Tag: ಲಖಿಂಪುರ ಖೇರಿ ಪ್ರಕರಣ

  • ಬಿಜೆಪಿ ರೈತರನ್ನು ಬೆಂಬಲಿಸಲಿಲ್ಲ: ಪ್ರಿಯಾಂಕಾ ಗಾಂಧಿ ಕಿಡಿ

    ಬಿಜೆಪಿ ರೈತರನ್ನು ಬೆಂಬಲಿಸಲಿಲ್ಲ: ಪ್ರಿಯಾಂಕಾ ಗಾಂಧಿ ಕಿಡಿ

    ನವದೆಹಲಿ: ಬಿಜೆಪಿ ಸರ್ಕಾರ ರೈತರೊಂದಿಗೆ ನಿಲ್ಲುವ ಬದಲು ಲಖಿಂಪುರದ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರಿಗೆ ಬೆಂಬಲ ನೀಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದರು.

    ಈ ಬಗ್ಗೆ ಮಾತನಾಡಿ ಲಖಿಂಪುರ ಹತ್ಯಾಕಾಂಡಕ್ಕೆ ಅಜಯ್ ಮಿಶ್ರಾ ಅವರ ಭಾಷಣವೇ ಕಾರಣವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಉನ್ನತ ಹುದ್ದೆಯಲ್ಲಿದ್ದ ಅಧಿಕಾರಿಗಳು ಬೇಜವಾಬ್ದಾರಿಯ ಹೇಳಿಕೆಗಳನ್ನು ನೀಡಬಾರದು. ಸಚಿವರು ಅವರ ಸ್ಥಾನಮಾನಕ್ಕೆ ಹಾಗೂ ಇಲಾಖೆಗೆ ಘನತೆ ತರುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.

    ಲಖಿಂಪುರಂನ ನ್ಯಾಯಕ್ಕಾಗಿ ಹೋರಾಟ ಮುಂದುವರಿದಿದೆ. ಸಂತ್ರಸ್ತ ರೈತರ ಕುಟುಂಬದ ಜೊತೆಗೆ ನಾವಿದ್ದೇವೆ. ನ್ಯಾಯಕ್ಕಾಗಿ ಹೋರಾಟ ನಡೆಡಸುತ್ತೇವೆ ಎಂದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ದು ಆಪ್ತರ ಮೇಲೆ ಅನುಮಾನ ಪಟ್ಟಿದ್ದಾರಾ ಡಿಕೆಶಿ?

    ಉನ್ನತ ಹುದ್ದೆಯಲ್ಲಿರುವ ರಾಜಕಾರಣಿಗಳು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದು. ತಮ್ಮ ಸ್ಥಾನಮಾನ ಹಾಗೂ ಹುದ್ದೆಯ ಘನತೆಗೆ ತಕ್ಕ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್ ಸೋಮವಾರ ಹೇಳಿತ್ತು.

    ಲಖಿಂಪುರ ಖೇರಿ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‍ನ ಲಖನೌ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತ್ತು. ಅಲ್ಲದೆ, ಜಾಮೀನು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಪ್ರಿಯಾಂಕಾ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಣ್ಣಮ್ಮ ದೇವಿ ಮೆರವಣಿಯಲ್ಲಿ ಹಿಂದೂ, ಮುಸ್ಲಿಂ ಮುಖಂಡರ ಭರ್ಜರಿ ಡಾನ್ಸ್

  • ಪ್ರಧಾನಿಗೆ ತಮ್ಮದೇ ಆದ ನೈತಿಕ ಜವಾಬ್ದಾರಿ ಇದೆ: ಆಶಿಶ್ ಮಿಶ್ರಾ ಜಾಮೀನಿಗೆ ಪ್ರಿಯಾಂಕಾ ಕಿಡಿ

    ಪ್ರಧಾನಿಗೆ ತಮ್ಮದೇ ಆದ ನೈತಿಕ ಜವಾಬ್ದಾರಿ ಇದೆ: ಆಶಿಶ್ ಮಿಶ್ರಾ ಜಾಮೀನಿಗೆ ಪ್ರಿಯಾಂಕಾ ಕಿಡಿ

    ಲಕ್ನೋ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರನ ರಾಜೀನಾಮೆ ಕೇಳದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾಗ್ದಾಳಿ ನಡೆಸಿದ್ದಾರೆ.

