Tag: ಲಕ್ಷ್ಮೀವರತೀರ್ಥ ಸ್ವಾಮೀಜಿ

  • ಶೀರೂರು ಮಠಕ್ಕೆ ನಾಳೆ ನೂತನ ಪೀಠಾಧಿಪತಿ ಘೋಷಣೆ- ಪೂರ್ವಾಶ್ರಮ ಸಹೋದರರ ಆಕ್ಷೇಪ

    ಶೀರೂರು ಮಠಕ್ಕೆ ನಾಳೆ ನೂತನ ಪೀಠಾಧಿಪತಿ ಘೋಷಣೆ- ಪೂರ್ವಾಶ್ರಮ ಸಹೋದರರ ಆಕ್ಷೇಪ

    ಉಡುಪಿ: ಸೋದೆ ಮಠಾಧೀಶರಿಂದ ಬುಧವಾರ ಶೀರೂರು ಮಠಕ್ಕೆ ನೂತನ ಪೀಠಾಧಿಪತಿ ಘೋಷಣೆ ಆಗಲಿದೆ. ನೂತನ ಪೀಠಾಧಿಪತಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ, ವೃಂದಾವನಸ್ಥ ಲಕ್ಷ್ಮಿವರ ತೀರ್ಥ ಶ್ರೀಗಳ ಸಹೋದರರಿಂದ ಆಕ್ಷೇಪ ವ್ಯಕ್ತವಾಗಿದೆ.

    ಲಕ್ಷ್ಮೀವರತೀರ್ಥ ಸ್ವಾಮೀಜಿ 2018ರ ಜುಲೈ 19 ರಂದು ಸಂಶಯಾಸ್ಪದ ರೀತಿಯಲ್ಲಿ ನಿಧನರಾಗಿದ್ದರು. ಆನಂತರ ಪೀಠ ಖಾಲಿಯಿತ್ತು. ದ್ವಂದ್ವ ಮಠವಾಗಿರುವ ಸೋದೆ ಮಠ ಶಿರೂರು ಮಠದ ನಿರ್ವಹಣೆ ಮಾಡುತ್ತಿದ್ದು, ಮಠದ ವ್ಯವಹಾರ, ಆಸ್ತಿಪಾಸ್ತಿ, ತೆರಿಗೆ ನಿರ್ವಹಣೆಯಲ್ಲಿ ಪಾರದರ್ಶಕತೆ ಇಲ್ಲ. ಈ ಬಗ್ಗೆ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ ಎಂದು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಸಹೋದರ ಲಾತವ್ಯ ಆಚಾರ್ಯ ಹೇಳಿದ್ದಾರೆ.

    ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಪೀಠಾಧಿಪತಿ ನೇಮಕ ಸರಿಯಲ್ಲ. ಅದರಲ್ಲೂ ಎಳೆಯ ವಯಸ್ಸಿನ ವಟುವನ್ನು ನಾಳೆ ಪೀಠಕ್ಕೆ ಘೋಷಣೆ ಮಾಡುತ್ತಿದ್ದಾರೆ. ಕನಿಷ್ಠ ಹತ್ತು ವರ್ಷದ ವೇದ ಅಧ್ಯಯನ ಮಾಡಿದವರನ್ನು ಪೀಠಾಧಿಪತಿ ಮಾಡಬೇಕು. ನೂತನ ಪೀಠಾಧಿಪತಿ ನೇಮಕಕ್ಕೆ ನಮ್ಮ ಸಮ್ಮತಿ ಇಲ್ಲ. ಈ ಬಗ್ಗೆ ಅಷ್ಟ ಮಠಾಧೀಶರ ಗಮನಕ್ಕೂ ತಂದಿದ್ದೇವೆ ಎಂದರು.

