Tag: ಲಖಿಮಪುರ

  • 18 ವರ್ಷದ ಯುವತಿಯ ಕತ್ತು ಕೊಯ್ದು ಕೊಲೆ- ಅತ್ಯಾಚಾರದ ಶಂಕೆ

    18 ವರ್ಷದ ಯುವತಿಯ ಕತ್ತು ಕೊಯ್ದು ಕೊಲೆ- ಅತ್ಯಾಚಾರದ ಶಂಕೆ

    -ಆತಂಕದಲ್ಲಿ ಲಖಿಮಪುರದ ಜನತೆ

    ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತೊಂದು ಅಪರಾಧ ಪ್ರಕರಣ ಬೆಳಕಿಗೆ ಬಂದಿದೆ. 18 ವರ್ಷದ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಲಖಿಮಪುರದಲ್ಲಿ ನಡೆದಿದೆ. ಯುವತಿಯ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮರಣೋತ್ತರ ವರದಿಗಾಗಿ ಕಾಯುತ್ತಿದ್ದಾರೆ.

    ಯುವತಿ ಧವರಪುರ ಗ್ರಾಮದ ನಿವಾಸಿಯಾಗಿದ್ದು, ಸೋಮವಾರ ಇಂಟರ್ ಮೀಡಿಯೇಟ್ ಅಡ್ಮಿಶನ್ ಮಾಡಲು ಸಮೀಪದ ಸೈಬರ್ ಕೆಫೆಗೆ ತೆರಳಿದ್ದಳು. ರಾತ್ರಿಯಾದ್ರೂ ಯುವತಿ ಹಿಂದಿರುಗಿದ ಹಿನ್ನೆಲೆ ಪೋಷಕರು ಗ್ರಾಮದಲ್ಲ ಹುಡುಕಾಡಿದ್ದಾರೆ. ಆದ್ರೆ ಎಲ್ಲಿಯೂ ಯುವತಿ ಸಿಕ್ಕಿಲ್ಲ.

    ಮಂಗಳವಾರ ಬೆಳಗ್ಗೆ ಗ್ರಾಮದ ಒಂದು ಕಿಲೋ ಮೀಟರ್ ದೂರದಲ್ಲಿ ಯುವತಿ ಶವ ಸಿಕ್ಕಿದೆ. ಯುವತಿಯ ಕುತ್ತಿಗೆ ಕೊಯ್ಯಲಾಗಿತ್ತು ಮತ್ತು ಬಟ್ಟೆ ಅಸ್ಥವ್ಯಸ್ತವಾಗಿತ್ತು. ಶವವನ್ನು ಮರೋಣತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    ಇದೇ ಲಖಿಮಪುರದ ವ್ಯಾಪ್ತಿಯಲ್ಲಿ ಆಗಸ್ಟ್ 16ರಂದು 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕಣ್ಣು ಕಿತ್ತಿ, ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರೋದು ದೃಢಪಟ್ಟಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

  • ರೇಪ್ ಆ್ಯಂಡ್ ಮರ್ಡರ್-ಬಾಲಕಿಯ ನಾಲಿಗೆ ಕತ್ತರಿಸಿ, ಕತ್ತು ಹಿಸುಕಿ ಬರ್ಬರ ಕೊಲೆ

    ರೇಪ್ ಆ್ಯಂಡ್ ಮರ್ಡರ್-ಬಾಲಕಿಯ ನಾಲಿಗೆ ಕತ್ತರಿಸಿ, ಕತ್ತು ಹಿಸುಕಿ ಬರ್ಬರ ಕೊಲೆ

    -ಕಬ್ಬಿನ ಗದ್ದೆಯಲ್ಲಿ ಪೋರಿಯ ಶವ ಪತ್ತೆ

    ಲಕ್ನೋ: ಉತ್ತರ ಪ್ರದೇಶದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ಲಖಿಮಪುರ ಖೀರಿ ಜಿಲ್ಲೆಯಲ್ಲಿ 13 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ. ಬಾಲಕಿಯ ಶವ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ಪ್ರಕರಣ ಸಂಬಂಧ ಪೊಲೀಸರು ಗ್ರಾಮದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

    ಮಗಳ ಕುತ್ತಿಗೆಯ ಕೊಯ್ದು ಕೊಲೆ ಮಾಡಲಾಗಿದೆ. ಆಕೆಯ ಕಣ್ಣುಗಳು ಹೊರಗಡೆ ಬಂದಿದ್ದವು, ನಾಲಿಗೆ ಕತ್ತರಿಸಲಾಗಿತ್ತು ಎಂದು ಬಾಲಕಿಯ ತಂದೆ ಹೇಳಿದ್ದಾರೆ. ನೇಪಾಳದ ಗಡಿ ಭಾಗದಲ್ಲಿರುವ, ರಾಜಧಾನಿ ಲಕ್ನೋನಿಂದ 300 ಕಿಲೋ ಮೀಟರ್ ದೂರದಲ್ಲಿರುವ ಗ್ರಾಮದಲ್ಲಿ ಘಟನೆ ನಡೆದಿದೆ. ಶುಕ್ರವಾರ ಘಟನೆ ನಡೆದಿದ್ದು, ಬಾಲಕಿಯ ಶವ ಆರೋಪಿಗಳ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ.

    ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಅತ್ಯಾಚಾರ ನಡೆದಿರೋದು ದೃಢವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಇಬ್ಬರನ್ನು ಬಂಧಿಸಲಾಗಿದೆ. ಕೊಲೆ, ಅತ್ಯಾಚಾರ ಸೇರಿದಂತೆ ಹಲವು ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ – ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ರೇಪ್

    ಶುಕ್ರವಾರ ಮಧ್ಯಾಹ್ನದಿಂದ ಮಗಳು ಕಾಣೆಯಾಗಿ ದ್ದಳು. ಗ್ರಾಮದ ತುಂಬೆಲ್ಲ ಮಗಳನ್ನು ಹುಡುಕಾಡಿದೆ. ಸಂಜೆ ವೇಳೆ ಕಬ್ಬಿನ ಗದ್ದೆಯಲ್ಲಿ ಪುತ್ರಿ ಶವ ಸಿಕ್ಕಿತು. ಆಕೆಯ ನಾಲಿಗೆಯನ್ನು ಕತ್ತರಿಸಿ, ದುಪ್ಪಟ್ಟಾದಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು ಎಂದು ಬಾಲಕಿಯ ತಂದೆ ಹೇಳಿದ್ದಾರೆ. ಇದನ್ನೂ ಓದಿ: ಶೂಟಿಂಗ್‍ಗೆ ಬಂದ ಯುವತಿಯ ಮೇಲೆ ಆತ್ಯಾಚಾರ

    ಕಳೆದ ವಾರ ಉತ್ತರ ಪ್ರದೇಶದ ಹಾಪುಡದಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಾಲಕಿಗೆ ಮೀರತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.