ಮ ಸಮ್ಮೇಳನದ 85ನೇ ಅಧಿವೇಶನವನ್ನು ವೆಲ್ಲೂರಿನ ಶ್ರೀ ನಾರಾಯಣೀ ಪೀಠಮ್‍ನ ಶ್ರೀಶಕ್ತಿ ಅಮ್ಮ ಉದ್ಘಾಟಿಸಲಿರುವರು. ರಾಜ್ಯದ ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಅಧ್ಯಕ್ಷತೆ ವಹಿಸಲಿದ್ದು, ಪ್ರಜಾವಾಣಿ ದೈನಿಕದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಪದ್ಮರಾಜ ದಂಡಾವತಿ, ಮಾಜಿ ಶಾಸಕ ಶಪಿ ಅಹಮ್ಮದ್ ಮತ್ತು ಫಾದರ್‍ಅಂತೋನಿ ರಾಜ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

    ರಾತ್ರಿ 9 ರಿಂದ ಕಿರುತೆರೆ ಕಲಾವಿದರಾದ ಮೈಸೂರು ಮಂಜುನಾಥ ಹಾಗೂ ಮೈಸೂರು ನಾಗರಾಜ ವೃಂದದವರಿಂದ ಪಿಟೀಲು ಜುಗಲ್‍ಬಂದಿ ಕಾರ್ಯಕ್ರಮವಿದೆ. ಇದೇ 17ರಂದು ಶುಕ್ರವಾರ ಸಾಹಿತ್ಯ ಸಮ್ಮೇಳನದ 85ನೇ ಅಧಿವೇಶನವನ್ನು ಖ್ಯಾತ ಸಾಹಿತಿ ಸುಧಾ ಮೂರ್ತಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಸಾಹಿತಿ ಬಿ.ಆರ್.ಲಕ್ಷ್ಮಣರಾವ್ ಅಧ್ಯಕ್ಷತೆ ವಹಿಸಲಿದ್ದರೆ, ಖ್ಯಾತ ವಿಮರ್ಶಕಎಸ್. ಆರ್. ವಿಜಯಶಂಕರ್, ಸಾಹಿತಿ ರಂಜಾನ್‍ದರ್ಗಾ ಮತ್ತು ಮಂಗಳೂರಿನ ಪ್ರೊ.ಭುವನೇಶ್ವರಿ ಹೆಗಡೆ ಉಪನ್ಯಾಸ ನೀಡಲಿದ್ದಾರೆ. ರಾತ್ರಿ 9 ರಿಂದ ಬೆಂಗಳೂರಿನ ರಾಧಾಕಲ್ಪ ನೃತ್ಯತಂಡದ ಕಲಾವಿದರಿಂದ ಭರತನಾಟ್ಯ ಪ್ರದರ್ಶನವಿದೆ.

    ಸಮಾಲೋಚನಾ ಸಭೆ: ಲಕ್ಷದೀಪೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಬಗ್ಗೆ ಸಮಾಲೋಚನಾ ಸಭೆ ಮಂಗಳವಾರ ನಡೆಯಿತು. ಧರ್ಮಸ್ಥಳಕ್ಕೆ ಮಂಗಳೂರು, ಪುತ್ತೂರು, ಪೆರಿಯಶಾಂತಿ, ಚಾರ್ಮಾಡಿ, ಪಟ್ರಮೆ, ಕಾರ್ಕಳ, ಬೆಳಾಲು, ನೆರಿಯಾ ಮೊದಲಾದ ಊರುಗಳಿಂದ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸುವಂತೆ ಸಚಿವ ಬಿ.ರಮಾನಾಥರೈ ಲೋಕೋಪಯೋಗಿ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಕೆ.ಎಸ್.ಆರ್.ಟಿ.ಸಿ. ವತಿಯಿಂದ ರಾಜ್ಯದ ವಿವಿಧ ಭಾಗಗಳಿಂದ ವಿಶೇಷ ಬಸ್ ಸೌಲಭ್ಯ ಒದಗಿಸುವುದಾಗಿ ಅಧಿಕಾರಿಗಳು ತಿಳಿಸಿದರು. ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮೆಸ್ಕಾಂ, ಅಗ್ನಿಶಾಮಕ, ಗೃಹ ರಕ್ಷಕ ದಳ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಶೀಘ್ರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಚಿವರು ಸಲಹೆ ನೀಡಿದರು.

    ಕರ್ತವ್ಯಕ್ಕೆ ಬದ್ಧರಾಗಿ: ಲಕ್ಷ ದೀಪೋತ್ಸವದ ಮೊದಲ ಆಮಂತ್ರಣ ಪತ್ರವನ್ನು ಸಚಿವ ರಮಾನಾಥರೈ ಗಳಿಗೆ ನೀಡಿ ಸ್ವಾಗತಿಸಿದ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಲಕ್ಷ ದೀಪೋತ್ಸವಕ್ಕೆ ಬರುವ ಭಕ್ತರನ್ನು ಅತಿಥಿಗಳಾಗಿ ಸ್ವಾಗತಿಸಿ ಎಲ್ಲರೂ ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕು. ಸರ್ಕಾರದ ಎಲ್ಲಾ ಇಲಾಖಾಧಿಕಾರಿಗಳು ಕರ್ತವ್ಯಕ್ಕೆ ಬದ್ಧರಾಗಿ, ಸಿದ್ಧರಾಗಿ ತಮ್ಮಕರ್ತವ್ಯ ಮಾಡಬೇಕು. ಉತ್ಸವ ಯಶಸ್ವಿಗೆ ದೇವರ ಅನುಗ್ರಹದೊಂದಿಗೆ ಮನುಷ್ಯ ಪ್ರಯತ್ನವೂ ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

    ಸಹಾಯಕ ಆಯುಕ್ತ ರಘುನಂದನ್ ಮೂರ್ತಿ, ದ.ಕ.ಜಿಲ್ಲಾ ಪಂಚಾಯತಿ ಅಧ್ಯಕ್ಷೆ, ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಆರೋಗ್ಯಾಧಿಕಾರಿ ರಾಮಕೃಷ್ಣರಾವ್, ಜಿಲ್ಲಾಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಸಾಹುಲ್ ಹಮೀದ್, ಧಾರ್ಮಿಕ ಮತ್ತುದತ್ತಿ ಇಲಾಖಾ ಸಹಾಯಕ ಆಯುಕ್ತೆ ಕೆ.ಪ್ರಮೀಳಾ, ಬೆಳ್ತಂಗಡಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ದಿವ್ಯಜ್ಯೋತಿ ಉಪಸ್ಥಿತರಿದ್ದು ಸೂಕ್ತ ಸಲಹೆ-ಸೂಚನೆ ನೀಡಿದರು. ಈ ವೇಳೆ ಡಿ. ಹರ್ಷೇಂದ್ರಕುಮಾರ್, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ, ಸುಭಾಶ್ಚಂದ್ರ ಜೈನ್ ಇದ್ದರು.