    ಶೀರೂರು ಶ್ರೀ ನಿಧನ ನಂತರ ಅನೇಕ ಅಪವಾದ ಬಂದವು. ಆಸ್ತಿ ವಿಚಾರದಲ್ಲಿ ವ್ಯವಹಾರ ಸರಿಯಿಲ್ಲ. ಪಾರದರ್ಶಕದ ಕೊರತೆ ಕಂಡುಬಂದಿದೆ. ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ. ಮೊಕದ್ದಮೆ ಜಾರಿಯಲ್ಲಿದೆ. 17 ವರ್ಷದ ಹುಡುಗನನ್ನು ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡುವುದು ಸರಿಯಲ್ಲ. 10 ವರ್ಷ ಯೋಗ್ಯ ವಿದ್ವತ್ ಬೇಕಿತ್ತು. ಸೋದೆ ಮಠದ ವ್ಯವಹಾರ ನಡೆಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು.

    ಮತ್ತೋರ್ವ ಸಹೋದರ ವಾದಿರಾಜ ಆಚಾರ್ಯ ಮಾತನಾಡಿ, ದೊಡ್ಡ ಹುದ್ದೆ ಸ್ವೀಕರಿಸುವಾಗ ಜ್ಞಾನ ಪರಿಪೂರ್ಣ ಆಗಿರಬೇಕು. ಒಂದು ಕಾಲದಲ್ಲಿ ಬಾಲ ಸನ್ಯಾಸ ನಡೆದಿದೆ. ಈಗ ಒಪ್ಪಲು ತಯಾರಿಲ್ಲ. ಮೂರು ವರ್ಷದ ಹಿಂದೆ ಎಲ್ಲಾ ಪೀಠಾಧಿಪತಿಗಳ ಮಾತು ಕತೆಯಾಗಿತ್ತು. ದಾವೆ ಇರುವಾಗ ಪೀಠಾಧಿಪತಿ ನೇಮಕ ಸರಿಯಲ್ಲ ಎಂದರು. ಶೀರೂರು ಸ್ವಾಮೀಜಿ ವೃಂದಾವನಸ್ಥರಾಗಿ ಎರಡು ತಿಂಗಳೊಳಗೆ ನೂತನ ಪೀಠಾಧಿಪತಿ ನೇಮಕವಾಗಬೇಕಿತ್ತು. ಒಂದು ಪರ್ಯಾಯ ದಾಟಿ ಹೋಗಿದೆ. ಯತಿಯಿಲ್ಲದೆ ಎರಡೂವರೆ ವರ್ಷ ಕಳೆದು ಹೋದದ್ದು ಇತಿಹಾಸದಲ್ಲೇ ಇದೇ ಮೊದಲು ಎಂದರು.

  • ಪಲಿಮಾರು ಶ್ರೀಗೆ 50, ಅಜ್ಜಗೆ 50ಲಕ್ಷ, 1 ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್- ಶಿರೂರು ಶ್ರೀಗಳ ಆಡಿಯೋ ವೈರಲ್

    ಪಲಿಮಾರು ಶ್ರೀಗೆ 50, ಅಜ್ಜಗೆ 50ಲಕ್ಷ, 1 ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್- ಶಿರೂರು ಶ್ರೀಗಳ ಆಡಿಯೋ ವೈರಲ್

    ಉಡುಪಿ: ಶಿರೂರು ಸ್ವಾಮೀಜಿ ಅವರು ತುಳುವಿನಲ್ಲಿ ಮಾತನಾಡಿರುವ ವಾಟ್ಸಪ್ ವಾಯ್ಸ್ ನೋಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಅಜ್ಜರಿಗೆ ಒಂದು ಕೋಟಿ ಕೊಟ್ರೆ ಮ್ಯಾಟರ್ ಫಿನಿಶ್ ಆಗುತ್ತೆ. 50 ಲಕ್ಷ ಪಲಿಮಾರು ಸ್ವಾಮೀಜಿಗೆ. 50 ಲಕ್ಷ ಅವರಿಗೆ ಕೊಡಬೇಕಂತೆ ಎಂದು ಮಾತನಾಡಿದ್ದಾರೆ. ಸೋದೆ ಸ್ವಾಮೀಜಿ ವಿಶ್ವವಲ್ಲಭ ತೀರ್ಥಶ್ರಿಗಳ ಹೆಸರು ಪ್ರಸ್ತಾಪ ಮಾಡಿದ್ದಾರೆ.

