ಚಿಕ್ಕೋಡಿ: 40 ಜನ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವ ನಿಟ್ಟಿನಲ್ಲಿ ವರಿಷ್ಠರ ಮಟ್ಟದಲ್ಲಿ ಚರ್ಚೆ ಆಗಿರುವುದು ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಕುರಿತು ಬೆಂಗಳೂರಿನಲ್ಲಿ ವರಷ್ಠರ ಹಂತದಲ್ಲಿ ಚರ್ಚೆ ನಡೆದಿರೋದು ನಿಜ, ಯಾರು ಎಷ್ಟು ಜನ ಬರ್ತಾರೆ ಅಂತ ನನಗೆ ಮಾಹಿತಿ ಇಲ್ಲ. ಆದರೆ ಶಾಸಕರು ಕಾಂಗ್ರೆಸ್ಗೆ ಬರುವ ಬಗ್ಗೆ ಚರ್ಚೆ ಆಗಿದೆ ಎಂದರು. ಇದನ್ನೂ ಓದಿ: ಬೆಳಗಾವಿ ಲೋಕಸಭೆಯಿಂದ ನನ್ನ ಸ್ಪರ್ಧೆ ನಿಶ್ಚಿತ : ಸತೀಶ್ ಜಾರಕಿಹೊಳಿ
ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮಾಜಿ ಶಾಸಕ ಸಂಜಯ್ ಪಾಟೀಲ್ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಮಾತನಾಡಿದ ಜಾರಕಿಹೊಳಿ, ಸಂಜಯ್ ಪಾಟೀಲ್ ಇಂತಹ ಹೇಳಿಕೆಗಳನ್ನು ಕೊಡುವುದು ಹೊಸದೇನಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆ ನೀಡೋದು ಸರಿಯಲ್ಲ. ಬೆಳಗಾವಿ ಜಿಲ್ಲೆಯ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಅಂತಿಮವಾಗಿ ರಾಜ್ಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬಿಜೆಪಿಗೆ ವಲಸಿಗರು ಸೊಸೆ ಇದ್ದಂತೆ, ಮನೆಯಲ್ಲಿ ಎಲ್ಲರ ವಿಶ್ವಾಸ ಗಳಿಸಬೇಕು: ಸುಧಾಕರ್
ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಜಯ ಪಾಟೀಲ್ ಏನು ಹೇಳಿದ್ದಾರೆ ನನಗೆ ಗೊತ್ತಿಲ್ಲ, ನಾನು ಯಾಕೆ ಪ್ರತಿಕ್ರಿಯೆ ಕೊಡಲಿ, ಯಾರೇ ಇರಲಿ ಮಹಿಳೆಯರ ಬಗ್ಗೆ ಗೌರವ ಇಟ್ಟು ಮಾತನಾಡಬೇಕು. ಅದನ್ನು ಪಾಲಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಇಡಿ ದಾಳಿ ಪ್ರಕರಣ- ದೆಹಲಿಯಲ್ಲಿ ಮೊದಲ ಬಾರಿ ವಿಚಾರಣೆಗೆ ಹಾಜರಾದ ಜಮೀರ್
ಗೋಹತ್ಯೆ ಬಗ್ಗೆ ಮಾತನಾಡಿದ ಅವರು, ಯಾವುದೇ ಕಾಯ್ದೆ ಜಾರಿಗೆ ತರುವುದು ಬಹಳ ಮುಖ್ಯ, ಗೋಹತ್ಯೆ ಇವತ್ತು ನಿನ್ನೆ ಬಂದಿದ್ದಲ್ಲ, 1965 ರಲ್ಲಿ ಬಂದಿದೆ. ಎಲ್ಲಿ ಅಕ್ರಮ ಸಾಗಾಣಿಕೆ ಇರುತ್ತದೆ. ಅಲ್ಲಿ ಹಿಡಿಯುವ ಕೆಲಸ ಮಾಡುತ್ತಾರೆ. ಅದನ್ನು ಹುಡುಕಿಕೊಂಡು ಹೋಗಿ ಮಾಡಲು ಆಗಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿನ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಸಂಜೆ ಹಾನಗಲ್ ನಲ್ಲಿ ಸಭೆ ಕರೆದಿದ್ದೇವೆ. ಯಾರು, ಯಾರು ಆಕಾಂಕ್ಷಿ ಇದ್ದಾರೆ. ಅವರ ಪಟ್ಟಿ ಹೈಕಮಾಂಡ್ಗೆ ಕಳುಹಿಸುತ್ತೇವೆ. ಸೂಕ್ತ ವ್ಯಕ್ತಿಗೆ ಟಿಕೆಟ್ ಕೊಡುತ್ತೇವೆ. ಹಾನಗಲ್ ಹಾಗೂ ಸಿಂದಗಿಯಲ್ಲಿ ನಾವೇ ಗೆಲ್ಲುತ್ತೇವೆ. ಯಾರು ಗೆಲ್ಲುತ್ತಾರೆ ಹಾಗೂ ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ಕೊಡುತ್ತಾರೆ. ಅವರಿಗೆ ನನ್ನ ಒಲವು ಎಂದಿದ್ದಾರೆ. ಇದನ್ನೂ ಓದಿ: ಕೊಲೆ ಯತ್ನ- ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಂಧನ
ಬೆಳಗಾವಿ: ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು ಎಂದು ಹೇಳುವ ಮೂಲಕ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ತಿರುಗೇಟು ನೀಡಿದ್ದಾರೆ.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ರೋಡ್ ಪಾಲಿಟಿಕ್ಸ್ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾತ್ರಿ ರಾಜಕಾರಣ ಸಂಸ್ಕೃತಿ ಗೊತ್ತಿದ್ದಕ್ಕೆ ನೀವು ಎಂಎಲ್ಎ ಆಗಿರೋದು. ಲಕ್ಷ್ಮೀ ಹೆಬ್ಬಾಳ್ಕರ್ಗೆ ಸತ್ಯ ಎದುರಿಸುವ ಶಕ್ತಿ ಇನ್ನೂ ಬರ್ತಿಲ್ಲ. ಎಂಎಲ್ಎ ಆಗುವ ಮೊದಲು ನಾನು ನಿನ್ನ ಮಗಳು ಎಂದಿದ್ದರು. ಚಾಂದ್ ತಾರೇ ತೋಡ್ ಕೇ ಲಾವೂಂಗಿ ಅಂತಾ ದೊಡ್ಡ ದೊಡ್ಡ ಕನಸು ತೋರಿಸಿದ್ರು. ಆ ಕನಸು ನನಸು ಮಾಡಿಲ್ಲದ್ದಕ್ಕೆ ಜನ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪಾಕಿಸ್ತಾನ ನನಗೆ 20 ಸಾವಿರ ನೀಡಿದೆ – ತಪ್ಪೊಪ್ಪಿಕೊಂಡ ಲಷ್ಕರ್ ಉಗ್ರ
ಜನರ ಪ್ರತಿಕ್ರಿಯೆಗೆ ಭಾರತೀಯ ಜನತಾ ಪಾರ್ಟಿ ಹೆಸರು ಕೊಡ್ತಿದ್ದಾರೆ. ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿದ್ದು. ರಾತ್ರಿ ರಾಜಕೀಯ ಸಂಸ್ಕೃತಿ ಗೊತ್ತಿದೆ ನೀವು ಎಂಎಲ್ಎ ಆಗಿದ್ದೀರಿ. ನೀವು ಕೆಲಸ ಮಾಡಿಲ್ಲ ಎಂದು ನಾನು ಹೇಳ್ತಿಲ್ಲ. ಪ್ರತಿಯೊಬ್ಬ ಶಾಸಕರು ಸಂಸದರಿಗೆ ಕೆಲವೊಂದು ಯೋಜನೆಗಳಿದೆ. ಏನೂ ಕೆಲಸ ಮಾಡಿಲ್ಲ ಎಂದು ಹೇಳೋಕೆ ಸಾಧ್ಯವಿಲ್ಲ. ಅಭಿವೃದ್ಧಿ ಹೊಳೆ ಹರಿದಿದ್ರೆ ಈ ರೀತಿ ಬ್ಯಾನರ್ ಹಚ್ಚುತ್ತಿರಲಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ನಾಗಮಂಗಲದ ಸರ್ಕಾರಿ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ
ಬಿಜೆಪಿ ಈ ರೀತಿ ಹೊಲಸ್ಸು ರಾಜಕೀಯ ಮಾಡಿಲ್ಲ, ಮಾಡೋದಿಲ್ಲ. ಜನರು ಟೀಕೆ ಮಾಡೋದನ್ನು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಹಿಸಲಾಗುತ್ತಿಲ್ಲ. ಹೀಗಾಗಿ ಬಿಜೆಪಿ ಮೇಲೆ ಸಿಟ್ಟು ತಗೆಯುತ್ತಿದ್ದಾರೆ. ಡೆವಲಪ್ಮೆಂಟ್ ಕ್ವೀನ್, ಮಹಾರಾಣಿ ಎಂದು ಸೆಲ್ಫ್ ಡಿಕ್ಲೇರ್ ಏನೇನೋ ಅನ್ನಲಿ ನಾನು ಮಾತನಾಡಲಿಕ್ಕೆ ಆಗಲ್ಲ. ಟೀಕೆ ಸಹಿಸಿಕೊಳ್ಳುವ ಶಕ್ತಿ ದೇವರ ಹತ್ತಿರ ಲಕ್ಷ್ಮೀ ಬೇಡಿಕೊಳ್ಳಬೇಕು ಎಂದು ವ್ಯಂಗ್ಯವಾಡಿದರು.