    ಕಳೆದ ವರ್ಷ ಅಕ್ಟೋಬರ್ 3 ರಂದು ನಡೆದ ಲಖಿಂಪುರ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಗುರುವಾರ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಲಖಿಂಪುರ ಗಲಭೆಯ ಮುಖ್ಯ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು

    ಈ ಕುರಿತಂತೆ ರಾಂಪುರ ಜಿಲ್ಲೆಯ ಬಿಲಾಸ್‍ಪುರ ನಗರದ ರ್‍ಯಾಲಿ ವೇಳೆ ಮಾತನಾಡಿದ ಅವರು, ಪ್ರಧಾನಿಯೊಬ್ಬರು ರಾಷ್ಟ್ರದ ಬಗ್ಗೆ ನೈತಿಕ ಹೊಣೆಗಾರಿಕೆ ಹೊಂದಿರುತ್ತಾರೆ ಮತ್ತು ಈ ಜವಾಬ್ದಾರಿಯನ್ನು ಪೂರೈಸುವುದು ಅವರ ಧರ್ಮವಾಗಿದೆ. ಈ ಧರ್ಮವು ಪ್ರತಿಯೊಂದು ಧರ್ಮಕ್ಕಿಂತ ಮೇಲಿನದ್ದಾಗಿದೆ. ಯಾವುದೇ ರಾಜಕಾರಣಿ, ಪ್ರಧಾನಿ ಅಥವಾ ಸರ್ಕಾರ ಇದನ್ನು ಮಾಡುವಲ್ಲಿ ವಿಫಲವಾಗಿದೆ ಮತ್ತು ನಿರ್ಲಕ್ಷಿಸಿದೆ ಎಂದು ಕಿಡಿಕಾರಿದ್ದಾರೆ.

    ನಿಮ್ಮನ್ನು ಕೆಣಕಿದ ಆ ವ್ಯಕ್ತಿಗೆ ಇಂದು ಜಾಮೀನು ಸಿಕ್ಕಿದೆ ಮತ್ತು ಶೀಘ್ರದಲ್ಲಿಯೇ ಅವನು ಎಲ್ಲರ ಮುಂದೆ ರಾಜಾರೋಷವಾಗಿ ತಿರುಗಾಡುತ್ತಾನೆ. ಹಾಗದರೆ ಸರ್ಕಾರ ಯಾರನ್ನು ಉಳಿಸಿತು? ಇದು ರೈತರನ್ನು ಉಳಿಸಿದಿಯೇ? ರೈತರ ಹತ್ಯೆಯಾದಾಗ ಪೊಲೀಸರು ಮತ್ತು ಆಡಳಿತ ಎಲ್ಲಿಗೆ ಹೋಗಿತ್ತು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜನರನ್ನು ತಣ್ಣಗಾಗಿಸುವ ಬದಲು ಉದ್ಯೋಗವಕಾಶ ಹೆಚ್ಚಿಸಿ: ಯೋಗಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

    ಲಖಿಂಪುರ ಖೇರಿ ಘಟನೆ ನಡೆದಾಗ ಪೊಲೀಸರು ಎಲ್ಲೂ ಕಾಣಲಿಲ್ಲ. ಆದರೆ ಮೃತರ ಕುಟುಂಬಗಳನ್ನು ಭೇಟಿ ಮಾಡಲು ಯತ್ನಿಸಿದಾಗ ನಮ್ಮನ್ನು ತಡೆಯಲು ಬಂದಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.