    ಅವರ ಎಂಟು ಸಾವಿರ ಭಕ್ತರಿಂದ ಪ್ರತಿ ಮನೆಯಿಂದ ಒಂದು ಪವನ್ ಚಿನ್ನ ಒಟ್ಟುಗೂಡಿಸ್ತಾರಂತೆ. ಆದ್ರೆ ಆಡಿಯೋದಲ್ಲಿ ಯಾವುದೂ ಸ್ಪಷ್ಟ ಮಾಹಿತಿ ಇಲ್ಲ. ಯಾವ ಸಂದರ್ಭದಲ್ಲಿ ಯಾರಿಗೆ ಈ ಆಡಿಯೋ ಕಳುಹಿಸಿದ್ದಾರೋ ಎಂಬ ಬಗ್ಗೆ ಮಾಹಿತಿಯಿಲ್ಲ.

    ಪಟ್ಟದ ದೇವರನ್ನು ಮರಳಿ ನೀಡುವ ವಿಚಾರದಲ್ಲಿ ವ್ಯವಹಾರ ಮಾತುಕತೆ ನಡೆದಿತ್ತಾ? ಅಥವಾ ಯಾವುದೊ ಮಹತ್ವದ ಯೋಜನೆಗೆ ಹಣ ಸಂಗ್ರಹಿಸುವ ಬಗ್ಗೆ ನಡೆದ ಮಾತುಕತೆಯೋ ಸ್ಪಷ್ಟವಾಗಿಲ್ಲ. ಆಡಿಯೊದ ಮೂಲ ತನಿಖೆ ಮಾಡಿದ್ರೆ ಸಾಕಷ್ಟು ವಿಚಾರ ಬೆಳಕಿಗೆ ಬರುವ ಸಾಧ್ಯತೆ ಇದೆ.

    ಶಿರೂರು ಶ್ರೀ ವಾಟ್ಸಾಪ್ ವಾಯ್ಸ್ ನೋಟ್:

    ಆಗ ನೋಡಿದೆ ನಿನ್ನ ವಾಟ್ಸಪ್…
    ಭಾರಿ ಖುಷಿ ಆಯ್ತು.
    ಅಜ್ಜರದ್ದು ಒಂದು ಡಿಮ್ಯಾಂಡ್ ಉಂಟು ಮಾರಾಯಾ.
    ಅವರಿಗೆ ಒಂದು ಕೋಟಿ ಕೊಡಬೇಕಂತೆ.
    ಐವತ್ತು ಲಕ್ಷ ಪಲಿಮಾರು ಸ್ವಾಮೀಜಿಗೆ ಕೊಡಬೇಕಂತೆ.
    ಐವತ್ತು ಲಕ್ಷ ಅವರಿಗೆ (ಪೇಜಾವರ?) ಬೇಕಂತೆ.
    ಆಮೇಲೆ ಈ ಮ್ಯಾಟರ್ ಫಿನೀಷ್ ಅಂತೆ.

    ಆಮೇಲೆ ಏನೂಂತ ಅಂದ್ರೆ… ಕರ್ನಾಟಕದಲ್ಲಿ ಸೋದೆ ಮಠದ ಶಿಷ್ಯಂದಿರ ಒಟ್ಟು ಎಂಟು ಸಾವಿರ ಮನೆ ಉಂಟಂತೆ. ಎಂಟು ಸಾವಿರ ಮನೆಗೆ ಒಂದೊಂದು ಮನೆಯಿಂದ ಒಂದೊಂದು ಪವನ್ ಚಿನ್ನ ವ್ಯವಸ್ಥೆ ಮಾಡಿ ಕೊಡುತ್ತೇನೆ ಅಂತ ಹೇಳಿದ್ದಾನೆ. ವಿಶ್ವವಲ್ಲಭ (ಸೋದೆ ಮಠಾಧೀಶರು) ಹೇಳಿದ್ದಾನೆ. ಅದನ್ನು ಇವರು ಬೇಡುತ್ತಿದ್ದಾರೆ.

    ವಿಷಯ ಇವತ್ತು ಬೆಳಗ್ಗೆ ಗೊತ್ತಾಯ್ತು. ಇಷ್ಟೇ ವಿಷಯ, ಎಲ್ಲರಿಗೂ ತಿಳಿಸು ಆಯ್ತಾ ಅಂತ ಹೇಳಿದ್ದಾರೆ.