ಬೆಳಗಾವಿ: ಯಡಿಯೂರಪ್ಪ ಪಕ್ಷಾತೀತವಾದ ಲೆಜೆಂಡ್ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ದು:ಖದಿಂದ ರಾಜೀನಾಮೆ ನೀಡುವ ಪ್ರಸಂಗ ಬರಬಾರದಿತ್ತು. ಆಡಳಿತದ ಮೇಲೆ ಇದರಿಂದ ಪರಿಣಾಮವಾಗುತ್ತದೆ ಎಂಬುದನ್ನು ಬಿಜೆಪಿ ಅರಿಯಬೇಕಿತ್ತು. ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್ ಬಿಜೆಪಿಯ ಬೆಳವಣಿಗೆ ಕಾತುರದಿಂದ ನೋಡುತ್ತಿದೆ. ಯಾವುದೇ ಪಕ್ಷ ಇರಲಿ ಜನರ ಕಾಳಜಿ ಮುಖ್ಯವಾಗಬೇಕು, ರಾಜಕೀಯ ಅಲ್ಲ, ಇಂತಹ ಸಂದರ್ಭಗಳಲ್ಲಿ ಸಿಎಂ ರಾಜೀನಾಮೆ ಬೆಳವಣಿಗೆ ಅವಶ್ಯಕತೆ ಇತ್ತಾ ಎಂಬುದನ್ನು ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ಯಡಿಯೂರಪ್ಪ ಅವರಿಗೆ 50 ವರ್ಷ ರಾಜಕೀಯದಲ್ಲಿ ಅನುಭವ ಇದೆ. ಅವರು ಬಿಜೆಪಿ ಕಟ್ಟಿ ಬೆಳೆಸಿದ ನಾಯಕರಾಗಿದ್ದಾರೆ. ಭಾವುಕರಾಗಿ ಯಡಿಯೂರಪ್ಪ ಭಾಷಣ ಮಾಡಿದರು. ಇಂತಹ ವ್ಯಕ್ತಿಯ ಆಡಳಿತದ ಯುಗ ಅಂತ್ಯವಾಯಿತು ಎಂದು ಆ ಕ್ಷಣದಲ್ಲಿ ನನಗೆ ಅನಿಸಿತು. ಯಡಿಯೂರಪ್ಪ ಹೋರಾಟ, ಧೈರ್ಯದ ಬಗ್ಗೆ ಅಭಿಮಾನ ಇದೆ. ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಯಡಿಯೂರಪ್ಪಗೆ ಅವಧಿ ಪೂರ್ಣ ಮಾಡಲು ಅವಕಾಶ ಇರಬೇಕಿತ್ತು. ಇದು ಬಿಜೆಪಿ ಪಕ್ಷದ ಆಂತರಿಕ ವಿಚಾರ. ಯಡಿಯೂರಪ್ಪ ಪಕ್ಷಾತೀತವಾಗಿ ಲೆಜೆಂಡ್ ನಾಯಕ, ದುಃಖದಿಂದ ರಾಜೀನಾಮೆ ನೀಡಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಎಂದರು. ಇದನ್ನೂ ಓದಿ: ಯಡಿಯೂರಪ್ಪನವರಿಗೆ ಬಿಜೆಪಿ ಸಾಕಷ್ಟು ಅವಕಾಶಗಳನ್ನು ಕೊಟ್ಟಿದೆ: ಸಿ.ಟಿ.ರವಿ
ರಾಜ್ಯದಲ್ಲಿ ಕೋವಿಡ್, ಪ್ರವಾಹ ಪರಿಸ್ಥಿತಿ ಇದೆ. ಇಂತಹ ಸಂದರ್ಭಗಳಲ್ಲಿ ರಾಜಕೀಯ ಬೆಳವಣಿಗೆ ಸರಿಯಲ್ಲ. ಜನರ ಕಾಳಜಿಗಿಂತ ರಾಜಕೀಯ ಮುಖ್ಯವಾಗಿದ್ದು ಸರಿಯಲ್ಲ. ಇದರಿಂದ ಆಡಳಿತದ ಮೇಲೆ ಪರಿಣಾಮ ಆಗಲಿದೆ. ಆಡಳಿತಕ್ಕಿಂತ ಬಿಜೆಪಿಗೆ ರಾಜಕೀಯ ಮುಖ್ಯ ಎಂದು ಅನಿಸುತ್ತದೆ ಎಂದು ಬಜೆಪಿ ವಿರುದ್ಧ ಕಿಡಿಕಾರಿದರು.
ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ:
2021-2022ನೇ ಸಾಲಿನ ಸಮಗ್ರ ಕೃಷಿ ಅಭಿಯಾನಕ್ಕೆ ಹೆಬ್ಬಾಳ್ಕರ್ ಹಿಂಡಲಗಾ ಗ್ರಾಮದಲ್ಲಿ ಚಾಲನೆ ನೀಡಿದರು. ಹಿಂಡಲಗಾ ಗ್ರಾಮದ ಶ್ರೀಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಸಮಗ್ರ ಕೃಷಿ ಅಭಿಯಾನಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು. ಈ ಕೃಷಿ ಅಭಿಯಾನವು ಸಮಗ್ರ ಕೃಷಿ ಅಭಿಯಾನದ ರಥವನ್ನು ಒಳಗೊಂಡಿದ್ದು, ಈ ರಥ ಗ್ರಾಮ-ಗ್ರಾಮಗಳಿಗೆ ತೆರಳಿ ಕೃಷಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡುತ್ತದೆ. ಸಮಗ್ರ ಕೃಷಿ ಅಭಿಯಾನವು ರೈತರಿಗೆ ಪೂರಕವಾಗಿದ್ದು, ಗೊಬ್ಬರ, ಬೀಜಗಳ, ಕ್ರಿಮಿನಾಶಕಗಳ ಹಾಗೂ ರೈತರ ಜಮೀನುಗಳ ವಿಮೆಯ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ. ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಈ ಸಮಗ್ರ ಕೃಷಿ ಅಭಿಯಾನ ಮೊಬೈಲ್ ಆ್ಯಪ್ನಲ್ಲಿಯೂ ಸಹ ಲಭ್ಯವಿದ್ದು, ಆ್ಯಪ್ನಲ್ಲಿ ರೈತರಿಗೆ ಅನುಕೂಲವಾಗುವಂತಹ ಕೃಷಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳು ತ್ವರಿತಗತಿಯಲ್ಲಿ ಸಿಗಲಿವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಯಡಿಯೂರಪ್ಪ ಬಂಪರ್ ಗಿಫ್ಟ್
ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ್, ಸಹಾಯಕ ಕೃಷಿ ನಿರ್ದೇಶಕ ಆರ್ ಬಿ ನಾಯ್ಕರ್, ಕೃಷಿ ಅಧಿಕಾರಿ ಅರುಣ ಕಾಪಸೆ, ಸಹಾಯಕ ಕೃಷಿ ಅಧಿಕಾರಿ ಸಿ.ಎಸ್.ನಾಯ್ಕ್, ಸ್ಥಳೀಯ ಜನ ಪ್ರತಿನಿಧಿಗಳು, ಚೇತನ ಅಗಸ್ಗೆಕರ್, ರೋಹನ್ ಪಾವಸೆ, ವಿಠ್ಠಲ ದೇಸಾಯಿ, ರಾಮಚಂದ್ರ ಕುದ್ರೆಮನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಳಗಾವಿ: ನಿರ್ಲಕ್ಷ್ಯ ಮಾಡಿದ್ದರಿಂದ ನಮ್ಮ ಮನೆಯಲ್ಲಿ ಹದಿನೆಂಟು ಜನ ಕುಟುಂಬಸ್ಥರಿಗೆ ಕೊರೊನಾ ಸೋಂಕು ದೃಢವಾಗಿತ್ತು. ದೇವರ ದಯೆಯಿಂದ ಎಲ್ಲರೂ ಗುಣಮುಖರಾಗಿದ್ದೇವೆ. ಕೊರೊನಾ ಬಗ್ಗೆ ನಾವೂ ನಿರ್ಲಕ್ಷ್ಯ ಮಾಡಿದ್ದೆವು. ಇಂತಹ ರೋಗ ನಮ್ಮ ವೈರಿಗಳಿಗೂ ಬರಬಾರದು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಕೊರೊನಾ ಸೂೀಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ರೋಗ ನಮ್ಮ ವೈರಿಗಳಿಗೂ ಬರಬಾರದು. ಕೋವಿಡ್ ವಾರಿಯರ್ಸ್ ದೇವರಾಗಿ ನಮ್ಮ ಕಣ್ಣಿಗೆ ಕಾಣಿಸುತ್ತಿದ್ದಾರೆ. ಎರಡನೇ ಅಲೆ ಬೇಗ ಸ್ಪ್ರೇಡ್ ಆಗುತ್ತಿರುವ ಕಾರಣಕ್ಕೆ ನಮ್ಮ ಕಂಟ್ರೋಲ್ ಗೆ ಸಿಗುತ್ತಿಲ್ಲ. ನಾವೆಲ್ಲರೂ ಮಾಸ್ಕ್ ಹಾಕಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ. ನಮ್ಮ ಜಿಲ್ಲೆ, ರಾಜ್ಯ, ದೇಶವನ್ನು ಕೊರೊನಾದಿಂದ ಕಾಪಾಡಬೇಕಿದೆ ಎಂದರು.
ಈಗ ಅನಿವಾರ್ಯ ಪರಿಸ್ಥಿತಿ ಇದೆ ಕರ್ಫ್ಯೂ ಜಾರಿ ಮಾಡದಿದರೆ ಕಷ್ಟ ಆಗುತ್ತೆ. ಜನತಾ ಕರ್ಫ್ಯೂ ಮಾದರಿಯಲ್ಲಿ ಮಾಡಿದರೆ ನಮ್ಮ ಜನರಿಗೆ ತಿಳುವಳಿಕೆ ಬರುತ್ತಿಲ್ಲ. ಒಂದು ವಾರ ಅಥವಾ ಹತ್ತು ದಿನ ಲಾಕ್ಡೌನ್ ಮಾಡಿದರೆ ಒಳ್ಳೆಯದು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ನಾನು ನಿರ್ಲಕ್ಷ್ಯ ಮಾಡಿದಾಗ ಕೋವಿಡ್ ಬಗ್ಗೆ ಇಷ್ಟೊಂದು ತೀವ್ರತೆ ಇದೆ ಎಂದು ಗೊತ್ತಿರಲಿಲ್ಲ. ಖಂಡಿತವಾಗಿಯೂ ಇದು ಬಹಳ ಕೆಟ್ಟ ರೋಗ, ಅನುಭವಿಸಿದವರಿಗೇ ಗೊತ್ತು. ನನ್ನ ವೈರಿಗಳಿಗೂ ಈ ರೋಗ ಕೊಡಬೇಡ ಎಂದು ಭಗವಂತನಲ್ಲಿ ಕೇಳಿಕೊಳ್ಳುತ್ತೇನೆ ಎಂದರು.
ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಜ್ವರ, ಕೆಮ್ಮು ಹಿನ್ನೆಲೆಯಲ್ಲಿ ಹೆಬ್ಬಾಳ್ಕರ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಕೋವಿಡ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಹೆಬ್ಬಾಳ್ಕರ್ ಜೊತೆ ಕುಟುಂಬದ 8 ಜನ ಸದಸ್ಯರಿಗೆ ಸೋಂಕು ದೃಢಪಟ್ಟಿದೆ. ಹೆಬ್ಬಾಳ್ಕರ್ ಅವರ ಕಾರು ಚಾಲಕ, ಅಡಿಗೆ ಸಿಬ್ಬಂದಿಗೂ ಕೊರೊನಾ ಬಂದಿದೆ.
ನಾನು, ನನ್ನ ಸಹೋದರ ಚನ್ನರಾಜ ಹಟ್ಟಿಹೊಳಿ ಹಾಗೂ ನಮ್ಮ ವಾಹನದ ಚಾಲಕ ಕೊರೊನಾ ಸೋಂಕಿಗೆ ಒಳಪಟ್ಟಿದ್ದು, ನಮ್ಮ ಸಂಪರ್ಕಕ್ಕೆ ಬಂದವರೆಲ್ಲ ದಯವಿಟ್ಟು ಕೊರೊನಾ ಸೋಂಕಿನ ಬಗ್ಗೆ ಪರೀಕ್ಷಿಸಿಕೊಳ್ಳಿರಿ ಎಂದು ವಿನಂತಿಸುತ್ತೇನೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಹೆಬ್ಬಾಳ್ಕರ್ ಅಬ್ಬರದ ಪ್ರಚಾರ ಮಾಡಿದ್ದರು. ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಸೇರಿದಂತೆ ಸಾಕಷ್ಟು ಜನರ ಪ್ರಾಥಮಿಕ ಸಂಪರ್ಕಕ್ಕೆ ಹೆಬ್ಬಾಳ್ಕರ್ ಬಂದಿದ್ದರು.
ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಹೆಬ್ಬಾಳ್ಕರ್ ಮತ್ತು 8 ಮಂದಿ ಮನೆಯಲ್ಲೇ ಹೋಮ್ ಕ್ವಾರಂಟೈನ್ ಆಗಿದ್ದಾರೆ.
ಬೆಳಗಾವಿ: ಹಿರೇಬಾಗೇವಾಡಿ ಗ್ರಾಮದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, 36ಕ್ಕೆ ಏರಿಕೆಯಾಗಿದೆ. ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಮೂಲಭೂತ ಸೌಕರ್ಯಗಳ ಕೊರತೆ ಕಾಡುತ್ತಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅಳಲು ತೋಡಿಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಗ್ರಾಮದಲ್ಲಿ ಮೂಲಭೂತ ಸೌಕರ್ಯದ ಕೊರತೆ ಉಂಟಾಗಿದೆ. ಹಿರೇಬಾಗೇವಾಡಿ ಗ್ರಾಮ ಸಂಪೂರ್ಣವಾಗಿ ಸೀಲ್ ಡೌನ್ ಮಾಡಿದ್ದು, ಜನರಿಗೆ ಸಮಸ್ಯೆ ಎದುರಾಗಿದೆ. ಕೇವಲ ಅಕ್ಕಿ, ಗೋಧಿಯಿಂದ ಜೀವನ ಆಗಲ್ಲ. ಅನೇಕ ಸಾಮಗ್ರಿಗಳನ್ನು ನೀಡಬೇಕು. ಗ್ರಾಮದಲ್ಲಿ ಯಾರೊಬ್ಬರಿಗೂ ಸೋಂಕಿನ ಲಕ್ಷಣ ಇಲ್ಲ. ಆದರೆ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ರಾಮದಲ್ಲಿ ದೈನಂದಿನ ಜೀವನ ನಡೆಸುವುದು ಕಷ್ಟ ಆಗಿದೆ. ಜನರಲ್ಲಿ ಅನಾಥ ಪ್ರಜ್ಞೆ ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿರುವುರಿಂದ ಜನರಲ್ಲಿ ಆತಂಕ ಮನೆಮಾಡಿದೆ. ನಾನೂ ನಾಲ್ಕು ಬಾರಿ ಗ್ರಾಮಕ್ಕೆ ಭೇಟಿ ನೀಡಿದ್ದೇನೆ. ಅನೇಕ ಸಲ ಭೇಟಿ ನೀಡಿ ಸಭೆ ಮಾಡಿದ್ದೇನೆ. ಗ್ರಾಮದ ಅನಾರೋಗ್ಯ ಪೀಡಿತರು ನಿತ್ಯ ಫೋನ್ ಮಾಡಿ ಅಳಲು ತೋಡಿಕೊಳ್ಳುತ್ತಿದ್ದಾರೆ. ಗ್ರಾಮದಲ್ಲಿ ಜಾನುವಾರುಗಳಿಗೆ ಮೇವು ಸಹ ಇಲ್ಲ. ಗ್ರಾಮದ ಸಮಸ್ಯೆ ಬಗೆಹರಿಸಬೇಕು ಎಂದು ಡಿಸಿ, ಉಸ್ತುವಾರಿ ಕಾರ್ಯದರ್ಶಿ ಗಮನಕ್ಕೆ ತಂದಿದ್ದೇನೆ. ತಕ್ಷಣಕ್ಕೆ ಗ್ರಾಮದಲ್ಲಿ ಹಾಲು ಪೂರೈಕೆಯಾಗಬೇಕು. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೇನೆ ಎಂದು ಮಾಹಿತಿ ನೀಡಿದರು.
ಕೇವಲ ಅಕ್ಕಿ, ಗೋಧಿಯಿಂದ ಜೀವನ ನಡೆಸಲು ಸಾಧ್ಯವಿಲ್ಲ. 600 ಜನ ಉದ್ಯೋಗ ಖಾತರಿಯಲ್ಲಿ ಕೆಲಸ ಮಾಡುವವರಿದ್ದಾರೆ. ಜಿಲ್ಲಾಧಿಕಾರಿಗಳು ಈವರೆಗೆ ಗ್ರಾಮಕ್ಕೆ ಭೇಟಿ ನೀಡಿಲ್ಲ. ಈ ಬಗ್ಗೆ ಗ್ರಾಮದ ಮುಖಂಡರು ನಮ್ಮ ಗಮನಕ್ಕೆ ತಂದಿದ್ದಾರೆ. ಅನಾಥ ಪ್ರಜ್ಞೆ ತೊಲಗಿಸಿ, ಜನರಲ್ಲಿ ಧೈರ್ಯ ತುಂಬಬೇಕು. ತಬ್ಲಿಘಿಗಳು ಮೊದಲು ಹೊರ ಬರಲಿಲ್ಲ. ಹೀಗಾಗಿ ಗ್ರಾಮದಲ್ಲಿ ಸೋಂಕು ತೀವ್ರವಾಗಿ ಹರಿಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ನನಗೆ ಬಂದಿರೋ ಮಾಹಿತಿ ಪ್ರಕಾರ 35 ಜನರನ್ನು ಸಾಮೂಹಿಕ ಕ್ವಾರಂಟೈನ್ ಮಾಡಿದ್ದಾರೆ. ಇದರಿಂದ ಗ್ರಾಮದಲ್ಲಿ ಸೋಂಕು ತೀವ್ರವಾಗಿ ಹರಿಡಿದೆ. ಆದರೆ ಈ ಆರೋಪವನ್ನು ಜಿಲ್ಲಾಧಿಕಾರಿ ತಳ್ಳಿ ಹಾಕಿದ್ದಾರೆ. ಗ್ರಾಮದಲ್ಲಿ ಶೀಘ್ರದಲ್ಲೇ ರ್ಯಾಪಿಡ್ ಟೆಸ್ಟ್ ನಡೆಸಬೇಕು. ಸರ್ಕಾರವೇ ಗ್ರಾಮದಲ್ಲಿ ತರಕಾರಿ, ದಿನಸಿ ಸರಬರಾಜು ಮಾಡಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ.
ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿಷಕನ್ಯೆ, ಆಕೆ ಎಲ್ಲಿ ಕಾಲಿಡುತ್ತಾಳೋ ಅಲ್ಲಿ ಸರ್ವನಾಶವಾಗುತ್ತದೆ. ಆಕೆಯಿಂದ ಇಂದು ಪಕ್ಷ ನಾಶವಾಗಿದೆ ಎಂದು ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
ಉಪಸಮರದ ಗೆಲುವಿನ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಲಕ್ಷ್ಮಿ ಹೆಬ್ಬಾಳ್ಕರ್ ವಿಷಕನ್ಯೆ. ಆಕೆ ಯಾವ ಪಕ್ಷದಲ್ಲಿರುತ್ತಾಳೆ ಆ ಪಕ್ಷದ ಸರ್ವನಾಶವಾಗುತ್ತದೆ. ಆಕೆ ತನ್ನ ಮಿತಿಯಲ್ಲಿದ್ದರೆ ಒಳ್ಳೆಯದು. ಆಕೆಯಿಂದಲೇ ಇಂದು ಕಾಂಗ್ರೆಸ್ ಪಕ್ಷ ಹಾಳಾಗಿದೆ. ಆಕೆ ಹೆಣ್ಣುಮಗಳಾಗಿ ಹೆಣ್ಣುಮಗಳ ರೀತಿ ಇದ್ದರೆ ಒಳ್ಳೆಯದು. ಗಂಡಸರು ಗಂಡಸರಾಗಿದ್ದರೆ ಒಳ್ಳೆಯದು. ಅಧಿಕಾರ ಬರುತ್ತೆ ಹೋಗುತ್ತೆ, ಅಧಿಕಾರ ಶಾಶ್ವತವಲ್ಲ. ಆಕೆಗೆ ಒಳ್ಳೆಯದು ಮಾಡುವುದು ಗೊತ್ತಿಲ್ಲ. ಕ್ಲಬ್ ಮತ್ತು ಇತರೆ ವ್ಯವಹಾರ ಮಾಡಲು ಜನರನ್ನು ವೋಟ್ ಕೇಳಿದ್ದಾರೆ ಎಂದು ಹರಿಹಾಯ್ದರು.
ಬಿಜೆಪಿ ಅವರು ನನಗೆ ಕರೆ ಮಾಡಿದ್ದರು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾಳೆ. ದೇವರ ಆಣೆ ಮಾಡಿ, ನನ್ನ ಎರಡು ಮಕ್ಕಳ ಮೇಲೆ ಆಣೆ ಮಾಡಿ ಹೇಳುತ್ತೇನೆ ಬಿಜೆಪಿ ಆಕೆಗೆ ಪಕ್ಷಕ್ಕೆ ಬನ್ನಿ ಎಂದು ಕರೆದಿಲ್ಲ. ಗೊಡ್ಡು ಕೊದುರೆ ಏನು ಕೊಟ್ಟಿದೆ, ಡ್ಯಾಶ್ ಡ್ಯಾಶ್ ಆಕೆಗೆ ಗೊತ್ತು ಎಂದು ಏನವಚನದಲ್ಲೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು.
ಬಿಎಸ್ವೈ ಮಾತು ನೀಡಿದರೆ ತಪ್ಪಲ್ಲ. ಅವರು ಕೊಟ್ಟ ಭರವಸೆ ಈಡೇರಿಸುತ್ತಾರೆ. ಅವರು ಈ ವಯಸ್ಸಿನಲ್ಲೂ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಅವರನ್ನು ರಮೇಶ್ ಹಾಡಿಹೊಗಳಿದರು. ಆ ಬಳಿಕ ಮಾಜಿ ಸ್ಪೀಕರ್ ತಮ್ಮನ್ನು ಅನರ್ಹರು ಎಂದು ಆದೇಶಿದ ಬಗ್ಗೆ ಪ್ರತಿಕ್ರಿಯಿಸಿ, ರಮೇಶ್ ಕುಮಾರ್ ಅಯೋಗ್ಯ ತಕ್ಷಣವೇ ಆತ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಇಂದು ಕೂಡ ಸಿದ್ದರಾಮಯ್ಯ ನಮ್ಮ ನಾಯಕರೇ. ನಾನು ಬೇರೆ ಪಕ್ಷದಲ್ಲಿದ್ದರೂ ಅವರು ನಮ್ಮ ನಾಯಕರು. ಹೀಗಾಗಿ ಅವರು ಅವರ ಕೆಲಸ ಅವರು ಮಾಡಲಿ. ನಮ್ಮ ಕೆಲಸ ನಾವು ಮಾಡುತ್ತೇವೆ. ಸಿದ್ದರಾಮಯ್ಯ ಅವರಿಗೆ ನಾನು ಮೊದಲೇ ಹೇಳಿದ್ದೆ, ನೀವು ವೈಯಕ್ತಿಕ ಟೀಕೆ ಮಾಡಿದರೆ ನನ್ನ ಬಳಿಯೂ ಅಸ್ತ್ರವಿದೆ ಎಂದಿದ್ದೆ. ಆಗ ಸಿದ್ದರಾಮಯ್ಯ ಅವರು ಏನು ಮಾತನಾಡಿಲ್ಲ ಎಂದರು.
ಶಾಸಕ ಜಮೀರ್ ಗೆ ವಿಷಯ ಗೊತ್ತಿದ್ದರೆ ಸಿದ್ದರಾಮಯ್ಯ ಅವರಿಗೆ ಗೊತ್ತಿರದೆ ಹೋಗುತ್ತಾ? ಅವರ ಬಗ್ಗೆ ಅನೇಕ ವಿಷಯಗಳಿದೆ. ಅದೆನ್ನೆಲ್ಲಾ ಹೇಳಿದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ. ನಾನು ಪಕ್ಷಕ್ಕೆ ಮೋಸ ಮಾಡಿದೆ, ವಂಚನೆ ಮಾಡಿದೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಜೆಡಿಎಸ್ಗೆ ಚೂರಿ ಹಾಕಿ ಸಿದ್ದರಾಮಯ್ಯ ಕಾಂಗ್ರೆಸ್ ಸೇರಿದ್ದಾರೆ ಎಂದು ತಿರುಗೇಟು ನೀಡಿದರು.
ಬೆಳಗಾವಿ: ಉಪಚುನಾವಣೆ ಕಾವು ಜೋರಾಗಿದ್ದು, ಗೋಕಾಕ್ ಅಖಾಡಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಯಾಕೆ ಎಂಟ್ರಿ ಕೊಟ್ಟಿಲ್ಲ ಎನ್ನುವ ಪ್ರಶ್ನೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನೋ ಕಮೆಂಟ್ಸ್ ಎಂದು ಜಾರಿಕೊಂಡಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕಿ ಏನೇ ಪ್ರಶ್ನೆ ಕೇಳಿದರೂ ನಾನು ಈ ಬಗ್ಗೆ ಈಗ ಪ್ರತಿಕ್ರಿಯಿಸಲ್ಲ, ಮುಂದೆ ಮಾತನಾಡಬಹುದು, ಈಗ ಚುನಾವಣೆ ಸಮಯ ಹೀಗಾಗಿ ನಾನು ಮಾತನಾಡಲು ಇಷ್ಟಪಡಲ್ಲ ಎಂದು ಜಾಣತನದ ಉತ್ತರ ಕೊಟ್ಟಿದ್ದಾರೆ. ನಾವು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಶಿಸ್ತಿನ ಸಿಪಾಯಿಗಳ ರೀತಿ ಪಕ್ಷದ ಮಾತನ್ನು ಕೇಳಬೇಕು ಎಂದಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಎಂದು ಪಣತೊಟ್ಟಿ ನಿಂತಿದ್ದ ನೀವು ಗೋಕಾಕ್ ಬಿಟ್ಟು ಅಥಣಿಯಲ್ಲಿ ಯಾಕೆ ಪ್ರಚಾರ ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದಕ್ಕೆ, ನನಗೆ ಪಕ್ಷ ಇಲ್ಲಿ ಪ್ರಚಾರ ನಡೆಸಲು ಜವಾಬ್ದಾರಿ ನೀಡಿದೆ. ಹೀಗಾಗಿ ಅಥಣಿಗೆ ಬಂದಿದ್ದೇನೆ ಎಂದು ಪ್ರತಿಕ್ರಿಯಿಸಿದರು.
ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಸೋಲಿಸಬೇಕು ಎಂದು ಕಾಂಗ್ರೆಸ್ ಪಣತೊಟ್ಟಿದೆ. ಆದ್ರೆ ಯಾಕೆ ಡಿಕೆಶಿ ಅವರು ಇನ್ನೂ ಗೋಕಾಕ್ ಕಣಕ್ಕೆ ಬಂದಿಲ್ಲ ಎಂದು ಕೇಳಿದಾಗ, ಈ ಬಗ್ಗೆ ನೀವು ಡಿಕೆಶಿ ಅವರನ್ನೇ ಕೇಳಿದರೆ ಉತ್ತಮ. ನಾನು ಅವರ ಪಿಆರ್ಓ ಅಲ್ಲ ಎಂದು ಹೇಳಿದ್ದಾರೆ. ಜೊತೆಗೆ ಜಾರಕಿಹೊಳಿ ಬ್ರದರ್ಸ್ ಹೊಂದಾಣಿಕೆ ಪಾಲಿಟಿಕ್ಸ್ ಬಗ್ಗೆ ಮಾತನಾಡಿ, ಸದ್ಯಕ್ಕೆ ನೋ ಕಮೆಂಟ್ಸ್. ಮುಂದೆ ನಾನು ಈ ಬಗ್ಗೆ ಮಾತನಾಡಬಹುದು. ಆದ್ರೆ ಚುನಾವಣೆ ಸಮಯವಾಗಿರುವುದರಿಂದ ಈ ಬಗ್ಗೆ ನಾನು ಪ್ರತಿಕ್ರಿಯಿಸಲು ಇಷ್ಟಪಡಲ್ಲ ಎಂದು ಹೇಳಿದರು.
ಗೋಕಾಕ್ ಬಗ್ಗೆ ಹೆಚ್ಚು ಆಸಕ್ತಿ ಇತ್ತಾ ಎಂದು ಕೇಳಿದಾಗಲೂ ಪ್ರತಿಕ್ರಿಯಿಸಲು ಇಚ್ಛಿಸುವುದಿಲ್ಲ ಎಂದು ಕಾಲಾಯ ತಸ್ಮೈ ನಮಃ ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತೆ. ಎಷ್ಟು ಲೀಡ್ನಲ್ಲಿ, ಎಷ್ಟು ಸ್ಥಾನ ಗೆಲ್ಲುತ್ತೇವೆ ಎಂದು ನಾನು ಭವಿಷ್ಯ ಹೇಳಲ್ಲ. ನಾನು ಭವಿಷ್ಯಗಾರ್ತಿ ಅಲ್ಲ ಎನ್ನುವ ಮೂಲಕ ಚುನಾವಣೆ ಇರುವುದಕ್ಕೆ ಸದ್ಯ ನಾನು ಮೌನವಾಗಿರುತ್ತೇನೆ ಯಾವುದಕ್ಕೂ ಪ್ರತಿಕ್ರಿಯಿಸಲ್ಲ ಎನ್ನುವ ಹಾಗೆ ಲಕ್ಷ್ಮೀ ಅವರು ಎಲ್ಲದಕ್ಕೂ ನೋ ಕಮೆಂಟ್ಸ್ ಎಂದು ಪ್ರಚಾರದಲ್ಲಿ ತೊಡಗಿದ್ದಾರೆ.
ವಿಜಯಪುರ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಮ್ಮ ಸಹೋದರಿ, ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ಅಥಣಿಯಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ ಕೊಟ್ಟಿದ್ದಾರೆ.
ಬೆಳಗಾವಿ ರಾಜಕೀಯ ಬದಲಿಸಬಲ್ಲೇ ಎಂಬ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಅವರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬರುವ ವಿಚಾರದಲ್ಲಿ ಹಾಗೆ ಹೇಳಿರಬಹುದು. ಅವರು ಸಿಕ್ಕರೆ ಈ ಬಗ್ಗೆ ಮಾತನಾಡುತ್ತೇನೆ. ರಾಜಕೀಯ ದೃವೀಕರಣ ಹಿನ್ನೆಲೆ ಅವರು ತಮ್ಮ ಪಕ್ಷ ಬಿಟ್ಟು ನಮ್ಮಲ್ಲಿ ಬರಬಹುದು. ಅವರು ನಮ್ಮ ಸಹೋದರಿ, ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸಿಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ:ಬೆಳಗಾವಿ ರಾಜಕೀಯ ಬದಲಿಸ್ತೀನಿ- ಲಕ್ಷ್ಮೀ ಹೆಬ್ಬಾಳ್ಕರ್
ಉಪಚುನಾವಣೆ ಬಳಿಕ ಇನ್ನಷ್ಟು ಜನ ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬರಬಹುದು. ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲವಿಲ್ಲ ಎಂದು ಬಹುತೇಕರಿಗೆ ಮನವರಿಕೆ ಆಗಿದೆ. ಅಲ್ಲಿನ ವಾತಾವರಣ ನೋಡಿ ಬಿಜೆಪಿಗೆ ಬಂದರೆ ಒಳ್ಳೆ ಭವಿಷ್ಯ ಇದೆ ಎಂದು ಅನೇಕರು ತಿಳಿದಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಬಹಳಷ್ಟು ಜನ ಬಿಜೆಪಿಗೆ ಬರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಶನಿವಾರ ಸಿಎಂ ಯಡಿಯೂರಪ್ಪ ನನ್ನ ಭಾಷಣದ ಬಳಿಕ ಭಾವುಕರಾಗಿದ್ದಾರೆ. ನಾನೇ ಅಭ್ಯರ್ಥಿ ಆಗಬೇಕು ಎಂದು ಕಾರ್ಯಕರ್ತರು ಬಯಸಿದ್ದರು. ಹೀಗಾಗಿ ಕಾರ್ಯಕರ್ತರಲ್ಲಿ ಗೊಂದಲಗಳಿದ್ದವು. ಶನಿವಾರ ಸಿಎಂ ಬಂದ ಮೇಲೆ ಆ ಗೊಂದಲಗಳಿಗೆಲ್ಲಾ ತೆರೆ ಬಿದ್ದಿದೆ. ನಾನು ಬಿಚ್ಚು ಮನಸ್ಸಿನಿಂದ ಎಲೆಕ್ಷನ್ ಮಾಡ್ತೇನೋ ಇಲ್ಲೋ ಅನ್ನೋ ಸಂಶಯ ಯಡಿಯೂರಪ್ಪ ಅವರಿಗೆ ಇತ್ತು. ಆದರೆ ಶನಿವಾರ ಅವರಿಗೆ ಎಲ್ಲವೂ ಸ್ಪಷ್ಟವಾಗಿ ಭಾವುಕರಾಗಿದ್ದರು ಎಂದು ಸಿಎಂ ಬಗ್ಗೆ ಮಾತನಾಡಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?
ಶನಿವಾರ ರಾತ್ರಿ ಅಥಣಿ ಕ್ಷೇತ್ರದ ಕಕಮರಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಾನು ಬೆಳಗಾವಿ ರಾಜಕಾರಣ ಬದಲು ಮಾಡಬಲ್ಲೆ. ಕೊಟ್ಟ ಕುದುರೆ ಏರಲು ಆಗದವನು ಇನ್ನೊಂದು ಕುದುರೆ ಏರುತ್ತೇನೆ ಅನ್ನೋನು ವೀರನೂ ಅಲ್ಲ ಶೂರನೂ ಅಲ್ಲ ಎಂದು ಅನರ್ಹರ ವಿರುದ್ಧ ಗುಡುಗಿದ್ದರು.